ಒಟ್ಟು 12179 ಕಡೆಗಳಲ್ಲಿ , 134 ದಾಸರು , 5885 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಕಾರಣವಿಲ್ಲೆ ನಿಂದೇ ಅಶ್ವತ್ಥ ಶ್ರೀ ನಾರಸಿಂಹೆನಿಸಿ ಅಜಭವರ ತಂದೇ ಪ ಹೊರೆಯ ಲೈತರಲು ಹಂಬಲಿಪ ಪ್ರಲ್ಹಾದಿಲ್ಲ | ಹಿರಣ್ಯ ಕಾಸುರನಿಲ್ಲ | ಸುರರಿಗುಪಟಳವೇನು ಇಲ್ಲ ಸ್ತಂಭ | ಬಿರಿದು ದೋರುವ ಅಹೋಬಲದ ಸ್ಥಳವಲ್ಲ 1 ಸಿರಿಯ ಮೋಹನ ನಿಮ್ಮ ರೂಪವನೆ ಆವರಿಸಿ | ಮರದ ಪೇರ್ಗಳೆಪಾದ ಕೊಂಬುಗಳ ಕರಧರಿಸಿ | ಸಿರಸಾಗ್ರ ಮಧ್ಯುದರ ವೆರಸೀ ಪರ್ಣ| ದಿರುವ ಅವಯವ ಮಾಡಿ ಪಾದರ್ಪೆದ್ರನಿಸೀ2 ಧರೆಗಧಿಕ ಸುಕ್ಷೇತ್ರ ಶೂರ್ಪಾಲಯವೆ ನೋಡಿ | ಮೆರೆಯುತಿಹ ಕೃಷ್ಣ ವೇಣಿಯ ತೀರದಲಿ ಮೂಡಿ | ಹರಗರುಡ ಗಣಪರೋಡಗೂಡಿ ನಲಿವ | ಗುರುಮಹಿಪತಿ ಸ್ವಾಮಿ ಕಾಯೋದಯ ಮಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ ವೃದ್ಧಿಗಳನ್ನು ಕಾಣಿಸಿ ದೀನಧೀರರ ಮಾಡಿದೆ ಪಎಲ್ಲರೊಳು ನೀ ಪೂರ್ಣ'ರುತಿಲ್ಲವೆಮ್ಮೆಡೆಯೊಳಗೆನುವ ಭ್ರಮೆಯಲ್ಲಿ ಬಂದುದು ಎಮಗೆ ಠಾ'ನ್ನೆಲ್ಲಿ ನಿನ್ನನಗಲುವರೆಉಳ್ಳವನೆ ನಿನಗಿಂತು ಬರುತಿರುವಲ್ಲಿ ನ'್ಮುರವನ್ನು ಪೇಳ್ವದುಜಳ್ಳು ನೀನಿದಿರಿಟ್ಟು ತೊಲಗಿದೆಯಲ್ಲ ಶ್ರೀಗುರುವರ್ಯನೆ 1ಹಲವು ಪರಿಯಲಿ ಚಿತ್ತಪಾಕವ ತಿಳಿದು ಶ್ರುತಿತಾ ಸಾರಿದರ್ಥವುಹೊಳೆಯದೊಂದೊಂದರ್ಥದಲಿ ಮನತೊಳಲಿ ಮಾರ್ಗವ ಕಾಣದೆನಲುಗಿ ಭವಮೃತಿಯೊಂದಿ ಜೀವರು ಬಳಲುತಿರಲವತರಿಪನೆಂಬರುತಿಳಿ'ಯಗಲುವನೆಂದರ ನುಡಿಯಳವಡದು ಗುರುವರ್ಯನೆ 2ಕೊರಗಿ ಕರಗುವ ಜೀವರಾರೈ ಬರುವೆ ನೀನೆಲ್ಲಿಂದ ಸಮಯಕೆಇರುವೆ ನೀನಾವೆಡೆಯೊಳಜ್ಞತೆ ಬರುವದಿವರಿಂಗೇತಕ್ಕೆಹರೆವದೆಂತದರಂದತೋರದು ಧರಿಸುತಿಹೆ ನೀನೆಂತು ತನುವನುಮರೆಯ ಮಾಳ್ವೆಯದೇಕೆ ಮೂರ್ತಿಯ ಕರುಣಿಸೈ ಗುರುವರ್ಯನೆ 3ನಿನ್ನ ನಿನ್ನೊಳು ನೀನೆ ನಾನೆಂದೆನ್ನದೆಂಬುದರಿಂದ ತಿಳಿದರೆನನ್ನ ನಿನ್ನೊಳು ಕಾಣ್ಬೆ ಅಂದು ಪ್ರಸನ್ನನಾಗಿಯೆ ಕರುಣಿಸಿಎನ್ನೊಳಗೆ ಸರ್ವವನು ಸರ್ವರೊಳೆನ್ನ ತಿಳಿದನ್ಯಾರ್ಥವನೆ ಮರತುನ್ನತಾಮಲ ಪೂರ್ಣನಹೆಯೆಂದಿನ್ನು ತೋರದು ದೇವನೆ 4ಸಾಕು ಸನಿಯವ ಸೇರಿಸೆಮ್ಮೊಳು ನೂಕು ಕ'ದಿಹ ತಮವ ಸುಖವನುಸೋಕಿಸೈ ಕಡೆಗೊಳಿಸು ಚಿಂತೆಯ ಬೇಕು ನಿನ್ನಡಿ ಸೇವೆಯುಶ್ರೀಕರನೆ ಚಿಕನಾಗಪುರ ವರದರಸನೆ ಗುರುವಾಸುದೇವನೆತಾಕು ತಡೆ ಬರದಂತೆ ನಿನ್ನೊಳಗೇಕತೆಯ ದಯಮಾಡಿಸೈ 5
--------------
ವೆಂಕಟದಾಸರು
ಏನು ಕೊಟ್ಟನೆ ಮಗಳಾ ಉದಾ | ಸೀನದಿ ಭಿಕ್ಷುಕ ಶಿವಗೀಂದು ಗಿರಿಜಾ ಪ ಹೆತ್ತವಳಿಲ್ಲಾ ಸೀ ಹುಟ್ಟತ ಪರದೇಶೀ | ನೆತ್ತಿಗೆ ಎಣ್ಣಿಲ್ಲಾ ನೆರೆಬಿಸಿ ನೀರಿಲ್ಲಾ | ದೊತ್ತಿದ ಕೂದಲು ದುರ್ಜಟಿ ಯಾಗಲು | ಹೊತ್ತಿದ ತಲೆಯಿಂದ ಹಣೆ ಉರಿಗಣ್ಣಾದ | ಇತ್ತಿ ಹೊದಿಯಲಿಲ್ಲಾದೀ ಭಸ್ಮ ಲೇಪನಾ | ಮೆತ್ತಿದ ಗುಣದಿಂದ ಮೈ ಯಲ್ಲ ಬೆಳ್ಚಾದಾ | ಎತ್ತ ನೇವುವನು ಭೂತ ಗಣಾ | ಯೋಗಿ - ಕು | ಲೋತ್ತ ಮನೆನಿಸಿದನು ಇಂಥ | ಹತ್ತು ಭುಜವ ತಾಳಿ ದೈದು ಮೊರೆಯುಗವ 1 ಶರಥಿ ಮಥನದಲ್ಲಿ ಸಲೆ ವಿಷ ಹೊರಡಲಿ | ಸುರರ ಮಾತು ಕೇಳಿ ಶೀಘ್ರದಿ ಸುರಿಯಲಿ | ಉರಿಹೆಚ್ಚಿ- ಮೈಯ್ಯಲಿ ಉಬ್ಬಸ ಗೊಳುತಲಿ | ಸುರಗಂಗಿಯ ಹೊತ್ತ ಸೀತಾಂಶು ಕಳೆವತ್ತ | ಮರುಳವೆ ತಿರುಗುವ ಮತ್ತೆ ಭೋಳಾದೇವ | ತ್ವರಿತವ ಕೋಪದಯ ಮನಿಯೊಳು ಹಿಡಿದಿಹ | ಸುರರಿಗೆ ವಲಿದಿಹನು ಬೇಡಿದ | ವರಗಳನ್ನು ಕೊಡತಿಹನು ಬೆನ್ನಟ್ಟಿ | ಬರೆ ದುಷ್ಟ ಓಡಿದನು ಶ್ರೀ ವಿಷ್ಣು | ಕರುಣದಿ ಶರೆಯ ಬಿಡಿಸೆ ಕೊಂಡವನಿಗೆ 2 ಕರಿಚರ್ಮ ತಾಳಿದಾ ಕಾಡೊಳು ಸೇರಿದಾ | ಉರಗ ಭೂಷಣನಿವ ಊಧ್ರ್ವರೇತಾದವ | ಹೊರೆ ಹುಲಿದೊಗಲಾ ಹಾಸಿಗೆ ಮಾಡಿದಾ | ಕೊರಳಳು ರುಂಡಮಾಲಾ ಕರದೊಳು ಕಪಾಲಾ | ಧರಿಸಿದ ನೀತನು ದೊರೆಯಲ್ಲದಾತನು | ನೆರೆದುಣ - ಲುಡಿಲಿಲ್ಲಾ ನರಸುರ ರೊಳಗಲ್ಲಾ | ಪರಕ ಪರೆನಿಸುವರು ಸ್ಮರಿಸಿದಾ ಆ ಗುರುವರ ಮಹಿಪತಿ ಪ್ರಭು ಸಾಂಬನೆಂಬವನಿಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಖೋಡ್ಯಾದಲ್ಲೋ ಸಂಸಾರ ನಾನು ನೋಡಿದ್ದಿಲ್ಲ ಪ ಏನು ಖೋಡಿದು ವಿಚಾರ ತಪ್ಪಿಸಿ ಎನ್ನ ಶ್ವಾನದಂದದಿ ಖೂನವಿಲ್ಲದೆ ಕೂಗಿಸಿತೇನು ಅ.ಪ ತಾನೆ ನಿಜವಿಲ್ಲ ಎನ್ನನು ಏನು ಕೆಡಿಸಿತಲ್ಲ ನಾನಾಪರಿಲಿ ಮಾಯಮೋಹದಿ ಮುಳುಗಿಸಿ ಜ್ಞಾನ ಕೆಡಿಸಿ ಹೀನಬವಣೆಗೆ ತಂದಿತ್ತು 1 ಕನಸಿನಪರಿಯಂತೀಜಗಸುಖ ಕ್ಷಣಹೊತ್ತಿನ ಸಂತಿ ಇನಿಸು ತಿಳಿಗೊಡದೆನ್ನ ಮನಸು ಸೆಳೆದುಕೊಂಡು ಕುಣಿಸಿ ಕುಣಿಸಿ ಮಹ ನರಕಿಯೆನಿಸಿತ್ತು 2 ಸತ್ಯಮಾರ್ಗ ಮರೆಸಿ ಎನ್ನನಸತ್ಯಮಾರ್ಗಕೆಳಸಿ ನಿತ್ಯನಿರ್ಮಲನ ಸತ್ಯ ಚರಿತೆಗಳ ಗುರ್ತು ತಿಳಿಸದೆಮಮೃತ್ಯುತೀಡೆನಿಸಿತ್ತು3 ಮರವೆಯು ಮುಚ್ಚಿತ್ತು ಭವಪಾಶ ಕೊರಳಿಗೆ ಹಾಕಿತ್ತು ಅರಿವಿನ ಕುರುಹನು ತೋರಿಸದೆ ಪರದಿರವು ಮರೆಸಿ ಧರೆಭೋಗ ಅಹುದೆನಿಸಿತ್ತು 4 ನೇಮನಿತ್ಯಕೆಡಿಸಿ ಎನಗೆ ಶ್ರೀರಾಮಪಾದಮರೆಸಿ ಕಾಮಿಸಬಾರದ ಕಾಮಿತಗಳಿಂದ ಪಾಮರನೆನಿಸೆನ್ನ ಕೊಲ್ಲುತಲಿತ್ತು 5
--------------
ರಾಮದಾಸರು
ಏನು ಗತಿ ಎನಗಿನ್ನು ಏನು ಗತಿಯೋ ನೀನು ಸಿರಿ ಕೃಷ್ಣ ಪ ಕಾಯ ಮೊದಲಾದ ಬದುಕುಗಳೆಲ್ಲ ಸ್ಥಿರತರಗಳಲ್ಲೆಂದು ತೋರಿಸಲು ಪರಮ ಭಕುತಿಯು ಪುಟ್ಟಿ ಮೊದಲೆ ನಾ ನಿನ್ನ ಪದ ಮರೆದು ಬಿಡುವೆನು ತಡಿಯದೇ ಕರುಣಿ 1 ಹೀಗೆ ತೋರದೆ ಪೋದರೆ ಎನಗೆ ಹಂಬಲವು ಆಗುವುದು ಸತ್ಯಲೋಕಗಳ ತನಕ ಭೋಗಗಳು ಕೊಟ್ಟರೆ ಮರೆವೆ ಅದರಿಂದ ನಾ ಕೂಗುವೆನು ಕೊಡದಿದ್ದರೆ 2 ಪಾಮರನ ಮಾಡಲೆನ್ನನು ತಿಳಿಯದಲೇವೆ ಸೀಮೆ ಇಲ್ಲದ ಪಾಪ ಮಾಡುವೆನೊ ಪ್ರೇಮದಲಿ ಪಾಂಡಿತ್ಯ ನೀಡಿದರೆ ಭಕುತ ಜನ ಸ್ತೋಮ ನಿಂದಿಸುವೆನಯ್ಯಾ 3 ಧನದಿಂದ ಹೀನನ್ನ ಮಾಡೆ ಲೋಕದಲಿನ್ನು ಜನರು ಕೊಡುವುದು ಎಲ್ಲ ಎನಗೆ ಕೊಡಲೆಂಬೆ ಧನವು ನೀ ಕೊಡಲು ಬಲು ಮದದಿಂದ ಕೆಟ್ಟು ಸ- ಜ್ಜನಕೆ ಕಾಸೊಂದು ಕೊಡಿನೊ 4 ಏಸು ಪರಿಯಲಿ ಪೇಳಿದರು ಕೇಳೆನ್ನ ನಿಜ ವಾಸನಿಯು ತನಗೆ ತಾನಿಟ್ಟಾಹದೈ ವಾಸುದೇವವಿಠಲ ನೀ ಎನ್ನಯ ಮನದಲ್ಲಿ ವಾಸವನು ಮಾಡಿ ಬೋದÉೈಸದನಕೆÀ5
--------------
ವ್ಯಾಸತತ್ವಜ್ಞದಾಸರು
ಏನು ಗಳಿಸಿದ್ಯೊ ಪ್ರಾಣಿ ಜ್ಞಾನಕ ಮಾಡಿ ನೀ ಹಾನಿ ಧ್ರುವ ಶಬ್ಧಜ್ಞಾನದ ಅಂಗಡಿನೀ ಹಾಕಿ ಲುಬ್ದಿಸಿದೊ ಬಲು ಪಾಕಿ ಲಬ್ದಾಲಬ್ಧಿಯು ತಿಳಿಯದೆ ಡೊಂಕಿ ಸ್ತಬ್ಧನಾದ್ಯೊ ವಿಶ ಸೋಂಕಿ 1 ವಿದ್ಯಾ ವ್ಯುತ್ಪತ್ತಿ ತೋರಿ ನೀ ಬಹಳ ಸದ್ಯಮಾಡಿದ್ಯೊ ತಾಳ ಮೇಳ ಸಿದ್ಧಾಂತನುಭವ ನೀ ಮಾಡಿ ಹಾಳ ಕೋಳ 2 ಗಳಿಸುವದೇನೆಂದರಿಯದೇ ಖೂನ ಬಾಳಿ ಬದುಕಿ ಪಡದೇನ ಬೆಳಗು ಬೀರುತಿರೆ ಮಹಿಪತಿ ಗುರುಜ್ಞಾನ ತಿಳಕೊಬಾರದೆ ನಿಜಖೂನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನು ಚೆಲುವಿಯೋ ಅಂಬುಜ ನಿಲಯಳೇನು ಚಲುವಿಯೋ ಪ ಕರ್ಣ ಭೂಷದಿಮಸ್ತಕದಿ ಮಣಿಯು ಪುರುಟ ಭೂಷದಿತರಣಿ ಕೋಟಿಯಂತೆ ಪೊಳೆವ ಶರಧಿನಾಥ ಸ್ತುತಿಯ ಕೇಳಿಮರುಳುಗೊಂಡ ಹರಿಯು ವಕ್ಷಸ್ಥಳದೊಳಿಟ್ಟು ಸಾಕುತಿಹನು 1 ಕರವ ಪಿಡಿದನುಹರನ ಧನುವ ಮುರಿದು ಸರಯೂನಲ್ಲಿ ಸುಖಿಪ 2 ಮಂದಗಮನಿಯೋನಿ ಅಹೇಂದ್ರವಾದ ಮಂದಶಯನಿಯೊವಿದರ್ಭರಾಜನಂದ ತನುಜೆಯೋ ಸಭಕ್ತರಿಗೆ ಬಂಧಕ ಮುನಿಯೊದ್ವಂದ್ವ ಭಾಗದೊಳಗೆ ರಾಜವೃಂದ ನಿಂತು ಕಾಯುತಿರಲುಇಂದಿರೇಶನ ಪಾಣಿಪಿಡಿದು ಸುಂದರಾಂಗಿ ಮದುವೆಯಾದ 3
--------------
ಇಂದಿರೇಶರು
ಏನು ತಿಳಿವುದೋ ಮೂರ್ಖರಿಗೇನು ತಿಳುವುದೋತಾನೇ ತಾನಾದ ತತ್ವವ ಹೇಳಲು ತನ್ನ ತಲೆಯನು ತೂಗುತಿರುವಗೆ ಪ ಮಂಕರಿ ಹೊರುವ ಕೋಣನ ಮುಂದೇ ಮಹಾವೀಣೆಯನು ಹಿಡಿದುಕಿಂಕಿಣಿ ಕಿಣಿ ಕಿಣಿ ಎಂದು ಬಾರಿಸೆ ತಿಳಿಯುವುದೇಓಂಕಾರದ ಮಹಿಮೆಯನು ಒಲಿದು ಹಿರಿಯರು ಹೇಳುತಿರಲುತಂಕದಿ ಕೇಳುತ ಹೋ ಹೋ ಎಂದು ತಲೆಯನು ತೂಗುವರಿಗೆ1 ಮೂಟೆಯ ಹೊರುವ ಕತ್ತೆಯ ಮೂಗಿಗೆ ಮಘ ಮಘಿಪ ಕಸ್ತೂರಿಯ ಹಚ್ಚಲುಗಾಳಿಯ ಪರಿಮಳ ಸುಗಂಧಗಳ ಅದು ತಿಳಿಯುವದೇಲಾಲಿಪ ಬ್ರಹ್ಮಾನಂದದ ಲಕ್ಷಣ ಲಕ್ಷ್ಯವ ಹಿರಿಯರು ಹೇಳುತಿರಲು ಕೇಳಿದಾಗಲೇಹೋ ಹೋ ಎನ್ನುತ ತಲೆಯ ತೂಗುವವರಿಗೆ 2 ಸತ್ಯಾನಂದರೆ ಅವರೇ ಗುರುಗಳು ಸತ್ಯ ಸಂಧರು ಅವರೇ ಭಕ್ತರುಸತ್ಯ ಜ್ಞಾನವ ತಿಳಿಯಲಿಕೆ ಅವರೇ ಯೋಗ್ಯರುಸತ್ಯವಸ್ತು ಚಿದಾನಂದ ಸಾಕ್ಷಾತ್ ರೂಪವೇ ಹೇಳುತಿರಲುಚಿತ್ತದಿ ಕೇಳು ಹೋ ಹೋ ಎಂದು ತಲೆಯ ತೂಗುವರಿಗೆ 3
--------------
ಚಿದಾನಂದ ಅವಧೂತರು
ಏನು ಧನ್ಯರೋ ಜಗದಿ ಎಂಥ ಮಾನ್ಯರೋ | ಮೌನಿ ಶ್ರಿ ರಘುಪ್ರೇಮತೀರ್ಥರು ಪ ಕಲಿಯುಗದಿ ಕÀ್ರತುಗೈದ ಇಳಿಯ ಜನಕ ಸಾಧ್ಯವೆಂದು ಕುಲಿಶಪಾಣಿಯಂತೆ ತೋರ್ಪರು 1 ಧೂರ್ತರಿಂದ ದೂರವಿದ್ದು | ಸ್ವಾರ್ಥರಹಿತರಾಗಿ | ಸಕಲ ತೀರ್ಥಕ್ಷೇತ್ರ ಚರಿಸಿ ಜನ್ಮ ಸಾರ್ಥಕೆನಿಸಿದ ಯತಿಯು 2 ಸದನ ತೃಣಸಮಾನವೆನಿಸಿ ಮುದದಿ | ವಿನಯಶೀಲ ದ್ವಿಜರಿಗಿತ್ತು ಮುನಿಯೆನಿಸಿ ವಿರುಕ್ತರು 3 ಚತುರಾಶ್ರಮ ವ್ರತದಿ ನೇಮ ಸತತಾ ಚರಿಸುತಲಿ | ಶಿಷ್ಯರಾದಿಗೆ ವ್ರತಬೋಧವೃಷ್ಟಿ ಹಿತದಿಗರೆದು ಪೊರೆವ ಯತಿಯು 4 ಶ್ರೀಮಧ್ವಸುಮತವಾರಿಧಿ ಸೋಮನೆಂದೆನಿಸಿ | ಜಿತ ಕಾಮರಾಗಿ ಕಠಿಣ ತಪದಿ | ಶ್ರೀ | ಶಾಮಸುಂದರನ ವಲಿಸಿದವರು 5
--------------
ಶಾಮಸುಂದರ ವಿಠಲ
ಏನು ನಡತೆಯೋ ಏಕೆ ಕೆಡುವೆಯೋಮನುಜ ಜನ್ಮವನ್ನು ವ್ಯರ್ಥಮಾಡಿಬಿಟ್ಟೆ ಮೂರ್ಖ ಪ ಹಂಡತಿ ಕದಪನು ನೀನು ಸವರಿ ನೋಡುವಂತೆ ಮೊನ್ನೆಕೊಂಡ ಸಾಲಗ್ರಾಮವನ್ನು ಮುಟ್ಟಬಾರದೇ ತಡಹಬಾರದೇರಂಡೆಯರ ವಿಷಯವಾಗಿ ಕಾಲಿಗೆರಗಿದಂತೆ ತತ್ತ್ವಪಂಡಿತರ ಚರಣಕ್ಕೆ ಬೀಳಬಾರದೆ ಹೊರಳಬಾರದೆದುಂಡು ಮುತ್ತಿನ ಸರವ ಸತಿಗೆ ಕೊಂಡು ಹಾಕಿದಂತೆಪಿಂಡಾಂಡ ವಿವರಿಪರಿಗೆ ವಂದನೆ ಮಾಡಬಾರದೇಭಂಡ ಮಾತನು ನಾರಿ ಕಿವಿಯ ಖಂಡಿ ಯೊಳು ಪೇಳ್ದ ತೆರದಿಸುವಚನ ಸಾಧುಗಳೊಳು ಉಸುರಬಾರದೇ ಅರುಹಬಾರದೆ 1 ನನ್ನ ಮಕ್ಕಳೆಂದು ನೀನು ಬನ್ನಬಟ್ಟ ತೆರದಿ ಇತರಸಣ್ಣವರ ಮೇಲೆ ನೀನು ಕರಗಬಾರದೆ ತೋರಬಾರದೆಹೊನ್ನು ಹಣವು ಬಿದ್ದುಯಿರೆ ಹೆಂಟೆಯೆನುತಲಾಗ ಎರಡುಕಣ್ಣು ತೆರೆದು ದೃಷ್ಟಿಸಿ ನೋಡಬಾರದೆ ಕಾಣಬಾರದೆಮನ್ನಣೆ ಎಂಬುದನ್ನು ಸೂಕರನ ವಿಷೈ ಸಮನುಎನ್ನುತಲಿ ಚಿತ್ತದಲ್ಲಿ ಎಣಿಸಬಾರದೆ ಹತ್ತಬಾರದೆಉನ್ನತದ ಜೀವರಾಶಿ ಎಲ್ಲ ಒಬ್ಬ ಶಿವನು ಎಂದುಭಿನ್ನ ಕಳೆದು ಆತ್ಮ ಸುಖದಿ ಮುಳುಗಬಾರದೆ ಬೆಳಗಬಾರದೆ 2 ನಾನಾ ಜನ್ಮ ಜನ್ಮ ತಿರುಗಿ ನರನ ಜನುಮ ಬಂದುನಾನಾರೋ ಎಂದು ನಿನ್ನ ತಿಳಿಯಬಾರದೆ ಅರಿಯಬಾರದೆಜ್ಞಾನಿಗಳ ಮುಖಗಳಿಂದ ನಿನ್ನ ಒಳಗೆ ನಿನ್ನ ಕಂಡುನಾನೆ ಬ್ರಹ್ಮವೆಂದು ನಿಜವ ಕಾಣಬಾರದೆ ಕೂಡಬಾರದೆನಾನಾಧ್ವನಿಯು ನಾನಾಕಳೆಯು ದೇಹದೊಳು ತೋರುತಿರಲುಆನೆಯಂತೆ ನೀನು ಈಗ ತೊನೆಯಬಾರದೆ ತೂಗಬಾರದೆತಾನಾದ ಚಿದಾನಂದ ಗುರುವು ತಾನೆ ತಾನೆಯಾಗಿನಾನು ನೀನು ಎಂಬುದನ್ನು ತಿಳಿಯಬಾರದೆ ಕಳೆಯಬಾರದೆ 3
--------------
ಚಿದಾನಂದ ಅವಧೂತರು
ಏನು ಪುಣ್ಯವ ಮಾಡಿ ನಾನಿಂದು ನಿನ್ನ ಕಂಡೆ ದೀನ ವತ್ಸಲ ಸ್ವಾಮಿ ಕೃಷ್ಣ ಪ ಜ್ಞಾನಗಮ್ಯನೆ ನಿನ್ನ ಕಾಣಲು ಮನದಲ್ಲಿ ನಿತ್ಯ ಧ್ಯಾನವ ಮಾಡುವರಯ್ಯ ಅ.ಪ. ಶ್ರುತಿ ಶಾಸ್ತ್ರಗಳನೋದಿ ಮಥನವ ಮಾಡುವ ಮತಿಸಾಧನದಿಂದ ನಿನ್ನರಸುವರೊ ಪತಿತಪಾವನ ನಿನ್ನ ಕರುಣವೊಂದಿಲ್ಲದಿರೆ ಇತರ ಸಾಧನವೆಲ್ಲ ಗತಿದೋರದೋ ಸ್ವಾಮಿ 1 ನಿನ್ನ ಭಕ್ತರು ಮಾಳ್ಪ ಸಾಧನಂಗಳಿಗೆಲ್ಲ ನಿನ್ನ ಕಾರುಣ್ಯವೇ ಕಾರಣವಲ್ಲವೆ ನಿನ್ನ ನುತಿಸ ಬಂದ ನರರ ಕ್ಷೇಮದ ಭಾರ ನಿನ್ನದೆಂದು ತಿಳಿದು ನೀನಾಗಿ ಪೊರೆಯುವೆ 2 ಏನೊಂದು ಸಾಧನವರಿಯದ ಎನಗೀಗ ನೀನಾಗಿ ದಯಮಾಡಿ ಮೈದೋರಿದೆ ಏನು ಧನ್ಯನೊ ನಾನು ಆನಂದಕೆಣೆಗಾಣೆ ದಾನವಾಂತಕ ಸ್ವಾಮಿ ಕರಿಗಿರೀಶನೆ ಕೃಷ್ಣ 3
--------------
ವರಾವಾಣಿರಾಮರಾಯದಾಸರು
ಏನು ಪೇಳಲಮ್ಮಯ್ಯಾ ರಂಗನ ಕ್ರೀಡಾ ಏನು ದಂಡಿಸಲಮ್ಮಯ್ಯಾ ಶ್ರೀ ಕೃಷ್ಣನ್ನ ಪ ಪಿಡಿದು ನಿಂದಾ ದುರುಳ ದೈತ್ಯನ್ನೆಳದೊಡಲವೆ ಸೀಳಿದಾ ಬಲಿಯಲ್ದೈನ್ಯದಿ ದಾನಬೇಡಿ ತಾಯ ಶಿರವ ಕಡಿದು ತೋರಿದಾ ಕಲೆವೆಣ್ಣೈದ್ಮೊಲೆಯುಂಡು ಕಳದ್ವಟ್ಟೆ ಹಯವೇರಿದಾ 1 ಕಾನನದಾ ವರಹನಾದಾ ಆಗಲು ಪಂಚಾನನ ರೂಪನಾದಾ ಸೂನು ಪರಶುರಾಮನಾಗಿ ಜಾನಕಿವರನಾಗಿ ರಾವಣನಾಗಿ ಮಾನಬಿಟ್ಟು ವಾಜಿಯನೇರ್ದಾ 2 ನಿಗಮ ತೋರ್ದಾ ಬೆನ್ನಲಿ ಬೆಟ್ಟವಿರಿಸಿ ಸುರರಾ ಪೊರೆದಾ ಧರಾಲಲನೆಯನೆತ್ತಿ ತಂದಾ ದೈತ್ಯನ ಶೀಳಿ ತರಳನಳಲನು ಕಳೆದಾ ಸುರತಟಿನಿಯಂಗುಟದಿ ಜನಿಸೆ ಧರೆಯ ಪಾವನಗೊಳಿಸೆ ನರಲೋಕವುದ್ಧಾರ ಜನಕ ಸಿರಿಪಾವನ ನರಸಿಂಹವಿಠಲನ 3
--------------
ನರಸಿಂಹವಿಠಲರು
ಏನು ಬಲ್ಲಿದನೋ ಹನುಮಂತ ನೀನು ಏನು ಬಲ್ಲಿದನೋ ಪ ಏನು ಬಲ್ಲಿದನಯ್ಯ ನೀನು ಜ್ಞಾನಮೂರುತಿ ಜಾನಕೀಶನ ಧ್ಯಾನ ಸುಖಸಾಮ್ರಾಜ್ಯದಲ್ಲಿ ಲೀನನಾಗಿ ಸುಖಿವೆ ಬಲವಂತ ಅ.ಪ ಶರಧಿ ಜಿಗಿದವನೋ ಭರದಿ ದುರುಳನ ಪುರವ ಸೇರಿದನೋ ನಿರುತ ದೊರೆಮಾತೆ ದರುಶನಾದನವನೋ ಪರಮವೀರನೋ ಧರೆಯ ಮಾತೆ ಕೃಪಾಪಾತ್ರನಾಗಿ ಪರಮಪಾವನ ವರವ ಪಡೆದು ಮರಳಿ ದುರುಳನ ವನವ ಸೇರಿ ಧುರವ ಜೈಸಿದಿ ಧೀರಮಾರುತಿ 1 ತಿರುಗಿ ಅಂಗದನ ಬಲವನ್ನು ಸೇರಿ ಸಾರ ಕಥನವನ್ನು ಅರುಹಿ ಮುಂದೆ ಪರಮಪಾವನನ ಚರಣಕಂಡಿನ್ನು ಇರಿಸಿ ಹರಿಯಾಜ್ಞಂಗೀಕರಿಸಿ ತ್ವರದಿ ದಕ್ಷಿಣಶರಧಿ ಹೂಳಿಸಿ ಭರದಿ ಲಂಕೆಗೆ ಮುತ್ತಿಗಿತ್ತಯ್ಯ 2 ಬುದ್ಧದೇಹದ ಕುಂಭಕರ್ಣನ ಕ್ಷುದ್ರ ಇಂದ್ರಜಿತುನ ಮತ್ತವನ ತಂದೆ ಬುದ್ಧಿಹೀನನ್ನ ಹತ್ತು ತಲೆಯವನ ಯುದ್ಧದಿಂದ ಬದ್ಧರಕ್ಕಸ ರೊದ್ದು ಬೇಗನೆ ಛಿದ್ರ ಮಾಡಿ ಜ ಗದ್ರಕ್ಷ ಶ್ರೀರಾಮ ಪಾದಪದ್ಮಕ್ಕೆ ಮುದ್ದು ಮುಖಿಯನು ತಂದುಕೊಟ್ಟೆಯ್ಯ 3
--------------
ರಾಮದಾಸರು
ಏನು ಭಯ ನನಗೆ ಏನು ಭಯತಾನೆಯಾದ ಪರಬ್ರಹ್ಮ ತಾನೆಯಾಗಿ ತಾನಿಹಗೆ ಪ ಕಾಮಿಸಿ ಸುತರು ಸೊಸೆಯು ಕೊನೆಯಿಲ್ಲದ ಬಯಕೆಯಾಗೆಕಾಮನನ್ನು ಕಾಲಲೊದ್ದು ಕಸಕೆ ಮಾಡಿದವಗೆ 1 ಇಹಪರ ವಾಸನೆಯನೆಲ್ಲ ಲೋಕ ವಾಸನೆಯದಹಿಸಿ ಬೂದಿಯನ್ನೆ ಮಾಡಿ ಧೂಳಿಪಟ ಮಾಡಿದವಗೆ 2 ಬಣ್ಣ ಬಣ್ಣದ ಕ್ರೋಧಮದಗಳ ಬಳಿದು ಶೋಕ ಮೋಹವನುಣ್ಣಗೆ ಮಾಡಿ ಎಲ್ಲವ ನುಂಗಿ ನೀರು ಕುಡಿದವಗೆ 3 ಕ್ಲೇಶ ದುಷ್ಟಗುಣ ವೆಂಬುದೆಲ್ಲವಹೊಟ್ಟು ಮಾಡಿ ಹಾರಲೊದ್ದಿಹ ದಿಟ್ಟ ಮಾನವಗೆ4 ಕಪಟ ಮೋಹ ಮೊಳೆಯ ಕಿತ್ತುಬಯಲು ಚಿದಾನಂದ ಸದ್ಗುರು ಬ್ರಹ್ಮವಾಗಿ ತೂಗುವಗೆ 5
--------------
ಚಿದಾನಂದ ಅವಧೂತರು
ಏನು ಮರುಳಾಗುವೆಯೇ ಎಲೆಮಾನವ ನಿನ್ನ ಮಾನಿನಿಯ ಗುಣಕೆ ನೀ ಹಿಗ್ಗಿ ಹಿಗ್ಗಿ ಪ ದಾನ ಧರ್ಮಗಳ ಕೊಡಬೇಕೆಂದರೊಡ ಬಡಲು ಹೀನ ಗುಣಗಳನೆ ತಾ ಸೇವಿಸುವಳು ಜ್ಞಾನ ಮೋಕ್ಷಾದಿಗಳ ಹಾದಿಯನುಕಟ್ಟಿ ಭವ ಕಾನನವನೆ ಹೊಗಿಸಿ ತೊಳಲಿಸುವಳು 1 ನರಕವನು ತನ್ನಲ್ಲಿ ನೆಲೆಮಾಡಿ ಕೊಂಡಿಹಳು ಪರಿಪರಿಯ ಮೋಹಗಳ ಬೀಸುತಿಹಳು ಸ್ಮರನ ಬಾಣವ ಮಾಡಿ ಸಾಲು ಗೊಲೆಕೊಲ್ಲುವಳು ಅರಿಯದವರಂತೆ ಮಿಣ್ಣಗೆ ಇರುವಳು 2 ತನ್ನಮನ ಬಂದಂತೆ ಚರಿಸುವಳು ಪಗಲಿರುಳು ಕನ್ನಗೊಯ್ಕರ ವೋಲು ಕೊರೆಯುತಿಹಳು ಭಿನ್ನಭಾವದಿ ನಡೆದು ಮನೆಯ ಪಾಲ್ಮಾಡುವಳು ಕಣ್ಣಿನೊಳು ಕಂಡೊಡವೆಗಳನಿರಿಸಳು 3 ಸುದತಿ ಯಾಕಾರೆ ಯಾಗಿಹಳು ನೋಯೆ ನುಡಿವಳು ಕಂಡ ಕಂಡವರೊಳು ಹೋಯೆಂದು ಕೂಗುವಳು ಶಿಕ್ಷಿಸಳು ನಿನ್ನನುರೆ ಬಾಯೊಳಗೆ ಭಯಬಿಡಿಸಿ ಹಾಗಿಸುವಳು 4 ಕಾಮ ಕ್ರೋಧಾದಿಗಳ ಕೀಲ ಬಲಗೊಳಿಸುವಳು ಪ್ರೇಮ ಗೆಡಿಸುವಳೆಲ್ಲ ಬಾಂಧವರನು ಭೂಮಿಯೋಳಗಧಿಕ ಭೀಮನ ಕೋಣೆ ಲಕ್ಷ್ಮೀಪತಿಯ ನೆನೆನೆನೆದು ಸಖಿಯಾಗು ಕಂಡ್ಯಾ 5
--------------
ಕವಿ ಪರಮದೇವದಾಸರು