ಒಟ್ಟು 1137 ಕಡೆಗಳಲ್ಲಿ , 107 ದಾಸರು , 959 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇ. ಶ್ರೀಹರಿ ಲಕ್ಷ್ಮಿಯರುಅಂಗಳದೊಳಗಾಡೋ ರಂಗಪರಹೆಂಗಳ ಮನೆಗ್ಹೋಗ ಬ್ಯಾಡೋ ನೀಲಾಂಗ ಪದಧಿಘೃತಚೋರನೆನ್ನುವರು ನಿನ್ನಬೆದರಿಸಿ ಜರೆವರು ಪದುಮನೇತ್ರೆಯರುವಿಧವಿಧದಲಿ ಬಾಧಿಸುವರು ಕೊರಳಪದಕದ ಸರವನ್ನು ಸೆಳೆದುಕೊಳ್ಳುವರು 1ಕಿರುಕುಳ ....ನಿನ್ನ ಮನಕರಕರಿಸುವದೆನಗಿನಿತು ಕೇಳಣ್ಣಕರುಗಳ ಬಿಡ ಹೇಳಿ ಮುನ್ನಾ ಬಲುಹಗರಣಗೈಯ್ಯುವರೆನ್ನಾ ಸಂಪನ್ನಾ 2ನುಡಿಯಲಾಲಿಸುಮುದ್ದು ಕಂದಾ ನಿನ-ಗಿಡುವೆನಕ್ಷತೆ ವಸ್ತ್ರಾಭರಣ ಸುಗಂಧಾಕೊಡುವೆನುದಧಿಘೃತದಿಂದಾ ಕಾೈದಕಡಬು ಕಜ್ಜಾಯ ಅತಿರಸವಾ ಗೋವಿಂದಾ 3
--------------
ಗೋವಿಂದದಾಸ
ಇಂತಿರುವುದೇನು ಬಗೆ ರಾಮಾ |ಹರಿಸ್ವ-ತಂತ್ರ ಶ್ರೀನಿಧಿಯೆಂದು ಪೊಗಳುತಿವೆ ವೇದ ಪವಿಧಿಗೆ ಪದವಿತ್ತವನೇ ವನವ ಚರಿಸುವದೇನೋ |ಪದುಮ ಸದನೆಯ ರಮಣ ಬಡವನಾಗಿಹದೇನೋ ||ಮದನಜನಕನೆ ಋಷಿಗಳಂತೆ ಆಗುವದೇನೋ |ಉದರದೊಳು ಬಹು ಜಗಂಗಳಿರಲೂ ಪತ್ರ ಸದನವಾಶ್ರಯಿಸಿ-ಕೊಂಡಿರುವಿ ಇದು ಏನೋ 1ನಿತ್ಯತೃಪ್ತನೆ ಶಬರಿಯೆಂಜಲುಂಬುವದೇನೋ |ಉತ್ತಮ ವಿಹಗವಿರಲು ಕಾಲ್ನಡಿಗೆಯಿದೇನೋ ||ಭೃತ್ಯರುದಿವಿಜರುನೀಂ ಚಾಪವ ಹೊರುವದೇನೋ |ನಿತ್ಯಶ್ರೀ ಹೃದಯದೊಳಗಿರಲು ನಿನ್ನ ಪತ್ನಿ ಹೋದಳೆಂದುಚಿಂತಿಸುವದೇನೋ2ಸ್ವಾಮಿ ಅಹಿಶಯನ ತೃಣಶಾಯಿಯಾಗುವದೇನೋ |ಭೂಮಿ ನಿನ್ನೊಂದಂಘ್ರಿ ಸೇತು ಕಟ್ಟುವದೇನೋ ||ಈ ಮರುಳು ರಕ್ಕಸರು ನಿನಗೊಂದೀದೇನೋ |ತಾಮಸರ ಮೋಹಿಸುವದಕೆ, ಭಕ್ತ ಪ್ರೇಮ ಪ್ರಾಣೇಶ ವಿಠ್ಠಲನೆಲೀಲೆಯೇನೋ3
--------------
ಪ್ರಾಣೇಶದಾಸರು
ಈ ಶರೀರದ ಭ್ರಾಂತಿ ಇನ್ನೇಕೆ ಮನವೆ |ವಾಸುದೇವನ ನೆನೆದು ಸುಖಿಯಾಗು ಮನವೆ ಪ.ಕಾಲು ಜವಗುಂದಿದುವು ದೃಷ್ಟಿಗಳು ಹಿಂಗಿದುವು |ಮೇಲೆ ಜವ್ವನ ಹೋಗಿ ಜರೆಯಾದಗಿತು ||ಕಾಲ - ಕರ್ಮಾದಿಗಳು ಕೂಡಿದಾಕ್ಷಣದಲಿ |ಬೀಳುವೀ ತನುವಿನೊಳ್ ಇನ್ನಾಸೆಯ ಮನವೆ 1ದಂತಗಳು ಸಡಿಲಿದುವು ಧಾತುಗಳು ಕುಂದಿದುವು |ಕಾಂತೆಯರುಜರಿದು ಓಕರಿಸುವರು ||ಭ್ರಾಂತಿ ಇನ್ನೇಕೆ ಈ ತನುವು ಬೀಳದ ಮುನ್ನ |ಸಂತತ ಶ್ರೀ ಹರಿಯ ನೆನೆ ಕಾಣೊ ಮನವೆ 2ನೀರಬೊಬ್ಬುಳಿಯಂತೆ ನಿತ್ಯವಲ್ಲ ಈ ದೇಹ |ಸಾರುತಿದೆ ನೀ ಮೆಚ್ಚಿ ಮರುಳಾಗದೆ ||ಶ್ರೀರಮಣ ಪುರಂದರವಿಠಲನ ನೆನೆ ನೆನೆದು |ಸೂರೆಗೊಳ್ಳಿರೊ ಸ್ವರ್ಗ ಸುಮ್ಮನಿರಬೇಡಿ 3
--------------
ಪುರಂದರದಾಸರು
ಈಗಲೆ ಭಜಿಸಲೆಜಿಹ್ವೆ - ನೀ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಾಗುಮಾಡದೆಶ್ರೀ ಹರಿಪಾದಾಂಬುಜವಪ.ದೇಹದೇಹ ಸಂಬಂಧಿಗಳು - ಅವರು |ಮೋಹಬದ್ಧರಾಗಿ ಕುಳಿತಿಹರು ||ಆಹಾರ ಗುಹ್ಯೇಂದ್ರಿಯವೆಂಬ ಎರಡರ |ಬೇಹಾರದಲಿ ನೀನು ಮುಳುಗಿಸದಲೆ ಮನ 1ಮರಣ ತೊಡಗಿ ನಾಲಗೆಯುಡುಗಿ - ನಿನ್ನ - |ತರುಣಿ ಪುತ್ರ ಮಿತ್ರರಳುತಿರಲು ||ಕೊರಳೊಳು ಗುರುಗುರು ಗುರುಗುಟ್ಟುವಾಗನರ - |ಹರಿಯ ನಾಮವೆನ್ನಗೊಡದೆಲೊ ಪ್ರಾಣಿ 2ಅಸಿಪತ್ರವನದೊಳು ಹೊಗಿಸಿ - ನಿನ್ನ - |ಬಸೆವಸೆಖಂಡ ಹೊರವೊಡಿಸಿ |ಬಿಸಿಬಿಸಿ ನೆತ್ತರು ಬಸಿದು ಹೋಗುವಾಗ |ಕುಸುಮನಾಭನ ನಾಮ ನೆನೆಯಗೊಡದು ಮನ 3ತಪ್ತಲೋಹದ ಮೋಲೊರಗಿಸಿ - ನಿನ್ನ - |ಕತ್ತರಿಸಿದ ಖಂಡ ಬೇಯಿಸುವರು ||ನೆತ್ತಿಯ ಕೊರೆದು ನಾಲಗೆ ಹಿರಿದೊಗೆವಾಗ |ಚಿತ್ತಜನಯ್ಯನ ನೆನೆಯಗೊಡದು ಮನ 4ಕುಂಭಿಪಾಕದೊಳಗೆ ಕುದಿಸಿ - ನಿನ್ನ |ಅಂಬುಮೊನೆಗಳಿಂದಿರಿಯಿಸಿ ||ಅಂಬರಕೊಗೆಯ ಕಾಗೆಯು ಕಚ್ಚಿ ಕಡ್ಞಿಗ |ಅಂಬುಜಾಕ್ಷನ ನಾಮ ನೆನೆಯಗೊಡದು ಮನ 5ದುರುಳ ಯವದೂತರಾರ್ಭಟಿಸಿ - ನಿನ್ನ - |ಎರಕದ ಕಾಯ್ದ ಕಂಬಕೆ ತಕ್ಕೆಗೆಯ್ಸಿ ||ಪರಿಪರಿ ಭವದೊಳು ಬಳಲಿಸುತಿರುವಾಗ |ಪುರುಷೋತ್ತಮನ ನಾಮ ನೆನೆಯಗೊಡದು ಮನ 6ದುರಿತಕೋಟಿಗಳ ಹರಿಸುವ - ನಿನ್ನ - |ನರಕಬಾಧೆಗಳ ತಪ್ಪಿಸುವ ||ಪರಮ ಪುರುಷ ನಮ್ಮ ಪುರಂದರವಿಠಲನ |ನಿರುತದಿ ನೆನೆದು ನೀ ಸುಖಿಯೊಗೋ ಮನವೆ 7
--------------
ಪುರಂದರದಾಸರು
ಈತನೀಗ ನಮ್ಮ ದೇವನುಪ್ರೀತಿಯಿಂದಲಿ ಸ್ಮರಿಸುವವರಅಕ್ರೂರನ ಪ್ರೀತನೀತಅಜಮಿಳನ್ನ ಸಲಹಿದಾತಸಕಲಗುಣಪೂರ್ಣನೀತಅನಾಥ ಬಾಂಧವನೀತಕಮಲಮುಖಿಯ ರಮಣನೀತ
--------------
ಗೋಪಾಲದಾಸರು
ಉಡುಪಿಕೃಷ್ಣನ ನೋಡಿರಿ ಶ್ರೀಹರಿ ಚರಿತಸಡಗರವನು ಕೇಳಿರಿ ಪಪೊಡವಿಯೊಳು ಸಮರಿಲ್ಲ ಈತನಉಡುಪ ಮುಖ ಶ್ರೀ ಕೃಷ್ಟರಾಯನಕಡಲತಡಿಯಲಿ ನೆಲಸಿದಾತನಮೃಡಪುರಂದರೊಡೆಯ ದೇವನ 1ಮಧ್ವಸರೋವರ ಸ್ನಾನವ ಮಾಡುತ ಮನಶುದ್ದಭಾವದಿ ನಲಿದುಮಧ್ವಶಾಸ್ತ್ರÀವ ಸಾಧು ಸಜ್ಜನರಿಗೆ ಪೇಳ್ದಪದ್ಧತಿ ಮೀರದೆ ಶ್ರದ್ಧಾಭಕುತಿಯಿಂದ 2ಮಧ್ಯದಲ್ಲಿಹ ಅನಂತೇಶ್ವರನನುಶುದ್ಧ ಭಕುತಿಲಿ ನಮಿಸಿ ಸ್ತುತಿಸುತಮುದ್ದು ಕೃಷ್ಣನ ಹೆಜ್ಜೆ ಪಂಙ್ತಯಶ್ರದೆÀ್ಧ ಸಡಗರ ನೋಳ್ಪಸುಜನರು 3ಕಾಲಲಂದುಗೆ ಗೆಜ್ಜೆಯು ಕಯ್ಯೊಳು ಕಡ-ಗೋಲನೇಣನೆ ಪಿಡಿದುಬಾಲನಂದದಿ ಗೋಪಾಲರೂಪವ ತೋರ್ದಶ್ರೀ ಲಲಾಮನ ದಿವ್ಯ ಬಾಲಕೃಷ್ಣನರೂಪ4ಬಾಲಯತಿಗಳು ವೇಳೆ ವೇಳೆಗೆಬಾಲಕೃಷ್ಣನ ಪೂಜೆ ಮಾಡುತಬಾಲರೂಪವ ನೋಡಿ ಸುಖಿಪರುಶೀಲಗುಣಸುರವರನ ಸ್ತುತಿಪರು5ಮಧ್ವರಾಯರಿಗೊಲಿದು ಉಡುಪಿಯ ಮಣ್ಣ-ಗೆಡ್ಡೆಯೊಳಗೆ ಪೊಳೆದುಅದ್ವೈತಮತದ ಸದ್ದಡಗಿಸಿ ಮೆರೆದಂಥಮುದ್ದು ಸರ್ವಜÕರ ಆಜ್ಞಾಧಾರಕರೆಲ್ಲ 6ಶುದ್ಧ ತತ್ವಜÕರು ರಚಿಸಿದಪದ್ಧತಿಯ ಸಾಧಿಸುತ ಸಂತತಶ್ರದ್ಧೆಯೊಳು ಹರಿಕಾರ್ಯ ನಡೆಸುವಶುದ್ಧಯತಿಗಳ ಸೇವೆಗೊಲಿಯುವ 7ಪರಿಯಾಯದಿನ ಬರಲು ಶ್ರೀ ಹರಿಯನ್ನುಪರಿಪರಿವಿಧ ಪೂಜಿಸಿಪರಮವೈಭವದಿಂದ ಹರಿಯನ್ನುಕರತಂದುವರರಥÀವೇರಿ ಕುಳ್ಳಿರಿಸುವ ಭಕುತಿಯಲಿ 8ಪರಿಪರಿಯ ವಾದ್ಯಗಳು ಮೊಳಗಲುಸರುವ ಯತಿಗಳು ನೆರೆದು ಹರುಷದಿಪರಮಮಂಗಳಮೂರ್ತಿಕೃಷ್ಣನಹರುಷದಲಿ ಕೊಂಡಾಡಿ ಸುತ್ತಿಪರು 9ಕೊರಳಕೌಸ್ತುಭಮಾಲೆಯು ವೈಜಯಂತಿಯುಮುರುಡಿ ಸರಪಣಿ ಗೆಜ್ಜೆಯುಪರಿಪರಿ ರತ್ನಾಭರಣಗಳ್ಹೊಳೆಯುತಜರದ ಪೀತಾಂ¨Àರದಿಂದ ಶೋಭಿಪ ದಿವ್ಯ 10ಕನಕಕಸ್ತೂರಿ ತಿಲಕ ಫಣೆಯಲಿಮಿನುಗುತಿಹ ಸ್ತ್ರೀರೂಪಧರಿಸಿದಕನಕಪೀಠದಿ ಮೆರೆದ ಕಮಲ-ನಾಭವಿಠ್ಠಲನ ಸೇವಿಸುವ ಜನ11
--------------
ನಿಡಗುರುಕಿ ಜೀವೂಬಾಯಿ
ಉತ್ಥಾನ ದ್ವಾದಶಿಯ ದಿವಸ(ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ)ರಂಭೆ : ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ.ಮಾನಿನೀಮಣಿ ಈತನ್ಯಾರೆ ಕರುಣಾನಿಧಿಯಂತಿಹ ನೀರೆ ಹಾ ಹಾಭಾನುಸಹಸ್ರ ಸಮಾನಭಾಷಿತ ಮ-ಹಾನುಭಾವನು ಸುಪ್ರವೀಣನಾಗಿಹ ಕಾಣೆ 1ಭಯಭಕ್ತಿಯಿಂದಾಶ್ರಿತರು ಕಾಣಿ-ಕೆಯನಿತ್ತುನುತಿಸಿಪಾಡಿದರು ನಿರಾ-ಮಯ ನೀನೇ ಗತಿಯೆಂದೆಲ್ಲವರು ಹಾ ಹಾಭಯನಿವಾರಣ ಜಯ ಜಯವೆಂದು ನುತಿಸೆ ನಿ-ರ್ಭಯಹಸ್ತತೋರುತ ದಯಮಾಡಿ ಪೊರಟನೆ2ಭೂರಿವಿಪ್ರರ ವೇದ ಘೋಷದಿಂದಸ್ವಾರಿಗೆ ಪೊರಟ ವಿಲಾಸ ಕೌಸ್ತು-ಭಾರತ್ನ ಹಾರ ಸುಭಾಸ ಹಾ ಹಾಚಾರುಕಿರೀಟಕೇಯೂರಪದಕಮುಕ್ತಾಹಾರಾಲಂಕಾರ ಶೃಂಗಾರನಾಗಿರುವನು 3ಸೀಗುರಿ ಛತ್ರ ಚಾಮರದ ಸಮವಾಗಿ ನಿಂದಿರುವ ತೋರಣದ ರಾಜಭೋಗನಿಶಾನಿಯ ಬಿರುದ ಹಾ ಹಾಮಾಗಧಸೂತ ಮುಖ್ಯಾದಿ ಪಾಠಕರ ಸ-ರಾಗ ಕೈವಾರದಿ ಸಾಗಿ ಬರುವ ಕಾಣೆ 4ಮುಂದಣದಲಿ ಶೋಭಿಸುವ ಜನಸಂದಣಿಗಳ ಮಧ್ಯೆ ಮೆರೆವ ತಾರಾವೃಂದೇಂದುವಂತೆ ಕಾಣಿಸುವ ಹಾಹಾಕುಂದಣಖಚಿತವಾದಂದಣವೇರಿ ಸಾ-ನಂದದಿ ಬರುವನು ಮಂದಹಾಸವ ಬೀರಿ 5ತಾಳ ಮೃದಂಗದ ರವದಿಶ್ರುತಿವಾಲಗಭೇರಿರಭಸದಿ ಜನಜಾಲಕೂಡಿರುವ ಮೋಹರದಿ ಹಾಹಾಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ-ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6ಊರ್ವಶಿ: ಈತನೆ ಭಾಗ್ಯನಿಧಿ ನೋಡೆ ನೀ ಮುದದಿ ಪ.ಈತನೆ ಈರೇಳು ಲೋಕದದಾತನಾರಾಯಣ ಮಹಾ ಪುರು-ಹೂತ ಮುಖ್ಯಾಮರವಿನುತನಿ-ರ್ಭೀತ ನಿರ್ಗುಣ ಚೇತನಾತ್ಮಕ ಅ.ಪ.ಮೀನ ರೂಪವೆತ್ತಾಮಂದರಪೊತ್ತಭೂನಿತಂಬಿನಿಯ ಪ್ರೀತಮಾನವಮೃಗಾಧಿಪ ತ್ರಿವಿಕ್ರಮದಾನಶಾಲಿ ದಶಾನನಾರಿ ನ-ವೀನ ವೇಣುವಿನೋದ ದೃಢ ನಿ-ರ್ವಾಣ ಪ್ರವುಢ ದಯಾನಿಧಿ ಸಖಿ 1ವಾರಿಜಾಸವಾನವಂದಿತ ಶ್ರೀಪಾದಯುಗ್ಮವತೋರಿಕೊಂಬುವ ಸಂತತಕೇರಿಕೇರಿಯ ಮನೆಗಳಲಿ ದಿ-ವ್ಯಾರತಿಯ ಶೃಂಗಾರ ಭಕ್ತರ-ನಾರತದಿ ಉದ್ಧಾರಗೈಯಲುಸ್ವಾರಿ ಪೊರಟನು ಮಾರಜನಕನು 2ಮುಗುದೆ ನೀ ನೋಡಿದನು ಕಾಣಿಕೆಯ ಕ-ಪ್ಪಗಳ ಕೊಳ್ಳುವನು ತಾನುಬಗೆಬಗೆಯ ಕಟ್ಟೆಯೊಳು ಮಂಡಿಸಿಮಿಗಿಲು ಶರಣಾಗತರ ಮನಸಿನಬಗೆಯನೆಲ್ಲವ ಸಲ್ಲಿಸಿ ಕರುಣಾಳುಗಳ ದೇವನು ಕರುಣಿಸುವ ನೋಡೆ 3ರಂಭೆ : ದೃಢವಾಯಿತೆಲೆ ನಿನ್ನ ನುಡಿಯು ಸುರಗಡಣಓಲಗಕೆ ಇಮ್ಮಡಿಯು ಜನ-ರೊಡಗೂಡಿ ಬರುತಿಹ ನಡೆಯು ಹಾ ಹಾಮೃಡಸರೋಜ ಸುರಗಡಣ ವಂದಿತಕ್ಷೀರಕಡಲ ಶಯನ ಜಗದೊಡೆಯನಹುದು ಕಾಣೆ 1ಮದಗಜಗಮನೆ ನೀ ಪೇಳೆ ದೇವಸದನವ ಪೊರಡುವ ಮೊದಲೇ ಚಂದ-ನದಪಲ್ಲಂಕಿಯ ತಂದು ಮ್ಯಾಲೆ ಹಾ ಹಾಮುದದಿಂದ ಬಾಲಕರೊದಗಿ ಸಂತೋಷದಿಚದುರತನದಿ ಪೋಗುವನು ಪೇಳೆಲೆ ನೀರೆ 2ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವಶ್ರೀರಮಾಧವನ ಲೀಲೆಘೋರದೈತ್ಯಕುಠಾರ ಲಕ್ಷ್ಮೀನಾರಾಯಣನ ಬಲಕರ ಸರೋಜದಿಸೇರಿ ಕುಳಿತ ಗಂಭೀರ ದಿನಪನಭೂರಿತೇಜದಿ ಮೆರೆವುದದು ತಿಳಿ 1ದೊರೆಯು ಬರುವನು ಎಂದು ಎಲ್ಲರಿಗೆ ಗೋ-ಚರಿಸುವನೊಲಿದುಇಂದುತರ ತರದ ಆರತಿಗಳನು ನೀವ್ಧರಿಸಿ ನಿಂದಿರಿಯೆಂದು ಜನರಿಗೆ-ಚ್ಚರಿಗೆಗೋಸುಗ ಮನದ ಭಯವಪ-ಹರಿಸಿ ಬೇಗದಿ ಪೊರಟು ಬಂದುದುರಂಭೆ :ಸರಸಿಜನಯನೆ ನೀ ಪೇಳೆಸೂರ್ಯಕಿರಣದಂತಿಹುದೆಲೆ ಬಾಲೆ ಸುತ್ತಿಗೆರಕವಾಗಿಹುದು ಸುಶೀಲೆ ಆಹಾಹರಿಯ ವೈಕುಂಠ ನಗರದಂತೆ ಜ್ಯೋತಿ ವಿ-ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1ಊರ್ವಶಿ : ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧದ್ವಾದಶಿಯೊಳಗೆ ಬಾಲೆಮಾಧವನ ಪ್ರೀತ್ಯರ್ಥವಾಗಿ ಶು-ಭೋದಯದಿ ಸಾಲಾಗಿ ದೀಪಾರಾಧನೆಯ ಉತ್ಸಹದ ಮಹಿಮೆಯಸಾದರದಿ ನೀ ನೋಡೆ ಸುಮನದಿ 1ನಿಗಮಾಗಮದ ಘೋಷದಿ ಸಾನಂದ ಸು-ತ್ತುಗಳ ಬರುವ ಮೋದದಿಬಗೆ ಬಗೆಯ ನರ್ತನ ಸಂಗೀತಾದಿಗಳ ಲೋಲೋಪ್ತಿಯ ಮನೋಹರದುಗುಮಿಗೆಯ ಪಲ್ಲಂಕಿಯೊಳು ಕಿರು 2ನಗೆಯ ಸೂಸುತ ನಗಧರನು ಬಹಚಪಲಾಕ್ಷಿ ಕೇಳೆ ಈ ವಸಂತ ಮಂ-ಟಪದಿ ಮಂಡಿಸಿದ ಬೇಗಅಪರಿಮಿತ ಸಂಗೀತ ಗಾನ ಲೋ-ಲುಪನು ಭಕ್ತರ ಮೇಲೆ ಕರುಣದಿಕೃಪೆಯ ಬೀರಿ ನಿರುಪಮ ಮಂಗಲಉಪಯಿತನು ತಾನೆನಿಸಿ ಮೆರೆವನು 3ಪಂಕಜಮುಖಿನೀ ಕೇಳೆ ಇದೆಲ್ಲವುವೆಂಕಟೇಶ್ವರನ ಲೀಲೆಶಂಕರಾಪ್ತನು ಸಕಲ ಭಕ್ತಾತಂಕವನು ಪರಿಹರಿಸಿಕರಚಕ್ರಾಂಕಿತನು ವೃಂದಾವನದಿ ನಿಶ್ಯಂಕದಿಂ ಪೂಜೆಯಗೊಂಡನು 4ಕಂತುಜನಕನಾಮೇಲೆ ಸಾದರದಿ ಗೃ-ಹಾಂತರಗೈದ ಬಾಲೆಚಿಂತಿತಾರ್ಥವನೀವ ಲಕ್ಷ್ಮೀಕಾಂತ ನಾರಾಯಣನು ಭಕುತರತಿಂಥಿಣಿಗೆ ಪ್ರಸಾದವಿತ್ತೇ-ಕಾಂತ ಸೇವೆಗೆ ನಿಂತಮಾಧವ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಊದೊ ಕೊಳಲನು ಕೃಷ್ಣ ಊದೊ ಕೊಳಲನುವೇದ ವೇದ್ಯ ಊದು ಕೊಳಲ ನಾದ ತುಂಬೆ ನಭದಿ ಕೃಷ್ಣ ಪಮದನಜನಕ ಮೋಹನಾಂಗಚದುರೆಯರಿಗೊಲಿದು ವನದಿವಿಧ ವಿಧ ಕ್ರೀಡೆಗಳನಾಡಿಮುದವನಿತ್ತ ಮಧುಸೂದನನೆ 1ಗೋಪಿಕಾ ಸ್ತ್ರೀಯರ ವಾಕ್ಯಶ್ರೀಪತಿಯುಕೇಳಿಮುದದಿತಾಪಕಳೆದುಸುರರುತಲೆಯತೂಗೆ ಹರುಷದಿಂದಕೊಳಲನೂದಿದ ಚಲುವ ಕೊಳಲನೂದಿದ 2ನಾರಿಯರು ನಲಿದು ಬಂದುವಾರಿಧಿಯೊಳು ಸರಸವಾಡೆಮಾರಮಣನು ಸೀರೆಗಳನುಗಾರುಮಾಡಿ ಕದಿವರೇನೊತಾರೊ ವಸನವದುರುಳಕೃಷ್ಣ ತಾರೊ ವಸನವÀ3ಅಂಗನೆಯರೆ ನಿಮ್ಮ ವ್ರತಕೆಭಂಗವಾದ ಕಾರ್ಯವೆಸಗೆವಂದಿಸಿದರೆ ಕೊಡುವೆನೆಂದುರಂಗ ನಲಿದು ನುಡಿದ ಮುದದಿವಸನನೀಡಿದ ರಂಗವಸನನೀಡಿದ4ತರುಳರೆಲ್ಲ ಕೂಡಿಕೊಂಡುಕರುಗಳನ್ನೆ ಪಾಲಿಸುತಿರೆಮರೆಯ ಮಾಡಿ ಕರುಗಳನ್ನುದುರುಳತನವು ತರವೆ ಕೃಷ್ಣತಾರೊ ಕರುಗಳ ಕೃಷ್ಣ ತಾರೊ ಕರುಗಳ 5ಮಾತೆಯರನೆ ಅರಸುತಿರಲುಪ್ರೀತಿಯಿಂದ ಕರುಗಳನ್ನುಜೋಕೆಯಿಂದ ಪಿಡಿದು ತರಲುಯಾತಕೀಪರಿ ನಿಂದಿಸುವದುನೋಡಿ ಕರುಗಳ ನಿಂತಿರುವದು ನೋಡಿ ಕರುಗಳ 6ಗೊಲ್ಲತಿಯರ ಮನೆಯ ಪೊಕ್ಕುಮೆಲ್ಲುತಿರಲು ಬೆಣ್ಣೆ ಮೊಸರುನಲ್ಲೆಯರು ಪಿಡಿದು ಹರಿಯನಿಲ್ಲೊ ನಿಲ್ಲೊ ನಿಲ್ಲೊ ಕೃಷ್ಣಚೋರ ಕೃಷ್ಣನೆ ತೋರೊ ನಿಜವಜಾರಕೃಷ್ಣನೆ7ಚಿಕ್ಕ ಪ್ರಾಯದವರೆಕೇಳಿಸೊಕ್ಕಿನಿಂದ ನುಡಿವರೇನೆಬೆಕ್ಕು ತಿಂದ ತೆರವರಿಯದೆಧಿಃಕರಿಸುವುದುಚಿತವಲ್ಲನುಡಿವರೇನೆಲೆ ನಿಷ್ಠುರ ನುಡಿವರೇನೆಲೆ 8ಮಕ್ಕಳೆಲ್ಲ ಆಡುತಿರಲುಕಕ್ಕು ಬಿಕ್ಕು ಮಾಡಿಅವರದಿಕ್ಕು ದಿಕ್ಕುಗಳಿಗೆ ನಡೆಸಿಠಕ್ಕುತನವು ತರವೆ ಕೃಷ್ಣನಡತೆಯಲ್ಲವೊತುಡುಗಕೃಷ್ಣ ನಡತೆಯಲ್ಲವೊ9ಮಕ್ಕಳಾಡುತಿರಲು ಮಧ್ಯಸರ್ಪವೆರಡು ಕಾದಿ ಬರಲುದಿಕ್ಕು ತೋರದಂತೆ ಭಯದಿದಿಕ್ಕು ದಿಕ್ಕಿಗೆ ಓಡದಿಹರೆದುಡುಕು ನನ್ನದೆ ದೂರುವಿರೆನ್ನ ದುಡುಕು ನನ್ನದೆ 10ಹರಿಯ ಮಾತುಕೇಳಿಮುದದಿಹರುಷದಿಂದ ನಮಿಸಿ ಕೃಷ್ಣಗೆತ್ವರಿತದಿಂದಲಿ ಒಲಿಯೊ ಮುರಳೀ-ಧರನೆ ಹರುಷದಿಂದ ಕೃಷ್ಣನಮಿಸಿ ಬೇಡುವೆವೊ ಕೃಷ್ಣ ಸ್ಮರಿಸಿ ಪಾಡುವೆವೊ 11ಸರಸವಾಡÀುತಿಹಿರಿ ಎನ್ನಸ್ಮರಣೆಯಿಂದ ತನುವ ಮರೆತುಕ್ಷಮಿಪೆ ನಿಮ್ಮ ಗೃಹಕೆ ತೆರಳಿವನಜಮುಖಿಯರೆಲ್ಲರುತೆರಳಿರೆಂದನು ತರುಣಿಯರೆನ್ನ ಸ್ಮರಿಸಿರೆಂದನು 12ಕರುಣದಿಂದ ಸಲಹುತಿಹೆನುದುರಿತವೆಲ್ಲ ತರಿದು ಮುದದಿಕಮಲನಾಭ ವಿಠ್ಠಲನೆಂದುಕುಣಿದು ಪಾಡಿ ವನಿತೆಯರೆನಲಿದು ಪಾಡಿರೆ ನಾರಿಯರೆಲ್ಲ ಕುಣಿದು ಪಾಡಿರೆ 13
--------------
ನಿಡಗುರುಕಿ ಜೀವೂಬಾಯಿ
ಎರೆದು ಪೀತಾಂಬರÀವನುಡಿಸಿದಳಾಗವರಗೋಪಿಯು ಬೇಗಪಮುರುಳಿಯನೂದುತ ಪರಿಪರಿ ಗೆಳೆಯರುಪರಮಾತ್ಮನೆ ನಿನ್ನರಸುತಲಿಹರೆಂದು ಅಪಗುರುಳು ಕೂದಲು ಮುಖದಲ್ಲಿ ಹೊಸ ಬೆವರುಥಳಥಳಿಸುತಲಿಹುದುಎಳೆಯ ಶ್ರೀ ತುಳಸಿಯ ವನಮಾಲೆಗಳುಗಳದಲಿ ಶೋಭಿಪುದುಅರಳು ಮಲ್ಲಿಗೆ ಪುಷ್ಪದ ಹಾರಗಳುಮುತ್ತಿನ ಪದಕಗಳುಕೊರಳೊಳು ಮುತ್ತಿನ ಸರಗಳಿಂದೊಪ್ಪುತಮುರುಳಿಯ ನೂದುತ ಸರಸರ ಬಾರೆಂದು 1ಗುರುಳು ಕೂದಲೊಳೊಪ್ಪುವ ಅರಳೆಲೆಯುಸೊಗಸಿನ ನವಿಲ್ಗರಿಯುಬಿಗಿದು ಸುತ್ತಿದ ಸಿರದಲಿ ಕೇಶಗಳುಅತಿ ಶೋಭಿಸುತಿಹವುಚದುರಿದ ಕೇಶದಿ ಕೆಂದೂಳಿಗಳುಮಧುವೈರಿಯ ಕೇಳುವಿಧವಿಧ ರಾಗದಿ ಪಾಡುತ ನಿನ್ನನುಸದನದಿ ಪೂಜಿಸಿ ನೋಡುವೆ ಬಾರೆಂದು 2ನೊಸಲಲ್ಲಿ ಕುಡಿನಾಮವನಿಟ್ಟಿಹಳುನೋಡುತ ಹಿಗ್ಗುವಳುಎಸಳು ಕಣ್ಣಿಗೆ ಕಪ್ಪನೆ ತೀಡುವಳುಬಣ್ಣಿಸಿ ಕರೆಯುವಳುಎಸೆವೊ ಕರ್ಣಕೆ ನೀಲದ ಬಾವುಲಿಯೂರತ್ನದ ಚೌಕಳಿಯುಬಿಸುಜನಾಭ ನಿನ್ನ ಶಶಿಮುಖಿಯರುಗಳುರಸಕಸಿ ಮಾಳ್ಪರು ಹಸನಾಗಿ ಕೂಡೆಂದು 3ಅರಳುಕೆಂದಾವರೆ ಪೋಲುವಚರಣಸ್ಮರಿಸುವರಘಹರಣಸುರರುಕಿನ್ನರರೋಲೈಸುವಚರಣವರಸುಗುಣಾಭರಣಘಲುಘಲುಘಲುರೆಂದೊಪ್ಪುವಚರಣಸಜ್ಜನರಾಭರಣಅಡಿಯಿಡುತಲಿ ಬಾ ಮೃಡಸಖ ನಿನ್ನಯಅಡಿಗೆರಗುವರೈ ತಡೆಯದೆ ಬಾರೆಂದು 4ವರಹಸ್ತದಿ ಬೆಣ್ಣೆಯ ಮುದ್ದೆಯ ಕೊಡುವೆಬಾರೆನ್ನಯ ದೊರೆಯೆಜರದೊಲ್ಲಿಯ ಮುರಳಿಸಹಿತ ನಡುವಿಗೆ ಕಟ್ಟುವೆನುಬಾ ಭಕುತರ ಪೊರೆಯೆಉಗುರಿಂದ ಗಿರಿಯನು ಎತ್ತಿದ ಧಣಿಯೆಸುರಚಿಂತಾಮಣಿಯೆಹಗಲು ಇರಳು ನಿನ್ನಗಲಿರಲಾರೆ ಶ್ರೀ-ಕಮಲನಾಭವಿಠ್ಠಲ ಬೇಗಬಾರೆಂದು 5
--------------
ನಿಡಗುರುಕಿ ಜೀವೂಬಾಯಿ
ಎಲೊ ರಮಾಪತಿ ಹಕ್ಕಿಗಳು ಬಾಯಿ ಬಿಡುವಂತೆಬಳಲುವೆವೊ ಈಗ ನಾವೆಲ್ಲ | (ನಾವೆಲ್ಲ) ಈ ಬ್ರಹ್ಮಕುಲದ ಅಭಿಮಾನ ನಿನದಲ್ಲೆ ಪಗೌಡ ಪ್ರಬಲಾಗೆ ತಲೆಗೂಡೆನಿಸಿತೆನಗೆ ನೋಡ ಮನೆಕಡೆಗೆ ಮಡಿವಾಳ | (ಮಡಿವಾಳ) ಮರ ಹಾಳುಮಾಡುವರು ದ್ವಿಜರೆಂಬನು ಜೀಯ 1ಗಡಿಗೆಗಳು ಒಂದನ್ನ ಕೊಡನು ಗ್ರಹಣಗಳು ಹನ್ನೆ-ರಡೂ ಆದರನ್ನಾ ಕುಂಬಾರ | (ಕುಂಬಾರ)ನಿದ ಸ್ಮರಿಸಿಅಡವಿಯೊಳು ಕುಳಿತು ಆ(ಅ ?)ಳಬೇಕು 2ಭಕ್ರಿಯೆಂಬುದು ತುಪ್ಪ ಸಕ್ರಿ ಮಾಡಿದ ಬಡಿಗಅಕ್ರೂರ ವರದ ದಯಾಸಿಂಧು | (ದಯಾಸಿಂಧು) ಎಂದು ಈಅಕ್ರಮವ ನಿನಗೇ ಉಸಿರುವೆ3ಕಾಲರಕ್ಷೆಯ ಹೊಲಿಯ ಧಾಳಾಯ ಕೊಡುಯೆಂದುಗೋಳಾಡಿಸುವನು ಅತಿಶೂದ್ರ | (ಅತಿಶೂದ್ರ) ಈ ದುಃಖಕೇಳುವರೇ ಇಲ್ಲೋ ಪರಮಾತ್ಮ 4ಯರಿಬೀಳು ಅದಕೂ ಮತ್ತೇರಿಸುವನೋ ಎಲ್ಲೋ ಎಂ-ದಿರುಳೆಲ್ಲ ನಿದ್ರಿಲ್ಲೋ ಮೇಲ್ಪøತ್ತಿ | (ಮೇಲ್ಪøತ್ತಿ)ಯೆಂಬುವದುಗುರುತಿಲ್ಲಧೋಯ್ತೋ ಗುರುವರ್ಯ 5ಇದ್ದ ಜ್ಞಾತಿಗಳಿಂದೆ ಮುದ್ದ್ಯಾಗಬೇಕೆಂಬಶ್ರದ್ಧೆಯನೇ ಬಿಟ್ಟು ಅವನನ್ನೇ | (ಅವನನ್ನೇ) ಕೊಂಡಾಡಿಹೊದ್ದಿ ದಿನಗಳದೂ ಬದುಕುವರು6ಈ ರೀತಿ ನೋಡಲ್ಕೆ ಮೂರನೆ ಕಾಲವೇಂತೋರುವದೊ ಯಮಗೆ ಪ್ರಾಣೇಶ | (ಪ್ರಾಣೇಶ) ವಿಠಲ ಉ-ದ್ಧಾರ ಮಾಡುವದು ನೀ ಬಲ್ಲೆ7
--------------
ಪ್ರಾಣೇಶದಾಸರು
ಏಕಾರತಿಯನೆತ್ತುವ ಬನ್ನಿ ನಮ್ಮಲೋಕನಾಥನಸಿರಿಪಾದವ ಬೆಳಗುವಪ.ತುಪ್ಪದೊಳ್ಬೆರಸಿದ ಮೂರು ಬತ್ತಿಯನಿಟ್ಟುಒಪ್ಪುವ ದೀಪಕ್ಕೆ ದೀಪಹಚ್ಚಿ ||ತಪ್ಪದೆ ಸಕಲ ಪಾಪಂಗಳ ಹರಿಸುವಅಪ್ಪ ವಿಠಲನ ಪದಾಬ್ಜವ ಬೆಳಗುವ 1ಹರುಷದಿ ಏಕಾರತಿ ಬೆಳಗಿದ ಫಲನರಕದಿಂದುದ್ಧಾರ ಮಾಡುವುದು ||ಪರಮ ಭಕುತಿಯಿಂದ ಬೆಳಗುವ ನರರನುಹರಿತನ್ನ ಹೃದಯದಿ ಧರಿಸುವನಯ್ಯ2ಅನ್ಯ ಚಿಂತೆ ಮಾಡದೆ ಅನ್ಯರ ಭಜಿಸದೆ ಮತ್ತನ್ಯ ದೇವರನು ಸ್ಮರಿಸದೆ ಅ ||ನನ್ಯವಾಗಿ ಶ್ರೀ ಪುರಂದರವಿಠಲನಪುಣ್ಯನಾಮಗಳ ಧ್ಯಾನಿಸುತ 3
--------------
ಪುರಂದರದಾಸರು
ಏನ ಮಾಡಲಿ ಶ್ರೀಹರಿ- ಇಂಥ |ಮಾನವಜನ್ಮ ನಚ್ಚಿಸಬಹುದೆ? ಪಮಾತನಾಡದೆ ಮೌನದೊಳಿದ್ದರೆ-ಮೂಕ-|ನೀತನೆಂದು ಧಿಕ್ಕರಿಸುವರು ||ಚಾತುರ್ಯದಿಂದಲಿ ಮಾತುಗಳಾಡಲು |ಈತನು ಬಲು ಬಾಯ್ಬಡಿಕನೆಂಬುವರಯ್ಯ 1ಮಡಿ ನೇಮ ಜಪ-ತಪಂಗಳ ಮಾಡುತಿದ್ದರೆ |ಬಡಿವಾರದವನೆಂದಾಡುವರು ||ಮಡಿ ನೇಮ ಜಪ-ತಪಂಗಳ ಮಾಡದಿದ್ದರೆ |ನಡತೆ ಹೀನನೆಂದು ಬಲು ನಿಂದಿಸುವರಯ್ಯ 2ಗಟ್ಟಿಯಾಗಿ ಒಪ್ಪತ್ತಿನೂಟದೊಳಿದ್ದರೆ |ನಿಷ್ಟೆಯೇನು ಸುಟ್ಟಿತೆಂಬರು |ಗಟ್ಟಿಯಾಗಿ ಎರಡು ಮೂರು ಬಾರಿಯುಂಡರೆ |ಹೊಟ್ಟೆ ಬಾಕನೆಂದು ತೆಗಳಾಡುವರಯ್ಯ 3ಒಲಪಿನೊಳ್ಚೆನ್ನಿಗತನವನು ಮಾಡಲು |ಬಲು ಹೆಮ್ಮೆಗಾರನೆಂದಾಡುವರು ||ಸುಲಭತನದಿ ತಾ ನಿಗರ್ವಿಯಾಗಿದ್ದರೆ |ಕಲಿಯುಗದಲಿ ಮಂದಮತಿಯೆಂಬುವರಯ್ಯ 4ನರಜನ್ಮದೊಳಗಿನ್ನು ಮುಂದೆ ಪುಟ್ಟಿಸಬೇಡ |ಮೊರೆ ಹೊಕ್ಕೆ ಮತ್ಸ್ಯಾವತಾರ ನಿನ್ನ ||ಧರೆಯೊಳಗಿಹ ಪರಿಯಂತರ ಸಲಹೆನ್ನ |ಕರುಣವಾರಿಧಿ ಶ್ರೀಪುರಂದರವಿಠಲ5
--------------
ಪುರಂದರದಾಸರು
ಏನು ಧನ್ಯಳೊ ಗಿರಿಜೆ ಎಂಥ ಮಾನ್ಯಳೋ ಪಸ್ಥಾಣುವಮೂರ್ತಿಪಾದಸೇವೆತಾನೆನಿರತಮಾಡುತಿಹಳೊ ಅ.ಪಭೂತಗಣದ ಯೂಥವಿರಲುಸೂತಗಣನಾಥಾದ್ಯರಿರಲುಭೂತಪತಿಯಚರಣತೊಳೆದುತೀರ್ಥಕೊಡುತ ಬರುವಳ್ ಸಭೆಗೆ 1ನಾರದರು ದಿಕ್ಪಾಲರಿರಲುವಾರಿಜಾಸನ ವಿಷ್ಣುವಿರಲುಮಾರಹರನಿಗಾರತಿ ಎತ್ತಿತಾನೆ ಸಭೆಗೆ ತೋರಿಸುವಳು 2ವಸುಗಳ್ ಸಪ್ತ ಋಷಿಗಳಿರಲುಅಸುರ ಶಿಕ್ಷರು ನುತಿಸುತಿರಲುಪಶುಪತಿಯ ಲೇಪಿಸಿದ ಭಸ್ಮಗೋವಿಂದಾದ್ಯರಿಗೆ ಪ್ರಸಾದ ಕೊಡುವಳ್ 3
--------------
ಗೋವಿಂದದಾಸ
ಏನೊ ರಂಗ ನಿನ್ನ ವನಿತೆಯೊಳಪರಾಧಧ್ಯಾನಿಸಲು ದೊರಕೊಂಬುದೆನೀನಗಲಬೇಡ ತರಳೆಗಭಯವ ಕೊಟ್ಟುಮೌನದಲಿ ನಡೆಯೊ ಮನೆಗೆ ಬೇಗ ಪ.ಸ್ಮರನ ದಾಳಿಗೆ ಕಂದಿ ಕುಂದಿ ಬಳ್ಕಡಿಯಿಡುತವಿರಹಾಗ್ನಿಗನ್ನತೊರೆದು ಸ್ಮರಿಸುವಳುನಿರುತ ನಿನ್ನಯ ಗುಣಾವಳಿಗಳನುಕರಿಸೋತರಳೆಯ ಕೂಡೊ ಕೋಪ ಬೇಡೊ ನೋಡೊ 1ಪರಮಪುರುಷ ನೀ ಅವಳ ಜರಿದ ಕಾರಣಸೋಮಕಿರಣ ವಿಷಸಮ ಝಳದಪರಿತೋರಿ ಬಳಲುವಳು ಸಖಿಭೃಂಗ ಕಳಕಕೆತರಳೆ ಕೂಡೊ ಕೋಪ ಬೇಡೊ ನೋಡೊ 2ನಲ್ಲ ನಿನ್ನ ಸಂಗ ಬಯಕೆಗೆ ಕಣ್ಣ ತೇಲಿಸುವಳಲ್ಲೊ ತೊದಲ್ಲು ನುಡಿವಳಲ್ಲೊಮೆಲ್ಲನೆದೆ ನೋಡಿ ಸುಯಿಗರೆವಳು ಖಗಾಂಕಜನಬಿಲ್ಲಿಗೆಬಲಿಕೊಡಲಿ ಬಾರೊ ತೋರೊ3ಪಯನಿಧಿ ಒಡೆಯನ್ಯಾಕೆ ಬಾರನೆಂದವಳು ತನ್ನಯ ಸುದತಿಯರ ಬೈವಳುನಯನಧsರವಿರಸಿ ಕಂಬನಿದುಂಬುವಳು ಗಡಪ್ರಿಯಳರಸೆಜಾರವಿರಸಹರಿಸೊ4ನಿನ್ನ ನಂಬಿದಳಿಗಿಂತಾಗುತಿರೆ ಸುಮ್ಮನಿಹೆಎನ್ನ ಹೇಯ ಬಾರದೆನಲುಉನ್ನತ ಹಯವನೇರಿ ಬಂದವಳ ನೆರೆದ ಪ್ರಸನ್ನ ವೆಂಕಟನಾಯಕರಸಿಕ5
--------------
ಪ್ರಸನ್ನವೆಂಕಟದಾಸರು
ಏಳು ಶ್ರೀ ಗುರುರಾಯ ಬೆಳಗಾಯಿತಿಂದುಧೂಳಿ ದರುಶನ ಕೊಡಿರಿ ಈ ವೇಳೆ ಶಿಷ್ಯರಿಗೆ ಪ.ಏಳುಗುರುರಾಘವೇಂದ್ರ ಏಳು ದಯಾಗುಣಸಾಂದ್ರಏಳು ವೈಷ್ಣವ ಕುಮುದಚಂದ್ರ ಶ್ರೀ ರಾಘವೇಂದ್ರ ಅ.ಪ.ಅಶನವಸನಗಳಿಲ್ಲವೆಂಬವ್ಯಸನಗಳಿಲ್ಲಮುಸುಕ್ಹಾಕಿ ಮೋಸದಲೆ ಮೋಹಿಸಿದೆನೆಲ್ಲಅಸುರಾರಿಯ ಸ್ಮರಿಸದೆ ಪಶುವಿನೊಲು ಈ ದೇಹವಸುಮತಿಯೊಳು ಬಹಳ್ಹಸಗೆಟ್ಟಿತಲ್ಲ 1ನಾನು ನನ್ನದು ಎಂದು ಹೀನಮನಸಿಗೆ ತಂದುಏನು ಮಾಡುವಕರ್ಮನಾನೆ ಅಹುದೆಂದುಸ್ವಾಮಿ ಕರ್ತೃತ್ವವನು ತಿಳಿಯಲಿಲ್ಲ ನಾನೊಂದುನೀನೆ ಉದ್ಧರಿಸಯ್ಯ ದೀನ ದಯಾಸಿಂಧು 2ಅನ್ಯರ ಕೈಯಲ್ಲಿ ನಿನ್ನವರನಿರಿಸುವುದುಅನ್ಯಾಯವಾಯ್ತುಪಾವನ್ನಗುರುರಾಯಎನ್ನ ಮಾತಲ್ಲವಿದು ನಿನ್ನ ಮಾತೇ ಸರಿಮನ್ನಿಸಿ ಆಗು ಪ್ರಸನ್ನ ಗುರುರಾಯ 3ವೇದ ಶಾಸ್ತ್ತ್ರಗಳನ್ನು ಓದಿ ಪೇಳ್ದವನಲ್ಲಭೇದಾಭೇದವನು ತಿಳಿಯಲಿಲ್ಲಸಾಧು ಸಜ್ಜನರ ಸಹವಾಸ ಮೊದಲಿಲ್ಲಹಿಂದಾಗಿಮಾನಮಾರಿಸಿದಿ ಉಳಿಸಲಿಲ್ಲ4ಆಸೆಗೊಳಗಾದೆನೊ ಹೇಸಿ ಮನುಜನು ನಾನುಕ್ಲೇಶಭವಸಾಗರದೊಳೀಸುತಿಹೆನೊಏಸುಜನ್ಮದಿ ಎನ್ನಘಾಸಿಮಾಡಿದೆ ಮುನ್ನದಾಸನಾಗುವೆ ತೋರೊ ಪ್ರಸನ್ನವೆಂಕಟನ 5
--------------
ಪ್ರಸನ್ನವೆಂಕಟದಾಸರು