ಒಟ್ಟು 1912 ಕಡೆಗಳಲ್ಲಿ , 106 ದಾಸರು , 1402 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವೆ ನೀ ದೃಢವಾದರೆ ಮನಸಿಜನಯ್ಯನ ಚರಣ ಕಾಂಬೆನೊ ನಾನು ಪ ಹಂಬಲವನು ಮಾಡದಿದ್ದರೆ ಹರಿ ಎಂಬ ನಾಮಪೀಯೂಷ ದೊರಕುವುದು1 ಚಂಚಲವುಳ್ಳವುನಾಗದಿದ್ದರೆ ದುಷ್ಟ ಪಂಚೇಂದ್ರಿಯಗಳ ಸ್ಥಿರವಾಗಿ ನಿಲ್ಲಿಸುವೆ 2 ಅತ್ತಲಿತ್ತಲಿ ಪೋಗದಿರು ಎ ನ್ನತ್ತ ವಿಜಯವಿಠ್ಠಲ ಬರಲೀ 3
--------------
ವಿಜಯದಾಸ
ಮನವೆ ಮಾನ್ಯನ ಮನ್ನಿಸು ಶ್ರೀವ್ಯಾಸ ಮುನಿಗೆ ಒಲಿದಿಹ ವಾಯು ನಾ ಪ ಪ್ರತಿ ಸಂಚರ ಕಾಲದಿ ಅವಿಲೀನ ಮತಿಯುಳ್ಳ ದೇವನಿವನು ಸುತ ಜಯಾದೇವಿಗೀತ ತನ್ನ ಸರಿ ಚತುರಾಸ್ಯ ದೇಹದೊಳಿಹ 1 ಚತುರವಿಂಶತಿ ತತ್ವಕೆ ಅಭಿಮಾನಿ ಮತಿಯುಳ್ಳ ಸೂತ್ರನಾಮ ಹರಿರೂಪ ಮಿತಿ ಇಲ್ಲದಲೆ ಕಾಂಬನೊ 2 ಯತಿಯಾಗಿ ಬಂದು ಹರಿಯ ಕಾರ್ಯಗಳ ಕೃತಿಸಿ ತಾ ನಿಂದು ವ್ಯಾಸ ವ್ರತಿಯಿಂದ ಮಾಡಿಸಿದ ಈತಗೆ ಪತಿ ವಾಸುದೇವವಿಠಲ3
--------------
ವ್ಯಾಸತತ್ವಜ್ಞದಾಸರು
ಮನವೇ ಬರಿದೇ ಚಿಂತಿಸಲಿ ಬ್ಯಾಡಾ | ಹರಿಚರಣ ಸ್ಮರಿಸಿ ಸುಖಿಯಾಗು ಕಂಡ್ಯಾ ಪ ಕರ್ಮ ಜನಿತ ಲಾಭಾ ಲಾಭ | ವಿಧಿ ವರೆದ ಪರಿಯಾ | ತನ್ನಿಂದ ತಾನೇ ಬಹದೆಂದು ಖರಿಯಾ | ಇನ್ನು ತಾ ಬಯಸಿದರೆ ಬಾರದರಿಯಾ | ನಿನ್ನೊಳು ನೀ ತಿಳಿದು ನಂಬು ಹರಿಯಾ 1 ಬಸಿರೊಳಗ ಬೆಳೆಸಿ ಶಿಶುತನದಿಂದ ಯೌವನದ | ದೆಸೆಗೊಟ್ಟು ಸಲುಹಿದ ನಲ್ಲವೇನೋ | ಬಿಸಜಾಕ್ಷ ಅಸಮರ್ಥನಾದನೇನೋ | ಕುಶಲ ನಾನೆಂದ-ಹಂಕರಿಸಿದೇನೋ 2 ಬೊಂಬಿಯಾನು ಆಡಿಸುವ ಸೂತ್ರಧಾರಕನಂತೆ | ಇಂಬಾಗಿ ಕುಣಿಸುವನು ಪ್ರಾಣಿಗಳನು | ಡಿಂಬಿನೊಳು ನಿಂತು ತಾ ಚೇತಿಸುವನು | ಕುಂಭಿನಲಿ ಸ್ವತಂತ್ರನಲ್ಲ ನೀನು | ಅಂಬುಜನಾಭನ ಲೀಲೆಯೆಂದು ಕಾಣು 3 ಬದಿಲಿದ್ದ ಪಾತ್ರೆಯನು ಬಾವಿಯೊಳಗದ್ದಿದ್ದರೆ | ಉದಕ ತುಸು ಬಹದೆಂದು ನುಡಿದು ಸೊಲ್ಲಾ | ನದಿಯೊಳೆದ್ದಲು ನೀರು ಹೆಚ್ಚದಲ್ಲಾ | ಇದನರಿಯದೆವೆ ಭ್ರಾಂತಿಯೊಳಗ ಖುಳ್ಳಾ | ಕುದಿದು ಸಂಸಾರದಲಿ ಸೊರಗಿದನೆಲ್ಲಾ 4 ಗುರು ಮಹಿಪತಿಸ್ವಾಮಿ ಬೋಧಾಮೃತವ ಸವಿದು | ಹರಿಚರಣದಲಿ ಭಾರವಪ್ಪಿಸಿಟ್ಟು | ದೊರಕಿದದರಿಂದ ಸಂತುಷ್ಟಬಟ್ಟು | ಸ್ಥಿರಚಿತ್ತನಾಗಿ ಕಳವಳಿಕೆ ಬಿಟ್ಟು | ತರುಣೋಪಾಯದ ತಿಳಿಯೋ ಜ್ಞಾನಗುಟ್ಟು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನವೇ ಮೈ ಮರೆಯಲಿ ಬ್ಯಾಡಾ | ನಿನ್ನೊಳು ಘನದೆಚ್ಚರ ಬಲಿ ದೃಢಾ ಪ ಸ್ವಾಪದ ಕನ್ನಡಿ ಮನಿಯಾ ಹೊಕ್ಕು ಬಳಲಿದ ಪರಿಯಾ | ಸಿಂಹನು ಕೂಪದಿ ನೆರಳಿಗೆ ಬೀಳಲಿ ಕಾಜಿನ | ಸೋಪಾನವ ನೋಡಿ ಗಜವಿನ್ನಾಪದ ಬಿಟ್ಟದ ಕೇಳಲೀ 1 ಶುಕನಲಿಕದಲಿ ಬಂದು ಬಿದ್ದಿತು ತಾನಿಂದು | ವಾನ್ನರ ಪರಿ | ಪ್ರಕಟದಿ ವಿಷಯಕ ಮೋಹಿಸಿ 2 ತಂದೆ ಮಹಿಪತಿ ಚರಣ ನಮಿಸಿ | ಪಡಿಯಲೋ ಕರುಣಾ | ಇಂದಿರೆಯರಸನಾ ನಾಮವ ಪಾಡುತ | ಅರುಹಿನ | ಮಂದಿರವನು ಸಾರೀ ಜನುಮಕ | ಬಂದ ಸಾರ್ಥಕ ಮಾಡುತಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನ್ಮಥಪಿತ ವಿಠಲ ನೀನಿವಳ ಸಲಹೊ ಹರಿಯೇಮನ್ಮನೋರಥ ಭಿನ್ನಪವ ಸಲಿಸೋ ಪ ಜನ್ಮಜನ್ಮಾಂತರದ ಪುಣ್ಯ ಸಂಚಯ ಫಲಿಸಿನಿನ್ನ ದಾಸತ್ವದಲಿ ಕಾಂಕ್ಷೆ ಬಹುಯಿರಿಸೆನನ್ನೆಯಿಂದಲಿ ಪೂಜೆ ಪರಿಕರಂಗಳ ಕೊಂಡುಸ್ವಪ್ನ ಸೂಚಕದಂತೆ ನಿನ್ನರ್ಚನೆಯ ಕಾತುರಳ 1 ತರತಮದಿ ಸುಜ್ಞಾನ ಹರಿಗುರೂ ಸದ್ಭಕ್ತಿಪರಮ ವೈರಾಗ್ಯವನು ವಿಷಯಾದಿಗಳಲೀಪರತತ್ವ ಹರಿಯೆಂಬ ವರಮತಿಯ ನೀನಿತ್ತುಗುರುಮಧ್ವ ಮತದಲ್ಲಿ ಪರಮದೀಕ್ಷೆಯನೀಯೋ 2 ಪತಿ ಸುತರು ಹಿತರಲ್ಲಿ | ಗತಿದಾತ ಗುರುವಿನೊಳುಕ್ಷಿತಿರಮಣ ತವವ್ಯಾಪ್ತಿ ಮತಿಯ ಪಾಲಿಸುತಗತಿ ದೋರೊ ಸನ್ಮುಕುತಿ ಪಥವನೀ ಸಲಿಸುತ್ತಹುತವಹಕ್ಷಾಂತರ್ಗತ ಮನದಿ ನೆಲಸುತಲೀ 3 ಸಂಜೀವ ಪಿತನೇ |ನಂಜು ಸಂಸ್ಕøತಿ ಬಂಧ ಮೋಚಕೇಚ್ಛೆಯ ಮಾಡಿಅಂಜಿಕೆಯನೆ ಕಳೆಯೊ | ಕಂಜಾಕ್ಷ ಹರಿಯೇ 4 ಪಾವಮಾನಿಯ ಪ್ರೀಯ ಭಾವುಕಳ ಹೃದ್ಗತನೆನೀವೊಲಿದು ತವಸ್ಮರಣೆ ಸರ್ವದಾ ಸರ್ವತ್ರಈವುದಿವಳಿಗೆ ಎನ್ನ ಬಿನ್ನಪವ ಸಲ್ಲಿಪುದುಗೋವಿದಾಂಪತಿಯೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮರೆತಿರಲಾರೆ ಪ್ರಿಯನ ಮಾರನಯ್ಯನ ಪ ಇರುಳು ಹಗಲು ಅನುಸರಿಸಿ ತಿರುಗುತಲಿ ಸುರತ ವಾರ್ತೆಗಳನಾಡಿಸುತ ನಲಿಸುತಿಹನ ಅ.ಪ ಎನಗೆ ಬೇಕಾದುದ ತನಗೆ ತಾ ಕೊಡುತಲಿ ಮನಕೆ ಹರುಷವ ಕೊಡುವನ ತ್ರಿಲೋಕ ಸುಂದರನ 1 ಎನ್ನ ನೋಡುತಲಿ ಹಿಗ್ಗುತಲಿರುವನ ಕಣ್ಣಲಿ ಕಾಣದ ಘಳಿಗೆ ಯುಗವಾಗಿರುವುದೆಲೆ 2 ಪ್ರೇಮದಿ ಬಿಗಿದಪ್ಪುತ ಮುದ್ದಿಸಿ ಲಾಲಿಪನ 3 ಚದುರನ ಸರಸವು ವಿಧ ವಿಧ ಲೀಲೆಗಳ 4 ಜನುಮ ಜನುಮಕು ಇವನೆ ಪ್ರಿಯನಾಗಿರ- ಅನುದಿನ 5 ಅವನಿಲ್ಲದ ಸೌಖ್ಯವು ನರಕಕ್ಕೆ ಸಮ ಸವಿಯಾಗದು ಅಮೃತವು ವಿಷವಾಗುವುದೆಲೆ ಮನಕೆ 6 ಬೆರೆವ ಸುಖಕೆ ಇನ್ನು ಸರಿಯಾವುದೆ ಜಗದೊಳು 7
--------------
ಗುರುರಾಮವಿಠಲ
ಮರೆಯದ ಭಾವಗೋಚರವಾುತಯ್ಯಾಕರುಣಿ ವೆಂಕಟದಾಸವರ್ಯ ಸದ್ಗುರುವೆ ಪಸನ್ನಿಕರ್ಷವನಾದರಣ ಹೇತು ಮಾನವರಿಗೆನ್ನುತಾನಂದ ರಸರುಚಿ ದೋರಿಸಿನಿನ್ನನೆ ತೊಳಲಿ ಬಳಲುತ ನಿನ್ನೊಳೆರಗುವಂತುನ್ನತರ ಮಾಡಲಂತರ್ಧಾನವಡೆವೆ 1ಗೋಪಿನಾರಿಯರಿಗಾನಂದ ರೂಪವ ತೋರಿತಾಪಬಡುವಂತಗಲಿ ುದ್ಧವರ ಮುಖದಿಸೋಪಾಯವಚನದಿಂ ತಿಳು'ದರ್ಥವ ನೆನೆಯಲೀ ಪರಿಯ ತೋರಿತೆನಗೆಲೆ ದಯಾನಿಧಿಯೆ 2ನೆರೆಧನ್ಯರಾದೆವಾ'ಲ್ಲ ಸಂದೇಹ ಗುರುವರ ವಾಸುದೇವಾರ್ಯ ಚಿಕನಾಗಪುರದೀಪರತತ್ವವರುಪಿ ವೆಂಕಟದಾಸ ವೇಷದಿಂಮರಳಿ ನಿಜದೊಳು ನಿಂದೆ ಕರುಣಾಸಮುದ್ರಾ 3
--------------
ತಿಮ್ಮಪ್ಪದಾಸರು
ಮರೆಯದಿರು ಪದಾಂಬುಜ ಮರೆಯದೋಳು ಪದವಾ ಪ ಧಾರುಣಿಯನೆ ಅಳೆದೀರಡಿ ಮಾಡಿದ ಘನಪದವಾ ಮುಕಾರಿಯು ತಳ್ತ ವಾರಿಯ ಪಡದನುಪಮ ಪದವಾ 1 ಕಾಲಿಡುತಲೆ ಕಲ್ಲನು ಬಾಲೆ ಮಾಡಿದ ಪದವಾ ಕಾಳುರಗನ ಪೆಡೆಯಲಿ ಲೀಲೆಯಾಡಿದತುಳ ಪದವಾ 2 ವರಶರಣರ ನಾಲಿಗೆ ನಿರುತದಿ ನುತಿಸುವ ಪದವಾ ಉರೆ ದುರಿತವದುರಿಪ ನರಸಿಂಹವಿಠ್ಠಲನ ಪದವಾ 3
--------------
ನರಸಿಂಹವಿಠಲರು
ಮರೆಯದಿರು ಮಹಾಮಾಯೆ ಮಾರುತನ ತಾಯೆ ಕರುಣಿಕರಕಮಲವನು ಶಿರದೊಳಿರಿಸುತ ಕಾಯೆ ಪ. ಪುಷ್ಟಿಕರಿ ನೀ ಪೂರ್ಣ ದೃಷ್ಟಿಯಿಡಲೀಗಖಿಳ ಕಷ್ಟ ಪರಿಹಾರಗೈವುತಿಷ್ಟಾಪೂರ್ತಿಗಳು ಸ್ಪಷ್ಟವಾಗುವವು ಸಕಲೇಷ್ಟದಾಯಕ ನಮ್ಮ ವಿಠ್ಠಲನ ಸೇವೆಗುತ್ಕøಷ್ಟ ಸನ್ನಹವಹದು 1 ಲೋಕನಾಯಕಿಯೆ ಕರುಣಾಕಟಾಕ್ಷವನಿರಿಸು ಭೀಕರಿಸುತಿಹ ಮನದ ವ್ಯಾಕುಲವ ಹರಿಸು ಪಾಕ ಶಾಸನ ಪೂಜೈ ಪದಕಂಜ ಭಕ್ತಜನ ಶೋಕಸಾಗರ ಶೋಷಣೈಕ ನಿಧಿ ಹರಿಸಹಿತ 2 ಹಿಂದೆ ಬಹು ಥರದಿ ನಾನೊಂದ ಪರಿಯನು ಮನಕೆ ತಂದು ದಯದೋರಿ ನೀ ಬಂದಿರುವಿ ಮನೆಗೆ ಮುಂದೆನ್ನ ಬಿಡದೆ ಗೋವಿಂದ ವೆಂಕಟಪತಿಯ ಹೊಂದಿರುವನಲಿ ಮಮತೆಯಿಂದಿಲ್ಲಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ಮರೆಯದಿರುವರೋ ನಿನ್ನ ಸ್ಮರಣೆಯಾ ನೀನು ಪ ಗರಿಯಾ ಚರಿಯಾ ಮರಿಯಾ ನೆರಿಯಾ | ಸೇರಿ ಕ್ರೂರ ಮಾರಿದಾರಿ ಜಾರಿ ದೂರಸಾರದೇ ಅ.ಪ ಕಡಲಶಯನೆಚ್ಚರಾ ಕಳೆದು ಹೊರಿಯಲುದರಾ | ಬಿಡದೋಲೈಸಿ ಘನಮದರಾ | ಕಡಿಯಾ ಕಿಡಿಯಾ ನುಡಿಯಾ ಪಡಿಯಾ | ಬೇಡಿ ಕಾಡಿ ಓಡಿ ಆಡ ಬ್ಯಾಡ ಗಾಢ ಮೂಢನೇ 1 ತರಳ ಪ್ರಾಯ ಮುಪ್ಪಿಂದೆ ತೀರಲಾಯುಷ್ಯ ಬರುದೇ | ಯರಗುವಾಯಮ ತಾ ನಿಲದೇ | ತ್ವರಿಯಾ ಧರಿಯಾ ಕುರಯಾ ಮರಿಯಾ | ವೈರಿ ಮೀರಿ ಹಾರಿ ತೂರಿ ಹೊರುವಂದದಿ 2 ಮಿನಗು ಬೆಳಗ ಘನ ಮಹಿಪತಿ ಸುತ ಪ್ರಿಯನಾ | ಅನುಭದಿಸದಿಹುದೇನಾ | ಅನುವೇ ಮನವೇ ಗುಣವೇ ದನವೇ | ಜ್ಞಾನ ಹೀನ ಮಾನ ದೀನ ಆನನದಲೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಲ್ಲಮರ್ಧನ ರಾಣಿ - ಮಹ ಲಕ್ಷುಮೀ ಪ ಖುಲ್ಲ ಜನರೆದೆದಲ್ಲಣೆಯೆ | ಕೊಲ್ಲಾಪುರ ನಿಲಯೆ ಅ.ಪ. ಪ್ರಕೃತಿ ಚೇತಾತ್ಮೆ ಜಡ | ಪ್ರಕೃತಿ ದ್ರವ್ಯದ ಕಾರ್ಯವಿಕೃತಿ ಗೊಳಿಸುತ ಮೊದಲು | ವೈಕೃತವು ತದನಂತರಾ |ವ್ಯಕುತಿ ಗೈಯುತ ಲಿಂಗ | ಪ್ರಕೃತಿ ಕಾರ್ಯವ ಮಾಡಿಸುಕೃತ ತ್ರಿವಿಧರ ಸಹಜ | ಪ್ರಕೃತಿ ಶಬ್ದನಿಗೀವೇ 1 ಪರಿಭವ ಕಾರ್ಯನೀ ಮಾಳ್ಪೆ ಪ್ರಜ್ಞಾಂತ | ಪ್ರೇಮ ರೂಪದಲೀಈ ಮಹತ್ತುಪಕಾರ | ಸಾಮಸನ್ನುತ ಹರಿಯನೇಮದಿಂದಲಿ ಗೈವ | ಭಾಮೆಗಾ ನಮಿಪೇ 2 ಹರಿಕಾರ್ಯ ಸತ್ಸಾಧ್ಯೆ | ವಿರಜೆ ರೂಪದಿ ಹರಿಯೆ ||ವರ ಮಂದಿರಾವರಣ | ನೆರೆ ವಿರಚಿಸೀ |ಸರುವ ಸಜ್ಜೀವ ತವ | ಸರಿತದೋಲ್ ಅವಭೃತವವಿರಚಿಸಲು ಜಡ ಪ್ರಕೃತಿ | ಹರಿಸುವೆಯೆ ದಯದೀ 3 ಶ್ರೀ ಸಿತ ದ್ವೀಪಾದಿ | ಆ ಸುರೂಪವ ತಾಳಿವಾಸುದೇವನ ಸೇವೆ | ಆಶೆಯಲಿ ಗೈವೇ |ಈಸು ತವ ಮಹಿಮೆಯನು | ತೋಷದಲಿ ಸ್ತುತಿಪರಭಿಲಾಷೆ ಸಲಿಸುತ ತೋರ್ಪೆ | ವಾಸುದೇವನ ರೂಪ 4 ಸತಿ ಪತಿ ತೋರೇ 5
--------------
ಗುರುಗೋವಿಂದವಿಠಲರು
ಮಹದೇವ ಮದ್ರೋಗ ಮೂಲವಳಿಯೊ ಪ ಮಹದಾದಿಗಳ ದೈವ ಹರಿಯಲ್ಲಿ ರತಿ ನಿಲಿಸಿ ಅ.ಪ. ಸರ್ವಸಿದ್ಧನೆ ವಿಷಯ ಪರ್ವತಕೆ ಮಹಕುಲಿಶ ಕಮಲ ಭೃಂಗ ಮರ್ವೆಂಬ ಮಾರಿಯನು ಅವಳ ನೇತ್ರದಿ ಸುಟ್ಟು ಸರ್ವಾತ್ಮ ಹರಿಧ್ಯಾನಮಗ್ನ ಮನ ನೀಡೆನಗೆ 1 ತಾಳಲಾರೆನೊ ಸ್ವಾಮಿ ಕಾಳ ವಿಷಯದ ದೋಷ ಫಾಲಾಕ್ಷ ಬಿಡಿಸೈಯ್ಯ ಭೋಗದಾಸೆ ಶೀಲ ಮನದಲಿ ಹರಿಯ ಲೀಲೆ ಲಾವಣ್ಯಗಳ ಮೇಲಾಗಿ ನೋಡುವ ಮಹಕರುಣ ಮಾಡೆನ್ನ 2 ಭಾರತೀಶನ ಪಾದಕಮಲ ಮಧುಪನೆ ನಿನ್ನ ಕಾರುಣ್ಯವಾದವನೆ ಶೌರಿವಶನೊ ಮಾರಾರಿ ಮದ್ಭಾರ ವಹಿಸಿ ಪಾಲಿಸು ಎನ್ನ ಧೀರ ತವ ಚರಣಾಬ್ಜ ವಾರಿಜಕೆ ಮೊರೆ ಹೊಕ್ಕೆ 3 ಎನ್ನ ಹೀನತೆ ನೋಡಿ ಘನ್ನ ಭಯಗೊಂಡಿಹೆನೊ ಧನ್ಯರ ಮಾಳ್ಪ ದಯ ನಿನ್ನದಯ್ಯಾ ಪುಣ್ಯತಮ ಮೂರುತಿಯ ಪ್ರತಿಬಿಂಬ ಹರಿಸಖನೆ ಧನ್ಯನಾ ಮಾಡೆನ್ನ ವಿಷಯ ಜಯ ದಯಮಾಡಿ 4 ಅಮಿತ ಮಂಗಳದಾಯಿ ವಿಭವ ವಾಮದೇವ ಮಮತಾದಿ ಅಭಿಮಾನ ದೋಷವರ್ಜಿತ ಮಹಾ ಸಾಮ್ರಾಜ್ಯ ಯೋಗಕ್ಕೆ ಅಧಿನಾಥ ಕರುಣಿಪÀುವುದು 5 ಶಂಭು ಶಂಕರ ತವ ಪದಾಂಬುಜದಿ ಶಿರವಿಟ್ಟು ಹಂಬಲಿಪೆನಿಷ್ಟಪದ ಪಾಲಿಸೆಂದು ತುಂಬಿತ್ವಕ್ಕರಸನ ಹೃದಂಬುಜದೊಳರಳಿಸಿ ಮೂರ್ತಿ ದರುಶನ ನೀಡೊ 6
--------------
ಜಯೇಶವಿಠಲ
ಮಹಾಲಕ್ಷ್ಮಿದೇವಿ ಪ ಆಹಾ ನಿನ್ನ ಮಹಿಮೆ ಹೊಗಳಲಳವೆ ಅ.ಪ ಮೂಲ ಪ್ರಕೃತಿ ಮಹಾಮಾಯೆ ನಿನ್ನ ಲೀಲೆಯಲ್ಲವೆ ಸಮಸ್ತವೂ ಸಾಲದೆಂಬುವ ದುಸ್ವಭಾವ ಬಿಡಿಸಮ್ಮ 1 ಕ್ಷೀರಸಾಗರಾತ್ಮಜೇ ಭಜೇ ಅಂ ಭೋರುಹಾಕ್ಷನರ್ಧಾಂಗಿ ಸಾರಸ ವೈರಿಯ ತಂಗಿ ಶುಭಾಂಗಿ 2 ತುತ್ತುಮಾಡಿವುಣಿಸಮ್ಮ ಮತ್ತಾರನು ಕಾಣೆಮ್ಮ ನಮ್ಮಮ್ಮ 3 ತಾನೆ ಶ್ರೇಷ್ಟನೆಂಬ ಹೀನರ ಸಂಗವು ಜ್ಞಾನಿಗಳಿಗೆಯಿದು ಹಾಸ್ಯವಲ್ಲದೆ 4 ನಿನ್ನ ಪತಿಯಾದ ಗುರುರಾಮ ವಿಠಲನ ಘನ್ನ ಚಿತ್ತಗನುಸಾರ ಮನ್ನಿಸಿ ಕಾಯಿ ನೀ ನೆನ್ನನು ನಿಜದೆÉ ಮಹಾಲಕ್ಷ್ಮಿದೇವಿ 5
--------------
ಗುರುರಾಮವಿಠಲ
ಮಹಿಮೆಯನಾರು ಬಲ್ಲರುನಹಿಪ್ರತಿಯೆಂದು ನಿನ್ನ ಪಾಡುವರಲ್ಲದೆ ರಂಗ ನಿನ್ನ ಪ. ವಾಮನನಾಗಿ ಬಂದು ಬಲೀಂದ್ರನಿಗೆ ಸಂದಸೀಮೆಯನೆಲ್ಲವ ಸಲೆವಿಟ್ಟ ತ್ರಿವಿಕ್ರಮ ನಿನ್ನಸಾಮಥ್ರ್ಯವ ಶ್ರುತಿಗಳು ಪೇಳೆ ಉಗುರ್ಗೊನೆಆ ಮಹಾ ಬೊಮ್ಮಾಂಡವ ಸೀಳೆ ದೇವೇಂದ್ರನುಸಾಮ್ರಾಜ್ಯದಿ ಸುಖದಿಂ ಬಾಳೆ ಕೃಷ್ಣ ನಿನ್ನ1 ಇಂದ್ರ ಕೋಪಿಸಿ ಮಳೆಗರೆಯಲು ನಿನ್ನತಂದೆ ತಾಯಿ ಬಂಧು ಬಳಗಂಗಳೆಲ್ಲ ಕಂಗೆಡಲುಅಂದು ಬಲುಗಿರಿಯನೆತ್ತಿ ಗೋ ಗೋಪಾಲರವೃಂದದ ಭಯವ ನುಗ್ಗೊತ್ತಿ ಪಾಲಿಸಿದೆಚೆಂದದಿ ನಿನ್ನಯ ಸಂಪತ್ತಿ ಕೃಷ್ಣ ನಿನ್ನ2 ಇಂದು ಮಧ್ವಮುನೀಂದ್ರಗೊಲಿದು ಕಡುಕೃಪೆಯಿಂದತÀಂದೆ ಹಯವದನ ಮುಕುಂದ ಉಡುಪಿನೊಳಗೆನಿಂದು ಸದಾ ಪೂಜಿಸಿಕೊಂಡೆ ನಿನ್ನ ಮುಂದೆನಂದಾದೀಪಗಳನು ಕಂಡೆ ಭಕ್ಷ್ಯಭೋಜ್ಯಕಂದಮೂಲ ಫಲಂಗಳುಂಡೆ ಕೃಷ್ಣ ನಿನ್ನ 3
--------------
ವಾದಿರಾಜ
ಮಹಿಷಿ ಎನಿಸಿಹಳೇ ಪ ವಸುದೇವ ಭಗಿನಿ ಕೈಕೆಯೀ ಉದರದಲಿಅಸುವ ನೀಧರಿಸುತ್ತ ಅವತರಿಸುತಾ |ವಸುಧೆಯೊಳು ಸುಗುಣ ಗಣಯುತೆಯು ನೀನಾಗಿಪೆಸರಾಂತೆ `ಭದ್ರೆ` ಎಂದೆನುತ ಅವನಿಯಲೀ 1 ಪಿತನು ನಳನೆಂಬನಿಗೆ ಪ್ರೀತಿಯಲಿ ನೀ ಪೇಳ್ದೆಹಿತವು ಶ್ರೀ ಹರಿಗೆಂದು ನುತಿಸುವ ಸುಕರ್ಮ |ಅತಿಶಯದೆ ಪೂಜೆಯಿಂದಧಿಕದಲಿ ಶ್ರೀ ಹರಿಯುನುತಿಗೆ ಪ್ರೀತಿಸುವನೆಂದೊರೆದೆ ಭಕುತಿಯಲೀ2 ಹರಿನಾಮ ಸ್ಮರಿಸುತ್ತ ಹರಿ ಚರಣ ನಮಿಸುವರದುರಿತರಾಶಿಗಳಿರದೆ ಪರಿಹಾರವೆನುತಾ |ಒರೆಯುತೀಪರಿ ನಮನ ಭಕ್ತಿಗೇ ಪ್ರಾಶಸ್ತ್ಯಪರಿಪರಿಯ ಪೇಳಿಹಳೆ ನಮಿಪೆ ನಿನ್ನಡಿಗೇ3 ಈ ಪರಿಯ ತಪಗೈದು ದ್ವಾಪರದ ಯುಗದಲ್ಲಿಶ್ರೀ ಪತಿಯ ದರ್ಶನದಿ ತಾಪತ್ರಯ ಕಳೆದೂ |ಆ ಪರಮ ಪುರುಷನ್ನ ಕೈ ಪಿಡಿದ ಮಹ ಭದ್ರೆಕಾಪುರುಷನಾದೆನ್ನ ಪಾಪ ಪರಿಹರಿಸೇ 4 ಭದ್ರಾಣಿ ಪತಿಗಿನ್ನು ಕಾದ್ರವೇಯನು ಮತ್ತೆಆದ್ರಿ ಮಂದಿರ ತಂದ ಅವಿಕಾರಿ ವಿಪಗೇ |ಸಿದ್ಧೈದು ಗುಣದಿಂದ ಹೀನಳೆಂದೆನಿಸುತ್ತಭದ್ರ ಗುರು ಗೋವಿಂದ ವಿಠಲ ಪ್ರಿಯೆ ಪಾಹೀ 5
--------------
ಗುರುಗೋವಿಂದವಿಠಲರು