ಒಟ್ಟು 4616 ಕಡೆಗಳಲ್ಲಿ , 111 ದಾಸರು , 2637 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತುಳಸಿ ನಿನ್ನ ಭಜಿಸುವೆ | ಬಳಸಿ ಬಳಸಿ ನಮಿಸುವೆ ಪ ಕೊಳಲಬಾಲನರಸಿಯೇ | ನಳಿನವಿಸರಗಂಧಿಯೇ ಅ.ಪ ಗಾನಕೊಲಿದು ನಲಿವಳೇ | ಜ್ಞಾನವಿತ್ತು ಕಾವಳೆ ನಿನ್ನಕರುಣೆ ಕೃಷ್ಣನೊಲವು | ನಿನ್ನಸ್ಮರಣೆ ಪಾಪಹರವು 1 ಮಂಗಳಾಂಗಿ ತುಳಸಿದೇವಿ ರಂಗಗಿರಿಯ ನೀವದೇವಿ ಮಾಂಗಿರೀಶ ದಯಿತೆ ಮಹಿತೆ ಇಂಗಿತಾರ್ಥವೀವ ಮಾತೆ 2 ಬೃಂದಾವನ ದಿವ್ಯಸದನೆ ಇಂದೀವರ ಭವ್ಯವದನೆ ಕುಂದಾವಳಿ ಸದೃಶರದನೆ ನಂದಾತ್ಮಜ ಮನಮೋಹನೆ 3 ಸರಸವಿರಸಭರಿತೆ ನಮಿತೆ ಪರಮಚತುರೆ ಸುರಸನ್ನುತೆ ಮುರಳಿಗಾನಲಸಿತೆ ಮಾತೆ ವಂದೆ ಮಾಂಗಿರೀಶಸಹಿತೆ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತುಳಸಿ ಮಧ್ಯದಿ ಇರುವ ಕೃಷ್ಣನಬಳಸಿ ನೋಡುವ ಬನ್ನಿರೆ ಪ ಗೊಲ್ಲ ಸತಿಯರ ಗಲ್ಲ ಪಿಡಿದುಎಲ್ಲ ನಟನೆಯ ತೋರುವಫುಲ್ಲ ನಾಭನಮೆಲ್ಲ ಮೆಲ್ಲನೆಎಲ್ಲ ಹೆಂಗಳು ನೋಡಿರೆ 1 ಕಾಮಿ ಜನರಿಗೆ ಕಾಮಿತಾರ್ಥವಪ್ರೇಮದಿಂದಲಿ ಕೊಡುತಿಹಕಾಮನೈಯನ ಚರಣ ಕಮಲವನಂಬಿ ಬದುಕುವ ಬನ್ನಿರೆ2 ಅಂಗರಾಗ ಶ್ರೀರಂಗ ಮಂಗಳಸಿಂಗರದಿ ತಾ ನಿಂತಿಹಮಂಗಳಾಂಗನ ಮಂಗಳಾರತಿಎಲ್ಲ ಹೆಂಗಳು ನೋಡಿರೆ 3 ಒಂದು ಕೈಯಲಿ ಗಂಧಪುಷ್ಪ ಮ-ತ್ತೊಂದು ಕೈಯಲಿ ರಂಗನುಮಂದಹಾಸದಿ ಇಂದುಮುಖಿಯರಿ-ಗ್ಹೊಂದಿಸುವನತಿ ಚಂದದಿ 4 ಶುಕ್ರವಾರದಿ ಪೂಜೆಗೊಂಬುವಚಕ್ರಧರ ಶ್ರೀಕೃಷ್ಣನು ನಕ್ರಹರ ತ್ರಿವಿಕ್ರಮನು ಮನ-ವಾಕ್ರಮಿಸಿ ಸುಖ ಕೊಡುತಿಹ 5
--------------
ವ್ಯಾಸರಾಯರು
ತುಳಸೀ ದೇವಿ ಉದಯ ಕಾಲದೊಳೆದ್ದು ಮುದದಿಂದ ಶ್ರೀ ತುಳಸಿ ಸತಿ ಉದ್ಧರಿಸೆನ್ನನೆಂದು ಉದಕವೆರೆದು ನಮಸ್ಕರಿಸಿ ವಂದಿಸುತಲಿ ಸುಧೆಯ ಸುರರಿಗಿತ್ತ ಧನ್ವಂತರಿ ನಯನದಿ ಉದಿಸಿದೆ ಆನಂದ ಅಶ್ರುಗಳಿಂದಲಿ ಮದಗರ್ವ ಬಿಡಿಸೆನ್ನ ಶುದ್ಧಿಯನ್ನೆ ಮಾಡಿ ಹೃದಯದಿ ಹರಿಯ ತೋರಿ ರಕ್ಷಿಸೆಂದೆನಲು ಸದ್ದಿಲ್ಲದೆ ಪೊರೆವ ಗೋಪಾಲಕೃಷ್ಣವಿಠ್ಠಲ
--------------
ಅಂಬಾಬಾಯಿ
ತೂಗಿರೆ ಗುರುಗಳ ತೂಗಿರೆ ಯತಿಗಳ ತೂಗಿರೆ ದಾಸಗ್ರೇಸರರ ನಾಗಶಯನನು ರಾಗವ ಪಡೆದಂಥ ಯೋಗಿವರೇಣ್ಯರ ತೂಗಿರೆ ಪ ಈ ಮಹಿಯೊಳು ಪುಟ್ಟಿ ಶ್ರೀಮುದತೀರ್ಥ ಸು- ನಾಮದಿ ಕರೆಸುವರ ತೂಗಿರೆ ಆ ಮುದತೀರ್ಥ ಪದ್ಮನಾಭ ನಾಮದಿಂದಿರುವರ ತೂಗಿರೆ1 ರಾಮನ ತಂದಿತ್ತ ನರಹರಿ ಮುನಿಪರ ಮಾಧವ ತೀರ್ಥರ ತೂಗಿರೆ ಆಮ- ಹಾವಿದ್ಯಾರಣ್ಯರನ ಗೆಲಿದಂಥ ಶ್ರೀ ಮದಕ್ಷೋಭ್ಯರ ತೂಗಿರೆ 2 ಕಾಕಿಣಿತೀರಸ್ಥ ಟೀಕಾಚಾರ್ಯರೆಂಬೊ ನಾಕಪಾಂಶಜರನ ತೂಗಿರೆ ಶ್ರೀಕೃಷ್ಣ ತಟದಿ ಜಿತಾಮಿತ್ರರೆಂಬೊ ಪಿ- ನಾಕಿ ಅಂಶಜರನ ತೂಗಿರೆ 3 ರಾಜರಂದದಿ ಸುಖಭೋಜನ ಕೃದ್ಯತಿ ರಾಜ ಶ್ರೀಪಾದರ ತೂಗಿರೆ ವ್ಯಾಜದಿ ವಿಜಯ ಸಾಮ್ರಾಜ್ಯರೆನಿಸಿ ವ್ಯಾಸರಾಜರು ಮಲಗ್ಯಾರ ತೂಗಿರೆ 4 ವಾದಿಗಳನು ಯುಕ್ತಿವಾದದಿ ಗೆಲಿದಂಥ ವಾದಿರಾಜರನ್ನ ತೂಗಿರೆ ಮೇದಿನಿಯೊಳು ಕೃಷ್ಣದ್ವೈಪಾಯನರೆಂಬೊ ವೇದವ್ಯಾಸಾತ್ಮಜರ ತೂಗಿರೆ 5 ಪರಿಮಳ ರಚಿಸಿದ ವರಹಜ ತೀರಸ್ಥ ಇರುಳು ಕಾಲದಲಿ ತರಣಿಯ ತೋರಿದ ಗುರುಸತ್ಯ ಬೋಧರ ತೂಗಿರೆ 6 ಪರಮತ ಖಂಡನ ನಿರುತದಿ ಮಾಡಿದ ಗುರುವರದೇಂದ್ರರ ತೂಗಿರೆ ಗುರು ಭುವನೇಂದ್ರರ ಕರಜವ್ಯಾಸತತ್ವ ವರಿತ ಯತೀಶರ ತೂಗಿರೆ 7 ವರಭಾಗವತಸಾರ ಸರಸದಿ ರಚಿಸಿದ ಗುರುವಿಷ್ಣು ತೀರ್ಥರ ತೂಗಿರೆ ಪರಮ ಕ್ಷೇತ್ರಕೂಡಲಿಯೊಳಗಿರುವಂಥ ಗುರುರಘುವೀರರ ತೂಗಿರೆ 8 ಹರಿಯ ಮಹಿಮೆಯನ್ನು ಸರಸದಿ ಪೇಳಿದ ಪುರಂದರ ದಾಸರ ತೂಗಿರೆ ಹರಿಸರ್ವೋತ್ತಮನೆಂದು ಸುರಮುನಿ ಗರುಹಿದ ಗುರು ವಿಜಯದಾಸರ ತೂಗಿರೆ 9 ಬನ್ನವ ಬಿಡಿಸಿ ಶಿಷ್ಯನ್ನ ಪಾಲಿಸಿದ ಭಾಗಣ್ಣ ದಾಸರನ್ನು ತೂಗಿರೆ ಘನ್ನ ಹರಿಯಗುಣ ವರ್ಣಿಸಿದಂಥ ಜ ಗನ್ನಾಥ ದಾಸರ ತೂಗಿರೆ 10 ಮಾನವಿರಾಯರ ಪ್ರಾಣಪದಕರಾದ ಪ್ರಾಣೇಶದಾಸರ ತೂಗಿರೆ ವೇಣುಗೋಪಾಲನ್ನ ಗಾನದಿ ತುತಿಸಿದ ಆನಂದದಾಸರ ತೂಗಿರೆ 11 ವಾಸ ಆದಿಶಿಲಾಧೀಶನ್ನ ಭಜಿಸಿದ ಶೇಷ್ಠ ದಾಸರನ್ನ ತೂಗೀರೆ ಶ್ರೇಷ್ಠ ಕಾರ್ಪರ ನರಕೇಸರಿಗತಿಪ್ರೀಯ ದಾಸೋತ್ತಮರನ್ನ ತೂಗೀರೆ 12
--------------
ಕಾರ್ಪರ ನರಹರಿದಾಸರು
ತೆಪ್ಪದುತ್ಸವ ನಿನಗೆ ಏನು ಹಿತವೋ ಅಪ್ಪ ಹನುಮಯ್ಯ ನಿನ್ನಾಟಕೇನೆಂತೆಂಬೆ ಪ. ರಾಮ ಉಂಗುರ ಸತಿಗೆ ಕಂಡಿತ್ತು ಬಾರೆನಲು ನೇಮದಿಂದಲಿ ನೂರು ಯೋಜನುದಧಿ ಪ್ರೇಮದಿಂದಲಿ ಹಾರಿ ಕುರುಹು ತಂದಾ ಮಹಿಮ ಈ ಮಡುವಿನ ಜಲದಿ ಈ ಆಟವಾಡುವುದು 1 ಕುರುಕುಲಾರ್ಣವವೆಂಬ ಘನ ಶತ್ರು ಸೈನ್ಯವನು ಒರಸಿ ಕ್ಷಣದಲಿ ಭುಜಬಲದ ಶೌರ್ಯದಲಿ ಧುರವೆಂಬ ಶರಧಿಯನು ಲೀಲೆಯಲಿ ದಾಟಿದಗೆ ವರ ಸರೋವರದ ಈ ಜಲದಾಟವಾಡುವುದು 2 ಅನ್ಯ ದುರ್ಮತ ಮಹಾರ್ಣವನು ಶೋಷಿಸುತ ಬಹು ಉನ್ನತದ ವೇದ ಶಾಸ್ತ್ರಾರ್ಣವದಲಿ ಚೆನ್ನಾಗಿ ಈಜಿ ಶ್ರೀ ಹರಿಚರಣ ದಡ ಸೇರ್ದ ಘನ್ನ ಮಹಿಮನಿಗೆ ಈ ಚಿನ್ನ ಮಡುವೀಜುವುದು 3 ಮುಕ್ತಿಯೊಗ್ಯರ ಕರ್ಮಶರಧಿಯನು ದಾಟಿಸುತ ಮುಕ್ತರಾಶ್ರನ ಪುರ ಸೇರಿಸುವನೆ ಅತ್ಯಂತ ಅಲ್ಪ ಈ ಜಲದಾಟವಾಡಿದರೆ ಭಕ್ತರಾದಂತ ದಾಸರು ನಗರೆ ಹನುಮ 4 ವರ ಕದರುಂಡಲಿಯಲ್ಲಿ ನೆಲಸಿರುವ ಭಕ್ತರಿಗೆ ಮರುಳುಗೊಳಿಸುತ ಮಹಾ ಮಹಿಮನೆನಿಸಿ ಪರಿಪರಿಯ ಉತ್ಸವಪಡುವೆ ಶ್ರೀ ಕಾಂತೇಶ ಸಿರಿರಮಣ ಗೋಪಾಲಕೃಷ್ಣವಿಠ್ಠಲನ ದಾಸ 5
--------------
ಅಂಬಾಬಾಯಿ
ತೆರಳಿ ಪೋದರು ದಿವ್ಯ ನರಹರಿಯ ಪುರಕೆ ಶ್ರೀ ವರತಂದೆ ಮುದ್ದುಮೋಹನರೂ ಪ. ಕರಿಗಿರಿ ಕ್ಷೇತ್ರದಲಿ ತೊರದು ಭೌತಿಕ ದೇಹ ಪರಮ ಉಲ್ಲಾಸದಿಂದಾ ನಂದಾ ಅ. ಪರಿಪರೀ ಪೂಜಿಸಿದ ಪರಮ ಭಕ್ತರಿಗೆ ತಾವ್ ತೆರಳುವೋಪರಿ ತಿಳಿಸದೇ ಪರಮ ಕರುಣಾಳು ಹೆಂಗರುಳಿನಾ ಖಣಿ ಎಂಬ ತೆರವೆಲ್ಲರಿಗೆ ಮರೆಸದೇ ಪರಮಸುಜ್ಞಾನಿಯಾದಂಥ ಶಿಷ್ಯರಾ ಕರೆಸಿ ಅಗಲಿಸಿಕೊಳ್ಳದೇ ಪರಮ ಸಾಧ್ವೀಪತ್ನಿ ವರ ಪುತ್ರರಿರುತಿರಲು ಕಿರಿಶಿಷ್ಯನೊಬ್ಬನೆದುರೊಳ್ | ಜವದೊಳ್ 1 ಎಂಭತ್ತು ಮೇಲೆರಡು ವತ್ಸರವು ಧರಣಿಯೊಳು ಸಂಭ್ರಮದಿ ಧೃಡ ಕಾಯದೀ ತುಂಬಿ ತತ್ವಾಮೃತವು ಸುಜನರಾ ಹೃದಯದಲಿ ಕುಂಭಿಣಿಯೋಳ್ ದಾಸತ್ವದೀ ನಂಬಿಕೆಗಳಿತ್ತು ಸುಜ್ಞಾನಿಗಳಿಗಂಕಿತವು ಅಂಬುಜಾಕ್ಷನ ನಾಮದೀ ಒಂಭತ್ತು ವರ್ಷದಿಂ ಬೆಂಬಿಡದೆ ಕಾಯ್ದೆನ್ನ ಕುಂಭಿನಿಯ ತೊರೆದು ಈಗಾ | ಬೇಗಾ 2 ಶಾಲಿಶಕ ಸಾಹಸ್ರ ಅಷ್ಟ ಶತ ಅರವತ್ತು ಮೇಲೆರಡು ವಿಕ್ರಮದಲೀ ಕಾಲ ಮಧ್ಯಾಹ್ನ ಚೈತ್ರದ ಶುದ್ಧ ಶ್ರೀ ರಾಮ ನವಮಿ ಭೌಮವಾಸರದಲಿ ಆಲಿಸುತ ದಿವ್ಯ ಮಂತ್ರ ಶ್ರವಣ ಕೀರ್ತನವ ಶೀಲ ಶ್ರೀ ಗೋಪಾಲಕೃಷ್ಣವಿಠಲನ ಪುರಕೆ ಆಯಾಸಗೊಳದೆ ಮುದದೀ ತ್ವರದೀ 3
--------------
ಅಂಬಾಬಾಯಿ
ತೆರಳಿದ ನಮ್ಮರಂಗ ಅರಳುಮಲ್ಲಿಗೆ ಹೂವತರುಳೆ ಸೂರ್ಯಾಡಿ ಬಾರೆ ಪ. ರಾಜ ರಾಜರು ಸಹಿತ ಭೋಜನ ಮಾಡಿ ಕೃಷ್ಣರಾಜ ಗೋಪಾಲನೀಗ ತೆರಳಿದ 1 ಕಂಬು ಕಂದರನೀಗ ತೆರಳಿದ 2 ಇಂದಿರೇಶ ತಾನು ಚಂದ್ರ ಸಾಲಿಗ ಳಿಳಿದು ತಂದಿ ಭಕ್ತರ ಮನೆಗೆ ತೆರಳಿದ3 ಪ್ರೇಮದಿ ಕೃಷ್ಣರಾಯ ಸೋಮ ಸಾಲಿಗ ಳಿಳಿದು ಸ್ವಾಮಿ ಭಕ್ತರ ಮನೆಗೆ ತೆರಳಿದ 4 ಕುಂತಿ ದೇವಿಯರ ಪುಣ್ಯ ಎಂತು ವರ್ಣಿಸಬೇಕು ಶ್ರೀಕಾಂತನು ಅವರ ಅರಮನೆಗೆ ತೆರಳಿದ5 ಮತ್ತೆಪಾಂಡವರ ಪುಣ್ಯ ವಿಸ್ತರಿಸಲೊಶವಲ್ಲಚಿತ್ತಜನೈಯನೀಗ ತೆರಳಿದ6 ಪಕ್ಷಿವಾಹನ ಸ್ವಾಮಿ ಲಕ್ಷರೂಪವೆ ಧರಿಸಿ ಲಕ್ಷ್ಮಿರಮಣ ನೀಗ ತೆರಳಿದ 7 ಹಾಟಗಾಂಬರ ಧಾರಿ ಕೋಟಿ ರೂಪದಿ ಜಗನ್ನಾಟಕ ಕೃಷ್ಣನೀಗ ತೆರಳಿದ 8 ಚನ್ನರಾಮೇಶ ತಾನು ಅನಂತ ರೂಪವಧರಿಸಿತನ್ನ ಭಕ್ತರ ಮನೆಗೆ ತೆರಳಿದ 9
--------------
ಗಲಗಲಿಅವ್ವನವರು
ತೆರೆ ಬಾಗಿಲವ ಸುಗುಣೆ ಸುಂದರಿ ಮುಗಿವೆ ಕರವನುನಗಧರನ ಚರಣಕಮಲಯುಗಳ ನೋಳ್ಪೆನು ಪ ಪೇಳಿದವರು ಯಾರು ನಿನಗೆ ಕೀಲಿ ಹಾಕಲುಶೀಲಲಾಮನೊಬ್ಬನಾಜ್ಞೆ ಕೇಳಿ ನಡೆವಳು 1 ಹರಿಯು ಎಷ್ಟು ಸಾರೆ ನಿನಗೆ ತೆರೆಯ ಕೀಲಿಯೆಕರೆದು ಪೇಳಿದಾನೆ ಮಾತು ಸಿರಿಯೇ ಮರೆತೆಯಾ 2 ಬಾರೋ ಎಂದು ನೀನೆ ಎಷ್ಟು ಸಾರಿ ಕರೆದೆಯಾನಾರಿಮಣಿಯೆ ಬಂದರ್ಹೀಗೆ ತೋರ್ಪೆ ರೀತಿಯಾ 3 ಇಂದು ಹರಿಯ ದ್ವಾರದಲ್ಲಿ ಬಂದು ನಿಂತಿಹೆಮಂದಗಮನೆ ಕೀಲಿನೀನು ಬಂಧ ಮಾಳ್ಪರೆ 4 ಇಷ್ಟು ನೋಡಿ ಇಂದಿರೇಶನ ಭೆಟ್ಟಿ ಭರದಲಿಕೃಷ್ಣೆ ಬಂದು ತೆರೆಯೆ ಕೀಲಿ ದೃಷ್ಟಿಯಾಗಲು 5
--------------
ಇಂದಿರೇಶರು
ತೊಂಡ ನೆನಿಸ ಬೇಡ ಹರಿಯೇ ಪ ಪುಂಡರೀಕಾಕ್ಷನೆ ಕಾವ ತೊಂಡರ ತೊಂಡನೆನಿಸೋ ಅ.ಪ. ಹೆಂಡತಿಯ ಬಿಡಬಹುದು-ಕಾಡಿಗ್ಹೋಗಲಿ ಬಹುದು ಬಿಡದೆ ಜಪಿಸಲಿ ಬಹುದು-ಕಟುತಪವ ಮಾಡಲಿಬಹುದು ಒಡೆಯ ಕೃಷ್ಣನೆ ನಿನ್ನ ಅಡಿಯ ಕಾಡಲಿಬಹುದು ಕಂಡವರ ಊಳಿಗದಿ ಕೀರ್ತಿ ಪಡೆಯಲಾಗದೊ ದೇವ 1 ಆಶೆಯ ತೊರೆದು ನಿಜ ದಾಸನಾಗಲಿಬಹುದು ದೇಶ ದೇಶವ ತಿರುಗಿ ಕಾಸುಗಳಿಸಲಬಹುದು ಕೇಸರಿಯ ಹಿಡಿತಂದು ಪಾಶದಲಿ ಕಟ್ಟಬಹುದು ಶ್ರೀಶನಿನಗಲ್ಲದವರ ಸಂಗ ಏಸೇಸು ಜನ್ಮಕ್ಕು ಬ್ಯಾಡೋ 2 ಹೀನ ಜನರಾ ಸಂಗ ಮಾನವಂತರಿಗಲ್ಲ ದೀನಜನಮಂದಾರ ಕೊಡಬೇಡ ಇದು ಎನಗೇ ಮಾನಾಭಿಮಾನವನು ನಿನಗೆ ಒಪ್ಪಿಸಿದೆನೋ ಇನ್ನಾದರೂ ಸಲಹೋ ಶ್ರೀನಿವಾಸ ಕೃಷ್ಣವಿಠ್ಠಲನೆ ಜೀಯಾ 3
--------------
ಕೃಷ್ಣವಿಠಲದಾಸರು
ತೊಂಡನು ಕಂಡುದ ಬಿನ್ನೈಸುವೆನುಪಾಂಡವ ಪ್ರಿಯ ಎನ್ನ ತಪ್ಪು ಕಾಯಯ್ಯ ಪ ಹರಿ ನಿನ್ನ ನಾಮ ಕಾಮಧೇನುವಿಗೆದುರಿತದೊಟ್ಟಿಲು ಮೇವು ಭವಾಂಬುಧಿಯುಅರಸಿ ಕುಡಿವ ನೀರೆರೆವಡೆನ್ನಲ್ಲಿಭರಿತವಾಗಿರೆ ಒಲಿದು ಎನ್ನೊಳ್ಯಾಕಿರಿಸೆ 1 ಮುನಿಗಳ ಮನದ ಮೊನೆಯಾದ ಕೊನೆಯಲ್ಲಿಘನಭಕ್ತಿ ಪಾಶದಿ ಸಿಲುಕಲ್ಯಾಕೆಎನ್ನ ಚಿತ್ತ ಚಂಚಲದುಯ್ಯಾಲೆಯಲಿನಿನ್ನ ಮನಬಂದಂತೆ ಓಲ್ಯಾಡಲಾಗದೆ 2 ಕರ್ಣರಂಧ್ರದಿ ಮನವನು ಪೊಕ್ಕು ಪಾಪವನಿನ್ನವರಲಿ ತಳವರಸಲ್ಯಾಕೆಎನ್ನೊಳ ಹೊರಗೆ ಪಾಪರಾಸಿಗಳಿವೆನಿನ್ನ ಮನಬಂದಂತೆ ಸೊರೆಗೊಳ್ಳೆಲೊ ಕೃಷ್ಣ3
--------------
ವ್ಯಾಸರಾಯರು
ತೊರವಿ ನರಸಿಂಹನ ಸ್ತೋತ್ರ ನರಹರೀ | ಪಾಲಿಸೊ ಎನ್ನ | ನರಹರೀ ಪ ನರಹರೀ | ನಮಿಸೂವೆ ನಿನ್ನ | ಚಾರುಚರಣ ಕಮಲಕ್ಕೆ ಮುನ್ನ | ಅಹತೊರವಿ ಕ್ಷೇತ್ರದಲ್ಲಿ | ಪರಿಪರಿ ಭಕುತರಮೊರೆಯ ಕೇಳ್ಕರುಣದಿ | ವರವ ನೀಡುತಲಿಹ ಅ.ಪ. ಪೂರ್ವ ಸಾಲಿಗ್ರಾಮ ರೂಪ | ದಲ್ಲಿದೂರ್ವಾಸ ಪೂಜಿತ | ರೂಪ | ಇದ್ದುಓರ್ವ ಭಕ್ತನಿಗೆ ಸಲ್ಲಾಪ | ತೇಜಗೈವದ ಕೇಳ್ವದು ಅಪರೂಪ | ಅಹಊರ್ವಿಯೊಳ್ ಚಿಮ್ಮಲಗಿ | ಸರ್ವಾಧಿಕವು ಕ್ಷೇತ್ರಇರ್ವೆ ನಾನಲ್ಲೀಗ | ತರ್ವೋದು ತೊರವೀಗೆ 1 ಸೊಲ್ಲ ಲಾಲಿಸಿ ಗಾಢ ಭಕ್ತ | ಎದ್ದುಚೆಲ್ಲೀದ ವಾರ್ತೆ ಸರ್ವತ್ರ | ಜನರಲ್ಲಸ ಗೊಳದೆ ಮುಂದತ್ತ | ಹಸಿಹುಲ್ಲನು ತೆಂಕದಿಶಿಯಿತ್ತ | ಅಹಚೆಲ್ಲುತ ಪೋಗುತಿರೆ | ಜ್ವಲೀಸಿತದುಚಿಮ್ಮಲ್ಲಿಗಿ ಊರ್ಬಳಿ | ಒಳ್ಳೆ ಕೃಷ್ಣಾತೀರ 2 ಸ್ವಪ್ನ ಸೂಚಿತ ತಾಣ ಬಗೆದು | ನೋಡೆಅಪ್ಪ ನೃಹರಿ ಕಂಡನಂದು | ಭಕ್ತರಪ್ಪಿ ಆನಂದಾಶ್ರು ಬಿಂಧು | ಕೈಚಪ್ಪಾಳೆ ಬಡಿದುಘೇಯೆಂದು | ಆಹಅಪ್ಪಾರ ಮಹಿಮನ | ಗೊಪ್ಪಾದ ಘನಮೂರ್ತಿಉಪ್ಪರಿ ತಂದಿಡುತ | ದರ್ಪದಿ ನಿಂತರು 3 ಶಿರಿ ಹಾಗೂ ಪ್ರಹ್ಲಾದರಾಯ | ಯುಕ್ತಹಿರಣ್ಯಕನ ತನ್ನ ತೊಡೆಯ | ಮೇಲೆಇರಿಸಿ ಉದರ ಸೀಳ್ದ ಬಗೆಯ | ಕೇಳಿಕರುಳನು ಮಾಲೆಯ ಪರಿಯ | ಆಹಧರಿಸುತ್ತ ತೋರ್ದನು | ಹಿರಣ್ಯಕಶಿಪೂಜತರಳ ಭಕ್ತನ ತೆರ | ತರಳನರಿದಿಷ್ಟೆಂದು 4 ಶಿಷ್ಟ ಮತ್ಸ್ಯಾವತಾರ | ಯುಕ್ತಶ್ರೇಷ್ಠ ಪ್ರಭಾವಳಿಹಾರ | ಸುವಿಶಿಷ್ಟದಿ ನರ ಮೃಗಾಕಾರ | ನಾಗಿಅಷ್ಟವು ಭುಜಯುಕ್ತಾಕಾರ | ಆಹಶಿಷ್ಟ ಭಕ್ತರಿಂದ ಕಷ್ಟವಿಲ್ಲದೆ ತೆರಳಿಶ್ರೇಷ್ಠ ತೊರವಿಯಲ್ಲಿ ಇಷ್ಟನಾಗಿ ನಿಂದ 5 ಮುನ್ನಿದ್ದ ನೃಹರಿಯ ಶಿಲೆಯ | ಕೊಂಡುಚೆನ್ನ ತೀರ್ಥದಿ ನರಹರಿಯ | ಇಡಲುಕೃಷ್ಣೆಗೆ ಪೋಗುವ ಪರಿಯ | ಪೇಳೆಘನ್ನ ಮೂರ್ತಿಯ ಒಯ್ದ ಬಗೆಯ | ಆಹ ಇನ್ನು ಮುನ್ನು ಪೇಳ್ವ | ನನ್ನೆಯ ಜನರಿಹರು ಮನ್ನಿಸುತೀವಾರ್ತೆ ಚಿನ್ಮಯನ ಕೊಂಡಾಡಿ 6 ಗುಪ್ತಾವು ಗಂಗಾ ಸನ್ನಿಹಿತ | ತೀರ್ಥಉತ್ತಮ ದಿಂದಭಿಷೇಚಿತ | ನಾಗಿನಿತ್ಯವು ಪವಮಾನ ಸೂಕ್ತ | ಪಂಚಯುಕ್ತವು ಪೂಜಾದಿ ಕೃತ | ಆಹಭಕ್ತಿ ಪೂರ್ವಕವಾದ | ಉತ್ತಮ ಸೇವೆಯನಿತ್ಯ ಕೈಗೊಳ್ಳುತ | ಭಕ್ತರಭೀಷ್ಟದ 7 ಮಾಸ | ಎರಡುಉತ್ಸವ ವೈಭವ ಘೋಷ | ಕೇಳಿ ಕುತ್ಸಿತ ಜನರೊಲ್ಲ ಈಶ | ಅಂತೆ ಸಚ್ಛಾಸ್ತ್ರ ಪ್ರವಚನ ಪೋಷ | ಆಹವತ್ಸಾರಿ ದುರುಳನ | ಕುತ್ಸಿತ ಉದರವವಿಸ್ತ್ರುತ ನಖದಿಂದ | ಕುತ್ತಿದ ಚಿಂತಿಸು 8 ನರಹರಿ ನಾಮಕ ಕವಿಯು | ಇಲ್ಲಿತೊರವಿಯ ನರಹರಿ ಸನಿಯ | ಚೆಲ್ವವರರಾಮ ಕಥೆಯನ್ನು ಬರೆಯು | ಅವ - ಕುವರ ವಾಲ್ಮೀಕಿಯೆ ಮೆರೆಯು | ಆಹತೊರವೆ ರಾಮಾಯಣ | ವಿರಚಿತ ವಾಯ್ತಿಲ್ಲಿಹರಿಯನುಗ್ರಹ ಜಾತ | ವರ ಕವಿತೆ ಉಲ್ಲಾಸ 9 ಹೃದಯ ಗುಹೆಯಲ್ಲಿ ವಾಸ | ಉಪನಿಷದು ಪೇಳ್ವದು ಅಂತೆಲೇಸ | ಬಲುಮುದದಿಂದ ಮಾಳ್ಪದ ವಾಸ | ಅಂಥಬುಧಜನಕಹುದು ಸಂತೋಷ | ಆಹವಿಧವು ಈ ಪರಿಯೆಂದು | ವಿಧಿಸಲು ಜಗತೀಗೆಹದುಳದಿ ತೊರವಿ ಸ | ನ್ನಿಧಿ ಗುಹೆಯೊಳುವಾಸ 10 ವಿಭವ | ದಿಂದಲೀವನು ಮುಕ್ತಿಯ ಸುಖವ | ಈತಕೈವಲ್ಯಾಕಧಿಪತಿ ಇರುವ | ಆಹತಾವಕನಾಗಿ ಗುರು | ಗೋವಿಂದ ವಿಠಲನಭಾವದಿ ನೆನೆವಂಗೆ | ತೀವರ ವರವೀವ11
--------------
ಗುರುಗೋವಿಂದವಿಠಲರು
ತೊರೆದು ಜೀವಿಸಬಹುದೆ ಗುರು ನಿಮ್ಮ ಚರಣವ ಪ. ಬರಿಯ ಮಾತಲ್ಲವಿದು ಜರಿದು ನುಡಿವೆ ಕರಕರೆಗೊಳಿಸದೆ ಕಾಯಬೇಕಿನ್ನು ಗುರು ಅ.ಪ. ಅತಿಶಯ ಮಹಿಮೆಯ ಹಿತದಿಂದ ತೋರಿದ ಪಿತನಂತೆ ಪೊರೆಯುವಚ್ಯುತ ದೂರ ಪದವೀವ ಮತಿವಂತರೆ ನಿಮ್ಮ ಕ್ಷಿತಿಯೊಳಗಲಲಾರೆ1 ನೀತಿಯ ಬೋಧಿಪ ಖ್ಯಾತಿ ಶ್ರೀ ಗುರುಗಳೆ ದೂತರಾದವರನು ಈ ತೆರ ಮಾಳ್ಪರೆ ಪಾತಕರಹಿತರೆ ಪ್ರೀತಿಯ ತೋರಿರಿ2 ಬಂದಿರಿ ಮಮತೆಲಿ ಕಂದರಂದದಿ ತಿಳಿದು ಇಂದಿರೇಶನ ತತ್ವಾವೃಂದಗಳರುಹುತ ಮಂದಿಗಳಿಗೆ ಆನಂದವನೆ ತೋರ್ದಿರಿ 3 ಎಲ್ಲಿ ಭಕ್ತರು ಕರಿಯೆ ಅಲ್ಲಿಗೆ ಬರುವ ಗುರುವೆ ಇಲ್ಲಿ ನಿಮ್ಮ ಹೊರತು ಇಲ್ಲವು ಇನ್ನೊಂದು ಒಲ್ಲೆನು ಈ ಜಗದ ನಿಲ್ಲದ ವಸ್ತುಗಳು 4 ಗೋಪಾಲಕೃಷ್ಣವಿಠ್ಠಲ ತಾ ಪರಿಪರಿ ಲೀಲ ವ್ಯಾಪ್ತ ಶ್ರೀ ಗುರು ಸಹ ಶ್ರೀಪತಿ ಹೃದಯದಿ ತೋರ್ಪಂತೆ ಕೃಪೆ ಮಾಡಿ ಕಾಪಾಡಬೇಕೊ ದೊರಿ 5
--------------
ಅಂಬಾಬಾಯಿ
ತೊರೆದು ಜೀವಿಸುಬಹುದೆ ಹರಿ ನಿನ್ನ ಚರಣವನುಬರಿಯ ಮಾತೇಕಿನ್ನು ಅರಿತು ಪೇಳುವೆನಯ್ಯ ಪ ತಾಯಿ ತಂದೆಯ ಬಿಟ್ಟು ತಪವ ಮಾಡಲುಬಹುದುದಾಯಾದಿ ಬಂಧುಗಳ ಬಿಡಲುಬಹುದುರಾಯ ಮುನಿದರೆ ಮತ್ತೆ ರಾಜ್ಯವನು ಬಿಡಬಹುದುಕಾಯಜಪಿತ ನಿನ್ನಡಿಯ ಬಿಡಲಾಗದು 1 ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದುಪಡೆದ ಕ್ಷೇತ್ರವ ಬಿಟ್ಟು ಪೋಗಬಹುದುಮಡದಿ ಮಕ್ಕಳ ಕಡೆಗೆ ತೊಲಗಿಸಿಯು ಬಿಡಬಹುದುಕಡಲೊಡೆಯ ನಿನ್ನಡಿಯ ಗಳಿಗೆ ಬಿಡಲಾಗದು 2 ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದುಮಾನಾಭಿಮಾನ ತಗ್ಗಿಸಲು ಬಹುದುಪ್ರಾಣನಾಯಕನಾದ ಆದಿಕೇಶವರಾಯಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು 3
--------------
ಕನಕದಾಸ
ತೊರೆದು ಪೋಗುವುದುಚಿತವೇ | ಶ್ರೀ ಗುರುವರ ಹರಣ ನೀಗುವುದುಚಿತವೇ ಪ. ಕಮಲ ನಂಬಿ ಇರುವಂಥ ತರಳೆಯ ಜರಿದು ಮೋಸದಿ ಇಂತು ಅ.ಪ. ಆರನಾ ಪೂಜಿಸಲಿ | ಪರಿಪರಿಯಿಂದ ಆರನಾ ಸ್ತುತಿಗೈಯ್ಯಲಿ | ಪೇಳೆನ್ನ ಗುರುವೆ ತೋರದು ಮನಸಿಗೆ ಬೇರೊಂದು ಮತಿ ಇನ್ನು ಕಾರುಣ್ಯಮೂರ್ತಿ ಮತ್ತಾರ ಸೇವಿಸಲಿನ್ನು ಧಾರುಣಿಯೊಳ್ ನಿಮ್ಮ ಹೊರತಿ ನ್ನಾರು ಕಾಯುವರಿಲ್ಲವೆಂದು ಸೇರಿದವಳನು ಬಿಟ್ಟು ಶ್ರೀ ಗುರು ಮಾರನಯ್ಯನ ಪುರಕೆ ಪೋಪರೆ 1 ತುಪ್ಪ ಸಕ್ಕರೆ ಸವಿದಾ | ಶುಭತನುವಿನ್ನು ಒಪ್ಪವಾಯಿತೆ ಶಿಖಿಗೆ | ಕ್ಷಣ ಮಾತ್ರದಲ್ಲಿ ಅಪ್ಪಾವು ಅತಿರಸ ಮೆಲ್ಲುವ ಇಚ್ಛೆಯು ತೃಪ್ತಿಯಾಯಿತೆ ಪೇಳಿ ಅಪ್ಪಯ್ಯ ನಿಮಗಿನ್ನು ಅಪ್ಪ ಅಮ್ಮ ಸರ್ವಬಳಗವು ತಪ್ಪದಲೆ ನೀವೆಂದು ನಂಬಿದೆ ಒಪ್ಪಿಕೊಂಡೊಂಬತ್ತು ವರುಷವು ಇಪ್ಪ ರೀತಿಯ ಬಯಲು ಮಾಡಿ2 ಕಡುಕೃಪೆಯಿಂದಲಿ | ಪೇಳಿದ ಗೋಪ್ಯ ಒಡಲೊಳು ನೆನೆಯುತಲಿ | ಕುಣಿದಾಡುತಿದೆ ಒಡಲೊಳು ದೃಢಭಕ್ತಿಯೊಳ್ ನಂಬಿ ಬಿಡದೆ ನಿಮ್ಮಡಿಗಳು ನಡುವೆ ಬಂದೆಡರುಗಳ್ ಕಡೆಹಾಯ್ದು ಮಿಡುಕದೆ ಅಡಿಗಡಿಗೆ ಬೆಂಬಿಡದೆ ಚರಣವ ಪಿಡಿದು ಕೇಳಲು ಅಭಯವಿತ್ತ ನುಡಿಗಳೆಲ್ಲವು ಎತ್ತ ಪೋಯಿತೊ ಕಡಲಶಯನನ ಮಾಯವಕಟಾ 3 ಹಿಂದೊಬ್ಬರನು ಕಾಣೆನೊ | ನಿಮ್ಮಂದದಿ ಮುಂದೊಬ್ಬರನು ಕಾಣೆನೊ | ಈ ಕರುಣದವರ ಒಂದೊಂದು ಗುಣ ಗಣ ಬಂದು ಸ್ಮರಣೆ ಮನಕೆ ಕಂದಿ ಕುಂದಿಸುತಿದೆ ನೊಂದು ಬೆಂದು ಪೋದೆ ಚಂದವೇ ಇದು ಪೋಪ ತೆರವು ತಂದೆ ಸೈರಿಸಲಾರೆ ಗುರುವರ ತಂದೆ ಮುದ್ದುಮೋಹನರೆನಿಸಿದ ಸುಂದರಾತ್ಮಕ ಸುಗುಣಪೂರ್ಣ 4 ಎನ್ನಂತೆ ಬಳಲುವರು | ನಿಮ್ಮಯ ಶಿಷ್ಯ ರುನ್ನಂತೆ ಇರುತಿಹರೊ | ಬಹು ಭಕ್ತಿ ಉಳ್ಳವರು ಮನ್ನಿಸುತವರ ಸಂಪನ್ನ ಸಲಹಬೇಕು ಬಿನ್ನಪವಿದು ಕೇಳು ಮನ್ನಿಸು ಕೃಪಾಳು ಇನ್ನು ಸೈರಿಸೆ ಸೈರಿಸೆನು ನಿಮ್ಮ ಘನ್ನ ಮೂರ್ತಿಯ ಮನದಿ ತೋರೈ ಇನ್ನು ಗೋಪಾಲಕೃಷ್ಣವಿಠ್ಠಲನು ಭವ 5
--------------
ಅಂಬಾಬಾಯಿ
ತೋರಿದ ನಿಜರೂಪ ಶ್ರೀಕೃಷ್ಣ ಆಹಾಗಾರ ಮಧ್ಯದಿ ವೃಜ ಚೋರ ಬಾಲಕನು ಪ ಪೆಟ್ಟಿಗೆಯೊಳು ಕರವಿಟ್ಟು ಬೆಣ್ಣೆಯ ತೆಗೆದಷ್ಟು ಇಷ್ಟನು ಮೆದ್ದು ಬೊಟ್ಟು ಚೀಪುವನು 1 ಜರದ ಕುಂಚಿಗಿ ಗೊಂಡ್ಯಾ ಶಿರದಿ ತೂಗುತಲೆನ್ನತಿರುಗಿ ತಿರುಗಿ ನೋಡಿ ಮುಚ್ಚದೆ ಪೋದನು 2 ಇಂದು ತಿನ್ನುತಲಿಹ ಶ್ರೀಕೃಷ್ಣಒಂದು ಎರಡು ವಯ ಇಂದಿರೇಶನ ಕಂಡು ನಂದ ಭೋಗಿಪೆನು 3
--------------
ಇಂದಿರೇಶರು