ಒಟ್ಟು 1924 ಕಡೆಗಳಲ್ಲಿ , 108 ದಾಸರು , 1460 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಹಾಬಲಿಪುರ ಮಹಾಬಲೇಶ್ವರ ಮಾವಳಿಪುರ ಮಿಹಿರಾ ಸುರುಚಿರ ಪರಾತ್ಪರಾ ಪ ಮಹೀಸುರಾರ್ಚಿತ ಸದಾಕೃಪಾಕರ ವಿಹಂಗವಾಹನ ಪೀತಾಂಬರ ಅ.ಪ ಮಧುಸೂದನ ತವಪಾದುಕಾ ಸಾರದ ಮಾಧವಿ ಸುಮದಲಿ ಪೂದತ್ತರುದಿಸಿ ಮೇದಿನಿಯೊಳು ತವಾರಾಧನ ತತ್ವವ ಬೋಧಿಸುವಂತೆ ನೀಗೈದೆ ಕೃಪಾನಿಧೆ 1 ಶ್ರೀಮದನಂತ ದಿವ್ಯಾಸನಮಂಡಿತ ಶ್ರೀಮಹೀಸಂಯುತ ಲೋಕವಿಖ್ಯಾತಾ ಪ್ರೇಮಸುಧಾನ್ವಿತ ಕಾಮಿತದಾತಾ ಶ್ರೀ ಮಾಂಗಿರಿಪತಿ ಶರಣಸಂಪ್ರೀತಾ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಳೆಯ ದಯಮಾಡೊ ರಂಗಯ್ಯ ನಿಮ್ಮ ಕರುಣ ತಪ್ಪಿದರೆ ಉಳಿಯದೀ ಲೋಕ ಪ. ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳ ಹಸಿದು ಬಾಯಾರಿ ಬತ್ತಿದ ಕೆÀರೆಗೆ ಬಂದು ತೃಷೆಯಡಗದೆ ತಲ್ಲಣಿಸಿ ಮೂರ್ಛೆಗೊಂಡು ದೆಸೆದೆಸೆಗೆ ಬಾಯಿ ಬಿಡುತಿಹವಯ್ಯ ಹರಿಯೆ 1 ಧಗೆಯಾಗಿ ದ್ರವಗುಂದಿ ಇರುವ ಬಾವಿಯ ನೀರ ಮೊಗೆ ಮೊಗೆದು ಪಾತ್ರೆಯಲಿ ನಾರಿಯರು ಹಗಲೆಲ್ಲ ತರುತಿಹರು ಯೋಚನೆಯ ಮಾಡುತ್ತ ಬೇಗದಿಂದಲಿ ತರಿಸೊ ವೃಷ್ಟಿಯನು ಹರಿಯೆ2 ಸಂದು ಹೋದವು ಜ್ಯೇಷ್ಠ ಆಷಾಢ ಶ್ರಾವಣ ಬಂದಿದೆ ಭಾದ್ರಪದ ಮಾಸವೀಗ ಇಂದು ಪುರಂದರಗೆ ಹೇಳಿ ವೃಷ್ಟಿಯ ತರಿಸೊ ಸಂದೇಹವಿನ್ಯಾಕೆ ಹೆಳವನಕಟ್ಟೆಯ ರಂಗ3
--------------
ಹೆಳವನಕಟ್ಟೆ ಗಿರಿಯಮ್ಮ
ಮಾಡಿದ್ಯಾ ಇಂದಿಗೆ ಹೀಂಗ | ಆಗದ್ಹಾಂಗ || ಕೂಡಿ ದುರ್ಜನರೆಲ್ಲ ನಗುವ ಪರಿಯಲಿ ಪ ಏನು ಕಂಡು ಒಲಿದೀ ನೀ ಅವಗೆ | ಖಳನ ಘಾತಕಮನದವಗೆ | ತಾನು ದಾರೆಂದು ವಿಚಾರಿಸದಧಮಗೆ |ಸಾನುಕೂಲಾಗಿ ಸರ್ವ ಬಗೆಯಲಿ 1 ಸಾಧು ಸಂತರು ಎಂಬುದನರಿಯಾ | ಭೇದವಾದ ಕುಬುದ್ಧಿಯಮರೆಯಾ || ಕಾದಾಡಿ ಕರ್ಮದ ಹಾದೀ ಹಿಡಿಯದ | ವಾದಕಂಜದ ಜನ ಸಾಧಕನಿಗೆ 2 ಹಿಂದಿನ ಗುಣಗಳ ಬಿಟ್ಟ್ಯಾಕೋ | ಮಂದಿಗೆ ಪದವಿಯ ಕೊಟ್ಟ್ಯಾಕೋ ತಂದೆ ಸದ್ಗುರು | ಭವತಾರಕನಂಘ್ರಿಯ | ಹೊಂದಿದವರಿಗಭಿಮಾನವಿಲ್ಲದಂತೆ 3
--------------
ಭಾವತರಕರು
ಮಾತನಾಡೈ ಮನ್ನಾರಿ ಕೃಷ್ಣ ಮಾತನಾಡೈ ಪ ದಾತನು ನೀನೆಂದು ಬಯಸಿ ಬಂದೆನು ಮಾತನಾಡೈಅ.ಪ. ಸಿರಿ ಪೊಂಗೊಳಲೊ ಜಗ-| ದಾಧಾರದ ನಿಜ ಹೊಳೆಯೋ || ಪಾದದ ಪೊಂಗೆಜ್ಜೆ ಥಳಿಲೊ ಸರ್ವ | ವೇದಗಳರಸುವ ಕಲ್ಪಕ ಸೆಳಲೊ 1 ಕಸ್ತೂರಿ ತಿಲಕದ ಮದವೊ ಮ- ಕುಟ ಮಸ್ತಕದಿ ಝಗಝಗವೊ || ವಿಸ್ತರದಿ ಪೊತ್ತ ಜಗವೊ ಪರ- | ವಸ್ತುವು ನಂದ ಯಶೋದೆಯ ಮಗುವೊ 2 ನವನೀತವ ಪಿಡಿದ ಕರವೊ ನವ-| ನವ ಮೋಹನ ಶೃಂಗಾರವೊ || ಅವತರಿಸಿದ ಸುರತರುವೊ ಶತ- ರವಿಯಂದದಿ ಉಂಗುರವಿಟ್ಟ ಭರವೊ 3 ಆನಂದ ಜ್ಞಾನದ ಹೃದವೊ ಶುಭ-| ಮಾನವರಿಗೆ ಬಲು ಮೃದುವೊ || ಆನನ ಛವಿಯೊಳು ಮಿದುವೊ ಪಾಪ-| ಪಾವಕ ಪದವೊ 4 ತ್ರಿಜಗದಧಿಕ ಪಾವನನೊ ಪಂ-| ಕಜ ನೇತ್ರೆಯ ನಾಯಕನೊ || ಅಜಭವಾದಿಗಳ ಜನಕನೊ ನಮ್ಮ |ವಿಜಯವಿಠ್ಠಲ ಯದುಕುಮಾರಕನೊ 5
--------------
ವಿಜಯದಾಸ
ಮಾತು ಆಡುವೆ ಯಾತಕೆ ಮನವೆ ನೀ ಸೋತು ಸುಮ್ಮನಿರು ಜೋಕೆ ಪ ಮಾತು ಆಡುವೆ ಯಾಕೆ ಮಮತಾ ಅಹಂಕಾರದಿ ಶ್ರೀತರುಣಿವರನ ಸಿರಿನಾಮವಿಲ್ಲದೆ ಅ.ಪ ಕಾಯ ಅಸ್ಥಿರವೆನ್ನದೆ | ಇಹ ಪರಕೆ ಸ- ಮಾಯವಾದಗಳಾಡೆ ಬಾಯಿ ನೋವಲ್ಲದೆ 1 ವೇದ ಪುರಾಣವಿಲ್ಲ | ಶಾಸ್ತ್ರವೆ ಬ್ರಹ್ಮ- ವಾದವೇ ಮೊದಲೇಯಿಲ್ಲಾ ಸಾಧನೆಯೆಂಬುವದು ಲೇಶಯಿದರೊಳಿಲ್ಲಾ ಹಾದಿಹೋಕರ ಕೂಡಿ ಪ್ರೌಢನು ನಾನೆಂದು 2 ಹರಟೆ ಹರಟೆ ಮೋದಿಸಿ ಪರಗತಿ ಚಿಂತೆ ಬಿಂದು ಮಾತ್ರವು ಕಾಣೆ ಹರಿವ ನೀರೊಳು ಬೂದಿಹಾಕುವಂದದಿ ವ್ಯರ್ಥ 3 ಒಂದಕ್ಕೊಂದ್ಹೆಚ್ಚಿಸುತ | ಶುಷ್ಕವಾದ- ದಿಂದ ಕಾಲವ ಕಳೆಯುತ ನಿಂದಿಸಿ ಪರರ ಸ್ವಯೋಗ್ಯತೆ ತಿಳಿಯದೆ 4 ಬಲ್ಲೆನಾ ಬಿಡು ಎಂಬುವೆ | ಸದಾ ಒಬ್ಬ- ಪುಲ್ಲಲೋಚನ ಗುರುರಾಮವಿಠಲನ ಕಾಣ- ಲಿಲ್ಲ ಶೋಧಿಸಿ ತಿಳಿಯಲಿಲ್ಲ ಬರಿದೆ ಬಾಯಿ 5
--------------
ಗುರುರಾಮವಿಠಲ
ಮಾಧವ ತೀರ್ಥಾ ಯತಿ ವಾಸಿಪ ವೃಂದಾವನದಲ್ಲಿ ಖ್ಯಾತಿ ಪ. ವಾಸುದೇವನ ಭಕ್ತ ಸುಜನಕೆ ಪ್ರೀತಿ ಸೂಸುತ ಪೊರೆಯುವ ಕರುಣಿ ಪ್ರತೀತಿ ಅ.ಪ. ಭದ್ರಾವತಿಯ ತೀರ ನರಸಿಂಹ ಕ್ಷೇತ್ರ ಭದ್ರಾವತೀ ಪುರ ಮಠದಿ ಸತ್ಪಾತ್ರಾ ಮುದ್ದಾದ ವೀರ ರಾಮನ ಪ್ರೀತಿ ಗಾತ್ರಾ ಪೊದ್ದಿಸಿಕೊಂಡಿಪ್ಪ ಶಿರದಿ ಪತಿತ್ರ 1 ಸ್ವಪ್ನದಿ ತೋರಿದ ಯತಿರೂಪದಿಂದ ವಪ್ಪದಿ ದರ್ಶನಕೆ ಬಾರೆಂದು ನುಡಿದಾ ಅಪ್ಪ ತಿಮ್ಮಪ್ಪನ ಸ್ತುತಿಯನಾಲಿಸಿದಾ ಬಪ್ಪ ನರ ದರ್ಶನಕೆ ಮುಂದೆ ನಿಲ್ಲಿಸಿದಾ2 ಎನ್ನಿಂದ ಸಾರೋದ್ಧಾರ ಪದವನ್ನು ಎನ್ನಲ್ಲೆ ನಿಂತು ತಾ ಬರಸಿದ ಘನ್ನ ತನ್ನ ದೇವತ್ವವ ತೋರ್ದ ಪ್ರಸನ್ನ ಇನ್ನಿಂಥ ಕರುಣಿಯ ಕಾಣೆ ನಾ ಮುನ್ನ 3 ಮಧ್ವಕರ ಸಂಜಾತ ಮಾಧವರಂತೇ ಶುದ್ಧ ಈ ಯತಿಕುಲ ಸಂಜಾತನಂತೇ ಭದ್ರಾವತೀ ಪುರದಲ್ಲಿ ವಾಸಂತೇ ಮುದ್ದು ಕೇಶವ ಮಾಧವಾತೀರ್ಥನಂತೆ 4 ಕಾಮಿತಾರ್ಥವ ನಂಬೆ ಕೊಡುತಿಪ್ಪನಂತೆ ಕಾಮಚಾರಿಗಳೀಗೆ ತೋರ್ಪನಲ್ಲಂತೆ ಸ್ವಾಮಿ ರಾಮನ ಜಪಮೌನ ವ್ರತವಂತೆ ಯೋಗಿ ಅವಧೂತನಂತೆ 5 ಭಾಗಾವತಾದಲ್ಲಿ ಬಹು ದೀಕ್ಷಾಯುತರು ಬಾಗಿದ ಜನರಿಗೆ ಪ್ರೇಮ ತೋರುವರು ಭಾಗವತವ ರಾಜಗ್ಹೇಳಿದರಿವರು ಬೇಗರಿತುಕೊಳ್ಳಿರಿ ಬಹುಗೋಪ್ಯಯುತರು 6 ನಂಬಿದ ಜನರಿಂದ ಹಂಬಲೊಂದಿಲ್ಲ ತುಂಬಿದ ಭಕ್ತಿ ಆತ್ಮಾರ್ಪಣೆ ಬಲ್ಲ ಸಂಬ್ರಹ್ಮದಿಂ ನಲಿವ ಗುರುಭಕ್ತಿ ಬೆಲ್ಲ ಕುಂಭಿಣಿ ಮೂಢರಿಗೀವನು ಬಲ್ಯಾ 7 ಎನ್ನ ಶ್ರೀ ಗುರು ತಂದೆ ಮುದ್ದುಮೋಹನ್ನ ಘನ್ನರ ಕೃಪೆಯಿಂದ ಈ ಮುನಿವರನಾ ಸನ್ನುತ ಸುಗುಣವ ಕಂಡ ನಾ ನಿನ್ನ ಚನ್ನ ಶ್ರೀ ಲಕ್ಷ್ಮೀ ನರಸಿಂಹ ತೋರ್ದರನಾ 8 ಸ್ವಾಪರೋಕ್ಷಿಯ ವೃಂದಾವನಸ್ಥಾ ಗೋಪ್ಯದಿ ವಾಸಿಪ ಮಹಿಮ ವಿಖ್ಯಾತಾ ಗೋಪಾಲಕೃಷ್ಣವಿಠಲನ ಕೃಪಾ ಪಾತ್ರಾ ಕಾಪಾಡು ತವ ದಾಸದಾಸರ ನಿರುತಾ 9
--------------
ಅಂಬಾಬಾಯಿ
ಮಾಧವ ನಿಮ್ಮ ಪಾದಾ ದೋರೋ| ಸಾರಭಕುತಜನ ಸುರತರುವಾಗಿಹ ಪಾದಾದೋರೋ ಪ ಚಕೋರ ಚಂದಿರವಾದ ಪಾದಾದೋರೋ| ಪಾದ ದೋರೊ 1 ಕುಣಿದಾಡಿದ ಪಾದಾ ದೋರೋ| ಆಫಣಿಯಂಗವ ನಿರ್ವಿಷ ಮಾಡಿದ ಪಾದಾ ದೋರೊ2 ಸರಸಿಜ ಭವಭವರೊಂದಿತ ಪಾವನ ಪಾದಾ ದೋರೋ| ಗುರುಮಹಿಪತಿ ಪ್ರಭು ಕಂದಗೊಲಿದು ಬಂದು ಪಾದಾದೋರು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಧವ ಮುಕುಂದ ಹರಿ ದನುಜಾರಿದಯಾವಾರಿಧಿ ಅನುದಿನದಿ ನಿಮ್ಮ ಚರಣವ ನಂಬಿದವರಿಗಿಂಥ ಬಿನುಗುದುರಿತಗಳು ಬಾಧಿಸುವುದ್ಯಾತಕೊ ಸ್ವಾಮಿ ಪ. ತರುಣಿಕುಲರಾಮನೊಳು ತೊಡಕು ಬೇಡವು ಸೀತೆ(ಯ) ಹರಿಗೆ ಒಪ್ಪಿಸು ಎನಲು ಊರ ಹೊರಗೋಡಿಸಿರಲು ಭರದಿಂದ ಬಂದು ಮರೆಹೊಗಲು ವಿಭೀಷಣನು ಚರಣಕಮಲಕೆ ಎರಗಲು ಕರವ ಪಿಡಿದೆತ್ತಿ ಅಭಯವನಿತ್ತು ಲಂಕೆಯ ಸ್ಥಿರಪಟ್ಟಕಟ್ಟಿದ ಕರುಣಾಳುಗಳ ದೇವ 1 ಒದೆದೆಳೆದು ಪತಿಗಳೈವರ ಮುಂದೆ ದ್ರೌಪದಿಯ ನಡುಸಭೆಯೊಳು ನಿಲ್ಲಿಸಲು ಉಡುವ ಸೀರೆಯ ಸೆಳೆವೆನೆಂದು ದುಶ್ಯಾಸ(ನ) ಕೈ ದುಡುಕುತಿರಲಾಕ್ಷಣದಲಿ ಕೆಡುವದಭಿಮಾನ ಶ್ರೀ ಹರಿ ನೀನೆ ಕಾಯೊ ಎನ್ನೆಂ- ದೊದರುತಿರಲು ನುಡಿಯಲಾಲಿಸಿ ನಾನಾಪರಿಯ ವಸ್ತ್ರವನಿತ್ತು ಉಡಿಸಿ ಅಭಿಮಾನ ರಕ್ಷಿಸಿದಂಥ ಶ್ರೀಕಾಂತ 2 ಉತ್ತಾನಪಾದರಾಜ (ನ)ಣುಗ ತಮ್ಮಯ್ಯನ ಮತ್ತ ತೊಡೆಯೇರಿಇರಲು ನಿತ್ಯದಲಿ ಸುರುಚಿ ಸುನೀತಿ ಕುಮಾರಕನ ಎತ್ತಿ ಕಡೆಯಕ್ಕೆ ನೂಕಲು ನಿತ್ತ ವಿಚಾರವಿಲ್ಲದಂತೆ ಸತ್ಯಮೂರುತಿ ಹೆಳವನಕಟ್ಟೆರಂಗಯ್ಯ ಭಕ್ತವತ್ಸಲನೆಂಬೊ ಬಿರುದು ನಿನ್ನದು ಸ್ವಾಮಿ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಾನವ ಗುರುವಿಷ್ಣು ತೀರ್ಥರ ಪ ಕರುಣದಿ ಜನಿಸಿ ತರಿದ ಭೀಷ್ಠೆಯ ಗರಿವರಂಘ್ರಿಯ ಅ.ಪ ತರುಣಿ ಗರ್ಭದಿ ಜನಿಸಿ ವಟು ವ್ರತವ ಧರಿಸಿ ವೇದವೇದಾಂತ ಶಾಸ್ತ್ರವ ಹರಣ ಮಂತ್ರವ ಜಪಿಸಿದವರನು 1 ಗುರುತುರಗವನುಸರಿಸಿ ಬರುತಿರಲು ಬಿಸಿಲೊಳು ಗುರುಪ್ರೀತಿಯನು ಬಯಸಿ ಗುರುವಿತ್ತ ಪಾದುಕವೆರಡು ಶಿರದಲಿ ಧರಿಸಿ ಮಹಿಮೆಯನು ತಿಳಿಸಿ ಧರಿಸಿ ದ್ವಿತಿಯಾ ಶ್ರಮದಿ ನೋಡಲು ಪರಮ ಸತ್ಕುಲ ಜಾದಿ ಗುಣಯುತ ತನದೋಳ್ಮೆರೆವರಂಘ್ರಿಯ2 ತಿರೆ ಮೃಗಲಾಂಚನ ಮುಖಸಹಿತದಿ ಹರಿದಾಸ ಪಾಡಿದ ಮಾಡಿರಿ ಧರ್ಮವೆಂಬುವ ಸುಖವನು ತ್ಯಜಿಸಿಪೊರಟರ 3 ಚರಿಸುತ ಗಮನ ಸ್ವಪ್ನದಿ ಸೂಚಿತ ಪ್ರವಚನ ವಿಜಯ ಮುನಿ ಮುನಿಯವಲ್ಲಿ ಯೊಳಿರುವ ಗುರುಗಳ 4 ಕುಮಾರಕರೆಂದೆನಿಸಿ ಸುಕ್ಷೇತ್ರ ಧ್ಯಾನಿಸಿ ಸೇರಿದವರ ಘ ಚಾರು 'ಕಾರ್ಪರ ನಾರಶಿಂಹ' ವಲಿಮೆ ಪಡೆದ ಚಾರು ಚರಣವ5
--------------
ಕಾರ್ಪರ ನರಹರಿದಾಸರು
ಮಾನವ ವನಜನಾಭನೆ ಕಾಯುವ ಪ ಅಣುರೇಣು ತೃಣಕಾಷ್ಠ ಕೊನೆ ಮೊದಲುಗಳೊಳ- ವನ ನೋಡಿ ಹರುಷಿಸದೆ ಅ.ಪ ಈ ಶರೀರದೊಳಗೆ ಶ್ರೀ ತರುಣಿ ಸಹಿತ ಅವ- ನಿರುವದು ಗುರುಮುಖದೊಳರಿಯದೆ ಬರಿದೆ 1 ಇಂದ್ರಿಯಂಗಳಿಗೆ ಬ್ರಹ್ಮೇಂದ್ರಾದಿ ಸುಮನಸ ವೃಂದವಿರುವುದು ಗೋವಿಂದನೆ ದಣಿ 2 ಒಳಗೆ ಗುರುರಾಮವಿಠಲ ಕೊಡುವನು3
--------------
ಗುರುರಾಮವಿಠಲ
ಮಾನಸ ಪೂಜೆಯನು ಮಾಡು | ಧ್ಯಾನ ಪೂರ್ವದಿಂದ ಕುಳಿತು ಪ ಜ್ಞಾನ ಭಕುತಿಯ ವಿಡಿದು ಲಕುಮಿ | ಪ್ರಾಣನಾಥನ ಪ್ರೇರಣೆಯಿಂದ ಅ.ಪ ಕಾಮ ಕ್ರೋಧವ ಹಳಿದು ವಿಷಾದವೆಂಬೋ | ಸ್ತೋಮಗಳನು ತೊರೆದು ರಜೋ ಮೊದಲಾದ || ತಾಮಸದ ಬುದ್ಧಿ ಬಿಟ್ಟು ನೇಮನಿತ್ಯ ತೀರಿಸಿಕೊಂಡು | ಈ ಮನಸ್ಸು ಇಟ್ಟು 1 ಹೃದಯ ಪದುಮದೊಳಗೆ ಹರಿಯ ಪದುಮ ಪದಗಳಿಟ್ಟು | ದೇಹ ಕದಲದಂತೆ ಇದ್ದು ಜ್ಞಾನ ಉದಿತವಾದ ದೃಷ್ಟಿಯ || ಹದುಳದಿಂದ ತಿಳಿದು ಅಂತರವೆಲ್ಲವನು ನೋಡಿ | ಕದವ ತೆರೆದು ಕೊಟ್ಟ ಮುದದಿ ದೃಢವ ಸಂಪಾದಿಸಿ2 ನೀಲ ರತುನದಂತೆ ಹೊಳೆವ ಪಾಲಸಾಗರತನುಜೆ | ಮೇಲು ಮಂಗಳರಮಣನಾದ ಮೇಲುಗಿರಿಯ ತಿಮ್ಮನ || ತವಕ ಬೀಳದಲೆ ಪೂಜೆ ವಿಧಾ | ಸಾಲುಗಳನು ತಿಳಿದು ವಿಶಾಲ ಬುದ್ಧಿ ಯುಕುತಿಯಿಂದ 3 ವೇದ ಮಂತ್ರಗಳನು ಪೇಳಿ ಆದಿಯಲ್ಲಿ ಪೀಠಪೂಜೆ- | ಯಾದ ತರುವಾಯ ವಿನೋದದಿಂದಲಾವರಣ || ಆದರಣೆಯಿಂದ ಬಳಿಕ ಮಾಧÀವರಿಗೆ ಸಕಲ ಭೂಷ- | ಣಾದಿಗಳನು ರಚಿಸಿ ಪುಣ್ಯಹಾದಿಯನು ತಪ್ಪದೆ 4 ದೋಷರಾಶಿಗೆ ದ್ವೇಷನಾಗಿ ಈ ಶರೀರವÀ ಘಾಸಿಮಾಡದೆ | ಪಾದ || ಲೇಸಿನಿಂದ ಭಜನೆಗೈದು ವಾಸವಾಗು ಪದದಲ್ಲಿ | ಶ್ರೀಶ ವಿಜಯವಿಠ್ಠಲರನ್ನ ದಾಸ-ದಾಸರ ದಾಸನೆಂದು5
--------------
ವಿಜಯದಾಸ
ಮಾನಾಗ, ಉರಿಯು ಹೆಣ್ಣು ಹೈಕಳ ಕೂಡೆಶ್ರೀನಾಥ ನಿನಗೆ ಸಲ್ಲದು ಮಕ್ಕಳಾಟ ಪ ತರಳ ನೀನೆಮ್ಮ ಸೀರೆಗಳನೆತ್ತಿಕೊಂಡುತರುವನೇರುತ ಕಕ್ಕಳ ಕೆಳೆವೆತರುವಳಿತನ ಸಾಕು ನಿನ್ನ ಪೇರುರದಲಿತರುಣಿ ನಗುತಾಳೆ ಪೊಕ್ಕಾಟ ಸಾಕು 1 ಅರಸಿನ ಮಗನೆಂದು ತಾಳಿದೆವಲ್ಲದೆಸರಸಿಜಾಕ್ಷಿಯ ಮನೆಯ ಮಳಲಲ್ಲಿಸರಸದೊಳಿಹರೆ ನಿನ್ನಂಗದೊಳಿರ್ದಸುರರೋಡಬೇಕು ಸಲ್ಲದು ಮಕ್ಕಳಾಟ2 ಬೊಮ್ಮ ನಿನ್ನುದರದ ಜಗನಿನ್ನ ಅಂಗದೊಳಿದ್ದ ಸುರಮುನಿಗಳುನಿನ್ನನೆ ನಗುವರೊ ನೀನರಿಯದೆ ಎಮ್ಮಚೆನ್ನ ಹೆದ್ದಾಟ ಹೊಕ್ಕಾಟ ಸಾಕು 3 ಕಾಲ ಪೆಂಡೆಯುಹೊಸ ಹೊಸ ಚೆನ್ನಿಗ ಪರಿಹಾಸ ಸಾಕೋ4 ತುತಿಸಿ ತುತಿಸಿ ಕಾಣರು ಬ್ರಹ್ಮರುದ್ರರುಮತಿಗೊಳಗಾಗೆ ಮುನೀಶ್ವರರಶ್ರುತಿಗಳು ನಿನ್ನನು ಪುಡುಕಲರಿಯವು ಬಾಲಸತಿಯರೊಡನೆ ಖೇಳಮೇಳವೆ ಸಾಕು 5 ಸ್ನಾನಮಾಡಲೀಯೆ ಮೌನಗೌರಿಯನೋನಲೀಯದೆ ಮೌನವ ಕೆಡೆಸಿಧ್ಯಾನ ಮಾಡಲೀಯೆ, ನಿನ್ನ ಚೆನ್ನಿಗರುಹಾನಿ ನೀಗುವರು ಎಂಬುದರಿಯೆವೊ 6 ಚೆಲುವರರಸ ಶಿಖರ ಶಿಖಾಮಣಿಯೆಲಲನೆಯರ ಮನ ಸೂರೆಗಾರಫಲಿಸಿತು ವ್ರತ ನಮ್ಮ ಕೃಷ್ಣ ನಿನ್ನೊಲುಮೆಯಬಲೆಗೆ ಸಿಕ್ಕದರಾರೊ ಸೊಬಗು ಸುಗ್ಗುಳಿಯೇ7
--------------
ವ್ಯಾಸರಾಯರು
ಮಾಯಾ ಕಾರ್ಯವಾಕೆಯೆ ಮಿಥ್ಯವೂಈ ರೀತಿುಂದಲಾತ್ಮನಿಛ್ಛೆಯಲಿದುಸೇರಿದಂತಿಹುದಾಗಿ ಭ್ರಾಂತಿಯು ಜಾರುವನ್ನೆಗ ಪೊಳೆಯಲು1ಮುನ್ನ ನೀ ಬಂದೆನೆಂಬಲ್ಲಿ ಪರವiನುಭಿನ್ನವಿಲ್ಲದೆ ಪೂರ್ಣವಾಗಿರಲಿನ್ನು ನಿನಗೆಡೆಯಾವದೂಅನ್ಯ ವಿಲ್ಲದನನ್ಯನೀಶನೆ ನಾನುನಿನ್ನ ಕಾರ್ಯದ ನೇತ್ರಮಾತ್ರಕ್ಕುನ್ನತ ಕೃತಿಯಾಗಿರೇ 2ಮರುಭೂಮಿಯೊಳು ಮುಸುಕೆ ಮಿತ್ರನ ಕಾಂತಿಕೆರೆಯ ನೀರಿನ ಹಾಗೆ ಕಾಣುತಲಿರಲು ನೋಡಿದರುದಕವೆಬರಿಯ ಚೌಳೆಂತಾ ಪರಿಯು ನಿನ್ನಯ ತೋರ್ಕೆನಿರತ ಉಂಟೆಂಬಂತೆ ನಿನ್ನಯ ಮರುಳಿನಿಂ ಮುಂದಿರುತಿರೆ 3ಹೊಳೆಯಲಿಲ್ಲವು ಹುಸಿಯಾಗಿ ನೀ ಮುನ್ನಬಳಿಕ ನಿನ್ನೊಳು ಬದ್ದನೆಂಬೀ ಬಗೆಯು ತನಗೆಂತಪ್ಪುದೂತಿಳಿದು ನೋಡಲು ತಾನೊಬ್ಬನಾತ್ಮನುಕಳೆದು ಕೂಡುವ ಮಾತು ಮಾತ್ರವೆಯಳವಿಗೊಂಡಿರವಿಷ್ಟಕೆ 4ಅರಿವಿನಾ ಘಟ್ಟಿಯಾಗಿಹೆ ನಾ ನಿತ್ಯವರಿವು ಮರವೆಗಳೆಂದು ತೋರ್ದರು ಕರಣಧರ್ಮಗಳಲ್ಲದೆಬೆರದು ಬೇರಾಹ ಬಗೆಯಂದಿಗಿಲ್ಲವುತಿರುಪತಿಯ ಶ್ರೀ ವೆಂಕಟೇಶನೆ ತರುಬಿಕೊಂಡಿರೆ ವಿಶ್ವವಾ 5ಕಂ||ನುಡಿಯಲು ಜೀವನು ಕೋಪದಿಕಿಡಿಗೆದರುವ ಕಂಗಳಿಂದಭಿಮಾನನ ಬಲದಿಂತಡೆಯದೆ ತನು ಜೀವನನಾರ್ಭಟಿಸುತ ವಾದಿಸಿದುದ ಪುಸಿತನ ಬಂತೆಂಬುದರಿಂ
--------------
ತಿಮ್ಮಪ್ಪದಾಸರು
ಮಾರಜನಕ ಮುರಾರಿ ಕಾಣಮ್ಮ ಪ ಅರುಣ ಚರಣ ಕಳದಿರವು ಅಂಕುಶಧ್ವಜ ಅರವಿಂದ ರೇಖಾಂಕ ಪುರುಷನಾರಮ್ಮ ಉರಗಶಯನ ಕರಸರೋಜ ಮಧ್ಯದೊಳಿಟ್ಟು ಸುರರಿಂದರ್ಚನೆಗೊಂಬ ಹರಿಯು ಕಾಣಮ್ಮ 1 ಪೊಳೆವ ಉದಯ ಶಶಿ ಬೆಳಗು ಸೋಲಿಪ ನಾಖಾ ವಳಿಯಿಂದ ಒಪ್ಪುವ ಚಲುವನಾರಮ್ಮಾ ಕುಲಿಶ ಪಾಣಿಗೆ ಒಲಿದಿಳೆಯೊಳು ಬಂದು ಖಂ ಜಲಧಿ ಕಾಣಮ್ಮ 2 ಅಂದುಗೆ ಗೆಜ್ಜೆ ಕಡಗ ಪೊನ್ನೂಪುರ ತೊಡಂದ ಬರುತಿಹ ಪ್ರೌಢನಾರಮ್ಮ ದೃಢ ಭಕ್ತರೆಡೆಯಲಿ ಬಿಡದೆ ನಲಿಯುತಲಿಪ್ಪ ಮೃಡಸುರಪಾದ್ಯರ ಪತಿಯು ಕಾಣಮ್ಮ 3 ಕರಿಗಲ್ಲಿನಂತೆ ಸುಂದರ ಜಂಘೆ ಜಾನುಗ ಳೆರಡು ತರಣಿಯಂತೆ ಇವನಾರಮ್ಮಾ ಪರಮೇಷ್ಠಿ ಪ್ರಳಯದಿ ಸಿರಿಯಿಂದ ನುತಿಗೊಂಬ ಪರಮ ಪುರುಷ ನರಹರಿಯು ಕಾಣಮ್ಮ 4 ಇಭವರಕರದಂತೆ ಉಭಯ ಊರು ಕಟಿ ಪ್ರಭ ವಸನವನುಟ್ಟ ಸುಭಗನಾರಮ್ಮಾ ರಭಸದಿಂದಲಿ ಕಂಭ ಬಿಗಿದು ಪ್ರಹ್ಲಾದಗೆ ಅಭಯವಿತ್ತ ಸುರಪ್ರಭುವು ಕಾಣಮ್ಮ 5 ವಲಿವಿೂಕ ಬಿಲದಂತೆ ಸುಳಿನಾಭಿ ಜಠರತ್ರಿ ವಳಿಗಳಿಂದಲಿ ಬಲು ಪೊಳೆವನಾರಮ್ಮಾ ನಳಿನೋದ್ಭವನ ಪುತ್ರಾಖಿಳ ಲೋಕ ತಾಳಿದಾ ಹಾಲಾಹಲಕಂಠನ ಗೆಳೆಯ ಕಾಣಮ್ಮಾ 6 ಕೌಸ್ತುಭ ವೈಜಯಂತೀ ಸರ ಸಿರಿಯಿಂದಲೊಪ್ಪೋ ನಿರಯನಾರಮ್ಮ ವರಭೃಗುಮುನಿಪನ ಸ್ಪರುಶವನು ತಾಳ್ದ ಕರುಣ ಸಾಗರ ಸಿರಿಧರನು ಕಾಣಮ್ಮ 7 ಅರಿ ಶಂಖ ಸತತ ಪಿಡಿದಿಹ ಚತುರನಾರಮ್ಮ ದಿತಿಜರ ಸದೆದು ದೇವತೆಗಳ ಸಲಹಿದ ಚತುರಾಸ್ಯ ಕೃತಿದೇವಿ ಪತಿಯು ಕಾಣಮ್ಮ 8 ಧರದಿಂದೊಪ್ಪುತಲಿಹ ಪಿರಿಯ ನಾರಮ್ಮಾ ಸಿರಿಯೊಡನೆ ಕ್ಷೀರಶರಧಿ ಯೊಳೊರಗಿಪ್ಪ ವಜ್ರ ಪಂಜರವನು ಕಾಣಮ್ಮ 9 ಸುರಕಪೋಲ ನಾಸ ಸರಸಿಜನಯನ ಪು ಕುಂಡಲಿ ಯುಗಧರನು ಆರಮ್ಮಾ ಶರಧಿ ಮಥನದಲ್ಲಿ ತರುಣಿಯಾಗಿ ಅಸು ರರ ಮೋಹಿಸಿದ ಅಜರನು ಕಾಣಮ್ಮ10 ಬಾಲಶಶಿಯಂತೆ ಫಾಲಕಸ್ತೂರಿನಾಮ ಮೌಳಿ ಸುಳಿಕೇಶ ಬಾಲನಾರಮ್ಮಾ ಮೂಲೇಶನಾದ ಜಗನ್ನಾಥ ವಿಠ್ಠಲ ಮೂರ್ಲೋಕಾಧಿಪ ಶ್ರೀ ಗೋಪಾಲ ಕಾಣಮ್ಮ11
--------------
ಜಗನ್ನಾಥದಾಸರು
ಮಾರನಯ್ಯನ ಚದುರನ ತಂದುತೋರು ವೆಂಕಟರಮಣನ ಪ. ನಲ್ಲ ನುಡಿದರೆ ನುಡಿದರಗಿಣಿಯನು ನಾಚಿಸುವಚೆಲ್ವಮೊಗದಿ ಶಶಿಯನುಗೆಲ್ವ ಭಾರಿಯ ಸೊಬಗ ತೋರಿಫುಲ್ಲಬಾಣನ ಜರೆವನೊ 1 ಕಂಬನಿಯ ತೊಡೆದು ತನ್ನ ಮೊಗವಚುಂಬಿಸಲು ತರುಣಿ ತನ್ನ ಬಾಯತಾಂಬೂಲವನಿತ್ತು ಎನ್ನಮನ ದ್ಹಂಬಲ ಸಲಿಸಲು ಪೂರ್ಣ 2 ಇಂದೆನ್ನನಗಲಿದರೆ ಮನದಕುಂದು ಬಿಡಿಸುವನದಾರೆಇಂದುಮುಖಿ ಕರೆದು ತಾರೆ ಹಯವದನನಬಂದು ಬೇಗದಲಿ ಸಾರೆ 3
--------------
ವಾದಿರಾಜ