ಒಟ್ಟು 2492 ಕಡೆಗಳಲ್ಲಿ , 109 ದಾಸರು , 1416 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವೆ ಮಾಧವನೊಳು ಮಮತೆಯಿರಲಿ ತನು ಮನ ಧನಗಳು ತನವಾ ನೀಡಿದ ಮ್ಯಾಲೆ ಅನುದಿನ ಪೊರೆವ ಪ ಕಾಮ ಜನಕನು ಪ್ರೇಮದಿ ನೆನದರೆ ಮಾಮನೋಹರ ತನ್ನ ಧಾಮವ ಕೊಡುವ1 ಸಂತತ ನಿನ್ನನು ಚಿಂತಿಸುವಂ- ತೆನ್ನಂತ ಮಂಗಳ ಮತಿಯು ನೀಡು ನೀ ಮನವೆ 2 ಅಜಭವನುತ ವಿಜಯ ಸಖನ ಯಜಿಸುವ ಜನರಿಗೆ ನಿಜಪದವನೆ ಕೊಡುವಾ ವಿಜಯವಿಠ್ಠಲನಾ 3
--------------
ವಿಜಯದಾಸ
ಮನ್ನಿಸು ಮಾರಾರಿ ಮುದದಿಂದಲಿ ಎನ್ನ | ಯಿನ್ನು ದುರಿತಗಳನ್ನ ಹಾರಿಸಿ | ಎನ್ನನನುದಿನ ಪ ಅಮಿಶ್ರ ತತ್ವದಲಿ ಕಲಿ ವಿರಹಿತ ರುದ್ರ | ಹಮ್ಮಿನಿಂದಿತ್ತ ಸರ್ವವ ನೋಳ್ಪನೆ | ಬೊಮ್ಮನಾ ತತ್ವದಲಿ ಹೋಗಿಬರುವ ಪ್ರಬಲ್ಯ | ಉಮ್ಮೆಯರಸಾ ತಾಮಸ ಕಾರ್ಯದಧಿಪತಿ | ಒಮ್ಮೆ ಬಿಡದಲೆ ನರಹರಿಯ ನಾ | ಮಾಮ್ಮರತ ಮನದಲಿ ನೆನಸುವ ಸುಖದಿಂದಲಿ | ಅಮ್ಮಹಾ ವೈರಾಗ್ಯ ಭಾಗ್ಯವ | ಕಮ್ಮರದಿ ಕೊಡು ಕರುಣದಿಂದಲಿ 1 ನಂದಿವಾಹನ ನಾಗತಲ್ಪ ಕಲ್ಪಾಂತರ | ಚಂದಿರಮವ್ಯಾಳಿ ಚರ್ಚಕನಾಯಕ | ಕುಂದುಗೊರಳ ನೀಲಕಂಠಾಗಮನೈಯ್ಯ | ವಂದೀರೈದು ಸ್ಥಾನ ವಾಸವಾದ್ಯ || ಇಂದು ನಿನ್ನ ಪಾದದ್ವಂದ್ವ ನಂಬಿದೆ | ನಿಂದಕರ ಸಂಗತಿ ಸಂಗತಿಯಲಿಡದಲೇ | ಪೊಂದಿಸೋಮ ಜನರೊಳಗೆ ಎರ | ಡೊಂದುಪುರ ವಿನಾಶಾ ಈಶಾ 2 ನಿಖಿಳ ಶಾಂತ | ನಿಟಿಲನೇತ್ರ | ಮಂಗಳಾಂಗ ಶ್ರೀ ವಿಜಯವಿಠ್ಠಲನ | ಹಿಂಗದೆ ಮನದಲ್ಲಿ ನೆನೆಸುವರ | ಸಂಗಸುಖ ಸರ್ವದಾ ಸುಜನಪಾಲಕ | ಪೊಂಗರ್ಭಸುತ ಪತಿತ ಪಾವನ 3
--------------
ವಿಜಯದಾಸ
ಮನ್ಮನೋಹಾರಕ ಪ ರಾಮ ದಶರಥ ರಾಮ ಮಂಗಳನಾಮ ಶ್ರೀ ರಘುರಾಮ ಗುಣಗಣಧಾಮ ಸಜ್ಜನಪ್ರೇಮ ಹೇ ಜಯ ರಾಮ ಸೀತಾರಾಮ ರಘುವರ ಅ.ಪ ಕೂಡಲು ಕೋಪದಿ ಗೌತಮಮುನಿ ತರಳೆಯ ಶಪಿಸಿರಲು ಕಲ್ಲಾಗಿ ಬಿದ್ದಿರೆ ಪಾದಗಳ ರಜದಿಂ ಸುವಾರ್ತೆಯ ಕೇಳಿ ಬಂದಿಹೆ 1 ಗಿಡ ಮರವಲೆದು ತಂದು ಫಲಮೂಲಗಳನು ಒಡೆಯ ನೀ ಬರುವೆಯೆಂದು ಕೇಳುತ ತಾನು | ಬಡವರೊಡೆಯ ನೀನೆಂದರಿತು | ಕಡುಹಿತದೊಳೆಂಜಲ ಫಲಗಳುಣಿಸಲು| ಕೇಳಿ ಬಂದಿಹೆ 2 ಛಲದಲೋಡಿಸಿ ರಾಜ್ಯದಿ ಗೆಳೆಯ ಮಾರುತಿಯಿಂದಲರಿತು ಗಳಿಸಿದ್ವಾರ್ತೆಯ ಕೇಳಿ ಬಂದಿಹೆ 3 ಸತಿ ವರಪತಿವ್ರತೆ ಸೀತೆಯ ಪರಿಪರಿಯಿಂದಲಿರದೆ ದುರುಳ ರಾವಣನ ಭಂಗಿಸಿ ಹೊರದೂಡಲವ ನರಸಿ ನಿನ್ನಯ ಪರಮ ಪಾದಾಶ್ರಯವ ಬೇಡಲು ಪೊರೆದ ವಾರ್ತೆಯ ಕೇಳಿ ಬಂದಿಹೆ4 ಪರಮಪುರುಷ ನೀನೆಂದು ನಂಬಿದೆ ಸಿರಿಯರಸ ಪ್ರಭುವು ನೀನೆಂದು ಚರಾಚರ ಗುರುವು ಪ್ರಭುವು ನೀನೆಂದು ಇಂದು ತರಣಿ ಮಣಿ ಸಾರ್ವಭೌಮನೆ ಶರಣರಘ ಕೋಟಿಗಳ ಕಳೆವನೆ ಶರಣ ಬಂದಿಹೆನೆನ್ನ ಪಾಲಿಸದಿರುವರೇ ರಘುರಾಮ ವಿಠಲ 5
--------------
ರಘುರಾಮವಿಠಲದಾಸರು
ಮರವೆ ಮುಸುಕಿತುಋಣದ ಬಾಧೆ ಹತ್ತಿತು ರೋಗವಡಸಿತುಜನರ ಪ್ರೀತಿ ತೊಲಗಿತು ಜಾಣ್ಮೆ ತಾನು ಸಡಿಲಿತು... ದಿಯ ವಾಸ'ಲ್ಲವಾಯ್ತು ... ಮರೆ ದೂರವಾಯ್ತು 1ನಿನ್ನ ಸನ್ನಿಧಿಯ 'ುೀರಿ ಪುಣ್ಯವ ಬೇರೆ ಬಯಸಿದೆನೆನಿನ್ನ ಮೂರ್ತಿಯನುಳಿದು ಅನ್ಯರ ನೆನೆದೆರಗಿದೆನೆನಿನ್ನ ಸೇವೆಗಧಿಕವೆಂದನ್ಯದೇವರ ಸೇ'ಸಿಕೊಂಡೆನೆ 2ಸನ್ನಿಕರ್ಷವನಾದರತೆಯನ್ನು ಕೊಡುವದೆದೆಂದೆನೆ ಅರಿವೆನ್ನೊಳುದಿಸಿತೆ ದೂರನಾದೆನೇತಕೆಇನ್ನುದಾಸೀನಗೈದರೆ ಎನ್ನಿಂದಾಹುದೇನು ಬೇರೆಮನ್ನಿಸಿ ನೀನೊಂದಿರೆ ಸೈರಿಸಲಾರೆಂ 3ಪತಿತಪಾವನನು ನೀನು ಪರಮಕರುಣಾನಿಧಿ ನೀನು ಪತಿಕರಿಸಿ ಬಿಡುವದೇ ಪಾಪಿಯೆ ನಾನು ಸತತ ನಿನ್ನ ನೆನೆಯುವೆನು ಸೇವೆಗೆ ಕಾತರಿಸಿಹೆನು ಅತಿಶಯವ ತೋರಿಸು ಆ ನನ್ನನಿಧಿಯೆ ನೋಡಿನ್ನು 4ಕರೆದು ಮೂಢರಜ್ಞತೆಯ ಪರಿದು 'ಜ್ಞಾನ ಸುಧೆಯಎರೆದು ಕಾಯೆ ಚಿಕ್ಕನಾಗಪುರದೊಳು ನೀನೆಗುರುವರ್ಯ ವಾಸುದೇವಾರ್ಯ ಚರಣಕೆರಗಿದೆನಯ್ಯಾನಿರತ ಮಂಗಳಾರತಿಯಸಿರಿಯ ತೋರಿಸೊ ದಮ್ಮಯ್ಯಾ 5
--------------
ವೆಂಕಟದಾಸರು
ಮರವೆ ಮುಸುಕಿದುದುತಾ ಪರಮ ಕೃಪೆವಂತ ಬಂದು ಪ್ರಳಾಪವೇನಿದುಯೆಂದು ನನ್ನಯತಾಪವನು ತಂಪಿಸುತ ಬಿಗಿಯಪ್ಪಿದನು ದೇಶಿಕನು 1ಕಂಗಳೊಳಗಾನಂದಜಲ ಸುರಿದಂಗದೊಳು ರೋಮಾಂಚವಾಗಿಯೆಮಂಗಳಾಕೃತಿಗಂಡು ಚರಣಕ್ಕೆರಗಿದೆನು ಮರಳಿಕಂಗಳೊರತೆಯ ತೊಡೆದು ದಿವ್ಯ ಕರಂಗಳಿಂದಲಿ ಶಿರತಡ' ಸರ್ವಾಂಗವನು ಬಿಗಿಯಪ್ಪಿಯಭಯವನಿತ್ತ ದೇಶಿಕನು 2ನಿನ್ನೊಳಾನಿಹೆನೆಲ್ಲಿ ಪೋಪೆಡೆಯನ್ನು ತೋರಿಸು ನನಗೆ ನೀನಾರೆನ್ನ ಮನ ನಿನ್ನುವನುಳಿದು ನಿಲಬಲ್ಲುದೇ ಮಗನೇಇನ್ನು ಧೈರ್ಯವ ಮಾಡು ಗಿರಿಗುಹೆಯನ್ನು ಸೇರ್ವೆನು ನಾನು ಜನತತಿಯನ್ನು ಹೊದ್ದುವದಿಲ್ಲವೆಂದುಸುರಿದನು ದೇಶಿಕನು 3ಇರಿಸಿರುವೆನೀ ಪಾದುಕೆಗಳನು ಹರುಷದಿಂದರ್ಚಿಸುತ ಭಾ'ಸುಬರಿಯ ಭ್ರಾಂತಿಯ ಬಿಟ್ಟು ಭಕ್ತಿಯ ಬಲದಿ ಮಂತ್ರವನುನಿರುತ ಜಪಿಸುತ್ತಿರು ಯಥೇಚ್ಛೆಯೊಳರಿವು ಸುಖಸಂಪತ್ತಿ ಲಭಿಪುದುಪರಮ ಭಕತನು ನೀನೆನುತ ವಾಚಿಸಿದನು ದೇಶಿಕನು 4'ಜಯದಶ'ುಯ ದಿವಸ ಲಭಿಸಿತು 'ಜಯಕರ ಮುಂದಿನ್ನು ನಿನಗೆಲೆದ್ವಿಜನೆ ಸುತ ಪೌತ್ರಾದಿ ಕುಲಪಾರಂಪರೆಗೆ ನಿನ್ನಾಸುಜನತೆಯ ಕರುಣಿಪುದು ಭಕ್ತವ್ರಜದೊಲೋಲಾಡುವದು ತಪ್ಪದು'ಜಯಸಾರಥಿ ನಿನ್ನ ವಶವೆಂದನು ಗುರೂತ್ತಮನು 5ಅನಿತರೊಳು ಜನಸಂದಣಿಯ ಧ್ವನಿಯನು ತಿಳಿದು ನಾನೆದ್ದೆ ಬೇಗದಿಘನಕೃಪಾನಿಧಿ ಗುರುವ ಕಾಣದೆ ಮತ್ತೆ ಬಳಲಿದೆನುಇನನುದಿಸಿದೊಂದರೆಘಳಿಗೆ ತಲೆಯನು ಬಿಡದೆುದ್ದಲ್ಲಿ ಪಾದುಕೆಯನು ಶಿರದಿ ತಾಳಿದೆನು ಮನೆಗೈದಿದೆನು ಹರುಷದಲಿ 6ತಿರುಪತಿಯ ವೆಂಕಟನು ಸುಖವನು ಕರುಣಿಸಲು ದೇಶಿಕನ ತನುವನುಧರಿಸಿ ಪಾದುಕೆುತ್ತು ಸಲ'ದನೊಲಿದು ಕೃಪೆುಂದಹರುಷದಿಂದೀ ದಿವಸ ಶ್ರೀ ಗುರುವರನ ಪೂಜಾಕಾರ್ಯವೆನಿಪುದುನಿರುತ ಭಜಿಸುವರಿಂಗೆ ಸಕಲೇಷ್ಟಾರ್ಥ ಸಿದ್ಧಿಪುದು * 7
--------------
ತಿಮ್ಮಪ್ಪದಾಸರು
ಮರುಗದೇ ನಿಂತಿಹುದೆ ಮನವು ನಿನ್ನಾಅರಿಯದಪರಾಧ ತಾನಳಿಸುತಿರಲೆನ್ನ ಪನೆರೆಯವರ ಮೈಸಿರಿಯ ನೋಡಿ 'ರಿಯರ ನಡೆಯಮರೆತು ಧನದಲಿ ಮತಿಯನಳಿದೆಯಾಕರಕೊಂಡು ನರತತಿಯ ಕೆಣಕಿುವರ ಸಹನೆಯಪರಿಪಾಕದಿಂ ನೋಡಿ ಬಂದ ಪೀಡನೆಯ 1'ತವರೆಂಬಂತಿರುವ 'ಂಸೆಯನಾಳೋಚಿಸುತ ಜೊತೆಯೊಳಾರೋಗಿಸುತ ಜಾರಿ ನಿಲ್ಲುತಸತಿ ಸುತಾದ್ಯರ ಭೋಗಸಾಧನವ ಕೆಡಿಸುತ್ತಪತಿತರಿಂದರಸುತ್ತ ಪಿಡಿಸಲು[ಕಾ]ಯುತ 2ಪಾದುಕಾರ್ಚನೆಯನ್ನು ಪಾಲಿಸಿದ ಬಗೆಯನುಬೋಧಿಸುತ ಚಿತ್ತವನು ಬೆದರಿಸುವದೆನೀ ದಯಾಸಾಗರನು ನೀಚರುಪಹತಿಯನುಸಾದರದಿ ಬಿಡಿಸಿನ್ನು ಸಾಕು ಮುನಿಸನು 3ಕಾಲ ದೇಶವ ಕಂಡು ಕಾಪಥವ ಕೈಕೊಂಡುಬಾಳಿದರಳು ಕೂತುಂಡು ಭಕ್ತಿ ಮುಂಕೊಂಡುಊಳಿಗವ ಬೆಸಗೊಂಡು ಊರೊಳಗೆ ತಿರುಕೊಂಡುಬಾಲ ಇರಲರಿದಾಡುಬಡಿಯೆ 'ಡುಕೊಂಡು 4ಮಂಗಳಾರ್ತಿಯ ಸೇವೆ ಮಾಣುತಿಹುದೇಗೈವೆಕಂಗಳಿಗೆ ನೀ 'ಭುವ ಕಾಣಿಸಿದೆ ಸುಖವೆತಿಂಗಳೆನಿತಾದರುವೆ ತಿರಿದೂಳಿಗಕೆ ತರುವೆಸಂಗಿನವರೊಳಗಿರುವೆ ಸತತವೆಲೆ ಗುರುವೆ 5ತಪ್ಪಿಗನುಸಾರವಾಗಿ ತಿಳಿಯೆ ಶಿಕ್ಷಿಪೆಯಾಗಿಒಪ್ಪದ ಪದವ ನೀಗಿಪೊಳಿತಾಗಿತೆಪ್ಪಗೂಳಿಗಕಾಗಿ ತಗುಲಿಸುವೆ ನೀನಾಗಿಸುಪ್ರಸನ್ನತೆಯಾಗಿ ಸುಖಬಡುವರಾಗಿ 6ದುರುಳರಹುದಹುದಿವರು ದೂರಿಗೊಳಗಾದವರುಚರಣಾಬ್ಜ ಸೇವಕರು ಚಾರುಮತಿಯವರುದುರಿತ ಶತವಡಿಸಿದರು ದಾಟುವರು ನಿನ್ನವರುಕರುಣಾಬ್ಧಿ ನೀನಿದಿರುಗಾಣೆ ಸುಖಮಯರು7ಸೆರೆಯ ಪರಿಹರಿಸಿನ್ನು ಸುಖಿಸು ಸದ್ಭಕ್ತರನುಗುರು ಸುತರ ಚರಣವನು ಕಂಡು ಬದುಕುವೆನುಬರಿದೆ ಬೇಡುವೆ ನಾನು ಪಾಲಿಸುವ 'ಭು ನೀನುಶರಣಾಗತಪ್ರಿಯನು ಶಾಂತಿದಾಯಕನು 8ಧರೆಯ ಜನರಜ್ಞತೆಯ ದ'ಸಿ ನಿಜ ಸದ್ಗತಿಯಕರೆದೀವ ಗುರುರಾಯ ವಾಸುದೇವಾರ್ಯಕರುಣ ನಾಗನಗರಿಯ ಸ್ಥಿರಗೈದು ಸುವಸತಿಯಒರೆದೆ ಭವ'ಜಯ ವೇದಾಂತಪದ್ಧತಿಯ 9
--------------
ವೆಂಕಟದಾಸರು
ಮರೆತೆಯೆನೋ ರಂಗಾ ಮಂಗಳಾಂಗತುರು-ಕರ ಕಾಯ್ವಲ್ಲಿ ತೊಂಡನಾಗಿದ್ದೆನ್ನ ಪ ಕೋಲು ಕೈಯಲ್ಲಿ ಕೊಳಲು ಜೋಲುಗಂಬಳಿ ಹೆಗಲಮ್ಯಾಲೆ ಕಲ್ಲಿ ಚೀಲ ಕೊಂಕಳಲ್ಲಿಕಾಲಕಡಗವನಿಟ್ಟು ಕಾಡೊಳಿಹ ಪಶುಹಿಂಡಲಾಲಿಸುವ ಬಾಲಕರ ಮ್ಯಾಳದೊಳಗಿದ್ದೆನ್ನ1 ಮಣಿ ಕÀವಡÉಯನು ಕಾಡೊಳಿಹ ಗುಲಗಂಜಿಸಲ್ಲದೊಡವೆಯ ನೀನು ಸರ್ವಾಂಗಕೆಅಲ್ಲೆಸೆಯೆ ಧರಿಸಿ ನವಿಲಗರಿಗಳ ಗೊಂಡೆಅಲ್ಲಿ ಗೊಲ್ಲರ ಕೂಡ ಚೆಲ್ಲಾಟ ಮಾಡುತಲಿ 2 ಸಿರಿದೇವಿ ಬಂದು ಸೇರಿದ ಬಳಿಕ ಲೋಕದಲಿಸಿರಿ ಅರಸನೆಂದು ಸೇವಕರರಿವರೋಶರಣಾಗತರ ಪೊರೆವ ಶ್ರೀರಂಗವಿಠಲಯ್ಯನರಸಿಂಗ ನೀನಿರುವ ಪರಿಯು ಮುಂದಿನ ಸಿರಿಯು3
--------------
ಶ್ರೀಪಾದರಾಜರು
ಮರೆಯದಿರು ಮರೆಯದಿರು ಮನುಜಾನಾರಾಯಣನ ಸ್ಮರಣೆಯನು ಮಾಡು ಮನುಜಾ ಪ ಸತಿ ಬಣಗು ಹೆಣ್ಣುಗಳೇಕೆಮಂಗಳಾತ್ಮಕನಿರಲಿಕ್ಕೆ ಪರದೈವವೇಕೆ 1 ಹಾಲು ಹಳ್ಳವಿರಲಿಕ್ಕೆ ವಾಳಿಯವ ತರಲೇಕೆಮೇಲು ನಾಮವಿರಲಿಕ್ಕೆ ಕಟುಕು ಇನ್ನೇಕೆಬಾಲ ಹನುಮನಿರಲಿಕ್ಕೆ ಹುಲು ಕಪಿಗಳೇಕೆಒಳ್ಳೆ ತುಳಸಿ ಇರಲಿಕ್ಕೆ ಕಗ್ಗೊರಲೆಯೇಕೆ 2 ಚಿನ್ನದ ಗಿರಿಯಿರಲಿಕ್ಕೆ ಕಬ್ಬಿಣದ ಮೊರಡಿಯೇಕೆರನ್ನ ಮಾಣಿಕವಿರಲಿಕ್ಕೆ ಕಾಜಿನ ಹರಳೇಕೆಅನ್ನ ತುಪ್ಪವಿರಲಿಕ್ಕೆ ಮದ್ಯಪಾನಗಳೇಕೆಚೆನ್ನಾದಿಕೇಶವನಿರೆ ಬಿನುಗು ದೈವಗಳೇಕೆ3
--------------
ಕನಕದಾಸ
ಮರೆಯದೆ ನೆನೆ ಚಿನ್ಮಯನ ಹರಿನಾರಾಯಣ ಅಚ್ಯುತನ ಪ ಮಗಳ ತಾನೆ ಮದುವೆಯಾದವನಮಗಳ ಮಗನ ಮೊಮ್ಮಗನಮಗಳ ಗಂಡನ ಮೇಲೆ ಮಲಗಿದ ಜಾಣನಮಗಳ ಮಾವನಿಗೆ ಮೈದುನನ1 ತಂದೆಗೆ ತಾನೆ ತಂದೆಯಾದವನ ತಂದೆಗೆ ತಾಯಿಯ ತಂದವನತಂದೆಗೆ ಪೂರ್ವದಿ ತಾ ಪುಟ್ಟಿಹನತಂದೆಗೆ ತಂದೆಗೆ ತಂದೆಯಹನ 2 ರಾಮನ ಸಮರೋದ್ಧಾಮನ ಸುಗುಣಾಭಿರಾಮನ ಸೀತಾನಾಯಕನರಾಮನ ಪೆತ್ತನ ಕಮಲದಳಾಕ್ಷನಪ್ರೇಮದಿ ನೆಲೆಯಾದಿಕೇಶವನ3
--------------
ಕನಕದಾಸ
ಮರೆಯುವರಾರೆ ಶ್ರೀ ಮುರಳೀಧರನ ಕಂಡು ವರವ ಬೇಡದವರಾರೆ ಪಡೆಯದವರಾರೆ ಪ ಮುರಳೀದನಿಯ ಕೇಳಿ ಪರಿದೋಡದವರಾರೆ ಅವನೆಡೆ [ಪರಮಸುಖ] ಪಡೆಯದವರಾರೆ ಅ.ಪ ಕಂಜನಾಭನು ಬಂದು ಪುಂಚವನದಿ ನಿಂದು ಮಂಜುಳಗಾನವ ಮಾಡುತಿರೆ ಅಂಜುವರೇನೆ ನಿರಂಜನನವ ಪಾಪ ಭಂಜಕನೇ ತಂಗಿ ಹೋಗೋಣ ಬಾರೆ 1 ಮಂಗಳಮೂರ್ತಿ ಮಾತಂಗವರದ ಭವ ಭಂಗನ ಚರಣವ ನೋಡುವ ಬಾರೆ ಮಂಗಳ ಜಯ ಜಯ ಮಂಗಳ ಮಾಂಗಿರಿ ರಂಗಗೆ ಶುಭವೆಂದು ಪಾಡುವ ಬಾರೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಲಗು ಮಲಗಮ್ಮ ತಾಯೆ ಶ್ರೀಹರಿಯ ಜಾಯೆ ಮಲಗು ದುಗ್ಧಾಬ್ಧಿನಿಲಯೆ ಸಾಗರನ ತನಯೆ ಜೋ ಜೋ ಪ ಇಂದಿರೆಯೆ ಹರಿ ನಿನ್ನ ಅಂದವನು ನೋಡಿ ಮಂದರಧರ ತನ ವಕ್ಷದಿ ಮಂದಿರವ ಮಾಡಿ ಚಂದದಿ ಮುದ್ದಿಪನು ಗೋವಿಂದ ನಲಿದಾಡಿ ಮಂದಸ್ಮಿತನಾಗಿ ತಾ ನಿಂದಿರುವ ನಿನ ಕೂಡಿ 1 ಮೂರುಕಣ್ಣ ಮೋಹಿಸಿದನೇನೆಂಬೆನಾಗ ಮಾರಮಣನು ಸ್ತ್ರೀ ವೇಷಧರಿಸಿದಾಗ ಆ ರಮೇಶ ಮರುಳಾದನಮ್ಮ ನಿನಗೀಗ ನೀರೆ ನೀ ಮಲಗು ನಿಶ್ಚಿಂತಳಾಗಿ ಬೇಗ 2 ಪನ್ನಗಾರಿಧ್ವಜಗೆ ಛತ್ರ ಚಾಮರವಾದಿ ಉನ್ನಂಥ ವಸ್ತ್ರ ಆಭರಣಗಳು ನೀನಾದಿ ಅನ್ನಪಾನಾದಿಗಳಿತ್ತು ತೃಪ್ತಿಪಡಿಪಳಾದಿ ನಿನ್ನಂತೆ ಸೇವಿಪರ್ಯಾರು ಮೂರು ಭುವನದಿ 3 ಏನು ಸುಕೃತಗೈದಿದ್ದೆ ನಾ ಕಾಣೆನಮ್ಮಾ ಜಾಣೆ ನಿನಗೆಣೆಯ ಕಾಣೆ ಜನನಿ ಕೇಳಮ್ಮಾ ತಾನೆ ತನ್ನಲ್ಲಿ ರಮಿಪನಲ್ಲವೇನಮ್ಮಾ ದಾನವಾಂತಕನು ನಿನ್ನ ಕೈಪಿಡಿದನಮ್ಮಾ 4 ಮಂಗಳಾಂಗಿಯೆ ನಿನಗೆ ಸರಿಸಮರ್ಯಾರಿಲ್ಲ ಭೃಂಗಕುಂತಳೆ ಕೈ ಜೋಡಿಪರು ಸುರರೆಲ್ಲ ಬಂಗಾರದ ಮಂಚವಣಿಯಾಗಿಹುದಲ್ಲ ರಂಗೇಶವಿಠಲ ತಾ ಪವಡಿಸಿರ್ಪನಲ್ಲ 5
--------------
ರಂಗೇಶವಿಠಲದಾಸರು
ಮಹದೇವ ಮದ್ರೋಗ ಮೂಲವಳಿಯೊ ಪ ಮಹದಾದಿಗಳ ದೈವ ಹರಿಯಲ್ಲಿ ರತಿ ನಿಲಿಸಿ ಅ.ಪ. ಸರ್ವಸಿದ್ಧನೆ ವಿಷಯ ಪರ್ವತಕೆ ಮಹಕುಲಿಶ ಕಮಲ ಭೃಂಗ ಮರ್ವೆಂಬ ಮಾರಿಯನು ಅವಳ ನೇತ್ರದಿ ಸುಟ್ಟು ಸರ್ವಾತ್ಮ ಹರಿಧ್ಯಾನಮಗ್ನ ಮನ ನೀಡೆನಗೆ 1 ತಾಳಲಾರೆನೊ ಸ್ವಾಮಿ ಕಾಳ ವಿಷಯದ ದೋಷ ಫಾಲಾಕ್ಷ ಬಿಡಿಸೈಯ್ಯ ಭೋಗದಾಸೆ ಶೀಲ ಮನದಲಿ ಹರಿಯ ಲೀಲೆ ಲಾವಣ್ಯಗಳ ಮೇಲಾಗಿ ನೋಡುವ ಮಹಕರುಣ ಮಾಡೆನ್ನ 2 ಭಾರತೀಶನ ಪಾದಕಮಲ ಮಧುಪನೆ ನಿನ್ನ ಕಾರುಣ್ಯವಾದವನೆ ಶೌರಿವಶನೊ ಮಾರಾರಿ ಮದ್ಭಾರ ವಹಿಸಿ ಪಾಲಿಸು ಎನ್ನ ಧೀರ ತವ ಚರಣಾಬ್ಜ ವಾರಿಜಕೆ ಮೊರೆ ಹೊಕ್ಕೆ 3 ಎನ್ನ ಹೀನತೆ ನೋಡಿ ಘನ್ನ ಭಯಗೊಂಡಿಹೆನೊ ಧನ್ಯರ ಮಾಳ್ಪ ದಯ ನಿನ್ನದಯ್ಯಾ ಪುಣ್ಯತಮ ಮೂರುತಿಯ ಪ್ರತಿಬಿಂಬ ಹರಿಸಖನೆ ಧನ್ಯನಾ ಮಾಡೆನ್ನ ವಿಷಯ ಜಯ ದಯಮಾಡಿ 4 ಅಮಿತ ಮಂಗಳದಾಯಿ ವಿಭವ ವಾಮದೇವ ಮಮತಾದಿ ಅಭಿಮಾನ ದೋಷವರ್ಜಿತ ಮಹಾ ಸಾಮ್ರಾಜ್ಯ ಯೋಗಕ್ಕೆ ಅಧಿನಾಥ ಕರುಣಿಪÀುವುದು 5 ಶಂಭು ಶಂಕರ ತವ ಪದಾಂಬುಜದಿ ಶಿರವಿಟ್ಟು ಹಂಬಲಿಪೆನಿಷ್ಟಪದ ಪಾಲಿಸೆಂದು ತುಂಬಿತ್ವಕ್ಕರಸನ ಹೃದಂಬುಜದೊಳರಳಿಸಿ ಮೂರ್ತಿ ದರುಶನ ನೀಡೊ 6
--------------
ಜಯೇಶವಿಠಲ
ಮಹಾಲಕ್ಷ್ಮಿ ಏನಂತಿ ಕಮಲನಾಭನ ಪ್ರಿಯಳೆ ಜಗ- ದಾನಂತ ಪದುಮನಾಭನ ಭಾರ್ಯಳೆ ಪ ಸಿರಿ ಎನ್ನ ಮೊರೆ ಕೇಳೆ ಸಿದ್ಧವಾಗೆನಗ್ಹೇಳೆ ಶುದ್ಧ ಮಾರ್ಗವ ತೋರೆ ಬುದ್ಧಿಪೂರ್ವಕವಾಗಿ ಭುವನದೊಡೆಯನ ಪಾದ- ಪದ್ಮದಲ್ಲಾಸಕ್ತೆ ಬುದ್ಧಿ ಕೇಳುವೆ ಶಾಂತಿ1 ಜನಕಾತ್ಮಜಳೆ ನೀ ಜಗದೇಕ ಸುಂದರಿ ಜಗದಾಧಿಪತಿ ವಕ್ಷಸ್ಥಳ ಆಶ್ರಯಳೆ ಕೃತಿ ಸರ್ವಮಂಗಳಕಾರಿ ಪರಮ ಕರುಣದಿ ನೋಡೆ ವರಲಕ್ಷ್ಮಿ ದಯಮಾಡೆ ವರಗಳನೀಡ್ಯಾಡೆ 2 ಭೀಷ್ಮಕನ ಪುತ್ರಿ ಬಿರುದೇನೆ ಸರಸಿಜನೇತ್ರೆ ಮೃಡ ಬ್ರಹ್ಮರೊಡೆಯ ಭೀಮೇಶಕೃಷ್ಣನ ಮಿತ್ರೆ ಪೊಡವಿಗಧಿಕಳೆ ಜಯ ಮೂಡಲಗಿರಿವಾಸಿ ಬಿಡದೆ ಕೈ ಹಿಡಿದೆನ್ನ ಕಡೆಹಾಯ್ಸೆ ಕಮಲಾಕ್ಷಿ 3
--------------
ಹರಪನಹಳ್ಳಿಭೀಮವ್ವ
ಮಹಾಲಕ್ಷ್ಮೀದೇವಿ ಅಂಗನೆ ರುಕ್ಮಿಣಿ ಮಂಗಳ ಪೀಠಕೆ ಸಂಗ ಸಖಿಯರು ಕರೆವರಲೆ ಮಂಗಳ ಸುವೇಣಿ ಜಾಣೆ ಬಾರಮ್ಮ ಹಸಗೆ ಕರೆದರು ಪ ಕಮಲ ಮುಖಿಯರು ಕರೆಯುವರೆ ಕಮಲ ಬಾರಮ್ಮ ಹಸೆಗೆ ಕರೆದರು 1 ಬಾರೆಂದು ಕರೆಯುವರು ಹಸೆಗೆ ಕರೆದರು 2 ನೋಡುತ್ತಲಿರುವನು ದಯಮಾಡು ಹಸೆಗೆ ಕರೆದರು 3
--------------
ಬಾಗೇಪಲ್ಲಿ ಶೇಷದಾಸರು
ಮಳೆಯ ಪಾಲಸಯ್ಯ ಮಂಗಳ- ನಿಳಯ ಪಾಲಿಸಮ್ಮ ಪ ಬಿನೆಯೊಳು ಮಳೆಯನು ತಳೆಯದೆ ತೃಣಗಳು ಬೆಳೆಯದ ಗೋವುಗಳಳವುವಯ್ಯ ಅ.ಪ ಗೋವಿಪುರ ಕುಲವ ಕಾಯುವ ದೇವನು ನೀನಲ್ಲವೇ ಮೇವುಗಳಿಲ್ಲದೆ ಗೋವುಗಳೆಲ್ಲವು ಸಾವುವು ನಿನ್ನೊಳಿದಾವನು ಕಾವನು 1 ಕರೆಯೊಳು ನೀರಿಲ್ಲ ಬಾವಿಗ- ಳೊರತೆಯ ಸೋರಿಲ್ಲ ತುರುಗಳು ಜೀವನದಿರವನು ಕಾಣದೆ ಹರಣವ ಬಿಡವುವು ಕರುಣದಿ ಬೇಗನೆ 2 ಬಲರಿಪುಖತಿಯಲಿ ಬಾಧಿಪೆ ಜಲಮಯ ರೀತಿಯಲಿ ಚಲಿಸದೆ ಕೊಡೆವಿಡಿದಳುಹಿದೆ ಕರದೊಳು ಚಲವನು ಗೋವ್ಗಳ ಬಳಗವನೀಗಳು 3 ಜಲನಿಧಿ ಕೃತ ಶಯನ ಶಾರದ ಜಲರುಹದಳನಯನ ಜಲಜರ ಮೂರುತಿ ಜಲಜಕರಗಳು ಜಲದಾಗರದಿಂ 4 ದಾರಿಯ ಜನರೆಲ್ಲ ಬಹು ಬಾ- ಯಾರಿ ಬರುವರಲ್ಲ ದೂರಗಿಂ ತಂದಿಹ ನೀರನು ಲೋಭದಿ ನಾರಿಯರೆಲ್ಲ ವಿಚಾರಿಸುತಿರ್ಪರು 5 ಬೆಳೆದಿಹ ಸತ್ಯಗಳು ಬಿಸಿಲಿನ ಜಳದಲಿ ಬಾಡಿಹುವು ನಡಿನ ನಯನ ನಿನ್ನೊಲುಮೆಯ ತೋರಿಸಿ ಘಳಲನೆ ಪೈರುಗಳಳಿಯುತ ತೆರದೊಳು 6 ಕರುಣಾನಿಧಿಯೆಂದು ನಿನ್ನನು ಶರಖಹೊಕ್ಕೆನಿಂದು ಶರಣಭರಣ ಪುಲಿಗಿರಿಯೊಳು ನೆಲೆಸಿಹ ವರದ ವಿಠಲ ದೊರೆ ವರದ ದಯಾನಿಧೆ 7
--------------
ವೆಂಕಟವರದಾರ್ಯರು