ಒಟ್ಟು 7318 ಕಡೆಗಳಲ್ಲಿ , 132 ದಾಸರು , 4469 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾಕರ ದೇವಾ ಶೀತಾ ಚರನೋಕೆ ಕೇಶವಾ ಪ ಪಾತಕಾರಿ ವೋಂ ಪ್ರಸನ್ನಹನುಮನೆ ಪ್ರೀತಿಯೊಳಿರಿಸೆನ್ನಂ ನುತಿಸುವನಾ ನಿನ್ನಂ ಶರಣಂ 1 ಲಂಕಾಪುರದೀ ಕಿಂಕಿಣಿಧಾರಿ ಲಂಕಿಣಿಕೆ ಸಂಹಾರಿ ವಾಹನ ಹೌರ ಬ್ರಹ್ಮಚಾರಿ ಶರಣ ಕರು 2 ಪರಾಂಧಮ ತುಮ ಪ್ರಹ್ಲಾದಾರ್ಚಿತ ಪರಂದೇಹಿ ಸನ್ನಾಸಿ ಗೀರ್ವಾಣಭಾಷಿ | ಶರಣಂ 3
--------------
ಚನ್ನಪಟ್ಟಣದ ಅಹೋಬಲದಾಸರು
ಕರುಣಾಕರ ಧರಣೀಧರೇಂದ್ರ ಪ ದಶರಥಸುಪುತ್ರ ಶಶಧರ ಸುವಕ್ತ್ರ ಪಶುಪತಿಮಿತ್ರನೆ ಪೊರೆಯೊ ಎನ್ನನು 1 ವನರುಹದಳಾಕ್ಷ ದನುಭುಜವಿಪಕ್ಷ ಮುನಿಜನ ಸುರಕ್ಷ ರಕ್ಷಿಸೆನ್ನನು ದೇವನೆ 2 ಸುರಜನ ಸುಪೋಷ ಖರಹರ ಸುರೇಶ ನಿರತವು ನಾ ನಿನ್ನ ನಮಿಸುವೆನೈ ಹರೇ 3 ದಾನವಖಂಡನ ಧೇನುಪುರೀಶನೆ ಮಾನವ ಪುಂಗವ ದೇವನೆ ಪೊರೆಯೈ 4
--------------
ಬೇಟೆರಾಯ ದೀಕ್ಷಿತರು
ಕರುಣಾಕರಾ ಕಮಲಾರಮಣ ಕರಿರಾಜ ಬಂಧನ ಹರಣಾ ಸುರ ಬ್ರಹ್ಮ ಮುಖಾರ್ಚಿತ ಚರಣಾ ಶರಣಾಗೆಲೋ ದೀನೋದ್ಧರಣಾ ಪ ಅತಿಸುಂದರ ನಂದ ಕುಮಾರಾ ಸುತ ನಾಗೈ ತಂದನು ಮಾರಾ ಅತನೇ ಕುಸುಮದ ಶರೀರಾ ಸುತ ಸದ್ಗುಣ ಗಣ ಮಂದಾರಾ ಪ್ರತಿಯುಗದಲಿ ಧರಿಸೈವತಾರಾ ಕ್ಷಿತಿಯೊಳು ಪಾಲಿಪ ಸುರನಿಕರಾ 1 ಜಲಧಿ ಯೊಳಗೆರಡು ರೂಪಾದೆ ಸಲೆ ವೇದಾಮೃತವನು ತಂದೆ ಬಲಿದೀ ಕ್ರೂರಾಂಗವ ವಿಡಿದೆ ಇಳೆಸಲೆ ಪ್ರಲ್ಹಾದರ ಹೊರೆದೆ ನೆಲೆ ಪ್ರಥಮಾಶ್ರಮದಲಿ ನಿಂದೇ ಬಲಿ ಜಮದಗ್ನ್ಯರ ತೋಷಿಸಿದೆ 2 ಎರಡನೆ ವರ್ಣದೊಳಗೆ ಜನಿಸಿ ಸುರ ಪಾಂಡವರೇಳಿಗೆ ಬಲಿಸಿ ನೆರೆ ಅಂತ್ಯಯುಗದಿ ಅವತರಿಸಿ ಪುರಹರ ದ್ವಿಜರಭಿಮತ ಸಲಿಸಿ ಗುರು ಮಹಿಪತಿ ಪ್ರಭು ಕರುಣಿಸಿ ಹೊರಿಯೋ ನಿನ್ನೆಚ್ಚರ ನಿಲಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕರುಣಾದಿ ಪೊರೆಯನ್ನ ಪಾರ್ವತೀರಮಣ ಪುರಹರನೆ ಕರುಣಿಪುದೆಮಗೆ ಸುಜ್ಞಾನ ಈ ಪ ಧರಣಿಯೊಳು ಗೂಗಲ್ಲು ಕ್ಷೇತ್ರ ಸುಮಂದಿರನೆ ನಿನ್ನ ಅನುದಿನ ಅ.ಪ ದುರಿತ ಗಜ ಪಂಚಾಸ್ಯ ಕರಮುಗಿವೆ ನೆರೆನಂಬಿನಿನ್ನನು ಶೇವಿಸುವ ಶರಣರಿಗೆ ಸುರತರುವೆ ಜನಿಸಿರುವರೊಳು ಸರ್ವರಿಗೆ ಮನದಲಿ ಪ್ರೇರಿಸುವ ಗುರುವೆ ಗೂಗಲ್ಲಪ್ರಭುವೆ 1 ಭಾಗವತಸು ತಿಳಿಸೆನ್ನ ಮನಕೆ ಜಿತ ಮನೋಜಾತ 2 ಪರಿಪಾಲಿಸಲು ಶಿವನೆ ರಾಜಿಸುವ ಕೃಷ್ಣಾಕೂಲದಲಿ ನಿಂದಿರುವಿ ಶಂಕರನೇ ಜನಮೇಜಯಾಖ್ಯ ಪಾದ ಸುವಿಶಾಲ ಮಹಿಮನೇ 3 ನೀಡಿದೆಯೊ ಗೌತುಮ ಮನಮಂದಿರದಿ ಗೋ- ವಿಂದನಂಘ್ರಿಯ ಕಾಂಬುವೊ ಬಗೆಯ ತೋರೆನಗೆ ಜೀಯ4 ಶ್ರೀಶ್ವೇತಗಿರಿ ಸುಕ್ಷೇತ್ರ ಪಂಚ ಕ್ರೋಶಗನು ನೀನೆ ಸರ್ವೇಶ ಕಾರ್ಪರ ವಾಸಸಿರಿ ನರಕೇಸರಿಗೆ ಪ್ರಿಯನೇ ದುರ್ವಿಷಯದಲಿ ಅಭಿಲಾಷೆ ಪುಟ್ಟಿಸದಂತೆ ಶಶಿಧರನೆ ಸಿರಿವ್ಯಾಸಕುವರನೇ5
--------------
ಕಾರ್ಪರ ನರಹರಿದಾಸರು
ಕರುಣಾಮೃತವ ಸಿರದಿ ಸುರಿಯೊ ವರದ ಧನ್ವಂತರಿಯೆ ಚರಣಯುಗಳ ಕಮಲವನ್ನು ಕರುಣಿಸೆನಗೆ ದೊರೆಯೆ ಪ. ಶ್ರವಣ ನಯನ ಚಿತ್ತ ಜಿಹ್ವೆಗನುಕೂಲವಾಗಿರುವ ಲೀಲಾ ಪ್ರವರ ಕಾಂತಿ ಸ್ಮರಣ ನಾಮಗಳನು ಪಾಲಿಸಿ ಭವಜನೀತ ಭ್ರಮಣ ನಿಲಿಸಿ ಕುವರನಂತೆ ರಕ್ಷಿಸೆನ್ನ ಕವಿಭಿರೀಡ್ಯ ಕಂಜಜಾತಶಿವರ ಸೌಖ್ಯಗೊಳಿಸದವನೆ 1 ಕಲಿಕೃತ ಕಲ್ಮಶಗಳಿಂದ ಬಳಲುವಂಥ ಬಾಧೆಯನ್ನು ನಿಲಿಸಿಕೊಳ್ಳಲು ಅನ್ಯಮಾರ್ಗಂಗಳನು ಕಾಣೆನು ನಳಿನನಾಭ ನಿನ್ನ ಪಾದಗಳನೆ ನಂಬಿಕೊಂಡಿರುವೆನು ಬಲಿಯ ಕಾಯ್ವ ಭೂಮಿಜೇಶ ಘಳಿರನೆ ಬಂದೊದಗಿ ಬೇಗ 2 ನಿಖಿಳ ಭೋಗಗಳನನುಭವಿಸುತ ಶ್ರೀಗುರು ಮಧ್ವಾಂತರಾತ್ಮ ನಾಗಗಿರಿನಾಥ ರಾಗ ರೋಗ ದೋಷಗಳನು ನೀಗಿ ನಿನ್ನ ನಂಬಿ ಸ್ತುತಿಪ ಭಾಗವತರ ಭಕ್ತನೆನಿಪ ಭಾಗ್ಯವಿರಿಸೋ ಭೀಮವರದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಾರ್ಣವ ಶ್ರೀ ಗುರುವರ ಕರುಣಿಸೊ ನೀ ಎನ್ನ ಕರುಣಾಗತ ರಕ್ಷಾಮಣಿ ತವ ಚರಣಾಂಬುಜ ತೋರಿನ್ನ ಪ ಆನತಜನತತಿಜ್ಞಾನದ ಎನ್ನ - ಙÁ್ಞನವ ಕಳೆದಿನ್ನ ಮಾನದಿ ಸಲಹೆನ್ನಾ 1 ಕಾಮಿತ ಫಲಪ್ರದ ಕಾಮ್ಯಾರ್ಥವನೂ ಕಾಮಿಪ ಜನಕಿನ್ನ ಪ್ರೇಮದಿ ಅವರಭಿಕಾಮವ ಪೂರ್ತಿಸಿ ಕಾಮಧೇನುತೆರ ತೋರುವಿ ಘನ್ನ 2 ಶಿಷ್ಟೇಷ್ಟ ಪ್ರದನಿಷ್ಟಘ್ನನೆ ನೀ ಕಷ್ಟವ ಪರಿಹರಿಸಿನ್ನಾ ಎಷ್ಟೆಂಥೇಳಲಿ ಸೃಷ್ಟಿ ಯೊಳಗೆ ನಿನ್ನ ಶ್ರೇಷ್ಠ ಮಹಿಮೆಗಳನ್ನಾ 3 ಶಿಷ್ಟನೆ ನೀ ಪರಮೇಷ್ಟಿಯ ಸತ್ಪದಾ - ಧಿಷ್ಟತನೆಂದಿನ್ನಾ ಪ್ರೇಷ್ಟನೆ ಎನ್ನಯಭೀಷ್ಟೆಯ ನಿತ್ತು ಶ್ರೇಷ್ಠನ ಮಾಡಿನ್ನಾ 4 ಪಾತಕವನಕುಲ ವಿತಿಹೋತ್ರ ಸುಖ ದಾತನೆ ನೀ ಇನ್ನಾ ಈತೆರ ಮಾಡದೆ ನೀತ ಗುರುಜಗ - ನ್ನಾಥವಿಠಲ ಪ್ರಪನ್ನಾ 5
--------------
ಗುರುಜಗನ್ನಾಥದಾಸರು
ಕರುಣಾಳುವೈ ನಿಂನ ಭಜನೆಯೊಂದೇ ಸಾಕು ಭರದಲಿ ಪಾಪಿಯ ಶುದ್ಧ ಮಾಡಲಿಲೇ ಪ ಅಜಮಿಳ ಜನ್ಮದಿ ಘೋರ ಪಾಪವ ಗೈದು ಭಜನೆ ಮಾಡಲು ತನುನೀಗು ಕಾಲದಲೀ ಭಜಕರ ಲೋಲನೆ ಹೀನನಿಗೊಲಿದು ನೀ ಕುಜನನ ಪರೆದು ಮೋಕ್ಷವನಿತ್ತೆ ಹರಿಯೇ1 ದುರುಳ ವಾಲ್ಮೀಕನು ಹೀನ ಕೃತ್ಯವಗೈದು ಸುರಮುನಿಯಾಜÉ್ಞಯಿಂ ನಾಮವಭಜಿಸೇ ದುರಳನ ಸರಸದ ಭಕ್ತಿಗೆ ವಲಿಯುತ ಪರಮ ಙÁ್ಞನವನು ನೀ ನಿತ್ತೆ ಶ್ರೀಹರಿಯೆ 2 ತರಳ ದಾಸರುಕೂಡಿ ಹರಿ ನಿಂನ ಸ್ತುತಿಸಲು ನಿರುತ ಭಕ್ತರಿಗೆ ನೀನೊಲಿದೆ ಶ್ರೀಕಾಂತಾ ಪರಮ ಆದರದಿಂದ ಹರಿಯಂನ ಮನವನ್ನು ಪರಿ ಶುದ್ಧಮಾಡಿ ದೀನನ ಸೇರೋ ಹರಿಯೇ 3 ರಂಗನ ಮಹಿಮೆಯ ನುಡಿಯಲಾರೆನು ನಾನು ಅಂಗಜ ಪಿತನಾದ ದಶರೂಪಧರನ ನಿತ್ಯ ದೂರ್ವಾಪುರದಿನಿತ್ತುಮಂಗಳ ಪದವೀವ ಚೆನ್ನಕೇಶವನೆ 4
--------------
ಕರ್ಕಿ ಕೇಶವದಾಸ
ಕರುಣಿ ಬಾರದೇಕೋ ನಿನ್ನ ಕಂದನ ಮ್ಯಾಲೆ ಪ ಶರಣು ನಿನ್ನ ಚರಣ ಸೇವೆಯೊಳಿರಿಸೊಯೆನ್ನನೂ ಅ.ಪ ಅರುಹುಯೆಂಬೋದೆನ್ನಾ ಮನದೊಳ್ ಇರಿಸಿ ಪಾಲಿಸೈ 1 ತರವೆ ನಿನ್ನ ಕರದೊಳಿಂದು ಬಿರುದು ಹೋಲಿಸೈ 2 ಪರಮಗುರುವು ತುಲಶಿರಾಮ ಧೊರೆಯೊಳಿರುವೆನೈ 3 ಇರಿಸಿ ಪಾಲಿಸೆಂದು ಬಂದು ಮೊರೆಯ ನಿಟ್ಟನೈ 4
--------------
ಚನ್ನಪಟ್ಟಣದ ಅಹೋಬಲದಾಸರು
ಕರುಣಿಸಯ್ಯಾ ಕಂಜಜನಯ್ಯಾ | ಕರ್ಣರಹಿತ ಶಯ್ಯಾ ಕನಕಾದ್ರಿರಾಯಾ ಪ ಕರಿವರದನೆ ನಿನ್ನ ಚರಣ ನಂಬಿದೆ ಎನ್ನಪರಿಪಾಲಿಸುವದು ಪರಮ ಕೃಪಾಳೊ ಅ.ಪ. ಕೋಟಲೆ ಸಂಸಾರವೆಂಬೊ | ನೀಟು ಶರಧಿಯನ್ನುದಾಟಲಾರೆನೊ ನಾನೂ | ಇದೇನೊ ||ನಾಟಕಾಧಾರ ನಿನ್ನ | ನಂಬಿದಾ ಮೇಲೆ ಎನ್ನಬೂಟಕನೆನಸುವರೇ | ಮುರಾರೇ ||ಹಾಟಕಾಂಬರ ಧರ ಹರಿಯೇ ಕೇಳ್ವುದಿನ್ನು | ಕೋಟಿ ವ್ಯಾಳೆಗೆ ಭಕ್ತ ಕೋಟಿಯೊಳಗಿಟ್ಟು ಎನ್ನ | ನೀಟು ಮಾರ್ಗವ ತೋರಿ ಪಾಟುಪಡಿಪ ಯಮಕಾಟ ಕಳೆದು ದಿವ್ಯ ನೋಟದಿ ನೋಡು 1 ಕಂಸಾರಿ ಮುರಾರಿ2 ಇಂದಿರೆ ಜನನಿ ಗೋ-ವಿಂದ ಇನ್ನೊಬ್ಬರಿಲ್ಲ | ನೀ ಬಲ್ಲೆಲ್ಲಾ ||ಸುಂದರ ವಿಗ್ರಹನೆ | ಸುಗುಣ ಸಾಕಾರ ಶುಭಸಾಂದ್ರಾ ಭಕುತ ವತ್ಸಲ | ಗೋಪಾಲಾ ||ಎಂದೆಂದಿಗೆ ಎನ್ನಿಂದ ಅಗಲದೆ ಮುಕುಂದ ಮುನಿ ವೃಂದವಂದಿತ ಚರಣನೇ | ಸಿಂಧುಶಯನ ಶಿರಿ ಮೋಹನ ವಿಠಲ ಬಾ ಲೇಂದು ವದನ ಸುಗುಣ ಸಾಂದ್ರಾ ಉಪೇಂದ್ರಾ 3
--------------
ಮೋಹನದಾಸರು
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಕರುಣಿಸಿ ಕೇಳು ಕಂದನ ಮಾತಗರುಡವಾಹನನೆ ಗಂಗೆಯ ಪೆತ್ತ ಹರಿಯೆಪ. ಇತ್ತ ಬಾರೆಂಬುವರಿಲ್ಲ ಇರವ ಕೇಳುವರಿಲ್ಲಹತ್ತಿಲಿ ಕುಳ್ಳಿರು ಎಂಬ ದಾತರಿಲ್ಲತತ್ತರಗೊಳ್ಳುತಲಿದೆ ತಾವರೆಯೆಲೆಯೊಳನೀರಿನಂತೆಹತ್ತು ನೂರಾರು ನಾಮವುಳ್ಳ ಶ್ರೀಹರಿಯ ನೀ ಕೇಳೊ1 ಇಂದು ಬಂಧನವಿಲ್ಲ ಇದ್ದವ ಕೇಳುವುದಿಲ್ಲಒಂದು ಸುತ್ತಿಗೆ ಬಟ್ಟೆಯಾದರೂ ಇಲ್ಲ ಈಬೆಂದೊಡಲಿಗೆ ಒಬ್ಬ ಅಯ್ಯೋ ಎಂಬುವನಿಲ್ಲಬಿಂದು ಮಾತ್ರದಲ್ಲಿ ಸುಖವ ಕಾಣೆ ಹರಿಯೆ 2 ಎಲ್ಲಿಯೂ ಧಾರಣೆಗೊಂದು(?)ನೆರಳನು ಕಾಣೆ[ಅಲ್ಲವÀÀತಿಂದಿಲಿಯಂತೆ]ಬಳಲುತಿದ್ದೆಫುಲ್ಲಲೋಚನ ಪೂರ್ಣ ಹಯವದನ[ಸಲ್ಲುವ]ನಾಣ್ಯವ ಮಾಡಿ ಸಲಹೋ ಎನ್ನ ಹರಿಯೆ 3
--------------
ವಾದಿರಾಜ
ಕರುಣಿಸಿ ಪಿಡಿಯಾ ಕೈಯ್ಯಾ | ಗುರುರಂಗವೊಲಿದರಾಯ ಪ ನಂಬಿದೆ ನಿನ್ನ ಚರಣ | ಬೆಂಬಿಡದೆ ಕಾಯೋ ಸತತ ಸ್ತಂಭದಲಿ ನೆಲಸಿದಂಥ | ಕುಂಭಿಣಿಪ | ದಾಸವರ್ಯ 1 ದೀನರ್ಗೆ ದಿವಿಜಧೇನು | ನೀನೆಂದು ಕ್ಷೋಣಿ ತಳದಿ ಜ್ಞಾನಿಗಳು ಪೇಳಿದಂಥ ವಾಣಿಯನು ಸತ್ಯಮಾಡೊ 2 ನಿನ್ನ ಸ್ಥಳವು ಪುಣ್ಯಕ್ಷೇತ್ರ | ನಿನ್ನಲ್ಲಿ ಸಕಲ ತೀರ್ಥ ನಿನ್ನ ಕವನ ಮಧ್ವಶಾಸ್ತ್ರ | ನಿನ್ನವನು ನಿಜಕೃತಾರ್ಥ3 ಹರಿದಾಡುವಂಥ ಮನಸು | ಹರಿಯಲ್ಲಿ ಸ್ಥಿರವಗೊಳಿಸೊ ಹರಿನಾಮ ಸುಧೆಯ ಕುಡಿಸೊ | ಹರಿವರನ ಮತವ ಪಿಡಿಸೊ 4 ಮತಿಭ್ರಷ್ಟನಾಗಿ ನಿನ್ನ ಕೃತಿಗಳನು ಪಾಡದ್ಹೋಗಿ ಕ್ಷಿತಿ ಭಾರನಾದೆ ಮುಂದೆ ಗತಿ ತೋರಿ ಸಲಹೊ ತಂದೆ 5 ಹೆತ್ತವರು ಸುತನ ದೋಷ | ಕೃತ್ಯಗಳ ಕ್ಷಮಿಸದಿಹರೆ ಚಿತ್ತೈಸು ಎನ್ನ ಮಾತ | ಉತ್ತಮರ ಸಂಗವಿತ್ತು 6 ತಳೆದೇಳು ಜನುಮಗಳಲಿ | ಇಳೆಯೊಳಗೆ ಚರಿಪ ಸಮಯ ಸುಳಿದಾಡು ಮತ್ತೊಮ್ಮೆ ಘೋರ ಕಲಿಬಾಧೆ ತಪ್ಪಿಸಯ್ಯ 7 ಮಾನವಿಯ ಸ್ಥಾನದಲ್ಲಿ | ನೀನಿರಲು ನಿನ್ನ ಮರೆದು ಮೋದ 8 ಕಂದರ್ಪಜನಕ ಶಾಮಸುಂದರ ಮೂರ್ತಿಹೃದಯ ಮಂದಿರದಿ ತೋರೋದಾತ ವಂದಿಸುಎ ನಿನ್ನ ಪದಕೆ 9
--------------
ಶಾಮಸುಂದರ ವಿಠಲ
ಕರುಣಿಸು ಕರುಣಿಸು ಕರುಣಿ ಶ್ರೀ ರಂಗಯ್ಯಾ ಹರಣ ಪೋದರು ನಿಮ್ಮ ಸ್ಮರಣೆ ಮರೆಯದಂತೆ ಪ ಮರವೆ ಮಾಯದಿ ಸಿಲುಕಿ ಮರುಳ ಮಾನವರಿಗೆ ಶಿರವ ಬಾಗದಂತೆ 1 ಘನದು:ಖಮಯವಾದ ಜನನಮರಣವೆಂಬ ಕುಣಿಯೊಳಗೆ ಸಿಕ್ಕಿ ಜನಿಸಿಬಾರದಂತೆ 2 ದುರಿತ ದಾರಿದ್ರ್ಯದಿಂದ ಪರಿಪಕ್ವನೆನಿಸೆನ್ನ ವರದ ಶ್ರೀರಾಮ ನಿಮ್ಮ ಚರಣ ಸೇವೆಯ ಘನತೆ 3
--------------
ರಾಮದಾಸರು
ಕರುಣಿಸು ದೇವ ಶರಣ ಸಂಜೀವ ಮರೆಯದಿರೆನ್ನನು ಮನೆಯೊಳಗಿರುವ ಪ. ಸಿರಿನಲ್ಲ ನೀ ಬೆಂಬಲ ವಲ್ಲದೆ ಬೇರೆ ದಾತರಿಲ್ಲವೆಂಬುದು ಸಿದ್ಧ 1 ಆದರು ಲೌಕಿಕವಾದ ಲಾಭಗಳನ್ನು ನೀ ದಯಮಾಡುವ ಹಾದಿಯನರಿಯೆನು ವ್ಯರ್ಥಹಂಕೃತಿಯಿಂದ ಧೂರ್ತನಾದೆನು ಕೃಷ್ಣ ಕರ್ತ ನೀ ಕರುಣದಿ ಕರಸಿಕೊ ಬೇಗ 2 ಚಂದನ ವಿಗ್ರಹ ಚೆಲುವ ಶೋಭಿತ ಗ್ರಹ ಹೊಂದದಿರಾಗ್ರಹ ಹರಿಸು ಸರ್ವಾಗ್ರಹ 3 ನೋಡದೆ ನಿನ್ನನು ನಡುವಿಲಿ ನೆನೆದೆನು ಬೇಡಿಕೊಂಬೆನು ಶ್ರೀಶ ಮೂಡಲಭೂಧರೇಶ 4
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸು ದೇವದೇವ ಸೆರಗೊಡ್ಡಿ ಬೇಡುವೆನಭವ ಪರಿಹರಿಸು ಎನ್ನ ಕರುಣಾಳು ಲಕ್ಷ್ಮಿಯ ಜೀವ ಪ ಅಂಬುಧಿಶಾಯಿಯೆ ನಿನ್ನ ಭಜಿಪೆ ಪಾವನ್ನ ಅಂಬುಜಸಂಭವಪಿತನೆ ಕಂಬುಕಂಧರಪ್ರಿಯಸಖನೆ ಅಂಬುಧಿಯಸಂಜಾತೆರಮಣ ಬೆಂಬಲಿಸಿ ಕಾಯೊ ಬಡವನ್ನ 1 ಸುಂದರಕಾಯ ಇಂದಿರೆಯ ಪ್ರಾಣಪ್ರಿಯ ಬಂಧನದ ಬಡತನ ಕಳಿಯೊ ವಂದಿಸಿ ಮರೆಹೊಕ್ಕೆ ಜೀಯ 2 ಈಸೀಸಿ ಸಂಸಾರನಿಧಿಯ ಬೇಸತ್ತು ಬಿಡುವೆನೊ ಬಾಯ ಘಾಸಿ ಮಾಡದೆ ಸಲಹಯ್ಯ 3
--------------
ರಾಮದಾಸರು