ಒಟ್ಟು 10452 ಕಡೆಗಳಲ್ಲಿ , 133 ದಾಸರು , 5883 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಧನ್ಯರೋ ಜಗದಿ ಎಂಥ ಮಾನ್ಯರೋ | ಮೌನಿ ಶ್ರಿ ರಘುಪ್ರೇಮತೀರ್ಥರು ಪ ಕಲಿಯುಗದಿ ಕÀ್ರತುಗೈದ ಇಳಿಯ ಜನಕ ಸಾಧ್ಯವೆಂದು ಕುಲಿಶಪಾಣಿಯಂತೆ ತೋರ್ಪರು 1 ಧೂರ್ತರಿಂದ ದೂರವಿದ್ದು | ಸ್ವಾರ್ಥರಹಿತರಾಗಿ | ಸಕಲ ತೀರ್ಥಕ್ಷೇತ್ರ ಚರಿಸಿ ಜನ್ಮ ಸಾರ್ಥಕೆನಿಸಿದ ಯತಿಯು 2 ಸದನ ತೃಣಸಮಾನವೆನಿಸಿ ಮುದದಿ | ವಿನಯಶೀಲ ದ್ವಿಜರಿಗಿತ್ತು ಮುನಿಯೆನಿಸಿ ವಿರುಕ್ತರು 3 ಚತುರಾಶ್ರಮ ವ್ರತದಿ ನೇಮ ಸತತಾ ಚರಿಸುತಲಿ | ಶಿಷ್ಯರಾದಿಗೆ ವ್ರತಬೋಧವೃಷ್ಟಿ ಹಿತದಿಗರೆದು ಪೊರೆವ ಯತಿಯು 4 ಶ್ರೀಮಧ್ವಸುಮತವಾರಿಧಿ ಸೋಮನೆಂದೆನಿಸಿ | ಜಿತ ಕಾಮರಾಗಿ ಕಠಿಣ ತಪದಿ | ಶ್ರೀ | ಶಾಮಸುಂದರನ ವಲಿಸಿದವರು 5
--------------
ಶಾಮಸುಂದರ ವಿಠಲ
ಏನು ಪವಮಾನಿ | ಏನು ಪವಮಾನಿ | ಈ ನಿಧಿಯಲಿ ಬಂದು ನಿಂದ ಕಾರಣ | ಮಾಣದೆ ಪೇಳು ನಿ | ದಾನದಿಂದಲಿ | ಮಾನಸದಲಿ | ದಾನವಾರಿಯ | ಧ್ಯಾನ ಮಾಡುವ ಜಾಣ ಜಗದ ಪ್ರಾಣ ಸುಂದರಾ | ನಾನಾ ಮಹಿಮಾ ಗುರುವೆ ಪ ಕೇಸರಿನಂದನ ಪಾಶವಿನಾಶ ನಿರ್ದೋಷ | ಭಾರತೀಶ ಈಶಾ | ಶೇಷಾದ್ಯರಿಗುಪದೇಶದ ಕರ್ತಾ | ಲೇಸು ಸದ್ಗುಣಗಣ ಕೋಶ ಸರಸಿಜಾಸನ ಪದವಿಗೆ ಸೇರುವಾತಾ || ದೇಶದೊಳು ಬಲುಭೂಷಣ ಪಾಕಶಾಸನ ಶರದ ಶರೀರ | ದಾಶರಥಿ ಪಾದಾಸರವಿಡಿ | ದೇಸು ಬಗೆಯಲಿ | ಮೋಸ ಪೋಗದಾಯಾಸಬಡದಲೆ | ಮೀಸಲ ಮನ ಸೂಸು ವನರಾಸಿ ಲಂಘಿಸಿ 1 ಪರಿಸರ ಪೋಗಲಾಸಮಯದಲ್ಲಿ | ಭಾಸುರ ಲಂಕೆ | ಯ ಶೋಧಿಸಿದನಾ ಗೋ | ಸಾಸಿರವಿತ್ತು ಕೂಸಿನಂದದಲಿ || ಭಾಷಿಯನಾಡಿ ಪದ್ಮಾಸನಿಗೆ ಸಂ | ಸವರಿ ಫಲ ಸವಿದು ಖಳನ ನಗುತ | ನಾಶಗೊಳಿಸಿದ ಸಮರ್ಥನೆ 2 ಹಿಂದೆ ಪ್ರಳಯದಲ್ಲಿಂದಿರೇಶನು ಸುರ್ವೃಂದ ಉದರದೊಳು | ಪೊಂದಿಟ್ಟುಕೊಂಡು ಆಗ | ಅಂದು ನೀನೊಬ್ಬನೇ ಮಂದನಾಗದೆ ನಯದಿಂದಲಿ ಎಚ್ಚತ್ತು | ಪೊಂದಿಕೊಂಡು ಇದ್ದೆ | ಇಂದು ಕದನದೊಳು ಇಂದ್ರಜಿತನು ಕರದಿಂದ ಸೆಳೆದÀ ಶರ | ದಿಂದಲಿ ಸಿಗಿಬಿದ್ದು | ಬಂಧಿಸಿಕೊಂಡಂಜಿನಿಂದಂತೆ ಮೈದೆಂದಿಗಿಲ್ಲದಂತೆ ನಂದವ ತೋರಿದೆ ಇಂದು ಮೌಳಿಯ ಪೊಂದಿದದಶ | ಕಂಧರನ ಮೊಗ ಮುಂದೆ ಭಂಗಿಸಿ | ಬಂದು ಗುದ್ದಿಲಿನೊದ್ದನು ಅವನಿರೆ | ಮಂದಹಾಸದಲಿಂದ ನಗುತ 3 ಪುರವನುರುಹಿ ಅಸುರರ ಸದೆದು ತೀ | ವರದಿಂದ ಶರಧಿಯ ಮರುಳೆ ಹಾರಿ ಬಂ | ದುರವಣಿಯಿಂದ ಶ್ರೀ | ಹರಿ ಚರಣಕ್ಕೆರಗಿ ಪೊಡಮಟ್ಟು | ಕರವನೆ ಮುಗಿದು | ಚೂಡಾಮಣಿ ಇಡೆ ಮುಂದೆ ವಿವರಿಸಿದೆ | ರಿಪುಗಳಾ | ಗರದ ವಿಸ್ತಾರ | ಸುರರು ಭಾಪುರೆ ಎಂದಂಬರದಲಿವಾದ್ಯ | ಬೆರೆದಲ್ಲಿ ಮೊರೆಯಾಗಿ ಅರಮರೆಯಿಲ್ಲದೆ | ತರಿಸಿ ಮಾರ್ಗವಸರದಲಿ ವಿಸ್ತರಿಸಿ | ಧುರದೊಳಗರಿಗಳಿಂದಲಿ ಮರಣವಾದವರನ ಎಬ್ಬಿಸಿ 4 ಪಾತಾಳದೊಳು ಹತ್ತು ತಲೆಯವನಿರಲು ಕಾತುರದಿಂದ ಹೋ ಮಾತುರಕಾರ್ಚಿಸೆ | ಮಾತು ಮುಂಚದ ಮುನ್ನ ಭೀತಿ ಇಲ್ಲದೆ ಪೋಗಿ | ಪಾತಕನವಧಾನ | ದಾತಗೆ ದಿವ್ಯವರೂಥವೆಂದೆನಿಸಿ ವಿ| ಧೂತ ರಾವಣನ ವಿ | ಪಾತನ ಗೈಸಿದೆ | ಪ್ರೀತಿ ಬಡಿಸಿ ನಿಜಾರಾತಿ ವಿಭೀಷಣಗೆ ತಪ್ಪದೆ ಲಂಕಾ | ನಾಥನ ಮಾಡಿ ನೀ | ರಘುನಾಥನ ಯಡೆ ನೀ ತೆಗೆದುಂಡೆ | ಶ್ರೀ ತರುಣೇಶ ವಿಜಯವಿಠ್ಠಲನ ದೂತಾ ಹನುಮಾ 5
--------------
ವಿಜಯದಾಸ
ಏನು ಪೇಳಲಿ ತೀರ್ಥಪತಿಯ ಮಹಿಮೆ ಮಾನವರಿಗೆ ಯಿಲ್ಲಿ ಮುಕ್ತಿ ಏಳಲವಯ್ಯಾ ಪ ಕಾಸಿಯೊಳು ಮರಣ ಮುಕ್ತಿಯೆಂದು ಪೇಳುವದು ದೇಶದೊಳು ಪುಸಿಯಲ್ಲ ಸಿದ್ಧವೆನ್ನಿ ಈಶನುಪದೇಶದಿಂದಲಿ ವಿಗತ ಜನನಾಗಿ ಶ್ರೀ ಶಕ್ತಿ ವೇಣಿಮಾಧವನ ಸನ್ನಿಧಿ ಗೈಯ್ವಾ 1 ನಿರುತ ವ್ಯಭಿಚಾರಿ ವಿಪ್ರನ ಕೆಡಿಸಿ ಕಾಸಿಯಲಿ ಪರಮಭೀತಿಯಿಂದ ಅವಳ ವಸನವ ತಂದು ವರ ತ್ರಿವೇಣಿಯೊಳಗೆ ತೊಯಿಸಲು ಗತಿಸಾರ್ದರು 2 ಇಲ್ಲಿಗೆ ನಡೆತಂದು ಸ್ನಾನವಂದೆ ಮಾಡಲು ನಿಲ್ಲದೆ ಸನ್ಮುಕ್ತಿ ಧರನಾಗುವಾ ಬಲ್ಲಿದಾ ವಿಜಯವಿಠ್ಠಲವೇಣಿ ಮಾಧವನ ಸಲ್ಲಲಿತ ಪಾದವನು ಕಾಂಬ ಪ್ರಾಣೇಂದ್ರಿಯದಲಿ 3
--------------
ವಿಜಯದಾಸ
ಏನು ಪೇಳಲಿ ನಿನ್ನ ತನಯನ ಚರ್ಯವ ಮಾನಿನಿಮಣಿಯೆ ಯಶೋದೆಯ ಕೇಳೆ 1 ವಾರಿಧಿಯೊಳು ಪೊಕ್ಕು ವಿಹರಿಸುವನೆ ಮತ್ತು ಭಾರಿಯಾದ ಕ್ಷಿತಿಧರೆಯನೆ ಹೊರುವನೆ 2 ಕುಂಭಿಣಿಯನೆ ಅತಿ ಸಂಭ್ರಮದಲ್ಲಿ ತಂದು ಸ್ತಂಭವ ಭೇದಿಸಿ ಸಂಭವಿಸಿದನಲ್ಲಿ 3 ಮೂರು ಹೆಜ್ಜೆಯ ಭೂಮಿ ಬೇಡಿದನೇ ಏಳು ಮೂರು ಬಾರಿ ನೃಪತಿಗಳ ಭೇದಿಸಿದನು 4 ವಾನರರನು ಸೇರಿ ಜಾನಕಿಯನೆ ತಂದೆ ಮಾನವ ಕುಲಕೆ ಸನ್ಮಾನವ ತಂದನೆ 5 ಘೋರ ಪೂತನಿ ಪ್ರಾಣ ಹಾರ ಮಾಡಿದ ಜಾರ ಚೋರತನದಿ ಶೂರನಾದನೆ ನೋಡೆ 6 ಬತ್ತಲೆ ನಿಂತನೆ ಸಸ್ತಿಯನೇರಿದ ಮತ್ತು ನಾಮಗಿರಿ ನರಹರಿ ಇವನೆ 7
--------------
ವಿದ್ಯಾರತ್ನಾಕರತೀರ್ಥರು
ಏನು ಬಲ್ಲಿದನೋ ಹನುಮಂತ ನೀನು ಏನು ಬಲ್ಲಿದನೋ ಪ ಏನು ಬಲ್ಲಿದನಯ್ಯ ನೀನು ಜ್ಞಾನಮೂರುತಿ ಜಾನಕೀಶನ ಧ್ಯಾನ ಸುಖಸಾಮ್ರಾಜ್ಯದಲ್ಲಿ ಲೀನನಾಗಿ ಸುಖಿವೆ ಬಲವಂತ ಅ.ಪ ಶರಧಿ ಜಿಗಿದವನೋ ಭರದಿ ದುರುಳನ ಪುರವ ಸೇರಿದನೋ ನಿರುತ ದೊರೆಮಾತೆ ದರುಶನಾದನವನೋ ಪರಮವೀರನೋ ಧರೆಯ ಮಾತೆ ಕೃಪಾಪಾತ್ರನಾಗಿ ಪರಮಪಾವನ ವರವ ಪಡೆದು ಮರಳಿ ದುರುಳನ ವನವ ಸೇರಿ ಧುರವ ಜೈಸಿದಿ ಧೀರಮಾರುತಿ 1 ತಿರುಗಿ ಅಂಗದನ ಬಲವನ್ನು ಸೇರಿ ಸಾರ ಕಥನವನ್ನು ಅರುಹಿ ಮುಂದೆ ಪರಮಪಾವನನ ಚರಣಕಂಡಿನ್ನು ಇರಿಸಿ ಹರಿಯಾಜ್ಞಂಗೀಕರಿಸಿ ತ್ವರದಿ ದಕ್ಷಿಣಶರಧಿ ಹೂಳಿಸಿ ಭರದಿ ಲಂಕೆಗೆ ಮುತ್ತಿಗಿತ್ತಯ್ಯ 2 ಬುದ್ಧದೇಹದ ಕುಂಭಕರ್ಣನ ಕ್ಷುದ್ರ ಇಂದ್ರಜಿತುನ ಮತ್ತವನ ತಂದೆ ಬುದ್ಧಿಹೀನನ್ನ ಹತ್ತು ತಲೆಯವನ ಯುದ್ಧದಿಂದ ಬದ್ಧರಕ್ಕಸ ರೊದ್ದು ಬೇಗನೆ ಛಿದ್ರ ಮಾಡಿ ಜ ಗದ್ರಕ್ಷ ಶ್ರೀರಾಮ ಪಾದಪದ್ಮಕ್ಕೆ ಮುದ್ದು ಮುಖಿಯನು ತಂದುಕೊಟ್ಟೆಯ್ಯ 3
--------------
ರಾಮದಾಸರು
ಏನು ಭಾಗ್ಯವೋ ತಾಯೆ ಲಕುಮಿ ನಿನ್ನದೂ ಸಾನು ರಾಗದಿ ಹರಿಯ ಸೇವಿಸುತಲಿರುವಿ ಪ. ಕಂಕಣವು ನೀನಾಗಿ ಹರಿಗೆ ಭುಜಕೀರ್ತಿ ನೀನಾಗಿ ಶಂಕುಚಕ್ರ ಗದಾ ಪದ್ಮ ನೀನಾಗಿ ಶಂಕೆ ಇಲ್ಲದೆ ಕಿಂಕರಳು ನೀನಾಗಿ ಹರಿಸೇವೆಗೆ ಪಂಕಜಾನಾಭನ್ನ ಸೇವಿಸುತಲಿರುವಿ 1 ಅಕ್ಷರಳು ನೀನಾಗಿ ಹರಿಯ ವಕ್ಷಸ್ಥಳವನೇ ಸೇರಿ ಈ ಜುತ ಹರಿಯ ಪರಮ ಸಂತೋಷದಿಂದ ಲಕ್ಷ ಕೋಟಿ ಕೋಟಿ ಬ್ರಹ್ಮಾಂಡರೂಪದಲ್ಲಿರುವ ಪಕ್ಷಿವಾಹನನ ನೋಡಿ ವೆರಗಾಗುತಲಿರುವಿ 2 ರಾಮನಾ ಸತಿಯಾಗಿ ಪ್ರೇಮದಿಂದಲಿ ಈಗ ಕಾಮನಯ್ಯನ ಕಾರುಣ್ಯದಿಂದ ರಮಾವಲ್ಲಭವಿಠಲನ ತೊಡೆಯ ಮೇಲೆ ಕುಳಿತು ಸ್ವಾಮಿಗೆ ಸತಿಯಾಗಿ ಸೇವಿಸುತಲಿರುವಿ 3
--------------
ಸರಸಾಬಾಯಿ
ಏನು ಭ್ರಮೆ ಮನುಜರಿಗೆ ಎಷ್ಟು ಮಮತೆ ಪ್ರಕೃತಿಯಲಿಮೀನು ಗಾಳವÀ ನುಂಗಿ ಮೋಸಹೋದ ತೆರನಂತೆ ಧ್ರುವ ಸತಿ ನನ್ನ ಸುತರೆಂದೆನಿಸಿಹೊನ್ನುಗಳ ಗಳಿಸಿ ಹೆಚ್ಚಾಗಿ ಹೋರ್ಯಾಡಿಸಣ್ಣವರ ಮದುವೆ ಸಂಭ್ರಮದಿ ಮಾಡುವೆನೆಂದುಅನ್ನ ಮೊದಲು ಕಾಣದೆ ಅಂತರ ಪಿಶಾಚಿಯಂತೆ 1 ಬಲುವೋದಿಕೆಯಲ್ಲಿ ಬಲ್ಲವರೆನಿಸಬೇಕೆನುತಹಲವು ಬುದ್ಧಿಯಲ್ಲಿ ಹಿರ್ರನೆ ಹಿಗ್ಗುತಮಲಿನ ಮನಸಿನಜ್ಞಾನದಲಿ ತಾನರಿಯದೆ 2 ಮಿಗಿಲು ಆಸೆಗೆ ಬಿದ್ದು ಬಗೆ ಬಗೆ ಹೂಣಿಕೆಯಲಿಹೊಗದಲ್ಲಿ ಹೊಗುವರು ಹೂ ಬಿಟ್ಟು ತಿಳಿಯರುಖಗವಾಹನ ಮುದ್ದು ರಂಗವಿಠಲನ ನಾಮ ಸ್ಮರಿಸಲುವಿಗಡ ಸಂಸಾರ ಹಗರಣ ನೀರಗುಳ್ಳೆಯಂತೆ3
--------------
ಶ್ರೀಪಾದರಾಜರು
ಏನು ಮಹಿಮರೊ ನಮ್ಮ ಶ್ರೀ ಗುರುಗಳು ಶ್ರೀನಿಧಿಗೆ ಪರಮ ಪ್ರಿಯರೆನಿಸಿ ಮೆರೆಯುವರು ಪ. ಶಾಂತತ್ವವೆಂತೆಂಬ ಕವಚವನೆ ತೊಟ್ಟಿಹರು ದಾಂತತ್ವದಾ ನಡುಕಟ್ಟು ಕಟ್ಟಿಹರು ಸಂತೋಷ ಸುಖದಲಿ ಅಂತರಂಗದಿ ಹರಿಯ ಚಿಂತನೆಯ ಮಾಡುತಲಿ ಮುಕ್ತಿಪೊಂದಿಹರು 1 ವೈರಾಗ್ಯವೆಂತೆಂಬ ಆಯುಧವ ಧರಿಸಿಹರು ಸೇರಿದವರನು ಪೊರೆವ ಕಂಕಣವ ಕಟ್ಟಿ ನಾರಸಿಂಹನ ನಾಮ ಕರ್ಣಭೂಷಣ ಧರಿಸಿ ನಾರಾಯಣನ ಗುಣದ ಹಾರ ಧರಿಸಿಹರು 2 ಪರರಿಗುಪಕಾರವನೆಸಗುವ ಭುಜದ ಕೀರುತಿಯು ವರತತ್ವ ಅರುಹುವ ವನಮಾಲಿಕೆಯು ಸಿರಿ ಭಕ್ತಿಗುಣಗಳೆಂತೆಂಬೊ ವಸನಗಳು ಧರಿಸಿರುವ ಮಹಿಮರ ಸರಿಗಾಣೆ ಜಗದಿ 3 ಕುಂದದೆ ಭಕ್ತರನು ಪೊರೆಯುವ ಭಾರದ ಅಂದದಾ ಮುಕುಟ ಶಿರದಲ್ಲಿ ಧರಿಸಿ ತಂದೆ ಮುದ್ದುಮೋಹನದಾಸರೆಂದೆನಿಸುತ ಮಂದಜ್ಞ ಮನ ಪಾಪ ಪಾದುಕೆಯ ಮೆಟ್ಟಿಹರು 4 ಎಷ್ಟು ಹೇಳಲು ಸಾಧ್ಯ ಶ್ರೇಷ್ಠ ಗುರುಗಳ ಚರಿತೆ ಪಟ್ಟವಾಳ್ವರು ಜ್ಞಾನ ಸಾಮ್ರಾಜ್ಯವ ಕೆಟ್ಟ ಭವರೋಗವನು ಸುಟ್ಟು ಭಸ್ಮವ ಮಾಡಿ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ತೋರ್ವರು5
--------------
ಅಂಬಾಬಾಯಿ
ಏನು ಮಾಡಲಯ್ಯ ಬಯಲಾಸೆ ಬಿಡದು ಪ ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ಅ ಜ್ಯೋತಿರ್ಮಯವಾದ ದೀಪದ ಬೆಳಕಿಗೆ ತಾನುಕಾತರಿಸಿ ಬೀಳುವ ಪತಂಗದಂದದಲಿಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ 1 ಅಂದವಹ ಸಂಪಗೆಯ ಅರಳ ಪರಿಮಳವುಂಡುಮುಂದುವರಿಯದೆ ಬೀಳ್ವ ಮಧುಪನಂತೆಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂಗಂಧ ವಾಸಿಸುವ ಘ್ರಾಣೇಂದ್ರಿಯಕೆ 2 ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡುಪ್ರಾಣಾಹುತಿಯೆಂದು ಸವಿವ ಮೀನಿನಂತೆಏಣಾಕ್ಷಿಯರ ಚೆಂದುಟಿಯ ಸವಿಯ ಸವಿಸವಿದುಜಾಣತನದಲಿ ನಲಿವ ಜಿಹ್ವೇಂದ್ರಿಯಕೆ 3 ದಿಮಿದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ-ಣಮವೆಂದು ತೋಷಿಸುವ ಕರ್ಣೇಂದ್ರಿಯಕೆ 4 ತ್ವಕ್ಕು ಮೊದಲಾದ ಪಂಚೇಂದ್ರಿಯಗಳೊಳು ಸಿಕ್ಕಿಕಕ್ಕುಲಿತೆಗೊಂಬುದಿದ ನೀನು ಬಿಡಿಸೊಸಿಕ್ಕಿಸದಿರು ಸಿಕ್ಕಿಗೆ ಆದಿಕೇಶವರಾಯದಿಕ್ಕಾಗಿ ನಿನ್ನಂಘ್ರಿಯೊಳೆನ್ನ ಮನವನಿರಿಸೊ 5
--------------
ಕನಕದಾಸ
ಏನು ಮಾಡಲಿಯನ್ನ ಮನಸಿನಟ್ಟುಳಿ ಘನ | ನೀನೆ ನಿಲಿಸೋ ಹರಿಯೇ ದೊರೆಯೆ ಪ ಪರಮ ಪಾವನ ನಿನ್ನ ಚರಿತವ ಕೇಳದು | ಬರಡ ಮಾತಿಗೆ ಪ್ರೇಮಾ ನೇಮಾ 1 ಸಿರಿವರ ಮೂರ್ತಿಯನು ನೋಡಲೊಲ್ಲದು | ಸತಿಯರ ರೂಪಕೆಳಸುವದು ಹರಿದು 2 ಸಂತರ ಚರಣಕೆರಗಿ ಬಿಗಿದಪ್ಪದು | ಭ್ರಾಂತ ಜನರೊಳಗೆ ಸಂಗಾ 3 ಹರಿಯಂದೊದರಲು ನಾಲಿಗೆ ಬಾರದು | ಪರನಿಂದೆ ಜಪಿಸುವದು ಸರಿದು 4 ಸಿರಿ ಚರಣಾರ್ಪಿತ ತುಲಸಿಯ ಸೇರದು | ಪರಿಮಳದಲಿ ಬೋಗಿಲಿ ಸಾಗಿ 5 ಗುರು ಮಹಿಪತಿ ಪ್ರಭು ನಿನ್ನೆಚ್ಚರಿದಿ ಮನ | ವಿರಿಸಿಯನ್ನನುಳಹೋ ಸಲಹೋ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಮಾಡಿದರೆ ನಾ ನಿನ್ನ ಕಾಂಬೆಶ್ರೀನಿವಾಸನೆ ಭಕ್ತ ದೀನಜನ ಬಂಧೊ ಪ ಪರಮೇಷ್ಠಿ ಸುತನು ಕೊಟ್ಟ ಹರಿಮಂತ್ರ ತುಷ್ಟನಾಗುತ ನರಹರಿಯದೃಷ್ಟಿಯಿಂದ ಕಂಡವನಾ ಭೆಟ್ಟಿ ಸಾಧಿಸಲ್ಯಾ 1 ಹುಡುಗತನದಲಿ ತಂದೆ ತೊಡೆಯಾಸಿಗೆ ಬರೆ ತಾಯಿ-ನುಡಿದ ಮಾತನು ಕೇಳಿ ಅಡವಿಯೊಳಗೆಮೃಡ ಶಿಷ್ಟನುಪದೇಶವನು ನಂಬಿ ವೈಕುಂಠವನುಪಡೆದಿರುವ ಬಾಲಕನ ನಡತೆ ನಂಬಿರಲ್ಯಾ 2 ಐದು ಮಂದಿ ತನ್ನ ಕಾದುಕೊಳ್ಳದೆ ಇರಲುದುರುಳನೊಬ್ಬನು ರಾಜಬೀದಿಯೊಳಗೆಕೂದಲು ಹಿಡಿದೆಳೆದು ತರಲು ಶ್ರೀಧರನೆ ಎಂದೊದರಿಮೋದಿಸಿದ ಕಾಮಿನಿಯ ಹಾದಿ ಸೇರಿರಲ್ಯಾ 3 ಸತಿ ಸಹಾಯ ವೃಂದದಿ ಸಹಾಯ ಭೂತನಾಗಿಪ್ರೀತಿಯಲಿ ಲಂಕಾನಾಥನಾಗಿಹ ಮುನಿಪೋತ ರಾಕ್ಷಸನ ಸಖ ನೀತಿ ಸಾಧಿಸಲ್ಯಾ4 ಹೇ ಸುರಾರ್ಚಿತ ಮನುಜ ಕೇಸರಿಯ ಸುರಗೀತಾವಾಸುದೇವ ದ್ವಾರಕೀಶ ಕೃಪಾ ದಾಶರಥೆಶ್ರೀವೆಂಕಟೇಶ ಬದರಿನಿವಾಸ ದಾಸರ ಕಾಯೋಆದರದಿ ಇಂದಿರೇಶ ಕರುಣಾಬ್ಧಿ 5
--------------
ಇಂದಿರೇಶರು
ಏನು ಮಾಡಿದರೇನು ಫಲವೊ ಪ ನೀನು ಮಾನಸ ವೃತ್ತಿ ತಿದ್ದುವತನಕ ಅ.ಪ ಪೂಜೆ ಮಾಡಿದರೇನು ತೇಜಸ್ವಿ ಇರಲೇನು ರಾಜಧಿರಾಜ ಸಂಪೂಜ್ಯನೆನಿಸಲೇನು ರಾಜತಾಸನದಲ್ಲಿ ಕುಳಿತರೂ ರಾಜಿಸದ ಮಾನಸದ ವೃತ್ತಿಯು ಜೂಜಿನಲಿ ಪಣ ಕಟ್ಟಿದಂತಿದೆ 1 ಭಾರಿ ಪಲ್ಲಕ್ಕಿಯ ಏರಿದ ಅನುಭವ ನೂರು ಜನರು ಸ್ತುತಿ ಕೇಳಿದ ಅನುಭವ ಕೀರುತಿಯ ಪರಮಾವಧಿಯನು ಸೇರಿದೆನು ನಾನಿನ್ನ ಕರುಣದಿ ತೂರುವಂದದಿ ತೂರುತಿಹುದೊ 2 ವರಗಳ ಕೊಟ್ಟಾಯ್ತು ಹಿರಿಯನೆಂದೆನಿಸ್ಯಾಯ್ತು ಅರಿತು ಶಾಸ್ತ್ರಾರ್ಥವ ಗುರುತನ ಪಡೆದಾಯ್ತು ಮನದಲಿ ತೋರುತಿಹುದೋ ಕರದಲಿರುವ ಪ್ರಸನ್ನನೇ ಹೃತ್ಸರಸಿಜದಿ ನೆಲಿಸೆಲೊ ನಿರಂತರ 3
--------------
ವಿದ್ಯಾಪ್ರಸನ್ನತೀರ್ಥರು
ಏನು ಮಾಯವೊ ಹರಿಯೆ ಶ್ರೀನಿವಾಸನೆ ನಿನ್ನ ಧ್ಯಾನಿಸುವವರನು ಪೊರೆವೆ ಸಾನುರಾಗದಲಿ ಪ ಜ್ಞಾನಿಗಳು ಹಗಲಿರುಳು ಮೌನದಿಂದಲಿ ಭಜಿಸಿ ದಾನವಾಂತಕ ನಿನ್ನ ಧ್ಯಾನ ಮಾಡುವರು ಅ.ಪ ಬಡತನದಿ ಬಹು ವ್ಯಥೆಯ ಪಡುತ ಸತಿಸುತರಿರಲು ನುಡಿಯೆ ಭಯ ಭಕ್ತಿಯಲಿ ಒಡೆಯರಿಲ್ಲೆಮಗೆ ಮೃಡಸಖನು ಇಹನೆನಲು ಹಿಡಿಯವಲಿಯ ಕೊಡಲು ಕೆಡದ ಸೌಭಾಗ್ಯವನು ಒಡನೆ ನೀಡಿದೆಯೊ 1 ಅಂದು ದುಶ್ಖಾಸನ ನೃಪನಂದನೆಯ ಬಾಧಿಸುತ ನಿಂದು ಸೀರೆಯ ಸೆಳೆಯೆನೊಂದು ದುಃಖಿಸುತ ಇಂದಿರಾಪತಿ ಕೃಷ್ಣ ಇಂದೆನಗೆ ನೀನೆ ಗತಿ ಎಂದೊಡಕ್ಷಯವಿತ್ತು ಅಂದು ಸಲಹಿದೆಯೊ 2 ಮಡುವಿನಲಿ ಗಜರಾಜ ಪಿಡಿದ ಮಕರಿಗೆ ಸಿಲುಕಿ ಮಡದಿ ಮಕ್ಕಳನಗಲಿ ಕಡೆಗೆ ಸೊಂಡಿಲಲಿ ಪಿಡಿದ ಕುಸುಮವನು ಜಗದೊಡೆಯಗರ್ಪಿತವೆನಲು ದಡದಡನೆ ಬಂದೆಯೊ ಮಡದಿಗ್ಹೇಳದಲೆ 3 ಅಂದು ದೂರ್ವಾಸಮುನಿ ಬಂದು ಶಿಷ್ಯರ ಸಹಿತ ಇಂದೆಮಗೆ ಹಸಿವೆನಲು ನೊಂದು ಶ್ರೀಹರಿಯೆ ತಂದೆ ನೀ ಸಲಹೆನಲು ಬಂದೆ ಬಹಳ್ಹಸಿವೆಯಲಿ ಒಂದು ಪತ್ರದ ಶಾಖ ಉಂಡು ಸಲಹಿದೆಯೊ 4 ಹಿಂದಜಾಮಿಳ ತನ್ನ ಬಂಧುಬಳಗವ ತ್ಯಜಿಸಿ ಅಂದು ಇಹಸುಖದಿ ಆನಂದ ಪಡುತಿರಲು ಬಂದರಾಗ ಯಮಭಟರು ನಿಂದು ಬಾಧಿಸುತಿರಲು ಕಂದನಾರಗನೆನಲು ಅಂದು ಸಲಹಿದೆಯೊ 5 ಚಿಕ್ಕವನು ಪ್ರಹ್ಲಾದ ಮಕ್ಕಳಾಟದ ಧ್ರುವನು ರಕ್ಕಸಾಂತಕನ ಮೊರೆ ಇಕ್ಕಿ ಪ್ರಾರ್ಥಿಸಲು ತಕ್ಕವರಗಳನಿತ್ತು ತಕ್ಕೈಸಿ ಅಣುಗನನು ಮಿಕ್ಕಭಕುತರ ಪೊರೆದೆ ಲಕ್ಕುಮಿಯ ರಮಣ 6 ಈ ಪರಿಯಲಿ ಬಹುಭಕುತರಾಪತ್ತುಗಳ ಹರಿಸಿ ಶ್ರೀಪತಿಯ ರಕ್ಷಿಸಿದಿ ಆಪನ್ನಜನರ ಗೋಪತಿ ಕೃಷ್ಣ ಜಗದ್ವ್ಯಾಪಕನೆ ನೀ ಸಲಹಿ ತಾಪಸರ ಒಡೆಯ ಹೃದ್ವ್ಯಾಕುಲವ ಕಳೆವೆ 7 ಕಾಳಿ ಮಡುವನೆ ಧುಮುಕಿ ಕಾಳಿಂಗನ್ಹೆಡೆ ತುಳಿದೆ ಕಾಳದೇವಿಯರಮಣ ಕಾಲಿಗೆರುಗುವೆನು ಕಾಳಯುಕ್ತಿನಾಮ ಸಂವತ್ಸರದಿ ಸುಜನರಿಗೆ ಭಾಳ ಸುಖಹರುಷಗಳ ಲೀಲೆ ತೋರಿಸುವ 8 ಭ್ರಮಿಸಿ ಇಹ ಸುಖದಿ ಮನ ಶ್ರಮ ಪಡುತಲಿರೆ ದೇವ ರಮೆಯ ರಮಣನೆ ಪೊರೆಯೊ ಮಮತೆಯನು ಬಿಡದೆ ಕಮಲಸಂಭವಜನಕ ಕಮಲನಾಭ ವಿಠ್ಠಲ ಸುಮನಸರ ಒಡೆಯ ಹೃತ್ಕಮಲದಲಿ ಪೊಳೆವ 9
--------------
ನಿಡಗುರುಕಿ ಜೀವೂಬಾಯಿ
ಏನು ವಿನೋದವಿದು ನಮ್ಮ ಶ್ರೀ ನಿಲಯನ ಗುಣಗಾನ ಮಾಡುವುದು ಪ ಮಾನಸ ಮಂದಿರದಲಿ ಶ್ರೀ ಕೃಷ್ಣನ ಕಾಣಲು ಬಯಸುವ ಜನಕೆ ವಿಧಾನ ಅ.ಪ ಶಾಸ್ತ್ರ ವಿಚಾರ ಶ್ರೋತೃ ವಿಹಾರ ಶ್ರೋತೃ ಜನಕೆ ಇದು ಪರಮಾಧಾರ1 ಶ್ರೀಶನ ನೋಟ ಭೂಸುರ ಕೂಟ ದಾಸ ಜನಕೆ ಇದು ಭೂವೈಕುಂಠ 2 ವೇದ ಸುಘೋಷ ವಾದ್ಯದ ಹರ್ಷ ಸಾಧುಜನಕೆ ಇದು ಬಲು ಸಂತೋಷ 3 ಸಿಕ್ಕಿತು ಕಾಂತಿ ಹೊಕ್ಕಿತು ಶಾಂತಿ ಭಕ್ತ ಪ್ರಸನ್ನನು ಬಿಡಿಸಿದ ಭ್ರಾಂತಿ4
--------------
ವಿದ್ಯಾಪ್ರಸನ್ನತೀರ್ಥರು
ಏನು ವೈಭವವೊ ಶ್ರೀನಿವಾಸ ಧೊರೆಯೆನಿನ್ನದೇನು ವೈಭವವೊ ಪ ಸಿರಿಯು ತಾನೆ ನಿಂತು ನಿನ್ನನಿರುತ ಸೇವೆ ಗೈಯ್ಯುತಿಹಳೊಸರಸಿಜಾಸನಾದಿ ಸುರರುಕರವ ಮುಗಿದು ತುತಿಸುತಿಹರೂ 1 ನಾಗರಾಯ ದಿವ್ಯಾಸನನಾಗಿ ಹೆಡೆಯ ಛತ್ರ ಪಿಡಿವಯೋಗಿ ನಾರದ ತುಂಬುರಾರುರಾಗ ಮಾಡಿ ಹಾಡುತಿಹರೊ 2 ಗರುಡ ವಾಯು ಸುತರು ನಿನ್ನಪರಮ ವಾಹನರಾಗಿ ಬಹರುಸುರಮುನಿಗಳು ಸಕಲ ನರರುನಿರುತನಾಮ ಜಪಿಸುತಿಹರು 3 ಮಂಗಳ ವಾದ್ಯಗಳು ಮೊಳಗಿಮಂಗಳಾರುತಿಯಾಗಿ ಬೆಳಗಿತಿಂಗಳು ನೇಸರರು ದಿವ್ಯಮಂಗಳ ದೀವಟಿಗರಾಗಿ 4 ಅಮೃತ ನಿನ್ನ ಪಾನತೋರ ಭಕುತರಾಳೆ ಗದಗುವೀರನಾರಾಯಣನೆ ನಿನ್ನದೇನು ವೈಭವವೊ 5
--------------
ವೀರನಾರಾಯಣ