ಒಟ್ಟು 3267 ಕಡೆಗಳಲ್ಲಿ , 121 ದಾಸರು , 2210 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರದ ಪ್ರಿಯ ಕೃಷ್ಣ ನರಾಕಾರ ಜಾರ ಚೋರ ಶೂರ ಧೀರಪ ಘೋರತರವಾದ ಸಂಸಾರ ಸುಖ ದುಃಖಗಳ ಮೀರಿ ಪೊರೆವಂಥ ಬಲು ಭಾರಕರ್ತನೇ ಸೂರಿ ಜನರನು ಸದಾ ಸಾರಸಾಕ್ಷ ಬಿಡದಲೆ ಪಾರುಗಾಣಿಸುವ ದೇವಾ 1 ಮಂದಮತಿಯನಳಿದು ಚಂದದಿ ಸುಮಾರ್ಗವನ್ನು ನಂದದಿಂದ ತೋರ್ಪ ಮುಚುಕುಂದ ವಂದ್ಯನೆ ಎಂದಿಗೆಮ್ಮ ಗತಿಯೆಂದು ಹೊಂದಿ ಬೇಡ್ವ ಭಕುತರ ವÀಂದಿಸುವರ ಭವಬಂಧನ ಬಿಡಿಸುವ ದೇವಾ2 ದಾಶರಥೆ ಎನ್ನ ಕ್ಷೇಶ ನಾಶ ಮಾಡು ದಯದಿ ದಿ ನೇಶ ಶತಕೋಟಿ ಭಾಸ ಸಂಕಾಶ ಶ್ರೀಶ ವಾಸುದೇವ 3
--------------
ಜಗನ್ನಾಥದಾಸರು
ನಾರದ ಮುನಿವರರೆ | ಸದ್ಗುರುವರ ನಾರಾಯಣ ಪ್ರಿಯಶ್ರೀ ಪ ನಾರದ ಮುನಿವರರೆ ನಿಮ್ಮಯ ಚಾರುಚರಣಕೆ ನಮಿಪೆನು ಆ ದ್ವಾರಕಾಪುರನಿಲಯ ಕೃಷ್ಣನ- ಸಾರ ಪೇಳ್ದಿರಿ ಅ.ಪ. ಪರಮ ಸುಂದರ ರೂಪನು | ಆ ಕೃಷ್ಣನು ಪರತರ ಪರಮಾತ್ಮನು ಶರಣಜನ ಮಂದಾರನಾತನು ಕರುಣಶರಧಿಯು ಕಾಮಜನಕನು ಸರಸಿಜೋದ್ಭವ ಸುರರಿಗಧಿಕನು ಹರಿಯು ಇವನೆಂದರುಹಿದಿರಿ ಗುರು 1 ಲೋಕಮೋಹಕನಯ್ಯನು | ಶ್ರೀಕೃಷ್ಣನು ಲೋಕ ವಿಲಕ್ಷಣನು ಲೋಕ ಕಂಟಕರನ್ನು ಶಿಕ್ಷಿಸಿ ನಾಕ ನಿಲಯರ ಭರದಿ ರಕ್ಷಿಸಿ ಲೋಕ ಕಲ್ಯಾಣವನ್ನು ಗೈದ ತ್ರಿ ಲೋಕದೊಡೆಯನೆಂದರುಹಿದಿರಿ ಗುರು 2 ವಿಧಿ ಶುಭರೂಪನ | ಶ್ರೀಕೃಷ್ಣನ ದೇವಾದಿದೇವೇಶನ ಪಾವನಾಂಘ್ರಿಗಳನ್ನು ಪೂಜಿಸಿ ಸೇವಿಸುವ ಸೌಭಾಗ್ಯವೆಂದಿಗೆ ದೇವ ಕರಿಗಿರಿನಿಲಯ ನರಹರಿ ಯಿವನೆಂಬುದನೆನಗೆ ತಿಳುಹಿರಿ 3
--------------
ವರಾವಾಣಿರಾಮರಾಯದಾಸರು
ನಾರಸಿಂಹನೆ ಧೀರ | ನಂಬಿದೆನೊ ಪೊರೆಯೊ ಶ್ರೀ ರಮಾಪತಿ ವೀರ | ಕರಿಗಿರಿ ವಿಹಾರ ಪ. ಸಾರಿದೆನೊ ನಿನ್ನ ಪದವ ಅನುದಿನ ಸೇರಿಸೆನ್ನನು ಭಕ್ತಕೂಟದಿ ಗಾರು ಮಾಡುವುದುಚಿತವೇ ಹರಿ ಭವ ಸಮುದ್ರದಿ ಅ.ಪ. ತಾಪ | ನಾನಾರಿಗುಸುರಲೊ ಒಡಲ ದುಃಖವ ಭೂಪ | ನೀನಲ್ಲದಿಲ್ಲವೊ ಭವ ಶ್ರೀಪ | ತೋರದಿರು ಕೋಪ ಘುಡು ಘುಡುಸಿ ನೀ ಎನ್ನ ಬೆದರಿಸೆ ತಡೆವೆನೇ ನಿನ್ನ ಕೋಪದಗ್ನಿಗೆ ಬಿಂಕ ಎನ್ನೊಳು ತಡೆಯೊ ಎನ್ನ ದುರುಳತನಗಳ ಕಡುಕರುಣಿ ನೀನಲ್ಲವೆ ಹರಿ ಒಡಲೊಳಗೆ ಪ್ರೇರಕನು ನೀನೆ ನಡಸಿದಂದದಿ ನಡೆವೆನಲ್ಲದೆ ಒಡೆಯ ಎನ್ನ ಸ್ವತಂತ್ರವೇನೊ? 1 ದುರುಳತನದಲಿ ದೈತ್ಯ | ಭೂವಲಯವೆಲ್ಲವ ಉರವಣಿಸಿ ದುಷ್ಕುತ್ಯ | ಎಸಗುತಿರೆ ದುಃಖದಿ ಸುರರು ಮೊರೆಯಿಡೆ ಸತ್ಯ | ದೃಢಮನದಿ ಭೃತ್ಯ ಕರಕರೆ ಪಿತ ಬಡಿಸುತಿರಲು ದೊರೆಯೆ ನೀ ಪೊರೆ ಎಂದು ಮೊರೆಯಿಡೆ ಸರ್ವವ್ಯಾಪಕನೆಂದು ತೋರಲು ತ್ವರಿತದಲಿ ಕಂಭದಲಿ ಬಂದು ಸರಸಿಜವು ಕಂಗೆಡುವೊ ಕಾಲದಿ ಧರಿಸಿ ತೊಡೆಯ ಮೇಲಸುರ ಕಾಯವ ಕರುಳ ಬಗೆದು ಮಾಲೆ ಧರಿಸಿ ಪೊರೆದೆಯೊ ಸ್ತುತಿ ಕೇಳಿ ಬಾಲನ 2 ಅಜಭವಾದಿಗಳೆಲ್ಲ | ಸ್ತುತಿಸಿದರೆ ಮಣಿಯದ ಭುಜಗಶಾಯಿ ಶ್ರೀ ನಲ್ಲ | ನಾ ನಿನ್ನ ಸ್ತುತಿಸಿ ಭಜಿಸಲಾಪೆನೆ ಕ್ಷುಲ್ಲ | ಮಾನವನ ಸೊಲ್ಲ ನಿಜಮನವ ನೀ ತಿಳಿದು ಸಲಹೊ ಕಮಲ ತೋರಿ ಕುಜನನಲ್ಲವೊ ಹಿರಿಯರೆನಗೆ ಪಥ ತೋರುತಿಹರೊ ರಜ ತಮವ ದೂರಟ್ಟಿ ಶುದ್ಧದಿ ಭಜಿಸುವಂದದಿ ಕೃಪೆಯ ಮಾಡಿ ಸುಜನರೆನ್ನನು ಪಾಲಿಸುತ್ತಿರೆ ನಿಜದಿ ಗೋಪಾಲಕೃಷ್ಣವಿಠ್ಠಲ3
--------------
ಅಂಬಾಬಾಯಿ
ನಾರಾಯಣ ಎನ್ನಿರೊ ಸಜ್ಜನರೆಲ್ಲಪ. ಸಾರರಹಿತ ಸಂಸಾರದಲಿ ಪರಸಾರ ಇದು ಎಂದು ಸಂಸಾರಿ ನೀವೆಲ್ಲ ಅ.ಪ. ಇಹಪರ ಸುಖವುಂಟೋ ಇದರ ಫಲಬಹಳ ಕಟ್ಟಿದ ಗಂಟೋ ಘನಮಹಿಮಗೆ ಇದುಮಹಮಹಿಮೆ ಇದಲ್ಲದೆ ಮಹಿಮೆಯೊಳಗಿದುಮಹಾರಸವಾದಂಥ ಮಂತ್ರ ಮಹಭಕುತಿಪೂರ್ವಕವಾಗಿ ಒಮ್ಮೆ 1 ಹಸಿವೆಯ ಶ್ರಮವಿರಲಿ ಹಸಿವಿರದೆ ಹ-ರುಷವು ತಾನಿರಲಿ ರಸಿಕಶ್ರಮ ಕೆರಳಿ ಮಾ-ನಸ ವಶವು ಆಗಲಿ ಆಗದಿರಲಿದೋಷವಾಗಲಿ ಶುದ್ಧವಾಗಲಿ ಶ್ರೀಶನ ಮರೆಯದೆ ಹಾಂಗೆ 2 ಚೋರನೆಂದೆನದೆ ಚಿತ್ತದಲಿಜಾರನೆಂದೆಣಿಸದೆ ಸ್ಮರಣೆ ಮಾತ್ರದಿ ಬಹಳಪಾರರಹಿತ ಅನರ್ಥಸಂಚಿತಹರಣ ಮಾಡುವ ಪವನ ಪ್ರಿಯ ಸರ್ವರಂತÀರ ಹಯವದನ 3
--------------
ವಾದಿರಾಜ
ನಾರಾಯಣ ಕೃಷ್ಣ ಬೆಳಗಾಯಿತೇಳಯ್ಯ ಮೂರು ಲೋಕಂಗಳಿಗೆ ಮಂಗಳವ ಬೀರಯ್ಯ ಪ ಹರಿಹರಿ ಶ್ರೀನಿಲಯ ಪರವಾಸುದೇವ ಅ.ಪ ಬಂದಿರುವರೈ ಬ್ರಹ್ಮ ರುದ್ರೇಂದ್ರರು ತಂದೆ ತಂದಿರುವರೈ ಮಹನಿಧಿ ಕನಡಿ ಧೇನುಗಳ ನಿಂದು ಗಾನವಮಾಡುತಿರುವರಾನಂದದಿ ಗಂಧರ್ವರಪ್ಸರೆಯರಿಂದು ಕುಣಿದಾಡಿ ಕೂಡಿ 1 ದಾಸರೊಡೆ ತುಂಬುರರು ನಾರದರು ಜಯಜಯ ಶ್ರೀಶನೇ ಕೇಶವ ಗಜವರದ ಎಂದು ಆಶ್ರಯಿಸಿ ಚರಣಕ್ಕೆ ಶರಣೆಂದು ಮಣಿಯವರು ದೋಷನಾಶನ ಲೋಕಕಲ್ಯಾಣ ತ್ರಾಣ 2 ಪತಿವ್ರತಾ ಸ್ತ್ರೀಯರುಗಳತಿಶಯ ಮಡಿಯುಟ್ಟು ಹಿತವಾದ ಹುಗ್ಗಿ ಸಜ್ಜಿಗೆಯ ಗೈದು ಪತಿತಪಾವನ ನಿನಗೆ ದಧ್ಯನ್ನ ನೀಡುವರೊ ಕ್ಷಿತಿನಾಥ ನೀನವನು ತೋಷದಿಂ ಭುಜಿಸೊ 3 ರೋಗರುಜಿನಗಳಳಿದು ಆಯುವೃದ್ಧಿಯದಾಗಿ ಭಾಗವತ ಸಕುಟುಂಬ ಸಂತೋಷಗೂಡಿ ಭಾಗವತ ಭಾರತ ರಾಮಾಯಣಗಳ ಹಾಡಿ ಆಗಲೈ ಆಗಮಾರ್ಚನೆ ಆಲಯಗಳೊಳಗೆ 4 ಕಮಲಲೋಚನ ಕೆಟ್ಟ ಸ್ವಪ್ನ ಫಲವಳಿಸಿ ಯಮಕಂಟವಂ ಕಳೆದು ಭ್ರಮೆಗಳನು ನೀಗಿ ಸುಮನಸರ ಕೂಡಿ ಶ್ರೀಹರಿಯ ಗುಣಗಾನ ಮಾಡಿ ಅಮಿತ ಅಮೃತವುಣಿಸೈ 5 ಕ್ಷುಧ್ರಪಾಕೀ-ಚೀನ ಕೊಬ್ಬಿ ಛದ್ರಿಸುತು ಭದ್ರತೆಯನಾಡೊಳಗಸ್ಥಿರತೆಗೈಯುತ್ತ ಆದ್ರಿಅಂಬುಧಿ ಮಧ್ಯೆ ಭಾರತಿಯ ನಲಿಸುತ್ತ ಮುದ್ರೆಯುಂ ಧ್ವಜವನುಂ ನಿನ್ನವಾಗಿರಿಸೈ 6 ಕಾಲಕಾಲಗಳಲ್ಲಿ ಮಳೆಬಿಡದೆ ಸುರಿದು ಶಾಲಿಸಂತರ ಧಾನ್ಯ ಎಲ್ಲೆಲ್ಲು ಬೆಳೆದು ಮಹಿಷಿ ಶ್ರೀಲೋಲ ಕರುಣಿಸೈ ಕನಕವೃಷ್ಟಿಯನು 7 ಎದುರು ನೋಡುತ ನದಿಯು ಹರಿವುದು ಸಾಗರಕೆ ಮುದದಿಂದ ತಾವರೆಯು ಸೂರ್ಯನನ್ನು ವಿಧಿವಶದಿ ಪಾಪಿಗಳು ಯಮಲೋಕವನ್ನು ಸುಧೆಸವಿಯೆ ಭಕ್ತರು ಪರಮಪದವನ್ನು 8 ಮಕ್ಕಳಿಲ್ಲದ ಜನರು ಮಕ್ಕಳನು ಹಡೆದು ಲಕ್ಷ್ಮಿಯೊಲವನು ಹಾಡಿ ಜನರೆಲ್ಲ ದುಡಿದು ಭಕ್ತರಾಗುತ ಸರ್ವ ವಣಿಗೆಗಳು ನಡೆದು ಮುಕ್ತರಪ್ಪಂತೆಲ್ಲರ ಮಾಡು ಜಾಜೀಶ 9
--------------
ಶಾಮಶರ್ಮರು
ನಾರಾಯಣ ನರಸಿಂಹ ಲ- ಕ್ಷ್ಮೀರಮಣನೆ ಪರಬ್ರಹ್ಮ ಪ. ಸಾರಭೋಕ್ತನೆ ಸ್ವತಂತ್ರನೆ ದೋಷವಿ- ದೂರ ಪರಿಪೂರ್ಣಕಾಮ ಅ.ಪ. ಸತ್ವಾದಿಗುಣಾತೀತ ವಿತತ ಸ- ರ್ವೋತ್ತಮ ನಿರುಪಮ ಮಹಿಮ ಪ್ರತ್ಯಗಾತ್ಮ ನಿಗಮಾಗಮವೇದ್ಯ ಸು- ಹೃತ್ತಮ ಮಂಗಲಧಾಮ 1 ವಿಧಿಭವೇಂದ್ರಾದಿ ವಿಬುಧಾಶ್ರಿತಪದ- ಪದುಮ ನೀಲಾಂಬುದಶ್ಯಾಮ ಹೃದಯಾಬ್ಜಮಧ್ಯಸದನ ಸಾಮಜವ- ರದ ಯದುವಂಶಲಲಾಮ 2 ಮಾಯಾತೀತ ಮಹೋನ್ನತ ಸುರಜನ- ಪ್ರಿಯ ದ್ಯೆತ್ಯೇಯನಿರ್ನಾಮ ವಾಯುವಾಹನ ಜನಾರ್ದನ ಲಕ್ಷ್ಮೀನಾ- ರಾಯಣ ತೇ ನಮೋ ನಮಃ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ನರಹರಿಯೆ ಪ. ನಾರಾಯಣ ನರಹರಿಯೆ ಹಯವದನ ಸ್ವಾಮಿ ನೀ ಎನಗೆ ದಯವಾಗೊ ಅ.ಪ. ನಿಗಮವ ಕದ್ದೊಯ್ದ ದುಗುಡ ದೈತ್ಯನ ಕೊಂದು ಆಗಮವ ತಂದು ಅಜಗಿತ್ತೆ ಆಗಮವ ತಂದು ಅಜಗಿತ್ತೆ ಹಯವದನ ಆದಿಮೂರುತಿಯೆ ದಯವಾಗೊ 1 ಕೂರ್ಮರೂಪದಿ ಬಂದು ಆ ಗಿರಿಯನೆತ್ತಿದ ಪ್ರೇಮದಿ ಸುರರಿಗಮೃತವ ಪ್ರೇಮದಿ ಅಮೃತವನಿಕ್ಕಿದ ಹಯವದನ ಸ್ವಾಮಿ ನೀ ಎನಗೆ ದಯವಾಗೊ 2 ಕ್ರೋಡರೂಪದಿ ಬಂದು ಮೂಢದೈತ್ಯನ ಕೊಂದು ರÀೂಢಿಯ ನೆಗಹಿ ಜಗಕಿತ್ತೆ ರÀೂಢಿಯ ನೆಗಹಿ ಜಗಕಿತ್ತೆ ಹಯವದನ ಪ್ರೌಢ ನೀ ಎನಗೆ ದಯವಾಗೊ 3 ಶಿಶುವ ಬಾಧಿಸುತಿರ್ದ ಕಶಿಪನ್ನ ಸೀಳಿದಿ ಕುಶಲದಿಂ ಕರುಳ ಮಾಲೆಯ ಕುಶಲದಿಂ ಮಾಲೆ ಧರಿಸಿದ ಹಯವದನ ಬಿಸಜಾಕ್ಷ ಎನಗೆ ದಯವಾಗೊ 4 ವಾಮನರೂಪದಿ ಬಂದು ಭೂಮಿ ಓರಡಿ ಮಾಡಿ ವ್ಯೋಮಕ್ಕೆ ಚರಣವ ನೀಡಿದೆ ವ್ಯೋಮಕ್ಕೆ ಚರಣವ ನೀಡಿದ ಹಯವದನ ವಾಮನ ಎನಗೆ ದಯವಾಗೊ 5 ಕೊಡಲಿಯ ಪಿಡಿದು ಕಡಿದೆ ದುಷ್ಟನೃಪರ ಹಡೆದ ತಂದೆಯ ಮಾತು ಸಲಿಸಿದೆ ಹಡೆದ ತಂದೆಯ ಮಾತು ಸಲಿಸಿದ ಹಯವದನ ಒಡೆಯ ನೀ ಎನಗೆ ದಯವಾಗೊ 6 ಸೀತೆಗೋಸ್ಕರ ಪೋಗಿ ಸೇತುವೆಯ ಕಟ್ಟಿದೆ ಭೂತ ರಾವಣನ ಮಡುಹಿದೆ ಭೂತ ರಾವಣನ ಮಡುಹಿದೆ ಹಯವದನ ಖ್ಯಾತ ನೀ ಎನಗೆ ದಯವಾಗೊ 7 ಗೊಲ್ಲರ ಒಡನಾಡಿ ಬಲ್ಲಿದಸುರÀನ ಕೊಂದು ಮಲ್ಲರೊಡನಾಡಿ ಮಡುಹಿದೆ ಮಲ್ಲರೊಡನಾಡಿ ಮಡುಹಿದ ಹಯವದನ ಫುಲ್ಲಾಕ್ಷ ಎನಗೆ ದಯವಾಗೊ 8 ತ್ರಿಪುರರ ಸತಿಯರಿಗುಪದೇಶವನಿಕ್ಕಿ ತ್ರಿಪುರರನೆಲ್ಲ ಮಡುಹಿದೆ ತ್ರಿಪುರರನೆಲ್ಲ ಮಡುಹಿದ ಹಯವದನ ನಿಪುಣ ನೀ ಎನಗೆ ದಯವಾಗೊ 9 ತೇಜಿಯನೇರಿ ರಾಹುತನಾಗಿ ನೀ ಮೆರೆದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಹಯವದನ ಭೋಜ ನೀ ಎನಗೆ ದಯವಾಗೊ 10 ವಾದಿರಾಜರಿಗೊಲಿದು ಸ್ವಾದೆಪುರದಲಿ ನಿಂದು ವೇದದ ಕಥೆಯನರುಹಿದೆ ವೇದದ ಕಥೆಯನರುಹಿದ ಹಯವದನ ಮಾಧವ ನೀ ಎನಗೆ ದಯವಾಗೊ 11
--------------
ವಾದಿರಾಜ
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ಲಕ್ಷುಮಿ ಅರಸನೇ ಪ. ನಾರಾಯಣ ಲಕ್ಷುಮಿಅರಸನೆ ಹಯವದನ ಸ್ವಾಮಿ ನೀ ಒಲಿದು ದಯವಾಗು ಅ.ಪ. ಕೊಂಡ ಕ್ರೋಧವೆಂಬ ಕನ್ನಡಿ (ಕೆಂಗಿಡಿ?) ಲೋಭಮೋಹಗಳನುವಾದೊ ಲೋಭಮೋಹಗಳನುವಾದೊ ಹಯವದನ ಸ್ವಾಮಿ ನೀ ಒಲಿದು ದಯವಾಗು 1 ಮನುಗಳ ಕಾಲದಲ್ಲಿ ಜಲದೊಳಗವತರಿಸಿ ಜಗವೇಳು ಧರೆಯ ನೆಗಹಿದೆ ಜಗವೇಳು ಧರೆಯ ನೆಗಹಿದೆ ಹಯವದನ ಮತ್ಸ್ಯವತಾರ ದಯವಾಗು 2 ಕೂರ್ಮಾವತಾರದಲಿ ಭೂಮಿಯ ನೆಗಹಿದೆ ಕೂಡೆ ಸಜ್ಜನರ ಸಲಹಿದೆ ಕೂಡೆ ಸಜ್ಜನರ ಸಲಹಿದೆ ಹಯವದನ ಕೂರ್ಮಾವತಾರ ದಯವಾಗು 3 ದುರುಳ ದಾನವಗಂಜಿ ಕೋರೆದಾಡೆಯಲಿ ನೆಗಹಿದೆ ಕೋರೆದಾಡೆಯಲಿ ನೆಗಹಿದೆ ಹಯವದನ ವರಾಹಾವತಾರ ದಯವಾಗು 4 ಸೊಕ್ಕಿದ ಅಸುರನ ಕರುಳ ಕುಕ್ಕಿ ಮಾಲೆಯ ಮಾಡಿ ಭಕ್ತನಿಗಭಯ ಸಲಿಸಿದೆ ಭಕ್ತನಿಗಭಯ ಸಲಿಸಿದೆ ಹಯವದನ ಅಪ್ಪ ನರಸಿಂಹ ದಯವಾಗು 5 ವಾಮನನಾಗಿ ನೀ ಭೂಮಿದಾನವ ಬೇಡಿ ಭೂಮಿ ಪಾದದಲಿ ಅಳೆದೆಯೊ ಭೂಮಿ ಪಾದದಲಿ ಅಳೆದೆಯೊ ಹಯವದನ ವಾಮನಾವತಾರ ದಯವಾಗು 6 ಹೆತ್ತವಳ ಶಿರ ಕಡಿದು ಕ್ಷತ್ರಿಯಕುಲ ಸವರಿ ಮತ್ತೆ ಕೊಡಲಿಯ ಪಿಡಿದೆಯೊ ಮತ್ತೆ ಕೊಡಲಿಯ ಪಿಡಿದೆಯೊ ಹಯವದನ ಅಪ್ಪ ಭಾರ್ಗವನೆ ದಯವಾಗು 7 ಸೀತೆಗೋಸ್ಕರವಾಗಿ ಸೇತುವೆ ಕಟ್ಟಿಸಿದೆ ಪಾತಕಿ ರಾವಣನ ಮಡುಹಿದೆ ಪಾತಕಿ ರಾವಣನ ಮಡುಹಿದೆ ಹಯವದನ ಖ್ಯಾತ ರಘುನಾಥ ದಯವಾಗು 8 ಕೃಷ್ಣಾವತಾರದಲಿ ದುಷ್ಟಕಂಸನ ಕೊಂದೆ ಹೆತ್ತವಳ ಬಂಧನ ಬಿಡಿಸಿದೆ ಹೆತ್ತವಳ ಬಂಧನ ಬಿಡಿಸಿದೆ ಹಯವದನ ಕೃಷ್ಣಾವತಾರ ದಯವಾಗು 9 ಉತ್ತಮ ಸತಿಯರ ಹೆಚ್ಚಿನ ವ್ರತ ಸವರಿ ಮತ್ತೆ ಹಯವೇರಿ ಮೆರೆದೆಯೊ ಮತ್ತೆ ಹಯವೇರಿ ಮೆರೆದೆಯೊ ಹಯ[ವದನ ಉತ್ತಮ ಬೌದ್ಧ ಕಲ್ಕಿ ದಯವಾಗು] 10 ಅಂಗಜನಯ್ಯನೆ ಮಂಗಳಮಹಿಮನೆ ಗಂಗೆಯ ಪೆತ್ತ ಗರುವನೆ ಗಂಗೆಯ ಪೆತ್ತ ಗರುವನೆ ಹಯವದನ ಮಂಗಳ ಮಹಿಮ ದಯವಾಗು 11 ವಾದಿರಾಜರಿಗೊಲಿದೆ ಸ್ವಾದೆಪುರದಲಿ ನಿಂತೆ ವೇದಾಂತ ಕಥೆಯ ಹರಹಿದೆ ವೇದಾಂತ ಕಥೆಯ ಹರಹಿದೆ ಹಯವದನ ವೇದಮೂರುತಿಯೆ ದಯವಾಗು 12
--------------
ವಾದಿರಾಜ
ನಾರಾಯಣ ನಾರಾಯಣ ನಾರಾಯಣನಾರಾಯಣ ಪ. ಭಕ್ತಿಬೇಕು ಪರಮ ವಿರಕ್ತಿ ಬೇಕು ಹರಿ ಸ-ರ್ವೋತ್ತಮವೆಂಬೊ ನೆನವಿರಬೇಕು1 ಅರಿಷಡ್ವರ್ಗದ ವಿಜಯ ಬೇಕು ಗುರುಕುಲತಿಲಕಗುರುಮಧ್ವಮತ ಬೇಕು ಗುರುಭಕ್ತಿ ಬೇಕು 2 ಹರಿಯ ಡಿಂಗರಿಗರ ಸಂಗ ಬೇಕು ಶಂಖಚಕ್ರ-ಧರನಾಗಿ ಇರಬೇಕು ಸ್ವರೂಪಯೋಗ್ಯತೆ ಬೇಕು 3 ವೇದದಭ್ಯಾಸವು ಬೇಕು ಅದರರ್ಥ ಹರಿಯೆಂಬಬೋಧವಿರಲುಬೇಕು ಖಳರಳಿಯಲುಬೇಕು4 ವಾದಿರಾಜನೊಡೆಯ ಹಯವದನನ್ನ ದಿವ್ಯ-ಪಾದ ನಂಬಿಯಿರಬೇಕು ವರಾದಿಗಳ ಬಯಸುವೋರು 5
--------------
ವಾದಿರಾಜ
ನಾರಾಯಣ ಹರಿ ವಿಠಲ | ಪೊರೆಯ ಬೇಕಿವಳಾ ಪ ಕಾರುಣಿಕ ಹರಿಯೇಅ.ಪ. ನಾದ ಮೂರುತಿ ನಿನ್ನ | ಪಾದಾನುವರ್ತಿ ಇಹಸಾಧು ತರುಳೆಯ ಕಾಯೊ | ವೇದ ವೇದ್ಯಾ |ಶೋಧಿಸಿದ ಸಂಸ್ಕಾರ | ಕಾದಿಹುದು ಸತ್ಪುಣ್ಯಬೋಧವಿದು ಸಂಪಿಗೆಯ | ಸ್ವಾದು ದರ್ಶಾ 1 ಭವ | ಸಾಗರವ ದಾಂಟಿಸುವೆಯೋಗಿ ಕುಲ ಸದ್ವಂದ್ಯ | ಅಗಜೆದರ್ಶನದೀ 2 ಭಾವಿ ಬೊಮ್ಮನ ಮತವ | ಭಾವದಲ್ಯಭಿವೃದ್ಧಿಗೈವ ಹವಣೆಯು ನಿಂದು | ದೇವದೇವೇಶಾಭಾವಿ ಕಾರ್ಯವು ಎನ್ನೆ | ಜೀವಗಂಕಿತಸೂಚಿಭಾವದಲಿ ತೋರಿರುವೆ | ಶ್ರೀ ವರನೆ ಹರಿಯೇ 3 ಕೈವಲ್ಯ | ದಿಂತ ತವದಾಸ್ಯವನುಈ ತರಳೆಗಿತ್ತು ಸುಖ | ದಿಂದ ನಾಗುವುದೋ 4 ಸಾರ್ವ ಭೌಮ ಸ್ವಾಮಿ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ದರ್ವಿಜೀವಿಯನೂಕಾವುದೆನೆ ಭಿನ್ನಪವ | ನೀ ವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಾರಾಯಣ--------ಜಾಯನಮ: ಪ ಸರ್ವವಾರಿಜೋದ್ಭವ ಹರಿ ನೀ ಪೊತ್ತ ಶಿರಲೋಕ ಎರಡೇಳಾರೊಳಾನೇಕ ದ್ವಾದಶಾದಿ-- ಶಾಸನ ಆದಿದಿಕ್ಪಾಲರಾ ಬೇಕಾದ ಹಾಗೆ ಪತಿ ¨್ರಹ್ಮನೀನೆ 1 ಜಗದೊಳು ಹುಟ್ಟಿದ ಪ್ರಾಣಿಗಳಿಗೆ ಎಲ್ಲ ಬಗೆ ಬಗೆ ಸಂಹಾರ ಕರ್ತನಾಗಿ ಅಗಣಿತ ಮಹಿಮ ತಾಮಸಯುಕ್ತನಾದಂಥ ಮೃಗ ಚರ್ಮಾಂಬರಧರ ಮಹಾದೇವನೀನೆ 2 ಸಕಲ ಚರಾಚರ ಸಲಹುತಲಿರುವಂಥ ನಿಕರಾದಿ ಸಾತ್ವಿಕ ನಿಜಧರ್ಮಾದಿ ಅಕಲಂಕ ಮಹಿಮ ಶ್ರೀಹರಿ 'ಹೊನ್ನ ವಿಠ್ಠಲ’ ಸಕಲ ಸ್ವತಂತ್ರನಾದ ಸರ್ವೋತ್ತಮ ನೀನೆ 3
--------------
ಹೆನ್ನೆರಂಗದಾಸರು
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು