ಒಟ್ಟು 19658 ಕಡೆಗಳಲ್ಲಿ , 137 ದಾಸರು , 8696 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಸಾರ ಸಂಸಾರವೆಂಬೆರಿ ಸರ್ವದಿವಾರಾತ್ರಿಯಲಿಸಂಸಾರ ಎನಗೊಂದೆ ಅಲ್ಲದೆ ಸಂಸಾರ ಎನಗುಂಟೇನಯ್ಯಪಸತ್ಯವೆಂಬುದೆನ್ನಸತಿಯು ಶಾಂತವೆಂಬುದೆನ್ನಸುತನುಸತ್ಯವೆಂಬುದೆನ್ನ ಸೊಸೆಯು ನಿಜವಿದೀಗಅತ್ಯಧಿಕ ಗುಣಿಯೆಂಬ ಅಗಣಿತದ ಪಿತನಿರಲುಮಿಥ್ಯವಾದ ಸಂಸಾರದಲಿ ಮಗ್ನರಹರೇ1ಬುದ್ಧಿ ಎಂಬುದೆನ್ನಭ್ರಾತೃ ಭಾವನೆ ಎಂಬುದೆನ್ನಭಾವಅದ್ವೈತವೆಂಬ ಅತ್ತೆ ಅಂತಃಕರಣವೆಂಬ ಮಾವಶುದ್ಧಾತ್ಮವೆಂಬ ಬಂಧು ಸಂಬಂಧವೆನಗಿರಲಾಗಿಈ ದ್ವೈತಸಂಸಾರದಲ್ಲಿ ಮಗ್ನರಹರೇ2ಇಂತು ಸಂಸಾರ ಸುಖ ನಿಜದೊಳಗೆನಗಿರಲುಭ್ರಾಂತದಲ್ಲವೆ ನಿಮ್ಮ ಮಾತಿದೆಲ್ಲಚಿಂತಯಕ ಚಿದಾನಂದ ಚಿನ್ಮಯನೆ ತಾ ಬಲ್ಲಅಂತರಂಗದ ಮಾಟಕೆ ಅವನೆ ಸಾಕ್ಷಿ3
--------------
ಚಿದಾನಂದ ಅವಧೂತರು
ಸಾಕು ಮಾಡಿರವ್ವ ರಂಗನ | ಏಕೆ ದೂರುವಿರೆ? ಪಬೆಟ್ಟು ಬಾಯೊಳಗಿಟ್ಟರೆ ರಂಗ - ಕಚ್ಚಲರಿಯನೆ |ಕಟ್ಟಿರುವೆಯನು ಕಂಡರೆ ಬವ್ವೆಂದು - ಚಿಟ್ಟನೆ ಚೀರುವನೆ ||ರಟ್ಟೆಯ ಹಿಡಿದು ನಡಸಲು ರಂಗ -ದಟ್ಟಡಿಇಕ್ಕುವನೆ |ಭ್ರಷ್ಟ ಮಾತುಗಳನೆಷ್ಟೋ ಕಲ್ಪಿಸಿ |ಪಟ್ಟ ಪಟ್ಟಿಗೆ ರಟ್ಟು ಮಾಡುವುದು 1ಅರಿಯದಂತೆ ನೊರೆಹಾಲನು ಕುಡಿವನೆ -ಕರೆಕರೆಮಾಡುವನೆ |ಇರಲು ಮನೆಯೊಳಗೆ ಬರುತ ನಿಮ್ಮ ಮನೆ - ಮೊಸರನು--------------------ಸುರಿಯವನೆ ||ಸರಸಿಜಾಕ್ಷಿಯರೆ ಪರಿಪರಿಯಿಂದಲಿ |ಹರಲಿ ಮಾಡುವುದಿದು ತರವೇನಮ್ಮ 2ಚಿಕ್ಕ ಚಿಕ್ಕ ಗೋವಕ್ಕಳ ಕೂಡ ಚೆಂಡನಾಡುವಾಗ |----------------------------------------ಸಿಕ್ಕಿತೆನುತ ಬಹು ಚಕ್ಕಂದಾಡುತ |ಗಕ್ಕನೆ ಹೋಗಿ ಕೈಯಿಕ್ಕಿ ತೆಗೆದನೆ 3ಮಾಲೆಗಂಬದೋಪಾದಿಯಲಿ ನೀವು ಬಹಳ ಬೆಳೆದಿರೀಗ |ನೀಲಕುಂತಳೆಯೆ ದಧಿಶೋಧಿಸಿ ಓಲಾಡುತ ಕಡೆವಾಗ ||ಬಾಲಕೃಷ್ಣನಿಗೆ ಜೋಲುವ ಕುಚಗಳು |ನಿಲುಕುವ ಬಗೆ ಹೇಗೆ? ||ಖೂಳಸೆಟವಿಯರು ಕಾಳವಾಗಿಹರು |ಕೇಳಿಕೇಳಿ ಬೇಸತ್ತಿಹೆನಮ್ಮ 4ಫುಲ್ಲನಾಭನಿವ ಒಲ್ಲದನಾದರೆ ಎಲ್ಲ ಒಯ್ದಿಡಬೇಕೆ? |ಖುಲ್ಲತನದಿ ನೀವ್ ನಿಲ್ಲಗೊಡದಿಹಿರಿ ಗುಲ್ಲುತನವು ಸಾಕೆ ||--------------------ಸಲ್ಲದು ಈ ನುಡಿ ಪುರಂದರವಿಠಲಗೆ |ಹಲ್ಲೊಳಗಾತನ ಇಟ್ಟಿರಬೇಡಿ 5
--------------
ಪುರಂದರದಾಸರು
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು
ಸಾಕು ಸಾಕು ಸಂಸಾರ ಸಂಖ್ಯಾಗಿಲ್ಲ ಒಲ್ಲೆ ಒಗೆತನವ ಪ.ಆರುಮಂದಿ ಗಂಡರಾಳುವರು ಎನ್ನಆರುಮಂದಿಗೆ ಮೂರು ಸುತರೆನಗೆಆರು ಮೂರೇಳ್ಪರುಭಾವ - ಮೈದುನರೆಲ್ಲಆರರೆಂದರೆ ಬಿಡರು ಆರಿಗುಸುರಲಮ್ಮ 1ಹತ್ತುಮಂದಿ ಬೆನ್ನ ಮುತ್ತಿಕೊಂಡರೆಮತ್ತೆ ಬಿಟ್ಟೆನೆಂದೆ ಬಿಡಗೊಡರುಅತ್ತಿಗೆ ನಗೆಹಣ್ಣಿ ಹೊತ್ತು ಹೊತ್ತನೊಳೆಮ್ಮನೆತ್ತಿಯೊಳು ಹಸ್ತವಿಟ್ಟೆನ್ನ ಸಲುವರಮ್ಮ 2ಪಂತರೈವರು ಎನ್ನ ತೊಂತ ಹಂತಯೆಂದುಸಂಚಿತದ ಕರ್ಮವನುಣಿಸುವರುವಂಚನೆಯಳಿದ ಪ್ರಪಂಚವನು ಕಳೆದಿಹಮಿಂಚಿನ ಪರಿಯವಿರಿಂಚಿಬರೆದಿಹನಮ್ಮ3ಜೇಷ್ಠನಾಗಿಹ ಪುತ್ರ ಧರ್ಮನ ಅಗಲಿಸಿಭ್ರಷ್ಟ ಆತ್ತೆಯು ಮೈತ್ಯುವಾಗಿಹಳುಮೆಟ್ಟಿಲಿನ ಹೊರಗೆ ಕಣ್ಣಿಟ್ಟು ಸಾಧುಗಳನುದೃಷ್ಟಿಸಿ ನೋಳ್ಪನೆಂದರೆ ಕ್ಷಣ ಬಿಡರಮ್ಮ 4ಒಂಬತ್ತು ಬಾಗಿಲ ಊಳಿಗವನು ಮಾಳ್ಪಕುಂಬತದ ನರತ ಕಾವರ ದಾಳಿಢಂಭಕವನು ಬಿಟ್ಟು ಇಂಬಿನೊಳಟ್ಟು ವಿಶ್ವಂಭರ ಪುರಂದರವಿಠಲ ಧ್ಯಾನದಗುಟ್ಟು5
--------------
ಪುರಂದರದಾಸರು
ಸಾಕ್ಷಾತ್ ಶಿವ ಜಗದೊಳಗೆ ಭವದಿ ಬಂದಿರೆ ಬಳಿಗೆ |ನರನಲ್ಲಾ ನರನಲ್ಲಾ ಗುರುವರ ಪರನು || ನರನಲ್ಲ ನರನಲ್ಲಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಲ್ಲಹುದೆಂಬುದು ಭ್ರಾಂತೀ ||ಗುರುವಿಂದಲ್ಲದೆ ಆಗದು ಶಾಂತೀ || ನರನಲ್ಲ ನರನಲ್ಲ1ತಮ್ಮಂತಲೆ ನೋಡುವರು | ದೇಹದಹಮ್ಮಿಂದಲೆ ಕೆಡುತಿಹರೂ || ನರನಲ್ಲ ನರನಲ್ಲ2ಭ್ರಾಂತದ ಮಾತೂ ಗುಹ್ಯೇಕಾಂತದಿ |ಇಹುದೇನೋ | ನರನಲ್ಲ ನರನಲ್ಲ3ಗುರುಶಂಕರ ಪರಬ್ರಹ್ಮ ಒಂದೆ ಎಂದೊದರಿತೊಶ್ರುತಿನಿಯಮಾ || ನರನಲ್ಲ ನರನಲ್ಲ4
--------------
ಜಕ್ಕಪ್ಪಯ್ಯನವರು
ಸಾಂಖ್ಯತಾರಕ ಅಮನಸ್ಕಾ ಬಿರುದಂತಾಗಿತೆಗೆವುದುಮಾಯೆಮುಸುಕುಪಜೀವನು ನೀನಲ್ಲವೆಂದು ನನಗಾವ ಪ್ರಪಂಚವು ಕಾರಣವಿಲ್ಲೆಂದುಇವ ಬ್ರಹ್ಮವು ನೀ ಸತ್ಯವೆಂದು ಗುರುದೇವನಿಂದಲಿಬೋಧಿಪುದೇ ಸಾಂಖ್ಯ ಎಂದು1ತನ್ನಲ್ಲಿಯೆ ಇಟ್ಟು ಕಣ್ಣು ಒಳಗೊಳಗೆ ತಾಕುಳಿತುಥಳಥಳಿಸುತಲಿನ್ನು ಭಿನ್ನವೆಂಬುದ ಕಳೆದಿನ್ನುಸಂಪನ್ನ ಸುಖವನು ಎಂಬುವುದ ತಾರಕವೆನ್ನು2ಮರತೆ ಮನದ ಎಚ್ಚರದು ಏನು ಕರುಹಿಲ್ಲದವಳಹೊರಗೆಂಬುದನು ಬರೆತುಂಬಿಹ ತೇಜದೊಳ್ ಸದ್ಗುರು ಚಿದಾನಂದನ ಮನವೆಯಿದು3
--------------
ಚಿದಾನಂದ ಅವಧೂತರು
ಸಾಧನ ದೇಹವಿದು62-3ಸಾzನ ದೇಹವಿದುಶ್ರೀ ಪದುಮೇಶ ದಯದಿ ಕೊಟ್ಟ ದೇಹವಿದು ಪವಿಹಿತಾವಿಹಿತವು ಈರ್ವಿಧ ಕರ್ಮದಿವಿಹಿತವ ಪಿಡಿದು ಅಕಾಮ್ಯದಿ ಸಮ್ಯಕ್ ಆಚರಿಸಿಅಹಿಪಶಯ್ಯನ ಸನ್ಮಹಿಮೆಗಳರಿತು ವರಾಹನ ದಯದಲಿ ಪರಸುಖ ಪೊಂದಲು 1ಬೇಸರ ತೊರೆದು ಸುಶಾಸ್ತ್ರವನೋದಿಸಾಸಿರ ನಾಮನಭಾಸುರಗುಣಕ್ರಿಯರೂಪಗಳಈಶನ ದಯದಿ ಸದ್ಯೋಚಿಸಿ ಹಿಗ್ಗುತವಾಸುದೇವನೆ ಸರ್ವೇಶನೆಂದರಿಯಲು 2ವಿಷಯೀಕ್ಷಣಗಳು ಕ್ಷಣಸುಖವೀವುವುಶೇಷಗಿರೀಶನೆ ಅಕ್ಷಯಸುಖದನು ಸುಖಮಯನುದೋಷದೂರ ಶ್ರೀ ಲಕ್ಷ್ಮಿಯ ರಮಣನೆಪೋಷಕ ಮನೋಗತ ತಿಮಿರಕೆ ಪೂಷನು 3ತಾರಕಗುರುಉದಾರ ಸುಮನದಲಿದಾರಿಯ ತೋರಿಸಿ ಉದ್ಧರಿಸಲು ಬಹು ದಯದಿವಿಧಾತೃಸಮೀರಸುಮೇಧರು ಚಿಂತಿಪವಾರಿಧಿಶಯ್ಯ ಪರೇಶನು ತೋರುವ 4ಸಪ್ತ ಸುಸ್ಥಾನದಿ ಮರುತಾದಿಗಳೊಡೆಗುಪ್ತನಾಗಿಪ್ಪ ನಿರ್ಲಿಪ್ತ ನಿರಾಮಯ ಶ್ರೀಕಪನುಸುಪ್ತಿಜಾಗೃತ ಸ್ವಪ್ನಾದಿ ಕಾಲದಿ ಕಾಯುವಆಪ್ತ ಸುಹೃದನಿವಗಾರು ಈಡಿಲ್ಲವು 5ಪಂಚ ಸುನಾಡಿಯೋಳ್ ಪಂಚ ಸುವರ್ಣದಿಪಂಚ ಸುರೂಪ ಸ್ವತಂತ್ರನು ಇರುತಿಹ ಶ್ರೀಹರಿಯುವಿರಿಂಚಸಮೀರಸುಮೇಧರು ಬಹು ವಿಧಚಿಂತಿಸಿ ನಮಿಪ ಪ್ರಪಂಚದ ಒಡೆಯನು 6ಪದುಮದ ದಳಗಳು ಐದು ಮೂರುಂಟುಅದರ ಮೂಲದಿ ಇಹ ಸದಮಲ ಲಕ್ಷ್ಮೀಶಬಾಧಿಪ ಕರ್ಮವ ಸುಡುವ ಸಂಕರುಷಣಸದಮಲ ಪೊರೆಯುವ ಒಳಹೊರಗೆ 7ಶ್ರವಣ ಮನನ ಸುಧ್ಯಾನದ ಬಲವುಶ್ರೀಶನೊಳ್ ಭಕುತಿಯು ನಿಶ್ಚಯ ಸಾಧನ ಗುರುಮಯದಿಶ್ರೀಶನ ಮಹಿಮೆಗಳರಿತು ಸದೃಷದಿಸುರತಟಿನಿಯಪೋಲು ಸರಿಪ ಪ್ರೇಮವೆ ಭಕ್ತಿ 8ಮುಕುತಿ ಕೊಡುವ ಜ್ಞಾನ ಭಕುತಿಲಿ ಬರುವುದುಸುಖಮಯ ಶ್ರೀಶನ ದಯವು ಇಲ್ಲದೆ ಇದು ಸಿಕ್ಕದಯ್ಯವಿಕಸಿತಾಬ್ಜಜತಾತಪ್ರಸನ್ನ ಶ್ರೀನಿವಾಸಶ್ರೀಕರ ವ್ಯಾಸ ರಾಮ ಕೃಷ್ಣ ನೃಹರಿ ಕಾಯ್ವ 9
--------------
ಪ್ರಸನ್ನ ಶ್ರೀನಿವಾಸದಾಸರು
ಸಾಧ್ಯವಲ್ಲವು ಮುಕುತಿ ಸಾಧ್ಯವಲ್ಲವುಶುದ್ಧ ಸಾತ್ವಿಕನಾಗಿ ತತ್ವಸಿದ್ಧ ಶೀಲರವೆರಸದಿರಲು ಪ.ಇಷುಭೇದವ ತಾನರಿತು ಸಂತತವಿಷ್ವಕ್ಸೇನನ ಅಂಕವಿಧದೊಳೆಸೆವ ಶ್ರದ್ಧೆಯ ತೋರಿ ಋತುಗಳಗಸಣೆಗಂಜದೆ ಶಶಿಮತನಾಗದೆ 1ಕಕುಭಬದ್ಧನೆನಿಸಿ ಹರಿವಿನಾನಿಖಿಳವಿಷಯಂಗಳ ಮನ್ನಿಸದಖಿಳ ರಾಮಕರ ತತ್ವವ ಜಪಿಸಿಅಕಳಂಕಮತ ಗುಣಧಿಯ ನಂ¨ದೆ 2ಪರನಾರಿಯರಿಗೊಮ್ಮೆ ಮನಸೋತಿರದೆ ಚಿತ್ತದ ಹರಿಯಂ ಮುರಿದುಗುರುಪೂರ್ಣಜ್ಞಾಜÕದಿ ಪ್ರಸನ್ನವೆಂಕಟಅರಸನ ಚರಣವ ಸ್ಮರಿಸದೆ ಬರಿದೆ 3
--------------
ಪ್ರಸನ್ನವೆಂಕಟದಾಸರು
ಸಾಂಬಶ್ರೀವಾಹನ ಕುಂಟೋಜೀಶಾ |ಸುಂದರ ಬಸವೇಶಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಜಗದೊಳಗಿಹ ಜನರಘನಾಶ |ಸುಗಮದಿ ಕಡಿವನು ಭವದಪಾಶ|ಅಗಣಿತಶಿವಗಣರೊಳು ಮೆರೆವಅವಿನಾಶ1ಗಳಬೆನ್ನವನಿತ್ತು ಪರೇಶ |ಮಾಳ ಹೊಲಗಳ ನಡಿಸುವನೀಶ |ತಿಳಿ ಮನದೊಳು ಬೆಳಗುವ ಜ್ಯೋತಿ ಪ್ರಕಾಶ2ಧರಣಿಗಧಿಕವಾದ ಕೈಲಾಸ |ಪೊರೆವುತ ಕುಂಟೋಜ ನಿವಾಸಾ |ಸ್ಥಿರವಾಗಲು ಶಂಕರಗಾಯಿತು ಉಲ್ಹಾಸ3ಸುಂದರ ಬಸವೇಶ ||
--------------
ಜಕ್ಕಪ್ಪಯ್ಯನವರು
ಸಾಮಜಗಮನೆ ಕೇಳೀ ಮನ ನಿಲ್ಲದುಸ್ವಾಮಿಯ ಕರೆತಾರೆ ನೀರೆ ಪ.ಯಾತರ ಜನುಮ ಇನ್ಯಾತರ ಬಾಳುವೆಪ್ರೀತಿಯಿಲ್ಲವೆ ಎನ್ನಲ್ಲಿ ಅಗಲಿಧಾತುಗುಂದಿಹ್ಯದು ಮತ್ಯಾತಕೆ ಸಲ್ಲವಮ್ಮನಾಥನಿದಿರಿನಲ್ಲಾಸೆ ಉದಿಸೆ 1ಕಣ್ಣಕಜ್ಜಲನಿಲ್ಲದಿನ್ನೇನು ತರವಮ್ಮರನ್ನದುಡುಗೆಭಾರತೋರಪನ್ನಗವಾದವು ಎನ್ನ ಹೂವಿನಹಾರಮನ್ನಿಸಿ ಬರಲೊಲ್ಲನೆ ಎನ್ನೊಲ್ಲನೆ 2ಕೂಡಿದವಳ ಹೀಗೆ ಕಾಡಬಹುದೇನಕ್ಕಬ್ಯಾಡ ಕಠಿಣ ಮನಸುಮುನಿಸುನೋಡೆ ಪ್ರಸನ್ನವೆಂಕಟ ಗಾಡಿಕಾರನು ನೆರದುಆಡಿದನೆ ಕಾಂತೆ ಏಕಾಂತ 3
--------------
ಪ್ರಸನ್ನವೆಂಕಟದಾಸರು
ಸಾಮಧಾನವು ಸಾಮಧಾನ ಪವಮಾನಶ್ರೀಮನ್ಮಹಾಸುಗುಣಧಾಮಸುತ್ರಾಣಪ.ಲೋಕ ಮುಳುಗುವದು ನೀನೀ ಕೆಲಸಮಂಗೈಯೆಸಾಕುವವರ್ಯಾರು ಜಗದೇಕವೀರಶ್ರೀಕಾಂತಸುಪ್ರೀತ ಶೋಕಮೋಹವಿಧೂತಸಾಕು ಬಿಡು ಸೈರಿಸುಪರಾಕುಮುಖ್ಯಪ್ರಾಣ1ಜಗಕೆ ನೀನಾಧರ ಜನ್ಮ ಮೃತಿಭಯದೂರಚಾಗಮಾಗಮವಿಚಾರ ನಿತ್ಯಶೂರಸುಗುಣನಿಧಿ ಲಕ್ಷುಮಿನಾರಾಯಣನ ಕಿಂಕರನೆಮಗುಚಬೇಡೈ ಧರೆಯ ಮುಗಿವೆ ನಾ ಕೈಯ 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸಾಮಾನ್ಯವಲ್ಲ ಶ್ರೀ ಹರಿಸೇವೆ ಪ.ಪಾಮರಜನರಿಗೆಸಾಮಜವರದನ ಪ್ರೇಮದಿ ನೆನೆವುದುತಾಮಸಬುದ್ಧಿಯ ತಾ ತಗ್ಗಿಸದೆಅಪಅಂತರ ಮಲಿನವಳಿಯಲು ಬೇಕು ಸಂತತ ಶ್ರವಣದಿ ಶ್ರೀಕಾಂತನ ಚರಿತವ ಕೇಳಲು ಬೇಕು ಸಂತಸದಿರಬೇಕುಸಂತ ಜನರಗುಣ ಸಂತತ ಮನದಿ ನಿರಂತರದಲಿ ತಾ ಚಿಂತಿಸಬೇಕು 1ಜಾÕನ ಕರ್ಮೇಂದ್ರಿಯಗಳ ನಿಗ್ರಹಿಸಿ ಜಾÕನವ ಸಂಗ್ರಹಿಸಿಹಾನಿ ವೃದ್ಧಿಗಳೆರಡನು ತಾ ಸಹಿಸಿ ದೀನತೆಯನು ವಹಿಸಿ ||ಮಾನಾಪಮಾನ ಸಮಾನವೆಂದರಿದು ನಿಧಾನದಿ ಹರಿಗುಣ ಧ್ಯಾನವ ಮಾಳ್ಪುದು 2ಸರ್ವಾಂತರ್ಯಾಮಿ ಶ್ರೀ ಹರಿಯೆಂದು ಸರ್ವೇಶ್ವರನೆಂದುಸರ್ವರ ಧಣಿ ಸ್ವರಮಣನೆಂದು ಸರ್ವಾನುರಾಗನೆಂದುಸರ್ವ ಮೂರುತಿ ಶ್ರೀ ಪುರಂದರವಿಠಲನಸರ್ವದಾ ಧ್ಯಾನಿಸಿ ಗರ್ವವಳಿಯಬೇಕು 3
--------------
ಪುರಂದರದಾಸರು
ಸಾಯಬೇಕೊಂದು ದಿನ ಎಲೆ ಮನ ಪ.ಮಾಯಾಮಮತೆಯ ಜಾಯಾದಿಗಳ ಸ-ಹಾಯವಿದ್ಧರೀ ಕಾಯವ ತೊರೆದು 1ಎಷ್ಟು ಬದುಕಿದು ಗಟ್ಟ್ಯಾಗಿದ್ದರೂಪಟ್ಟವಾಳಿದರು ಬಿಟ್ಟೆಲ್ಲವನು 2ಕರ್ತಲಕ್ಷ್ಮೀನಾರಾಯಣನಪಾದಭಕ್ತಿಸಾಧನೆಯೊಳ್ ನಿತ್ಯನಾಗಿರು 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸಾಯುಧ ಚತುರ್ವಿಂಶತಿ ವಿಷ್ಣುರೂಪ ಸ್ತೋತ್ರ46ಬಲದ ಅಜಾನುಕರ ಮೊದಲು ಪ್ರದಕ್ಷಿಣದಿಸಲಿಲಜಾದಿಧರರಮಾಪತೇ ನಮಸ್ತೇ ಪಅರವಿಂದ -ಶಂಖ ಸುದರ್ಶನ ಕೌಮೋದಕೀಧರನಮೋ ಕೇಶವ ಶ್ರೀಶ ಬ್ರಹ್ಮೇಶ 1ದರಾಂಬುಜಗದಾಚಕ್ರಧರಶ್ರೀಶ ನಮೋನಾರಾಯಣ ದೋಷದೂರಗುಣಪೂರ್ಣ 2ಕೌಮೋದಕೀಚಕ್ರದರಕಮಲಹಸ್ತನೇನಮೋಮಾಧವಲಕ್ಷ್ಮೀರಮಣ ಮಾಂಪಾಹಿ3ಚಕ್ರ ಕೌಮೋದಕೀ ಪ್ರಫುಲ್ಲ ಅರವಿಂದಶಂಖ ಧರ ಗೋವಿಂದ ನಮೋ ವೇದವೇದ್ಯ 4ಗದಾಸರೋರುಹಶಂಖಚಕ್ರಧರವಿಷ್ಣೋಮೋದಮಯ ಸರ್ವತ್ರ ಬಹಿರಂತವ್ರ್ಯಾಪ್ತ 5ಸಹಸ್ರಾರ ಶಂಖಾಬ್ಜ ಗದಾಧರ ನಮಸ್ತೇಪಾಹಿಮಧುಸೂಧನ ಮಹಾರ್ಹ ಹಯಶೀರ್ಷ6ಅಂಬುಜಗದಾಚಕ್ರ ಶಂಖೀ ತ್ರಿವಿಕ್ರಮನೆಪುಷ್ಪಜಾರ್ಚಿತ ತ್ರಿಪದ ನಮೋ ವಿಶ್ವರೂಪ 7ಶಂಖಾರಿ ಕೌಮೋದಕೀ ಪದ್ಮ ಹಸ್ತನೇಮಂಗಳ ಸುಸೌಂದರ್ಯ ವಾಮನ ನಮಸ್ತೇ 8ಇಂದೀವರಾರಿಗದಾಶಂಖೀ ನಮಸ್ತೇಶ್ರೀಧರ ಸದಾ ನಮೋ ಶ್ರೀವತ್ಸಪಾಹಿ9ಗದಾ ಚಕ್ರ ಪದ್ಮಧರಾಹಸ್ತಹೃಷಿಕೇಶಇಂದ್ರಿಯ ನಿಯಾಮಕ ದೇವದೇವೇಶ 10ಶಂಖಾಬ್ಜರಿಗದಾಧರಪದ್ಮನಾಭಅಕಳಂಕ ಮಹಿಮ ಜಗಜ್ಜನ್ಮಾದಿಕರ್ತ 11ಕಮಲಧರ ಕೌಮೋದಕೀ ಚಕ್ರೀ ಈಶದಾಮೋದರ ದೇವ ಸುಜ್ಞಾನದಾತ 12ಕೌಮೋದಕೀ ಶಂಖ ಅಬ್ಜಾರಿಪಾಣಿನ್ಮಮ ಪಾಪಹರ ಸಂಕರ್ಷಣ ಜಯೇಶ 13ಗದಾಶಂಖ ಚಕ್ರಾಬ್ಜಹಸ್ತ ಮಾಯೇಶಸದಾ ನಮೋ ಳಾಳುಕ ಡರಿವಾಸುದೇವ14ರಥಾಂಗಕಂಬುಗದಾ ಕಮಲಧರ ಪ್ರದ್ಯುಮ್ನಕೃತಿದೇವಿರಮಣ ನಮೋ ಭಾಸ್ವ ಮದ್ ಹೃದಯೇ 15ರಥಾಂಗಗದಾಕಂಬುಕಮಲಹಸ್ತನಮೋಶಾಂತೀಶ ಅನಿರುದ್ಧ ಶರಣು ಮಾಂಪಾಹಿ16ಅರಿಕಮಲಶಂಖ ಗದಾಧರ ಪುರುಷೋತ್ತಮಕ್ಷರಾ ಕ್ಷರೋತ್ತಮ ಪೂರುಷ ಸ್ವತಂತ್ರ ನಮೋಪಾಹಿ17ಪದ್ಮ ಗದಾ ಶಂಖಾರಿಧರಅಧೋಕ್ಷಜನಮೋಮೋದಮಯ ಕಪಿಲ ಭಾಮನ ಡರಕವಿಶ್ವ18ಚಕ್ರಾಬ್ಜ ಗದಾ ಶಂಖ ಭಕ್ತ ರಕ್ಷಕ ನಮೋಸದಾನಂದ ಚಿನ್ಮಯಅನಘಅವಿಕಾರಿ19ಅಬ್ಜಾರಿ ಶಂಖ ಗದಾಧರ ಜನಾರ್ಧನ ನಮೋಅಜಿತಅಜಸಂಸಾರ ಬಂಧ ಹರ ಸುಖದಾ20ದರಗದಾಅರಿಅಬ್ಜಧರ ಉಪೇಂದ್ರ ನಮೋಇಂದ್ರಾನುಜನೇ ಬ್ರಹ್ಮ ರುದ್ರಾದಿ ವಂದ್ಯ 21ದರಸುದರ್ಶನಕಮಲಕೌಮೋದಕೀ ಪಿಡಿದಹರಿಶ್ರೀಯಃಪತಿಅಭಯವರದನೇ ಶರಣು22ಶಂಖ ಕೌಮೋದಕೀ ಅಬ್ಜಾರಿಧರ ಕೃಷ್ಣಸುಖಜ್ಞಾನ ಚೇಷ್ಟಾರೂಪನಮೋ ಶ್ರೀಶ23ಮಧ್ವ ಹೃದ್ವನಜಸ್ಥ ಚತುರ್ವಿಂಶತಿರೂಪಉದ್ದಾಮ ಪರಮಾರ್ತಹರಿಶ್ರೀಶ ಶರಣು24ಮತ್ಸ್ಯಕೂರ್ಮಕ್ರೋಡನರಸಿಂಹವಟುರೇಣು-ಕಾತ್ಮಜ ಶ್ರೀರಾಮ ಕೃಷ್ಣ ಶಿಶು ಕಲ್ಕಿ 25ಆನಂದಚಿನ್ಮಯ ಅನಂತ ರೂಪನೇ ನಮೋವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸನೇ ನಮೋ 26
--------------
ಪ್ರಸನ್ನ ಶ್ರೀನಿವಾಸದಾಸರು
ಸಾರಸಾರಸಾರಹರಿಯಪಾರ ಮಹಿಮ ನಾಮಘೋರಸಂಸಾರಾಬ್ಧಿಶೀಘ್ರೋತ್ತಾರನೌಕಾಧಾಮ 1ವಿಧಿಭವಾದ್ಯಮರೌಘ ಧ್ಯಾನಾಸ್ಪದ ಕಲ್ವದ್ರುಮಪರಮಾಖಿಲ ಭಕ್ತಭವಯಕುಧರವಜ್ರೋಪಮ 2ಭಕ್ತಿ ಜ್ಞಾನ ವೈರಾಗ್ಯ ಭಾಗ್ಯ ನಿವೃತ್ತಿ ಸುಖ ನಿಸ್ಸೀಮಕರ್ತಲಕ್ಷ್ಮೀನಾರಾಯಣನ ಭೃತ್ಯವರ್ಗಕ್ಷೇಮ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ