ಒಟ್ಟು 28225 ಕಡೆಗಳಲ್ಲಿ , 136 ದಾಸರು , 9942 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಣ್ಣು ಮುಚ್ಚೆನ್ನಾ ಆಡಿಸೆಸಣ್ಣವರನ್ನು ಹೊರಗಡಗಿಸೆ ಪಗಟ್ಟಿ ಹುಡುಗರು ಅವರೆಲ್ಲಮಟ್ಟ ಮಾಯಾಗಿ ಹೋದರು ||ಥಟ್ಟನೆದ್ದು ಯನ್ನ ಕೈಯವರಮುಟ್ಟಿಸದಿರೆ ಬಿಡೆ ನಿನ್ನ 1ಪಾಯಿಸ ಹೋಳಿಗೆ ಮಾಡಿಬಾಯಿಗೆ ಕೈದೋರೆಗೋಪಿ||ನಾಯೆರುವಿನೆ ನಿನ್ನ ತಲೆಗೆನೀ ಯೆರಕೊಳ್ಳ ಒಲ್ಲೆನೆನ್ನೆ 2ಅಣ್ಣನ ರಂಬಿಸಿ ಕರೆದುಹಣ್ಣುಗಳವಗೆ ಕೊಡಬೇಡೆ ||ಚಿನ್ನದ ಗೊಂಬೆ ಬಾ ಎಂದುಬಣ್ಣ ಬಣ್ಣದಲೆನ್ನ ಕರೆಯ 3ನೀ ಹಾರ ಮಗನೆಂದುಕೇಳಿಮೇದಿನಿಯೊಳು ನಾ ಹೆಚ್ಚೆನ್ನೆ ||ಹೋದಬಾರಿಹೊಟ್ಟಿಗೆಮಾರಿಹೋದಳೂ ನಿಮ್ಮಮ್ಮನೆನೆ 4ಯನಗೆ ಪಾಪ ನೀನಾಗಿತಿನಲಿಕ್ಕಪ್ಪಚ್ಚಿ ಬೇಡೇ ||ಮಣಿಗುಂಡೆನಗೆ ಕೊಡುಯೆಂದುಮುನಸುಗುಟ್ಟೆನ್ನನು ಕಾಡೇ 5ದೃಷ್ಟಿ ತಾಕಿತು ಮಗಗೆಂದುಕಟ್ಟಿಸೆ ಯಂತ್ರ ಇನ್ನೊಮ್ಮೆ ||ಕೊಟ್ಟು ಅಮ್ಮಿಯ ರಂಬಿಸಿತೊಟ್ಟಿಲೊಳಗಿಟ್ಟು ತೂಗೇ 6ಏನು ಪುಣ್ಯ ಮಾಡಿದೆನೋಕ್ಷೋಣಿಗೆ ಹತಾರ್ಥವಾಗಿ ||ಪ್ರಾಣೇಶ ವಿಠಲನು ನಿನ್ನತಾನೇ ಕೊಟ್ಟನು ಯನಗೆನ್ನ 7
--------------
ಪ್ರಾಣೇಶದಾಸರು
ಕಂದ ಹಾಲ ಕುಡಿಯೊ-ನಮ್ಮ ಗೋ-|ವಿಂದ ಹಾಲ ಕುಡಿಯೊ ಪವೃಂದಾವನದೊಳು ಬಳಲಿ ಬಂದೆಯೊ ರಂಗ ಅ.ಪಶೃಂಗಾರವಾದ ಗೋವಿಂದ-ಚೆಲುವ |ಪೊಂಗೊಳಲೂದುವ ಚೆಂದ ||ಅಂಗನೆಯರ ಒಲುಮೆಯಿಂದ-ನಮ್ಮ |ಮಂಗಳಮೂರತಿಯ ಮೋರೆ ಬಾಡಿತಯ್ಯ 1ಆಕಳೊಡನೆ ಹರಿದಾಡಿ-ನಮ್ಮ |ಶ್ರೀಕಾಂತ ಗೆಳೆಯರ ಕೂಡಿ ||ಲೋಕವಈರಡಿಮಾಡಿ-ನಮ್ಮ |ಸಾಕುವ ಪಾದವು ಬಳಲಿದುವಯ್ಯ 2ಸದಮಲ ಯೋಗಿಗಳೆಲ್ಲ-ನಿನ್ನ |ಪದವ ಬಣ್ಣಿಸುತಿಪ್ಪರೆಲ್ಲ ||ಯದುಕುಲ ಚೌಪಟ ಮಲ್ಲ-ಹಾಲ |ಹದನು ವಿೂರಿತಯ್ಯ ಪುರಂದರವಿಠಲ 3
--------------
ಪುರಂದರದಾಸರು
ಕದ್ದು ಕಳ್ಳಿಯ್ಹಾಂಗ ಮುಯ್ಯಮಧ್ಯರಾತ್ರಿಲೆ ತಂದ ಮ್ಯಾಲೆ ಬುದ್ಧಿವಂತಳೆಸುಭದ್ರಾ ಬುದ್ದಿವಂತಳ ಪ.ಮೂರುಸಂಜಿಯಲಿ ತರುವ ಮುಯ್ಯಘೋರರಾತ್ರಿಯಲೆ ತಂದಮ್ಯಾಲೆಚೋರಳೆಂದು ನಿನಗೆ ನಮ್ಮಊರ ಜನರು ನಗತಾರಲ್ಲ 1ಒಳ್ಳೆ ಮಾನವಂತಿ ಆದ ನೀನುಕಳ್ಳರ ಕಾಲದಿ ಬಾಹೋರೇನತಳ್ಳಿಕೋರಳೆಂದು ನಮ್ಮಪಳ್ಳಿ ಜನರು ನಗತಾರಲ್ಲ 2ಬಹಳೆ ಜಾಣಳು ಆದರೆ ನೀನುಕಾಳರಾತ್ರಿಲಿ ಬಾಹೋರೇನತಾಳ ತಾಳನಿನ್ನ ಕುಶಲಹೇಳಲಿನ್ನ ಹುರುಳು ಇಲ್ಲ 3ಕತ್ತಲಲಿ ಒಬ್ಬ ದೈತ್ಯಎತ್ತಿ ಒಯ್ದರೇನು ಮಾಡುವಿಪಾರ್ಥ ರಾಯನ ಧರ್ಮದಿಂದಮಿತ್ರಿಮಾನವಉಳಿಸಿಕೊಂಡಿ4ಗಾಢ ರಾತ್ರಿಲೆ ಒಬ್ಬ ದೈತ್ಯ ಓಡಿಸಿಒಯ್ದರೇನು ಮಾಡುವಿಮಾಡೋರೇನ ಮೂರ್ಖತನವಮೂಢಳೆಂದು ಜನರು ನಗರೆ 5ಸಂಧ್ಯಾಕಾಲದಿ ಮುಯ್ಯತಂದುನಿಂತೇವ ನಿನ್ನ ದ್ವಾರದಲ್ಲಿಬಂದುನಮ್ಮನ ಕರೆಯಲಿಲ್ಲಸಂದಿ ಹೋಗಿ ಸೇರುªರೇನ 6ನೀಲವರ್ಣನ ತಂಗಿಯರಿಗೆಚಾಲವರಿದು ಕರೆದೆವಲ್ಲಮೇಲುದಯದಿ ಬಂದರೆ ನೀನುಮೂಲೆಗ್ಹೋಗಿ ಸೇರೋರೇನ 7ಭಾಮೆ ರುಕ್ಮಿಣಿ ದೇವಿಯರಿಗೆಕಾಲಿಗೆರಗಿ ಕಲೆಯೋರೆಲ್ಲಆಲಯಕೆ ಬಂದರೆ ನೀನುವ್ಯಾಲನಂತೆ ಅಡಗೋರೇನ 8ಕೃಷ್ಣರಾಯನ ತಂಗಿಯರೆಂಬೋದೆಷ್ಟಗರುವಬಿಡಿಸಲುಬಂದೆವುಪಟ್ಟು ಮಾಡಿ ಬಿಡತೇವೀಗಧಿಟ್ಟ ರಾಮೇಶ ನೋಡುವಿಯಂತೆ 9
--------------
ಗಲಗಲಿಅವ್ವನವರು
ಕರತಾರೆ ಕರತಾರೆ ಶ್ರೀನಿವಾಸನಸುರರರಸ ಸ್ವಾಮಿ ಶ್ರೀ ವೆಂಕಟೇಶನ ಪ.ಬರಹೇಳೆ ಬರಹೇಳೆ ಬೇಗ ಕರಿಗಮನೆ ರಂಗಗೆಸಿರಿರಾಣಿರಮಣ ಘನಾಂಗಗೆಅರಘಳಿಗೆ ಸರಸವಲ್ಲ ಅರಸನಿಲ್ಲದವಳೆ ಸಲ್ಲಸ್ಮರನೆಂಬೊ ಸಿರಿಕಳ್ಳ ಕರುಣ್ಯಿಲ್ಲ 1ಸುಂದರ ಸುಂದರ ಶುಭಮಂದಿರನ್ನ ದಯಾರಸಸುಂದರನ್ನ ವರಕಂಬುಕಂದರನ್ನಚೆಂದಾವರೆಗಣ್ಣವನಸಿಂಧೂರವರದನ್ನ ದೇವೇಂದ್ರಜಿತ ಪಾರಿಜಾತ ತಂದನ್ನ 2ಹೋಯಿತೆ ಹೋಯಿತೆ ಹೊನ್ನಪ್ರಾಯ ಯದುರಾಯ ಬಾರದಾಯಿತೀ ಅವಸ್ಥೆ ಹುಟ್ಟು ಹೊಂದಿಕಾಯಬೇಕೆಂದೊಮ್ಮಿಗೆ ಉದಯವಾದ ಪ್ರಸನ್ವೆಂಕಟರಾಯ ಬಂದ ಫಲಿಸಿತಾನಂದ 3
--------------
ಪ್ರಸನ್ನವೆಂಕಟದಾಸರು
ಕರವಮುಗಿವೇ ಕಮಲನಯನಕರುಣದಿಂದಲಿ ಪಾಲಿಸೊಕರಿವರದ ಶ್ರೀ ಕಮಲನಾಭಕರೆದು ಎನ್ನನು ಮನ್ನಿಸೊ 1ಸ್ಮರಿಸಲರಿಯೇ ಸಿರಿಯ ರಮಣಪರಮಪಾವನ ಪಾದವಾಸ್ಮರನಜನಕಶರಧಿಶಯನಇರಿಸು ಎನ್ನೊಳು ಮೋಹವಾ 2ಬಂಧು ಬಳಗ ಭಾಗ್ಯ ಭೋಗ್ಯ-ದಿಂದ ಸುಖವ ಕಾಣೆನೇದಂದಶೋಕ ಶಮನನೇ ಗೊೀವಿಂದದಾಸನ ಪ್ರಾಣನೇ 3
--------------
ಗೋವಿಂದದಾಸ
ಕರವೊಡ್ಡಿ ಬೇಡುವೆನು ಕಮಲದಳನೇತ್ರಕರುಣದಲಿ ಸಲಹೆನ್ನ ಕಾಮಹರ ಮಿತ್ರ ಪಕಾಯದಲಿ ಬಲವಿಲ್ಲ ಕಂಗಳಿಗೆ ಸುಖವಿಲ್ಲಕೈಯ್ಯೊಳಗೆ ಹಣವಿಲ್ಲ ಬಾಯಬಲವಿಲ್ಲಕಾಯವಿದು ನೀನಿಟ್ಟ ಮಾಯಪಾಶಕೆ ಸಿಕ್ಕಿಹೇಯವಾದುದು ಸಲಹೋ ಹೇ ಲಕ್ಷ್ಮೀರಮಣ 1ಕಾಲನಾಳುಗಳೆಮ್ಮ ಕಾಲಕೈಗಳಕಟ್ಟಿಕಾಲದಂಡದಿ ಬಡಿದು ಕಾಲನೆಡೆಗೈದೂಕಾಲಮೇಘದ ತೆರದಿ ಕಾಲನಂತೆ ಘರ್ಜಿಸುವಕಾಲದಲಿ ಕಾಯ್ವವರ ಕಾಣೆ ನಾಳಿನಲೀ 2ಕರಿರಾಜನನು ಕಾಯ್ದೆ ಕಂಬದಲಿ ಮೈತೋರ್ದೆಖರ ದೂಷಣ ನಿನ್ನ ಕರದಿ ಶಿರ ವರಿದೀಕರುಣದಿಂದಲಿ ದ್ರೌಪದಿಯ ಸೆರಗಿಗಕ್ಷಯವಿತ್ತೆಕರವಿಡಿದು ಸಲಹೆನ್ನ ಕಲುಶ ಸಂಹಾರಾ 3ಕಂದನಪರಾಧವನು ತಂದೆ ಕ್ಷಮಿಸುವ ತೆರದಿಕಂದುಕುಂದುಗಳೆನ್ನೊಳಿರಲು ನೀ ಕ್ಷಮಿಸಿಕಂದನಂದದಿ ನೋಡಿಕಂದರ್ಪಜನಕನೆಚಂದದಲಿ ಸಲಹೊ ಗೋವಿಂದದಾಸನನೂ 4
--------------
ಗೋವಿಂದದಾಸ
ಕರುಣಾಕರ ನಿನ್ನ | ಕರವೊಡ್ಡಿ ಬೇಡುವೆ ||ಕರುಣಿಸು ವರವನ್ನು | ಖರ ಸಂಹಾರ 1ಕರಿರಾಜನು ನಿನ್ನ | ಕರಗುತ ಭಜಿಸಲು ||ಖಗವಾಹನನಾಗಿ | ಕರುಣದೀ ಪೊರೆದೆ 2ಕಡುದಾರಿದ್ರನು | ಕಷ್ಟದಿ ಸ್ಮರಿಸಲು ||ಕರುಣದಿ ಸುಧಾಮಗೆ | ಕರೆದಿತ್ತೆ ವರವ 3ಕಾಲನ ದೂತರು | ಕಾಡುವ ವೇಳ್ಯದಿ ||ಕಂದನ ಕರೆಯೆಗೋ | ವಿಂದನೆ ಪೊರದೇ 4
--------------
ಗೋವಿಂದದಾಸ
ಕರುಣಾದಿ ಪೊರಿ ಎನ್ನ ಗುರುವೇ ಪಶರಣು ಪೊಕ್ಕೆನೊಚರಣಕಮಲಕೆಕರುಣಿಸೆನ್ನನು ಕರುಣಸಾಗರ ಅ.ಪತಾಪತ್ರಯದಿ ಬಹುಬೆಂದೇಭವ-ಪಾಪಮೋಚಕ ನಿಷ್ಪಾಪಿ - ಜನರ ಪಾಲಕಾಪಾಡೊ ನೀ ಎನ್ನಅಪಾರಮಹಿಮನೆದ್ವಾಪರದಿ ಯದುವರನು ಸಾಂ -ಭೂಪ ಬಕನಳಿದು ಸಲಹಿದ -ನಾಪರಿಯಲಿ ಎನ್ನಸಲಹೋ 1ಕಾಮಿತ - ಫಲದ ನೀನೆಂದೂ ಬಲು -ಸ್ವಾಮಿ ನೀ ಗುರುಸಾರ್ವಭೌಮ ನಿನ್ನಂಘ್ರಿಯುಗ -ತಾಮರಸವ ಮನೋ - ಧಾಮಾದಿ ನಿಲಿಸೆಂದೆಆಮಹದ್ಭಯ ಕಳದ ತೆರದಿ 2ತಾತನಿನ್ನನು ಬಾಧೆ ಬಡಿಸೇ ಶಿರಿ-ದಾತಗುರುಜಗನ್ನಾಥ ವಿಠಲನತಿಮಾತು ಲಾಲಿಸಿ ಕಾಯೋ ಯತಿಕುಲ -ಭೀತಿಯನು ಸದೆದು ಪಾಲಿಸ -ನಾಥರಕ್ಷಕನಲ್ಲೆ ಗುರುವರ 3
--------------
ಗುರುಜಗನ್ನಾಥದಾಸರು
ಕರುಣಾಸಾಗರನ ನೋಡಿರೈ ಪತರುಣಾಕರ್Àನಿಭ ಸುಪರಣವಾಹನಗುಣ-ವರಣನ ಮಾಡುವ ಕರ್ಣಹೀನಾಂಶನ ಅ.ಪನಾನಾವಿಧದ ಫಲ ದಾನಮಾಡುವ ಸುರ -ಧೇನುನಿನಗೆ ಸೋತು ಪೋಯಿತಯ್ಯಾಮಾನನಿಧಿಯೆ ಎನ್ನ ನೀನೆ ಕಾ -ನಾನಯ್ಯ ಇದಕೇನುಪಾಯಾದೀನ- ಜನ-ಮಂದಾರ- ಶಾಶ್ವತದಾನಿ ನಿನಪದಧ್ಯಾನ ಮಾಡಿಸೋ 1ಸೇವಕ - ಜನರನ್ನ ಕಾವೋನೀತನು ಎಂಬೊನೀನಿರಲುನಿತ್ಯಆವ ಭಯ ಎನಗೇನು ಇಲ್ಲಾಈ ವಿಧದಿ ಮಹಿಮವ ತೋರಿ ಮೆರೆವ 2ಪಾತಕವನಕುಲ - ವೀತಿಹೋತ್ರನು ಎನಿಸೀದಾತಗುರುಜಗನ್ನಾಥ ವಿಠಲಗತಿಜಾತರೂಪಸುಶಯ್ಯತನಯದೂತನಾದವಗೇನು ಭಯ ನಿ -ರ್ಭೀತನಾಗಿದ್ದೆಲ್ಲ ಕಾರ್ಯವ -ನೀತೆರದಿ ತಾ ಮಾಡುತಿರುವಾ 3
--------------
ಗುರುಜಗನ್ನಾಥದಾಸರು
ಕರುಣಿ ಖಗವರೂಥ ಪಗತರೋಗಜರಾಮರಣಾ 1ಚನಗಿರಿವಾಸ ಎನ್ನಾ 2ಅನ್ನಿಗ ನಾನಲ್ಲ ಶ್ರೀಗುರು ಜ -ಗನ್ನಾಥ ವಿಠಲಾ 3
--------------
ಗುರುಜಗನ್ನಾಥದಾಸರು
ಕರುಣಿಸಬಾರದೆ ಕಂಜನಾಭನೆ ಕೈಯ ಮುಗಿವೆನಯ್ಯಾ ಪ.ವರಫಣಿಗಿರಿ ಸುಸ್ಥಿರಮಂದಿರ ಶ್ರೀಗುರುಜನಾರ್ದನಾಮರಗಣ ಪಾಲಕಅ.ಪ.ಅಪರಾಧಗಳಾಲೋಚಿಸುವರೆ ಸರೀ-ಸೃಪರಾಜನಿಗಳವೆಕೃಪೆಯಿಂದಲಿ ಸಂರಕ್ಷಿಸದಿದ್ದರೀ-ಯಪಕೀರ್ತಿಯು ಶ್ರೀಹರಿ ನಿನಗಲ್ಲವೆ 1ಕನಕಪುರಂದರಮುಖ್ಯ ದಾಸರಂತೆಗುಣವೆನಗಿನಿತಿಲ್ಲಜನರ ವಿಡಂಬನಕೆ ದಾಸನಾದರೂಘನಕೃಪಾರ್ಣವನೆ ಕನಕಾಂಬರಧರ2ಲಕ್ಷ ಮಾತ್ಯಾತಕೆ ಲಕ್ಷ್ಮೀನಾರಾಯಣರಕ್ಷಾಮಣಿ ನೀನೆಪಕ್ಷೀಂದ್ರವಾಹನ ಪಾಪವಿಮೋಚನತ್ರ್ಯಕ್ಷಮಿತ್ರನೆನ್ನಕ್ಷಿಗೋಚರನಾಗಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕರುಣಿಸಿ ಕೇಳು ಕಂದನ ಮಾತನುಗರುಡವಾಹನಗಂಗಾಜನಕಶ್ರೀಹರಿಯೇಪಇತ್ತ ಬಾ ಎಂಬರಿಲ್ಲ ಇರವ ಕೇಳುವರಿಲ್ಲಹತ್ತಿರ ಕುಳ್ಳಿರಿಸಿ ಆದರಿಪರಿಲ್ಲ ||ತತ್ತರ ಪಡುತಿಹೆ ತಾವರೆಲೆಯ ನೀರಂತೆಹತ್ತು ನೂರು ನಾಮವ ಪೊತ್ತ ಶ್ರೀ ಹರಿಯೇ 1ಇಂದಿಗಶನವಿಲ್ಲ ನಿಂದಿರೆ ನೆರಳಿಲ್ಲಒಂದೆ ಸುತ್ತಿಗೆ ತುಂಡು ಅರಿವೆಯಿಲ್ಲ ||ಬೆಂದೊಡಲಿಗೆ ಒಬ್ಬರಯ್ಯೋ ಎಂಬುವರಿಲ್ಲಬಿಂದು ಮಾತ್ರದ ಸುಖಕಾಣಿನಾ ಹರಿಯೇ2ಎಲ್ಲಿದ್ದರೆನಗೊಂದು ನೆಲೆಯಿಲ್ಲ ಶ್ರೀಹರಿಅಲ್ಲ ತಿಂದಿಲಿಯಂತೆ ಬಳಲುವೆನೊ ||ಘುಲ್ಲಲೋಚನ ಪೂರ್ಣ ದಯದಿ ಸಲಹೊ ಎನ್ನಸಲ್ಲದ ನಾಣ್ಯವ ಮಾಡುವರೆ ಹರಿಯೇ 3ನಖಶಿಖ ಪರ್ಯಂತ ನಾನಾ ಹಿಂಸೆಯ ಪಟ್ಟೆಸುಖವೆಂಬುದನು ಕಾಣೆ ಸ್ವಪ್ನದಲುಮುಖವರಿಯದ ರಾಜ್ಯಕ್ಕೆನ್ನನು ಎಳತಂದುಕಕಮಕ ಮಾಡುವುದುಚಿತವೆ ಹರಿಯೇ 4ಇಷ್ಟುದಿವಸ ನಿನ್ನನೆನೆಯದ ಕಾರಣಕಷ್ಟ ಪಟ್ಟೆನು ಸ್ವಾಮಿ ಕಾಯೊ ಎನ್ನ ||ಮುಟ್ಟಿ ಭಜಿಸಲಿಲ್ಲ ಮುರವೈರಿ ನೀ ದಯವಿಟ್ಟು ಸಲಹೊ ಶ್ರೀಪುರಂದರವಿಠಲ5
--------------
ಪುರಂದರದಾಸರು
ಕರುಣಿಸಿ ಬಾರೆಲೆ ತಾಯೆ ಮಾಧವನಾವ್ಯಾಕೃತನಕರೆತಾರೆ ನೀರೆ ಬೇಕಾದವಳನಿನಿತುವಿರಹವಾರಿಧಿಯಲ್ಲಿ ನೂಕಿ ಓಡಿರುವನಲ್ಲೆ ಸಲೆ ಪ.ಬಿಸಜಕುಟ್ಮಳಕುಚವಸೋಂಕಿಮುದದಿ ಪಿಡಿದುಶಶಿಮೊಗದಿ ಮೋಹವನಿಡುವ ನುಡಿವಎಸೆವ ಕೊನೆವಲ್ಲಲಳುಕಿಸಿ ಎನ್ನಅಧರಪೀಯೂಷವನೊಲಿದೊಲಿದು ಸವಿದಕೋವಿದಪೊಸಮದಕರಿಯ ಸೊಂಡಿಲ ತೋಳಲಮರ್ದಪ್ಪಿಮಿಸುನಿಪುತ್ಥಳಿಯ ತೆರದಿ ಮೆರೆದಅಸಿಯ ಮಾಣಿಕಳೆ ಕೇಳಸುರಹರನಾಳಿದನೀಅಸುತೊರೆವೆ ತಾನಪಕಾರೆ ನೀರೆ1ಎಂಟೆರೆಡು ಕಳೆದೋರಿ ಸವಿದೋರಿ ಸುಖಬೀರಿ ಸಲೆಕಂಠಮಾಲೆಯ ಕೊಟ್ಟನೆ ನೆಟ್ಟನೆಎಂಟೆರಡವಸ್ಥೆಗಳ ಮೇಳಿಗೆಯ ಕ್ಷಣಲವಕೆವೆಂಠಣಿಸಿ ಅಮೃತವೆರೆದ ನೆರೆದಕಂಟಕಿಯು ದಾವಳೊ ಹರಿಯನೊಯ್ದಳಕದಿಂಗಂಟಿಕ್ಕಿದಳೊ ಬಿಡದೆ ಮಡದೆಉಂಟು ಮಾಡಿದನಲಾಮಂದಮುಗ್ಥೆಗೆ ಅಸಿಕಕಂಟಕಬಲೆಯ ಕಾಣೆ ಜಾಣೆ 2ಸರಸವಾತಿನ ಜಾಣ್ಮೆಯೆಂತುಸುರುವೆನಬಲೆಹರಣಳಿಯದೆಂದು ಪೇಳೆ ಕೇಳೆನಿರುತವನ ಕಿರುವೆರಳ ಸೌಂದರ್ಯಮಂ ನೆನೆಯುತಿರುವೆ ಪುಸಿಯಲ್ಲ ಕಾಣೆ ಪ್ರಾಣೆಕರುಣಿ ಬಲುನೊಂದರೆಂದದು ತನಗೆಕುಂದುಮರೆಯದಿನಿತೆಲ್ಲ ಒರೆಯೆ ಚತುರೆಯೆಭರದಲೊಮ್ಮದೊಮ್ಮೆ ಬಂದು ಪ್ರಸನ್ನವೆಂಕಟಗಿರಿಯರಸನೆಂದನಕ್ಕ ರಸಿಕ 3
--------------
ಪ್ರಸನ್ನವೆಂಕಟದಾಸರು
ಕರುಣಿಸಿನ್ನಾದರೆ ರಂಗ ಸುರಾರಿಭಂಗಕರುಣಿಸಿನ್ನಾದರೆ ರಂಗ ಪ.ಹುಳು ಹಕ್ಕಿ ನಾಯಿ ನರಿ ಗಿಡ ಹುಲ್ಲು ಮುಳ್ಳುಗಳಜನ್ಮವಾಂತು ನಾ ಬಳಲಿದೆ ರಂಗನೆಲೆಗಾಣೆನಿನ್ನು ಮಾನಿಸನಾಗಿ ವೃಥನಾದೆಗುಳದ ಹಣ್ಣಿಗೆ ಸೊರಗಲ್ಯಾಕೊ ರಂಗ 1ತುದಿಮೊದಲಿಗೆ ಮದ ಮತ್ಸರದಿಂ ಬೇಗುದಿಗೊಂಡು ನಿನ್ನಂಘ್ರಿ ಮರೆದೆನೊ ರಂಗಪದುಮನಾಭನೆ ನನ್ನ ಹೊರೆಯಲಾರೆಯಹುಲ್ಲೆವದನಕ್ಕೆ ಮುಳ್ಳ ಕಡಿವಾಣ್ಯಾಕೊ ರಂಗ 2ಮಲೆತವನಾದರೊದಿಯೊ ನಿನ್ನಂಗಣದೊಳುತೊಳಲುವ ನಾಯಿಗೆ ಕ್ಲೇಶವು ಸಲ್ಲ ರಂಗಹಲವು ದುಷ್ಕøತ ನಿನ್ನ ನಾಮ ಘೋಷಣೆಯಲ್ಲಿನಿಲ್ಲಬಲ್ಲವೆ ಪ್ರಸನ್ವೆಂಕಟ ರಂಗ 3
--------------
ಪ್ರಸನ್ನವೆಂಕಟದಾಸರು
ಕರುಣಿಸೆನಗೆ ಶಂಭೋ ಕರುಣಿಸಯ್ಯಾಶರಣಾರಂದದಿ ನಿನ್ನ ಮನದಿರವರಿಯೆನುಕರವಜೋಡಿಸಿ ದೇವಾ ಚರಣಕೊಂದಿಪೆನು ಪಕ್ಷೋಣಿಯೊಳ್ ಮಾರ್ಕಾಂಡೆಯಂತೆ ಪೂಜಿಸಲಾರೆಮೀನಾಕ್ಷಿಯಂತೆ ಕಾದಿ ಪರಿಸಲಾನರಿಯೇಬಾಣಾಸುರನಂತೆ ತಪಗೈಯ್ಯಲಾರೆ ನಾನುರಾವಣನಂತೆ ಸಾಮಗಾನವನರಿಯೇ 1ಶಿರದಿ ಚಂದಿರನಂತೆ ಶೋಭಿಸಲಾರೆ ಭಕ್ತಿಸ್ಥಿರವರಿಯೆನು ಭೀಮಸೇನನಂತೆಉರಗನಂದದಿ ಕೊರಳಾಭರಣವಾಗಿರಲಾರೆಗಿರಿಜೆಯಂದದಿ ನೆರೆದು ಮುದ್ದಿಸಲರಿಯೆ 2ಮಂದಾಕಿನಿಯಂತೆ ಜಡೆಯಾಲಂಕರಿಸೆನುನಂದೀಶನಂತೆ ಪೊತ್ತು ತಿರುಗಾಡಲರಿಯೆಇಂದ್ರನಂದನನಂತೆ ಭರದಿ ಮೆಚ್ಚಿಸಲಾರೆಬಂದೆನ್ನ ಸಲಹೋ ಗೋವಿಂದನ ಸಖನೆ 3
--------------
ಗೋವಿಂದದಾಸ