ಒಟ್ಟು 1194 ಕಡೆಗಳಲ್ಲಿ , 98 ದಾಸರು , 911 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂರ್ಖರಾದರು ಇವರು ಲೋಕದೊಳಗೆಏಕದೈವವ ಬಿಟ್ಟು ಕಾಕುದೈವವ ಭಜಿಸಿ ಪ.ಒಂಟಿಯಲಿ ಹೆಂಡತಿಯ ಬಿಡುವಾತನೇ ಮೂರ್ಖಗಂಟನೊಬ್ಬನ ಕೈಯಲಿಡುವವನೆ ಮೂರ್ಖನಂಟರಿಗೆ ಸಾಲವನು ಕೊಡುವಾತ ಮೂರ್ಖ - ಜಗಕಂಟಕನಾದವನು ಕಡು ಮೂರ್ಖನಯ್ಯಾ 1ಮುಪ್ಪಿನಲಿ ಹೆಂಡತಿಯ ಮಾಡಿಕೊಂಬವ ಮೂರ್ಖಸರ್ಪನಲಿ ಗಾರುಡವ ನಡಸುವನೆ ಮೂರ್ಖಇಪ್ಪತ್ತು ಒಂದು ಕುಲ ಉದ್ಧರಿಸದವ ಮೂರ್ಖಅಪ್ಪ ರಂಗಯ್ಯನನು ನೆನೆಯದವ ಮೂರ್ಖ 2ಸತ್ತ ಕರುವಿನ ತಾಯ ಹಾಲು ಕರೆವವ ಮೂರ್ಖಒತ್ತೆಯಿಲ್ಲದೆ ಸಾಲ ಕೊಡುವವನೆ ಮೂರ್ಖಹತ್ತೆಂಟು ಬಗೆಯಲಿ ಹಂಬಲಿಸುವವ ಮೂರ್ಖಹೆತ್ತ ತಾಯ್ ಬೈವವನು ಕಡು ಮೂರ್ಖನಯ್ಯ 3ಪಡೆದ ಮಗಳನುಮಾರಿ ಒಡಲಹೊರೆವವ ಮೂರ್ಖಮಡದಿ ಹುಟ್ಟಿದ ಮನೆಯೊಳಿರುವವನೆ ಮೂರ್ಖಬಡತನವು ಬಂದರೆ ಬಯಸಿಕೊಂಬವ ಮೂರ್ಖದೃಡಬುದ್ಧಿಯಿಲ್ಲದವ ಕಡು ಮೂರ್ಖನಯ್ಯ 4ರಾಮನಾಮವ ಸ್ಮರಿಸದಿದ್ಧಾತನೇ ಮೂರ್ಖಹೇಮವನು ಗಳಿಸಿ ಉಣದಿದ್ದವನೆ ಮೂರ್ಖನೇಮದಲಿ ಹಿರಿಯರನು ನೋಡದವ ಮೂರ್ಖ ದುರ್ನಾಮವನು ಕೊಂಬಾತ ಕಡು ಮೂರ್ಖನಯ್ಯ 5ಕಾಶಿಯಲಿ ದೇಹವನು ತೊಳೆಯದಿದ್ದವ ಮೂರ್ಖಭೂಸೂರರಿಗನ್ನವನು ಕೊಡದವನೆ ಮೂರ್ಖಶೇಷಪತಿ ಕೃಷ್ಣನ ನೆನೆಯದವ ಮೂರ್ಖಹರಿದಾಸನಾಗಿರದವನು ಕಡು ಮೂರ್ಖನಯ್ಯ 6ಉಂಡ ಮನೆಗೆರಡನ್ನು ಬಗೆವಾತನೇ ಮೂರ್ಖಕೊಂಡೆಯವ ಪೇಳಿ ತಿರುಗುವವ ಮೂರ್ಖಪುಂಡರೀಕಾಕ್ಷ ಶ್ರೀ ಪುರಂದರವಿಠಲನಕೊಂಡು ಭಜಿಸದ ಮನುಜ ಕಡು ಮೂರ್ಖನಯ್ಯ 7
--------------
ಪುರಂದರದಾಸರು
ಮೋಸ ಹೋದೆನಲ್ಲ -ವಿಠಲ- ಮೋಸ ಹೋದೆನಲ್ಲಾ ಪಆಸೆಬಿಟ್ಟು ಹಂಬಲಿಸಿ |ಹೇಸಿ ನರಕದೊಳಗೆ ಸಿಲುಕಿ ಅ.ಪಪುಷ್ಪ ಶ್ರೀ ತುಳಸಿಯನ್ನು |ಒಪ್ಪದಿಂದ ಮನೆಗೆ ತಂದು ||ಅಪ್ಪ ಕೃಷ್ಣನ ಪೂಜೆಯ ಮಾಡಿ - ಮೇ-|ಲಿಪ್ಪ ಲೋಕದ ಸೂರೆಗೊಳದೆ 1ಕಾಯದಾಸೆಗೆ ಕಂಡುದ ಬಯಸಿ |ನಾಯಿಯಂತೆ ಮನೆಮನೆ ತಿರುಗಿ ||ಮಾಯಾಪಾಶದೋಳಗೆ ಸಿಲುಕಿ |ಜೀಯನಿನ್ನನು ಧ್ಯಾನಿಸಲರಿಯದೆ2ಸತಿಸುತರು- ಪಿತೃ-ಬಾಂಧವರು |ಪಥವ ತೋರಿಸಬಲ್ಲರೆ ಇವರು ||ಗತಿನೀನೇಪುರಂದರವಿಠಲ |ಹಿತವ ತಾಯಿ ತಂದೆ ನೀನು 3
--------------
ಪುರಂದರದಾಸರು
ಯಾಕೆ ಬೆಟ್ಟವನೇರಿ ನಿಂದೆಅವನಿವೈಕುಂಠವೆಂದೆ ಆವಿಧಿಸ್ಮರರ ತಂದೆಪ.ತಮನೆಂಬರಿಯ ತರಿದು ತರಿದು ನಿಗಮವ ತಂದುಕ್ರಮದಿ ಕಮಲೋದ್ಭವಗೆ ಕೊಡುವೆನೆಂದೇರಿದೆಯೊಕಮಲವ್ವೆ ಬರೆ ಕಂಡು ಕಲ್ಲ ಭಾರವನಿಳುಹಿಭ್ರಮಿಸಿರುವಭಾವತೋರಿದೆಯೊ ಖಳೋತ್ತಮನ ದಾಡೆಯಲರಿದು ಈ ತಾಣವೇರಿದೆಯೊ 1ಧೀರ ಶಿಶುವಿನಹಗೆವಿದಾರಿಸುತ ದಶದಿಶದಿಸಾರಿದ ನಿಜರ ನೋಡಿ ಸಲಹಲಿಲ್ಲೇರಿದೆಯೊಮೀರಿ ಮೆರೆವನ ತಲೆಯ ಮೆಟ್ಟಿ ಪಾತಾಳಕಿಳುಹಿತೋರಿದೆಯೊ ತ್ವತ್ಪಾದದಿರವ ಧರೆಯಪಾರುವರಿಗೊಲಿದಿತ್ತ ಪರಿಯಲೇರಿದೆಯೊ 2ಅಸುರ ನೊಯಿದರಸಿಯಳ ಅರಸ ತಂದೇರಿದೆಯೊಪಶುಗಾವಿ ಯೋಗಗಳ ಪುರವ ಪೊಗಲೇರಿದೆಯೊಹೊಸಧರ್ಮಹೊಲಬುತೋರಿದೆಯೊ ಇದರಪೆಸರರುಹಿ ಪೊರೆಯೆನ್ನ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ಯಾದವ ಯದುಕುಲ ಬಾಲನೆ ಬಾರೋಮಾಧವಮದನಗೋಪಾಲನೆ ಬಾರೋ ಪಸಾಧುಗಳೊಡೆಯ ಯಶೋದೆ ನಂದನೆ ಬಾರೋಶ್ರೀಧರ ಸುಗುಣ ಶರೀರನೆ ಬಾರೋ ಅ.ಪಮನೆಮನೆಯೊಳು ಮೊಸರ ಕಡೆವರು ಬಾರೋವನಜಾಕ್ಷಿಯರು ಬೆಣ್ಣೆ ಕೊಡುವರು ಬಾರೋತನಯರೊಡನೆ ಚಂಡಿನಾಟವಾಡಲು ಬಾರೋಕೊನೆ ಬೆರಳೊಳು ಪಿಡಿದ ಕೊಳಲನೂದುತ ಬಾರೋ 1ಸುರರುನಾರದರೆಲ್ಲ ಸ್ಮರಿಸುವರ್ ಬಾರೋಕರವಮುಗಿವೆ ನಿನ್ನ ಚರಣಕ್ಕೆ ಬಾರೋನರನಸಾರಥಿಕೃಷ್ಣ ಹರುಷದಿ ಬಾರೋ 2ಪಾಂಡುಪುತ್ರರ ಪಾಲ ಪಾಹಿಯೆಂಬೆನು ಬಾರೋಕಂಡು ರಕ್ಷಿಸೋ ಎನ್ನಕಮಲನಯನ ಬಾರೋಪಂಡರೀಪುರವಾಸ ಚಂಡವಿಕ್ರಮ ಬಾರೋಅಂಡಜವಾಹನಮಾರ್ತಾಂಡನಂತಿಳಿದು ಬಾರೋ 3ಗಂಧಚಂದನ ಪುಷ್ಪದಿಂದ ಪೂಜಿಪೆ ಬಾರೋಸುಂದರ ಚಿನುಮಯ ಮೂರ್ತಿಯೆ ಬಾರೋಮಂದರಧರಮದನಜನಕನೆ ಬಾರೋಇಂದಿರೆಯರಸ ಗೋವಿಂದನೆ ಬಾರೋ 4
--------------
ಗೋವಿಂದದಾಸ
ಯೋಗಿಬಂದ ಕಣೇ ಚಿದಾನಂದಯೋಗಿಬಂದ ಕಣೇಪೋಗಿ ಮಾಗಿಯು ವಸಂತ ಬಂದಂತೆತಾನಾಗಿ ಭಕುತ ಜನ ಹೃದಯದಾಗರಕೆಪಶಾಂತಕುಂಡಲಗಳನು ತೂಗುತಸ್ವಾಂತನಿರ್ಮಳ ಕೌಪವಸಂತಸದಲಿ ಬಗಿದಳವಡಿಸಿಯ ವಿ-ಶ್ರಾಂತ ಸುಭಸಿತವ ಪೂಸಿ ರಂಜಿಸುತಿಪ್ಪ1ನಿಷ್ಕಲ ಹೃದಯದಲಿ ಒಲೆಯುತಿಪ್ಪಪುಷ್ಕಲ ಜಪಮಾಲೆಯ ಮುಸುಕಿ ನಿಂದಲಿಮಹಾಪ್ರಳಯಂಗಳೆಣಿಸುತ್ತಪುಷ್ಕರಶತಕೋಟಿ ತೇಜನಾಚಿಸುತಿಪ್ಪಇಹಪರ ಪಾದುಕೆ ಮಾಡಿ ಮೆಟ್ಟುತಅಹಿಧರ ಬೆಳಗುತಲಿ ವಿಹಿತದಿಂದಲಿಬ್ರಹ್ಮಗಾನವ ಮಾಡಲು ವಿಷ್ಣುವಹಿಸೆ ಅಮೃತ ಕಳಶದ ಕಳೆಯಸೆಯಲು3ವಿವೇಕ ಧೈರ್ಯರೆಂಬ ಚಡಿಕಾರರುತಾನೆ ಮುಂಗಡೆಯಲಿರ್ದುಸಾವಧಾನದಿ ಪಥವಬಿಡಿಸು ತಿರಲು ಸರ್ವದೇವೆಂದು ಪೊಗಳಿದವಿಜಯಭಟ್ಟಾದೀಶಇಂತು ವೈಭವದಿಂದ ಚಿದಾನಂದನಿಂತ ನಿಜಸ್ಥಿರವಾ ಸಂತಸದಲ್ಲಿ ಕಂಡು ಸರ್ವವ ಮರೆತು ನಾನಂತು ಇಂತೆನಲೇನ ಆತ ತಾನಾಗಿರ್ದ5
--------------
ಚಿದಾನಂದ ಅವಧೂತರು
ರಕ್ಷಿ ರಕ್ಷಿ ರಕ್ಷಿಸಯ್ಯ ಚಿದಾನಂದ ಸ್ವಾಮಿರಕ್ಷ ಶಿಕ್ಷ ಕರ್ತನಾದ ದಯದಿಂದಪದಾಸ ನಿಜವಲ್ಲವೆನೆ ಸಾಕ್ಷಿ ಬೇಕೆ ನಿನ್ನದಾಸರ ದಾಸನಾಗಲಿಕೆಏಸುಕಾಲ ಪರೀಕ್ಷೆ ನಿನ್ನ ನೋಡಲಿಕೆ ಎನ್ನಲೇಸುಹೊಲಬುನಿನ್ನನು ಬಿಡದು ಜೋಕೆ1ನಿನ್ನ ನೋಡೆ ನಾನು ಬೇರೆಯಲ್ಲವಯ್ಯಇದು ಮಾಡಿ ಬಂದ ಸುಕೃತವೇಯೆಲ್ಲನಿನ್ನವನ ನೀನೆ ಕೈವಿಡಿದೆಲ್ಲ ಕೇಳುನಿನ್ನೊಳಗೆನ್ನೊಳಗೆ ಭೇದವೇನೂ ಇಲ್ಲ2ಖೂನವಿಲ್ಲದ ಖೂನದಿಂದ ನಿನ್ನ ಕಂಡೆ ನಾಖೂನವಿದ್ದೂ ವಿಲ್ಲದಂತೆ ಬಲಗೊಂಡೆಧ್ಯಾನ ಮೌನವೆಲ್ಲವ ನಾ ಕಳಕೊಂಡೆಧ್ಯಾನವೆಂತು ನಿನ್ನನೆ ಭಜನೆಗೊಂಡೆ3ನಿನ್ನ ಪಾದವ ನಂಬಿಯೆ ಸಂತೋಷನಾದೆ ನಾನಿನ್ನ ಪಾಡಿ ಪೊಗಳಿ ವಿಶೇಷನಾದೆನಿನ್ನ ಲೀಲೆ ನೆನೆದು ನಾನೀಶನಾದೆನಿನ್ನ ನೋಡಿಯೆ ಕಂಡು ಜಗದೀಶನಾದೆ4ಕೋಟಿ ಶತಶಶಿ ಪ್ರಭೆಯ ತಾಳ್ದ ಅಂದವನ್ನುಪಾಟಿಸಿ ಪೊಗಳಬಲ್ಲೆನೆ ಮುಂದಾನೀಟೆನಿಪದೇವಗುರುಚಿದಾನಂದ ನಿನ್ನನೀಟಿನಂತೆ ನಿಲ್ಲಿಸು ಕರುಣದಿಂದ5
--------------
ಚಿದಾನಂದ ಅವಧೂತರು
ರಕ್ಷಿಸೆವರ ಮಹಲಕ್ಷ್ಮೀಅಕ್ಷಯಗುಣಪೂರ್ಣೆ ಪಪಕ್ಷಿವಾಹನನ ವಕ್ಷಸ್ಥಳದಿರಕ್ಷಿತಳಾದೆ ಸುಲಕ್ಷಣದೇವಿ ಅ.ಪನಿಗಮವೇದ್ಯನ ಗುಣಗಳ ಪೊಗಳುತಲಿಮಿಗೆ ಸಂತೋಷದಲಿಅಗಣಿತಾಶ್ಚರ್ಯನ ಕೊಂಡಾಡುತಲಿಬಗೆ ಬಗೆ ರೂಪದಲಿಖಗವರವಾಹನನಗಧರನಿಗೆ ಪ-ನ್ನಗ ವೇಣಿಯು ಬಗೆ ಬಗೆಯಿಂದರ್ಚಿಸಿಹಗಲಿರುಳೆಡೆ ಬಿಡದಲೆ ಹರಿಯನು ಬಹುಬಗೆಯಲಿ ಸೇವಿಪಭಾಗ್ಯದ ನಿಧಿಯೆ 1ಇಂದಿರೆಶ್ರೀ ಭೂದುರ್ಗಾಂಬ್ರಣಿಯೇ ಸು-ಗಂಧ ಸುಂದರಿಯೆಇಂದುಶೇಖರ ಮೋಹಿಪ ಮೋಹಿನಿಯಸುಂದರವನೆ ಕಂಡುಚಂದಿರಮುಖ ಮುದದಿಂದಲಿ ಶ್ರೀಗೋ-ವಿಂದನು ತಾಳಿದ ಮೋಹಿನಿ ರೂಪವನೆಂದು ಮನದಿ ಆನಂದ ಪಡಲು ಸುರವೃಂದವ ಸ್ತುತಿಸೆ ಮುಕುಂದನ ರಮಣಿಯೆ 2ಕಮಲಾನನೆಕಮಲಾಲಯೆಕಮಲಾಕ್ಷಿಕಮಲೋದ್ಭವೆ ಕಮಲೆಕಮಲಾಸನಪಿತನ ಸತಿಯೆ ಭಾರ್ಗವಿಯೆಕಮಲಾಂಬಿಕೆ ಪಿಡಿದಿಹಕಮಲಪುಷ್ಪಮಾಲೆಯು ಹರುಷದಿ ಶ್ರೀ-ಕಮಲನಾಭ ವಿಠ್ಠಲಗರ್ಪಿಸುತಲಿಕಮಲಪತ್ರದಳಾಕ್ಷಗೆ ನಮಿಸಿ ಸ್ವ-ರಮಣನ ಕರುಣಕೆ ಪಾತ್ರಳೆ ಸುಂದರಿ 3
--------------
ನಿಡಗುರುಕಿ ಜೀವೂಬಾಯಿ
ರಂಗ ರಂಗ ಎಂಬ ನಾಮವ ನೆನೆವರ |ಸಂಗದೊಳಿರಿಸು ಎನ್ನ ಪಅಂಗದೊಳ್ಲೆವರು ದೆಸೆದಸೆಗೆಳೆಯುವ |ಭಂಗವ ಬಿಡಿಸೊ ಹರಿಯೆ-ಸ್ವಾಮಿ ಅ.ಪಹರೆಕೃಷ್ಣ ಎಂದೆಂಬೆಜಿಹ್ವೆತಾನಿರುತಿರೆ |ಬರಿಯೆ ಮಾತಾಡುವೆ ನಾ ||ಗುರು-ಹಿರಿಯರ ವಂದನೆಗೆ ಕರ-ಶಿರವಿರೆ |ಗುರುವಹಂಕಾರತನ ||ಪರಿಪರಿ ಪುಷ್ಪದಲಿ ಪೂಜಿಸದೆ ಅಚ್ಯುತನ |ಮರೆತಿಹೆ ನಾನನುದಿನ |ಅರಿವ ನೋಡಿದರೆ ಎನ್ನಲಿ ಕಾಣೆನೈ ದೇವ |ಮೊರೆಹೊಕ್ಕೆ ಸಲಹೊ ಎನ್ನ-ಸ್ವಾಮಿ 1ವೇದ ಶಾಸ್ತ್ರ ಪುರಾಣ ನಾಮವ ನೆನೆವರ |ಚೋದ್ಯವ ನಾನರಿಯೆನು ||ಹಾದಿಬೀದಿ ತಿರುಗುವ ಜಾರಸ್ತ್ರೀಯಳ ಕಂಡು-ವಿ-|ನೋದಗಳ ಮಾಡುತಿಹೆನು ||ಮಾಧವಗೋವಿಂದ ಎನ್ನದೆ ಕಾಲನ |ಬಾಧೆಗಳಿಗೊಳಗಾದೆನೊ ||ಈ ಧರೆಯೊಳಗೆನ್ನ ರಕ್ಷಿಸುವವರ ಕಾಣೆ |ಶ್ರೀಧರ ನೀನೆ ಸಲಹೊ-ಸ್ವಾಮಿ 2ಮಡದಿ-ಮಕ್ಕಳಿಗೆಲ್ಲ ಒಡವೆ ಬೇಕೆಂಬುವ |ಕಡುಲೋಭತನವ ಬಿಡಿಸೊ ||ಅಡಿಗೆ ಅಡಿಗೆ ನಾರಾಯಣನೆಂಬ ನಾಮವನು |ನುಡಿವ ನಾಲಗೆಗಿರಿಸೊ ||ಪೊಡವಿಯೊಳುಪುರಂದರವಿಠಲರಾಯನೆ ನಿನ್ನ |ಅಡಿಯದಾಸನೆನಿಸೊ-ಸ್ವಾಮಿ 3
--------------
ಪುರಂದರದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ರಂಭೆ-ಊರ್ವಸಿ ರಮಣಿಯರೆಲ್ಲರು ||ಚೆಂದದಿಂ ಭರತನಾಟ್ಯವ ನಟಿಸೆ |ಝಂತಕ ತಕಧಿಮಿ ತದಿಗಣತೋಂ ಎಂದು |ಝಂಪೆತಾಳದಿ ತುಂಬುರನೊಪ್ಪಿಸೆ ||ಧಾಪಮಪಧಸರಿ ಎಂದು ಧ್ವನಿಯಿಂದ |ನಾರದ ತುಂಬುರು ಗಾನವ ಮಾಡಲು |ನಂದಿಯು ಚೆಂದದಿ ಮದ್ದಲೆ ಹಾಕಲು 1ಫಣಿಯ ಮೆಟ್ಟಿ ಬಾಲವ ಕೈಯಲಿ ಪಿಡಿದು |ಫಣಘಣಿಸುತ ನಾಟ್ಯವನಾಡೆ |ದಿನಪಮಂಡಲದಂತೆ ಪೊಳೆಯುವ ಮುಖದೊಳು ||ಚಲಿಸುತ ನೀಲಕೇಶಗಳಾಡೆ |ಕಾಲಲಂದಿಗೆ ಗೆಜ್ಜೆ ಘುಲುಘುಲು ಘುಲುಘುಲು |ಘುಲುರೆಂದು ಉಡಿಗೆಜ್ಜೆ ಗಂಟೆಗಳಾಡೆ ||ದುಷ್ಟ ಕಾಳಿಂಗನ ಮೆಟ್ಟಿ ಭರದಿಂದ |ಪುಟ್ಟಿ ಪಾದವನು ಇಟ್ಟ ಶ್ರೀಕೃಷ್ಣನು |ಮೆಟ್ಟಿದ ತದ್ಧಿಮಿ ತಧಿಗಣತೋಂ ಎಂದು 2ಸುರರುಪುಷ್ಪದ ವೃಷ್ಟಿಯ ಕರೆಯಲು |ಸುದತಿಯರೆಲ್ಲರು ಪಾಡಲು |ನಾಗಕನ್ನೆಯರು ನಾಥನ ಬೇಡಲು |ನಾನಾವಿಧ ಸ್ತುತಿ ಮಾಡಲು ||ರಕ್ಕಸರೆಲ್ಲರು ಕಕ್ಕಸವನೆ ಕಂಡು |ದಿಕ್ಕಿದಿಕ್ಕುಗಳಿಗೋಡಲು ||ಚಿಕ್ಕವನಿವನಲ್ಲ ಪುರಂದರವಿಠಲ |ವೆಂಕಟರಮಣನ ಬೇಗ ಯಶೋದೆ |ಬಿಂಕದೊಳೆತ್ತಿ ಮುದ್ದಾಡೆ ಶ್ರೀಕೃಷ್ಣನ 3
--------------
ಪುರಂದರದಾಸರು
ರಾಮ ಶ್ರೀರಾಮ ಸೀತಾರಾಮ ಶ್ರೀರಾಮರಾಮನೆ ರವಿಕುಲಸೋಮಶ್ರೀರಾಮಪರಾಮ ರಾಮ ರಘುರಾಮನೆ ದಶರಥರಾಮನೆ ಗುಣಗಣಧಾಮನೆ ಶ್ರೀರಘು ಅ.ಪಕೌಸಲ್ಯಾದೇವಿಯ ಕಂದನೆ ರಾಮಕೌಶಿಕಯಜÕವ ಕಾಯ್ದ ಶ್ರೀರಾಮಹಿಂಸಿಸಿದ ತಾಟಕಿಯನು ಕೊಂದರಾಮಧ್ವಂಸಮಾಡಿದೆ ಶಿವಧನು ಮುರಿದುರಾಮಸಂಶಯವಿಲ್ಲದೆ ಸೀತೆಕರವಪಿಡಿದುತನ್ನಂಶದ ಪರಶುರಾಮನಿಗೊಲಿದನೆ ಶ್ರೀ 1ದಶರಥರಾಮ ನೀನರಸನಾಗೆನಲುಅಸುರಾವೇಶದಿ ಕೈಕೆ ವರವ ಯಾಚಿಸಲುಎಸೆವ ಸಿಂಹಾಸನ ತೊರೆದು ಪೊರಮಾಡಲುಶಶಿಮುಖಿಸೀತಾಲಕ್ಷ್ಮಣರ ಕೂಡಿ ಬರಲುಭರತಗೆ ಪಾದುಕೆ ಕೊಡುತಲಿ ಕಳುಹಿಸಿಗುಹನ ಮನ್ನಿಸಿ ವನರಾಜ್ಯದೊಳ್ ಮೆರೆದೆ 2ವನದೊಳುಮಾಯಾಮೃಗವ ಕಂಡು ಸತಿಯುಮನದಿ ಚಿಂತಿಸಿರಾಮ ತೆರಳೆ ರಕ್ಕಸನುವನಜಾಕ್ಷಿ ಸೀತೆಯ ಕಳವಿನಿಂ ತರಲುವನವನಚರಿಸಿ ಪುಡುಕೆ ಕಂಡು ಕಪಿವರನುಶರಧಿಲಂಘಿಸಿ ಸೀತೆಯನು ಕಂಡು ಹನುಮನುಕುರುಹು ಪಡೆದು ಲಂಕೆ ದಹಿಸುತ ಬರಲು 3ಸೇತುಬಂಧನ ಮಾಡಿ ಕಪಿಗಳ ಕೂಡಿನೀತಿ ಪೇಳಿದ ವಿಭೀಷಣಗಭಯ ನೀಡಿಭೂತ ರಾವಣನ ದಶಶಿರವ ಚಂಡಾಡಿಸೀತಾಸಹಿತ ರಾಮ ಪುಷ್ಪಕವನೇರಿಆತುರದಿಂದಿಹ ಭರತನಿಗ್ವಾರ್ತೆಯಪ್ರೀತಿಲಿ ಕಳುಹಿದ ಶ್ರಿ ರಘುರಾಮ 4ಬಂದ ಶ್ರೀರಾಮಚಂದ್ರ ಬಹುಪ್ರೀತಿಯಿಂದಛಂದದಿಂ ಭರತನ ಮನ್ನಿಸಿ ಮುದದಿಂದಕುಂದಣಮಯದ ಸಿಂಹಾಸನ ಚಂದ-ದಿಂದಲೇರುತ ರಾಮ ನಸುನಗೆಯಿಂದಇಂದಿರಾಸೀತಾ ಸಹಿತ ಅಯೋಧ್ಯದಿಬಂದು ಪೊರೆವ ಕಮಲನಾಭ ವಿಠ್ಠಲನು 5
--------------
ನಿಡಗುರುಕಿ ಜೀವೂಬಾಯಿ
ಲೋಕನೀತಿ379ಇಂದೀಗ ಹರಿದಿನವು ಏಕಾದಶಿಯೆಂದುಶೋಭಿಪ ದಿನವುಪಚಂದಾದಿ ವಿಷ್ಣುಸಾಯುಜ್ಯ ಹೊಂದುವುದಕ್ಕೆಅಂದವಾಗಿಹ ದಿನ ಸಂದೇಹವಿಲ್ಲವುಅ.ಪಶರಧಿಮಥಿಸೆ ಸುಧೆಯೂ ಬರಲು ಕಂಡುದುರುಳರೊಯ್ಯಲೂ ಹರಿಯೂಸರ್ವರಿಗುಪವಾಸವೆಂದು ತಾನ್ ಸೆಳೆದನುವರವಿತ್ತ ಮಾಸಕ್ಕೆ ಎರಡೇಕಾದಶಿಯೆಂದೂ1ದಶಮಿ ಒಂದಶನಾಗೈದೂ ಏಕಾದಶಿ ದಿವಸುಪವಾಸವಿರ್ದುಕುಸುಮನಾಭನ ಪೂಜೆಗೈದು ತೀರ್ಥವಗೊಂಡುನಿಶೆಯೊಳ್ ಜಾಗರವಿದ್ದು ಹರಿಕಥೆ ಕೇಳ್ವುದೂ2ವೀಳ್ಯ ಭೋಜನ ಪಾನವೂ ಈ ದಿನರತಿಕೇಳಿನಿದ್ರೆಯು ವಜ್ರ್ಯವೂಖೂಳನಾದರೆ ಯಮನಾಳೊಳ್ ಪಿಡಿದೊಯ್ದುಗೋಳುಗುಡಿಸುವ ಹೇಳಲಸಾಧ್ಯವು3ಅಶನಕ್ಕೆ ಬಿಸಿ ಮಳಲು ತಿನಿಸೀ ವೀಳ್ಯವ್ಯಸನ ಪಾನಕೆ ಉಕ್ಕಂ ತರಸಿ ಬಾಯ್ಗೆರಸಿಮುಳ್ಳು ಹಾಸಿಗೆ ಮೇಲೆ ಮಲಗೆಂದು ಹೊ-ರಳಿಸಿ ಉರಿಕಂಭ ಧರಿಸೆಂಬರ್ಸತಿಪುರುಷರಿಗೆ4ಧ್ರ್ರುವ ಹರಿಶ್ಚಂದ್ರ ಪ್ರಹ್ಲಾದ ತನ್ನಭುವನಕಟ್ಟಳೆಯೊಳ್ ರುಕ್ಮಾಂಗದಭವಹರವ್ರತಗೈದು ಹರಿಪಾದ ಸೇರ್ವರುಭುವನದಿ ಸರ್ವರಿಗ್ಯೋಗ್ಯವೀ ವ್ರತವೂ5ದ್ವಾದಶಿ ವ್ರತವೆಂಬುದು ಶ್ರೇಷ್ಠವು ಬೇಗಸಾಧಿಸಿ ಪಾರಣೆಗೈವುದೂಮೇದಿನಿಯೊಳಂಬರೀಷ ನೀ ವ್ರತಗೈದೂಆದಿಮೂರುತಿ ಗೋವಿಂದನ ಪಾದಸೇರ್ದನೂ6<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ವದರಿ ವದರಿ ತರ್ಕವ ಹೊದ್ದಿದೆ ನರಕವ ಪಸಾಧುಗಳ ಕಂಡು ಕ್ರೋಧಕೆಡೆಗೊಂಡುವಾದಿಸಿ ವಾದಿಸಿ ಕಂಡೆ ಏನ ಎಲೆ ಹಳ್ಳಿ ಕೋಣ1ನರಿಗೆ ಎತ್ತ ಸಿಂಹಕೆ ಎತ್ತಸರಿಯ ಮಾಡೆ ಸಾಟಿಯಹುದೇನೋಡು2ಹರಿಯ ವಂದಿಸಿ ಹರನ ನಿಂದಿಸಿಬರಿದೆ ಬರಿದೆ ಬೆಂಕಿ ಬಿದ್ದೆಯಲ್ಲೋ ರಣಹದ್ದೇ3ಈ ತೆರದಿಂದ ವಾದಗಳಿಂದಮಾತಿನ ಮಾತಿನ ಮಾಲೆಗಳಿಂದ ಕುನಿ ಜನ್ಮಕ್ಕೆ ಹೋದೆ4ಸತ್ಯದಿಂದ ಚಿದಾನಂದನಿತ್ಯನಿತ್ಯದಿ ತಿಳಿಯದುದೆ ವ್ಯರ್ಥ ಕೆಟ್ಟುಹೋದೆ5
--------------
ಚಿದಾನಂದ ಅವಧೂತರು
ವನಜನಾಭನ ಧಾಳಿ ಘನವಾಯಿತಿಂದಿಲಿಂದಮನೆಯೊಳು ನಿಲ್ಲಲಾರೆವಮ್ಮ ಪಚಿನ್ನನ ಸುದ್ದಿನಿತ್ಯಹೇಳುವರು ಹತ್ತರಗೂಡಾ |ಹನ್ನೊಂದೆನ್ನ ಬೇಡವಮ್ಮ ||ಅನ್ಯಾಯದ ಮಾತುಹುಸಿಹುಟ್ಟಿಸಿಯಾಡಿದರೆ ನಮ್ಮ |ಸಣ್ಣವರಾಣೆ ಗೋಪೆಮ್ಮ 1ಪೋರರಾಟಿಕೆಯಾದರೆ ಜನನೋಡೆ ನಿರ್ಭಯದಿ |ಕ್ಷೀರವ ಕುಡಿಯಬೇಕಮ್ಮ ||ಆರೂ ಮನೆಯೊಳಿಲ್ಲದ ಸಮಯದಲ್ಲಿ ಪಾಲು |ಸೋರೆ ಕದ್ದೊಯ್ಯುತಿದ್ದನಮ್ಮ2ಚಿಕ್ಕವರನ್ನು ರಂಬಿಸಿ ಸಕ್ಕರೆ ಕೊಟ್ಟು ಕದ್ದು |ರೊಕ್ಕವ ತನ್ನಿರೆಂಬುವನಮ್ಮ ||ಮಕ್ಕಳಾಟಿಕೆ ಆದರಾಯಿತೆ ನಿನ್ನ ಕಂದ |ರೊಕ್ಕವನೇನು ಮಾಡ್ಯಾನಮ್ಮ 3ಏಕಾಂತ ಮನೆಯೊಳು ಸರು ಹೊತ್ತಿನಲ್ಲಿ ಬಂದು |ಶ್ರೀಕಾಂತನಡಗಿದ್ದನಮ್ಮ ||ಹೇ ಕಾಂತೆ ನಿನ್ನ ಸಲಿಗಿಲ್ಲದೆಂತು ಬಂದನೆಂದು |ಆ ಕಾಂತ ಸಂಗ ಬಿಟ್ಟನಮ್ಮ 4ನೀರೊಳು ನೆರಳೆಂದು ತಿಳಿಯದ ಮಗುವಿಗೆ |ಪೋರನೆಳೆದು ತಾಯಂಬೊನಮ್ಮ ||ಹಾರುತಿರಲು ಸ್ವಾಮಿಯ ದಯೆಯಿಂದ ಕಂಡು ಒಬ್ಬ |ನಾರಿ ಕರಕೊಂಡು ಬಂದಳಮ್ಮ 5ತರಳರಿಗೆಲ್ಲ ಇದರಂತೆ ಹತ್ತಿರೆಂದು ಹೇಳಿ |ಹರಿವಂದು ಹತ್ತಿಕೊಂಬೊನಮ್ಮ ||ಕರುಗಳೆಲ್ಲವು ಹೀಗೆ ಹತವಾಗಿ ಪೋಪವು |ತುರುಗಳ ಗಡಹವಮ್ಮ6ಬಾಲನ ಮನೆಯೊಳಗಿರ ಹೇಳಿ ಉದಕವ |ವಾಲಯಕೆ ತರಹೋದೆನಮ್ಮ ||ಮೂಲೇಶ ಹುಡುಗನ ಕೈಯಕಟ್ಟಿಮನೆಯೆಲ್ಲ |ಹಾಳು ಮಾಡಿಯೇನೋ ತಂದನಮ್ಮ 7ಹುಡುಗರ ಅಂಬೆಯಾಗಿಯೇರಿಸಿಕೊಂಡಾಡಿಸಿ |ಕೆಡಹಿ ಕೈಕಾಲು ಮುರಿದನಮ್ಮ ||ಬಡವರೆಂದರೆ ಪುನಃ ಬಿಡದಲೆ ತಾ ಹತ್ತಿ |ನಡುವ ನೋಯಿಸೀಹ ನೋಡಮ್ಮ 8ಬಾಲೆ ಅದೇನು ಕಾರಣವೋ ತಿಳಿಯದು ನಮ್ಮ |ಮೂಲೆಯಲಡಗಿದ್ದನಮ್ಮ ||ಛೀ ಲಕುಮೀಶ ನಡೆಯೆಂದೆ ಕೈ ಸಂಧಿಸದಾಕಳ |ಮೊಲೆ ಉಂಡಿದ್ದನಮ್ಮ 9ಗಂಡಅತ್ತೆಯ ಮನೆಘೋಗಿ ನಡುವ ಹೆಣ್ಣಾ |ಪುಂಡ ಬಂದಪ್ಪಿಕೊಂಡನಮ್ಮ ||ಕಂಡು ನಾನಿದು ತರವೇನೆಲೆ ರಂಗಾಯೆನ್ನಲು |ಭಂಡು ಮಾಡಿದನು ನೋಡಮ್ಮ 10ಭ್ರಷ್ಟ ಮಾತಲ್ಲವೆ ಬಾಣಂತಿ ಮಂಚದಡಿ ಕೆಂಡ- |ವಿಟ್ಟರೆ ಕಾಸಿಕೊಂಡನಮ್ಮ ||ಥಟ್ಟನೆ ಕಂಡಂಜಿ ಪ್ರಾಣಾಂತಿಕ ಆಯಿತು ಪ್ರಾಣೇಶ |ವಿಠಲನಿಂಥವ ಕಾಣಿರಮ್ಮ 11
--------------
ಪ್ರಾಣೇಶದಾಸರು
ವನದೊಳಗತ್ರಿಯ ಮುನಿವರತರುಣಿಘನಪತಿವ್ರತೆಯೆಂದೆನಿಸಿದಳಾ ರಮಣಿಮನವ ಶೋಧಿಸೆ ಬಂದ ತ್ರಿಮೂರ್ತಿಗಳ ಕಂಡುಅನಸೂಯೆ ತನಯರೆಂದೆನಿಸಿ ತೂಗಿದಳೂ ಜೋ ಜೋ1ಜೋಜೋ ಸತ್ಯಲೋಕೇಶ ಬ್ರಹ್ಮನಿಗೆಜೋಜೋ ಹತ್ತಾವತಾರ ವಿಷ್ಣುವಿಗೆಜೋಜೋಮೃತ್ಯುಂಜಯಮೂರ್ತಿಶಂಕರಗೆಜೋ ಎಂದು ಸ್ತನಪಾನ ಗೈಸಿ ತೂಗಿದಳೂ ಜೋಜೋ2ಸೃಷ್ಟಿಕರ್ತನೆ ಜೋಜೋ ಹಂಸವಾಹನನೆಸೃಷ್ಟಿಪಾಲನೆ ಗರುಡವಾಹನನೆನಿಟಿಲನೇತ್ರನೆ ಜೋಜೋ ನಂದಿವಾಹನನೆಂದುರನ್ನ ತೊಟ್ಟಿಲೊಳಿಟ್ಟು ಪಾಡಿ ತೂಗಿದಳೂ ಜೋಜೋ3ವಾರಿಜಾಸನೆ ಜೋಜೋ ವಾಣೀಶ ಜೋಜೋಸಾರಸಾಕ್ಷನೆ ಜೋಜೋ ಸಿರಿಯರಸ ಜೋಜೋಮಾರವೈರಿಯೆ ಜೋಜೋ ಗೌರೀಶ ಜೋಜೋಮೂರು ಮೂರ್ತಿಯೆ ಜೋಯೆಂದೆನುತತೂಗಿದಳೂ ಜೋಜೋ4ಸುಂದರಮೂರ್ತಿಚತುರಾನನಜೋಜೋಸಿಂಧುಪುರೀಶ ಗೋವಿಂದನೆ ಜೋಜೋಚಂದಿರಧರನೀಲಕಂಧರಜೋಯೆಂದುಚಂದದಿಂದನುಸೂಂiÉು ಪಾಡಿ ತೂಗಿದಳೂ ಜೋಜೋ5xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ