ಒಟ್ಟು 1364 ಕಡೆಗಳಲ್ಲಿ , 106 ದಾಸರು , 1069 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹನುಮಂತ ಹನುಮಂತ ಹನುಮಂತ ಪ ಜನರ ಪೊರೆಯುತ ತತುವರೊಳು ಪ್ರೇರಿತ ಅ.ಪ ಪವಮಾನ ಪವಮಾನ ಪವಮಾನ ಪವಮಾನ ಪರಮ ಪಾವನ ಅಣುಮಹದ್ಘನ ವನಧಿಲಂಘನ ವೀತಿಹೋತ್ರನ ಪಡಿಸಿತೃಪ್ತನ ರಾಮವಂದನ ಮಾಡುತ ಮನದಿ ಆನಂದ ಆನಂದ ಆನಂದ ಆನಂದದಿಂದ ತ್ವರಿಯಾ ಹಾರಿ ಶರಧಿಯಾ ಸೀತಾಕೃತಿಯಾ ಕುಶಲವಾರ್ತೆಯ ಪೇಳಲು ಜೀಯಾ ರಾಮಾಲಿಂಗನದಿಂದ ಆನಂದ ತಾ ನಿಂದಾ ತಾ ನಿಂದ ತಾ ನಿಂದ ನೆರಹಿ ಆನಂದ ರಣಮುಖಕೆಂದಾ ಮಾಡಿಸಿ ನಿಂದಾ ರಾವಣವಧೆಗೆಂದಾ 1 ತ್ರಿಜಗ ಖ್ಯಾತ ಅತಿ ಮಹಾರಥ ಯದುಪತಿ ಪ್ರೀತಾ ಸುರರ ಸೇವಿತಾ ಗರಳಭುಂಜಿತಾ ಸತಿಗೆ ಪೂವಿತ್ತ ಭುಜಬಲಯುತಾ ಧೀಮಂತಾ ಧೀಮಂತಾ ಧೀಮಂತಾ ಧೀಮಂತಾ ಭಾರತೀಕಾಂತಾ ದುರಳ ಮಣಿಮಂತಾ ಸೆಣಸಿಬರೆ ನಿಂತಾ ಹರಣ ಮಾಡಿ ಪಂಥಗೆಲಿದು ತಾ ನಿಂದಾ ಪ್ರಣಯನಾಗಿ ನಿಂತಾ ಕೀಚಕನ ಧ್ವಾಂತದೊಳು ತಾ ನೋಡಿ ತಾ ನೋಡಿ ತಾ ನೋಡಿ ತಾ ನೋಡಿ ಅವನೊಳು ಕೂಡಿ ಕೈಯ ಹಿಡಿದಾಡಿ ಕೇಳಿಯೊಳು ಕೂಡಿ ಉರದಿಶಿರ ನೆಲಕೆ ಈಡಾಡಿ ನಲಿದು ತೋರಿದಾ 2 ಆನಂದ ಆನಂದ ಆನಂದ ಆನಂದ ತಾ ನಿಂದ ಶ್ರೀಮ ದಾನಂದ ಆನಂದ ಬುಧಜನಕ್ಲೇಶದಿಹ ಮನ ನೋಡಿ ಜೀ ಸೂತ್ರ ವ್ಯಾಖ್ಯಾನ ಮಾಡಿ ಪಾವನ ವಾದಿಭಂಜನ ಬಾದರಾಯಣ ಪ್ರೀತಿಪಾತ್ರ ಏಕಾಂತ ಭಕ್ತ ತಾನಿತ್ತ ತಾನಿತ್ತ ತಾನಿತ್ತ ತಾನಿತ್ತ ಜಗಕತಿಮೋದ ಶಾಸ್ತ್ರ ತ್ರಿವಿಧ ತರತಮಭೇದ ನಿತ್ಯ ಕಾರಣ ನಿತ್ಯ ಕಾರ್ಯ ಅನಿತ್ಯ ಪ್ರಕೃತಿ ಸತ್ಯ ಸುಗುಣವೆ ನಿತ್ಯ ನಿತ್ಯ ದ್ವೈತವು ಸತ್ಯವೆಂದ ಶ್ರೀವೇಂಕಟೇಶನ ನಿಜದೂತ 3
--------------
ಉರಗಾದ್ರಿವಾಸವಿಠಲದಾಸರು
ಹರಿ ನಾರಾಯಣ ಹರಿ ನಾರಾಯಣ ನಾಮಂ ಜಯ ಪ. ನಾರಾಯಣ ನಾರದಪ್ರಿಯ ನಾರಾಯಣ ನರಕಾಂತಕನಾರಾಯಣ ನಳಿನೋದರಾ ಅ.ಪ. [ಸುರಸಂಚಯ]ಸುಖಕಾರಣ ದಿತಿಜಾಂತಕ ದೀನಶರಣಮರುತಪ್ರಿಯ ಪಾಂಡವಪ್ರಿಯ ಪರಿಪೂರ್ಣ ಪರಮ ಜಯ1 ಅಘಕುಲವನದಾವಾನಳ ಅತಿಸದ್ಗುಣಗಣ ನಿರ್ಮಲತ್ರಿಗುಣಾತೀತ [ತ್ರಿದಶೇಶ್ವರ]ವಂದಿತ ಜಯ2 ಅತಿಮೋಹನಚರಿತ ನಮೊ ಅತಿಸದ್ಗುಣ ಭರಿತ ನಮೊಹತರಿಪುಪೂರ್ಣಂ ಜಯ ಗತಕಲ್ಮಷ ಹಯವದನ 3
--------------
ವಾದಿರಾಜ
ಹರಿ ವಿಠಲ - ವಿಠಲ ಜಯ ವಿಠಲಾ ಹರಿ ವಿಠಲ - ಜಯ ವಿಠಲ ಪ ಜಯವಿಠಲಾ ನಮೋ ವಿಠಲಾ ಅ.ಪ ಹೇ ಮುರಾರೀ ಶ್ರೀ ಹರೀ ಬಾರೈ ಕೃಪಾಶರನಿಧಿ ಶೌರೀ ಶರಣಾಭರಣನೆಂದೆ ಬಿರುದನ್ನು ಕೇಳಿ ಬಂದೆ ಅರಿಯೆ ಇನ್ನೊಂದ ತಂದೆ ನೀನಾಗಿ ಪೊರೆಯೆಂದೆ ಇನ್ನು ಮುಂದೇ 1 ಇಂದಿರಾ ಮಂದಿರಾ ಹೇ ಸುಂದರಾನಂದ ಕುವರ ವರಾ ಇಂದೀವರಾಕ್ಷ ನಿನ್ನಾ ಸಂದರುಶನವೆನ- ಗೆಂದಿಗಾಹುದೋ ಮನವಾ ನಂದ ಹೊಂದುವುದು ಅಂದೇ 2 ಸರ್ವೇಶಾ ಶಾಶ್ವತ ಸರ್ವೋತ್ತಮ ಪರಮೋದಾರವರ ಸರ್ವಕಾರಣ ಕರ್ತಾ ಸರ್ವಸ್ವತಂತ್ರ ಶಕ್ತ ಸರ್ವತ್ರದಲಿ ವ್ಯಾಪ್ತ ಸರ್ವಾಂತರ್ಯಾಮಿ ಗುಪ್ತ ಶಿರಿಕಾಂತ 3
--------------
ಲಕ್ಷ್ಮೀನಾರಯಣರಾಯರು
ಹರಿಗೆ ಶಿಷ್ಯನು ಬ್ರಹ್ಮ ಕಮಲಜಗೆ ಸನಕಾದಿ ವರಋಷಿಗಳವರನಂತರದಿ ದೂರ್ವಾಸಮುನಿ ಪ್ರಾಜ್ಞತೀರ್ಥರುಮವರಿಗೆ 1 ಘನ ತಪೋನಿಧಿಯೆನಿಸುವಚ್ಚುತ ಪ್ರೇಕ್ಷ್ಯರಾ ತ್ರಿವಿಧ ಜೀವಗುರುವೆನಿಸು ದಶಮತಿಯೆನಿಸುವ | ವನಜನಾಭಾಕ್ಷೋಭ್ಯಮಾಧವನೃಹರಿ ತೀರ್ಥ ರಿನಿತು ನಾಲ್ವರೊಳಗಕ್ಷೋಭ್ಯ ತೀರ್ಥಯತೀಂದ್ರ ಶ್ರೀಪಾದರಿಗೆ ಶಿಷ್ಯರು 2 ಆನಂದತೀರ್ಥವಿರಚಿತ ಗ್ರಂಥಗಳಿಗೆ ತ ತ್ವಾನುಸಾರಾರ್ಥಸುಧೆ ರಚಿಸಿದರ್ಜಯತೀರ್ಥ ಮೌನಿ ವಿದ್ಯಾಧಿರಾಜಂಬಳಿಕ ರಾಜೇಂದ್ರ ಗಾನಕ ಜಯಧ್ವಜಗುರುಪ್ರವರವರಶಿ ಪ್ರಸಾದದಿಂ 3 ವ್ಯಾಸಮುನಿರ್ಯರಾತರ್ವಾಯದಲಿ ಶ್ರೀನಿ ರಾಮಚಂದ್ರತೀರ್ಥರ್ | ಲೇಸಾಗಿ ಮುಂದೆ ಲಕ್ಷ್ಮೀವಲ್ಲಭಾಖ್ಯಯೋ ಶ್ರೀನಾರಾಯಣÁಖ್ಯ ಬಳಿಕ 4 ಜಗನ್ನಾಥ ಮುನಿಯವರ ಬಳಿಕ ಶ್ರೀನಾಥ ತೀ ರ್ಥಗೆ ಶಿಷ್ಯರಾದ ವಿದ್ಯಾನಾಥ ಯೋಗೀಂದ್ರರವರ್ಗೆ ವಿದ್ಯಾಪತಿಗುರು | ಜಗವರಿಯೆ ಮುಂದೆ ವಿದ್ಯಾವಲ್ಲಭಾಖ್ಯಯೋ ಗಿಗೆ ಶಿಷ್ಯನಾದ ವಿದ್ಯಕಾಂತ ಮುನಿವರ್ಯ ವಿದ್ಯಾಪೂರ್ಣರವರ ಬಳಿಕ 5 ವಿದ್ಯಾಸಮುದ್ರ ತೀರ್ಥರವರ್ಗೆ ಶಿಷ್ಯನಾ ತೀರ್ಥಯತೀಂದ್ರ ಶ್ರೀಪಾದರು ಶುದ್ಧ ಮನದಲಿ ಗುರುಪರಂಪರೆ ಸ್ತೋತ್ರವಂ ಪದ್ಮಾಕ್ಷ ಗುರುರಾಮವಿಠಲ ನುಡಿಸಿದ ತೆರದೊ ತಿದ್ದುವುದು ಕರುಣದಿಂ 6
--------------
ಗುರುರಾಮವಿಠಲ
ಹರಿಪಾದಕಮಲಕ್ಕೆ ಮರೆಹೊಕ್ಕ ಬಳಿಕ ಮರಮರ ಮರುಗುವ ಪರಿಯು ಇನ್ನ್ಯಾಕೋ ಪ ಪರಮಪಾವನ ತನ್ನ ಚರಣದಾಸರ ಸ್ಥಿತಿ ಅರಿಯನೆನೆನ್ನುತ ಸ್ಥಿರವಾಗಿ ನಂಬಿ ಅ.ಪ ಕಂತುಪಿತನಧ್ಯಾನ ಚಿಂತಾಮಣಿಯೆಂದು ಚಿಂತಾದೂರನ ನಿಜಸ್ಮರಣೆಯೇ ಪರಷೆಂದು ಸಂತರೊಡೆಯ ಶ್ರೀಕಾಂತನ ಭಜನೆಯೇ ಭ್ರಾಂತಿನೀಗಿಸುವಂಥ ಕಲ್ಪತರುವಿದೆಂದು 1 ಸೃಷ್ಟಿಕರ್ತನ ಕಥನ ಕಷ್ಟನಿವಾರಣ ಅಷ್ಟಮೂರುತಿ ಕೀರ್ತನಷ್ಟಸಂಪದ ಪೂರ್ಣ ಎಷ್ಟು ಮಾತ್ರಕೆ ತನ್ನ ಇಷ್ಟ ಭಕ್ತರಿಗಿಹ್ಯ ಕಷ್ಟ ನಿವಾರಿಸಿದೆ ಬಿಡನೆಂದು ಗಟ್ಟ್ಯಾಗಿ 2 ಧ್ಯಾನಮೂರುತಿ ಎನ್ನ ಮಾನಾಪಮಾನವು ನಿನ್ನಗೆ ಕೂಡಿತು ಎನಗಿನ್ನೇನೆಂದು ಅನ್ಯಾಯವನು ತ್ಯಜಿಸಿ ಧ್ಯಾನವ ಬಲಿಸಿ ಜಾನಕೀಶನೆ ಭಕ್ತಧೇನು ಶ್ರೀರಾಮೆಂದು 3
--------------
ರಾಮದಾಸರು
ಹರಿಸೇವೆ ಕೈಂಕರ್ಯ ಪರಮ ನಿಷಾತೆ |ಪರಿಹರಿಸು ಭವತಾಪ ಜಾಂಬುವತಿ ಮಾತೇ |5 ಭೃತ್ಯ ಜಾಂಬುವಂತನ ತನುಜೆಶ್ರೀ ಮಹಿಳೆಯಂದದಲಿ ಕೃಷ್ಣ ಪ್ರಿಯಳಾದೇ 1 ಮಿಕ್ಕ ಮಹಿಳೆಯರಿಂದ ಲಕ್ಕುಮಿಯ ಆವೇಶಪೊಕ್ಕು ನಿನ್ನಲಿ ಅಧಿಕ ಸರ್ವಕಾಲದಲೀ |ಅಕ್ಕರದಿ ಇದಕೆ ಮಿಗೆ ಲಕ್ಕುಮಿಯು ಇರಲಾಗಚೊಕ್ಕ ಮಾತೆಯು ನೀನು ಶೇಷ ಸಮಳೆನಿಪೇ 2 ಆವೇಶ ನಿನ್ನಲ್ಲಿ ಇಲ್ಲದಿಹ ಸಮಯದಲಿದೇವಿಯರು ಮಿಕ್ಕೈದು ಮಂದಿ ಸಮ ನೀನು |ದೇವಿ ಶಿರಿ ಆವೇಶ ಅಲ್ಪವಿಹ ಸಮಯದಲಿದೇವ ಕಾಮಾದಿಗಳಿಗಧಿಕ ವಿಂಶತಿ ಗುಣದೀ 3 ನಿರ್ಮಲೈ ಕಾಂತಿತ್ವ ವಿಮಲ ಭಕ್ತ್ಯಾದಿಗುಣಅಮಮ ನಿನ್ನಲಿ ಇಹುದು ನೈಜರೂಪಾ |ವಿಮಲ ಸಚ್ಚಾರಿತ್ರೆ ಈ ಮಹಿಯ ಸಂಚಾರನಿರ್ಮಮದಿ ಗೈದಿರ್ಪೆ ಬಧಿರಾಂಧರಂತೇ 4 ದೇಹ ಮಮತೆಯಲಿಂದ ಮನಸೋತು ಕಷ್ಟಕ್ಕೆವಾಹನಾದಿಗಳೇರಿ ತೀರ್ಥಯಾತ್ರೆಗಳಾ |ಬಹುವಾಗಿ ಗೈದಾಗ್ಯು ಪುಣ್ಯ ಹೀನವು ಎಂದುಮಹಿಳೆ ನೀ ವರ್ಣಿಸಿಹೆ ಭಕುತರುಪಕಾರೀ 5 ಪಾದ ದರ್ಶನವೆಂದುಸಾರ್ವಕಾಲದಿ ನೀನು ಚಿಂತಿಸುತಲಿರಲೂ 6 ಕಂಡು ಶ್ರೀಹರಿಯನ್ನು ಅಪರೋಕ್ಷದಲಿ ನೀನುಬಂಡುಣಿಯು ಹರಿಪಾದ ಕಮಲಕ್ಕೆ ಆಗೀ |ಹಿಂಡು ದೈವರ ಗಂಡ ಪಾಂಡುರಂಗನೆ ಎಂದುಮಂಡಿಸಿದೆ ಪರತತ್ವ ತೊಂಡರುಪಕಾರೀ 7 ಕರದಲ್ಲಿ ಧನ್ವಂತ್ರಿ ಪಿಡಿದಮೃತ ಕಲಶದಲಿಹರಿನಯನ ಆನಂದ ಜಲಬಿಂದು ಉದರೇ |ತುರರೂಪಿಯಾದ ಶ್ರೀ ತುಳಸಿಯಲಿ ನೀನರಲುಹರಿ ನಿನ್ನ ಅಗಲದಿಹ ಸರ್ವ ಪೂಜೆಯಲೀ 8 ಶಾಂಭವಿಯುನುತೆ ದೇವಿ ಜಾಂಬುವತಿ ಶ್ರೀ ಹರಿಯಕಾಂಭಂಥ ಸುಜ್ಞಾನ ಭಕುತಿ ವೈರಾಗ್ಯ |ಹಂಬಲದಿ ನಿನ್ನಂಘ್ರಿ ನಮಿಪೆ ತೋರ್ವುದು ಹೃದಯಅಂಬರದಲಿಹ ಗುರು ಗೋವಿಂದ ವಿಠ್ಠಲನ 9
--------------
ಗುರುಗೋವಿಂದವಿಠಲರು
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಹವಣಿಕಿಲಿ ನೀ ಮಾಡು ಸುವಿಚಾರ ಸಾಧನ ಪ ಬಟ್ಟೆ ಬಹುಕ್ಲೇಶವನುಪರಸಿ ಕುವರನ ಕರುಣಾ..........ನಿನ್ನ ನೀನರಿತುಕೋ ...................................................................................ಶ್ವೇತಾ ವಿಮೋರ್ಛಿತಕಿನ್ನುನಿದ್ರಿತ ಕಿಮರ ಮಾತಾಭೂಮಿ ನೀ ಪತಿತ |ರುಕ್ಮವಿಭೂಷಣ ರಹಿತ ಶಾಂತಾ ದಾಂತವಿವಸ್ವಾಂತಬೌದ್ಧೇಯ ಮುನಿಕಾಂತ ||
--------------
ರುಕ್ಮಾಂಗದರು
ಹಂಸವಾಹನಪಿತನೆ _ ಹಂಸಾ ಢಿಭಿಕವೈರಿ ಶೌರಿ _ ಬಾ ಬಾ ಬಾ ಪ ಸಾಸಿರನಾಮದೊಡೆಯ ವಾಸವವಿನುತನೆ ಲೇಸಾಗಿಸ್ತುತಿಸುವೆ _ಬಾ ಬಾ ಬಾ ಅ ವೇದಾವಕದ್ದಂಥ ಉದ್ದಂಡ ದೈತ್ಯನ ಮರ್ಧಿಸಿ ವೇದವ ತಂದು ವೇಧನ ಸಲಹಿದ ಮತ್ಸ್ಯ ಬಾ ಬಾ ಬಾ 1 ಸಿಂಧು ವಿನೊಳಗಿದ್ದ ಮಂದರಗಿರಿಯನ್ನು ಬಂದು ಬೆನ್ನಿಲಿಪೊತ್ತು ತಂದು ಪೀಯೂಷವ ಚಂದದಿ ಸಲಹಿದ ಕೂರ್ಮಸ್ವರೂಪನೆ _ ಬಾ ಬಾ ಬಾ 2 ಕನಕನೇತ್ರನ ಕೊಂದು ಕಾಂತೆಯಹಿಡಿದೆತ್ತಿ ಕನಕಗರ್ಭನಿಗೊಲಿದ ಕಾರುಣ್ಯನಿಧಿಚಂದ್ರ ಕ್ರೋಢ ಯಜ್ಞ ಸ್ವರೂಪನೆ _ ಬಾ ಬಾ ಬಾ 3 ತರುಳನಮೊರೆಕೇಳಿ ದುರುಳನ ಕರುಳನೆ ಬಗೆದು ಕೊರಳೊಳು ಕರುಳ ಧರಿಸಿ ಸುರರನ್ನು ಪೊರೆದಂಥ ಸರ್ವವ್ಯಾಪಿ ಕರುಣಿಯೆ ಮೂರ್ತಿ _ ಬಾ ಬಾ ಬಾ 4 ಅನುಜನ ಪೊರೆಯಲು ತನುವನು ಮರೆಸಿಕೊಂಡು ದಾನವನು ಬೇಡುತ ಬಲಿ ಯನು ತುಳಿದು ಪೊರೆದ ಘನ್ನ ಮಹಿಮ ವಟು ವಾ ಮನ ರೂಪಿಯೆ _ ಬಾ ಬಾ ಬಾ 5 ಕೊಡಲಿಯ ಪಿಡಿಯುತ ಒಡೆಯರ ತರಿದು ಕಡಿದು ಮಾತೆಯ ಪಿತ ನುಡಿಯನು ಸಲಿಸಿದ ಚಂಡವಿಕ್ರಮ ಮಹಿಮ ಭಾರ್ಗವ ಮೂರುತಿ _ ಬಾ ಬಾ ಬಾ 6 ಕಾಂತೆಯನೆಪದಿಂದ ಕದನವ ಹೂಡಿಕೊಂಡು ಅಂತಕಸದನಕೆ ಅರಿಗಳ ತಳ್ಳುತ ಶಾಂತತೆ ಬೀರಿಪೊರೆದ ದಶರಥ ರಾಮನೆ _ ಬಾ ಬಾ ಬಾ 7 ಚೋರತನದಿ ಬಲು ಬೆಣ್ಣೆಯ ಮೆಲ್ಲುತ ಜಾರತನದಿ ಋಷಿ ಸ್ತ್ರೀಯರಿಗೊಲಿದಂಥ ಮಾರಜನಕ ಶ್ರೀ ರುಕ್ಮಿಣಿ ಕೃಷ್ಣ _ ಬಾ ಬಾ ಬಾ 8 ವೇದಗೋಚರ ವಿಶ್ವ ವೇದ ಬಾಹ್ಯರಿಗೆಲ್ಲ ವೇದ ವಿರುದ್ಧವಾದ ವಾದಗಳ ತೋರಿ ನಿಂದು ಬೆತ್ತಲೆ ಮೆರದ ಬೌದ್ಧ ಸ್ವರೂಪನೆ _ ಬಾ ಬಾ ಬಾ 9 ಕಲಿಬಾಧೆ ಹೆಚ್ಚಾಗೆ ಕಲಿಯುಗ ಕೊನೆಯಲ್ಲಿ ಮಲಿನಾರ ಮರ್ಧಿಸಿ ಉಳಿಸಲು ಧರ್ಮವ ಚಲುವ ರಾಹುತನಾದ ಕಲ್ಕಿ ಸ್ವರೂಪನೆ _ ಬಾ ಬಾ ಬಾ 10 ಸತ್ಯಸಂಕಲ್ಪನೆ ನಿತ್ಯಸ್ವರೂಪನೆ ಉತ್ತಮನೀನೆಂದು ಒತ್ತೊತ್ತಿ ಪೊಗಳುವೆ ಭೃತ್ಯನು ನಿನ್ನವನು ಕಣ್ಣೆತ್ತಿ ನೋಡುತ _ ಬಾ ಬಾ ಬಾ11 ಏಕರೂಪನೆ ನಿನ್ನನೇಕ ರೂಪಂಗಳ ಸಾಕಲ್ಯದಿಂದಲಿ ಶ್ರೀಕಾಂತೆ ಅರಿಯಳು ಕಾಕುಮತಿಯು ನಾನು ಎಂತು ವರ್ಣಿಸಲಯ್ಯ _ ಬಾ ಬಾ ಬಾ12 ಪೂರ್ಣಸ್ವರೂಪನೆ _ ಪೂರ್ಣ ಗುಣಾಬ್ಧಿಯೆ ಪೂರ್ಣನಂದಾನೆ ಪೂರ್ಣ ಸ್ವತಂತ್ರನೆ ಪೂರ್ಣಬೋಧರ ಪೂರ್ಣ ಕರುಣಾವ ಬೀರಿಸು _ ಬಾ ಬಾ ಬಾ 13 ಮಾತುಮಾತಿಗೆ ನಿನ್ನ ನಾಮದಸ್ಮರಣೆಯ ನಿತ್ತು ಪಾಲಿಸು ಎನ್ನ ಮೃತ್ಯೋಪಮೃತ್ಯುವೆ ದೇವ ಭಕ್ತಿಭಾಗ್ಯವನಿತ್ತು ಮನ್ನಿಸಿ ಸಲಹುತ _ ಬಾ ಬಾ ಬಾ 14 ದೋಷದೂರನೆ ನಿನ್ನ ದಾಸನುನಾನಯ್ಯ ವಾಸವ ಜಯಮುನಿ ವಾತನೊಳ್ವಾಸಿಪ ಈಶ ಸಿರಿಕೃಷ್ಣ ವಿಠಲರಾಯನೆ ಬೇಗ ಬಾ ಬಾ ಬಾ 15
--------------
ಕೃಷ್ಣವಿಠಲದಾಸರು
ಹಿಮಾಚಲೇಂದ್ರನ ಕುಮಾರಿ ಶಂಕರಿ ಉಮಾಂಬೆ ಬಾರಮ್ಮ ಪ ಕುಮಾರ ಶಕ್ರಾದಿ ಸಮಸ್ತ ಸುರಗಣ ಸಮರ್ಚಿತಾಂಘ್ರಿಯೆ ನಮೋನಮೋ ಎಂಬೆ ಅ.ಪ. ಬುದ್ಧ್ಯಾಭಿಮಾನಿಯೆ ಸದ್ಯೋಜಾತನ ರಾಣಿ ಹೃದ್ಧ್ಯೋಮದಲಿ ಪೊಳೆದು ವಿದ್ಯಾ ಬುದ್ಧಿಯನಿತ್ತು ಶುದ್ಧಾತ್ಮನನು ಮಾಡಿ ಸದ್ಭಕ್ತಿ ಪಂಥದ ಸಿದ್ಧಾಂತ ತಿಳಿಸಮ್ಮ 1 ಘೋರ ಭವಾಬ್ಧಿಯ ತಾರಿಪ ಸುಲಭದ ದಾರಿಯ ತೋರೆನುತ ಮುರಾರಿಯನು ಬೇಡಿ ಶ್ರೀ ರಾಮ ನಾಮದ ರುಚಿ ಬೀರಿದೆ ಜಗದೊಳು 2 ಲಕ್ಷಾಘ ಧ್ವಂಸಿನಿ ದಾಕ್ಷಾಯಿಣೀ ಗಣಾ ಧಕ್ಷನ ವರ ಜನನಿ ಲಕ್ಷ್ಮೀಕಾಂತನ ಅಪರೋಕ್ಷದಿ ಕಾಂಬುವ ಸೂಕ್ಷ್ಮವನೊರೆದೆನ್ನ ರಕ್ಷಿಸು ಅಮ್ಮಯ್ಯ 3
--------------
ಲಕ್ಷ್ಮೀನಾರಯಣರಾಯರು
ಹೀಂಗಾಯಿತ್ಹೀಂಗಾಯಿತೆ ಎನ್ನಯ ಬಾಳು ಪ ಗಂಗಾಜನಕ ಪಾಂಡುರಂಗ ಮೂರುತಿಯನು ಹಿಂಗದೆ ಭಜಿಸದೆ ಅಂಗಜನ್ವಶನಾದೆ 1 ಕಂತು ಜನಕ ಲಕ್ಷ್ಮೀಕಾಂತ ಮೂರುತಿಯನ್ನು ಚಿಂತಿಸದೆ ವಿಷಯ ಚಿಂತನೆಯಲ್ಲಿರುವೆ 2 ಹಿಂಡು ಜನರ ಮುಂದೆ ಸಂಭಾವಿತನಂದದಿ ಶುಂಭ ನಾ ಮೆರೆದೆನೊ 3 ಅಂಗನೆಯರ ಅಂಗಸಂಗ ಬಯಸಿ ಅಂತ ರಂಗದಿ ಕುಳಿತು ಬಹು ಸಂಗತಿ ಕಲ್ಪಿಸಿದೆ 4 ನಾನು ಪೇಳುವುದೇ ಸನ್ಮಾನ್ಯವೆಂದುಸುರಿ ನಾ ಮಾನಿನಿಯರ ಕೂಡಿ ಶ್ವಾನನಂದದಿ ಬಾಳ್ವೆ 5 ಬಿಡಿಸೋ ಬಿಡಿಸೋ ಹರಿ ಕೇಡು ಬುದ್ಧಿಗಳನ್ನು ಈಡು ನಿನಗಿಲ್ಲೆಂಬೊ ದೃಢಮನಸನೆ ಕೊಡೊ 6 ಘನತೆ ನಿನಗಲ್ಲವೊ ದೀನರ ಬಳಲಿಪುದು ಮಾನದಿಂದಲಿ ಕಾಯೊ ಶ್ರೀ ನರಹರಿಯೇ7
--------------
ಪ್ರದ್ಯುಮ್ನತೀರ್ಥರು
ಹೂವಿನ ಚೆಂಡನಾಡುವ ಕಾಂತ ಭಾವಿಪರಿರುವರು ನೋಡುತ್ತ ಪ ಆಹ ದುಂಡುಮಲ್ಲಿಗೆ ಸಂಪಿಗೆ ಅ.ಪ ಅಂಬರದೊಳು ವರರಂಭೋರ್ವಶಿಯರು ಸಂಭ್ರಮದಿಂ ಪೂಮಳೆಗರೆವರ್ ಅಂಬುಜವಾಸಿನಿ ಕೇಶವರೆಂಬೊಲು ಕಂಬುಕಂದರಮೊಲ್ಲೆ ಹೂವಿನ ಚೆಂಡ 1 ತಾಳಮದ್ದಳೆ ವೀಣೆಯ ನುಡಿಸಿ ಗಾನವಗೈವರು ಗಂಧರ್ವರು ನೀನೀಗ ಜಾಲವಮಾಡದೆ ಜಾಜಿ ಶ್ರೀಶನ ಧ್ಯಾನಿಸಿ ಆಡು ಜಾಜಿಯ ಹೂವಿನಚೆಂಡ 2
--------------
ಶಾಮಶರ್ಮರು
ಹೃದಯಾಧಿವಾಸಾ ಚಿನ್ಮಂiÀi ಪಾವನ ಅವನೆ ದೇವಾಧಿದೇವ ಮೂರು ಕಾಲದ ಸಾಕ್ಷಿ ಪರಮಾತ್ಮನೇ ಅವನೇ ಜಗದಾಧಿವಾಸ ಪ ಆಕಾರದೊರ ಏಕಾಂತಪೂರ ಏಕಾಂತಘನಪೂರ ತಾ ನಿರ್ವಿಕಾರ ಮನೋವಾಣಿದೂರ ಮನೋವಾಣಿಗೆದೂರ ಜಗಕೆಲ್ಲ ಆಧಾರ ತಾನಾಗಿಹ ಇವನೆ ಪರಮಾತ್ಮ ಈಶ ಹೃದಯಾಧಿವಾಸ 1 ಮನವೆಲ್ಲ ಉಡುಗಿ ಅನಿಸಿಕೆಯಡಗಿ ಅನಿಸಿಕೆ ತಾನಡಗಿ ತನಿನಿದ್ರೆಯಲ್ಲಿ ಇವು ಎಲ್ಲ ಮುಳುಗಿ ತಾನೇ ತಾನಾಗಿರ್ದ ಚಿನ್ಮಾತ್ರನೆ ಅವನೆ ಆನಂದರೂಪ ಹೃದಯಾಧಿವಾಸ 2 ಅವನೇ ನಾನೆಂದು ತಿಳಿ ಈಗ ನಿಂದು ಜಗವೆಲ್ಲ ಕನಸೆಂದು ಪರಮಾರ್ಥ ಸತ್ಯ ಶ್ರೀನಾರಾಯಣ ಇವನೇ ಗುರುಶಂಕರೇಶ ಹೃದಯಾಧಿವಾಸ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಹೇಮಾಂಬರ ಕದಂಬ ವೆಂಕಟರಾಯಾ ಅ.ಪಎಷ್ಟೆಂದುಸುರೆ ಕೋಟಲೆಗಳಇಷ್ಟ ಮೂರುತಿಯೆ ಅಟ್ಟಿ ಬರುತ 'ಷಹುಟ್ಟು ಹೊಂದುಗಳೆಂಬ ಕಷ್ಟವ ಬಿಡಿಸೊ 'ಶಿಷ್ಟ ವೆಂಕಟರಾಯಾ1ದಂದುಗದಿಂದಾ ಎನ್ನಯಮನ ಕಂದಿಕುಂದುತಿದೆ ಇಂದು ನೀ ಬೆದರದಿರೆಂದಭಯವನಿತ್ತು ಬಂಧವ ಕಳೆಯೆನ್ನತಂದೆ ವೆಂಕಟರಾಯಾ 2ಕಡು ಮನೋವ್ಯಥೆಯಾ 'ಭಾಡಿಸುನುಡಿಯಾಲಿಸಯ್ಯಾ ಬಿಡದೆ ನೀ ಎನ್ನ ಕೈಪಿಡಿದು ಸಂಸøತಿಯೆಂಬ ಕಡಲ ದಾಂಟಿಸೊ ಎನ್ನೊಡೆಯ ವೆಂಕಟರಾಯಾ 3ಗತಿ ನೀನೆಯೆಂದು ಸಾರಿದೆ ನಿನ್ನನತಿ ದೀನ ಬಂಧು ಪತಿತ ಪಾವನ ನೆಂದತಿಶಯದಿಂ ಶೃತಿ ನುತಿಸುತಲಿದೆ ತಿರುಪತಿಯ ವೆಂಕಟರಾಯ 4ಅಪರಾಧ ಶತವಾ ಮಾಡಿದೆ ನಾನುಕೃಪೆುಂದ ಕ್ಷ'ುಸೈ ಜಪತಪವರಿಯದಚಪಲ ಚಿತ್ತನು ನಾನು 'ಮಲಪರಾನಂದನಿಪುಣ ವೆಂಕಟರಾಯಾ 5'ಪ್ರವತ್ಸಲನೆ ಯನಗೆ ನೀನುಸುಪ್ರೀತನಾಗೈ ತಪ್ಪುಗಳೆಲ್ಲವನೊಪ್ಪುಗೊಳ್ಳುತ ಸಲಹಪ್ಪ ನಿಚ್ಚಲು ತಿಮ್ಮಪ್ಪ ವೆಂಕಟರಾಯಾ 6ದುರಿತ ಭಂಜನನೆ ಮಹಾಪುಣ್ಯಚರಿತ ರಾಜಿತನೆ ನೆರೆ ನಂಬಿದರ ಪತಿಕರಿಸುವ ಬಿರುದುಳ್ಳ ಪರಮಾತ್ಮ ಮೂಡಲಗಿರಿಯ ವೆಂಕಟರಾಯಾ 7ವಾರಿಜನಾಭ ಮಹೋನ್ನತವಾರಣಾಧಾರಾ ಗಾರುಗೊಳಿಸುವ ಸಂಸಾರ ದುಃಖವನಿದನಾರಿಗುಸುರುವೆ ಕೊನೇರಿ ವೆಂಕಟರಾಯಾ 8ಮಂಗಳಾತ್ಮಕನೆ ಸೀತಾಕಾಂತಮಂಗಳ ಮ'ಮ ಮಂಗಳಗಿರಿ ನರಸಿಂಗರಾಘವ ರಘುಪುಂಗವ ಅಲಮೇಲುಮಂಗ ವೆಂಕಟರಾಯಾ9
--------------
ತಿಮ್ಮಪ್ಪದಾಸರು
ಹೊಂದದಿರುವಿ ಯಾಕೆ ಮನವೆ ಇಂದಿರೇಶನ ಹಿಂದೆ ಮುಂದೆ ಸುಖವನೀವ ಮಂದರಾದ್ರಿಧರನ ಬೇಗ ಪ. ಸುತ್ತಿ ಬರುವಿ ನೀ ಮತ್ತೆ ವಿಷಯದಿ ಎತ್ತಲಾದರೀಶನಂಥ ವೃತ್ತಿ ದೊರೆವುದುಂಟೆ ನಿನಗೆ 1 ತೋಷಗೊಳುವೆನೆಂಬಾಸ್ಥೆ ತಾಳುವಿ ದೋಷಗಳಲಿ ಸಿಲುಕಿ ಬಹಳ ಘಾಸಿಯಾಗಿ ನೊಂದುಕೊಳುವಿ 2 ಅರಿಯದಾದಿ ನೀ ಹರಿಯ ಗುಣಗಳ ಚರಣಪದ್ಮ ಮಧುರ ರಸವ ಸುರಿವ ಸುಖವನೆಂದು ತಿಳಿವಿ 3 ಕೇಳು ನುಡಿಯನು ಕರುಣಾಳು ಒಡೆಯನು ತಾಳ ತನ್ನ ನಂಬಿದವರ ಗೋಳ ಬಿಡಿಸಿ ಸಲಹುತಿಹನು 4 ಭ್ರಾಂತಿಗೊಳದಿರು ಶ್ರೀಕಾಂತನಲ್ಲಿರುಕಂತುಜನಕ ವೆಂಕಟೇಶ ಚಿಂತಿತಾರ್ಥವಿತ್ತು ಕಾವ 5
--------------
ತುಪಾಕಿ ವೆಂಕಟರಮಣಾಚಾರ್ಯ