ಒಟ್ಟು 2228 ಕಡೆಗಳಲ್ಲಿ , 112 ದಾಸರು , 1537 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಗಳೆ ಜಾನಕಿ ನಿನ್ನ ಸುಗುಣಸನ್ಮೋಹನ್ನ ಖಗಕುಲರನ್ನ ಮನೋರಮಣ ಮನೋರಮಣ ಕಾಂತ ಶ್ರೀರಾಮನ ಅಗಲದಿರು ಕಾಣೆ ಮರಿಯಾನೆ ಶೋಭಾನೆ 1 ಪತಿಯೇಳ್ವ ಮೊದಲು ಜಾಗ್ರತೆಯಾಗಿ ಯೆದ್ದು ಗೃಹ- ಕೃತ್ಯಕೆಲ್ಲಕ್ಕನುಸರಿಸಿ ಅನುಸರಿಸಿ ನಡೆ ನೀ ಮಗಳೆ ಹಿತವಾಗಿ ಬಾಳು ಪತಿಯೊಳು ಶೋಭಾನೆ 2 ಗಂಡನ ಮಾತಿಗೆ ದುರ್ಚಂಡಿಸದಿರು ಮಗಳೆ ಗಂಡನುಣ್ಣದ ಮೊದಲು ನೀ ಮೊದಲು ನೀನುಣ್ಣದಿರು ಪುಂಡರೀಕಾಕ್ಷಿ ಪುಣ್ಯರಾಶಿ ಶೋಭಾನೆ 3 ಮುಗುಳು ನಗೆಯ ಬೀರು ಜಗಳವ ಮಾಡದಿರು ಜಗದೊಳು ಕೀರ್ತಿಯುತಳಾಗು ಯುತಳಾಗು ಬಂಧುಗಳಲಿ ನೀ ಹಗೆಯ ಮಾಡದಿರು ಕೃಪೆದೋರು ಶೋಭಾನೆ 4 ಪಾದ ಹೊದ್ದಿ ಸೇವೆಯ ಮಾಡು ಸುದ್ಧ ಭಾವದೊಳು ನಡೆ ಮಗಳೆ ನಡೆ ಮಗಳೆ ನಿತ್ಯಸುಮಂಗಲೆ ಮುದ್ದಾಗು ಬಂಧು ಬಳಗಕ್ಕೆ ಶೋಭಾನೆ 5 ಅತ್ತೆಯ ಮಾತಿಗೆ ಪ್ರತ್ಯುತ್ತರ ಕೊಡದಿರು ಪ್ರತ್ಯೊಬ್ಬಳೆ ಸ್ಥಳದಿ ನಿಲದಿರು ನಿಲದಿರು ನೀರಜಗಂಧಿ ಸತ್ಯ ವಚನವನೆ ಸವಿಮಾಡು ಶೋಭಾನೆ 6 ಮೈದುನರನ್ನು ತನ್ನ ಮಕ್ಕಳೆಂಬಂತೆ ನೋಡು ಸಾಧುಭಾವದದಲಿ ನಡೆ ಮಗಳೆ ನಡೆ ಮಗಳೆ ಪಂಕ್ತಿಯಲಿ ಭೇದ ಮಾಡದಿರು ಕೃಪೆದೋರು ಶೋಭಾನೆ 7 ಕಂಡರೆ ಶಿಷ್ಟರ ದಂಡ ನಮಸ್ಕರಿಸು ಹಿಂಡು ದಾಸಿಯರ ದಣಿಸದಿರು ದಣಿಸದಿರು ಉತ್ತಮಳೆಂದು ಭೂ- ಮಂಡಲದಿ ಕೀರ್ತಿಪಡು ಪೂರ್ತಿ ಶೋಭಾನೆ8 ಚಂಡಿತನವ ನಿನ್ನ ಗಂಡನೊಳ್ಮಾಡದಿರು ಗಂಡಸರ ಮುಂದೆ ಸುಳಿಯದಿರು ಸುಳಿಯದಿರು ಸಂತತ ಸೌಖ್ಯ- ಗೊಂಡು ಬಾಳಮ್ಮ ಸೀತಾಭಾಮಾ ಶೋಭಾನೆ 9 ಕ್ಷಮೆಯಲ್ಲಿ ಧಾತ್ರಿಯುಂಬ ಕ್ರಮದಲ್ಲಿ ಮಾತೆ ಸುರತ ಸಮಯದಿ ವೇಶ್ಯಾ ತರುಣಿಯಳ ತರುಣಿಯಳ ತೆರದಿ ರಾಮನ ಸತಿಯಂ- ತೆ ಮಾಡವ್ವ ಸುಖಂ ಜೀವಾ ಶೋಭಾನೆ 10 ಲಕ್ಷ್ಮೀನಾರಾಯಣರಂತೆ ಸೀತಾರಾಮರು ನೀವು ಕುಕ್ಷಿ ಈರೇಳು ಜಗವನ್ನು ಜಗವನ್ನು ನಮ್ಮನ್ನು ಸರ್ವರ ರಕ್ಷಣ್ಯ ಮಾಡಿ ಸುಖಿಯಾಗಿ ಶೋಭಾನೆ 11
--------------
ತುಪಾಕಿ ವೆಂಕಟರಮಣಾಚಾರ್ಯ
ಮಡದಿ ಭಾಗ್ಯ ಎಂಬುವಿಯಾಕೊ ರಂಗಯ್ಯನಿನ್ನ ಬಡಿವಾರವ ಹೇಳಿಕೊಂಬೆ ಸಾಕೊ ಕೃಷ್ಣಯ್ಯ ಪ. ಬಿಡು ಬಿಡು ಸಣ್ಣ ಮಾರಿಯನ್ನು ನೀ ಮಾಡಬ್ಯಾಡ ಬಡಿವಾರವ ಹೇಳಿಕೊಂಬುವುದೇನೊಕಡುಭಾಗ್ಯ ಪುರುಷನಾಗೊ ನೀನು ಎತ್ತಿಕೊಂಡ್ಹೋಗಿ ಮಡುವು ಸೇರಿಕೊಂಡಿ ಮತ್ತೇನೊ1 ದೊರೆತನ ಹೇಳಿಕೊಂಬೆ ಸಾಕೊ ರಂಗಯ್ಯನಿನ್ನ ಕರಕರ ಹಲ್ಲು ತಿಂಬೊ ಸಿಟ್ಟು ಕೃಷ್ಣಯ್ಯಬಿರುಗಣ್ಣು ಬಿಡವೋದ್ಯಾಕಿಷ್ಟು ರಂಗಯ್ಯನಿನ್ನ ಉರಿಮಾರಿಗೆ ಅಂಜೋರೆಲ್ಲೊ ಅಷ್ಟು 2 ಧರೆ ಮ್ಯಾಲೆ ರಾಜ್ಯ ಹ್ಯಾಂಗ ರಂಗಯ್ಯನಿನ್ನ ತಗಿ ತಗಿ ಬಲುಲೀಲಾ ಕೈಯ್ಯ ಕೃಷ್ಣಯ್ಯಸುಗುಣನೆಂತೆಂಬೊ ಮತಿಯಾದುದಕ್ಕೆಜನರು ನಗದೆ ಸೈ ಸೈ ಎಂದಾರು ಬರಿಯ ಕೃಷ್ಣಯ್ಯ3 ಧೀರ ಧನವಂತನಲ್ಲೊ ಸಾಕೊ ರಂಗಯ್ಯಆದರೆ ವನದಿನಾರು ವಸ್ತ್ರವನುಟ್ಟುಕೊಂಡಿ ಯಾಕೊ ಕೃಷ್ಣಯ್ಯಚೋರನಂತಾಡಿಕೊಂಬಿ ಸಾಕೊ ರಂಗಯ್ಯಇದ ಕೇಳಿದ ವೀರರೆಂಬವರು ನಗತಾರೊ ಕೃಷ್ಣಯ್ಯ 4 ವಸ್ತ್ರವಿಲ್ಲೆಂಬೊ ಎಚ್ಚರಿಕಿಲ್ಲೊ ರಂಗಯ್ಯತೇಜಿ ಹತ್ತೇನು ಎಂದು ಬರುವಿಯಲ್ಲೊ ಕೃಷ್ಣಯ್ಯಕತ್ತಿ ಕೈ ಶೂರನೆಂಬೊದೆಲ್ಲೊ ರಂಗಯ್ಯರಾಮೇಶ ನಿನ್ನ ಹತ್ತಿಲ್ಲಿದ್ದರೆಲ್ಲ ನಗುವರೊ ಕೃಷ್ಣಯ್ಯ5
--------------
ಗಲಗಲಿಅವ್ವನವರು
ಮಂಡೆ ಬೋಳಾದರೇನು ಮನಶುದ್ಧಿಯಿಲ್ಲವು ಪ. ಕಂಡು ಹಯವದನನ್ನ ಒಲಿಸಿಕೊಂಡವ ಧನ್ಯ ಅ.ಪ. ನಾರದÀರವತಾರವೆಂದು ಜಗಕೆ ತೋರಿ ಸಿರಿಪುರಂದರದಾಸರ ಮನೆಯಲ್ಲಿಪರಿಪರಿ ಲೀಲೆಯ ಮಾಡಿ ಬಿಡದೆ ನಿತ್ಯಅರಿತು ಅವರ ಸಾಧನಕೆ ಸಾರಥಿಯಾದಿ 1 ಗುರುವ್ಯಾಸಮುನಿ ನಿಮ್ಮ ನೋಡುವೆನೆಂತೆಂದೊಡೆಮರೆಮಾಡಿ ಮೂರುರೂಪ ಜನುಮವೆಂದಿಹರÀÀುಷದಿ ಕನಸಿನೊಳಗೆ ಬಂದುಭಯರಿಗೆಅರುಪಿಸಿ ಸ್ವರೂಪ ಅರಿಯದಂತಿದ್ಯೊ ದೇವ 2 ಅವರ ಮೇಲಿದ್ದ ದಯ ಎನ್ನ ಮೇಲೆಂದಿಗೋ ದೇವಯಾವುದು ಭರವಸೆದೋರದಯ್ಯಕವಿದೆಮ್ಮಭಿಮಾನ ಬಿಟ್ಟರೆ ಬಿಡದಯ್ಯಆವಕಾಲಕ್ಕೆ ನಿನ್ನ ದಾಸನೆಂಬಂತೆ ಮಾಡೊ 3 ನಮ್ಮ ಗುರುಗಳ ಸಮ್ಮತದಿಂದುಡುಪಿಯಲಿಗಮ್ಮನೆ ಪೇಳಿದೆನು ಸಟೆಯಲ್ಲವುಸುಮ್ಮನೆ ತಿಳಿಯದೆ ಅಲ್ಲವೆಂದವÀರ್ಗಿನ್ನುಗಮ್ಮನೆ ತಮಸಿನೊಳಿಹುದು ಸತ್ಯವು 4 ಓದಿದಾಕ್ಷಣದಿಂದ ಧನ್ಯನೆಂದೆನು ನಾನುಸಾಧಿಸಲಾಪೆನೆ ನಿನ್ನ ಸೇವೆಯನುಆದಿಮೂರುತಿ ಸಿರಿಹಯವದನರೇಯಮೋದದಿಂದ ನಿನ್ನ ದಾಸರ ಸಂಗದಲ್ಲಿಡು ಕಂಡ್ಯ 5
--------------
ವಾದಿರಾಜ
ಮತಿತಪ್ಪಿ ನಡೆದೆಯಲ್ಲ ಶ್ರೀಲಕುಮೀ ಪತಿಯನು ನೆನೆಯಲಿಲ್ಲ ಹಿತವಾದ ಪಥವು ಸಂತತ ತೋರದೆ ನೀನು ಖತಿಗೊಂಡು ವೆಂಕಟಪತಿಯನು ನೆನೆಯದೆ ಪ ಕೃತ ತ್ರೇತ ದ್ವಾಪರ ಕಲಿಯುಗ ಚತುರ್ವಿಧ ಜೊತೆಯಾಗಿ ಪೋಗಲು ಸಾವಿರ ಬಾರಿಯು ಚತುರಾಸ್ಯ ಬ್ರಹ್ಮಗೆ ಹಗಲೊಂದು ಸಲುವುದು ಗತಿಯ ಕಾಣೆನು ಶ್ರುತಿಯ ಅಯುತ ಕಾಲದೊಳು 1 ಹಿಂದಣ ಭವದೊಳಗೆ ಬಂದ ಭವದೊಳಗೆ ಸಂ - ಬಂಧವಾಗಿಹ ಸತಿಯರೆಷ್ಟು ಮಂದಿಯೋ ಕಾಣೆ ಕಂದರನು ಪಡೆದುದಕೆ ಲೆಕ್ಕ ಸಂಖ್ಯೆಗಳಿಲ್ಲ ತಿಂದ ಅನ್ನವು ಮೇರುವಿಗಿಂತ ಇಮ್ಮಡಿಯು 2 ಕಾಯ ಬಿಡಿಸಿಕೊಂಬುದು ಜೀವ ಅಡಿಗಡಿಗೆ ಹುಟ್ಟುತ್ತ ಸಾವಾಗಯೆನ್ನುವನು ಕಾಲ ಮನದಿ ಬೇಸರಗೊಳಲು ಜಡತೆಕಿಕ್ಕದೆ ಮುಂದೆ ಕಡೆ ಹಾಯು ಮನವೆ 3 ಬಲೆಯ ಕಾಣದೆ ಪಕ್ಷಿ ಮೇವಿನಾಸೆಗೆ ಪೋಗಿ ತಲೆ ಸಿಕ್ಕಿ ಪ್ರಾಣವನು ಕಳಕೊಂಬ ತೆರನಂತೆ ಕುಲವೃಕ್ಷದೊಳಗಿರ್ದ ಫಲದ ಮಮತೆಗಳಿಂದ ಜಲಜನಾಭನ ಬಿಟ್ಟು ಹೊಲಬುದಪ್ಪಿತಲ 4 ಸ್ನಾನಕ್ಕೆ ಚಳಿ ಹುಟ್ಟಿ ಧ್ಯಾನಕ್ಕೆ ಮರವೆಯು ಮೌನಕ್ಕೆ ಕೋಪದ ಬೀಜವಂಕುರಿಸಿತು ದಾನಕ್ಕೆ ಲೋಭವು ಮಾನಕ್ಕೆ ಪಿಸುಣರು ಏನ ಮಾಡಿದರಿವರು ಬಿಡರಲ್ಲೊ ಮನವೆ 5 ಸಂಗಡದಿ ಬರುತಿಪ್ಪ ಶುಭಗಳನು ಕಡೆಗಿಟ್ಟು ಅಂಗಸುಖವ ತಾಳ್ದು ಗೊಂಗುಡಿಯ ಹೊದ್ದು ಕಂಗಳಿಗೆ ಚೆಲುವಾದ ಅಂಗನಾಮೋಹದಿ ಶ್ರೀ- ರಂಗನ ನಾಮದ ಅಂಗಿಯ ಸಡಲಿಸಿದೆ 6 ಹರಿಧ್ಯಾನ ಹರಿಪೂಜೆ ಹರಿನಾಮ ಕೀರ್ತನೆಯು ಹರಿಭಕ್ತಿ ನರ್ತನೆಯು ಹರಿಯ ಸೇವೆಗಳು ಎರವುದೋರದೆ ನೀನು ವರಾಹತಿಮ್ಮಪ್ಪನನು ಸ್ಥಿರವಾಗಿ ನಿಲುವಂತೆ ಕರಕೊಳ್ಳೊ ಮನವೆ 7
--------------
ವರಹತಿಮ್ಮಪ್ಪ
ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ
ಮದಗಜಗಮನೆಯರ ಮುದದಿ ಮುಯ್ಯಕ್ಕೆ ಸರಿ ಹದಿನಾಲ್ಕು ಲೋಕದೊಳಗಿಲ್ಲಕೇಳಮ್ಮ ದೂತೆ ಹೇಳಮ್ಮ ಹೋಗಿ ಈ ಮಾತೆ ಪ. ಚಂದ್ರ ಉದಿಸಿದಂತೆ ಬಂದರೆ ಐವರು ಇಂದೆಮ್ಮ ಪುಣ್ಯ ಫಲಿಸಿತೆ ಇಂದೆಮ್ಮ ಪುಣ್ಯ ಫಲಿಸಿತೆ ಐವರುಬಂದೆರಗೋರಮ್ಮ ಕ್ಷಣದೊಳು 1 ಎಂಥ ದಯವ ಮಾಡಿ ಕಾಂತೆಯರು ಬಂದಾರೆಎಂತು ನಮ್ಮ ಪುಣ್ಯ ಫಲಿಸಿತುಎಂತೆಮ್ಮ ಪುಣ್ಯ ಫಲಿಸಿತುಲಕ್ಷಿ ್ಮಕಾಂತನೆ ಬಂದ ಮನೆತನಕ 2 ಹರದೆಯರು ಬಂದದ್ದು ಅರಿದು ಎಷ್ಟೇಳಲಿಬೆರಗಾದರಮ್ಮ ಹರಬೊಮ್ಮಬೆರಗಾದರಮ್ಮ ಹರಬೊಮ್ಮ ಕಾಮಧೇನುಕರೆದಂತಾಯಿತು ಸುಖವನೆ3 ಸಚ್ಚಿತಾನಂತ ಬಂದದಾಶ್ವರ್ಯ ನೋಡÀ ತಾಯಿಅಚ್ಚ ಕರುಣದಲೆ ಐವರಿಗೆ ಅಚ್ಚ ಕರುಣದಲೆ ಐವರಿಗೆ ಪರಿಪರಿಉತ್ಸಾಹ ಉನ್ನತಿಯ ಕೊಡುವವನೆ4 ಅತಿಶಯ ಮುಯ್ಯವನು ಸುತಿಸಲಾರೆವ ಕೆಲದಿಚತುರಂಗ ಬಲವ ಸಹಿತಾಗಿಚತುರಂಗ ಬಲವ ಸಹಿತಾಗಿ ರಾಮೇಶನ ಸತಿಯರ ಕರೆಯ ಬರತೇವ5
--------------
ಗಲಗಲಿಅವ್ವನವರು
ಮಂದಾನ ಬಾಧೆಗೆ ಮನಿ ಮಂದಿ ನಾವು ಸಹಿತ ಬೆಂದು ಬೇಸರ ಗೊಂಡು ಬಳಲು ತೇವು ಹರಿ ತಂದಿ ಬೇಗದಿ ಬಂದು ದಯಮಾಡಿ ಸಲಹೋ ಗೋವಿಂದಾ ಕೃಪಾಳು ಶ್ರೀ ಕರುಣಾಂಬುಧಿಯೆ ಪ ಕೃಷ್ಣಾ ರೌದ್ರಾಂತಕನ ಕ್ರೂರದೃಷ್ಟಿ ಮುಖ ಹಲಾ ತ್ಕøಷ್ಠವಾಗಿ ಎನ್ನ ಕಾಡುತಿರಲು ನಿಷ್ಠೆ ನೇಮಗಳೆಲ್ಲ ಜರಿದು ಮತಿ ಭೃಷ್ಟನಾಗಿ ಕಷ್ಟಕ್ಕೆ ಒಳಗಾದೆ ಕಡೆಹಾಯಿಸೊ ಧೊರಿಯೆ ಇಷ್ಟದಾಯಕ ನಿನ್ನಲ್ಲಿನ ಮಾಯವೆ ಆಡುದು (ಅಹುದು) ಕೃಷ್ಣಮೂರುತಿ ಬೇಗ ಕೈಹಿಡಿ ಇನ್ನಾ ಸೃಷ್ಟಿಗೊಡೆಯ ಶ್ರೀನಿವಾಸಕೇಶವ ಎನ್ನ ಕಷ್ಟವು ಪರಿಹರಿಸಿ ಕಾಯೋ ಸಂಪೂರ್ಣ 1 ಸೂರ್ಯಾನ ಪುತ್ರನ ಕಾರ್ಯಾವು ಎಮ್ಮ ಮೇಲೆ ಭಾರಿ ಕಾಣುತಲಿದೆ ಪರಮಾತ್ಮನೆ ------- ಘಟಗಳಿಗುಪದ್ರಕಾರನಾಗಿ ವ್ಯಾಧಿ ಖಂಡಿಸೋ ವೇಳೆ ಆರು ಈ ಗ್ರಹಕರ್ತರಾಗಿರಲು ದೇವರಿನ್ನು ಧಾರುಣಿಯೊಳು ಹರಿ ದನುಜಾಂತಕಾ ವಾರಿಜಾನಾಭಾ ಶ್ರೀ ವೈದೇಹಿ ಪತಿರಾಮಾ ಸಾರನೆ ಗಡ ಬಂದು ಸಲಹೋ ತಂದೆ 2 ಗರ್ಭಾದಿ ಮುದನಿಂ ಸುಖಭ್ರೂಣ ಭಯವೆಂಬ ದೆಬ್ಬಿಗೆ ತಾಳದೆ ತಲ್ಲಣಿಸುವೆ ಅರ್ಭಕ ನಾನೊಂದು ಅರಿತು ಅರಿಯೆ ದೇವ ಸಭ್ಯಾ ನೀ ನಂದ ಸರ್ವೋತ್ತುಮಾ ನಿರ್ಭಯನನು ಮಾಡಿ ನೀನೆ ರಕ್ಷಿಸದಿರೆ ದಾರು ಮನಸು----ಳಗೆ ದರ್ಭಶಯನ ರಾಮನ-----'ಹೊನ್ನ ವಿಠ್ಠಲ’ ಸಾಕಾರ ನೀ ಎನ್ನ ತ್ವರದಿ ಪೊರೆಯೊ 3
--------------
ಹೆನ್ನೆರಂಗದಾಸರು
ಮಧುರೆಗೆ ಪೋಗಬ್ಯಾಡಾ ರಂಗಯ್ಯ ರಂಗಾ ಪ. ಮಧುರೆಗೆ ಪೋದಾರೆ ಚದುರಿ ನಾರಿಯರು ಬೆದರುತಲಿರುವೆವು ಹರಿಯೇ ಎನ್ನಯ ದೊರೆಯೇ ಅ.ಪ. ಮಧುರಾಪುರದಿಂದ ಅಕ್ರೂರ ಕರಿಲಿಕ್ಕೆ ಬಂದಾನು ಮಲ್ಲನ ಕೊಂದನು ಕೃಷ್ಣ ರಜಕನ ಕೊಂದನು ರಕ್ತಾಲಂಕೃತನಾಗಿ ಕುಬಜಿಯಿಂದ ಗಂಧವಾ ಕೊಂಡನು ಡೊಂಕನು ತಿದ್ದಿದನು 1 ಚಾಣಿಕರ ಮುಷ್ಟಿಕರ ಕೂಡಾ ಮುಷ್ಟಿ ಯುದ್ಧವ ಮಾಡಿ ಕುಟಿಲರ ಕೊಂದು ರಂಗಮಂಟಪಕೆ ಬಂದು ನಾನಾಭರರಣ ಭೂಷಿತನಾಗಿ ರಾಜ ಬೀದಿಯೊಳು ಸಾಗಿ 2 ಮಧುರಾಪುರದ ನಾರಿಯರು ಬಲು ಚೆಲುವಿಯರು ನಿನ್ನನೆ ಮರುಳು ಮಾಡುವೋರು ಯಮ್ಮನಗಲಿಸುವೋರು ಇವರು 3 ಕನಿಕರವಿಲ್ಲವೆ ನಾವು ನಿನ್ನನು ಬಿಟ್ಟು ವೊಂದು ನಿಮಿಷವಾದರು ಕಾಲಹ್ಯಾಗ ಕಳಿಯೋಣ ಘನ ಮಹಿಮನ ಅಧರಾಮೃತ ಪರವಶವಾದೆವು 4 ಮಲ್ಲಯುದ್ಧವ ಮಾಡಿ ಮಾವ ಕಂಸನ ಕೊಂದು ಉಗ್ರಸೇನರಿಗೆ ಅನುಗ್ರಹವ ಮಾಡಿ ಶೀಘ್ರದಿ ಬರಬೇಕೆಂದು ಬೇಡುವೆ ನಾ ಬಂದು ಕಾಳಿಮರ್ಧನಕೃಷ್ಣ ನಿನಗಿಂದು 5
--------------
ಕಳಸದ ಸುಂದರಮ್ಮ
ಮಧ್ವಮತ ಪೊಂದದೆ ಬದುಕಿದವನೂ ಹದ್ದು ಕಾಗಿ ಬದುಕಿ ಕಾಲವನು ಕಳೆದಂತೆ ಪ ಸಕಲೇಂದ್ರಿಯಗಳು ಇದ್ದು ನಯನೇಂದ್ರಿಯ ಇಲ್ಲದಂಅ.ಪ. ಫಲಪುಷ್ಪಯಿಲ್ಲದಾ ಗಿಡಬಳ್ಳಿ ಇದ್ದಂತೆ ಮಳೆಯಿಲ್ಲದಾ ಬೆಳಸು ನೋಡಿದಂತೆ ಚಲುವನಾದಡೆ ಏನು ಗುಣಹೀನನಾದಂತೆ ಖಳರು ನಿತ್ಯಾಕರ್ಮ ಚರಿಸಿದಂತೆ 1 ಉತ್ತಮರ ಕೂಡದಾ ಯಾತ್ರೆ ಮಾಡಿದಂತೆ ಕತ್ತೆ ಪರಿಮಳ ಪೊತ್ತು ತಿರುಗಿದಂತೆ ಮೃತ್ತಿಕೆ ಶೌಚ ಇಲ್ಲದೆ ಆಚಾರ ಮಾಡಿದಂತೆ ಸತ್ತ ಹೆಣಕ್ಕೆ ವಸ್ತ್ರ ಶೃಂಗರಿಸಿದಂತೆ2 ನಿಶಿಕರ ಇಲ್ಲದಾ ತಾರೆಗಳು ಇದ್ದಂತೆ ವಸುಧಿಪತಿಯಿಲ್ಲದಾ ರಾಜ್ಯದಂತೆ ಹಸಿವೆ ಇಲ್ಲದವನು ಮಧುರನ್ನ ಉಂಡಂತೆ ಹಸುಗಳಿಲ್ಲದ ಮನೆ ವೊಪ್ಪಿದಂತೆ 3 ತಾರತಮ್ಯಗಳಿಲ್ಲದ ವೇದ ಓದಿದಂತೆ ಪುರಂದರದಾಸರು ಪೇಳಿದಂತೆ ಸಿರಿ ವಿಜಯವಿಠ್ಠಲನ ಕಾರುಣ್ಯ ಪಡಿಯದವ ಅಧಮನಂತೆ 4
--------------
ವಿಜಯದಾಸ
ಮನದಧಿಪ ಮರೆಹೊಕ್ಕೆ ಮಹದೇವ ಪಾಹಿ ಪ ತೃಣ ಮೊದಲು ಘನದಲ್ಲಿ ಬಿಡದೆ ಹರಿಯನು ಭಜಿಪ ಅ.ಪ. ಕರುಣಾಬ್ಧಿ ನೀಡೆನಗೆ ವೈರಾಗ್ಯ ಮಹಭಾಗ್ಯ ಭಾಗವತ ಪದ ನಿನ್ನದಯ್ಯ ಕಮಲ ಮಧು ಮತ್ತ ಷಟ್ಪದ ದೊರೆಯೇ ಸರ್ವತ್ರ ನಿನ್ನಲ್ಲಿ ಹರಿಯ ತೋರಿಸಿ ಸಲಹೊ 1 ಆಪ್ತತಮ ನಿನ್ನಂಘ್ರಿ ಧ್ಯಾನದಲಿ ಇಡು ಎನ್ನ ತೃಪ್ತಿ ಅನ್ಯದಿ ಬ್ಯಾಡ ಸುಪ್ತಿರಹಿತ ಸಪ್ತೆರಡು ಭಕ್ತಿಯಲಿ ಬೆಳೆಸೆನ್ನ ಉದ್ಧರಿಸು ಮೂರ್ತಿ ದರುಶನ ಭೋಗ 2 ಮೂರುತಿಯ ಕೈಗಿತ್ತುದಾರ ಸಾಗರ ಶಂಭು ಘೋರ ಭವಹರ ಹರಿಯ ದಾಸವರ್ಯ ಮಾರಮಣ ಜಯೇಶವಿಠಲನ ಭಜನೆಯಲಿ ಸಾರ ಸುಖ ನೀಡೆನಗೆ 3
--------------
ಜಯೇಶವಿಠಲ
ಮನದೊಳಗೆ ಮಸಣವನು ತುಂಬಿಕೊಂಡಿರಲು ಮನೆಯ ಚಂದದಿ ಮಾಡಿದರೇನಯ್ಯ ಪ ಮನೆಯೊಡೆಯ ತಾನು ಸನ್ನಡತೆಯಲ್ಲಿರದೆ ಮನೆಮಂದಿಯನು ದಂಡಿಸಲಾಗದಯ್ಯ ಮನೆತುಂಬ ಮನತುಂಬ ಜಾಜಿಪುರಿವಾಸನನು ಅನುದಿನವು ನುತಿಸಲು ಸುಖವುಂಟು ಕೇಳಯ್ಯ 1 ದೇವರು ಧರ್ಮವನು ದಾರಿಯಾಚೆಗೆ ಅಟ್ಟಿ ದೇವಾಲಯವ ಮನೆಯೊಳಗೆ ಮಾಡಲೇನು ಅವರಿವರ ನೋಟಕ್ಕೆ ಒಪ್ಪವಾದೀತಷ್ಟೆ ಯಾವ ಪುರುಷಾರ್ಥವದರಿಂದ ಹೇಳು 2 ಅವ್ವ ಕಷ್ಟವು ಬರಲು ಅವರಿವರು ಬಾರರು ಆ ವಾಸುದೇವನಲ್ಲದೆ ಮತ್ತೊಬ್ಬರಾಗರು ಭಾವ ಮೈದುನ ಗಂಡ ಹೆಂಡತಿ ಮಕ್ಕಳು ಇವರೆಲ್ಲ ದೇವ ಜಾಜಿಪುರೀಶನೊಕ್ಕಲು 3
--------------
ನಾರಾಯಣಶರ್ಮರು
ಮನವೆ ಎಲೆ ಮನವೆ ನೀನು ಯೋಚಿಸಿ ಕೆಡುವುದು ಅನುಚಿತವಲ್ಲೆ ಪ ನೀ ಮನನಮಾಡಿದ ಸಂಸಾರಿರದು ಕಾನನದ ಬೆಳದಿಂಗಳು ಇದು ಪರಿ ತಿಳಿದು ಹೀನಯೋಚನೆ ಬಿಟ್ಟು ಧ್ಯಾನಕವಚ ತೊಟ್ಟು ಜ್ಞಾನವೆಂಬಾಯುಧಪಾಣಿಯಾಗೆಲೊ ಬೇಗ 1 ಈ ದೇಹವೆಂಬುವ ಕಾಂತಾರ್ಹೊಕ್ಕು ಉಪಾ ಯುದ್ಹುಲಿಗಳ ತರಿದ್ಹಾಕು ಮಹಮಾಯ ಕೋಣಗಳೆಂಟು ನೂಕು ದಾಯಾದ್ಯೈವರ ಕೊಂದು ಜೀವಘಾತಕರಾದ ಮೂವರಂ ಭಂಜಿಸಿ ದ್ವಯಮಾರ್ಗ ಗೆಲಿಯೆಲೊ 2 ಕಂಟಕ ಬದಿಗಿಟ್ಟು ಬಹ ಆರೊಂದು ನದಿಗಳ ದಾಂಟು ಭೋರ್ಗರೆವ ಸರ್ಪನ ಹೆಡೆ ಮೆಟ್ಟು ಮಾರಾರಿ ವಿನಮಿತ ಧೀರ ಶ್ರೀರಾಮಪಾದ ವಾರಿಜಕ್ಕೆರಗಿ ಗಂಭೀರ ಸುಖದಿ ಮೆರಿ 3
--------------
ರಾಮದಾಸರು
ಮನವೆ ಸದಾ ಚಿಂತಿಸುವೆ ವನಜನಾಭನ ನಂಬದೆ ಪ ಕೊನೆಗಾಣುವದೇನೊ ಫಲವೇನೊ ಅ.ಪ ಮದಮತ್ಸರ ಕಾಮಕ್ರೋಧ ಲೋ- ಭದಿ ಮಮತಾಸ್ಪದವಾಗಿ ಮರತೋಗಿ 1 ಗುರುಹಿರಿಯರು ನೋಡಿ ವಂದಿಸದೆ ನೀ ಮರುಳಾಟಗಳಾಡಿ ಪರರನಪಹಾಸಿಸಿ ಪಾಪಿ ಇವನೆನಿಸಿ ನರಕಕ್ಕೆ ಗುರಿಯಾಗುವೆ ವೋ ಚಪಲ ಮನವೇ 2 ವೇದಮಾರ್ಗವ ಬಿಟ್ಟು ಯಾವಾಗಲು ದು- ರ್ವಾದಗಳನು ಕೊಟ್ಟು ಆದಿಯನುತಲಿ ಅನಾದಿಯನುತಲಿ ಮುದಗೂಡಿ ಅತಿಭಾಷೆಗಳಾಡಿ 3 ತತ್ವ ತಿಳಿಯಬೇಕು ಜ್ಞಾನವೆಂಬೋ ಸಂ- ಪತ್ತಿನೊಳಿರು ಸಾಕು ನಿತ್ಯಾನಿತ್ಯವಿವೇಕ ಶ್ಯೂನವಾಗಿ ನಿತ್ಯ ಕೆಡಬೇಡೆಲವೋ ಚಪಲಾ 4 ತ್ರಿವಿಧ ಜೀ- ವರೊಳಿರುವನು ಮುಕುಂದ ಗುರುರಾಮವಿಠಲ ನಿಜ ಶರಣರಿಗೆಲ್ಲ ಪರಮಪದವಿ ಈವಾ ದೇವದೇವ 5
--------------
ಗುರುರಾಮವಿಠಲ
ಮನಸಿಗೆ ಬಂದ ಧನ್ವಂತ್ರಿ ವೈದ್ಯನೇ ಮನಸಿನ ರೋಗವ ಪರಿಹರಿಸೊ ಪ ಧನ ಲೇಶ ಕೇಳಾ ಬಡವರ ಪೊರೆಯೊ ನೀ ಮನೆಗೆ ಬಂದರೆ ತನು ರೋಗಗಳೋಡೋವು ನೆನಹ ಮಾರ್ಗಕೆ ಬೇಗ ತಡಿಯದೆ ಈ ಮನ ಕುನರ ಸೂಲಿವುಳ್ಳ ವಾತವ ಹರಿಸೊ 1 ನಾಮವ ನುಡಿವಲ್ಲಿ ಅರುಚಿ ಇದಕಿದೆ ಭಾಮೆಯ ಕಂಡರೆ ತಲ್ಲಣವಾಹದೊ ಶ್ರೀ ಮನೋಹರನ ಸ್ಮರಣೆ ಹಾರುತಿದೆ ಈ ಮಹಾದೋಷವುಳ್ಳ ಪಿತ್ತವ ಬಿಡಿಸೊ 2 ಪಿರಿಯರು ನೋಡಲು ಗುರುಗುರುಯೆನುತಿದೆ ಪರಿಪರಿ ವಿಷಯದ ನಂಜಿಲಿಂದ ಪರಿಹರಿಸೊ ಶ್ಲೇಷ್ಮ ಮೊರೆಹೊಕ್ಕೆನು ನಾನು ಪರಿಹರಿಸೊ ವಾಸುದೇವವಿಠಲರೇಯ 3
--------------
ವ್ಯಾಸತತ್ವಜ್ಞದಾಸರು
ಮನಸಿನ ಮಲಿನವ ಮನಸೀಜನೈಯನೆ ಹನನ ವೈದಿಸದಿರೆ ಬದುಕುವ ದೆಂತೊ ಪ ವನಜ ಸಂಭವ ಜನಕ ತನುಮನ ಪ್ರೇರಕ ಮಾನವ ನಾನು ಶರಣುಹೊಕ್ಕೆನೈಯ ಅ.ಪ ಸ್ನಾನ ಸಂಧ್ಯಾನುಷ್ಠಾನ ವೇನು ಗೈದವನಲ್ಲ ಹೀನ ಸ್ತ್ರೀಯರ ಧ್ಯಾನ ಘಳಿಗೆ ಬಿಟ್ಟವನಲ್ಲ ಧಾನ ಧರ್ಮಗಳೊಂದು ಮಾಡಿಕೊಂಡವನಲ್ಲ ಗಾನದಿಂದಲಿ ಹರಿನಾಮವಾದರು ಪಾಡಲಿಲ್ಲ ದೀನಜನಮಂದಾರ ಕರುಣೋದಾರ ಮಹಿಮನೆ ಮಾನಮತ್ತವಮಾನ ನಿನ್ನಾಧೀನ ವಲ್ಲವೆ ತನುಮನೇಂದ್ರಿಯ ನಾಥ ನಾಯಕ ನೀನೇ ಆಗಿರೆ ಎನ್ನ ದೇನಿದೆಬರಿದೆ ದೂರದೆ ಸಾನುರಾಗದಿ 1 ನೋಡಬಾರದ ನೋಟ ನೋಡಿ ಆಯಿತು ಜೀಯ ಮಾಡಬಾರದ ಬಯಕೆ ಮಾಡಿದ್ದಾಯಿತು ಸ್ವಾಮಿ ಕೂಡಬಾರದ ಕೂಟ ಕೂಡಿದ್ದಾಯಿತು ತಂದೆ ಈಡುಕಾಣೆನು ನನ್ನ ಕೇಡು ಕರ್ಮಕೆ ಇಂದು ಗಾಡಿಕಾರ ನಿಗೂಢ ಹೃದಯಗ ಬೇಡಿ ಕೊಂಬೆನು ಪ್ರೌಡ ಭಕ್ತರಗಾಢ ಪ್ರೇಮದಿ ಕೂಡಿಸುತ ತಿಳಿ ಗೇಡಿಯೆನಿಸದೆ ವೇದ ಸಮ್ಮತ ಗಾನ ಜೋಡಿಸಿ ಹಾಡಿ ಹಾಡಿಸೆ ಭಾಢ ಮಹಿಮೆ ವಿಶೇಷ ನಿನ್ನದು 2 ಮುಂದು ಮಾಡುತ ಹಿಂದೆ ಇಂದು ಕಂದನಲ್ಲವೆ ನಾನು ಎಂದೆಂದು ನಿನಗೆ ಇಂದಿರೇಶನೆ ನಿನ್ನಮೀರಿಕರ್ಮವಮಾಡೆ ಎಂದಿಗಾದರು ಸಾಧ್ಯವಾಹುದೆ ನನಗೆ ತಂದೆ ಜಯಮುನಿವಾಯು ಹೃದಯಗ ನಂದಮಯ ಶ್ರೀ ಕೃಷ್ಣವಿಠಲ ನಿಖಿಳ ವಿಶ್ವಕೆ ಕುಂದುಮಯ ಅಭಿಮಾನ ಮನಸಿಗೆ ತಂದಿಡದೆಯೆಂದೆಂದು ಸಲಹುತ ಕುಂದು ಗೈದವನೆಂದು ನುಡಿಯದೆ ಪಥ 3
--------------
ಕೃಷ್ಣವಿಠಲದಾಸರು