ಒಟ್ಟು 1741 ಕಡೆಗಳಲ್ಲಿ , 101 ದಾಸರು , 1310 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಷಯಾಸೆ ಬಿಡಲೊಲ್ಲದೋ ದೇವ ಪ. ವಸುದೇವಸುತ ನಿನ್ನ ವಶವಾಗೋತನಕ ಅ.ಪ. ಉದಯದಲಿ ಎದ್ದು ಹರಿಪದಗಳನು ಸ್ಮರಿಸದಲೆಕುದಿದು ಪರರನ್ನೆ ಬೈದು ಸುಯಿದುಮುದದಿಂದ ಮಜ್ಜನವ ಮಾಡದಲೆ ಕಂಡಕಡೆಒದಗಿ ಪರಸದನಕಾಗಿ ಪೋಗಿಮದಗರ್ವದಿಂದ ಗುರುಹಿರಿಯರಿಗೆ ವಂದಿಸದೆಕದನವನೆ ತೆಗೆದು ಬಂದು ನಿಂದುಇದೆ ಸಾಧನವೆಂದು ಉದರ ನೆವದಿ ತಿರುಗಿಸುದತಿಯರ ಸುಖಬಡಿಸಿ ಮದನವೆಗ್ಗಳನಾದೆ 1 ಓದುವೆನು ವಿದ್ಯೆಗಳ ಓದನದ ಬಯಕೆಯಲಿಸಾಧುಶಾಸ್ತ್ರಗಳ ಮರೆದು ತೊರೆದುಕಾದುವೆನು ತರ್ಕವ್ಯಾಕರಣ ಬಲದಿಂದಬೀದಿಬೀದಿಯಲಿ ಚರಿಸಿ ಅರಸಿಮಾಧವನ ಪೂಜಿಸದೆ ಪರರ ಅನ್ನವನುಂಡು ಶೋಧಿಸದೆ ಪುಣ್ಯಪಾಪ ಲೇಪಕ್ರೋಧದಿಂದಲಿ ಇನಿತು ಪರಿಪರಿಯ ಬವಣೆÀಯಿಂದಬೋಧನೆಗೆ ಒಳಗಾಗಿ ಕುಧರ್ಮವನು ಪಡೆದೆ2 ಪರರ ಸೌಭಾಗ್ಯ ವಿದ್ಯಾ ಮಕ್ಕಳ ಕಂಡುಮರುಗಿ ಮನದೊಳಗೆ ಕೊರಗಿ ಸೊರಗಿತರತರಕೆ ಪರರಾಂಗನೆಯರ ಚೆಲುವಿಕೆ ಕಂಡು[ತೆರೆದ] ಕಣ್ಣಿಂದ ನೋಡಿ ಬಾಡಿಎರಗಿ ಮನ ಅವರಲ್ಲಿ ಏಕಾಂತದಲಿ ಕಂಡುಕರದಿ ಸನ್ನೆಯನು ಮಾಡಿ ಕೂಡಿಹೊರಗೆ ಗುಣವಂತನೆಂದೆನಿಸಿ ಧರೆಯೊಳಗೆ ಪಾಮರ ಬುದ್ಧಿಯಿಂದ ಸಂಚರಿಸಿ ನಿನ್ನನು ಮರೆದೆ3 ದೇಶದೇಶಕೆ ಧನದಾಸೆಗಾಗಿ ನಡೆದುಬ್ಯಾಸರದೆ ಮನೆ ಮನೆಗೆ ಪೋಗಿ ಕೂಗಿಭೂಸುರೋತ್ತಮರು ನಾವೆಂದು ಪರರಮುಂದೆಹೇಸದಲೆ ಪೇಳಿಕೊಂಡು ಭಂಡುಮೋಸಗೊಳಿಸಿ ಪರರ ಆಶ್ರಯವನೆ ಮಾಡಿಭೇಷಜವ ತೋರಿ ಕಳೆದೆ ಪೊಳೆದೆಈಸುಪರಿ ಧನವ ತಂದು ಕೂಳನೆ ಹಾಕಿಆಸತಿಸುತರೆನಗೆ ಗತಿಯೆಂದು [ಗುಣಿಸಿದೆ] 4 ಕಾಯದಾಸೆಗಾಗಿ ನೋಯಬಯಸದಲೆ ಉ-ಪಾಯವ ಚಿಂತಿಸುತ್ತಲಿತ್ತಹೇಯವಿಲ್ಲದೆ ಸ್ನಾನ ಸಂಧ್ಯಾವಂದನೆ ತೊರೆದುತೋಯಿಸದೆ ದೇಹವನ್ನು ಇನ್ನುಮಾಯಮೋಸಗಳಿಂದ ಬಾಯಿಗೆ ಬೇಕಾದ್ದುಆಯಾಸಪಟ್ಟು ತಂದು ತಿಂದುಶ್ರೀಯರಸ ಹಯವದನರಾಯನೆ ನಾ ನಿನ್ನಮಾಯವನು ತಿಳಿಯದನ್ಯಾಯದಿಂದಲಿ ಕೆಟ್ಟೆ 5
--------------
ವಾದಿರಾಜ
ವಿಷ್ಣುಚಿತ್ತ ಸುಕುಮಾರಿ ಕೃಷ್ಣ ಕಥಾಂಬರ ಧಾರಿ ಪ ಕೃಷ್ಣ ಸುಖಂಕರಿ ಕರುಣಾಲಹರಿ ಪಾತಕ ಪರಿಹಾರಿ ಅ.ಪ [ಸೇವೆಗೆ ಕಟ್ಟಿದ ದೇವರ ಮಾಲೆಯಾ ಕಾವೊಳೋ]ಪಾದಿ ಮುಡಿ[ದಿ]ತ್ತವಳೇ ಮಣಿ ಪಾ ದಾವನು ಚೆಂಗಳೆ ಸೇರಿದಳೇ 1 ತವ ಪಾದಾಂಬುಜವೇ ಗತಿಯು ತವ ವಚನಾಮೃತವೇ ಮತಿಯು ತವ ಸಂಸ್ಮರಣವೆ ಪರಮಸುಖ [ತವ] ಮಾಂಗಿರಿರಂಗೇಶ ಸನ್ನಿಧಿಯೂ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಸ್ತರಿಸಿ ಬರುವನೊ ರುಕ್ಮಿಣಿಗೆ ಹಸ್ತಕಳ ಕಳಹುವನೊಮಿತ್ರೆ ದ್ರೌಪತಿ ಸುಭದ್ರೆ ಮುಯ್ಯಾಒಯ್ಯೋ ವರ್ತಮಾನವೆಲ್ಲ ಅರುಹೋನು ವಿಸ್ತರಿಸಿ 1 ಹೇಳದೆ ಹೋಗುವನೊ ಅಥವಾ ಸುದ್ದಿತಿಳಿಯದೆ ಕಳುಹುವನೊಭಾಳ ಚರ್ಚೆಯ ಮಾತು ಭಾಮೆಯಕಿವಿಗೆ ಬೀಳದಂತೆ ಕಾಳಿ ಹಿಡಿಸುವನೊ2 ಮೊದಲಿಗೆ ಅರುಹುವನೊ ಅಥವಾಬೆದರದೆ ನಗುವನೊಮದಗಜಗಮನೆಯರ ಎದೆ ಧಿಗಿಲೆಂಬಂತೆಚದುರ ಚರ್ಚೆಯ ಡಂಕಿ ಹೊಯ್ಸುವನೊ 3 ಎಚ್ಚರ ಕಳಹುವನೊ ಅಥವಾನಿದ್ರೆ ಬೆಚ್ಚಲಿ ಹೋಗುವನೊಮತ್ತÀನೇತ್ರಿಯರ ಮನಕೆ ನಡುವಂತೆಚರ್ಚೆಮಾತಿನ ಭೇರಿ ಹೊಯ್ಸುವನೊ4 ದಾಸಿಯ ಕಳಹುವನೊ ಅಥವಾಕಂಡು ಹಾಸ್ಯವ ಮಾಡುವನೊಮೋಸಗೊಳಿಸಿ ಆಭಾಸ ಉಕ್ತಿಗಳಿಂದ ಆಕಾಶವಾಣಿಯಿಂದ ನುಡಿಸುವನೊ5 ಅರಿಯದೆ ಹೋಗುವನೊ ಅಥವಾಮೈಮರೆಯದೆ ನಗುವನೊಶ್ರೀಶರಾಮೇಶನರಸನ ಸತಿಯರ ಚರ್ಚಿಸಿ ಹರುಷಮಾಡಿ ಹರಿಯು ಬರುವನೊ 6
--------------
ಗಲಗಲಿಅವ್ವನವರು
ವೃಂದಾವನದಿ ನಿಂದಿಹನ್ಯಾರೆ ಗೋವಿಂದನಲ್ಲದೆ ಚಂದಿರವದನೆ ನೋಡುವ ಬಾರೆ ಪ. ಕೋಟಿಸೂರ್ಯ ಪ್ರಕಾಶ ಕಿರೀಟದ ಬೆಳಕಿದು ಹಾಟಕಾಂಬರಧರನ ನೋಟದಿ ಸುಖಿಸೆ ಕೋಟಲೆ ಸಂಸಾರ ದಾಟಿ ಪೋಗಿ ಕೃಷ್ಣ ನಾಟ ನೋಡಿ ಮನ ಕವಾಟವ ಬಿಚ್ಚೆ ಪೂರ್ಣ ನೋಟದಿ ನೋಡುವ 1 ರಂಗನಾ ಕೊಳಲ ಬೆಳದಿಂಗಳ ಸೊಗವಿಲೆ ಮ್ಮಂಗವ ಅಂಗಜನೈಯ್ಯಗೀಯುತೆ ಕಂಗಳಿಗ್ಹಬ್ಬವೆ ರಂಗನ ನೋಡುತೆ ಗಂಗಾಜನಕನ ವಲಿಸಲು ನಮಗೆ ಹಿಂಗದ ಮುಕುತಿಯ ರಂಗಗೊಡುವ ಬಾರೆ 2 ಜಯ ಜಗದೀಶನ ಜಯ ರಮಕಾಂತನ ಜಯ ಕರ್ಮನೀಯನ ಜಯ ಶ್ರೀ ಶ್ರೀನಿವಾಸನ ಜಯ ಯದು ತಿಲಕನ ಜಯ ಕೂಡಾಡುವ ಜಯಪ್ರದನಾಗುತೆ ಜಗದಿ ಪೊರೆವ ಬಾರೆ 3
--------------
ಸರಸ್ವತಿ ಬಾಯಿ
ವೆಂಕಟ ಬಾರೋ ರಿಪುಸಂಕಟ ಬಾರೊ ಕಿಂಕರಿಗೊಲಿದ ನಿಶ್ಶಂಕ ಬಾರೋ ಪ ಪೊಂದೇರಿನೊಳಗೆ ಭೂಮಿ ಇಂದಿರೆಗೂಡಿ ಚೆಂದದಿಂದಲೊಪ್ಪುತಿಹ ಇಂದುವದÀನ ಮಂದರೋದ್ಧಾರನೆ ಮಹಾನಂದ ಮೂರುತಿ ಪಾದ ವಂದಿಪನೆಂದು 1 ಲೌಕೀಕ ವಿಲಕ್ಷಣ ಅನೇಕ ಏಕ ಸಾಕಾರ ವಿಗ್ರಹ ಪುಣ್ಯಶ್ಲೋಕ ವಿಭುವೆ ಪ್ರಾಕೃತ ರಹಿತಗಾತ್ರ ಲೋಕಪಾವನ ಶೋಕ ಮೂಲ ನಾಶನ ವಿಶೋಕ ಜನಕ 2 ಅಂಗ ಅಂಗೀ ಭಾವದಿಂದ ಅಂಗದೊಳಿದ್ದು ಸಂಗಡ ತಿರುಗುವೊ ನೀಲಾಂಗ ನಿಸ್ಸಂಗ ಭೃಂಗ ಜಗದಂತೆ- ರಂಗ ರಂಗರಾಜ ಸುಖಸಂಗ ಅನಂಗ 3 ಆಪ್ತಕಾಮ ಅಮೃತಾಂಗ ಗುಪ್ತಮಹಿಮ ತಪ್ತಕಾಂಚನ ಸನ್ನಿಭ ವ್ಯಾಪ್ತ ನಿತ್ಯಾ ತೃಪ್ತ ತೃಣ ಬೊಮ್ಮಾದಿ ನಿರ್ಲಿಪ್ತವಾಸ ಸಪ್ತ ಸಪ್ತ ಲೋಕೇಶ ಅತೃಪ್ತ ಲೀಲ 4 ಅಗಣಿತ ಬಂಧು ಅಗನಾಗ ಧಾರಕನೆ ನಾಗ ಭಂಜನ ಆಗಸದಂಗಾಂಗುಷ್ಟದಿಂದ ಪೆತ್ತನೆ ಆಗಲೀಗಲೆನ್ನದಲೆ ಸಾಗಿ ಬೇಗದಿ5 ನಿರ್ದೋಷ ವಸ್ತು ನೀನೆಂದು ನಿರ್ಧಾರ ಮಾಡೆ ಪೊದ್ದಿಪ್ಪವು ನಿನ್ನಲಿ ನಾಲ್ಕು ನಿರ್ದೋಷಂಗಳು ಭದ್ರ ಫಲದಾಯಕ ಸಮುದ್ರಶಯನ ಮಧ್ಯಜೀವಿ ವಂದ್ಯ ಸುಪ್ರಸನ್ನ ಮೋಹನ್ನ 6 ಜೀವಾಭಿಮಾನಿ ಗಿರೀಶ ದೇವ ದೇವೇಶ ಜೀವರಾಶಿಗಳ ಸ್ವಾಭಾವ ಪ್ರೇರಕ ಜೀವನನಾಗಿ ನಮ್ಮ ಕಾವುತಲಿಪ್ಪ ರಾ- ಜೀವ ನಯನ ವಿಜಯ ವಿಠ್ಠಲ ಪೂರ್ಣ 7
--------------
ವಿಜಯದಾಸ
ವೆಂಕಟರಮಣ ವೇದಾಂತಕೋಟಿವಂದ್ಯ ಪತಿ ಏಳೆನ್ನುತ ಪ. ಪಂಕಜಮುಖಿ ಪದ್ಮಾವತಿ ಸರ್ವಾ- ಲಂಕಾರದ ನಿದ್ದೆ ಸಾಕೆನ್ನುತ ಅ.ಪ. ಮಂಗಲಚರಿತ ಭುಜಂಗಶಯನ ನಿ- ನ್ನಂಗದಾಯಾಸವ ಪರಿಹರಿಸಿ ಪೊಂಗಲಶದಿ ಉಷ್ಣೋದಕ ಗಂಧ ತೈಲಾ- ಮೂರ್ತಿ 1 ದಧಿಯ ಪೃಥುಕದಲಿ ಹದಗೈದು ಮಧುರದಿ ಮಧುಸೂದನ ನಿನ್ನ ಪದದ ಮುಂದೆ ಸದ್ ಹೃದಯರು ತಂದಿಹರು ಸಮರ್ಪಿಸೆ ಮದಜನಕ ನಿನ್ನ ಓಲೈಸುವರಯ್ಯ 2 ಸಣ್ಣಕ್ಕಿಯನು ದಿವ್ಯಾನ್ನ ಪಾಕವ ಮಾಡಿ ಚೆನ್ನಾದ ಗೋಕ್ಷೀರವನ್ನು ತಂದು ಉನ್ನತ ಮಹಿಮನೆ ಉಣ್ಣೆಂದು ಲಲಿತ ಸು- ವರ್ಣಪಾತ್ರೆಯೊಳು ತಂದಿಹರು ಶ್ರೀಹರಿಯೇ 3 ವಿಧವಿಧ ಷಡುರಸಭರಿತ ಮನೋಹರ ಸುಧೆಗೆಯಿಮ್ಮಡಿ ಮಧುರತ್ವದಲಿ ಮೃದುವಾದ ಉದ್ದಿನ ದೋಸೆಯ ಸವಿಯೆಂದು ಪದುಮನಾಭನೆ ನಿನ್ನ ಹಾರೈಸುವರಯ್ಯ 4 ಕದಳಿ ಉತ್ತಮ ಫಲಗಳ ತಂದು ರಕ್ಕಸವೈರಿಯೆ ನಿನ್ನ ಮುಂದೆ ಚೊಕ್ಕಟವಾಗಿಡೆ ಲೆಕ್ಕ ಲೇಖನಗಳ ವಾಸುದೇವ ನೀನೇಳಯ್ಯ5 ಸಾರಹೃದಯ ಗೌಡಸಾರಸ್ವತ ವಿಪ್ರ ಭೂರಿ ವೇದಾದಿ ಮಂತ್ರದ ಘೋಷದಿ ಶ್ರೀರಮಣನೆ ದಯೆದೋರೆಂದು ಕರ್ಪೂರ- ದಾರತಿಯನು ಪಿಡಿದಿಹರು ಶ್ರೀಹರಿಯೇ 6 ಭಾಗವತರು ಬಂದು ಬಾಗಿಲೊಳಗೆ ನಿಂದು ಭೋಗಿಶಯನ ಶರಣಾದೆನೆಂದು ಜಾಗರದಲಿ ಮದ್ದಳ ತಾಳರಭಸದಿ ರೇಗುಪ್ತಿರಾಗ ಸಂಗೀತ ಪಾಡುವರಯ್ಯ 7 ಕರುಣಾಸಾಗರ ನಿನ್ನ ಚರಣದ ಸೇವೆಯ ಕರುಣಿಸೆಂದೆನುತಾಶ್ರಿತ ಜನರು ಕರವ ಮುಗಿದು ಕಮಲಾಕ್ಷ ನಿನ್ನಯ ಪಾದ- ಸ್ಮರಣೆಗೈಯುತ ನೋಳ್ಪಾತುರದಿಂದ ಹರುಷದಿ 8 ನಾನಾ ಜನರು ಬಂದು ಕಾಣಿಕೆ ಕಪ್ಪವ ಶ್ರೀನಿವಾಸನೆ ನಿನ್ನ ಪದಕೆ ಒಪ್ಪಿ ದಾನವಾಂತಕ ನಿನ್ನ ದಯವೊಂದೆ ಸಾಕೆಂದು ಧ್ಯಾನಮಾಳ್ಪರು ದಯಮಾಡೆಂದು ಹರಿಯೇ 9 ನೀನೆ ಗತಿಯೆಂದು ನಿನ್ನ ನಂಬಿಹರು ಲ- ಕ್ಷ್ಮೀನಾರಾಯಣ ಪುರುಷೋತ್ತಮನೆ ಮಾನದಿ ಭಕ್ತರ ಸಲಹಯ್ಯ ಸಂತತ ಶ್ರೀನಿವಾಸನೆ ಬೇಗ ಏಳು ಶ್ರೀಹರಿಯೆ 10
--------------
ತುಪಾಕಿ ವೆಂಕಟರಮಣಾಚಾರ್ಯ
ವೆಂಕಟರಮಣ ಶ್ರೀ ವೆಂಕಟರಮಣ ಶ್ರೀವೆಂಕಟರಮಣನೇ ||ಅ|| ಪಂಕಜೋದ್ಭವ ಪಿತ ಪಿಳ್ಳಂಕೇರಿಯ ವಾಸವೆಂಕಟರಮಣನೇ ಅ.ಪ. ಭದ್ರ ಮೂರುತಿ ಸಣ್ಣ | ಆದ್ರಿಯಾಶ್ರಯಿಸಿ ನಿಂತಿದ್ದಿ ಕಾರಣವೇನೋ |ಶುದ್ಧ ಜನರು ಮಾಳ್ಪ | ಶುದ್ಧ ಸೇವೆಯ ಗೊಂಡುದ್ಧರಿಸಲು ಯೋನೋ 1 ನೀರೊಳು ಮುಳು ಮುಳಿಗಿ | ಭಾರಿ ಗಿರಿಯ ಪೊತ್ತುಕೋರೆಹಲ್ಲನು ತೋರೇನೋ |ಧೀರ ಕಂದನ ಕಾಯ್ದ | ನಾರಸಿಂಹನೆ ಬಲಿಯದ್ವಾರ ಕಾಯ್ದಿಹದೇನೋ 2 ನೃಪರ ಸವರಿ | ನಾರಿ ಚೋರನ ಕೊಂದುಚಾರ ಗೋಪೆರ ಕೂಡೇನೊ |ಸಾರಿ ತ್ರಿಪ್ಪುರವನ | ನಾರೇರ ವ್ರತ ಕೆಡಿಸಿವೀರ ರಾವುತನಾದದ್ದೇನೋ 3 ಪಂಚ ರೂಪದಿ ಪ್ರ | ಪಂಚವ ವ್ಯಾಪಿಸಿಪಂಚಾತ್ಮಕ ನಾದದ್ದೇನೋ |ಅಂಚೆ ಗಮನನಾದಿ | ಪಂಚ ಪಂಚರಲ್ಲಿಸಂಚು ಗೊಳಿಪುದೇನೋ | 4 ಇಂದ್ರಾ ವರಜ ದೇ | ವೇಂದ್ರ ಗಭೀಷ್ಟದಬಂದಲ್ಲಿ ನಿಂದಿರ್ಪುದೇನೋಇಂದು ಕುಲಜ ರಾ | ಜೇಂದ್ರ ಜನಮೇಜಯಗಂದು ಒಲಿದು ನಿಂತಿಲ್ಲೇನೋ 5 ತೊಂಡ ಮಾನಾನಂದಅಂಡಜವಾಹ ವಿಖ್ಯಾತಾ6 ಭಾವ ಶುದ್ಧೀಲಿ ಸ್ತವನ | ದೇವ ಶರ್ಮನು ಮಾಡೆಭಾವಕ್ಕೊಲಿದು ಮೋಕ್ಷವಿತ್ಯೋ |ಗೋವ ಕಾವ ಗುರು | ಗೋವಿಂದ ವಿಠಲ ಭಕ್ತಿಭಾವ ನಿನ್ನಯ ಪದದಲ್ಲಿಯೋ7
--------------
ಗುರುಗೋವಿಂದವಿಠಲರು
ವೆಂಕಟಾಚಲವಾಸ ಪಂಕಜಪ್ರಿಯಭಾಸ ಶಂಕರಾರ್ಚಿತ ಚರಣ ಪಂಕಜಾಸನ ಪಿತ ಪಂಕಜಲೋಚನ ಕಿಂಕರಜನ ಶರಣ ಪ ಪರಮಾತ್ಮ ನಿನ್ನ ಶ್ರೀಪದಸೇವಕನಾಗಿಪರರನನುಸರಿಸುವೆನೆ ಸಿರಿರಮಣನೆ ನಿನ್ನ ಕರುಣೆಯುಳ್ಳೆ ಪರಸಿರಿಯ ಬಯಸುವೆನೆ 1 ಧರಣಿಯನಾಳುವ ದೊರೆಯ ಕುಮಾರನು ತಿರಿಕೆಯ ಬೇಡುವನೆ ಸುರತರುವಿನ ತಂಪುನೆರಳೊಳು ಕುಳಿತು ತಾ ಗರಿಕೆಯನರಸುವನೆ 2 ಸಾರನಿಗಮ ವಿಚಾರವುಳ್ಳವ ನಿಸ್ಸಾರದಿ ಬೆರೆಯುವನೆ ವಾರಿಧಿಲಂಘಿಪಧೀರನುಕೊಳಚೆಯನೀರಿಗೆಜರಿಯುವನೆ 3 ಕ್ಷೀರಾಬ್ಧಿ ಮಥಿಸಿದ ಶೂರನಿನ್ನವನಿಗೆ ನೀರು ಮಜ್ಜಿಗೆ ಗಣನೆ ನಾರಸಿಂಹನ ಪದ ಸಾರಿದರವನು ಮದವಾರಣಕ್ಕಂಜುವನೆ 4 ಗರುಡಗಮನ ನಿನ್ನ ಶರಣಾದವನಿಗೆ ತರಳನ ಹಾವಳಿಯೆ ನರಕಾಂತಕ ನಿನ್ನ ಸ್ಮರಿಸುವ ನರನಿಗೆ ದುರಿತಂಗಳಟ್ಟುಳಿಯೆ 5 ಹೊಳೆಯೊಳು ನೆನೆಯದ ಬಲುಗಟ್ಟಿಕಲ್ಲು ತಾ ಮಳೆಯೊಳು ನೆನೆಯುವದೆ ಇಳೆಯೊಳು ಪುಲಿಗಿರಿನಿಲಯನ ದಾಸರ ಬಲುಹು ಕುಂದಕವಹುದೆ 6 ಇಷ್ಟದಿ ಮನೆಯೊಳು ಮೃಷ್ಟಾನ್ನವುಂಡವ ಪಿಷ್ಟವ ಬಯಸುವನೆ ಸೃಷ್ಟೀಶ ನಿನ್ನೊಳಗಿಟ್ಟು ದುರ್ದೈವದ ದೃಷ್ಟಿಯನರಸುವನೆ 7 ನಿಗಮಗೋಚರ ಕೇಳು ಜಗವ ತೂಗುವನಿಗೆ ಮಗುವತಿ ಘನವಹುದೆ ಜಗದಘಹರಣ ಎನ್ನಘವ ನೀಗಲು ನಿನ್ನ ಬಗೆಗೆ ದುರ್ಘಟವಹುದೆ 8 ಪರಮಾತ್ಮ ಪರಿಪೂರ್ಣ ಪರವಸ್ತು ನೀನೆಂದು ಮರೆಹೊಕ್ಕೆ ಕಾಯೊ ಎನ್ನ ವರಸುಗುಣಾಕರವರದವಿಠಲಪುಲಿಗಿರಿದೊರೆಸುಪ್ರಸನ್ನಾ 9
--------------
ವೆಂಕಟವರದಾರ್ಯರು
ವೆಂಕಟಾಚಲವಾಸ-ಪಂಕಜಪ್ರಿಯ ಭಾಸ ಶಂಕರಾರ್ಚಿತ ಚರಣ ಪಂಕಜಾಸನ ಪಿತ ಪಂಕಜಲೋಚನ-ಕಿಂಕರ ಜನ ಶರಣ ಪ ಪರಮಾತ್ಮ ನಿನ್ನ ಶ್ರೀಪದಸೇವಕನಾಗಿ ಪರರನುಸರಿಸುವನೆ ಪರ ಸಿರಿಯ ಬಯಸುವನೆ 1 ತಿರುಕೆಯಬೇಡುವನೆ ಸುರತರುವಿನತಂಪು ನೆರಳೊಳು ಕುಳಿತುತಾ ಗರಿಕೆಯನರಸುವನೆ 2 ನಿಗಮ ವಿಚಾರವುಳ್ಳವ ನಿಸ್ಸಾರದಿ ಬೆರೆಯುವನೆ ವಾರಿಧಿಲಂಘಿಪ ಧೀರನು ಕೊಳಚೆಯ ನೀರಿಗೆ ಜರಿಯುವನೆ 3 ಕ್ಷೀರಾಬ್ಧಿಮಥಿಸಿದ ಶೂರನಿನ್ನವನಿಗೆ ನೀರುಮಜ್ಜಿಗೆ ಗಣನೆ ನಾರಸಿಂಹನ ಪದ ಸಾರಿದವನು ಮದವಾರಣಕ್ಕಂಜುವನೆ 4 ಗರುಡಗಮನ ನಿನ್ನ ಶರಣನಾದವನಿಗೆ ತರಳನ ಹಾವಳಿಯೆ ನರಕಾಂತಕ ನಿನ್ನ ಸ್ಮರಿಸುವನರಗೆ ದುರಿತಂಗಳಟ್ಟುಳಿಯೆ 5 ಹೊಳೆಯೊಳು ನೆನೆಯದ ಬಲುಗಟ್ಟಿಕಲ್ಲುತಾಮಳೆ ಯೊಳುನೆನೆಯುವುದೆ ಬಲುಹುಕುಂದಕವಹುದೆ 6 ಇಷ್ಟದಿ ಮನೆಯೊಳು ಮೃಷ್ಟಾನ್ನವುಂಡವ ಪಿಷ್ಟವ ಬಯಸುವನೆ ಸೃಷ್ಟೀಶನಿನ್ನೊಳಗಿಟ್ಟು ದುರ್ದೈವದ ದೃಷ್ಟಿಯನರಸುವನೆ 7 ನಿಗೆಮಗುವತಿ ಘನವಹುದೆ ದುರ್ಘಟವಹುದೆ 8 ಮೊರೆಹೊಕ್ಕೆ ಕಾಯೊ ಯನ್ನ ವರಸುಗಣಾಕರ ವರದವಿಠಲ ಪುಲಿಗಿರಿ ದೊರೆ ಸುಪ್ರಸನ್ನಾ 9
--------------
ಸರಗೂರು ವೆಂಕಟವರದಾರ್ಯರು
ವೇದವ ತಂದು ವಿಧಿಗೀವಂದೆ ನೀಸಾಧು ಜನರ ಸಲಹಲಿ ಬಂದೆ ಪ. ಮೋದದಿಂದೆಮ್ಮ ಮನದಿ ನಿಂದೆ ನೀಬಾಧಿಪ ದುರಿತತತಿಯ ಕೊಂದೆ ಅ.ಪ. ಸಕಲ ಸುರರಿಗೆ ಶಿರೋರನ್ನ ನೀಅಕಳಂಕಾಶ್ರಿತಜನಮಾನ್ಯನಿಖಿಲ ನಿಗಮನಿಕರದಿ ವಣ್ರ್ಯ ನಿನ್ನಕರುಣಾಕಟಾಕ್ಷದಿ ನೋಡೆನ್ನ 1 ಕೈವಲ್ಯಪದವಿಯ ಕೊಡಬಲ್ಲ ನಿನ್ನಸೇವಿಪ ಸುಜನರಿಗೆಣೆಯಿಲ್ಲಭಾವಜಕೋಟಿಯಿಂದಚೆಲ್ವ ನೀಶ್ರೀವನಿತೆಗೆ ಸಿಲುಕುವನಲ್ಲ 2 ಹಯವದನ ಹೃದಯಸದನಜಯ ಶಶಿವರ್ಣ ಜಗತಿಪೂರ್ಣಭಯಹರ ಭಾಸುರ ಸಿರಿಚರಣ ನಿನ್ನದಯಪಾತ್ರಾನುದ್ಧರಿಸೆನ್ನ 3
--------------
ವಾದಿರಾಜ
ವೈಕುಂಠನಾಯಕನೂ ಈ ಮಹಾತ್ಮನು ವೈಕುಂಠನಾಯಕನು ಪ. ಪಾಕಶಾಸನತ, ನಾಕಪಾಲಕ ಸರ್ವಲೋಕನಾಯಕ ಭಕ್ತರಕ್ಷಕ ಶ್ರೀಕಳತ್ರ ಸುಪವಿತ್ರನೀತನು ಅ.ಪ. ವೆಂಕಟಗಿರಿಯಿಂದ ಅಂಕನಶೆಟ್ಟಿಪುರಕೆ ಬಿಂಕದಿಂದೈತಂದ ಕಾಂಕ್ಷಿತಾರ್ಥವನೀವನು ಭಕ್ತರಮನಶಂಕೆಯ ಕಳೆಯುವನು ಕಂಕಣಕರ ಬದ್ಧನಾಗಿಹ ಪಂಕಜಾಸನ ಜನಕ ಲಕ್ಷ್ಮೀಕಾಂತ ಸರ್ವಾಂತರ್ಯಾಮಿಯಾಗಿಹ 1 ಬಂದವರೆಲ್ಲ ತಾವು ಬಂದಂತೆ ಮನನೊಂದು ಹಿಂದಿರುಗಿ ಪೋಗುವರೆಂಬ ಮಾತಿಲ್ಲ ಬಂದು ಬಂದವರಿಗೆಲ್ಲ ಬೇಡಿದುದಿತ್ತಾನಂದ ದಿಂದವರೀಯುವ ಕಾಣಿಕೆಗಳ ಚೆಂದದಿಂ ಸುರೇಂದ್ರ ವಂದ್ಯ ಕರೀಂದ್ರಪೂಜಿತ ನಂದ ಕಂದ ಮುಚುಕುಂದ ವರದನು 2 ಅಂಗವಿಹೀನರಿಗಂಗವ ಸರಿಗೈದು ಇಂಗದ ಭೋಗಭಾಗ್ಯಂಗಳ ನೀವನು ಕಂಗೆಟ್ಟಿಹರಕಾಯ್ವನು - ಬೇಡುತ್ತಿಹ ಬಂಜೆಗೆ ಮಕ್ಕಳನು ನೀಡುವನು ತನ್ನ ನಂಬಿದವರ ಕೈಬಿಡನು ಸತ್ಯಾತ್ಮನು ಮಂಗಳಾಂಗ ಯದುಪುಂಗವ ಸದಯಾಪಾಂಗ ಶ್ರೀ ರಂಗ ತುಂಗವಿಕ್ರಮ ಶೇಷಗಿರಿವರ 3
--------------
ನಂಜನಗೂಡು ತಿರುಮಲಾಂಬಾ
ವ್ಯರ್ಥ ನುಡಿವುದೇನು | ಅರ್ತು ಕೊಂಡಿರು ನೀ ಪ್ರಾಣಿ ಪ ಮುಕ್ತಿ ಮಾರ್ಗರಿಯದೇ ಬ್ರಹ್ಮ ನಾನೆಂದು | ಭಕ್ತಿ ಬಿಡುದು ಕುಂದು 1 ಕೂಲಿ ಮಾಡುತ ತಾ ಅರಸನೆಂದರ | ಇಳೆಯೊಳೆಲ್ಲರು ನಗರೇ ಪ್ರಾಣಿ 2 ಈಸಲರಿಯದವ ತೆಪ್ಪ ಬಿಡಲು | ಘಾಸಿಯಾಗನೇ ಹೇಳು ಪ್ರಾಣಿ 3 ಹೆಚ್ಚು ಕುಂದಿನ ಬಡಿವಾರಗಳಿಲ್ಲ | ಇಚ್ಚೆಯಗಳವಿಲ್ಲಾ ಪ್ರಾಣಿ 4 ಮಹಿಪತಿ ಸ್ವಾಮಿಯ ಕಂಡಿರು ಹೀಂಗ ಸಿಹಿಗಂಡ ಮೂಕನ್ಹಾಂಗ ಪ್ರಾಣಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವ್ಯರ್ಥವಾಗೊದÉೂ ಜನ್ಮ ಸಾರ್ಥಕಾಗದೊ ಭಕ್ತಿ ಭಾವದಿಂದ ಪುರುಷೋತ್ತಮನ ಪೂಜಿಸದ ಜನ್ಮ ಪ ಪರಮ ಶ್ರೇಷ್ಠಜನ್ಮದಿ ಬಂದು ಪರಮ ಭಕುತಿಯಿಂದಲೀಗ ಪರಮಾತ್ಮನ್ನ ಪಾದವ ಭಜಿಸದೆ ಪಾಮರನಾಗಿ ಕಳೆವೋ ಜನ್ಮ 1 ಲಕ್ಷ್ಯ ಇಟ್ಟಧೋಕ್ಷಜ ನಿನ್ನನುಗ್ರಹ ಅಪÉೀಕ್ಷಿಸದಲೆ ಲಕ್ಷ್ಮೀಪತಿಯ ಪಾದವನ್ನಲಕ್ಷ್ಯ ಮಾಡದವನ ಜನ್ಮ 2 ಕರ್ಮ ಕಳೆದು ಪಂಚಮುಖನ ಪ್ರಿಯನ ನಾಮ ಮುಂಚೆ ನೆನೆಯದವನ ಜನ್ಮ 3 ನಿತ್ಯ ನಿನ್ನ ನಾಮ ಬಿಟ್ಟನಿತ್ಯ ಮಾರ್ಗ ಹಿಡಿದು ಮುಂದೆ ಕೆಟ್ಟು ಹೋಗೋದಕ್ಕೆ ಒಡಂಬಟ್ಟು ಹರಿಯ ಬಿಟ್ಟ ಜನ್ಮ 4 ಏಸುಏಸು ಜನ್ಮದಲ್ಲಿ ಬ್ಯಾಸರದಲೆ ಸಲಹುತಿಹ ಭೀ- ಮೇಶ ಕೃಷ್ಣನಂಘ್ರಿಗಳನು ದರ್ಶನ ಮಾಡದವನ ಜನ್ಮ 5
--------------
ಹರಪನಹಳ್ಳಿಭೀಮವ್ವ
ವ್ಯರ್ಥವಾಯಿತಲ್ಲ ಜನ್ಮವು ಸಾರ್ಥಕಾಗಲಿಲ್ಲ ಪ ಅರ್ಥದಾಸೆಯಲಿ ಪೃಥ್ವಿಯೊಳಗೆ ಸುತ್ತಿಮತ್ತನಾಗಿ ಬಲು ಕೃತ್ಯಗಳನು ಮಾಡಿಅ ಹರಿಯ ನೆನಯಲಿಲ್ಲ ಹರುಷದಿ ಗರುವ ಪುಟ್ಟಿತಲ್ಲಪರಮ ಮೂಢರಲಿ ನಿರುತ ಸಂಗವ ಮಾಡಿಗುರು ಹಿರಿಯರ ದಯ ದೊರೆಯದೆ ಸುಮ್ಮನೆ1 ಏನು ಪೇಳಲೇನು ಎನಗೆ ಹೀನ ಬಿಡದು ಮುನ್ನಶ್ವಾನಗಿಂತಲು ಬಲು ಮಾನಗೆಟ್ಟು ನಾದೀನನಾಗಿ ಮನೆಮನೆಗಳ ತಿರುಗಿ 2 ಭಾಗವತರ ಪಾದಕ್ಕೊಂದಿನ ಬಾಗಿ ನಡೆಯಲಿಲ್ಲರಾಗುರಂಗು ಭಕ್ತಿ ಭಾವದೊಳುಬೀಗಿ ಚೆನ್ನಕೇಶವನನು ನೆನೆಯದೆ 3
--------------
ಕನಕದಾಸ
ವ್ಯಾಸರಾಯರ ಚರಣವನೆ ಸೇವಿಸಿ ಪ ವ್ಯಾಸರಾಯರ ಚರಣ ಸರಸಿಜದ ಸೇವೆ ಬಲು ಮೀಸಲ ಮನದಿ ಮಾಡೆ ಆಶೆಪಾಶೆಯ ತೊರೆದು ಕ್ಲೇಶವೆಲ್ಲವ ಹರಿಸಿ ಭಾಸಿಸುವ ಬಿಡದಲೇ ಹೃದ್ದೇಶ ಖೇಶದೊಳಗೇ ಅ.ಪ. ಬನ್ನೂರು ಪುರದಲ್ಲಿ ಮುನ್ನೋರ್ವ ಬ್ರಾಹ್ಮಣನಮನ್ನೆಯೋಳ್ಳುದಿಸಲೂ ಸ್ವರ್ಣ ಪಾತ್ರೆಲಿ ತರಿಸಿಘನ್ನ ಮಹಿಮನ ತಂದು ಬ್ರಹ್ಮಣ್ಯ ಯತಿವರರು ತಮ್ಮ ಆಶ್ರಮದಿ ಪೊರೆಯೆ ||ಉನ್ನತದ ಗುಡ್ಡದಲಿ ಗವಿಯ ಮನೆಯಾಗಿರಲು ಚಿಣ್ಣನಾ ತೊಟ್ಟಿಲಿನ ಮೇಲಿನ ಗವಾಕ್ಷದಿಂಚೆನ್ನಗೋವ್ ದಿನದಿನದಿ ಪಾಲ ಕರೆಯುತ ಚಿಣ್ಣನನು ತಾ ಬಲು ಸಲಹಿತು 1 ತಾಪಸೋತ್ತಮರಾದ ಶ್ರೀಪಾದರಾಯರ ಸ-ಮೀಪದೊಳು ಆ ಪರಮ ಶಾಸ್ತ್ರ ವ್ಯಾಸಂಗದೀಭಾಪು ಭಾಪನೆ ಮೆರೆದು ಭಕ್ತಿ ಸುಪಥವ ಪಿಡಿದು ಮೈ ಮರೆದು ಕುಣಿಯುತಿರುವ ||ಶ್ರೀಪಾದ ಮುನಿಪ ತಾ ಮುಚ್ಚಳವ ತೆರೆಯದಿಹ ಸಂಪುಟವ ತೆರೆಯುತ್ತ ಶ್ರೀ ಪತಿಯನೆ ನೋದುತಶ್ರೀಪ ಶ್ರೀ ವೇಣುಗೋಪಾಲ ಕೃಷ್ಣನ್ನ ಕಾಣುತ್ತ ಕುಣಿ ಕುಣಿದಾಡಿದ 2 ಶಾಲಿಗ್ರಾಮವ ಪಿಡಿದು ತಾಳವನೆ ಹಾಕುತ್ತಬಲುಭಕ್ತಿ ಭರದಿಂದ ಘಲ್ಲು ಘಲ್ಲನೆ ಕುಣಿಯೆಖುಲ್ಲ ಜನರಿದರ ವಳ ಮರ್ಮವನೆ ತಿಳಿಯದಲೆ ಗುಲ್ಲುಗುಲ್ಲೆಂದು ನಗಲೂ || ಬಲ್ಲಿದ ಶ್ರೀಪಾದರಾಯರಿದ ಕೇಳಿ ಕಂಗಳಲಿ ಗಂಬನಿ ಗಲ್ಲದಲಿ ಕೈಯಿಡುತ ಸೊಲ್ಲ ಕೇಳಿರಿ ಸುಜನರೆಲ್ಲರು ಶ್ರೀ ಕೃಷ್ಣ ನಮ್ಮ ವ್ಯಾಸರೋಶನಾದನು 3 ಸಾರಥಿ ಹರಿಯನಿಜ ಮತವ ಬೋಧಿಸುತ ನಿಜ ಜನರ ಪೊರೆಯುತ್ತಕುಜನ ಕುತ್ಸಿತ ಮಾಯಿಮತ ಜೈಸಿಅಜನನಯ್ಯನ ಪ್ರೀತಿ ಸಂಪಾದಿಸಿ ||ಸುಜನ ಪಾಲಕ ಕೃಷ್ಣರಾಜನಿಗೆ ಕುಹುಯೋಗಗಜಬಜಿಸಿ ಬರುತಿರ್ಪುದನು ನಿಜ ಮನದಿ ತಿಳಿದುಗಜವರದ ನಂಘ್ರಿಯನೆ ಭಜಿಸುತ್ತ ವಿಜಯ ಪುರಿ ಸಿಂಹಾಸನವನೇರ್ಧರ 4 ಪರಿ ಗ್ರಂಥ ರಚನೆಯಲಿ ಕಳೆಯೆ ಕಾಲವಕಲು ಮನದ ಜನರಿವರ ಬಲು ಪರಿಯ ಮಹಿಮೆಗಳನೂ ತಾವ್ ತಿಳಿಯಲೊಶವೆ 5 ಇಂಪುಗೊಳ್ಳುತ ಮನದಿ ತಂಪಿನಿಂದಲಿ ಮೆರೆವಪಂಪೆ ಸುಕ್ಷೇತ್ರದಲಿ ಬಾಂಬೊಳೆಯ ಜನಕನ್ನಸಂಪ್ರೀತಿಯನೆ ಪಡೆದಿರುವ ಯಂತ್ರ ಉದ್ಧಾರರನ ಸ್ಥಾಪಿಸುತಲಿ||ನೋಂಪಿನಿಂದಲಿ ಬ್ರಾಹ್ಮಲಕ್ಷ ಗುಂಪಿಗೆ ಉಣಿಸಿ |ಸಂಪುಲ್ಲ ಲೋಚನನ ಶಂಫಲಿಯ ಪುರಗನನುಸಾಂಪ್ರದಾಯಕದಿಂದ ಸಂಪ್ರೀತಿ ಬಡಿಸಿದರ ಪದ ಪಾಂಸುವನೆ ಸಾರಿರೋ 6 ಪರಿ ಪರಿಯ ಪೂಜೆಯನೆ ಗೈಯ್ಯುತಲಿ ||ಶ್ರೀಶನ ಸುಪೂಜಾ ವಿಧಾನವನೆ ಗೈಸುತ್ತದೋಷದೂರನ ಸೇವೆ ಮೀಸಲಳಿಯದ ಮನದಿ ಒಸೆದು ತಾವ್ ಗೈಯ್ಯುತ ಭಾಸಿಸುವ ಸತ್ಕೀರ್ತಿಯುತರಾಗಿ ಮೆರೆಯುತಿಹರ 7 ಪುರಂದರ ವಿಠಲ ದಾಸನೆಂದೂದಾಸ ಪೀಠದಿ ನಿಲಿಸಿ ದಾಸ ಕೂಟವ ರಚಿಸಿ ಸತ್ಪಂಥವನೆ ಸಾರಿದ ||ಆಶುಕವಿತೆಯ ರಚಿಸಿ ಪ್ರಾಕೃತ ಸುಭಾಷೆಯಲಿಕೇಶವನ ಗುಣಧಿಯಲಿ ಲೇಸಾಗಿ ಈಸುತಲಿದಾಸರೊಡನಾಡುತಲಿ ಮೀಸಲಾಗಿರಿಸಿ ತನು ಕೇಶವನ ಗುಣ ಪೊಗಳಿದ 8 ಜಯ ಜಯತು ಶುಭಕಾಯ ಜಯ ಜಯತು ವ್ಯಾಸಾರ್ಯಜಯ ಮಧ್ವಮುನಿ ಪ್ರೀಯ ಜಯ ಚಂದ್ರಿಕಾಚಾರ್ಯಜಯತು ವಿದ್ವದ್ದಾರ್ಯ ಜಯತು ಸುರಮುನಿ ಪ್ರೀಯ ಜಯ ಜಯತು ಯತಿವರ್ಯನೆ ||ಕಾಯಭವ ಪಿತ ಗುರೂ ಗೋವಿಂದ ವಿಠ್ಠಲಗೆಪ್ರೀಯ ಗುರು ವ್ಯಾಸಾರ್ಯ ಸ್ತೋತ್ರವನು ಭಾವ ಶುದ್ಧಿಯೊಳಾವ ಭಜಿಸುವನವಗೆ ಭವವನಧಿ ಉತ್ತರಿಸೆ ನಾವೆಯೆನಿಸುವುದಿದು 9
--------------
ಗುರುಗೋವಿಂದವಿಠಲರು