ಒಟ್ಟು 2736 ಕಡೆಗಳಲ್ಲಿ , 100 ದಾಸರು , 1962 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದ ಗೋವಿಂದ ವಾರಣೇಂದ್ರನ ಬಳಿಗಾಗ ಸಿಂಧು ವೈಕುಂಠದಿಂದ ಪ ಇಂದಿರೆಯೊಡನೇನೊಂದನೂ ನುಡಿಯದೆ ನಿಂದು ಕಾದಿಹ ವಿಹಗೇಂದ್ರನ ನೋಡದೆ ಒಂದೇ ಸಡಗರದಿಂದೋಡುತೆ ನಾ ಗೇಂದ್ರಶಯನ ನಾಗೇಂದ್ರನ ಪೊರೆಯಲು 1 ಬಂಗಾರ ಮಕುಟೋತ್ತಮಾಂಗದಿ ಶೋಭಿಸೆ ಶೃಂಗಾರ ಫಣಿಯೊಳು ಮಂಗಳಕರ ತಿಲಕ ಕಂಗಳ ಕಾಂತಿ ತ್ರಿಜಗಂಗಳ ಬೆಳಗಲು ಹಿಂಗದೆ ಶಂಖ ಚಕ್ರಾಬ್ಜಂಗಳು ಕರದಲ್ಲಿ 2 ಅಂಗಜನಯ್ಯ ಶುಭಾಂಗ ಅಮರ ತ ಭವ ಭಂಗ ಸುರಕುಲೋ ತ್ತುಂಗ ರಂಗ ಉತ್ತುಂಗ ಮಹಿಮ ಮಾ ತಂಗ ಗಿರಿಯ ನರಸಿಂಗನು ಬೇಗದಿ 3
--------------
ವರಾವಾಣಿರಾಮರಾಯದಾಸರು
ಬಂದ ಜನ್ಮ ಬರಲಂಜಲ್ಯಾತ ಕಗೋ ವಿಂದ ನಿನ್ನೆಚ್ಚೆರ ವೆನಗಿದ್ದರ ಸಾಕು ಗೋವಿಂದ ಗೋವಿಂದ ಪ ಒಂದೆರಡಲ್ಲಾ ಶತ ಸಹಸ್ರವಾಗಲಿ ಛಂದದಿನಿನ್ನ ನಾಮಾ ಜಿವ್ಹೆಯ ಲಿರಲಿ1 ಹರಿಪರಂದೈವೆಂದು ಅರುಹಿನಾ ಮನೆಲಿದ್ದು ಹರಿಯದಿರಲಿ ಮನ ವಿಷಯಕ ಬಿದ್ದು 2 ಮುಕುತಿಗಿ ಕುತಿಯಂಬಾ ಹಂಗಿನ ನೆಲೆಯಾಕ ಭಕುತಿ-ಯನಿ ಪನಿಜ ಸುಖವಿರಲಿಕ್ಕೆ 3 ಗುರುಮಹಿಪತಿ ಸ್ವಾಮಿ ನಿನ್ನ ಶರಣರಾ ಮೃಗ ಪಶುವಾ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದ ನೋಡಮ್ಮ ಗೋಪಿಯ ಕಂದ ಬಂದ ನೋಡಮ್ಮ ||ಮಂದರ ಧರ ಗೋವಿಂದನು ಹರಿ ಉಪೇಂದ್ರನು ಲಕ್ಷ್ಮೀವೃಂದಾವನ ಗೋಕುಲ ಪ್ರೀಯಾ ಪ ಕುಂಡಲ ಮಂಡಿತ ಪುಂಡರೀಕಾಕ್ಷಾ 1 ತೊಟ್ಟಲಲ್ಲೆ ತಾ ಬಟ್ಟನೆ ಚೀಪುತ | ಧಿಟ್ಟಾ ಕೃಷ್ಣನುತಟ್ಟನೆ ಚುಂಬನವ | ಕೊಟ್ಟಾ ವಿಷವನು ಕೊಟ್ಟವಳಸುವನುಧಿಟ್ಟಿಸಿದಾ ಜಗಜಟ್ಟಿಯು ಕೃಷ್ಣಾ 2 ಬಾಲಕರನು ಹೆಗಲೇರಿಸಿ ಮೇಲಿನ | ನೆಲವಿನ ಬೆಣ್ಣೆಯಕಳವನು ಮಾಡಿ | ಶಾಲಾ ಹುಡುಗರ ಪಾಲಾ ಉಣಿಸುತಲಿವಲಕ್ಷ್ಮೀಲೋಲಾ ರಂಗಯ್ಯಾ 3 ಮಣಿ ಫಣಿ ಫಣಿದಲಿ ಮೆಟ್ಟಿ |ಕುಣಿಕುಣಿದಾಡುತಲಿ 4 ಮಾಧವ | ಮಂಗಲ ಕರತರಂಗನ | ಅರಿತತಿ ಭಂಗವ ಬಿಡಿಸುತ |ಕಂಗಳ ಸದೋದಿತ ರುಕ್ಮ 5
--------------
ರುಕ್ಮಾಂಗದರು
ಬಂದ ಬಂದ ವಾಯು ಪೆಸರಿನವ - ರಿಂದಅನಿಮಿತ್ತ ಬಂದು ವೆಂಕಟ ನಿಲಯ ಪ ಇಂದಿರೆ ಸುತನೆನೆ | ಸುಂದರನೂ ಮಮ | ಮಂದಿರ ಸೇರಲುನಂದದಿ ಬಂದನು | ಚಂದ್ರ ಭಾಗ ತಟ | ಸುಂದರ ವಿಠಲನುಮುಂದೆ ಬರುವ | ನೆಂದೆಂಬುದ ಸೂಚಿಸೆ ಅ.ಪ. ಮಕರ ಕೌಸ್ತುಭ ಬ್ರಹ್ಮಾ ಧಿಷ್ಠಿತವಾಗಿರೆ ಹೃತಮ ಕಳೆ ಹರಿ 1 ಸೋಮಕುಲ ಸುಭೂಷ ದಿವ್ಯ | ಧಾಮದಲ್ಲಿ ಶೋಭಮಾನ ||ಶ್ರೀ ಮಹಿಳೆಯು ಎಡ | ಪದ್ಮ ಹಸ್ತ ಬಲಭೂಮಾಂಬೆಯು ಬಲ | ಪದ್ಮ ಹಸ್ತ ಎಡಭೂಮಾರ್ಣವ ಗುಣ | ಸ್ತೋಮ ತುತಿಸುತಲಿಆ ಮಹ ದಿವಿಜರ | ಸ್ತೋಮ ನಿಚಯವಿರೆ2 ಮಾಸ ಸಿರಿ | ಶೇಷಗಿರೀಶನುಒಸೆದು ಹಸ್ತ ಎಡೆ | ಎಸೆವ ಕಟಯಲಿಟ್ಟುವಸುದೇವ ಸುತ ಬಲ | ಹಸ್ತ ಅಭಯ ತೋರಿಬಸುರಿಲಿ ಬೊಮ್ಮನ | ಪ್ರಸವಿಸಿರವ ಹರಿ 3 ಶರಧಿ | ಕಟಿಯ ಮಿತವು ಭಕುತಗೆಂದ ||ವಿಠಲಾಗಮನವು | ದಿಟವೆನೆ ಸೂಚಿಸಿಎಟ ಪಾದವು ಸುರ | ತಟನಿಗೆ ಕಾರಣಪಟುಭಟರೆನಿಸುವ | ನಿಟಿಲ ನಯನ ಸುರಕಟಕವ ಪಾಲಿಪ | ಧಿಟ ದೊರೆ ವೆಂಕಟ 4 ಅರಿ | ಹೊಳೆವ ಶಂಖ ಎಡ ನಿಲವು ಮಾಟವಿಗೆ | ಗೆಲವು ಸುರರಿಗೆನೆಕಳೆ ಕಳೆ ನಗು ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಬಂದ ಬಂದ ಹಿಮದ ಗಿರೀ | ಯಿಂದ ಅನಿಮಿತ್ತ ಬಂಧು | ಬದರಿವಾಸ | ಬಂದ | ಬಂದ ಪ ಇಂದಿರೆ ಅಜ ಭವ ಕ್ಷಿತಿ | ವೃಂದಾರಕ ವಹಬಂದನು ತಾ ಮಮ | ಮಂದಿರಕಿಂದೂ ಅ.ಪ. ಕೌಸ್ತುಭ ಉರ ಸಿರಿ ವತ್ಸಾಂಕಿತ ಸುರಚಿರೋದರವು | ಮೆರೆವ ತ್ರಿವಳಿಯಿಂವರ ಪಟ್ಟಕ ವಸನವು | ತರ್ಕ ಚಿಹ್ನಿತಕರಸುರ ಭೂಸುರರಿಗೆ | ವರ ಜ್ಞಾನದ ಹರಿ1 ಕಾಯ ಕಟಕ ಕರ | ಪುಟದಲಿ ಜಪಮಣಿಕಟಕ ಧರಿಸಿ ಸುರ | ತಟನಿ ತೀರಗ ಸುರಕಟಕವೆರಸಿ ಉತ್ | ಕೃಷ್ಟನು ಮಮ ಮಂದಿರಕೆ 2 ಸುಜನ ಸುರದ್ರುಮಕುಜನಾರಾತಿಯು | ರಜಮಾರನು ಸುರವ್ರಜವು ಪೊಗಳುತಿರೆ | ಮಝ ಭಾಪೆಸೆ ಮಮರಜವ ಕಳೆಯೆ ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಬಂದ ಶ್ರೀ ಹರಿ ಬಂದ ಪ ಬಂದ ಬಂದ ಮುಚುಕುಂದ ಪರದ ಅರ- ವಿಂದನಯನ ಗೋವಿಂದ ಪರಾತ್ವರ ಕಂದನೆನ್ನ ಮನ ಮಂದಿರಕೀಗಲೆ ನಂದವ ನೀಡುತ ಇಂದಿರೆಸಹಿತದಿ ಅ.ಪ. ಪೊತ್ತವ ಬಂದ ಅಜಿತನುಬಂದ ಚಾರುವರಾಹನು ಭೂಸಹಬಂದ ಪೋರನ ಸಲಹಿದ ಘೋರನು ಬಂದ ಭಾರ್ಗವ ಬಂದ ಕೌರವವಂಶಕುಠಾರನು ಬಂದ ಕಲ್ಕಿಯು ಬಂದ 1 ಉಸುರಲು ಹಯಮುಖಬಂದ ದತ್ತನುಬಂದ ನೀಡಲು ಯಜ್ಞನುಬಂದ ಸಾಧುಹರಿನಾರಾಯಣ ಬಂದ ಶಿಂಶುಮಾರನು ಬಂದ ಧನ್ವಂತ್ರಿಯು ಬಂದ 2 ಶ್ರೀ ವಿಷ್ಣುವು ಬಂದ ಉಲ್ಲಾಸದಿ ಬಂದ ಸಂತೋಷನು ಬಂದ ತೈಜಸ ಕರುಣದಿ ಬಂದ ಮುಕ್ತೇಶನು ಬಂದ ಪರಾದ್ಯನಂತನು ಬಂದ 3 ಜಗನೂಕೂವ ಬಂದ ಪುರುಹೂತ ವಿನುತ ಸಕಲಾರ್ತಿಹರ ತಾ ಬಂದ ವೈರಾಜ್ಯನು ಬಂದ ಶೃತಿ- ನೀಕ ಸುವಂದಿತನಿರುಪಮ ಬಂದ ವಾಕುಮನಕೆ ಸಾಕಲ್ಯಸಿಗದ ಪುಣ್ಯ- ವಿವರ್ಜಿತ ಭಗಲೋಕೈಕ ವಂದ್ಯ ನಿಜಭಕ್ತಗಣ ಜಯಪರಾಕುನುಡಿಯುತಿರೆ ಮೆಲ್ಲ ಮೆಲ್ಲಗೆ4 ಸರ್ವಸಾಕ್ಷಿಗಭೀರ ಪರಾಕು ಸ್ವತಂತ್ರನೆ ಪರಾಕು ಸರ್ವರಪಾಲಿಪ ಸರ್ವರ ರಕ್ಷಿಪ ಸರ್ವಚರಾಚರಭಿನ್ನ ಪರಾಕು ಪ್ರತಿಪಾದ್ಯಪರಾರು ಸರ್ವಕಾಲದಲಿ ಸರ್ವದೇಶದೊಳು ಸರ್ವದೆಶೆಯೊಳು ಸಮನೆ ಪರಾಕು ಪರಾಕು 5 ನಿತ್ಯಾನಿತ್ಯಜಗಜ್ಜನಕ ಸರ್ವೋತ್ತಮ ಸತ್ಯಸಂಕಲ್ಪ ಪರಾಕು ನಿಖಿಳಪ್ರದಾಯಕ ಪರಾಕು ಭೃತ್ಯಾನುಗ್ರಹ ಕಾರಕಶೀಲ ಸದಾಪ್ತತಮ ವಿಶ್ವಾತ್ಮನೆಪರಾಕು ನಿತೈಶ್ಪರ್ಯ ಕೀತ್ರ್ಯಾತ್ಮಕ ಸರ್ವಾತತ ಬಲವಿಖ್ಯಾತಪರಾಕು ನೀತ ಜ್ಞಾನಾನಂದ ಪರಿಪೂರ್ಣನಿತ್ಯತೃಪ್ತ ಮಹಾಂತ ಪರಾಕು ಪರಾಕು 6 ಪರಾಕು ರೂಪಾತ್ಮ ಪರಾಕು ಪುರುಷ ಸೂಕ್ತ ಸುಗೇಯ ಪ್ರಖ್ಯಾತ ಮಹಾಮಹಿಮ ಪರಾಕು ನಾಮಕ ಪರಾಕು ಸುನಾಮ ಓಂಕಾರಾಧಿಪ ಪರಾಕು ವಿಭೂತಿ ಪರಾಕು 7 ಪ್ರೇಮ ಚೊಕ್ಕ ಸೃಷ್ಟಿಗೈವನಿತ್ಯಸುನೇಮ ಕರುಣಾಮಣಿ ಶ್ರೀಕಾಮ ಅಕ್ಕರೆಯಲಿ ಜಗಕಾವ ನಿಸ್ಸೀಮ ಮುಕ್ಕಣ್ಣ ವಿಧಿಸಿರಿ ಸಾರ್ವಭೌಮ ವಿನುತ ಗುಣಲಲಾಮ ಸುನಾಮ ಮೇಘಶ್ಯಾಮ 8 ಸುಂದರ ಬಂದ ಸೃಷ್ಠಿಸ್ಥಿತಿಲಯಗೈವ ಮು- ವೃಂದಕಳೆದು ನಿಜ- ಸುಧಾರ್ಣವ ಬೃಹತೀನಾಮಗ ಮಂದಸ್ಮಿತ ವದನವ ತೊರುವ ಈತನು ಸ್ಯಂದನವೇರಿಹ ಜಯಮುನಿಹೃದಯಗ ಮಧ್ವರಮಾವರ ಶ್ರೀಕೃಷ್ಣವಿಠಲನು ಭವ ಪರಿವಾರದ ಕೂಡಿಯೆ ಬಂದಾ 9
--------------
ಕೃಷ್ಣವಿಠಲದಾಸರು
ಬಂದ ಶ್ರೀಹರಿ ದಯದಿಂದ ಆನಂದದಿಂದ ಪ ಗಂದಿಯ ಪರಿಯಲಿ ಸಿಂಧುರ ವರದನು ಎಂದೆಂದಿಗು ನಿಜ ಬಂಧುವೆಂದೆನಿಪ ಪೂ ರ್ಣೆಂದುವದನ ಗೋವಿಂದ ಮುಕುಂದ ಅ.ಪ. ಭಕ್ತರ ಅವರಸಕೆ ಸಿದ್ಧ | ಭಕುತಿಗೆ ತಾ ಬದ್ಧ ಮತ್ತನ್ಯ ಸಾಧನಕೆ ಆಗಮಬಾಧ್ಯ | ಭಕ್ತರಿಗದು ವೇದ್ಯ ಭಕ್ತರ ಪೊರೆಯಲು ಅತ್ಯಾದರದಲಿ ಹತ್ತವತÁರವ ಎತ್ತಿದ ಶ್ರೀ ಪುರು ಷೋತ್ತಮ ಜಗದುತ್ಪತ್ತಿ ಸ್ಥಿತಿ ನಿಲಯ ಕರ್ತೃ ಕೃಪಾಕರ ಕರಿಗಿರೀಶನು 1
--------------
ವರಾವಾಣಿರಾಮರಾಯದಾಸರು
ಬಂದ-ಬಂದ _ ಇಂದಿರೇಶ ನಂದನಂದನಾ ನಿಖಿಳ ಜನಕ ಕಂಧರಾಶ್ರಯಾ ಪ ಬಂದ ಬಂದ ಭಜಕ ಬಂಧು ಮಂದರಾದ್ರಿಧರ ಅರ- ವಿಂದನಯನ ಸುಂದರಾಂಗ ಸಿಂಧುಶಯನ ನಳಿನನಾಭ ಅ.ಪ. ನೀಲಮೇಘ ಶ್ಯಾಮಸುಂದರಾತನಿಗೆ ಮೇಲುಸಮರು ಇಲ್ಲವೆನಿಸಿದ ಲೀಲೆಯಿಂದ ಜಗವ ಸೃಜಿಸಿ ಪಾಲಿಸುತ್ತ ಮತ್ತೆ ಅಳಿಸಿ ಆಲದೆಲೆಯಮೇಲೆ ಸಿರಿ ಲೋಲನಾಗಿ ಮೆರೆವ ಕೃಷ್ಣ 1 ಐದು ರೂಪದಿಂದ ಕ್ರೀಡಿಪಾ ಪ್ರಕೃತಿ ಬೋಧ್ಯ ಸಿರಿಗುನಾಥ ನಾಯಕಾ ಆದಿಮಧ್ಯ ಅಂತ್ಯ ಶೂನ್ಯ ಮೋದಪೂರ್ಣ ಜ್ಞಾನಕಾಯ ಮೋದ ಮುನಿಯ ಹೃದಯಸದನ ಗೋಧರಾತಪತ್ರ ಶ್ರೀಪ 2 ಆದಾನಾದಿ ಕರ್ತ ಬ್ರಹ್ಮನೂ ದಿವಿಜ ಸಾಧುಸಂಘ ಸೇವೆ ಗೊಂಬನೂ ವೇದವೇದ್ಯ ವೇದ ವಿನುತ ವೇದ ಭಾಗಗೈದು ಪೊರೆದ ಛೇದ ಭೇದರಹಿತ ಗಾತ್ರ ಸಾಧು ಪ್ರಾಪ್ಯ ಬಾದರಾಯಣ 3 ದಾಸಜನಕೆ ಮುಕ್ತಿನೀಡುವ ಮಹಿ- ದಾಸಕಪಿಲ ಪೂರ್ಣ ಕಾಮನೂ ದೋಷ ದೂರ ನಾಶರಹಿತ ವಾಸುದೇವ ಕ್ಲೇಶವಿದೂರ ಈಶವಿಧಿಗಳನ್ನು ಕುಣಿಪ ಕೇಶವಾದ್ಯನಂತ ರೂಪ4 ಮೊತ್ತಜಗಕೆ ಸತ್ತೆನೀಡುವಾ ನಿಖಿಳ ಸತ್ಯ ಜಗದ ಚೇಷ್ಟೆನಡೆಸುವಾ ಮೊತ್ತಶಬ್ದ ಘೋಷವರ್ಣ ಮತ್ತೆ ಪ್ರಣವ ಮಂತ್ರಗಣದಿ ನಿಖಿಳ ಯಜ್ಞ ಭೋಕ್ತನಾಥ ಅಂಗಭೂತ 5 ಜಿಷ್ಣುಸೂತ ಕೃಷ್ಣೆಕಾಯ್ದವಾ ಸ್ವರತ ವಿಷ್ಣು ಪುರುಷಸೂಕ್ತ ಸುಮೇಯಾ ವಿಶ್ವಕರ್ತ ವಿಶ್ವಭೋಕ್ತ ವಿಶ್ವರೂಪ ವಿಶ್ವಭಿನ್ನ ವಿಶ್ವವ್ಯಾಪ್ತ ಶಶ್ವದೇಕ ತೈಜಸ ಪ್ರಾಜ್ಞತುರ್ಯ 6 ಸತ್ಯಧರ್ಮಗಳನು ಕಾಯುವಾ ದುಷ್ಟ ದೈತ್ಯತತಿಯ ದಮನಗೈಯ್ಯುವಾ ಮತ್ಸ್ಯಕೂರ್ಮ ಕೋಲ ಚರಿತ ಭೃತ್ಯಭಾಗ್ಯ ನಾರಸಿಂಹ ಸತ್ಯಶೀಲ ಬಲಿಯವರದ ಕ್ಷಿತಿಪದಮನ ಕ್ಷಾತ್ರವೈರಿ ಪರಶುಧಾರಿ7 ವಿಶ್ವ ಬಿಂಬನು ರಾ ಜೀವಪೀಠನನ್ನು ಪಡೆದನೂ ರಾವಣಾರಿ ಕೃಷ್ಣ ಬುದ್ಧ ಭಾವಿಕಲ್ಕಿ ನಿತ್ಯಮಹಿಮ ಭಾವಜಾರಿ ಪ್ರೀಯ ಸಖನು 8 ಹಯಗ್ರೀವ ದತ್ತ ಋಷಭನೂ ಅಪ್ರ- ಮೇಯ ಹಂಸ ಶಿಂಶುಮಾರನು ಜಯಮುನೀಂದ್ರ ವಾಯುಹೃಸ್ಥ ಜಯೆಯ ರಮಣ ಕೃಷ್ಣವಿಠಲ ದಯದಿ ಪೊರೆಯಲೆಮ್ಮನೀಗ ಜಯವು ಎನುತ ನಲಿದು ನಲಿದು 9
--------------
ಕೃಷ್ಣವಿಠಲದಾಸರು
ಬಂದನಿದಕೋ ರಂಗ ಬಂದನಿದಕೋ ಸುಂದರಾಂಗನು ನಮ್ಮ ಮಂದಿರಕೆ ಈಗಾ ಪ. ಮುಗಳುನಗೆ ಮುಖದಲ್ಲಿ ಮುಂಗುರುಳು ನವಿಲುಗರಿ ಕಂಬು ಕಂಠಾ ಝಗ ಝಗಿಪ ಕುಂಡಲವು ಕಸ್ತೂರಿ ತಿಲಕ ಫಣಿ ನಗಧರನು ನಮ್ಮ ಮನಸೂರೆಗೊಂಬುದಕೇ 1 ಕರದಲಿ ಕಂಕಣವು ಬೆರಳಲ್ಲಿ ಉಂಗುರವು ಕೊರಳಲ್ಲಿ ನವರತÀ್ನ ಮುತ್ತಿನಹಾರಗಳೂ ಕಿರುಗೆಜ್ಜೆ ನಡುವಿನಲಿ ವಲಿವೋ ಪೀತಾಂಬರವು ವರ ವೇಣು ವಯ್ಯಾರದಿಂದ ಊದುತಲೀ 2 ಸುರರ ವಂಚನೆಗೈದು ವರ ಋಷಿಗಳನೆ ಜರಿದು ಸಿರಿಗಗೋಚರನೆನಿಸಿ ಪರಮ ಪುರುಷಾ ವರಧಾಮತ್ರಯಗಳನೂ ಮರದೆಮ್ಮ ಗೋಕುಲದಿ ಚರಿಯ ತೋರೀ 3 ಇಂದಿರೇಶನು ನಮ್ಮ ವೃಂದಾವನದೊಳಿಪ್ಪ ಮಂದಿಗಳ ಮನ ಸೆಳೆದು ಮಾರಜನಕಾ ಒಂದೊಂದು ರೂಪಿನಲಿ ಗೋಪಿಕಾ ಸ್ತ್ರೀಯರೊಳು ಬಂದು ಬೆರೆಯುವ ಮದನಕಲೆ ನಿಪುಣ ಚೆಲುವಾ 4 ಗೋವರ್ಧನೋದ್ಧಾರ ಗೋವಳರ ವಡಗೂಡಿ ಗೋಪಿ ಬಾಲಾ ಗೋವಿಂದ ಗೋಪಾಲಕೃಷ್ಣವಿಠಲ ನಮ್ಮ ಪೂರ್ವ ಪುಣ್ಯದ ಫಲದಿ ಭೂವನಿತೆ ಪಾಲಾ 5
--------------
ಅಂಬಾಬಾಯಿ
ಬಂದನು ಕೃಷ್ಣ ಗೋವಿಂದ ಮುಕುಂದ ಭವ ಬಂಧನ ಪರಿಹಾರ ಶೌರಿ ಪ ಸಾರಸಪತ್ರನೇತ್ರ ಅನಘ ಘನನೀರದÀ ನಿಭಗಾತ್ರ ಶಕಟಾಂತಕ ಧೀರ ಕರುಣಾ ಪಾತ್ರ ಮುರಹರ ಜಂಭಾರಿಸನ್ನುತ ಗೋತ್ರಾ ಧಾರಿ ಮುನಿಜನ ಮಂದಾರ ಗೋಪಾಲ ಘನ ಸಾರ ಶೋಭಿತ ಯದುವೀರ ನಾರಾಯಣ 1 ಪಂಡಿತ ಕುಸುಮಪಾಣೆ ಜನಕ ಶ್ರೀ ಅಂಡಜಗಮನ ಗಾನಲೋಲನೆ ತಂಡ ರಕ್ಷಕ ಪುರಾಣಪುರುಷ ಕೋ ದಂಡ ಪಾಣಿ ಧುರೀಣ ಕುಂಡಲಿಶಯನ ಭೂಮಂಡಲಾಧಿಪ ಬಲೋ- ದ್ದಂಡ ಪರಾಕ್ರಮ ಚಂಡಮಹಿಮ ರಾಮ 2 ವೇದವೇದ್ಯ ಸುನಾಮಾ ತ್ರಿಜಗನ್ನುತ ಯಾದವ ಸಾರ್ವಭೌಮ ಪರಮಾತ್ಮ ಆದಿತೇಯಾಬ್ಧಿ ಸೋಮ ರಮೇಶಾಂಬುಜೋದರ ಸುಗುಣಧಾಮ ಮಾಧವ ನರಮೃಗ ಪ್ರಹ್ಲಾದ ವರದ ಸನÀಕಾದಿ ವಂದಿತ ಚರಣ 3
--------------
ಹೆನ್ನೆರಂಗದಾಸರು
ಬದರೀ ಪ್ರಸನ್ನವಿಠಲ | ಮುದದಿ ಪೊರೆ ಇವನಾ ಪ ವಿಧಿ ಭವಾದೀ ವಂದ್ಯ | ಸಕಲ ಜಗತ್ರಾಣಅ.ಪ. ಬುದ್ಧಿಯಲಿ ನೀ ಸ | ದ್ಭುದ್ಧಿ ಪ್ರೇರಕನಾಗಿಮಧ್ವಮತ ದೀಕ್ಷೆಯಲಿ | ಬದ್ಧವೆನಿಸಿವನಾಹೆದ್ದಾರಿ ಮೀರದಲೆ | ಶುದ್ಧ ಸಾಧನಗೈಸಿಉದ್ಧಾರ ಮಾಡೋಹರಿ | ಬದರೀ ನಿವಾಸ 1 ಗುರುಹಿರಿಯನುಸರಿಪ | ವರಮತಿಯ ಕರುಣಿಸುತತರಳನನು ಕೈಪಿಡಿದು | ತೋರೋ ಸನ್ಮಾರ್ಗಅರಹುಲೇನಿಹುದಿನ್ನು | ಸರ್ವಜ್ಞ ನೀನನ್ನುದರ್ವಿ ಜೀವನ ಕಾವ | ಹವಣೆ ನಿನದಲ್ಲೇ 2 ಸತ್ಸಂಗ ಇವಗಿತ್ತು | ಕುತ್ಸಿತವ ಹೊರದೂಡಿವತ್ಸಾರಿ ಶ್ರೀಹರಿಯೆ | ವತ್ಸನ್ನ ಪೊರೆಯೇ |ಮತ್ಸಕೇತನ ಜನಕ | ಉತ್ಸವದಿ ಮೆರೆವಂಥಸತ್ಸ್ವಭಾವನೆ ದೇವ | ಭಿನ್ನವಿಪೆ ನಿನಗೆ 3 ಜ್ಞಾನ ಭಕ್ತಾದಿಗಳ | ನೀನಾಗಿ ಕೊಟ್ಟವಗೆಮಾನನಿಧಿ ಪೊರೆಇವನ | ಧೀನಜನಬಂದೊಕಾಣೆ ಮೂರ್ಲೋಕದೊಳು | ನಿನ್ನಂಥ ಕರುಣಿಗಳಶ್ರೀನಿವಾಸನೆ ತೋರೋ | ಹೃದ್ಗುಹದಿ ಇವಗೇ 4 ಸುಪ್ತೀಶ ನೀನಾಗಿ | ಗೊತ್ತು ಮಾಡ್ಡಂಕಿತವಇತ್ತಿಹೆನೊ ತರಳನಿಗೆ | ವ್ಯಾಪ್ತ ಮೂರುತಿಯೇಇತ್ತು ಮನದಿಪ್ಟವನಾ | ಎತ್ತು ಭವದಿಂದೆಂದುಗೋಪ್ತ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಬದರೀನಾಥ ವಿಠಲ | ಪೊರೆಯ ಬೇಕಿವನಾ ಪ ಸದಯ ಹೃದಯನೆ ಇವಗೆ | ಮುದವನ್ನೆ ಬೀರತಲಿಹದುಳದಲಿ ಕೈಪಿಡಿದು | ಕಾಪಾಡೊ ಹರಿಯೇ ಅ.ಪ. ಮೇಶ ಮಧ್ವೇಶ ಮಹಿ | ದಾಸ ನಿನ್ನಡಿ ದಾಸ್ಯಆಸಿಸುವ ಬಾಲಕನ | ಆಶೆಯನು ಸಲಿಸೀ |ಕ್ಲೇಶಗಳ ಪರಿಹರಿಸಿ | ನೀ ಸಲಹೆ ಭಿನ್ನವಿಪೆಹೇಸದಾಗತಿ ವಂದ್ಯ | ವಾಸವಾನುಜನೇ 1 ಲೌಕಿಕದ ಸಂಪತ್ತು | ಬೇಕಾದ ವರವಿತ್ತುಕಾಕು ಸಂಗವ ಕೊಡದೆ | ನೀಕಾಯ ಬೇಕೋ ||ತೋಕನಿಗೆ ನಿನ್ನಲ್ಲಿ | ಭಕುತಿ ಜ್ಞಾನಗಳಿತ್ತುಲೌಕಿಕವನೆಲ್ಲ ವೈ | ದೀಕ ವೆಂದೆನಿಸೋ 2 ಮೋದ ಕೊಡು ಸತತಾ 3 ಸ್ವಾಪದಲಿ ಮತ್ಸ್ಯಾದಿ | ರೂಪಗಳ ಸ್ತೋತ್ರವೆನೆವ್ಯಾಪಾರ ಮಾಡಿಸುತ | ಕೃಪೆ ತೋರ್ದೆ ಹರಿಯೇವೈಪರೀತ್ಸದ ಮನದ ಚಾಪಲ್ಯ ಕಳೆಯಲ್ಕೆಸ್ವಾಪದಲಿ ಸೂಚಿಸುತ | ನೀಪೇಳ್ದೆ ಧೃಡವಾ 4 ಪತಿ ವಿನುತ | ನಾರಾಯಣಾಖ್ಯ ಹರಿಘೋರಭವ ಕೂಪಾರ | ಪಾರಗಾಣಿಸುವಾಭಾರ ನಿನ್ನದು ಎಂದು | ಪೋರನ್ನ ಒಪ್ಪಿಸಿಹೆಧೀರ ಗುರು ಗೋವಿಂದ | ವಿಠಲ ಪೊರೆ ಇವನಾ 5
--------------
ಗುರುಗೋವಿಂದವಿಠಲರು
ಬಂದರು ನಾರದರ್ಹರುಷದಲಿ ನಿಂದು ಯಜ್ಞ ನೋಡುತ ಮುದದಿ ಇಂದು ಯಾರಿಗರ್ಪಣೆ ಮಾಡುವಿರೆನೆ ಬಂದಿತು ಸಂಶಯ ಋಷಿಗಳಿಗೆ ಮಂಗಳಂ ಜಯ ಮಂಗಳಂ ಪ ತ್ವರದಿಭೃಗು ಮುನಿಗಳು ಹೊರಡುತಲಿ ಹರಬ್ರಹ್ಮರು ಸರಿಯಲ್ಲೆನುತ ಹರಿವೈಕುಂಠದಿ ಮಲಗಿರೆ ನೋಡುತ ಭರದಿಂದೊದೆಯೆ ವಕ್ಷಸ್ಥಳಕೆ ಮಂಗಳಂ ಜಯ ಮಂಗಳಂ 1 ನೊಂದಿತು ಪಾದವೆಂದುಪಚರಿಸೆ ಇಂದಿರಾದೇವಿ ಕೋಪಿಸಿ ತೆರಳೆ ಬಂದು ಋಷಿಗಳಿಗರುಹಿದರು ಶ್ರೀಗೋ- ವಿಂದಗೆ ಸಮರಿಲ್ಲೆಂದೆನುತಾ ಮಂಗಳಂ ಜಯ ಮಂಗಳಂ 2 ಮಡದಿ ಇಲ್ಲದೆ ಬೇಸರ ಪಡುತಾ ಪೊಡವಿಗಿಳಿದು ಹುತ್ತದೊಳಗಿರಲು ಕೊಡಲಿಯ ಗಾಯಕೌಷಧ ಹುಡುಕುತ ಹರಿ ಅಡವಿಗಳಲಿ ಸಂಚರಿಸಿದಗೆ ಮಂಗಳಂ ಜಯ ಮಂಗಳಂ3 ಭೂಮಿಗೊಡೆಯ ವರಹನನು ನೋಡಿ ಕಾಮಿನಿ ಬಕುಳೆ ಸೇವೆಗೆ ಮಾಡಿ ಕಾಮಜನಕ ಬೇಟೆಗೆ ಹೊರಟನು ಬಹು ಪ್ರೇಮದಿಂದಲಂಕರಿಸಿದ ಹರಿಗೆ ಮಂಗಳಂ ಜಯ ಮಂಗಳಂ4 ವನವನ ಚರಿಸಿ ಸ್ತ್ರೀಯರ ನೋಡಿ ವನಜಾಕ್ಷೇರು ನಡುಗುತ ಭಯದಿ ಘನಮಹಿಮಗೆ ಕಲ್ಲು ಕಲ್ಲೆಸೆಯೆ ಹಯ ವನದಿ ಮೃತಿಸೆ ಗಿರಿ ಏರಿದಗೆÉ ಮಂಗಳಂ ಜಯ ಮಂಗಳಂ 5 ಕಾಮಿನಿ ಬಕುಳೆಗೆಲ್ಲವ ಪೇಳಿ ಕೋಮಲೆ ಕೊರವಿ ರೂಪವ ತಾಳಿ ವ್ಯೋಮರಾಜನ ಪುರದಲಿ ಧರಣಿಗೆ ಸಾಮುದ್ರಿಕೆ ಪೇಳಿದ ಹರಿಗೆ ಮಂಗಳಂ ಜಯ ಮಂಗಳಂ 6 ವಶಿಷ್ಟ ಕಶ್ಯಪರು ಶುಕರುಗಳು ವಿಶಿಷ್ಟ ಬಂಧುಗಳ ಕರೆಸುತಲಿ ಪಟ್ಟದರಸಿ ಲಕುಮಿಯು ಬರೆಹರುಷದಲಿ ಕಟ್ಟಿ ಮಾಂಗಲ್ಯ ಹರಿ ಪದ್ಮಿನಿಗೆ ಮಂಗಳಂ ಜಯ ಮಂಗಳಂ 7 ಜಯ ಜಯ ವೆಂಕಟ ಪದ್ಮಿನಿಗೆ ಜಯ ಜಯ ಪದ್ಮಾವತಿಪ್ರಿಯಗೆ ಜಯ ಜಯ ಕಮಲನಾಭ ವಿಠ್ಠಲಗೆ ಜಯ ಜಯ ಶ್ರೀ ಶ್ರೀನಿವಾಸನಿಗೆಮಂಗಳಂ ಜಯ ಮಂಗಳಂ 8
--------------
ನಿಡಗುರುಕಿ ಜೀವೂಬಾಯಿ
ಬಂದರು ಹರಿದಾಸರು ಅಲ್ಲಿ | ಗೋವಿಂದನಾಮವ ನೆನೆಯುತಲಿ ಪ ಬರುತಿಹರೂ ಹರುಷಿಪರೂ ತಿರುಪತಿಯಾತ್ರೆಗೆ ಹೋಗುವರು 1 ತಾಳದಲೀ ಮೇಳದಲೀ ಶ್ರೀ ಲೊಲಾಯೆನ್ನುತ ಕುಣಿಯುತಲಿ 2 ನೇಮದಲೀ ಪ್ರೇಮದಲೀ ಗುರು ರಾಮವಿಠಲ ಸಲಹೆನ್ನುತಲಿ 3
--------------
ಗುರುರಾಮವಿಠಲ
ಬಂದಳು ನೋಡೆ ಇಂದಿರ ದೇವಿ ಪ. ಬಂದಳು ನೋಡೆ ಗೋವಿಂದನ ಸತಿಯು ಸುಂದರ ಪಾದದಿಂದ ಒಂದೊಂದು ಹೆಜ್ಜೆಯನಿಡುತಾ ಅ.ಪ. ಉಲ್ಲಾಸದಿಂದಲೀ ಚೆಲ್ವೆ ಬಂದಳೀಗ 1 ವಜ್ರದಂತೆ ಕಾಂತಿ ಪ್ರಜ್ವಲಿಸುತ್ತಲೀ ಗೆಜ್ಜೆಪಾದದಿಂದ್ಹೆಜ್ಜೆಯನಿಡುತಲೀಗ2 ಮಾರನಮಾತೆಯು ಮುಂಗುರುಳನೇ ತಿದ್ದಿ ಮುಡಿಯ ಮೇಲಿನ ಮಲ್ಲಿಗೆ ಉದುರುತ್ತ 3 ಕಡಗ ಕಂಕಣವು ಬೆಡಗಿನಿಂದಾಲಿಟ್ಟು ನಡಮುಡಿಮೇಲೆ ಅಡಿಯನಿಡುತಲೀಗ 4 ಕುಕ್ಷಿಯೊಳೀರೇಳು ಜಗವಪೊತ್ತುವನಾ ವಕ್ಷಸ್ಥಳದ ಲಕ್ಷ್ಮಿ ಬಂದಾಳೀಗ 5 ಹರಿಯ ಮಂದಿರಕ್ಕೆ ಸರಸದಿಂದಲೀಗ ಓರೆನೋಟದಿಂದ ಮುಗುಳು ನಗೆಯ ನಗುತ 6 ಚಂದದಿಂದಲೀಗ ಬಂದು ಕುಳಿತುಕೊಂಡು ಮಂದ ಭಾಗ್ಯಳಿಗಾನಂದವ ಕೊಡುವಳು 7 ಇಂದಿರೆ ದೇವನ್ನ ಬಂಧನವಾ ಬಿಡಿಸಿ ತಂದೆಗೋವಿಂದನ್ನ ಕಂಡು ತೋರೆ ತಾಯಿ 8 ರಮಾವಲ್ಲಭವಿಠಲನ ಸ್ಮರಣೆಯು ನಿರುತ ಮಾಡುವಂಥ ವರವ ಕೊಡು ತಾಯೆ 9
--------------
ಸರಸಾಬಾಯಿ