ಒಟ್ಟು 2235 ಕಡೆಗಳಲ್ಲಿ , 97 ದಾಸರು , 1352 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆ ಪುಟ್ಟಿಸಿದ್ಯೊ ಭೂಲೋಕದೊಳು ಎನ್ನಂಥ ಪಾಪಿಷ್ಠರ ಕಾಣೆನೋ ಕೃಷ್ಣಾ ಪ ಪಾತಗಳ ತರಿದು ಕೃಷ್ಣಾ ಅ.ಪ. ಬೆಳಸಿದದಕೆ ಕೃಷ್ಣಾ ಕಲಿಸಿದಕೆÉ ಕೃಷ್ಣಾ ಧನ ತರುವ ಕಾಲದಲಿ ವನಿತೆ ಸುತರಿಗೆ ಮೆಚ್ಚಿ ಜನನಿ ಜನಕರ ಬಿಟ್ಟೆನೋ ಕೃಷ್ಣಾ 1 ಮಾಡಿದ ಕೃಷ್ಣಾ ಬಾಳಿದೆ ಕೃಷ್ಣಾ ಬುದ್ಧಿ ಹೋಯಿತು ಎನಗೆ ಕದ್ದುಂಡು ಕಾಯವನು ಉದ್ದಾಗಿ ಬೆಳೆಸಿ ಮೆರೆದೆ ಕೃಷ್ಣಾ 2 ಕಡೆಯಾದೆನೋ ಕೃಷ್ಣಾ ಮಾಡಿದೆ ಕೃಷ್ಣಾ ಗಣನೆ ಇಲ್ಲದೆ ಪರರ ಹಣವನ್ನು ಅಪಹರಿಸಿ ಬಣಗ ಲೆಕ್ಕಸನಾದೆನೋ ಕೃಷ್ಣಾ 3 ಮಾಡಿಸಿದೆನೋ ಕೃಷ್ಣಾ ಸೃಷ್ಟೀಶನವತರಿಸಿದುತ್ಕøಷ್ಟ ದಿವಸಲಿ ಬಿಟ್ಟಿಬೇಸರ ಮಾಡಿದೆ ಕೃಷ್ಣಾ ಇಷ್ಟು ದಿನಗಳು ದುಷ್ಟಕೃತಿಯಲಿ ಮನಸ್ಹಾಕಿ ಪುಟ್ಟಿಸಿದ ನಿನ್ನ ಮರೆತೆ ಕೃಷ್ಣಾ 4 ನೀ ಪಾಲಿಸುವುದು ಕೃಷ್ಣಾ ತೋರಿಸುವುದು ಕೃಷ್ಣಾ ಬಂಧು ಬಳಗವು ನೀನೆ ಮುಂದಿನಾ ಗತಿ ನೀನೆ ತಂದೆ ಹನುಮೇಶವಿಠಲರಾ ಕೃಷ್ಣಾ 5
--------------
ಹನುಮೇಶವಿಠಲ
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ. ಯಾಕೆ ಪಂಥ ಲೋಕೈಕನಾಥ ದಿ- ವಾಕರಕೋಟಿಪ್ರಭಾಕರ ತೇಜನೇ ಅ.ಪ. ಪೂರ್ವಾರ್ಜಿತ ಕರ್ಮದಿಂದಲಿ ಇರ್ವೆನು ನರಜನ್ಮ ಧರಿಸುತ ಗರ್ವದಿಂದ ಗಜರಾಜನಂತೆ ಮತಿ ಮರ್ವೆಯಾಯ್ತು ನಿನ್ನೋರ್ವನ ನಂಬದೆ ಗರ್ವಮದೋನ್ಮತ್ತದಿ ನಡೆದೆನು ಉರ್ವಿಯೊಳೀ ತೆರದಿ ಇದ್ದೆನಾದರೂ ಸರ್ವಥಾ ಈಗ ನಿಗರ್ವಿಯಾದೆಯಹ ಪರ್ವತವಾಸ ಸುಪರ್ವಾಣ ವಂದಿತ 1 ಯಾರಿಗಳವಲ್ಲ ಮಾಯಾ ಕಾರ ಮಮತೆ ಸಲ್ಲ ಸಂತತ ಸಾರಸಾಕ್ಷ ಸಂಸಾರಾರ್ಣವದಿಂದ ಪಾರಗೈದು ಕರುಣಾರಸ ಸುರಿವುದು ನತ ಮಮ ಕಾರ ಹೋಯ್ತೆ ಕಡೆಗೆ ಏನಿದು ಭಾರಿ ಭಾರಿ ಶ್ರುತಿ ಸಾರುವುದೈ ದಯ ವಾರಿಧಿ ನೀನಿರಲ್ಯಾರಿಗುಸುರುವುದು 2 ಬಾಲತ್ವದ ಬಲೆಗೆ ದ್ರವ್ಯದ ಶೀಲವಿತ್ತೆ ಎನಗೆ ಆದರೂ ಪಾಲಿಸುವರೆ ನಿನಗಾಲಸ್ಯವೆ ಕರು- ಸಾಲದೆರಡು ಮೂರು ನಿನ್ನಯ ಮೂಲ ಸಹಿತ ತೋರು ಮುನಿಕುಲ ಪಾಲ ಶ್ರೀಲಕ್ಷ್ಮೀನಾರಾಯಣ ಗುಣ ಶೀಲ ಕಾರ್ಕಳ ನಗರಾಲಯವಾಸನೇ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಚಿಸುವೆನು ನಿನ್ನನಿದಕೆ ಕರುಣಸಾಗರ ಗಮನ ಜಗತ್ಪಾಲ ಪ್ರಭುವರ ಪ ದೈನ್ಯರಾಹಿತ್ಯ ರಹಿತ ಜಾಡ್ಯರಹಿತವು ಪಾದ ಕಮಲರತಿ ಸದಾವಕಾಲವು 1 ಪ್ರಭುವೆ ನಿನ್ನ ಭೃತ್ಯನಾನಾದಿಕಾಲದಿ ಅಭಯವಿತ್ತು ಪಾಲಿಸೆನ್ನ ಹೇ ದಯಾನಿಧೆ 2 ತುಷ್ಟನಾದರೇನುರುಷ್ಟನಾರೇನೊಲೊ ಇಷ್ಟದೈವ ನಿನ್ನ ಹೊರತು ಗತಿಯ ಇಲ್ಲೆಲೊ 3 ತುಷ್ಟನಾದ ಬಳಿಕ ನೀನೆ ಹೇ ಕೃಪಾಕರ ಬಿಟ್ಟುನಿನ್ನ ಭಜೀಸಲ್ಯಾಕೆ ಯಿತರಕಾಯ್ವರ 4 ನೀನೆ ರೋಷವನ್ನು ತಾಳೆ ಸುಜನಬಂಧುವೆ ದೀನನನ್ನು ಕಾಯ್ವರಾರು ನೀನೆಯಲ್ಲವೆ 5 ದೋಷ ಕ್ಷಮಿಸುವಲ್ಲಿ ನಿನ್ನ ಪೋಲ್ವ ಅರಸರು ದೇಶಸರ್ವಗಳಲಿ ಪುಡುಕಲಲ್ಲೆ ದೊರಕರು 6 ಎನ್ನಸರಿ ಕೃತಘ್ನ ವಂಚನೀಯ ಮಾಳ್ಪನ ವನ್ನಜಾಭವಾಂಡದೋಳಾವಲ್ಲಿ ಕಾಣೆನಾ 7 ದೀನ ದಾಸ ನಿನಗೆ ನಾನು ಹೇ ಜಗತ್ಪತೆ ಮಾಣದೆಲ್ಲಿರಲ್ಲಿ ತೋರಿ ಪ್ರೇಮ ಸಾಮ್ಯತೆ 8 ಎನ್ನ ವಿಷಯ ಭಯವು ನಿನಗೆ ಲಕ್ಷವಾವುದು ಮನ್ನಿಸೆನ್ನ ಪೊರೆವ ಸರ್ವಭಾರ ನಿನ್ನದು 9 ಈಶಪೂರ್ಣಕಾಯ ನಿನಗಸಾಧ್ಯವಾವುದು ಆಶೆಯನ್ನದಾವಘನವು ನಿನಗೆ ತೋರ್ಪುದು 10 ದಾಸನಾಶೆಪೂರ್ತಿಸಲ್ಕಾಲಸ್ಯವುಚಿತವೋ? ಅಶಿಶಿಸುವನು ದಾಶಗೈವುದೇನು ನೀತವೋ? 11 ಲೋಕನಾಥ ಕರುಣ ಪೂರ್ಣನೇ ಪರಾತ್ಪರ ಯಾಕೆ ಯೊನ್ನೊಳಿನಿತು ನೀನು ನಿರ್ದಯಾಪರ 12 ಗರವತಾಯಿತನನುಜಗೀಯೆ ಅವುದೋಗತಿ ತರುಳನಲ್ಲಿ ಕರುಣಿಸುವದು ಕೃಷ್ಣ ಮೂರುತಿ 13 ದಾತ ಜ್ಞಾತನು ನಿನ್ನ ವಿನಹಾಭಿಷ್ಟಫಲದ ಕರ್ತೃ ಆವನು 14 ಲಕ್ಷ್ಮಿಪತಿಯ ಪೋಲ್ಪೋದಾರ ಸುಗುಣ ಶೀಲನ ಈಕ್ಷಿಸಲ್ಕೆ ಜಗದೊಳಾರನೆಲ್ಲಿ ಕಾಣೆನಾ 15 ನಿನ್ನ ಔದಾರ್ಯ ಸರ್ವರಲ್ಲಿ ಸಾಮ್ಯವು ಎನ್ನೊಳಿನಿತ್ತು ನಿನ್ನದ್ಯಾಕೆ ಕಾರ್ಪಣ್ಯವು 16 ಆರ್ತಬಂಧುವೆಂದು ನಿನಗೆ ಶರಣುಬಂದೆನು ಸಾರ್ಥಕವನು ಮಾಡುವಿಯೊ ಜರಿದೆ ಬಿರುದನು 17 ದೀನ ಬಂಧು ಕರುಣಸಿಂಧು ಸುಹೃದ್ಬಾಂಧವ ಹೀನ ಭವಾರ್ಣವದಿ ಮಗ್ನನಿರುವೆ ಭೂಧವ 18 ತಾರಿಸೈ ಭವಾಬ್ದಿಯಿಂದ ಇಂದಿರಾವರ ಸೂರಿಜನರ ಸಂಗವೆನ್ನಗೀಯೋಗಿರಿಧರ19 ಶ್ರೀನೃಸಿಂಹ ಸತತ ನೀನು ಸದಯ ಮೂರುತಿ ದೀನ ನನ್ನೊಳ್ಯಾಕೆ ನಿರ್ದಯವ ತೋರುತಿ 20 ಸಾಧುಗಳು ನಿರ್ಗುಣಿಗಳಲ್ಲಿ ದಯವÀ ಮಾಳ್ಪರು ಸಾದರದಲಿ ಸರ್ವರಲ್ಲಿ ಸದಯರಿಪ್ಪರು 21 ಧನ್ಯಜನಕೆ ನಿನ್ನನೀವುದೇನು ಅಚ್ಚರ ದ್ಯೆನ್ಯ ಬಡುವನನ್ನು ಪಾಲಿಸುವದು ಪರತರ 22 ಚಂದ್ರಚಾಂಡಾಲಗೃಹದ ಮೇಲೆಯಾದರು ಸುರತರು 23 ಈತೆರ ಶ್ರೀ ಪತಿಯೆ ಎನಗೆ ಪ್ರೀತನಾಗೆಲೋ ನೀತವಾಗಿ ಕರುಣದಿಂದ ಕರವಪಿಡಿಯಲೊ 24 ಪುನಃ ಪುನಃ ನಿನ್ನನಿದನೆ ಬೇಡಿಕೊಂಬೆನಾ ಮನದೊಳು ಪ್ರಸನ್ನನಾಗು ಜನಕಜಾರಮಣ25 ಪಂಚರಾತ್ರಾಗಮೋಕ್ತ ಈಸ್ತುತಿಯನು ವಿನುತ ಶ್ರೀ ರಾಮಚಂದ್ರನು 26 ಮುದದಿ ಮನಸಿನೊಳಗೆ ತಾನೆವದಗಿ ಪೇಳಿದ ಅದನೆ ಶ್ರೀವರದೇಶ ವಿಠಲ ನುಡಿಸಿ ಬರೆಸಿದ 27
--------------
ವರದೇಶವಿಠಲ
ಯಾತಕಯ್ಯ ತೀರ್ಥಕ್ಷೇತ್ರಗಳುಶ್ರೀ ತುಲಸಿಯ ಸೇವಿಪ ಸುಜನರಿಗೆ ಪ. ಅಮೃತವ ಕೊಡುವ ಹರುಷದೊಳಿರ್ದಕಮಲೆಯರಸನಕ್ಷಿಗಳಿಂದಪ್ರಮೋದಾಶ್ರು ಸುರಿಯೆ ಕ್ಷೀರಾಬ್ಧ್ದಿಯೊಳುಆ ಮಹಾತುಲಸಿ ಅಂದುದಿಸಿದಳು 1 ಪರಿಮಳಿಸುವ ಮಾಲೆಯ ನೆವದಿ ಹರಿಯುದರದಲ್ಲಿಸಿರಿಯೊಲಿಹಳುತÀರುಣಿ ತುಲಸಿ ತಪ್ಪದೆಯವನಚರಣವ ರಮೆ ಭಜಿಸೆ ಭಜಿಪಳು2 ಪೂಜಿಸುವರ ಶಿರದಿ ನಿರ್ಮಾಲ್ಯಗಳವ್ಯಾಜದಿಂದ ಲಕ್ಷ್ಮಿಯ ಕೂಡೆ ಬಹಳುಈ ಜಗದೊಳು ತಾವಿಬ್ಬರಿದ್ದಲ್ಲಿಆ ಜನಾರ್ದನನಾಕ್ಷಣ ತಹಳು 3 ಒಂದು ಪ್ರದಕ್ಷಿಣವನು ಮಾಡಿದವರಹೊಂದಿಪ್ಪುದು ಭೂಪ್ರದಕ್ಷಿಣ ಪುಣ್ಯಎಂದೆಂದಿವಳ ಸೇವಿಸುವ ನರರಿಗೆಇಂದಿರೆಯರಸ ಕೈವಲ್ಯವೀವ 4 ತುಲಸಿಯ ನೆಟ್ಟವನು ಮತ್ತೆ ತನಗೆ ಇಳೆಯೊಳು ಪುಟ್ಟುವ ವಾರ್ತೆಯ ಕಳೆವಜಲವೆÀರೆದು ಬೆಳೆಸಿದ ಮನುಜರಕುಲದವರ ಬೆಳೆಸು ವೈಕುಂಠದಲ್ಲಿ 5 ತುಲಸಿಯೆ ನಿನ್ನ ಪೋಲುವರಾರುಮೂಲದಲ್ಲಿ ಸರ್ವತೀರ್ಥಂಗಳಿಹವುದಳದಲ್ಲಿ ದೇವರ್ಕಳ ಸನ್ನಿಧಾನಚೆಲುವಾಗ್ರದಿ ಸಕಲ ವೇದಗಳು 6 ತುಲಸಿ ಮಂಜರಿಯೆ ಬೇಕಚ್ಚುತಂಗೆದಳಮಾತ್ರ ದೊರಕಲು ಸಾಕವಗೆಸಲುವುದು ಕಾಷ್ಠಮೂಲ ಮೃತ್ತಿಕೆಯುಫಲವೀವನಿವಳ ಪೆಸರ್ಗೊಳಲು 7 ಕೊರಳಲ್ಲಿ ಸರ ಜಪಸರಗಳನ್ನುವರ ತುಲಸಿಯ ಮಣಿಯಿಂದ ಮಾಡಿಗುರುಮಂತ್ರವ ಜಪಿಸುವ ನರರುಹರಿಶರಣರ ನೆಲೆಗೆ ಸಾರುವರು8 ಎಲ್ಲಿ ತುಲಸಿಯ ಬನದಲ್ಲಿ ಲಕ್ಷುಮೀ-ವಲ್ಲಭನು ಸರ್ವಸನ್ನಿಹಿತನಾಗಿನೆಲಸಿಹನಿವಳೆಸಳೊಂದಿಲ್ಲದಿರೆಸಲ್ಲದವಂಗನ್ಯಕುಸುಮದ ಪೂಜೆ 9 ಎಲ್ಲ ಪಾಪಂಗಳೊಮ್ಮೊಮ್ಮೆ ಕೈಮುಗಿಯೆಎಲ್ಲಿ ಪೋಪುದು ದೇಶದೇಶಂಗಳಿಗೆನೆಲ್ಲಿ ಮಲ್ಲಿಗೆ ಮೊದಲಾದ ಸೈನ್ಯಅಲ್ಲೀಗಲು ನಮ್ಮ ಬನದಲೊಪ್ಪಿಹಳು 10 ಹರಿಪಾದಕೆ ಶ್ರೀತುಲಸಿಯೇರಿಸಿದನರರನು ಪರಮ ಪದಕೇರಿಸುವುದುನಿರುತದಿ ತುಲಸಿಯ ಕಂಡರವಗೆನರಕಗಳ ದರುಶನ ಮತ್ತಿಲ್ಲ 11 ಪಡಿ ಆಯಿತು ಗಡನ್ನಿವಳ ವೃಂದಾವನದಲ್ಲಿ ನೆಟ್ಟುಮನೆಮನೆ ಮನ್ನಿಸದವನ್ಯಾವ12 ಕನಸಿನಲಿ ಕಂಡಂತೆ ಇನ್ನೊಂದುಕೊನೆವೆರಸಿದ ಪುಷ್ಪದಿ ಜಪಿಸಿಅನುದಿನ ಹಯವದನನ್ನ ತೀರ್ಥವನು ಕೊಂಡು ನಾ ಧನ್ಯನಾದೆನು 13
--------------
ವಾದಿರಾಜ
ಯಾರ ಕೃತಕವು ಇದು ವಿಚಾರವನು ಮಾಡಿ ಕಾರಣೀಕದ ಸ್ವಪ್ನ ಕಾಣುತಿದೆ ನೋಡಿ ಪ ಕಾಳ ಮೇಘಧ್ವನಿಯು ಗಾಳಿ ಮಳೆ ಮಿಂಚುಗಳು ಧಾಳಿ ಇಡುತಿಹ ಸಿಡಿಲು ಬಹಳ ಕತ್ತಲೆಯು ಹಾಳೂರ ಮಧ್ಯದೊಳು ಬೀಳುತಿಹ ವಾರಿಗಳು ಮೃಗ ಮೈಮೇಲೆ ಬೀಳುವುದ 1 ವೃಷ್ಟಿ ತೀರುವ ತನಕ ಇಟ್ಟೆಡೆಯೊಳಿರುತಿರ್ದು ಕೆಟ್ಟ ಪಥದಲಿ ಚಾರುಗಟ್ಟಿವಿಳಿದು ಗಟ್ಟಿಯಾಗಿಹ ಚಳಿಯು ಹುಟ್ಟಿ ಕೈಕಾಲುಗಳು ಒಟ್ಟಾಗಿ ಕೂಡಿರ್ದು ದೃಷ್ಟಿ ಬಿಡುತಿಹುದು 2 ಬಿಸಿನೀರ ಮಳೆಯೊಳಗೆ ನುಸಿತ ಗುಣೆಯಸೆಯೊಳಗೆ ಎಸೆದು ತೋರುವ ಉರಿಯ ಹಸಿಯ ಮೆಣಸಿನೊಳು ಗಸಣಿಯನು ಕೈಕೊಂಡು ಕಸಮುಸುರೆಯಾಗಿರ್ದು ಉಸುರಲಾರದೆ ತೃಷೆಯ ಹಸಿದ ಬಳಲಿಕೆಯ 3 ನಿಂದೆಯಾಗಿಹ ಮೃಗದ ಚಂದವನು ಮೈಗೊಟ್ಟು ಬಂದುದೆನಗೈಶ್ವರ್ಯ ಎಂದು ಹರುಷಿಸುತ ಮಂದಹಾಸದ ಒಳಗೆ ಬಂಧನದಲಿರುತಿರ್ದು ಮುಂದುವರಿದು ವ್ಯಸನದೊಳು ಬಂದಿರ್ದ ಬಗೆಯ 4 ಮೂರು ಮಂದಿಯು ಬಂದು ಸೇರಿದರು ದೂರಿಡುವ ಆರು ಕರೆದರು ತಾನು ಬಾರೆನೆಂಬ ಮೇರೆಯಾಗಿಯೆ ಬಪ್ಪ ಮೂರಾರು ತಾ ಬಿಡುವ ಸಾರಿ ಚೋರತ್ವದಲ್ಲಿ ಪರವೂರ ಸುಲಿವ 5 ಮೇಲು ದುರ್ಗವ ಕಂಡು ಗಾಳಿಗೋಪುರವನ್ನು ಆಳ ಬಲುಹುಳ್ಳವನು ಅವಸರದೊಳು ನೂಲಯೇಣಿಯನಿರಿಸಿ ಏರಿಳಿದು ಬಾಹಾಗ ಕಾಲು ಜಾರಿಯೆ ಬಸಿದ ಶೂಲದೊಳು ಬೀಳುವುದು 6 ಹೀಗಿರುವ ಕೃತ್ಯಗಳು ನಾಗಶಯನನಿಗರುಹು ಬೇಗದೊಳು ಪರಿಹರಿಪ ಯೋಗವನು ಕೊಡುವ ನಾಗಗಿರಿವಾಸನಹ ವರಾಹತಿಮ್ಮಪ್ಪ ತೂಗುವನು ತೊಟ್ಟಿಲೊಳು ಆಗುವುದನಿತ್ತು 7
--------------
ವರಹತಿಮ್ಮಪ್ಪ
ಯಾರಿಗೆ ದೂರುವೆನು ಗಿರಿಯ ರಾಯ ಯಾರೆನ್ನ ಸಲಹುವರು ಪ ಸಾರಿದ ಭಕ್ತ ಸಂಸಾರಿ ನಿನ್ನಯ ಪಾದ ವಾರಿಜವನು ತೋರಿ ಕಾರುಣ್ಯವೆನಗೀಯೊ ಅ.ಪ ಕಷ್ಟ ಜನ್ಮದಿ ಬಂದೆನು ಧಾರುಣಿಯೊಳು ದುಷ್ಟರಿಂದಲೆ ನೊಂದೆನು ನಿಷ್ಟುರ ಬೇಡವೊ ನಿನ್ನ ನಂಬಿದ ಮೇಲೆ ಸೃಷ್ಟಿಪಾಲಕ ಎನ್ನ ಬಿಟ್ಟು ಕಳೆಯಬೇಡ 1 ಹಿಂದೆ ಮಾಡಿದ ಕರ್ಮವು ಈ ಭವದೊಳು ಮುಂದಾಗಿ ತೋರುತಿದೆ ಇಂದಿಲ್ಲ ಗತಿಯದರಿಂದ ನೊಂದೆನು ನಾನು ಮಂದರಧರ ಗೋವಿಂದ ನೀನಲ್ಲದೆ 2 ಹಗಲುಗತ್ತಲೆ ಸುತ್ತಿಯೆ ಕಂಗೆಡಿಸುತ್ತ ಹಗೆಯೊಳು ನಗಿಸುತಿದೆ ಉಗುರಿನಸಿಗಿಗೆ ಮಚ್ಚುಗಳೀಗ ನಾಟ್ಯವು ಸೊಗಸು ಹಾರಿಸಿ ಎದೆ ದಿಗಿಲುಗೊಳಿಸುತಿದೆ 3 ಬಾಡಿದ ಅರಳಿಯನು ಕಲ್ಲೀನ ಮೇಲೆ ಈಡಾಗಿ ನಟ್ಟಿದರೆ ಬೇಡಿಕೊಂಡರೆ ತಳಿರ್ಮೂಡಿ ಬರುವುದುಂಟೆ ರೂಢಿಗೊಡೆಯ ನೀನು ನೋಡದಿದ್ದರೆ ಮೇಲೆ 4 ಹಲವು ಪರಿಯ ಕಷ್ಟವ ನಿನ್ನಯ ಪದ ಜಲಜದ ಕರುಣದಲಿ ಸುಲಿಗೆಗೊಟ್ಟೆನು ನಾನು ಸೂರೆಗಾರರಿಗೆಲ್ಲ ಒಲವಾಗೆನ್ನೊಳು (ವರಾಹತಿಮ್ಮಪ್ಪ)15
--------------
ವರಹತಿಮ್ಮಪ್ಪ
ಯಾರಿರಬಹುದೀತ ಗೆಳತೀ ಯಾರಿರಬಹುದೀತ ಪ ಯಾರೆಂದರಿಯದೆ ಪೋಗದೆ ಕೊರತೆ ಯಾರಿರಬಹುದೀತ ಅ.ಪ ಸಾವಿರ ಸಂಖ್ಯೆಯ ಗೋವಳರಿದ್ದರೂ ಯಾವನಿಗೀ ವಿಧ ಠೀವಿಯಿರುವುದೇ ಹಾವಭಾವಗಳ ನೋಡಲು ಈತನ ಗೋವಳ ವೇಷವದಾವ ಕಾರಣವೋ 1 ನಮಗೇತಕೆ ಈತನ ಗೋಜೆಂದರು ಕಮನೀಯನ ನೋಡುತ ನೋಡುತ ಬಲು ಮಮತೆಯು ಮನದಲಿ ಏರುತಲಿರುವುದು ಕಮಲನಯನೆ ನಾ ನಮಿಸುವೆ ಪೇಳೆ 2 ಸರಳನೋ ದುರುಳನೋ ಅರಿಯುವುದೆಂತೇ ಕರೆಯದೆ ಹೋದರೆ ಜರಿಯಲುಬಹುದೇ ಮುರಳಿಯ ನಾದದ ಕರೆ ಬಂದರೆ ನಾ ಬರವೆನೆಂದರು ಹೇ ಸರಸ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಯಾರು ಇಕ್ಕುವರೆಂದು ಹಾರೈಸುವೈ ಆತ್ಮ ಸೋರುತಿದೆ ಮನೆಯೆಲ್ಲ ನಾರುತಿದೆ ಸ್ಥಳವು ಪ ಒಲೆಯೊಳಗೆ ಉರಿಯಿಲ್ಲ ಜಲವಿಲ್ಲ ಬಾವಿಯೊಳು ಕಲಹ ಮಾಳ್ಪಳು ತನ್ನ ಕುಲವನಿತೆಯು ಹೊಲುಬುದಪ್ಪಿಯೆ ಇಲ್ಲಿ ಬರಬಹುದೆ ನೀನೀಗ ಫಲವುಳ್ಳ ಮನೆಗಳನು ಸೇರೆಲವೊ ಆತ್ಮ 1 ಬಾಗಿಲಿಲ್ಲದ ಮನೆಯು ಬಹಳ ಕಗ್ಗತ್ತಲೆಯು ಕೂಗುವುದು ಹುಲಿ ಕರಡಿ ಇದಿರಿನೊಳಗೆ ಬೇಗದೊಳು ಇಲ್ಲಿಂದ ಸಾಗುವುದೆ ಸೌಖ್ಯಗಳು ನಾಗಶಯನನ ಗುಡಿಯ ಸೇರೆಲವೊ ಆತ್ಮ 2 ಒಟ್ಟೆಗಡಿಗೆಯ ಒಳಗೆ ಇಟ್ಟಿರ್ದ ಬುತ್ತಿಗಳು ಕೆಟ್ಟ ಕ್ರಿಮಿಗಳು ಬಂದು ಬಹಳ ಹಳಸಿದವು ಬಟ್ಟಲಿಡುವವರಿಲ್ಲ ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬುವುದುಂಟೆ ದುಷ್ಟರೊಳು ಆತ್ಮ 3 ಹಾಳು ಮನೆಯನು ನಿನಗೆ ತೋರಿಕೊಟ್ಟವರಾರು ಬೀಳುವುದು ಮೇಲೆ ಹದಿನಾರು ಭಿತ್ತಿಗಳು ಏಳು ಇಲ್ಲಿರಬೇಡ ಕಾಳಸರ್ಪನು ಬಂದು ಕಾಲ ಕಚ್ಚ್ಚುವನಲ್ಲೊ ಎಲೆ ದುಷ್ಟ ಆತ್ಮ 4 ಮೂರು ಮಾತನು ಮೇಲೆ ಯಾರ ಕೂಡಾಡಿದೆಯೊ ಆರು ಪಥದಲಿ ನೀನು ಮೀರಿ ನಡೆದೆ ಕೇರಿಯಾಗಿರ್ದ ಹದಿನೆಂಟು ಅಂಗಡಿಯೊಳಗೆ ಆರ ವ್ಯಾಪಾರವನು ಕೇಳಿದೈ ಆತ್ಮ 5 ಹತ್ತು ತಾಸಿನ ಮೇಲೆ ತುತ್ತು ಕೊಡುವವರಾರು ಬತ್ತುವುದು ಕೈಕಾಲು ಬಳಲಿಕೆಯೊಳು ಮತ್ತೇಳು ಮಂದಿ ತಾವತ್ತತ್ತ ಸಾರುವರು ಕರ್ತುಗಳ ನಾ ಕಾಣೆ ನೀ ಕೇಳೊ ಆತ್ಮ 6 ಎಂಟು ಮಂದಿಯು ತನಗೆ ನೆಂಟರೆಂಬಾಶೆಯೊಳು ಗಂಟ ಕಟ್ಟಿಯೆ ಮನದಿ ಮರುಗುತಿರಲು ಗಂಟಲೊಣಗಿಯೆ ವಾಯು ಕಂಠದೊಳು ಪೋಪಾಗ ನಂಟರನು ನಾ ಕಾಣೆ ಆಲಿಸೈ ಆತ್ಮ 7 ಆಯವಿಲ್ಲದ ಮನೆಯು ಛಾಯೆ ಇಲ್ಲದ ಮಡದಿ ದಾಯವಿಲ್ಲದ ಊರು ಕರಕಷ್ಟವು ಬಾಯ ಹೊಯ್ಯೆಂಬರೊಳು ನ್ಯಾಯ ಸೇರುವುದೆ ಉ- ಪಾಯದಲಿ ಸಾರೆಲೆವೊ ಸಾರಿದೆನು ಆತ್ಮ 8 ಮೂಡಗಿರಿವಾಸನೊಳು ಬೇಡಿಕೊಂಡರೆ ನಿನಗೆ ನೀಡುವನು ಧರ್ಮವನು ಧೈರ್ಯನಾಗಿ ಬೀಡುಬಿಟ್ಟಲ್ಲಿಂದ ಓಡುವುದು ಸುಖದೊಳಗೆ ಕೂಡುವುದು ವರಾಹತಿಮ್ಮಪ್ಪನೊಳು ಆತ್ಮ 9
--------------
ವರಹತಿಮ್ಮಪ್ಪ
ಯಾರು ಬಲ್ಲರು ವೆಂಕಟೇಶ ನಿನ್ನೊಳಿಹ ಚಾರು ಗುಣಶೀಲವೆಂಬ ವಾರಿಧಿಯ ಚಿಪ್ಪಿನೊಳು ಮೊಗೆದು ಬತ್ತಿಸುವಂಥ ವೀರನಾವನು ಜಗದೊಳು ಪ ಹದಿನಾಲ್ಕು ಲೋಕವನ್ನು, ನೀ ನಿನ್ನ ಉದರದೊಳಗಿರಿಸಿಕೊಂಡು ಉದಧಿಮಯವಾಗಿರ್ದ ಕಾಲದೊಳು ನಿನಗೊಂದು ಉದುರಿದೆಲೆಯೊಳು ನಿದ್ರೆಯಂತೆ 1 ಮಾಯೆ ಕಮಲಾಕರದೊಳು, ನಿನ್ನುದರ- ದಾಯತದಿ ತೋರಿ ನಿಲಲು ಮೋಹಿಸಲು ಆ ಕ್ಷಣದಿ ಕಾಯವಾಗಲು ಮೇಲೆ ಬಾಯಿ ನಾಲ್ಕಾಯಿತಂತೆ 2 ಅಲ್ಲಿ ತೋರಿದ ಸೊಲ್ಲನು, ಖಳನೋರ್ವ ನೆಲ್ಲವನು ಸೂರೆಗೊಳಲು ಮಲ್ಲನಾಗಿಯೆ ಜಲದಿ ಘಲ್ಲಿಸಿಯೆ ದೈತ್ಯನನು ಚೆಲ್ವಸಾರವ ಸೆಳೆದೆಯಂತೆ 3 ಅದರ ಆಧಾರದಿಂದ, ಸನಕಾದಿ- ಗುದಯವಾದುದುಯೆಲ್ಲವೂ ಮೊದಲ ಕಾಣದೆ ವೃಕ್ಷವದುರಿ ಬಿದ್ದುದ ನೋಡಿ ತುದಿಯೊಳಗೆ ಕದನವಂತೆ 4 ಒಳ ಹೊರಗೆ ನೀನೊಬ್ಬನೆ, ಹೊಳೆ ಹೊಳೆದು ಸುಳಿವ ಪರಿಯನು ಕಾಣದೆ ಮಲತಾಯಿ ಮಗನೊಳಗೆ ಕಲಹವಿಕ್ಕುವ ತೆರದಿ ಹೊಲಬುದಪ್ಪಿಯೆ ನಡೆವರಂತೆ 5 ಒಂದಿದರಿಂದೆರಡಾದುದು, ಮೂರಾಗಿ ಬಂದು ಇದಿರೊಳು ನಿಂದುದು ಒಂದು ಮಾತಿನೊಳೆರಡು ಸಂದೇಹಗಳ ತೋರಿ ಮಂದ ಬುದ್ಧಿಯ ಕೊಡುವೆಯಂತೆ 6 ಜಡವಾದ ಅಡವಿಯನ್ನು ಸಂಚರಿಸಿ ಒಡಲ ಹೊರೆವುದು ಕಡೆಯೊಳು ಎಡೆಯೊಳೊಪ್ಪಿಸಿ ಕೊಡುವಿಯಂತೆ 7 ನಂಬಿ ಬಂದವರ ನೀನು, ಮನದೊಳಗೆ ಹಂಬಲಿಸಿಕೊಂಡಿರುತಲೆ ಇಂಬಾಗಿ ಇಹಪರದಿ ಉಂಬ ಸಂಭ್ರಮವನ್ನು ಸಂಭವಿಸಿ ತೋರ್ಪೆಯಂತೆ 8 ಭೂಮಿಗೆ ವೈಕುಂಠವೆಂದು, ನಿಂತಿರುವ ಸ್ವಾಮಿಯೆನ್ನೆಡೆಗೆ ಬಂದು ಕ್ಷೇಮವನು ವರಾಹತಿಮ್ಮಪ್ಪ ಕರುಣದಿ ಕಾಮಿತಾರ್ಥವನೀಯೊ ಎಮಗೆ 9
--------------
ವರಹತಿಮ್ಮಪ್ಪ
ಯಾವ ಸುಖ ಇದು ದಾವ ಸುಖ ಮನುಜ ಶರೀರದ್ದು ಪ ನೋಯುತಲಿರುವುದು ಅ.ಪ ಕೊಂಡ ದಾವ ಸುಖ ಇದು ಹೇಯವಾಲದ ಭಾಂಡದ್ದಾವ ಸುಖ ಕಾಯವೆನಿಸಿಕೊಂಡು ಸಾವುಕುಣಿಗೆ ಬಿದ್ದು ಮಾಯವಾಗುತಲಿಹ್ಯದಾವ ಸುಖ 1 ಜಡಮತಿಶರೀರದ್ದು ದಾವ ಸುಖ ಇದು ಕೆಡುವ ತನುವು ನಿಜ ದಾವ ಸುಖ ಬುಡವು ಮೇಲಾಗಾಡಿ ಕಡೆಗೆ ಒಂದುದಿನ ಮಡಿದು ಹೋಗುವುದುದಾವ ಸುಖ 2 ನೇಮವಲ್ಲೊಂದಿನ ದಾವ ಸುಖ ಕಾಮಿತವನು ನೀಗಿ ಸ್ವಾಮಿ ಶ್ರೀರಾಮನ ಪ್ರೇಮ ಸಂಪಾದಿಸಲಾಗ ಸುಖ 3
--------------
ರಾಮದಾಸರು
ಯಾವಲ್ಲಿ ಅಡಗಿರುವಿ ಯಾವಲ್ಲಿ ಹುಡುಕಲಿಭಾವದ ಮೂಲೆಯ ರಾವನು ಬಿಟ್ಟು ಅ.ಪ. ಕಣ್ಣುಮುಚ್ಚಾಲೆಯಾಟ ಬೇಡಯ್ಯ ಈಬಣ್ಣದ ನುಡಿಯ ಬೇಟಕಣ್ಣು ಮುಚ್ಚಲು ಕೊಟ್ಟಿ ಟಣ್ಣನೆ ಜಿಗಿದೋಟಅಣ್ಣಾ ಹುಡುಕಿ ಹುಡುಕಿ ಹಣ್ಣಾಗಿ ಹೋದೆನೋ 1 ಎಲ್ಲೆಲ್ಲೂ ತುಂಬಿರುವೆ ಹುಡುಕಲು ನೀನೆಲ್ಲೆಲ್ಲ್ಯೂ ಸಿಗದಿರುವೆಕ್ಷುಲ್ಲಕನೆನ್ನನ್ನು ಚಲ್ಲದೆ ನನ್ನೆದುರುಚೆಲ್ವರೂಪದೆ ಬಂದು ನಿಲ್ವುದನ್ನು ಬಿಟ್ಟು 2 ಕಡುಕಷ್ಟ ಹುಡುಕುವದು ಹಿಡಿದು ಹಿಡಿದು ತಂದುಒಡಲಲ್ಲಿಡಲು ಮತ್ತೇಒಡನೆ ನುಸುಳಿಕೊಂಡುಬಿಡವಲೋಡೋಡಿ 3 ಇದೀಗ ನಡೆದು ತಂದು ನೆನೆಯಲು ನಿನ್ನಸದಾವಕಾಲಕೆಂದು ಹೃದಯದ ಗವಿಯೊಳುಮುದದಿ ಕೂಡಿಸಿ ಮೇಲೆಬದಿಗೆ ಕಾವಲವಿಟ್ಟು ಮನವ ಟೊಣೆದು ನೀ 4 ಬದರಿ ಕಾಶಿ ಕಂಚಿಯೋ ನೀನಿರುವುದುಮಥುರೆ ಪಂಢರಪುರವೊಪದುಮಾವತಿ ಗಿರಿಯೋ ಉಡುಪಿ ದ್ವಾರಕೆಯೊಗದುಗೋ ನೀ ಹೇಳಯ್ಯ ವೀರನಾರಾಯಣ 5
--------------
ವೀರನಾರಾಯಣ
ಯೆಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲಾ | ಇಲ್ಲವೋ ಕಾಣೋ ಯೆಂದಿಗಾದರು ಮರುಳೆ ಪ ಹುಲಿ ಇಲಿಯಾಗುವದು ತೋಳ ಕೋಳ್ಯಾಗುವುದು | ಕಲಿ ಬಂದು ಹಿತ್ತಿಲನ್ನೀಗ ಬಳಿವಾ || ಮೂಲ ಮಹಾಚೋರ ಚೊಚ್ಚಿಲ ಗೌಡಿಮಗನಾವಾ | ಜಲಜಾಕ್ಷನ ಕೃಪೆಯ ಪಡೆದ ದಾಸರಿಗೆ 1 ಕರಡಿ ಕರು ಆಗುವದು ಉರಿ ಮಂಜು ಆಗುವದು | ಕರಿ ನಾಯಿ ಆಗುವದು ಕಂಡವರಿಗೆ || ಭರದಿಂದ ಸುರಿವ ಮಳೆ ನಿಲ್ಲೆನಲು ನಿಲುವದು | ನರಹರಿಯ ನಾಮಗಳ ನಂಬಿ ಪಠಿಪರಿಗೆ 2 ಘಣಿ ಸರವೆ ಆಗುವದು ದಣುವಾಗುತಿಹ ಮಾರ್ಗ ಕ್ಷಣದೊಳಗೆ ಪೋದಂತೆ ಕಾಣಿಸುವದು || ಘನ ಪಾಷಾಣಗಳು ತೃಣ ಸಮವು ಯೆನಿಸುವವು ವನಜಾಕ್ಷನ ಕೃಪೆಯ ಪಡದ ದಾಸರಿಗೆ 3 ಕ್ಷುಧೆ ತೃಷೆಯಾಗದು ಕ್ಷುದ್ರ ಸಂಗ ಬಾರದು | ಪದೇ ಪದೆಗೆ ರೋಗಗಳು ಬೆನ್ನಟ್ಟವು || ಉದಯಾಸ್ತಮಾನವೆಂಬೋ ಭಯವು ಸುಳಿಯದು | ಪದುಮನಾಭನ ಕೃಪೆಯ ಪಡೆದ ದಾಸರಿಗೆ4 ಬಾರವು ಭಯಗಳು ಬಂದರು ನಿಲ್ಲವು | ಹಾರಿ ಹೋಗುವವು ದಶದಿಶಗಳಿಗೆ || ಘೋರ ದುರಿತಾರಿ ಶ್ರೀ ವಿಜಯವಿಠಲನಂಘ್ರಿ | ಸೇರಿದಾ ಜನರಿಗೆ ಇನಿತಾಹುದುಂಟೇ 5
--------------
ವಿಜಯದಾಸ
ಯೋಗಿ ವಲ್ಲಭನ ಅನುರಾಗವನು ಪಡೆದವಗೆ ಲಾಗವೆಲ್ಲವು ದೊಡ್ಡ ಯೋಗವಾಗುವುದು ಪ ಹೋಗಿ ಗಂಗೆಯ ತೀರದಲಿ ಬಾವಿ ತೋಡಿದರೂ ಬೇಗ ಸಿಗುವುದು ದಿವÀ್ಯ ಬಲಮುರಿಯ ಶಂಖವು ಅ.ಪ ಮಾಧವನ ಪರಮ ಕರುಣವ ಪಡೆದ ಮನುಜನಿಗೆ ಹೋದ ಕಡೆಗಳಲಿ ದೊರೆಕುವುದಾದರೆ ಮೂದಲಿಸುವರ ಮನವು ಕಾದ ಬೆಣ್ಣೆಯು ಕರಗಿ ಹೋದ ತೆರದಲಿ ಕ್ಷಣದಿ ಸಾಧುವಾಗುವುದು 1 ವೇದಾಂತ ರಾಜ್ಯದಲಿ ಜ್ಞಾನಭಕುತಿಗಳಿಂದ ಮೋದ ಪಡಿಸುವನು ಕಾದ ಮರುಭೂಮಿಯಲಿ ಸಕಲ ಸಂಪತ್ತುಗಳ ಸಾಧಿಸುವ ಬೇಧಿಸುವ ವಿಘ್ನರಾಶಿಗಳನ್ನು 2 ಕುರುಡ ನೋಡುವನೆಲ್ಲ ಕಿವುಡ ಕೇಳುವನೆಲ್ಲ ಗುರುವರ ಪ್ರಸನ್ನ ನೀ ಮರುಕ ತೋರಿದರೆ ಕರಡಿ ಕೈ ಗೊಂಬೆಯಾಗುವುದು ಕೈಗೊಂಬೆಯು ತ್ವರಿತದಲಿ ಕಲ್ಪತರುವಾಗಿ ಕೊಡುವುದು ಫಲವ 3
--------------
ವಿದ್ಯಾಪ್ರಸನ್ನತೀರ್ಥರು
ಯೋಗಿವರ್ಯ ಶಿರಬಾಗಿ ನಮಿಸುವೆನು ಶ್ರೀ ರಾಘವೇಂದ್ರನೆ ಪ ಹೇಳಿದ ವಚನವ ಕೇಳಿ ಮನದಲಿ ಬಹಳ ಸುಖಿಸುತಲಿಕಾಲಕಾಲಕೆ ಶ್ರೀ ಲಲಾಮನ ಲೀಲೆ ಪಾಡುತ ವ್ಯಾಳೆ ನೋಡುವಿ 1 ಸತ್ಯವಾಣಿಯು ಮಿಥ್ಯವಾಗದು ಮತ್ತೆ ಲೋಕದೊಳುಚಿತ್ತದೊಳು ಅನಿತ್ಯ ಚಿಂತಿಸಿ ವೃತ್ತಿ ಕೃಷ್ಣನೊಳು ಇತ್ತು ಪಾಡುವಿ 2 ಎಲ್ಲ ಬಿಟ್ಟವ ಸುಳ್ಳನಾಡೊದು ಎಲ್ಲಿ ಕಾಣಿಸದುಫುಲ್ಲನಾಭನ ಭಕ್ತನಲ್ಲಿ ಹೇಳಿದ ಸುಳ್ಳು ಕಾದುಕೋ 3 ಆಶೆ ತೋರಿಸಿ ನಿರಾಶೆ ಮಾಡುವುದು ದಾಸ ಜನರೊಳಗೆಈಶ ನಿಜ ಬಹು ತೋಷವೆಂಬುದು ಭಾಷಿಸದೆಯತಿವೇಷ ದಿವಿಜನೆ 4 ಶಕ್ತಿವಚನವ ಕೃತ್ಯಮಾಡಲು ಶಕ್ತನಾರದನು ಒತ್ತಿ ಪೇಳಿದಹತ್ತರಾತನ ಭೃತ್ಯರಾಶಯ ಪೂರ್ತಿಮಾಡಿಸು 5 ನೀನೇ ಬಾಂಧವ ನೀನೇ ದೈವತ ನೀನೇ ಗುರುಪಿತನುನಾನು ನಂಬಿದೆ ಮೌನಿ ತೋರಿಸು ವೇಣು ಬಾಲಕನ ಜವ 6 ಇಂದು ಎನ್ನೊಳುನಿಂದು ಪ್ರಾರ್ಥಿಸು 7
--------------
ಇಂದಿರೇಶರು
ರಕ್ಷಿಸೋ ಗೌರೀವರ | ತ್ರಿಪುರದಶಿಕ್ಷಕ ದ್ರೋಣ ಕುವರ ಪ ಅಕ್ಷಿ ರಕ್ತ ರೇಖ ಮಾನಿ | ಯಕ್ಷೇಶ ಪ್ರಿಯ ಮಿತ್ರದಕ್ಷಾಧ್ವರಘ್ನ ರುದ್ರ | ತ್ರ್ಯಕ್ಷನೆ ಲೋಕಾಧ್ಯಕ್ಷಅ.ಪ. ವಿಭೂತಿ ಭಸ್ಮಾರ್ಚಿತ ||ಸು ಭಗಣೀಧೀಶ ಶಿರ | ನಭಕೀಶ ನಿನ್ನ ಸುತೆವಿಭವಾ ಪೊಗಳಲಳವೆ | ಕುಭವ ಪರೀಹರ 1 ಹಿಂಡು ನಖ ಮೃ | ಕಂಡ ಪರಿಪಾಲಕೊಂಡೆನ್ನ ಭಿನ್ನಪವ | ದಂಡಿಸೊ ದುಷ್ಟ ಮನ 2 ಗೋವುಗಳ್ಪರಿ ಪಾಲಕ5ಗೋಪೇರ | ದಾವಾಗ್ನಿಯಿಂ ರಕ್ಷ5ಭಾವ ಜನಯ್ಯ ಗುರು | ಗೋವಿಂದ ವಿಠಲನಭಾವದೊಳಗೆ ಕಾಂಬ ಭಾವವನೀವುದು 3
--------------
ಗುರುಗೋವಿಂದವಿಠಲರು