ಒಟ್ಟು 11213 ಕಡೆಗಳಲ್ಲಿ , 138 ದಾಸರು , 6168 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಷ್ಟು ಸಾಹಸವಂತ ನೀನೆ ಬಲವಂತದಿಟ್ಟಮೂರುತಿ ಭಳಭಳಿರೆ ಹನುಮಂತ ಪ. ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಗಳಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೊ ಅ.ಪ. ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಸ್ವಾಮಿಕಾರ್ಯವನು ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ1 ದೂರದಿಂದಸುರನ ಪುರವ[ನ್ನು] ನೋಡಿಭರದಿ ಶ್ರೀರಾಮರ ಸ್ಮರಣೆಯನು ಮಾಡಿಹಾರಿದೆ ಹರುಷದಿ ಸಂಹರಿಸಿ ಲಂಕಿಣಿಯನುವಾರಿಜಮುಖಿಯನು ಕಂಡು ಮಾತಾಡಿ 2 ರಾಮರ ಕ್ಷೇಮವ ರಮಣಿಗೆ ಪೇಳಿತಾಮಸ ಮಾಡದೆ ಮುದ್ರೆನೊಪ್ಪಿಸಿಪ್ರೇಮದಿಂ ಜಾನಕಿ ಕುರುಹನು ಕೊಡಲಾಗಆ ಮಹಾ ವನದೊಳು ಫಲವನು ಬೇಡಿ 3 ಕಣ್ಣ್ಣಿಗೆ ಪ್ರಿಯವಾದ ಹಣ್ಣ[ನು] ಕೊಯ್ದುಹಣ್ಣಿನ ನೆವದಲಿ ಅಸುರರ ಹೊಯ್ದುಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತಬಣ್ಣಿಸಿ ಅಸುರರ ಬಲವನು ಮುರಿದು4 ಶೃಂಗಾರವನದೊಳಗಿದ್ದ ರಾಕ್ಷಸರಅಂಗವನಳಿಸಿದೆ ಅತಿರಣಶೂರನುಂಗಿ ಅಸ್ತ್ರಗಳ ಅಕ್ಷಯಕುವರನಭಂಗಿಸಿ ಬಿಸುಟಿಯೊ ಬಂದ ರಕ್ಕಸರ 5 ದೂರ ಪೇಳಿದರೆಲ್ಲ ರಾವಣನೊಡನೆಚೀರುತ್ತ ಕರೆಸಿದ ಇಂದ್ರಜಿತುವನೆಚೋರಕಪಿಯನು ನೀ ಹಿಡಿತಹುದೆನ್ನುತಶೂರರ ಕಳುಹಿದ ನಿಜಸುತನೊಡನೆ 6 ಪಿಡಿದನು ಇಂದ್ರಜಿತು ಕಡುಕೋಪದಿಂದಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದಗುಡುಗುಡುಗುಟ್ಟುತ ಕಿಡಿಕಿಡಿಯಾಗುತನಡೆದನು ಲಂಕೆಯ ಒಡೆಯನಿದ್ದೆಡೆಗೆ 7 ಕಂಡನು ರಾವಣನುದ್ದಂಡ ಕಪಿಯನುಮಂಡೆಯ ತೂಗುತ್ತ ಮಾತಾಡಿಸಿದನುಭಂಡುಮಾಡದೆ ಬಿಡೆನೋಡು ಕಪಿಯೆನೆಗಂಡುಗಲಿಯು ದುರಿದುರಿಸಿ ನೋಡಿದನು 8 ಬಂಟ ಬಂದಿಹೆನೊಹಲವು ಮಾತ್ಯಾಕೊ ಹನುಮನು ನಾನೆ 9 ಖುಲ್ಲ ರಕ್ಕಸನೆತೊಡೆವೆನೊ ನಿನ್ನ ಪಣೆಯ ಅಕ್ಷರವ 10 ನಿನ್ನಂಥ ದೂತರು ರಾಮನ ಬಳಿಯೊಳುಇನ್ನೆಷ್ಟು ಮಂದಿ ಉಂಟು ಹೇಳೊ ನೀ ತ್ವರಿಯಾನನ್ನಂಥ ದೂತರು ನಿನ್ನಂಥ ಪ್ರೇತರುಇನ್ನೂರು ಮುನ್ನೂರು ಕೋಟಿ ಕೇಳರಿಯಾ11 ಕಡುಕೋಪದಿಂದಲಿ ಖೂಳರಾವಣನು ಸುಡಿರೆಂದ ಬಾಲವ ಸುತ್ತಿ ವಸನವನುಒಡೆಯನ ಮಾತಿಗೆ ತಡೆಬಡೆಯಿಲ್ಲದೆಒಡನೆಮುತ್ತಿದರು ಗಡಿಮನೆಯವರು 12 ತÀಂದರು ವಸನವ ತಂಡತÀಂಡದಲಿಒಂದೊಂದು ಮೂಟೆ ಎಂಬತ್ತು ಕೋಟಿಯಲಿಚಂದದಿ ಹರಳಿನ ತೈಲದೊಳದ್ದಿಸೆನಿಂದ ಹನುಮನು ಬಾಲವ ಬೆಳೆಸುತ 13 ಶಾಲು ಸಕಲಾತ್ಯಾಯಿತು ಸಾಲದೆಯಿರಲುಬಾಲೆರ ವಸ್ತ್ರವ ಸೆಳೆದುತಾರೆನಲುಬಾಲವ ನಿಲ್ಲಿಸೆ ಬೆಂಕಿಯನಿಡುತಲಿಕಾಲಮೃತ್ಯುವ ಕೆಣಕಿದರಲ್ಲಿ14 ಕುಣಿಕುಣಿದಾಡುತ ಕೂಗಿ ಬೊಬ್ಬಿಡುತಇಣಿಕಿನೋಡುತ ಅಸುರರನಣಕಿಸುತಝಣಝಣಝಣರೆನೆ ಬಾಲದಗಂಟೆಯುಮನದಿ ಶ್ರೀರಾಮರ ಪಾದವ ನೆನೆಯುತ 15 ಮಂಗಳಂ ಶ್ರೀರಾಮಚಂದ್ರ ಮೂರುತಿಗೆಮಂಗಳಂ ಸೀತಾದೇವಿ ಚರಣಂಗಳಿಗೆಮಂಗಳವೆನುತ ಲಂಕೆಯ ಸುಟ್ಟುಲಂಘಿಸಿ ಅಸುರನ ಗಡ್ಡಕೆ ಹಿಡಿದ 16 ಹತ್ತಿತು ಅಸುರನ ಗಡ್ಡಮೀಸೆಗಳುಸುತ್ತಿತು ಹೊಗೆ ಬ್ರಹ್ಮಾಂಡಕೋಟಿಯೊಳುಚಿತ್ತದಿ ರಾಮರು ಕೋಪಿಸುವರು ಎಂದುಚಿತ್ರದಿ ನಡೆದನು ಅರಸನಿದ್ದೆಡೆಗೆ 17 ಸೀತೆಯಕ್ಷೇಮವ ರಾಮರಿಗ್ಹೇಳಿಪ್ರೀತಿಯಿಂ ಕೊಟ್ಟಕುರುಹ ಕರದಲ್ಲಿಸೇತುವೆ ಕಟ್ಟಿ ಚತುರಂಗ ಬಲಸಹಮುತ್ತಿತು ಲಂಕೆಯ ಸೂರೆಗೈಯುತಲಿ 18 ವೆಗ್ಗಳವಾಯಿತು ರಾಮರ ದಂಡುಮುತ್ತಿತು ಲಂಕೆಯ ಕೋಟೆಯ ಕಂಡುಹೆಗ್ಗದ ಕಾಯ್ವರ ನುಗ್ಗುಮಾಡುತಿರೆಝಗ್ಗನೆ ಪೇಳ್ದರು ರಾವಣಗಂದು 19 ರಾವಣಮೊದಲಾದ ರಾಕ್ಷಸರ ಕೊಂದುಭಾವಶುದ್ಧದಲಿ ವಿಭೀಷಣ ಬಾಳೆಂದುದೇವಿ ಸೀತೆಯನೊಡಗೊಂಡಯೋಧ್ಯದಿದೇವ ಶ್ರೀರಾಮರು ರಾಜ್ಯವಾಳಿದರು 20 ಶಂಖದೈತ್ಯನ ಕೊಂದೆ ಶರಣು ಶರಣಯ್ಯಶಂಖಗಿರಿಯಲಿ ನಿಂದೆ ಹನಮಂತರಾಯಪಂಕಜಾಕ್ಷ ಹಯವದನನ ಕಟಾಕ್ಷದಿಬಿಂಕದಿ ಪಡೆದೆಯೊ ಅಜನಪದವಿಯ21
--------------
ವಾದಿರಾಜ
ಎಷ್ಟೆಂದು ಸಾರುವೆ ನಿಮ್ಮ ನಾಮ ಮಹಿಮಾ| ಶ್ರೀ ಪರಬೊಮ್ಮಾ ಶಿಷ್ಟ ಜನರ ಸಂಭ್ರಮಾ ಪ ಹರಿಹರಿಯಂದೊದರೆ ಮರೆದರಿದೊಮ್ಮಾ| ಹರದ್ಹರ ದೋಹುದುಪಾಪ ಪುಣ್ಯವು ಮೋಪಾ| ತಿರು ತಿರುಗಿ ಯಾತ್ರೆಗಳಾ ಮಾಡಿದ ಫಲಾ| ಪರತರಾಸುಖ ನೀವುದು ರಕ್ಷಿಸುವುದು 1 ರಮ ರಾಮಯಂದು ಕಾಮಿಕಾಮಿ ಅಂದು| ನಾಮಾ ನೇಮದಿ ನುಡಿಯೆ ಗಿಳಿಯ ಕರಿಯೆ| ಪ್ರೇಮ ಪ್ರೇಮಕರ ತಂದೆ ಗತಿ ನೀಡದೇ| ಸೋಮ ಸೋಮಾರಿ ಕುಲೇಶ ಕೋಟಿ ಪ್ರಕಾಶಾ 2 ಪರಿ ಪರೀವದಾನಂದಾ| ಕರೆ ಕರೆದುಂಡು ನಲಿದರು ನಾರದಾದ್ಯರು| ತರಿಸಿ ತಾರಿಸುತಿಹರು ಸಾಧು ಸಂತರು| ಗುರುವರ ಮಹಿಪತಿ ಜನು ಧನ್ಯನಾದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಷ್ಟೋ ಅಪರಾಧಿ ಯಾವುದು ಬಟ್ಟೆಯೋ ಕರುಣಾಬ್ಧಿ ಪ. ದುಷ್ಟರಾರು ಜನ ಒಟ್ಟುಗೂಡಿ ಎನ್ನ ಮೆಟ್ಟಿ ಕುಟ್ಟಿ ಪುಂಡಿಗುಟ್ಟುವರೈ ಹರಿ ಅ.ಪ. ಲೇಶ ಪುಣ್ಯವಿಲ್ಲ ಪಾಪದ ರಾಶಿ ಬೆಳೆಯಿತಲ್ಲ ಆಶಾವಶ ಹರಿದಾಸನೆಂದೆನಿಸಿದೆ ದೂಷಣ ಜನರ ಶಭಾಸಿಗೆ ಮೆಚ್ಚಿದೆ 1 ಕುಲಕಲ್ಮಷ ಬಹಳ ದೇಹದಿ ನೆಲೆಸಿತು ಶ್ರೀಲೋಲ ಜಲಜನಾಭ ನಿನ್ನೊಲುಮೆಯೆ ಮುಖ್ಯವು ಕುಲಕೆಟ್ಟ ಅಜಮಿಳ ಪಾವನನಾದ 2 ಹೀನರೈವರ ಸಂಗದಿಂದಲೆ ಹಾನಿಯಾದೆನೊ ರಂಗ ಪ್ರಾಣವು ನಿನ್ನಾಧೀನವಾದ ಮೇಲೆ ನೀನೆ ಗತಿ ಲಕ್ಷ್ಮೀನಾರಾಯಣ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಷ್ಟೋ ಆಪರಾಧಿ ಯಾವುದು ಬಟ್ಟೆಯೋ ಕರುಣಾಬ್ಧಿ ಪ. ದುಷ್ಟರಾರು ಜನ ಒಟ್ಟುಗೂಡಿ ಎನ್ನ ಮೆಟ್ಟಿ ಕುಟ್ಟಿ ಪುಂಡಿಗುಟ್ಟುವರೈ ಹರಿ ಅ.ಪ. ಲೇಶ ಪುಣ್ಯವಿಲ್ಲ ಪಾಪದ ರಾಶಿ ಬೆಳೆಯಿತಲ್ಲ ಆಶಾವಶ ಹರಿದಾಸನೆಂದೆನಿಸಿದೆ ದೂಷಣ ಜನರ ಶಭಾಸಿಗೆ ಮೆಚ್ಚಿದೆ1 ಕುಲಕಲ್ಮಷ ಬಹಳ ದೇಹದಿ ನೆಲೆಸಿತು ಶ್ರೀಲೋಲ ಜಲಜನಾಭ ನಿನ್ನೊಲುಮೆಯೆ ಮುಖ್ಯವು ಕುಲಕೆಟ್ಟ ಅಜಮಿಳ ಪಾವನನಾದ 2 ಹೀನರೈವರ ಸಂಗದಿಂದಲೆ ಹಾನಿಯಾದೆನೊ ರಂಗ ಪ್ರಾಣವು ನಿನ್ನಾಧೀನವಾದ ಮೇಲೆ ನೀನೆ ಗತಿ ಲಕ್ಷ್ಮೀನಾರಾಯಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಏ ನೀರೇ ತೋರೇ ರಂಗನಾ ಪ ರಂಗನಾ ಸಕಲಾಂತ ರಂಗನಾ | ಕೋಮಲ ಸುಂದ | ರಾಂಗನಾ ಭೂ ಭುಜ ಯದು ತುಂಗನಾ 1 ಸಿರಿ ಲೋಲನಾ | ನಯನಸುವಿ | ಮೃಗ ಮದಾಂಕ ಬಾಲನಾ2 ತಪನ ನಂತೆತೇಜಸ್ವರೂಪನಾ | ಪಾಂಡವರಸಂ ಸ್ಥಾಪನಾ ಮಹಿಪತಿಜ ರಕ್ಷಿಪನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಕ ಚಿಂತಿಸಲಯ್ಯ ಈ ಜಗದ ಸುಖಕಾಗಿ ಸಾಕು ಇದರೊಳು ಸುಖದ ಲೇಶವನು ಕಾಣೆ ಪ ಒಂದು ಸುಖ ಬಯಸಿದೊಡೆ ಹಿಂದೆ ನೂರೆಂಟಾಗಿ ಸಂದಣಿಪ ದುಃಖಗಳು ಬಂದು ಒದಗುವವಿದಕೆ ಎಂದಿಗೂ ಬಯಸೆನಾ ಈ ತೆರೆದ ಸುಖವನ್ನು ಹಿಂದಿನಾ ಕರ್ಮದಂತಾಗುತಿರುವುದಕೆ 1 ಮೊದಲು ಸವಿಯಾಗಿಹುದು ತುದಿಯಲಿದು ವಿಷವಹುದು ಬದಲಾಗುತಿಹ ಇಂಥ ಸುಖ ಬೇಡವೆನಗೆ ಮೊದಲುಕೊನೆ ಇಲ್ಲದಿಹ ಸದಮಲಾನಂದವಹ ಪದವ ಮರೆಯಿಸುತಿರುವದಿದು ಬೇಡವೆನಗೆ 2 ಅನಿಸಿಕೆಯೆ ಕೂಡಿರುವ ಈ ಸುಖವು ನಿಜವಲ್ಲ ಮನವಾಣಿಗಳಿಗಾಚೆಗಿಹ ಸುಖವು ನಿಜವು ತಾನೆ ಸುಖರೂಪನೆಂದನಿತರೊಳು ನಿಶ್ಚಯಿಸಿ ಜ್ಞಾನಿಶಂಕರನೆ ನಾನಾದ ಮೇಲಿನ್ನು 3
--------------
ಶಂಕರಭಟ್ಟ ಅಗ್ನಿಹೋತ್ರಿ
ಏಕ ಬÁಣ ಬಿಟ್ಟನು ಜಾಣ ಪ ಏಕ ಸಂಕಲ್ಪದಿ ಏಕ ವಾಕ್ಯವನು ಅ.ಪ. ಏಕ ದೈವ ಲೋಕೈಕ ಮಹಿಮ ಜಗ- ದೇಕ ಕಾರಣ ಭಕ್ತ ಶೋಕ ನಿವಾರಣ ಶ್ರೀಕರ ಶುಭಗುಣ ಸೀತಾರಮಣ ಪೂರ್ಣ ರಾಕೇಂದು ವದನ ದಿವಾಕರ ಕುಲಭೂಷಣ 1 ಕಾಕುಜನರ ಬಲು ಶೋಕಕಾರಣ ಕರು ಣಾಕರ ಶರಣಾಗತ ಜನ ರಕ್ಷಣ ಶ್ರೀಕಮಲೇಕ್ಷಣ ಲೋಕ ವಿಲಕ್ಷಣ ಲೋಕವಿನುತ ಶ್ರೀ ಕರಿಗಿರಿ ನಿಕೇತನ 2
--------------
ವರಾವಾಣಿರಾಮರಾಯದಾಸರು
ಏಕನಾದ ಹರಿಗುರುಗಳ ಬಿಟ್ಟು ನರಸ್ತುತಿಗಳನು ಮಾಡಬಾರ್ದು ಪ ಸಿರಿವುರಿಯಲಿ ಸಿಕ್ಕಿ ನರಹರಿ ಚರಣವ ಬಿಡಬಾರ್ದು ಅ.ಪ. ಒಂಟಿಲಿ ಸತಿಯನು ಪತಿವ್ರತೆ ಎನ್ನುತ ಬಿಡಬಾರ್ದು ನೆಂಟೆಗೆ ಮಿತ್ರಗೆ ಸೂಳೆಗೆ ಸಾಲವ ಕೊಡಬಾರ್ದು ತುಂಟರ ಕುಡುಕರ ಜಾರರ ನೆರೆಹೊರೆ ಇರಬಾರ್ದು ಒಂಟಿಯ ಊಟವ ಪಯಣವ ಕಲಹವ ಬೆಳೆಸಬಾರ್ದು 1 ಮಾವನ ಮನೆಯಲಿ ದುಡಿಯದ ಅಳಿಯನು ನಿಲ್ಲಬಾರ್ದು ಕೋವಿದರಡಿಗಳ ಸುಜನರ ಸಂಗವ ಬಿಡಬಾರ್ದು ಜೀವರು ಹರಿ ಸಮ ಮಾಯವೆ ಜಗಸರಿ ಎನಬಾರ್ದು ದೇವನ ದೂಡುತ ವಿಷಯವ ಹರಿಸುತ ಕೆಡಬಾರ್ದು 2 ಮನೆಕದ ಮುಂದಿಲಿ ಪತಿವ್ರತೆ ತಾನು ನಿಲಬಾರ್ದು ತನುವನು ತೋರುತ ಸೆರೆಗನು ಬೀರುತ ನಡಿ ಬಾರ್ದು ವನಿತೆಯ ಸಂಗಡ ಗುಟ್ಟಿನ ವಿಷಯವ ನುಡಿಬಾರ್ದು ಮಣಿಯದೆಲೆಂದಿಗು ಹಿರಿಯರ ಚರಣಕೆ ನಡಿಬಾರ್ದು3 ನುಡಿಯುವ ತೆರೆದಲಿ ನಡೆಯದ ಮನುಜನ ನಂಬಬಾರ್ದು ತಡೆಯದೆ ಕೋಪವ ದುಡುಕುವ ನೆಡೆಯಲಿ ನಿಲ್ಲಬಾರ್ದು ಬೆಡಗನು ತೋರುವ ನಾರಿಯ ಕಡೆಯಲಿ ನೋಡಬಾರ್ದು ದುಡುಕುತ ಲೊಡನೆಯೆ ಯಾವುದು ನಿಶ್ಚಯ ಮಾಡಬಾರ್ದು 4 ಕೆಟ್ಟರೆ ನೆಂಟರನೆಂದಿಗು ಮಾನಿಯು ಸೇರಬಾರ್ದು ಕಷ್ಟವು ಬಂದೆಡೆ ಧೈರ್ಯವನೆಂದಿಗು ಬಿಡಬಾರ್ದು ಗುಟ್ಟಿನ ಮಂತ್ರವು ಘಟ್ಟಿಲಿ ಜಪಿಸುತ ಕೂಗಬಾರ್ದು ಶಿಷ್ಯರಿಗಲ್ಲದೆ ದುಷ್ಟಗೆ ಶಾಸ್ತ್ರವ ನುಡಿಬಾರ್ದು 5 ತಿಂಡಿಯ ಚಪಲವ ನರಹರಿ ತೊಂಡನು ಮಾಡಬಾರ್ದು ಹೆಂಡರ ಭಜಕನ ಜಾರನ ನುಡಿಗಳ ನಂಬಬಾರ್ದು ಸತಿ ಸಹ ಸರಸವ ಮಾಡಬಾರ್ದು ಮಂಡೆಲಿ ಚರಣದಿ ಬರಿತೆರ ವೆಂದಿಗು ಹೋಗಬಾರ್ದು 6 ಹುಡುಗರ ಶಾಲೆಗೆ ಕಲಿಯಲು ಹುಡುಗಿಯ ಕಳಿಸಬಾರ್ದು ಮಡದಿಗೆ ಭಂಟಗೆ ಒಡನೆಯೆ ಸದರವ ನೀಡಬಾರ್ದು ಹುಡುಗಿಯ ಕಾಣದ ಜನರಿಗೆ ದೇಶಕೆ ಕೊಡಬಾರ್ದು ನಡೆನುಡಿ ನೋಟ ವಿಶೇಷದಿ ನೇಮವನಿಡದಲೆ ಇರಬಾರ್ದು 7 ಯಾಚಕ ಸವಿನುಡಿ ವಿನಯ ವಿವೇಕವ ಮರಿಬಾರ್ದು ಯೋಚನೆ ಗೈಯದೆ ನೆರೆಹೊರೆ ಹಗೆತನ ಗಳಿಸಬಾರ್ದು ಒಗೆತನ ಹುಳುಕನು ಹಾಕಬಾರ್ದು ಮೋಚಕ ನಿಜ ಸಖ ಹರಿತಾನೆಂಬುದ ಮರಿಬಾರ್ದು 8 ದೊಡ್ಡವರೆಡೆಯಲಿ ಹುಡುಗರು ಸರಸವ ಮಾಡಬಾರ್ದು ದುಡ್ಡಿನ ಜನಗಳನೆದುರಿಸಿ ಬಡವನು ನಿಲ್ಲಬಾರ್ದು ಸಡ್ಡೆಯ ಮಾಡದೆ ಅಡ್ಡಿಗಳೆಲ್ಲವ ಸರ್ವರಿಂ ದೊಡ್ಡವ ಶ್ರೀ ಕೃಷ್ಣವಿಠಲನ ಭಜನೆಯ ಬಿಡಬಾರ್ದು 9
--------------
ಕೃಷ್ಣವಿಠಲದಾಸರು
ಏಕಮೇವಾ | ಅದ್ವಿತೀಯನೆ ಪಾಹಿ | ಏಕಮೇವ ಪ ಏಕಮೇವ ತ್ರೈಲೋಕ ಜನಕ ಕರುಣಾಕರ ಹರಿಯೇ ಅ.ಪ. ಮಾನ್ಯ ಮಾನದ | ನಾನ್ಯಪ ಹರಿ ಸತ್‍ಶೂನ್ಯಾಭಿಧ ಸರಿ | ವಾಣ್ಯಾದಿಯ ಹರ 1 ಭವ ಸುರ | ಕರಣಶಕ್ತಿ ಹರ 2 ಉದರದೊಳಗೆ ಜಗ | ಹುದುಗಿಸಿ ಸರ್ವವಅದುಭುತ ತಮದಲಿ | ವಿಧಿಸಿದ ಹರಿಯೇ 3 ಪ್ರಲಯೋದಧಿ ಶಯ | ಚೆಲುವ ಬಾಲ ಬಲ್‍ಒಲವಿನಿಂದ ಪದ ಬೆ | ರಳನೆ ಸವಿದಾ 4 ಸೃಷ್ಟಿಗೊಡೆಯ ಲಯ | ಅಷ್ಟ ಭಾಗವಿರೆಚೇಷ್ಟಿಸಿ ದುರ್ಗೆಯ | ಹೃಷ್ಟಳ ಮಾಡಿದೆ 5 ಕರ್ಮ ತವಕೃತ್ಯವನಂತವು | ಭೃತ್ಯರ ಸುದತರು 6 ಕಮಲಾರಮಣನೆ | ಕಮಲಜಾದಿ ನುತನಿಮಿಷೋನ್ಮಿಕರ | ಸುಮನಸಕಪ್ಪುದೆ 7 ದುರ್ಗೆ ತುತಿಸೆ | ಕರ್ಗತ್ಲೆ ಕುಡಿದು ನಿಜಸರ್ಗಕೆಣಿಸಿದೇ | ದುರ್ಗಮ ಮಹಿಮ 8 ಮುಕ್ತರೊಡನೆ ಸೇ | ವ್ರ್ಯಕ್ತಿಗಳಲಿ ಅಭಿವ್ಯಕ್ತನು ಲೀಲಾ | ಸಕ್ತ ಸುಪುರುಷಾ 9 ಗೂಹಿಸಿ ಸರ್ವವ | ವ್ಯೂಹ ಚತುರಕೆಮೋಹಿಸಿ ಪುಮಜನ | ಬಾಹಿರ ತೆಗೆದ 10 ಪತಿ ತಾ ಸರ | ಸ್ವತಿ ಭಾರತಿ ಎಂಬಸುತೆಯರ ಪಡೆದು | ಸುತರೊಡನೈರಸಿದ12 ಪುಮಜಗೆ ಪ್ರಕೃತಿಯಿಂ | ಸುಮನಸ ಶೇಷನುಕ್ರಮದಿ ಸೂತ್ರನಿಂ ಜ | ನುಮವು ಕಾಲಿಗೆ 13 ಎರಡು ಒಂದು ತನು | ಹರನಿಗೆ ಬಂದವುಸರಸಿಜ ಸಂಭವ | ಮರುತೋರಗದಿಂ14 ಪತಿ ಸೇವೆಗೆ 15 ವಿಧ ವಿಧ ಜೀವರು | ಉದುಭವವಾದರುವಿಧಿ ಪಿತ ಮಹಿಮೆಯ | ಅದು ಭುತ ಕೇಳೀ 16 ಮುದದಿ ಇಟ್ಟ ತನ್ | ಉದರದೊಳೆಲ್ಲರಅದುಭುತ ಚರಿತ ಅನಿ | ರುದ್ಧ ಮೂರುತಿ 17 ಗುಣೋಪಾದಾನದಿ | ತನು ಸೂಕ್ಷ್ಮಗಳನುಅನಿರುದ್ಧನು ನಿ | ರ್ಮಾಣವ ಮಾಡಿದ 18 ಪರಿ ಬಹು ಲಿಂ | ಗೋಪ ಚಯಿವಗೈದಾಪರ ಬೊಮ್ಮನು | ಸ್ಥಾಪಿಸಿದನು ಜಗ 19 ಪದುಮ ಕಲ್ಪ ಮುನ್ | ಉದುಭವಿಸಿತು ಮತ್‍ತದನನು ಸಿತವರ | ಹದ ಕಲ್ಪೋದಯ 20 ಸರಸಿಜ ಭವನಿಂ | ವಿರಚಿಸಿದನು ಜಗವೈಡೇಳ್ಭುವನವು | ಭರಿತವು ಜೀವರಿಂ 21 ಈ ವಿಚಿತ್ರ ಸ | ರ್ಗಾವವ ತಿಳಿಯಲುಸೇವಿಸುವುದು ಸತ್ | ಕೋವಿದ ಜನಪದ 22 ಪಾವಮಾನಿ ನಿಜ | ಭಾವಕೆ ಸರಿಯಾಹಸೇವೆಗೊಲಿದ ಗುರು | ಗೋವಿಂದ ವಿಠ್ಠಲ 23
--------------
ಗುರುಗೋವಿಂದವಿಠಲರು
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ
ಏಕಾದಶಿ ನಿರ್ಣಯ ಅನಲು [ಸಮನೆ] ಮನೆಗೆ ಪೇಳಬಂದ ಅನಾಥಬಂಧು ಹಯವದನ ಗೋವಿಂದ ಪ. ತನ್ನ ನಂಬಿದವರ ತಾಪತ್ರಯವಳಿದು ಉನ್ನಂತ ಪದವೀವ ದಿನತ್ರಯವನ್ನು 1 ವೃದ್ಧಿಮಾತ್ರ ಅರುಣೋದಯದ ಕೆಳಗೆ [ಶುದ್ಧಿದಂ] ಘಳಿಗೆ ಸಾಕುಯೆಂದು 2 ಅತಿವೃದ್ಧಿ ಒಂದುಘಳಿಗೆಯ ಕೆಳಗೆ ವಿಂ ಶತಿ [ಫಣಫಲ] ದೊಳಗೆ [ಶುದ್ಧಿ] ಬೇಕೆಂದು 3 ತಿಥಿ ವೃದ್ಧಿಆದಾಗೆ ಹತ್ತು [ಫಣಪಲ] ತಿಥಿಕ್ಷಯದಲ್ಲಿ ಅದರೊಳು [ಶುದ್ಧಿ] ಬೇಕೆಂದು 4 ಇಂದು ದಶಮಿ ಶಾಖವ್ರತವ ಮಾಡಿ ನೀವು ಒಂದು ಬಾರಿ ಭೋಜನ ಮಾಡಿರೊಯೆಂದು 5 ತಾಂಬೂಲಚರ್ವಣ ಸಲ್ಲ ಸ್ತ್ರೀಸಂಗ ಹಂಬಲವನ್ನು ನೀವು ಬಿಡಿರಿಯೆಂದು 6 ನಾಳೆ ಏಕಾದಶೀ ಉಪವಾಸ ಜಾಗರ ಆಲಸ್ಯ ಮಾಡದೆ ಆಯತಾಕ್ಷಗೆಯೆಂದು 7 ಫಲಹಾರವು ಸಲ್ಲ ಭೋಜನವು ಸಲ್ಲದು ಜಲಪಾನ ಸಲ್ಲ ಮೆಲಸಲ್ಲದೆಂದು 8 ನಾಲ್ಕುಹೊತ್ತಿನ ಆಹಾರವ ಬಿಡುವುದು ಹದಿ ಜಾಗರ ಮಾಡಿರೊಯೆಂದು 9 ಪೇಳ ಅರ್ಧದ್ವಾದಶಿಬಂದಾಗ ನೀವೆಲ್ಲ ಒಲುಮೆಯಿಂದ ಪಾರಣೆಯ ಮಾಡಿರೊಯೆಂದು10 ಇಂತು ತಿಥಿತ್ರಯ ಮಾಡುವ ಜನರನ್ನು ಸಂತತ ಪೊರೆವ ಶ್ರೀಕಾಂತ ಹಯವದನ 11
--------------
ವಾದಿರಾಜ
ಏಕೆ ಕೆಡುವಿರಿ ಸಂಸಾರವು ಸ್ವಪ್ನವೆಂದು ತಿಳಿಯಬಾರದೇಏಕ ಬ್ರಹ್ಮಾಸ್ತ್ರ ದೇವತೆಯ ಹೊಂದಿ ಜನ್ಮ ಕಳೆಯಬಾರದೆ ಪ ಬಿಸಿಲೊಳು ಬಳಲುವರ ಕಂಡು ನೆರಳಿಗೆ ಕರೆಯಬಾರದೆತೃಷೆಯಿಂದ ನಾಲಗೆ ಒಣಗುತಲಿರೆ ನೀರನೆರೆಯಬಾರದೆಹಸಿದು ಬಂದವರಿಗೆ ಇದ್ದದ್ದರೊಳಗೆ ಅನ್ನವ ನೀಡಬಾರದೆಹುಸಿನುಡಿಯ ಬಿಟ್ಟು ಸತ್ಯವಾಕ್ಯವನೀಗ ಆಡಬಾರದೆ1 ಸತಿ ಸುತರು ಸ್ವಾರ್ಥ ಮರೆತು ಮುಕ್ತ ಮನದಿ ಧರ್ಮ ಮಾಡಬಾರದೆಹಿತದವರು ಒಬ್ಬರಾದರೂ ಹಿಂದೆ ಬರುವರೇ ನೀನೇ ನೋಡಬಾರದೆಮತ ಅಭಿಮಾನ ಮರೆತು ಆತ್ಮಾಭಿಮಾನವ ಮರೆಯಬಾರದೆ 2 ನಂಟರ ಮೇಲೆ ಚಿಂತೆಯಿದ್ದಂತೆ ಗುರುವಿನ ಮೇಲೆ ಇರಬಾರದೆಕುಂಠಿಣಿ ಮನೆಗೆ ಹೋಗುವಂತೆ ಮಠಕೆ ಹೋಗಬಾರದೆಒಂಟೆಯಂದದ ಮೋರೆಯನೀಗ ಹಿರಿಯರ ಕಂಡು ತಗ್ಗಿಸಬಾರದೆ 3 ಸಾಧುಗಳು ಕಾಣೆ ಭಕ್ತಿಯಲೆದ್ದು ಚರಣಕೆ ಎರಗಬಾರದೇವ್ಯರ್ಥವಾದದ ಮಾತನು ಬಿಟ್ಟು ಸುಮ್ಮನೆ ತಾನಿರಬಾರದೆಕ್ರೋಧದ ಬೇರನು ಮೊಳಕೆಯಸಹಿತ ಕೀಳಬಾರದೆಮಾರ್ಗದಿ ಕಲ್ಲುಮುಳ್ಳುಗಳಿರೆ ಕಡೆಗೆ ತೆಗೆದೆಸೆಯಬಾರದೆ4 ನಾನಾರು ಎಂದು ವೇದಾಂತ ವಾಕ್ಯದಲಿ ನಿನ್ನ ಅರಿಯಬಾರದೆವಾದವ ಬಿಟ್ಟು ಚಿದಾನಂದನ ಚರಣದಿ ಹೊರಳಬಾರದೆಮೇದಿನಿ ಪೂರ್ಣ ಸರ್ವಬ್ರಹ್ಮವೆಂದು ತಾನು ಅರಿಯಬಾರದೆಭೇದಾ ಭೇದಕೆ ಹೊರಗಾದ ಬಗಳೆಯ ಕೂಡಬಾರದೆ 5
--------------
ಚಿದಾನಂದ ಅವಧೂತರು
ಏಕೆ ಮರೆದಿದ್ದೆನಯ್ಯಾ ಎನ್ನೊಳು ನಾ ಗೋಪಾಲಶ್ರೀಕಾಂತ ನಿನ್ನ ಪಾದದ ಚಿಂತೆಯ ಬಿಟ್ಟಜ್ಞನಾಗಿ ಪಕಾಯವೆ ಸತ್ಯವಿದೆಂದು ಕಾಣದೆ ನಾನಿಲ್ಲಿ ಬಂದುಮಾಯೆಗೊಳಗಾಗಿ ನಿಂದು ಮತ್ತರ ಸಂಗದಿನೊಂದುಜಾಯೆ ಸುತರ್ಗತಿಯೆಂದು ಧ್ಯಾನಿಸಿ ದುಃಖದಿನೊಂದುಬಾಯ ಬಡುಕರೊಳ್ನಿಂದು ಬನ್ನಬಟ್ಟುಳಿಸೆಂದು 1ಆಶೆಗಳಿಗೊಳಗಾಗಿ ಆನಂದಮಾರ್ಗವ ನೀಗಿವಾಸನೆಗಳಿಂದ ಪೋಗಿ ವಾದಿಸುತಲಿ ಚೆನ್ನಾಗಿಮೋಸಹೋಗಿ ಮುಖಬಾಗಿ ಘಾಸಿಯಾಗಿ ಗುಣಪೋಗಿಕಾಸು ವೀಸಾ ಧಾನ್ಯಕಾಗಿ ದಾಸನಾಗಿ ಪರರಿಗೆ 2ಎಲ್ಲರೊಳುವಾದಗಳವಾಡಿ ಬಲ್ಲವನಂದದಿ ಕಾಡಿಖುಲ್ಲರಾ ಮಾರ್ಗವ ಕೂಡಿ ಕೂಳಿಲ್ಲದಿಲ್ಲಿಗೆ ಬಾಡಿತಲ್ಲಣದೊಳಗೋಲಾಡಿ ತಬ್ಬಿಬ್ಬೊ ಕರ್ಮವ ಮಾಡಿಕಲ್ಲೆದೆಯನನೆನ್ನನು ಕಾಯಬೇಕು ಗೋಪಾಲಾರ್ಯ 3
--------------
ಗೋಪಾಲಾರ್ಯರು
ಏತಕೆ ಒಣಭ್ರಾಂತಿ ತಿಳಿಯದು ಮೂರುದಿನದ ಸಂತಿ ನೀತಿಗೆಟ್ಟು ಸತಿಮೋಹದಿ ಕುಳಿತೆಮದೂತರೆಳೆಯುವಾಗೇನಂತಿ ಪ ಬರುವಾಗೊರ್ವಬಂದಿ ಬರುತಲೆ ಮಂದಿ ಮಕ್ಕಳೆಂದಿ ಇರು ಇರುತೆಲ್ಲ ನನ್ನದೆಂದಿ ಮರೆವಿನ ಆಲಯದೊಳು ನಿಂದಿ ಕರುಣವಿಲ್ಲದೆತುಸು ಹೆಡತಲೆಮೃತ್ಯು ಮುರಿದು ತಿನ್ನುವಾಗ್ಯಾರಿಲ್ಲ ಹಿಂದೆ 1 ತನುಜನರು ಇವರು ಧನಕನಕಿರುವತನಕ ಹಿತರು ಜನಕಜನನಿಯರು ಕೊನೆಗೆ ಸಂಗಡ ಬರರ್ಯಾರು ಕನಿಕರವಿಲ್ಲದೆ ಕಾಲದೂತರು ಘನಬಾಧೆಪಡಿಸಲು ಬಿಡಿಸರೋರ್ವರು 2 ಭೂಮಿ ಸೀಮೆಯೆಲ್ಲ ಈ ಮಹರಾಜ್ಯ ಭಂಡಾರ ಸುಳ್ಳು ಪಾಮರ ಸಂಸಾರ ಕಾಮಿಸಿ ಕೆಡಬೇಡೇಲೆ ಮಳ್ಳ ಕಾಮಜನಕ ನಮ್ಮ ಸ್ವಾಮಿ ಶ್ರೀರಾಮನ ನಾಮಭಜಿಸಿ ಭವಗೆಲಿದು ನೀ ಬಾಳೋ3
--------------
ರಾಮದಾಸರು
ಏತಕೆ ನೀ ಚಿಂತಿಸುವೆ ಹೇಡಿ ಜೀವವೇ ಪ ವೀತಮೋಹರಾಗನಾಗಿ ವಿಧಿಪಿತ ದಾತತಾನೆಂದು ತಿಳಿಯಲು ಹೃತ್ತಾಪನಾಶನಾ ಅ.ಪ ಹೊನ್ನು ಹೆಣ್ಣು ಮಣ್ಣು ಮೂರು ನಂಬಬ್ಯಾಡಲೊ ನಿನ್ನೊಳಿರುವ ಮೂರ್ತಿಯನ್ನು ಅರಿತು ಬಾಳೆಲೊ 1 ವಂದಿಸುತ ಸಜ್ಜನರ ಕಂಡರಾನಂದ ಪೊಂದುತ ಸಂದೇಹಗಳೆಲ್ಲ ತೊರೆದು ಸತತ ನಲಿಯುತ 2 ಆತ್ಮವತ್ ಸರ್ವಭೂತನೆಂಬೊ ವಚನವು ಆತ್ಮನಲ್ಲಿ ಸಮರ್ಪಿಸಿದರೆ ಪಡೆವೆ ಸೌಖ್ಯವು 3 ಸಾಮಜೇಂದ್ರ ವರದ ಶ್ರೀ ಗುರುರಾಮವಿಠಲನ ಪ್ರೇಮದಿಂ ನಿಷ್ಕಾಮನಾಗಿ ಸೇವಿಸುನುದಿನ 4
--------------
ಗುರುರಾಮವಿಠಲ