ಒಟ್ಟು 1709 ಕಡೆಗಳಲ್ಲಿ , 104 ದಾಸರು , 1348 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದಿಪೆ ಹರಿಹರನೇ | ನಿನಗೆ ನಾ ವೃಂದಾರಕನುತನೇ ಪ. ಬಂದು ಈ ಕ್ಷೇತ್ರದಿ ನಿಂದು ಸದ್ಭಕ್ತರ ಮೂರ್ತಿ ಅ.ಪ. ಚತುರ ಹಸ್ತದಿಂದಾ | ಶೋಭಿಸೆ ಅತಿ ಕೌತುಕದಿಂದಾ ಪಾದ ಕಮಲಜನ ತತಿಗೆ ತೋರದಂತೆ ಕ್ಷಿತಿಯಲಡಗಿದೇ 1 ಸೋಮಶೇಖರವಂದ್ಯಾ | ಆರ್ಧದ ಲಾಮಹ ಹರನಿಂದಾ ಪ್ರೇಮದಿ ಕೂಡಿಕೊಂಡೀ ಮಹಿ ಜನರಿಗೆ ನೀಮೋಹಕ ತೋರುವ ಜಗದ್ವಂದ್ಯಾ 2 ಪಾಪಿಗುಹನವರವಾ| ಕೆಡಿಸಲು ರೂಪಧರಿಸಿ ತಾಮಸರಿಗಂಧಮತಮ ಕೂಪದಿ ಕೆಡಹುವೆ ಶ್ರೀ ಮೋಹಿತ 3 ಅರ್ಧಹರನ ರೂಪಾ| ಕೃತಿಯಲಿ ಶುದ್ಧ ವಿಷ್ಣು ರೂಪಾ ಮುದ್ದು ಸುರಿವ ಭವ್ಯಾಂಗ ಸ್ವರೂಪ ಉದ್ಧರಿಸೆನ್ನನು ಶುದ್ಧ ಬುದ್ಧಿಮತಿಯನಿತ್ತು 4 ಶಂಖಚಕ್ರ ಅಭಯಾ| ತ್ರಿಶೂಲವ ಬಿಂಕದಿ ಧರಿಸಿದೆಯಾ ಪಂಕಹೋದ್ಭವೆ ಪಾರ್ವತಿಯ ಉಭ ಯಾಂಕದಲ್ಲಿ ಪೊಂದಿಹೆ ಶುಭಕಾಯಾ 5 ಅರ್ಧಶಿರದಿ ಮಕುಟಾ| ಆರ್ಧದಿ ಶುದ್ಧಗಂಗೆ ತ್ರಿಜಟಾ ಅರ್ಧಚಂದ್ರ ಶೋಭಿಸುತಿದೆ ಜಗತ್ತಿಗೆ ಅದ್ಭುತ ಅಚ್ಚರಿ ರೂಪಧಾರಕ 6 ಪಣೆಯ ತಿಲಕ ಢಾಳಾ | ಕಂಠಾಭ ರಣಗಳು ಪೂಮಾಲಾ ಮಿನುಗುವವಲ್ಲಿ ಪೀತಾಂಬರನುಟ್ಟಿಹ ಗುಣಗಣ ಪೂರ್ಣನೆ ಹನುಮನಯ್ಯ ಹರಿ7 ಮಾಯಾ | ಕವಿಸದೆ ಇನ್ನು ಕಾಯೊ ಜೀಯಾ ಘನ್ನ ಭಕ್ತಿ ಸುಜ್ಞಾನ ವೈರಾಗ್ಯವ ಮನ್ನಿಸಿ ಕರುಣಿಸಿ ನಿನ್ನ ಪದವಿ ಕೊಡು 8 ಹರನೊಳು ಹರ ಶಬ್ದಾ | ವಾಚ್ಯನೆ ಸಿರಿವರ ನಿರವದ್ಯಾ ಸರ್ವ ಶಬ್ದ ಸುರವಾಚ್ಯ ಈ ಪರಿಯೊಳು ಹರಿಹರ ಕ್ಷೇತ್ರದಿ ವರಗೃಹ ಮಾಡಿದಿ 9 ತುಂಗಭದ್ರ ತೀರಾ | ವಾಸನೆ ರಂಗ ಪಾಪ ದೂರಾ ಮಂಗಳ ಗೋಪಾಲಕೃಷ್ಣವಿಠಲ ಭವಹಿಂಗಿಸಿ ಪೊರೆ ದುಸ್ಸಂಗ ಬಿಡಿಸಿ ಹರಿ 10
--------------
ಅಂಬಾಬಾಯಿ
ವರದೇಶ ವಿಠಲರಾಯಾ ಗುರು ವರದೇಂದ್ರರ ಪ್ರೀಯಾ ಮರಿಯದೆ ನೀಯನ್ನ ಕೈಯ್ಯಾ ಪಿಡಿದು ಪೊರೆಯಬೇಕು ಜೀಯಾ ಪ ಒಂದು ದಿನ ನಿನ್ನ ಮನದಲಿ ನೊಂದು ನುಡಿದ ಯನ್ನ ಮಂದನ್ನ ಮಾಡಿದ್ಯೊ ಇನ್ನ ನಿನ್ನ ಸುಂದರ ಮೂರುತಿ ತೋರೆಲೋಘನ್ನ 1 ಏನು ತಿಳಿಯೆ ಮೂಢ ತನದಿ ನಾ ಹೀನಭವದಿಗಾಢ ಮಾನವ ಜನರೊಳಕ್ರೀಡಾ - ಪರನಾ ಜ್ಞಾನಕಳಿಯೊ ಪ್ರೌಢ 2 ಹರಿಪರಜನಸಂಗ ಮಾಡದೆ ನರರೊಳಗಾದೆನು ಮಂಗ ಸುರವರ ಸಹಿತಾಂತ ರಂಗ - ದೊಳು ವರದೇಶ ವಿಠ್ಠಲರಂಗ 3
--------------
ವರದೇಶವಿಠಲ
ವಾಮನ ವಿಠಲರ ಹಾಡು ಶ್ರೀಶ ಪ್ರಾಣೇಶರಾಯಾ | ದಯದಿ ಎಮ್ಮ |ಪೋಷಿಸು ಶುಭಕಾಯ್ಯಾ ||ಭೂಸುರಾಗ್ರಣಿ ಗುರುಪ್ರಾಣೇಶರಾಯರಿಂದ ಭಾಸುರ ಮಂತ್ರೋಪದೇಶವಕೊಂಡೆ ಪ ಗುರುವೆ ನಿಮ್ಮ ಪಾದಾಯುಗಾ |ಸರಸಿರುಹ ನೆರೆನಂಬಿದೆ ಭಾಗ್ಯ ||ಕರೆಕರಿ ಸಂಸ್ಕøತಿ ಶರಧಿಯೊಳಗೆ ಬಿದ್ದು |ಹೊರಳುವೆ ವೇಗದಿ ಕರಪಿಡಿದುದ್ದರಿಸೊ 1 ಮಂಗಳ ಮಹಿಮ ಸಿರಿವರನವೊಲಿಮಿ |ಸಂಗ ಪಡೆದ ಧೀರರು |ರಂಗವೊಲಿದ ಆರ್ಯಂಘ್ರಿಯ ಕಮಲತೆಭೃಂಗನಂತಿರುಪ್ಪ ಲಿಂಗಸುಗೂರವಾಸ 2 ಸುತ್ರಾಮ ವಂದಿತ ಸು |ನಾಮ ಸುಧೆಯಿತ್ತು ಪ್ರೇಮದಿ ಸಲಹೆಮ್ಮ 3
--------------
ಶ್ರೀಶಪ್ರಾಣೇಶವಿಠಲರು
ವಾಯುವಂದಿತ ವಿಠಲ | ಪೊರೆಯ ಬೇಕಿವನಾ ಪ ಪಾದ | ಭಜಕನಾದವನಾಅ.ಪ. ಗುರುಹಿರಿಯರಾ ಸೇವೆ | ನಿರುತ ಗೈಯುವ ಮನವಕರುಣಿಸುವುದಿವ ನೀಗೆ | ಮರುತಾಂತರಾತ್ಮಗರುಡ ಗಮನನೆ ದೇವ | ಗರ್ವಗಳ ಪರಿಹರಿಸಿಸರ್ವಾಂತರಾತ್ಮಕನೆ | ಕಾಪಾಡೊ ಇವನಾ 1 ಹರಿಯೆ ಪರನೆಂಬಂಥ | ವರಸುಜ್ಞಾನವ ಕೊಟ್ಟುತರತಮಂಗಳು ಅಂತೆ | ಎರಡು ಮೂರುರ್ಭೇದಾಪರಮ ಸತ್ಯವು ಎಂಬ | ವರಜ್ಞಾನ ಪಾಲಿಸುತಪರಿಪರಿಯ ಭವಭಂದ | ಪರಿಹರಿಸೊ ಹರಿಯೇ 2 ಕಾಕು ಸಂಗಮಕೆಡಿಸೊಪ್ರಾಕ್ಕುಕರ್ಮವ ಕಳೆಯೊ | ಶ್ರೀ ಕರಾರ್ಚಿತನೆ 3 ದುರಿತವನ ಕುಠಾರ | ಶರಣಜನ ವತ್ಸಲನೆದುರಿತಾಳಿ ದೂರೈಸಿ | ಪೊರೆಯೊ ಹರಿಯೇಕರುಣ ನಿಧಿ ನೀನೆಂದು | ಮರೆಹೊಕ್ಕೆ ತವಪಾದಚರಣ ದಾಸನ ಪೊರೆಯೊ | ಹರಿಯೆ ಪರಮಾಪ್ತ 4 ಶ್ರೀವರನೆ ಸರ್ವೇಶ | ಭಾವದಲಿ ಮೈದೋರಿಭಾವುಕನ ಪೊರೆ ಎಂದು | ದೇವ ಪ್ರಾರ್ಥಿಸುವೇಈ ವಿಧದ ಬಿನ್ನಪವ | ನೀವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾರಿಜನಯನಗೆ ಜಯ ಮಂಗಳ ಶುಭ ಮಂಗಳಾ ಪ ನೀರಧಿಶಯನಗೆ ಜಯ ಮಂಗಳ ಶುಭ ಮಂಗಳಂ ಅ.ಪ ಭವ ಭಯ ಹರನಿಗೆ ಪವನಜನಮಿತಗೆ ಭುವನಸುಂದರನಿಗೆ ಜಯಮಂಗಳಂ ಕುವಲಯಶ್ಯಾಮಗೆ ನವಮಣಿಮಾಲಗೆ ದಿವಿಜಸಂಸೇವ್ಯಗೆ ಶುಭಮಂಗಳಂ1 ಕರುಣಾಜಲಧಿಗೆ ಶರಣರ ಪೊರೆವಗೆ ನರಹರಿರೂಪಗೆ ಜಯ ಮಂಗಳಂ ಪುರುಷೋತ್ತಮನಿಗೆ ದುರಿತಸಂಹಾರಗೆ ಶುಭ ಮಂಗಳಂ 2 ಗಂಗೆಯ ಜನಕಗೆ ಮಂಗಳರೂಪಗೆ ಸಂಗರಧೀರಗೆ ಶುಭಮಂಗಳಂ ತುಂಗವಿಕ್ರಮನಿಗೆ ಇಂಗಿತವರಿವಗೆ ಮಾಂಗಿರಿಯರಸಗೆ ಜಯ ಮಂಗಳಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಾರಿಜಾಕ್ಷನೆ ನಿನ್ನ ಚಾರುಚರಣದ ಸ್ಮರಣೆ ಬಾರಿ ಬಾರಿಗೆ ಮಾಳ್ಪ ಭಾಗ್ಯವೀಯೊ ಸಾರಸಾಕ್ಷನೆ ಸಂಸಾರ ದು:ಖದಿ ಎನ್ನ ಸೇರದಂದದಿ ಮಾಡೋ ಸರ್ವವಂದಿತ ಕೃಷ್ಣ 1 ಅಂಬುಜಾಕ್ಷನೆ ನಿನ್ನ ನಂಬಿದೆನೊ ಈ ಭವದ ಬಂಧ ತಪ್ಪಿಸಿ ಕಾಯೊ ಇಂದಿರೇಶ ಹಿಂದು ಮುಂದ್ಯಾರಿಲ್ಲವೆಂದು ನಂಬಿದೆ ನಿನ್ನ ಛಂದದಿಂದ ಸಲಹೊ ಮಹೇಂದ್ರತೀರ ನಿವಾಸ 2 ಸುಂದರಾಂಗನೆ ದೇವ ವಂದಿಸುವೆ ತವಪಾದ ಧ್ವಂದ್ವ ಭಜಕರ ಸಂಗ ಬಂದುನೀಡೈ ಇಂದಿರಾರಮಣನೆ ನಂದಗೋಪನ ಕುವರ ಬಂದು ಭಕುತರ ಪೊರೆವ ಆನಂದ ಮೂರುತಿ ಕೃಷ್ಣ3 ಶರಣಜನರನು ಪೊರೆಯೆ ತ್ವರಿತದಲಿ ಬಂದು ಈ ಗಿರಿಯ ಮಧ್ಯದಿನಿಂದೆ ಮಧುಸೂದನ ಶರಣುಶರಣೆಂದು ನಿನ್ನಡಿಗೆರಗುವ ಜನರ ದುರಿತವೆಲ್ಲವ ಕಳೆದು ಪೊರೆವ ದಯಾನಿಧಿ ಕೃಷ್ಣ4 ಕನಕಗರ್ಭನ ಪಿತನೆ ಕಡುಲೋಭವನೆ ಬಿಟ್ಟು ದೃಢವಾದ ಅಭಯವನು ದಯಪಾಲಿಸೊ ಪೊಡವಿಗೊಡೆಯನೆ ದೇವ ಕಮಲನಾಭವಿಠ್ಠಲ ಬಿಡದೆ ನಿನ್ನನು ಭಜಿಪ ಧೃಢ ಮನವ ನೀಡೈ5
--------------
ನಿಡಗುರುಕಿ ಜೀವೂಬಾಯಿ
ವಾರಿಧಿ ಸುತಿಗೆ ಸಾರ ಸಂಗೀತದಿಂದಲಿ ಪ ಸಕಲ ವಸ್ತುವೆನಿಸಿ ಮುಕುತಿದಾಯಕ ಹರಿಗೆ ಭಕುತಿಯಿಂದಲಿ ಬಿಡದೆ | ಸದಾಪೂಜಿಪ ಸಿರಿಗೆ ವಿಖನ ಸಾದ್ಯಮರ ಗಣಕೆ | ಸುಖ ಕೊಡುವಳಿಗೆ ಮಕರಧ್ವಜನ ಮಾಲೆಯಾದ ರುಕುಮನನುಜಗೆ 1 ಚಾರುಶ್ರಾವಣ ಭಾರ್ಗವ ಶುಭವಾರದ ದಿನದಿ ಭೂರಿ ಭಕ್ತಿ ಭರಿತಳಾಗಿ ನಮಿಸುತ ಮನದಿ ನೀ ಆರಾಧಿಸೆ ಘೋಡಶ ಉಪಚಾರದಿ ಮುದದಿ ಕೋರಿಕೆಯನು ಗರೆಯುವ ವರಲಕ್ಷ್ಮಿಗೆ ಜಯದಿ2 ತಾಮರಸ ಸುಧಾಮಳಾದ ಸೋಮವದನಿಗೆ ಗೋಮಿನಿ ಸೌದಾಮಿನಿ ಸಮ ಕೋಮಲಾಂಗಿಗೆ ಶಾಮಸುಂದರ ಸ್ವಾಮಿಯ ಸುಪ್ರೇಮದ ಸತಿಗೆ ಕಾಮಿತ ಫಲದಾಯಿನಿ ಶ್ರೀ ಭೂಮಿಜೆ ರಮಗೆ3
--------------
ಶಾಮಸುಂದರ ವಿಠಲ
ವಾಸವ ಪ್ರಿಯಾ ಪ ವ್ರಜ ನಾನಾ ಬಗೆಯಲಿ || ಭಜನೆ ಮಾಡುತ ಬಲು | ನಿಜಮನದಲಿ ನೋಡೇ 1 ಛತ್ರ ಚಾಮರ ಜನರು | ಸ್ತೋತ್ರ ಸಂಗೀತನಾದ ಧಾತ್ರಿ ತುಂಬಿರಲು ಸ | ರ್ವತ್ರ ವ್ಯಾಪಕ ದೇವಾ 2 ಗಂಧರ್ವಗಣನಲು | ವಿಂದ ಪಡಲು ಭೇರಿ || ದುಂದುಭಿವಾದ್ಯ ಆ | ನಂದ ನುಡಿವುತಿರೆ 3 ಇಕ್ಕಿದ ವರಕಲ್ಪ | ದಿಕ್ಕು ಬೆಳಗುತಿರೆ | ಬೊಕ್ಕ ದೈವವೆ ಶುದ್ಧ | ಭಕ್ತರ ಒಡಗೂಡಿ 4 ಇಷ್ಟ ಮೂರುತಿ ಮನೋ | ಭೀಷ್ಟ ಪಾಲಿಪ ವಿಜಯ || ವಿಠ್ಠಲ ವೆಂಕಟೇಶ | ಬೆಟ್ಟದೊಡೆಯೆಂದು 5
--------------
ವಿಜಯದಾಸ
ವಾಸವನಾಮಕ ದಾಸರ ನೆರೆನಂಬೂ | ಜ್ಞಾನ ಭಕುತಿ ತುಂಬೂಕಾಸುಗಳಿಸಿ ಕೋಟಿಶ್ವರ ನೆನಿಸಿದನಾ | ಸರ್ವವು ಚಲ್ಲಿದನಾ ಅ.ಪ. ಆಶೆಯೆಂದೆನಿಸುವ | ಪೈಶಾಚವ ಕಳೆಯೇ | ದ್ವಿಜಸೋಗಿನಲ್ಹರಿಯೇಕೂಸಿಗೆ ಬ್ರಹ್ಮಚಾರಿ | ಆಶ್ರಮಕೇ ಬೇಡೇ | ಮತ್ತೆ ಕೊಂಡಾಡೇಭೂಸುರ ಬಹುಪರಿ | ಕ್ಲೇಶನಟಿಸಿ ಪೇಳೇ | ಮತ್ತು ಅವನಕೇಳೇಲೇಸುಕಾಸು ಕೊಡ | ದಾಶ್ಮ ಹೃದಯ ವಿವರಾ | ತೆರಳಿದ ದ್ವಿಜವರ 1 ಅತ್ತಿತ್ತಲು ತಿರುಗುತ | ಮತ್ತೆ ಮನೆಗೆ ಬಂದಾ ತಾನಲ್ಲೆ ನಿಂದಹಿತ್ತಲ ಬಾಗಿಲೊಳ್ | ನಿಂತ ಸತಿಯನಾಸಾ ನೋಡಿದ ತಾ ಶ್ರೀಶಾಚಿತ್ತವ ಪ್ರೇರಿಸಿ | ಮತ್ತೆ ಬೇಡಿತಂದಾ | ಮೂಗುತಿ ಬಲು ಛಂದಾವಿತ್ತತಾರೆನುತವ | ನ್ಹತ್ತಿರಿತ್ತು ಪೋದಾ | ಮತ್ತೆ ಬರಧೋದಾ 2 ಸತಿ ಗರ | ಬಟ್ಟಲ ಕುದಿಪೋಗೇ | ಮೂಗುತಿ ಬಿತ್ತಾಗೇ 3 ಸುಂಡಿಪೋಗೆ ತನ | ದಿಂಡು ವ್ಯಸನಕಾಗೀ | ತನಪಾಪಕೆ ಮರುಗೀಕಂಡು ಈಸೋಜಿಗ | ಕೊಂಡಾಡಿದ ಸತಿಯ | ಆದನು ಹೊಸಪರಿಯ ಭಂಡತನದ ಭಂಡಿ | ಭಂಡಿ ದ್ರವ್ಯವೆಲ್ಲ | ದಾನ ಮಾಡ್ದನಲ್ಲಿ ಗಂಡುಗಲಿಯು ಆಗಿ | ಪುಂಡರಿಕಾಕ್ಷಪದಾ | ಬಂಡುಣಿ ತಾನಾದಾ 4 ಪಾದ ಸಿರಿ ಪಾದ ಭಜಿಸೇ | ಇಂದ್ರ ದಾಸನೆನಿಸೇ ಸಂಗ ರಹಿತರಿಗೆ | ಮಂಗಳ ಸಂದೇಶ | ಇತ್ತು ತಾನುಪದೇಶಾ ಅಂಗಜ ಪಿತ ಗುರು | ಗೋವಿಂದ ವಿಠ್ಠಲನಾ ಚರಿತೆಗಳ್ ಬಿತ್ತಿದನಾ 5
--------------
ಗುರುಗೋವಿಂದವಿಠಲರು
ವಾಸುದೇವ ಬಲ್ಲಭಾಸುರಾಂಗ ಶ್ರೀವಾಸುಕಿಶಯನನಸಾಸಿರ ನಾಮವ ಲೇಸಾಗಿ ಪಠಿಸದೆ ಪ ಮುರ ಮುಷ್ಟಿಕ ವೈರಿಯನಿಷ್ಠೆಯಿಂದ ನಾ ದೃಷ್ಟಿಸಿ ನೋಡದೆ 1 ಕಾಯವು ಸ್ಥಿರವಲ್ಲ ಎನ್ನೊಳುಮಾಯೆ ತುಂಬಿತಲ್ಲಪ್ರಾಯಮದದಿ ಪರಸ್ತ್ರೀಯರ ಕೊಂಡಾಡಿಕಾಯಜಜನಕನ ಗಾಯನ ಮಾಡದೆ2 ಕಂಗಳಿಂದಲಿ ನೋಡೋ ದೇವ ನಿ -ನ್ನಂಗಸಂಗವ ನೀಡೋಮಂಗಳಮಹಿಮ ಶ್ರೀರಂಗವಿಠಲ ಮುಂ-ದಂಗಬಾರದಂತೆ ನೀ ದಯಮಾಡೋ 3
--------------
ಶ್ರೀಪಾದರಾಜರು
ವಿಘ್ನೇಶ - ವಿಘ್ನೇಶ ಪ ಭಗ್ನ ಗೈಸಿ ದು | ರ್ವಿಘ್ನಗಳನು ಹರಿಯಜ್ಞನಲ್ಲಿ ಮನ | ಲಗ್ನವ ಗೈವುದು ಅ.ಪ. ನಭಕಭಿಮಾನಿಯೆ | ಪ್ರಭುಹರಿ ಭಜನೆಗೆಶುಭ ಅವಕಾಶದ | ವೈಭವ ಪ್ರದನೇ 1 ಆದಿದೇವ ನಿನ | ಗಾದಿ ಪೂಜೆಯನುಮೋದದಿ ವಿಧಿಸುತ | ಸಾಧು ಜನೋದ್ಧಾರ 2 ಕಂತು ಹರನ ಸುತ 3 ಸಂತತ ಸಂಗವ | ಸಂತತ ಕೊಡುತಲಿಪಂಥಾಬಿಧ ಹರಿ | ಚಿಂತೆಯಲಿರಿಸೋ 4 ವಿಶ್ವಂಭರ ಗುರು | ಗೋವಿಂದ ವಿಠಲನವಿಶ್ವರೂಪ ಬಹು | ವಿಶ್ವಾಸಾರ್ಚಕ 5
--------------
ಗುರುಗೋವಿಂದವಿಠಲರು
ವಿಜಯದಾಸರ ಭಜನೆ ಮಾಡಿರೊ |ವಿಜಯದಾಸರ ಭಜನೆ ಮಾಡಲುಅಜನ ಜನಕ ನಿಜನಿಗೊಲಿದುಕುಜನ ಸಂಗತಿ ತ್ಯಜನ ಮಾಡಿಸಿಸುಜನರ ಪಾದಾಂಬುಜದಲ್ಲಿಡುವ ಪ ಶುದ್ಧ ಮಂದರನ್ನ ಉದ್ಧಾರಾರ್ಥವಾಗಿಮಧ್ವರಾಯರ ಮತಾಬ್ಧಿಯೊಳು ಪುಟ್ಟಿಸಿದ್ಧಾಂತ ಸ್ಥಾಪಿಸಿ ಗೆದ್ದು ವಾದಿಗಳಹೆದ್ದೈವವೇ ಅನಿರುದ್ಧನು ಯೆಂದು ||ಪದ್ಧತಿಂದ ಪೇಳಿಸಿದಿ ವೈಷ್ಣವರನ್ನಶುದ್ಧಾತ್ಮರ ಮಾಳ್ಪ ಉದ್ಯೋಗದಿಂದಲಿಹದ್ದನ್ನೇರಿ ಬಪ್ಪ ಪದ್ದುಮನಾಭನ್ನಹೃದ್ದಯದೊಳಗಿಟ್ಟ ಸದ್ಗುರುರಾಯ 1 ಭೂಸುರಾಬ್ಧಿಗೆ ತಾರೇಶನಂತೊಪ್ಪುವಸಾಸಿರ ನಾಮದ ಶೇಷಗಿರಿ ಶ್ರೀ ನಿ-ವಾಸನ ಯಾತ್ರೆಯ ಲೇಸಾಗಿ ಮಾಡ್ಯೆತಿ ಸ- |ಹಾಸ ಸಂತೋಷದಿಂದಲೆ ||ವಾಸುದೇವನ ಮಾನಸದೊಳಿಟ್ಟು ದು-ರಾಶೆಯ ತೊರೆದು ಕ್ಲೇಶವ ಪಡದಲೆಮೀಸಲ ಪುಣ್ಯದ ರಾಶಿ ಘಳಿಸಿಕೇಶವನ ನಿಜ ದಾಸನೆಂದೆನಿಪ2 ಪಾದ ನಿತ್ಯ ಸಿರಿ ಮೋಹನ್ನ ವಿಠಲನೆಪರನೆಂದರುಹು ಮಾಡಿದ ಸುರ ತರುವಾದ 3
--------------
ಮೋಹನದಾಸರು
ವಿಜಯವಿಠಲರಾಯಾ | ನಂಘ್ರಿಯುಗ ಭಜಿಸುವ ವಿಜಯರಾಯನೆ ಜೀಯ ರಜದೂರ ತವಪದ ಭಜಕ ನಾನೆನಿಸಯ್ಯ ಋಜುರಾಜ ಪ್ರೀಯ ಕುಜನ ಸಂಗದಿ ಬೆರೆದು ಮನಹರಿ ಭಜನೆಗೊದಗದು ಎಷ್ಟು ಬೇಡಲು ದ್ವಿಜವರೇಣ್ಯನೆ ಎಮ್ಮ ಬಾಂಧವ ಸೃಜಿಸು ಶ್ರೀಧರನೊಲಿಮೆ ಶಕ್ತಿಯ 1 ಸೂನು ಎನಿಸಿದೆ ನಾನು ಕುಲಸ್ವಾಮಿ ಕೃಷ್ಣನ ಧ್ಯಾನ ಪಾಲಿಸು ಇನ್ನು ದಾನಿ ಸುರಧೇನು ಜ್ಞಾನ ಭಕ್ತಿ ಧ್ಯಾನಯೋಗದಿ ವೇಣುಗೋಪಾಲನ್ನ ಹೃದಯ ಪ್ರ ಧಾನ ನಾಡಿಯ ಮಧ್ಯ ಕುಣಿಸುವ ತ್ರಾಣ ತರಿಸು ತೀವ್ರ ಮಹಿಮನೆ 2 ಲೋಕನಾಥನ ಪ್ರೇಮ | ಭೋಗಿಸುವ ಯೋಗಿಯೆ ಸಾಕು ಸದ್ಗುಣಧಾಮ ಬಾಗಿದಿನೊ ನಿನ್ನ ಅಂಘ್ರಿಗೆ | ಶೋಕ ಸಲ್ಲದೊ ನೇಮ ಸ್ವೀಕರಿಸು ಎಮ್ಮ ಏಕ ಭಕ್ತಿಯ ಭಾಗ್ಯ ಪಾಲಿಸು ಶ್ರೀ ಕಳತ್ರನ ಸಂಗಮತ್ತನೆ ಅ- ನೇಕ ಭಕ್ತಗ್ಹರಿಯ ತೋರಿದೆ ನಾಕ ತರು ಕರುಣಾಳು ಗುರುವರ 3 ದಾಸ ವರ್ಗದ ದೊರೆಯೆ | ಲಜ್ಜೆಯಾಗುತಿದೆನ್ನ ದೋಷರಾಶಿಗಳೊರಿಯೆ ಹಸಗೆಟ್ಟು ಬಗೆ ಬಿನ್ನೈಸಲಾಗದೊ ಖರಿಯೆ ಬ್ಯಾಸರದ ಪೊರಿಯೆ ಕಾಸು ಬಾಳದ ಎನ್ನಕರಗಳ ಶ್ರೀಶ ಪಿಡಿವನು ಲೇಸು ಕರುಣದಿ ವಾಸುದೇವಗೆ ದಾಸ ಜನರೊಳು ಸೂಸಿ ಸುರಿವುದು ಸ್ನೇಹ ಸಂತತ 4 ದಾತರೊಳು ಸರಿದಾರೊ | ಹರಿದಾಸವರ್ಯನೆ ಆತುಮಪ್ರದ ತೋರೋ ನಿನ್ನಂಥ ದಾತರ ನಾ ತಿಳಿಯ ದಯ ಬೀರೊ ಆರ್ತಿಯನು ಹೀರೋ ಖ್ಯಾತ ನಿನ್ನಯ ಮಾತು ಒಮ್ಮೆಗು ಮಾತರಿಶ್ವನನಾಥ ಮೀರನು ಆತುರದಿ ನಿನ್ನಂಘ್ರಿಗೆರಗುವೆ ಭೂತ ಪಾಲಿಸು ಹರಿಯ ಒಲುಮೆಗೆ 5 ಸುರತರು ಚಿಂತಾಮಣಿಗಳಂದದಿ ಮಹ ವರಗಳೀವ ಶ್ರೀಮಂತ ಭಾರತೀಶನ ಶ್ರೀ ಚರಣ ಬಿಡದಿಹ ಸ್ವಾಂತ ಪರಮ ನಿಶ್ಚಿಂತ ಚರಣ ಕಮಲದಿ ಮೊರೆಯನಿಟ್ಟನ ಕರದ ಶಿಶುಗಳಂತೆ ಪಾಲಿಸಿ ಮರುತ ಮಂದಿರ ಜಯೇಶವಿಠಲನ ಭರದಿ ತೋರಿದ ಕರುಣ ಸಾಗರ 6
--------------
ಜಯೇಶವಿಠಲ
ವಿಠ್ಠಲ ವಿಮಲಶೀಲ ಬಾಲಗೋಪಾಲ ದಿಟ್ಟ ಮೂರುತಿ ಶ್ರೀಲೋಲ ಪ ಗೊಟ್ಟು ಸಲಹೊ ಜಗಜಟ್ಟಿ ಪಂಢರಿರಾಯ ಅಪ ಯದುವಂಶೋದ್ಭವ ಕೇಶವ ಹೇ ಏಕಮೇವ ಮಧುವೈರಿ ಮಹಾವೈಭವ ಸದಮರಾನಂದ ಸ್ವಭಾವ ಮತ್ಕುಲ ದೈವ ಇನ ಬಾಂಧವ ವಿಧಿನದಿಪಿತ ನಾರದ ಮುನಿ ಸನ್ನುತ ವೈರಿ ಸದಮಲಗಾತುರ ಪದೆ ಪದೆಗೆ ಸಂಪದವಿಯ ಬಯಸುವ ಮೃದು ಮನದೊಳು ನಿಲ್ಲು ಪದುಮಿನಿ ವಲ್ಲಭ1 ನಿತ್ಯ ಪ್ರಭಾವ ಪತಿತಪಾವನ ಸುರ ಜೀವ ಅತಿಶಯ ಲೀಲಾಮಾನವ ನರಕಂಠೀರವ ಚ್ಯುತಿ ಪೂರಾನಾದಿ ಗುರುಗೋವ ರತಿಪತಿಪಿತ ಶತಕ್ರತು ಸುತ ಸಾರಥಿ ಪಥ ಹಿತವಾಗಿ ತೋರೊ ಮಾ- ರುತ ಮತ ಶ್ರಿತಜನ ಚತುರರ ಸತತ ಸಂ - ದಿತಿಸುತ ಮಥನ 2 ಶರಣು ಶರಣು ಸರ್ವೇಶ ಇಟ್ಟಿಗೆವಾಸ ದುರುಳರ ಸಂಗ ವಿನಾಶ ಪರಮ ಪುರುಷ ವಿಲಾಸ ನಿರವಕಾಶ ವರಪ್ರದ ಪೂರ್ಣಪ್ರಕಾಶ ಮೊರೆಹೊಕ್ಕೆನೊ ನಿನ್ನ ಚರಣ ಸರಸಿಜವ ಹರಿಯನ್ನೊಳಗಿಪ್ಪ ಮರಪೆ ಕಳೆದು ನಿನ್ನ ಸ್ಮರಣೆ ಮಾಡುವಂತೆ ಕರುಣದಿಂದಲಿ ನೋಡುಧೊರೆ ವಿಜಯವಿಠ್ಠಲ ಪುರಂದರಪ್ರಿಯ 3
--------------
ವಿಜಯದಾಸ
ವಿದ್ಯಾ ಪ್ರಸನ್ನ ಶ್ರೀ ಯತಿಕುಲ ಗುರುರನ್ನ ಸದ್ವ್ಯೆಷ್ಣವ ಘನ್ನ ಪ. ಸಿದ್ಧಸಾಧನ ಮಧ್ವಮುನಿಯ ಚಿನ್ಹ ಧರಿಸಿದ ಬಹುಮಾನ್ಯ ಅ.ಪ. ವಿದ್ಯಾರತ್ನಾಕರ ಯತಿ ಕರಕಮಲದಿ ಜಾತ ಮುದ್ದು ಕುವರನೀತ ವಿದ್ಯಾವಾರಿಧಿ ಮುನಿಕರ ಸಂಜಾತ ಯತಿವರನಾದಾತ ಮಧ್ವಗ್ರಂಥಗಳ ಮನನ ಮಾಡಿದಾತ ಬಹುಮತಿಯುತನೀತ ಬುದ್ಧಿಕುಶಲದಿ ಬುಧರನು ಪೊರೆವಾತ ಸುಜನರ ಮನದಾತ 1 ವ್ಯಾಸತೀರ್ಥನ ಆಸ್ಥಾನಕೊಡೆಯರಾಗಿ ದುರ್ಗುಣಗಳ ನೀಗಿ ಆಸೆಯಿಂದ ಶ್ರೀ ಕೃಷ್ಣನ ಚನ್ನಾಗಿ ಪೂಜಿಸುತಲಿ ಬಾಗಿ ದಾಸತ್ವದ ಲಕ್ಷಣ ತಿಳಿದವರಾಗಿ ವಿಷಯ ಸಂಗ ತ್ಯಾಗಿ ಪಸನ್ನ ಕೃಷ್ಣನೆಂಬಂಕಿತವನೆ ಇಟ್ಟು ಪದರಚಿಸಿದ ಗುಟ್ಟು 2 `ವಿ' ಎನ್ನಲು ನರವಿಷಯ ಸಂಗದೂರ `ಧ್ಯಾ' ಎನೆ ಧ್ಯಾನವರ `ಪ್ರ' ಎನಲು ಸದ್ಗುಣನು `ನ್ನ' ಎನ್ನಲು ಶ್ರೀ ನರಹರಿ ತಾನೊಲಿವ `ತೀ' ಎನೆ ತೀರ್ವ ಭವ `ರ್ಥಾ' ಎನ್ನಲು ಪುರುಷಾರ್ಥ ಪಡೆದ ಭೋಗಿ `ರು' ಎನೆ ರುಜುಮಾರ್ಗಿ 3 ವಿದ್ಯಾಪ್ರಸನ್ನತೀರ್ಥರು ಎಂದೆನ್ನುತಲಿ ಸ್ಮರಿಪರ ಸಲಹುತಲಿ ಮುದ್ದುಕೃಷ್ಣ ಪಟ್ಟಾಭಿರಾಮನಂಘ್ರಿ ಸಚ್ಚರಿತ ಪ್ರಸಂಗಿ ಸದ್ವಿದ್ಯಗಳಿಗೆ ಗರ್ವರಹಿತ ಭಾವ ಬಹು ಸರಳ ಸ್ವಭಾವ ಹೃದ್ವನಜಸÀ್ಥನ ಕಾಂಬ ಮುನಿವರೇಣ್ಯ ಸದ್ಭಕ್ತ ಶರಣ್ಯ 4 ಮಂದ ಮತಿಯು ನಾನು ಕ್ಷಮಿಸು ತಂದೆ ನೀನು ಕುಂದನೆಣಿಸದೆ ಗುಣಗ್ರಹಿಸುತಲಿನ್ನು ಶ್ರೀ ಹರಿ ನುಡಿಸಿದನು ತಂದೆ ಮುದ್ದುಮೋಹನರ ಕೃಪೆಯಿಂದ ರಚಿತ ಪದದಂದ ಮಂದರಧರ ಗೋಪಾಲಕೃಷ್ಣವಿಠ್ಠಲ ಗರ್ಪಿತ ಗುಣಮಾಲ 5
--------------
ಅಂಬಾಬಾಯಿ