ಒಟ್ಟು 18764 ಕಡೆಗಳಲ್ಲಿ , 134 ದಾಸರು , 7642 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಜಲೆನ್ನಲಿಬಹುದೆ ಮನುಜರಿದನ ಅಘವನ ಧ-ನಂಜಯ ಸುವೈಕುಂಠದಾಸರ ವದನದ ಕಣವ ಪ. ವದನವೆಂಬಾಕಾಶದಲಿ ಭಕುತಿ ಜೀಮೂತಪದಮನಾಭನ ನಾಮಾಮೃತದÀ ಕಡಲಮುದದಿಂದ ತಕ್ಕೊಂಡು ಎನ್ನಂಗ ದೇಹದಲಿಹದನರಿತು ಸುರಿದು ಮುಕ್ತಿಫಲವ ಬೆಳೆಸಿದುದನು 1 ಹೃದಯಕಾರಾಗೃಹದಿ ಶ್ರೀಹರಿಯನಾವಾಗಹುದುಗಿ ಅಗಲಿಸದ ಕಾರಣದೊಳುಂಗುಟದಿಉದಿಸಿ ಗಂಗೆಯು ಪೋಪೆಡೆಯು ಅಳಿದರೆ ಇವರವದನದಲಿ ಪೊರಟೆನ್ನ ಮ್ಯಾಲೆ ಹರಿದುದನು 2 ಪರಸನ್ನ ಹಯವದನ ಚರಣ ಸರಸಿಜಮಧು-ಕರ ಸುವೈಕುಂಠ ದಾಸೋತ್ತಮನ್ನವರ ವದನದಲಿ ವೇದಶಾಸ್ತ್ರಾಗಮದ ತಾ-ತ್ಪರಿಯ ಬಿಂದುಗಳೆನ್ನ ಮ್ಯಾಲೆ ಹರಿದುದನು 3
--------------
ವಾದಿರಾಜ
ಎಂಜಲೆನ್ನಲಿಬಹುದೆ ಮನುಜರಿದನ ಅಘವನಧ- ನಂಜಯ ಸುವೈಕುಂಠದಾಸರ ವದನದ ಕಣವ ಪ. ವದನವೆಂಬಾಕಾಶದಲಿ ಭಕುತಿ ಜೀಮೂತ ಪದುಮನಾಭನ ನಾಮಾಮೃತದ ಕಡಲ ಮುದದಿಂದ ತಕ್ಕೊಂಡು ಎನ್ನಂಗ ದೇಹದಲಿ ಹದನರಿತು ಸುರಿದು ಮುಕ್ತಿಫಲವ ಬೆಳೆಸಿದುದನು 1 ಹೃದಯ ಕಾರಾಗೃಹದಿ ಶ್ರೀಹರಿಯನಾವಾಗ ಹುದುಗಿ ಅಗಲಿಸಿದ ಕಾರಣದೊಳಂಗುಟದಿ ಉದಿಸಿ ಗಂಗೆಯು ಪೋಪೆಡೆಯು ಅಳಿದಿರೆ ಇವರ ವದನದಲಿ ಪೊರಟೆನ್ನಮ್ಯಾಲೆ ಹರಿದುದನು 2 ಪರಸನ್ನ ಹಯವದನ ಚರಣಸರಸಿಜಮಧು- ಕರ ಸುವೈಕುಂಠದಾಸೋತ್ತಮನ್ನ ವರವದನದಲಿ ವೇದಶಾಸ್ತ್ರಾಗಮದ ತಾ- ತ್ಪರಿಯ ಬಿಂದುಗಳೆನ್ನ ಮ್ಯಾಲೆ ಹರಿದುದನು 3
--------------
ವಾದಿರಾಜ
ಎಂಟಚ್ಚಮ್ಮ ಎಂದಿಗು ಬರಬೇಡಮ್ಮ ಪ ತುಂಟ ಪಟಿಂಗರ ಬಳಿಗೆ ಹೋಗಮ್ಮ ಅ.ಪ ನಿನ್ನ ಗಂಡ ಪಾಂಡವರನ್ನು ಬಾಧಿಸಿ ತನ್ನ ಬಾಯೊಳು ಹುಡಿಮಣ್ಣು ಹಾಕಿಕೊಂಡ 1 ಹುರಿದು ತಿಂಬ ಕಲಿಪುರಷ ಅಯ್ಯಯ್ಯೋ 2 ಗುರುರಾಮವಿಠಲಗೆ ಪರಮದ್ವೇಷಿಯು ಹರಿ ಶರಣರ ಬಾಧಿಸಿ ದುರಿತಗಳಿಸುವನು 3
--------------
ಗುರುರಾಮವಿಠಲ
ಎಣಿಸಲೆನ್ನಳವೆ ನಿನ್ನ ಮಹಿಮೆಗಳ ಗುಣಗಣನುತ ನಾಮ ಕೋದಂಡರಾಮ ಪ. ಲಲನೆ ಧರಿತ್ರಿಯ ಪೊರೆದೆ ಛಲದಿ ಹಿರಣ್ಯಕಶಿಪುವ ಸಂಹರಿಸಿದೆ ಇಳೆಯಾಪೇಕ್ಷಿಸಿದೆ ಬಲಿಯ ಭಂಜಿಸಿದೆ 1 ದುರುಳ ರಾಯರ ತರಿದೆ ಹರನ ಬಿಲ್ಲ ಮುರಿದೆ ನರಗೆ ಸಾರಥಿಯಾಗಿ ಮೆರೆದೆ ತರುಣಿಯರ ವ್ರತ ಗೆಲಿದೆ ತುರಗವನೇರಿ ಶರಣಾಗತರನ್ನು ಪೊರೆವುದು ನಿನ್ನ ಬಿರುದೆ 2 ಕರುಣಾಸಾಗರ ನಿನ್ನ ಚರಣಸೇವೆಗೆ ಎನ್ನ ಕರುಣಿಸು ಗುಣಸಂಪನ್ನ ಸ್ಮರನಜನಕÀ ಚೆನ್ನ ಧರಣಿಜೆಯ ಮೋಹನ್ನ ಸ್ಥಿರವಾದ ಲಕ್ಷ್ಮೀಶ ಕರುಣಿಸೊ ಹಯವದನ 3
--------------
ವಾದಿರಾಜ
ಎಣಿಸಿಕೊ ನಿನ್ನೊಳಗಣ ದೋಷಗಣವಾಗಣಿಸು ಪರರೊಳಿಪ್ಪ ಶುಭಕರ ಗುಣವಾ ಪಪರರ ಬಾಗಿಲ ಕಾಯ್ದು ಪರಿಪರಿ ನುತಿಗೈದುಕರಗಿಸಿ ಮನವ ಬೋಧಿಸಿ ತತ್ವವಾಪಿರಿದಾಗಿಯವರ 'ತ್ತಾದಿಗಳೊಳು ಮನ'ರಿಸಿ 1ದೊರೆಯದಿರೆ ಪರಸತಿ ಪರಧನ ಪರರನ್ನಪರನಾಗಿ ಪರಿಪರಿಯುಪಚಾರಗೈದವರಪರ[ವಶ]ವ ಪಡೆದಿರುತವರೊಳು ದೋಷವೆರಸಿದ ಗುಣಗಳನರಸಿ ಕೆಡುವೆಯಾಕೆ 2ನಿನ್ನೊಳುದಿಸಿದ ಸದ್ಗುಣ ನಿನ್ನ ಭೂಸಿಯುನ್ನತನೆನಿಸಿಯೆ ರಕ್ಷಿಪುದೂನಿನ್ನೊಳಗಣ ದುರ್ಗುಣ ನಿನ್ನುವ ದೂಸಿಕಣ್ಣುಗೆಡಿಸಿ ಕೊಂದು ಕೂಗುವದದರಿಂದಾ3ಮೂಳ ಹೆಮ್ಮೆಯ ಬಿಡು ತಾಳುಖೂಳವಾದವ ಸುಡು ಹರುಷ ಬಿಡುಶೀಲತನವ ಹೂಡು ಬಾಳುವದನು ನೋಡುನಾಳೆ ತಾನಿರುವದೊ ಬೀಳುವದೋ ಗೂಡು 4ಪರರ ನಿಂದಿಸಿ ದೋಷ ಪಿರಿದಾಗಲಾಯಷ್ಯಕಿರಿದಾಗಿಯೂ ಕರ್ಮ ಸೂಕರ ಜನ್ಮಗೊಡದೆ ತೊಲಗಿ ಪೋಗುವುದರಿಂದಾ 5ವರಜನ್ಮಾಂತರದೆ ಸದ್ಗುಣ ಲೇಶ'ರಲದನೆ ಗಣಿಸುತ 'ಗ್ಗಲುಕರಗಿ ನಿನ್ನಯ ದೋಷ 'ರಿದುಮ್ಮಳವ ಪಡೆದಿರುವೆ ಸುಖ ಮತ್ತೆ ಪರಗತಿ ಪಡೆಯುವೆ 6ಗುರುವಾಸುದೇವಾರ್ಯ ಚರಣದೊಲವ ಪಡೆಯುವರೆಪರಗುಣಗಳ ಗಣಿಸು ಕಂಡ್ಯಾಕರುಣದಿಂ ಚಿಕನಾಗಪುರಪತಿ ವೆಂಕಟಗಿರಿವಾಸ ಸನ್ನಿಧಿ ದೊರೆಯುವದಿದರಿಂದಾ 7
--------------
ತಿಮ್ಮಪ್ಪದಾಸರು
ಎಂತಹದೋ ನಿನ್ನ ಸಂದುರಶನಾ | ಕಂತುವಿನ ಜನಕ ಉಡಪಿ ಕೃಷ್ಣರಾಯಾ ಪ ಓದನ ತಿಂದೆ | ಪರರ ದ್ರವ್ಯದ ತಂದೆ | ಪರ ಸತಿಯರಿಗೆ ನೊಂದೆ | ಗುರು ಹಿರಿಯರ ನಿಂದೆ | ಹಿರದಾಗಾಡಿದೆ ಮುಂದೆ | ಬರುತಿಪ್ಪ ಪಾಪದಿಂದೆ | ಪರಿಯಾಗಿ ಈ ಬಂದೆ | ಅರುಹು ತೊರದೆ ಬಂದೆ | ಕರುಣಿಸು ಜಗದ ತಂದೆ 1 ಸುಜನರ ಗುಣವ ಹಳಿದೆ | ಕುಜನರ ಸಂಗದಲಿ ಬೆಳಿದೆ | ಭಜನೆಗೆÀಟ್ಟು ಸುಳಿದೆ | ಪ್ರಜರನು ಪೊಗಳಿದೆ | ವೃಜ ಪುಣ್ಯಕೋಶ ಕಳಿದೆ | ಋಜುಮಾರ್ಗವ ತೊರದುಳಿದೆ | ರಜನಿಚರ ಮತಿಗಳಿದೆ | ವಿಜಯ ವಾರ್ತೆಗೆ ಮುಳಿದೆ | ತ್ರಿಜಗಪತಿ ಕೇಳಿದೆ 2 ಹರಿವಾಸರವ ಬಿಟ್ಟೆ | ದುರುಳರಿಗೆ ಧನ ಕೊಟ್ಟೆ | ಹರಿಭಕ್ತರ ತೊರೆದು ಕೆಟ್ಟೆ | ಹರಿಶ್ರವಣ ಬಚ್ಚಿಟ್ಟೆ | ಪರಮ ವ್ರತವ ಮೆಟ್ಟೆ | ಹರುಷದಲ್ಲಿಗೆ ಮನಮುಟ್ಟಿ | ಬಟ್ಟೆ | ವಿರಕುತಿಯನು ಬಿಟ್ಟೆ | ದುರಿತಕ್ಕೆ ಗುರುತಿಟ್ಟೆ | ಬಟ್ಟೆ 3 ಜ್ಞಾನವೆಂಬೋದೇ ಇಲ್ಲಾ | ಏನು ಪೇಳಲಿ ಸೊಲ್ಲಾ | ನೀನೆಂಬೋದಿಲ್ಲವಲ್ಲಾ | ಹಾನಿ ವೃದ್ದಿಗಳೆಲ್ಲಾ | ನಾನುಂಟೆ ಎಲ್ಲ ಸಲ್ಲಾ | ದಾನಾದೆ ಸತತ ಖುಲ್ಲಾ | ತಾ ನುಡಿಗೆ ಸೋತು ಚಿಲ್ಲಿ | ರಾನಡತಿ ಸಿರಿನಲ್ಲಾ | ನಾ ನಡದೆ ನೀ ಬಲ್ಲಾ | ದೇ ನೋಡು ಪ್ರತಿ ಮಲ್ಲಾ 4 ಅಪರಾಧಿ ನಾನಯ್ಯ | ಅಪವಾದದವನಯ್ಯ | ಕೃಪಣದಿಂದೆನ್ನ ಕಾಯಾ | ಉಪಜಯವಾಯಿತು ಪ್ರೀಯಾ | ಸ್ವಪನದಿ ಪುಣ್ಯ ಸಹಾಯಾ | ಲಪಮಾಡಲಿಲ್ಲ ಜೀಯಾ | ಕೃಪೆಯಲ್ಲಿ ಪಿಡಿ ಕೈಯಾ | ವಿಜಯವಿಠ್ಠಲರೇಯಾ | ಗುಪುತವಾದುದುಪಾಯಾ | ತಪಸಿಗಳ ಮನೋಜಯಾ 5
--------------
ವಿಜಯದಾಸ
ಎಂತಹುದೊ ನಿನ್ನಯ ಭಕುತಿ ಎನಗೆ - ಶ್ರೀ-ಕಾಂತ ನಿನ್ನಯ ಒಲುಮೆಯಿಲ್ಲದ ಮೂಢಾತ್ಮನಿಗೆ ಪ ಸುಕೃತ ಫಲವು ಮೊದಲಿನಿತಿಲ್ಲಇಂದು ಬಂದಡೆ ಒಳ್ಳೆ ಮತಿಯ ಕೊಡಲಿಲ್ಲಸಂದ ವಯಸನು ತಿಳಿದು ಕುಂದುತಿದೆ ಎನ್ನ ಮನ-ದಂಧಕಾರವ ಬಿಡಿಸಿ ಹೊಂದಿಸು ಜ್ಞಾನವನು 1 ವೇದಶಾಸ್ತ್ರ ಶಬ್ದ ತರ್ಕ ಮೀಮಾಂಸೆಗಳಓದಿದವನಲ್ಲ ನಿನ್ನಯ ಭಕುತಿಗಧಿಕವಾದ ಇನ್ನೊಂದೇನನುಸುರುವೆನು ನಾ ಮುನ್ನ ಸಂ-ಪಾದಿಸುವ ಭಕುತಿ ಇನ್ನೆಂತಿಹುದೊ ದೇವ 2 ಇಂದು ಪರಿಯಂತರವುಭ್ರಷ್ಟನಾಗಿ ಪರರ ಸೇವೆಯಿಂದಿರುತಿಹೆನುಇಷ್ಟಲ್ಲದಿನ್ನೆನಗೆ ತೃಪ್ತಿ ಇನ್ನೆಂತಹುದೀಕಷ್ಟ ಶರೀರದೊಳು ತೊಳಲಲಾರೆನು ಹರಿಯೆ 3 ನರಜನ್ಮವೆಂಬ ಪಾತಕದ ಪಂಜರದೊಳಗೆಸ್ಥಿರವೆಂಬೊ ಅಹಂಕೃತಿ ಜೀವನವ ನಿರ್ಮಿಸಿಎರವಿನ ಮಾತಾಪಿತರನುಜರೆಂಬಉರಿಕಾವು ಕ್ಷಯವೆಂಬ ಸರಿಗಳನು ವಂದಿಸುವೆನು 4 ಇನಿತುಪರಿಯಲಿ ನಾನು ಹಲುಬಿದೊಡೆನೀನು ಸುಮ್ಮನಿದ್ದೊಡೆ ಬಹು ಅಪಕೀರ್ತಿಯುನಿನ್ನ ದಾಸಗೊಲಿದು ಸಲಿಸಯ್ಯ ಮನದಿಷ್ಟಕನಕಾದ್ರಿಯೊಳು ನೆಲಸಿದಾದಿಕೇಶವರಾಯ 5
--------------
ಕನಕದಾಸ
ಎಂತಾದರು ಮಾಳ್ಪುದು ಏಕಾದಶಿ ಇಂಥಾ ವ್ರತವದಾವುದು ಕಂತುಜನಕ ಲಕ್ಷ್ಮೀಕಾಂತನೊಲಿದು ನಿರ್ಮ- ಲಾಂತಃಕರಣದಿ ನಲಿವ ಮಹಾಂತ ಪದವನೀಪ ಪ. ಕೋಟಿ ಕೋಟಿ ಜನ್ಮದ ಪಾತಕಗಳ ಕೋಟಲೆ ಬಿಡಿಸುವುದು ಆಟ ಪಾಟಗಳಿಂದಲಾದರು ನಿದ್ರೆಯ ದುರಿತ ಮಹಾಟವಿ ದಹಿಸುವ 1 ಹತ್ತೊಂದು ಕರಣದಿಂದ ಘಳಿಸಿದ ನಿ- ವತ್ರ್ಯ ಪಾತಕಗಳಿಂದ ನಿತ್ಯ ನರಕದೊಳಗೊತ್ತೆಗೊಳಿಪರ ಮೇ- ಲೆತ್ತಿ ರಕ್ಷಿಪ ಪರಮೋತ್ತಮ ವ್ರತವನ್ನು 2 ವರುಷದೊಳೊಂದಾದರು ಮಾಡಲು ಸರ್ವ ಪುರುಷಾರ್ಥಗಳೀವುದು ಸರಸಿಜನಾಭ ಶ್ರೀವೆಂಕಟಾಚಲಪತಿ ಕರುಣಾಸ್ಪದವಾದ ಹರಿದಿನ ವ್ರತವನ್ನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂತು ಗತಿ ಎನಗಾಗುವದೊ ಶ್ರೀ | ಕಾಂತ ನಿನ್ನ ಭಕುತಿಯ ಕಾಣೆ ಪ ಸಂಸಾರ ಎಂಬುದು ಸುಖವೆಂದು ನಾನು | ಹಂಸನಂತೆ ನಲಿಯುತ್ತಲಿದ್ದೆ | ಕಂಸಾರಿ ನಿನ್ನ ನಾಮಸ್ಮರಣೆ ಒಳ್ಳೆ | ವಂಶರ ಕೂಡ ನಲಿಯಲಿಲ್ಲಾ 1 ಪಾತ್ರರ ಕಂಡರ ಪರಿಹಾಸ್ಯ ಕು | ಪಾತ್ರರ ನೋಡಲವರ ಶಿಷ್ಯಾ | ಕ್ಲೇಶ ಎನ್ನ | ಗಾತ್ರಗೋಸುಗ ಪೋಗೆ ಬಲು ತೋಷಾ 2 ವಿರಕ್ತಿ ಕೇಳಲು ತಲೆಶೂಲೆ ವಿ | ಹಾರ ಮಾಡುವಲ್ಲಿ ಅನುಕೂಲೆ | ವಾರಿಜಾಕ್ಷ ನಿನ್ನ ಕಥೆ ಬಿಡುವೆ ಬಹು | ಚಾರುವಾಕರ ಕೂಡ ಸುಖಬಡುವೆ 3 ಕಾಸು ಪ್ರಾಪುತವಾಗಿ ಬಚ್ಚಿಡುವೆ ಅದೆ | ಕಾಸು ಬೇಡಿದರೆ ಪ್ರಾಣವ ಕೊಡುವೆ | ಮೋಸ ಬುರುವದು ಕಾಣೆನಲ್ಲಾ ದು | ರಾಶೆಯಿಂದಲಿ ಬಾಳಿದೆನಲ್ಲಾ 4 ವೈಕುಂಠದಾಸರು ಬರೆ ಕುಗ್ಗುವೆನೊ | ಕುಂಟತನಕೆ ಬಹು ನಲಿದಾಟಾ ಗತಿ | ಉಂಟಾದದಕೆ ಉಚ್ಚಾಟ5 ತಂದೆ ತಾಯಿಗಳಲ್ಲಿ ವಂಚನೆ ಹೀನ | ಮಂದಿಕೂಡಾಪ್ತಾಲೋಚನೆ | ಕುಂದು ನುಡಿದೆ ಸಜ್ಜನರಿಗೆ ಆ | ನಂದ ಬಡಿಸುವೆ ದುರ್ಜನರಿಗೆ 6 ಹೆಂಡತಿ ಮುನಿದರೆ ಬೇಡಿಕೊಂಬೆ ಹರಿ | ಕೊಂಡರು ಮುನಿದರೆ ಪೋಗಲೆಂಬೆ | ಕೊಂಡು ಬಾಹ್ಯನೆ ಪರರವಡಿವೆ | ಪರರ ಕಂಡರೆ ಬೇಡವೆಂದು ನುಡಿವೆ 7 ಮಕ್ಕಳು ಹಸ್ತರೆ ಬಳಲುವೆನೊ ಭೂದೇ | ವಕ್ಕಳು ಹಸ್ತರೆ ನಗುವೆನೊ | ಮುಕ್ತಿಗಾಗುವ ನಾನಾ ಶ್ರವಣ ನೀಚ | ಉಕ್ತಿಗೆ ಮಾಡಿದೆ ಅನುದಿನಾ 8 ಜೀವನಕ್ಕೆ ಬೇಕಾದದೆ ಮಾಣಿದು | ಅಭಾವಾ ಮಾಡೆನು ನೀಚರ ಸೊಲ್ಲು9 ಹರಿ ನಿನ್ನ ಶುಚಿಮಾಡೆ ಹೀನ ನರರ ದೊಂಬಲು ತೆಗಿಯದೆ ಬಿಡೆ | ಅಗ್ರೋದಕ ತಾರೆ ನೀರು | ಹೊರುವೆನೊ ಹಣವೆಂದರೆ ಮಾರೆ 10 ಗಂಡಿಕಿಸಿಲಿ ತೊಳೆಯಲಿ ಮಿಡಿಕಿ ನಾನು | ಅಂಡವಲಿವೆ ಅಶನ ಹುಡುಕಿ | ಅಂಡಜವಾಹನ ನಿನ್ನ ಸೇವೆ ಕೈ | ಕೊಂಡು ಮಾಡದೆ ಪೋದೆ ಹೀಗೆವೆ11 ಗಂಧವ ತೆಗೆ ಎಂದರೆ ಅಳುವೆ | ಬಿದ್ದ | ಮಂದಿರಕೆ ಕದಡುತಳುವೆ | ಒಂದು ತುಲಸಿದಳ ತರಲಾರೆನೆಂದು | ಸಂದಿಗೊಂದಿ ಸುತ್ತಿದೆನೊ ದೊರೆ 12 ಧೂಪಾರತಿ ಏಕಾರುತಿ | ಮೂರ್ತಿ | ಪಾಪಾತಿಶಯದಿಂದಾ ನೋಡಲಿಲ್ಲ ಬಹು | ತಾಪತ್ರಯದಿಂದ ನೊಂದೆನಲ್ಲಾ 13 ಸಿರಿ | ದೇವನಿಗೆ ಯಿತ್ತು ಸುಖಬಟ್ಟು | ಆವಾವ ರುಚಿಗಳ ಭುಂಜಿಸದೆ ನಾನು | ಪಾವನಮತಿಯಾಗದೆ ಪೋದೆ 14 ಎಳೆದುಲಸಿ ನಿರ್ಮಾಲ್ಯವಾಸವಾ || ಬಳಿಯಲ್ಲಿಯಿಟ್ಟು ಕೈವಲ್ಯವಾ | ಘಳಿಸಿಕೊಳ್ಳದೆ ಬಲು ದುರ್ಗಂಧ ಬಂದು | ಭವ ಬಂಧಾ 15 ಹರಿಕಥೆಗೆ ಮೊಗ ತಿರುಹುವೆನೊ | ................................................... ಸ್ಮರಣೆ ಮಾಡುವಲ್ಲಿ ಅತಿ ಹೇಯಾ ದುರಾ | ಚರಿತೆಯ ಮಾಡುವಲ್ಲಿ ಬಲು ನ್ಯಾಯಾ 16 ಹರಿದಾಸರನಪ್ಪಿಕೊಳ್ಳದೆ ಪಾ | ಮರ ಸತಿಯೊಳನಪ್ಪ ತಾ ಪೊಳದೆ | ಧರೆಯೊಳು ನಾನು ನಡಿವಂಥ ಇಂಥಾ | ದುರುಳಾಟಕೇನೆಂಬೆ ಗುಣವಂತಾ 17 ನಿನ್ನಂಘ್ರಿಗೆ ಅಡ್ಡಬೀಳದೆ ತುತ್ತು | ಅನ್ನಕೆ ಎರಗುವೆ ಸೋಲದೆ | ಅನ್ಯಾಯ ಮಾಡುವಲ್ಲಿ ಆನಂದಾ ಸತಿಸ | ತ್ಪುಣ್ಯ ಮಾಡುವಲಿ ನಿಭಂಧಾ 18 ಸಾಧುಗಳೊಡನೆ ತಾಳುವೆ ದ್ವೇಷಾನಿತ್ಯ | ಕ್ರೋಧರ ಕಂಡರೆ ಬಲು ಹರುಷಾ | ಓದನಕೆ ವೇದವನೋದಿ ತಂದು | ವಾದಿಸುವೆನು ಸಭೆಯಲಿ ಕಾದಿ 19 ಸತಿಯಳ ಸಂಬಂಧಿಗಳ ಸಾಕುವೆನೊ ಮಾತಾ | ಪಿತರ ಕಡೆಯವರ ನೂಕುವೆನೊ | ಕರ್ಮ ಮಾಡೋರ ನೋಡಿ ಹೀನ | ವಕ್ರದವರು ಕಂಡು ಬಲು ಪಾಡಿ 20 ಪರಿ ಪರಿ ಹೊಸ | ಕೌತುಕ ಪೇಳೂವೆ ನೋಡಿರಿ | ಶ್ರಾತಾದಿಗಳು ಎಲ್ಲಿ ಧಿಕ್ಕರಿಸಿ ಯಿಂಥ | ಭೌತಿಕ ನೆಚ್ಚಿದೆ ಅನುಕರಿಸಿ 21 ಒಡಿವಿ ಮಾಡಿಸಿ ಮಡದಿಗೆ ಇಡದೆ ಅನ್ಯ | ಮಡದಿಯರಿಗೆ ಧನ ಸೂರೆವಿಡಿದೆ | ಬಡವರ ಕಂಡರೆ ಅಣಕಿಸುವ ಭಾಗ್ಯ | ಪಡದವರಿಗೆ ಬಾಗಿ ನಮಿಸುವೆ 22 ಧರ್ಮಕ್ಕೆ ಅಸೂಯಾ ಬಡುವೆ ಅ | ಧರ್ಮಕೆ ಹಿಗ್ಗಿ ಸುಖವ ಬಡುವೆ | ಷ್ಕರ್ಮಿಗಳ ಕೂಡಾಮಾನತನಾ 23 ವಿಧಿ ನಿಷೇದವನೆಣಿಸದಲೆ ನಾನು | ಉದರ ತುಂಬಿದೆ ಭೀತಿ ಗಣಸದಲೆ | ವದಗಿ ಬೀಳುವ ನರಕದ ಬಾಧೆ ಕೇಳಿ | ಹದುಳಕ್ಕೆ ಮನಮಾಡದೆ ಪೋದೆ 24 ಯಜಮಾನ ನಾನೆಂದು ಪೇಳಿಕೊಂಡು ದೋಷ | ವ್ರಜದಲಿ ಚರಿಸದೆ ದು:ಖವುಂಡು | ಇಂದು | ಸಿಂಧು 25
--------------
ವಿಜಯದಾಸ
ಎಂತು ಜೀವಿಪೆನಯ್ಯಾ ನಿನ್ನನಗಲಿ ನಾನು ಶಾಂತ ಮೂರುತಿ ಕೃಷ್ಣ ಕೃಷ್ಣಯ್ಯಾ ಪ ದಂತಿವರದ ಭಕ್ತ ಚಿಂತಾಮಣಿಯೆ ಲಕ್ಷ್ಮೀ ಕಾಂತ ಸಕಲ ಜಗದಂತರಾತ್ಮಕ ದೇವ ಅ.ಪ. ಅಂಗಜಪಿತ ನಿನ್ನ ಅನುಪಮ ರೂಪವ ನಿತ್ಯ ನೋಡಿ ನಲಿಯುತ ತುಂಗಮಹಿಮ ನಿನ್ನ ಘನ ಕೃಪೆಯಿಂದ ಅಂತ- ರಂಗದ ಭಕ್ತ ನಾನೆಂದೆನಿಸಿರಲಾಗಿ ಮಂಗಳಾಂಗ ಮನೋಹರ ನಿನ್ನ ಸಂಗ ಬಿಟ್ಟಿರಲಾರೆನೋ ಸ್ವಾಮಿ ರಂಗ ಎನ್ನಂತರಂಗವರಿಯಯಾ ಇಂಗಿತಜ್ಞ ನೀನಲ್ಲವೇ ಕೃಷ್ಣ 1 ಇಂದಿರೇಶನೆ ನಿನ್ನ ಚರಿತೆಯ ಕೇಳಿ ಆ- ನಂದದ ಸವಿ ಕಂಡೆ ಪುಣ್ಯಾತ್ಮರಿಗೆ ಬೇರೆ ಒಂದರಲಭಿರುಚಿ ತೋರ್ಪುದೆ ಗುಣಗಣ ಸಿಂಧು ನಿನ್ನನು ಬಿಟ್ಟೇನೊಂದ ನಾನೊಲ್ಲೆನು ಸಿಂಧು ಮಂದಿರ ಸುಂದರ ನಿನ್ನ ಪೊಂದಿಕೊಂಡಿಹನಲ್ಲವೇ ಕೃಷ್ಣ ತಂದೆ ಕೈ ಬಿಡಬೇಡವೊ ಎಳ- ಗಂದಿಯೆಂಬುದ ನೆನೆದು ಪಾಲಿಸೊ 2 ದೋಷ ರಹಿತ ಯಾದವೇಶ ಭಕ್ತರ ಪೋಷ ಶ್ರೀಶ ಕರಿಗಿರೀಶ ಸಕಲ ಲೋಕೇಶ ಪಾದ ಭೂಸುರ ಪ್ರಿಯ ಎನ್ನ ದೋಷಗಳೆಣಿಸದೆ ನೀ ಸಲಹಲಿ ಬೇಕೊ ವಾಸುದೇವ ಪರಾತ್ಪರ ಕೃಷ್ಣ ಕ್ಲೇಶ ಪರಿಹರನಲ್ಲವೆ ಸ್ವಾಮಿ ದಾಸ ಜನರಭೀಷ್ಟದಾಯಕ ನಾ ಶರಣು ಹೊಕ್ಕಿಹೆನು ರಕ್ಷಿಸು 3
--------------
ವರಾವಾಣಿರಾಮರಾಯದಾಸರು
ಎಂತು ದೊರೆವುದೋ ಇಂತು ನರದೇಹ ಮುಂದೆ ಬಾಹ ದಿನ್ನೆಂದಿಗೆ ಇಚಿದು ಕರುಣಿಸಿ ಸಲಹುಯನ್ನ ಮು| ಕುಂದ ನಿನ್ನಂಘ್ರಿಗಳ ತೋರಿಸಿ 1 ಮೊದಲೇ ದುರ್ಲಭ ಮನುಷ್ಯಾಂಗವು ಅದರೊಳುತ್ತಮ ವರ್ಣದಿ ಉದಿಸಿ ಭಗವಂತಾಂಘ್ರಿ ದರುಶನ ವದಗಿ ಗತಿಗೈದಿಸುವ ಜನುಮವು 2 ಗುರುಹಿರಿಯರೆಂದೆರಿಸಿ ಅವರನು ಸ್ಮರಿಸಿ ಭಕ್ತಿಗೆ ಸೇರಿಸಿ ಮರೆಸಿ ಅನ್ಯವ ಬೆರೆಸಿ ನಿಜದೊಳು ತರಿಸಿ ತಾರಿಸುತಿಹ ಜನುಮವು 3 ಹರಿಯ ಲಾಂಛನ ಪೌಂಡ್ರವು ಕೊರಳು ತುಳಸಿಯ ಮಾಲೆಯಾ ಧರಿಸಿದಂಡಿಗೆ ವಿಡಿದು ಮಾಧವ ಚರಿತ ಪಾಡುತ ನಲಿವ ಜನುಮವು 4 ತನ್ನವರ ಪರಿಚಾರಕೆನಿಸುವ ಘನ್ನ ಬಿರದಿಗೆ ಪಾಲಿಸೀ ಸನ್ನುತನೆ ಗುರುಮಹಿಪತಿ ಪ್ರಭು ನಿನ್ನ ವಲುಮಿಂದಾದರಾಗಲಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂತು ನೋಡುವಿಯನ್ನ ಅಂತ ಹರಿಯೇ| ಕಂತುಪಿತ ಕೈವಿಡಿದು ಕಡೆಗಾಣಿಸಯ್ಯಾ ಪ ಆಶೆಯೆಂಬಾ ಮಹಾ ಹೆಸರುಳ್ಳ ಆ ನದಿಯು| ಲೇಶ ಅಂತಿ-ಲ್ಲದಾ ಚಿಂತೆ ಥಡಿಯು| ಸೂಸುತಿವೆ ಇದರೊಳಗ ಮನೋರಥವೆಂಬ ಜಲ| ಘಾಸಿ ಮಾಡುವ ಬಯಕೆ ಲಹರಿ ಬರುತಿದೆ 1 ದೋರುತಿದೆ ಸಂಸಾರ ತಾಪದಾವಾನಳವು | ಹರಿದು ಬರುತಿದೆ ಕಾಳಸರ್ಪ ತಾನು | ಅರಿಷಡ್ವರ್ಗಗಳನು ಉತ್ತುಂಗ ಜಲ ಚರವು | ತೆರಗಾಣೆ ಮೋಹಸುಳಿಯಲಿ ಬಿದ್ದ ಬಳಿಕಾ 2 ನಿನ್ನ ನಾಮವೆಂಬ ಸಂಗಡಿಯನು ಕಟ್ಟಿ| ಮುನ್ನಿನ ಪರಾಧಗಳ ಕ್ಷಮೆಯ ಮಾಡಿ| ಸನ್ನುತನೆ ಮಹಿಪತಿ ಸುತ ಪ್ರಾಣದೊಡಿಯನೆ| ನಿನ್ನ ದಾಸರ ದಾಸನೆಂದು ದಯಮಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂತು ಬಣ್ಣಿಸಲಮ್ಮಯ್ಯಾ ಈ ಗುರುವರರ ಪ ಎಂತು ಬಣ್ಣಿಪೆ ನಾ ನಂತನಾಂಶ ಜಗ - ದಂತರದೊಳಗಾ - ನಂತ ಮಹಿಮರಅ.ಪ ಸುರವರನಗರಸಮ - ವರಮಂತ್ರಸದನ ಜರಿದು ಸ್ಥಿರವಾಗೀ ಪುರದಲ್ಲಿ ಮೆರೆಯುತಲಿಹರನ್ನ 1 ಪೂರ್ವಯುಗದೊಳು ಸಾರ್ವಭೌಮನೆನಿಸಿ ಪಾರ್ವರ ಪೊರೆವದಕ್ಕ ಪೂರ್ವ ಯತಿ ಎನಿಸಿಹರನ್ನ 2 ದಿನ ದಿನದಲ್ಲಿ ಮಹ ಕನಕಾಭೀಷೇಕ ಮಾಳ್ಪ ಧನಿಕರ ತೆಜಿಸಿ ನಿ - ರ್ಧನಿಕ ಗೊಲಿದಿಹರನ್ನ 3 ಕ್ಷೀರಶೇಚನ ನಿತ್ಯ-ಸಾರ ಪಂಚಾಮೃತ ಬಿಟ್ಟು ಕೀರುತಿ ಮಾಳ್ಪಜನರ ಸೇರಿ ಕೊಂಡಿಹರನ್ನ 4 ದಾತರೆನಿಸಿ ಜಗದಿ - ಖ್ಯಾತರಾಗಿ ಗುರುಜಗ ನಾಥ ವಿಠಲನೊಲಿಸಿ ದೂತಜನರ ಪೊರೆವೊರನ್ನ 5
--------------
ಗುರುಜಗನ್ನಾಥದಾಸರು
ಎಂತು ಮರೆಯಬಹುದು ನಿಮ್ಮ ಹೇಳು ಗುರುರಾಯ | ಅಂತರಂಗದೀ ನೆನೆದು ಪಡೆಯಬೇಕು ಸುಖಾಶ್ರಯಾ ಪ ತಂದೆ ನೀನೇ ತಾಯಿ ನೀನೇ ಬಂಧು ಬಳಗ ನೀನೇ | ಹೊಂದಿ ಹರುಷಬಡುವಗತಿಯ ಗುರು ದೈವ ನೀನೇ 1 ತಂದು ಜಠರದಲ್ಲಿ ಜನುಮ ಉಣಿಸಿ ಉಡಿಸಿ ಬೆಳೆಸೀ | ಛಂದದಿಂದಲಿ ಹೊರೆವೆಯಿನ್ನು ಬೇಡಿದನು ಸಲಿಸಿ 2 ಮರೆಯಲಿಕ್ಕೆ ದೇಶಗ್ರಾಮ ವೃತ್ತಿಗೃಹಗಳಲ್ಲಾ | ಕಾಯ ಸುಖದ ದ್ರವ್ಯ ಧನವಲ್ಲಾ3 ಮರಹು ಮರಸಿ ಅರವ್ಹಿಲಿರಿಸಿ ಇರಹು ಘನವನರಸಿ | ಗುರು ಮಹಿಪತಿ ಸ್ವಾಮಿ ಕಾಯಿದೇ ಕಂದನುದ್ಧರಿಸಿ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂತು ಮೀರುವೆ ಮಾಯವಾ ಪ. ಮಾಯಾ ಕಂತು ಕಂತು ಜನಕ ಹರಿಯೆ ಸಂತತ ಗೃಹಧನ ಭ್ರಾಂತಿಗೆ ಸಿಲುಕುತಾ ತಂತ್ರವಾದೆನು ಸರ್ವತಂತ್ರ ನೀ ಕರುಣಿಸು ಅ.ಪ. ದೇಹವೆ ನಾನೆಂಬ ಮೋಹದಿ ಬಹು ವಿಧ ಮೋಹಗೊಂಡನುದಿನವು ಆಹಾರ ನಿದ್ರಾ ಮೈಥುನಗಳೆ ಗತಿ ಎಂಬ ಹಾಹಾಕಾರವು ಬಿಡದು ಇಹಪರಗಳ ಸನ್ನಾಹ ಒಂದನು ಕಾಣೆ ಗೇಹಾಂಧಕೂಪಮಹಾಹಿಮುಖದಿ ಸಿಕ್ಕಿ 1 ವೇದವಿಹಿತ ಕರ್ಮವಾದರು ಮಾಡದೆ ಸಾಧು ಮಾರ್ಗವ ಮೀರಿದೆ ಮಾದಿಗನಂತೆ ಮನಸಿನಲಿ ಬಹು ವಿಧ ಕಪಟ ತಾಳಿದೆ ವ್ಯಾಧಿ ಪೀಡಿತ ದೇಹ ಬಾಧೆಯ ಸಹಿಸದೆ ಶ್ರೀದ ನಿನ್ನಯ ಪದ್ಮ ಪಾದವೆ ಗತಿಯೆಂಬೆ 2 ಮತಿವಂತ ಜನರ ರಕ್ಷಿಪುದು ದುರ್ಘಟವೆ ಶ್ರೀ- ಪತಿ ನಿನಗುಸುರುವದೆ ಶತಕೋಟಿ ಮಿತ ಜನ್ಮಾರ್ಜಿತ ಪಾಪ ತತಿ ನೀ ಸಂ- ಸೃತನಾಗೆ ನಿಲುವುಂಟೆ ಪತಿತ ಪಾವನನೆಂಬ ಪರಮಾತ್ಮ ಶೇಷಾದ್ರಿ ಪತಿ ನೀನೆ ಗತಿಯೆಂದು ಸತತ ನಂಬಿದೆ ದೇವ 3
--------------
ತುಪಾಕಿ ವೆಂಕಟರಮಣಾಚಾರ್ಯ