ಒಟ್ಟು 36720 ಕಡೆಗಳಲ್ಲಿ , 136 ದಾಸರು , 10408 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

215ಅಗಲಿ ಸೈರಿಸಲಾರದೀ ಮನ |ಅಗಲದಿಪ್ಪುದೆ ಜೀವನ ||ಪೊಗರೊಗೆವ ನಗೆಮೊಗದ ಸೊಬಗಿನ |ಸುಗುಣಸಿರಿ ಗೋಪಾಲನ ಪಮುನ್ನ ಸಂಸ್ಕøತಿಪಾಶದೊಳು ಬಿದ್ದನ್ಯಥಾರಕ್ಷಕರ ಕಾಣದೆ |ಬನ್ನಬಡುತಿಹ ಜನರನೀಕ್ಷಿಸಿ ಪೂರ್ಣ ಕರುಣಕಟಾಕ್ಷದಿ ||ತನ್ನ ನಾಮದ ಸುಧೆಯನುಣ್ಣಿಸಿ ತನ್ನ ಭಜನೆಯಸುಖವ ತೋರಿಸಿ |ತನ್ನ ದಾಸರ ಮಾಡಿ ಕೊಂಡಿಹ ಚೆನ್ನಸಿರಿಗೋಪಾಲನ 1ಶೀಲಗುಣ ಕಥನಗಳನರಸದೆ ಕೀಳು ಚಾರಿತ್ರ್ಯಗಳ ಬಗೆಯದೆ |ಲೋಲಚಿತ್ತದಿ ಮಾಡುತಿಹ ಅಘಜಾಲ ಕೋಟಿಗಳೆಣಿಸದೆ ||ಕಾಲದಿಂ ಬಹುನಂಬಿದವರನು ಲೀಲೆಯಿಂದಭಿಮಾನಿಸುತ-ಪರಿ-|ಪಾಲಿಸುತ್ತಿಹ ಮಂಗಳಾತ್ಮಕ ಶೀಲ ಕಂಠಮೂರ್ತಿಯ 2ಭಕ್ತಿ ಕರ್ಮಜಾÕನ ಯೋಗ ವಿರಕ್ತಿಯೆಂಬುದನೇನು ಕಾಣದೆ |ಮತ್ತೆ ಕೇವಲ ಮೂಢ ಭಾವದ ಚಿತ್ತದಲಿನೆರೆನಂಬಿದ ||ಆರ್ತರನು ಅಬಲರ ಅನಾಥರಜ ಮೃತುೈಮುಖದಿಂದವರತಾನೊಲಿ-|ದೆತ್ತಿ ಸಲಹುತಲಿಪ್ಪ ಸೊಬಗಿನ ಕೀರ್ತಿವಂತ ಮಹಾತ್ಮನ 3ಕರುಣದಿಂದೆಳಗಂದಿ ಕರುವಿನ ಮೊರೆಯ ಲಾಲಿಸಿ ಬಿಡದೆ ತೃಪ್ತಿಯ |ಕರೆದು ಮಾಡುವ ಪರಿಯೆ ತನ್ನಯ ಸ್ಮರಿಸುತಿಹ ಕಡುದೀನರ ||ಹೊರಗೆ ಶಿಕ್ಷಿಸಿ ಒಳಗೆ ರಕ್ಷಿಸಿ ಪಿರಿದು ತನ್ನಯ ನಿಜನವರಿಗೆ |ತೆರುವ ಕರುಣಾಳುಗಳ ದೇವನ ಶರಣಜನ ಮಂದಾರನ 4ನೇಮದಲಿ ನಂಬಿದರ್ಗೆ ಸೂಚಿಸಿ ಕಾಮವಾಸನೆಗಳನು ಖಂಡಿಸಿ |ಪಾಮರರ ಪಂಡಿತರ ಮಾಡಿ ಮಹಾಮಹಿಮೆಗಳ ತಿಳಿಸುತ ||ರಾಮರಮಣಿಯ ಸಹಿತ ಸಾಲಿಗ್ರಾಮದಲಿನೆರೆನೆಲಸಿ ಭಕುತರ |ಪ್ರೇಮದಿಂದಲಿ ಪೊರೆಯುತಿಹ ಸುಖಧಾಮ ಪುರಂದರವಿಠಲನ 5
--------------
ಪುರಂದರದಾಸರು
3 ಆತ್ಮ ನಿವೇದನೆ190ಅಂಜಿಕ್ಯಾಕೆನಗಂಜಿಕೆಕಂಜನಾಭಶ್ರೀನಿವಾಸನ ದಯವಿರಲುಪ.ಅಶನವಸನವನ್ನು ಕುಳಿತಲ್ಲೆ ನಡೆಸುವನಿಶಿದಿನ ನೀಚರಾಧೀನ ಮಾಡದೆಹಸನಾಗಿ ತನ್ನಂಘ್ರಿ ನೆರಳೊಳು ಬಚ್ಚಿಟ್ಟುಕುಶಲದಿ ಸಾಕುವ ದೊರೆಯ ನಂಬಿದ ಬಳಿಕ 1ಹುಲ್ಲು ಕಚ್ಚಿ ಕಲ್ಲು ಹೊತ್ತು ಧನವನುಳ್ಳಕ್ಷುಲ್ಲ ಜೀವರನೆಲ್ಲ ಕಾಯುವ ಶಕ್ತಿಎಲ್ಲ ವ್ಯವಹಾರವ ಮಾಡುವ ಬಲ ನನಗಿಲ್ಲೆಂದು ಆಯಾಸಬಡಲೀಸದವನಿರೆ 2ಆವಾವ ಕಾಲದಿ ಆವಾವ ದೇಶದಿಸೇವೆಗೆ ನಾ ತಪ್ಪೆ ಕೃಪೆ ತಪ್ಪಿಸಭಾವಿಕರೊಡೆಯ ಪ್ರಸನ್ವೆಂಕಟಾದ್ರೀಶಸಾವು ಕಳೆದು ಜೀವಕಾಶ್ರಯನಾಗಿರೆ 3
--------------
ಪ್ರಸನ್ನವೆಂಕಟದಾಸರು
3. ತುಳಸಿರಾಮದಾಸರ ತೆಲಗುಮಿಶ್ರಿತ ಕೀರ್ತನೆಗಳು498ನೀಪಾದ ಭಜನಚೇ ನಾಪಾಪಮತಮಾಯೆನ್ಗೋಪಾಲ ಶ್ರೀ ರಂಗನಾಥಾ ಪರಾಪು ಜೇಯುಟ ನೇಲನಾಪದÀಲನು ದೀರ್ಚುಗೋಪ ವೇಷಖುಡೈನ ಶ್ರೀಪತಿಯೆನುಟಾಯೆ ಅ.ಪಪಿಚ್ಚಿವಾಡನೈ ನೇನೊಚ್ಚಿ ವೇಡಿತಿನಯ್ಯಾಅಚ್ಚುತಾನಂತರೂಪಹೆಚ್ಚೈನ ಮೀಧ್ಯಾನಂಬಿಚ್ಚಾಯಂಚಿನಾನೂವೊಚ್ಚಿ ದಾಸುಡು ವೇಡಿಯಿಚ್ಚಿ ಬ್ರೋವರ ತಂಡ್ರಿ 1ಪಂಕಜಾಕ್ಷ ನಾಪೈ ಪಂತಮೇಲರ ಸಾಮಿಕಿಂಕರುನಿಗನೇಲುಮಾಶಂಕರವಿನುತ ನಾ ಸಂಕಟ ಮುಲು ದೀರ್ಚುಲಂಕಾಧಿಪತಿ ವೈರಿಗುರುಡೆ ತುಲಶಿರಾಮಾ 2
--------------
ತುಳಸೀರಾಮದಾಸರು
4 ಲೋಕನೀತಿ294ಅಂದೇನಿಂದೇನಯ್ಯ ಶ್ರೀಅರವಿಂದನಾಭನ ಹಗೆಯವ ಅಸುರಎಂದಿಗೆ ಮತಿ ಕವಲಿಲ್ಲದೆ ಹರಿಪದಹೊಂದಿದಗೆ ಮುಕ್ತಿಯವಸರ ಪ.ಅಂದಿಗೆ ಹರಿಮಹಿಮೆಗಳನ್ನು ಆನಂದದಿಂದ ಕೇಳದವ ದ್ವೇಷಿಇಂದಿಗೆ ಹರಿಕಥೆ ತಾತ್ವಿಕ ಜನರನುನಿಂದಿಸುವವನೆ ನಿಜದ್ವೇಷಿ 1ಸರ್ವಹ ಕೃಷ್ಣಾಕೃತಿಗೆ ವೈರ್ಯಾಗಿ ಬಹುಗರ್ವಿಪ ಕಂಸನು ಅತಿತಾಮಸಉರ್ವಿಲಿ ನರಹರಿ ಚರಣವರ್ಚಿಸದೆಶರ್ವಸರ್ವೋತ್ತಮನೆಂಬವತಾಮಸ2ವಾಸುದೇವನ ಪಾಶದಿ ಬಿಗಿಸುವೆನೆಂದುಆಶಿಸಿ ಕೆಟ್ಟ ಕೌರವ ಕುಮತಿದೋಷ ಧರ್ಮವನೆಲ್ಲ ಸರಿಮಾಡಿ ಶಾಕ್ತನಾಗ್ಯಾಸುರಿ[ಯ] ಪೂಜಿಪ ಹೊಲೆ ಕುಮತಿ 3ರುಕ್ಮಿಣಿ ದೇವಿಯೆ ಲಕ್ಷ್ಮಿಯೆಂದು ತಿಳಿಯದರುಕ್ಮನು ಮದಸೊಕ್ಕಿದ ಪಾಪಿಲೆಕ್ಕವರಿಯದೆ ಜೀವೇಶರು ಸಮರೆಂದುಲೆಕ್ಕಿಸುವವ ನರರೊಳು ಪಾಪಿ 4ಕೃತಕ ಹಕ್ಕಿಯನೇರಿ ತಾ ವಾಸುದೇವನೆಂದುಅತಿಕ್ಲೇಶವುಂಡ ಪೌಂಡ್ರಕ ಕಲಿಯುಸಕಳ ಜಗದೊಡೆಯ ಪ್ರಸನ್ವೆಂಕಟೇಶನಭೃತ್ಯನಾಗದೆಯೆ ನಾನೆಂದವ ಕಲಿಯು 5
--------------
ಪ್ರಸನ್ನವೆಂಕಟದಾಸರು
435(ಅ)ನಮೋ ಯತಿಕುಲಶಿಖಾಮಣಿಯೆ ಸುಗುಣನಿಧಿಯೆಮತಿಮತಾಂವರ ಮಾನಿನೇ ಪ.ಭುವನೇಂದ್ರತೀರ್ಥ ಯತಿಪ್ರವರಕರಸಂಜಾತಸುವಿವೇಕಿ ವರದೇಂದ್ರಕರಸಂಭವಾಯಅವಿಕಳಾನಂದ ವೈಷ್ಣವನಿವಹಗೀರ್ವಾಣತ-ರವ ಸುಕೃತೇಂದ್ರ ಸದ್ಗುರುವೆ ನಮೋಸ್ತುತೇ 1ಕಾಶೀಮಠಾದಿಪತಿಯೇ ಸುಸನ್ಯಾಸಿಯೇ ಸ(ತ್ತ್ವ) ಗುಣಭೂಷಾಯ ತೇವ್ಯಾಸ ರಘುಪತಿಚರಣದಾಸವತ್ಪೂಜಕ ವಿ-ಶೇಷಭಕ್ತಿಜ್ಞಾನಶಾಲಿನೇ ತುಭ್ಯಂ2ಆಜಾನುಬಾಹುವೇ ಗೌಡಸಾರಸ್ವತ ಮ-ಹಾಜನಸಮಾಜಮಂಡಲವಾಸಿನೇರಾಜೀವನಯನಾಯ ನಮಿತಜನನಿಕರ ಸುರಭೂಜಾಯಭೂರಿರವಿತೇಜಸ್ವಿನೇ3ತುಷ್ಟಾಯ ಭಾಗವತನಿಷ್ಟಾಯ ದ್ವಿಜಕುಲವರಿಷ್ಠಾಯ ಷಡ್ವರ್ಗಜಿಷ್ಣವೇ ತುಭ್ಯಂದುಷ್ಟ ಜನ ದೂರಾಯ ಧೀರಾಯ ಭಕ್ತದ-ತ್ತೇಷ್ಟಾಯ ಮಹತೇ ಸಹಿಷ್ಣವೇ ಮಹತೇ 4ಬ್ರಹ್ಮಚರ್ಯಾದಿ ವ್ರತಧರ್ಮಾತ್ಮನೇ ವಿಹಿತಕರ್ಮಣೇ ಸುಕೃತೇಂದ್ರ ಶರ್ಮಣೇ ತುಭ್ಯಂಬ್ರಹ್ಮಪಿತ ಲಕ್ಷ್ಮೀನಾರಾಯಣಾಂಘ್ರಿಧೃತಿ ಸು-ನಿರ್ಮಲಾಂತಃಕರಣ ಕರುಣನೀರಧಯೇ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
45ಅನುದಿನದಲಿ ಬಂದು ತನುವ ಸೂರೆಯಗೊಂಡು |ಎನಗೊಂದು ಮಾತ ಪೇಳೊ ಜೀವವೆ ! ಪಘನಕೋಪದಲಿ ಬಂದು ಯಮನವರಳೆದೊಯ್ವಾಗ |ನಿನಕೂಡಿನ್ನೇತರ ಮಾತೂ ಕಾಯವೆ! ಅ.ಪಬೆಲ್ಲದ ಹೇರಿನಂತೆ ಬೇಕಾದ ಬಂಧು - ಬಳಗ |ನಿಲ್ಲೊ ಮಾತನಾಡತೇನೆ ಜೀವವೆ ||ನಿಲ್ಲಗೊಡದೆ ಬಂದು ಯಮನವರೆಳೆದೊಯ್ವಾಗ |ಬೆಲ್ಲ ಬೇವಾಯಿತಲ್ಲೋ ಕಾಯವೆ ! 1ಸತ್ಕರೆ ಹೇರಿನಂತೆ ಸವಿದುಂಡು ಪಾಯಸವ |ದಿಕ್ಕೆಟ್ಟು ಹೋಗುತೀಯೋ ಜೀವವೆ ||ದಕ್ಕಗೊಡದೆ ಬಂದು ಯಮನವರೆಳೆದೊಯ್ವಾಗ |ಸಕ್ಕರೆ ವಿಷವಾಯ್ತೋ ಕಾಯವೆ ! 2ಅಂದಣದೈಶ್ವರ್ಯ ದಂಡಿಗೆ - ಪಲ್ಲಕ್ಕಿ |ಮಂದಗಮನೆಯರು ಜೀವವೆ ||ಮಂದಗಮನೆ ಯಾರೊ - ಮಡದಿ - ಮಕ್ಕಳು ಯಾರೋ -ಬಂದಂತೆ ಹೋಗ್ತೀನಿ ಕಾಯವೆ ! 3ಸೋರುವ ಮನೆಯಲಿ ಧ್ಯಾನ - ಮೌನಾದಿಗಳು |ಬೇರಿತ್ತು ನಿನ್ನ ಮನಸು ಜೀವವೆ ||ನೀರಮೇಲಣ ಗುಳ್ಳೆ ತೋರಿ ಹಾರಿದಂತೆ |ಯಾರಿಗೆ ಯಾರಿಲ್ಲ ಕಾಯವೆ ! 4ಹುಟ್ಟಿದ್ದು ಹೊಲೆಯೂರು ಬೆಳದದ್ದು ಮೊಲೆಯೂರು |ಇಟ್ಟದ್ದು ಈ ಊರು ಜೀವವೆ ||ಸೃಷ್ಟಿಗೊಡೆಯ ನಮ್ಮ ಪುರಂದರವಿಠಲನ |ಗಟ್ಟ ಪೂಜೆಯ ಮಾಡೊ ಕಾಯವೆ ! 5
--------------
ಪುರಂದರದಾಸರು
5 ತತ್ವವಿವೇಚನೆ371ಅಂಜನೆಸುತ ನಮೊ ಸ್ವಾಮಿಕಂಜಜಪದಪತಿ ಮೌಂಜಾಶ್ರಮಿ ಪ.ಪತಿತ ಪಾವನನಾಮಧೇಯ ಹನುಮಾಜೆÕಯಿಂದತೀತಾನಾಗತ ಅಜಾಂಡಜೆÕೀಯಾಮೃತ ಸಂಜೀವನಾದಿ ಚತುರೌಷಧ ತಂದೆಕ್ಷತಘಾತ ಪ್ಲವಗರ ಪ್ರತತಿ ರಕ್ಷಿಸಿದೆ 1ವ್ಯಾಘ್ರೇಶ್ವರಾಜಿತ ಸಮರ್ಥ ವಸುಧಾಹೃತಅಗ್ರಜಯಜ್ಞಾಧಿಕರ್ತಉಗ್ರ ಕೌರವಜನ ನಿಗ್ರಹ ಕೃಷ್ಣ ಮತಾಗ್ರಣಿ ಭೀಮ ಸಮಗ್ರ ಸುಜ್ಞಾನಿ 2ದುಷ್ಟೋಕ್ತಿ ಪೂರ್ವಪಕ್ಷಜಾರಿ ಭೇದೋಚ್ಚಾರಿವಿಷ್ಣುಪಕ್ಷ ಸಿದ್ಧಾಂತಸೂರಿಸೃಷ್ಟಿಲಿ ವರದ ವಾಸಿಷ್ಠ ಪ್ರಸನ್ವೆಂಕಟಾಧಿಷ್ಟನ ಪ್ರಿಯ ಮುನಿ ಶಿಷ್ಟರೊಡೆಯ ನೀ 3
--------------
ಪ್ರಸನ್ನವೆಂಕಟದಾಸರು
93ಅಕ್ಕಟಕ್ಕಟೆಂನಗಂಡ ವೈಷ್ಣವನಾದ ಕಾರಣ |ರಕ್ಕಸಾಂತಕನ ಭಜಿಸಿರಚ್ಚೆ ಗೋಡಾಯಿತೆಂನ ಬದುಕು |ಅಕ್ಕಟಕ್ಕಟರೆಂನಗಂಡಪ.ಅಡ್ಡಗಂಧ ಹಚ್ಚುವಾಗ ರುದ್ರದೇವರ ಭಜಿಸಿಲಾಗಿ |ಬಡ್ಡಿವಾಸಿಂರೊಳಗೆ ನಾಉ ಸುಖದೊಳಿದ್ದೆವು | ಅಡ್ಡಗಂಧವನು ಬಿಟ್ಟು ಶ್ರೀ ಮುದ್ರೆಯನು ಧರಿಸಲಾಗಿ |ಬಡ್ಡಿವಾಸಿಯಲ್ಲ ಹೋಗಿ ಬಾಯೊಳ್ಗೆ ಬಿದ್ದಿಂತಾಯಿತವ್ವ, ಅಕ್ಕಟ 1ಹೇಡಿಗೆ ತುಂಬ ದೇವರು ನಮ್ಮ ಮನೆಯೊಳಿರುವಕಾಲದಲ್ಲಿ | ವಡವೆ ವಸ್ತು ಸೌಭಾಗ್ಯ ಸುಖದೊಳಿದ್ದೆವುಹಾದಿಯ ತುಂಬ ಕರಿದು ಬಿಳಿದು ಸಾಲಿಗ್ರಾಮಭಜಿಸಲಾಗಿ | ವಡವೆ ವಸ್ತು ಎಲ್ಲ ಹೋಗಿ ಬಾಯೊಳ್ಹುಡಿಯುಬಿದ್ದಂತಾಯಿತವ್ವ | ಅಕ್ಕಟ | 2ಕಾಲಿಝಂಣಕಾಲದಲ್ಲಿ ಮೂಲಂಗಿ ಬೊಳ್ಳಳ್ಳಿಗೆಡ್ಡೆ ತಂದುಕೊಟ್ಟರೆ ದೇವಸುಖವ ಕೊಡುವನೂ |ವೀರವಿಷ್ಣುವಿಗೆ ಕೊಟ್ಟುತ್ರಾಹಿ ತ್ರಾಹಿ ಎನ್ನಲಾಗಿಪಚ್ಚೆ ಕರ್ಪೂರದಂತ ಬದುಕು ನಿಸ್ತುತವಾಗಿಹೋಯಿತವ್ವ | ಅಕ್ಕಟ3ಅತ್ತೆ ಕೇಳೆ ಹಿಂದೆನಂಮ ಮದುವೆ ಮುಂಜಿಕಾಲದಲ್ಲಿ | ಆರ್ತಿಗಾದರು ಒಮ್ಮೆ ಕಚ್ಚೆಕಟ್ಟಿದ್ದೇವೊಅರ್ಥಿಕಚ್ಚೆಯಂನು ಬಿಟ್ಟುನಿತ್ಯ ಕಚ್ಚೆ ಉಡೆಯಲಾಗಿವಿತ್ತಬದುಕುಯೆಲ್ಲ ಹೋಗಿ ವ್ಯರ್ಥವಾಗಿಹೋಯಿತವ್ವ | ಅಕ್ಕಟ4ಅತ್ತೆ ಮಾವ ಸತ್ತ ದಿವಸ ಪಿತ್ರುಕಾರ್ಯನಡಸಲಾಗಿ | ಕತ್ತೆ ನಾಯಿಹೊರಳಿದಂತೆ ನಂಟುನಂಟರಿಷ್ಟರೂ | ಶ್ರೀ ಪುರಂದರವಿಠಲನಭಜಿಸಲಾಗಿ | ತುತ್ತ ಗೊಂಬುದೊಂದು ಕೂಳುಬೆಲ್ಲದಹಾಗೆ ಆಯಿತವ್ವ5
--------------
ಪುರಂದರದಾಸರು
ಅ. ಗಣಪತಿ ಸರಸ್ವತಿಯರು261ಶ್ರೀ ಗಣನಾಥನಿಗೆ | ಶಾರದಾಂಬಿಕೆಗೆಶ್ರೀ ಗೌರಿ ಭೂದೇವಿ ಶ್ರೀದೇವಿಗೆ |ಶ್ರೀಗುರುಮಹಾವಿಷ್ಣು ಬ್ರಹ್ಮರುದ್ರಾದ್ಯರಿಗೆಸಿರಿಚರಣ ಪಂಕಜಗೆ ನಮಿಸಿ ನುತಿಸುವೆನು 1ಅಷ್ಟ ದಿಕ್ಪಾಲರಿಗೆ ಶಿಷ್ಯಮರುದ್ಗಣಗಳಿಗೆಅಷ್ಟವಸು ಸಪ್ತಋಷಿ ನವಗ್ರಹಾದ್ಯರಿಗೆ |ಶ್ರೇಷ್ಠ ಹನುಮಂತನಿಗೆ ಕನಕಾದಿ ದಾಸರಿಗೆಸೃಷ್ಟಿಯೊಳು ಕವಿಜನಕೆ ಕೈಮುಗಿವೆನು 2ವಿಪ್ರಕುಲ ಸಂಜಾತ ಮಯ್ಯೂರ ಮಡಿಪುರದೊ-ಳಿಪ್ಪ ವೆಂಕಟರಾಯ ಗೋಳೇರ ಸುಕುಮಾರ |ಸರ್ಪಶಯನನ ದಾಸ ಗೋವಿಂದನೆಂಬವನುಜಲ್ವಿಸಿಯೆ ವಿರಚಿಸಿದೆನೀ ಕೃತಿಯನು 3ಯತಿಗಣ ಪ್ರಾಸ ವಿಷಮಾಕ್ಷರಗಳೊಂದರಿಯೆಕೃತ ದೋಷ ರಾಗ ಲಯ ಭೇದವನು ತಿಳಿಯೆ |ಪೃಥುವಿಯೊಳು ಕವಿಗಳಂತಗ್ಗಳನು ನಾನಲ್ಲಅತಿಶಯದ ನ್ಯೂನತೆಯ ಬಲ್ಲ ಶ್ರೀನಲ್ಲ 4ತಪ್ಪು ಸಾವಿರವಿರಲು ತಿದ್ದಿ ಬಲ್ಲವರಿದನುಒಪ್ಪುವಂದದಿ ಜಗದಿ | ಮೆರೆಸಿ ವಾಚಕರುಸರ್ಪಶಯನನ ಕೃಪೆಗೆ ಪಾತ್ರರಾಗುತ ನೀವುಕ್ಷಿಪ್ರದಲಿ ಗೋವಿಂದದಾಸ£À£Àು ಪರಸಿ ಮನ್ನಿಪುದು 5
--------------
ಗೋವಿಂದದಾಸ
ಅಂಕಿತ ಪದ (ಶ್ರೀ ಪ್ರಸನ್ನ ಭೂವರಾಹ)142ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ -ಬಿಸಜಜ ಸಮೀರಾದಿ ಸುರವೃಂದ ವಂದ್ಯ -ಬಿಸಜಜಾಂಡದ ದೊರೆ ಸಹಸ್ರನಾಮನೆ ದಯ -ದಿಂಸಲಹೋ ಜ್ಞಾನಾದಿ ಧನವಿತ್ತು ಇವನ ಪಶ್ರೀಧರನೆ ಸುಖಮಯನೆ ಭೂಧರನೆ ಭೀತಿಹರವೇಧಮನುವಿಗೆ ಒಲಿದ ಶ್ವೇತವರಾಹ ||ದಿತಿಜಹರ ವಸೂಮತೀಯ ಉದ್ಧರಿಸಿ ಕಾಯ್ದಿಯೋನೀದಯದಿ ಸುಮತಿಯನು ಇತ್ತು ಪಾಲಿಪುದು 1ಕಾಲಗುಣಕರ್ಮನಿಮಿತ್ತ ಬಂದಿಹ ಇವನಬಲವಂತ ಕಷ್ಟಗಳ ಉಪಶಮಿಸಿ ಇವನಿಂ ||ಒಳ್ಳೇಸಾಧನ ಮಾಡಿಸುವದು ನೀಕೃಪೆಯಿಂದ |ಬಾಲೇಂದುಧರವಿನುತಭಕ್ತವತ್ಸಲ2ಭೂಮ ಉರುಗುಣ ಪೂರ್ಣನಿರ್ದೋಷಶ್ರೀರಮಣಶ್ಯಾಮ ವರ್ಣನೆ ಚಕ್ರ ಶಂಖ ಭೂಧರನೆ ||ಕಾಮಪಿತ ವೇಧಪಿತ ಭೂವರಾಹ ನಮೋ |ನಮೋ ಶ್ರೀ ಪ್ರಸನ್ನ ಶ್ರೀನಿವಾಸ ಸಲಹೆಮ್ಮ
--------------
ಪ್ರಸನ್ನ ಶ್ರೀನಿವಾಸದಾಸರು
ಅಂಗನಾಕುಲ ಶಿರೋಮಣಿ ಶ್ರೀಮಾ |ಶೃಂಗಾರವನಧಿಗರುಡಧ್ವಜೆಮಂಗಳಾದೇವಿ ಹಸೆಗೇಳು ಪಕ್ಷೀರಸಾಗರಕನ್ಯಾವಿಧಿ|ಮಾರಾಂತಕ ಶಕ್ರಕರಾರ್ಚಿತೆ ||ವಾರಿಜಸದನೆ ಸಿರಿದೇವಿ |ಸಿರಿದೇವಿ ತ್ರೈಲೋಕಕೆ ಜನನೀ ರಕ್ಕಸಾರಿ ಹಸೆಗೇಳು 1ಭಾರತಿಪಾರ್ವತಿ ಶಾಮಲ ಮುಖ |ನೂರು ಸುರರರಸಿಯರೆಲ್ಲರು ||ಮೀರಿಧರುಷದಲಿ ಪದಪಾಡಿ | ಹಸೆಯಬರೆದಿಹರೆಲೆ ನಾರಾಯಣನ ರಾಣೀ || ಹಸೆಗೇಳು 2ಋಷಿಗಳು ವೇದ ಪುರಾಣಗಳುಪ |ನಿಷದ್ವಾಕ್ಯಗಳಿಂದ ತುತಿಸುವರು ||ವಸುಧೆಗಾನಂದ ಪಡಿಸಲು |ಶುಭಕುಂದರದನೆಆಸಿತಕುಂತಲೆಯೇ ಹಸೆಗೇಳು 3ಕಡೆಗಣ್ಣಿನ ನೋಟದಿ ಲೋಕವ |ತಡೆಯದೆ ಪುಟ್ಟಿಸಿ ಪಾಲಿಸಿ ಪುನಃ ||ಕೆಡಿಸುವೆ ಸ್ವೇಚ್ಛೆಯಲಿ ವೈದರ್ಭೆ ಸತ್ರಾಜಿತೆಕೃತಿ|ಯೊಡತಿ ಜಯಮಾಯಾ ಹಸೆಗೇಳು 4ಪ್ರಾಣೇಶ ವಿಠಲನೊಳು ದ್ವೇಷಿಪ |ಹೀನರ ಸಂಹರಕೋಸುಗ ಶರ ||ಪಾಣಿಯಾಗಿಹಳೆಶ್ರುತಿವೇದ್ಯೆ | ಶ್ರುತಿವೇದ್ಯೆ ದೇವದೇವಿಕಅಹಿವೇಣಿಶುಕವಾಣಿ | ಹಸೆಗೇಳು 5
--------------
ಪ್ರಾಣೇಶದಾಸರು
ಅಗ್ರಪೂಜೆಯ ಮಾಡಿದಾ ಧರ್ಮಜ ತಾನುಅಗ್ರಪೂಜೆಯ ಮಾಡಿದಾ ಪರಾಜರಾಜರಗೂಡಿ ರಾಜಸೂಯದಿ ಧರ್ಮ-ರಾಜನು ಹರಿಗೆ ರಾಜರ ಸಭೆಯೊಳು ಅ.ಪಶುದ್ಧಾಚಮನ ಸಂಕಲ್ಪದಿಪಾದತೊಳೆದಿತ್ತಸದ್ಭಕ್ತಿಯಲಿ ಗಂಧಾಕ್ಷತೆ ವೇದವೇದ್ಯಗೆ 1ವಸನಾಭರಣದಿವ್ಯಕುಸುಮಧೂಪವು ದೀಪತೃಷೆನೈವೇದ್ಯವನಿತ್ತು ಕ್ಲೇಶನಾಶನಿಗಂದು 2ಕ್ರಮುಕವರ್ಪಿಸಿ ನೀಲಾಂಜನವೆತ್ತಿ ಧ್ಯಾನಿಸಿಸುಮವಿತ್ತು ಬಲವಂದು ಚಕ್ರವಿಕ್ರಮಗೆ 3ಪೊಡಮಟ್ಟಘ್ರ್ಯವ ಬಿಟ್ಟು ಒಡನೆ ಯಜ್ಞಾಂತದಿಬಿಡೆ ಬ್ರಹ್ಮಾರ್ಪಣ UÉೂೀವಿಂದನ ಪಾದದ್ವಂದ್ವಕೆ 4
--------------
ಗೋವಿಂದದಾಸ
ಅಂಜಬೇಡ ಬೇಡವೆಲೆ ಜೀವ -ಭವ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಭಂಜನ ಹರಿಶರಣರ ತಾವ ಪ.ಬಂದಷ್ಟರಿಂದಲಿ ಬಾಳಿಕೊ - ಬಲು - |ಸಂದೇಹಬಂದಲ್ಲಿ ಕೇಳಿಕೊ ||ನಿಂದಾ - ಸ್ತುತಿಗಳನು ತಾಳಿಕೊ - ಗೋ - |ವಿಂದ ನಿನ್ನವನೆಂದು ಹೇಳಿಕೊ 1ಮಾಧವನಿಗೆ ತನುಮನ ಮೆಚ್ಚು - ಕಾಮ - |ಕ್ರೋಧಾದಿಗಳಕಲಿಮಲ ಕೊಚ್ಚು ||ಮೋದತೀರ್ಥವಚನವೆ ಹೆಚ್ಚು -ಮಾಯಾವಾದಿಮತೆಕೆ ಬೆಂಕಿಯ ಹಚ್ಚು 2ಪರವನಿತೆಯ ರಾಶಿಯ ಬಿಡು - ನೀಹರಿಸರ್ವೋತ್ತಮನೆಂದು ಕೊಂಡಾಡು ||ಪರಮಾತ್ಮನ ಧ್ಯಾನವಮಾಡು - ನಮ್ಮ - |ಸಿರಿಪುರಂದರವಿಠಲನ ನೀನೋಡು3
--------------
ಪುರಂದರದಾಸರು
ಅಂಜಲೇತಕೆ ಮನವೆ ಅನುಗಾಲವುಕಂಜನಾಭನ ಭಕುತಿ ಕೈಕೊಂಡ ಬಳಿಕ ಪನಾರಾಯಣನೆಂಬ ನಾಲ್ಕು ಅಕ್ಷರದಿಂದಘೋರಪಾಪವನೆಲ್ಲ ಕಳೆಯಬಹುದು ||ಶ್ರೀ ರಾಮನಾಮವೆಂಬ ಸಿಂಗಾಡಿ ತಕ್ಕೊಂಡುವೈರಿಷಡ್ವರ್ಗಗಳ ವಧೆ ಮಾಡಬಹುದು 1ಶ್ರೀ ಕೇಶವನೆ ಎಂಬ ಸಿದ್ಧ ಮಂತ್ರಗಳಿಂದಕಾಕುಕರ್ಮಗಳನ್ನು ಕಳೆಯಬಹುದು ||ವೈಕುಂಠಪತಿ ಎಂಬ ವಜ್ರವನೆ ತಕ್ಕೊಂಡುನೂಕಿ ಯಮಬಂಟರನು ನುಗ್ಗು ಮಾಡಲುಬಹುದು 2ಹರಿವಾಸುದೇವನೆಂಬ ಅಮೃತಪಾನಗಳಿಂದಮರಣ ಜನನಗಳೆರಡ ಜಯಿಸಬಹುದು ||ಅರಿತರೆ ಮನದೊಳಗೆ ಪುರಂದರವಿಠಲನಸರಸ ಸದ್ಗತಿಯನ್ನು ಸವಿಗಾಣಬಹುದು 3
--------------
ಪುರಂದರದಾಸರು
ಅಂಜಾನೆತನಯಧ | ನಂಜಾಯನಗ್ರಜ ||ಕಂಜಾಕ್ಷ ಶ್ರೀ ಮಧ್ವ | ಸಂಜಯವಂತಾ 1ಮಾರುತಿ ನಿನ್ನಯ | ಕೀರುತಿ ಜಗದೊಳು ||ಬೀರುತಿದ ಕೊ ನಾ | ಸಾರುತೀ ನೀಗಾ 2ರಾವಣಾನುಜ ಸು | ಗ್ರೀವಾ ವಿಪ್ರಜಾನಂತೆ ||ಭೂವರನಂತೆ ಕಾಯೋ | ದೇವೇಂದ್ರ ಪಾಲಾ3ಪ್ರಸ್ತುತಬಿನ್ನಪ| ವಿಸ್ತರಿಪಕೃತಿಸ ||ಮಸ್ತರೂ ಕೇಳಲಿ | ಆಸ್ಥೀಯಲಿಂದಾ4ಪ್ರಾಣೇಶ ವಿಠ್ಠಲಾ ಪ್ರೀ | ತಾನಾಗಬೇಕೀದಕೆ ||ಹೀನ ವಿಷಯಗಳಾ | ನಾನೊಲ್ಲೆ ದೇವ 5
--------------
ಪ್ರಾಣೇಶದಾಸರು