ಒಟ್ಟು 2071 ಕಡೆಗಳಲ್ಲಿ , 115 ದಾಸರು , 1458 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯತಿಗಳು ಇರುವರ್ಯತಿಗಳ್ಹನ್ನೆರಡು ಮಂದಿ ರಘುವ(ರ) ಅಕ್ಷೋಭ್ಯತೀರ್ಥರ ನಡುವೆ ಕುಳಿತಿದ್ದಂಥ ಟೀಕೆ ಬರೆದ ಜಯ ಮಹರಾಯರಿವರು ಪಾಲಿಸೆನ್ನನು ಜಯರಾಯ ಪ ಎತ್ತಿನ ಜನ್ಮದಿ ಬಂದು ಶ್ರೀಮದಾನಂದತೀರ್ಥರಲ್ಲಿದ್ದು ಶಿಷ್ಯತ್ವ ವಹಿಸಿಕೊಂಡು ಬಿಟ್ಟು ಹರಿದಿನ ಮೇವು ನೀರನೆ ಪುಸ್ತಕದ ಗಂಟ್ಹೊತ್ತು ತಿರುಗುತ ತತ್ವಜ್ಞಾನವ ತಿಳಿದು ದ್ವಾದಶ ಸ್ತೋತ್ರ ಹೇ ಳುತ ಪ್ರಕಟವಾದರು 1 ಗೋವುಸುತನ ಜನ್ಮ ನೀಗಿ ಮಂಗಳವೇಡಿ ಸಾಹುಕಾರನ ಸುತನಾಗಿ ತೇಜಿಯನೇರಿ ಮಾ(ಮಹಾ?) ನದಿ ಮಧ್ಯದಲಿ ಮಂಡಿಬಾಗಿ ನೀರನು ಕುಡಿಯ- ಲಾಕ್ಷಣ ನೋಡಿ ಕರೆತರಲವರ ಗುರುಗಳ ಪಾದಕÀ್ವಂದನೆ ಮಾಡಿ ನಿಂತರು 2 ಅಕ್ಷೋಭ್ಯತೀರ್ಥರು ಆ ಮಹಿಮರ ನೋಡಿ ಕೊಟ್ಟು ಕಾಯ್ಕರದಲಿ ಜುಟ್ಟು ಜನಿವಾರವನು ಕಿತ್ತೆ ಕಾವಿಶಾಟಿಗಳನು ಉಟ್ಟು ದಂಡ ಕಾಷ್ಠವ್ಹಿಡಿದು ಶ್ರೇಷ್ಠಯತಿ ಆಶ್ರಮದಿ ಕುಳಿತಿರೆ ಹೆತ್ತವರು ಹುಡುಕುತ್ತ ಬಂದರು 3 ಕಂಡಕಂಡಂತೆ ಮಾತುಗಳಾಡಿ ಗುರುಗಳಿಗೆ ಧೋಂಡು ರಘುನಾಥನ ಕರಕೊಂಡು ಹಿಂದಕೆ ಹೋಗಿ ಹೆಂಡತಿ ಸಹಿತೆರೆದು ಪ್ರಸ್ತ ಮಂಡಿಗಿ ಮೃಷ್ಟಾನ್ನ ಉಣಿಸಿ ಚೆಂದದ್ವಸ್ತ್ರಾಭರಣ ಕೊಟ್ಟುರುಟಣೆಯ ಮಾಡಿಸ್ಯಾರತಿಯ ಬೆಳಗೋರು 4 ಸುಪ್ಪತ್ತಿಗೆಯು ಮಂಚ ಕುತ್ತಣಿ ಹಾಸಿಕೆಯಲ್ಲಿ ಇಟ್ಟು ತಾಂಬೂಲ ಬು- ಕ್ಕಿ ್ಹಟ್ಟು ಪರಿಮಳ ಗಂಧ ಸಕ್ಕರೆ ಕ್ಷೀರಗಳು ಲಡ್ಡಿಗೆ ಅಚ್ಚಮಲ್ಲಿಗೆ ಮಾಲೆ ಫಲಗಳು ರತ್ನ ಜ್ಯೋತಿ ಪ್ರಕಾಶದೊಳಗುತ್ತಮರು ಕುಳಿತಿರಲರ್ಥಿಯಿಂದಲಿ 5 ಮಡದಿ ಮಂಚಕೆ ಬಂದ ಸಡಗರವನು ನೋಡಿ ಹೆಡೆಯ ತೆಗೆದು ಕಣ್ಣು ಬಿಡುತ ವಿಷನಾಲಿಗೆಯ ಚಾಚುತಾರ್ಭಟಿಸಿ ಬರುತಿರಲ- ಸಾಧ್ಯಸರ್ಪವು ಕಡಿವುದೆನುತೆದೆ ಒಡೆದು ಕೂಗಲು ಹಡೆದವರು ಬಾಯ್ಬಿಡುತ ಬಂದರು 6 ಹಾವಾಗ್ಹರಿದು ಹುತ್ತವ ಸೇರಿಕೊಂಬುವೋದೀಗ ನಾವು ಮಾಡಿದಪರಾಧ ಕ್ಷಮಿಸಬೇಕೆನುತಲಿ ಬೇಡಿಕೊಂಡಾಕ್ಷಣದಿ ಮಗನ ನೋಡಿ ಕರೆತಂದಾಗ ಅಕ್ಷೋಭ್ಯರಾಯರಂಘ್ರಿಚರಣಕೊಪ್ಪಿಸಿ ನಾವು ಧನ್ಯರಾದೆವೆಂದರು 7 ಅತಿ ಬ್ಯಾಗದಿಂದವರಿಗ್ಯತಿ ಆಶ್ರಮವಕೊಟ್ಟು ದೇ- ವತಾ ಪೂಜೆಗಧಿಕಾರ ಮಾಡಲು ಗುರುಗಳು ಪಾಂಡಿತ್ಯದಿ (ಇ)ವರಿಗೆ ಪ್ರತಿಯು ಇಲ್ಲ- ವೆಂದೆನಿಸಿ ಮೆರೆವರು ಪತಿತರನೆ ಪಾವನವ ಮಾಡಿ ಸದ್ಗತಿಯ ಕೊಡುವ ಸಜ್ಜನ ಶಿರೋಮಣಿ 8 ಮಧ್ವರಾಯರು ಮಾಡಿದಂಥ ಗ್ರಂಥಗಳಿಗೆ ತಿದ್ದಿ ಟೀಕೆ ಟಿಪ್ಪಣಿ ಮಾಡಿ ಪದ್ಮನಾಭ ಭೀಮೇಶಕೃಷ್ಣಗೆ ಪರಮ ಭಕ್ತರೆನಿಸಿ ಮೆರೆವರು ವಿದ್ಯಾರಣ್ಯನ ಗರುವ ಮುರಿದು ಪ್ರಸಿದ್ಧರೆನಿಸೋರು ಸರುವ ಲೋಕದಿ 9
--------------
ಹರಪನಹಳ್ಳಿಭೀಮವ್ವ
ಯಮುನಾತೀರದಿ ಕೊಳಲೂದಿ ಕೃಷ್ಣಾ ಪ. ರಮಣಿಯರ ಮನ ಸೆಳೆವನೆ ಕೃಷ್ಣಾ ಅ.ಪ. ಮನೆಗೆಲಸವು ಕೈ ಜಾರುತಲಿಹುದೇ ಸುಮಶರನೈಯ್ಯನು ಕೊಳಲೂದೆ ಸಖಿ 1 ತನ್ನಯ ಕರದೊಳ್ ರನ್ನದ ಕೊಳಲೊಳ್ ಚನ್ನಿಗರಾಗದೊಳೂದೆ ಸಖಿ 2 ಭೋಗಿಶಯನೆ ಶ್ರೀ ಶ್ರೀನಿವಾಸ ಧೊರೆ ಅನುರಾಗದಿ ಕರೆವಾ ಕೊಳಲೂದಿ ಸಖಿ ಎಮ್ಮ ಅನುರಾದಿ ಕರೆವಾಕೊಳಲೂದಿ ಸಖಿ 3
--------------
ಸರಸ್ವತಿ ಬಾಯಿ
ಯಾಕಿಷ್ಟು ದಯವಿಲ್ಲ ಎನ್ನಮೇಲೆನೀ ಕರುಣಿಸಿದರಾಗದ ಕಾರ್ಯವುಂಟೆ ಪ ಬಾಲೆಗೊಲಿದು ಹಾಲಕುಡಿದವನೆಂದೆನೆಸೂಳೆಯ ಮನೆಗೆ ನಾ ಹೋಗೆಂದೆನೆಲೋಲಾಕ್ಷಿಯ ಕುಚದೊಳೆ ಮಾತಾಡೆಂದೆನೆಚೋಳನಂತೆ ಹೊನ್ನ ಮಳೆಯ ಕರೆಯೆಂದೆನೆ1 ಊರುಗಲ್ಲೊಳು ಕನ್ನವ ಕೊಯಿದನೆಂದನೆಊರನೆ ಕೈಲಾಸಕ್ಕೊಯಿಯೆಂದೆನೆಕ್ರೂರ ಬಾಣನ ಬಾಗಿಲ ಕಾಯ್ದನೆಂದೆನೆನೀರ ಮಂಡೆಯೊಳು ಪೊತ್ತವನೆಂದು ಪೇಳ್ದೆನೆ 2 ಮಲ್ಲಗಾಳಗವನು ಮಾಡಿದನೆಂದೆನೆಬಿಲ್ಲಿನಿಂ ಬಡಿಸಿಕೊಂಡವನೆಂದೆನೆಎಲ್ಲರರಿಯೇ ತಿರಿದುಂಡವನೆಂದನೆಕಲ್ಲುಮನವೇ ಕೆಳದಿರಾಮೇಶ್ವರಲಿಂಗ 3
--------------
ಕೆಳದಿ ವೆಂಕಣ್ಣ ಕವಿ
ಯಾಕೆ ನಿರ್ದಯನಾದೆ ಲೋಕೇಶ ಪ್ರಭುವೆ ಸಾಕಲಾರದೆ ಎನ್ನ ನೂಕಿ ಭವದೊಳಗೆ ಪ ನಿನ್ನ ನಾಮಸ್ಮರಣೆ ಮಾಡದಲೆ ಹಗಲಿರುಳು ಅನ್ಯ ವಿಷಯಗಳಿಂದ ನೊಂದು ಬಳಲಿದೆನೊ ನಿನ್ನ ಧ್ಯಾನವ ಮಾಳ್ಪಚ್ಛಿನ್ನ ಭಕ್ತರೊಳಿರಿಸಿ ಚನ್ನಾಗಿ ಸಲಹೊ ಪ್ರಸನ್ನ ಮಾಧವನೆ 1 ಆಪನ್ನ ಜನರನು ಪೊರೆದೆ ಸನ್ನುತಾಂಗನೆ ದೇವ ಸರ್ವವ್ಯಾಪಕನೆ ಪನ್ನ ಗಾರಿವಾಹನ ಪ್ರಸನ್ನ ಶ್ರೀಹರಿ ಶೌರಿ ಎನ್ನ ಕಡೆಹಾಯಿಸಯ್ಯ ಜೀಯ 2 ಅಕ್ಷಯ ಫಲಪ್ರದ ಪಕ್ಷಿವಾಹನ ಕೃಷ್ಣ ಕುಕ್ಷಿಯೊಳು ಜಗವನಿಂಬಿಟ್ಟ ಶ್ರೀ ಹರಿಯೆ ರಕ್ಷ ಶಿಕ್ಷಕ ಜಗದ್ರಕ್ಷ ಪಾಂಡವ ಪಕ್ಷ ಈಕ್ಷಿಸಿ ಎನ್ನನುದ್ಧರಿಸಿ ಸಲಹದಲೆ3 ಪರಿಪರಿಯ ಕಷ್ಟಗಳ ಪರಿಹರಿಸಿ ಭವದೊಳಗೆ ದುರಿತದೂರನೆ ಕಾಯೊ ಶರಣ ಜನರ ಪರಿಸರನೊಡೆಯ ನಳನಾಮ ಸಂವತ್ಸರದಿ ಕರೆಕರೆಯ ಕಷ್ಟಗಳ ಬಿಡಿಸಿ ಸಲಹದಲೆ4 ಕನಕಗರ್ಭನ ಪಿತನೆ ಕಮಲನಾಭ ವಿಠ್ಠಲ ಮಿನಗುತಿಹ ದಿವ್ಯ ಸೌಂದರ್ಯ ಮೂರುತಿಯೆ ಸನಕಾದಿ ಮುನಿವಂದ್ಯ ಕ್ಷಣ ಬಿಡದೆ ಸ್ಮರಿಸುವರ ಇನಕುಲೇಂದ್ರನೆ ದೇವ ಬಿಡದೆ ಸಲಹದಲೆ5
--------------
ನಿಡಗುರುಕಿ ಜೀವೂಬಾಯಿ
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾಕೆ ಬರವಲ್ಲಿ ಭಕುತನವಸರಕೆ ಪ ಬೇಕಿಲ್ಲೆ ಭಕ್ತವತ್ಸಲನೆಂಬ ಬಿರುದೀಗ ಅ.ಪ ಸುರಮುನಿ ನುಡಿಕೇಳಿ ನಾರಿ ಸತ್ಯಭಾಮೆ ಹರಿ ನಿನ್ನ ದಾನಮಾಡೆ ವರ ವೀಣ ಪುಸ್ತಕ ಹೊರಿಸಿ ಕರೆದೊಯ್ದನೇನೊ 1 ಮಾತೆಯ ಹಂಗಣೆಯ ಮಾತಿಗೆ ಖತಿಗೊಂಡು ಪೋತ ಧ್ರುವ ಅರಣ್ಯ ಪೋಗೆ ಕಾಯ ಪೋದ್ಯಾ 2 ಕುರುಪ ಧರ್ಮಾದ್ಯರ ಕರೆಸಿ ಪಗಡೆಯಾಡೆ ಸರಸಿಜಾಕ್ಷಿಯ ಸೀರೆಯ ಕಾಯ ಪೋದ್ಯಾ 3 ಹಿರಣ್ಯಾಕ್ಷನನುಜ ತರಳನ ಬಾಧಿಸೆ ಥೋರ ಕಂಬದಿ ಒಡೆದು ನರಮೃಗ ರೂಪನಾಗಿ ಪೋದ್ಯಾ 4 ನೀರಡಿಸಿ ಗಜರಾಜ ಸರೋವರಕೆ ಬರಲು ನಕ್ರ ಪಿಡಿದೆಳೆಯೆ ಕಾಯ ಪೋದ್ಯಾ 5 ವರವೇದ ಶಾಸ್ತ್ರ ತೊರದು ಪರಮ ನೀಚಳ ಕೂಡಿ ಮರಣ ಕಾಲದಲ್ಲಜಮಿಳ ನಾರಗನೆಂದು ಕರೆಯೆ ಪೋದ್ಯಾ 6 ಕರುಣಿ ವಿಜಯ ರಾಮಚಂದ್ರವಿಠಲ ಅವರ ಸರಿ ನಾನಲ್ಲವೊ ತವ ಚರಣ ಸೇವಕರ ಸೇವಕನೊ 7
--------------
ವಿಜಯ ರಾಮಚಂದ್ರವಿಠಲ
ಯಾಕೆ ಬಾರನಕ್ಕಯ್ಯ ಎನ್ನಯ ಪ್ರಾಣನಾಥನ ಕರೆತಾರೆ ಸೈರಿಸಲಾರೆ ಪ. ಸೋಗೆಗಂಗಳ ಸನ್ನೆ ಮಾಡಿ ಪೊಳೆದು ಪೋದ ಮೇಘದ ಮಿಂಚಿನಂತೆ ಮಂದರೋದ್ಧಾರ ಬಾಗಿದ ಮುಖವೆತ್ತಿ ಎನ್ನ ನೋಡದೆ ಪೋದ ಹ್ಯಾಂಗ ಮಾಡಲಿ ಸಖಿಯೆ ಹೇಳಲಿ ಪ್ರಿಯೆ 1 ಕರವೊಡ್ಡಿ ಬೇಡಿಕೊಂಡರೆ ಒಲ್ಲದೆ ಪೋದ ಕರೆದರೆ ಪಿತನಾಜ್ಞೆ ತೋರುತಾನೆ ನಿರುತದಿ ಏಕಪತ್ನಿಯ ವ್ರತನೆನುತ ಸರಿಬಂದ ಸತಿಯರ ಒಡನಾಡುತೈದಾನೆ ಗರುವತನವ ಬಿಡನೆ ಗೋವ ಕಾಯ್ವವನೆ 2 ಸುಮ್ಮನೆ ಲಜ್ಜೆಭಂಗವ ಮಾಡಿ ಪೋದನೆ ಒಮ್ಮೆ ಮನೆಗೆ ಬಾರನೆ ವಾಜಿವಾಹನನೆ ತಮ್ಮ ಧ್ಯಾನದೊಳೆನ್ನ ಮನಸು ನಿಲ್ಲಿಸಿ ಪರ- ಬೊಮ್ಮ ಮೂರುತಿ ಹೆಳವನಕಟ್ಟೆರಂಗನ ಘಮ್ಮನೆ ಕರೆದುತಾರೆ ಸೈರಿಸಲಾರೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಯಾಕೆ ಮಲಗಿದೆಯೊ ಶ್ರೀಕಾಂತ ದ್ವಾರಕಾವಾಸ ಸೂರ್ಯ ಉದಯಾಯಿತು ಗೋಕುಲದೊಳಗಿದ್ದ ಗೋಮಕ್ಕಳೆಲ್ಲ ಧ್ವಜ- ರೇಖಾ ಚರಣಕಮಲಕೆರಗಿ ಕರೆಯುತಲಾಗ ಪ ಅಂಬುಧಿ ಒಳಗಾಡಿ ತಂದು ವೇದವನು ಕೊಡು ಮಂದರೋದ್ಧಾರ ಸುರರಿಗೆ ಸುಧೆಯ ನೀಡು ತಂದು ದಾಡಿಂದ ಧರೆಯನು ಹರವಿ ಧರಾಪತಿಯೆ ಕೊಂದು ರಕ್ಕಸನ ನಂದನಗೆ ದಯಮಾಡದಲೆ 1 ಬೇಡಿ ದಾನವ ಭುವನ ಮಾಡಿದೆಲೆ ಮೂರ್ಹೆಜ್ಜೆ ಆಡಿದ್ವಚÀನವ ನಡೆಸುತಾರಣ್ಯವಾಸದಲಿ ಆದಿಲಕ್ಷ್ಮಿಯನೆ ಕದ್ದಸುರನ್ನ ಸಂಹರನೆ 2 ಗೊಲ್ಲ ಸತಿಯರ ಕೂಡ ಸಲ್ಲಾಪ ಸಾಲದಲೆ ಎಲ್ಲ ತ್ರಿಪುರರ ಸತಿಯರಲ್ಲಿ ಪೋಗುವರೆ ಎಲ್ಲಿ ಓಡ್ಯಾಡಿದ್ಹೇಳಿಲ್ಲಿ ವಾರಿಧಿಶಯನ 3
--------------
ಹರಪನಹಳ್ಳಿಭೀಮವ್ವ
ಯಾಕೆ ಮೈಮರೆದೆ ನೀನು ಪ. ಯಾಕೆ ಮೈಮರೆದೆ ಶ್ರೀ ಹಯವದನನ ಪಾದವನುಬೇಕೆಂದು ಬಿಡದೆ ಭಜಿಸೊ ನಿನ್ನಕಾಕು ವ್ಯಸನಗಳ ತ್ಯಜಿಸೊ ಈ ದೇಹತಾ ಕಂಡ ಕನಸೋ ಸ್ಥಿರವಲ್ಲ ಇನ್ನುನೀ ಕೇಳದಿರೆ ನಿನ್ನ ಮನಸೋ ಪ್ರಾಣಿ ಅ.ಪ. ಪರಹೆಣ್ಣುಗಳ ನೋಡಿ ಪಾತಕಿಗಳ ನೀಡಾಡಿಹರಿದೆದ್ದು ಕಡೆಗೆ ಕರೆವೆ ಎಲೆಮರುಳೆ ಹರುಷದಿಂದವಳ ನೆರೆವೆ ಅಕಟಕಟದುರುಳ ಜೀವನೆ ನಿನಗೆ ತರವೆ ಮತ್ತೊ-ಬ್ಬರಿಗೆ ಬರಿದೆ ನೀ ಹೇಳುವೆಲ್ಲೊ ಶಾಸ್ತ್ರಗಳನೊರದೊರದು ಕೇಳ್ವೆಯಲ್ಲೊ ನೀ ಹೋಗಿನರಕದೊಳು ಬೀಳ್ವೆಯಲ್ಲೊ ಪ್ರಾಣಿ 1 ಧನವ ಕೂಡಿಸಿಕೊಂಡು ದಾನ ಧರ್ಮವ ಮಾಡ-ದೆನಗಾರು ಸಾಟಿಯೆಂಬೆ ಇಷ್ಟಜನರ ಬಿಟ್ಟೊಬ್ಬನುಂಬೆ ಎಲೊ ಎಲೊಮುನಿದು ಸಕಲರ ಮುನಿಯಗೊಂಬೆ ಆಧನವು ಮನಶುದ್ಧವಾಗಿ ಇಹುದೆ ಅದು ಸಾವದಿನದೆ ಸಂಗಡ ಬಾಹುದೆ ಕುಬೇರನಬಿಟ್ಟು ಕಡೆಗೆ ಹೋಹುದೆ ಪ್ರಾಣಿ 2 ಅಳೆವ ಕೊಳಗದ ಮಾಟ ಆತ್ಮನಿನ್ನೋಡಾಟ ಸರ-ಕಳೆದ ಬಳಿಕ ನೋಡೊ ದೇಹ ತಾ-ನುಳಿಯದು ಹಮ್ಮು ಮಾಣೊ ಎಲೆ ಮರುಳೆಗಳಿಸಿರೋ ಧರ್ಮಗಳ ವ್ಯರ್ಥ ಕೆಡಬ್ಯಾಡೊ ದಿನಮಾನಗಳ ಕಳೆಯದಿರು ನಿತ್ಯವಲ್ಲ ಇದಕೆಉಳಿದರ್ಥ ಕೆಲಸಕಿಲ್ಲ ಹಿಂದೆಉಳಿದವರೊಬ್ಬರಿಲ್ಲ ಪ್ರಾಣಿ 3 ಕೊಲೆ ದೋಷವೆಂದರಿಯೆ ಕೊಸರು ಒಬ್ಬನ ಜರೆವೆಇಳೆಯೊಳದಾವನೀತ ನಿನಗೆ ನೀತಿಳಿದುಕೊ ನಿನ್ನಮಾತ ನೀಖಿಲಗೊಳಬೇಡ ಆಭಾಸ ಸೂಚಿಸಿ ಜರೆವರೆಕೊಲೆಗೆ ಗುರಿಯಾದೆ ಕಾಣೊ ಈ ಕೋಪಹೊಲೆಗೆ ಸರಿಯಲ್ಲವೇನೊ ನಿನ್ನಹುಳುಕು ಬುದ್ಧಿಯನು ಮಾಣೊ ಪ್ರಾಣಿ 4 ಮರೆದು ಕಳೆ ಕ್ರೋಧವನು ಮಾಡದಿರು ಲೋಭವನುಗುರುಹಿರಿಯರಾದವರಿಗೆರಗೂ ಅನಾ-ಥರಿಗೆ ಚೆನ್ನಾಗಿ ಮರುಗೊ ಇದೆಪರಮಗತಿಯ ಸೆರಗೊ ಭಕ್ತರಿಗೆಸಿರಿಯರಸ ಹಯವದನನೊಡೆಯ ಲೋಕಪರನಿಂದಕರಿಂಮುಕ್ತಿಪಡೆಯೊ ಭಜಿಸಿದುರಿತ ಸಂಕಲೆಯ ಕಡಿಯೊ ಪ್ರಾಣಿ 5
--------------
ವಾದಿರಾಜ
ಯಾಕೆ ರಂಗ ನಿನಗೆ ಮಾಕಾಂತೆಯೊಳು ಗರ್ವ | ಲೋಕದೊಳು ಅಬಲೆಯೇನೋ ಕೇಳಯ್ಯಾ ನೀನು ಪ ಮೀನಾವತಾರವ ನೀನಂದು ವಿಡಿದರೆ | ಮೀನಾಂಬಕಿ ತಾನಾದಳೋ1 ಬೆಟ್ಟವ ಬೆನ್ನಿಲಿ ಕಷ್ಟದಿ ನೆಗೆದರೆ | ಬಟ್ಟ ಕುಚಗಳ ಹೊತ್ತಳೋ 2 ಧರೆಯ ಭಾರವ ತಾಳಿದರ ನಿನ್ನಾಭಾರವನು | ಧರಿಸಿದಳಂದಗಲದಲೆ 3 ಸಿಂಹಾನನನಾಗಿ ಮಹಿಮೆ ದೋರಿಸಿದರೆ | ಸಿಂಹದಂತೆ ನಡು ನಡುವಾದಳೋ 4 ಬಲಿ ಬಾಗಿಲಕಾಯಿದರೆ ನೆಲೆಸಿಹಳವಳಲ್ಲಿ | ಬಲಿಯಾ ಭಾಗ್ಯ ರೂಪವಾಗಿ5 ಸುರರ ಹೊರಿಯಲಿಕ್ಕೆ ಪರಶವ ಪಿಡಿದರೆ | ಪರಸಗೈಯ್ಯ ತಾನಾದಳೋ 6 ಹರನಾ ಚಾಪವನೆಗೆದರೆ ಅದನೆವೆ ಮುನ್ನೆ | ಕರೆದಲೆ ತ್ಯಾಡಿದಳೊ 7 ಸೆರೆಹರಿದು ಸ್ತ್ರೀಯರಾ ತಂದರೆ ನಾರದರಿಂದ | ಸೆರೆವಿಡಿಸೆ ಕೊಂಡಳೋ 8 ಮುಪ್ಪರ ಹೊಕ್ಕರೆ ನೀವಪ್ಪುತಲಿ ಹನಿನ್ನಾ | ಮುಪ್ಪುರದಲಿ ಮೆರೆದಳೋ 9 ತುರುಗವ ಏರಿಕೊಂಡು ತಿರುಗಲು ನಿನ್ನಾಕೂಡ | ತುರಗಮನಿ ತಾನಾದಳೋ 10 ಕಡೆಯಕಾಲಕ ನೀರೊಳೊಡಗೂಡಿ ಮಲಗಲು | ಒಡನೆ ವಟದೆಲೆ ಯಾದಳೋ11 ಗುರು ಮಹಿಪತಿ ಪ್ರಭು ಚರಿತೆಯಾ ನಿಮ್ಮೀರ್ವರ | ಭರದಿ ಹೇಳಲೆನ್ನಳವೇ 12
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾಕೆನ್ನ ಎದುರಲಿ ನಿಲ್ಲುವುದಿಲ್ಲೋ ಯಾಕೆನ್ನಯ ಕರೆ ಕೇಳುವುದಿಲ್ಲೋ ಪ ಯಾಕೆನ್ನ ಅರ್ಚನೆಗೊಲಿಯುವುದಿಲ್ಲೋ ಯಾಕೆನ್ನೊಳು ದಯಮಾಡುವುದಿಲ್ಲೋ ಅ.ಪ ತರಳ ಧೃವನ ಮೊರೆ ಕೇಳಿಸಿತಲ್ಲ ಕರಿ ಎತ್ತಿದ ಸುಮ ಕಾಣಿಸಿತಲ್ಲ ಅರಿ ಅನುಜನ ಸೇವೆ ಹಿರಿದಾಯ್ತಲ್ಲಾ ಕರುಣ ಎನ್ನೊಳಗೇಕೆ ಬರದೋ ಕೃಷ್ಣಯ್ಯ 1 ಅಗಣಿತ ಗೋಪಿಯರೆಡೆಯಲಿ ನಲಿದೆ ನಗಧರನಾಗಿ ಗೋಪಾಲರ ಪೊರೆದೆ ಖಗನಿದ್ದೆಡೆಗೇ ಭರದಲಿ ನಡೆದೆ ನಗುಮೊಗದರಸ ಮಾಂಗಿರಿಯ ರಂಗಯ್ಯ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾಕೆನ್ನೊಳಿಂತು ನಿರ್ದಯವೆಲೊ ದೇವ ನೀ ಕರುಣದಿ ನೋಡದಿರಲು ಮತ್ತಾವ ಕಾವ ಪ ಗಜರಾಜನ ನೀ ಸಲಹಲಿಲ್ಲೇ ಅಂದು ನಿಜಭಕ್ತ ಪ್ರಹ್ಲಾದನ ಪೊರೆಯಲಿಲ್ಲೇ ಪರಿ ಎಲ್ಲ ಬಲ್ಲೆ ನಿನ್ನ ಭಜನೆಯೊಳಿಹ ಎನ್ನನೇಕೆ ನೋಡಲೊಲ್ಲೆ 1 ದ್ರೌಪದಿ ಕರೆಯಲಕ್ಷಯ ವಸ್ತ್ರವ ಕೊಟ್ಟೆ ನೀನು ಶಾಪದ ಶಿಲೆಯ ಕುಲಕೆ ತರಲಡಿಯಿಟ್ಟೆ ಪಾಪಿ ಅಜಮಿಳನ ಅಘಗಳ ಸುಟ್ಟೆ ಸ್ವಾಮಿ ಶ್ರೀಪದಗ್ರಸ್ತನಾದೆನ್ನ ನೀ ಕೈಬಿಟ್ಟೆ 2 ಬಿಡಬೇಡೆನ್ನ ಕೈಯ ಶ್ರೀನಿವಾಸ ಬಹು ಬಡವ ನಾನಹುದು ಮಧ್ವಗೃಹವಾಸ ಕಡುಪಾಪಿ ನಾನಲ್ಲವೊ ರಂಗೇಶವಿಠಲ ದೃಢವಾಗಿ ನಂಬಿಹೆನೊ ನಿನ್ನ ಸರ್ವೇಶ 3
--------------
ರಂಗೇಶವಿಠಲದಾಸರು
ಯಾಕೆಲೊ ರಂಗ ನಿನಗಿಂತು ನಟನೆಯ ಮಾತು ಪ ಮಾಕಾಂತ ಕರೆಸಿದರೆ ಬಾರದಿಹ ಪೊಗರುಅ ತಸ್ಕರ ಬುದ್ಧಿ ಕಡೆಗೆ ಇರಿಸಿಬಾಲಕನ ವಂದರಿಸಿ ಬಹುಭಾಗ್ಯವಂತನೆನಿಸಿಎಲ್ಲರೊಳು ಸಲಿಗೆ ನಿಲಿಸಿದಳೊ ನಿಮ್ಮರಸಿ 1 ಕೆಸರ ಚೊಗೆಯಂ ಬಿಡಿಸಿ ಗುಂಜ ಸರವಂ ತೆಗೆಸಿಬಿಸರುಹ ಮಣಿಮಾಲೆ ಕಡೆಗೆ ಇಡಿಸಿಪೊಸ ಪೀತಾಂಬರ ಉಡಿಸಿ ನವರತ್ನವಂ ತೊಡಿಸಿವಸುಧೆಯೊಳು ಮಿಗಿಲಾಗಿ ನಿಲಿಸಿದಳೊ ನಮಿಸಿ 2 ಎನ್ನ ಮಾತನು ಕೇಳು ಮುನಿಸು ಕೃತ್ಯವ ಸೀಳುಇನ್ಯಾಕೆ ಯೋಚನೆ ಫಲವ ಪೇಳುಬಿನ್ನಹವನು ಕೇಳು ನೆರೆಗೂಡಿ ಸುಖಬಾಳುಚೆನ್ನ ಬಾಡದಾದಿಕೇಶವ ದಯಾಳು 3
--------------
ಕನಕದಾಸ
ಯಾಕೋ ಕೋಪ ಕೃಷ್ಣಾ ನಿನಗೆ ಎನ್ನ ಮೇಲೆ ಎಲ್ಲ ಸಾಕಬೇಕು ಎಂಬ ನಿಜವಾ ಪ ಲೋಕನಾಯಕನಾದ ಲಕ್ಷ್ಮೀಲೋಲಗೋವಿಂದ ಅನೇಕ ಅವತಾರಗಳೆತ್ತಿದ ಹರಿಯೆ ಮುಕುಂದಾ -------ಜನರೊಳಗಿನ್ನು ಹೀನನ ಮಾಡಿ ಬಿಡಿಸಿ ------------------------------ 1 ತಂದೆತಾಯಿ ಬಂಧು ಬಳಗ ದೈವ ನೀನೆಂದು ಇನ್ನು ಎಂದೆಂದು ಭಕ್ತರ ಸಲಹೊ ಇಂದು ನಿನ್ನ ದ್ವಂದ್ವ ಚರಣಾನಂದದಿಂದ ಹೊಂದಿದವನು ಕಂದನೆಂದು--------- ಅಂದದಿಂದ ಪೊರೆಯದಿರುವದು ಹೇಗೊ 2 ಅಷ್ಟು ಜಗಕಾಧ್ಯಕ್ಷನಾದ ಆದಿಮೂರುತಿ ನಿಷ್ಟ ನೀನು ಶಿಷ್ಟ ಜನರ ಹೃದಯದಿರುತಿ ಇಷ್ಟು ಕಷ್ಟ ಬಡುತ ನಾನು ಇಷ್ಟದಿಂದ ಮೊರೆಯ ಹೊಕ್ಕರೆಸೃಷ್ಟಿಗೊಡೆಯನಾದ 'ಹೊನ್ನವಿಠ್ಠಲ’ ನಿನ್ನ ಇಷ್ಟ ಇಲ್ಲದೆಲ್ಲಾ 3
--------------
ಹೆನ್ನೆರಂಗದಾಸರು
ಯಾದವಾ ಮಾಧವಾ ಕರುಣಿಸು ಪ ಮೋದವನೀವ ದೇವ ಅ.ಪ . ತುಂಬಿದ ಸಭೆಯೊಳಾ ತರುಣಿಯಾ ಪೊರೆದೆಯಾ ನಂಬಿದ ಶರಣರ ಕಾವಾ 1 ಕರೆಯದೆ ವಿದುರನಾ ಮನೆಗೆ ನೀ ಬಂದೆಯಾನಿರುತದಿ ಭಕುತರ ಜೀವಾ 2 ಪ್ರಾರ್ಥಿಸೆ ಗದುಗಿನ ವೀರನಾರಾಯಣಾಪಾರ್ಥನ ಬಂಡಿಯ ಬೋವಾ 3
--------------
ವೀರನಾರಾಯಣ