ಒಟ್ಟು 2071 ಕಡೆಗಳಲ್ಲಿ , 107 ದಾಸರು , 1650 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಳಗಿನೊಳು ಬೆಳಗಾಯಿತು ನೋಡಿ ಥಳಥಳಿಸುತ ಮನದೊಳಗೆ ಝಳಿಸುತಿಹದು ಜಗದೊಳಗೆ ಧ್ರುವ ಬೆಳಗಾಯಿತು ಎನ್ನೊಳಗೆ ಸುಳಿವು ದೋರಿದ ಸದ್ಗುರು ಕೃಪೆಯ ಹೇಳಲಿನ್ನೇನದರ ಖೂನ ತಿಳಿದೇನೆಂದರೆ ಎಳೆಯು ಸಿಲುಕದು ಬಲು ಸೂಕ್ಷ್ಮ ಸುಜ್ಞಾನ ಹೇಳಿ ಕಿತ್ಯಾಡುವ ಮರುಳರಿಗೆ ತಿಳಿಯದಿದರನುಸಂಧಾನ ಕಳೆಯದ ಕಲ್ಪನೆ ಅನುಮಾನಿಗಳಿಗೆ ತಿಳಿಯುವುದೆ ಸದ್ಗತಿ ಸಾಧನ 1 ಬೆಳಗಿ ಬೆಳಗು ಬೆರೆದವನೆ ತಾ ಕುಲಕೋಟಿಗಳು ಧನ್ಯ ಮಳೆಮಿಂಚಿನ ಕಳೆಕಾಂತಿಗಳಿಡುತದೋರಿದ ಸದ್ಗುರು ಪುಣ್ಯ ಗುಹ್ಯ ತಾರ್ಕಣ್ಯ ಬೆಳಗು ಬೈಗಿಲ್ಲದ ಬೆಳಗಿನ ಪ್ರಭೆ ತಿಳಿದವನೆ ಮೂಲೋಕದೊಳಗೆ ಮಾನ್ಯ 2 ಬೆಳಗಿನೊಳು ಬೆರಗಾದನು ಮಹಿಪತಿ ಅತಿ ಆಶ್ಚರ್ಯವ ನೋಡಿ ತೊಳಲಿ ಬಳಲುವ ನಿದ್ರೆಯಗಳೆದನು ತಾ ಈ ಡ್ಯಾಡಿ ನಿಜ ಒಡಮೂಡಿ ಭವ ಪಾದವ ಕೂಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೇಕೆಂದರೆ ಬಾರದು ಒಲ್ಲೆನೆಂದರೆ ಹೋಗದುಏಕಂಜುವಿ, ಶ್ರೀಹರಿ ಕರುಣಿಸದೆ ಒಂದೂ ಆಗದು ಪ ಸುಖವಾದಡೆ ಕಾಣುತ ಮುಖ ಕಮಲವುವಿಕಸಿತವಾಹುದು ಶ್ರೀಹರಿ ಕರುಣದಿದುಃಖವಾದಡೆ ದುಸ್ಥಿತಿಯಲಿರಲು ಅಂ-ಬಕದಲಿ ಜಲ ಪೋಗುವುದೇಕೊ ?ಸುಖದುಃಖ ದಿವ ರಾತ್ರಿಯ ತೆರವದರಿಂದಲಿ ನರರಂ-ಗಕೆ ಬಾಹುದು, ರಕ್ಷಣೆ ಮಾಡುವ ಕಾಶಿಪೀತಾಂಬರಮಕರ ಕುಂಡಲಾಭರಣನ ನೆನೆ ಮನವೆ1 ಸಿರಿ ಬಂದರೆ ಸಿರಿಗಾನಂದವ ಮಾಡುವಿರೇತಕೆ ಮನ ನಿರ್ಮಳ ಧ್ವನಿಯಲಿದರಿದ್ರವು ಬಂದರೆ ಧಾತುಗೆಟ್ಟು ದೇಹಾ-ತುರ ಹೊಂದುವಿರೇತಕೆ ದುಗುಡದಿಸಿರಿ ದಾರಿದ್ರ್ಯವು ಸುರತತಿಗಡರುವತೆರನೆಂದರಿದದರಿಂದಲಿ ಮಾನ-ವರಿಗೆ ಬಾಹುದು, ಪರಿಹರಿಸುವ ಪರಮಾತ್ಮನೆನಿಪಮುರವೈರಿಯ ಬಿಡದಿರು ಎಲೆ ಮನವೆ 2ಬಿ ಜನನವಾದರೆ ಹಾಡಿ ಹರಸಲೇತಕೆಅನುಗತಿಯನು ಹೇಳಿದರಳಲೇಕೆಜನನಮರಣವದೆಲ್ಲರಿಗೆ ಗತಿಬಾಹುದು ಏಕೆಜನನ ಮರಣವನೊಂದು ಹೊರಗೆ ಮಾಡಿ ಪರಜನದೊಳಗಿರಿಸುವ ಸುಜನೇಶ ಮುನೀಶನೆಂ-ದೆನಿಸುವ ಕಾಗಿನೆಲೆಯಾದಿಕೇಶವರಾಯನಅನುಶ್ರುತಿಯನು ಬಿಡದಿರು ಎಲೆ ಮನವೆ 3
--------------
ಕನಕದಾಸ
ಬೇಗ ಪಾಲಿಸೊ ಬ್ರಹ್ಮಣ್ಯತೀರ್ಥ | ಕರುಣಿಸು ಇಷ್ಟಾರ್ಥ ಪ. ಯೋಗಿವರ ಶ್ರೀ ಅಬ್ಬೂರು ನಿಲಯ | ಸದ್ಭಕ್ತರಿಗತಿ ಪ್ರಿಯ ಅ.ಪ. ಸತ್ವಗುಣನೆ ಸರ್ವೋತ್ತಮ ಹರಿ ಪ್ರಿಯ | ಪಾವನ ಶುಭಕಾಯ ಚಿತ್ತದಲಿ ಹರಿ ಚಿಂತನೆ ಮಾಡುತಲಿ | ವರಗಳ ನೀಡುತಲಿ ಆತ್ಯಧಿಕದ ಕಣ್ವ ನದಿಯ ತೀರ ವಾಸ | ನಿನ್ನಲಿ ಹರಿ ವಾಸ ಸುಜನರುಗಳ ಪೊರೆವೆ 1 ಪ್ರೇಮದಿ ನೀ ಕೊಳಲು ಗೋಕ್ಷೀರವನೆರೆದೆ ಆಗಮಗಳ ಕಲಿಸಲು ಮೌಂಜಿಯ ಕಟ್ಟಿ | ಶ್ರೀಪಾದರಲಿ ಬಿಟ್ಟೆ ಯೋಗಿ ವ್ಯಾಸರಾಯರು ಎಂದ್ಹೆಸರಿಟ್ಟು | ಸನ್ಯಾಸವನೆ ಕೊಟ್ಟು 2 ಪಾಪಿ ಜನರ ಪಾವನಗೈಯುತಲಿ | ಶ್ರೀನಿಧಿ ಧ್ಯಾನದಲಿ ಕಾಪಾಡು ಸಧ್ಭøತ್ಯರ ದಯದಿಂದ | ತಪಸಿನ ಶಕ್ತಿಂದ ಶಿಷ್ಟರ ಪೊರೆಯುತಲಿ ಗೋಪಾಲಕೃಷ್ಣವಿಠ್ಠಲನನು ಹೃದಯದಲಿ | ನಿತ್ಯದಿ ಕಾಣುತಲಿ 3
--------------
ಅಂಬಾಬಾಯಿ
ಬೇಗದಿ ಮುಕುಂದ ಪ. ಮಾಡುವ ಭಾಗ್ಯ ಕರುಣಿಸೊ ಕೃಪೆಯಿಂದ ಅ.ಪ. ನಿರುತ ನಿನ್ನೊಳಗಿಹವು ಸರಸಿಜ ಭವಮುಖರು ನಿನ್ನಪಾಂಗಮಸ್ಮರಣೆಯಿಂದಲಿ ಬಾಳ್ವರು ಪೀತಾಂಬರದಿಸರಿರವ ರೂಪಿಯಾಗಿ ಹೊಂದಿರುವಳು ನಗುತ 1 ನಿತ್ಯ ಸಂತೃಪ್ತರೂಪ ಸಕಲ ಲೋಕ ವ್ಯಾಪ್ತನಾಗಿರುವ ಭೂಪ ಜ್ಞಪ್ತಿ ಮಾತ್ರದಿ ಎನಗೆ ಒಲಿವ ಪರಮಾಪ್ತ ನೀನಿರುತಿರಲು ನೆನೆದು ಮರುಳಾದೆನು ವಿಲಿಪ್ತಿಯ ಸಲಿಸು 2 ತೋರದೊ ವರದ ನಿನ್ನನು ಮರೆದ ಕಾಯುವರ ಕಾಣೆ ನಿನ್ನಾಣೆ ಸಲಹೊ ಪುರಂದರಗೊಲಿದ 3 ಧರ್ಮಮಾರ್ಗವ ತೊರೆದು ಶೃತ್ಯದಿತ ಸತ್ಕರ್ಮಗಳ ಮರೆದು ನಿರ್ಮಲರನು ಜರಿದು ನೀಚರನೆಲ್ಲ ಭರ್ಮಗೋಸುಗ ತರಿದು ಸುಖವ ನೀಗಿ ನಾ ಬಾಗಿ ಕೂರ್ಮನಂತಿರುವೆ 4 ಆಸೆಯೆಂಬುದು ಎನ್ನನು ನಾನಾವಿಧ ಕ್ಷೇಶಬಡಿಸುವುದಿನ್ನು ಘಾಸಿಗೆ ಒಳಗಾದೆನು ಕೈಯಲಿ ಒಂದು ಕಾಸಿಲ್ಲದವನಾದೆನು ಶ್ರೀಶ ನೀ ಕರುಣಿಸಿನ್ನು ಸದ್ಗತಿಯನ್ನು ಸುಜನಪಹಾಸಗೊಳಿಸದೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬೇಡವೀಗ ಬಾಲೆ ಸಂಗ ಕೆಟ್ಟುಹೋಗುವೆ ಇದುಪಾಡಲ್ಲ ಭಂಗವನು ಅನುಭವಿಸುತಕಾಡ ಹಿಡಿಯುವೇ ಹುಟ್ಟುಗೆಡುವೆಯಲ್ಲೊ ಪ ಸತ್ಯವದು ನಾರಿದೋಷ ಮೃತ್ಯುವಲ್ಲೋ ಯಮನಿತ್ಯದಲಿ ಎತ್ತಿರುವ ಕತ್ತಿಯಲ್ಲೋ ಆತ್ಮ-ಹತ್ಯವಲ್ಲೋ ಅಪಥ್ಯವಲ್ಲೋ 1 ಸರಕು ಎಲ್ಲೋ 2 ಶಿಷ್ಟಾಶಿಷ್ಟರೆಂಬವರು ಕೆಟ್ಟರಲ್ಲೋ ಬಲುಗಟ್ಟಿ ತವಸಿಗಳು ಮತಿಗೆಟ್ಟರಲ್ಲೊ ಕಂ-ಗೆಟ್ಟರಲ್ಲೋ ಘಾಸಿಪಟ್ಟರಲ್ಲೋ 3 ಧಾರಣೆಯು ಧ್ಯಾನಮೌನ ಹಾರಿತೆಲ್ಲೋ ಕಾಮಕೂರ್ಗಣೆಗಳು ಮೊನೆದೋರಿತಲ್ಲೋ ಮನೆಹಾರಿತಲ್ಲೋ ಧೈರ್ಯತೂರಿತೆಲ್ಲೋ 4 ನಾರಿಯವಳು ನಿನ್ನ ಗತಿಗೆ ಮಾರಿಯಲ್ಲೋ ಗುರುವೀರ ಚಿದಾನಂದನನ್ನು ಸೇರು ಎಲ್ಲೋಪರಿಹಾರವೆಲ್ಲೊಲ್ಲೋ ಮುಕ್ತಿ ಸಾರೆ ಎಲ್ಲೋ 5
--------------
ಚಿದಾನಂದ ಅವಧೂತರು
ಬೇಡಿಕೊಂಬೆಗೋಪಾಲ ಬೇಡುವೆನೈ ದಯ ಪ ಮಾಡಿ ಎನ್ನೊಳು ಬೇಗ ಗಾಢ ಮಹಿಮ ವರ ನೀಡೋ ಕೃಪಾಂಬುಧೇ ಅ.ಪ ಮರುಳನಾಗಿ ನಾನು ತಿರುಗುವೆ ಧರೆಯೊಳು ಸಿರಿವರ ನಿಮ್ಮಯ ಚರಣವ ಸ್ಮರಿಸದೆ ಪರಿ ನರಕಕ್ಕೆ ಗುರಿಯಾದೆ ಮುರಹರ ಕರುಣದಿಂ ಮನ್ನಿಸಿ ಪೊರೆ ಸುರವರ 1 ದೀನದಯಾಪರ ಜಾನಕೀ ಮನೋಹರ ನೀನೆ ಗತಿಯೆಂದು ಧ್ಯಾನಿಸಿ ಬೇಡುವೆ ಹೀನನ ಮಾಡದೆ ಧ್ಯಾನಿಪ ಭಕ್ತನಂ ಮಾನದಿಂ ರಕ್ಷಿಸು ವೇಣುಧರಹರಿ2 ಸುರುಪರೀಶ ಹರಿ ಚರಣದಾಸರ ಮೊರೆ ಕರುಣದಿ ಆಲಿಸಿ ಕರಪಿಡಿದು ಪೊರೆ ನೆರೆನಂಬಿದೆ ನಿಮ್ಮ ಚರಣವ ಪರಿಪರಿ ಪರಮಪಾವನ ಮಾಡು ಸಿರಿವರ ಶ್ರೀರಾಮ 3
--------------
ರಾಮದಾಸರು
ಬೇಡಿದರೆ ನೀಡುವುದೇನು ಹಿರಿದೆ ಗೋವಿಂದ ಬೇಡದೆ ನೀಡೆ ನಿನ್ನಂತಸ್ತಿಗತಿಚೆಂದ ಪ ನೀಡುವನು ನೀನಿರಲು ಬೇಡಿಕೆಗೆ ಕೊನೆಯುಂಟೆ ಬೇಡಿ ಬೇಸತ್ತರೂ ಆಸೆಯಿಂಗುವುದುಂಟೆ ಬೇಡಿದಮಣಿ ನೂರುಜನುಮ ಸಾಕಹುದುಂಟೆ ಬೇಡದೇ ಭಜಿಪವಗೆ ಹುಟ್ಟು ಸಾವುಗಳುಂಟೆ 1 ಹಿಂದೆ ನೀನಿತ್ತುದನು ಇಂದುಣುತಲಿಹೆವಯ್ಯ ಮುಂದೆ ನಾನುಣಲೇನು ಬೇಡವಯ್ಯ ಸಂದಿರ್ಪುವೈ ಸಾಲಸೋಲಂಗಳೇನಯ್ಯ ಮುಂದೇನು ಬೇಡ ಮಾಂಗಿರಿವಾಸ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬ್ರಹ್ಮಜ್ಞಾನ | ಬಿಡು ಬಿಡು ಬಿಡು ನೀ ಸಂಸಾರ ಧ್ಯಾನ |ಕಡೆಯಲ್ಲಿ ನಿನ್ನ ಕಳಹುವರಲ್ಲಿಗೆ | ಬಿಡದಿರು ಸದ್ಗುರುವಿನ ಧ್ಯಾನ ಪ ಯಾತಕೆ ಕಲಿತ್ಯೋ ಬಹು ಯುಕ್ತಿಗಳ | ಬರಿ ಮಾತಿಲಿ ಆಗದು ನಿಜ ಮುಕ್ತಿ | ನೀತಿಯಿಂದ ನೀ ಅರಿತು ನೋಡಲು | ಸ್ವಾತ್ಮದ ಜ್ಞಾನವು ಆಗುವದಿದಕೆ1 ಸತಿ ಸುತರಾ ನೀ ನೋಡಿ ಹಿಗ್ಗುತಿ | ಮಿತಿಯಿಲ್ಲದೆ ಅವರಿಗೆ ತಗ್ಗುತಿ | ಗತಿಯ ಕೊಡುವ ಸಂತರು ಬಂದರೆ | ಮೋತಿಯ ತಿರುವಿ ವ್ಯಸನಕೆ ತಗ್ಗುತಿ 2 ಸಾಧು ಪುರುಷರ ಸಂಗವ ಹಿಡಿಯೊ | ಬೋಧಾಮೃತವನು ನೀ ಕುಡಿಯೊ | ಆದಿಯಲಿ ಭವತಾರಕ ಭಜಕರು | ಹೋದ ಹಾದಿಯ ನೀ ಹಿಡಿಯೊ 3
--------------
ಭಾವತರಕರು
ಬ್ರಹ್ಮದೇವರ ಸ್ತೋತ್ರ* ಮಟ್ಟತಾಳ ಕಂಬು ವಿಹಂಗ ಗಮನ ವಿಭುವೆನಂಬಿದವರ ಪೊರೆವ ವ್ಯಾಸವಿಠಲ ನೀ-ನೆಂಬುವರನ ನಂಬಿದ ನೀಚನ ಮರಿಯಾದಿರು 2 ತ್ರಿವಿಡಿತಾಳ ಜಿಹ್ವೆ ನುಡಿಯದುಸವಿಯದ ನಾನಾ ರಸವನುಂಡು ಬಹುಕಾಲಸವೆದು ಪೋದವು ನಟ್ಟ ಮನವು ಇನ್ನು ತಿರಗದುತವ ವಿಸ್ಮøತಿಯಲಿಂದ ಭೂ ವನದೊಳಿದ್ದ ಮಾ-ನವರ ಚರಿಯದಲಿ ಕೋಪವೆ ತಗ್ಗದುಎವೆ ಇಡುವಿನಿತು ಕಾಲವಾದರು ಪೂಜಾವಿವರದಲ್ಲಿಗೆ ಚಿತ್ತವು ನಿಲ್ಲದು ಭವವಿದೂರನೆ ಕೇಳುಕವಲ ಬುದ್ಧಿಯಲಿಂದ ನವನವ ರೂಪದ ಯುವತಿಯರನಿವಹದ ಅನುಭವ ದ್ವಿವಿಧವಿಂದಿಗೇ ಕಾ-ಯವ ನೋಡಲಿದ್ದಂತೆ ಇಲ್ಲದಂತೆಧ್ರುವದಲಿ ನುಡಿವೆ ಎನ್ನವಗುಣವಿನ್ನೊಂದುಭವಸಾಗರವ ದಾಟಿಸುವ ಜ್ಞಾನಿಗಳ ಪ್ರೀತಿಯನೆ ತ-ಗ್ಗುವಂತೆ ಚತುರ ತೋರುವೆಇವುಗಳಿಂದಾಗುವ ಜನನ ಬಾಧಿಯ ಬಲ್ಲೆಜೀವರಲ್ಲಿ ಹೀನ ಜನ್ಮವ ಬರುವದು ಬಲ್ಲೆಸ್ಥಾವಿರಾಯ ವ್ಯಾನಾದಿ ನೆಗುವವು ಪುಣ್ಯಾಖ್ಯಗಿರಿಗೆಪವಿಯಂಬದನುಗಾಲ ಪಠಿಸಬಲ್ಲೆಪವನನಂತರ್ಯಾಮಿ ಶ್ರೀವ್ಯಾಸವಿಠಲ ಇಂಥಅವಿವೇಕ ಮನುಜಂಗೆ ಆವಗತಿಯಾಗುವದೊ 3 ಅಟ್ಟತಾಳ ಅನ್ಯಾಯ ನಡತಿಗಳ ಚರಿಸುತಲಿಪ್ಪಮನುಜಾಧಮನಿಗೆ ಮಹಿಯೊಳಗೆ ವಿಪ್ರಜನ್ಮವ ನೀನಿತ್ತದಾವ ಬಗೆಯ ಕಾಣೆಇನ್ನೀಗ ಮಾಡುವ ಅನ್ಯಾಯ ನಡತಿಯುತಣ್ಣನ ಕಿಡಿಯಂತೆ ತತ್ಕಾಲಕಿಪ್ಪದುಘನ್ನ ಬವಣೆ ಮುಂದೆ ಅನುಭವವೇ ನಿಜಪನ್ನಗ ಶಯನ ಶ್ರೀ ವ್ಯಾಸವಿಠ್ಠಲ ಸುಪ್ರಸನ್ನ ವದನ ದೇವ ನಿನ್ನ ಪಾದವೆ ಗತಿ 4 ಆದಿತಾಳ ಪಾದ ಚೆನ್ನಾಗಿ ಪೊಂದಿಸಿನಿನ್ನವನಿವನೆಂದು ಮನುಜರಿಂದ ನುಡಿಸಿನಿನ್ನ ಕೀರ್ತನೆಯ ವದನದಿಂದ ಪೇಳಿಸಿಇನ್ನು ಈ ಬಗೆ ಮಾಳ್ಪರೆ ಘನ್ನದಯಾಂಬುಧೇಮನ್ನ ವಾಚ ಕಾಯದಿ ಅನ್ಯಾಯ ಪೆಚ್ಚಿಸದೆಎನ್ನ ಬೆಳವಿಗೆಯಂತೆ ಬೆಳಸದಂತೆ ಮಾಡಿದೆಮನ್ನಣಿಸುವ ಜನರಿಂದ ಮಾಂದ್ಯವ ಮಾಡಿಸಿದೆಸನ್ಯಾಯವಲ್ಲ ಧೊರಿಯೆ ನಿನ್ನ ಚಿತ್ತವೊ ಸ್ವಾಮಿಸನ್ಮುನಿಗಣ ಪ್ರೀಯ ವ್ಯಾಸವಿಠ್ಠಲರೇಯಾನಿನ್ನವರವನೊ ನಿನ್ನ ಸರಿ ಬಂದ ಬಗೆ ಮಾಡೊ 5 ಜತೆ ವೇಣುಗೋಪಾಲ ದಾಸರ ಮನ ಮಂದಿರಾ |ಪ್ರಾಣ ನಿನ್ನದೊ ವ್ಯಾಸವಿಠ್ಠಲ ಗೋಪಾಲಕೃಷ್ಣ ||
--------------
ವ್ಯಾಸವಿಠ್ಠಲರು
ಬ್ರಹ್ಮವೆಂಬಿರಿ ನಿಮ್ಮ ಬರಿದೆ ಮಾತಲ್ಲದೆಬ್ರಹ್ಮನಾದವನ ಬಗೆಯನು ಹೇಳುವೆ ಕೇಳಿ ಪ ಆಶಾಪಾಶಗಳಿಗೆ ವಶವಾಗದವ ಬ್ರಹ್ಮಮೋಸಹೋಗದೆ ಮಾಯೆಗೆ ಇರುವವ ಬ್ರಹ್ಮಕೂಸಿನಂದದಿ ಭಾವ ಕೂಡಿಹನವ ಬ್ರಹ್ಮಘಾಸಿಯಾಗನು ಮದನಗೆ ಅವನು ಬ್ರಹ್ಮ 1 ಸತಿಸುತರಿಚ್ಛೆಯ ಸಮನಿಸದವ ಬ್ರಹ್ಮಇತರರ ವಾಕ್ಯಕೆ ಕಿವಿಗೊಡದವ ಬ್ರಹ್ಮಗತಿ ಯಾವುದೆನಗೆಂದು ಗುಣಿಸುತಿಪ್ಪವ ಬ್ರಹ್ಮಅತಿ ಹರುಷದಿಂ ಬಾಳುತಿರುವವನು ಬ್ರಹ್ಮ2 ಸಕಲ ವಿಶ್ವವು ಎನ್ನ ಸರಿಯು ಎಂಬುವವ ಬ್ರಹ್ಮಸುಖ ದುಃಖವನು ಸಮದೃಷ್ಟಿಯಲಿ ನೋಡುವವ ಬ್ರಹ್ಮಭಕುತಿ ಭಾವನೆಯಿರುವ ಮಾನವನು ತಾ ಬ್ರಹ್ಮಮುಕುತಿ ಮರ್ಗದಲಿರುವ ಯೋಗಿಯವ ಬ್ರಹ್ಮ 3 ಹುಚ್ಚರಂದದಿ ನೋಡೆ ಹುದುಗಿಕೊಂಡಿಹ ಬ್ರಹ್ಮಅಚ್ಚರಿಯ ಅವನಾಟ ತಿಳಿವವನು ಬ್ರಹ್ಮನಿತ್ಯಕಾಲದಿ ಜ್ಞಾನ ಬೇಕೆನ್ನುವವ ಬ್ರಹ್ಮಕೊಚ್ಚಿತೆಂಬನು ಎಲ್ಲ ಕುಲಜ ಬ್ರಹ್ಮ4 ದಾಸದಾಸರ ದಾಸನಾದವನೆ ಬ್ರಹ್ಮಈ ದೇಹದಾ ಹಂಗ ತೊರೆದವನು ಬ್ರಹ್ಮಭಾಸುರ ಚಿದಾನಂದನ ಭಜಿಪ ಭಕ್ತನೆ ಬ್ರಹ್ಮವಾಸರಿಲ್ಲವೋ ಈ ವಾಕ್ಯಕೆಂಬುವವ ಬ್ರಹ್ಮ5
--------------
ಚಿದಾನಂದ ಅವಧೂತರು
ಬ್ರಹ್ಮಾದಿವಂದ್ಯ ಪರಬ್ರಹ್ಮಾನೆ ಕಾಯೊ ಅಹಂಬ್ರಹ್ಮಭಾವವ ಬಿಡಿಸೋ ಪ ಬ್ರಹ್ಮಾನ ಜನಕನೆ ಬ್ರಹ್ಮಾಂಡದೊಡೆಯ ಬ್ರಹ್ಮಾಂಡಾಂತರ್ಯಾಮಿ ಸಲಹೋ ಅ.ಪ ಸತ್ಯವ್ರತನೆ ನೀ ಸತ್ಯಪರನು ಜಗ ಸತ್ಯ ಸೃಜಿಸಿ ಪೊರೆವೇ ನಿತ್ಯ ನಿರ್ಲಿಪ್ತನಹುದೋ 1 ಏಕರೂಪನೆ ಅನೇಕ ರೂಪದಿ ಎಲ್ಲಾ ಲೋಕಗಳೆಲ್ಲಾ ಪಾಲಿಪೆ ಲೋಕಗಳನೆಲ್ಲ ಮಾಳ್ವೆ 2 ನಿನ್ನಾಶ್ರೈಸಿದ ಭಿನ್ನಪ್ರಕೃತಿ ತ್ರಿಭಿನ್ನಗೈಸಿ ಅಂದು ಜಗದಾ ಬನ್ನ ಪಣ್ಣನ್ನ ನಿರ್ಮಿಸಿದೆಯೋ 3 ಪಣ್ಣಿಗೆ ನಾಲ್ಕು ರಸವೋ ಘನ್ನಷಡೂರ್ಮಿಗಳನ್ನೆ ನಿರ್ಮಿಸಿ ಪೊರೆವೇ 4 ಕೊಟ್ಟೆ ಸಪ್ತಧಾತು ಅಷ್ಟವಿಟಪಿಗಳನಿಟ್ಟೆ ನವಾಕ್ಷಪೊಟರೆ ದಟ್ಟದಶಚ್ಛದ ಕೊಟ್ಟು ಜಗವೃಕ್ಷ ಸೃಷ್ಟಿಯ ಮಾಡಿ ಮೆರೆದೇ 5 ಅಟ್ಟಹಾಸದಿ ಫಲಮುಟ್ಟದೆ ಇಹ ಖಗಶ್ರೇಷ್ಟನೆ ನೀ ತುಷ್ಟನೋ ಕೊಟ್ಟ ಫಲವನುಂಡಷ್ಟೂ ಸುಖಿಪ ಜೀವರೆಷ್ಟೋ ಜಗವರಿಯೇ 6 ವ್ಯಷ್ಟೀಸಮಷ್ಟಿಯ ಸೃಷ್ಟೀಯೊಳು ನೀನೆ ಶ್ರೇಷ್ಠನೇ ವ್ಯಾಪಿಸಿರುವೇ ದೃಷ್ಟಿಗೋಚರವಲ್ಲ ಅಷ್ಟಕರ್ತೃ ಪರಮೇಷ್ಟೀಜನಕ ಸಲಹೋ 7 ಅಪ್ರಾಪ್ಯಮನೋವಚ ತ್ವತ್ ಪ್ರಾಪ್ತಿಎಂತಯ್ಯ ತ್ವತ್ಪ್ರಸಾದವಿಲ್ಲದೇ ಎನ್ನ ಬಂಧಪ್ರಕೃತಿಯನೆ ಹರಿಸೋ 8 ಸೃಷ್ಟಿಯೊಳಗೆ ಸ್ವನಿಷ್ಠೆಯಿಂದಲೀ ಜಗದೃಷ್ಟೀಗೋಚರನಾಗುವೆ 9 ಮುಮುಕ್ಷುಗಳಿಗೆ ಸಾಕ್ಷಿ ಮನದಕ್ಷಿಯೊಳು ಪೊಳೆವೇ 10 ಭಕ್ತಿವಿರಹಿತ ದುರ್ಯುಕ್ತಕಾರ್ಯದಿ ಮನ ಸಕ್ತವಾಗಿಹುದು ತ್ವಧ್ಭಕ್ತಿಯ ಕೊಡು ನಿತ್ಯ11 ಹತ್ತಿಬಹುದೂ ಬೆನ್ಹತ್ತಿಕರ್ಮವು ಮತ್ತೆ ಸುತ್ತೀಸುತ್ತುತ ಜನ್ಮವಾ ಎನಗೆ ಉತ್ತಮಗತಿ ತೋರದೇ12 ಘೋರದುರಿತ ಪರಿಹಾರ ಮಾಡಿ ಪೊರೆ ಮಾರಾರಿಪಿತವಂದ್ಯ ಚಾರು ಚರಣಸ್ಮರಣಾರಾಧನೆ (ಅದು) ಸಾಕೋ 13 ಸಾರಿದೆನೋ ಶ್ರೀ ವೇಂಕಟೇಶಾಭಿನ್ನ ಉರಗಾದ್ರಿವಾಸ ವಿಠಲಾ ಪಾರುಗಾಣಿಸಿ ಪೊರೆಯೋ 14
--------------
ಉರಗಾದ್ರಿವಾಸವಿಠಲದಾಸರು
ಭಕುತ ಜನ ಮುಂದೆ ನೀನವರ ಹಿಂದೆ ಪ ಯುಕುತಿ ಕೈಗೊಳ್ಳದೊ ಗಯ ಗದಾಧರನೆ ಅ ಪ ಕಟ್ಟೆರಡು ಬಿಗಿದು ನದಿ ಸೂಸಿ ಪರಿಯುತ್ತಿರೆ | ಕಟ್ಟಲೆಯಲಿ ಹರಿಗೋಲು ಹಾಕಿ || ನೆಟ್ಟನೆ ಆಚೆಗೀಚೆಗೆ ಪೋಗಿ ಬರುವಾಗ | ಹುಟ್ಟು ಮುಂದಲ್ಲದೆ ಹರಿಗೋಲು ಮುಂದೆ ? 1 ಕಾಳೆ ಹೆಗ್ಗಾಳೆ ದುಂದುಛಿ ಭೇರಿ ತಮಟೆ ನಿ- | ಸ್ಸಾಳ ನಾನಾವಾದ್ಯ ಘೋಷಣಗಳು || ಸಾಲಾಗಿ ಬಳಿವಿಡಿದು ಸಂಭ್ರÀಮದಿ ಬರುವಾಗ | ಆಳು ಮುಂದಲ್ಲದೆ ಅರಸು ತಾ ಮುಂದೆ?2 ಉತ್ಸಾಹ ವಾಹನದಿ ಬೀದಿಯೊಳು ಮೆರೆಯುತಿರೆ | ಸತ್ಸಂಗತಿಗೆ ಹರಿದಾಸರೆಲ್ಲ || ಸಿರಿ ವಿಜಯವಿಠ್ಠಲ ವೆಂಕಟಾಧೀಶ ವತ್ಸ ಮುಂದಲ್ಲದೆ ಧೇನು ತಾ ಮುಂದೆ ? 3
--------------
ವಿಜಯದಾಸ
ಭಕುತರಪರಾಧವ ಬಗೆಯನೀ ದೇವಭಕುತರು ತಪ್ಪಿದರೆ ಬಲು ಭಯವೀವ ಪ . ಇಟ್ಟುಣಿಸಿದ ಬಲಿ ಕಟ್ಟಿದ ಯಶೋದೆಗೆಇಷ್ಟಾರ್ಥಗಳನಂದು ಕೊಟ್ಟು ಕಾಯನೆದುಷ್ಟತನದಿ ಧೃತರಾಷ್ಟ್ರತನಯ ತನ್ನಕಟ್ಟಲು ಹವಣಿಸೆ ಕಷ್ಟವನುಣಿಸನೆ 1 ಕಾಲಲಿ ತನ್ನ ಅಂಗವನೊದ್ದ ಮುನಿಪನಮೂಲೋಕವರಿಯೆ ಮುದ್ದಿಸಿ ಮೆರೆಯನೆತಾಳದೆ ನೃಪತಿಯ ತಾನೆಂದು ತಿಳಿಯನುಕಾಲಯವನ ಬಂದು ಕಾಳು ಮಾಡಿಸನೆ 2 ಪರವಶಚಿತ್ತನಾಗಿಫಲುಗುಣ ಜರೆಯಲುಹರಿ ದೂರಾಗದೆ ಹರಣವ ಕಾಯನೆಅರಸೆಂಬ ಗರ್ವದಿಂದ ಅರಿಭಟ ಪೌಂಡ್ರಕನಧುರಕೆ ಗುರಿಯ ಮಾಡಿ ಧುರದಿ ಕೊಲಿಸನೆ3 ಶರಕೆ ಗುರಿಯ ಮಾಡಿ ಸಮರದೊಳೊಡ್ಡಿದಸುರವ್ರತÀಗಂದು ಶುಭವನೀಯನೆಹರನ ಮೆಚ್ಚಿಸಿ ತನ್ನ ಗೆಲುವ ಬಿಲ್ಲ ಬೇಡಿದಶರೀರ ಸಂಬಂಧಿಯ ಕೊಲಿಸನೆ 4 ಮಕುಟವ ಕದ್ದೊಯ್ಯಲು ಮಹಾಬಲಿಯ ಬಾಗಿಲಅಕಳಂಕನಂದು ಕಾವುದ ಬಿಟ್ಟನೆಈ ಕೃಷ್ಣ ಹಯವದನನಿಂದುಡುಪಿನ ಜನಕೆಶೋಕವಿತ್ತ ಕಳ್ಳನಿಗೆ ಶೂಲಗತಿಯೀಯನೆ5
--------------
ವಾದಿರಾಜ
ಭಕುತರ್ಗೆ ಭಯಬಾರದು ಸುಖವೀವ ಕಾವದೇವನಕಾಕುಜನರಿಂದ ಬಂದಾನೇಕ ಶೋಕಂಗಳ ಕಳೆವÀಶ್ರೀರಂಗನ ದೇವೋತ್ತುಂಗನ ಭವಭಂಗನ ಪ. ಹಿರಣ್ಯಕನುದರ ವಿದಾರಣನ ಸ್ವಚರಣಕರಣ ಪ್ರಹ್ಲಾದನ ಭಯನಿವಾರಣನಕರಿವರ ಕರೆಯೆ ಮಕರಿಯ ಸೀಳಿದ ಸಿರಿಯನಾಳಿದಪಿರಿಯ ಶ್ರೀಹರಿಯ ಧೂರ್ತಾರಿಯ ಬಕವೈರಿಯ 1 ಯತಿಕುಲಪತಿಯ ಮಧ್ವಾಚಾರ್ಯರಕೃತಿಯಾಶ್ವರ್ಯ ಚಾತುರ್ಯಕೊಲಿದನಸತಿ ಸಭೆಯಲ್ಲಿ ಸಿರಿಪತಿ ನೀನೆ ಗತಿಯೆನೆಅತಿ ದೂರದಿಂದಕ್ಷಯವೆಂದ ಗೋವಿಂದನ ಮುಕುಂದನ2 ಕುಂಡಲ ಕೌಸ್ತುಭ ನೂಪುರ ಮೊದಲಾದ-ಲಂಕೃತಿಯಿಂದೊಪ್ಪುವ ನೀಲಗಾತ್ರನಪಂಕಜನೇತ್ರನ ಪರಮಪವಿತ್ರನ ಸುಚರಿತ್ರನ ಸುರಮಿತ್ರನ 3 ಗುರುವೆಂದರಿವ ಹರಿಯೆಂದು ಕರೆವ ತ-ಮ್ಮಿರವ ಮರೆವ ಸದ್ಗುಣ ವಿಸ್ತಾರವ-ನ್ನೊರೆವ ನಯನದಿ ಸುರಿವ ಪರಿವ ಸುಖಾಂಬುಧಿಕರೆವ ತೋರುವ ಖಳನಿರವ ಮುಕ್ತಿಗೆ ಕೂರುವ 4 ಹರಿಯನೆ ಪಾಡುವ ಹರಿಯ ಕೊಂಡಾಡುವಹರಿಯ ನೋಡುವ ಹರಿಯನೆ ಬೇಡುವದುರುಳರ ಕಾಡುವ ತಪದಿಂ ಬಾಡುವದುರಿತವ ಬಿಡುವ ಸುಕೃತವನೆ ಕೊಡುವ ಪಾಡಪಾಡುವ ನಲಿದಾಡುವ 5 ಹರಿಯನೆ ಸ್ಮರಿಸುವ ಹರಿಯನನುಸರಿಸುವಹರಿಯನೆ ಪರಿಹರಿಸುವ ಹರಿಯನೆಬೆರಿಸುವಹರಿಯನೆ ತೋರಿಸುವ ಹರಿಯನೆ ಮರೆಸುವಹರಿಪಾದಕೇರಿಸುವ ಸುಖರಸವ ಎರೆಸುವ 6 ಒಂದು ಕೈಯಲಿ ಕಡೆಗೋಲನೆ ಪಿಡಿದು ಮ-ತ್ತೊಂದು ಕೈಯಲಿ ನೇಣನಾಂತ ಶ್ರೀಕಾಂತನಮುಂದೆ ನಿಂದು ಒಲಿವುತ್ತ ನಲಿವುತ್ತತಂದೆ ಹಯವದನನರ್ಚಿಸುವ ಮೆಚ್ಚಿಸುವ ಹೆಚ್ಚಿಸುವ 7
--------------
ವಾದಿರಾಜ
ಭಕುತವತ್ಸಲ ಶೀಲಾ-ಶೇಷಗಿರಿಯ ಲೋಲಾ ಪ ನೀ ಕರುಣಿಸೊ ಎನ್ನಾ-ಕುಲಸ್ವಾಮಿ ಘನ್ನಾಅ.ಪ ಮಂದಭಾಗ್ಯನು ನಾನು ವೃಂದಾರಕ ವಂದ್ಯ ತಂದೆ ಎನಗೆಂದೆಂದು ಅನಿಮಿತ್ತಬಂಧೂ ವಂದಿಪೆ ನಿನ್ನಯ ದ್ವಂದ್ವಪಾದದ ಧ್ಯಾನ ಅ- ದೊಂದನಾದರು ಇತ್ತು ಬಂಧವ ಪರಿಹರಿಸೊ ಹಿಂದೆ ನಿನ್ನಯ ನಾಮ ಒಂದೇ ಬಂಧಹರಿಸಿತು ಭಕುತವೃಂದಕೆ ಅಂದು ಅವರೇನೆಂದು ಕರೆದರೋ ಮಂದರೋದ್ಧರ ಬಂಧಮೋಚಕ1 ಓಲೈಪರೋ ಮುಕ್ತಜಾಲ ನಿನ್ನ ಕಾಲನಾಮಕ ಆಪತ್ಕಾಲಬಾಂಧವನೆಂದು ಕಾಲಿಗೆರಗುವೆ ಕೃಪಾಳು ನೀನಲ್ಲವೆ ಸೊಲ್ಲಲಾಲಿಸೊ ಲಕುಮಿನಲ್ಲ ನೀ ನಲ್ಲದಲೆ ಇನ್ನಿಲ್ಲವೆಂದಿಗೂ ಬಲ್ಲಿದರಿಗತಿಬಲ್ಲಿದನು ಆ- ವಲ್ಲಿ ನೆನೆದರೆ ಅಲ್ಲೇ ಪೊರೆವೆ 2 ಪುರಾಣಪುರುಷನೆ ಪರಮ ಕರುಣಿ ಎಂದು ಪುರಾಣದೊಳು ನೀನೆ ಪ್ರತಿಪಾದ್ಯನೊ ಕರಿ ಧ್ರುವ ಭೃಗು ಭೀಷ್ಮರ ಚರಿತೆಯ ನೋಡಲು ಹರಿ ನಿನ್ನ ಸರಿಯುಂಟೆ ದುರಿತಾಪಹಾರದಿ ಸ್ಮರಿಪರಘ ಪರಿಹರಿಪ ಶ್ರೀಪ ಸುರಪಹರಮುಖವಿಬುಧವಂದ್ಯ ದರಸುದರ್ಶನಧಾರಿ ಶ್ರೀ ವೇಂಕಟೇಶಉರುಗಾದ್ರಿವಾಸ ವಿಠಲಾ 3
--------------
ಉರಗಾದ್ರಿವಾಸವಿಠಲದಾಸರು