ಒಟ್ಟು 1563 ಕಡೆಗಳಲ್ಲಿ , 111 ದಾಸರು , 1190 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಧರಾಕರ ಕಂಜ ಸೇವಿತ ಪಾದ ಪದ್ಮಜ ಪದದ ಪುರು ಕರು- ಣೋದಧಿಯೆ ಲಾಲಿಪುದು ಪಾಮರನೆಂಬ ಬಿನ್ನಪವ ಸೋದರ ಸ್ಥಿತ ಸಕಲ ಬ್ರಹ್ಮಾಂ- ಪತಿ ನೀನರಿವಿಯಾದರು ಮಾಧವನೆ ಮನದಿರವ ಪೇಳ್ವೆನು ಮನುಜಭಾವದಲಿ 1 ಸುಕೃತ ಫಲವೋ ದೋಷದೂರನೆ ನಿನ್ನ ಪದವನು ಮೀಸಲಳಿಯದೆ ಸೇವೆ ಮಾಳ್ವದು ಲೇಸುಲೇಸೆಂದು ದಾಸಕೂಟದಿ ಸೇರಿ ಮನೆಯಲಿ ವಾಸವಾಗಿರಲಿದರ ಮಧ್ಯಮ ರಾಶೆ ಬಲೆಯಲಿ ಸಿಲುಕಿದೆನು ಕರುಣಾ ಸಮುದ್ರಹರಿ 2 ತನ್ನಿಕೃಷ್ಟ ಮನೋವಿಕಾರಗ- ಳಿನ್ನು ಬಿಡದಲೆ ಪೀಡಿಸುವ ಪರಿ ಯನ್ನು ಪರಮ ಕೃಪಾಳು ನೀನೆಂದೊರವೆನಖಿಳೇಶ ಮಾನ್ನವರ ಮಧ್ಯದಲಿ ಮಾನದಿ ಎನ್ನ ಕಾಪಾಡುವದು ಭಾರವೆ ತನ್ನ ಫಲಗಳ ತಾನೆ ಕೆಡಹುವದುಚಿತವೇ ತೆಗೆ 3 ಯುಕ್ತಿಯಲಿ ನಿನ್ನಂಥ ದೇವರ ರೆತ್ತಿ ವೈದಮೃತವನು ಸುಲಭದೊಳಿತ್ತೆ ದಿವಿಜರಿಗೆ ಔತ್ತರೇಯನ ಕಾಯ್ದ ದ್ರೌಣಿಯ ನೆತ್ತಿಯೊಳಗಿನ ರತ್ನ ಭೀಮನಿ ಗಿತ್ತ ಪರಿಯನು ಪಠಿಸಿ ತಿಳಿದೆನು ಪಾವನಾತ್ಮಕನೆ 4 ಬ್ರಹ್ಮತೇಜೋ ವೃದ್ಧಿ ಬಲಿಯೊಳು ಬ್ಯಾಡ ಸಂಗರ ನಮಗೆನುತ ನಿ- ಮ್ಮಮ್ಮನೊಳ್ ನುಡಿದಂದು ಕಶ್ಯಪನಿಂದಲವತರಿಸಿ ಬ್ರಹ್ಮಚಾರಿಯ ರೂಪದಿಂದೀ ಕ್ಷಮ್ಮೆಯನು ಸೆಳೆದಿಂದ್ರಗಿತ್ತಮ- ಹಾನ್ಮಹಿಮ ನಿನಗಾವದಘಟಿತ ನೀರಜಾರಮಣ5 ನಾರದರ ನುಡಿ ನಿಜವೆನುತ ಮೂ- ರಾರು ಭಕ್ತಿಯ ತಾಳ್ದ ಮನುವಿನೊ- ಳಾರುಭಟಿಸುತ ಕಾಶ್ಯಪನು ಮದವೇರಿ ನಿಂದಿರಲು ಯಾರು ತಿಳಿಯದ ತೆರದಿ ಕಂಭದಿ ಮೃಗ ರೂಪವನು ಹೆ- ಮ್ಮಾರಿ ದೈತ್ಯನ ತರಿದು ತ್ವತ್ಪದವಿತ್ತೆ ದಾಸನಿಗೆ 6 ಏನು ಶ್ರಮವಿಲ್ಲದಲೆ ಪಿಡಿದು ದ- ಶಾನನನ ತೊಟ್ಟಿಲಿಗೆ ಕಟ್ಟಿ ಪ್ರ- ವೀಣತೆಯ ತೋರಿಸಿದ ವಾಲಿಯ ಪಕ್ಷವನು ತ್ಯಜಿಸಿ ದೀನ ಬಾಂಧವನೆಂಬ ಬಿರುದನು ದಿಟವೆ ನಿಶಿತದ್ರಾಜ್ಯ ಪದವಿಯ ಭಾನುಜನಿಗೊಲಿದಿತ್ತ ಭಕ್ತಜನಾರ್ತಿ ಭಂಜನನೆ 7 ಶಬ್ದಗೋಚರವಾದ ಕಥೆಗಳು ಬದ್ಧವೆಂಬುದು ಪೂರ್ವದನುಭವ ಸಿದ್ಧವಾಗಿಹುದೆನಗೆ ಸಜ್ಜನಲಬ್ಧಪದ ಪದ್ಮ ಬುದ್ಧಿಹೀನತೆಯಿಂದ ನುಡಿದರು ಮಧ್ವವಲ್ಲಭ ನಿನ್ನ ದಾಸನ- ನುದ್ಧರಿಸು ನೀನಲ್ಲದೆನಗಿನ್ನಾರು ಗತಿ ಹರಿಯೆ8 ಒಡೆಯರೆಂಬರನೆಲ್ಯುಕಾಣದೆ ಉಡುವದುಂಬುದಕೇನು ದೊರೆಯದೆ ಗಿಡವ ನಿಲುಕದ ಬಳ್ಳಿಯಂದದಿ ಬಡುವ ಕಷ್ಟವನು ತಡೆಯಲಾರದೆ ತಳಮಳಿಸುತಿರೆ ಪಿಡಿದು ಕರವನು ಕಾಯ್ದೆಯೆನ್ನನು ನುಡಿವದೇನಖಿಳಾಂಡ ನಾಯಕ ನಿನ್ನ ಮಹಿಮೆಯನು 9 ಮಾರಿಯಂದದಿ ಮಧ್ಯದೊಳಗೊ- ಬ್ಯಾರುವೇನೆಂಬಧಮ ಹೂಣನು ತೀರಿಸುವೆನೆಂದೆನ್ನೊಳಿಲ್ಲದ ದೂರ ಸಂಗ್ರಹಿಸಿ ಗಾರಗೊಳಿಸುವದರಿತು ಕಕ್ಷವ ಹಾರಿಸುತ ಸುರವಂದ್ಯ ಮೂರ್ತಿಯ ತೋರಿ ತಂದಿಲ್ಲಿರಿಸಿ ಪೊರೆದವನ್ಯಾರು ಪೇಳ್ದೊರೆಯೆ 10 ಶ್ರೀಶ ನಿನ್ನ ಪದಾಬ್ಜ ಪೊಗಳುವ ದಾಸ ಕೂಟದಿ ಸೇರಿ ಸೇವೆಯ ಬ್ಯಾಸರದೆ ನಡೆಸುತಿರೆ ಮತ್ತೊಬ್ಬಾಸುರನ ತೆರದಿ ದ್ವೇಷದಿಂದಿರೆ ದೂರ ಓಡಿಸಿ ದುರಿತ ಭಯಗಳ ಪರಿಹರಿಸಿದ ಮ- ದೀಶ ನೀನೆಂದನವರತ ನಂಬಿರುವೆ ಶ್ರೀಪತಿಯ 11 ಇಷ್ಟು ಪರಿಯಿಂದೆನ್ನ ರಕ್ಷಿಸು- ತಿಷ್ಟ ಫಲಗಳನೀವ ವೆಂಕಟ ಬೆಟ್ಟದೊಡೆಯನೆ ಬೇಡಿಕೊಂಬುವೆ ಒಂದು ಕೃತ್ಯವನು ಮಾನವ ನುಡಿಯಕಾಡನು ಸುಟ್ಟು ಸೂರೆಯಗೈದು ನಾ ಮನ ಸಿಟ್ಟ ತೆರದಲಿ ತೋರು ಚಿತ್ತವ ಸೃಷ್ಟಿಕರ ಶ್ರೀಶ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿಕೇತನ ಲಕ್ಷ್ಮೀ ಕಾಂತನ ಪದಪದ್ಮ ಧ್ಯಾನ ಮಾಡುತ ಎನ್ನ ಸ್ಥಿತಿಯ ದೀನಭಾವನೆಯಿಂದಲೊರೆವೆನು ಗುರುಪವ ಮಾನ ಪಾಲಿಸಲಿ ಸನ್ಮತಿಯ ಪ. ತಾನು ತನ್ನದೆಂಬ ಹೀನ ಭಾವನೆಯಿಂದ ನಾನಾ ಯೋನಿಗಳಲ್ಲಿ ಚರಿಸಿ ಮಾನವ ಜನ್ಮವನೆತ್ತಲು ಮುಂದಾದ- ದೇನೆಂಬೆ ಗರ್ಭದೊಳುದಿಸಿ 1 ಮಾತಾಪಿತರುಗಳು ಮೋಹದಿ ರಮಿಸಲು ಕೇತ ತತಿಗೆ ಸರಿಯಾಗಿ ಆತು ಬಂದಿಹೆನು ಗರ್ಭದಿ ಮೆಲು ನರ ವ್ರಾತ ಬಂಧಕೆ ಗುರಿಯಾಗಿ 2 ಸೇರಿದ ಕ್ರಿಮಿ ಪರಿವಾರ ಕಚ್ಚುತಲಿರೆ ಚೀರಲಾದರು ಶಕ್ತಿಯಿರದೆ ಭಾರ ವಸ್ತುವು ಕಣ್ಣಸಾರವು ತಡೆಯದೆ ಗಾರುಗೊಂಡೆನು ಗರ್ಭದೊಳಗೆ 3 ಮೂರರಾ ಮೇಲೆ ಮತ್ತಾರುಮಾಸಗಳಿಂತು ಭಾರಿ ಭವಣೆಗೊಂಡು ಕಡೆಗೆ ಭೋರನೆ ಭೂಮಿಗೆ ದೂರಿ ಬಂದೆನು ಮಲ ಧಾರೆಯಾ ಕೂಡಿ ಮೈಯೊಳಗೆ 4 ಹೇಸಿಗೆ ಮಲಮೂತ್ರ ರಾಶಿಯ ಒಳಗೆ ದು- ರ್ವಾಸನೆ ಬರುವ ಗೆರಸಿಯ ಹಾಸಿಗೆ ಒಳಗೆ ಹಾಕಿರುತಿರೆ ದೇಹದ ಲೇಶ ಸ್ವಾತಂತ್ರ್ಯವೇನಿರದೆ 5 ಮೂಸಿ ಮುತ್ತುವ ನುಸಿಮುತ್ಕುಣ ಬಾಧೆಗೆ ಘಾಸಿಗೊಳುತ ಬಾಯ ತೆರದೆ ದೋಷ ಶಂಕಿಸಿ ಮೈಯೊಳಿಕ್ಕಿದ ಬರೆಗಳ ಬಾಸಲೆಯುನು ತಾಳ್ದೆ ಬರಿದೆ 6 ನಾಲ್ಕು ಕಾಲುಗಳಿಂದ ನಾಯಿಗೆ ಪರಿಯಾಗಿ ಸೋಕಿದೆ ಸರ್ವತ್ರ ತಿರುಗಿ ಸಾಕುವ ಜನರೆಡಬಲಗಾಲ ತುದಿಯಿಂದ ದೂಕಿದರಲ್ಲಿಯೆ ಸುಳಿದೆ 7 ವಾಕುಗಳೆಂಬ ಕೂರಂಬನು ಸಹಿಸಿ ಪ- ರಾಕೆಂದು ಪರರ ಸೇವಿಸಿದೆ ಮಾಕಳತ್ರನೆ ನಿನ್ನ ಕೃಪೆಯಾದ ಬಳಿಕ ಮೋ- ಹಾಕಾರ ಮಡುವಿನೊಳಿಳಿದೆ 8 ಈಗಲಾದರು ದೇಹ ಭೋಗವೆ ಬಯಸುತ ನೀಗಿದೆ ವ್ರತ ನೇಮಾದಿಗಳ ಸಾಗದ ಫಲ ತನಗಾಗಬೇಕೆಂಬ ಮ- ನೋಗತಿಯಿಂದ ಕರ್ಮಗಳ 9 ಮೂಗಭಾವನೆಯನ್ನು ನೀಗದೆನಿಸಿ ಮುಂ- ದಾಗಿಯಾಡುವೆ ಮಥನಗಳ ಕಾಗೆಯು ಕುಂಭದ ಜಲ ಕುಕ್ಕುವಂತೆ ಬೆಂ- ಡಾಗಿ ಕೊಂಡೆನು ಝಗಳಗಳ 10 ಕಂತುಜನಕ ಕಂಜನಾಭ ವೆಂಕಟರಾಜ ಚಿಂತಾಮಣಿ ಸುರತರುವೆ ಎಂತಾದರು ನಿನ್ನ ದಾಸ್ಯ ಸೇರಿದ ಮೇಲೆ ಇಂತುಪೇಕ್ಷಿಸುವುದು ಥರವೆ 11 ಭ್ರಾಂತಿ ಎಂಬುದ ಬಿಡಿಸಿನ್ನಾದರು ಲಕ್ಷ್ಮೀ ಕಾಂತ ಕಾರುಣ್ಯ ವಾರುಧಿಯೆ ಚಿಂತಿತದಾಯಿ ಎನ್ನಂತರಂಗದಿ ಬೇಗ ನಿತ್ಯ ವಿಧಿಯೆ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ ತವಚರಣ ಸರೊರುಹ-ಮಾನತೋಸ್ಮಿ ಸತತಂ ಫಲದಂ ಶುಭಚರಿತಂ ಪ ಸನ್ನುತ ವಾಸುಕಿ ಶ್ರೀಶವಾಸ ಹಿರಣ್ಮಯವಾಸ ಸಮಸ್ತ ವಾಸತರುಣಿಶತ ಬಾಸಸುಮನೋಲ್ಲಾಸ ವಿಜಿತ ರೊಷ ವಾಸರೇಶ ಶತ ಭಾಸುರ ಭೂಷಣ ಭೂಷಿತಾಂಗವಿಶೇಷಕರುಣಮೃದುಭಾಷಣ ಭವಜಲಶೋಷಣ ಪೂಷಣ 1 ಸುರಮಂಡಲಸೇವಿತ ಚಂಡನಿಶಾಚರ ಮಂಡಲ ಖಂಡನ ಪಂಡಿತರಣ ಶೌಂಡ ಪುಂಡರೀಕ ನಯನಾಂಡಜವಾಹನ ಪುಂಡರೀಕಗಿರಿ ಮಂಡನ ಹಿಮಕರಮಂಡಲ ಸನ್ನಿಭಕುಂಡಲಾಭರಣ 2 ನೀಲ ಸುಮಂದರಧಾರಣ ಚತುರುತಲಾಗ್ರವಿ ಮೃಗೇಂದ್ರಾ ವಾರಿಜನಿಲಯಾವರ ಕರುಣಾಕರ ಮಾರಜನಕ ಸುರವಾರವಂದ್ಯಪದ ಸಾರಸುಗುಣ ಪರಿ ಜಲದಿ ಗಂಭೀರ ವ್ಯಾಘ್ರಗಿರಿವರದ ವಿಠಲಹರಿ 3
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸ ತವಚರಣಸರೋರುಹಮಾನತೋಸ್ಮಿ ಸತತಂ ಸಾನುರಾಗ ಮನಸಾ ವಚಸಾ ಶಿರ ಸಾನುಕೂಲಫಲದಂ ಶುಭಚರಿತಂ ಪ ಶ್ರೀಶವಾಸ ಹಿರಣ್ಮಯ ವಾಸ ಸಮಸ್ತಾವಾಸ ತರಣಿಶತ ಭಾಸ ಸುಮನೋಲ್ಲಾಸ ವಿಜಿತರೋಷ ಭೂಷಿತಾಂಗ ವಿಶೇಷ ಕರುಣ ಮೃದು ಭಾಷಣ ಸಜ್ಜನ ಪೋಷಣ ನಿರ್ಜಿತ ದೂಷಣ ಭವಜಲ ಶೋಷಣ ಪೂಷಣ 1 ಪುಂಡರೀಕಾಸನ ಖಂಡಪರಶು ಅ ಖಂಡಲ ಮುಖ ಸುರಮಂಡಲ ಸೇವಿತ ಪಂಡಿತ ರಣಶೌಂಡ ಪುಂಡರೀಕನಯ- ನಾಂಡಜವಾಹನ ಖಂಡಿತಕೇಶ ಕೋ ದಂಡ ಕೃತಾರ್ಚನ ಪುಂಡರೀಕಗಿರಿ ಮಂಡನ ಹಿಮಕರ ಮಂಡಲ ಸನ್ನಿಭಕುಂಡಲಾಭರಣ 2 ವಾರಿದನೀಲಶರೀರ ಧರಾರ ಧೀರ ಸುಮಂದರಧಾರಣ ಚತುರ ಕರಾಗ್ರವಿ ದಾರಿತ ಶೂರ ಹಿರಣ್ಯಕವೀರ ನರಮೃಗೇಂದ್ರಾ ಮಾರಜನಕ ಸುರವಾರ ವಂದ್ಯಪದ ಪರಿ ವ್ಯಾಘ್ರಗಿರಿ ವರದವಿಠಲ ಹರಿ 3
--------------
ವೆಂಕಟವರದಾರ್ಯರು
ಶ್ರೀನಿವಾಸ ನಿನಗೆ ನಾ ಮಣಿದು ಫಲವೇನೊ ಕಾಣಿಸದೊ ನಿನಗೆನ್ನ ಕಷ್ಟ ಪ. ಜಾಣತನವಿದನೆಲ್ಲಿ ಮಾನನಿಧಿ ಕಲಿತೆಯೊ ಗಾನವಿಲೋಲ ಸ್ವಾಮಿ ಪ್ರೇಮಿ ಅ.ಪ. ಎಷ್ಟು ಕೂಗಲು ದಯವು ಪುಟ್ಟಲಿಲ್ಲವೊ ನಿನಗೆ ಕೃಷ್ಣಮೂರುತಿಯೆ ಕೇಳೊ ಕಷ್ಟಪಡಿಸುವುದೀಗ ದಿಟ್ಟತನವೇ ನಿನಗೆ ಶ್ರೇಷ್ಠ ನೀನೆನಿಸಿಕೊಂಡು ಪಟ್ಟವ್ಯಾತಕೆ ನಿನಗೆ ಮೂರು ಲೋಕದ ರಾಜ್ಯ ಬಿಟ್ಟು ಬಿಡು ನೀನೀಗಲೆ ದೃಷ್ಟಿಯಿಂದಲಿ ನೋಡಿ ನಿನ್ನ ತೋರೆಂದೆನಲು ಸೊಟ್ಟ ತಿರುಹಿರುವೆ ಮುಖವ ದೇವ 1 ತೋರೊ ಮೋರೆಯನೆನಲು ನೀರ ಪೋಗುವೆ ಬೆನ್ನು ಭಾರ ಪೊತ್ತು ಕೋರೆ ತೆರೆವೆ ಘೋರ ರೂಪವ ತೋರಿ ಈ ರೀತಿ ಬೆದರಿಸುವೆ ದಾರಿ ಎನಗಿನ್ನಾವುದೊ ನಾರಿಯನೆ ಪೆತ್ತು ನೀ ನಾರಿಯನೆ ಕೊಂದು ನಿನ್ನ ನಾರಿ ಚೋರನ ವಧಿಸಿದೆ ನಾರೆರೋಸ್ತ್ರವ ಕದ್ದು ನಾರಿಯರ ವ್ರತ ಕೆಡಿಸಿ ಏರಿ ಓಡಿದೆ ಕುದುರೆಯ ಜೀಯಾ 2 ಈ ಪರಿಗೈದರೆ ಕಾಪಾಡುವವರ್ಯಾರೊ ಭೂಪರೈವರ ಪೊರೆದನೆ ತಾಪಪಡುವುದು ನಿನಗೆ ತೋರ್ಪುದಿಲ್ಲವೆ ದೇವ ಪಾಪಿ ಎಂದೆನಬೇಡವೊ ನೀ ಪಾರುಗೊಳಿಸಬೇಕೀಪರಿಯ ಬವಣೆಗಳ ಶ್ರೀಪತಿಯೆ ಶ್ರೀನಿವಾಸ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದೆಕಾಪಾಡುವವರನರಿಯೆ ದೊರೆಯೆ 3
--------------
ಅಂಬಾಬಾಯಿ
ಶ್ರೀನಿವಾಸ ನಿನ್ನ ಪಾದಧ್ಯಾನವ ಪಾಲಿಸಿ ಎನ್ನ ಮಾನಸಾನಂದಿಸೋ ಶತಭಾನುತೇಜನೆ ಪ ಸಾನುರಾಗದಿಂದ ನಿನ್ನ ಧ್ಯಾನಿಪಜನರ ಭವ ಕಾನನಾದಹನ ಚಿತ್ರಭಾನು ದನುಜಾರಿಹರಿ ಅ.ಪ ಇಂದಿರಾರಮಣ ನಿನ್ನ ಸುಂದರ ಚರಣಕೆ ನಾಂ ವಂದನೆಯ ಮಾಡುವೆನಯ್ಯಾ ಇಂದುವದನಾ ಇಂದುಧರ ನುತ ಮುಚುಕುಂದವರದನೆ ಗುಣ ಬಂಧುರಾ ಶ್ರೀ ಪುಲಿಗಿರಿ ಮಂದಿರ ಮಂದರಧರ1 ಇಷ್ಟುದಿನ ನಿನ್ನ ಮನಮುಟ್ಟಿ ಭಜಿಸದೆ ಬಲು ದುಷ್ಟಮನುಜರ ಕೂಡಿ ಭ್ರಷ್ಟನಾದೆನು ಇಷ್ಟ ಫಲದಾಯಕ ತ್ರಿವಿಷ್ಣಪಾದಿಪಾನುಬವ್ಯ ಅಷ್ಟಸಿದ್ಧಿಪ್ರದ ನಿನ್ನ ಗಟ್ಟಿಯಾಗಿ ನಂಬಿದೆನು 2 ಲೋಕಪತಿ ಪಿನಾಕೆಯನ್ನು ವೃಕನೆಂಬ ಭೀಕರಾಸುರನು ಉರಿಹಸ್ತ ಬೇಡಲು ಆಕಪಾಲಿಯಿತ್ತು ಅವಿವೇಕದಿಂದ ಲೋಡುತಿರೆ ಲೋಕ ಮೋಹಿನಿಯ ರೂಪ ಸ್ವೀಕರಿಸಿ ಶಿವನಕಾಯ್ದೆ3 ಆಡಿಸೋ ನಿನ್ನವರೊಳು ಪಾಡಿಸೋ ನಿನ್ನಯ ಕೀರ್ತಿ ಮೂರ್ತಿ ಬೇಡಿಸದಿರು ಆಡಿಸದೆ ಭವವೆಂಬ ಕಾಡಿನೋಳ್ಕಟಾಕ್ಷದಿಂದ ನೋಡಿ ನಿನ್ನ ನಾಡಿನೊಳಗಾಡಿಸೋ ಮುರಾರಿಹರಿ4 ವಾಸುಕಿಶಯನ ಪೀತವಸನ ದಿವ್ಯಭೂಷಣ ವಿ ಭೂಷಿತ ಲಲಿತಶುಭ ವೇಷವಿಪುಲ ಭಾಸಮಾನ ವ್ಯಾಘ್ರಶೈಲಾವಾಸ ಶ್ರೀನಿವಾಸ ಭಕ್ತ ಪೋಷಣ ದುರಿತಗಣ ಶೋಷಣ ಶ್ರೀ ವರದವಿಠಲ5
--------------
ವೆಂಕಟವರದಾರ್ಯರು
ಶ್ರೀನಿವಾಸದೇವರು ಬಾರಯ್ಯ ವೇಂಕಟ ಮನ್ಮನಕೆ ತ್ವರಿತದಿ ನಿಜನಾರೀಸಹಿತದಿ ಈ ಸಮಯಕೆ ಶರಣೆಂಬೆನು ಪದಯುಗಕೆ ಪ ಸಾರಿದ ನಿಜಶÀರಣನ ಈ ಭವಭÀವ ಘೋರಭಯವ ಪರಿಹÀರಿಸುವುದಕ್ಕೆಅ.ಪ ವ್ಯಕ್ತಾವ್ಯಕ್ತ ತ್ರಿಜಗದ್ವ್ಯಾಪ್ತಾ ದೋಷ ನಿರ್ಲಿಪ್ತಾ ಮುಕ್ತಾ ಮುಕ್ತ ಜೀವರ ಗಣದಾಪ್ತಾ ನೀ ಸರ್ವತ್ರದಿ ವ್ಯಾಪ್ತ ಭಕ್ತನ ಹೃದಯದಿ ವ್ಯಕ್ತನಾಗಿ ನಿಜ ಮುಕ್ತಿಪಥವ ತೋರೊ ಭಕ್ತಿಯನಿತ್ತು 1 ಕವಿಜನಗೇಯಾ ಆನಂದದಾಯಕ ನಿರ್ಜಿತಮಾಯಾ ಕಾಯಯ್ಯಾ ಜೀಯಾ ಆನತಜನಸನ್ಮಾನದ ಮನ್ಮನ ವನಜದಿ ನೀ ಸನ್ನಿಹಿತಾಗುವುದಕೆ 2 ಸೋಮಾಸುರನಾಮಕ ದೈತ್ಯನ ಕೊಂದೂ ವೇದವ ತಂದೂ ಕೂರ್ಮ ಕಿಟ ನರಹರಿ ರೂಪದಿ ನಿಂದೂ ವಾಮನನೆಂದೂ ರಾಮ ಭಾರ್ಗವ ಯದುಕುಲಸಾಗರ - ಸೋಮ ಬೌದ್ಧ ಕಲ್ಕಿ ಪ್ರೇಮದಿ ಮನಕೆ 3 ನಿಗಮಗೋಚರ ನಿತ್ಯಾನಂದಾ ಬಗೆಬಗೆ ಜನ್ಮವನೈದಿದೆ ಮುಕುಂದಾ ಮುಗಿವೆನೊ ಕರದಿಂದಾ ಅಗಣಿತ ಗುಣನಿಧಿ ಸುಗಮದಿ ಭವದ ಬಗೆಯನು ತಿಳಿಸೊ ನಗೆ ಮೊಗದಿ ಬಾ 4 ವಿಧಿಶಂಭುವಂದಿತ ಪದಯುಗಕಮಲಾ ನಿತ್ಯ ನಿರ್ಮಲಾ ಆಧಿಭೂತಾಧ್ಯಾತ್ಮಿಕತಾಪದ ಶಮಲಾ ನೀ ಮಾಡೆನ್ನನು ವಿಮಲಾ ಸದಯ ಸುಧಾಕರ ಹೃದಯದಿ ತವಪದ ಪದುಮ ಭಜಿಪೆ ನೀ ಮುದದಲಿ ಮನಕೆ5 ಸಾಸಿರನಾಮ ನತಜನಪ್ರೇಮಾ ಪೊರೆಯೋ ಶ್ರೀ ರಾಮಾ ಆಶೀ ಪೂರ್ತಿಸಿ ಮಾಡೆನ್ನಲಿ ಪ್ರೇಮಾ ಸುರಸಾರ್ವಭೌಮಾ ವಾಸಮಾಡಿ ಅಭಿಲಾಷೆಯ ಪೂರ್ತಿಸೊ ವಾಸುದೇವ ವಾರಾಸಿಜರಮಣಾ 6 ಶರಣಾಗತಜನಪರಿಪಾಲಾ ಕರುಣಾಲವಾಲಾ ಕರುಣಿಸೆನ್ನನು ಹೇ ಶಿರಿಲೋಲಾ ನಮಿತಜನಸುgಸಾಲ ಅಜ ಭವ ಸುರ ನಿಕರಾರ್ಚಿತಪದ ಸರಸಿಜಯುತ ನೀ ಸುರವರದೇವಾ 7 ಪನ್ನಗಗಿರಿ ನಿಜಕೃತವಾಸಾ ಪೊರೆ ಎನ್ನನು ಶ್ರೀಶಾ ಬಿನ್ನಪ ಮಾಳ್ಪೆನು ಹೇ ಶ್ರೀನಿವಾಸಾ ಕೊಡು ಎನಗೆ ಲೇಸಾ ಎನ್ನ ಸಲಹೋದಕೆ ಅನ್ಯರ ಕಾಣೆನೊ ಮನ್ನಿಸು ನೀನಾಪನ್ನಜನಸುಖದಾ 8 ಲಕ್ಷ್ಮೀನಾಯಕ ವರಪಕ್ಷಿಗಮನಾ ಅಕ್ಷಯ ಫಲವನ್ನ ರಕ್ಷಿಸಿ ಕಾಯ್ವದೋ ನೀ ಎನ್ನಾ ಲಕ್ಷ್ಮಣನಣ್ಣಾ ಕ - ಟಾಕ್ಷದಿ ಎನ್ನ ವೀಕ್ಷಿಸು ಕ್ಷಣ ಕ್ಷಣ..... 9 ಧರ್ಮಾರ್ಥಕಾಮಮೋಕ್ಷವ ನಾನೊಲ್ಲೇ ಕರ್ಮದ ಸುಳಿಯಲ್ಲೇ ಮರ್ಮವ ತಿಳಿಯದೆ ಬೀಳುವೆ ನಾನಲ್ಲೇ ನಿರ್ಮಿಸದಿರು ಎನ್ನಲ್ಲೇ ಕರ್ಮಭವದ ಮಹÀ ಮರ್ಮವ ತಿಳಿಸೀ ದುರ್ಮನ ಬಿಡಿಸೆಲೊ ಬೊಮ್ಮನ ತಾತಾ 10 ದಿಟ್ಟ ಗುರು ಜಗನ್ನಾಥವಿಠಲ ನಾನನಾಥಾ ಥಟ್ಟಾನೆ ನೀ ಎನ್ನನು ಕಾಯೋ ಶ್ರೀನಾಥಾ ಇಷ್ಟೇ ಎನಮನದರ್ಥ ಸೃಷ್ಟಿಯೊಳಗೆ ಬಹು ಭ್ರಷ್ಟರಸ್ತುತಿಸಿ ನಿ - ಕೃಷ್ಟನಾದೇನೋ ಶ್ರೇಷ್ಠ ಮೂರುತೀ 11
--------------
ಗುರುಜಗನ್ನಾಥದಾಸರು
ಶ್ರೀನಿವಾಸನೆ ನಿನ್ನ ಧ್ಯಾನದಲಿ ನಾನಿದ್ದೆ ಕರವ ಪಿಡಿದೆ ಪ ಭಾನುಶತತೇಜ ನಿನ್ನಾನನಾಬ್ಜದ ಮಧುವ ಪಾನ ಮಾಡುತ ತೃಪ್ತಿ ಕಾಣದಿರುವೆ ಅ.ಪ ಕಾಮನಂತಹ ರೂಪ ಸೋಮನಂತಹ ಕಾಂತಿ ರಾಮನಂತಹ ಸತ್ಯ ಧರ್ಮ ನಡತೆ ಈ ಮಹಾ ಸುಗುಣಶಾಲಿಯು ನೀನು ನಿನ್ನಯ ಪ್ರೇಮವನು ಕಾಮಿಸುವ ಹಸುಳೆ ನಾನು 1 ಗಂಧ ಫಲಪುಷ್ಪ ತಾಂಬೂಲಗಳನು ಅಂದದ ಹೇಮದ ತಬಕದಲ್ಲಿ ತಂದು ಕೊಡುವೆನು ಪ್ರೇಮ ಕಾಣಿಕೆಯನು ಮಂದಹಾಸದಿ ನಿನ್ನ ಪಾಂಗದಿಂದ ನೋಡೋ 2 ಒಂದು ದಿನ ಕನಸಿನಲಿ ಕಂಡೆನಚ್ಚರಿ ದೃಶ್ಯ ಮುಂದೆ ನಿಂತಳು ಯುವತಿ ನಸುನಗುತಲಿ ಗಂಧ ತಾಂಬೂಲ ಫಲಪುಷ್ಪ ಪರಿಮಳದ್ರವ್ಯ ತಂದಿಹಳು ಚಿನ್ಮಯದ ತವಕದಲ್ಲ್ಲಿ ಕಂದನಿದ ನಿನಗಾಗಿ ತಂದಿರುವೆನೆಂದು ಮೃದು ಮಂದಹಾಸದಿ ತಲೆಯ ಸವರಿ ನುಡಿಯೆ ಸುಂದರಿಯೆ ನೀನಾರು ಬಂಧುವರ್ಗಗಳಲ್ಲಿ ಹಿಂದೆ ನಾ ನೋಡಿಲ್ಲವೆಂದು ನುಡಿಯೆ ನಂದಗೋಕುಲದಲ್ಲಿ ನಂದನಕುಮಾರನಿಗೆ ಅಂದ ರಾಣಿಯು ನಾನು ಸತ್ಯಭಾಮೆ ಇಂದ್ರದೇವನ ದಿವ್ಯ ನಂದನವನದಿಂದ ತಂದಿರುವೆ ನಿನ್ನ ವರಕುಲವನರಿತು ಸುಂದರಾಂಗನ ಸೇರಿ ಸುಖಪಡುವ ಸೌಭಾಗ್ಯ ಮುಂದಿಹುದು ನಿನಗೆ ಬಲು ತ್ವರಿತದಲ್ಲಿ ಅಂದು ನೀ ಈ ಸ್ವರ್ಣಮಯ ತವÀಕದಲ್ಲಿರುವ ಗಂಧ ಪುಷ್ಪಾದಿಗಳ ಫಲವನರಿವೆ ಚಂದದಲಿ ದಾಂಪತ್ಯ ಸುಖಶಾಂತಿ ಪಡೆಯುವೆ ಕಂದ ನೀ ಸ್ವೀಕರಿಸು ಪೋಗಿ ಬರುವೆ ಎಂದು ನುಡಿಯಲು ತರುಣಿ ಎಚ್ಚರಿತೆನು ಶುಭ ಸುದ್ದಿಯು ತಂದಿರುವೆ ತಬಕವ ಪ್ರಸನ್ನ ವದನ
--------------
ವಿದ್ಯಾಪ್ರಸನ್ನತೀರ್ಥರು
ಶ್ರೀನಿವಾಸಾಷ್ಟಕ ಪಾಹಿಮಾಮರೇಂದ್ರ ವಂದಿತ ಪಾಹಿಮಾಮ ಜರಾವೃತಪಾಹಿಮಾಮಿಭರಾಜ ಪೂಜಿತ ಪಾಹಿ ಪಾಂಡವ ಕಾಮಿತ ಪ ಶ್ರೀನಿವಾಸ ಸರೋಜ ಶೋಭಿತ ಪಾಣಿ ಕಾಂಚನ ಕಂಕಣಜ್ಞಾನ ವೀರ್ಯ ಬಲ ಪ್ರಮೋದ ಮುಖೋರು ಸದ್ಗುಣ ಕಾರಣವೇಣುನಾದ ವಿಮೋಹ ಗೋಕುಲ ಕಾಮಿನೀ ಸುಖ ಸಾಧನಸಾನುರಾಗ ಕಟಾಕ್ಷ ಸುಸ್ಮಿತ ಭಾನು ಕೋಟಿ ಸಮಾನನ 1 ವಕ್ತ್ರ ಸುಮಂದಹಾಸ ವಿಮೋಹನಮಂದರೋದ್ಧರ ಮಾಧವಾವರ ವೃಂದಪಾಲನ ಭಾವನಇಂದ್ರ ಮುಖ್ಯ ಸುರೇಂದ್ರ ಶತ್ರು ಬಲೀಂದ್ರ ದಾನವ ಬೋಧನಸಿಂಧು ಸಂಭವ ಸುಂದರಾಮೃತ ಭೋಜನಾಮರ ಮೋದನ 2 ಕಂಸಕಾಲ ಜರಾಸುತಾದ್ಯ ಸುರಾಂಶ ಸಂಘ ನಿಷೂದನಸಂಶಿತವೃತ ಕಾಮಿನೀ ವರ ಹಿಂಸಿತಾಸುರ ಕಾಮನಹಂಸನಾಶ ಭವಾಂಶ ತೋಷ ಸುಧಾಂಶು ಬಿಂಬ ನಿಕೇತನಕಂಸಚಾಪ ವಿನಾಶನಾಮರ ಸಂಶಯಾಂಕುರ ಮೋಚನ 3 ಕೂರ್ಮ ವರಾಹ ವಾಮನ ವತ್ಸ ಭಾಷಿತ ಪಾಲನಕತ್ಸಿತಾವನಿಪಾಲನ ಶತೃದಚ್ಚುತಾತ್ಮ ಸುಬೋಧನವತ್ಸವಾಟ ಚರೋರು ರಾಕ್ಷಸ ಭತ್ರ್ಸನಾಮೃತ ಸಾಧನಸ್ವೇಚ್ಛಯಾತ್ತ ಸಮಸ್ತ ವಿಗ್ರಹ ಮತ್ ಶರೀರ ಸುಖಾಸನ 4 ಪಂಕಜ ಚಾರು ಸೂನು ದಯಾಕರ 5 ಮಂದಹಾಸ ಮುಖೇಂದು ಮಂಡಲ ಸುಂದರಾಮೃತ ಭಾಷಣನಂದ ಚಿದ್ಭನ ವೃಂದ ಭೂಷಣ ನಂದಗೋಪ ಸುನಂದನಸಿಂಧುತೀರ ವಿಹಾರ ಗೋಕುಲ ಕಾಮಿನಿ ಸುಂದರೀಕರ ಪೂಜನನಂದ ಚಿದ್ಭನ ದೇವ ಭಾಸ್ಕರ ನಂದಿನೀ ರತಿ ಸಾಧನ 6 ಸಾರಥಿ ವೃಷ್ಣಿವಂಶ ಸಮುಜ್ವಲಪ್ರೇಷ್ಠ ಸಂಸದಿ ಸೇವಿತಾಮರ ಸರ್ವದಿವೌಕ ಸಾಮುರು ಮುಷ್ಟಿಕಾದ್ಯ ಸುರಾನಳಮುಷ್ಟಿಧಾನ್ಯದ ಕಷ್ಟ ನಾಶನ ವೃಷ್ಣಿವರ್ಯ ಮಹಾಬಲ ತುಷ್ಟದಾಶ್ರಿತ ಸತ್ಫಲವಿಷ್ಣುರೂಪಮಮೇಷ್ಟ ದೋಹವಶಿಷ್ಠ ಸೇವಿತ ವಿಠ್ಠಲ 7 ವಕ್ತ್ರ ನಿಷೇವಣಬಂಧನಂ ಪರಿಹೃತ್ಯ ಮಾಮವ ಸುಂದರಾಂಬರ ಭೂಷಣ 8
--------------
ಇಂದಿರೇಶರು
ಶ್ರೀಪತಿ ಭಯಹಾರಿ ರಕ್ಷಿಸು ತಾಪತ್ರಯವಾರಿ ಕೋಪಲೇಶನ ಮನೋನುಪಹಾರಿ ಭೂಪತಿರೂಪವಿಹಾರಿ ಪ. ಅಖಿಳ ಜನನಿ ಭರ್ತಾ ಪಾಲನ ಮಹಾಧುರಧರ್ತಾ ಭಕುತಿಯ ಪಾಲಿಸು ಭಯ ಪರಿಹರ್ತಾ 1 ಕಾಮಿತ ಫಲದಾಯಿ ತುಲಸೀಧಾಮ ಶೇಷಶಾಯಿ ತಾಮರಸಾಸನ ದೇವನ ತಾಯಿ ಶ್ರೀ ಮಹೇಶನೀ ತ್ವರಿತದಿ ಕಾಯಿ2 ನಾಗಭೂಧರೇಶ ಕರುಣಿಸು ಬೇಗದಿ ಸರ್ವೇಶ ರಾಗ ರೋಗ ಗಣ ನೀಗು ನಿನ್ನಡಿಗೆ ಬಾಗುವೆ ಲಕ್ಷ್ಮೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಪತಿಯ ನೈವೇದ್ಯ ಕೊಡುವದು ಧೂಪದಾಂತರ ಭೂಮಿಶೋಧನ ಆಪದಿಂ ಮಂಡಲವ ಮಾಡುತ ರಂಗವಲಿ ಹಾಕಿ ಸೂಪ ಅನ್ನವು ಅಗ್ನಿಕೋಣದಿ ಆ ಪರಮ ಅನ್ನವನು ಈಶಾ ನ್ಯಾಪೆಯಾಲೇಹಗಳ ನೈರುತದಲಿ ಇಟ್ಟು ತಥಾ 1 ವಾಯುದಿಶದಲಿ ಉಪಸುಭೋಜ್ಯವು ವಾಯಸಾನ್ನದ ಮಧ್ಯ ಘೃತಸಂ ಸ್ತೂಯಮಾನ ನಿವೇದನವು ಈ ಕ್ರಮದಿ ಹೀಂಗಿಟ್ಟು ಬಾಯಿಯಿಂದಲಿ ದ್ವಾದಶ ಸ್ತುತಿ ಗಾಯನದಿ ನುಡಿಯುತಲಿ ಈ ಕಡೆ ಆಯಾ ಅಭಿಮಾನಿಗಳು ದೇವತೆಗಳನು ಚಿಂತಿಸುತ 2 ಓದನಕ ಅಭಿಮಾನಿ ಶಶಿಪರ ಮೋದನಕ ಅಭಿಮಾನಿ ಭಾರತಿ ಆದಿವಾಕರ ಭಕ್ಷ ಕ್ಷೀರಾಬ್ಧೀಜೆ ಸರ್ಪಿಯಲಿ ಸ್ವಾದುಕ್ಷೀರಕ ವಾಣಿ ಮಂಡಿಗಿ ಲೀ ದ್ರುಹಿಣನವನೀತ ಪವನಾ ದಾದಧಿಗೆ ಶಶಿವರುಣ ಸೂಪಕೆ ಗರುಡ ಅಭಿಮಾನಿ 3 ಶಾಕದಲಿ ಶೇಷಾಮ್ಲ ಗಿರಿಜಾ ನೇಕನಾಮ್ಲದಿ ರುದ್ರಸಿತದಲಿ ಪಾಕಶಾಸನ ಶೇಷುಪಸ್ಕರದಲ್ಲಿ ವಾಕ್ಪತಿಯೂ ಈ ಕಟು ಪದಾರ್ಥದಲಿ ಯಮ ಬಾ ಹ್ಲೀಕ ತಂತುಭದಲ್ಲಿ ಮನ್ಮಥ ನೇಕ ವ್ಯಂಜನ ತೈಲ ಪಕ್ವದಿ ಸೌಮ್ಯನಾಮಕನೂ 4 ಕೂಷುಮಾಂಡದ ಸಂಡಿಗಿಲಿ ಕುಲ ಮಾಷದಲಿ ದಕ್ಷ ಪ್ರಜಾಪತಿ ಮಾಷ ಭಕ್ಷದಿ ಬ್ರಹ್ಮಪುತ್ರನು ಲವಣದಲಿ ನಿಋತಿ ಈ ಸುಫಲ ಷಡ್ರಸದಿ ಪ್ರಾಣ ವಿ ಶೇಷ ತಾಂಬೂಲದಲಿ ಗಂಗಾ ಆ ಸುಕರ್ಮಕೆ ಪುಷ್ಕರನು ಅಭಿಮಾನಿ ದೇವತೆಯೂ 5 ಸಕಲ ಭಕ್ಷ್ಯಗಳಲ್ಲಿ ಉದಕದಿ ವಿಶ್ವ ಮೂರುತಿ ಮುಖದಲೀ ನುಡಿ ಅಂತಿಲೀ ಶ್ರೀ ಕೃಷ್ಣ ಮೂರುತಿಯ ನಖ ಚತು ಪದಾರ್ಥದಲಿ ಆ ಸ ಮ್ಯಕು ಚತುರವಿಂಶತಿ ಅಭಿಮಾ ನಿಕರ ಚಿಂತಿಸಿ ಸರ್ಪಿ ಸಹ ಶ್ರೀ ತುಳಸಿಯನು ಹಾಕಿ6 ಕ್ಷೀರ ದÀಧಿ ಕರ್ಪೂರ ಸಾಕ ರ್ಜೀರ ಪನಸ ಕಪಿಥ್ಥ ಪಣ್ಕದ ಳೀರಸಾಲ ದ್ರಾಕ್ಷ ತಾಂಬೂಲದಲಿ ಚಿಂತನೆಯೂ ಪೂರ ಶಂಖದಿ ಉದಕ ಓಂ ನಮೊ ನಾರೆಯಣಾ ಅಪ್ಟಾಕ್ಷರವು ತನ ಮೋರೆ ಮುಚ್ಚಿ ಶತಾಷ್ಟವರ್ತಿಲಿ ಮಂತರಿಸಿ ತೆರೆದೂ7 ಸೌರಭೀ ಮಂತ್ರದಲಿ ಪ್ರೇಕ್ಷಿಸಿ ಮೂರೆರಡು ಮೊದಲಾಗಿ ಶಂಖವು ಅಂತಿಮಾಡಿ ತಥಾ ಪೂರ್ವ ಆಪೋಶನವು ಹೇಳಿ ಅ ಪೂರ್ವ ನೈವೇದ್ಯವು ಸಮರ್ಪಿಸಿ ಸಾರ್ವಭೌಮಗ ಉತ್ತರಾಪೋಶನವು ಹೇಳಿ ತಥಾ 8 ಪೂಗ ಅರ್ಪಿಸಿದಂತರದಿ ಅತಿ ಬ್ಯಾಗದಲಿ ಲಕ್ಷ್ಯಾದಿ ನೈವೇ ದ್ಯಾಗ ಅರ್ಪಿಸಿ ತಾರತಮ್ಯದಿ ಉಳಿದ ದೇವರಿಗೆ ಸಾಗಿಸೀ ಶ್ರೀ ಹರಿಯ ಸಂಪುಟ ದಾಗ ನಿಲ್ಲಿಸಿ ವೈಶ್ವದೇವವು ಸಾಗಿಸೀ ಶ್ರೀ ವಿಜಯವಿಠಲನ ಧೇನಿಸುತ ಮುದದಿ9
--------------
ವಿಜಯದಾಸ
ಶ್ರೀಪುರುಷೋತ್ತಮತೀರ್ಥರು ಯೋಗಿಗಳರಸ ಟೀಕಾಚಾರ್ಯರೆ ನಿಮ್ಮ ಪಾದಬಾಗಿ ಭಜಿಸುವನರಗೆ ಪಾಪ ನಿರ್ಲೇಪ ಪ ಖಗವರ ವಹನನಕಾಗಿನಿ ತೀರಗ ವರ ಜಯಗುರುವೇ ಅ.ಪ. ಅಕ್ಷಯ ಫಲವೀವಾ |ಲಕ್ಷುಮಿ ನಾರಾಯಣನ | ಕುಕ್ಷಿಯೋಳೀಕ್ಷಿಸುವ |ಧೃತ - ಲಕ್ಷ್ಯವಿಲ್ಲದೆ ಗಿರಿ ಪಕ್ಷ ತರಿವ ಪರಪಕ್ಷಕೆ ಕರ್ಕಶ ಕುಲಿಶಾ 1 ದಶಮತಿ ಗ್ರಂಥಗಳಾ | ವೃಷಭ ಜನ್ಮದಿ ಪೊತ್ತುಅಸುವ ನೀಗುತ ಭೂಸುರ ಕುಲದಿ ಉದ್ಭವಿಸಿವಿಷಯ ಮೋಹವ ತ್ಯಜಿಸೀ | ಅಸಮ ಮಹಿಮ ಹರಿಯಾಒಸೆದು ಸೇವಿಸೆ ತುರಿಯಾ | ಆಶ್ರಮ ವಹಿಸೀ |ಧೃತ - ಬಸುರಲಿ ಬೊಮ್ಮನ ಪ್ರಸವಿಸಿದವನನುಸರ್ವೇಶ ನೆನುತಲಿ ಸಾರಿದ ಮಹಿಮಾ 2 ಜವನನ ಭಯನಾಶಾ | ಭುವನ ಪಾವನ ಸುಧೆಯಾಅವನಿ ಸುರರಿಗುಣಿಸೀ | ಕ್ಲೇಶವ ಹರಿಸೀ |ಅವನಿಜಾವಲ್ಲಭನಾ | ಮಾವನ ಕೊಂದವನಾಶಿವನ ಮೋಹಿಸಿ ಕೆಡಿಸಿ ಉಳಿಸೀದನಾ |ಧೃತ - ಪವನನ ಪ್ರಿಯ ಗುರು ಗೋವಿಂದ ವಿಠಲನನವ ನವ ಗ್ರಂಥದಿ ನುತಿಸಿದ ಮಹಿಮಾ3
--------------
ಗುರುಗೋವಿಂದವಿಠಲರು
ಶ್ರೀಮದನಂತನೀತಾ ಶ್ರೀಮದನಂತನೀತಾ | ಸೀಮರಹಿತಾ ಮಹಿಮನೀತಾ | ನಾಮ ನೆನೆಯೆ ಒಲಿದು ನಿಷ್ಕಾಮ ಫಲವ ನೀವಾನೀತ ಶ್ರೀಮದಾನಂತನೀತನು ಪ ಆದಿದೈವನೀತಾ ಜೀವಾದಿಗಳಿಗಭಯದಾನೀತಾ | ಶ್ರೀಧರಣಿ ದುರ್ಗಾರಮಣನಾದಾತನೊದಾನೀತಾ | ವೇದಪಾಲಕನೀತಾ ಸನಕಾದಿಗಳಿಗೆ ಪ್ರೀತಾನೀತಾ | ನಿತ್ಯ ಸಾಧುಗಳ ಕಾಯಿದನೀತಾ1 ಗಜವರದನೀತಾ ಗಂಗಜನ ಮನೋಭೀಷ್ಟನೀತಾ | ಗಜ ರಜಕ ಬಿಲ್ಲು ಮಲ್ಲರ ವ್ರಜನನಾಳಿದ ದಿಟ್ಟಿನೀತಾ | ತ್ರಿಜಗ ವಂದಿತಾನೀತಾ ಅಂಗಜನ ಪೆತ್ತ ಪ್ರೇಮನೀತಾ | ಪಂಕಜ ಬಾಂಧವನ ಭಾಸನೀತಾ2 ಕಪಟನಾಟಕನೀತಾ ಕರಡಿ ಕಪಿಗಳನಾಳಿದನೀತಾ | ಕಪಿಲಮುನಿಯಾಗಿ ತಾಯಿಗೆ ಉಪದೇಶವ ಪೇಳಿದನೀತಾ | ದ್ರುಪದಸುತೆಯ ಕಾಯದನೀತಾ ಸ್ವಪ್ನ ಸುಷುಪ್ತಿ ಜಾಗ್ರದಾವಸ್ಥೆಗೆ ಗುಪುತವ್ಯಾಪಕ ಗುಣನೀತಾ3 ಪರಮ ಪುರುಷನೀತಾ ದಶಶಿರನ ಕುಲವನಳಿದನೀತಾ | ಗಿರಿಯಲಿ ಧರಿಸಿ ಲೋಕವ ಪೊರೆವ ವಿಶ್ವಾಧಾರನೀತಾ | ಹರನ ವೈರಿಯ ಕೊಂದನೀತಾ | ನಿರುಪಮ ಮೂರುತಿನೀತಾ | ಸುರರಿಗೆ ಉಣಿಸಿದನೀತಾ | ತರಳ ಲೀಲೆಯ ತೋರಿದನೀತಾ4 ನಿತ್ಯ ಜಪತಪಾದಿಗೆ ನೇಮಪ್ರಕಾರ ಚೇಷ್ಟಕನೀತಾ | ಸಾಮ ಲೋಲ ವಿಜಯವಿಠ್ಠಲ ತಾಮರಸನಾಭನೀತಾ 5
--------------
ವಿಜಯದಾಸ
ಶ್ರೀಮನೋಹರ ನಿನ್ನ ನಾಮವೇ ಯೆನ್ನುಸಿರು ಕ್ಷೇಮ ನಾಡಿಗಳಲ್ಲಿ ತಿರುಗುತಿರಲಿ ಪ ಕಾಮಾದಿ ಷಡ್ವರ್ಗವ್ಯಾಪನೆಯನೋಡಿಸುತ ಪ್ರೇಮದಿಂ ಹೃತ್ಪದ್ಮದಲಿ ತೋರು ಸತತ ಅ.ಪ ಪ್ರಾಪಂಚಿಕರ ಮನವು ವಿಷಯಗಳಿಗೆಳೆವಂತೆ ಪಾಪಹರ ನಿನ್ನೊಳಗೆ ಯನ್ನ ಮನವಿರಲಿ ತಾಪತ್ರಯಂಗಳಿಗೆ ತನಯನನು ಸಿಲುಕಿಸದೆ ಕಾಪಾಡಿಕೋ ಸ್ವಾಮಿ ದಾಸಾನುದಾಸನಂ1 ಕನಸು ಎಚ್ಚರ ನಿದ್ದೆ ಎಂಬವಸ್ಥೆಗಳಲ್ಲಿ ದಿನಕರಪ್ರಭು ಮೂರ್ತಿಯವತಾರ ತೋರಿ ಅನುನಯದಿ ಪದಯುಗವ ಶರಣು ಹೊಂದುವ ಪರಿಯ ಕನಿಕರದಿ ಕರುಣಿಸೈ ಕಮಲನಯನ 2 ಕಫವಾತ ಪಿತ್ಥಗಳ ವಿಕೃತಿಗಳು ಬಾರದೆಲೆ ಅಪರಿಮಿತ ಸುಂದರಾನಂದ ನೀಡಿ ಸಫಲಮಂತ್ರವ ನುಡಿಸಿ ಕೃಪೆಯಿಂದ ಕೈಪಿಡಿದು ಸುಪಥದಿಂ ನದಿದಾಟಿ ಸೇರಿಸಿಕೊ ಅಡಿಗೆ 3 ಹರಿಹರೀ ಹರಿಯೆಂಬೆ ತಾಯಿ ತಂದೆಯೆ ಗುರುವೆ ದೊರೆಯೆನೀ ಸೋದರನು ಸಖನು ಬಂಧೂ ಧರಣೀಧರ ಸರ್ವತ್ರ ಬೆಂಬಿಡದೆ ಸಹಕರಿಸಿ ಪೊರೆವುದೈ ಭವನಾಶ ಹೆಜ್ಜಾಜಿ ಶ್ರೀಶಾ 4
--------------
ಶಾಮಶರ್ಮರು
ಶ್ರೀಮಹಾಲಕ್ಷಮಿತಾಯೇ | ಶ್ರೀ ಮಹಾಮಾಯೆ | ಹೇಮಾಯಾ ಕರುಣಾಬ್ದಿಯೇ | ಕಾಮಿತ ಫಲನೀಯೇ | ಸಾಮಜಗಮನಿಯೇ | ಹೇಮಾಯಾ ಕೋಟಿ ಸಮಕಾಯೇ | ಶುಭಚರಿಯ | ಬಹುಪರಿಯೇ | ಹರಿಪ್ರೀಯೇ | ಅರಿಯೇ ಪ ಶರಧಿಸುತವನೇ | ಸರಸಿಜಸದನೆ | ಸುರಚಿರದವರಾನೆ | ಕರಿಸರ್ಪವೇಣೆ | ದುರಿತಾದೌಘಪಹರಣೆ | ಕರುಣದಾಗಾರೆ ಶರಣೆ | ನೆರೆನಿನ್ನನಂಬಿದೆನೆ ಮಾತೆ | ಅದ್ಭುತೆ | ರವಿನಮಿತೆ | ಪ್ರಖ್ಯಾತೆ | ದಾತೆ 1 ಹೊಳೆವ ಸೌಂದರ್ಯ ಸಲಹೆ | ಸಲೆಕುಲದೈವೆ | ಸುಜನ ಸೇವೆ | ಮಲಿನರ ಭಾವೆ | ಹಲವು ಮಾತೇನು ಫಲವೇ | ಬಲುನಾಹಂಬಲಿಸುವೆ | ಒಲಿದು ಕರುಣಿಸು ಭಾಗ್ಯವಂತೆ | ಗುಣವಂತೆ | ಬಹುಶಾಂತೆ | ದಯವಂತೆ ಕಾಂತೆ 2 ಕರವೀರ ಪುರಧೀಶೆ | ಶರಣರುಲ್ಹಾಸೆ | ಸುರಮುನಿಜನತೋಷೆ | ಶಿರಸ್ವಪ್ರಕಾಶೆ | ಪರತರ ಸುವಿಲಾಸೆ | ಗುರುಕೃಷ್ಣಸುತನೀಶೆ | ವರಕೊಲ್ಹಾಸುರನ ವಿನಾಸ | ಜಗದೀಶೆ | ಮೃದುಭಾಷೆ | ಅವಿನಾಶೆ | ಈಶೆ 3 ಅಂಕಿತ-ಗುರುಕೃಷ್ಣಸುತ
--------------
ಕಾಖಂಡಕಿ ಶ್ರೀ ಕೃಷ್ಣದಾಸರು