ಒಟ್ಟು 2526 ಕಡೆಗಳಲ್ಲಿ , 119 ದಾಸರು , 1558 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಧ್ವಮುನಿಯೆ ನಿನಗೆ ಎದ್ದು ಕರಗಳ ಮುಗಿವೆ | ಬುದ್ಧಿ ಪಾಲಿಸಿ ಎನ್ನ ಉದ್ಧರಿಸೊ ಗುರುವೇ ಪ ದುರುಳ ಪಾಮರ ಸಂಕರನೆಂಬುವನು | ದುರಾಚಾರಗಳು ಧರಿಯೊಳಗೆ ಕುಭಾಷ್ಯಗಳ ವ್ಯಾಪಿಸೀ | ಇರಲು ಉತ್ತಮ ಸಂಪ್ರದಾಯದಲ್ಲಿಪ್ಪ | ವರರು ಇರದಂತಾಗೆ ಸುಜನರು ಕೂಗೆ 1 ಮಲ್ಲ ಮಾಯಿಗಳ ಹಲ್ಲು ಮುರಿದ ಅಪ್ರತಿಮಲ್ಲ | ಇಳಿಯೊಳಗೆ ಶುದ್ದ ಭಾಷ್ಯ ರಚಿಸಿ ಲೇಸಾ | ಕಿಲಕಿಲನೆ ನಗುತ ಮೊಗ ಕಳೆವೇರುತಾ ವೇಗ | ನಳಿನನಾಭನ ಚರಣ ಮನದಲಿಟ್ಟ ಪರಣಾ 2 ಇಪ್ಪತ್ತು ಒಂದು ದುರ್ಮತದ ವರ ಕುವಾಕು | ಸರ್ಪನನ್ ಗರುಡ ಶೀಳಿದಂತೆ ಕೇಳಿ | ಇಪ್ಪ ಬಲು ಅಜ್ಞಾನ ಓಡಿಸಿ ಸುಜ್ಞಾನ | ತಪ್ಪದಲೆಗರದು ಸಂತರನೆಲ್ಲ ಪೊರೆದು 3 ಮಿಥ್ಯ | ಪಂಚವಿರಹಿತ ಹರಿ ಪರನೆಂದು ಸಾರೀ | ಚಂಚಲವ ಪರಿಹರಿಸಿ ಮರುತ ಮತ ಉದ್ಧರಿಸಿ | ಕಾಯ ಸುಖ ತೀರ್ಥರಾಯಾ4 ಸುರರಾದಿಗಳ ಮಣಿಯ ಆರಾರು ನಿನಗೆಣೆಯೇ | ಅರಸಿದರೆ ಕಾಣೆ ಹರಿ ಪದಗಳಾ ಆಣೆ | ಶಿರಿ ವಿಜಯವಿಠ್ಠಲನ್ನ ಭಜಿಸುವ ಯತಿರನ್ನ | ಶರಣಪಾಲಕ ಪೂರ್ಣಪ್ರಜ್ಞ ಗುಣಪೂರ್ಣ 5
--------------
ವಿಜಯದಾಸ
ಮಧ್ವಮುನಿಯೇ ಎನ್ನ ಹೃತ್ಕುಮುದ ಚಂದ್ರ ಪ ಅದ್ವೈತಮತಾರಣ್ಯ ದಹನ ಗುಣಸಾಂದ್ರ ಅ.ಪ. ನೊಂದೆ ಎಂಭತ್ನಾಲ್ಕು ಲಕ್ಷಯೋನಿಗಳಲ್ಲಿ ಒಂದೇ ಪ್ರಕಾರ ಸಂಚgಣೆಯಿಂದ ಒಂದೊಂದು ಕರ್ಮಗಳನರಸಿ ನೋಡಲು ಅದ- ರಿಂದ ಭವಾಬ್ಧಿಗೆ ಬಂದುಪಾಯವ ಕಾಣೆ 1 ನೀರು ಚಳಪಳಕಾಸಿ ಆರಲಿಟ್ಟು ಹೆಪ್ಪು ನೀರಿನಿಂದಲಿ ಕೊಡಲು ಬಪ್ಪುದೇನೊ ಮಾರುತೀ ನಿನ್ನ ಕೃಪೆ ಪಡೆಯದಲೆ ಉಳಿದವರ ಕಾರುಣ್ಯವಾಗಲು ಮೋಕ್ಷಸಾಧನವಿಲ್ಲ2 ಹರಿಸಿರಿಗೆ ಎರಗುವ ಸತ್ವ ಶರೀರನೆ ನಿರುತ ಎನ್ನೊಳಗಿಪ್ಪ ಮೂಲಗುರುವೆ ನೆರೆ ನಂಬಿದೆನೊ ಸ್ವಾಮಿ ವಿಜಯವಿಠ್ಠಲರೇಯನಚರಣದಲ್ಲಿರುವಂತೆ ಸಾಧ್ಯವಾಗಲಿ ಮನಸು 3
--------------
ವಿಜಯದಾಸ
ಮಧ್ವರಾಯರ ಕರುಣೆ ಪಡೆಯಿರೊ ಪ ಸಿದ್ಧವು ಇಹಪರದಿ ಸೌಖ್ಯವು ಅ.ಪ ವೀರ ವೈಷ್ಣವ ಮತ ತೋರಿದವರ ನಂಬಿ ವೀರ ವೈಷ್ಣವರಾಗಿ ಬಾಳಿರೊ 1 ಸತ್ಯ ಧರ್ಮಗಳಿಗೆ ಮೂರ್ತಿಗಳಾದ ಜೀ ವೋತ್ತಮರನು ನಂಬಿ ಬಾಳಿರೊ 2 ಉನ್ನತ ಧ್ಯೇಯವ ಸ್ವರ್ಣದಕ್ಷರದಲ್ಲಿ ಚೆನ್ನಾಗಿ ಬೋಧಿಸಿದ ಪ್ರಸನ್ನ ಶ್ರೀ 3
--------------
ವಿದ್ಯಾಪ್ರಸನ್ನತೀರ್ಥರು
ಮಧ್ವವರದಾ ಕೃಷ್ಣಾ ವಿಠಲ ಪೊರೆಯಿವಳ ಪ ಅಧ್ವರೇಡ್ಯನೆ | ದೇವ ಕಾರುಣ್ಯ ಮೂರ್ತೇ ಅ.ಪ. ಸುಸ್ತೇಶ ಸೂಚಿಸಿದ ಕ್ಲುಪ್ತಿಯನ್ನನುಸರಿಸಿಇತ್ತಿಹೆನು ಉಪದೇಶ ಚಿತ್ತಜನಪಿತನೆಅರ್ಥಿಯಲಿ ಮನ್ನಿಸುತ ಚಿತ್ತೈಸು ಬಿನ್ನಪವಕೃತ್ತಿವಾಸನ ತಾತ ಸ್ತುತ್ಯ ಸರ್ವೇಶ 1 ಸನ್ನುತ ಚರಣ ಸೀಮೆ ಮೀರಿದ ಮಹಿಮಭಾಮಿನಿಯ ಪೊರೆಯೆಂದು ಪ್ರಾರ್ಥಿಸುವೆ ಹರಿಯೇ2 ತರತಮದ ಸುಜ್ಞಾನ ಎರಡು ಮೂರ್ಭೇದಗಳುಅರಿವನೇ ಇತ್ತಿವಳ ಪೊರೆವುದೈ ಹರಿಯೆಮರುತ ಮತದಲ್ಲಿಹಳ ನಿರುತ ಕಾಯಲಿ ಬೇಕುಕರಿವರದ ಧೃವವರದ ತರಳೆಹಲ್ಯಯ ವರದ 3 ಪತಿಸೇವೆ ಹಿತದಿಂದ ಕೃತನಾಗಿಯಿವಳಿಂದಗತಿಗೆ ಸಾಧನವೆನಿಸೋ ಮರುತಾಂತರಾತ್ಮಹಿತ ವಹಿತವೆರಡರಲಿ ರತಿ ಸಮತೆ ಪ್ರದನಾಗಿಕೃತ ಕೃತ್ಯಳೆಂದೆನಿಸೊ | ಕೃತಿರಮಣದೇವ 4 ಜೀವ ಅಸ್ವಾತಂತ್ರ ದೇವ ನಿಜ ಸ್ವಾತಂತ್ರಜೀವ ಜಡರೂ ದೇವರಾಧೀನ ವೆಂಬಭಾವನೆ ತಿಳಿಸು ಗುರುಗೋವಿಂದ ವಿಠಲಯ್ಯಸಾವಧಾನದಿಯಿವಳ ಕೈಯನೇ ಪಿಡಿಯೋ 5
--------------
ಗುರುಗೋವಿಂದವಿಠಲರು
ಮಧ್ವಾಂತರ್ಗತ ಶ್ರೀನಿವಾಸಾ | ಕಾಯೊಸಿದ್ಧ ಮೂರುತಿ ವೆಂಕಟೇಶಾ ಪ ಇದ್ಧರೆಯೊಳು ನಿನ್ನ | ಹೊದ್ದಿದವರ ಪಾಪಬದ್ಧವಾಗದು ಅನ್ಯೋಪದ್ರವೆ ಮೊದಲಿಲ್ಲ ಅ.ಪ. ಭವ ಪರ ಕರ ಮೂರ್ತಿ ಪರಾಕು ಭವ ಸುಖನೇಕ ಪರಿಯಲಿ | ಬೇಕು ಪಾಲಿಸು ಏಕ ಭಕುತಿಯ 1 ಧರೆಗೆ ವೈಕುಂಠದ ಪರಿಯೇ | ತೋರಿಮರೆವಿ ಮಹಾತ್ಮ ಶ್ರೀಹರಿಯೇ ||ಸರಿ ನಿನಗಿದು ಹೊಸ ಪರಿಯೇ | ಭಾಗ್ಯಮರಿಯಾದ ಮರಿತಿ ನೀ ಧೊರೆಯೇ ||ಶಿರಿಯೆ ಮಂದಿರವಾಗಿ ಪರಿಪರಿ ರೂಪದಿಕರವ ಜೋಡಿಸಿ ಉಪಚರಿಯ ಮಾಡಲು ಇತ್ತಸರಸಿಜೋದ್ಭವ ಗರುಡ ನರಹರ | ಸುರಪಮುಖ ದಿವಿಜರು ಪರಾಕೆನೆಪರಮ ಪದ ಸಂಪದವಿದಲ್ಲದೆ | ಶಿರಿಯ ಭಾಗ್ಯದಿ ಪರವೆ ನಿನಗೇ 2 ಕರ್ಣ ಕುಂಡಲ ಕೌಸ್ತುಭ ಮಣಿ ಗಣ ಹಾರ ಶೃಂಗಾರ ||ಖಣಿಯೆ ಕಟಿಕರ ಕನಕಮಯ ಸುವಸನ ಕಾಂಚೀದಾಮ ಒಪ್ಪಲುಪ್ರಣತರ ಭಯಪ್ರದಕರ ಕುಂಭಿಣಿಗೆ ತೋರುವ ಅನಘ ವೆಂಕಟನೆ 3 ನಿತ್ಯ ಮೋದಾ | ವಾದಝಗ ಝಗಿಸುವ ದಿವ್ಯ ಪಾದಾ ||ಯುಗಳಾರಾಧನಿ ಪರರಾದಾ | ವರಿಗೆಅಗಣಿತ ಸುಖವೀವ ಶ್ರೀದಾ ||ಗಗನ ಭೂಮಿಪ ಗತಿಪ್ರದ ದಶರಥ ಪಂಚಮೊಗನಾದಿ ಭುವನದೊಳಣುಗ ಮೊದಲಾದ ||ಜಗದಿ ಬಹು ತಾಪಸಿಗಳ ಭಾವದಿ | ಸಿಗದೆ ಮೋಹಾದಿಗಳ ಪಾಶದಿ ಮುಗದಿ ಕರಗಳ ಪೊಗಳುವರಿಗೆ | ಬಗೆ ಬಗೆಯ ಕಾಮಗಳ ಹರಿಸಿದ 4 ಮಣಿ ದಿವಿಜ ಲ-ಲಾಮ ಭೂಡÀರ ವ್ಯಾಸ ವಿಠಲ ಯಾಮ ಯಾಮಕೆ ಎನ್ನ ಪಾಲಿಸೋ 5
--------------
ವ್ಯಾಸವಿಠ್ಠಲರು
ಮನದಧಿಪ ಮರೆಹೊಕ್ಕೆ ಮಹದೇವ ಪಾಹಿ ಪ ತೃಣ ಮೊದಲು ಘನದಲ್ಲಿ ಬಿಡದೆ ಹರಿಯನು ಭಜಿಪ ಅ.ಪ. ಕರುಣಾಬ್ಧಿ ನೀಡೆನಗೆ ವೈರಾಗ್ಯ ಮಹಭಾಗ್ಯ ಭಾಗವತ ಪದ ನಿನ್ನದಯ್ಯ ಕಮಲ ಮಧು ಮತ್ತ ಷಟ್ಪದ ದೊರೆಯೇ ಸರ್ವತ್ರ ನಿನ್ನಲ್ಲಿ ಹರಿಯ ತೋರಿಸಿ ಸಲಹೊ 1 ಆಪ್ತತಮ ನಿನ್ನಂಘ್ರಿ ಧ್ಯಾನದಲಿ ಇಡು ಎನ್ನ ತೃಪ್ತಿ ಅನ್ಯದಿ ಬ್ಯಾಡ ಸುಪ್ತಿರಹಿತ ಸಪ್ತೆರಡು ಭಕ್ತಿಯಲಿ ಬೆಳೆಸೆನ್ನ ಉದ್ಧರಿಸು ಮೂರ್ತಿ ದರುಶನ ಭೋಗ 2 ಮೂರುತಿಯ ಕೈಗಿತ್ತುದಾರ ಸಾಗರ ಶಂಭು ಘೋರ ಭವಹರ ಹರಿಯ ದಾಸವರ್ಯ ಮಾರಮಣ ಜಯೇಶವಿಠಲನ ಭಜನೆಯಲಿ ಸಾರ ಸುಖ ನೀಡೆನಗೆ 3
--------------
ಜಯೇಶವಿಠಲ
ಮನದಧಿಪ ಮಹದೇವ ಮೊರೆಯೆ ಕೇಳೊ ಪ ತಿಮಿರ ಸ್ಥಿತಿಯಲ್ಲಿ ಎದೆ ಒಡೆದು ನಿಂದಿಹೆನು ಅ.ಪ. ಮನಕರಣಗಳು ಎನ್ನ ತಮ್ಮ ಸೆರೆಯಲಿ ಇಟ್ಟು ಘನ ಯಾತನೆಯ ಪಡಿಸಿ ಮೂರ್ಛೆಗೊಳಿಸಿ ಕ್ಷಣ ಬಿಡದೆ ದಣಿಸುವುವು ಮೊರೆ ಇಡಲು ಮುಖವಿಲ್ಲ ಪ್ರಣಿತ ಪಾಲಕರಲ್ಲಿ ಸರಿ ಇಲ್ಲ ನಿನಗೆಂದು 1 ಪವಮಾನ ಪದಕಮಲ ಮಧು ಮತ್ತ ಮಹಭೃಂಗ ಹರಿದಾಸ ಶಿರೋರತ್ನ ಅಭಯದಾಯಿ ಶಿವತಮನೆ ನಿನ್ನಂಘ್ರಿ ರಜಲಕ್ಷ್ಮಿಯನ್ನು ಶಿರ ನಿತ್ಯ ಮಾಡೆನ್ನ ಕೃತಕೃತ್ಯ 2 ಗೌರೀಶ ಗುಣನಿಧಿಯೆ ಗುಪ್ತ ಮಂಗಳ ಮಹಿಮ ಶೌರಿ ಜಯೇಶವಿಠಲ ಧ್ಯಾನಲೋಲ ತಾರಕನೆ ಭವಸಿಂಧು ದಾಟಿಸುವ ಅಂಬಿಗನೆ ಕಾರುಣ್ಯಗರೆದೆನ್ನ ಹರಿಪಾದ ದಡಕೊಯ್ಯೊ 3
--------------
ಜಯೇಶವಿಠಲ
ಮನವೇನೆಂಬುದನರಿಯೋ ಮನುಜ ಮನ ವೇನೆಂಬುದನು ಧ್ರುವ ಮನವೇನೆಂಬುದನನುಭವಕೆ ತಂದು ಖೂನದಲಿಡದೆ ಜ್ಞಾನದಲಿ ನಾನಾ ಶಾಸ್ತ್ರವ ಓದಿ ನೀ ಅನುದಿನ ಏನು ಘಳಿಸಿದ್ಯೊ ಮರುಳ ಮನುಜ1 ಉತ್ಪತ್ತಿ ಸ್ಥಿತಿ ಲಯ ಕರ್ತನೆಂದೆನಿಸಿ ಪ್ರತ್ಯೇಕರವನು ತೋರುತಲಿ ಮತ್ತೆ ಬ್ಯಾರ್ಯಾದ ಪರಬ್ರಹ್ಮೆಂದು ತಾ ಚಿತ್ತ ಭ್ರಮಿಸುದು ದಾವುದೊ ಮನುಜ 2 ಏಕೋ ವಿಷ್ಣು ವೆಂದೆನಿಸಿ ಮುಖದಲಿ ಪೋಕ ದೈವಕೆ ಬಾಯದೆರೆಸುತಲಿ ನಾಕುವೇದವ ಬಲ್ಲವನೆಂದೆನಿಸಿ ವಿಕಳಿಸುತಿಹ್ಯದು ದಾವುದೊ ಮನುಜ 3 ಉತ್ತಮೊತ್ತಮರ ಕಂಡಾಕ್ಷಣ ಹರುಷದಿ ನಿತ್ಯಿರಬೇಕೀ ಸಹವಾಸವೆನಿಸಿ ಮತ್ತೊಂದರಘಳಿ ಗಾಲಸ್ಯವ ತೋರಿ ಒತ್ತಿ ಆಳುವದು ದಾವುದೊ ಮನುಜ 4 ಪಾಪವ ಮಾಡಬಾರದು ಎಂದೆನಿಸಿ ವ್ಯಾಪಿಸಿಗೊಡದೆ ಕಾಣದನಕ ಉಪಾಯದಲಿ ಅಪಸ್ವಾರ್ಥವು ಇದಿರಡೆ ಅಪಹರಿಸುವದು ದಾವುದೊ ಮನುಜ 5 ಪ್ರಾಚೀನವೆ ತಾಂ ನಿಜವೆಂದರುಹಿಸಿ ಆಚರಣೆಯ ಬ್ಯಾರೆ ತೋರುತಲಿ ನೀಚ ಊಚ ಹೊಡೆದಾಡಿಸುತ ನಾಚಿಸುತಿಹುದು ದಾವೊದೊ ಮನುಜ 6 ಸಗುಣ ನಿರ್ಗುಣ ಬ್ಯಾರೆರಡನೆ ತೋರಿ ಬಗೆ ಬಗೆ ಸಾಧನ ತೋರಿಸುತ ಬಗೆದೊಂದೆವೆ ಭಕುತಿಗೆ ನೆಲೆಗೊಳಿಸಿದ ಪ್ರಗತಿ ತೋರುವುದು ದಾವುದೊ ಮನುಜ 7 ಧ್ಯಾನಕೆ ಕೂಡಿಸಿ ಮೋನವ ಹಿಡಿಸಿ ಅನುದಿನ ಜಪವನು ಮಾಡಿಸುತ ಘನವಾಗಿಹÀ ಅನುಭವ ಸುಖದಾಟದ ಖೂನ ದೋರಿಸುದು ದಾವುದೊ ಮನುಜ 8 ಮರವಿಗೆ ತಾನೆ ಅರಿವೇ ಕೊಟ್ಟು ತಿರಿವು ಮರವಿನಂಕುರದ ಕುರ್ಹುವಿನ ಇರಹು ತೋರಿಸುದು ದಾವುದೊ ಮನುಜ 9 ಮನವಿನ ಮೂಲವು ತಿಳಿವದು ಭಾನುಕೋಟಿ ಪ್ರಕಾಶನ ಕರುಣದಲಿ ನಾನು ನಾನೆಂಬವರಿಗೆ ಇದರ ಖೂನ ಲೇಶ ತಿಳಿಯದೊ ಮನುಜ 10 ಹರಿಯೆ ಗುರುವೆಂದರುಹಿಸಿ ಆತ್ಮಲಿ ಶರಣಹೋಗುವ ಭಾವನೆದೋರಿ ತರಳಮಹಿಪತಿ ಗುರುದಯ ಪಡಕೊಂಡಿಂದು ಯೋಗ್ಯನಾಗುವದಿದೊಂದೆ ಮನುಜ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನಸಿಜ ಪಿತ ವಿಠಲ | ನೀನಿವನ ಸಲಹೋ ಪ ಅನುಮಾನ ವಿನ್ನಿಲ್ಲ | ಅಣುಗ ನಿನ್ನವನೋ ಅ.ಪ. ಸಿಂಧು ಮೂರುತಿಯೇ 1 ಸ್ವಪ್ನ ಸೂಚನೆಯಂತೆ | ಒಪ್ಪಿದಂಕಿತವಿತ್ತುಅರ್ಪಿಸಿಹೆ ನಿನ್ನಡಿಗೆ | ಸರ್ಪ ಶಯನಾ |ಒಪ್ಪಿಡಿಯ ಅವಲಿಗ್ಯೆ | ಅಪ್ಪಾರವಿತ್ತಿರುವೆಇಪ್ಪರಿಯ ಮಹಿಮೆಗಳು | ಇನ್ನಾರಿಗುಂಟೋ 2 ವಿಷ ಅಮೃತವಾದಂತೆ | ದುಷ್ಕರ್ಮ ಫಲರಹಿತಎಸೆಗುತ್ತ ಸಂತಾಪ | ನಶಿಸುವಂತೆಸಗೋಅಸಮ ಮಹಿಮನೆ ಭಕ್ತಿ | ಪಾಶಕ್ಕಾವಶನಾಗಿಮಿಸುಣಿ ಮೇಲ್ಮಣಿಯಂತೆ | ಭಾಸಿಸೋ ಹರಿಯೇ 3 ಮೋದ ಮೋದ ದ್ವಂದ್ವ | ಬುದ್ಧಿ ಸಮವೆನಿಸೋ 4 ಆವದೇಶವು ಇರಲಿ | ಆವಕಾಲವು ಇರಲಿನೀವೊದಗೊ ಸ್ಮøತಿ ಪಥಕೆ | ಕೋವಿದರ ಒಡೆಯಾಕಾವ ಕೊಲ್ಲುವ ಗುರೂ | ಗೋವಿಂದ ವಿಠ್ಠಲನೆಭಾವದಲಿ ಮೈದೋರೇ | ಓವಿ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಮನಸಿನನುತಾಪವನು _ ಪರಿಹರಿಸು _ ಹರಿಯೇ ಪ ವನಜ ನಾಭನು ನೀನೇ ಮನದ ಪ್ರೇರಕನಲ್ಲವೇ ಅ.ಪ. ಅನುದಿನದಿ ಧನವನಿತೆ _ ಎಂತೆಂಬ ಕಾನನದಿ ಮನಸು ಮಾಡೀ ಬಹಳ _ ಶ್ವಾನನಂದದಿ ತಿರಿದೇ ಕನಸಿಲಾದರು ನಿನ್ನ _ ಧ್ಯಾನವನು ಮಾಡದೆಲೆ ಮನುಜ ಪಶುವೆನಿಸಿದೆನು _ ದೀನವತ್ಸಲ ಸ್ವಾಮಿ 1 ಸಂಸಾರ ವೆಂಬುವುದು _ ಹಿಂಸೆರೂಪವೆಸಿದ್ಧ ಹಂಸರೂಪಿಯ ಮರೆತ _ ಸಂಶಯಾತತಜನಕೆ ಧ್ವಂಸ ಗೈಸಿ ವಿಷಯ _ ವಾಸನೆಯ ತರಣಿಯನು ಶೌರಿ _ ದಾಸನೆನ್ನನು ಮಾಡಿ2 ಜ್ಞಾನ ತಿರುಳನು ತಿಳುಹಿ _ ಧ್ಯಾನಬಗೆಯನು ಅರುಹಿ ಮಾನಾಭಿಮಾನವನು _ ನಿನಗೆ ಸಮರ್ಪಿಸಿ ಸು ಜ್ಞಾನಿಗಳ ಸಹ ಶ್ರೀ ಕೃಷ್ಣವಿಠಲನ ನಿತ್ಯ ಗಾನದಲಿ ಮೆಚ್ಚಿಸುವ ಭಾಗ್ಯ ಶೀಲನ ಮಾಡೀ 3
--------------
ಕೃಷ್ಣವಿಠಲದಾಸರು
ಮನುಜ ಮೃಗವೇಷ | ವಿಠಲ ಪೊರೆ ಇವಳಾ ಪ ಅನಘ ಅನಿಲಾಂತಸ್ಥ | ಗುಣಪೂರ್ಣ ಹರಿಯೇ ಅ.ಪ. ಗುರುಮಹಿಮೆ ಅರಿಯದಲೆ | ಚಿರಕಾಲ ಬಾಳಿಹಳೊಮರುತಾಂತರಾತ್ಮಹರಿ | ವರಭೋಗಿ ಶಯನಾತರತಮದ ಸುಜ್ಞಾನ | ಎರಡು ಮೂರ್ಭೇದಗಳಅರುಹಿ ನೀ ಪೊರೆ ಇವಳ | ಸರ್ವ ಸುಲುಭಾಖ್ಯ 1 ಬದಿಗ ನೀನಾಗಿದ್ದು | ಮುದುಡ ಜೀವಿಯ ಮನಕೆವದಗಿ ಬಾರದಲೇವೆ | ಅಜ್ಞಾನ ಮುಸುಕೀಸದಮಲಾಂತಃ ಕರಣ | ದುದಯವನೆ ಕಳಕೊಂಡುವಿಧವಿಧದಿ ಪರಿತಪಿಸಿ | ನೊಂದಿಹಳ ಪೊರೆಯೋ 2 ಸರ್ವ ಬಗೆಯಲಿ ವಂದ್ಯ | ಸರ್ವಂತರಾತ್ಮಕನೆನಿರ್ವಿಕಾರನೆ ನಿನ್ನ | ನಾಮ ಸುಧೆಯಾಸರ್ವದಾ ಉಣಿಸಿ ಪೊರೆ | ಇವಳ ಎನೆ ಬಿನ್ನವಿಪೆಸರ್ವಸುಂದರ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಮನುಜಶರೀರವು ವರವೊ ದುರ್ಲಭವೊ ಪ ಭವಸಾಗರವನು ದಾಂಟಲು ನೌಕೆಯಿದೊ ಭವಭಾಧೆಯ ನೀಗಲು ಇದು ಸಾಧನವೊ ಪಾವನಸ್ವರೂಪಜ್ಞಾನವನರಿಯಲು ದೇವನೆ ತಾನೆನಿಸುವನೊ ಆ ನರನು 1 ತಿಳಿ ನೀನೀಗಲೆ ನಾನಾರೆಂಬುದ ಮನುಜಾ ಅಳಿವೀ ದೇಹದೊಳೇ ತಿಳಿಯಲುಬಹುದಿದನಾ ಉಳಿದ ದೇಹಗಳು ಹಲವಾರಿರುತಿರೆ ಫಲವೇನೈ ತಿಳಿವಿರದೇ ತಿಳಿ ಭರದೇ 2 ಪಾಪಿ ಜನ್ಮವು ಎಂದು ಶಪಿಸಲು ಬೇಡಾ ತಾಪನೀಗಲು ಇದೇ ದಾರಿಯೈ ನೋಡಾ ಭವ ಕಡಿಯೇ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಮನೆಯೊಳಗಾಡೋ ನೆನೆವರ ನೋಡೋ ಪ ಮುನಿÀಸಬೇಡವೋ ಎನ್ನ ಮಾನಸವೆಂದೆಂಬ ಅ.ಪ ನಸುನಗೆಯನು ತೋರಿ ನುಸುಳಿ ಪೋಗುವೆಯೇಕೆ ಬಿಸಿಬಿಸಿ ಪಾಲನಿತ್ತು ಬೀಸಿ ಬೀಸಿ ತೂಗುವೆನು 1 ಬಡಮುನಿಗಳು ನಿನ್ನ ಪಿಡಿದೆಳೆಯೆ ಚಿಣ್ಣ ನುಡಿಯಿದು ಸಟೆಯೆನಬೇಡ ಕದ್ದೋಡಬೇಡ 2 ಎನ್ನದೆಂಬುದೆಲ್ಲ ನಿನ್ನದೋ ಮಾಂಗಿರೀಶ ನಿನ್ನ ನಾಮದ ನೆಲೆ ಎನ್ನದೆನ್ನಿಸೋ ರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮನ್ನಿಸಯ್ಯ ಮದನಜನಯ್ಯ ಘನ ಮುನ್ನೀರಶಯ್ಯ ಸ್ವಾಮಿ ಹಯವದನರಾಯಾ ಪ ಬಾರಿಬಾರಿಗೂ ಈತನ ಮಂದಿರದಲಿ ನಿನ್ನ ಚೆನ್ನಿಗ ರೂಪವ ತೋರೋ ನಿನ್ನ ಕರುಣದಿ ಅ.ಪ. ಈಶಾ ಭವಪಾಶಾ ಎಂಬೋ ಬೀಸಿದ ಬಲೆಯೊಳು ಗಾಸಿಗೆರೆದೆನೂ ರಂಗಾ ಕೃಪಾರಿಣ ವಾಸಿ ಪಂಥಗಳು ವಾಸುದೇವನೆ ಲೇಸ ಮಾರ್ಗವ ಕಾಣೆ ನಿನ್ನಾಣೆ ದಾಶರಥಿಯೇ ನಿನ್ನ ದಾಸರ ಕೂಡಿ ಸಂತೋಷಪಡುವ ಸಿರಿಯೆನಗಿತ್ತು ಸಲೆ ಮೀಸಲವ ಮಾಡೋ ದೇವರ ದಯಾಳೊ1 ಪಂಚಭೂತಗಳಲಿ ಪಂಚಾಗ್ನಿಗಳಲಿ ಪಂಚದ್ವಿಗುಣ ಪಂಚರಲಿ ಮತ್ತೆ ಪಂಚಪ್ರಾಣದಲಿ ಪಂಚವಿಂಶತಿ ಮಾರ್ಗ ತೋರೋ ಶ್ರೀಕಾಂತಾ ಪಂಚ ಹಿಡಿಸಿ ಪಂಚೊಂದೋಡಿಸಿ ಪಂಚನಾಲಕು ಭಕ್ತಿ ಕೊಂಚವಾಗದ ಹಾಗೆ ಸಂಚಿತಾಗಮಾ ಮುಂಚೆ ಓಡಿಸೋ ಶ್ರೀವತ್ಸಲಾಂಛನನೇ2 ಶ್ರೀನಿವಾಸನೇ ನಿನ್ನ ಧ್ಯಾನಮಾತ್ರದಿ ಬರುವೋ ಬಿಗನು ಅಘನಾಶÀನವೆಂದೊ ನಾನಿಂದೂ ಬೆಂಬಿದ್ದ ಅಬಲನ ಮನ್ನಿಸೋದಲ್ಲದೆ ಹೀಗೆ ಮುನಿಸೋರೇನೋ ಶ್ರೀಹರೆ ನಿನ್ನ ಸನ್ನಿಧಿಗೊಪ್ಪಿಸಿದೆನೊ ಮನ ಬಂದುದು ಮಾಡೊ ಘನತೆ ನಿನ್ನದು ದೇವಾ ದೀನ ದಯಾನಿಧೆ ಉರಗಾದ್ರಿವಾಸಾ 3
--------------
ಮಹಾನಿಥಿವಿಠಲ
ಮನ್ಮಥಪಿತ ವಿಠಲ ನೀನಿವಳ ಸಲಹೊ ಹರಿಯೇಮನ್ಮನೋರಥ ಭಿನ್ನಪವ ಸಲಿಸೋ ಪ ಜನ್ಮಜನ್ಮಾಂತರದ ಪುಣ್ಯ ಸಂಚಯ ಫಲಿಸಿನಿನ್ನ ದಾಸತ್ವದಲಿ ಕಾಂಕ್ಷೆ ಬಹುಯಿರಿಸೆನನ್ನೆಯಿಂದಲಿ ಪೂಜೆ ಪರಿಕರಂಗಳ ಕೊಂಡುಸ್ವಪ್ನ ಸೂಚಕದಂತೆ ನಿನ್ನರ್ಚನೆಯ ಕಾತುರಳ 1 ತರತಮದಿ ಸುಜ್ಞಾನ ಹರಿಗುರೂ ಸದ್ಭಕ್ತಿಪರಮ ವೈರಾಗ್ಯವನು ವಿಷಯಾದಿಗಳಲೀಪರತತ್ವ ಹರಿಯೆಂಬ ವರಮತಿಯ ನೀನಿತ್ತುಗುರುಮಧ್ವ ಮತದಲ್ಲಿ ಪರಮದೀಕ್ಷೆಯನೀಯೋ 2 ಪತಿ ಸುತರು ಹಿತರಲ್ಲಿ | ಗತಿದಾತ ಗುರುವಿನೊಳುಕ್ಷಿತಿರಮಣ ತವವ್ಯಾಪ್ತಿ ಮತಿಯ ಪಾಲಿಸುತಗತಿ ದೋರೊ ಸನ್ಮುಕುತಿ ಪಥವನೀ ಸಲಿಸುತ್ತಹುತವಹಕ್ಷಾಂತರ್ಗತ ಮನದಿ ನೆಲಸುತಲೀ 3 ಸಂಜೀವ ಪಿತನೇ |ನಂಜು ಸಂಸ್ಕøತಿ ಬಂಧ ಮೋಚಕೇಚ್ಛೆಯ ಮಾಡಿಅಂಜಿಕೆಯನೆ ಕಳೆಯೊ | ಕಂಜಾಕ್ಷ ಹರಿಯೇ 4 ಪಾವಮಾನಿಯ ಪ್ರೀಯ ಭಾವುಕಳ ಹೃದ್ಗತನೆನೀವೊಲಿದು ತವಸ್ಮರಣೆ ಸರ್ವದಾ ಸರ್ವತ್ರಈವುದಿವಳಿಗೆ ಎನ್ನ ಬಿನ್ನಪವ ಸಲ್ಲಿಪುದುಗೋವಿದಾಂಪತಿಯೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು