ಒಟ್ಟು 4388 ಕಡೆಗಳಲ್ಲಿ , 123 ದಾಸರು , 2736 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮಿಸಿರೊ ನಾರಾಯಣನಂಘ್ರಿಗೆ ಭವಕ್ರಮವಿನ್ನು ಸಾಕು ಮುಕ್ತಿಸುಖವೆ ಬೇಕೆಂಬುವರು ಪ. ಮೂರುಬಾರಿ ಪೊಡವಡಿರೊ ಮ-ತ್ತಾರು ಬಾರಿ ಪೊಡವಡಿ ಪುರುಷೋತ್ತಮಗೆಆರೆರಡಕೂಡಿ ಪೊಡವಡಿ ಪುರುಷೋತ್ತಮಗೆರ ಇಪ್ಪತ್ತಮೂರಕ್ಕೊಂದ ಕೂಡಿ ಪೊಡವಡಿರೊ 1 ಶಕ್ತಿಯಿದ್ದರೆ ನಾಲ್ವತ್ತೆಂಟು ಸಾರಿ ಹರಿ-ಗರ್ತಿಯಿಂದಲಿ ಪೊಡವಡಿರೊಆರ್ತಬಂಧು ಸಿರಿರಮಣಗೆ ಅಷ್ಟಾಂಗಯುಕ್ತವಾಗಿ ದಂಡದಂತೆ ಭೂತಳದಲಿ 2 ತುಂಬಿ 3 ಸಂಧ್ಯಾಂ ದೃಷ್ಟ್ವಾಗುರುಂ ಸಾಧ್ಯಂ ಗುರು ಸ್ವಗುರು ಮೇವಚಾದ್ವಿಚತುರ್ವಿಂಶತ್ತದರ್ಧಂ ನಾತದರ್ಧಮಥವಾನಮೇ ನಮೋತದರ್ಥಯಥವಾತದರ್ಧಂ ಸರ್ವದಾ ಮಮೇ 4 ಆರೋಗಣೆಯ ಮಾಡಲಾಗ ವಂದಿಸಬೇಡಗುರು ಹಿರಿಯರ ಸಂಗದೊಳೆರಗಬೇಡಸಿರಿ ಹಯವದನನಗ್ರಪೃಷ್ಟಾತ (?)ಪುರ ವಾಮಭಾಗ ಮಜ್ಜನಕಾಲಂಗಳ ಬಿಟ್ಟು5
--------------
ವಾದಿರಾಜ
ನಮಿಸುವೆನು ಭುವನೇಂದ್ರ ಗುರುರಾಯರ ಅಮಿತ ಮಹಿಮಗೆ ಅಹೋರಾತ್ರಿಯಲಿ ಬಿಡದೆ ಪ ಸಿದ್ಧಾರ್ಧಿ ನಾಮ ಸಂವತ್ಸರದ ವೈಶಾಖ ಶುದ್ಧೇತರ ಪಕ್ಷ ಸಪ್ತಮಿಯಲಿ ವಿದ್ವತ್ಸಭಾ ಮಧ್ಯದಲಿ ರಾಮವ್ಯಾಸರ ಪದದ್ವಯವನೈದಿದ ಮಹಾಮಹಿಮರನ ಕಂಡು 1 ರಾಜವಳ್ಳಿ ಎಂಬ ಪುರದಿ ಕರುಣದಿ ಪಾರಿ ವ್ರಾಜಕಾಚಾರ್ಯ ವರವತಂಸ ಪಾದ ರಾಜೀವಯುಗಳ ಧೇನಿಸುತಿಪ್ಪರಿಗೆ ಕಲ್ಪ ಭೂಜದಂದದಿ ಬೇಡಿದಿಷ್ಟಾರ್ಥ ಕೊಡುವರಿಗೆ 2 ಶ್ರೀ ತುಂಗ ಭದ್ರಾ ತರಂಗಿಣೀ ತೀರದಲಿ ಪಾದ ಮೂಲದಲ್ಲಿ ಪ್ರೀತಿ ಪೂರ್ವಕವಾಗಿ ವಾಸವಾದರು ಜಗ ನ್ನಾಥ ವಿಠಲನ ಕಾರುಣ್ಯಪಾತ್ರರ ಕಂಡು 3
--------------
ಜಗನ್ನಾಥದಾಸರು
ನಮೋ ನಮಸ್ತೇ ಉಮಾತನಯ ಕುಮಾರಾಗ್ರಜ ಪ. ಅಮೋಘ ಶಮದಮಾದಿಗುಣ ಸಮೂಹ ಗತವಿಮೋಹ ಸದಾ ಅ.ಪ. ಭಾರತವ ಬಾದರಾಯಣನು ಪೇಳಿದಂತೆ ಬರೆದೆ ಭಾರತವ ಮಾರಜ ಭ್ರಮೆಯ ದೂರಗೈದ ಸುವಿ- ಚಾರಧೀರ ಸುರವಾರವಿನುತ ಪದ 1 ವೃಂದಾರಕೇಂದ್ರ ತವಚರಣಕೆ ವಂದಿಸುವೆ ವೃಂದಾರ ಮಂದಾರ ಚಂದನಚರ್ಚಿತ ಚಂದ್ರಚೂಡ ಮನೋನಂದ ಮೂರುತಿಯೆ 2 ಸುಜನ ಮುಮುಕ್ಷುಜನಪ್ರಿಯ ಸುಕ್ಷೇಮದ ಲಕ್ಷ್ಮೀನಾರಾಯಣ ಲಕ್ಷಿತಾತ್ಮನೆ ವಿ- ಪಕ್ಷರಕ್ಷೋಗಣಶಿಕ್ಷ ಸೂಕ್ಷ್ಮ ಮತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಮೋ ನಮೋ ಕಮಲಾಲಯೆ ಸರ್ವೋ ತ್ತುಮ ನಾರಾಯಣನಂಕದ್ವಯ ಸಮುಪಸ್ಥಿತೆ ಸುಂದರ ಮದಗಜ ಗಮನೆ ಗುಣಪೂರ್ಣೆ ಶೋಭಾನೆ ಪ ಕಂಗಳ ಕುಡಿನೋಟದಿ ಕಂಜಜ ಗಂಗಾಧರ ಸುರಮುಖ ಸುಜನರ ಇಂಗಿತ ಫಲ ಪೂರೈಸಿಕೊಡುವ ಮಂಗಳ ಸುಚರಿತ್ರೆ ಭೃಂಗಾಳಿಗಳಂದದಿ ಸೊಗಯಿಪ ಮುಂಗುರುಳಿಂದೊಪ್ಪುವ ನಿಜಪತಿ ಸಂಗಡ ಬಾ ಹಸಿಯ ಜಗಲೀಗೆ 1 ಜಲಜಾಕ್ಷನ ವಿಮಲಾಂಗದಿ ಪ್ರತಿ ಫಲಿಸಿದ ರೂಪಗಳನೆ ನೋಡುತ ಪುಳಕೋತ್ಸವದಿಂದಲಿ ಪಾಡುತ ಹೊಲಬು ಗಾಣದಲೆ ತಲೆದೂಗುತ ಮಿಗೆ ಸಂತೋಷದಿ ಗಳರವದಿಂ ಪಾಡುತ ಶ್ರೀ ಭೂಲಲನೆ ಬಾ ಹಸಿಯ ಜಗಲೀಗೆ 2 ಪ್ರತಿಫಲಿಸಿಹ ರೂಪಗಳೆನ್ನವು ಕತಿಪಯರೂಪಗಳೆನಗಿಂದಲಿ ಅತಿಶಯವೆ ತೋರುತಲಿಪ್ಪವು ಪ್ರತಿ ಪ್ರತಿಕ್ಷಣದಿ ಶ್ರುತಿ ಪ್ರತೀಕನು ದಯದಿಂದೆನ ಗ್ಹಿತದಿಂದಲಿ ತೋರಿದನೆನುತಲಿ ನತಿಸುತ ನಗುತಿಪ್ಪ ಲಕ್ಷ್ಮೀ ಹಸಿಗೇಳು 3 ಆ ಬ್ರಹ್ಮಾಂಡಗಳೊಳ ಹೊರ ಗುಪಮರು ನಿನಗಿಲ್ಲವಾಗಲು ಅಪರಾಜಿತನಮಲ ಸುರೂಪ ಗಳಪರೋಕ್ಷಣದಿ ಕಾಂಬ ಚಪಲಾಂಬಕ ಕೃಪಣರ ಸಲಹಲು ಸ್ವಪತಿಯ ಶಿಪಿವರನಂಸಗೆ ಸುಫಲದೆ ಬಾಹಸಿಯ ಜಗುಲೀಗೆ 4 ವೀತಭಯನ ವಕ್ಷಸ್ಥಳವೆ ಪು ರಾತನ ಮನೆಯೆನಿಪುದು ಅವಿನಾ ಭುತರು ನೀವಿರ್ವರು ಅಮೃತಾ ಜಾತರು ಎಂದೆಂದೂ ಭೌತಿಕ ಮಂದಿರದೊಳು ನೆಲೆಸಿ ಪು ನೀತರ ಮಾಳ್ಪುದೆಮ್ಮ ಜಗ ನ್ನಾಥ ವಿಠಲನರ್ಧಾಂಗಿ ಜಗ ನ್ಮಾತೆ ವಿಖ್ಯಾತೆ ಬಾಹಸಿಯ ಜಗುಲೀಗೆ 5
--------------
ಜಗನ್ನಾಥದಾಸರು
ನಮೋ ನಮೋ ಕಾಲಭೈರವ ಹರಿಯ ಚರಣ- ಸಮೀಪದೊಳಗಿದ್ದು ಮೆರೆವ ಪ. ಸಮೀಚೀನಜ್ಞಾನಭಕ್ತ- ಸಮೂಹವ ಕಾವ ಲಕ್ಷ್ಮೀ- ರಮಣನ ಕಾರ್ಯಮಂತ್ರಿ- ಯು ಮಾಧವನ ಸಮಾನಬಲ ಅ.ಪ. ಬೆಟ್ಟದೊಡೆಯ ಶ್ರೀನಿವಾಸನ ಪಾದಕಮಲ- ಮುಟ್ಟಿ ಭಜಿಪ ವೈರಿಮರ್ದನ ಸೃಷ್ಟಿ ಮೂರರಲ್ಲಿ ಕೀರ್ತಿ- ಪಟ್ಟ ದಿಟ್ಟ ಧೀರ ಪರಮ ನಿಷ್ಠ ಪುಷ್ಪ ತುಷ್ಟಿಪ್ರದ ಬ- ಲಿಷ್ಠ ಶ್ರೇಷ್ಠ ಭೂತಪತಿಯೆ 1 ಶ್ರೀನಿವಾಸನಾಜ್ಞೆ ಮೀರದೆ ನಡೆಸುವದೆ ಪ್ರ- ಧಾನ ಕಾರ್ಯ ನಿನ್ನದೆಂಬುದೆ ತಾನು ಕಿಂಚಿದರಿತು ಸನ್ನಿ- ಧಾನವನ್ನೋಲೈಸಿ ಬಂದೆ ದೀನಬಂಧು ಸುಗುಣಸಿಂಧು ಮಾನತ್ರಾಣವಿತ್ತು ಸಲಹೊ 2 ಅಂತರಂಗದಲ್ಲಿ ಪ್ರಾರ್ಥನೆ-ಮಾಡಿದರೆ ಸ್ವಂತ ಬಂದು ಮಾಡು ರಕ್ಷಣೆ ಅಂತ್ಯಕಾಲದಲ್ಲಿ ಹರಿಯ ಚಿಂತನೆಗೆ ವಿಘ್ನ ಬಾರ- ದಂತೆ ಕಾವ ಮಹಾ ತೇಜೋ- ಸೂರಿ 3 ಕಾಲಕಾಲದಲ್ಲಿ ಭಕ್ತರ ಮನೋಭೀಷ್ಟ ಪಾಲಿಸುವ ಚಂದ್ರಶೇಖರ ಖೂಳ ಜನರ ಗರ್ವಮುರಿವ ಶೂಲಪಾಣಿ ಸುಗುಣಶ್ರೇಣಿ ಮೂಲಪತಿಯ ಪಾದಪದ್ಮ ಮೂಲದೊಳಗೆ ನಲಿವ ಚೆಲುವ 4 ಭೂರಿ ಮಹಿಮೆಯ ಭಕ್ತರಿಂಗಾ- ಧಾರವಾಗಿ ರಾಜಿಸಿರುವೆಯ ಧೀರ ಲಕ್ಷ್ಮೀನಾರಾಯಣನ ಸೇರಿದಾನತರ್ಗೆ ಮಂ- ದಾರ ಮಹೋದಾರ ಗಂ- ಭೀರ ಧೀರ ಚಾರುಚರಿತ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಮೋ ನಮೋ ಗುರುರಾಜ ಪ ಭಾಸುರ ಪಂಪಾ ತುಂಗಾ ತೀರವಾಸ | ಪಾಲಿಸೊ ತವದಾಸ ಅ.ಪ. ರತಿಪತಿ ಜನಕನ ವರ ಶಯ್ಯಾಂಶದಲಿ | ವಾಯ್ವಾವೇಶದಲಿ ಜನಿಸುತ ಮೋದದಲಿ ವಿತತನು ವಿಷ್ಣುವು ವಿಶ್ವದೊಳೆನುತಲಿ | ಅತಿಶಯ ಭಕ್ತಿಯಲಿ ಪಿತಗೆ ತೋರ್ದ ಪ್ರಹ್ಲಾದನೆ ಹಿತದಲ್ಲಿ | ಅವತರಿಸಿದೆ ಇಲ್ಲಿ 1 ಧರೆಯೊಳಗೆ ಪ್ರಖ್ಯಾತ ಪರಮಾತ್ಮನ ಪದಶರಣ ವ್ಯಾಸಯೋಗಿ | ಯೆನಿಸುತಲಿ ವಿರಾಗಿ ತರತಮ ಪಂಚಕ ಪ್ರಭೇದವ ಸ್ಥಾಪಿಸಲು | ದುರುಳರ ಖಂಡ್ರಿಸಲು ಪರಿಪರಿ ಶಾಸ್ತ್ರವ ಶ್ರೀ ಪಾದರಾಯರಲಿ | ಓದಿದ್ಯೊ ಭಕ್ತಿಯಲಿ 2 ಪುರಂದರ ಕನಕರಿಗೆ ಆದರದಿಂದಲಿ ಬೋಧಿಸಿ ತತ್ವವನು | ಮಾಡಿ ಪುನೀತರನು ವೇದಶಾಸ್ತ್ರ ತರ್ಕಾದಿ ಗ್ರಂಥಗಳಲಿ | ಕೋವಿದರರಸುತಲಿ ನೀ ದಯದಿಂದಲಿ ಸೇರಿಸಿ ಪರಿಷತ್ತು | ಭಾವಿಸಿ ವಿದ್ವತ್ತು 3 ಅರ್ಥಿಕಲ್ಪಿತ ವರ ಕಲ್ಪವೃಕ್ಷವಾಗಿ | ನಿತ್ಯದಿ ಮಹಯೋಗಿ ಪ್ರಥ್ಯರ್ಥಿ ಮದಕರಿ ಪಂಚವಕ್ತ್ರನಾಗಿ | ಪ್ರತ್ಯಕ್ಷದಿ ತಾಗಿ ಹೊರ ಚೆಲ್ಲುತೆ ನೀನು ಸ್ತುತ್ಯ ಕೃಷ್ಣ ಭೂಮೀಂದ್ರನ ಕುಹುಯೋಗ | ಪರಿಹರಿಸಿದೆ ಬೇಗ 4 ವ್ಯಾಸಾಂಬುಧಿಯನು ಕಟ್ಟಿ ಖ್ಯಾತನಾಗಿ | ದಾಸರ ಚನ್ನಾಗಿ ಪೋಷಿಸುತಲಿ ಶ್ರೀ ಶೇಷಗಿರಿಗೆ ಬಂದು | ಶ್ರೀಶನಲ್ಲಿ ನಿಂದು ಪಡುತ ಹನ್ನೆರಡು ವರುಷ ದೇಶ ದೇಶದಲಿ ಆಶುಗಿಯನು ನಿಲಿಸಿ | ಶಿಷ್ಯರಿಗನುಗ್ರಹಿಸಿ 5 ಕಾಶಿ ಗಧಾಧರ ವಾಜಪೇಯಿ ಲಿಂಗ | ಮಿಶ್ರರು ನರಸಿಂಗ ವಾಸುದೇವ ಪುರಿ ಈಶ್ವರ ಪಂಡಿತರ | ವಾದದಿ ಬಿಗಿವರ ಜೈಸಿ ತಂದ ಜಯ ಪತ್ರಗಳನು ಮುದದಿ | ಶ್ರೀನಿಧಿಗರ್ಪಿಸಿದಿ ಶ್ರೀಸತ್ಯಾ ರುಕ್ಮಿಣಿ ವೇಣುಗೋಪಾಲರನು | ಸ್ತುತಿಸಿ ಪಡೆದೆ ನೀನು 6 ನ್ಯಾಯಾಮೃತ ಬಿಚ್ಚಿ ಚಂದ್ರಿಕೆಯನು ತಂದೆ ಆಯದಿ ಬುಧಮನ ತಾಂಡವಾಡುವಂತೆ | ತರ್ಕತಾಂಡವವಿತ್ತೆ ಕಾಯಜಪಿತ ಶ್ರೀಕಾಂತನ ಸೇವಿಸುತ | ಸುಖಿಸುವೆ ನೀ ಸತತ 7
--------------
ಲಕ್ಷ್ಮೀನಾರಯಣರಾಯರು
ನಮೋ ನಮೋ ನಂದಕುಮಾರ ನಿನ- ಗೆದುರ್ಯಾರೊ ಯದುಕುಲ ವೀರ ಭಜಿ- ಸುವ ಭಕ್ತ ಜನರುದ್ಧಾರ ಮಾಡೊ ಪರಮ ದಯಾಳು ನೀ ಸರ್ವ ಸ್ವತಂತ್ರ ನಿನ್ನ ಧ್ವಜ ವಜ್ರಾಂಕುಶ ರೇಖಾ ವೆಂಕಟಾದ್ರೀಶ ನಮೋ ನಮೋ ಪ ಶ್ರೀಶ ಜಗದ್ಭರಿತ ನೀನು ಒಂದು- ಕಾಸಿಗ್ವಿಷಯಗಳಲ್ಲ ನಾನು ನಿನ್ನ ದ(ರ್ಶ)ನ ಹಾರೈಸುವೆನು ಪರಮ ನುಗ್ರ(ಹ)ದಿ ಪಾಲಿಸೋ ನೀನು ಹರೇ ದೋಷರಹಿತ ಎನ್ನ ದೋಷನಾಶನ ಮಾಡಿ ಶೇಷಶಯನ ಶ್ರೀನಿವಾಸ ನೀ ದಯಮಾಡೊ1 ಬಾಯಿ ಬೀಗವನ್ಹಾಕಿ ಚರಿಯೆ ಗಂ- ಡಾರತಿ(?) ಶಿರದ ಮೇಲ್ಹೊರೆಯೆ ನಿನ್ನ ನಾಮವ ಕೊಂಡಾಡಲರಿಯೆ ಪಾದ- ಚಾರ್ಯಾಗಿ ಬರುವುದೀಪರಿಯೆ ತಿಳಿದು ಮಾನ್ಯದೊಕ್ಕಲು ಎಂದು ಬಹುಮಾನದಿಂದಿಟ್ಟು ಮಾಧವ ಕರುಣದಿ 2 ಬಾಡಿಗಿದ್ದರಾಯನ್ಹಿಡಿಯ (?) ನಿನ್ನ ಅನುಮತಿಲ್ಲದೆ ದಾರಿ ನಡೆಯ ಬ್ಯಾಡ ಬಿಡು ಲೋಭಿತನವ ಎ- ನ್ನೊಡೆಯ ಬಿಡದೆ ಕಾಡುತ ಕಾಸು ಕವಡೆ ಕಡ್ಡಿ ಕಣಜಕ್ಕೆ ಈ ಪರಿ ಗಳಿಕೆ ದೇಶದ ಮೇಲೆ ಕಾಣೆನು 3 ಮುಡಿಪು ಬೇಡುವುದ್ಹೇಳೊ ಎಷ್ಟು ನಿನ್ನ ಬಡಿತ ತಡೆಯಲಾರೆ ಪೆಟ್ಟು ಮಡಿ ಮೈಲಿಗೆಂದರೆ ಅತಿಸಿಟ್ಟು ನಾ ಬಿಚ್ಚಾಡುವೆನೊ ಬೀಡ ಬಿಟ್ಟು ಪ ್ರ- ಸಾದ ತೀರ್ಥ ಬೇಕಾದರೆ ಕ್ರಯಕಟ್ಟಿ ಗಂ- ಟ್ಯಾರಿಗೆ ಮಾಡುವಿ ಹೇಳೆನಗೊಂದಿಷ್ಟು 4 ಸತಿಗೆ ಮಾಡುವೆ ಲಕ್ಷ್ಮೀಪತಿಯೆ ನಿನ ಸುತ ಸತ್ಯಲೋಕದಧಿಪತಿಯೆ ಅತಿ ಹಿತ ಭಕ್ತರಿಗೆ ಭಿಕ್ಷೆಗತಿಯೇ ನೀಡಲು ಧನವೊಲ್ಲದೆ ಬೇಡುವರೊ ಸದ್ಗತಿಯ ನಿನ- ಗತಿಯಾಸೆ ಘನತ್ಯಲ್ಲ ಗತಿಪ್ರದಾಯಕ ಕೇಳೊ ಪೃಥುವೀಶ ನಿನ್ನದಲ್ಲವೆ ಸಕಲೈಶ್ವರ್ಯ 5 ಕನಕಗಿರಿದೊರೆಯೆಂಬೊದೆಲ್ಲೊ ಬಂದ ಜನಕೆ ಅನ್ನವ ನೀಡಲೊಲ್ಲ್ಯೊ ಜಗ- ಜನಕ ನಿನ್ನನು ಕಾಣಲಿಲ್ಲೋ ನಾನಿ- ರ್ಧನಿಕನೆಂಬುವುದು ನೀ ಬಲ್ಲ್ಯೊ ಎನ- ಗನುಕೂಲ ಧೈರ್ಯವ ಕೊಟ್ಟು ನಿನ್ನ ದರುಶನ ಸನಕಾದಿಗಳೊಡೆಯ ನಿನ್ನ ಮನಕೆ ಬಂದರೆ ನೀಡೊ6 ಶಂಕರ ಸುರರಿಂದ್ವಂದಿತನೊ ನಾ ಕಿಂಕರ ನರರಿಂದ ನಿಂದಿತನೊ ನೀ ಮಂಕುಜನರ ಪಾಪ ಪರಿಹಾರಕನೊ ಹರೇ ಶಂಖ ಚಕ್ರಾಂಕಿತ ಭೀಮೇಶಕೃಷ್ಣನ ನಾಮ ಶಂಕೆಯಿಲ್ಲದೆ ಕೊಟ್ಟು ವೆಂಕಟ ದಯಮಾಡೊ 7
--------------
ಹರಪನಹಳ್ಳಿಭೀಮವ್ವ
ನಮೋ ನಮೋ ನರಹರಿಪ್ರಿಯಾನರಸಿಂಹಾರ್ಯ ಪಗಲಗಲಿ ಶ್ರೀ ನರಸಿಂಹಾರ್ಯ ಕರುಣದಿಪೊರೆಸದ್ಗುರುವರ್ಯಾ ಶರಣು ಬಂದೆನು ತಂದೆಮಾಡೊ ದಯಾ ತಂದೆ ಮಾಡೊ ದಯಾಪುನರ್ಜನ್ಮ'ತ್ತ ಮಹಾರಾಯಾ 1ನಿಮ್ಮ ಚರಿತ್ರವೆನಗೆ ಸ್ಪೂರ್ತಿನಿಮ್ಮ ಸ್ಮರಣೆ ಜ್ಞಾನದ ಜ್ಯೋತಿನಿಮ್ಮ ಅನುಗ್ರಹವೆ ಕೀರ್ತಿನಿಮ್ಮ ಪಾದವೇ ಎನಗೆ ಗತಿ 2ನಿ'್ಮುಂದಲೇ ಗಾಲವ ಕ್ಷೇತ್ರನಿಮ್ಮ ಮನೆಯು ಸದಾ ಅನ್ನಛತ್ರನಿಮ್ಮ ಆಶ್ರಯವೇ ಜ್ಞಾನ ಸತ್ರನಿಮ್ಮ ಸಂಚಾರವೇ ಮಹಾಯಾತ್ರಾ 3ಅಷ್ಟೋತ್ರ ಶತಕುಂಭ ಸ್ನಾನಾ ನಿತ್ಯ ಅಷ್ಟೋತ್ರರ ಶತ ಕುಂಭಸ್ನಾನಾಕೃಷ್ಣಾ ಭಾಗೀರಥಿ ನನ್ನಿಧಾನಾ ಸೀತಾರಾಮ ಪ್ರತಿಮಾರ್ಚನಾನಿತ್ಯ ರಾತ್ರಿ ಸುಭೋಜನಾ 4ಮುದ್ಗಲಾರ್ಯ ಬಾಬಾರ್ಯನಮೋ ಸದ್ಗುರು ನರಸಿಂಹಾರ್ಯ ನಮೋಸದ್ಭಕ್ತಪ್ರಿಯ ಭೂಪತಿ'ಠ್ಠಲ ಗಲಗಲಿ ನರಹರಿತೊರ'ಯ ನರಹರಿ ಶೂರ್ಪಾಲಿಯ ನರಹರಿ ನಮೋ ನಮೋ 5
--------------
ಭೂಪತಿ ವಿಠಲರು
ನಮೋ ನಮೋ ನಾರಾಯಣ ಸನ್ನುತ ಸುಗುಣ ಗುಣಾರ್ಣವ ಸುಮನಪತಿ ಶ್ರೀ ಭೂದುರ್ಗಾರಮಣ ಮಾಂಪಾಹಿ ಪ ಲೋಕೇಶ ವಿಧಾತಜನಕ ರ ತ್ನಾಕರಮಥನ ಜಗದಾಘಪಹ ಶ್ರೀಕಂಠ ಪಿತಾಮಹ ಮದನನೇಕ ಸುಲಾವಣ್ಯ ಆಕಾಶ ತರಂಗಿಣಿ ಪಿತ ಕರುಣಾಕರ ಕೌಮೋದಕಿಧರ ಧರಣಿ ಕುವರಾಂತಕ ಕರುಣದಿ ಚಿತ್ತೈಸು ನೀ ಹಸಿಗೆ ಶೋಭಾನೆ 1 ಅರದೂರಾಬ್ಜ ಭವಾಂಡೋದರ ಶರಣಾಗತ ಸವಿ ಪಂಜರ ಅಂ ಬರ ಭೂ ಪಾತಾಳದಿ ವ್ಯಾಪ್ತಾ ಜರಮೃತ್ಯು ವಿದೂರ ಕರಿವರ ಪ್ರಭಂಜನ ಪೀತಾಂ ಬರಧರ ಖಳಕುಲವನ ವೈಶ್ವಾ ನರ ನಾರದನುತ ಮಹಿಮನೆ ಚಿತ್ತೈಸು [ಹಸೆಗೆ] 2 ಸತ್ವರಜಸ್ತಮ ಜೀವರ ತತ್ ಸಾಧನವರಿತವರಗತಿ ಗ ಳಿತ್ತು ಪೊರೆವ ವಿಬುಧವರದ ವರಸತ್ಯವತಿ ಸೂನು ಉತ್ತಮ ಪುರುಷನೆ ಚೇತನ ಜಡದ ತ್ಯಂತವಿಭಿನ್ನ ವಿಜಯ ಸಖ ಸತ್ಯಸುಕಾಮ ಕಮಲನಯನನೆÉ ಚಿತ್ತೈಸೊ [ಹಸೆಗೆ]3 ವಾಸವತನುಸಂಭವ ಸಾರಥಿ ವೀಶುದ್ಭುಜ ವಿಧೃತ ಸುದರ್ಶನ ದಶಾರ್ಹ ದಿವಕರನಿಭ ಸಂಕಾಶÀ ಸುಭದ್ರಾತ್ಮಾ ವಾಸುಕಿ ಪರ್ಯಂಕಶಯನ ಹರಿ ವ್ಯಾಸಕಪಿಲ ದತ್ತಾತ್ರಯ ಮಹಿದಾಸ ವೃಷಭರೂಪ ರಮೆಯರಸ ಚಿತ್ತೈಸು [ಹಸೆಗೆ]4 ಪಾಂಡವ ಸಖ ಪತಿತ ಸುಪಾವನ ಚಂಡಾಂಶು ನಿಶಾಕರ ಪಾವಕ ಮಂಡಲದೊಳಗತಿ ಬೆಳಗುವ ಕೋದಂಡ ಧೃತ ಕರಾಬ್ಜ ಕುಂಡಲ ಮಂಡಿತ ಗಂಡಸ್ಥಳ ಖಂಡಮಹಿಮ ಖೇಚರ ಪುರಹರ ಗಂಡುಗಲಿ ಜಗನ್ನಾಥ ವಿಠಲ ಚಿತ್ತೈಸೋ [ಹಸೆಗೆ]5
--------------
ಜಗನ್ನಾಥದಾಸರು
ನಮೋ ನಮೋ ನಾರಾಯಣ ನಮೋ ಶ್ರುತಿ ನಾರಾಯಣ ನಮೋ ಬಾದರಾಯಣ ನರನ ಪ್ರಾಣ ಪ ಶಿವನ ಮೋದದಲಿ ಪಡೆದೆ ಶಿವರೂಪದಲಿ ನಿಂದೆ ಶಿವನೊಳಗೆ ಏರಿದೆ ಶಿವನಿಗೊಲಿದೆ ಶಿವಗೆ ನೀ ಮಗನಾದೆ ಶಿವ ತಾತನೆನೆಸಿದೆ ಶಿವನ ಮಗನಾ ಪಡೆದೆ ಶಿವನ ಕಾಯ್ದೆ1 ಶಿವಗೆ ಸಹಾಯಕನಾದೆ ಶಿವನ ಕಂಗಡಿಸಿದೆ ಶಿವನ ಧನುವನು ಮುರಿದೆ ಶಿವನೊಲಿಸಿದೆ ಶಿವನ ಜಡ ಮಾಡಿದೆ ಶಿವನ ಒಡನೆ ಬಂದೆ ಶಿವಮುನಿಗೆ ಉಣಿಸಿದೇ ಕೇಶವನೆನಿಸಿದೇ 2 ಶಿವನ ಜಡೆಯೊಳಗಿದ್ದ ಶಿವಗಂಗೆಯ ಪೆತ್ತೆ ಶಿವನ ಕೂಡಲಿ ಕಾದಿದವನ ಭಾವ ಶಿವ ಭಕ್ತನ್ನ ನಿನ್ನವನಿಂದ ಕೊಲ್ಲಿಸಿದೆ ಶಿವನ ಶೈಲವನೆತ್ತಿದವನ ವೈರಿ3 ಶಿವ ನುಂಗಿದದ ನುಂಗಿದವನ ಒಡನಾಡುವ ಶಿವ ಪರಾಶಿವ ನಿನ್ನ ಶಿವ ಬಲ್ಲನೇ ಯವೆ ಇಡುವನಿತರೊಳಗೆ ಧವಳ ಹಾಸಾ4 ಶಿವನ ಮೇಲಿದ್ದ ಸಹಭವೆ ರಮಣ ಸರ್ವದಾ ಶಿವನೊಳಗಿಳಿದ ಶಿಷ್ಯನಿವ ಹರಾತೀ ತಲ್ಪ ಶಿವ ಸಮಾನಿಕ ರೂಢ ಶಿವನ ಮನೆ ತೊಲಗಿಸುವ ಶಿವ ಬಾಂಧವಾ 5 ಶಿವನ ಧೊರಿಯೆ ಜ್ಞಾನ ಶಿವ ಹಚ್ಚುವದೆ ಕೊಡು ಶಿವಮಣಿ ಎನಿಸುವ ಸ್ತವ ಪ್ರಿಯನೇ ವಾಹನ ವೈರ ಶಿರವ ತರಿಸಿದೆ ದೇವ ಶಿವ ಪ್ರತಿಷ್ಠಿಸಿದೆ ಶಿವಗೆ ಕಾಣಿಸದಿಪ್ಪೆ6 ಶಿವನ ಸೋಲಿಸಿದವನ ಜವಗೆಡಿಸಿದೆ ಶಿವನು ಕುದರಿಯ ಹೆರವ ಅವನು ಕಾಯಿದ ಗೋವ ಶಿವನವತಾರ ಶಸ್ತ್ರವನು ಹಳಿದೆ 7 ಶಿವನಧರ್Àನಾಗಿ ದಾನವನು ಕೊಂದ ಮಹಿಮಾ ಶಿವಋಷಿ ಪೇಳಿದ ಯುವತಿ ರಮಣಾ ಶಿವನ ವೀರ್ಯವ ಧರಿಸಿದವನ ಮುಖದಲಿ ಉಂಬ ಅವರ ಬೆಂಬಲವೇ ಯಾದವಕುಲೇಶಾ 8 ಶಿವಗೆ ತ್ವಂಚ ಬಾಹುಯೆಂದು ಪೇಳಿ ಮೋಹ ದಿವಿಚಾರಿಗಳ ತಮಸಿಗೆ ಹಾಕುವೆ ಶಿವಮೂರುತಿ ನಮ್ಮ ವಿಜಯವಿಠ್ಠಲರೇಯ ಶಿವನಾಳು ಮಾಡಿ ಆಳುವ ದೈವವೇ9
--------------
ವಿಜಯದಾಸ
ನಮೋ ನಮೋ ನಾರಾಯಣನೇ ಓಂ ನಮೋ ಚನ್ನಕೇಶವನೆ ಪ ಅಚ್ಯುತ ಪಾದದಿ ಸೇರಿಸೊ ಅನಂತ ಅ.ಪ ನಮೋ ನಮೋ ವೆಂಕಟರಮಣನೆ ಸಂಕಟಹರಿಸೋ ಶ್ರೀವರನೆ 1 ನಮೋ ನಮೋ ವರದರಾಜನೆ ವರವ ನೀಡೋ ಪುರುಷೋತ್ತಮನೆ 2 ನಮೋ ನಮೋ ಶ್ರೀರಂಗನಾಥನೆ ಸುರಕ್ಷೆಯ ಕೊಡೊ ಭಕ್ತವತ್ಸಲನೆ 3 ನಮೋ ನಮೋ ಸಂಪತ್ಕುಮಾರನೆ ಸಂಪತ್ತನು ಹರಿಸೋ ಶ್ರೀಹರಿಯೆ 4 ನಮೋ ನಮೋ ಮುದಿಗೆರೆ ರಂಗನೆ ಮುದದಿ ಕಾಪಾಡೋ ಮಾಧವನೆ 5 ನಮೋ ನಮೋ ಯದುಗಿರಿ ಚಲುವನೆ ಸದಯದಿ ಸಲಹೋ ದಾಮೋದರನೆ 6 ನಮೋ ನಮೋ ಜಾಜಿಪುರೀಶನೆ ನೀ ಜೋಪಾನಮಾಡೆನ್ನ ಪರಮಪಾವನನೆ 7
--------------
ನಾರಾಯಣಶರ್ಮರು
ನಮೋ ನಮೋ ಶ್ರೀರಂಗ ಶ್ರೀನಿವಾಸ ವರದಗೆ ನಮೋ ನರಹರಿ ನಾರಾಯಣ ಶ್ರೀಪರಮಪುರುಷಗೆ ಪ ನಂದನಕಂದ ಮುಕುಂದ ಇಂದಿರೇಶಗೆ ಮಂದರೋದ್ಧಾರ ಹರಿಸುಂದರಾಂಗಗೆ ಅ.ಪ ಕಂದನ ನುಡಿಯ ಕೇಳಿ ತಾಯಿ ತಂದೆಗಳು ಆ ನಂದ ಪಡುವ ತೆರದಿ ಮಂದಮತಿ ಯಿಂದ ಪೇಳಿದ ಹೊಂದಿಕೆಯಿಲ್ಲದ ನುಡಿಯ ಕುಂದ ಕ್ಷಮಿಸಿ ನಿಮ್ಮ ಪಾದದ್ವಂದ್ವದಲಿರೆಸೆನ್ನ 2 ವಾಸುದೇವ ನಿಮ್ಮ ಪಾದದಾಶೆಯಿಂದಿದೆ ಆತ್ಮ ಇ ನ್ನೇಸು ದಿನ ಈ ಹೇಸಿಕೆಭವದಿ ಘಾಸಿಪಡುವುದೈ ವಾಸುಕಿಶಯನ ಶ್ರೀನಿ ವಾಸ ರಂಗ ಶೀಘ್ರದಿಂಮುಕ್ತಿಯ ಪಾಲಿಸೋ 3
--------------
ಯದುಗಿರಿಯಮ್ಮ
ನಮೋ ನಮೋ ಹನುಮ | ನಮೋ ನಮೋ ಭೀಮ| ನಮೋ ನಮೋ ಮಧ್ವರಾಯ ಸುಪ್ರಿಯ || ಅಂಬುಧಿಯ ಪೋರ್ದು | ನಿಜ ಡಿಂಭದೊಳ್ ಬೆರೆದು | ಚೆರ್ಬಿಂಬಳಂ ತರಿದು | ದಶಬಿಂಬನಾಪುರ ಪೊಕ್ಕು | ಗಂಟುಗಳ ದಾಟಿ | ಮೂರ್ಜಂಬಳಂತೋರಿ ಎಲ್ಲಂಬಳಂ ನಳಿದು ಅಂಬುಜಾಕ್ಷೆಗೆ ಮುದ್ರೆಯಿತ್ತ ಹನುಮಂತ 1 ಸತಿಯೆ ಹಂಬತ್ತಿದ ನತಿಗಳೇದು ಕೃತಕೋಪ ವೃತನಾಗಿ ಮಶತಂತುರದೆ ಹತಿಯೆ ಮೋಹತಿಯೆ | ಸಂಪತಿಯ ತೊಲಗಿ ಅಗತರಾಗಿಗತಿಯಲಿರುತಿಹ | ಮತಿಹೀನ ಬಕನಕೊಂದ ಭೀಮನಿಸ್ಸೀಮ 2 ಮಧ್ಯಗೇಹನುದರದಿಂದುದ್ಭವಿಸಿ ಜಗದ್ಭಲ ಭರಿತರಾಗಿ ಶಾಸ್ತ್ರ ಶುದ್ಧವನೆ ಕೈ ಕೊಂಡು ಮಧ್ವ ಮತದಲ್ಲಿ ಬಲು ಶುದ್ಧನಾಗಿ ಅದ್ವೈತಗಳ ನಳಿದು ಸದ್ವೈತ ಮಾರ್ಗದೊಳ್ | ಪೂರ್ಣಗುಣತೇಜ3
--------------
ಹೆನ್ನೆರಂಗದಾಸರು
ನಮ್ಮ ಗಿರಿಯ ತಿಮ್ಮ ಪರಬೊಮ್ಮನಮ್ಮ ಒಮ್ಮೆ ಕಾಯೋದ(ತ?)ಮ್ಮ ಪ. ಭಂಗ ಗುಣ ತ-ರಂಗ ಜಗದೊಳಗೆ ನೀನೆ ಸರ್ವೋತ್ತುಂಗ 1 ನೋಡೋ ಎನ್ನಲ್ಲಿ ಕೃಪೆಮಾಡೋ ಕೈಯನೀಡೋ ಎನ್ನ ಪೊರೆವನೆಂಬ ಮಾತನಾಡೊ 2 ಏಳು ಎನ್ನ ಮಾತ ಕೇಳು ಕಡು ಕೃ-ಪಾಳು ನಿನ್ನ ಹದನ ಎನಗೊಲಿದು ಪೇಳು 3 ಎಂದ ಮಾತಿಗೆ ಮುಂದೆ ನಿಂದ ನೀ ಕರುಣಿ ಗೋ-ವಿಂದ ಎಂಬುದಿನ್ನು ನಿನಗೆ ಚೆಂದ 4 ಪ್ರಿಯ ಎನ್ನ ಕಾಯೊ ಜೀಯ ಮುಕ್ತ್ಯು-ಪಾಯ ಹಯವದನ ಶೇಷಗಿರಿರಾಯ5
--------------
ವಾದಿರಾಜ
ನಮ್ಮ ಗುರುರಾಯನೇ | ಸ್ಮರಿಸಿದಾಗಲಿಹನೇ ಪ ಮನುಜನಾಗಿ ಬಂದನೇ | ಮತ್ರ್ಯದೊಳು ನಿಂದನೇ | ಜನನ ಮರಣ ಸಂದನೇ | ಜರಿಸಿ ಕೊಟ್ಟಾ ನಂದನೇ1 ಚಿತ್ತದ ಮೈಲಿಗೆ ಕಳಿಸಿದನೇ | ಚಿದ್ಘನಾಮೃತ ಗರದನೇ | ಸತ್ಯ ವಾಕ್ಯಾ ಬಿತ್ತಿದನೇ ಸತ್ವದ ಹೊಲ ಬೆಳಸಿದನೇ2 ಮಹಿಪತಿ ನಂದನ ಪ್ರಾಣನೇ | ಮಹಾಪ್ರಜ್ಞಾಪೂರ್ಣನೇ | ಇಹಪರ ಕೊಡುವ ತ್ರಾಣನೇ | ಮಹಿಮೆಗೆ ಎಣೆಗಾಣೆನೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು