ಒಟ್ಟು 37131 ಕಡೆಗಳಲ್ಲಿ , 139 ದಾಸರು , 11109 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೊಲ್ಲು ಕೇಳುತ ಈಗ ಮೆಲ್ಲನೆ ಎನ್ನ ಮನದಲ್ಲಿ ನಿಲ್ಲೊ ಪ. ಪುಲ್ಲಲೋಚನ ದೇವ ಎಲ್ಲಿಗು ಪೋಗದೆ ಉಲ್ಲಾಸಪಡಿಸುತ ನಿಲ್ಲೊ ಹೃದಯದಲಿ ಅ.ಪ. ಸ್ಥಾವರ ಜಂಗಮ ವ್ಯಾಪ್ತನಾಗಿಹ ದೇವ ದೇವ ಎನ್ನ ಮನದಿ ನಿಲುವುದು ಘನವೆ ಶ್ರೀವರ ನೀನೀಗ ಕಾವನೆಂದರಿತಿರೆ ಸಾವಕಾಶವಿದೇಕೆ ಭಾವಜನಯ್ಯನೆ 1 ಇಷ್ಟು ದಿನವು ನಿನ್ನ ಮುಟ್ಟಿ ಪೂಜಿಸಲಿಲ್ಲ ಸಿಟ್ಟೇನೊ ನಿನಗಿದರ ಗುಟ್ಟು ತಿಳಿಯದೆ ಬಿಂಕ ಕೊಟ್ಟು ಅಭಯ ಸಲಹೊ ಇಷ್ಟ ಸ್ಥಾನದಿ ನಿನ್ನ ಮುಟ್ಟಿ ಪೂಜಿಸಿರುವೆ 2 ಸರಿಯಲ್ಲ ನಿನಗಿದು ಕರೆದರೆ ಭಕ್ತರು ತ್ವರಿತದಿಂದಲಿ ಬರುವ ಬಿರುದಿಲ್ಲೆ ನನಗೆ ಸರಿ ಬಂದರೆ ಬಾರೊ ಬಾರದಿದ್ದರೆ ಬಿಡೊ ಅರಿತು ನಿನ್ನಯ ನಾಮ ಅರುಹುವ ಮತಿ ನೀಡೊ 3 ಕಾರ್ಯಕಾರಣಕರ್ತ ಪ್ರೇರ್ಯಪ್ರೇರಕರೂಪ ಉರ್ವಿಗೊಡೆಯ ಸರ್ವ ನಿರ್ವಾಹಕ ಗರ್ವರಹಿತಳ ಮಾಡಿ ಸರ್ವದಾ ಪೊರೆದರೆ ಸರ್ವಾಧಿಪತಿಯೆಂದು ಸಾರ್ವೆನೊ ನಾನಿಂದು 4 ಸೃಷ್ಟಿ ಸ್ಥಿತಿ ಲಯಗಳಿಗೆ ಕರ್ತನೊಬ್ಬನೆ ನೀನು ಶ್ರೇಷ್ಠನಾಗಿರುವೆಯಾ ಸರ್ವರಿಗೆ ಬಿಟ್ಟಿರುವೆಯೊ ಜಗದ ಅಷ್ಟೂ ವಸ್ತುಗಳಿಂದ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲದೇವ 5
--------------
ಅಂಬಾಬಾಯಿ
ಸೋಜಿಗ ಸೋಜಿಗ ಗೋವಿಂದನ ಸೋಜಿಗ ಗೋಪಾಲನ ಸೋಜಿಗ ಪ ಇಂದಿರೆ ರಮಣ ಈ ಪರಬ್ರಹ್ಮ | ಮಂದರೋದ್ಧಾರ ಈ ದೇವಾ | ತಂದೆ ತಾಯಿ ತ್ರೈಲೋಕ್ಯಕ್ಕೆ ತಾನಾಗಿ ನಂದ | ಆನಂದ ಯಶೋದೆಗೆ ಮಗನಾದ ನೋಡಮ್ಮ || ಸೋಜಿಗ 1 ಸದಮಲ ಸ್ವರೂಪ ಸಚ್ಚಿದಾನಂದನು |ಮುನಿಜನ ವಂದಿಪನು ಈ ದೇವ ಮುನಿಜನ ವಂದಿಪನು |ಪದುಮನಾಭ ಪೀತಾಂಬರಧರ ದೇವ ವಿದುರನ | ಆವಿದುರನ ಮನೆಯಲ್ಲಿ ಉಂಡದ್ದು ನೋಡಮ್ಮ ಸೋಜಿಗ2 ನಾನಾ ದೇವರ ದೇವ ನಾರಾಯಣ ಹರಿ ನಿಜಸುರ ವಂದಿ-ಪನು ಈ ದೇವ | ಭಾನು ಕೋಟಿ ತೇಜ ಜ್ಞಾನ-ಬೋಧನ ಸ್ವಾಮಿ | ತಾನಾಗಿ ಭಕುತಿಗೆ ಒಲಿದದ್ದುನೋಡಮ್ಮ ಸೋಜಿಗ 3
--------------
ಜ್ಞಾನಬೋದಕರು
ಸೋತುಹೋಗಣ್ಣ ಮಾತುಬಂದಲ್ಲಿ ಜಾಣನಾಗಿ ಸೋತುಹೋಗಣ್ಣ ಮಾತುಬಂದಲ್ಲಿ ಪ ಸೋತುಹೋಗದೆ ಮಾತುಮಾತಿಗೆ ವಾದಿಸಲ್ಕೆ ಘಾತಕತನದ್ವಿಧಿಯು ಬಂದು ಆತುಕೊಂಡು ಕೂತುಕೊಳ್ವುದು ಅ.ಪ ಸೋತೆನೆನ್ನಲು ನಾಚಬೇಡಣ್ಣ ದೇವರು ಕೊಟ್ಟಿಹ್ಯ ಖ್ಯಾತಿಯೇನು ಹೋಗೋದಿಲ್ಲಣ್ಣ ಸುಳ್ಳಲ್ಲವಣ್ಣ ಸೋತೆನೆಂಬುದು ಜಯದ ಮಾತಣ್ಣ ಸತ್ಯ ತಿಳಿಯಣ್ಣ ನೀತಿಗಡಕರ ಮಾತಿನ ತಳ್ಳಿಗೋತ ಕುಣಿಯೊಳೆಳೆವ ಬಳ್ಳ್ಯೆಂದು ಮಾತನಾಡದೆ ಸುಮ್ಮನ್ಹೋಗಲು ನೀತಿವಂತರು ಮೆಚ್ಚುತಾರ 1 ದುಡುಕುಮಾತಿಗೆ ಮಿಡುಕಬೇಡಣ್ಣ ಸತ್ಯದ್ಹೇಳುವ ದೃಢತರ್ವಚನದ ಅಡಕು ತಿಳಿಯಣ್ಣ ಪಡಕೊ ಸುಖವಣ್ಣ ನೀ ತೊಡರಿಕೊಂಡರೆ ತಪ್ಪದು ಕಡೆಯತನಕ 2 ಸೋತೆನೆನದ್ಹತ್ತುವದನಂದೇನಾಯ್ತು ಸೋತು ಓಡಿದ ನೀತಿವಂತ ವಿಭೀಷಣಂದೇನಾಯ್ತು ಮತ್ತು ನಳರಾಜ ಸೋತ ರಾಜ್ಯ ಭಂಡಾರೆಲ್ಲ ಮುಳುಗಿತು ತಿಳಿ ನೀತಿ ಅರಿತು ಮಾತುಮಾತಿಗ್ವಾದಿಸಿ ಕುಲಘಾತಕ್ಕಾದನು ಕೌರವೇಂದ್ರನು ಸೋತಜನರಭಿಮಾನಿ ಶ್ರೀರಾಮ 3
--------------
ರಾಮದಾಸರು
ಸೋತುಹೋದೆ ನಾನು ಶ್ರೀಹರಿ ಸೋತುಹೋದೆ ನಾನು ಪ ಪತಿತ ಪಾವನ ಮೂರ್ತಿಯ ಪ್ರೀತಿಯ ಸತತ ಪಡೆಯಲು ಕೆಲಸವ ಮಾಡಿ ಅ.ಪ. ನಿತ್ಯದಿ ಭಜಿಸುತ ಹರಿನಾಮವನು ಸತ್ಯಧರ್ಮದಿ ನಡೆಯುತಲೀ ಭ್ಯತ್ಯರಂದದಿ ಸೇವೆಯ ಮಾಡುತ ನಿತ್ಯನೆನಾ ಧನ್ಯಾತ್ಮನಾಗದೆ 1 ಪರಮಾತ್ಮನ ಕೀರ್ತನೆಯನು ಮಾಡುತ ಹರುಷದಿ ದಾಸನಾಗುತಲೀ ಹರಿಯ ಸಾಸಿರ ನಾಮವ ಸ್ಮರಿಸುತ ಶರಣಾಗತ ಪರಿಪಾಲನ ನೋಡಿದೆ 2 ಹೊನ್ನು ಹÉಣ್ಣು ಮಣ್ಣಿಗೋಸುಗ ಜನ್ಮವ ಮೋಹದಿ ನವಿಸದಲೇ ಚಿನ್ಮಯ ರೂಪನ ಪೂಜೆಯ ಮಾಡುತ ಚನ್ನಕೇಶವ ಪಾದವ ಸೇರದೆ 3
--------------
ಕರ್ಕಿ ಕೇಶವದಾಸ
ಸೋದಾಪುರದಲ್ಲಿ ವಾಸಿಪ ಯತಿವರನ್ಯಾರೇ ಪೇಳಮ್ಮಯ್ಯಾ ಪ ಹರಸುರಪತಿ ಸ್ಮರವರನುತ ನಮ ಸಮೀರ ಸದ್ವಾದಿರಾಜಕಾಣಮಾ ಅ.ಪ. ವಿನುತ ಬೋಧ ಮುನೀಶ್ವರ ಮತಾಂಭೋನಿಧಿಚಂದ್ರ ಕಾಣಮ್ಮ 1 ಸತ್ವಾದಿತ್ರಯ ಗುಣಜ ಕರ್ಮರಹಿತರಾರೆ ಪೇಳಮ್ಮಯ್ಯಾ ಶುದ್ಧ ಸತಿಸ್ವರೂಪದಿಂದ್ರಮಿಸುವರಾರೆ ಪೇಳಮ್ಮಯ್ಯಸಾರ ಶಾಸ್ತ್ರ ಶೃತಿಸಾರವಿನುತ ಖಳಾರಿಯೆಂದೆನಿಸುವರಾರೆ ಪೇಳಮ್ಮಯ್ಯಾರಾಶಿ ಪೂರ್ಣ ಸಪ್ತನಾಮಹರ ನೇತ್ರ ದ್ವಯಾಂಶ ಸಹಿತರೇ ಪೇಳಮ್ಮಯ್ಯಾ 2 ಪಂಚಭೇದ ಶೂನ್ಯ ಪರ ವಂಚಕರಿಗೆಯಂದೆನಿಸುವರಾರೇ ಪೇಳಮ್ಮಯ್ಯ ಪಂಚ ಪಂಚ ತತ್ವ ಪಂಚರೂಪ ತಂದೆವರದಗೋಪಾಲವಿಠಲನಪೂಜಿಪರೇ 3
--------------
ತಂದೆವರದಗೋಪಾಲವಿಠಲರು
ಸೋಬಾನವೆನ್ನಿರೆ ಶ್ರೀದೇವಿ ಅರಸಗೆ ನಾಭಿಯಲೆ ಅಜನ ಪಡೆದವಗೆ ಪ. ಬರಿಯ ಮಾಣಿಕದ ಹಸೆಗೆ ಕಿರಿಯ ಚನ್ನಿಗ ಬಾರೊಸರಿಯವರು ನೋಡಿ ನಗುವಂತೆ ಸರಿಯವರು ನೋಡಿ ನಗುವಂತೆ ಎನುತಲೆ ದೊರೆಗಳು ನುಡಿದು ಕರೆದರು1 ಮುತ್ತು ಮಾಣಿಕದ ಹಸೆಗೆ ಭಕ್ತವತ್ಸಲ ಬಾರೋಹತ್ತು ದಿಕ್ಕುಗಳ ಬೆಳಗುತ ಹತ್ತು ದಿಕ್ಕುಗಳ ಬೆಳಗುತ ಎನುತಲಿಮಿತ್ರಿ ಸುಭದ್ರಾ ಕರೆದಳು2 ಚದುರ ರಾಮೇಶನ ಮುದಿಮಾರಿವನಿತೆಯರು ಬದಿಯಲಿ ಬನ್ನಿ ಹಸೆಮ್ಯಾಲೆ ಬದಿಯಲಿ ಬನ್ನಿ ಹಸೆಮ್ಯಾಲೆ ಎನುತಲಿ ಸುದತೆÉ ಸುಭದ್ರಾ ಕರೆದಳು3
--------------
ಗಲಗಲಿಅವ್ವನವರು
ಸೋಮ ಸುರ್ಯೋಪರಾಗದಲಿ ಗೋಸಹಸ್ರಗಳ ಭೂಮಿದೇವರಿಗೆ ಸುರನದಿಯ ತಟದಿ ಶ್ರೀ ಮುಕುಂದಾರ್ಪಣವೆನುತ ಕೊಟ್ಟ ಫಲವಕ್ಕು ಈ ಮಧ್ವನಾಮ ಬರೆದೋದಿದವರಿಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರು ಸ ರ್ವತ್ರದಲಿ ದಿಗ್ವ್ವಿಜಯವಹುದು ಸಕಳ ಶತ್ರುಗಳು ಕೆಡುವರಪಮೃತ್ಯು ಬರಲಂಜುವುದು ಸೂತ್ರನಾಮಕನ ಸಂಸ್ತುತಿ ಮಾತ್ರದೀ 2 ಶ್ರೀ ಪಾದರಾಯರು ಪೇಳಿದ ಮಧ್ವ ನಾಮ ಸಂ ತಾಪ ಕಳೆದಖಿಳ ಸೌಖ್ಯನೀವುದೂ ಶ್ರೀಪತಿ ಜಗನ್ನಾಥವಿಠಲನ ತೋರಿ ಭವ ಕೂಪಾರದಿಂದ ಕಡೆಹಾಯಿಸುವುದು 3
--------------
ಜಗನ್ನಾಥದಾಸರು
ಸೋಮಶೇಖರ ತಾನೆ ಬಲ್ಲ ಶ್ರೀ-ರಾಮನಾಮಾಮೃತ ಸವಿಯನೆಲ್ಲ ಪ ಮದನಪಿತಾಯೆಂದು ಕುಣಿಕುಣಿದಾಡಲುಕೆದರಿದ ಕೆಂಜೆಡೆಗಳ ಪುಂಜದಿಒದಗಿದ ಗಂಗೆ ತುಂತುರು ಹನಿಗಳ ಕಂಡುಪದಮಜಾಂಡಹಿತ ರಾಮರಾಮಾ ಎಂಬ 1 ಆನಂದ ಜಲದ ಸೋನೆಗೆ ಲಲಾಟ-ದಾನೇತ್ರ ಬಡಬಾನಲನಂತಿರೆ ಏನೆನ್ನಲಿಬಹುದು ಸುಖ ಸಾಗರದೊಳುತಾನೆದ್ದು ಮುಳುಗುತ ರಾಮ ರಾಮಾಯೆಂಬ2 ಶಿರದ ಗಂಗೆಯ ವರ ಅಗ್ಗಣಿಯಾಗಿರೆಸರಸಿಜ ಬಾಂಧವ ಚೆಂದಿರ ದೀಪಉರಿಗಣ್ಣಿನ ಹೊಗೆ ಧೂಪವನೇರಿಸಿಕರಣವೆ ನೈವೇದ್ಯಯೆಂದು ರಾಮ ಎಂಬ 3 ಚಂದದ ಸ್ಫಟಿಕದ ಕರಡಿಗೆಯಲ್ಲಿಪ್ಪಇಂದ್ರನೀಲದ ಚೆನ್ನಪುತ್ಥಳಿಯಂತೆಚಂದದಿ ತನ್ನಯ ಹೃದಯ ಮಧ್ಯದಿ ರಾಮ-ಚಂದ್ರ ಹೊಳೆಯೆ ಶ್ರೀ ರಾಮ ರಾಮ ಎಂಬ4 ಫಣಿ ಮಣಿಯಾಘಾತನಾದ ತಾಳವಾಗೆ ರಾಮ ರಾಮ ಎಂಬ 5 ಒಮ್ಮೆ ಹರಿಯ ಗುಣ ಅಜಪೇಳಲಾಯೆಂಬಒಮ್ಮೆ ನಾರದ ಪಾಡೆ ತತ್ಥೈಯೆಂಬಒಮ್ಮೆ ರಾಣಿಗೆ ಪೇಳಿ ಶಿರವನೊಲಿದಾಡುವಒಮ್ಮೆ ತನ್ನೊಳು ನೆನೆಸಿ ರಾಮ ರಾಮ ಎಂಬ6 ಅರಸಂಚೆಯ ಕಂಜ ಪುಂಜಗಳಲಿಪ್ಪಅರೆ ಮುಚ್ಚಿದ ಹದಿನೈದು ನೇತ್ರಗಳಿಂಹರಿಯ ಕೊಂಡಾಡುತ ಪಂಚ ಮುಖಗಳಿಂದಸಿರಿಕೃಷ್ಣ ಮುಕುಂದ ನರಹರಿ ರಾಮ ಎಂಬ7
--------------
ವ್ಯಾಸರಾಯರು
ಸೋಮಾಸುರನೆಂಬ ಅಸುರನು ಸಾಮಕವೇದವ ಒಯ್ಯಲು ಮಾ ಸೋಮಾಸುರದೈತ್ಯನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮ ದೇವ ಗುಡ್ಡ ಬೆನ್ನೊಳಗಿತ್ತನು ಮಾ ಗುಡ್ಡದಂಥ ದೈತ್ಯರನೆಲ್ಲ ಅಡ್ಡ ಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಹೆಣ್ಣನೊಯ್ಯಲು ಮಾ ವರ್ಣರೂಪವ ತಾಳಿದಸುರನ ಛಿನ್ನಭಿನ್ನವ ಮಾಡಿದನು ಮಾ 3 ಕಂಬದಿಂದಲಿ ಬಂದು ನಮ್ಮ ದೇವ ಇಂಬಾದಸುರನ ಬಗಿದನು ಮಾ ನಂಬಿದ ಪ್ರಹ್ಲಾದನ ಕಾಯ್ದ ಅಂಬುಜನಾಭ ನೃಸಿಂಹನು ಮಾ 4 ಮುರುಡನಾಗಿ ಬಂದು ನಮ್ಮ ದೇವ ಬಲಿಯ ದಾನವ ಬೇಡಿದನು ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕ್ಕೊತ್ತಿದನು ಮಾ 5 ಕೊಡಲಿಯನು ಪಿಡಿದು ನಮ್ಮ ದೇವ ಕಡಿದ ಕ್ಷತಿಯರಾಯ (ಯರ?) ನು ಮಾ ಹಡೆದ ತಾಯಿಯ ಶಿರವ ತರಿದು ಪಡೆದನಾಕೆಯ ಪ್ರಾಣ(ಣವ?) ನು ಮಾ 6 ಎಂಟು ಎರಡು ತಲೆಯ ಅಸುರನ ಕಂಠವ ಛೇದಿಸಿ ಬಿಸುಟನು ಮಾ ಒಂಟೀ ರೂಪವ(?) ತಾಳಿದಸುರನ ಗಂಟ ವಿಭೀಷಭಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳಿಮೇಳದೊಳಿದ್ದನು ಮಾ ಬಾಲಕನಾಗಿ ತನ್ನುದರದಲಿ ಲೋಲ ಲಕ್ಷ್ಮಿಗರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪ್ಪೆವನದೊಳಗಿಪ್ಪನು ಮಾ ಸರ್ಪಶಯನನಾಗಿ ಪೋಗಿ ತ್ರಿಪುರಸಂಹಾರ ಮಾಡಿದನು ಮಾ 9 ಏನು ಮಾಯನು ಮಾಯನು ಮಾ ನಮ್ಮ ದೇವ ಬಲ್ಲಿದ ಕಲ್ಕ್ಯಾವತಾರನು ಮಾ ಇಳೆಯ ಸ್ವರ್ಗ ಪಾತಾಳಕ್ಕೊಡೆಯ ಚೆಲುವ ಶ್ರೀ ಹಯವದನನು ಮಾ 10
--------------
ವಾದಿರಾಜ
ಸೋಹಮೆಂದು ಸುಖಿಸು ವಿಗತ ಮೋಹದಿಂದ ಸಂತತಂದೇಹ ದೇಹದೊಳಗೆ ತೋರ್ಪನೀ ಹಿತಾತ್ಮನೀತ ಪರಮ ಪಘನದ ರತುನಮಂಟಪವನು ಶುನಕವೇರಿ ತನ್ನ ನೆಳಲಕನಲಿ ನೋಡಿ ಗಳಹಿ ತಾನಿದೆಂಬುದರಿಯದೆಮನದೊಳನ್ನವೆಂದು ಭ್ರಮಿಸಿ ಮತ್ತೆ ಕಡಿಯಲದರೊಳೊಡದು*ನೆನೆವ ತನ್ನ ರಕುತವನ್ನು ಸವಿವ ರೀತಿಯಲಿವಿನುತ ಜೀವ ತನ್ನ ಛಾಯೆಯನು ಸಮಸ್ತರೊಳಗೆ ನೋಡಿನೆನೆದಿದನ್ಯವೆನುತ ಭ್ರಾಂತನಾಗಿ ಮಾಯೆುಂದನುಭವಿಸುವೆನಿದನಿದೊಲ್ಲೆನೆನುತ ಭೇದ ಬುದ್ಧಿುಂದಮನುಮಥಾಗ್ನಿುಂದ ಬೆಂದು ಮನದಲಿದ್ದ ಕಾರಣಂ 1ನರರು ಗಜವ ಪಿಡಿಯೆ ಕಪ್ಪ ಕೊರವುತದರ ನಡುವೆ ತಿಟ್ಟನಿರಿಸಿ ಕಣ್ಣಿಯಲ್ಲಿ ಕಟ್ಟಿಯದರ ಸುತ್ತಲೂನೆರಹಿ ಕಾಷ್ಠ ಮೃತ್ತುಗಳನು ನಿಜದಪ್ಪಿರಮಾಡೆ ಭ್ರಮಿಸಿಕರಿಣಿಗಾಗಿ ಬಂದು ಗಜವು ಮರೆದು ಬಿದ್ದ ರೀತಿುಂದುರೆ ವಿರಿಂಚಿ ಕೂಪ ಸಾಮ್ಯವಾದ ನರಶರೀರಮಂಮರೆಸಲದರ ಮೇಲೆ ಚರ್ಮವೆನಿಪ ಮಾಯೆುಂದ ನರರುಮರೆತು ತಾವಿದೆನ್ನುತದರಲಿದ್ದ ಕಾರಣಂ 2ಮರೆದು ತನ್ನ ತಾಣವನ್ನು ಮೆರೆದುಲಂಘಿಸುತಲಿ ಭೇಕವಿರಲು ಹೊಂಚಿ ಪಿಡಿದು ಪಾವು ಪಿರಿದು ದೇಹಮಂನೆರೆದು ನುಂಗಲಾರದಿರುತಲಿರಲು ಭೇಕ ತನ್ನ ಹಸಿವಿಗಿರದೆ ಬಾಯ ತೆಗೆದು ನೊಣನನರಸಿ ಪಿಡಿವ ರೀತಿುಂನರರು ತಮ್ಮ ಕಾಲಸರ್ಪ ಉರುಬಲದನು ಮರೆತು ಭೋಗಪರತೆುಂದ ಕಾಮರೋಷ ವಿರಸರಾಗುತಿರಲು ನೀನರಿದನಿತ್ಯವೆಲ್ಲವೆಂದು ಮೆರೆದು ಗೋಪಾಲಾರ್ಯ ಪದವನೆರೆದು* ಭಕತಿುಂದ ನೋಡಿ ಪಾಡಿ ಹರುಷದಿಂದ ನೀ 3
--------------
ಗೋಪಾಲಾರ್ಯರು
ಸೌಂದರ್ಯ ಪುರುಷನ ಕಣ್ದೆರದು ನೋಡಿದೆನು | ಇಂದೆನ್ನ ಜನುಮ ಸಫಲ | ಹಿಂದೆ ಅನಂತೇಶನೆಂದೆಂಬ ನಾಮದಲಿ | ಕಂಬು | ಕಂದರದ | ತಿಮ್ಮನ ಪ ಮಕರ ಕುಂಡಲಧಾರ | ಮಕ್ಕಳಾ ಮಣಿಸು ಕಾಮದಾ | ಅಕಳಂಕ ತುಲಸಿ ಸರ | ಕಮಲ ಅಕುಟಿಲ ಹೃದಯಮಂದಿರ | ಸಕಲಕಾಲದಲಿ ನಿಜ | ಭಕುತರಿಗೆ ಒಲಿದಿಪ್ಪ | ಅಖಿಳ ಲೋಕಾಧೀಶ ಮುಕುತಾರ್ಥ ಮುರವೈರಿ1 ಕರ ಮುಂಗೈಯ ಕಡಗ ಕಂಕಣ ಬಾಹು ಭುಜಕೀರ್ತಿ | ಮುಂಗೈಯ ಫಣಿಯ ತಿಲಕಾ | ಬಂಗಾರದಂಬರ ಭವದೂರಾ ಪದದಲ್ಲಿ | ಪೊಂಗೆಜ್ಜೆ ಸರ್ವಾಭರಣದಿಂದ ಒಪ್ಪುವಾ 2 ಪಾಂಡೆ ದೇಶವಾಸಾ ಪಾಂಡವರ ಸಂರಕ್ಷಕ | ಚಂಡ ಪ್ರಚಂಡ ಮಹಿಮಾ | ಗಂಡುಗಲಿಗಳ ಗಂಡಾ | ಕೊಂಡಾಡಿದವರಿಗೆ ತಂಡ | ತಂಡದ ವರವೀವಾ | ಉದ್ದಂಡ ವಿಜಯವಿಠ್ಠಲ| ಅಂಡಜಗಮನ ಕೃಷ್ಣಾ ತಿಮ್ಮಾ3
--------------
ವಿಜಯದಾಸ
ಸೌಭಾಗ್ಯ ಸಂಪನ್ನ ಸಂಪೂರ್ಣ ಶ್ರೀ ಭೂನೀಳಾ ರಮಣ ಕಲ್ಯಾಣ ಪ ಆಧಾರದೇವ ಭೇದ ರಹಿತ ಭಾವ ಮೋದಕರಾ ಶ್ರೀವಾಸುದೇವ 1 ಯಶೋದೆಯ ಸಂಗದ ಮರಿಯೆ ದಶಾವತಾರಿ ಶೇಷಶಾಯಿಯೆ 2 ಗರುಡವಾಹನ ಗಜವರದ ಗಮನ ದುರಿತನಾಶನ ಜಾಜೀಜನಾರ್ಧನ 3
--------------
ಶಾಮಶರ್ಮರು
ಸ್ಕಂದಗುರು ಸ್ಕಂದಗುರು ಸುರ- ವೃಂದ ಮುನಿಜನರು ವಂದಿಪರುಪ. ಮಂದರಧರ ಗೋವಿಂದನ ಶರಣರ ಸಂದೋಹಕಾವ ವೃಂದಾರಕತರುಅ.ಪ. ತಾಮಸರು ದ್ವೇಷ ಬೇಡುವರು ಕಾಮಿತ ಕೇಳ್ವರು ರಾಜಸರು ಸ್ವಾಮಿ ಶ್ರೀಹರಿಯ ಭಕ್ತಿಜ್ಞಾನವ ಪ್ರೇಮದಿ ಕೇಳ್ವರು ಸಾತ್ವಿಕರು1 ವಿಘ್ನಹರನು ನಿನ್ನಗ್ರಜನು ವಿಬು- ಧಾಗ್ರಣಿಯೆನಿಸುವೆಯೊ ನೀನು ಉಗ್ರ ತ್ರಿಯಂಬಕತಾತನು ಖ್ಯಾತನು ದುರ್ಗಾದೇವಿಯೆ ಜನನಿ ನಿರುಪಮಳು2 ತಾರಕಾಂತಕ ನಿಶ್ಯೋಕ ಲಕ್ಷ್ಮೀ- ನಾರಾಯಣನಿಗೆ ಸಖ ಭೂರಿನಿಗಮಾರ್ಥಸಾರ ಕೋವಿದನೆ ಧೀರನೆ ವೀರ ಮಹಾರಣಶೂರನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ತುತಿಸಿ ಪ್ರಾರ್ಥಿಪೆ ನಿನ್ನನು ಸರಸ್ವತಿ ಸ್ತುತಿಸಿ ನಮಿಪೆ ನಿನ್ನನು ಪ. ಸ್ತುತಿಸಿ ನಮಿಸಿ ನಿನ್ನ ಜತನ ಮಾಡುತ್ತ ವದನದಿ ಸ್ತುತಿಸುವ ಭಾಗವತರನು ತೋರಮ್ಮಾ ಅ.ಪ. ಅಕ್ಷರಕ್ಷರ ರೂಪದಿ ಶ್ರೀಹರಿಯಾ ಅಕ್ಷಯ ನಾಮವನು ಸ್ತುತಿಯ ಮಾಳ್ಪ ಸುಕ್ಷೇಮ ಪಡೆದಿಹ ಮಾತೆ ಸರಸ್ವತಿ ಪ್ರತಿ ಅಕ್ಷರವನು ಅರಿವಾ ಭಾಗ್ಯವ ತೋರೆ 1 ರಾಗರಾಗದಿ ಭಜಿಪೆ ಶ್ರೀ ಹರಿಯಾ ಅನು ರಾಗಕೆ ಪಾತ್ರಳಾಗಿ ವಲಿಸಿಹೆ ಭಾಗವತಾಗ್ರಣಿ ಶ್ರೀಹರಿ ನಾಮವ ಶೀಘ್ರದಿ ಸ್ತುತಿಸುವ ಭಾಗವತರ ತೋರೆಂದು 2 ಅಗಣಿತ ಮಹಿಮೆಯನೂ ಬಲ್ಲವಳು ನೀ ಸುಗುಣಿ ಸರಸ್ವತಿಯೆ ಶ್ರೀ ಶ್ರೀನಿವಾಸನ ಅಗಣಿತ ಗುಣಗಳ ಪೊಗಳುವ ಮತಿಯಿತ್ತು ಅಘಹರ ಹರಿಭಕ್ತರಾ ಲಗುಬಗೆಯಲಿ ತೋರೆ 3
--------------
ಸರಸ್ವತಿ ಬಾಯಿ
ಸ್ಥಾಣುಂಕರ ವಿರಾಜಿತ ರಮಾಸದನ ಮೋಹನ ಪ ವಾಣೀಶ ಸಂಭಾವಿತ ಗೋಪೀಜನ ಸೇವಿತಾ ಅ.ಪ ಮಣಿಭೂಷಣ ರಂಜಿತ ಮುಕ್ತಜನಾನಂದಿತಾ 1 ಫಣಿಮಣಿಗಣ ಸಂಭೂಷಿತ ವನಿತಾಜನ ತೋಷಿತ 2 ಅಣುರೇಣು ತೃಣಪೂರಿತ ಗುಣಸಾಗರ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್