ಒಟ್ಟು 215 ಕಡೆಗಳಲ್ಲಿ , 52 ದಾಸರು , 165 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಬಾಲನೇನೆ ನಿನ್ನ ಮಗನು ಗೋ- ಪಾಲಕೃಷ್ಣನು ಪ. ಬಾಲನೇನೆ ನಿನ್ನಮಗನು ಬಾಲಕಿಯರಾಲಯ ಪೊಕ್ಕು ಶೀಲಗೆಡಿಸಿ ಸಾಲದೆ ಗೋ- ಕುಲವನು ಸೂರೆಮಾಡಿದ ಅ.ಪ. ಕಾಲು ಇಲ್ಲದೆ ನಡೆವನೀತ ಮೇಲುಗಿರಿಯ ಬೆನ್ನಲಾಂತ ಮೂಲಬೇರ ಮೆಲ್ಲುವಾತ ಜ್ವಾಲರೂಪಿ ಸ್ಥೂಲಕಾಯ ಬಾಲನಾಗಿ ಭೂಮಿಬೇಡಿದ ಹಾಲು ಕುಡಿಸಿದ ತಾಯ ಎರವು ಮಾಡಿದ ವಲ್ಕಲವನುಟ್ಟು ಅಡವಿ ಆಲಯವ ತಿರುಗಿದ ಶ್ರೀರಾಮಚಂದ್ರ ವೇಲಾಪುರದ ಸೋರುಮುಡಿಯ ಬಾಲೆಯನು ಸೋಲಿಸಿ ಕಾಲದಲ್ಲಿ ಕಲ್ಕ್ಯನಾದ 1 ಮಡುವಿನಲ್ಲಿ ಅಡಗಿಯಿರುವ ಪೊಡವಿ ದೊಡ್ಡನೆತ್ತಿ ಪೊರೆವ ಅಡವಿಯಲ್ಲಿ ಆಡುತಿರುವ ಕಡುಕ್ರೂರ ಹಿಡಿದ ಹಟವ ಹುಡುಗನಾಗಿ ಪೊಡವಿ ಬೇಡಿದ ಕೊಡಲಿ ಪಿಡಿದು ಕಡಿದು ಕ್ಷತ್ರಿಯರ ಕುಲವ ತರಿದನೆ ರಾವಣಾದಿ ಪಡೆಯನೆಲ್ಲ ಸಂಹರಿಸಿದ ಶ್ರೀರಾಮಚಂದ್ರ ತುಡುಗು ಮಾಡಿ ಗಡಿಗೆ ಪಾಲ ಕುಡಿದು ಕಡಹದಲ್ಲಿ ಅಡಗಿ ಬಿಡದೆ ತ್ರಿಪುರವ್ರತಕೆಡಿಸಿ ಪಿಡಿದು ತೇಜಿಯ ನಡೆಸುತಿಹನು 2 ನೀರಪೊಕ್ಕು ವೇದತಂದು ಭಾರಪೊತ್ತು ಬೆನ್ನಲಿಟ್ಟು ಕೋರೆಹಲ್ಲು ತೋರುವ ಕ್ರೂರವದನ ಅಪಾರ ಮಹಿಮ ಪಾದ ಭೂಮಿ ಬೇಡಿದ ವಿಪ್ರರ ಕರೆಸಿ ಧಾರುಣಿಯನೆ ದಾನ ಮಾಡಿದ ಪರ್ವತಗಳ ತರಿಸಿ ಶರಧಿಯನ್ನು ಸೇತುಕಟ್ಟಿದನೆ ಶ್ರೀರಾಮಚಂದ್ರ ಜಾರ ಚೋರ ಮಾರನಯ್ಯ ನಾರೇರಪ್ಪಿ ಮರುಳುಮಾಡಿ ವಾರಿಜಾಕ್ಷ ಹಯವದನ ಏರಿ ಕುದುರೆ ವೈಹಾಳಿಮಾಡಿದ 3
--------------
ವಾದಿರಾಜ
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಮಂಗಳಂ ಜಯ ಮಂಗಳಂ ಶುಭಮಂಗಳೆನ್ನಿರೇ ಹಿಂಗದಂತರಂಗಲಿಪ್ಪಾ ನಂಗನಯ್ಯಗೆ ಪ ಹೆಣ್ಣ ಮಾಡಿತಮನ್ನ ವಿಕ್ರಮ ಹೆಣ್ಣವೆನಿಸಿ ಹೆಣ್ಣಿಗೊಲಿದು ಹೆಣ್ಣು ತೊ ಡಿಯೊಳಿನ್ನು ತಾಳಿ ಹೆಣ್ಣ ಮಡ ದಂಗೆ ಹೆಣ್ಣಿನಳಿದು ಹೆಣ್ಣೆ ನೆಬ್ಬಿಸಿ ಹೆಣ್ಣ ಹಲವರೊಡನೆ ಆಡಿದ ಹೆಣ್ಣ ವೃತಗೆಡಿಸಿ ಕುದುರೆ ಯಾರೋಹಣ ಗೈದಂಗೆ 1 ನಿಗಮ ತಂದು ನಗವನೆತ್ತಿ ಜಗವನುಳಹಿ ಮಗುವಿಗೊಲಿದು ತುಂಬಿ ಮಿಗಿಲ ಭೂಸುರಗಳ ಹೊರದಂಗೆ ಬಿಗಡಗೊಲಿಸಿದ ಸಗಟನೊತ್ತಿ ವಿಗಡ ಕಲ್ಕಿಗೆ 2 ಮತ್ಸ್ಯರೂಪದಿ ಕಚ್ಚಪಾಗಿ ಸ್ವಚ್ಛಕೋಡದಿ ಬೆಚ್ಚ ನರಹರಿ ಅಚ್ಚ ವಾಮನ ನಿಚ್ಛ ಕೊಡಲಿಯ ಮಚ್ಚು ಜನ ಕಂಗೆ ಇಚ್ಛ ನಡೆಸಿದ ಮೆಚ್ಚಿ ಗೋಕುಲ ಹುಚ್ಚು ಮಾಡಿದ ಬಾಲನೆನಿಸಿ ಸಚ್ಚರಿತ ಕಲಿನಾಶ ಮಹಿಪತಿ ನಂದ ನೊಡಿಯಂಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳಾರತಿಎತ್ತಿ ಮಾಮನೋಹರನಿಗೆ ಪ ಅಂಗನೆಯರೆಲ್ಲ ಬಂಗಾರದ ತಟ್ಟೆಯಲ್ಲಿ ಅ.ಪ ವೇದಚೋರನ ಕೊಂದು ಭೂಧರವನು ಪೊತ್ತು ಮೇದಿನಿಯನು ಎತ್ತಿ ಕಂಬದಿ ಬಂದವಗೇ 1 ಭೂಮಿದಾನವ ಕೇಳಿ ಭೂಮಿಪರನು ಸೀಳಿ ಭೂಮಿಜಾತೆಯನಾಳಿ ಭೂ ಭಾರವಳಿದವಗೆ 2 ಮುದ್ದುಕುದುರೆಯ ಏರಿದ ಗುರುರಾಮ ವಿಠಲಗೆ 3
--------------
ಗುರುರಾಮವಿಠಲ
ಮಟಮಾಯ ಮಟಮಾಯ ದಿಟ್ಟಿಸಿ ನೋಡೆಲೊ ಪ ದುಷ್ಟ ಸಂಸಾರವ ಕುಟ್ಟಿಕುಟ್ಟಿಕೊಂ ದೆಷ್ಟು ಮಾಡಿದರು ಕಟ್ಟಕಡೆಗೆಯಿದು ಅ.ಪ ಕೋಟಿಧನವ ನೀಟಾಗಿ ಗಳಿಸಲೇನು ಸಾಟಿಯಿಲ್ಲದ ಸಂಪತ್ತು ಇರ್ದರೇನು ಕಾಟುಮಾಡಿ ಯಮಗೂಟ ಒದಗಲಾಗ ದಾಟಿ ಹೋಗಬೇಕು ಅಷ್ಟು ಸಂಪದ ಬಿಟ್ಟು 1 ಆನೆಕುದುರೆ ಒಂಟೆ ವಾಹನವಿರಲು ಏನು ನಾನಾಸಿರಿಯು ಮಾನ್ಯ ಮಿರಾಸಿಗಿರಲೇನು ತ್ರಾಣಗುಂಡಿಸಿ ಯಮ ಪ್ರಾಣ ಸೆಳೆಯುವಾಗ ನಾನಾಭಾಗ್ಯ ಬಿಟ್ಟು ತಾನೆ ಹೋಗಬೇಕು 2 ಮಾನಪಾನದಿ ತಾನೆ ಹಿರಿಯನೆನಿಸಲೇನು ನಾನಾಪೊಡವಿಗೋರ್ವ ದಣಿಯಾಗಾಳಿದರೇನು ಪ್ರಾಣೇಶ ಶ್ರೀರಾಮಧ್ಯಾನವೊಂದಿಲ್ಲದಿರೆ ಏನು ಗಳಿಸಿದ್ದೆಲ್ಲ ಹಾನಿಯೆನಿಪುದೆಲೋ 3
--------------
ರಾಮದಾಸರು
ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ
ಮನಕೆ ಬೇಸರ ಬೇಡ ಮಣಿವೆ ಮಾಧವನೆ ಕ್ಷಣಕೊಂದು ಬೇಡುವ ಈ ಪಾಮರನೆಂದೆನುತ ಪ ತಂದೆಯನು ಕೊಲ್ಲೆನಲು ತಕ್ಕ ಶಿಕ್ಷೆಯ ಮಾಡು ಕೊಂದು ಅಣ್ಣನ ರಾಜ್ಯ ಕೊಡು ಎನಗೆ ಎನಲು ಕುಂದಿಟ್ಟು ಮನ್ನಿಸದಿರಲ್ಲದೆ ಎನ್ನ ಬಂಧನದ ಬಲೆಯನ್ನು ಬಯಲೆನಿಸು ಎಂಬೆ 1 ಹೆಣ್ಣಾಗಿ ಬಾರೆನಲು ಕಣ್ಣೆತ್ತಿ ನೋಡದಿರು ಎನ್ನ ಮನೆಯ ಕುದುರೆಯನು ಕಾಯಲು ಗನ್ನಗತಕನೆಂದು ಮನ್ನಿಸಿ ಸಲಹದಿರಲು ಅನ್ಯ ಬೇಡಿದೆನೇನು ಸಂತಸ ನೀಡೆಂಬೆ 2 ನಾಯಾಗಿ ಬಂದು ನಿನ್ನ ಲತ್ತೆತಿನುಯೆಂದೆನಲು ಕಾಯದಿರು ಕರುಣದಿ ದೇವದೇವೇಶ ಆವಾವ ಕಾಲದಿ ಬಾಯಬಿಡಿಸದಿರಲ್ಪ ಮಾಯ ಮೋಹಿಗಳ ಬಳಿಯೆಂದು ಬೇಡುವೆನು 3 ನೀರುಕೊಟ್ಟೆನ್ನ ಕರದಿಂದ್ಹೊಡಿಸಿಕೊಯೆನಲು ಚೋರನು ಇವನೆಂದು ಬಾರದೆ ಇರೆಲೋ ಘೋರಸಂಸಾರ ತಾಪವಾರಿಧಿಯ ಕಷ್ಟದಿಂ ಪಾರುಮಾಡೆಂದೆನುತ ಸಾರಿ ಬೇಡುವೆನು 4 ಸಲಿಸೆನ್ನ ನೈವೇದ್ಯ ಕುಲಗೇಡು ಎಂದೆನುತ ಛಲದಿ ಬೇಡಲು ಎನಗೊಲಿಯದಿರು ಸ್ವಾಮಿ ಬಲು ಹೊಲೆಯ ಪ್ರಪಂಚದ್ಹಲುಬಾಟ ಬಿಡಿಸೆನ್ನ ಮಲಿನತ್ವಳಿಕಿಸಿ ಚೆಲುವ ಸಲಹೆಂಬೆ 5 ತಿಳಿಯದೆ ನಿನ್ನನ್ನು ಕುಲಗೇಡಿಯೆಂದೆನುತ ಕುಲದಿಂದ ಹೊರಹಾಕಲೊಳಿತಾಗಿ ತಳ್ಳೋ ಮಳ್ಳತನ ಬಿಡಿಸೆನ್ನ ಮನಸಿನ ಕಿಲ್ಬಿಷವ ತೊಳದೆ ನಿಜಜ್ಞಾನದ ಪಾಲಿಸು ಎಂಬೆ 6 ನರನ ಭವಗುಣಗಳ ಪರಿಹರಿಸಿ ಬೇಗನೆ ಕರುಣಿಸು ಎನಗೆ ಪರರ ಬೇಡದ್ದನು ಕರುಣಾಳು ಶ್ರೀರಾಮ ಗುರುವೆ ನೀನಾಗೆನ್ನ ಪರಿಭವದ ದು:ಖವನು ತ್ವರಿತದ್ಹರಿ ತಂದೆ 7
--------------
ರಾಮದಾಸರು
ಮನದೊಳಗಿರು ಹರಿಯೆ ಮೂರ್ಲೋಕ ದೊರೆಯೆ ಪ. ಮನೆದೊಳಿ(?)ಗಿರು ಬಹು ಜನರು ಪೇಳುವ ದೂರು ಎಣಿಸಲು ಶಕ್ತನಾರು ಮುಖಾಬ್ಜ ತೋರು ಅ.ಪ. ಮೂರ್ತಿ ನೀನು ಪ್ರಾಕೃತ ಗುಣಸರ್ಗದಿ ಬರುವುದೇನು ಸರ್ಗರಕ್ಷಣ ಪಾಪವರ್ಗವೆಲ್ಲವನು ನಿಸರ್ಗ ಮೀರದೆ ಮಾಳ್ಪ ದುರ್ಗಮದ್ಭುತಕರ್ಮ ದೀರ್ಘದರ್ಶಿ ಮುನಿವರ್ಗಕೊಲಿದು ನಿಜ ಮಾರ್ಗ ತೋರ್ಪ ಶ್ರೀ ಭಾರ್ಗವೀ ರಮಣಾ 1 ಜಲದೊಳಗಾಡಿದನು ಬೇರನು ಕಿತ್ತಿ ಖಳರನು ಸೀಳಿದನು ನೆಲನನಳೆದು ತಾಯಿ ತಲೆಯ ತರಿದು ನಿಜಲಲನೆಗೋಸುಗ ದೈತ್ಯ ಕುಲವ ಸಂಹರಿಸಿದ ಶಿಲೆಯನು ರಕ್ಷಿಸಿ ಕಳವಳಿಸಿದ ಕಪಿ ತಿಲಕನ ಸ್ನೇಹವ ಬಳಸಿದನೆಂಬುದು 2 ಬಾಗಿಲ ಮುಚ್ಚಿದರೆ ಗೋಡೆಯ ಹಾರಿ ಹೋಗಿ ಮನೆಯ ಒಳಗೆ ಬಾಗಿಲ ಮರೆಯಲಿ ಬಾಗಿನೋಡುತ ಮೆಲ್ಲಗಾಗಿ ಬೆಣ್ಣೆಯ ಮೆದ್ದು ಸಾಗಿ ಬರುತಲಿರೆ ನಾಗವೇಣಿಯರು ಹಿಡಿಯಲು ನೀವಿಯ ನೀಗಿ ಪುರುಷರನು ಕೂಗಿದನೆಂಬರು3 ತೊಟ್ಟಿಲೊಳಗೆ ಮಲಗಿ ನಿದ್ರೆಯಗೈವ ಪುಟ್ಟ ಶಿಶುಗಳನೆಲ್ಲ ತಟ್ಟಿ ಎಬ್ಬಿಸಿ ಕಣ್ಣಾಕಟ್ಟಿ ವಸ್ತ್ರದಿ ತಾನೆ ಚಿಟ್ಟನೆ ಚೀರಿ ಒ- ತ್ತಟ್ಟು ಎಲ್ಲರು ಕೂಡಿ ಕಟ್ಟಿದ ಕರುಗಳ ಬಿಟ್ಟ ಮೊಲೆಗೆ ಒಳ- ಗಿಟ್ಟ ಹಾಲು ಮೊಸರೊಟ್ಟಿಲಿ ಸವಿವುದೆ 4 ವಿದ್ಯೆಯ ಕಲಿಯೆಂದರೆ ಅಮ್ಮಯ್ಯ ಎನಗೆ ನಿದ್ದೆ ಬರುವುದೆಂಬುವಿ ಹೊದ್ದಿಸಿ ತಟ್ಟಿದರೆದ್ದು ಓಡುವಿ ಗೋಪೆರಿದ್ದ ಠಾವಿಗೆ ನಾನಾ ಬದ್ಧವನು ಸುರುವಿ ಸಿದ್ಧವಾಗಿ ಕಾದಿರೆ ಕೈಗೆ ಸಿಕ್ಕದೆ ಉದ್ಧವ ಗೃಹದೊಳು ಬೌದ್ಧನಂತಿರುವಿ 5 ಕುದುರೆಯ ಹತ್ತಿದರೆ ಯಾರಾದರೂ ಕದನವ ಮಾಡಲಿಹರೆ ಹೃದಯ ಮಂಟಪದಿ ನೀ ಸದರವಾಡುತಲಿರೆ ಮದನ ಜನನಿವರ ಮದಮತ್ಸರಗಳ ಒದೆದು ತೀವ್ರದಲಿ ಪದಯುಗ ಪಾಲಿಸುವುದಯ್ಯ ಗಿರೀಶ 6
--------------
ತುಪಾಕಿ ವೆಂಕಟರಮಣಾಚಾರ್ಯ
ಮರೆಯದಿರು ಮರೆಯದಿರು ಹರಿಯನು ಪಾಪಿ ಪ ಮರೆಯದಿರೆ ನೀ ಮೈಕುಂಠಕೆ ಪೋಪಿಅ.ಪ. ಮೂರು ದಿನ ಬಾಳ್ವ ಸಂಸಾರವ ನೋಡಿ ಬಾರಿ ಹರುಷಿಸದಿರು ನೀನೆಲೊ ಖೋಡಿ 1 ಮತಿವಂತನಾದರೆ ಹರಿಪುರಕೆ ಪೋದಿ ಸತಿಸುತರ ನಂಬೆ ನಿನ ಬಾಯಲಿ ಬೂದಿ 2 ಸಿರಿಯ ನಂಬಿದ ದುರ್ಯೋಧನ ಬಿದ್ದ ಹರಿಯ ನಂಬಿದ ಭೀಮಸೇನನು ಗೆದ್ದ 3 ಆನೆ ಕುದುರೆ ರಥ ಭಂಡಾರವು ನಿಂದೆ ಪ್ರಾಣ ಹೋಗುವಾಗವು ಬಾರವು ಹಿಂದೆ 4 ರಂಗೇಶವಿಠಲನ ನಂಬಿದವ ಜಾಣ ಅಂಗನೆಯರ ನಂಬಿದ ಮನುಜನೆ ಕೋಣ 5
--------------
ರಂಗೇಶವಿಠಲದಾಸರು
ಮರ್ಯಾದಿ ಗುಣ ವಳ್ಹದೋ | ಗುರುವರ್ಯರ ಸೇವೆಲಿ ಬಾಳ್ವೆನೆಂಬನಿಗೆ ಪ ಅರಸುವಲಿದು ಅತಿ ಪ್ರೀತಿ ಮಾಡಿದರೇನು ? ಕರಗಳ ಮುಗಿದು ನಿಂದಿರಬೇಕು ಚರನು 1 ಹಿಂಗದೆ ಭಕುತಿಗೆ ಬೆಜ್ಜರ ವಿಡಿದರ | ಬಂಗಾರಕ ಸುವಾಸನೆಯು ಬಂದಂತೆ 2 ಕುದುರೆಗೆ ಉತ್ತತ್ತಿ ತುಸು ಕೊಟ್ಟರಾರೋಗ್ಯ | ಅದೇ ವಿಶೇಷ ಕೊಡಲು ವಿಪರೀತವೋ 3 ಯೋಗ್ಯವಲ್ಲದ ಅಲಂಕಾರಿಸಿಕೊಂಡರೆ ತನ್ನ | ಶ್ಲಾಘ್ಯವೇ ಜಗದೊಳು ಉಪಹಾಸ್ಯ ಮೂಲಾ 4 ತರಳತನವ ಬಿಟ್ಟೆಚರದಲಿ ನಡಿಬೇಕು | ಗುರು ಮಹಿಪತಿಸುತ ಪ್ರಭು ನೊಲುವಂತೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೂರು ಜಗವ ಕುಣಿಸುವಂಥ ಗಾರುಡಿಗ ಇವ ದಾರಕ್ಕ ನಾರಾಯಣನಲ್ಲವೇನೆ ನಾರಿ ಕೇಳೆ ತಂಗಿ ಪ. ಧೀರ ಬಲುಗಂಭೀರ ಮತ್ಸ್ಯವತಾರ ಕಾಣೆ ತಂಗಿ 1 ಹತ್ತೂ ನಾಲ್ಕು ರತ್ನವ ತೆಗೆದು ಮತ್ತೆ ಇವ ದಾರಕ್ಕ ಕೂರ್ಮ ಕಾಣೆ ತಂಗಿ 2 ಧರಣಿಯ ಸುರುಳಿ ಸುತ್ತಿದಂಥ ಅರಸ ಇವ ದಾರಕ್ಕ ವರಾಹ ಕಾಣೆ ತಂಗಿ 3 ನಂಬಿದವರ ಕಂಬದೊಳು ಎಂಬೆ ಇವ ದಾರಕ್ಕ ರಂಭೆ ಹೇಮದ ಬೊಂಬೆ ನರಸಿಂಹ ಕಾಣೆ ತಂಗಿ 4 ಕದ್ದು ಅಡ್ಡ ಬಿದ್ದನ ಕಣ್ಣ ಇರಿದ ಇವ ದಾರಕ್ಕ ಮುದ್ದು ಮುಖದ ಪ್ರಸನ್ನನಾದ ವಾಮನ ಕಾಣೆ ತಂಗಿ 5 ಆ ಮಾತೃ ದ್ರೋಹವ ಮಾಡಿದವ ಇವ ದಾರಕ್ಕ ಶಾಮ ಸಾರ್ವಭೌಮ ಪರಶುರಾಮ ಕಾಣೆ ತಂಗಿ 6 ಕಾಮಿನಿಯ ಪೋಗಿ ತಂದ ಭೀಮ ಇವ ದಾರಕ್ಕ ಕಾಮಿತಾರ್ಥವನೀವ ಶ್ರೀ ರಾಮ ಕಾಣೆ ತಂಗಿ 7 ಗೊಲ್ಲತೇರ ಗಲ್ಲವ ಪಿಡಿದ ಚೆಲುವ ಇವ ದಾರಕ್ಕ ಬಲ್ಲಿದ ಮಲ್ಲರ ಮರ್ದಿಸಿದಂಥ ಕಳ್ಳ ಕೃಷ್ಣ ಕಾಣೆ ತಂಗಿ 8 ತ್ರಿಪುರದೊಳು ಚಪಲಾಕ್ಷಿಯರ ವಿಪರೀತವ ಮಾಡಿದನಕ್ಕ ಅಪರಿಮಿತ ಮಹಿಮನಿವ ಚಪಲ ಬೌದ್ಧ ಕಾಣೆ ತಂಗಿ 9 ಕುದುರೆಯೇರಿ ಎದುರಿಗೆ ಬರುವ ಚದುರ ಇವ ದಾರಕ್ಕ ಮಧುವನಿಕ್ಕಿದ ಮಧುರಾಪುರದ ಚದುರ ಕಲ್ಕಿ ತಂಗಿ 10 ಮೂರ್ತಿ ಗೋವಿಂದ ಇವ ದಾರಕ್ಕ ನಂದನ ಕಂದ ಹೆಳವನಕಟ್ಟೆ ರಂಗ ಕಾಣೆ ತಂಗಿ11
--------------
ಹೆಳವನಕಟ್ಟೆ ಗಿರಿಯಮ್ಮ
ಮೆಚ್ಚಿದೆ ಯಾಕಮ್ಮ ಲಕ್ಕುಮಿದೇವಿ ಸಚ್ಚಿದಾನಂದಾತ್ಮ ಹರಿಯೆಂದರಿಯದಲೆ ಪ ರಕ್ಕಸಾಂತಕ ಹರಿಗೆ ಸೊಗಸಿನ ತಕ್ಕ ವಾಹನವಿಲ್ಲದಿದ್ದೊಡೆ ಹಕ್ಕಿಯ ಹೆಗಲೇರಿ ತಿರುಗುವ ಚಿಕ್ಕ ಬುದ್ಧಿಯ ಚಲುವ ಕೃಷ್ಣಗೆಅ.ಪ ನೀರೊಳು ಮುಳುಗಿ ಭಾರವಪೊತ್ತು ಧರಣಿಯ ಕೋರೆದಾಡೆಲಿ ತಂದ ಕ್ರೂರ ರೂಪನಿಗೆ ಮೂರಡಿ ಭೂಮಿಯ ಬೇಡಿ ಕ್ಷಿತಿಪರ ಕೊಂದು ನಾರು ವಸ್ತ್ರಗಳುಟ್ಟು ಸೀರೆ ಕದ್ದವಗೆ ಶೂರತನದಲಿ ತ್ರಿಪುರರಗೆದ್ದು ವಿ- ಹಾರ ಮಾಡ್ಡ ಏರ್ದ ಕುದುರೆಯ ಮಾರಪಿತ ಮಧುಸೂಧನನ ವ್ಯಾ- ಪಾರ ತಿಳಿಯದೆ ವಾರಿಜಾಕ್ಷಿ 1 ಹಾಸಿಕಿಲ್ಲದೆ ಹಾವಿನ ಮೇಲೆ ಮಲಗುವ ಹೇಸಿಕಿಲ್ಲದೆ ಎಂಜಲ್ಹಣ್ಣನೆ ಮೆಲುವ ದೋಷಕಂಜದೆ ಮಾವನ ಕೊಂದು ಮಧುರೆಲಿ ದಾಸಿ ಕುಬ್ಜೆಯ ಡೊಂಕು ತಿದ್ದಿ ಪರಿಮಳ ಪೂಸಿ ಸೋಸಿನಿಂದಲಿ ಕರಡಿ ಮಗಳನು ಯೋಚಿಸದೆ ಕೈಪಿಡಿದು ಸೌಳ- ಸಾಸಿರದ ಸತಿಯರನು ಕೂಡಿದ ವಾಸುದೇವನ ಮೋಸವರಿಯದೆ 2 ಮೋಸದಿಂದಲಿ ಬಂದು ಶಿಶುವನೆತ್ತಿದ ದೈತ್ಯ ದಾಸಿಯ ಕೊಂದ ಉದಾಸೀನದಿಂದ ಗ್ರಾಸಕಿಲ್ಲದೆ ಗೋಪೇರ ಮನೆಗಳ ಪೊಕ್ಕು ಮೀಸಲು ಬೆಣ್ಣೆ ಪಾಲ್ಮೊಸರನೆ ಸವಿದು ರಾಸಕ್ರೀಡೆಯ ವನಿತೆಯರ ಮನ ದಾಸೆ ಪೂರೈಸಿ ರಾತ್ರಿ ವೇಳದಿ ವಾಸುದೇವನು ಓರ್ವ ಸತಿಯೊಳು ಕ್ಲೇಶಪಡಿಸದೆ ಮೋಸವರಿಯದೆ3 ಅಖಿಳ ಮಹಿಮನೆನೆ ಊಳಿಗ ಮಾಡಬಹುದೆ ಚಂಡನಾಡುವ ನೆವದಿಂದ ಕಾಳಿಂಗನ ಮಂಡೆಯ ತುಳಿದು ನಾಟ್ಯವನಾಡಬಹುದೆ ಗಂಡುಗಲಿ ಅರ್ಜುನನು ರಥಕೆ ಬಂಡಿಬೋವನ ಮಾಡಬಹುದೆ ಪುಂಡಲೀಕನು ಇಟ್ಟೆಗೆಯ ಮೇ- ಲ್ಪಾಂಡುರಂಗ ನಿಲಿಸಬಹುದೆ4 ಕಮಲಾಕ್ಷ ಯಾಗಶಾಲೆಗೆ ಗೋಪರನು ಕಳುಹಿ ರಮೆಯರಸಗೆ ಬಹಳ್ಹಸಿವೆನುತಿರಲು ಕಮಲಾಕ್ಷನ ನುಡಿ ಗಮನಿಸದೆ ರುಷಿವರರಿಗೆ ಕಮಲ ಮುಖಿಯರೆಲ್ಲ ಪರಮ ಸಂಭ್ರಮದಿಂದ ಕಮಲನೇತ್ರಗೆ ವಿವಿಧ ಭಕ್ಷಗ- ಘೃತ ಪರಮಾನ್ನಗಳನು ಕಮಲನಾಭ ವಿಠ್ಠಲಗೆ ಅರ್ಪಿಸಿ ಶ್ರಮವ ಕಳೆದೈದಿದರು ಮುಕ್ತಿಯ 5 ಯಾಕೆ ಮೆಚ್ಚಿದೆಯಮ್ಮ ಲೋಕ ಸುಂದರಿಯೆಶ್ರೀ ಕಮಲಜಪಿತ ಲೋಕ ಮೋಹಕನ
--------------
ನಿಡಗುರುಕಿ ಜೀವೂಬಾಯಿ
ಯಾರವನು ಹೊರಗೆನಿಂತ ಬಾರಾನ್ಯಾಕವನು ಪ ನೀರಮುಳುಗಿ ಬಂದು ಘೋರಪರ್ವತ ತಂದು ಧಾರುಣಿಯನು ಕದ್ದ ದನುಜನ ಕೊಂದು ನರಹರಿ ರೂಪದಿ ತರಳಗೊಲಿದುಪುಟ್ಟ ಚರಣದಿಂ ಧರಣಿಯನಳೆದ ಮಹಾತ್ಮನೋ 1 ಕೊಡಲಿಯ ಪಿಡಿದು ತಾ ಬಿಡದೆ ಕ್ಷತ್ರಿಯರನ್ನು ಮಡುಹಿ ಬಂದವನಿವನೇನೋ ಮಡದಿಗಾಗಿ ದೊಡ್ಡಅಡವಿಯೊಳು ಮನೆಕಟ್ಟಿ ಬಿಡದೆ ಗೋಕುಲದಲ್ಲಿ ನೆಲೆಸಿರುವಾತನೋ 2 ಬೆತ್ತಲೆ ನಿಂತ್ಹತ್ತಿ ಮತ್ತೆಕುದುರೆಯ ಚಿತ್ತಬಂದಂತೆ ತಾ ತಿರುಗುವನೋ ಉತ್ತಮನಾದ ಶ್ರೀ ಪ್ರಾಣನಾಥವಿಠಲನು ಎತ್ತನೋಡಿದರು ಸುತ್ತುತ್ತಲಿರುವನು 3
--------------
ಬಾಗೇಪಲ್ಲಿ ಶೇಷದಾಸರು
ಯೋಗಿ ಎಂಬ ಆನೆ ಬಂದಿತಯ್ಯಆನೆ ಬಂದಿತು ಪ್ರಪಂಚ ಪೇಟೆಯತಾನೆ ಕೀಳುತ ತಳಪಟ ಮಾಡುತ ಪ ಪಾಷಗಳೆಂದೆಂಬ ಸರಪಳಿ ಹರಿದುಈಷಣಗಳು ಎಂಬ ಸಂಕೋಲೆ ಮುರಿದುದ್ವೇಷವೆನಿಪ ಗಾಡಿಕಾರರನರೆದುಕ್ಲೇಷವೆನಿಪ ಕಾವಲವರ ಜಡಿದು 1 ದಶವಾಯುಗಳೆಂಬ ದನಗಳನೋಡಿಸಿವ್ಯಸನ ಕುದುರೆಗಳ ಸೀಳಿ ಸೀಳಿಕ್ಕಿಹಸಿವು ತೃಷೆಗಳನು ಕಾಲೊಳಿಕ್ಕಿಕಸೆಕಸೆ ಅಂಗಡಿಗಳನು ತೂರಿಕ್ಕಿ2 ಬಹುಮತಗಳು ಎಂಬ ಮನೆಯನೆ ಕೆಡಹಿಇಹಪರ ವಾಸನೆ ಕೊಟ್ಟಿಗೆ ಕೊಡಹಿಮಹಾ ಅಭಿಮಾನದ ನಾಯಿಗಳ ಮುಡುಹಿಬಹು ಕಲ್ಪನೆಯ ಕುರಿ ಕೋಳಿಗಳ ಉಡುಹಿ3 ಬೋಧ ಲಹರಿಯಲಿ ತೂಗುತಜ್ಞಾನ ಸೊಕ್ಕಿನಲಿ ಕೆಕ್ಕರಿಸಿ ನೋಡುತ ತಾನೆ ತಾನಾಗಿ ತನ್ನ ಮರೆಯುತ 4 ಬೆಳಗುವ ಸುಷುಮ್ನ ಬಾಜಾರವಿಡಿದುಗೆಲುವಿನಲಿ ಭ್ರೂಮಧ್ಯ ಜಾಡಿನಲಿನೆಡೆದುತಿಳಿಗೊಳ ಸಹಸ್ರಾರದ ನೀರ ಕುಡಿದುಬಲು ಚಿದಾನಂದವೆಂಬ ಆನೆಯು ನಡೆದು 5
--------------
ಚಿದಾನಂದ ಅವಧೂತರು