ಒಟ್ಟು 88 ಕಡೆಗಳಲ್ಲಿ , 36 ದಾಸರು , 86 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

5 ತತ್ವವಿವೇಚನೆ371ಅಂಜನೆಸುತ ನಮೊ ಸ್ವಾಮಿಕಂಜಜಪದಪತಿ ಮೌಂಜಾಶ್ರಮಿ ಪ.ಪತಿತ ಪಾವನನಾಮಧೇಯ ಹನುಮಾಜೆÕಯಿಂದತೀತಾನಾಗತ ಅಜಾಂಡಜೆÕೀಯಾಮೃತ ಸಂಜೀವನಾದಿ ಚತುರೌಷಧ ತಂದೆಕ್ಷತಘಾತ ಪ್ಲವಗರ ಪ್ರತತಿ ರಕ್ಷಿಸಿದೆ 1ವ್ಯಾಘ್ರೇಶ್ವರಾಜಿತ ಸಮರ್ಥ ವಸುಧಾಹೃತಅಗ್ರಜಯಜ್ಞಾಧಿಕರ್ತಉಗ್ರ ಕೌರವಜನ ನಿಗ್ರಹ ಕೃಷ್ಣ ಮತಾಗ್ರಣಿ ಭೀಮ ಸಮಗ್ರ ಸುಜ್ಞಾನಿ 2ದುಷ್ಟೋಕ್ತಿ ಪೂರ್ವಪಕ್ಷಜಾರಿ ಭೇದೋಚ್ಚಾರಿವಿಷ್ಣುಪಕ್ಷ ಸಿದ್ಧಾಂತಸೂರಿಸೃಷ್ಟಿಲಿ ವರದ ವಾಸಿಷ್ಠ ಪ್ರಸನ್ವೆಂಕಟಾಧಿಷ್ಟನ ಪ್ರಿಯ ಮುನಿ ಶಿಷ್ಟರೊಡೆಯ ನೀ 3
--------------
ಪ್ರಸನ್ನವೆಂಕಟದಾಸರು
ಎನ್ನ ಪಾಲಿಸು ಪರಮಕಾಯ ರಘುರನ್ನ ರಾಮನ ಪ್ರಿಯ ಗುರುಮಧ್ವರಾಯ ಪ.ಅಂಜನಿ ಆತ್ಮದಲಿ ಬಂದು ರಾಮನಪಾದಕಂಜವಿಡಿದೆ ಕಡಲ ಲಂಘಿಸಿದೆ ಗೋಷ್ಪದದಿಪಂಜು ಬೆಳಗಿದೆ ನಿಶಾಚರನ ಪಟ್ಟಣವಳಿದೆಕಂಜಾಕ್ಷಿಯಳ ತುಷ್ಟಿಗೈದೆ ಗಡಾಸಂಜೀವ ತಂದು ಕಪಿಬಲವ ರಕ್ಷಿಸಿದೆ 1ಕುರುಕುಲಾಧಮನು ಬಲುಸೊಕ್ಕಿ ಸಂಗರಭಟರನೆರಹಿ ಪಾರ್ಥರ ಬಲವ ಗೆಲುವೆನೆಂದವನ ಭರಮುರಿದೆ ಮಹರಥಿಕರೆದೆ ಹರಿದೆ ಅಸಹಾಯ ಶೂರಸರಿಯಾರು ನಿನಗಸಮಧೀರ ಭಾಪುಕರುಣಾಸಾಗರ ಉದಾರ ಅಜಪದದಧಿಕಾರ 2ಏಕವಿಂಶತಿಮಾಯಿ ರಚಿತ ಭಾಷ್ಯವ ಜರಿದೆಶ್ರೀಕಾಂತನ ನಾಮಾಮೃತವ ಭಕ್ತರಿಗೆರೆದೆಭೂಕನಕ ವಧು ವಿಷಯಕಾಂಕ್ಷೆಗಳ ಮೇಲೊದೆದೆಲೋಕಕೊಬ್ಬನೆ ಗುರುವೆ ಮೆರೆದೆ ವಿಶ್ವೇಶ ಪ್ರಸನ್ನವೆಂಕಟೇಶನಂಘ್ರಿವಿಡಿದೆ 3
--------------
ಪ್ರಸನ್ನವೆಂಕಟದಾಸರು
ಕೃಷ್ಣೇತಿ ಮಂಗಳಂ ದಿವ್ಯನಾಮ ಪಇಷ್ಟರಿಂದಲಿ ಭವಬಂಧನನಷ್ಟವಾಗಿ ಹೋಹುದೋ ಅ.ಪನಾರದಮುನಿ ತಾನು ನರಕ ಪಟ್ಟಣಕೆ ಹೋಗಿವಾರೀಜನಾಭ ಎಂದು ಒದರಿದಾಗ ||ಘೋರ ಪಾತಕವೆಲ್ಲ ದೂರವಾಗಿ ಹೋಯ್ತುಸೂರೆಯಾಯಿತು ಸ್ವರ್ಗಲೋಕವೆಲ್ಲ 1ಅಜಮಿಳನು ಈ ನಾಮ ಅಂತ್ಯಕಾಲಕೆ ಸ್ಮರಿಸೆನಿಜಪದವಿಯೈದಿದನು ನಿಮಿಷದಲಿ ||ಭುಜಗಭೂಷಣನು ತಾ ಶ್ರೀರಾಮನಾಮವನಿಜಕಾಂತೆಯನು ಕರೆದು ಉಪದೇಶವಿತ್ತ 2ಪಂಚಪಾಂಡವರನು ಪರಿಪಾಲಿಸಿತು ನಾಮಪಾಂಚಾಲೀ ಮೊರೆಕೇಳಿ ಪೊರೆಯಿತು ನಾಮ ||ವಂಚನೆ ಮಾಡಿ ಕೌರವರ ಮಡುಹಿ ನಿ -ಶ್ಚಿಂತೆಯಲಿ ಪಾಂಡವರ ಪಟ್ಟಗಟ್ಟಿದ ನಾಮ 3ಸರಸಿಯೊಳಗೆ ಮುಳುಗಿ ಅರಿಯ ಬಾಧೆಗೆ ಸಿಲುಕಿಕರಿರಾಜ ಹರಿಯೆಂದು ಮೊರೆಯಿಡಲು ||ತ್ವರಿತದಿಂದಲಿ ಬಂದು ಕರಿಯನುದ್ಧರಿಸುತಕರಿರಾಜವರದನೆಂದೆನಿಸಿಕೊಂಡ ನಾಮ 4ಧ್ರುವ ತನ್ನ ತಂದೆ ತೊಡೆಯ ಮೇಲೇರಲು ಪೋಗೆಅವನ ಮಲತಾಯಿ ಗರ್ಜಿಸಿದಳಾಗ ||ಧ್ರುವ ಸುಖಬಿಟ್ಟು ವನಕೆ ಪೋಗಿ ತಪ ಮಾಡಿಸವಿಯಾದಚಲಪದವ ಪಡೆದನಾಗ 5ಹಿರಣ್ಯಕಶಿಪು ತನ್ನ ಮಗನ ಬಾಧೆಯ ಪಡಿಸೆಗಿರಿಯ ಶಿಖರದಿಂದೀಡಾಡಲು ||ನರಹರೆ ನರಹರೆ ರಕ್ಷಿಸೆಂದನ್ನಲುನರಸಿಂಹ ರೂಪದಿಂದವನ ಪಾಲಿಸಿದ 6ಕಂದನ ಅಪರಾಧವ ಕೇಳದೆ ನೃಪನು ತಾನಂದತಿ ದಾರುಣ ಕಡಹದೋಳು ಕೆಡಹೆ ||ಅಂದು ಸುಧನ್ವ ಶ್ರೀಕೃಷ್ಣನೆಂದೆನಲಾಗಿಬೆಂದು ಕಂದಿವ ಎಣ್ಣೆ ತಣ್ಣೀರಾಯಿತು 7ಅಸುರ ಬಾಧೆಗೆ ಸಿಲುಕಿ ಅಶೋಕವನದಲಿಶಶಿಮುಖಿ ಬೀಜಮಂತ್ರವ ಜಪಿಸೆ ||ಅಸುರನ ಕೊಂದು ಅಶೋಕವನವ ಬಿಡಿಸಿವಸುಧೀ ಸುತೆಯ ಸಲಹಿದ ರಾಮನಾಮ 8ಪರಿಪರಿ ಭಕ್ತರನು ಪಾಲಿಸಿತು ಈ ನಾಮಪರಮ ಮಂಗಲವು ಪಾವನವು ಈ ನಾಮ ||ಸುರರು ಬ್ರಹ್ಮಾದಿಗಳು ಸ್ರೋತ್ರ ಮಾಡುವ ನಾಮಧರೆಯೊಳುಸಿರಿಪುರಂದರ ವಿಠಲ ನಾಮ9
--------------
ಪುರಂದರದಾಸರು
ನೋಡಿರೆ ಯಶೋದೆಯ ಪುಣ್ಯಪಡೆದಿಹ್ಯಳೆಂಥ ಮಾನ್ಯ ಪಪೊಡವಿ ಈರೇಳನ್ನು ಒಡಲೊಳಿಟ್ಟವನನ್ನುತೊಡೆಮೇಲಾಡಿಸುವಳು ಅ.ಪವಿಲಸಿತಮಹಿಮನ ಕಳೆಯ ತಿಳಿಯಲು ವೇದಬಲುವಿಧ ಪೊಗಳುತ ನೆಲೆಯುಗಾಣದಘನಕಳವಳಗೊಳುತಿಹ್ಯವಭವನ ದೆಸೆಯಿಂಸುಲಭದೆತ್ತಿ ತನ್ನ ಮೊಲೆಯನುಣಿಸುವಳೀಕೆ 1ಭುಜಗಭೂಷನು ತನ್ನ ನಿಜಪದವನುದಿನಭಜಿಸಿ ಬೇಡಲು ಕಾಣರಜಸುರಮುನಿಗಣಸುಜನಗುಣಾಂತರಂಗ ತ್ರಿಜಗವ್ಯಾಪಕನನಿಜವನು ಮನದಣಿ ಕಂಡು ಹಿಗ್ಗಿದಳೀಕೆ 2ಸೀಮರಹಿತಮಹಿಮ ನಾಮರೂಪಿಲ್ಲದ ನಿಸ್ಸೀಮ ಸುಗುಣಸುಖಧಾಮ ಭೂಮಿಜೆಪತಿಸ್ವಾಮಿ ಶ್ರೀರಾಮನ ವಿಮಲದಾಟದಲಿಭೂಮಿಯೊಳ್ಮಿಗಿಲಾದಾನಂದೊಳಿಹÀಳೀಕೆ 3
--------------
ರಾಮದಾಸರು
ಪ್ರಥಮ ಕೀರ್ತನೆಸತ್ಯ ಬೋಧಾರ್ಯರ ವೃತತಿಜಾಂಘ್ರಿಗಳಲ್ಲಿಸತತ ಶರಣಾದೆ ನಾಹಿತದಿ ಪಾಲಿಪರುಪ್ರತತ ಭೂಮಾದಿ ಗುಣಸಿಂಧು ಪುರುಷೋತ್ತಮನವಿತತ ಮನದಲಿ ಧ್ಯಾನಿಸಿ ಒಲಿಸಿಕೊಂಡ ಪಹಂಸನಾಮಕ ವಿಷ್ಣು ವನರುಹಾಸನಸನಕದೂರ್ವಾಸಮೊದಲಾದಗುರುವಂಶಜಾತದಶಪ್ರಮತಿಸರಸಿಜನಾಭನರಹರಿತೀರ್ಥಬಿಸಜಚರಣಂಗಳಲಿ ಸತತ ನಾ ಶರಣು |1ಮಾಧವಅಕ್ಷೋಭ್ಯ ಜಯವಿದ್ಯಾಧಿರಾಜ ರಾ-ಜೇಂದ್ರ ಕವೀಂದ್ರವಾಗೀಶರಾಮಚಂದ್ರವಿಭುದೇಂದ್ರ ವಿದ್ಯಾನಿಧಿಗಳು ಈ ಸರ್ವಸತಪೋನಿಧಿ ಯತಿವರ್ಯರಿಗೆ ನಮಿಪೆ 2ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯತತ್ವಜÕ ರಘೂತ್ತಮಾರ್ಯರಿಗೆವೇದವ್ಯಾಸ ಯತಿಗಳಿಗೆ ವಿದ್ಯಾಧೀಶರಿಗೆವೇದನಿಧಿಗಳಿಗೆ ನಾ ಬಾಗುವೆ ಶಿರವ 3ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಭಿನವ ಸತ್ಯ ಪೂರ್ಣರಿಗೆ ನಮಿಪೆಸತ್ಯವಿಜಯರಿಗೆ ಸತ್ಯಪ್ರಿಯ ಸತ್ಯಬೋಧರಿಗೆಭೃತ್ಯನಾ ಎನ್ನ ವಂದನೆಗಳರ್ಪಿಸುವೆ4ಸತ್ಯಬೋಧರ ಮಹಿಮೆ ಬಹು ಬಹು ಬಹುಳವುವೇದ್ಯ ಎನಗೆ ಅತಿ ಸ್ವಲ್ಪ ಮಾತ್ರಆದರಲ್ಲೂ ಬಿಟ್ಟದ್ದು ಬಹು ಇಲ್ಲಿ ಪೇಳಿಹುದುಅತಿ ಕಿಂಚಿತ್ ಅಣುಮಾತ್ರ ಸುಜನರು ಲಾಲಿಪುದು 5ರಾಮಾಚಾರ್ಯರು ಸಣ್ಣ ವಯಸ್ಸಿನವರುನೇಮದಿಂದಾಶ್ರಮೋಚಿತ ಕರ್ಮಪರರುರಾಮ ಹಯಶೀರ್ಷ ನರಸಿಂಹನ ಗುಣರೂಪಸಮ್ಮುದದಿ ಜ್ಞಾನಭಕ್ತಿಯಲಿ ಧ್ಯಾನಿಪರು 6ಈ ರಾಯಚೂರು ರಾಮಾಚಾರ್ಯರೇ ಸತ್ಯಪ್ರಿಯಗುರುಗಳ ಸಂಸ್ಥಾನ ಪೀಠಕ್ಕೆ ಬಂದುಸೂರಿವರ್ಯರು ಸತ್ಯಬೋಧ ತೀರ್ಥರು ಎಂದುಧರೆಯಲ್ಲಿ ಪ್ರಖ್ಯಾತರಾಗಿಹರು ಕರುಣಿ 7ಬಾದರಾಯಣಮಾಧ್ವ ಸಚ್ಛಾಸ್ತ್ರ ಬೋಧಿಸಿಅಧಿಕಾರಿಗಳ ಉದ್ಧರಿಸಿ ಅಲ್ಲಲ್ಲಿವೇದ ವಿರುದ್ದ ದುರ್ವಾದಗಳ ಕತ್ತರಿಸಿಮೇದಿನಿಸಜ್ಜನರ ಪೊರೆದಂಥ ಧೀರ 8ಪೀಠ ಆರೋಹಿಸಿದ ಪೂರ್ವಗುರುಗಳ ಪೋಲುಮಠಕ್ಕೆ ಮಾನ್ಯಗಳ ಅಭರಣಗಳನ್ನಪಟ್ಟಣ ಪ್ರಮುಖರು ಧನಿಕರು ಭೂಪಾಲರುಕೊಟ್ಟದ್ದು ಅಲ್ಲಲ್ಲಿ ಸ್ವೀಕರಿಸಿದರು 9ಸತ್ಯಪ್ರಿಯರಾರಾಧನೆಗಾಗಿ ಬಂದಿದ್ದಸತ್ಯಬೋಧರ ಮಹಿಮೆಯನ್ನು ಲೆಕ್ಕಿಸದೆಬಂಧಿಸಿದ ಶ್ರೀಮಠವ ರಾಮೇಶ್ವರ ರಾಜಬಂತು ಸೈನ್ಯವು ತಿರುಚಿನಾಪಳ್ಳಿಯಿಂದ 10ತಿರುಚಿನಾಪಳ್ಳಿಯಿಂದ ಜಾನೋಜಿರಾವ್ ನಿಂಬಳ್ಕಾರನು ಸೈನ್ಯವನು ಕಳುಹಿಸಿದನುವಿರೋಧ ಬಿಡುಗಡೆ ಮಾಡಿ ಆ ರಾಜನ್ನ ಶಿಕ್ಷಿಸಿಗುರುಗಳ ಕರೆತಂದ ತಿರುಚಿನಾಪಳ್ಳಿಗೆ 11ತಿರುಚಿನಾಪಳ್ಳಿಯ ಮ್ಲೇಛ್ಬರಾಜನು ಈಗುರುಗಳ ಪ್ರಭಾವವ ಅರಿಯದೆ ಮೌಢ್ಯದಲಿವರಧನಾಪಹಾರಿಯು ಎಂದು ಆಪಾದಿಸಿನಿರೋಧಿಸಿದ ಶೋಧನೆ ಮಾಡುವ ನೆವದಿ 12ಪರಿಶೋಧನೆಯಲ್ಲಿ ಮೈಲಿಗೆ ಆಗದಿರೆಗುರುಗಳು ರಾಮದೇವರ ಪೆಟ್ಟಿಗೆಯತಿರುಕಾಟ್ಟು ಪಳ್ಳೀಗೆ ಕಳುಹಿಸಿ ಉಪೋಷಣದಿಹರಿಯ ಮಾನಸ ಪೂಜೆ ಮಾಡುತ ಕುಳಿತರು 13ಜಾನೋಜಿರಾಯನು ವಾದಿಸೆ ಸುಲ್ತಾನತನ್ನ ಸರ್ಕಾರ ಶೋಧಕರ ಕಳುಹಿಸಿದತನ್ನ ಹಿರಿಯರ ಮತ್ತು ಇತರ ರಾಜರುಗಳಚಿಹ್ನೆ ಮುದ್ರಿತ ಒಡವೆ ಮಾತ್ರವೆ ಕಂಡ 14ವಿರೋಧ ನೀಗಿಸಿ ನಿಂಬಳ್ಕರನ ಕೈಯಿಂದಹರಿಪೂಜೆಗುರುಪೂಜೆ ಮಾಡಿಸಿ ಕಾಣಿಕೆಯುಗುರುತರದಿ ಅರ್ಪಿಸಿದ ಆ ಮ್ಲೇಛ್ಭರಾಜನುಗುರುಸತ್ಯಬೋಧರ ಕೀರ್ತಿವರ್ಧಿಸಿತು15ತಿರುಕಾಟ್ಟುಪಳ್ಳಿಯಿಂದಲಿ ಪೂಜೆ ಪೆಟ್ಟಿಗೆಯತರಿಸಿ ಹರಿಪೂಜೆಯ ಮಾಡಿ ಮುದದಿಂದಮರ್ಯಾದೆ ಕಾಣಿಕೆಗಳಕೊಂಡು ದಿಗ್ವಿಜಯಚರಿಸಿದರು ಹರಿಗುರು ತೀರ್ಥಸ್ಥಳಗಳಿಗೆ 16ಮಾರ್ಗದಲಿ ತಂಜಾವೂರಿನ ರಾಜನುಶ್ರೀ ಗುರುಗಳಿಗೆ ಸೇವೆಸÀಲ್ಲಿಸಿದನಗರದಲಿ ಪ್ರಮುಖಪಂಡಿತಗೋಸಾಯಿಯನಿಗಮಾಂತ ವಾದದಲಿ ಸೋಲಿಸಿದರು 17ಕುಂಭಕೋಣದಿ ಬ್ರಾಹ್ಮಣರ ಬೀದಿಯಲ್ಲಿಗಂಭೀರತರ ದೊಡ್ಡ ಮಂಟಪಕಟ್ಟಿಸಂಭ್ರಮದಿ ಹರಿಪೂಜೆಗೈದು ವಿದ್ವಜ್ಜನಸಭೆಯಕೂಡಿ ವಾಕ್ಯಾರ್ಥ ನಡೆಸಿದರು 18ಶ್ರೀರಂಗ ಕ್ಷೇತ್ರ ತಂಜಾವೂರು ತರುವಾಯಸಾರಂಗಪಾಣಿ ಕುಂಭೇಶ್ವರ ಕ್ಷೇತ್ರಪರಿಕಲ್ಲು ತಿರುಕೋಯಿಲೂರು ಮಾರ್ಗದಿ ಬಂದುಸೇರಿದರು ತಿರುಪತಿ ವೇಂಕಟಾಚಲಕ್ಕೆ 19ಶ್ರೀರಂಗನಾಥನಿಗೆ ಶ್ರೀರಂಗನಾಯಕಿಗೆಕ್ಷೀರಾಬ್ಧಿಯಲಿತೋರ್ದ ಧನ್ವಂತರಿಗೆನೀರುಮಧ್ಯದಿ ಇರುವ ಜಂಬುಕೇಶ್ವರನಿಗೆಭಾರಿ ಪುಣ್ಯದೆ ಕಾವೇರಿಗೆ ನಮಿಪೆ 20ಶಾಙ್ರ್ಗಧರಚಕ್ರಧರಕುಂಭೇಶ್ವರಅಂಬಮಂಗಳನಾಯಕಿ ವಿಜಯೀಂದ್ರರಿಗೆನಾಗೇಶ್ವರನಿಗೆ ವಿದ್ಯುಪುರಿ ಶ್ರೀಶನಿಗೆಭೃಗುಸುತಪತಿ ಶ್ರೀನಿವಾಸನಿಗೆ ನಮಿಪೆ 21ಪರಿಕಲ್ಲು ಎಂಬುವ ಗ್ರಾಮದಲಿ ನರಸಿಂಹಶ್ರೀರಮಾಪತಿ ಇಹನು ಸರ್ವೇಷ್ಟದಾತಪರಿಪರಿ ಭಕ್ತರ ಪೀಡೆಗಳ ಪರಿಹರಿಪಶರಣಾದೆ ಶ್ರೀ ಲಕ್ಷ್ಮಿ ನರಸಿಂಹನಲ್ಲಿ 22ತಿರುಕೋಯಿಲೂರಲ್ಲಿ ಮೂರ್ಲೋಕ ಅಳೆದವನಭಾರಿಆಲಯಉಂಟು ಶಿವಕುಮಾರರಿಗೂಪಾತ್ರ ವಿಶಾಲವು ದಕ್ಷಿಣ ಪಿನಾಕಿನಿಯತೀರದಲಿ ಶ್ರೀರಘೂತ್ತಮರು ಕುಳಿತಿಹರು 23ಪಿನಾಕಜಾ ಈ ಪಿನಾಕಿಯಲ್ಲಿಹನುಅನಿಮಿತ್ತ ಬಂಧುಶ್ರೀಕೇಶವ ಸರ್ವೇಶಸ್ನಾನ ಜಪದಾನಗಳು ಪಣ್ಯಪ್ರದತತ್ತೀರವನದಲ್ಲಿ ಶ್ರೀ ರಘೂತ್ತಮರ ವೃಂದಾವನ 24ಶ್ರೀಯುತ ತ್ರಿವಿಕ್ರಮ ವಿಶ್ವರೂಪಗೆ ನಮೋಕಾತ್ಯಾಯನಿ ಶಿವಗೂ ಸ್ಕಂಧವಲ್ಲಿಗೂಕಾಯವಾಕ್ಕು ಮನದಿ ಟೀಕಾಭಾವಬೋಧರಿಗೂಕಾಯಮನ ಶುದ್ಧಿಕರ ಪಿನಾಕಿನಿಗೂ ನಮಿಪೆ 25ತಿರುಕೋಯಿಲೂರಿಗೆ ಕ್ರೋಶತ್ರಯದೊಳಗೇವೆವೀರ ಚೋಳಪುರದಲ್ಲಿ ಶ್ರೀ ಸತ್ಯನಾಥತೀರ್ಥರು ಅಭಿನವ ಚಂದ್ರಿಕಾಕಾರರುಇರುತಿಹರು ವೃಂದಾವನದಲ್ಲಿ ವಂದೇ 26ತಿರುಕೋಯಿಲೂರಿಂದ ತಿರುವಣ್ಣಾಮಲೆಯೆಂಬಅರುಣಾಚಲಕೆ ಪೋಗಿ ಅಲ್ಲಿ ರಾಜಿಸುವಕರುಣಾಬ್ಧಿ ಗಿರಿಜಾರಮಣನ್ನ ವಂದಿಸಿತಿರುಪತಿಗೆ ಹೊರಟರು ಗುರುಸರ್ವಭೌಮ 27ಹೇಮಗರ್ಭನತಾತಶ್ರಿಪತಿ ಜಗನ್ನಾಥಆಮಲಗುಣಗಣಸಿಂಧು ಪ್ರಸನ್ನ ಶ್ರೀನಿವಾಸರಾಮ ಹಯಮುಖವ್ಯಾಸನೃಹರಿಗೆ ಪ್ರಿಯತಮರೆನಿಮ್ಮಲ್ಲಿ ಶರಣಾದೆ ಸತ್ಯಬೋಧಾರ್ಯ 28 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಭಜಿಸುವೆ ಗಜಮುಖ ಸುಜನರಪಾಲನಿಜಮತಿ ಕರುಣಿಸು ನೀ ಪತ್ರಿಜಗದಿ ವಂದಿತ ನಿಜಪದದಾತನಿಜಮತಿದಾಯಕ ದ್ವಿಜಸುರ ಸೇವಿತ ಅ.ಪವಿಘ್ನಮೂರುತಿ ಎನ್ವಿಘ್ನಗಳನು ಕಡಿದಜ್ಞಾನ ದೂರಮಾಡೋಸುಜ್ಞಾನ ಪಾಲಿಸಿ ಶೀಘ್ರದಿ ಎನ್ನನುಪ್ರಾಜÕರೊಳಾಡಿಸು ಪ್ರೌಢಗಣಪತೆ 1ಇಂದುಎನ್ನ ಮಂದಮತಿತನ ಛಿಂದಿಸೋಸುಂದರಮೂರುತಿಯೆವಂದಿಸಿ ಬೇಡುವೆ ಕುಂದದ ವರಕೊಡುಚಂದ್ರ ಚೂಡಸುತಭಾನುಕೋಟಿತೇಜ2ವಿಮಲಗುಣಗಣ ಹಿಮಗಿರಿಜೆಯ ಕಂದಸುಮನಸರೊಂದಿತನೆಅಮಿತಮಹಿಮ ಶ್ರೀರಾಮ ಕರುಣಾಪಾತ್ರವಿಮಲಮತಿಯ ದಯಪಾಲಿಸಭವ 3
--------------
ರಾಮದಾಸರು
ಭಳಿ ಭಳಿರೆ ಭಳಿರೆ ಹನುಮಭಳಿ ಭಳಿರೆ ಋಜುನಿಕರ ಮಕುಟಮಣಿ ಪ.ಅಂಜನಿಜಠರಸಂಜನಿತಪ್ರಾಜÕಮೌಂಜಿಯುತಕೋದಂಡಧೃತಕರಕಂಜನೆದುರಲಿ ಪ್ರಾಂಜಲಿತ ಬಹುಭಕುತಿ ಅಭಿನಯಅಚ್ಛಿನ್ನ ಅಚ್ಚಿನೊಳು ಶುಭಚಿಹ್ನಪಾವನ್ನಗುಣರನ್ನ ಪರಿಪೂರ್ಣಅ.ಪ.ತಾಟಕಾಂತಕ ಭಟರೊಳು ನೀಮೀಟೆನಿಸಿ ಧೀಂಕಿಟ್ಟು ಶರಧಿಯದಾಂಟಿದವನಿಜೆ ತೋಷಕಾರಿ ಅಶೋಕವನಹಾರಿಕೋಟಿ ಕೋಟಿ ನಿಶಾಟ ಹೃದಯಸ್ಫೋಟಕಕ್ಷಯ ಪಾಟವಕರಿತ್ತಟಕೇಸರಿಕಟಿತಟದಿ ಕರವಿಟ್ಟ ಹನುಮದಿಟ್ಟ ವಿಕಟ ಖಳಕಳ ಪಟಾರ್ಭಟಪಟು ಹರಿದ್ವಿಟ್ಟದ್ವಿಟ್ಟು ಚಟುಲವಟು 1ವೀರ ಸಮೀರಕುಮಾರ ಪಾರಾವಾರ ಚರಿತ ಮಾರಜಿತಘನವಾರಿಜೋದ್ಭವಶರಕೆ ಮನ್ನಿಸಿದೇರಿದೌದಾರಿಈರೈದು ಮುಖದವನ ಪುರಪ್ರಸರಾಗಾರವನುರುಹಿ ರಘುಜನಚಾರುಚರಣವ ಕಂಡ ಪ್ಲವಗಪ್ರಚಂಡಶುಭತುಂಡಬಾಲದಂಡಅಗಣಿತಲೆಂಡರ ಖಂಡಪುಂಡರಗಂಡಗಂಡಭೈರುಂಡುದ್ದಂಡ2ಜೀವಜಾಲರ ಜೀವ ವಿಪ ಮಹಾದೇವ ಮುಖ್ಯರ ದೇವ ಚತುರ್ದಶಭುವನಾಶ್ರಿತ ಭೂತಭರ್ಗಸದಾವಿರತಿಭರಿತಾಆವಜನುಮಜ್ಜನುಮ ಎನಗೆನೀ ಒಡೆಯನಾಗ್ಯಾಳುತ ನನಗೀವುದೆಲೆಗುರುಪರಮಭಾಗವತಾರ್ಯ ಆಚರಿಯಹರಿಯ ಕಾರ್ಯಕಕ್ಕರದ ಹಿರಿಯಪರಮವೀರ್ಯಾಚ್ಚರಿಯ ಸಚ್ಚರಿಯ3ಹರಿಸೇವ್ಯಂಗೀಕರಿಸಿ ಒಡನವತರಿಸಿ ಆಜÕಂವೆರಸಿ ಅಟ್ಟಿದಹರಸಿ ಮದಮತ್ತರಿ ಸಮೂಹ ಭಯಹರಿಸ್ಯಭಯ ಧರಿಸಿಹರಿಶುಭಚರಣ ಸರಸಿಜದಿ ಶಿರವಿರಿಸಿ ಸುಗಿರೋಚ್ಚರಿಸಿ ಅಖಿಳೊಪ್ಪಿರಿಸಿ ವಿಷಯ ಸ್ಪರ್ಶವಿಲ್ಲದ ಅರಸ ನೀನೆ ಕಣಾ ಜಾಣರೊಳು ಜಾಣ ಪ್ರಾಣಮುಖ್ಯಪ್ರಾಣಕೇಣಿಗರಗಂಟಲಗಾಣ ಪ್ರವೀಣ ಹನುಮ4ವಾಸವಾರಿಯ ಘಾಸಿಗಂದು ಕಪೀಶರಳಿದಿರಲಾಸಮಯದೊಳೌಷಧವ ತಂದಾಸಮರ್ಥರ ಪೊರೆದ ಕಪಿವರದಶ್ರೀಶ ವರದ ಪ್ರಸನ್ನವೆಂಕಟಾಧೀಶ ಭೃತ್ಯೋಲ್ಲಾಸ ಅಜಪದಧೀಶ ಮೂರವತಾರಿ ಸುಖಕಾರಿ ಸದಾಶೂರಿ ಸಮೀರ ಕುಮಾರ ಭಾರತ ಧೀರಸಾರಯಂತ್ರೋದ್ಧಾರ ತತ್ವವಿಚಾರ5
--------------
ಪ್ರಸನ್ನವೆಂಕಟದಾಸರು
ಮಂತ್ರ ದೊರಕಿತು ನಾಮ ಮಂತ್ರ ದೊರಕಿತು |ಯಂತ್ರವಾಹಕನಾರಾಯಣನಪಅಂತರಂಗದಿ ಜಪಿಸುವಂಥ ಅ.ಪಆಶೆಯಲ್ಲಿ ಬೀಳಲಿಲ್ಲ ಕ್ಲೇಶಪಟ್ಟು ಬಳಲಲಿಲ್ಲ |ವಾಸುದೇವಕೃಷ್ಣನೆಂಬ ಶಾಶ್ವತದೀ ದಿವ್ಯ ನಾಮ1ಅರ್ಥ ವೆಚ್ಚವಾಗಲಿಲ್ಲ, ಕಷ್ಟಪಟ್ಟು ಬಳಲಲಿಲ್ಲ |ಭಕ್ತಿಯಿಂದ ಭಜಿಸಿ ಮಹಾಮುಕ್ತಿ ಪದವಸೇರುವಂಥ 2ಹೊದ್ದಿದ ಪಾಪವೆಲ್ಲ ಕಳೆದು, ಉದ್ಧಾರವಾಯಿತು -ಕುಲಕೋಟಿಯು |ಮುದ್ದು ಕೃಷ್ಣನ ದಿವ್ಯನಾಮ ವಜ್ರಕವಚ ಹೃದಯದಲ್ಲಿ 3ಹಾಸಬಹುದು ಹೊದೆಯಬಹುದು, ಸೂಸಿಒಡಲ ತುಂಬಬಹುದು |ದಾಸರನ್ನು ಬಿಡೆದೆ ಪೊರೆವ ಶ್ರೀಶನೆಂಬ ದಿವ್ಯ ನಾಮ 4ಒಂದುಬಾರಿಸ್ತುತಿಸಿದರೆ ಒಂದು ಕೋಟಿ ಜಪದಫಲವು |ಇಂದಿರೇಶ ಶ್ರೀಪುರಂದರವಿಠಲನೆಂಬ ದಿವ್ಯನಾಮ5
--------------
ಪುರಂದರದಾಸರು
ಯದುವೀರ ಒದಗೆನ್ನ ನಾಲಿಗೆಗೆಉದಯಾದಿ ಅಸ್ತಾಂತ ಆವಾವಾಗೆ ಪ.ನಿನ್ನ ನಾಮದ ಸ್ಮರಣೆಯೆ ಶುಭಕರ್ಮವುಉನ್ನತ ಸಂಕೀರ್ತನೆ ಶತಕ್ರತುವುಪುಣ್ಯಗಂಗಾಸ್ನಾನದ ಫಲಕಧಿಕವುಘನ್ನ ಜಪದ ಬೀಜವೆÉ ನಾಮವು 1ಬಂಗಾರದಿಳೆಯಳೆದೊಲಿದೀವ ದಾನದಿಹಿಂಗದೆ ಉಭಯಸ್ಯ ಗೋಶತದಿಶೃಂಗಾರ ಕೋಟಿ ಕನ್ಯಾದಾನಕಧಿಕವುಮಂಗಳಮಹಿಮ ಮುಕುಂದನ ನಾಮವು 2ಧರ್ಮಾರ್ಥ ಕಾಮಮೋಕ್ಷಗಳ ಮೂಲವಿದೆಂದುನಿರ್ಮಲಶ್ರುತಿಸಾರುತಾವೆಂದುಮರ್ಮವರಿತು ನಾಮ ನಂಬಿದೆ ಶೇಷಾದ್ರಿಯಹಮ್ರ್ಯನಿಲಯ ಪ್ರಸನ್ವೆಂಕಟಯ್ಯ 3
--------------
ಪ್ರಸನ್ನವೆಂಕಟದಾಸರು
ಲಿಂಗ ಬಂದ ನೋಡೊ ಶಂಕರ ಲಿಂಗ ಬಂದ ನೋಡೊ |ಅಂಗಜನುರುಹಿದ ಮಂಗಳ ಮೂರುತಿ |ತಿಂಗಳ ಸೂಡಿದ ಕಂಗಳ ಮೂರುಳ್ಳಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಸುರಗಂಗಾಧರನೂ ಪಾರ್ವತಿವರ ಪರಮೇಶ್ವರನೂ |ಪರಮಪುರುಷಪರಾತ್ಪರಪರತರ | ಸ್ಥಿರಚರವಣು ತೃಣ ಭರಿತ ಸದಾಶಿವ1ಗಜಚರ್ಮಾಂಬರನೂಪುರಹರಭುಜಗಭೂಷಹರನೂ | ಅಜಸುರ ವಂದಿತತ್ರಿಜಗವ್ಯಾಪಕ |ಸುಜನರಿಗಿತ್ತ ಸುನಿಜಪದ ಮಹಘನ2ಆರು ಚಕ್ರ ಮೀರಿ ಸಹಸ್ರಾರ ಮನೆಯನ್ನೇ ಸೇರಿ |ಸಾರಾಸಾರ ವಿಚಾರ ರಹಸ್ಯವ-ಪಾರಪರಾತ್ಪರಗುರುತರ ಶಂಕರ3
--------------
ಜಕ್ಕಪ್ಪಯ್ಯನವರು
ಶ್ರೀ ಸೀತಾಪತಿದಾಸವರ್ಯ ಜೀ-ವೇಶ ನಿಜ ವಿಲಾಸ ಪ.ಭಾಸುರಮಣಿಗಣಭೂಷಣ ದಿತಿಸುತ-ಭೀಷಣ ಸಜ್ಜನಪೋಷಣ ಕಪಿವರ ಅ.ಪ.ಕಂಜಸಖೋಪಮ ಕಮಲಾನನಾನತಸಂಜೀವನ ಹನುಮಾಮಂಜುಳ ವಜ್ರಶರೀರ ವೀರ ಹರಿ-ರಂಜನಾಂಜನಾಸುತ ಸದ್ಗುಣಯುತ 1ನಿಗಮಾಗಮ ಪಾರಂಗತ ರಾಮಾ-ನುಗ ಪಾವನರೂಪಭಗವಜ್ಜನ ಭಾಗ್ಯೋದಯಭಾರತಿದೃಗುಚಕೋರಚಂದ್ರಮ ತ್ರಿಗುಣಾತ್ಮಕ 2ಅಜಪದನಿಯತ ಭೂಭುಜಪತಿ ಪಾಂಡುತ-ನುಜ ಸುರವ್ರಜವಿನುತಕುಜನಧ್ವಾಂತನೀರಜಸಖ ಗರುಡ-ಧ್ವಜಶರಣ್ಯ ಶಾಶ್ವತ ತ್ರಿಜಗನ್ಮಯ 3ವರಕಾರ್ಕಳಪುರಗುರುವೆಂಕಟಪತಿಚರಣಾಗ್ರೇ ವಿರಾಜಹರಿಲಕ್ಷ್ಮೀನಾರಾಯಣ ನಿಜಪದಶರಣಭರಣಯುತ ಕರುಣಾಕರ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ