ಒಟ್ಟು 234 ಕಡೆಗಳಲ್ಲಿ , 58 ದಾಸರು , 218 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾನಾ ಯೋನಿಗಳೊಳು ಹೀನಜನ್ಮದಿ ಬಂದು ನಾನು ತಿರುಗಲಾರೆನೊ ಗೋಪಾಲ ಪ. ಶ್ರೀನಿವಾಸ ನಿನ್ನ ಸೇರಿದ ಬಳಿಕ ಉದಾಸೀನ ಮಾಳ್ಪರೇನೋ ಗೋಪಾಲ ಅ.ಪ. ಇಂದ್ರಿಯದೊಳಿದ್ದೆನೊ ಗೋಪಾಲ ಪಿಂಡವಾದೆನೊ ಗೋಪಾಲ ಮಾಸ ನಾಲ್ಕಯಿದಾಗಲ ವಯವಂಗಳಿಂದ ಬೆಳೆವುತಿದ್ದೆನೊ ಗೋಪಾಲ 1 ನರಳಿ ಕೋಟಲೆಗೊಂಡೆನೊ ಗೋಪಾಲ ಹಿರಿದು ಚಿಂತಿಸಿದೆನೊ ಗೋಪಾಲ ಕಷ್ಟಬಡುತಿದ್ದೆನೊ ಗೋಪಾಲ ಸಂದ ಧರೆಗೆ ಪತನವಾದೆನೊ ಗೋಪಾಲ2 ಘಾಸಿಯೊಳೊರಲುವೆನೊ ಗೋಪಾಲ ಘಾಸಿಸಿ ದುಃಖಿಪೆನೊ ಗೋಪಾಲ ಬ್ಯಾಸತ್ತು ಒರಲುವೆನೊ ಗೋಪಾಲ ಶ್ವಾಸ ಎತ್ತಿದೆನೊ ಗೋಪಾಲ 3 ಬಾಲತನದಿ ಬಹುವಿಧದಾಟವ ತೋರಿ ಮೇಲನರಿಯದಿದ್ದೆನೊ ಗೋಪಾಲ ಮಾರ್ಜಾಲ ಘಾತಕನಾಗಿದ್ದೆನೊ ಗೋಪಾಲ ಕೂಳಿಗೀಡಾಗಿದ್ದೆನೊ ಗೋಪಾಲ ಪಾಳೆಯಕೀಡಾದೆನೊ ಗೋಪಾಲ 4 ಆಗಿ ಬಾಳುತಲಿದ್ದೆನೊ ಗೋಪಾಲ ನೀಗಿ ಬಾಳುತಿದ್ದೆನೊ ಗೋಪಾಲ ಬಾಧೆಗೆ ಬೆಂಡಾದೆನೊ ಗೋಪಾಲ ಆಗಲು ಪುತ್ರ ಬಾಂಧವರಿಗೋಸ್ಕರ ಭವ- ಸಾಗರ ಎತ್ತಿದೆನೊ ಗೋಪಾಲ 5 ಬಾಲ್ಯಯೌವನವಳಿದು ಜರೆ ಒದಗಿ ನಾನು ಮೇಲೇನರಿಯದಿದ್ದೆನೊ ಗೋಪಾಲ ಬೀಳುತೇಳುತಲಿದ್ದೆನೊ ಗೋಪಾಲ ಹೋದಂತಿದ್ದೆನೊ ಗೋಪಾಲ ಗೂಳಿಯಂದದಲಿದ್ದೆನೊ ಗೋಪಾಲ 6 ಬಾಳುತಲಿದ್ದೆನೊ ಗೋಪಾಲ ಗಿಷ್ಟನೆನಿಸಿಕೊಂಡೆನೋ ಮುಟ್ಟರೆನಿಸಿಕೊಂಡೆನೊ ಗೋಪಾಲ ಕೊಟ್ಟು ತಿನಿಸಿದೆನೊ ಗೋಪಾಲ7 ವೇದನೆಗೊಳುತಿದ್ದೆನೊ ಗೋಪಾಲ ಕೊಂಡದಿ ಬಿದ್ದೆನೊ ಗೋಪಾಲ ಗುಹ್ಯ ಯಾತನೆಗೊಳಗಾದೆ ಗೋಪಾಲ ಬಾಧೆಯೊಳು ಒರಲುವೆನೊ ಗೋಪಾಲ 8 ನಿನ್ನ ನೆನೆಯದಿದ್ದೆನೊ ಗೋಪಾಲ ದುಷ್ಟಬುದ್ಧಿಯೊಳಿದ್ದೆನೊ ಗೋಪಾಲ ಶ್ರೇಷ್ಠಜನ್ಮದಿ ಬಂದೆನೊ ಗೋಪಾಲ ಸೃಷ್ಟಿಯೊಳು ತುರುಗೇರಿ ಗುರು ಅಚಲಾನಂದವಿಠಲ ಸಲಹೆಂದೆನೋ ಗೋಪಾಲ 9
--------------
ಅಚಲಾನಂದದಾಸ
ನಿತ್ಯ ತೃಪ್ತಾ ಅನ್ಯರಿಂದಲಿ ಎನಗೆ ಏನು ಪ್ರಯೋಜನವೊ ಪ ದರುಶನಕೆ ಬಂದವ ನಾನಲ್ಲವೆಂದು ನಾನಂದು ಹರಿ ನಿನಗೆ ನುಡಿದದ್ದು ಮನಸ್ಸಿನೊಳಗೆ ಇರುತಿಪ್ಪದೇನಯ್ಯಾ ಬಿನ್ನಪವೆ ಲಾಲಿಸು ಶರಣ ಜನರ ಅಭಿಪ್ರಾಯವೊಂದು ಬಗೆ ಇಪ್ಪದೊ1 ನಿರುತ ವ್ಯಾಪ್ತತ್ವ ಕರುಣತ್ವ ಅಣುಮಹತ್ತು ಸರುವ ಚೇತನ ಜಡ ಮತ್ತೆ ಮತ್ತೆ ಪರಿ ಪರಿಯಿಂದಲಿ ನಿನ್ನಲಿ ಉಂಟು ನಿನ್ನ ವರ ಮೂರ್ತಿಗಳ ಪೇಳದೆ ಇದಷ್ಟು ವಿನಯದಲಿ 2 ಧ್ಯಾನಕ್ಕೆ ನೀನು ಪ್ರಧಾನನೆಂದು ನುಡಿದೆ ಅಪ್ರಮೇಯ ಕ್ಷೋಣಿಜನಕಿಂತ ದ್ವಾರದವರು ವೆಗ್ಗಳವಾಗೆ ಏನೆಂಬೆ ತಿರುವೇಂಗಳೇಶ ನಿನ್ನಾಟಕ್ಕೆ 3 ಮಿಕ್ಕ ಮಂದಜನಕೆ ನಿನ್ನ ಭಕುತರ ಮೇಲೆ ಭಕುತಿ ಪುಟ್ಟುವುದಕ್ಕೆ ನಾ ಪೇಳಿದದ್ದು ಅಕಟಕಟ ನಿನ್ನ ದೊರೆತನಕೆ ಏನೆಂಬೆ ತಕ್ಕ ಮಾತುಗಳೇನೊ ಆಲೋಚಿಸಿ ನೋಡೆ 4 ಹೊನ್ನು ಹಣ ತೂಗಬೇಕಾದರೆ ಮೊದಲಿಗೆ ಚಿನ್ನ ಹಾಕುವರೇನೊ ಚಿನ್ಮಯರೂಪ ಮುನ್ನೆ ನಿನ್ನವರ ದರುಶನವಾದ ಮೇಲೆ ಪಾ ವನ್ನ ಶಾರೀರನೆ ನಿನ್ನ ಕಾಂಬುವದುಚಿತ 5 ಜರೆಮರಣರಹಿತ ಸುಜನರ ಪರಿಪಾಲಾ ನಿ ನಿತ್ಯ ವಜ್ರಪಂಜರಾ ಜರಗೆ ವರವಿತ್ತ ದನುಜರ ವಂಶನಾಶಾ ನಿ ರ್ಜರ ನದಿ ಜನಕಾಂಬುಜ ರವಿ ನಯನ ದೇವಾ 6 ಸ್ಥೂಲಮತಿಯಿಂದ ಪೇಳಿದೆನೆಂದು ಚನ್ನಾಗಿ ಲಾಲಿಸು ಲಲಿತಾಂಗಿ ಲಕುಮಿ ರಮಣಾ ನೀಲಗಿರಿ ನಿವಾಸ ವಿಜಯವಿಠ್ಠಲ ವೆಂಕಟವಾಲಗವ ಕೈಗೊಳ್ಳು ಎನ್ನ ಯೋಗ್ಗಿತವರಿತು7
--------------
ವಿಜಯದಾಸ
ನಿತ್ಯ ಶುಭಮಂಗಳಂ ಪ ವೇದಾಂತ ವೇದ್ಯನಿಗೆ ಆದಿನಾರಾಯಣಗೆ ಸಾದು ಸಜ್ಜನರ ಸಂರಕ್ಷಣಗೆ ಯಾದವಾಧಿಪ ಕೃಷ್ಣ ದನುಜರೆದೆ ದಲ್ಲಣಗೆ ಮಾಧವ ಮುಕುಂದ ಮುರಮರ್ಧನನಿಗೆ ನಿತ್ಯ ಶುಭಮಂಗಳಂ 1 ಶ್ರೀ ವತ್ಸಲಾಂಛನಗೆ ಶ್ರೀ ಕೇಶವಾಚ್ಯುತಗೆ ಭವ ಭಂಜನನಿಗೆ ಗೋವರ್ಧನವ ನೆತ್ತಿ ಗೋವುಗಳ ಕಾಯ್ದವಗೆ ಮಾವ ಕಂಸನ ಕೊಂದ ಗೋವಿಂದಗೆ 2 ನೀಲ ಮೇಘಾಂಗನಿಗೆ ನಿಜಶರಣ ಸಂಗನಿಗೆ ಕಾಲ ಭಯ ಶಿಕ್ಷನಿಗೆ ಕಮಲಾಕ್ಷಗೆ ಬಾಲಾರ್ಕ ಚಂದ್ರ ರವಿಕೋಟಿ ತೇಜನಿಗೆ ಮೂಲೋಕ ದೊಡೆಯನಿಗೆ ಮುರವೈರಿಗೆ 3 ಕಾಮಪಿತ ಕೃಷ್ಣನಿಗೆ ಕಡುಚೆಲ್ವಮಾಧವಗೆ ಸಾಮಗಾನ ವಿಲೋಲ ಸರ್ವೇಶಗೆ ವಾಮ ದೇವನ ಮಿತ್ರ ವಸುದೇವ ಪುತ್ರನಿಗೆ ಶ್ರೀ ಮಹಾಗೋವಿಂದ ಗೋಪಾಲಗೆ 4 ದುರಿತ ಸಂಹಾರಗೆ ಪರಮ ಪಾವನನಿಗೆ ಪಾಪವಿನಾಶಗೆ ಘೋರ ದುರಿತಾರಣ್ಯ ದಹನ ದೈತ್ಯಾಂತಕಗೆ ಪಾರ ಮಹಿಮಾನಂದ ಸುರವಂದ್ಯಗೆ 5 ನಾಗೇಂದ್ರ ಶಯನನಿಗೆ ನಿಗಮಾಗಮ ಸ್ತುತಗೆ ನಾಗಭೂಷಣ ನಮಿತಗೆ ಭಾಗೀರಥೀಪಿತಗೆ ಭಾಗವತ ಹಿತಕರಗೆ ಭಾಮೆಯರರಸ ಶ್ರೀ ಗೋಪಾಲಕೃಷ್ಣಗೆ 6 ವರಮತ್ಸ್ಯರೂಪನಿಗೆ ಕೂರ್ಮಾವತಾರನಿಗೆ ವರಹದಾಕೃತಿಯವಗೆ ನರಸಿಂಹಗೆ ವರದ ವಾಮನನಿಗೆ ವರ ಪರಶುರಾಮನಿಗೆ ಬುದ್ಧ ಶ್ರೀ ಕಲ್ಕಿಗೆ 7 ಇಂದಿರಾರಮಣಗೆ ಚಂದ್ರಶೇಖರ ಪ್ರಿಯಗೆ ನಂದಗೋಕುಲದರಸ ಗೋಪಾಲ ಕೃಷ್ಣಗೆ ಮಂದಮಾರುತ ತನಯ ಕೋಣೆ ನಿಜವಾಸಗೆ ಆ ನಂದ ಮೂರುತಿ ಶ್ರೀ ಲಕ್ಷ್ಮೀನಾರಾಯಣಗೆ 8
--------------
ಕವಿ ಪರಮದೇವದಾಸರು
ನಿತ್ಯದುದಯಾಸ್ತಮಾನದಲಿ ಸ ರ್ವೋತ್ತಮ ಹರಿನಾಮ ಬರೆದೋದಿ ಭಕ್ತಿಯಿಂದಾಲಿಪರ ಭವತಾಪ ಜರೆ ಮೃತ್ಯುನೀಗಿ ನಿತ್ಯಮುಕ್ತಿ ಕೈಸೇರುತಿಹ್ಯವು ಪ ನರಿಹರಿ ಹಯವದನ ಜನಾರ್ದನ ವಾಸುದೇವ ವಾರಿಜಾಕ್ಷ ಮುರಧ್ವಂಸಿ ಮುಪ್ಪುರಾಂತಕ ಮುಕ್ಕುಂದ ಹರಿ ಸರ್ವೇಶ ಉರಗಪರ್ಯಂಕ ನಿರಂಜನ ನಿರ್ಜರೇಶ ಶರಣಜನಮಂದಾರ ಸಿರಿಯರಸ ಪರಮಪ್ರಕಾಶ ಪರತರೇಶ ಪರಮಪುರುಷ ಪರಾತ್ಪರನೆಂದು 1 ಮಾಧವ ದೇವದೇವೇಶ ದನುಜರಸಂಹರ ಶ್ಯಾಮಸುಂದರ ಘನಮೇಘಶ್ಯಾಮ ಸಚ್ಚಿದಾನಂದ ಚಿನುಮಯಾತ್ಮ ತಚ್ಚೈತನ್ಯರೂಪ ವೇಣುಧರ ಗೋಪಾಲ ಗೋವ ರ್ಧನೋದ್ಧಾರ ಗಾನಾಂದಧೋಕ್ಷಜಪಿತ ಧ್ಯಾನಗಮ್ಯ ತ್ರಿಭುವನೇಶ ತ್ರಿವಿಕ್ರಮನೆಂದು 2 ನಿತ್ಯಗುಣಾರ್ಣವ ನಿಜಗುಣ ನಿಷ್ಕಲಂಕ ನಿತ್ಯಾತ್ಮ ನಿರುಪಮ ಪರಂಜ್ಯೋತಿ ನಿತ್ಯನಿರ್ಮಲ ಸತ್ಯಭಾಮಾಕಾಂತ ಚಿದ್ರೂಪ ಚಿತ್ಕಳಂಕ ಕಮಲಾಕ್ಷ ಲಕುಮೀಶ ಶೌರಿ ಸೂತ್ರಧಾರಿ ಭಕ್ತವತ್ಸಲ ಭಯನಿವಾರ ನರಸಿಂಹ ಮುಕ್ತಿದಾಯಕ ಮಧುಸೂದನ ರಮಾರಮಣ ಮೃತ್ಯುಂಜಯ ವಿಶ್ವೇಶ ವಿಶ್ವವ್ಯಾಪಕನೆಂದು 3 ಕಾಲಾರಿ ಚಕ್ರಿ ಚತುರ್ಭುಜ ಭವನಾಶ ನೀಲಾಂಗ ರಂಗ ರಾಘವ ಭುವನೇಶ ನೀಲಲೋಚನ ನಗಧರ ಜಗಮೋಹ ಮೇಲುನಿಲಯ ನಿಗಮಾತೀತ ಪದ್ಮನಾಭ ಕಾಲೀಮರ್ದನ ಕೌಸ್ತುಭಾಂಬರ ವಿಷ್ಣು ಪಾಲಸಾಗರಕನ್ನಿಕಾಪ್ರಿಯನಾಥ ಲೀಲಜಾಲ ಜಾಹ್ನವೀಜನಕ ಕೇಶವ ಶೂಲಪಾಣಿಸಖ ಶಾಂತಾಕಾರನೆಂದು4 ಪರಮಾನಂದ ಗೋವಿಂದ ಗಜರಕ್ಷ ಶರಧಿಮಥನ ಕೂರ್ಮಮತ್ಸ್ಯ ಕರುಣಾಂಗ ವಾಮನ ಧ್ರುವಪಾಲ ದುರಿತಾರಿ ಕೃಷ್ಣ ವೆಂಕಟ ವಿಠಲ ಶರಣಾಗತವರದ ನುತಪಾಲ ವರದಾತ ವೇದಾಂಗ ಸುಖಧಾಮ ವರ ಶ್ರೀರಾಮ ಪರಮ ಪುಣ್ಯನಾಮ ಧರೆಮೂರರೊಳತ್ಯಧಿಕಮೆಂದು 5
--------------
ರಾಮದಾಸರು
ನಿನ್ನ ಅರುಸುತನಕ್ಕೇನೆಂಬೆನೊ ವೆಂಕಟೇಶಾ ಘನ್ನಗಿರಿಯ ವಾಸ ಕಮಲಾಸನ ಜನಕ ತಿರುಮಲೇಶಾ ಪ ಹರುವ ಸರ್ಪಯಿರುವ ಚೋರ ಶರಧಿ ಉರೆವ ಕಿಚ್ಚು ಕರೆವ ಮೃತ್ಯು ಸುರಿವ ಮಳೆ ಬಿರುವನೆಲ್ಲ ಹೊಡೆವ ದೈತ್ಯಾ ತೊರೆವ ಸನ್ನ್ಯಾವ ಮೇರೆ ತಪ್ಪಿ ಭರದಿ ತನಗೆ ಇದಿರು ಬಂದವ ಕಾಣುತತಿ ಹರಿಯ ನಾಮ ಮುಟ್ಟುವ ದೇವ ಶ್ರೀನಿವಾಸಾ1 ಸೃಷ್ಟಿ ಜನರಿಗೊಂದು ಆಳು ಕೊಟ್ಟು ವೇಗದಿಂದ ಕರಿಯ ಲಟ್ಟಿದವರ ಕಾಣೆನಯ್ಯಾ ಎಷ್ಟೆಷ್ಟು ದೂರದಿಂದಲಿ ಕಟ್ಟಿಕೊಂಡು ಹೊನ್ನು ಹಣಗಳ ತಮಗೆ ತಾನೆ ಅಟ್ಟಹಾಸದಿಂದ ಮಂಗಳವ ಪಾಡಿ ಪೊರ ಮಟ್ಟ ಒಪ್ಪ ತಿರುವೆಂಗಳಾ2 ಹದಿನೆಂಟು ಜಾತಿಯವರು ಒದಗಿ ಮುದದಿಂದ ಕುಣಿದು ಪದೋಪದಿಗೆ ಹಾಡಿ ಪಾಡುತ ಹದುಳವಾದ ಪಂಚವಾದ್ಯ ಎದುರುನಿಂದು ಧ್ವನಿಯ ಮಾಡುತಾ ದಾಸರೆಂಬೊ ಅಟ್ಟಹಾಸದ ಮಾತು ನುಡಿಯುತ್ತ ನಿತ್ಯ ನಿನ್ನ ಮದುವೆಯೆಂದು ಸುಖವು ಸುರಿಯುತ್ತಾ 3 ಎಲ್ಲರಿಲ್ಲಿಗೆ ಬಂದರೇನು ಯಿಲ್ಲ ಪು ಣ್ಯಲೇಶ ಮಾತ್ರ ಸಲ್ಲದಯ್ಯಾ ಮುಕ್ತಿಗವರು ಇಲ್ಲೆ ಸುಖವು ಬಟ್ಟು ಕಡಿಗೆ ಎಲ್ಲೆಲ್ಲಿ ಜನಿಸಿ ಬಹು ಭವದ ಪಲ್ಲಡಿಯೊಳಗೆ ಜನಿಸಿ ಜ್ಞಾನ ವಿಲ್ಲದೆ ಸಲ್ಲುವರು ದುರಿತವ ವಹಿಸಿ 4 ಮನುಜರೆಣಿಕೆ ಏನು ಮತ್ತೆ ವನಜ ಸಂಭವ ಈಶ ಮುಖ್ಯ ಅನಿಮಿಷರೆಲ್ಲ ಬಂದು ಭಯದಿ ಮನಸಿನಲಿ ನಿನ್ನ ಅರಸುತನದ ಶೌರ್ಯ ಮಣಿದು ನಮಸ್ಕರಿಸುತಾ ವಾಲ್ಗೈಸುತಾ ಹೊಣಿಯೊ ವಿಜಯವಿಠ್ಠಲ ಎನುತಾ 5
--------------
ವಿಜಯದಾಸ
ನಿನ್ನ ಧ್ಯಾನವ ಕೊಡು ಎನ್ನ ಧನ್ಯನ ಮಾಡು ಚೆನ್ನ ಶ್ರೀ ಶೇಷಾದ್ರಿ ಸನ್ನಿವಾಸಾ ಪ ಭೀಷಣವಾಗಿಹ ಭವಸಾಗರದೊಳು ನಾಶಗೊಳಿಪುವರು ನೆಗಳಿಗಳು ಬೀಸುವವನುದಿನ ಮೂರು ಘಾಳಿಗಳು ಈ ಸಂಖ್ಹ್ಯಾಂಗ ಕೈಪಿಡಿಯೋ ಕೃಪಾಳು1 ಭವವೆಂಬ ಕಿಚ್ಚನ್ನ ಸಹಿಸುವ ಪರಿಯೇನೋ ಯುವತೀ ವಿಷಯ ಸುಖಲುಬ್ಧನಾಗಿಹೆನೋ ಹವ್ಯವಾಹನನೆನ್ನನಾಡು ಮಾಡಿದೆಯೇನೋ ಪವನನೈಯಾತ್ವತ್ಪದಾಪದ್ಮ ಭೃಂಗನೋ2 ಪರಿಪರಿ ದುರಿತಂಗಳಿಂದ ಮನದೆಡೆಯೊಳು ಹರಿಸೇವಾರ್ಚನೆಗಳಿಗೆ ಅನುವಿಲ್ಲವು ಪರಮ ಭಾಗವತರ ಜರೆವ ಖಳ ಜನರಾ ನೆರೆಯಿರದಂತೆ ಮಾಡೊ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ನಿನ್ನ ನಾನೇನೆಂದೆನೊ | ಗುರುವೆ ಜಗದ್ಗುರುನಿನ್ನ ನಾನೇನೆಂದೆನೋ ಪ ನಿನ್ನ ನಾನೇನೆಂದೆ ನಿಖಿಲ ಜೀವರ ಒಡೆಯಪನ್ನಗ ನಗಧೀಶ ಪತಿತೋದ್ಧಾರನ ದೂತಅ.ಪ. ವಾರಿಧಿಯನೆ ದಾಟಿ | ನಾರಿ ಚೋರನ ಜರೆದುನಾರಿಗೋಸುಗ ಕೌರವರ ಸವರೀ ||ಮಾರಮಣನೆ ಸಾರತಮನೆಂಬ ವೇದಾಂತಸಾರ ಪೇಳ್ದಗೆ ಶರಣೆಂದೆನು ಅಲ್ಲದೇ ||ಭಾರಿ ಕೋತಿಯು ಎಂದೆನೆ - ಕುಪ್ಪುಸ ತೊಟ್ಟುನಾರಿಯಾದವನೆಂದೆನೆ - ಕಾವಿಯನುಟ್ಟುಪೋರಯತಿಯು ಎಂದನೆ - ಕುಭಾಷ್ಯಗಳಾರು ಮೂರೆರಡೊಂದರರಿ ಎಂದೆನಲ್ಲದೆ 1 ನೆರಹಿ ಕಪಿ ಸೈನ್ಯವ | ಶರಧಿಯ ಬಂಧಿಸಿದುರುಳ ರಕ್ಕಸರ ಸಂಹರಿಸೀ ||ಜರೆಯ ಸುತನ ಸೀಳಿ ಬದರೀಗೆತೆರಳೀದವಗೆ ನಮೋ ಎಂದನು ಅಲ್ಲದೇ ||ಗಿರಿಯ ಪೊತ್ತವನೆಂದನೆ - ರಕ್ಕಸಿಯಬೆರೆದ ನೆಂದವನೆಂದೆನೆ - ಕೌಪೀನವಧರಿಸಿದವನು ಎಂದೆನೆ - ಸುಜನರ್ಗೆಪರತತ್ವ ಪೇಳವನೆಂದೆನು ಅಲ್ಲದೆ 2 ಕರ್ತು ಹರಿಯೆ ಎಂದುನೀಚೋಚ್ಛ ತರತಮ ಪೇಳ್ದೆ ಎಂದೆಲ್ಲದೆ ||ಖೇಚರ ನೀನೆಂದೆನೆ - ವಿರಾಟನೊಳ್‍ಪಾಸಚಕ ನೀನೆಂದೆನೆ - ಭವಾಟವಿಮೋಚಕನೇ ಗುರು ಗೋವಿಂದ ವಿಠಲಅರ್ಚಕನೆಂದು ಸ್ತುತಿಗೈದೆನಲ್ಲದೆ 3
--------------
ಗುರುಗೋವಿಂದವಿಠಲರು
ನಿನ್ನ ನಾನೇನೆಂದೆನೋ | ಗುರುವೆ ಜಗದ್ಗುರು ನಿನ್ನ ನಾನೇನೆಂದೆನೋ ಪ ನಿನ್ನ ನಾನೇನೆಂದೆ ನಿಖಿಲ ಜೀವರ ಒಡೆಯಪನ್ನಗ ನಗಧೀಶ ಪತಿತೋದ್ಧಾರನದೂತ ಅ.ಪ. ವಾರಿಧಿಯನೆ ದಾಟಿ | ನಾರಿ ಚೋರನ ಜರೆದುನಾರಿ ಗೋಸುಗ ಕೌರವರ ಸವರೀ ||ಮಾರಮಣನೆ ಸಾರತಮನೆಂಬ ವೇದಾಂತಸಾರ ಪೇಳ್ವಗೆ ಶರಣೆಂದೆನು ಅಲ್ಲದೇ |ಭಾರಿ ಕೋತಿಯು ಎಂದೆನೆ - ಕುಪ್ಪಸ ತೊಟ್ಟುನಾರಿಯಾದವನೆಂದನೆ - ಕಾವಿಯನುಟ್ಟುಪೋರ ಯತಿಯು ಎಂದೆನೆ - ಕುಭಾಷ್ಯಗಳಾರು ಮೂರೆರಡೊಂದರರಿ ಎಂದೆನಲ್ಲದೆ 1 ನೆರಹಿ ಕಪಿಸೈನ್ಯವ ಶರಧಿಯ ಬಂಧಿಸಿದುರುಳ ರಕ್ಕಸರ ಸಂಹರಸೀ ||ಜರೆಯ ಸುತನ ಸೀಳಿ ಬದರೀಗೆತೆರಳೀದವಗೆ ನಮೊ ಎಂದೆನು ಅಲ್ಲದೇ ||ಗಿರಿಯ ಪೊತ್ತವನೆಂದನೆ - ರಕ್ಕಸಿಯಬೆರೆದನೆಂದವ ನೆಂದೆನೆ - ಕೌಪೀನವಧರಿಸಿದವನು ಎಂದೆನೆ - ಸುಜನರ್ಗೆಪರತತ್ವ ಪೇಳ್ದೆವನೆಂದೆನು ಅಲ್ಲದೇ 2 ಕರ್ತು ಹರಿಯೆ ಎಂದುನಿಚೋಚ್ಛ ತರತಮ ಪೇಳ್ದೆ ಎಂದಲ್ಲದೆ ||ಖೇಚರ ನೀನೆಂದನೆ - ವಿರಾಟನೊಳ್‍ಪಾಚಕ ನೀನೆಂದನೆ - ಭವಾಟವಿಮೋಚಕನೇ ಗುರು ಗೋವಿಂದ ವಿಠ್ಠಲಾರ್ಚಕನೆಂದು ಸ್ತುತಿ ಗೈದನಲ್ಲದೆ 3
--------------
ಗುರುಗೋವಿಂದವಿಠಲರು
ನಿನ್ನಚರಣಾರವಿಂದವ ಪ ಪರಮ ಪುರುಷನಿನ್ನ ಚರಣ ಪಂಕಜವನ್ನು ನಿರುತ ನಂಬಿದೆ ಎನ್ನದುರಿತ ಪರ್ವತವನ್ನು ಸುರಪ ವಜ್ರದಿ ಗಿರಿಗಳನು ಖಂಡಿಸಿದವೋಲ್ ತರಿದು ರಕ್ಷಿಸೋ ಮುರಹರನೆ ಸ್ಮರಣೆಯಿತ್ತು 1 ಮಕ್ಕಳಾಟಿಕೆಯಿಂದ ಕೆಲವು ದಿವಸಸಂದು ಕಾಲ ಬರಲುಸ್ತ್ರೀಯರಿಗೆ ಕ ಣ್ಣಿಕ್ಕಿ ಮುದದಿ ದಿನಗಳೆದು ಮರೆತೆನೀಗಳು ಸೀತಾ ರಮಣ ಸ್ಮರಣೆಯಿತ್ತು 2 ವಿಧಿ ಬರೆದ ಲಿಖಿತವೆಲ್ಲ ಸಂತು ದರ್ಜನರೊಡನಾಟದೊಳಗೆ ಕಾಲ ವಿಂತು ಸವೆದು ಜರೆ ಮುಸುಕಿತೆನೆಗೆ ಲಕ್ಷ್ಮೀ ಕಾಂತ ನಿನ್ನಯ ನಾಮ ಸ್ಮರಣೆಯಂತ್ಯದೊಳಗಿತ್ತು 3
--------------
ಕವಿ ಪರಮದೇವದಾಸರು
ನೀಚಮತಿ ಎಲೆ ನೀಚಮತಿ ಊಚನೆನಿಸಿಕೊಂಬ ಯೋಚನೆ ಬಿಡುಕಂಡ್ಯ ಪ ತರಿಯದೆ ಕುಟಿಲತ್ವ ಮರೆಯದೆ ದುಶ್ಚಟ ಧರೆಯ ಭೋಗವ ನೆಚ್ಚಿ ಶರಣರ್ವೇಷÀವÀ ತಾಳಿ ಮರವೆ ಮಾಯದಿ ಬಿದ್ದು ಒರಲುವ ನರರಿಗೆ ಬರಿದೆ ಬೋಧಿಪೆನೆಂಬ ಭ್ರಮೆಯಿಂದ ಫಲವೆ 1 ಮಾಯಮೋಹಿಗಳ ಉಪಾಯದಿ ಕೂಡಿಸಿ ಸೇವಿಸದಾಹಾರ ಸೇವಿಸುತನುದಿನ ಕಾಯಬಲಿಸಿ ಕುಣಿವ ಮಾಯಮೋಹಿಯ ಬರಿ ಬಾಯ ಬ್ರಹ್ಮತ್ಯಬಂಧ ಬಯಲಪ್ಪುದೇನೆಲೆ 2 ಧರಿಸಿದ ಲಾಂಛನ ಅರಿಯದೆ ಮೇಲೆ ನೀ ಬರಿದೆ ಕಾವಿಯನ್ಹೊದ್ದು ಕರದಿ ಕಮಂಡಲ ಧರಿಸಿ ಮರುಳರಿಗೆಲ್ಲ ಪರತತ್ತ್ವವರಿಯಲು ಜರೆಮರಣದು:ಖವು ಪರಹಾರಮೆಂತೆಲೆ 3 ಭವಭವದಲಿ ಬಟ್ಟಬವಣೆಯ ಸ್ಮರಿಸಿದೆ ಭವಗೆಲಿಸುವ ಅನುಭವ ತಿಳಿಯದೆ ಸ ದ್ಭವಿಗಳ ನೆರೆಯಿಸಿ ಕವಿತೆ ಬಿಡಿಸಿ ಬಹು ಸವಿಮಾತ್ಹೇಳಲು ಮೂಲಭವಭೀಜಳಿಯುವುದೆ 4 ತನ್ನ ತನ್ನದುಯೆಂಬ ಭಿನ್ನವಿಲ್ಲದೆಸದಾ ತನ್ನ ಸ್ವರೂಪ ಪರರನ್ನು ಬಗೆದು ನಿತ್ಯ ಸನ್ನುತ ಶ್ರೀರಾಮನುನ್ನತಂಘ್ರಿಗೆ ಪೊಂದಿ ಧನ್ಯರಾಗದೆ ನರಕುನ್ನಿಯೆನಿಸುವರೇನೋ5
--------------
ರಾಮದಾಸರು
ನೀನೇ ಸಕಲವೆನಗೆ ಶ್ರೀರಾಮಚಂದ್ರ ನೀನೇ ದೊರೆಯರಸನೊ ಪ ಶ್ರೀನಿಧಿಯೆ ನಿನ್ನವರುಸತತ ಸಾನುರಾಗದ ಬಳಗವಹುದೈ ದೀನಜನಮಂದಾರ ನೇಹಂ ಶ್ರೀನಿಕೇತನ ಸತ್ಯಸಾರ ಅ.ಪ ತಾಮತಿಯು ಶ್ರೀ ಮನೋಹರ ಸಹಜರೆಲ್ಲ ಪ್ರೇಮ ಪಂಚ ರಾಮರೂಪವ ತೋರ್ಪನಾಡಿಯು 1 ಧನ್ಯ ಶರೀರವು ಮಾನ್ಯಗೆ ತಾಮಸದ ಸರೃಹವೂ ಕಣ್ಣನಿದ್ರೆಯು ಯೋಗಮುದ್ರೆಯು ಚಿಣ್ಣನ ಸಂಚರಂಗಳು ಸ್ವಾಮಿ ನಿನಗೆ ಪ್ರದಕ್ಷಿಣೆ 2 ಬಾಲನ ಮಾತುಗಳು ವೇದೊಕ್ತ ಸಶೀಲನ ಸ್ತೋತ್ರಗಳು ಕಾಲಂಕಾಲಗಳಲ್ಲಿ ಗೈಯುವ ಕಾರ್ಯಗಳು ಪರಮಾತ್ಮ ಸೇವೆಯು ಶ್ರೀಲತಾಂಗಿಯ ಲೋಲ ಧ್ಯಾನಿಪೆ ಪಾಲಿಸೈ ಜಾಜೀಶ ಕೇಶವ3
--------------
ಶಾಮಶರ್ಮರು
ನೀರಜಾಕ್ಷ ನಿನ್ನೂರಿಗೆ ಪೋಗುವ ದಾರಿಯ ತೋರಯ್ಯ ಪ ದಾರಿಯ ಕಾಣದೆ ಅ.ಪ ಜನ್ಮಾಂತರ ಕೃತ ಕರ್ಮಗಳೆಂಬುವ ಹೆಮ್ಮರಗಳು ಬೆಳೆದು ಧರ್ಮನಿರೋಧ ವಿಕರ್ಮದ ಬಳ್ಳಿಯು ಬಿಮ್ಮನೆ ಬಿಗಿವಡೆದು ಕಂಟಕ ವೆಮ್ಮನು ಕಾಲಿಡಲಮ್ಮಗೊಡವು ಹರಿ1 ದಾರಿಯೊಳಡಸಿಹುದು ರಾರು ಮಂದಿ ಮುಳಿದು ಸಾರಿ ಸಾರಿ ಬಾಯಾರಿಸುತಿರ್ಪವು 2 ಯನು ದಾಂಟುವೊಡರಿದು ಧನಕನಕಾದಿಗಳೆನಿಪ ಪಿಶಾಚಗಳನವರತವು ಬಿಡವು ತನು ಸಂಬಂಧದ ಜನಗಳು ದುರ್ಮೃಗ ವನು ಪೋಲುತ ನಮ್ಮನು ಬಾಧಿಸುತಿರುವರು 3 ಕ್ಷುದ್ರವಿಷಯಗಳುಛಿದ್ರವಹುಡುಕುವ ವಧ್ರುವದೇಹದೊಳು ಕದ್ರುಸುತರವೊಲುಪದ್ರವ ಗೈವ ಭದ್ರದ ಭೀತಿಗಳೂ ಪದ್ರವ ಜರೆಯೆಂಬುದ್ರಿಕ್ತಾಂಗನೆ 4 ಸುರನರವರರೊಳು ಶರಣೋಪಾಯವರ ವರದವಿಠಲ ನಿಜ ಚರಣವ ನಂಬಿದೆ 5
--------------
ವೆಂಕಟವರದಾರ್ಯರು
ನೀರಜಾಕ್ಷನಿನ್ನೂರಿಗೆ ಪೋಗುವ ದಾರಿಯ ತೋರಯ್ಯ ಪ ತೊಳಲುವೆ ದಾರಿಯ ಕಾಣದೆ ಅ.ಪ. ಜನ್ಮಾಂತರಕೃತ ಕರ್ಮಗಳೆಂಬುವ ಹೆಮ್ಮರಗಳು ಬೆಳೆದು ಧರ್ಮನಿರೋಧವಿ ಕರ್ಮದ ಬಳ್ಳಿಯು ಬಿಂಮನೆ ಬಿಗಿವಡೆದು ಲಮ್ಮಗೊಡವುಹರಿ 1 ಮೀರಿಬರಲುಘನ ಚೋರರು ಕಾದಿಹರಾರುಮಂದಿ ಮುಳಿದು ಸಾರಿ ಬಾಯಾರಿಸುತಿರ್ಪವು 2 ದಾಂಟುವೊಡರಿದು ಧನಕನಕಾದಿಗಳೆನಿಪ ಪಿಶಾಚಗಳನವರತವು ಬಿಡವು ಪೋಲುತ ನಮ್ಮನು ಬಾಧಿಸುತಿರುವರು3 ಕ್ಷುದ್ರವಿಷಯಗಳು ಛಿದ್ರವಹುಡುಕುವ ವಧ್ರುಗದೇಹದೊಳು? ಕದ್ರುಸುತರವೋಲುಪದ್ರವಗೈವವಭದ್ರದ ಭೀತಿಗಳೂ ಜರೆಯೆಂಬುದ್ರಿಕ್ತಾಂಗನೆ4 ನರಿಗಳ ಪರಿಯಲಿ ನರಳುವರೆಲ್ಲರು ನರಕಗಳನುಭವಿಸಿ ವರದ ವಿಠಲನಿಜ ಚರಣವೆ ನಂಬಿದೆ 5
--------------
ಸರಗೂರು ವೆಂಕಟವರದಾರ್ಯರು
ನೆಲೆಗೊಂಡದೇನು ಮನಮೇಗಚಲಿಸುವೆ ನೀನು ಹಲವು ವಿಷಯದೊಳು ಪಸಿಲುಕಿದ ಬಗೆುಂದ ಹೊಲಬುದಪ್ಪಿತು[ಸಲೆ]ನಿನ್ನ ನಿಜವ ನೀ ಕಾಣು ಅ.ಪಗುರುವಿನಂಘ್ರಿಗೆ ನೀನು ನಮಿಸಿ ನಿನ್ನಮರವೆಯ ಭಾವವ ಕೆಡಿಸಿಕರಣವ ನಿಲುಕಡೆಗೊಳಿಸಿ ಬಹುಕರುಣವ ನಿನ್ನೊಳಗಿರಿಸಿಪರಮಾತ್ಮನಾಗ್ಯನ್ಯ ವಿಷಯಮೊಂದಲಾಶೆಪರಿದು ಭ್ರಾಂತಿಯಲೊಂದಿದ ಸುಖವ ಸೂಸಿ 1ಮನೆಯೊಂದು ನನಗಿಹುದೆಂದು ಅಲ್ಲಿಜನರೆಡೆಗೊಳೆ ದುಃಖ ಬಂದುಅನುಭವಿಪುದು ಯುಕ್ತವೆಂದು ಅದ[ಕನು]ಕೂಲವಾಗಬೇಕೆಂದುಅನುದಿನವನು ಸಂಧಾನದಿ ನಿಂದು ಗುರು ಕೊಟ್ಟಅನುಭವ ಬಯಲಾಗಿ ಭ್ರಮೆಗೆ ನೀ ಸಂದು 2ನೀನೊದು ಕೊಡಹೇಳಿ ಕೇಳಿ ಅಲ್ಲಿಹೀನತೆಯನು ಬಹುತಾಳಿದೀನರು ನೀವೆಂದು ಪೇಳಿ ಅನುಮಾನದ ಬಲು ಬಿರುಗಾಳಿಏನೆಂಬೆ ಬೀಸಲು [ತಾ] ನದರೊಳಗಾಳಿಜ್ಞಾನಹೋುತು ಭೇದ ಬುದ್ಧಿಯ ತಾಳಿ 3ಮಾಯಕವಾಗಿರೆ ಜಗವೂ ಬಹೂಪಾಯಗಳಿಂದ್ರಜಾಲಕವೂಆಯವರಿಯದದರಿರವೂ ತನ್ನತಾಯ ಕಾಣದ ಶಿಶುತನವೂಈಯಶೇಷವು ಸ್ವಪ್ನದನುಭವವಳಿವವುಬಾಯಮಾತಿನಜ್ಞಾನ ಕಪಟ ಸಂಭ್ರಮವೂ 4ಪರಮಾತ್ಮನೊಬ್ಬನಾಗಿಹನೂ ತಾನುಪರಿ ಪರಿ ರೂಪ ತೋರುವನುಅರಿತೆ ಭೇದವನಿದ ನೀನು ಬಹುಜರೆಯುತ ಗುಣದೋಷಗಳನುಗುರುವಾಸುದೇವರೂಪಿಲಿ ನಿನ್ನ ಕರವನುತಿರುಪತಿ ವೆಂಕಟ ಪಿಡಿಯೆ ಭ್ರಾಂತೇನು 5
--------------
ತಿಮ್ಮಪ್ಪದಾಸರು
ನೋಡಿದೇ ಶ್ರೀ ವಿಠಲನ ನೋಡಿದೆ ಪ ಕುಂಡಲ ಧರನ ಅ.ಪ. ದಾಸರಂದದಿ ಕಾವಿ ವಸನ | ಹೊದ್ದುಭಾಸೀಸುತಿಹ ಸಿರಿವರನ | ವಸನಮೀಸಲನವನು ತೆಗೆಯಲದನ | ಕಂಡೆಲೇಸಾದ ಶಾಲು ಹೊದ್ದವನ | ಆಹಕಾಶಮೀರದ ಶಾಲು | ಭಾಸುರ ಜರೆ ಖಚಿತಭೂಷಿತ ಹರಿ ಕುಳಿತು | ತೋಷಿಪ ಭಕುತರನ 1 ಸುತ್ತಿಹ ಪಾವಡೆ ಶಿರಕೇ | ಬಲುಸುತ್ತು ಸುತ್ತಿರುವುದು ಅದಕೆ | ಹರಿಮಸ್ತಕ ಛಂದ ಕಾಂಬುದಕೆ | ನೋಡಿಭಕ್ತ ಸಂದಣಿಯ ತೋಷಕ್ಕೆ | ಆಹಸುತ್ತಿಹುದನು ಬಿಚ್ಚೆ | ತುತ್ತಿಸುತಿರಲಾಗಕೃತ್ತಿವಾಸನ ತಾತ | ನೆತ್ತಿ ನೈಜವ ಕಂಡೆ 2 ಪೂಜಾರಿ ತೆಗೆಯಲು ಜರಿಯ | ಶಾಲುಮಾಜಾದೆ ವಿಠಲನ ಪರಿಯ | ಕಂಡೆನೈಜದ ಶ್ರೀವರನ ದ್ವಯ | ಹಸ್ತಯೋಚಿಸಿ ಕಟಿಲಿಹ ಪರಿಯ | ಆಹಸೋಜಿಗತನರೂಪ | ನೈಜದಿ ತೋರುತಪೂಜಾದಿ ಸ್ವೀಕಾರ | ವ್ಯಾಜಾವ ಕಂಡೆನು 3 ನಿರ್ಮಲಾಕೃತಿ ಪೊದ್ದ ಹಾರ | ತುಳಸಿಕಮ್ಮಲ ರ್ಸೂಸುವಧಾರಾ | ಕಾರಒಮ್ಮೇಲಿ ತೆಗೆದರಪಾರ | ದಯಸುಮ್ಮನ ಸರಿಗೀವ ಪೋರ | ಆಹಆಮ್ಮಹ ದೈವನ | ಇಮ್ಮಡಿ ಪ್ರಭೆ ಕಂಡನಿರ್ಮಾಲ್ಯ ತೆಗೆಯುವ | ಕರ್ಮಾಚರಿಸೂವಲ್ಲಿ 4 ಪಾದ | ಸ್ವೀಕರಿಸುವ ಭಕ್ತತೋಕನ ಬಿಂಬೋದ | ಶ್ರೀಕರ ದಳ ತುಳಸಿ 5 ನಾಕ್ಹತ್ತು ಭುವನಗಳ್ಜೋತಿ | ಮತ್ತನೇಕಾನೇಕಾಕಾರ ಜ್ಯೋತಿ | ಗಳೊಪ್ರಕಾಶ ಪ್ರದ ಪರಂಜ್ಯೋತಿ | ಮುಕ್ತಿಪ್ರಕಾರ ದೊಳಗಿವನೆ ಜ್ಯೋತಿ | ಆಹಏಕಮೇವ ಹರಿಗೆ | ಕಾಕಡಾರುತಿ ಮಾಳ್ಪಲೋಕರ ಪೂಜೆಯ | ಸ್ವೀಕರಿಪುದ ಕಂಡೆ 6 ಪಂಚ ಮೋಕ್ಷ ಪ್ರದ ಹರಿಗೆ | ಆಯ್ತುಪಂಚ ವಿಧಭಿಷೇಕ ಆವಗೆ | ಶೇಷಮಂಚಿಕೆ ಕ್ಷೀರಾಬ್ದಿಶಯಗೆ | ಮಧುಸಂಚನ ಮಧ್ವಿದ್ಯ ಹರಿಗೆ | ಆಹಪಂಚಾಮೃತಭಿಷೇಕ | ಸಂಚಿಂತಿಸುವನೀಗೆಸಂಚಿತ ಕರ್ಮವ | ಕೊಂಚವ ಮಾಡುವ 7 ಮಂಗಳ ಮಹಿಮಗ ಸ್ನಾನಾ | ಅವಗಂಗಾ ಪಿತನೆಂಬುದೆ ಮಾನ | ಹಾಗೂಅಂಗಜನಯ್ಯಗೆ ಸ್ನಾನಾ | ಆಯ್ತುಹಿಂಗದೆ ಲೋಕ ವಿಧಾನಾ | ಆಹಸಂಗೀತಲೋಲ ಸ | ತ್ಸಂಗವು ತುತಿಸಲುಸ್ವಾಂಗಾಯನಾಮ ಶು | ಭಾಂಗನು ಮೆರೆದನು 8 ಕಾಯ ವರೆಸಿ | ಬಹುಶಾಸ್ತ್ರೋಕ್ತಿ ಉಡಿಗೆಯ ಉಡಿಸಿ | ಮತ್ತೆರತ್ನಧ್ಯಾಭರಣವ ತೊಡಿಸಿ | ಚೆಲ್ವಕಸ್ತೂರಿ ತಿಲಕವನಿರಿಸಿ | ಆಹವಿಸ್ತøತೀಪರಿಯಲಿ | ಸತ್ಯ ಷೋಡಶ ಪೂಜೆಚತ್ತುರ ಮೊಗನಿಂದ | ಕೃತ್ಯಾನು ಸಂಧಾನ 9 ವೇದ ಘೋಷ ಪೂಜಾ ಮಂತ್ರ | ಬಹುನಾದ ವಿಠಲ ನಾಮ ಮಂತ್ರ | ತುಂಬಿಮೋದ ಪೂರೈಸಿತು ತಂತ್ರ | ಘಂಟೆನಾದದಿಂದಾರುತಿ ಕೃತ | ಆಹಆದರದಿಂದ ಪ್ರ | ಸಾದವು ಸ್ವೀಕೃತಮೋದದಿ ವಿಠಲನ | ಪಾದಾಲಿಂಗಾಂತ್ಯವ 10 ಉತ್ಕøಷ್ಟ ಸುಕೃತದ ಭೋಗ | ಹರಿಇತ್ತನು ಅನುಗ್ರಹ ಯೋಗ | ಸ್ವಂತಹಸ್ತದಿ ಪೂಜಾದಿ ಯೋಗ | ಮಾಳ್ಪಕೃತ್ಯ ಸಂಧಿಸಿದನು ಈಗ | ಆಹಚಿತ್ತಜ ಪಿತ ವಿಠಲ | ಭಕ್ತವತ್ಸಲ ದೇವನಿತ್ತಕಾರುಣ್ಯವ | ತುತ್ತಿಸಲೆನಗಳವೇ 11 ಪಿತೃ ಸೇವಕ ಪುಂಡಲೀಕ | ತನ್ನಕೃತ್ಯದೊಳಿರೆ ನಿರ್ವಲ್ಕೀಕ | ಹರಿವ್ಯಕ್ತ ತನ್ಭಕ್ತ ಪರೀಕ್ಷಕ | ನಾಗೆಭಕ್ತನು ಮನ ಸ್ಥೈರ್ಯಾಲೋಕ | ಆಹಇತ್ತ ಇಟ್ಟಿಗೆ ಪೀಠ | ಮೆಟ್ಟಿ ನಿಂತಿಹ ದೇವಕೃತ್ತಿ ವಾಸಾದ್ಯರಿಂ | ಸ್ತುತ್ಯ ಶ್ರೀ ವಿಠಲನ 12 ದಾಸೀಗೆ ಕಂಕಣವಿತ್ತು | ಹರಿದಾಸರ ರೂಪೀಲಿ ನಕ್ತ | ಕಳೆದಾಶು ದಾಸರ ಶಿಕ್ಷಕರ್ತ | ಮತ್ತೆದಾಸರ ನಿರ್ದೋಷ ವಾರ್ತ | ಆಹದಾಸನೋರ್ವಾ ವೇಶ | ಭೂಷಣ ಕೇಳುತ್ತವಾಸುಕಿ ಶಯನೊಲಿದ | ದಾಸ ಪುರಂದರಗೆ 13 ಮುಯ್ಯಕೆ ಮುಯ್ಯ ತೀರಿತು | ಜಗದಯ್ಯ ವಿಠಲನ್ನ ಕುರಿತು | ಪೇಳಿಕಯ್ಯನೆ ಮುಗಿದರು ತ್ವರಿತು | ದಾಸಮೈಯ್ಯ ಬಿಗಿದ ಕಂಬ ಒಳಿತು | ಆಹತ್ರಯ್ಯ ಲೋಕದಿ ದಾಸ | ಅಯ್ಯನ ಪೆಸರಾಯ್ತುತ್ರಯ್ಯ ಗೋಚರ ಹರಿ | ಪ್ರೀಯ್ಯನಿಗೊಲಿದಂಥಾ 14 ಅಂಡ ಬ್ರಹ್ಮಾಂಡಗಳೊಡೆಯ | ಭಕ್ತಪುಂಡಲೀಕನಿಗೊಲಿದ ಭಿಡೆಯ | ರಹಿತಚಂಡ ಕಿರಣಾನಂತ ಪ್ರಭೆಯ | ಹರಿಮಂಡಿತಿಂದು ಭಾಗ ತಡಿಯ | ಆಹಹಿಂಡು ದೈವರ ಗಂಡ | ಪುಂಡರೀಕ್ಷಾಕನೆಪಿಂಡಾಂಡದೊಳಗಿಹ | ಗಂಡನೆಂದೆನಿಸಿಹಗೆ 15 ಪುರಂದರ ವಿಜಯ ಭಾಗಣ್ಣ | ಮತ್ತೆವರ ಜಗನ್ನಾಥವರ್ಯ | ಬಹುಪರಿಠವಿಸಿತ್ತೆ ಮೃಷ್ಠಾನ್ನ | ದಾಸವರರ ಸೇವಕ ಸೇವಕನ್ನ | ಆಹಪುರಂದರದಾಸರ ದಿನ | ದರುಶನ ವಿತ್ತಿಹೆಅರಿದಾಯ್ತೆನ್ನಯ ಕುಲ | ಪರಮ ಧನ್ಯವೆಂದು 16 ಇಂದು ಭಾಗದಿ ವಾಸ ಜಯ | ಸಿರಿಇಂದಿರೆ ಲೋಲನೆ ಜಯ | ದಾಸಮಂದಗಭೀಷ್ಟದ ಜಯ | ಎನ್ನತಂದೆ ತಾಯಿ ಬಂದು ಜಯ | ಆಹ ಸುಂದರ ಗುರು ಗೋವಿಂದ ವಿಠಲ ಹೃ-ನ್ಮಂದಿರದೊಳು ತೋರಿ | ಬಂಧನ ಬಿಡಿಸುವ 17
--------------
ಗುರುಗೋವಿಂದವಿಠಲರು