ಒಟ್ಟು 140 ಕಡೆಗಳಲ್ಲಿ , 48 ದಾಸರು , 131 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾವ ಲೋಕಕೆ ಎನ್ನ ಎಳತಂದೆ ಹರಿಯೇ ದೇವಕೀ ಕಂದ ಗೋಪಾಲ ನಾನರಿಯೇ ಪ ನಳಧರ್ಮನೃಪ ಹರಿಶ್ಚಂದ್ರಾದಿಗಳು ಜನಿಸಿ ಖಳರನ್ನು ದಂಡಿಸೇ ಶಿಷ್ಟರನು ಹರಿಯೇ ಸಲಹ ಸುಜನರಿಗೆಲ್ಲ ಮಾನವಂ ಕೊಟ್ಟು ತಾ ವಿಳೆಯ ಸತ್ಯದೊಳಾಳಿದಾ ರಾಜ್ಯವಲ್ಲಾ 1 ಹಿಂದೆ ದುರ್ಜನರನ್ನು ತರಿಯಲೋಸುಗ ನೀನು ಅಂದದಿಂದೊಂಬತ್ತು ಅವತಾರವೆತ್ತಿ ಬಂದು ಸುಜನರ ಪೊರೆದು ಧರ್ಮವನು ನೆಲೆಗೊಳಿಸಿ ಚಂದದಿಂ ರಕ್ಷಿಸಿದ ಲೋಕವಿದು ಅಲ್ಲಾ 2 ಮನ್ನಿಸದೆ ಧರ್ಮವನು ನಿತ್ಯಕರ್ಮವ ಬಿಟ್ಟು ಹೀನ ಪಥಗಳ ಪಿಡಿದು ಬಂಜೆಯನು ಆಸೀ ಚನ್ನಕೇಶವ ನಿಮ್ಮ ನಾಮ ಸಂಕೀರ್ತನೆಯ ದೈನ್ಯದಿಂ ಗೈಯದ ರಾಜ್ಯವಿದು ಹರಿಯೇ 3
--------------
ಕರ್ಕಿ ಕೇಶವದಾಸ
ಯೋಗಿ ಮತ್ತೆಲ್ಲಿದ್ದರೇನುಫುಲ್ಲ ಲೋಚನನರಿತು ಪುರುಷೋತ್ತಮನಾದ ಬಳಿಕ ಪ ಈಷಣ ತ್ರಯವಳಿದು ಇಷ್ಟ ಕಾಮ್ಯಗಳಳಿದುದೋಷವೆಂಬುದ ನಳಿದು ದ್ವೇಷವಳಿದುಆಸೆಯೆಂಬುದು ಅಳಿದು ಅಷ್ಟಪಾಶಗಳಳಿದುಈಶ ಸರ್ವೇಶವಿಭು ತಾನಾಗಿರುವವನು 1 ಮನದ ವರ್ತನೆಯಳಿದು ದುಷ್ಟಮದಗಳ ಕಳೆದುಕನಸು ಜಾಗೃತಿ ಸುಷುಪ್ತಿ ಕರ್ಮವಳಿದುಜನನ ಮರಣಗಳಳಿದು ಜಠರ ಬಾಧೆಗಳಳಿದುಘನ ಪುರುಷನಾಗಿ ಘನ ತಾನಾಗಿ ಇರುವನವನು 2 ಪತಿ ಚಿದಾನಂದ ಮೂರುತಿ ತಾನಾದವನು3
--------------
ಚಿದಾನಂದ ಅವಧೂತರು
ರಾಜಮುಖೀ ಬೇಗ ಪ. ಚಿತ್ರವಿಚಿತ್ರಮಾಗಿ ಮೆರೆವ ರತ್ನಖಚಿತ ಮಂಟಪದಿ ಕೆತ್ತನೆಯ ಹಸೆಯಮೇಲೆ ರತ್ನಗಂಬಳಿಯ ಹಾಸಿ 1 ಪರಿಪರಿಯ ರಾಗದಿಂದ ತರುಣಿಯರು ನಿನ್ನ ಪಾಡಿ ಕರೆಯುತಿಹರೋಳ್ ಕರುಣೆಯಿರಿಸಿ ಅರಸನೊಡನೆ ಸರಸದಿಂದ2 ಪಂಕಜಾಕ್ಷಿ ನಿನ್ನ ಚರಣಕಿಂಕರರ ಮೊರೆಯ ಕೇಳಿ ಕನಕಪೀಠದಲ್ಲಿ ಕುಳಿತು ಕಾಂಕ್ಷಿತಾರ್ಥವಿತ್ತು ಸಲಹು 3 ಪರಮಪುರುಷ ಶೇಷಶೈಲವರದನರಸಿ ನಿನ್ನ ಗುಣವೆ ಸ್ಮರಿಸಿ ಸ್ಮರಿಸಿ ಕರೆಯುತಿರುವ ತರಳೆಯರಂ ಪೊರೆಯೆ ತಾಯೆ4
--------------
ನಂಜನಗೂಡು ತಿರುಮಲಾಂಬಾ
ರಾಮ ಭಜನೆ ಮಾಡೋ ಮನುಜ ರಾಮ ಭಜನೆ ಮಾಡೋ ಪ ರಾಮ ರಾಮ ಜಯ ರಾಘವ ಸೀತಾ ರಾಮನೆಂದು ಸುಸ್ವರದಲಿ ಪಾಡುತಅ.ಪ ತಾಳವನು ಬಿಡಬೇಡ ಮೇಳವನು ಮರೆಬೇಡ ತಾಳಮೇಳಗಳ ಬಿಟ್ಟು ನುಡಿದರೆ ತಾಳನು ನಮ್ಮ ಇಳಾಸುತೆಯರಸನು 1 ಭೃತ್ಯ ಮನೋಭಾವದಲಿ ಸತ್ಯ ಜ್ಞಾನ ಅನಂತ ಬ್ರಹ್ಮನು ಹೃದ್ಗತನೆಂದರಿಯುತ ಭಕುತಿಯಲಿ 2 ಭಲರೆ ಭಲರೆಯೆಂದು ತಲೆದೂಗುವ ತೆರದಿ ಕಲಿಯುಗದಿ ವರಕೀರ್ತನೆಯಿಂದಲಿ ಸುಲಭದಿ ಹರಿಯ ಪ್ರಸನ್ನತೆ ಪಡೆಯಲು 3
--------------
ವಿದ್ಯಾಪ್ರಸನ್ನತೀರ್ಥರು
ಲಕ್ಷ್ಮಿ ನರಹರಿ ವಿಠಲ | ರಕ್ಷಿಸೋ ಇವಳ ಪ ತ್ರ್ಯಕ್ಷ ಬಿಂಬನೆ ಸ್ವಾಮಿ | ಪಕ್ಷಿವಹ ಕರುಣಾಕಟಾಕ್ಷ ದಿಂದೇಕ್ಷಿಸುತ | ಕಾಪಾಡೊ ಹರಿಯೇ ಅ.ಪ. ಅಕ್ಷಿ ಮೂರುಳ್ಳ ನಿಟಿ | ಲಾಕ್ಷನೈ ರೂಪದಲಿಅಕ್ಷಿ ಗೋಚರನಾಗಿ | ಸ್ವಚ್ಛ ತೈಜನನೇದೀಕ್ಷೆ ದಾಸತ್ವದಲಿ | ಲಕ್ಷ್ಯವಿಟ್ಟಿಹಳ ಉ-ಪೇಕ್ಷಿಸದೆ ದಯತೋರ್ದೆ | ಲಕ್ಷ್ಮಿ ನರಸಿಂಹಾ 1 ಮನ್ಯು ಸೂಕ್ತದಿಂ ಬ | ಹ್ಪನ್ನ ಭೊಕ್ತøವಿನಿಂದಚೆನ್ನಾಗಿ ಸೇವಿತನೆ | ಅನ್ನಂತ ಮಹಿಮಾಬಿನ್ನವಿಪೆ ನಿನಗೆ ಕಾ | ರುಣ್ಯ ಮೂರುತಿ ಹರಿಯೆಕನ್ಯೆಗಭಯದನೆ ಆ | ಪನ್ನ ಪರಿಪಾಲಾ 2 ಲೌಕಿಕದಿ ಬಹುಪರಿಯ | ಸೌಖ್ಯಗಳ ನೀನಿತ್ತುಪ್ರಾಕ್ಕು ಕರ್ಮವ ಕಳೆದು | ಕಾಪಾಡೊ ಹರಿಯೇ |ಚೊಕ್ಕ ಭಕ್ತಿ ಜ್ಞಾನ | ಅಕ್ಕರದಿ ತವಪದದಿಉಕ್ಕುವ ಪರಿಮಾಡು | ರಕ್ಕಸಾಂತಕನೇ 3 ನೀಚೋಚ್ಚ ತರತಮವು | ಪಂಚ ಬೇದವನರುಹಿಸಂಚಿತವ ದಹಿಸೂವ | ಹಂಚಿಕೆಯನಿತ್ತೂಅಂಚೆವಹಪಿತನೆ ಹೃ | ತ್ಪಂಕಜದಿ ನಿನಕಾಂಬಸಂಚಿಂತನೆಯ ನೀಯೊ | ಪಂಚ ಪ್ರಾಣಾತ್ಮಾ 4 ಪಾವಮಾನಿಯ ಪ್ರೀಯ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಭಾವದಲಿ ತೋರೋ |ನೀವೊಲಿಯುತಿವಳಿನ್ನ | ಕಾವುದೆನೆ ಬಿನ್ನೈಪೆಗೋವಿದಾಂಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರಾಹ ಹರಿ ವಿಠಲ | ಪೊರೆಯ ಬೇಕಿವಳ ಪ ಕರ ಪಿಡಿಯ ಬೇಕೋ ಅ.ಪ. ಕರ್ಮ ಅಘ | ಕಾನನಗೆ ದಾವಾಗ್ನಿನೀನೆ ಕೃಪೆ ನೋಟದಲಿ | ಮಾನಿನಿಯ ಸಲಹೋ 1 ತೀರ್ಥ ಪದ ನಿನ್ನ ಗುಣ | ಕೀರ್ತನೆಯ ನೊದಗಿಸುತಆರ್ತಳುದ್ಧರ ಕಾರ್ಯ | ಪ್ರಾರ್ಥಿಸುವೆ ಹರಿಯೇ |ಮೂರ್ತಿ ನಿನ್ನದು ಹೃದಯ | ಪಾತ್ರದಲಿ ಕಾಣಿಸುತಗೋತ್ರ ಉದ್ಧರಿಸಯ್ಯ | ಪೃಥ್ವಿ ಧರ ದೇವಾ 2 ಭವ ಶರಧಿ | ಪೋತನೀನೆನಿಸೋ 3 ನಿತ್ಯ ಮಂಗಳವಾ 4 ಸೃಷ್ಟೀಶ ಕ್ರೋಡೇಂದ್ರ | ಅಷ್ಟ ಸೌಭಾಗ್ಯದನೆಪ್ರೇಷ್ಟ ನೀನಾಗಿರಲು | ಕಷ್ಟವೆಲ್ಲಿಹುದೋವಿಷ್ಟರಶ್ರವ ಇವಳ | ಸುಷ್ಟು ಪೊರೆವುದು ಎನುತದಿಟ್ಟ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ವಾಸುದೇವನ ಪುರಕೆ ತೆರಳಿದಾರು |ಶ್ರೀಶನಾ ಪ್ರಿಯ ಗುರು ಪ್ರಾಣೇಶ ದಾಸಾರ್ಯ ಪ ಮೂರ್ತಿ ಧ್ಯಾನಮಾಡೀ ತತ್ವ |ಮಾನಿಗಳೊಳೊಂಮ್ಮಿಂದೊಮ್ಮೆ ಆನಂದದಿಂದಲೀ 1 ಹರಿಯೆ ಸರ್ವೋತ್ತಮಾ ತದ್ರಾಣಿ ಶಿರಿಬೊಮ್ಮ |ಮರುತ ದೇವರೆ ಗುರುವು, ತಾರತಮ್ಯ ||ವರಪಂಚಭೇದ ಜ್ಞಾನವನರಿತು ಮನದಿ ಹರಿ |ಪುರದೊಳಿಹ ಪರಮ ಭಕ್ತರ ಕಾಣಬೇಕೆನುತ 2 ಮೋಕ್ಷರೌದ್ರೀ ಅಬ್ಧಮಾಘದರ್ಶಾ ಪೂರ್ವಭಾದ್ಧರಾ |ನಕ್ಷತ್ರ ಸೋಮವಾರದಿದ್ದವ ದ್ವಿತಿಯ ಯಾಮದೀ |ಲಕ್ಷಿ ಇಟ್ಟೂ ಲಯದ ಚಿಂತನೆಯ ಗೈಯುತಲಿ |ಪಕ್ಷಿವಾಹನ ಶ್ರೀಶಪ್ರಾಣೇಶ ವಿಠಲೆನುತ 3
--------------
ಶ್ರೀಶಪ್ರಾಣೇಶವಿಠಲರು
ವಿಘ್ನೇಶ ಪ್ರಿಯ ವಿಠಲ | ಸದ್ಗುಣಾರ್ಣವನೇ ಪ ದುರಿತ | ಉದ್ಧರಿಸೊ ಇವನಾ ಅ.ಪ. ಮೂಲ ಕಾರಣ ಜಗಕೆ | ಪಾಲಾಬ್ಧಿಶಯ ನಿನ್ನ ಲೀಲೆಗಳ ತೋರುತ್ತ | ಸಲಹೊ ಇವನಾಕೀಲಾಲ ಜಾಸನುತ | ಮಾಲೋಲ ಶ್ರೀ ಹರಿಯೆವ್ಯಾಳ್ಯ ವ್ಯಾಳ್ಯಕೆ ಪಾಪ | ಜಾಲಗಳ ಹರಿಸೋ 1 ಆಪ್ತ ಸತಿಸುತರಲ್ಲಿ | ವ್ಯಾಪ್ತ ನಿಹ ಹರಿಯೆಂದುಸೂಕ್ತೋಪಚಾರಗಳ | ಪ್ರಾಪ್ತಿಗೈಸುತಲೀ |ಮೌಕ್ತಿಕೋ | ಪಾಯವೇ | ದೋಕ್ತಸಮನಿಸುತಕೀರ್ತಿಕೊಡಿಸಿವಗೆ ಶ್ರೀ | ಕಾಂತ ಮೂರುತಿಯೇ2 ಪಾಂಚ ಭೌತಿಕ ದೇಹ | ಪಂಚತ್ವ ಪಡೆವುದನೆಸಂಚಿಂತನೆಯ ಕೊಟ್ಟು | ಪಂಚ ಪಂಚಾತ್ಮಾಮುಂಚೆ ತಿಳಿಸಿವಗೆ ಸ | ತ್ಪಂಚ ಭೇದ ಜ್ಞಾನವಾಂಛಿತಾರ್ಥದನಾಗೊ | ಅಂಚೆವಹಪಿತನೇ 3 ನಂದ ಮುನಿ ಮತದ ಮಕ | ರಂದ ಉಣಿಸುತ ಇವಗೆಸಂದೇಹ ಕಳೆದು ಆ | ನಂದಗಳ ನೀಯೋಇಂದಿರಾರಾಧ್ಯ ಪದ | ಮಂದಾಕಿನೀ ಜನಕಕಂದನನು ಕಾಪಾಡು | ಯೆಂದು ಪ್ರಾರ್ಥಿಸುವೇ 4 ಕಾಲ | ಯಾವ ಸಮಯದಲಿರಲಿದೇವತವ ಸಂಸ್ಮರಣೆ | ಭಾವದಲಿ ಮಾಳ್ವಾಭಾವ ಪಾಲಿಸುತಿವಗೆ | ನೀವೊಲಿಯ ಬೇಕೆಂದುದೇವ ಪ್ರಾರ್ಥಿಪೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಿಜಯ ಗುರು ತವಪಾದರಜವ ಕರುಣಿಸಿ ಎನಗೆ ಭುಜಗಶಯನನ ಧ್ಯಾನ ಭಜನೆ ನೀಡುವುದು ಪ. ತವ ಶಿಷ್ಯವಂಶ ಸಂಜಾತಳೆನ್ನುತಲಿ ಬಹು ತವಕದಲಿ ಕರುಣಾರ್ದ ದೃಷ್ಟಿಯಿಂದ ತವ ಸೇವೆ ಎನಗಿತ್ತು ತವ ಕೀರ್ತನೆಯ ನುಡಿಸಿ ಮೂರ್ತಿ ತೋರೆನ್ನ ಭವತಾಪ ಹರಿಸಯ್ಯ 1 ನಿನ್ನ ಮಹಿಮೆಯ ಗುಟ್ಟು ವರ್ಣಿಪರು ಯಾರಿನ್ನು ನಿನ್ನ ಚರ್ಯೆಯ ಚರಿತೆ ಬರೆದವರ್ಯಾರೊ ನಿನ್ನ ನಿಜ ಸಂಕಲ್ಪ ಇನ್ನು ಅರಿಯುವರುಂಟೆ ಬನ್ನ ಭವ ಉಂಟೆ 2 ಆ ದೇವಮುನಿ ಆಜ್ಞೆ ಮೋದದಲಿ ಸ್ವೀಕರಿಸಿ ಪಾದನ್ಯೂನತೆ ಕವನ ಪೂರ್ಣಗೊಳಿಸಿ ವೇದಶಾಸ್ತ್ರಗಳರ್ಥ ಸುಲಭದಲಿ ತಿಳಿಸುತಲಿ ಹಾದಿ ತೋರಿದೆ ಶಿಷ್ಯರಾದ ಸುಜನರಿಗೆ 3 ಸತ್ಕರ್ಮ ಫಲಗಳನು ನಿತ್ಯದೊಳಗರ್ಪಿಸಲು ಉತ್ತಮನು ಆರೆಂಬ ಚಿತ್ತದಳಲ ಮುಕ್ತಿಯೋಗ್ಯರಿಗೆ ಬಹು ಯುಕ್ತಿಯಿಂದಲಿ ತೋರಿ ಉತ್ತಮನು ಹರಿಯೆಂದು ಶಕ್ತಿಯಿಂ ಸ್ಥಾಪಿಸಿದ 4 ವೈಕುಂಠಪುರದೊಳಗೆ ಶ್ರೀ ಕರನ ವಕ್ಷಕ್ಕೆ ಸೋಕಿಸಿದೆ ಚರಣವನು ಜೋಕೆಯಿಂದ ಈ ಕಾರ್ಯಕಾರಣವ ನಾ ಕೇಳಿ ನುಡಿವಂಥ ವಾಕು ಲಾಲಿಸುತ ವಿವೇಕ ಮತಿ ಕರುಣಿಪುದು 5 ಆ ಕಮಲನಾಭನಾ ಹೃದಯ ಕರುಣಾಮೃತವು ಸೋಕಿ ತುಂಬಿಹುದು ತವ ಚರಣ ಕಮಲದಲಿ ನಾ ಕೇಳ ಬಂದೆನಾ ಕರುಣಾಮೃತದ ಕಣವ ಯಾಕೆ ಮರೆಮುಚ್ಚಿನ್ನು ನೀ ಕೊಡೈ ತವಕದಲಿ 6 ಪಾದ ರೂಢಿಗೊಡೆಯಗೆ ಲಕುಮಿ ಓಡಿದಳು ಕರವೀರಪುರಕೆ ಸ್ವಾಮಿ ಬೇಡಾಗೆ ವೈಕುಂಠ ನೋಡಿ ಆನಂದಾದ್ರಿ ಮಾಡಿದನು ಮಂದಿರವ ಕೂಡಿ ಪದ್ಮಿನಿಯ 7 ನೋಡಿ ವೈಕುಂಠದೊಳು ನಾಡಿಗೊಡೆಯನ ಚರ್ಯ ರೂಢಿಯೊಳು ಜನಿಸಿ ಭೂಸುರವಂಶದಿ ದುರಿತ ಈಡಾಡಿ ಹರಿದಾಸ್ಯವನು ಬೇಡಿ ಬಯಸುತ ಪೊಂದಿ ನಾಡಿನೊಳು ಮೆರೆದೆ 8 ಪ್ರತಿವರ್ಷ ಬಿಡದೆ ತಿರುಪತಿ ಯಾತ್ರೆ ಭಕ್ತಿಯಲಿ ಪತಿತಪಾವನನ ಓಲೈಸಿ ಮೆರೆದೆ ಕ್ಷಿತಿಯಕ್ಷೇತ್ರ ಅಪ್ರತಿಮಹಿಮ ಸಂಚರಿಸಿ ಕ್ಷಿತಿಗೆ ತೋರಿದೆ ನಿನ್ನ ಮಹಿಮೆ ಜಾಲಗಳ 9 ಅಂಕಿತವದಲ್ಲದೆ ದಾಸತ್ವ ಸಿದ್ಧಿಸದು ಕಿಂಕರಗೆ ಅಂಕಿತವೆ ಕುರುಹು ಎಂದು ಅಂಕಿತವ ಪಡೆದು ಚಕ್ರಾಂಕಿತನ ಗುಣ ಮಹಿಮೆ ಶಂಕಿಸದೆ ಪೇಳ್ದೆ ತವ ಕಿಂಕರೋದ್ಧಾರಕನೆ 10 ನಿನ್ನ ಮಹಿಮಾದಿಗಳ ವರ್ಣಿಸಲು ಎನ್ನಳವೆ ಚನ್ನ ಗುರು ವಿಜಯವಿಠ್ಠಲನ ಪದಕಮಲ ಚನ್ನಾಗಿ ಕಂಡು ಹೃನ್ಮಂದಿರದಿ ಸತತದಲಿ ತನ್ಮಂತ್ರ ಕಿರಣವೆಮ್ಮಲ್ಲಿ ಬೀರಿದ ಕರುಣಿ 11 ವಿಕ್ರಮ ಕಾರ್ತೀಕ ಶುದ್ಧ ದಶವಿೂ ದಿವ್ಯ ಶುಕ್ರ ನಾಮರು ವಾರ ಶುಭದಿನದಿ ಇಂದು ಅಕ್ಕರದಿ ಕರಸಿಲ್ಲಿ ಉಕ್ಕಿಸಿದೆ ತವ ಸ್ತೋತ್ರ ಮಕ್ಕಳಂದದಿ ಪೊರೆವ ಅಕ್ಕರೆಯು ಉಂಟೊ 12 ಮಧ್ವರಾಯರ ಕುಲದಿ ಉದ್ಭವಿಸಿದಂಥ ಈ ಶುದ್ಧ ವೈಷ್ಣವ ಕುಲದಿ ಜನಿಸಿ ಬಂದೆ ಶುದ್ಧ ದಾಸತ್ವದ ಮುದ್ರಾಂಕಿತದ ರತ್ನ ಪಾದ ಕಂಡೆ 13 ಪಾಪಿ ಜನರುದ್ಧರಿಪ ಪಾವನಗಾತ್ರನೆ ಆ ಪಯೋಜಾಸನರ ತರತಮ್ಯವ ಸ್ಥಾಪಿಸಿದ ಮಹಿಮನೆ ಸದ್ಗುಣಾಂಬುಧಿ ನಿಲಯ ಗೋಪಾಲಕೃಷ್ಣವಿಠ್ಠಲನ ಪದಭೃಂಗ 14
--------------
ಅಂಬಾಬಾಯಿ
ವಿಷ್ಣುಶತಕ ಶಿರಿದೇವಿ ಹೃತ್ಕುಮುದ ಚಂದ್ರಮನೆ ಕರುಣಾರ್ಣವಾಗಣಿತ ಸದ್ಗುಣನೇ ಭಂಜನ ಮುರಾಂತಕನೇ ಪರಮಾತ್ಮ ಪಾಲಿಸು ಪರಾತ್ಪರನೇ 1 ಕಮಲಾಸನಾದ್ರಿಜೆ ಮನೋಹರ ಮು ಖ್ಯಮರಾಳಿಯಂ ಭಕುತಿಯಿಂ ಬಲಗೊಂಡು ಮ- ಹಾತ್ಮರಾದ ಗುರುಪಾದಕೆ ನಾಂ ನಮಿಸೀ ಪ್ರಬಂಧವನು ಹೇಳುತಿಹೇಂ2 ನೂರಾದ ಪದ್ಯಗಳೊಳಾಂ ಸಕಲಂ ಧಾರಾಳವಾಗಿ ತವ ಸನ್ನಿದಿಯೋಳ್ ಸಾರಂಗಳಂ ಗ್ರಹಿಸಿ ಬಿನ್ನಯಿಪೇಂ ಶ್ರಿರಾಮನೀಂ ದಯದಿ ಲಾಲಿಸಿ ಕೇಳ್ 3 ಕವಿತಾ ಧುರೀಣತೆಯು ಬಂದುದು ನಿ_ ನವ ಯುಕ್ತಿ ಚತುರತೆಗಳೊಂದರಿಯೇಂ 4 ಜೀವಕ್ಕೆ ನೀನು ಮಿಗೆ ಚಿತ್ತದಿ ಶ್ರೀ ದೇವೀ ಮನೀಷದೊಳು ಬ್ರಹ್ಮನಿಹಂ ಯಾ ವಿಶ್ವನಾಥ ಸಹ ರುದ್ರ ಮನೋ ಭಾವಂಗಳಿಂಗೊಡೆಯನಾಗಿರುವಂ 5 ಸಲೆ ಹಮ್ಮಿಗಾ ತ್ರಿಪುರ ಸಂಹರನೇ ಉಳಿದಿಂದ್ರಿಯಗಳಿಗೆ ಜಿಷ್ಣುಮುಖರ್ ಒಳಗಿದ್ದು ಒಳ್ಳಿದನು ಕೆಟ್ಟುದನೂ ಬಲವಿತ್ತು ಮಾಡಿಸುವರೈ ಹರಿಯೆ 6 ಜಲಜಾತ್ಮಜಾಭಿಮತ ಬಂಧು ಪಥಂ ಗಳು ಮೂರು ಬಗೆಯು ನೋಡಿದರೆ 7 ಮಿಗೆ ಕರ್ಮಕರ್ಮವು ವಿಕರ್ಮಗಳೂ ಜಗದಲ್ಲಿ ಎಲ್ಲರಿಗು ಮೂಲವಿದೂ ತ್ರಿಗುಣ ಪ್ರಬದ್ಧರಹ ಜೀವಗಣಾ ಖಗರಾಜ ವಾಹನನೆ ಸಾಕ್ಷಿಯು ನೀಂ 8 ಸದಸದ್ವಿವೇಕಾವನು ಕಾಣದೆ ಸ ಚಿದಚಿದ್ವಿಲಕ್ಷಣನು ನೀನೆನದೇ ಮದಗರ್ವದಿಂದ ಮೆರೆದಾಂ ಕೆಡುವೇಂ 9 ಕುಹುಕಾತ್ಮರಾದವರ ಸಂಗದಿ ಬಂ- ದಿಹ ನೋವು ನಾನಕಟ ಬಣ್ಣಿಸೇಂ10 ಅಂತವರ್ಗವಾರ್ವರು ಶರೀರದೊಳಿ ದುರ್‍ವೃತ್ತಿ ಪುಟ್ಟಿಸುತ ಕೊಲ್ಲುತಿಹರ್ ಪರಮಾತ್ಮ ನಿನ್ನವರ ಸೇರಿರುವೇಂ 11 ಮಲಮೂತ್ರ ಕೂಪವಹ ದೇಹವಿದು ಜಲಗುಳ್ಳೆ ಎಂದರಿತಡಂ ಬರಿದೇ ಕಲುಷಾತ್ಮನಾದೆ ಕರಿರಾಜವರದಾ 12 ಹಸನಾಗಿ ತೋರುತಿಹ ದುರ್ವಿಷಯಂ ಬಿಸಿನೀರು ತುಂಬಿರುವ ಬಾವಿಯಿದುಂ ಕುಸುಮಾಸ್ತ್ರನೆಂಬ ಕಡುಗಳ್ಳನು ತಾ ನೆಸಗೀ ಪ್ರವಾಹದಲಿ ನೂಕುತಿಹಂ13 ಪಾದ ಪದ್ಮಂಗಳ ನಂಬಿದೆ ವೆಂ- ಮ್ಮವಮಾನ ಮಾನಗಳು ನಿನ್ನದುದೆಂ- ದ್ವ್ಯವಸಾಯವಂತರೆ ಮಹಾತ್ಮಕರೂ 14 ಜನುಮಗಳನೆತ್ತುತಲಿ ಜೀವರು ನಿಂ ನನು ಕಾಂಬ ಯೋಚನೆ ತಿರಸ್ಕರಿಸೀ ಘನ ಕಾಮಭೋಗಗಳಪೇಕ್ಷಿಸಿತಾಂ ಧನಕಾಗಿ ದುರ್ಜನರ ಸೇವಿಸುವರು 15 ಹಿತದಿಂದ ಎಲ್ಲರಿಗೆ ನೀನೆ ಇದಂ ಮತಿಹೀನರಾದವರು ಬಾಹ್ಯರ ನಂ- ಬುತ ದುಃಖದಿಂದಲವಿವೇಕರಹರ್ 16 ಗುಣಶೂನ್ಯ ನೀನೆನುತ ಕೊಂಚ ಜನಂ ಗಣಿಸಲ್ಕಸಾಧ್ಯವಹ ವಾದಗಳಿಂ ಘನ ತರ್ಕದಿಂದ ಅನುವಾದಿಸಿ ದುರ್ ಜನ ಮುಖ್ಯರೆನಿಸುತಿಹರ್ ಭುವಿಯೊಳ್ 17 ಅನುಮಾನವೇ ತಮಗೆ ಮುಖ್ಯವೆನು- ತನುಸಾರಿ ರಾಜಸದಿ ತಾಂ ಮುಳುಗೀ ವನಜಾಕ್ಷ ಕೋರಿಕೆಗಳಿಂ ಭಜಿಪರ್ 18 ಉದರ ಪ್ರಯುಕ್ತ ಪರರಾಶ್ರಯಿಸಿ ಪದ್ಯ ಪದ್ಯ ಪೇಳಿ ಬಹುನೀಚನು ನಾ- ನುದಯಾಸಮುದ್ರರೆಲೆ ನೀವೆನುತೇ ಸುದುರಾತ್ಮರಂ ಪೊಗಳಿ ಕೆಟ್ಟೆನು 19 ಹಿತತತ್ವ ಭಾವದಲಿ ದುರ್ಜನರು ಮತಿವಂತರಂತೆ ಬಹಿಯೋಳ್ ನಟಿಸಿ ಸತಿ ಪುತ್ರ ವಿತ್ತಗಳ ಮೋಹದಲೀ ವ್ಯಥೆಪಟ್ಟು ಬಾಯ್ಬಿಡುತ ನೋಯುತಿಹರ್20 ಮೊದಲಾಗಿ ಎಲ್ಲರನು ಮಾಯದಿ ನಿ- ನ್ನುದ ರಾಖ್ಯ ವಾರಿನಿಧಿಯಿಂದಲಿ ತಾವ್ ಉದಿಸಿರ್ಪರೆಂದುಸುರುಗುಂ ಶ್ರುತಿಗಳ್ 21 ಅನುಮಾನವುಳ್ಳ ಜನಕೆಂದಿಗು ಪಾ- ಮೂರ್ತಿ ನಿನ್ನ ಘನ ಜ್ಞಾನ ಸುಖಂ ತೃಣ ಮಾತ್ರವೂ ಬರದು ಸ್ವಪ್ನದೊಳು ಜನದಲ್ಲಿ ಕೀರ್ತಿ ಬಹಿಯೊಳ್ ಬರಿದೆ 22 ಗುರುಸೇವೆಯಿಂದ ತನುದಂಡಿಸಿ ತಾ ನಿರುತಂ ಸುಶಾಸ್ತ್ರಗಳ ನೋಡುತಲಿ ಸ್ಥಿರ ಚಿತ್ತನಾಗಿ ಶ್ರವಣಾದಿಗಳಿಂ ಹರಿಭಕ್ತರಿಂದ ಕಡೆಸೇರುತಿಹಂ 23 ಕವಿಯಾದವರ್ ನಿರುತವುಂ ಮಿಗೆ ಭಾ- ಗವತಾದಿ ಗ್ರಂಥಗಳ ಸಜ್ಜನರಿಂ ಕಿವಿಯಿಂದ ಕೇಳುವುದಕಂ ಬಹು ಜ- ನ್ಮವು ಪಕ್ವವಾಗಿ ಸಲೆ ಪ್ರಾಪ್ತಿಸುಗುಂ 24 ಹರಿಕೃಷ್ಣ ಕೇಶವ ಮುಕುಂದ ನೃಕೇ- ಸರಿ ವಿಷ್ಣುವಾಮನ ತ್ರಿವಿಕ್ರಮ ಶ್ರೀ ಪದ್ಮನಾಭ ಮಧುಸೂದನ ಹೇ ಪುರಷೋತ್ತಮೌಚ್ಯುತ ಜನಾರ್ದನನೇ 25 ವಸುದೇವ ನಂದನ ಮುರಾಂತಕನೇ ಹೃಷಿಕೇಶ ನಾರೇಯಣ ಮಾಧವನೇ ಪರಿ ಪಾ- ಲಿಸುಪೇಂದ್ರ ಭಕ್ತರ ಅಧೋಕ್ಷಜನೇ 26 ಪರಮಾತ್ಮ ನೀನೆಮಗೆ ಎನ್ನುತನಂ- ಬರು ನಿನ್ನ ತಾಮಸರು ಸತ್ಯವಿದು ನೆರೆ ನೋವಿನಿಂಬಳಲಿ ತಾವ್ ಮಿಗೆ ಸಂ- ಸರಣ ಪ್ರವಾಹದೊಳು ಬೀಳುತಿಹರ್ 27 ದ್ಗುಣದಲ್ಲಿ ದುರ್ಗುಣಗಳೇ ಗಣಿಸಿ ಘನ ಮೋಹ ದುಃಖದೊಳು ಸತತ ನಿ- ನ್ನನು ಕಾಂಬ ಯೋಚನೆಯ ಬಿಟ್ಟಿರುವರ್ 28 ನ್ನನು ನಂಬಿ ನಂಬಿದಲೆ ತಾವ್ ನಿರತಂ- ಘನ ಕಾಮ ಕ್ರೋಧ ಮದ ಮತ್ಸರದಿಂ ಜನದಿಂದ ಯತ್ನವನು ಮಾಡುತಿಹರ್ 29 ದೇವಾದಿದೇವ ದಿವಿ ಭೂಮಿಗಳೋಳ್ ಭಾವ ಪ್ರಭೇದದಲಿ ಧ್ಯಾನಿಪರಿಂ- ಗೀ ವೇಷ್ಟಸಿದ್ಧಿಗಳ ನೀನೆ ಸದಾ 30 ಯೋಗಿ ಜನವಂದಿತ ಸ- ಜ್ಜನಕಲ್ಪವೃಕ್ಷ ಜಗದೇಕ ವಿಭೋ ವನಜಾಕ್ಷ ಇಂದಿರೆಯ ವಲ್ಲಭ ಬ್ರಾ- ಹ್ಮಣ ಪ್ರೀಯ ಭಕ್ತಸುಖದಾಯಕನೇ 31 ರವಿಕೋಟಿತೇಜ ರಮಣೀಯ ಕಥಾ- ತವನಾಮ ಕೀರ್ತನೆಯ ಮಾಳ್ಪರ ಪಾ- ಪವ ನೀನೆ ಓಡಿಸುವುದೇನರಿದೈ 32 ವರಾಹ ನೃಕೇ- ಸರಿ ವಾಮನಾವನಿ ಸುರೋತ್ತಮ ಭಾ- ಸ್ಕರ ವಂಶ ಚಂದ್ರವಸುದೇವಜ ಭಾ ಬುದ್ಧ ಕಲ್ಕ ವಪುಷೇ ನಮಃ 33 ಮುನಿಕರ್ದಮಂಗುದಿಸಿ ತಾಯಿಗೆ ಪಾ ವನ ರಾಜಯೋಗವನು ಬೋಧಿಸಿದೈ ಘನಯೋಗಿವರ್ಯ ಕಪಿಲಾಖ್ಯನೆನಿ- ನ್ನನು ನಂಬಿ ಪ್ರಾರ್ಥಿಸುವೆನಾನನಿಶಂ 34 ರ್ಜುನ ಕಾರ್ತವೀರ್ಯಗುಪದೇಶಿಸಿದೇ ಘನಯೋಗ ಬೋಧೆಯನು ಹೈಹಯರ್ ತಾ ವನುವಾದ ಶಿಷ್ಯರೆಲೆದತ್ತವಿಭೋ 35 ಋಷಭಾಖ್ಯನಾಗಿ ಸುತರಿಂಗೆ ಮಹಾ ಋಷಿಚರ್ಯ ಬೋಧಿಸಲವರ್ ತಿಳಿದು ದಶಯೋಗಿವಂದಧಿಕ ಎಂಬತ್ತು ಭೂ- ಮಿಸುರಕ್ರಿವೃತ್ತಿಯಲಿ ಶೋಭಿಸಿದರ್ 36 ಜಂಭ್ವಾಖ್ಯ ದ್ವೀಪದೊಳು ಖಂಡಗಳಿಂ ಅಂಭೋಜನಾಭ ತವನೇಮದಲೀ 37 ಹರಿ ನೀನೆ ಪುಟ್ಟಿಯದು ಸ್ಥಾಪಿಸಿ ದು ರ್ನರರನ್ನು ಕೊಂದು ಶರಣಾಗತರಂ ಪರಿಪಾಲಿಸುತ್ತಿರುವೆ ಸಂತತವುಂ 38 ಕಲಿಕಾಲವೀಗ ಖಳರೆಲ್ಲರು ಸ- ತ್ಕುಲದಲೆ ಪುಟ್ಟಿ ನೆರೆ ಸಾಧುಗಳಂ ಬಲುಬಾಧಿಸುತ್ತ ದುರಿತಂ ಘಳಿಸೇ ನರಕಂಗಳಲ್ಲಿ ನೆರೆಯಾಗುತಿಹರ್ 39 ಪರಮಾತ್ಮ ತತ್ವದಲಿಯೇ ಮರವು ದುರ್ವಿದ್ಯವಭ್ಯಸಿಪುದಕೆ ಮನವು 40 ಪರರನ್ನು ನೋಡಿಯವರಂತೆ ತಾ ವಿರಬೇಕೆನ್ನುತ್ತಲನಿಶಂ ಬಳಲೀ ಗುರುಯತ್ನಮಾಡಿ ವಿಫಲಾಗಲು ಶ್ರೀ ಹರಿ ನಿನ್ನದೂರುತಿರುವರ್ ದುರುಳರ್41 ಕರ್ಣ ಮುಖರಿಂದಲಿ ಸಂ ಗರದಲ್ಲಿ ಕಾದಿ ಮಡಿದಂ ಬರಿದೇ42 ಜಮದಗ್ನಿ ಪುತ್ರನಿಗೆ ಶಿಷ್ಯನು ಭೀ ಷ್ಮಮಹಾ ಪರಾಕ್ರಮಿಯು ದ್ರೋಣನುತಾಂ ಕಮಲಾಪ್ತಪುತ್ರ ಕಲಿ ಶಲ್ಯ ಮುಖ್ಯರ್ ಭ್ರಮೆಯಿಂದಲನ್ನಕಸುಗಳ್ ತೊರೆದರ್ 43 ಯಮಜಂ ವೃಕೋದರನು ಫಲ್ಗುಣನೂ ಯಮಳರ್ ತವಾಂಫ್ರಿಸ್ಮøತಿಯೇ ಬಲವಾ- ಗಿ ಮಹಾಪದಂಗಳನು ದಾಂಟಿದರೈ ಸುಮಬಾಣನಯ್ಯನೆ ಮಹಾತ್ಮರವರ್ 44 ಹರಿ ನಿನ್ನ ಡಿಂಗರಿಗರಿಗಾಶ್ರಯವೇ ವರಭಾಗ್ಯ ನಿತ್ಯಸುಖವೆನ್ನುತಲೀ ಅರಿದುತ್ತಮರ್ ಬಯಸರೆಂದಿಗು ಪಾ- ಮರರಂತೆ ತುಚ್ಛಗಳ ಸ್ವಪ್ನದೊಳು 45 ಸಲೆ ಚಿನ್ನ ಬೆಳ್ಳಿ ಬೆಲೆ ಹೆಚ್ಚು ಪಟ ಗಳ ಗೃಹಕ್ಷೇತ್ರ ಸುತದಾರ ಧನ- ಗಳ ನಿತ್ಯವೆಂದರಿದು ಲೆಕ್ಕಿಸದೇ ಜಲಜಾಕ್ಷ ನಿನ್ನ ಭಜಿಪರ್ ಸುಜನರ್ 46 ಸುಜನಾಬ್ಧಿ ಚಂದ್ರ ಸುಗುಣಾರ್ಣವ ನೀ ನಿತ್ಯ ನಿರವದ್ಯ ಸ್ವಭಾ ವಜ ಕರ್ಮದಿಂ ಸಕಲ ಪ್ರಾಣಿಗಳೂ ನಿಜಯೋಗ್ಯತೆಯಂತೆ ವರ್ತಿಪುದು 47 ಕರುಣಾನಿಧೇ ಕಮಲಲೋಚನನೆ ಸು- ರರಾಜ ಸೋದರನೆ ಭಾವಜನೈ ಯರಮಾಧಿನಾಥ ಯದುವಂಶ ಭೂ ರಥಾಂಗ ಪಾಣಿಯೆ ಜನಾರ್ದನನೇ 48 ರಘುವಂಶಕೇತು ರವಿಮಂಡಲದೋಳ್ ಭಗವನ್ನಿರಂತರದಿ ನೀನಿರುತೆ ಜಗಕೆಲ್ಲ ಕಾಲದನುಸಾರದಿ ನೀ ನಘನಾಳಿಯಿಂದ ಮಳೆಯಂ ಕೊಡುವೇ 49 ವಿಭುದಾಗ್ರಗಣ್ಯರಹ ಜ್ಞಾನಿಗಳೂ ಶುಭವನ್ನು ಲೋಕಕೆ ಸದಾಚರಿಸಿ ನಭ ಭೂಮಿ ಮಧ್ಯದಲಿ ಕೀರ್ತಿ ಸೌ- ರಭವಾಗಿ ಸ್ಥಾಪಿಸಿ ವಿಮುಕ್ತರಹರ್ 50 ಯೋಗ ಪ್ರವರ್ತನೆಯಲೇ ಸುಖಿಸಿ ರೋಗಾದ್ಯುಪದ್ರಗಳು ಇಲ್ಲದಲೇ ರಾಗಾದಿ ದೋಷಗಳ ಸುಟ್ಟಿರುವರ್ 51 ಮನವಾಕ್ಕು ಕಾಯಗಳೊಳೊಂದೆ ವಿಧಂ ಋಣಮುಖ್ಯ ಸೂತಕಗಳಿಲ್ಲದೆಲೇ ಗುಣವಂತರೆನ್ನಿಸಿಯೇ ಶೋಭಿಸುತಾ ಜನದಲ್ಲಿ ಮೌನದಲಿ ವರ್ತಿಸುವರ್ 52 ನರರೊಳ್ ದಿವೌಕಸರು ಪುಟ್ಟುತಲೀ ಹರಿಭಕ್ತಿಯುಕ್ತರೆನಿಸುತ್ತಲಿಸ- ತ್ವರದಿಂದ ಸಾಧನವ ಮಾಡುತಲೀ<
--------------
ಗುರುರಾಮವಿಠಲ
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶ್ರೀ ಗುರುಕರುಣವು ಸೋಜಿಗವು ಕೌತುಕವು ಧ್ರುವ ಗುರುಹಸ್ತ ಪರುಷಸದೃಶ ನಿದರುಶÀದೋರುತಿಹ್ಯ ಅಗಣಿತ ತೇಜೋಮಯ ಪ್ರಕಾಶ ಇದು ಅನಿಮಿಷ ನೇತ್ರಲಿ ನೋಡುವದು ನೋಡುವದು ಘನ ಮಹಿಮೆಯೊಳು ಬೆರದಾಡುವದು ಬೆರದಾಡುವದು ತನ್ನೊಳು ತಾ ನಲಿದಾಡುವದು ನಲಿದಾಡುವದು ಅನುಭವ ಸುಖ ಸೂರ್ಯಾಡಿ ಸದ್ಗತಿ ಮುಕ್ತಿಯನೆ ಪಡೆವದು ಶ್ರೀಗುರುದಾಸರು 1 ಗುರುವುಪದೇಶ ಜ್ಞಾನಪ್ರಕಾಶ ಅತಿಸಂತೋಷ ಛೇದಿಸುವುದು ಭವಪಾಶ ಇದು ನಿದ್ರಸ್ಯ ಕರ್ನಲಿ ಕೇಳ್ವದು ನಿದ್ರಸ್ಯ ಕರ್ನಲಿ ಕೇಳ್ವದು ಲಯ ಲೀಲೆಯೊಳು ಆಲಿಸುವದು ಆಲಿಸುವದು ಪರಿಪರಿ ಶ್ರುತಿಗ್ಹೇಳೆನಿಸುವದು ಹೇಳೆನಿಸುವದು ಪತಿತಜೀವನ ಪಾವನಗೈಸುವದು ಸದ್ಗುರು ಮಹಿಮೆಯ ತಿಳಿಯದು ತಿಳಿಯದೀ ಶ್ರೀಗುರು ದಾಸರು 2 ಗುರು ನಿಜಬೋಧ ಬಲು ಅಗಾಧ ಪರಮ ಆಹ್ಲಾದ ತಿಳಿದವ ಜನ್ಮಕ ವಿರಹಿತವಾದ ಇದು ಅತಿಸೂಕ್ಷ್ಮಗತಿ ಭೇದಿಸುವದು ಭೇದಿಸುವದು ಗುರುಪಾದವೆಗತಿ ನಿಶ್ಚೈಸುವದು ನಿಶ್ಚೈಸುವದು ಸಮ್ಯಕಙÁ್ಞನವು ಸಾಧಿಸಿ ಆತ್ಮದಿ ಜೀವನ್ಮುಕ್ತನಾಗುವದು ಸದ್ಗುರು ಪಾದವು ಸಾಧಿಸಿ ಸಾಧಿಸಿ ಶ್ರೀಗುರುದಾಸರು 3 ಗುರುಕೃಪೆಜ್ಞಾನನ ಅಳಿವುದಙÁ್ಞನ ತಿಳಿವದು ಯಾತನ ಕಳೆವದು ಜನ್ಮ ಜರಾಮರಣ ಇದು ಪೂರ್ವ ಕಲ್ಪನೆಯು ಕಲ್ಪನೆಯು ಆತ್ಮಙÁ್ಞನದ ವರ್ತನೆಯು ವರ್ತನೆಯು ಸಾಯಸವಳಿದು ಯತ್ನವು ಪ್ರಯತ್ನವು ಶ್ರೀಗುರು ಭಕ್ತಿಯು ಮಾಡಿರಯ್ಯ ಮಾಡಿರಯ್ಯ ಸದ್ಗುರುದಾಸರು4 ಗುರುಙÁ್ಞನ ದೀಕ್ಷಾ ಕರುಣಾ ಕಟಾಕ್ಷ ಸದ್ಗತಿಮೋಕ್ಷ ತೋರುತಿಹ್ಯ ಗುರುತಾನೆ ಪ್ರತ್ಯಕ್ಷ ಇದು ಭಾಸ್ಕರ ಗುರು ಕೃಪಾದೃಷ್ಟಿಯು ಅಮೃತದ ದೃಷ್ಟಿಯು ಜೀವನ ಸಂತುಷ್ಟಿಯು ಮುರಿಯಿತು ಮಹಿಪತಿ ಹುಟ್ಟುವ ಹೊಂದುವ ಬಟ್ಟೆಯು ತ್ರಾಹಿ ತ್ರಾಹಿ ಗುರುನಾಥ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಪ್ರಾಣೇಶದಾಸಾರ್ಯರ ಸ್ತುತಿ ತೆರಳಿದರು ಪರಮ ತೋಷದಲಿ ಹರಿಪರಕೆ |ಹರಿಪ್ರೀಯರಾದ ಪ್ರಾಣೇಶದಾಸರು ತ್ವರದಿ ಪ ನಿರುತದಲಿ ಹರಿಪೂಜೆ |ಮರಿಯದಲಿ ಮಾಡಿ ಬಲು |ಸ್ಥಿರ ಬುದ್ಧಿ ಪೂರ್ವಕದಲಿ |ಗುರುಗಳಲಿ ಸರ್ವಜ್ಞರಾಯರಿಂದಧಿಕ ಮ ||ತ್ತಿರಲುಂಟೆ ಎಂದು ತಿಳುಹಿ |ದುರುಳ ಜನರನುಸರಿಸದಲೆ ಕವಿಗಳೊಡನಾಡಿ |ಚರಿಸಿ ದೇಶಗಳಲ್ಲಿ ಮೆರೆದು ಖ್ಯಾತಿಯ ಪಡದು 1 ಭಾಗವತ ಶ್ರೇಷ್ಟ ಜಗನ್ನಾಥ ದಾಸಾಖ್ಯರಡಿ |ಜಾಗುಮಾಡದಲರ್ಚಿಸಿ |ಭೋಗಿವರ ಶಯನ ಪ್ರಾಣೇಶವಿಠಲಾಂಕಿತವ ||ಆ ಗುರುಗಳಿಂದ ಕೊಂಡು |ರಾಗದ್ವೇಷಗಳೆಂಬ ಅರಿಗಳನು ಸಂಹರಿಸಿ |ರಾಗದಲಿ ಹರಿಕಥನ ಕವನ ರೂಪದಿ ಪೇಳಿ2 ಪ್ರಾಣಮತವನನುಸರಿಸಿ ಆಚರಣಿಯನು ಮಾಡಿ |ಪ್ರಾಣಿಗಳಿಗೆ ತಿಳಿಸದೆ |ಕ್ಷೋಣಿಯೊಳಗಿನ್ನು ಇರಸಾಕೆಂದು ಆ |ಚಿತ್ರಭಾನು ಆಶ್ವಯುಜ ಶುದ್ಧ ಸಪ್ತಮಿಯಲಿ ||ಜ್ಞಾನಪೂರ್ವಕ ಲಯ ಚಿಂತನೆಯ ಮಾಡಿ ಗುರು |ಪ್ರಾಣೇಶ ವಿಠಲನಿದ್ದಾ ಪುರಕೆ ಜವದಿಂದ3
--------------
ಗುರುಪ್ರಾಣೇಶವಿಠಲರು
ಶ್ರೀ ವಿಷ್ಣು ತೀರ್ಥ ಅಣು ವಿಜಯ ಅರಣ್ಯಕಾಚಾರ್ಯ ಶ್ರೀವಿಷ್ಣು ತೀರ್ಥಾರ್ಯರ ಚರಣಸರಸೀರುಹದಿ ಶರಣಾದೆ ಸತತ ಹೊರ ಒಳಗೆ ಪ್ರಜ್ವಲಿಪ ಅನಘಗುಣ ಪರಿಪೂರ್ಣ ಸಿರಿವರ ಹರಿಕೃಪಾ ಪ್ರಸಾದವೊದಗಿಸುವ ಪ ಪಾದ ಸೇವಿಸಿದ ಫಲವಾಗಿ ಭಾಗೀರಥಿ ಬಾಳಾಚಾರ್ಯರಲಿ ಜನಿಸಿ ವೇಂಕಟರಾಮಾರ್ಯ ಐಜಿಯವರ ಸುಪವಿತ್ರ ಮುಖ ಪಂಕಜದಿಂದ ಕಲಿತರು ಸಚ್ಛಾಸ್ತ್ರ 1 ಜಯತೀರ್ಥ ನಾಮದಲಿ ಮೊದಲೆರಡು ಆಶ್ರಮ ನಿಯಮದಿ ಚರಿಸಿ ಈ ವೈರಾಗ್ಯ ನಿಧಿಯು ಸತ್ಯಸಂಧರಸುತ ಸತ್ಯವರ ತೀರ್ಥರಿಂ ತುರೀಯಾಶ್ರಮಕೊಂಡ ವಿಷ್ಣು ತೀರ್ಥಾರ್ಯ 2 ಏನು ಧನ್ಯರೋ ಸತ್ಯಧರ್ಮತೀರ್ಥರು ಮತ್ತು ಸೂರಿ ಈರ್ವರಿಗೆ ಅನಘಮಧ್ವಸ್ಥ ಶ್ರೀ ಹಂಸ ವೇದವ್ಯಾಸ ತಾನೇ ಸತ್ಯವರ ದ್ವಾರ ಉಪದೇಶ ಕೊಟ್ಟ 3 ಪೂರ್ವಾಶ್ರಮ ನಾಮ ಜಯತೀರ್ಥಾಂಕಿತದಲ್ಲಿ ತತ್ವಪ್ರಕಾಶಿಕ ಸುಧಾ ಟಿಪ್ಪಣಿಯ ಭಾಗವತ - ಸಾರೋ ದ್ಧಾರವ ಶೋಡಶಿ ಚತುರ್ದಶಿ ಬರೆದಿಹರು 4 ತತ್ವಬೋಧಕ ಸ್ತೋತ್ರ ಬಿನ್ನಹ ರೂಪವು ಆಧ್ಯಾತ್ಮ ರಸರಂಜಿನಿ ಅಮೃತಫÉೀಣ ಭಕ್ತಿಯಲಿ ಪಠಿಸಲು ಅಪರೋಕ್ಷ್ಯ ಪುರುಷಾರ್ಥ ಸಾಧನವಾಗಿಹುದನ್ನು ರಚಿಸಿಹರು ಇವರು 5 ಹದಿನಾರು ಪ್ರಕರಣ ಶೋಡಶಿ ಎಂಬುzರÀಲಿ ಹದಿನಾಲ್ಕು ಪ್ರಕರಣ ಚತುರ್ದಶಿಯಲ್ಲಿ ಬಂಧ ಮೋಕ್ಷಾಂತ ಶೋಡಶಿಯಲ್ಲಿಹುದು ಭಕ್ತಿ ಶುಚಿಯಲಿ ಪಠನೀಯ ರಹಸ್ಯವು 6 ಬಂಧಕವು ಬಂಧ ನಿವೃತ್ತಿಯು ಬಿಂಬ ಪ್ರತಿಬಿಂಬ ಭಾವವು, ಬಿಂಬಸಂಸ್ಥಾಪನವು ಅವಸ್ಥಾತ್ರಯ ನಿರ್ಮಾಣ ಆರನೆಯದು 7 ಪ್ರಾಣವ್ಯಾಪಾರವು ಭೋಜನ ಪ್ರಕರಣವು ಇಂದ್ರಿಯ ವ್ಯಾಪಾರವು ತತ್ವಕಾರ್ಯಹತ್ತು ತನು ಅಧಿಷ್ಠಾನ ರಥಾಧಿ ಪ್ರಕರಣವು ಹನ್ನೆರಡಲಿ ಬೋಧ್ಯ ಜಾಗೃತ್ ಪ್ರಕರಣವು 8 ಸ್ವಪ್ನವು ಸುಷುಪ್ತಿಯು ಗಮನಾಗಮನವು ಶುಭ ಮೋಕ್ಷ ಪ್ರಕರಣ ಷೋಡಶವು ಇನ್ನು ಚತುರ್ದಶಿಯಲಿ ಜೀವಹೋಮ ಮೊದಲಾಗಿ ರತ್ನಗಳು ಗುರು ಪ್ರಸಾದ ಲಾಭ ಪರ್ಯಂತ 9 ಜೀವಹೋಮ - ಉಪನಯನ ಸೂರ್ಯಗತಿ ಯಜ್ಞ ಪವಿತ್ರತಮ ವೇದಾಧ್ಯಯನ ಭಿಕ್ಷಾಟನ ವೈಶ್ವಾನರ ಪ್ರಿಯ ಭೋಜನ ಪಾಪಲೇಪ ಜೀವ ಪ್ರಯಾಣ ಮಾರ್ಗವು ನವಮ 10 ಹತ್ತನೆಯದು ಬ್ರಹ್ಮಯಜ್ಞಲಯ ಚಿಂತನಾಕ್ರಮ ಶುದ್ಧಯಜ್ಞ `ಸ್ವರೂಪಯಜ್ಞ' ಸುಲಭಪೂಜಾ ಹದಿನಾಲ್ಕಲಿ ಗುರುಪ್ರಾಸಾದ ಲಾಭದಲಿ ಆದಿತ್ಯಗ ಮಧು ಸುಖ ಪೂರ್ಣ ವಿಷಯ 11 ಯೋಗ್ಯ ಆಧಿಕಾರಿಗೆ ಮಾತ್ರ ಈಸೌ - ಭಾಗ್ಯಪ್ರದ ಜ್ಞಾನ ಪುಷ್ಠಿಕರಣ ಯುಗುಳ ಮಾತ್ರೆಗಳನ್ನ ವಿನಿಯೋಗಿಸುವುದು ಅಯೋಗ್ಯರಿಗೆ ಸರ್ವಥಾ ಕೊಡಕೂಡದು 12 ಕೃತ ಕೃತ್ಯ ಧನ್ಯಮನದಿಂದಲಿ ಈ ಮಹಾನ್ ಐದಿಹರಿಪುರಲಯವ ಚಿಂತನೆಮಾಡಿ ಹದಿನೇಳ್ ನೂರಿಪ್ಪತ್ತೆಂಟು ಶಕ ಮಾಘ ತ್ರಯೋದಶಿ ಕೃಷ್ಣದಲಿ ಕೃಷ್ಣನ ಸೇರಿದರು 13 ಮತ್ತೊಂದು ಅಂಶದಿ ವೃಂದಾವನದಿಹರು ಭಕ್ತಿಯಿಂ ಸ್ಮರಿಸಿದರೆ ಬಂದು ಸಲಹುವರು ಮಾದನೂರು ಕ್ಷೇತ್ರಸ್ಥ ವೃಂದಾವನ ಸೇವೆ ಭಕ್ತಿಯಲಿ ಮಾಳ್ಪರು ದೇಶ ದೇಶ ಜನರು 14 ಬೃಹತೀಸಹಸ್ರ ಪ್ರಿಯ ಮಹಿದಾಸ ಜಗದೀಶ ಬ್ರಹ್ಮಪಿತ ಭಕ್ತಪಾಲಕ ಪರಮ ಹಂಸ `ಮಹಿಸಿರಿ' ಶ್ರೀ ಪ್ರಸನ್ನ ಶ್ರೀನಿವಾಸನ ಮಹಾಭಕ್ತಿ ಶ್ರೀ ವಿಷ್ಣು ತೀರ್ಥಾರ್ಯರೇ ಶರಣು 15 ಪ || ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಪತಿಯ ನೈವೇದ್ಯ ಕೊಡುವದು ಧೂಪದಾಂತರ ಭೂಮಿಶೋಧನ ಆಪದಿಂ ಮಂಡಲವ ಮಾಡುತ ರಂಗವಲಿ ಹಾಕಿ ಸೂಪ ಅನ್ನವು ಅಗ್ನಿಕೋಣದಿ ಆ ಪರಮ ಅನ್ನವನು ಈಶಾ ನ್ಯಾಪೆಯಾಲೇಹಗಳ ನೈರುತದಲಿ ಇಟ್ಟು ತಥಾ 1 ವಾಯುದಿಶದಲಿ ಉಪಸುಭೋಜ್ಯವು ವಾಯಸಾನ್ನದ ಮಧ್ಯ ಘೃತಸಂ ಸ್ತೂಯಮಾನ ನಿವೇದನವು ಈ ಕ್ರಮದಿ ಹೀಂಗಿಟ್ಟು ಬಾಯಿಯಿಂದಲಿ ದ್ವಾದಶ ಸ್ತುತಿ ಗಾಯನದಿ ನುಡಿಯುತಲಿ ಈ ಕಡೆ ಆಯಾ ಅಭಿಮಾನಿಗಳು ದೇವತೆಗಳನು ಚಿಂತಿಸುತ 2 ಓದನಕ ಅಭಿಮಾನಿ ಶಶಿಪರ ಮೋದನಕ ಅಭಿಮಾನಿ ಭಾರತಿ ಆದಿವಾಕರ ಭಕ್ಷ ಕ್ಷೀರಾಬ್ಧೀಜೆ ಸರ್ಪಿಯಲಿ ಸ್ವಾದುಕ್ಷೀರಕ ವಾಣಿ ಮಂಡಿಗಿ ಲೀ ದ್ರುಹಿಣನವನೀತ ಪವನಾ ದಾದಧಿಗೆ ಶಶಿವರುಣ ಸೂಪಕೆ ಗರುಡ ಅಭಿಮಾನಿ 3 ಶಾಕದಲಿ ಶೇಷಾಮ್ಲ ಗಿರಿಜಾ ನೇಕನಾಮ್ಲದಿ ರುದ್ರಸಿತದಲಿ ಪಾಕಶಾಸನ ಶೇಷುಪಸ್ಕರದಲ್ಲಿ ವಾಕ್ಪತಿಯೂ ಈ ಕಟು ಪದಾರ್ಥದಲಿ ಯಮ ಬಾ ಹ್ಲೀಕ ತಂತುಭದಲ್ಲಿ ಮನ್ಮಥ ನೇಕ ವ್ಯಂಜನ ತೈಲ ಪಕ್ವದಿ ಸೌಮ್ಯನಾಮಕನೂ 4 ಕೂಷುಮಾಂಡದ ಸಂಡಿಗಿಲಿ ಕುಲ ಮಾಷದಲಿ ದಕ್ಷ ಪ್ರಜಾಪತಿ ಮಾಷ ಭಕ್ಷದಿ ಬ್ರಹ್ಮಪುತ್ರನು ಲವಣದಲಿ ನಿಋತಿ ಈ ಸುಫಲ ಷಡ್ರಸದಿ ಪ್ರಾಣ ವಿ ಶೇಷ ತಾಂಬೂಲದಲಿ ಗಂಗಾ ಆ ಸುಕರ್ಮಕೆ ಪುಷ್ಕರನು ಅಭಿಮಾನಿ ದೇವತೆಯೂ 5 ಸಕಲ ಭಕ್ಷ್ಯಗಳಲ್ಲಿ ಉದಕದಿ ವಿಶ್ವ ಮೂರುತಿ ಮುಖದಲೀ ನುಡಿ ಅಂತಿಲೀ ಶ್ರೀ ಕೃಷ್ಣ ಮೂರುತಿಯ ನಖ ಚತು ಪದಾರ್ಥದಲಿ ಆ ಸ ಮ್ಯಕು ಚತುರವಿಂಶತಿ ಅಭಿಮಾ ನಿಕರ ಚಿಂತಿಸಿ ಸರ್ಪಿ ಸಹ ಶ್ರೀ ತುಳಸಿಯನು ಹಾಕಿ6 ಕ್ಷೀರ ದÀಧಿ ಕರ್ಪೂರ ಸಾಕ ರ್ಜೀರ ಪನಸ ಕಪಿಥ್ಥ ಪಣ್ಕದ ಳೀರಸಾಲ ದ್ರಾಕ್ಷ ತಾಂಬೂಲದಲಿ ಚಿಂತನೆಯೂ ಪೂರ ಶಂಖದಿ ಉದಕ ಓಂ ನಮೊ ನಾರೆಯಣಾ ಅಪ್ಟಾಕ್ಷರವು ತನ ಮೋರೆ ಮುಚ್ಚಿ ಶತಾಷ್ಟವರ್ತಿಲಿ ಮಂತರಿಸಿ ತೆರೆದೂ7 ಸೌರಭೀ ಮಂತ್ರದಲಿ ಪ್ರೇಕ್ಷಿಸಿ ಮೂರೆರಡು ಮೊದಲಾಗಿ ಶಂಖವು ಅಂತಿಮಾಡಿ ತಥಾ ಪೂರ್ವ ಆಪೋಶನವು ಹೇಳಿ ಅ ಪೂರ್ವ ನೈವೇದ್ಯವು ಸಮರ್ಪಿಸಿ ಸಾರ್ವಭೌಮಗ ಉತ್ತರಾಪೋಶನವು ಹೇಳಿ ತಥಾ 8 ಪೂಗ ಅರ್ಪಿಸಿದಂತರದಿ ಅತಿ ಬ್ಯಾಗದಲಿ ಲಕ್ಷ್ಯಾದಿ ನೈವೇ ದ್ಯಾಗ ಅರ್ಪಿಸಿ ತಾರತಮ್ಯದಿ ಉಳಿದ ದೇವರಿಗೆ ಸಾಗಿಸೀ ಶ್ರೀ ಹರಿಯ ಸಂಪುಟ ದಾಗ ನಿಲ್ಲಿಸಿ ವೈಶ್ವದೇವವು ಸಾಗಿಸೀ ಶ್ರೀ ವಿಜಯವಿಠಲನ ಧೇನಿಸುತ ಮುದದಿ9
--------------
ವಿಜಯದಾಸ