ಒಟ್ಟು 178 ಕಡೆಗಳಲ್ಲಿ , 49 ದಾಸರು , 161 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟುನಿರ್ಮಳದಿ ವೈಷ್ಣವರ ಮನಮುಟ್ಟಿ ಭಜಿಸಿ ಪ ಪಾಪಕೆ ಹೇಸದ ಶಬರ ಬಟ್ಟೆಯನು ಕಾದಿರಲುಆ ಪಥದಿ ಸಲೆ ವೈಷ್ಣವನು ಬಂದುಪಾಪವನು ತಪ್ಪಿಸಿ ರಾಮನಾಮವ ಕೊಡಲುಕಾಪಥಕ ವಾಲ್ಮೀಕಿ ಮುನಿಯಾಗಲಿಲ್ಲವೆ ? 1 ಪಂಚಮಹಾಪಾತಕವ ಮಾಡಿದ ಅಜಾಮಿಳನವಂಚಿಸಿ ಯಮದೂತರೆಳೆದೊಯ್ಯುತಿರಲುಕಿಂಚಿತ್ತು ಹರಿನಾಮವನಾಕಸ್ಮಿಕದಿ ನೆನೆಯೆಅಂಚಿಗೆಳೆದೊಯ್ದವರು ವಿಷ್ಣುದೂತರಲ್ಲವೆ ?2 ಬಾಲಕ ತನ್ನ ತಾಯ್ತಂದೆಯೊಳ್ ಮುನಿದು ಹಲವುಕಾಲ ವನದೊಳು ತಪವ ಮಾಡಲುನೀಲಮೇಘಶ್ಯಾಮ ಮೆಚ್ಚಿ ಬಾಲಕನಿಗೆಮೇಲಾದ ಪದವಿಯನು ಕೊಡಲಿಲ್ಲವೆ ? 3 ದಶಕಂಠನನುಜನು ಜಾನಕಿಯ ಬಿಡ ಹೇಳೆಅಸುರ ಕೋಪವ ತಾಳಿ ಹೊರಗಟ್ಟಿದಾಗಪೆಸರಗೊಳುತ ಬಂದು ಮೊರೆಹೊಕ್ಕ ವಿಭೀಷಣಗೆಶಶಿರವಿ ಪರ್ಯಂತ ಪಟ್ಟಗಟ್ಟಲಿಲ್ಲವೆ ? 4 ಕಲಿಗೆ ಬೆದರುವರಲ್ಲ ಕಾಲನ ಬಾಧೆಗಳಿಲ್ಲಛಲದಿ ನರಳಿ ಪುಟ್ಟುವ ಗಸಣೆಯಿಲ್ಲಒಲಿದು ಕಾಗಿನೆಲೆಯಾದಿಕೇಶವರಾಯನಸಲೆ ನಂಬಿದವರಿಗೆ ಮುಕುತಿಯಿತ್ತುದಿಲ್ಲವೆ ? 5
--------------
ಕನಕದಾಸ
ಭವ ಕಾಮಹರ ನಿನ್ನಂಘ್ರಿ ತಾಮರಸಯುಗಳ ಭಜಿಸುವೆ | ಭಜಿಸಿ ಬಿನ್ನೈಸುವೆ ಶ್ರೀ ಮನೋಹರನ ತೋರಯ್ಯ 1 ಕೃತ್ತಿವಾಸನೆ ಎನ್ನ ಚಿತ್ತದಲಿ ಹರಿಯಪದ ನಿತ್ಯದಲಿ ಭಜಿಪ ಮತಿ ನೀಡೊ | ಮತಿ ನೀಡೊ ಪಾರ್ವತಿ ಚಿತ್ತದೊಲ್ಲಭನೆ ನಮಿಸುವೆ 2 ಸುವರ್ಣಮುಖರಿಯ ತೀರದಲಿ ನೆಲಸಿರುವೆ ಶ್ರೀ ವರಾಹನಂಘ್ರಿ ಭಜಿಸುತ್ತ | ಭಜಿಸುತ್ತ ನೆಲಸಿರುವ ಪಾವನರೂಪ ಸಲಹಯ್ಯ 3 ಕಾಳಸ್ತಿನಿಲಯನೆ ಪೇಳಲಿನ್ನೇನು ನಾ ತಾಳಲಾರೆನು ಈ ಭವಬಂಧ | ಭವಬಂಧ ಬಿಡಿಸುವ ವ್ಯಾಳ ಶಯನನ್ನ ತೋರೈಯ್ಯ 4 ಭಕ್ತರಿಗೊಲಿದು ಅಪಮೃತ್ಯು ಪರಿಹರಿಸಿದೆ ಸತ್ಯ ಸಂಕಲ್ಪ ನಿನ್ನಂಘ್ರಿ | ನಿನ್ನಂಘ್ರಿ ಕಮಲಗಳ ಚಿತ್ತದಲಿ ತೋರಿ ಸಂತೈಸು 5 ಮನಕೆ ಗುರು ನೀನಹುದು ಮನವ ಹರಿಯಲಿ ನೆಲಸೊ ವೈರಿ ಮಮತೆಯಿಂ | ಮಮತೆಯಿಂದಲಿ ನಿತ್ಯ ಮನಶುದ್ಧಿಗೈದು ಕಾಯಯ್ಯ 6 ಶಂಖಚಕ್ರವ ಪಿಡಿದ ಸಂಕರ್ಷಣನ ರೂಪ ನಿತ್ಯ ಭಜಿಸುವೆ | ಭಜಿಸುವೆ ಕೈಲಾಸ ಅಂಕದಲಿ ನೆಲಸಿ ಹರುಷದಿ 7 ನರಸಿಂಹ ರೂಪವನು ಸ್ಮರಿಸುತ್ತ ಮೈಮರೆವೆ ಉರುತರ ಭಾವ ಭಕ್ತಿಯಲಿ | ಭಕ್ತಿಯಲಿ ಭಜಿಪ ನಿನ್ನ ಸ್ಮರಿಸುವರ ಭಯವ ಹರಿಸುವೆ 8 ಶ್ರೀ ರಾಮನಾಮವನು ಪ್ರೇಮದಿಂದುಮೆಗರುಹಿ ಆರಾರು ಅರಿಯದಾನಂದ | ಆನಂದವಿತ್ತೆ ಭವ ತಾರಕವೆಂದು ಕರುಣಾಳೂ 9 ಅಜನ ಭ್ರೂಮಧ್ಯದಲಿ ಜನಿಸಿದೆಯೊ ಜಗದಲ್ಲಿ ಭಂಜನ | ಭಂಜನಗೊಳಿಸಿದೆ ತ್ರಿಜಗದಲಿ ನಿನಗೆ ಸರಿಯುಂಟೆ 10 ಶೇಷ ಪರ್ಯಂಕನಿಗೆ ಹಾಸಿಗೆಯಾಗಲು ತೋಷದಲಿ ತಪವಾಚರಿಸಿದೆ | ಚರಿಸಿ ಸಾಧಿಸಿದೆ ನೀ ಶೇಷ ಪದವಿಯನು ತ್ರಿನೇತ್ರ 11 ಶರಧಿ ಮಥಿಸಲು ಗರಳ ಉದ್ಭವಿಸಿ ಭಯವಾಗೆ | ಭಯವಾಗಿ ಪರಿಹರಿಸಿ ಗರಳವನೆ ಕುಡಿದೆ ಶ್ರೀ ಕಂಠ 12 ಅಸುರರ ವಂಚಿಸಿದ ವಶವಲ್ಲದ ಹೆಣ್ಣು ವಶವಾಗಲೆಂದು ಹಾರೈಸಿ | ಹಾರೈಸಿ ಬಳಲುತಿರೆ ಬಿಸಜಾಕ್ಷ ನಿನ್ನ ಸಲಹಿದ 13 ತಾರಕಾಸುರನಿಂದ ಘೋರಪಡುತಿರೆ ಜಗವು ಮಾರ ಪೂಅಸ್ತ್ರ ಎಸೆಯಲು | ಎಸೆಯಲು ದಹಿಸಿ ಕು- ಮಾರನನು ಪಡೆದೆ ಗಿರಿಜೇಶ 14 ಸ್ತುತಿಪ್ರಿಯ ನಿನ್ನ ನಾ ಸ್ತುತಿಸಲಾಪೆನೆ ಮಂದ ಮತಿ ಎಂದು ನೀನೆ ಸಂತೈಸೊ | ಸಂತೈಸಬೇಕಿನ್ನು ಮತಿಯಿತ್ತು ಹರಿಯ ಪದದಲ್ಲಿ 15 ಶಿರದಲ್ಲಿ ಗಂಗೆ ಚಂದ್ರನ ಮೆರೆಯುವ ಉರಗ ಭೂಷಣನೆ ಕೇಳಿನ್ನು | ಕೇಳಿನ್ನು ಎನ್ನ ಮನ ಮರೆಯದೆ ಹರಿಯ ನೆನೆಯಲಿ 16 ವಿಷ್ಣು ಭಕ್ತರೊಳಗೆ ಶ್ರೇಷ್ಠ ನೀನಹುದಯ್ಯ ಜಿಷ್ಣುವಿಗೆ ಮೆಚ್ಚಿ ಧನುವಿತ್ತೆ | ಧನುವಿತ್ತೆ ಗೋಪಾಲ- ಕೃಷ್ಣವಿಠ್ಠಲನ ತೋರಯ್ಯ 17
--------------
ಅಂಬಾಬಾಯಿ
ಭವತಿ ಭಿಕ್ಷಾಂ ದೇಹಿ ಪರಬ್ರಹ್ಮಭವದೂರ ಮಾಂಪಾಹಿಭುವನ ಪಾವನ ಪರಮಾನಂದ ವರಗುಣಾಸುವಿಮಲ ಶಾಂತಿ ಸದ್ಭಕ್ತಿ ಜೀವನ್ಮುಕ್ತಿ ಪ ನಿತ್ಯ ನಿರ್ಮಲ ಜ್ಞಾನ ವಿಚಾರ ಪ್ರ-ವೃತ್ತಿ ವಿವೇಕದಾನಸತ್ಯ ಸದ್ವಿನಿಯ ಸಶ್ರವಣ ಮಾನಸಯೋಗಚಿತ್ತ ನಿಧಿಧ್ಯಾಸ ಜಪತಪವ್ರತ ಪೂಜಾ 1 ದೋಷರಹಿತ ಭಾಷ ದುರಿತಗುಣನಾಶ ಪರಮ ಸಂತೋಷಕ್ಲೇಶ ವಿದೂರ ವಿಶೇಷ ವಿರಾಗವಿಶ್ವಾಸ ವಿಹಿತ ಸದ್ಧರ್ಮ ವಿಚಾರ 2 ಪಾವನ ಪರಿಪೂರ್ಣ ಹೃದಯ ಸದಾದೇವ ನಾಮಸ್ಮರಣಭಾವ ಭರಿತ ಧ್ಯಾನ ಧಾರಣಯೋಗ ಸ-ದ್ಭಾವ ಬ್ರಹ್ಮ ಆದಿಕೇಶವ ದಾಸತೆ 3
--------------
ಕನಕದಾಸ
ಭವದ ಬಂಧವಿನ್ನೆನಗೆ ಯಾಕೆ ಭವಹರಣ ನಾಮ ಎನ್ನ ಜಿಹ್ವೆಯೊಳಗೆ ಇರುತಿರಲು ಪ ದುರಿತ ಭೀತಿ ಯಾಕೆ ಎನಗೆ ಕರ್ಮದ ಲೇಪವ್ಯಾಕೆ ಎನಗೆ ಕುಲ ಚಲಗಳ್ಯಾಕೆ ಎನಗೆ ಮಡಿಯು ಮೈಲಿಗ್ಯಾಕೆ ಅನುದಿನದಿ ಪಾವನಾತ್ಮಕನ ನೆನವು ಎನ್ನ ಮನದೊಳಿರಲು 1 ನಷ್ಟ ಪ್ರಪಂಚಂಟಿನ್ನ್ಯಾತಹೆÉ ಬಿಟ್ಟ ಬಡತನ ತಂತಿನಗ್ಯಾಕೆ ಹುಟ್ಟು ಸಾವು ಕಷ್ಟ ಮತ್ತ್ಯಾಕೆ ಕೆಟ್ಟ ಯಮನ ಅಂಜಿಕಿನ್ನ್ಯಾಕೆ ಸೃಷ್ಟಿ ಕರ್ತನ ಶಿಷ್ಟಪಾದ ನಿಷ್ಠೆಯೆನ್ನೊಳು ಗಟ್ಟಿಯಿರಲು 2 ನಿತ್ಯ ನೇಮ ಪೂಜೆ ಯಾಕೊ ಮತ್ತೆ ಜಪ ತಪವು ಯಾಕೊ ನಿತ್ಯ ನಿರ್ಮಲಾನಂದ ರೂಪಿ ಸತ್ತು ಚಿತ್ತನಂದದಾತ ಮುಕ್ತಿದಾಯಕ ಶ್ರೀರಾಮ ಪಾದ ಭಕ್ತನಾಗಿ ನಾ ಮೆರೆಯುತಿರಲು 3
--------------
ರಾಮದಾಸರು
ಮಗಟಖಾನ ಹುಬ್ಬಳ್ಳಿ ಶ್ರೀಯಾದವಾರ್ಯರ ಕರಾರ್ಚಿತ ಶ್ರೀನರಸಿಂಹ ಸ್ತೋತ್ರ ಕರುಣವೆಂತುಂಟೋ ನಿನಗೆ | ಶ್ರೀನಾರಸಿಂಹಾ ಪ ವರತಟನಿ ಮಲಪ್ರಭೆಯ | ತೀರಸ್ಥನೆನಿಸೀ ಅ.ಪ. ಪೂರ್ವದಲಿ ಋಷಿ ಚ್ಯವನ | ರಿಂದರ್ಚಿತವು ಎನೆಓರ್ವ ಶಿಲೆಯಲಿ ನಿಂದು ಯಾದವಾರ್ಯಾ |ಪಾರ್ವ ಯೋಗೀಶ ರಚಿ | ತಾಕಾರ ಗಂಧದಲಿಆಹ್ವಾನಿತನು ಆಗಿ ನೀನಿಲ್ಲಿ ಇರುವೇ 1 ಆದಿ ವ್ಯಾಧಿಲಿನೊಂದ | ಬುಧರಿಂದ ಬಹುಸೇವ್ಯಯಾದವಾರ್ಯಾಂತಸ್ಥ | ಶ್ರೀ ನಾರಸಿಂಹಾ |ಬಧಿರ ಮೂಕರು ತಮ್ಮ | ವ್ಯಾಕುಲವ ಕಳೆಯುತ್ತಮುದವಾಂತು ತವ ಮಹಿತಿ ಕೀರ್ತಿಸುತ್ತಿಹರೋ 2 ಮಾಸ ನಿಶಿ ಜೇಷ್ಠದಲಿಮತ್ತೆ ಹರಿದಿನದಲ್ಲಿ | ಮಂದವಾರದಲೀ |ಮತ್ಸರಾದ್ವಿರಹಿತರು | ಸತ್ಸುಜನರಿಂದ ಕೂಡಿಉತ್ಸಹದ ಜಾಗರವ | ನೀ ಮಾಡಿ ಮಾಡಿಸಿದ್ಯೊ 3 ಬೆಟ್ಟದಾಚಾರ್ಯರೆನೆ | ಸುಷ್ಠು ಕೀರ್ತನೆಗೊಂಡಶ್ರೇಷ್ಠ ಹುಚ್ಚಾಚಾರ್ಯ | ರಿಲ್ಲಿ ನೆಲೆಸುತಲೀಇಷ್ಟ ಸಿದ್ಧಿಗಾಗಿ ಶ್ರೇಷ್ಟ | ತಪವನೆ ಗೈದುಇಷ್ಟಾರ್ಥ ಪೊಂದಿತಾ | ಬೆಟ್ಟಕ್ಕೆ ತೆರಳಿದರೋ 4 ಮೋದ ಪಡಿಸುತ ಬುಧರಯಾದವೇಶನ ನೊಲುಮೆ | ಸಂಧಿಸುತ ಮೆರೆದೂ |ಆದರಿಸಿ ಮಂಗಳ ಸು | ಭೋದಗಳ ಬೀರುತಲಿಮೋದ ಬಡಿಸಿದ ಹರಿಯ | ಭೂದೇವ ಆರ್ಯ 5 ಪ್ರೇರ್ಯ ಪ್ರೇರಕರಾಗಿ | ಬೆಳಗಾವ್ಕರು ಎಂಬಪಾರ್ವನಲಿ ನೀ ನಿಂತು | ಅಚ್ಚರಿಯನೆಸಗೀಭಾರ್ಯೆ ತವ ಕೊಲ್ಲಾಪುರ | ಮ್ಮ ಸತ್ಯವ್ರತರಆರ್ಯಗೊಡ ದರ್ಶಿಸುವ | ಯೋಗ ನೀನಿತ್ತೇ 6 ಸೃಷ್ಠ್ಯಾದಿ ಅಷ್ಟಕವ | ದೃಷ್ಟಿ ಮಾತ್ರದಿಗೈವಇಷ್ಟ ಭಕುತಿಗೆ ಮೆಚ್ಚಿ | ಘಟ್ಟಿ ಕಂಬದಿ ಜಿಗಿದೂದುಷ್ಟನ್ನ ಸಂಹರಿಸಿ | ಕಷ್ಟಗಳ ಕಳೆದಂಥಕೃಷ್ಣ ಗುರು ಗೋವಿಂದ ವಿಠಲಾ ಗಾನಮಿಪೇ 7
--------------
ಗುರುಗೋವಿಂದವಿಠಲರು
ಮತ್ತಾರು ತಿಳಿಯರಲ್ಲಾ ಸದ್ಭಕ್ತಿಯ ಪ ತಂತ್ರಸಾರದಿಂದ ಪೂಜೆ ಮಂತ್ರದಿಂದ ಮಾಡಿ ಡಂಭ | ಯಂತ್ರದೊಳಗ ಸಿಲ್ಕ ಸಿಂತ್ರ ಹೋದರಲ್ಲದೇ 1 ಶಾಸ್ತ್ರವನೋದಿ ಹೇಳಿ ನಿಸ್ತರಿಸಿ ವಾದದಿಂದ | ದುಸ್ತರ ಹಮ್ಮಿನೊಳಗಸ್ತ ವಾದರಲ್ಲದೇ 2 ಇದ್ದು ಉಪವಾಸದಿಂದ ಉಗ್ರತಪವ ಮಾಡಿ | ಸಿದ್ಧಿಗಳ ತೋರಿ ಮೆರೆದು ಬಿದ್ದು ಹೋದರಲ್ಲದೇ 3 ಹಲವು ಕರ್ಮಗಳ ಮಾಡಿ ಫಲವ ಬೇಡಿಕೊಂಡು ತನ್ನ | ಘಳಿಕೆಯ ಸಂಸಾರದಿ ಕಳೆದುಕೊಂಡರಲ್ಲದೇ 4 ಇಂದಿರೆಪತಿಯ ಮನದಿಂದ ಅರಿತು ಪೂಜಿಸುವ | ತಂದೆ ಮಹಿಪತಿ ಪ್ರಭು ಹೊಂದಿದವರಲ್ಲದೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಧ್ವರಾಯರೆ ನಿಮ್ಮ ಮುದ್ದು ಪಾದಗಳಿಗೆ ಬಿದ್ದು ಬೇಡಿಕೊಂಬೆ ಮನಶುದ್ಧಿಯ ಮಾಡೊ ಪ. ಮಧ್ವ ಗೇಹದೊಳು ಜನಿಸಿ ಪಾಜಕಾ ಕ್ಷೇತ್ರದೊಳು ಮುದ್ದು ರೂಪವ ತೋರಿ ಅ. ಪ. ಪದ್ಮನಾಭನ ಭಜಿಸುತ ಇರುತ ಗುಹೆಯಲಿ ಶುದ್ಧ ತಪವನೆ ಮಾಡಿ ಪ್ರಸಿದ್ಧಿಯಿಂದಲಿ ಇದ್ದ ದೈತ್ಯನ ಕೊಂದು ಪೊರೆಯುತಲಿ 1 ವಾದಿಗಳ ಛೇದ ಭೇದವ ಮಾಡಿ ಸಾಧಿಸಿನುತವ ಬೋೀಧಿಸಿ ಸುಜನರಿಗೆ ವ್ಯಾಧಿಗಳ ಕಳೆದು ಪೊರೆವ ಮೆರೆವ 2 ಸುಜ್ಞಾನ ತೀರ್ಥರೆಂದೆನಿಸಿ ಮಹಿಯೊಳ್ ಅಜ್ಞಾನ ಪರಿಹರಿಸಿ ಪೊರೆವ ಗುರು ಸುಜ್ಞಾನವೀವ ರುಕ್ಮಿಣೀಶವಿಠಲನ ಭಜಿಪ 3
--------------
ಗುಂಡಮ್ಮ
ಮನವೆ ಪೇಳುವೆ ಪ ಅಂತರಂಗದಲಿ ಚಿಂತಿಪರಘಶುಲಧ್ವಾಂತ ದಿವಾಕರನಾ ಶ್ರೀವರನಾ ಅ.ಪ ಎಂತು ಸುಕೃತವೂ ಸಿರಿಕಾಂತನುಯನ್ನೊಳು ನಿಂತಿರುವನು ಎನುತ ಪರ್ವತ ಸಂತೋಷದಲಿರುವಂತೆ ತೋರುವದು ಸು- ಕಾಂತ ಶಿಖರದಿಂದ ಛಂದ 1 ವರಶಿಲೆಯೊಳಿರುವ ಹರಿಯ ಶೇವಿಸಲು ಹರುಷದಿ ಸುರನಿಕರ ಭಾಸುರ ತರುಲತೆರೂಪದಿ ಇರುತಿಹರೆನ್ನುತ ಮೆರೆವನು ಗಿರಿರಾಜಾ ಸುತೇಜಾ2 ಗಿರಿನಾಥಾ ತೋರುತ ಅರಳಿದ ಪೂವಿನ ಪರಿಮಳ ಬೀರುವ ಸುರಚಿರ ತರುವ್ರಾತಾ ಶೋಭಿತ3 ಪವನ ಶೇವಿತನು ಭುವನೋದರ ತಾ ದಿವಿಜರಿಂದ ಸಹಿತ ಸೇವಿತ ಅವನಿಧರನು ಮಾಧವನ ತೆರದಿ ತೋ ರು ವೆನೆಂಬುಗರ್ವಾದಿಂದಿರುವ 4 ಸಿದ್ಧಚಾರಣ ತಪೋವೃದ್ಧರಿದೇ ಸ್ಥಳ ಸಿದ್ಧಿದಾಯಕವೆಂದೂ ಬಂದೂ ಪದ್ಮಾಕ್ಷನ ಪದಪದ್ಮವ ಧ್ಯಾನಿಸು- ತಿದ್ದರು ಗುಹೆಗಳಲಿ ಪೂರ್ವದಲಿ5 ಮುನಿ ಮಾರ್ಕಾಂಡೇಯನು ಬಹುದಿನದಲಿ ಘನ ತಪವಾಚರಿಸಿ ಸೇವಿಸಿ ವನಜನಾಭನ ಪದವನಜ ಮಧುಪ ನೆಂ ದೆನಿಸುತಲಿರೆ ಗುಹದಿ ತಪೋನಿಧಿ6 ಗಿರಿಯ ಬಲದಿ ಅಹೋಬಲ ನರಸಿಂಹನ ದರ್ಶನವನು ಕೊಳುತ ನಿರುತ ಇರುತಿರಲೊಂದಿನ ಬರಲಾಷಾಢದ ಹರಿವಾಸರ ವೃತವಾ ಚರಿಸುವ 7 ದ್ವಾದಶಿ ಸಾಧನೆ ಬರಲು ಪ್ರತಿದಿನದಿ ಶ್ರೀದನ ದರ್ಶನದಾ ನೇಮದ ಸಾಧನೆ ವಿಷಯದಿ ಯೋಚಿಸುತಿರೆ ಹರಿ ಮೋದದಿ ಮುನಿಗೊಲಿದಾ ಸೂಚಿಸಿದಾ 8 ಅರುಣೋದಯದಲಿ ಸುರಗಂಗೆಯು ತಾ ವರ ಪುಷ್ಕರಣಿಯೊಳು ಬರುವಳು ತರುರೂಪದಿ ನಾ ಬರುವೆನು ಬಿಡದಿರು ಮರುದಿನದಾ ಚರಣೆ ಪಾರಣೆ9 ಎಂತು ಕರುಣವೊ ನಿರಂತರ ಭಜಿಪರ ಚಿಂತಿತ ಫಲವೀವ ಕೇಶವ ಇಂತು ಹರಿಯ ಗುಣ ಚಿಂತಿಸುತಿರಲು ನಿ ಶಾಂತದಿ ಸರೋವರದಿ ವೇಗದಿ10 ಭಾಗೀರಥಿ ಜಲದಾಗಮ ವೀಕ್ಷಿಸಿ ರಾಗದಿ ವಂದಿಸಿದ ತುತಿಸಿದ ಯೋಗಿವರನುತ ಸ್ನಾನವಮಾಡಿ ಬರುವಾಗಲೆ ಧ್ಯಾನಿಸಿದ ಹರಿಪದ11 ಆ ತರುವಾಯದಿ ಪಾರಿಜಾತ ತರು ವ್ರಾತವ ನೋಡಿದನು ವಂದಿಸಿದನು ಈತನೆ ನರಮೃಗನಾಥನೆನುತ ಮುನಿ ಪ್ರಾತ:ಪಾರಣವ ಮಾಡಿದ ಜವ12 ಮೀಸಲು ಮನದಲಿ ಶೇಷಶಯನಗಾ- ವಾಸಗಿರಿಯ ಸೇವಾ ಮಾಡುವ ಭೂಸುರ ಗಣದಭಿಲಾಷೆಗಳನು ಪೂರೈಸಿ ಪೊರೆವನೀತಾ ಪ್ರಖ್ಯಾತಾ 13 ಶ್ರೀಯುತ ಮಾರ್ಕಾಂಡೇಯರ ಚರಿತೆಯ ಗಾಯನ ಫಲವಿದನು ಪೇಳುವೆನು ಶ್ರೇಯಸ್ಸಾದನ ಕಾಯದಿ ಬಲದೀ- ಮಾನವ 14 ಸುರತರು ಕಾರ್ಪರ ಶಿರಿ ನರಸಿಂಹನೆ ಈತ ಎನ್ನುತ ನಿರುತ ಅನಂತನ ಗಿರಿಯ ಮಹಿಮೆಯನು ಸ್ಮರಿಸುವ ನರಧನ್ಯಾ ಸನ್ಮಾನ್ಯ 15
--------------
ಕಾರ್ಪರ ನರಹರಿದಾಸರು
ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮರವೆ ಮರವೆ ಮಾಡಿತೋಅಂತರಂಗದಲಿ ಭೋರೆಂದು ತುಂಬಿಅಂತು ಅಂತೆನಲು ಕೂಡದು ಪ್ರಣವನಾದ ಪ ಹೊಟ್ಟೆಗುಣ್ಣುವುದನೆ ಮರೆಸಿತು ಈ ಪ್ರಣವನಾದಮುಟ್ಟು ಚಟ್ಟನೆ ಮರೆಸಿತುಕೆಟ್ಟಕೇಡನೇನ ಹೇಳಲಿಉಟ್ಟ ಬಟ್ಟೆಯ ಅರಿವೇ ಇಲ್ಲ 1 ಆಸೆಯೆಂಬುದ ಮರೆಸಿತು ಈ ಪ್ರಣವನಾದದ್ವೇಷವೆಂಬುದು ತೊರೆಸಿತುನಾಶವಾಯಿತು ಜಪತಪವೆಲ್ಲಮೋಸವೆನಗಿಂತು ಮಾಡಿತು2 ಧ್ಯಾನವೆಂಬುದು ಮರೆಸಿತು ಈ ಪ್ರಣವನಾದಓಂಕಾರವೆಂಬುದು ಕಲಿಸಿತುಜ್ಞಾನಮೂರುತಿ ಚಿದಾನಂದತಾನೆ ತಾನೆ ತಾನೆ ಎಂಬ 3
--------------
ಚಿದಾನಂದ ಅವಧೂತರು
ಮರೆವರೇನಯ್ಯಾ ಮಧವ ಮಮತೆ ತೋರಯ್ಯ ಪ ತೊರೆವರೆನೋ ಕರುಣಿ ನೀನು ನಿರುತ ಶರಣರ ಹೃದಯ ಭಾನು ಪೊರೆಯುವ ಬಿರುದನೆ ಅಪಯಶ ಪಡೆವರೆ 1 ದ್ರುವನಂದದಿ ನಾ ತಪವಾಚರಿಸವೆ ಭವಸಾಗರ ದಾಟುವ ಪರಿಯರಿಯದೆ ಸುವಿಮಲ ಮಾನಸದೊಲುಮೆ ಕೊಡೆಂಬನ 2 ಪ್ರಹ್ಲಾದನ ವೊಲು ನಿನ್ನಿರವರಿಯದೆ ಆಹ್ಲಾದವ ನಿತ್ಯನುವಿಂ ಕೊಳ್ಳದೆ ಈ ಕ್ಲೇಶದಿ ತೊಳಲುತ ಹರಿಸೆಂಬನ 3 ಬಲಿಯಂದದಿ ದಾನವ ಕೊಡಲಾರದೆ ಛಲದಿಂ ನಿನ್ನಯ ಪದಯುಗ ಪಿಡಿಯದೆ ಒಲಿಯುತ ತರಳನ ಸಲಹೆಂದೆಂಬನ 4 ಎಲ್ಲವ ಪಡೆಯಲು ಪುಣ್ಯವ ಗಳಿಸಿರೆ ಬಲ್ಲಿದ ನಿನ್ನಯ ಹಂಗಿರಲಿಲ್ಲವು ಎಲ್ಲರ ಬಂಧು ಜಾಜೀಶಾ ಎಂಬನ 5
--------------
ಶಾಮಶರ್ಮರು
ಮಾಯ ಮೋಹಿಗಳಿಗೆಲ್ಲ ಭವಬಂಧಳಿಯುವುದೇ ಕಾಯ ಶುದ್ಧಲ್ಲದವಗೆ ಕರ್ಮಬಂಧ್ಹರಿಯುವುದೇ ಪ ಮುಣುಗು ಕಲಿತಿರುವನು ದಣಿವಿನಿಂ ಮುಕ್ತಹನೆ ಕುಣಿತಕಲಿತಿರುವವ ಮನದಿ ನಾಚುವನೆ ಒನಪು ಕಲಿತಿರುವಗೆ ಮನಸಿಜ ದೂರನೆ ಮನೆಮನೆ ತಿರುಗುವನು ಘನತೆಗೆ ಬಹನೆ 1 ಪಾದ ತಾಡಣೆಯು ತಪ್ಪುವುದೆ ಕೇಡುಗಾರಿಗೆ ಸುಖದ ಜಾಡು ತಿಳಿಯುವುದೆ ಕಾಡಡವಿಲಿರುವವಗೆ ರೂಢಿಯ ಸುದ್ದಿಹುದೆ ನಾಡ ಮಾತಾಡುವಗೆ ಕೇಡು ತಪ್ಪುವುದೆ 2 ನಿಂದಕಗೆ ಮುಂದಿನ್ನು ಹಂದಿಜನ್ಮ ತಪ್ಪುವುದೆ ಛಂದಸ್ಸರಿಯದವಗೆ ಕವಿತದಂದ ತಿಳಿಯುವುದೆ ಮಂದಿಗೋಷ್ಠಿಗ್ಹೋಗುವಗೆ ಕುಂದೊದಗದಿರುತಿಹ್ಯದೆ ತಂದೆತಾಯನ್ಹಳಿಯುವಗೆ ಬಂಧ ತಪ್ಪುವುದೆ 3 ಮೋಸಕಾರಿಗೆಮಶಾಪವು ತಪ್ಪುವುದೆ ಆಶಕಾರಿಗೆ ಮಹನಾಶ ಬಿಡುತಿಹ್ಯದೆ ದೇಶದೇಶ ತಿರುಗುವಗೆ ಘಾಸಿಯು ತಪ್ಪುವುದೆ ದಾಸಜನ ದೂಷಕಗೆ ಈಶನೊಲಿಮಿಹ್ಯದೆ 4 ಸುಗುಡಿಗೆ ಪತಿಸರಸ ಸೊಗಸಾಗಿ ಕಾಣುವುದೆ ಜಗಳಗಂಟಿಗೆ ವ್ರತದ ಬಗೆಯುಶೋಭಿಪುದೆ ಸುಗುಣೆಯರೊಡನಾಟ ಷಂಡನಿಗೆ ಸಲ್ಲುವುದೆ ಸುಗುಣ ಸಂಗಿಲ್ಲದೆ ನರಕ ಭುಗಿಲು ತಪ್ಪುವುದೆ 5 ಕಪಟತ್ವ ನೀಗದೆ ತಪವೃದ್ದಿಯಾಗುವುದೆ ಕೃಪಣತ್ವ ಬಿಡದವಗೆ ತಾಪತ್ರಳಿಯುವುದೆ ಜಪವಿಲ್ಲದೆ ವಿನಾ ಸುಫಲದೊರಕುವುದೆ ಗುಪಿತವನು ತಿಳಿಯದವಗಪರೋಕ್ಷವಿಹ್ಯದೆ 6 ಮಾನವನ ಗುಣರಿಯದೆ ಜ್ಞಾನ ಸ್ಥಿರವಾಹುದೆ ಜ್ಞಾನವಿಲ್ಲದೆ ಬೇರೆ ಧ್ಯಾನ ಸಿದ್ದಿಪುದೆ ದೀನನಾಥ ಮಮ ಪ್ರಾಣೇಶ ಶ್ರೀರಾಮನಡಿ ಖೂನವರಿಯದೆ ಮುಕ್ತಿ ಜಾಣೆ ಸುಖಬಹುದೆ 7
--------------
ರಾಮದಾಸರು
ಮಾರ್ಗದರ್ಶಕೆ ದೇವಿ ಮಾರ್ಗ ತೋರಮ್ಮ |ಸರ್ವ ಪೂರ್ವದಿ ಕವ್ಯ ಬಾಲನೆಂಬನ ಮಗಳೇ ಪ ಹರಿದೀಕ್ಷೆ ಹರಿತತ್ವ ನಿರ್ಣಯಾದಿಗಳಿರುವನರರು ಕಲಿಯುಗದಲ್ಲಿ ದುರ್ಲಭರು ಎಂದು |ಪರಿಪರಿಯ ಚಿತ್ರಿಸುತ ಸದ್ಬೋಧ ಮಾಡಿರುವೆಹರಿ ಪದಾಬ್ಜದಿ ಭಕುತಿ ಎಷ್ಟಿಹುದೊ ನಿನ್ನಲ್ಲಿ 1 ಶೇಷಾಚಲಕೆ ಬಂದು ಆ ಸುತೀರ್ಥವು ಕಪಿಲಲೇಸಾಗಿ ಮಜ್ಜನವಗೈದು ತಪವಾ |ಸಾಸಿರೊರ್ಷವು ದಿವ್ಯ ಏಕ ಚಿತ್ತದಿ ಗೈದುಭಾಸುರ ಸ್ತೋತ್ರದಿ ಹರಿಯ ತೋಷಿಸಿದೇ 2 ತಂದೆ ತಾಯಿಯು ನೀನು ಬಂಧು ಬಳಗವು ನೀನುಎಂದೆಂದಿU5ಭ್ರಾತ ವಲ್ಲಭನು ನೀನೇ |ಇಂದಿರೇಶನ ಹೊರತು ಮಂದಿ ಬೇರಿಲ್ಲೆನಗೆಎಂದು ನೀತುತಿಸಿ ಹರಿ ಸಂದರ್ಶನವ ಪಡೆದೇ 3 ದ್ವಾಪರದಲಾ ಕವ್ಯ 5À್ನಜಿತು ನೃಪನಾಗೆರೂಪಲಾವಣ್ಯಾತಿಶಯಗಳಿ5 |ಭೂಪ ಕುವರಿಯು ಆಗಿ ನೀಲಾಖ್ಯೆ ಎನಿಸುತ್ತಶ್ರೀ ಪತಿಯ ಕೈ ಪಿಡಿಯೆ ಮನವ ನೀ ಮಾಡ್ಡೇ 4 ದೈತ್ಯ ಸಪ್ತಕರೇವೆ ಗೂಳಿಗಳು ತಾವಾಗಿಸತ್ಯ ಹರಿ ದ್ವೇಷವನೆ ಸಾಧಿಸುವೆವೆಂದೂನಿತ್ಯ ಪುಷ್ಟಾಂಗದಲಿ ಬೆಳೆಯುತ್ತ ನೃಪನಲ್ಲಿಕೃತ್ಯ ಸ್ವಯಂವರ ಕೇಳಿ ಹರ್ಷಿತರು ಆಗೀ 5 ವಿಪರೀತ ಮತಿಯುಳ್ಳ ಅಪರಿಮಿತ ಬಲತೋರ್ವಸಪುತ ಗೂಳಿಗಳನ್ನೆ ಆರು ಬಂಧಿಪರೋ |ನೃಪನೆಂದ ಸುತೆ ನೀಲೆ ಕನ್ಯೆ ಕೊಡುವೆನು ಅವಗೆನೃಪ ನಿಂತು ಪಣತೊಟ್ಟ ಕೌತುಕವ ಕೇಳೀ 6 ಆರು ಬಂದವರೆಲ್ಲ ಹೋರಿಗಳ ಪಿಡಿಯಲ್ಕೆವೀರ್ಯ ಸಾಲದೆ ಮರಳಿ ಹೋಗುತಿರಲೂ |ಮಾರ ಪಿತ ಶಿರಿ ಕೃಷ್ಣ ಹೋರಿ ನಾಸಿಕಗಳಿಗೆದಾರಗಳ ಬಿಗಿಯುತ್ತೆ ಬಂಧವನ ಗೈದಾ 7 ದೇವಿ ಸುಂದರಿ ನೀಲೆ ದಿವ್ಯ ಹಾರವ ಪಿಡಿದು ದೇವ ದೇವೇಶ ಶಿರಿ ಕೃಷ್ಣ ಕಂಠದಲೀಹಾವ ಭಾವದಿ ಬಂದು ಅರ್ಪಿಸಲು ತಕ್ಷಣದಿದೇವ ವಾದ್ಯವು ಮೊರೆಯೆ ಪೂವ ಮಳೆ ಬಿತ್ತು8 ಕೃಷ್ಣ ಮಡದಿಯರಾರು ಮಂದಿಯೊಳು ನೀಲಾಖ್ಯೆಲಗ್ನದುತ್ಸವ ಕೇಳ್ದ ಭಕುತ ಜನರಾ |ಭಗ್ನ ಗೈಸುತ ಪಾಪ ಮಗ್ನವಾಹುದು ಮನವುಕೃಷ್ಣ ಗುರು ಗೋವಿಂದ ವಿಠಲ ಪದದಲ್ಲೀ 9
--------------
ಗುರುಗೋವಿಂದವಿಠಲರು
ಮಾಸ ನಿಯಾಮಕ ದೇವತೆಗಳ ವರ್ಣಿಸುವೆನು ಪ ಶ್ರೀಶನಾಜ್ಞೆಯಲಿ ಸಕಲ ಸುಜನರಿದ ಕೇಳಿ ಅ.ಪ. ಸಹವೆಂಬ ಮಾರ್ಗ ಶಿರದಿ ಪುತ್ರ ನಾಮಕ ಸವಿತೃ ಮಹಾ ವಿಶಾಲಾಕ್ಷಿರಮಣ ಕೇಶವ ನಿಯಾಮಕನು ಸಹಸ್ಯವೆನಿಪ ಪುಷ್ಯದೊಳು ವಿಷ್ಣುವೆನಿಪನು ಮಹಲಕುಮಿರಮಣ ನಾರಾಯಣನಿದಕೆ ಕರ್ತೃ 1 ತಪವೆನಿಪ ಮಾಘದೊಳು ಅರುಣನಾಮಕ ಸವಿತೃ ಚಪಲಾಕ್ಷಿ ರುಕ್ಮಿಣೀರಮಣ ಮಾಧವನು ದೊರೆಯು ತಪಸ್ಯವೆನಿಪ ಫಾಲ್ಗುಣದಿ ಸೂರ್ಯನೆನಿಪನು ಸುಪವಿತ್ರೆ ಧಾತ್ರೀಪತಿ ಗೋವಿಂದನಧಿದೇವತೆ2 ಮಧುಮಾಸವಾದ ಚೈತ್ರದೊಳು ವೇದಾಂಗನು ಪದುಮಾಕ್ಷ ಮಾ ರಮಾರಮಣ ವಿಷ್ಣು ನಿಯಾಮಕನು ಮಾಧವನೆನಿಪ ವೈಶಾಖದಿ ಭಾನುವೆಂದೆನಿಸುವನು ಮಧುಸೂದನ ನಾಮಕ ಮೋಹಿನೀ ಪತಿಯು 3 ಶುಕ್ರವೆನಿಪ ಜ್ಯೇಷ್ಠದೊಳು ಇಂದ್ರನೆನಿಪ ಸವಿತೃ ತ್ರಿ ವಿಕ್ರಮನಿದಕಧಿಪತಿಯು ಪದುಮಾಕ್ಷಿರಮಣ ಅಕ್ಕರದಿ ಶುಚಿಯೆನಿಪಾಷಾಡದಿ ರವಿಯೆನಿಪನು ಚಕ್ರಧರ ವಾಮನನಿದರಧಿಪತಿ ಕಮಲಾರಮಣ 4 ನಭವಾದ ಶ್ರಾವಣದಿ ಗಭಸ್ತಿಯೆನಿಸುವನು ತ್ರಿಭುವನದಧಿಪತಿ ಶ್ರೀಧರನು ಕಾಂತಿಮತಿರಮಣ ನಭಸ್ಯವೆನಿಪ ಭಾದ್ರಪದದಿ ಯಮನೆನಿಸುವನು ಇಭವರದ ಹೃಷಿಕೇಶ ಅಪರಾಜಿತಾ ರಮಣ 5 ಒದಗಿಹ ಇಷವೆನಿಪಾಶ್ವೀಜದೊಳು ಸ್ವರ್ಣರೇತಾ ಇದಕಭಿಮಾನಿ ಪದಮಾವತಿಪತಿ ಪದುಮನಾಭ ಉದಯಿಸುತಿಹ ಊರ್ಜಿಯೆನಿಪ ಕಾರ್ತಿಕದಿ ದಿವಾಕರ ರಾಧಾರಮಣ ದಾಮೋದರನಿದರಭಿಮಾನಿ 6 ಆಯಾಯ ಮಾಸದಲಿ ಮಾಳ್ಪ ಸಕಲ ಕರ್ಮಗಳನು ಆಯಾಯಭಿಮಾನಿ ದೇವರುಗಳಿಗರ್ಪಿಸಿ ಮಾಯಾರಮಣ ಶ್ರೀ ರಂಗೇಶವಿಠಲನ ನೆನೆಯುತ ಆಯಾಸವಿಲ್ಲದೆ ಪರಮಪದವನು ಪಡೆಯಿರೊ 7
--------------
ರಂಗೇಶವಿಠಲದಾಸರು
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು