ಒಟ್ಟು 237 ಕಡೆಗಳಲ್ಲಿ , 59 ದಾಸರು , 213 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ
ನಿತ್ಯ ಶುಭ ಮಂಗಳಂ ಪ ಮತ್ಸ್ಯಾವತಾರಿಗೆ | ವೇದ ಉದ್ಧಾರಿಗೇ ಪೊತ್ತ ಬೆನ್ನಲಿ ಗಿರಿಯ | ಮುದ್ದು ಕೂರ್ಮನಿಗೇ1 ದನುಜ ಸಂಹಾರಿಗೇ | ಮಧು ಕೈಟಭಾರಿಗೇ ವನದಿ ವಸನೆಯ ಪೊತ್ತ | ವರಹಾವತಾರಿಗೇ 2 ಪೋರನ್ನ ಪೋಷಕಗೆ | ಧಾರುಣಿಯ ಬೇಡ್ಡವಗೆಮೂರು ಲೋಕವನಳೆದ | ಮೂರ್ವಿಕ್ರಮ ನಿಗೇ 3 ಮೃಡ ಸಖನು ಕಾಳೀಯ | ಹೆಡೆಯ ಮೆಟ್ಟಿದಗೇ 4 ಬೆತ್ತಲೆ ನಿಂತವಗೆ | ಬುದ್ದಾವತಾರಿಗೇಉತ್ತಮ ಕಲ್ಕಿ ಗುರು | ಗೋವಿಂದ ವಿಠಲಗೇ 5
--------------
ಗುರುಗೋವಿಂದವಿಠಲರು
ನಿತ್ಯದುದಯಾಸ್ತಮಾನದಲಿ ಸ ರ್ವೋತ್ತಮ ಹರಿನಾಮ ಬರೆದೋದಿ ಭಕ್ತಿಯಿಂದಾಲಿಪರ ಭವತಾಪ ಜರೆ ಮೃತ್ಯುನೀಗಿ ನಿತ್ಯಮುಕ್ತಿ ಕೈಸೇರುತಿಹ್ಯವು ಪ ನರಿಹರಿ ಹಯವದನ ಜನಾರ್ದನ ವಾಸುದೇವ ವಾರಿಜಾಕ್ಷ ಮುರಧ್ವಂಸಿ ಮುಪ್ಪುರಾಂತಕ ಮುಕ್ಕುಂದ ಹರಿ ಸರ್ವೇಶ ಉರಗಪರ್ಯಂಕ ನಿರಂಜನ ನಿರ್ಜರೇಶ ಶರಣಜನಮಂದಾರ ಸಿರಿಯರಸ ಪರಮಪ್ರಕಾಶ ಪರತರೇಶ ಪರಮಪುರುಷ ಪರಾತ್ಪರನೆಂದು 1 ಮಾಧವ ದೇವದೇವೇಶ ದನುಜರಸಂಹರ ಶ್ಯಾಮಸುಂದರ ಘನಮೇಘಶ್ಯಾಮ ಸಚ್ಚಿದಾನಂದ ಚಿನುಮಯಾತ್ಮ ತಚ್ಚೈತನ್ಯರೂಪ ವೇಣುಧರ ಗೋಪಾಲ ಗೋವ ರ್ಧನೋದ್ಧಾರ ಗಾನಾಂದಧೋಕ್ಷಜಪಿತ ಧ್ಯಾನಗಮ್ಯ ತ್ರಿಭುವನೇಶ ತ್ರಿವಿಕ್ರಮನೆಂದು 2 ನಿತ್ಯಗುಣಾರ್ಣವ ನಿಜಗುಣ ನಿಷ್ಕಲಂಕ ನಿತ್ಯಾತ್ಮ ನಿರುಪಮ ಪರಂಜ್ಯೋತಿ ನಿತ್ಯನಿರ್ಮಲ ಸತ್ಯಭಾಮಾಕಾಂತ ಚಿದ್ರೂಪ ಚಿತ್ಕಳಂಕ ಕಮಲಾಕ್ಷ ಲಕುಮೀಶ ಶೌರಿ ಸೂತ್ರಧಾರಿ ಭಕ್ತವತ್ಸಲ ಭಯನಿವಾರ ನರಸಿಂಹ ಮುಕ್ತಿದಾಯಕ ಮಧುಸೂದನ ರಮಾರಮಣ ಮೃತ್ಯುಂಜಯ ವಿಶ್ವೇಶ ವಿಶ್ವವ್ಯಾಪಕನೆಂದು 3 ಕಾಲಾರಿ ಚಕ್ರಿ ಚತುರ್ಭುಜ ಭವನಾಶ ನೀಲಾಂಗ ರಂಗ ರಾಘವ ಭುವನೇಶ ನೀಲಲೋಚನ ನಗಧರ ಜಗಮೋಹ ಮೇಲುನಿಲಯ ನಿಗಮಾತೀತ ಪದ್ಮನಾಭ ಕಾಲೀಮರ್ದನ ಕೌಸ್ತುಭಾಂಬರ ವಿಷ್ಣು ಪಾಲಸಾಗರಕನ್ನಿಕಾಪ್ರಿಯನಾಥ ಲೀಲಜಾಲ ಜಾಹ್ನವೀಜನಕ ಕೇಶವ ಶೂಲಪಾಣಿಸಖ ಶಾಂತಾಕಾರನೆಂದು4 ಪರಮಾನಂದ ಗೋವಿಂದ ಗಜರಕ್ಷ ಶರಧಿಮಥನ ಕೂರ್ಮಮತ್ಸ್ಯ ಕರುಣಾಂಗ ವಾಮನ ಧ್ರುವಪಾಲ ದುರಿತಾರಿ ಕೃಷ್ಣ ವೆಂಕಟ ವಿಠಲ ಶರಣಾಗತವರದ ನುತಪಾಲ ವರದಾತ ವೇದಾಂಗ ಸುಖಧಾಮ ವರ ಶ್ರೀರಾಮ ಪರಮ ಪುಣ್ಯನಾಮ ಧರೆಮೂರರೊಳತ್ಯಧಿಕಮೆಂದು 5
--------------
ರಾಮದಾಸರು
ನಿನ್ನ ಬಗೆ ಬಗೆ ರೂಪಗಳ ಉರಗ ಶಯ್ಯ ರಂಗಯ್ಯಾ ಪ ದಿತಿಸುತ ಸೋಮಕ ಶ್ರುತಿತತಿ ಕದ್ದೊಯ್ಯೆ ಶತಧೃತಿ ತಲೆವಾಗಿ ಚತುರತೆÉಯಿಂದಲಿ ಮತಿಪತಿ ಮತ್ಪಿತಾ ಪ್ರತಿಪತಿ ಕಲ್ಪಕ್ಕೆ ಗತಿಸ್ಥಿತಿ ನೀನೆಂದು ಅತಿ ತುತಿಸಲು ಸಂ ತತ ಹಿತ ಹಿರಿದಾಗಿ ಪ್ರತಿಯಿಲ್ಲವೆನಿಸಿದ್ದು ರಿತ ಪುಂಜದಾನವನ ತರಿದೊಟ್ಟಿ ಮತ್ಸ್ಯಾಕೃತಿಯಾ ಜಯ ಜಯವೆನುತಿರೆ ತ್ರಿಭುವನಾ 1 ಕೃತು ಭುಕು ದೇವಾರಿತತಿ ಸಂಗತಿಯಿಂದ ಮತಿ ಏಕರಾಗಿ ಸಂಮತದಿಂದ ನಡೆದು ಪ ರ್ವತವ ಕಿತ್ತಿ ತಂದು ಉ ನ್ನತವಾದ ಕ್ಷೀರೋದ ಪತಿಯೊಳಗಿಟ್ಟು ಅತಿಬಲದಿಂದ ನಗುತ ಮಥಿಸಲು ಮಹಾ ಕ್ಷಿತಿಧರ ಮುಣಗಿ ಪೋಗೆ ಹಾಹೋ ಎಂದು ಗತಿಗೆಟ್ಟ ಯೆಲ್ಲ ಕೂಗೆ ಕೇಳುತ ಬಂದು ಅತುಳ ಕಮಠನಾಗಿ ಪೊತ್ತೆ ಭಳಿರೆ ಮಿಗೆ2 ಗತಮಂದ ಮಾರೀಚ ಸುತ ಹೇಮನೇತುರಾ ಕ್ಷಿತಿಯ ಕದ್ದೌಯಿದು ದುರ್ಮತಿಯಿಂದ ವಿಬುಧÀರ ಖತಿಗೊಳಾಗೈಸಿ ಹಿಗ್ಗುತಲವ ತಿರುಗುತ್ತ ಪ್ರತಿಕೂಲನಾಗಿ ಸುವ್ರತಗಳ ಕೆಡಿಸುತ್ತ ಮಿತಿ ಮೀರಿ ಪಾತಾಳ ವಾಸವಾಗಿರಲು ಅದ್ಭುತ ಕಿಟಿ ರೂಪವಾಗಿ ರುತಲಿರೆ ಸತತಮರರು ಪಾಡೆ ಏನೆಂಬೆ ಶಿರವಾಗಿ 3 ಚತುರ ಮೊಗನವರನುತಿಸಿ ಪಡೆದು ಪ್ರಾಗ ರ್ವಿತನಾಗಿ ನೀಲಲೋಹಿತನ ಭಕುತಿಯಿಂದ ತತುವೇಶಜನರ ಶಕುತಿ ಕುಂದಿಸಿ ತಾನೆ ರತುನ ಗರ್ಭದೊಳು ದೇವತಿಯೆಂದು ಸಾರಿ ಬಾ ಳುತ್ತ ತನ್ನಾತ್ಮಜ ಭಾಗವತನ ಭಾಧಿಸಿ ಶಿರಿ ಗತಿಯೆಂದು ವಂದಿಸಲೆ ಕಂಭದಿ ಬಂದು ಸುರರು ಪೂಮಳೆ ಚೆಲ್ಲೆ 4 ಸುತಳ ಲೋಕಕ್ಕೀಶ್ವರ ಶತಕೃತ ಕವಿಯ ರಚಿಸಿ ಸಿತನಾಗಿ ರಥ ನನ್ನ ಚ್ಯುತ ಪದಸ್ಥನ ಮಾಡಿ ಸತುವ ಮಾರ್ಗದಲಿ ಪೂರಿತ ಭಾಗ್ಯತನದಲ್ಲಿ ಕೃತಕಾರ್ಯನಾಗಿರೆ ರಿತಮದದಲಿ ತಾ ನುತಿಸಲಾದಿತಿಯ ಗರ್ಭದಲ್ಲಿ ಜ ವಿತರಣೆ ನೆವದಿ ನಿಂದು ಭೂಮಿಯ ಕೊಂಡಜ ತತಿ ವಿಕ್ರಮತೀರಿತವಾದ ದಯಾಸಿಂಧು 5 ಸೂನು ಪೂಜಿತನಾಗಿ ಮುನಿಯಿಂದ ಪಿತನಗೋಸುಗ ಉಗ ಳುತ ರೋಷ ಕಿಡಿಗಳಾದ ಈರೈದು ಬಾಹೋ ದ್ವಿತೀಯ ಜಾತಿಯವನ ಹುತವ ಮಾಡಿದ ಗಂಭೀರಾ ನಿ ರುತ ಸತ್ಯವತಿ ನಂದನಕುವರ ಪರುಶ ಪಾಣಿ ಮೃತ ಜೀವಿಗಳ ಬದುಕಿಸಿದ ಮಹಾಧೀರಾ 6 ಚತುರಾತ್ಮ ಹರಿದೈವ ವೈವಸ್ವತ ಮನುಕುಲೋಧ್ಭವನಾ ಅನುಜ ಸಹಿತ ಪೋಗಿ ಮುನಿಯ ವಾ ರುತಿಯ ಮನ್ನಿಸಿ ಶಿಲಿ ಸತಿಯಳ ಮಾಡಿ ಭೂ ಪುರವಸಾರಿ ಪಿತನಾಜ್ಞ ತಿಳಿದು ಮಾ ರುತಿಯಿಂದ ಕಪಿಯ ವಿಗತಸಂತಾಪನ ಮಾಡಿ ಸೇತುವೆ ಕಟ್ಟಿ ಪತಿತರ ಶಿರ ಚೆಂಡಾಡಿ ಲಂಕಾನಗರ ಹಿತದಿಂದ ಭಕ್ತಗೆ ಪಟ್ಟಗಟ್ಟಿದÀ ನೋಡಿ 7 ಶತ್ರಪತ್ರಾರುಣ ದಳಾಯುತ ನಯನಾದೇವ| ತತಿ ವಂದ್ಯ ಗೋಕುಲ ಸ್ಥಿತಿ ಉದ್ಧಾರಕ | ಭಂಗ ಬಲಾ | ಚರಿತಪೂರ್ಣ ಕಂಸಾರಿ ಯುತ ಷೋಡಶಾಖ್ಯ ಯುವತಿಯರ ತಂದ ಅ| ಪ್ರತಿಮಲ್ಲ | ರತಿಪತಿ ಪಿತ ಫಲ್ಗುಣಗೆ ಭಾ | ಸಾರಥಿ ಎನಿಸಿ ಕಾಳಗದೊಳು | ಧೃತರಾಷ್ಟ್ರಜರ ಕೊಲ್ಲಿಸೆ ಸಭಯಲ್ಲಿ ಪರೀ | ಕ್ಷಿತಿನ ಉಳಿಹಿ ಕೀರುತಿ ಪೊತ್ತ ಗುಣರಾಶಿ 8 ವ್ರತದಿಂದ ಖಳರು ಧರಿತ ಸತ್ಕರ್ಮವ ಮಾಡೆ | ಗತಿಗೆಟ್ಟು ಸುರರ ಉಕುತಿಯಿಂದ ಕೈಮುಗಿದು | ಅಪ್ರಾಕೃತ ಕಾಯ ಶಿಶುವಾಗಿ || ಶ್ರುತಿ ಸರ್ವದಲಿ ಅನೃತವೆಂದು ತಿಳುಪಿ ಉ | ಚಿತ ಮಾರ್ಗದ ಬಿಡಿಸಿ ನಿ | ರ್ಜೀತ ಕಾರು ಪಾರ್ವತಿ ಪತಿಗೆ ಮಾರ್ಗಣವೆನಿಸಿ ತ್ರಿಪುರಾರಿಗೆ ಹುತಗೈಸಿ ಶಿವನ ಗೆಲಿಸಿ ವಿವಶಳನೆ ಪತಿವ್ರತೆಯರ ಲಜ್ಜೆಗೊಳಿಸಿದೆ ವಂಚಿಸೀ 9 ವಿಹಿತ ಧರ್ಮ ಮರೆದು | ಮಮತೆ ಜಾತಿ ಸಂಕರ | ವ್ರತದಲ್ಲಿ ನಾನಾ ದುಷ್ಕøತ ತುಂಬಿರಲು ದೇವತೆಗಳು ಮರುಗಿ ಅ | ರತರಾಗಿ ತುತಿಸಿ ತ್ವರಿತ ಸ್ವಭಾವದಲ್ಲಿ ನಿ | ಸಿತ ಖಡ್ಗಧರಿಸಿ ರಾ ಶೌರಿ | ಸುಕೃತ ನೆನೆವವರಿಗೆ ಭವಸಾಗರ ತಾರಿ10 ಶ್ರುತಿ ಶೀರ್ಷ ಶ್ರುತಿ ಉಪ | ಕೃತಿನಯ ಪಂಚಮ ಶ್ರುತಿ ಪಂಚರಾತ್ರಾ ಸಂ | ವತ ಮೂಲ ರಹಸ್ಯ | ತತುವಾದಿನಾಮನು | ಶ್ರುತಿಕಲ್ಪ ಕಥೆ ಸರ್ವ ಪ್ರತಿಪ್ರತಿ ವರ್ಣ ಸಂತತಿಯಲ್ಲಿ ನೀನೆ ವ್ಯಾ | ಪುತಮೂರ್ತಿ ಸಪ್ತ ಸಪುತ ಭುವನೇಶನೆಂದು ಅಚೌಧ್ಯರೊ ಪ್ಪುತ ಕೊಂಡಾಡುವರು ನಿಂದು | ಭಕುತಪೂ ಜಿತ ಕಾಯಾ ವಿಜಯವಿಠ್ಠಲನೆ ಪಾಲಿಸೊ ಇಂದು11
--------------
ವಿಜಯದಾಸ
ನಿನ್ಹೊರತು ಪೊರೆವರಲಿಲ್ಲ ಹರಿ ಮುರಾರಿ ಪ. ಪೂರ್ಣಾತ್ಪೂರ್ಣ ಕ್ಷೀರಾರ್ಣವ ಶಯನ ವ- ರೇಣ್ಯ ಸ್ವತಂತ್ರವಿಹಾರಿ 1 ಜೀವನಿಚಯಕೃತ ಸೇವೆಯ ಕೈಗೊಂಡು ಪಾವನಗೈವೆ ಖರಾರಿ 2 ತಾಪತ್ರಯಹರ ಗೋಪಾಲ ವಿಠಲ ಆಪನ್ನಭಯನಿವಾರಿ 3 ಪ್ರಾಣನಾಥ ಸರ್ವ ಪ್ರಾಣನಿಯಾಮಕ ಪ್ರಾಣದಾನಂತಾವತಾರಿ 4 ಲಕ್ಷ್ಮೀನಾರಾಯಣ ಬ್ರಹ್ಮಾದಿ ವಿ- ಲಕ್ಷಣ ರಕ್ಷಣಕಾರಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಿಲಯ ಐಕೂರು ಗ್ರಾಮಾಲಯ | ಸ್ತಂಭೋಧ್ವವ ದೇವ ನಾಮಧೇಯ ಧ್ವಯಭಾರ್ಯ ಸುಮನಸಪ್ರಿಯ ಸದ್ಭಕ್ತಾರ್ತಿವಿದೂರ ವಿಮಲ ಹೃದಯ ಅತ್ಯಂತ ಕರುಣಾಮಯ | ಅಸ್ಮದ್ ಸದ್ಗುರುವರ್ಯ ನಿತ್ಯ ಸನ್ಮಂಗಳ 1 ಸಾರೋದ್ಧಾರ ಸಂಗೀತ ಭಾರತಿಯುತ ವೇದಾರ್ಥ ಸಂಪೂರಿತ | ಸಹ್ಲಾವಂಶಜ ದಾಸವರ್ಯ ವಿರಚಿತ ಶ್ರೀಶೌರಿ ಸುಕಥಾಮೃತ ಸಾರಜ್ಞಂ ಸುಶೀಲೇಂದ್ರತಿರ್ಥರ ಮಮತ ಸಂಪೂರ್ಣ ಸಂಪಾದಿತ ಅಸ್ಮದಗ ಸದ್ಗುರುವರ್ಯ ನಿತ್ಯ ಸನ್ಮಂಗಳ 2 ಅಷ್ಟಪದಲೋಷ್ಟ ಭಾವಸಮತ | ಕರತಧೀರ ಸನ್ಮಾನಿತ ಅಷ್ಟ್ಯೆಕಾಮಲ ಭಕ್ತಿ ಜ್ಞಾನ ಭರಿತ ವೈರಾಗ್ಯ ಸಂಶೋಭಿತ | ಸೃಷ್ಟ್ಯಂತರ್ಗತ ಮೂರ್ತಿ ಸತತ | ಸಂದರ್ಶನಾನಂದಿತ ನಿತ್ಯ ಸನ್ಮಂಗಳ 3 ಶೃಂಗಾರಾಂಗ ಸುನಾಮದ್ವಾದಶಧೃತ ಮುದ್ರಾಕ್ಷತಾಲಾಂಕೃತ ಕಮಲ ಜಪಿತ ಪದ್ಮಾಕ್ಷಮಾಲಾಂದ್ರಿತೆ ಇಂಗಿತಜ್ಞ ಸುಸಾಧು ಸಂಗ ಸಹಿತ ಮುಕ್ತ್ಯಂಗನಾಲಿಂಗಿತ ನಿತ್ಯ ಸನ್ಮಂಗಳ4 ತಾಪತ್ರಯದೂರ ಪಾಪರಹಿತ | ಕೋಪಾದಿಗುಣವರ್ಜಿತ | ಶಾಪಾನುಗ್ರಹಶಕ್ತ ಸುಜನಪ್ರೀತ ಸಂಸಾರ‌ಘನ ಮಾರುತ ಗೂಡಾರ್ಥ ಸಂಬೋಧಿತ ಅಸ್ಮದ್ ಸದ್ಗುರುವರ್ಯ ಈಯೋ ನೀ ನಿತ್ಯಸನ್ಮಂಗಳ 5 ಆಧ್ಯಾತ್ಮ ಸುವಿಚಾರ ಸತತ ಶೃತ್ಯರ್ಥಬಹು ಗರ್ಭಿತ | ಸತ್ಯವಲ್ಲಭ ಸತ್ಯದೇವ ಚರಿತ ವಕ್ತಾರ ಬುಧ ಸಮ್ಮತ | ನಾಡ್ಯಾಂತರ್ಗತ ಸರ್ವತೀರ್ಥ ಸ್ನಾತ | ತನ್ಮೂರ್ತಿ ಪ್ರತ್ಯಕ್ಷತ ನಿತ್ಯ ಸನ್ಮಂಗಳ 6 ಧರ್ಮಾಚಾರ ವಿಚಾರಶೀಲ ನಿರತ | ಷಟ್ಕರ್ಮ ಸಂಭೂಷಿತ | ನಿರ್ಮತ್ಸರ ಮೋಹ ದೇಹ ಮಮತ ಸುಶರ್ಮಕುಲರಾಜಿತ | ಧಮೋದರವಾತಜಾತ ಪೋತ ಜಾತಾರಿಖತಿವರ್ಜಿತ | ಅಸ್ಮಾದ್ ಸದ್ಗುರುವರ್ಯ ಈಯೋ ನಮಗೆ ಸತತ ನೀ ಸನ್ಮಂಗಳ 7
--------------
ಶಾಮಸುಂದರ ವಿಠಲ
ನೀನಲ್ಲದಿನ್ನಾರು ಸಲಹುವರೊ ಎನ್ನ ಪ ನಾನು ನನ್ನದು ಎಂಬ ದುರಭಿಮಾನಿಯನ್ನಅ.ಪ. ಶ್ರೀಮದಾಚಾರ್ಯರ ಪುಸ್ತಕ ಭಂಡಾರವನು ಪ್ರೇಮದಿಂ ಧರಿಸುತ ವೃಷಭನಾಗಿರ್ದು ಚರಿಸಿ ಕಾಮಪಿತನೊಲಿಮೆಯಿಂ ಮರಳಿ ಜನಿಸಿ ಗುರುಗಳ ಆ ಮಹಾಭಾಷ್ಯವರುಹಿದ ಜಯತೀರ್ಥ ಗುರುವೆ 1 ಬಾಲತನದಲಿ ಸಕಲ ಲೀಲೆಗಳ ತೊರೆದು ಕಾಲುಂಗುಟಾಗ್ರದಿ ನಿಂದು ತಪವಗೈದು ಶ್ರೀಲೋಲನ ಮೆಚ್ಚಿದಂಥ ಧೀರ ದೈವ ಭೂ- ಪಾಲನಂಶದ ಶ್ರೀಪಾದರಾಜ ಗುರುವೆ2 ಪಿತನ ಮತ ಧಿಕ್ಕರಿಸಿ ಶ್ರೀಪತಿಯೆ ಪರನೆಂಬ ಮತಿಪÉೂಂದಿ ಶಿಶುತನದಲಿ ನರಹರಿಯ ಒಲಿಸಿ ಅತಿಹಿತನಾದ ಪ್ರಹ್ಲಾದದೇವನಂಶದಿಂ ಕ್ಷಿತಿಯೊಳುದ್ಭವಿಸಿದ ವ್ಯಾಸರಾಜ ಗುರುವೆ 3 ಈ ಧರೆಯೊಳೆಸೆಯುತಿಹ ಉಡುಪಿಯೊಳು ನೆಲಸಿರ್ಪ ಯಾದವ ತೀರ್ಥಾಯ ಪದ ಸರಸಿರುಹ ಭೃಂಗ ಮೋದ ತೀರ್ಥಾರ್ಯರ ಪದಕರುಹನಾದಂಥ ಸೋದೆಯೊಳ್ರಾಜಿಸುವ ವಾದಿರಾಜ ಗುರುವೇ 4 ಕಂತುಜನಕನಿಗತ್ಯಂತ ಪ್ರಿಯನಾದ ಮತಿ ವಂತನಾ ವ್ಯಾಸಮುನಿಯೆ ನೀನಾಗಿ ಬಂದು ಸಂತಸದಲಿ ಸಾಧು ಜನರಿಷ್ಟ ಪೂರೈಸುತ ಮಂತ್ರಾಲಯದಿ ಮೆರೆವ ರಾಘವೇಂದ್ರ ಗುರುವೆ 5 ಜಲಜಭವನೂರುಭವನಂಶದಲಿ ಜನಿಸಿ ಕಲಿಯುಗದಿ ಹರಿನಾಮವೆ ಗತಿಯೆಂದು ಸಾರಿ ಹಲವು ಪದ ಸುಳಾದಿಗಳ ರಚಿಸಿ ಸಜ್ಜನರ ಕಲುಷಗಳ ಕಳೆದ ಪುರಂದರದಾಸರಾಯ 6 ಸಕಲ ಋಷಿಗಳ ಸಂಶಯವ ಪರಿಹರಿಸಿ ವೇದ ಉಕುತಿಗಳಿಂದ ಹರಿಯೆ ಪರನೆಂದು ಸ್ಥಾಪಿಸಿ ಭಕುತಿ ವೈರಾಗ್ಯನಿಧಿ ಭೃಗುಮುನಿಯೆಂದೆನಿಸಿದ ಮುಕುತಿಪಥ ತೋರಿಸಿದ ವಿಜಯದಾಸರಾಯ 7 ಸೂತ್ರ ಪುರಾಣಗಳ ರಚಿಸೆ ದಾಸತ್ವವಹಿಸಿ ಸಕಲ ಗ್ರಂಥಗಳ ಬರೆದು ಶ್ರಿಶಗರ್ಪಿಸುತ ಲೇಸು ಜಗಕೆಗೈದಂಥ ಗ ಣೇಶಾವತಾರಿ ಗೋಪಾಲದಾಸರಾಯ 8 ಸಿರಿ ರಂಗೇಶವಿಠಲನ ಕಾಂಬ ತೃಷೆಯಲಿ ಹರಿಗೆ ಹರಿಕಥಾಮೃತಸಾರ ಪಾನಗೈಯಲಿತ್ತ ನರಹರಿಯ ಕೃಪಾಪಾತ್ರ ಸಹ್ಲಾದನಂಶದ ಗುರುವರ ಶ್ರೀ ಜಗನ್ನಾಥದಾಸರಾಯ 9
--------------
ರಂಗೇಶವಿಠಲದಾಸರು
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀರ ತರಂಗಿಣಿ ತೀರ ನಾರಸಿಂಹ ಪ ಸಾರಿದೆನೊ ತವಪಾದ ಪಂಕಜ ತೋರು ಮನದಲಿ ತವಕದಿ ಅ ನಾರದನುತ ಚಿಚ್ಛರೀರವ ಶ್ರೀ ಭೂದು ರ್ಗಾರಮಣ ದುರಿತಾರಿ ಬ್ರಹ್ಮ ಸ ಮೀರ ಮುಖ ವಿಬುಧಾರ್ಚಿತ ಚಾರು ಚರಣಯುಗ ಕ್ಷೀರಾಬ್ಧಿ ಶಯನ ಮ ದ್ಭಾರ ನಿನ್ನದು ಮೂರು ಲೋಕದ ಸೂರಿಗಮ್ಯ ಸುಖಾತ್ಮಕ 1 ವೇದವೇದ್ಯ ಸಂಸಾರೋದಧಿ ತಾರಕ ಛೇದ ಭೇದ ವಿಷಾದವೇ ಮೊದ ಶ್ರೀದ ಶ್ರೀಶ ಅನಂತ ಆಪ್ತಕಾಮ ಬಾದರಾಯಣ ಭಕ್ತವರ ಪ್ರ ಹ್ಲಾದಪೋಷಕ ಪಾಹಿ ಮಾಂ 2 ಹೋತಹೃದ್ಯ ಜಗನ್ನಾಥವಿಠಲ ನಿನ್ನ ಮಾತು ಮಾತಿಗೆ ಸ್ಮರಿಸುತಿಹ ಸ ಚ್ಚೇತನರನು ನೀ ಸರ್ವದಾ ವೀತಶೋಕ ಭವಭೀತಿ ಬಿಡಿಸಿ ತವ ದೂತರೊಳಗಿಡು ಮಾತರಿಶ್ವಗ ಭೂತಭಾವನ ಭವ್ಯದ3
--------------
ಜಗನ್ನಾಥದಾಸರು
ನೀಲಕಂಠ | ನೀಲಕಂಠ | ನೀಲಕಂಠ | ಪಾಲಯ ಪ ಗಾಳಿದೇವನ ಒಲಿಮೆ ಯಿಂದಕಾಲಕೂಟ ಮೆದ್ದ ಶಿವನೇ ಅ.ಪ. ಸುಕೃತ ಭೃಕುಟಿ ಭವನೆ ಕಳೆವೆ ಪಾಪ 1 ಕಾವೇರಿಕೆ ನರ್ಮದೇಗಳ್ | ಸೇರ್ವ ಸನಿಯ ಶೈಲದಲ್ಲಿ ||ಭಾವ ಜಾರಿ ನಿನ್ನ ಪ್ರಭವ | ತೋರ್ವೆ ಜ್ಯೋತಿರೂಪ ಭಾವ 2 ಸುರರು ನಗುವ ಪರಿಯು ಅಲ್ಲವೆ | ಶರಣ ಜನರ ಪೊರೆಯೆ ಸ್ವೀಕರ 3 ಚಾರು ಚರಣಘೋರ ಭವವ ತಾರಿಪ ಓಂ | ಕಾರ ಪ್ರತಿಮ ಕಾಯೊ ಎಮ್ಮ4 ಹರಿಯ ಪದದ ನೀರನೀಗ | ಹರಿಯ ದ್ವಾರದಿಂದ ತಂದೂಹರಿಯ ದ್ವಾರ ತೋರ್ಪ ಭಾವಿ | ಹರಿಂ5ಶಯ್ಯಗೆ ಎರೆವೆನಂi5 5 ಮನವ ಆಳ್ವನೆ ಮೊರೆಯ ಕೇಳಿ | ಮನದ ಮಲಿನ ತ್ವರದಿ ತಳ್ಳಿಮನದಾಭಿಧನ ಚಿಂತೆಯಲ್ಲಿ | ಮನವನಿರಿಸೊ ಕೃಷ್ಣನಲ್ಲಿ 6 `ದೂಃ` ಎಂತ ಮರುತ ನಿನ್ನ | ಶರೀರದೊಳಗೆ ಇರುವನಲ್ಲಿದೂರುವಾಸ ತೋರೊ ಶ್ರೀಪ | ಗುರು ಗೋವಿಂದ ವಿಠಲ ರೂಪ 7
--------------
ಗುರುಗೋವಿಂದವಿಠಲರು
ನೋಡಮ್ಮಾ ಶ್ರೀ ವಾಸುದೇವನಾ ನಮ್ಮ ಬೇಡಿದಿಷ್ಟಾರ್ಧವ ನೀವನಾ ಪ ಪರ ಬ್ರಹ್ಮ ರೂಢಿಗೆ ನರಲೀಲೆಯಾಡುವ ಬಗೆಯಾಅ.ಪ ದೇವರ ಅನುಮತ ನೋಡಿದಾ ಅಂವ ದೇವಕಿ ಉದರದಿ ಮೂಡಿದಾ ಪಾವನ ಗೋಕುಲ ಮಾಡಿದಾ ಸುಖ ದೇವಿ ಯಶೋದೆಗೆ ನೀಡಿದಾ ಆವಾವ ಪರಿಯಲಿ ನೋವ ಬಗೆಯ ಬಂದು ಗಾಲಿಲ ಅಸುರರ ಜೀವನ ವಳಿದಾ 1 ಗೊಲ್ಲತೆಯರ ಮನಮೋಹಿಸಿ ಕದ್ದು ಅಲ್ಲಿಹ ಪಾಲ್ಬಣ್ಣೆ ಸೇವಿಸಿ ಬಿಲ್ಲ ಹಬ್ಬದ ನೆವತೋರಿಸಿ ಪೋಗಿ ಮಲ್ಲಚಾಣರರಾ ಭಂಗಿಸೀ ಬಲ್ಲಿದ ಕಂಸನ ಮಲ್ಲಯದ್ಧಗಳಿಂದ ಘಲ್ಲಿಸಿದನು ಜನಚಲ್ಲಿ ಬಡಿದನಾ 2 ನೀರೊಳು ಕಟ್ಟಿಸಿ ಮನೆಯನು ಬಂಗಾರದ ದ್ವಾರಕಾ ಪುರವನು ಸೇರಿಸಿ ಯದುಕುಲದವರನು ರುಕ್ಮಿ ಣೀ ರಮಣಲ್ಲಿಗೆ ಮರೆದನು ಸಾರಿದ ಶರಣರಾ ತಾರಿಸಿ ಹೋದನು ಮಹಿಪತಿ ನಂದನ ಪ್ರೀಯನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡು ಮನವೆ ವರಯತಿಯಾ | ನಡೆ | ನೋಡು ಸದ್ಭಾವದಿಂದಲಿ ಮಹಿಪತಿಯಾ ಪ ದುರುಳ ದುರ್ಜನರನು ಶಿಕ್ಷಿಸಲಾಗಿ | ಭೋಗಿ 1 ಕೆಲವು ದುಷ್ಕರ್ಮ ಮಾಡಿದಾ ಫಲದಿ | ದೊಲವಿಲಿ ತಾರಿಸುತಿಹನು ಭರದಿ 2 ಹರುಷದಿ ಲೋಲ್ಯಾಡುತಿಹಾನಂದದೊಳು | ಕೃಷ್ಣನ ಜೀವ ಜೀವಾಳು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡೆ ದಯದಿ ಶಿರಿ ನಿನ್ನ ಮಡದಿ ಪ ನೋಡಿ ನೀ ದಯದಿ ನೀಡು ಕರುಣ ದಯ- ಮಾಡು ತ್ವರಿತದಿ ಬೇಡುವೆ ಮುದದಿ ಅ.ಪ. ಮಾಮನೋಹರ ನೀ ಪ್ರೇಮದಿಂದಲಿ ಬಂದ- ಜಾಮೀಳನ ಪೊರದಾ ಶಾಮಸುಂದರನೇ1 ಭಾರಿ ಭಾರಿಗೆ ಎನ್ನ ದಾರಿದ್ರ್ಯವನಧಿಯ ತಾರಿಸಬೇಕೆಂದು ಶೇರಿದೆ ನಿನ್ನನ್ನು 2 ಮರೆಯುವುದುಚಿತವೆ ಶಿರಿಯ ರಮಣ ನೀನು ತರಳ ಧ್ರುವನನ್ನ ಪೊರೆದಂಥ ದೇವ ನೀ 3 ಆರ್ತರಕ್ಷಕ ನೀನು ಪಾರ್ಥನಾ ಸೂತನು ಸಾರ್ಥಕ ಮಾಡು ಲೋಕ ಕರ್ತೃ ದಯಾಪರನೆ 4 ಸರಸಿಜನಾಭನಾದ ಸಿರಿವತ್ಸಾಂಕಿತ ನೀನು ಮರೆಯಬ್ಯಾಡೆನ್ನಯ ಮೊರೆಯನು 5
--------------
ಸಿರಿವತ್ಸಾಂಕಿತರು
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪದಯುಗಳಂ ಪ ರಾಮಸುಂದರ ಘನ ಶ್ಯಾಮರಘೂದ್ವಹ ಅ.ಪ. ದಶರಥ ಹೃದಯಾನಂದಕರಂ ತ್ರಿದಶಗಣಚಿತ್ತಾಮೋದಕರಂ 1 ಪೂರಿತ ಕೌಶಿಕಯಜನಂ ಸಂತಾರಿತಗೌತಮ ಲಲನಾಂ 2 ಖಂಡಿತ ಶಂಕರ ಚಾಪಂ ಪರಿ-ದಂಡಿತ ಭಾರ್ಗವ ಕೋಪಂ 3 ಪಾತಕ ನಿಚಯಂ 4 ಮುನಿಜನ ಸ್ತುತಿರಚನಂ5 ಭಾರದ್ವಾಜಾರ್ಪಿತ ಭೋಜ್ಯಂ 6 ಉದ್ದಂಡ ವಿರಾಧಪಾತಕ ಹರಣಂ 7 ನಿರ್ಜಿತರಾಕ್ಷಸಷಂಡಂ8 ಧೃತಜಗದುಲ್ಲಾಸಂ 9 ವಿವಿಧಾಯುಧಜಾಲಂ 10 ಶೂರ್ಪನಖಾಂಗಂ 11 ನರವರಮುನಿಗಣ ಪರಿಪಾಲಂ12 ಮಾಯಾಮೃಗಾರ್ಪಿತ ಬಾಣವರಂ- ಜಟಾಯುಸಂಪಾದಿತ ಲೋಕವರಂ 13 ರಾವಣಹೃತ ನಿಜ ಪತ್ನೀಕಂ ಲೋಕಾವನಗತ ಕೋಪೋದ್ರೇಕಂ 14 ಬಂಧನ ಮೋಚನ ಚತುರಂ 15 ವಾತತನೂಭವ ಕೃತಸ್ತೋತ್ರಂ-ಪಂಪಾತಟಿನಿರ್ಮಿತ ಸುಕ್ಷೇತ್ರಂ16 ಶಿಕ್ಷಿತ ಸಂಕ್ರಂದನ ತನುಜಂ-ಸಂರಕ್ಷಿತ ಚಂಡ ಕಿರಣ ತನುಜಂ17 ಸೀತಾಲೋಕನ ಕೃತಕಾಮಂ-ನಿಜಧೂತಾಮೋದನ ಸುಪ್ರೇಮಂ18 ಯವನಾಲಯ ಪರಿವಾರಂ19 ಧೂತಾಹೃತ ಶುಭದೃಷ್ಟಾಂತಂ-ವಿಜ್ಞಾತನಿಜಸ್ತ್ರೀ ವೃತ್ತಾಂತಂ20 ಭೀಷಣ ಜಲನಿಧಿ ಬಂಧಕರಂ-ವಿಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲದಿಂ-ಸಂತೋಷಿತ ದೈವತ ಪರಿಧಿಂ22 ಪಾತಕ ನಿಜ ನಾಮಾಂಕಂ 23 ಸ್ವೀಕೃತ ಸಾಕೇತವಾಸಂ-ಅಂಗೀಕೃತ ಮಾನುಷ್ಯ ವಿಲಾಸಂ24 ವಿಠಲಮತಿಶಯರುಚಿರಂ25
--------------
ಸರಗೂರು ವೆಂಕಟವರದಾರ್ಯರು