ಒಟ್ಟು 507 ಕಡೆಗಳಲ್ಲಿ , 79 ದಾಸರು , 420 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನಪಾಪವೇ ಎನ್ನ ಕಾಡುವುದು ಎನ್ನಯ್ಯ ಹರಿಯೆ ನಿನ್ನದಿದರೊಳನ್ಯವೇನಿಹ್ಯದು ಪ ಮುನ್ನಮಾಡಿದ ಪಾಪಕರ್ಮವು ಬೆನ್ನಬಿಡದೆ ಕಾಡುತಿರಲು ನಿನ್ನಗನ್ನುವುದಾವ ನ್ಯಾಯವು ಪನ್ನಂಗಶಾಯಿ ಸನ್ನುತಾಂಗ ಅ.ಪ ನಾನಾಜೀವಿಗಳ ಪ್ರಾಣಹಾರಿಸಿದೆ ಅನ್ಯರಿಗೆ ಬಿಡದೆ ಜಾಣನುಡಿ ಪೇಳಿ ಹಾನಿ ಬಯಸಿದೆ ದುಗ್ಗಾಣಿ ರಿಣಕಾ ಗೇನುಯಿಲ್ಲೆಂದಾಣೆ ಮಾಡಿದೆ ನಾ ನಿನ್ನ ಮರೆದೆ ಏನು ತಿಳಿಯದೆ ಜ್ಞಾನ ಪೇಳಿದೆ ಜ್ಞಾನವಂತರಿಗ್ಹೀನ ನುಡಿದೆ ಮಾನವಂತರ ಮಾನ ಕಳೆದೆ ಹೀನಬವಣೆಯೋಳ್ಬಿದ್ದೆನಭವ 1 ಅಂಗನೆಯರ ಸಂಗ ಬಯಸಿದೆ ದುರಿತಕ್ಕೆ ಹೇಸದೆ ಅಂಗನೆಯರ ಗರ್ಭ ಭಂಗಿಸಿದೆ ಅನ್ಯರ ಒಡವೆಗೆ ಕಂಗಳಿರೆ ಭಂಗಕೊಳಗಾದೆ ಮಂಗ ನಾನಾದೆ ನಿತ್ಯ ನೇವಹಕೆ ಅಂಗನೆನಿಸದೆ ಬಡವರ್ವಿಮಹಕೆ ನುಂಗಿ ಕೂತೆನು ಪರರ ದ್ರವ್ಯಿ ನ್ನ್ಹ್ಯಾಂಗೆ ನಿನ್ನೊಲಿಮೆನಗೆ ಅಭವ 2 ಕೊಟ್ಟ ಒಡೆಯರಿಗೆರಡನೆಯ ಬಗೆದೆ ನಂಬಿ ಎನ್ನೊ ಳಿಟ್ಟ ಗಂಟನು ಎತ್ತಿಹಾಕಿದೆ ಪಡೆದ ಮಾತೆಯ ಬಿಟ್ಟು ಬೇಸರ ಮಾಡಿನೋಡಿದೆ ಭ್ರಷ್ಟನಾನಾದೆ ದುಷ್ಟಗುಣಗಳನೊಂದುಬಿಡದೆ ಶಿಷ್ಟಪದ್ಧತಿ ಜನಕೆ ಉಸುರಿದೆ ಕೊಟ್ಟವಚನೊಂದು ನಡೆಸದಿಂದುಳಿದು ಕೃತಿ ಪೇಳೆನಭವ 3 ಒಂದೆ ಮನದವನಂತೆ ತೋರಿದೆ ಮತ್ರ್ಯದವರಿಗೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿದೆ ದೋಷವಿನಿತು ಹೊಂದದವರಿಗೆ ಕುಂದು ಹೊರೆಸಿದೆ ನಾನೇ ಅಹುದಾದೆ ಸಿಂಧುಶಯನ ಭಕ್ತರನ್ನು ಕಂ ಡೊಂದಿಸದೆ ಮುಖವೆತ್ತಿ ನಡೆದೆ ಮುಂದುಗಾಣದೆ ದೋಷ ಮಾಡಿದೆ- ನೊಂದು ಪುಣ್ಯವನರಿಯೆನಭವ 4 ಕೊಡುವ ಧರ್ಮಕೆ ಕಿಡಿಯನ್ಹಾಕಿದೆ ಕೂಡಿದ್ದವರಿಗೆ ಕೆಡಕು ಬೋಧಿಸಿ ಒಡಕು ಹುಟ್ಟಿಸಿದೆ ಅಡಿಗೆ ಬಾಗಿ ಮಿಡುಕುವವರಿಗೆ ದುಡುಕನಾಡಿದೆ ಕಡುಪಾಮರಾದೆ ಪಿಡಿದು ಕಾಯುವ ಒಡೆಯನ್ಹೆಸರಿನ ಮುಡಿಪು ನುಂಗಿ ಕಡುಪಾಪಾತ್ಮಾದೆನು ಸುಡುಸುಡೆನ್ನಯ ಜನ್ಮವ್ಯಾಕಿನ್ನು ಒಡೆಯ ಶ್ರೀರಾಮ ಸಾಕುಮಾಡೋ 5
--------------
ರಾಮದಾಸರು
ಎರಿ ಮುಂಡೆ ಇವನೆರಿ ಮುಂಡೆ ಏನುಅರಿಯದೆ ಒದರುವ ಎರಿಮುಂಡೆ ಪ ತನ್ನ ನಿಜವ ತಾನು ಅರಿಯದೆ ತತ್ವದಕುನ್ನಿಯಂತೆ ಒದರುವ ಎರಿಮುಂಡೆಭಿನ್ನ ಬುದ್ಧಿಯಲಿದ್ದು ನಾ ಬ್ರಹ್ಮವೆಂಬುದನುಚೆನ್ನಾಗಿ ಅರಿಯದ ಎರಿಮುಂಡೆ 1 ಯೋಗವ ತಿಳಿಯದೆ ಯೋಗವ ಹಳಿವನುಈಗ ಹೇಳಿವನೀಗ ಎರಿಮುಂಡೆಆನಿಹೆ ಬ್ರಹ್ಮವು ನಾನೆಂದು ಎತ್ತೆತ್ತೆನುಡಿವನು ಎರಿಮುಂಡೆ 2 ಕೋಟಿ ಸೂರ್ಯರ ತೇಜ ಪಾಟಿಸಿ ಕಾಣದೆಬೂಟಕ ನುಡಿವವ ಎರಿಮುಂಡೆದಾಟಿ ಸಹಸ್ರಾರ ಬ್ರಹ್ಮರಂಧ್ರದ ನಾಳ ಕೇಳದ ನರನಾಗ ಎರಿಮುಂಡೆ 3 ಮಾತರಿಯದೆ ಜ್ಞಾನ ನುಡಿಯಿದ್ದುದಕಳೆದು ಮಣ್ಣು ಹೋಯ್ಯೆಂಬುವ ಎರಿಮುಂಡೆಮಾತಿಲಿ ಬ್ರಹ್ಮವು ಆಗಬೇಕಾದರೆ ಮಹಾಸಾಧನವೇಕೆ ಎರಿಮುಂಡೆ 4 ಒಂದು ಹೋಗಲಿಲ್ಲ ಒಂದೇ ನಾನೆಂಚಿನುಇಂದು ಕೇಳುವನೀಗ ಎರಿಮುಂಡೆಸುಂದರ ಚಿದಾನಂದ ಸ್ವರೂಪ ತಿಳಿಯದೆ ಸುಲಭ ಎಂದೆಂಬುವ ಎರಿಮುಂಡೆ 5
--------------
ಚಿದಾನಂದ ಅವಧೂತರು
ಎಲೆ ಎಲೆ ಎಲೆ ಮುದಿಮೂಳಿ ನಿನ್ನ ಕಲ್ಮಷ ಇನ್ನು ತೊಳಿವಲ್ಲಿ ಪ ತಿಳಿಯದೆ ಸುಮ್ಮನೆ ಕಳಕೊಂಡಿ ವಯವೆಲ್ಲ ಸುಳ್ಳೆ ಸುಳ್ಳಿಗಾಗಿ ಹೋಗಿ ಮೃತ್ಯುಕೈಲಿ ಅ.ಪ ಹಿಡಿದಿದ್ದಿ ಸುಡುಗಾಡ ಪಥವ ಇನ್ನು ಬಿಡವಲ್ಲಿ ಮಾಯಮತವ ಹೆಡತಲೆಮೃತ್ಯು ನಾಳೆ ಅಡರಿ ಪಿಡಿದು ನಿನ್ನ ಕೆಡ ಕೆಡವಿ ಒದೆವಾಗ ಬಿಡಿಸೊರಾರವ್ವ 1 ಇನತು ನಾಚಿಕಿಲ್ಲ ರೋಗಿ ನೀನು ತಿಣಿತಿಣಿಕಾದಿ ಮುದಿಗೂಗಿ ಕನಿಕರಿಲ್ಲದೆ ಯಮನ ಠೊಣಪರ್ಹಿಡಿದು ನಿನ್ನ ಹೊಗೆರ್ಹೊಣಿಕಿಲ್ಹೇರುವಾಗ ನಿನಗ್ಯಾರೆ ಕಾಗಿ 2 ಹಣವೆಷ್ಟಿರಲು ನಿನ್ನದಲ್ಲ ನಾಳೆ ಮನೆಮಾರು ಬರದು ಹಿಂಬಲ ಮಣಿಕಟ್ಟೆಲವು ಮುರಿದ್ಹಣಿಯುವಾಗ ನಿನ್ನ ತನುಜನುಜರು ಯಾರು ಹಣಿಕ್ಹಾಕುವರಿಲ್ಲ 3 ಎಷ್ಟು ನಿನ್ನಗೆ ಬಡೆದಿದಮ್ಮಾ ನಿನ್ನ ಖೊಟ್ಟಿ ಕಡೆಯಿಲ್ಲಮ್ಮ ಉಟ್ಟ ಸೀರೆಯ ಬಿಡಿಸಿ ಕೊಂಡೊಯ್ದು ನಿನ್ನ ಸುಟ್ಟು ಸುರೆಹೊಯ್ವಾಗ ಆಟ ನೋಡಮ್ಮ 4 ಭಿನ್ನ ಭೇದಗಳನ್ನು ಕಡಿ ನಿನ್ನ ಒಡಲೊಳು ತಿಳಕೊಂಡುನೋಡಿ ಧನ್ಯ ಶ್ರೀರಾಮನ ಉನ್ನತ ಚರಣ ಇನ್ನಾದರು ಮನಮುಟ್ಟಿ ನೆನೆಕಂಡ್ಯ ಖೋಡಿ 5
--------------
ರಾಮದಾಸರು
ಎಲ್ಲರೂ ದಾಸರಹರೇ ಪ ಪುಲ್ಲನಾಭನ ದಯವಿಲ್ಲದೆ ಅ.ಪ. ಜ್ಞಾನವಿಲ್ಲ ಭಕುತಿಯಿಲ್ಲ ಧ್ಯಾನ ವೈರಾಗ್ಯ ಮೊದಲೆ ಇಲ್ಲ ಹೀನ ಕರ್ಮಗಳನು ಮಾಡಿ ಶ್ರೀನಿವಾಸನ ಮರೆತವರು 1 ಪರವಧುವಿನ ರೂಪ ಮನದಿ ಸ್ಮರಣೆ ಮಾಡುತ ಬಾಯಿಯೊಳು ಹರಿಯ ಧ್ಯಾನ ಮಾಡುತಿರುವ ಪರಮ ನೀಚರಾದ ಜನರು 2 ಪಟ್ಟೆನಾಮ ಹಚ್ಚಿ ಕಾವಿ ಬಟ್ಟೆಯನ್ನು ಹೊದ್ದುಕೊಂಡು ಅಟ್ಟಹಾಸ ತೋರಿಕೊಳುತ ಗುಟ್ಟು ತಿಳಿಯದಿರುವ ಜನರು 3 ದೊಡ್ಡ ತಂಬೂರಿಯ ಪಿಡಿದು ಅಡ್ಡ ಉದ್ದ ರಾಗ ಪಾಡಿ ದುಡ್ಡುಕಾಸಿಗಾಗಿ ಭ್ರಮಿಸಿ ಹೆಡ್ಡರಾಗಿ ತಿರುಗುವವರು 4 ನೋವು ಬಾರದಂತೆ ಸದಾ ಓವಿಕೊಂಡು ಬರುತಲಿರುವ ದೇವ ರಂಗೇಶವಿಠಲನ ಸೇವೆಯನ್ನು ಮಾಡದಿರುವ 5
--------------
ರಂಗೇಶವಿಠಲದಾಸರು
ಎಲ್ಲಾರಿಗೆಲ್ಲಿಹದು ಫುಲ್ಲನಾಭನ ಸೇವೆ ಸುಲಭವಲ್ಲವಿದು ದುರ್ಲಭ ಸದ್ಗುರು ಮಾರ್ಗ ಧ್ರುವ ಕೋಟ್ಯಾನುಕೋಟಿಗೊಬ್ಬ ಮುಟ್ಟಿ ಕಂಡಿದರಲಿ ನೆಟ್ಟಿಸಿ ತನ್ನೊಳು ತಾ ದೃಷ್ಟಿಸಿ ಗುರುಪಾದ 1 ಮಾತಿನಂತಲ್ಲವಿದು ಜ್ಯೋತಿರ್ಮಯದ ಸುಖ ನೆÉೀತಿನೆÉೀತಿವೆಂಬುದು ಶ್ರುತಿ ಸಾರುತದ ವಾಕ್ಯ 2 ಹರಡಿಸಿರಾಗದು ಮೂರುಲೋಕದೊಳಗ ಕರುಣಿಸಿದರಾಹುದು ಗುರು ಕೃಪೆಯಿಂದ 3 ವರ್ಮ ತಿಳಿಯದೆಂದೆಂದು ಕರ್ಮತಮಂಧರಿಗೆ ಬ್ರಹ್ಮ ಸುಖದೋರುವ ಸ್ವಾಮಿ ಸದ್ಗುರು ಧರ್ಮ 4 ಸೇವೆ ಸೂತ್ರನರಿಯದ ಭಾವಿ ಮಹಿಪತಿಗೆ ಭಾವಭಕ್ತಿಯ ಕೊಟ್ಟು ಪಾವನಗೈಸಿದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಲ್ಲಿ ತಿಳಿವುತದೆ ನಿಮ್ಮಾಟದ ಸುಧ್ಯೇಯ ಧ್ರುವ ನಾಲ್ಕಾರು ಹದಿನೆಂಟು ಮಂದಿಯ ಕೇಳಿದೆ ಸಿಲುಕನೆಂದವರಾಡುದೆ ಮಲಕು ಎಂಬತ್ತು ನಾಲ್ಕು ಲಕ್ಷ ನೂ ಸೋಸಿದೆ ನಿಲುಕಿ ನಿನ್ನ ನೆಲೆ ನಿಜವು ದೋರದೆ 1 ನಾನಾ ಮತ ನಾನಾ ಮಾರ್ಗ ಶೋಧಿಸಿದೆ ಖೂನ ನಿನ್ನದು ತಿಳಿಯದೆ ನಾನು ನಾನೆಂಬವರಿಗೆ ಅನುಸರಿಸಿದೆ ನೀ ನಿಹ ಸ್ಥಳದ ಗಾಳಿಯು ಬೀಸದೆ 2 ಬೀಳದವರ ಕಾಲುಬಿದ್ದು ನಾ ಕೇಳಿದೆ ಸುಳಹು ನಿನ್ನದು ತೋರದೆ ತಲೆ ಕೆಳಗನೆ ಮಾಡಿ ತಪಸವ ಮಾಡಿದೆ ಒಲವು ನಿಮ್ಮದು ಎಂದಿಗೆ ಅಗದೆ 3 ಬಡದ ಬವಣೆ ಬಟ್ಟು ಹುಡುಕದಾ ಹುಡುಕಿದೆ ತುಡಕು ನಿಮ್ಮದು ತಿಳಿಯದೆ ಒಡನೆ ಎನ್ನೊಳು ಬಂದು ಅಡಕವ ಹರಿಸಿದೆ ಬಡವನಾಧಾರೆಂದು ಕೈ ಬಿಡದೆ 4 ಮನೋನ್ಮನವಾಗಿ ಕಂಗಳ ತೆರೆಸಿದೆ ಸ್ವಾನುಭವನೇ ಬೀರಿದೆ ದೀನಮಹಿಪತಿ ಮನೋಹರಣ ಮಾಡಿದೆ ಅನುದಿನ ಘನಸುಖದೊಳಗಿರಿಸಿದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಷ್ಟು ಕೂಗಲು ದಯ | ಪುಟ್ಟಲಿಲ್ಲವೊ ನಿನಗೆ ಬೆಟ್ಟದೊಡೆಯ ಹರಿಯೆ ಪ. ಸಿಟ್ಟೇಕೆ ಎನ್ನೊಳು ಕೃಷ್ಣಮೂರುತಿ ನಿನಗೆ ಬಿಟ್ಟರೆ ನೀ ಎನ್ನ ಸೃಷ್ಟಿಯೊಳಾರುಂಟೊ ಅ.ಪ. ಪರಮ ಪಾತಕಿಯೆಂದು | ತೊರೆದರೆ ನೀ ಎನ್ನ ಮೊರೆಬೀಳಲಿನ್ನಾರಿಗೆ ಕರುಣಾಮೂರುತಿ ಎಂಬೊ ಬಿರುದು ಪೊತ್ತಿಲ್ಲವೆ ಸರಿಯೆ ನಿನಗಿದು ಕೊರಗಿಸುವುದು ಜರಿದು ಬಳಲುವೆ ಧರೆಯೊಳೀಗ ನಾ ಸುರರ ರಕ್ಷಕ ಪರಮಪಾವನ ಕರವ ಮುಗಿವೆ ದರುಶನವ ನೀಡೊ 1 ನೀನಲ್ಲದೆ ಇನ್ನು | ನಾನಾರ ಭಜಿಸಲೊ ಗಾನವಿಲೋಲ ಹರಿ ಕಾನನದೊಳು ಕಣ್ಣು ಕಾಣದಂತಾಗಿದೆ ಧ್ಯಾನಕೆ ಸಿಲುಕದೆ ನೀನೆನ್ನ ಕಾಡುವೆ ಮಾನ ಪ್ರಾಣ ಶರೀರ ನಿನ್ನದೊ ನಾನು ಅನ್ಯರ ಭಜಿಸಲಾರೆನೊ ಹೀನಬುದ್ಧಿಯ ಬಿಡಿಸಿ ಗುರುಗಳ ಧ್ಯಾನವೆನಗಿತ್ತು ನೀನು ಕಾಯೊ 2 ಅನ್ನಪಾನವ ಬಿಟ್ಟು | ನಿನ್ನನು ಸ್ತುತಿಸಲು ಇನ್ನು ಕರುಣವಿಲ್ಲವೆ ಇನ್ನು ಸೈರಿಸಲಾರೆ ಘನ್ನ ಮಹಿಮನೆ ದುಃಖ ನಿನ್ನ ಮನಸು ಕರಗಲಿನ್ನೇನಗೈಯ್ಯಲೊ ಎನ್ನ ಯತ್ನವು ವ್ಯರ್ಥವಾಯಿತು ಇನ್ನು ನೀ ದಯೆಗೆಯ್ಯಬೇಕೊ ಮುನ್ನ ಮಾಡಿದ ತಪ್ಪನೆಣಿಸದೆ ಎನ್ನ ದೃಷ್ಟಿಗೆ ನಿನ್ನ ತೋರೊ 3 ಸುತನ ಮೊರೆಯನೆ ಕೇಳಿ | ಹಿತದಿ ವೇದವನಿತ್ತೆ ಶರಧಿ ಅಮೃತ ಸುರರಿಗಿತ್ತೆ ಕ್ಷಿತಿಯ ಬಾಧೆಯ ಬಿಡಿಸಿ ಸುತನ ಬಾಧಿಸೊವೊನ ಹತಮಾಡಿ ಇಂದ್ರಗೆ ಗತಿಸಿದ ಪದವಿತ್ತೆ ಕ್ಷಿತಿಯನಾಳ್ವರ ಹತವಗೈಸಿದೆ ಕ್ಷಿತಿಸುತೆಯ ಪ್ರೇಮದಲಿ ತಂದೆ ಹಿತದಿ ಪಾಂಡವ ಸುತರ ಕಾಯ್ದೆ ವ್ರತವ ಕೆಡಿಸಿ ಕಲಿಹತವಗೈದೆ 4 ಕಂತು ಜನಕನೆ ನಿನಗೆ ನ್ನಂತರ ತಿಳಿಯದೇನೋ ಸಂತತ ಗೋಪಾಲಕೃಷ್ಣವಿಠ್ಠಲ ನಿನ್ನ ಶಾಂತರೂಪವ ಎನ್ನ ಅಂತರಂಗದಿ ತೋರೊ ಚಿಂತಿತಾರ್ಥ ಪಂಥಗಾರನೆ ಎಂತು ದಿನಗಳು ಸಂದು ಹೋದುವೊ ಸಂತತಾನಂದನಂತಶಯನ 5
--------------
ಅಂಬಾಬಾಯಿ
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಏತಕೆ ಒಣಭ್ರಾಂತಿ ತಿಳಿಯದು ಮೂರುದಿನದ ಸಂತಿ ನೀತಿಗೆಟ್ಟು ಸತಿಮೋಹದಿ ಕುಳಿತೆಮದೂತರೆಳೆಯುವಾಗೇನಂತಿ ಪ ಬರುವಾಗೊರ್ವಬಂದಿ ಬರುತಲೆ ಮಂದಿ ಮಕ್ಕಳೆಂದಿ ಇರು ಇರುತೆಲ್ಲ ನನ್ನದೆಂದಿ ಮರೆವಿನ ಆಲಯದೊಳು ನಿಂದಿ ಕರುಣವಿಲ್ಲದೆತುಸು ಹೆಡತಲೆಮೃತ್ಯು ಮುರಿದು ತಿನ್ನುವಾಗ್ಯಾರಿಲ್ಲ ಹಿಂದೆ 1 ತನುಜನರು ಇವರು ಧನಕನಕಿರುವತನಕ ಹಿತರು ಜನಕಜನನಿಯರು ಕೊನೆಗೆ ಸಂಗಡ ಬರರ್ಯಾರು ಕನಿಕರವಿಲ್ಲದೆ ಕಾಲದೂತರು ಘನಬಾಧೆಪಡಿಸಲು ಬಿಡಿಸರೋರ್ವರು 2 ಭೂಮಿ ಸೀಮೆಯೆಲ್ಲ ಈ ಮಹರಾಜ್ಯ ಭಂಡಾರ ಸುಳ್ಳು ಪಾಮರ ಸಂಸಾರ ಕಾಮಿಸಿ ಕೆಡಬೇಡೇಲೆ ಮಳ್ಳ ಕಾಮಜನಕ ನಮ್ಮ ಸ್ವಾಮಿ ಶ್ರೀರಾಮನ ನಾಮಭಜಿಸಿ ಭವಗೆಲಿದು ನೀ ಬಾಳೋ3
--------------
ರಾಮದಾಸರು
ಏತರಿಂದ ಬ್ರಾಹ್ಮಣಿಕೆ ಪರಮಾತ್ಮನೆತಾನೆಂದು ತಿಳಿಯದ ನರನಲಿ ಪ ಜನಿವಾರ ನೋಡಿ ಬ್ರಾಹ್ಮಣ ನೆಂದರೆ ಸು-ಮ್ಮನೆ ಮರಕೆ ಬಳ್ಳಿ ಸುತ್ತಿಲ್ಲವೆಹಣೆಯ ಬಟ್ಟದ ನೋಡಿ ಬ್ರಾಹ್ಮಣ ನೆಂದರೆಹಾದಿ ಕಲ್ಲಿಗೆ ಸುಣ್ಣ ಬರೆದಿಲ್ಲವೆ1 ಜುಟ್ಟು ನೋಡಿ ಇವ ಬ್ರಾಹ್ಮಣ ನೆಂದರೆಜುಟ್ಟಿನ ಗುಬ್ಬಿಯು ತಾನಿಲ್ಲವೆಉಟ್ಟ ಧೋತ್ರವ ನೋಡಿ ಬ್ರಾಹ್ಮಣ ನೆಂದರೆಉಟ್ಟುದಿಲ್ಲವೆ ಮನೆಯ ನಡುಗಂಬ 2 ಬ್ರಾಹ್ಮಣನಾದರೆ ಬ್ರಹ್ಮ ಸರ್ವವು ಆಗಿಬ್ರಹ್ಮವಖಂಡದಿ ಭೇದವಿಲ್ಲದೆಬ್ರಹ್ಮ ಚಿದಾನಂದ ಗುರುನಾಥನಾಗಿಯೆಬ್ರಹ್ಮವ ಕಂಡವನೀಗ ಬ್ರಾಹ್ಮಣ3
--------------
ಚಿದಾನಂದ ಅವಧೂತರು
ಏನಿದು ಎಲೆ ಮನ ಏನು ಇದು ನೆನೆಸಿದರೆದೆ ಝಲ್ಲೆನುವುದು ಪ ನಾನು ಯಾರೆಂಬುವ ಖೂನವ ತಿಳಿಯದೆ ಶ್ವಾನನಂದದಿ ಕೆಟ್ಟ ಹೀನಭವಕೆ ಬಿದ್ದು ಅ.ಪ ಏತಕ ಬಂದದ್ದೀ ಜನುಮಕ್ಕೆ ತಲೆಯೆತ್ತಿ ನೋಡದೆ ಕೂತಿಮುಂದಕೆ ನೀತಿಗೇಡಿ ಮಹಪಾತಕನು ಯಮ ದೂತರು ನಿಂತಾರೊ ಎಳಿಲಿಕ್ಕೆ 1 ಬೀಳಬೇಡೋ ಮಾಯದ ಜಾಲಕ್ಕೆ ಘಳಿಲನೆ ತಿಳಿತಿಳಿ ಸುಲಭದಿ ಸಮಯವು ಬಲಿಸಿ ಹರಿಯ ಧ್ಯಾನ ಕಾಲನ ನೂಕೋ 2 ಹುಟ್ಟಿಬಂದಿ ಶಿಷ್ಟಪದ ಪಡಿಲಿಕ್ಕೆ ಮರ್ತುಬಿಟ್ಟಿ ನಿಂತಿ ಬಿಟ್ಟಗಂಟ್ಹೊರಲಿಕ್ಕೆ ಭ್ರಷ್ಟಗುಣವ ಬಿಟ್ಟು ದಿಟ್ಟರಾಮನ ಗಟ್ಟ್ಯಾಗಿ ನಂಬಿ ಮುಟ್ಟು ಮುಕ್ತಿಪದಕೆ3
--------------
ರಾಮದಾಸರು
ಏನಿದು ಮಹದಪರಾಧ ಮಾಡಿದೆ ನಾನು ನಿನ್ನವರನೆ ನಿಂದಿಸಿದೆ ತಿಳಿಯದಭವ ದೇವ ಪ ಜ್ಞಾನವಿಡಿದಿ ನೋಡದೆ ತುಸು ಏನುಕಾಣದೆ ನಾನಾಪರಿಯಲಿ ಶ್ವಾನನಂದದಿ ಚೀರುತ್ಹಾರುತ ಹೀನವಾಚಗಳ್ವಾಚಿಸಿದೆನೋ ಅ.ಪ ತತ್ತ್ವದರ್ಥಕರಾಗಿ ಗುಪ್ತದಿಂದಿರ್ವವರ ನರ್ತುನೋಡದೆ ಅನರ್ಥವಾಡಿದೆನೋ ಪ್ರಭೋ ಮತ್ರ್ಯಗುಣಗಳ ಮರ್ತುಬಿಡದೆ ನಿರ್ತಮಾನಿಸರ ಗುರ್ತುತಿಳಿಯದೆ ಕತ್ತೆಯಂತೊದರುತ್ತ ಸತ್ಯರ ಕೃತ್ತಿಮರೆಂದೆನುತ ಜರಿದೆ 1 ಮೀನು ಜಿಹ್ವೆಯ ರುಚಿಗಾ ಗೇನು ತಿಳಿಯದೆ ಪೋಗಿ ಗಾಣ ಸೆಳೆದುನುಂಗಿ ಪ್ರಾಣಕೊಟ್ಟಂತೆ ಹರಿಯೆ ಗಾನಲೋಲನ ಮನದೊಳಿಟ್ಟು ಧ್ಯಾನಿಪ ಕೋವಿದಸುಜನರ ಖೂನವಿಲ್ಲದೆ ಮನಕೆ ಬಂದಂತೆ ಕಾಣದಂಧಕನಂತೆ ಜರಿದೆ 2 ನಿನ್ನಿಂದೆ ನಾ ಬಂದೆ ನೀನೆನ್ನ ತಂದೆ ಮುಂ ದಿನ್ನಿಂಥ ದುರ್ಮತಿಯನ್ನು ಕೊಡದಿರೊ ರಂಗ ನಿನ್ನ ದಾಸರೊಳಿಟ್ಟು ಅನುದಿನ ಭಿನ್ನವಿಲ್ಲದೆ ರಕ್ಷಿಸಯ್ಯ ನಿನ್ನ ಚರಣದಾಸರ ನಾಮ ಪನ್ನಂಗಶಾಯಿ ವರ ಶ್ರೀರಾಮ 3
--------------
ರಾಮದಾಸರು
ಏನಿದೇನಿದನ್ಯಾಯ ಕೇಳಲಾಗದಯ್ಯ ಧ್ಯಾನದಿಂದಾನೆಂಬ ಹೀನ ಜನರ್ವಚನ ಪ ಪರಮಪುರುಷರ ಚರಿತ ಪರಮ ಭಕ್ತಿಯಲಿಂದ ಬರೆದೋದಿಕೇಳಿದರೆ ಪರಮಪದವೆನುತ ವರವೇದ ಸ್ಮøತಿವಾಕ್ಯ ಅರಿದರಿದು ಸಚ್ಚರಿತ ಬರೀಬಾರದೆನ್ನುವ ನರಗುರಿಗಳ ವಚನ 1 ಕನಸುಮನಸಿನೊಳೊಮ್ಮೆ ಜನಕಜೆಯವರನಂಘ್ರಿ ನೆನೆವರ್ಗೆ ಭವಬಂಧವಿನಿತಿಲ್ಲವೆನುತ ಮನುಮುನಿಗಳ್ಬರೆದಿಟ್ಟ ಘನತರದ ವಚನಗಳನು ಮನನ ಮಾಡಳಿವ ಬಿನಗುಜನರ್ವಚನ 2 ಬೀಳುತೇಳುತಲೊಮ್ಮೆ ನೀಲಶ್ಯಾಮನ ದಿವ್ಯ ಮೇಲು ಮಹಿಮೆಯ ಮನದಾಲಿಸಲು ಜವನ ದಾಳಿ ಸೋಂಕದು ಎಂದು ಶೀಲದೊರೆದ್ವಚನಗಳ ಕೇಳಿ ತಿಳಿಯದ ಮಹ ಕೀಳುಜನರ್ವಚನ 3 ಹರಿನಾಮ ಕೀರ್ತನೆಯಿಂ ಜರಾಮರಣ ಕಂಟಕª À ಕಿರಿದು ಮಾಡಿ ದಾಟಿದರು ಗುರುಹಿರಿಯರೆಲ್ಲ ನಿರುತ ನಿಜ ತಿಳಿಯದೆ ಹರಿಸ್ಮರಣೆ ಸ್ಮರಿಸದೆ ಬರಿದೆ ಬ್ರಹ್ಮೆಂಬ ಮಹನರಕಿಗಳ ವಚನ 4 ಪರಮ ಶ್ರೀಗುರುರೂಪ ವರದ ಶ್ರೀರಾಮನಂ ನೆರೆನಂಬಿ ಒಲಿಸದೆ ಗುರುವಾಗಿ ಜಗದಿ ಅರಿವಿತ್ತು ಆತ್ಮನ ಕರುಹು ತೋರಿಸಿ ಪರಮ ಪರತರದ ಮೋಕ್ಷಮಂ ಕರುಣಿಸುಯೆಂತು 5
--------------
ರಾಮದಾಸರು
ಏನು ಗತಿ ಎನಗಿನ್ನು ಏನು ಗತಿಯೋ ನೀನು ಸಿರಿ ಕೃಷ್ಣ ಪ ಕಾಯ ಮೊದಲಾದ ಬದುಕುಗಳೆಲ್ಲ ಸ್ಥಿರತರಗಳಲ್ಲೆಂದು ತೋರಿಸಲು ಪರಮ ಭಕುತಿಯು ಪುಟ್ಟಿ ಮೊದಲೆ ನಾ ನಿನ್ನ ಪದ ಮರೆದು ಬಿಡುವೆನು ತಡಿಯದೇ ಕರುಣಿ 1 ಹೀಗೆ ತೋರದೆ ಪೋದರೆ ಎನಗೆ ಹಂಬಲವು ಆಗುವುದು ಸತ್ಯಲೋಕಗಳ ತನಕ ಭೋಗಗಳು ಕೊಟ್ಟರೆ ಮರೆವೆ ಅದರಿಂದ ನಾ ಕೂಗುವೆನು ಕೊಡದಿದ್ದರೆ 2 ಪಾಮರನ ಮಾಡಲೆನ್ನನು ತಿಳಿಯದಲೇವೆ ಸೀಮೆ ಇಲ್ಲದ ಪಾಪ ಮಾಡುವೆನೊ ಪ್ರೇಮದಲಿ ಪಾಂಡಿತ್ಯ ನೀಡಿದರೆ ಭಕುತ ಜನ ಸ್ತೋಮ ನಿಂದಿಸುವೆನಯ್ಯಾ 3 ಧನದಿಂದ ಹೀನನ್ನ ಮಾಡೆ ಲೋಕದಲಿನ್ನು ಜನರು ಕೊಡುವುದು ಎಲ್ಲ ಎನಗೆ ಕೊಡಲೆಂಬೆ ಧನವು ನೀ ಕೊಡಲು ಬಲು ಮದದಿಂದ ಕೆಟ್ಟು ಸ- ಜ್ಜನಕೆ ಕಾಸೊಂದು ಕೊಡಿನೊ 4 ಏಸು ಪರಿಯಲಿ ಪೇಳಿದರು ಕೇಳೆನ್ನ ನಿಜ ವಾಸನಿಯು ತನಗೆ ತಾನಿಟ್ಟಾಹದೈ ವಾಸುದೇವವಿಠಲ ನೀ ಎನ್ನಯ ಮನದಲ್ಲಿ ವಾಸವನು ಮಾಡಿ ಬೋದÉೈಸದನಕೆÀ5
--------------
ವ್ಯಾಸತತ್ವಜ್ಞದಾಸರು
ಏನು ಗಳಿಸಿದ್ಯೊ ಪ್ರಾಣಿ ಜ್ಞಾನಕ ಮಾಡಿ ನೀ ಹಾನಿ ಧ್ರುವ ಶಬ್ಧಜ್ಞಾನದ ಅಂಗಡಿನೀ ಹಾಕಿ ಲುಬ್ದಿಸಿದೊ ಬಲು ಪಾಕಿ ಲಬ್ದಾಲಬ್ಧಿಯು ತಿಳಿಯದೆ ಡೊಂಕಿ ಸ್ತಬ್ಧನಾದ್ಯೊ ವಿಶ ಸೋಂಕಿ 1 ವಿದ್ಯಾ ವ್ಯುತ್ಪತ್ತಿ ತೋರಿ ನೀ ಬಹಳ ಸದ್ಯಮಾಡಿದ್ಯೊ ತಾಳ ಮೇಳ ಸಿದ್ಧಾಂತನುಭವ ನೀ ಮಾಡಿ ಹಾಳ ಕೋಳ 2 ಗಳಿಸುವದೇನೆಂದರಿಯದೇ ಖೂನ ಬಾಳಿ ಬದುಕಿ ಪಡದೇನ ಬೆಳಗು ಬೀರುತಿರೆ ಮಹಿಪತಿ ಗುರುಜ್ಞಾನ ತಿಳಕೊಬಾರದೆ ನಿಜಖೂನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು