ಒಟ್ಟು 516 ಕಡೆಗಳಲ್ಲಿ , 69 ದಾಸರು , 264 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾನಾಗಿ ದೊರಕುವುದು ಹರಿದರುಶನ ಪ ಶ್ರೀನಾಥವಿಠಲನಲಿ ದೃಢಭಕ್ತಿವುಳ್ಳವಗೆ ಅ.ಪ ಅರುಣೀಯದೊಳೆದ್ದು ಹರಿಕೃಷ್ಣ ಎನುವವಗೆ ಹರಿಹರಿ ಹರಿ ಎಂದು ಸ್ನಾನಗೈವವಗೆ ಹರಿಯ ದ್ವಾದಶನಾಮ ಪಠಣೆಯಿಂಮಣಿವವಗೆ ಗರುಡವಾಹನ ಕೃಷ್ಣ ಗೋಪಾಲಯೆನುವವಗೆ1 ನಿತ್ಯಕರ್ಮವಗೈದು ಫಲವ ಬಯಸದ ಕತ್ರ್ಯವ್ಯಗಳ ಗೈದು ಫಲ ಕೃಷ್ಣಗರ್ಪಿಪ ನರಗೆ ಉತ್ಸಾಹದಿಂದ ಅಭ್ಯಾಗತರ ಪೂಜಿಪಗೆ ಸತ್ಯದೈವವು ಎಂದು ಗೋಸೇವೆ ಗೈವವಗೆ 2 ಕುಳಿತು ನಿಲುವೆಡೆಗಳೊಳು ಹರಿಕೃಷ್ಣ ಎನುವವಗೆ ಇಳೆಯೊಳಿಹ ನರರೆಲ್ಲ ಭ್ರಾತರೆಂದವಗೆ ಉಳಿವು ಅಳಿವುಗಳೆಲ್ಲ ಹರಿಕರುಣವೆಂಬವಗೆ ಜಲಜನಾಭನ ದಿವ್ಯ ನಾಮಗಳ ಭಜಿಸುವಗೆ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತುಂಗಾತೀರದಿ ನೆಲಸಿಹಗೆ | ಮಂಗಳ ಗುರು ರಾಘವೇಂದ್ರನಿಗೆ | ಗಂಗಾಜನಕನ ಭಕುತ ಶ್ರೇಷ್ಠ ಯತಿ | ಪುಂಗವನೆನಿಸುತೆ ಮೆರೆವವಗೆ ||ಮಂಗಳಂ ಜಯ ಮಂಗಳಂ|| ಪ ದಾವಣಗೆರೆಯೊಳು ನಿಂದವಗೆ| ಕೋವಿದ ಭೂಸುರ ಸೇವ್ಯನಿಗೆ| ಧಾವಿಸಿ ಬರುತಿಹ ದೀನಜನಾಳಿಗೆ| ದೇವ ತರುವಿನಂತೀವನಿಗೆ ||ಮಂಗಳಂ ಜಯ ಮಂಗಳಂ|| 1 ಶುದ್ಧ ಟೀಕೆಗಳ ರಚಿಸಿದಗೆ| ಪರಿ | ಮೂರ್ತಿ ರಾಘವೇಂದ್ರನಿಗೆ ||ಮಂಗಳಂ ಜಯ ಮಂಗಳಂ|| 2 ಭಾಸುರ ರಘುವೀರಾರ್ಚಿಪಗೆ| ಶ್ರೀಶಕೇಶವ ಪಾದಾರಾಧಕಗೆ ಸುರ| ರೀಶನೆನಿಪ ರಂಗನಾಥನಿಗೆ | ಮಂಗಳಂ ಜಯ ಮಂಗಳಂ||3
--------------
ಶ್ರೀಶ ಕೇಶವದಾಸರು
ತುರುಕರಿಲ್ಲದ ಊರೊಳು ಇರಬಾರದು ಪ ತುರುಕರು ಜಗದೊಳು ಪರಮ ಶ್ರೇಷ್ಠರು ಕಾಣೋ ಅ.ಪ. ತುರುಕರು ಕರೆದರೆ ಉಣಬಹುದು ಉಡಬಹುದುತುರುಕರಿಂದಲಿ ಜಗಕೆ ಪರಮ ಸೌಖ್ಯಾ ||ತುರುಕರ ಸೇವೆ ಮಾಡಿದ ಮಾನವೋತ್ತಮನುಎರಡೊಂದು ಋಣದಿಂದ ಮುಕ್ತನಾಹಾ 1 ತುರುಕರಾ ನಿಂದಕನು ಪರಮ ದುಃಖಿಯು ಸಿದ್ಧತುರುಕರ ಅರ್ಚಿಸಿದವಗೆ ಪರಮ ಪದವೀ ||ತುರುಕರಿಗೆ ಗ್ರಾಸವಿತ್ತವನ ಫಲಕೆಲ್ಲು ಸರಿಗಾಣೆಸರಿಗಾಣೆ ಧರೆಯೋಳು ಅವನೆ ಧನ್ಯಾ 2 ಪತಿ ಬೈಗು ಬೆಳಗೂ ||ತುರುಕರಾ ಪಾಲ ಶ್ರೀ ಗೋಪಾಲಕೃಷ್ಣನ್ನಸ್ಮರಣೆ ಮಾಡುತಲಿರೆ ಮೋಹನ್ನ ವಿಠಲ ಒಲಿವಾ 3
--------------
ಮೋಹನದಾಸರು
ದಾನವಿಲ್ಲ ಧರ್ಮವಿಲ್ಲ ಜ್ಞಾನವಿಲ್ಲಏನು ಹೇಳಿದರೇನು ವಿಷಯಮೆಚ್ಚಿದವಗೆ ಪ. ಕಂಡಕಂಡವರ ಅನ್ನಕೆ ಸಿಲುಕಿ ಅನುಗಾಲಭಂಡತನದಲಿ ಕಾಲವ ಕಳೆಯುತತಂಡ ತಂಡದಿ ಬಾಹ ಔತಣಕೆ ಮೈಯ್ಯುಬ್ಬಿಉಂಡು ಎನಗಿಂದಧಿಕ ಯೋಗ್ಯನಿಲ್ಲವೆಂದು 1 ಪರ್ವಕಾಲ ಪಿತೃದಿವ್ಸ ಗುರುಗÀಳ ಪುಣ್ಯದಿನಸರ್ವಕರ್ಮವ ತ್ಯಜಿಸಿ ಅತಿಥಿಗೀಯದೆಪರರ ಅನ್ನವ ಬಿಡದೆ ಉತ್ಸಾಹದಲಿ ಪೋಗಿನಲಿನಲಿದುಂಡು ಸ್ತೋತ್ರವ ಮಾಡಿ ದಿನಕಳೆವೆ 2 ಅನ್ಯರೊಡವೆಯು ತನಗೆ ಬಂದರೆ ಸಂತೋಷತನ್ನೊಡವೆ ಒಬ್ಬರಿಗೆ ಕೊಡಲು ಕ್ಲೇಶಉನ್ಮತ್ತನಾಗಿ ಉದರವ ಪೊರೆವ ಈ ದೋಷಮನ್ನಿಸಿ ದಯಮಾಡಿ ಸಲಹೋ ಹಯವದನ3
--------------
ವಾದಿರಾಜ
ದಾಸ ಪಟ್ಟವೋ ಸನ್ಯಾಸ ಪಟ್ಟವೋ ಪ ಆಸೆಯಿಂದ ನೆಲೆಯಾದಿಕೇಶವನ್ನ ನೆನೆಯದವಗೆಅ ಮಂಡೆ ಬೋಳು ಮಾಡಿ ನಾಮದುಂಡೆಯನ್ನು ಬರೆದು ಕೆಡಿಸಿಕಂಡಕಂಡವರನು ಕೂಡಿಭಂಡ ಜನ್ಮ ಹೊರೆಯುವವಗೆ 1 ಅವರಿವರ ಕೈಯ ನೋಡಿ ಹ-ಲವು ಕೆಲವು ಮಾತನಾಡಿ ಹ-ಲವ ಹಂಬಲಿಸಿ ದಿ-ನವ ಕಳೆದು ಉಳಿದು ಬಾಳುವಗೆ 2 ಬೆಂದ ಸಂಸಾರವೆಂಬಬಂಧನದೊಳಗೆ ಸಿಲುಕಿಕೊಂಡುಚೆಂದಾದಿಕೇಶವನ್ನಒಂದು ಬಾರಿ ನೆನೆಯದವಗೆ 3
--------------
ಕನಕದಾಸ
ದಾಸಗೆ ಭಯವೆಲ್ಲಿ ದಾಸಗೆ ಭಯವೆಲ್ಲಿ ಪ ದಾಸನಾಗದವಗೆ ಭಯವೆಂದಿಗು ತಪ್ಪದು ದಾಸನಾಗಿಹಗೆ ಭಯವೆಂದಿಗು ಬಾರದು 1 ತರಳ ಪ್ರಹ್ಲಾದಗೆ ಭಯವೆಂದಿಗು ಸೋಂಕಲಿಲ್ಲ ತರಳನ ಪಿತಗೆ ಭಯವೆಂದಿಗು ತಪ್ಪಲಿಲ್ಲ 2 ಲಂಕೆಯೊಳಿದ್ದರೂ ದಶಕಂಠನಿಗತಿ ಭಯ ಲಂಕೆಯ ಬಿಟ್ಟ ವಿಭೀಷಣನಿಗಭಯ 3 ಹರನ ಪೀಡಿಸಿದಾ ಭಸ್ಮಾಸುರಗೆ ಭಯ ಹರಿಯ ಸ್ತುತಿಸಿದ ಮಹಾದೇವನಿಗಭಯ 4 ರಾಜೇಶ ಹಯಮುಖನೊಲಿದವನಿಗಭಯ 5
--------------
ವಿಶ್ವೇಂದ್ರತೀರ್ಥ
ದಾಸನಾದವನಿಗೆ ಭವಭೀತಿಯುಂಟೆ ಆಸೆಬಿಟ್ಟವನಿಗೆ ಘಾಸಿಯಿನ್ನುಂಟೆ ಪ ವನಿತೆಯರಾಸ್ಯಳಿದವಗೆ ಮನಸಿಜನರ ಭೀತಿಯೆ ಮಣ್ಣಿನಾಸೆ ಪೋದವಗೆ ಅವನಿಪರ ಭಯವೆ ಧನದಾಸೆ ಪೋದವಗೆ ಬಿನುಗುಜನರಂಜಿಕೆಯೆ ತನುಮೋಹ ಬಿಟ್ಟವಗೆ ಮರಣದ ಭಯವೆ 1 ನಿಂದೆಯನು ಬಿಟ್ಟವಗೆ ಬಂಧಸೋಂಕುವ ಭಯವೆ ಸಂದೇಹವಳಿದವಗೆ ಕರ್ಮಗಳ ಭಯವೆ ಮಂದಿಗೋಷ್ಠಿಯಿಲ್ಲದವಗೆ ಅಪವಾದ ಭೀತಿಯೆ ಸಿಂಧುಶಯನನರ್ಚಕಗೆ ಕಾಲನ ಭಯವೆ 2 ಪರಮ ಧಾರ್ಮಿಕನಿಗೆ ಬಡತನದ ಭೀತಿಯೆ ಪರವ ಸಾಧಿಪನಿಗೆ ಕಷ್ಟಗಳ ಭಯವೆ ಅರಿವಿಟ್ಟು ನಡೆವವಗೆ ದುರಿತದ ಭಯವಿಹುದೆ ಶರಣರೊಳಾಡುವಗೆ ನರಕಂದಜಿಕೆಯೆ 3 ತತ್ವದರ್ಥಿಕನಿಗೆ ಮಿಥ್ಯಶಾಸ್ತ್ರದ ಭಯವೆ ನಿತ್ಯನಿರ್ಮಲನಿಗೆ ಮಡಿ ಮುಟ್ಟು ಭಯವೆ ಸತ್ಯಸನ್ಮಾರ್ಗಿಕಗೆ ಮತ್ರ್ಯದವರಂಜಿಕೆಯೆ ಸತ್ಯರೊಳಾಡುವಗೆ ಮೃತ್ಯುವಿನ ಭಯವೆ 4 ಕೊಟ್ಟು ಹುಟ್ಟಿದವಗೆ ಹೊಟ್ಟೆ ಬಟ್ಟೆಯ ಭಯವೆ ಇಟ್ಟು ಹಂಗಿಸದವಗೆ ಹೊಟ್ಟೆ ಬೇನೆ ಭಯವೆ ಸೃಷ್ಟಿಯೊಳಗೆ ನಮ್ಮ ದಿಟ್ಟ ಶ್ರೀರಾಮನಡಿ ಮುಟ್ಟಿ ಭಜಿಪಗೆ ಮತ್ತೆ ಹುಟ್ಟುವ ಭಯವೆ 5
--------------
ರಾಮದಾಸರು
ದುಗ್ಗಾಣಿಯು ದೊಡ್ಡದಲ್ಲಾ ನಿನ್ನ ಪೆಗ್ಗೆಗೆ ಯವiನಾಳು ಹೊರಿಸ್ಯಾರು ಕಲ್ಲಾ ಪ ಬಗ್ಗಿಸಿ ಆರೆಂಟು ನುಗ್ಗಿ ನೋಡಿ ಬರುವ ಪೆಗ್ಗೆಯನಳಿದವರ ಅಗ್ಗದಿಂದಾಡಿದರು ಅ.ಪ ಒಂದೆರಡು ಮೂರೆಂಬ ಅಂದವು ಗುರುವಿನೊಳು ಚಂದದಿಂ ಕೇಳಿಕೊಳ್ಳೆಲೊ ಮಂಕುಜೀವಿ ಮುಂದೀಗ ಬರುವಂಥ ದುಂದುಗಾರರ ಕಂಡು ಕೊಂದುಹಾಕಲು ಚಂದ್ರಾಯುಧವ ಹಿಡಿದವಗೆ 1 ಒಂಬತ್ತು ಗೇಟಿನಾ ಮೋಟದೊಳು ನೋಡಯ್ಯ ಅಂಬಿಹರುಳುವಂತ ದುಂಬಿಗಳ ಕಾಟಾ ಅಂಬಾರಿಯೇರಲು ನಂಬೀಗೆ ಕೊಟ್ಟಿರ್ಪ ಶಂಭುನುತ ಶ್ರೀ ತುಲಸಿ ಕಂಬವ ಹಿಡಿದವಗೆ2
--------------
ಚನ್ನಪಟ್ಟಣದ ಅಹೋಬಲದಾಸರು
ಧರ್ಮವೆಂದೆನಿಪ ಮಾರ್ಗವನು ಬಿಟ್ಟುಕರ್ಮವೆಂದೆನಿಪ ಕಾನನವ ಪೊಕ್ಕುದುರ್ಮಾರ್ಗದಲಿ ನಡೆದವಗೆ ಘೋರವ್ಯಾಧಿಕರ್ಮಪಾಕದಲಿ ಸಾರುತಿದೆ ಜಗದಿ ಪ ಹರಿಹರ ವಿಭೇದಗೈದವಂಗೆ ದಂತಚ್ಯುತವುಗುರುದೈವಗಳ ನಿಂದೆಗೈದವಗೆ ಉನ್ಮದವುಪರಸತಿಯ ಕಾಮಿಸಿದವಗೆ ಪಾಂಡು ರೋಗವುಕೆರೆಗಳನು ಒಡೆಸಿದಾತಗೆ ಶೀತಜ್ವರವುಹಿರಿಯರನು ಜರಿದವಗೆ ಪೀನಾಶಿ ರೋಗವುಧರೆಯನಳಿಸಿದವಗೆ ಸರ್ವಾಂಗ ಪರಿಶ್ವೇತವುಪುರ ಅಗ್ರಹಾರ ಕೆಡಿಸಿದವಗೆ ರಾಜರೋಗವೆಂದುಅರಿವುದು ಸಕಲ ಜನರು 1 ಕಥೆ ಪುರಾಣಗಳ ಹಳಿದವಗೆ ಕಾಸಶ್ವಾಸಮತಭೇದವನು ಮಾಡಿದವಗೆ ಮೂಲವ್ಯಾಧಿಪಿತಮಾತೆಯರ ಸಲಹದವಗೆ ಗಂಡಾಮಾಲೆಯತಿಗಳನು ನಿಂದಿಸಿದವಗೆ ಸನ್ನಿಪಾತ - ಪರಸತಿಯರಿಗೆ ಅಳುಪಿದಾತಗೆ ಮೂತ್ರ ಕೃಚ್ರಪತಿವ್ರತೆಯರ ಪೀಡಿಸಿದವಗೆ ಅತಿಸಾರಮತಿಗೇಡಿ ಮೂರ್ಖನಿಗೆ ಕ್ಷಯರೋಗ - ಇದುಕ್ಷಿತಿಯೊಳಗೆ ಸಿದ್ಧಾಂತ 2 ಶಿಶು ಹತ್ಯೆ ಗೈದವಗೆ ಕುಕ್ಷಿಶೂಲೆಪಶುಗಳನು ಮರ್ದಿಸಿದವಗೆ ಪ್ರಮೇಹವುಉಸಿರಲೇಕಿನ್ನು ಸ್ವಾಮಿದ್ರೋಹಿಗೆ ಬಹುಮೂತ್ರಪುಸಿಯನಾಡುವ ಪುರುಷಗೆ ರಕ್ತ ಕಾಳಿಹಸಿದವರಿಗನ್ನವಿಕ್ಕದವಗೆ ಆಮ್ಲಪಿತ್ತವೃಷಭವನು ಒದ್ದವಗೆ ಬಿಗರುವಾತಮುಸುಕುವುದು ವಿಶ್ವಾಸಘಾತಕಗೆ ನರರೋಗಪುಸಿಯಲ್ಲವಿದು ಕೇಳಿ ಜನರು 3 ಕೊಟ್ಟು ಭಾಷೆಯ ತಪ್ಪಿದವಗೆ ಉಪಜಿಹ್ವೆಕೊಟ್ಟು ತುಪ್ಪಿದವಗೆ ಕರಕಂಪನಕೊಟ್ಟರೂ ಕೊಡಲಿಲ್ಲವೆಂಬವಗೆ ಉದರರೋಗಕೊಟ್ಟವರಿಗೆರಡು ಬಗೆವಗೆ ಮೇಹರೋಗಅಷ್ಟಮದದಿಂದ ಮೆರೆವವಗೆ ಬೆರಗಿನ ರೋಗಬಟ್ಟೆಯೊಳು ಮುಳ್ಳು ಹರಡಿದವಗೆ ನೇತ್ರವ್ಯಾಧಿಹುಟ್ಟುವುದು ಕಂಕಣ ಕಂಟಕಗೆ ಕುಷ್ಠರೋಗಕಟ್ಟಿಟ್ಟ ಬುತ್ತಿ ಇದು4 ಕರ್ಮ ಬಲ್ಲವರಾರುಎಂದು ಮಂದಮತಿಗಳಾಗಿ ಕೆಟ್ಟಳಿಯದಿರೆಹಿಂದಣದೆಲ್ಲವೂ ಬಹದೆಂಬುದಕೆ ಸಾಕ್ಷಿಇಂದು ಕಣ್ಣೆದುರೆ ಜಗದೊಳಗೆ ತೋರುತಿಹುದಿಗೊಚಂದದಲಿ ತಾಯಿ ಮಗುವಿಗೆ ಮೊಲೆಯ ಹಾಲುಣಿಸುವಂದದಲಿ ಉಣಿಸಿದಲ್ಲದೆ ಬಿಡದು ಮರೆಯದಿರಿಕಂದರ್ಪಪಿತ ಸೊಂಡೆಕೊಪ್ಪದಾದಿಕೇಶವನಮುಂದರಿತು ಭಜಿಸಿ ಮುಕ್ತಿಯ ಪಡೆಯಿರಣ್ಣ5
--------------
ಕನಕದಾಸ
ನಾಕೇಶ ವಿನುತೆ | ರ ತ್ನಾಕರನ ತಾಯೆ ಪ ಗೋಕುಲದೊಳಿದ್ದು | ಆಕಳ ಕಾಯ್ದಗೆ ಲೋಕಪಾವನೆ ಸಿರಿಯೆ ಅ.ಪ ನೀರೊಳಗೆ ಇದ್ದು ನಗಭಾರ ಬೆನ್ನಲಿಪೊತ್ತು ಬೇರು ಮೆಲ್ಲುವನಿಗೆ | ಚೀರಿ ಕಂಭದಿ ಬಂದು | ಘೋರ ರೂಪದಿ ಬಲಿ ದ್ವಾರ ಕಾಯ್ದವಗೆ | ವೀರ ನೆನಿಸಿ ಪೆತ್ತ | ನಾರಿಯ ಶಿರವ ಸಂ ಹಾರಮಾಡಿದವಗೆ | ಭೂರುಹಚರ ಪರಿವಾರ ದೊಳಗಿದ್ದು ದಧಿ ಚೋರನೆನಿಸಿದವಗೆ 1 ಸಂದೇಹವಿಲ್ಲದೆ ವಸನ ತ್ಯಜಿಸುತ ಬಂದು ನಿಂದವನಿಗೆ | ಇಂದಿರಾಧವ ನಿನ್ನ ಹಿಂದೆ ಬಂದವನ ಅಂದು ಕೊಂಡವನಿಗೆ | ಕುಂದರದನೆ ನಿನ್ನ ಪೊಂದದೆ ಛಂದದಿ ಕಂದರ ಪಡೆದವಗೆ 2 ಜಾತಿಯನರಿಯದೆ ಶಬರಿಯ ಎಂಜಲ ಪ್ರೀತಿಲಿ ಉಂಡವಗೆ ಶ್ವೇತವಾಹನಜಗೆ ತಾ ಸೂತನೆಂದೆನಿಸುತ ಖ್ಯಾತಿ ಪಡೆದವಗೆ ನೀತಿ ಇಲ್ಲದೆಯ ಮಾತೆಯ ಅನುಜನ ಘಾತಿಸಿದಾತನಿಗೆ || ವಾತಾಶನವರ ತಲ್ಪದೊಳು ಮಲಗಿದ ಶಾಮಸುಂದರ ಧೊರೆಗೆ 3
--------------
ಶಾಮಸುಂದರ ವಿಠಲ
ನಾಗಶಯನನು ನಿನಗಾಗಿಯೆ ಬಂದಿಹೆÉ ಬಾಗಿಲ ತೆಗೆಯೆ ಭಾಮೆ ನೀ ಬಾಗಿಲ ತೆಗೆಯೆ ಭಾಮೆ ಪ. ಕೂಗುವ ನೀನ್ಯಾರೊ ಈಗ ಹೊತ್ತಲ್ಲ ಕೂಗಬೇಡ ಪೋಗೋ ನೀ ಕೂಗಬೇಡ ಪೋಗೋಅ.ಪ. ನಿಗಮ ಚೋರನ ಗೆದ್ದ ನೀರಜಾಕ್ಷನೆ ಭಾಮೆ ನಾ ನೀರಜಾಕ್ಷನೆ ಭಾಮೆ ನಾರುವ ಮೈಯನ್ನು ಎನ್ನಲ್ಲಿ ತೋರದೆ ಸಾರು ಸಾರು ನೀ ದೂರ ರಂಗ ಸಾರು ಸಾರು ನೀ ದೂರ 1 ಮಂದರ ಗಿರಿಯನು ಬೆನ್ನಲಿ ಪೊತ್ತ ಇಂದಿರೆಯರಸನೆ ಭಾಮೆ ನಾ- ನಿಂದಿರೆಯರಸನೆ ಭಾಮೆ ಇಂದು ನಿನಗೆ ತಕ್ಕ ಭಾರಗಳಿಲ್ಲವು ಸಿಂಧುವಿನೊಳು ನೀ ಪೋಗೈ ಕೃಷ್ಣ ಸಿಂಧುವಿನೊಳು ನೀ ಪೋಗೈ 2 ಧರಣಿಗೆ ಸುಖವನು ತೋರಿದ ಸೂಕರ ಪರಮಪುರುಷನೆ ಭಾಮೆ ನಾ ಪರಮ ಪುರುಷನೆ ಭಾಮೆ ವರಾಹರೂಪದ ನಿನ್ನ ಗುರುಗುರು ಶಬ್ದವ ಅರಿವಳಲ್ಲವೊ ನೀ ಪೋಗೈ ರಂಗ ಅರಿವಳಲ್ಲವೊ ನೀ ಪೋಗೈ 3 ಬಾಲನ ತಾಪವ ಕೋಪದಿ ತರಿದ ನಾರಸಿಂಹನೆ ಭಾಮೆ ನಾ ನಾರÀಸಿಂಹನೆ ಭಾಮೆ ಜ್ವಾಲೆಯ ವದನ ಕ್ರೂರ ಕಾರ್ಯಂಗಳ ಕೇಳಿ ಅಂಜುವಳಲ್ಲ ಪೋಗೈ ರಂಗ ಕೇಳಿ ಅಂಜುವಳಲ್ಲ ಪೋಗೈ 4 ವಾಸವನನುಜನೆ ವಾಮನರೂಪನೆ ನಾಶರಹಿತನೆ ಭಾಮೆ ನಾ ನಾಶರಹಿತನೆ ಭಾಮೆ ಕೂಸಿನ ರೂಪದಿ ಮೋಸವ ಮಾಡಿದಗೆ ದಾಸಿ[ಯೊ]ಬ್ಬಳು ಬೇಕೇ ರಂಗ ದಾಸಿ[ಯೊ]ಬ್ಬಳು ಬೇಕೇ 5 ತಾತನ ಮಾತಿಗೆ ತಾಯಿಯನಳಿದ ಖ್ಯಾತ ಭಾರ್ಗವನೆ ಭಾಮೆ ನಾ ಖ್ಯಾತ ಭಾರ್ಗವನೆ ಭಾಮೆ ಮಾತೆಯನಳಿದ ಘಾತಕ ನಿನಗೆ ದೂತಿಯೊಬ್ಬಳು ಬೇಕೇ ರಂಗ ದೂತಿಯೊಬ್ಬಳು ಬೇಕೇ 6 ದಶರಥನಂದನ ದಶಮುಖಭಂಜನ ಪಶುಪತಿವಂದ್ಯನೆ ಭಾಮೆ ನಾ ಪಶುಪತಿ ವಂದ್ಯನೆ ಭಾಮೆ ಹಸನಾದ ಏಕಪತ್ನೀವ್ರತದವಗೆ ಸುದತಿಯೊಬ್ಬಳು ಬೇಕೇ ರಂಗ ಸುದತಿಯೊಬ್ಬಳು ಬೇಕೇ 7 ಹದಿನಾರು ಸಾಸಿರ ನೂರೆಂಟು ಸುದತೇರ ಬದಿಯಲಿಟ್ಟವನೆ ಭಾಮೆ ನಾ ಬದಿಯಲಿಟ್ಟವನೆ ಭಾಮೆ ಹದನಕ್ಕೆ ಬಾರದ ಮಾರ್ಗಂಗಳ್ಯಾತಕ್ಕೆ ವದನ ಮುಚ್ಚಿಕೊಂಡು ಪೋಗೈ 8 ಬೌದ್ಧರಕುಲದಲ್ಲಿ ಹುಟ್ಟಿ ಅವರಂತೆ ಮುಗ್ಧರ ಮಾಡಿದೆ ಭಾಮೆ ನಾ ಮುಗ್ಧರ ಮಾಡಿದೆ ಭಾಮೆ ಶುದ್ಧಗುಣಗಳೆಲ್ಲ ಇದ್ದಲ್ಲಿಗೆಪೇಳೆ ವೃದ್ಧಳು ನಾನಲ್ಲ ಪೋಗೈ ರಂಗ ವೃದ್ಧಳು ನಾನಲ್ಲ ಪೋಗೈ 9 ವರ ತುರಗವನೇರಿ ಧರೆಯೆಲ್ಲ ಚರಿಸಿದ ದೊರೆವರ ನಾನೆ ಭಾಮೆ ಚರಿಸಿದ ದೊರೆವರ ನಾನೆ ತÀುರಗದ ಚಾಕರಿಯೊ[ಳಗಿರುವವನಿಗೆ] ತರುಣಿಯ ಭೋಗವು ಬೇಕೇ ರಂಗ ತರುಣಿಯ ಭೋಗವು ಬೇಕೇ 10 ಸರುವ ಪ್ರಾಣಿಗಳ ಉದರದೊಳಿಂಬಿಟ್ಟು ಶರಧಿಯೊಳ್ಮಲಗಿದವ ಭಾಮೆ ನಾ ಶರಧಿಯೊಳ್ಮಲಗಿದವ ಭಾಮೆ ದೊರೆ ಹಯವದನ ಚರಣಕ್ಕೆರಗುತ ತೆರೆದಳು ಬಾಗಿಲ ಭಾಮೆ ಆಗ ತೆರೆದಳು ಬಾಗಿಲ ಭಾಮೆ 11
--------------
ವಾದಿರಾಜ
ನಾನೀಯದಿದ್ದರೆ ನೀನೇನನೀವೆ ಪ ನಾನು ಎಂಬುದು ಮಾತ್ರ ನಾ ನಿನಗಿತ್ತರೆ ಏನನೀಯುವೆ ರಂಗ ದೀನದಯಾಳು ಅ.ಪ ಅವಲಕ್ಕಿಯನು ತಂದವಗೆ ಭಾಗ್ಯವನಿತ್ತೆ ನವಫಲವನಿತ್ತವಳಿಗೆ ಒಲಿದೆ ನವನೀತವಿತ್ತರ್ಗೆ ಸುವಿಲಾಸಗಳನಿತ್ತೆ ಭುವಿಯೆಲ್ಲವಿತ್ತಂಥವನ ಬಾಗಿಲಕಾಯ್ದೆ 1 ಗಜರಾಜನಂದು ಪಂಕಜವೊಂದನಿತ್ತಂದು ಅಜಗರನನು ಕೊಂದು ಸೌಜನ್ಯವನಿತ್ತೆ ಭುಜದ ಮೇಲೆ ನಿನ್ನನಂಗಜ ಪೊತ್ತು ತಿರುಗಲು ರಜತಪದವಿಯನಿತ್ತು ವಿಜಯ ನೀ ಗೈದೆ 2 ಮಡದಿಮಣಿಯು ತಾನುಟ್ಟ ಪೀತಾಂಬರ ದೆಡ್ಡೆಯ ಹರಿದು ನಿನ್ನ ಅಡಿಗೆ ಕಟ್ಟಲ್ಕೆ ಮಡದಿಗೆ ಅಕ್ಷಯದುಡುಗೆಯ ನೀನಿತ್ತೆ ಮೃಡನು ತಾನೇನು ಕೊಡಲೋ ಗೋವಿಂದಾ 3 ಜಗಜಟ್ಟಿ ಹನುಮನು ಬಗೆದು ನಿನ್ನಯ ದುಗುಡವ ಬಿಡಿಸಿದ ಬಗೆಯ ನೀನÀರಿತೂ ಜಗದೊಳು ಸರಿಯಾದುಡುಗರೆಯಿಲ್ಲದೆ ನಗುತ ನಿನ್ನನು ನೀನೆ ಸೊUಸಿನಿಂದಿತ್ತೆ 4 ನಾನೆಂಬುದಲ್ಲದೆ ಏನುಂಟು ಎನ್ನೊಳು ನೀನೀವೆನಿದ ಮಾತ್ರ ಶ್ರೀನಾಯಕೇಶ ಏನನಾದರೂ ಸರಿ ನೀನೀಯೋ ಮುರವೈರಿ ನಾನು ನನ್ನದು ನಿನ್ನಧೀನ ಮಾಂಗಿರಿರಂಗ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರೇರೆಲ್ಲ ಮುತ್ತಿನಾರತಿ ಬೆಳಗಿರೆ ಶ್ರೀ ಕೃಷ್ಣಮೂರುತಿಗೆ ಪ ನಾರೀಮಣಿ ಶ್ರೀ ರುಕ್ಮಿಣೀದೇವಿಗೆ ಮತ್ತು ಭೂಮಾಮಣಿಗೆ ಅ.ಪ ಪನ್ನಗಪತಿ ಫಣಿಯನ್ನು ತುಳಿಯುತಲಿ ಚನ್ನಾಗಿ ಕುಣಿದವಗೆ ಸನ್ನುತ ನಿಜ ಜನರನ್ನು ಸಲಹುವ ಮನ್ಮಥ ಜನಕನಿಗೆ 1 ಪಾರ್ಥಗೆ ಸಖನಾಗಿ ಧಾರ್ತರಾಷ್ಟ್ರನ ಹಠ ವ್ಯರ್ಥ ಮಾಡಿದವಗೆ ಆರತಿ ಎತ್ತಿರೆ ಶುಭಕೀರ್ತನೆ ಮಾಡುತ ಪಾರ್ಥಸಖನ ಸತಿಗೆ 2 ಚಂಡಮುನಿಯು ಬೇಡಿಕೊಂಡ ವರವನಿತ್ತ ಪಾಂಡವರ ಕಾಯ್ದವಗೆ ಪುಂಡರೀಕದಳಲೋಚನಗೆ ಜಗದಂಡಪತಿಯ ಸತಿಗೆ3 ವಾಮಲೋಚನರೆಲ್ಲಾ ನಾಮಗಿರೀಶ ಶ್ರೀ ನರಸಿಂಹ ಮೂರುತಿಗೆ ಪ್ರೇಮ ಮಾಡುವನೆಂದು ಕಾಮಿನಿಯರೇ ಸತ್ಯ ಭಾಮಾಸಹಿತನಿಗೆ 4
--------------
ವಿದ್ಯಾರತ್ನಾಕರತೀರ್ಥರು
ನಿಖಿಳ ಯಾದವರೊಳಗೆಮಾನಾಭಿಮಾನವೆಳ್ಳನಿತಿಲ್ಲ ಕೃಷ್ಣ ಪ ದೇವಕೀದೇವಿಯುದರದಿ ಜನಿಸಿ ಬಾಲ್ಯದಲಿಓವಿ ಮೊಲೆ ಕುಡಿಸಿದಳ ಅಸುವ ಸೆಳೆದುಮಾವ ಕಂಸನ ಕೊಂದು ಮನುಜ ವೇಷದಲಿ ಗಾಂ-ಡೀವಿಯ ಮನೆಯ ಬಂಡಿ ಬೋವನಾದೆ1 ಸುರನದಿಯ ಸುತನು ಪಾಂಡವರಿಗಾಪ್ತನು ನಿನಗೆಪರಮಭಕ್ತನು ಸ್ವಯಿಚ್ಛಾ ಮರಣಿಯುಧುರದೊಳಗೆ ಪೂರ್ವ ವೈರದ ಶಿಖಂಡಿಯ ತೋರಿಶರಮಂಚದೊಳುಪಾಯದಲಿ ಮಲಗಿಸಿದೆ 2 ಸೋದರತ್ತೆಯ ಸೊಸೆಯ ಮಗ ನಿನಗೆ ಭಾವಿಸಲುಸೋದರಳಿಯನು ಮೂರು ಲೋಕವರಿಯೆಸಾಧಿಸಿಯೆ ಅಸಮ ಚಕ್ರವ್ಯೂಹವನು ರಚಿಸಿಸೋದರನ ಷಡುರಥರ ಕೈಲಿ ಕೊಲ್ಲಿಸಿದೆ 3 ಕುರುಪತಿಯ ಮೈದುನನ ಕೊಲ್ಲ ಬಗೆದವನ ಸಂ-ಗರದೊಳೇರಿಸಿ ನುಡಿದ ನುಡಿಯ ಕೇಳಿ ಮೈ-ಗರೆಯೆ, ರವಿ ಮಂಡಲಕೆ ಚಕ್ರದಿ ಮರೆಯ ಮಾಡಿನರನ ಕೈಯಿಂದ ಸೈಂಧವನ ಕೊಲ್ಲಿಸಿದೆ 4 ಶಪಥದಲಿ ರಣದೊಳರಸನ ಹಿಡಿವೆನೆಂಬವಗೆತಪಸಿಗಳ ತಂದು ತತ್ತ್ವವ ಬೋಧಿಸಿಕಪಟವರಿಯದ ನೃಪನ ಕೈಯೊಳನೃತವ ನುಡಿಸಿಉಪಮೆಯಲಿ ಶಸ್ತ್ರ ಪಂಡಿತನ ಕೊಲ್ಲಿಸಿದೆ 5 ಯಮಳರನು ಪಡೆದ ತಾಯಿಗೆ ಸಹೋದರನ ಭೂರಮಣರೊಳಗಗ್ಗಳೆಯನತಿ ಧೈರ್ಯನುಸಮರದಲಿ ರವಿಸುತನ ರಥಕೆ ಸೂತನ ಮಾಡಿಯಮಸುತನ ಕೈಲಿ ಮಾವನ ಕೊಲ್ಲಿಸಿದೆ 6 ಜನವರಿಯದಂತೆ ಜೀವನದೊಳಡಗಿರ್ದವಗೆಮನಕೆ ಖತಿಗೊಳಿಸಿ ಬರ ಸೆಳೆದು ನಗುತಅನುವರದೊಳಾಯತದ ತೊಡೆಯ ಸನ್ನೆಯ ತೋರಿಅನಿಲಜನ ಕೈಲಿ ಕೌರವನ ಕೊಲ್ಲಿಸಿದೆ7 ಉರಿಯೊಳಗೆ ಜನಿಸಿದಂಗನೆಯ ನಿಜಸುತರು ಮಂ-ದಿರದೊಳೈವರು ನಿದ್ರೆಗೈಯುತಿರಲುನರವೃಕೋದರ ಧರ್ಮನಂದನರನಗಲಸಿಯೆಗುರು ಸುತನ ಕೈಲಿ ಬಾಲಕರ ಕೊಲ್ಲಿಸಿದೆ 8 ಈ ವಿಧದೊಳವರ ಸುರಲೋಕದಲಿ ನೆಲೆಗೊಳಿಸಿಭಾವ ಮೈದುನರೈವರನು ರಕ್ಷಿಸಿಭೂವಲಯದೊಳು ಕೀರ್ತಿಯನು ಪಡೆದೆಸೆವ ನಮ್ಮದೇವ ನೆಲೆಯಾದಿಕೇಶವ ವೆಂಕಟೇಶ 9
--------------
ಕನಕದಾಸ
ನಿತ್ಯ ಕರ್ಮೇಂದ್ರಿಯ ಸೇವಿತನಿಗೆಮಂಗಳಂ ಉಡುಪಿನ ಶ್ರೀಕೃಷ್ಣನಿಗೆಪ. ನಂದನ ಕಂದನಿಗೆ ವೃಂದಾರಕೇಂದ್ರನಿಗೆಮಂದರ ಗಿರಿಧರಗೆ ಇಂದಿರಾಕಾಂತನಿಗೆನಂದ ಸುರವ್ರಾತನಿಗೆ ನಂದ ತೀ-ರ್ಥೇಂದ್ರ ಗೋವಿಂದ ಹರಿಗೆ1 ಮಕರ ಕುಂಡಲಧರ ರುಕುಮಿಣಿ ರಮಣನಿಗೆಅಕಳಂಕ ಮಹಿಮಗೆ ಅಕುಟಿಲನಿಗೆಶುಕವಾಹನನ ಪಿತಗೆ ಭಕುತವತ್ಸಲಗೆ ಅ-ಧಿಕ ಕೋಟಿರವಿತೇಜ ಮಕುಟ ದಿಟ್ಟನಿಗೆ 2 ಸರಸ ಮಂದಹಾಸನಿಗೆ ನರಹರಿ ರೂಪನಿಗೆವರ ಕೌಸ್ತುಭಹಾರ ಧರಿಸಿದವಗೆಕರುಣದಿ ಗೋಪಿಯರ ಧುರದಿ ರಕ್ಷಿಪನಿಗೆಸಿರಿಮುದ್ದು ಹಯವದನ ಮುರಹರನಿಗೆ 3
--------------
ವಾದಿರಾಜ