ಒಟ್ಟು 345 ಕಡೆಗಳಲ್ಲಿ , 63 ದಾಸರು , 310 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ದೇವ ಜಯ ದೇವ ಜಯ ಜಗಜೀವನ ಕರ ರತ್ನ ಧ್ರುವ ಅಜ ಸುರ ಮುನಿ ಪ್ರಾಣ ರಾಜೀವ ನಯನ ಸುಜನ ಸುಭೂಷಣ ತ್ರಿಜಗ ಪಾವನ 1 ಭಕ್ತ ಜನ ಉದ್ಧಾರ ಘನಗುರು ದಾತಾರ ಪತಿತಪಾವನಮೂರ್ತಿ ಮುನಿಜನ ಮಂದಾರ ಅತಿಶಯಾನಂದ ಅನುಪಮ ವ್ಯಾಪಕ ನಿರ್ಧಾರ ಸತತ ಸುಪಥ ಸದ್ಗುರು ಸಹಕಾರ 2 ಸಹ್ಯಾದ್ರಿ ಗಿರಿವಾಸ ಶ್ರೀಗುರು ಸರ್ವೇಶ ಬಾಹ್ಯಾಂತ್ರ ಪರಿಪೂರ್ಣ ಜಗದೀಶ ಮಹಿಪತಿಸ್ವಾಮಿ ಶ್ರೀ ದೇವದೇವೇಶ ದಾತ ಭಾಸ್ಕರಕೋಟಿ ಪ್ರಕಾಶ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಾತಿ ಕುಲಗೋತ್ರಗಳ ಖ್ಯಾತಿ ಹಿರಿದಲ್ಲಯ್ಯ ಪ ನೀತಿ ನಯ ಭಕುತಿಗಳು ಹಿರಿಯವಯ್ಯ ಅ.ಪ ಸ್ನಾನ ಸಂಧ್ಯಾ ಹೋಮ ಧ್ಯಾನ ದಿನಚರ್ಯೆಗಳ ತಾನಲಕ್ಷ್ಯವ ಗೈವ ಮಾನವನು ದ್ವಿಜನೇ ಶ್ರೀನಿವಾಸಾ ರಂಗ ದಾನವಾರಿ ಎಂದು ಜಾನಿಸುವ ಹರಿಜನರು ಹೀನರಹರೇ1 ಬೂದಿ ನಾಮವ ಬಳಿದು ವೇದಾಂತಿ ತಾನೆಂದು ಮೇದಿನಿಯ ಜನರಲ್ಲಿ ಕ್ರೋಧ ತೋರಿ ಮಾಧವನ ಭಕುತರಲ್ಲಿ ಭೇದ ವೈರವ ತಾಳಿ ವಾದ ಮಾಡುವ ನರಗೆ ಹರಿಯ ಕೃಪೆಯುಂಟೆ 2 ವನಜನಾಭನ ನೆನೆದು ತನುಮನವನರ್ಪಿಸದೆ ಧನದಾಸೆದೋರುವನು ಹರಿಭಕುತನೆ ಕನಸುಮನಸಿನೊಳೆಲ್ಲ ಮಾಂಗಿರೀಶನ ಭಜಿಸಿ ದಿನಪೂಜೆಗೈವವನು ಕುಲಹೀನನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜೈ ಜೈ ವೆಂಕಟರಾಯ ಸಲಹು ಗಡ ಪ ಶುಭ ಕಾಯ ಐಹಿಕ ಮಹಮಾಯವ ಬಿಡಿಸಯ್ಯಅ.ಪ ಪಂಕಜಾಕ್ಷ ಹರಿ ಸಂಕರುಷಣ ಭವ ಸಂಕಟ ಪರಿಹಾರ ಶುಭಕರ ಶಂಖಶಕ್ರಧರ ಮಂಕುದನುಜಹರ ಕಿಂಕರಘದೂರ ಶಂಖಸುರನ ಬಲು ಬಿಂಕಮುರಿದ ಬಲದಂಕ ಅದಟವೀರ ಶೂರ ಅಂಕುರಿಸೆನ್ನೊಳಾತಂಕತಾರದೆ ಪೊರೆ ಲಂಕಾ ವಿಜಯಕಾರ 1 ದಾತ ಮೂರುಜಗನಾಥ ಪರಮ ಅ ದ್ಭೂತ ಮಹಿಮೆಗಾರ ಚದುರ ಪ್ರೀತ ಭಕುತ ಭವಭೀತರಹಿತ ಮಾಯಾ ಪೂತನಿ ಸಂಹಾರ ನೀತಿಕೋವಿದ ವಿಧಿತಾತ ಅಸಮ ವಿ ಖ್ಯಾತ ಕರುಣನಿಕರ ಸುಂದರ ಘಾತಿಸಿ ಕಂಸನ ಮಾತಪಿತರ ಕಾಯ್ದ ಪಾತಕ ನಿವಾರ 2 ಬಾಲನಂತರಿಯದೆ ಆಲಯಗಳ ಪೊಕ್ಕು ಪಾಲು ಮೊಸರು ಕದಿದ ಸವಿದ ಬಾಲೆರುಡುವ ದುಕೂಲ ಕದಿದು ತಾ ಮೇಲು ಮರವನೇರ್ದ ಕಾಲಿಂದಿ ಧುಮಕಿದ ಕಾಳಿಯಮೆಟ್ಟಿದ ಕಾಳರಕ್ಕಸರೊದೆದ ಸದೆದ ಲೀಲಾ ಜಾಲ ನಂದ ಬಾಲನಾಗಿ ಬಲು ಬಾಲಲೀಲೆಗೈದ 3 ಪರಮ ಪರಾತ್ಪರ ಪರಮಪುರುಷ ಸಿರಿ ಪರಮ ಪಂಚಪ್ರಾಣ ದುರಿತ ಹರಣಜನನಮರಣ್ಹರಸುರವಿನಮಿತ ಧರಣಿಗಧಿಕ ತ್ರಾಣ ಕರಿಧ್ರುವರಿರ್ವರನು ಭರದಿ ನೀಡಿ ನಿಂತು ಪೊರೆದ ಪಾಂಚಾಲೀಮಾನ ಜಾಣ ಶರಣಜನರ ಮೈನೆರಳು ನಿಗಮಾತೀತ ನಿರಂಜನ 4 ಸೋಮವದನ ಸತ್ಯಭಾಮಾರಮಣ ಸುಖ ಧಾಮ ಸುಜನಹೃದಯನಿಲಯ ಕಾಮಜನಕ ಪುಣ್ಯನಾಮ ರಕ್ಕಸಕುಲ ಭೀಮ ಪಾಲಿಸಭಯ ಶಾಮವರ್ಣ ಮಮಸ್ವಾಮಿ ಭಜಿಪೆ ಶ್ರೀ ರಾಮಪಿಡಿಯೋಕಯ್ಯ ಸದಯ ಕಾಮಿತ ವರ ಸುಪ್ರೇಮದಿ ಇತ್ತೆನ್ನ ಪ್ರೇಮದುದ್ಧರಿಸಯ್ಯ 5
--------------
ರಾಮದಾಸರು
ಜೋ ಜೋ ಜೋ ಜೋ ಎನ್ನಿ ನಿರ್ವಿಕಾರಗೆಜೋ ಎಂದು ತೂಗಿರಿ ಚಿದಾನಂದ ದೊರೆಗೆ ಪ ಚಿದ್ಬಯಲಿನೊಳು ಹೃದಯ ತೊಟ್ಟಿಲ ಮಾಡಿಬದ್ಧ ವೇದಾಂತದ ನೇಣ ಬಿಗಿದುಸದ್ಭಾವವೆಂಬ ಹಾಸಿಗೆಯ ಹಾಸಿಶುದ್ಧಾತ್ಮನನು ಭಾವದಿ ತಂದು ನೀಡಿ 1 ಅದ್ವೈತವೆಂಬ ಆಭರಣ ತೊಡಿಸಿಸಿದ್ಧ ಭೂಮಿಕೆ ಎಂಬ ಅಡವನಿಡಿಸಿಬುದ್ಧಿ ನಿರ್ಮಳವಾದ ತಲೆದಿಂಬನಿಡಿಸಿನಿದ್ದೆ ಮಾಡೋ ಬ್ರಹ್ಮಾನಂದ ಬೋಧದಲಿ 2 ಚಿತ್ಪ್ರಭೆಯ ದೀಪವನು ಎಡಬಲದಿ ಹಚ್ಚಿಮೊತ್ತವಹ ದಶನಾದ ಭೇರಿಯರವ ಹಚ್ಚಿಮತ್ತೆ ಓಂಕಾರ ಮಂತ್ರ ಘೋಷದಿ ಮುಚ್ಚಿನಿತ್ಯಾತ್ಮನನು ನೋಡಿ ಹರುಷ ತುಂಬುತಲಿ 3 ವಸ್ತು ಸಾಕ್ಷಾತ್ತೆಂಬ ಮುತ್ತೈದೆಯರೆಲ್ಲಸ್ವಸ್ಥ ಚಿತ್ತೆಂಬುದನೆ ಸಿಂಗರಿಸಿಕೊಂಡುನಿಸ್ಸಂಗನಹ ಆತ್ಮ ಶಿಶುವನೊಡತಂದುಸುಸ್ವರದ ನಾದದಲಿ ಜೋಗುಳವ ಪಾಡುತಲಿ 4 ಜೋ ಜೋ ಕಾಮಸ್ತಂಭವ ಎನ್ನಿ ನರರೆಲ್ಲಜೋ ಜೋ ಕ್ರೋಧ ಸ್ತಂಭನ ಎನ್ನಿ ನರರೆಲ್ಲಜೋ ಜೋ ಮೋಹ ಸ್ತಂಭನ ಎನ್ನಿ ನರರೆಲ್ಲಜೋ ಜೋ ವಿಷಯ ಸ್ತಂಭನ ಎನ್ನಿ ನರರೆಲ್ಲ5 ಜೋ ಜೋ ಯಮನಿಯಮಾಸನ ಅರುಹಿದವನೆಜೋ ಜೋ ಜೋ ಜೋ ಖೇಚರ ಮುದ್ರೆ ನಿಲಿಸಿದವನೆಜೋ ಜೋ ಜೋ ಜೋ ಅವಿದ್ಯೆ ಖಂಡಿಸಿದವನೆಜೋ ಜೋ ಜೋ ಜೋ ಜೀವನ್ಮುಕ್ತಿದಾತನೆ 6 ಜೋ ಜೋ ಪರಮಾರೂಢನೆ ಪರಮೇಶಜೋ ಜೋ ಪರಮ ಪರೇಶನೆ ಪಂಡಿತಜೋ ಜೋ ನಿರುತ ವಸ್ತು ವ್ಯಕ್ತ ಅವ್ಯಕ್ತಜೋ ಜೋ ಶರಣ ರಕ್ಷಕ ರಾಜ ಯೋಗೀಂದ್ರ ಜೋ ಜೋ 7 ಸತ್ಯ ಸನಾಥ ವಿಶ್ವೋತ್ಪತ್ತಿ ಜೋ ಜೋಪ್ರತ್ಯಗಾತುಮ ಪರಬ್ರಹ್ಮನೆ ಜೋ ಜೋನಿತ್ಯ ಸಹಜಾನಂದ ಚಿನ್ಮಾತೃ ಜೋ ಜೋಭಕ್ತರ ಭಂಡಾರಿ ಭಾಗ್ಯನೆ ಜೋ ಜೋ 8 ಮಿಹಿರ ಶತಕಳೆಯೆಂಬ ಮಂತ್ರಪುಷ್ಪವ ಚೆಲ್ಲಿಮಹಾ ಬೆಳಕಿನ ಮಂಗಳಾರತಿಯ ಬೆಳಗುತಲ್ಲಿಅಚಲ ಸಮಾಧಿಯೆ ಆದ ಯೋಗನಿದ್ರೆಯಲಿಮಹಾ ಚಿದಾನಂದಾವಧೂತ ಮಲಗಿರು ಸುಖದಲ್ಲಿ 9
--------------
ಚಿದಾನಂದ ಅವಧೂತರು
ಜ್ಞಾನಿಯ ಕಾಣಲು ಧಗದಲ್ಯನಾಗುವ ಶಾಸ್ತ್ರಿಜ್ಞಾನಿಗಳು ಶಾಸ್ತ್ರಿಗೇನ ಮಾಡಿದರೋಏನಾದರೂ ಪೂರ್ವದ್ವೇಷವಿತ್ತಾದರೂತಾನು ನಿಂದಿಸಿ ಕುಲಸಹ ಕೆಡಿಸುವನು ಶಾಸ್ತ್ರಿ ಪ ದನವ ಕಾಣುವ ವದನವರಿಹುತಲಿಹದನವ ಕಾಯ್ದವಗಿಂತ ಅತ್ತಿತ್ತ ಕಡೆ ಶಾಸ್ತ್ರಿಘನ ವೇದಾಂತವನೋದಿ ಜ್ಞಾನಿಗಳ ನರರೆಂಬಎನಿತುಗರ್ವ ಅಹಮ್ಮಲಿ ತನ್ನ ತಿಳಿಯ ಶಾಸ್ತ್ರಿ 1 ಓದೋದು ವೇದಾಂತ ಓದುವನಾರೆಂದು ಅರಿಯಓದಿಹೆನೆಂಬ ಗರ್ವವು ತಲೆಗೆ ಹತ್ತಿಓದಿಯೇ ಅಲ್ಲಿ ಗೆದ್ದೆ, ಇಲ್ಲಿ ಗೆದ್ದೆ ನೆಂಬಅದನೊಬ್ಬನೆಲ್ಲೋ ಇರೆ ಆರಗೆದ್ದನು ಶಾಸ್ತ್ರಿ 2 ಸಾಧುಗಳಿಗೆ ವಂದಿಸಲಿಲ್ಲ ಸಾಧುಗಳ ಮನೆ ಹೋಗಲಿಲ್ಲಸಾಧುವು ಮುಂದೆ ಹಾಯಲು ಕುಳಿತು ಏಳದಲಿಹನುಸಾಧುವ ಕಂಡು ನಡೆಯೇನು ನುಡಿಯೇನು ಎಂಬಸಾಧುವ ಭಜಿಪಗೆ ಬಹಿಷ್ಕಾರೆಂದನು ಶಾಸ್ತ್ರಿ 3 ನಾನು ಅರಿಯೆ ನಿನಗೆ ಗತಿಯೇನು ಮತಿಯೇನುನಾನು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆನಾನು ನನ್ಹೆಸರೇನು ಆರು ತಿಳಿಸುವರೆಂಬಜ್ಞಾನವಿಲ್ಲದೆ ಘಟಪದಿ ಮೆರೆದಿಹ ಶಾಸ್ತ್ರಿ 4 ನಾನೇ ಶ್ರೇಷ್ಠನೆಂದೂ ನಾನೇ ದೊಡ್ಡವನೆಂದೂನಾನು ಆರಿಹೆನೆಂಬ ಎಚ್ಚರವದು ಹೋಗಿತಾನಾದ ಚಿದಾನಂದರಾದ ಸತ್ಪುರುಷಏನೇನೋ ನಿಂದೆಯ ಮಾಡಿ ನರಕಕ್ಕಿಳಿಸುವ ಶಾಸ್ತ್ರಿ 5
--------------
ಚಿದಾನಂದ ಅವಧೂತರು
ತನು ಸದನದಿ ಪೀಠವಯ್ಯ | ಭಾನು ಕುಲೋದ್ಧೀಪಕ ಪ ಅನಿಲನೆ ಜೀವನಾ ಮಹಾ | ಮಂಚನವು ರಮಾ ಶಯ್ಯಕೆ ಬಾ ಅ.ಪ. ಸುನಾಮ ಮೂರ್ತಿ ಕರವ ಪಾದ 1 ಮಧು ವಿರೋಧಿ ವೇದಾಂತ | ವೇದ್ಯ ಸುಧಾ ಕಲಶ ಪಾಣಿವಿಧಿ ಭವಾದಿ ವಂದ್ಯ ಚರಣ | ಅದುಭುತ ಚರ್ಯ ಹರಿಯೆಪದದಿ ಸುರನದಿಯ ಪಡೆದವ | ನದಿಸುತ ಗೊಲಿದ ಮಹಿಮಯದುಕುಲೋತ್ತಮ ಶ್ರೀ ಕೃಷ್ಣನೇ ಹದುಳದಲಿ ಪೊರೆ ಬಾ 2 ತರಳ ದ್ರೌಪದಿಗೊಲಿದವನೆ | ಶೌರೀ ವರ ಅಹಲ್ಯಾ ವರದಗುರು ಮಡದಿ ತಾರಾವರದ | ಶರಣರ್ಗೆ ಸುರಧೇನು ||ಪರಮ ಪಾತಕಿಯಾದವರ | ಪೊರೆದ ಮಹಾದಯವಂತ ಪರಿಸರಾಂತರ್ಗತನೆ ಪೊರೆಯೊ | ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ತವ ಚರಣಂ ಶರಣಂ ಅಂಡಾಳ್ ಗೋದಾ ಪ ತವಶುಭಚರಣಂ ಭವಭಯತರಣಂ ಭುವನಾಭರಣಂ ಪಾತಕಹರಣಂ ಅ.ಪ ವೇದಾಂತಾಂಬರೆ ಮಾಧವಮಂದಿರೆ ನಾದಸುಧಾಕರೆ ಸಕಲಸುಖಂಕರೆ 1 ಕೃಷ್ಣಕಥಾಮೃತ ಸಾಗರಮಂದಿರೆ ವಿಷ್ಣುಚಿತ್ತಸುತೆ ಕೀರ್ತನಚತುರೇ 2 ಪೂಮಾಲಾಧರೆ ಪಾಮಾಲಾಕರೆ ಶ್ರೀಮಾಂಗಿರಿವರ ಶರಣಸುಖಂಕರೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಿರುಮಲೇಶವಿಠಲಾ | ಪೊರೆಯ ಬೇಕಿವಳಾ ಪ ನಿರುತ ನಿನ್ನಯ ನಾಮ | ಸ್ಮರಣೆ ಸುಖ ಕೊಡುತಾ ಅ.ಪ. ಸ್ವಪ್ನದಲಿ ತವರೂಪ | ಕನ್ಯೆತಾ ಕಾಣುತ್ತಾಉನ್ನಂತ ಹರ್ಷದಲಿ | ಭಿನ್ನವಿಸಿ ಇಹಳೋ |ಪನ್ನಗಾರಿಧ್ವಜನೆ | ಮನ್ನಿಸುತ ಮನ್ಮಾತಕನ್ಯೆಗಭಯದನಾಗಿ | ನನ್ನೆಯಿಂ ಸಲಹೋ 1 ಶೂನ್ಯ | ಭೋಧಾತ್ಮ ಶ್ರೀ ಹರಿಯೆಭೇದಪಂಚಕ ವರುಹಿ | ಮಧ್ವಮತ ದೀಕ್ಷಾ |ಸಾಧಿಸುವುದಿವಳಲ್ಲಿ | ಹೇದಯಾಂಬುದೆ ಪೂರ್ಣಭೋದಮುನಿಯ ಸನ್ನುತನೆ | ವೇದಾಂತ ವೇದ್ಯಾ 2 ವ್ರಾತ ಸಮತೆಲಿಯುಂಬಭೂತಿಕರುಣಿಸು ಹರಿಯೆ | ವಾತಾಂತರಾತ್ಮಾ |ಧಾತಾಂಡ ಸೃಜಿಸಿ ಹರಿ | ಓತ ಪ್ರೋತನು ಇರಲುಮಾತನೊಪ್ಪಿಸೆ ನಿನಗೆ | ಏತರವ ನಾನೂ 3 ಹರಿಗುರೂ ಸದ್ಭಕ್ತಿ | ಹಿರಿಯರಾ ಸತ್ಸೇವೆಕರುಣಿಸುತ ಸಾಧನದ | ವರಮಾರ್ಗ ತೋರೋ |ಶರಣಜನ ವಾತ್ಸಲ್ಯ | ಬಿರಿದು ಪೊತ್ತಾಮೇಲೆಕರುಣಾಬ್ಧಿಪೂರ್ಣೆಂದು | ಕರಪಿಡಿಯೊ ಇವಳಾ 4 ಸಾಮಗಾನವಿಲೋಲ | ಭಾಮೆರುಕ್ಷ್ಮಿಣಿಲೋಲಸಾಮಾಜಾವರವರದ | ಭೂಮಗುಣಪೂರ್ಣ |ಕಾಮಾರಿಸನ್ನುತನೆ | ಕಾಮಿತಪ್ರದನಾಗೊಕಾಮನಯ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ತಿಳಿದವನೇ ಪೂರ್ಣಾ | ತಿಳಿವಿಕೆಯೊಳು ತನ್ನಯ ಖೂನಾ ಪ ತಿಳಿವಿಕೆ ತಿಳಿವದು ಯರಡಿಲ್ಲೆಂದು | ತಿಳಿದೇ ನರ ಬಾಹಂಭ್ರಮ ಜರಿದು 1 ವೇದಾಂತ ಸಾರದ ವಾಜ್ಯನು-ಭವನು | ಸಾಧು ಜನರ ದಯದಲಿ ಪಡೆದನು 2 ಜಲಧಿಯೊಳಗ ಲಹರಿಗಳೇಳ್ವೆಂತೆ | ಸಲೆ ಆತ್ಮನಿಂದಲಿ ಜಗದುದ್ಭವಂತೆ 3 ಪೂರ್ವಾರ್ಧದ ಬಿಸಿಲಿನ ನೆರಳೆಂದು | ದೋರ್ವ ಸಂಸಾರವು ಸ್ಥಿರವಲ್ಲೆಂದು 4 ಗುರುಮಹಿಪತಿ ಚರಣಕ ತಲೆವಾಗಿ | ಬೆರೆದು ಸತ್ವದೊಳಗ ರಜತಮ ನೀಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾತ ಅವಗುಣ ಧೂತ ಅವಗುಣ ಧೂತ ದೇವಾಧಿದೇವ ಶ್ರೀದೇವ ಅವಧೂತ ಧ್ರುವ ಜೀವದ ಜೀವ ದೇವರ ದೇವ ವಾಸುದೇವ 1 ಪ್ರಾಣಕ ಪ್ರಿಯ ಮುನಿಜನಾಶ್ರಯ ಙÁ್ಞನಿಗಳಿಗೆ ಸಾಹ್ಯ ಅನುಕೂಲ ನಮ್ಮಯ್ಯ 2 ಅನಾಥ ಬಂಧು ಘನಕೃಪಾಸಿಂಧು ಅನುದಿನ ದೊರೆವ ದೀನನಾಥನೆಂದೆಂದು 3 ಮನದ ಮಾಣಿಕ ಅಣುರೇಣುಕ ವ್ಯಾಪಕ ಅನಂತಕೋಟಿ ಬ್ರಹ್ಮಾಂಡ ನಾಯಕ 4 ಪರಮ ಉದಾರ ಕರುಣಾಸಾಗರ ತರಳ ಮಹಿಪತಿಸ್ವಾಮಿ ಇಹಪರ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ತ್ರೈಲೋಕ್ಯಕೀತ ಧ್ರುವ ದೂರ ಸಗುಣ ಸಹಕಾರ ಧೀರ ಪರಮಉದಾರ ದುರಿತ ಸಂಹಾರ ಪರಾತ್ಪರ ಪರಾಕಾರ 1 ಈಶ ಭವಭಯನಾಶ ಶೇಷಶಯನ ಸರ್ವೇಶ ದೋಷಹರ ಕರುಣೀಶ ಕ್ಲೇಶನಾಶ ದೇವೇಶ 2 ಮಾತಾ ವಿಶ್ವನಿರ್ಮಿತ ಪಿತಾಮಹನ ಪಿತ ಈತ ಮಹಿಪತಿ ಹಿತ ನಾಥಾ ಭಕ್ತಪುನೀತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ದೀನನಾಥ ಧ್ಯಾನದಾಯಕ ಜಾನಕೀ ಪ್ರೀತ ಪ ಬಹುಕುಂದುನಿಂದೆ ಸರ್ವ ಅಹುದು ಅಲ್ಲ ನಿನ್ನದಭವ ಅಹಿತಸುಖದ ಪ್ರೇಮಬಿಡಿಸಿ ದಹಿಪ ಭವದ ಬಾಧೆ ಗೆಲಿಸು 1 ಬಂದ ಬಂಧ ಬಯಲುಮಾಡಿ ಕಂದನೆಂದು ಕರಪಿಡಿದು ತಂದೆ ನಿನ್ನ ಪರಮಧ್ಯಾನಾನಂದ ಪಾಲಿಸಿ ಪೋಷಿಸೆನ್ನ 2 ಕಾವದೇವ ನೀನೆ ಪತಿತಪಾವನ ತ್ರಿಜಗಸೂತ್ರಧಾರಿ ಭಾವಜಪಿತ ಶ್ರೀರಾಮ ನಿಮ್ಮ ಸೇವಕನೆನಿಸಿ ಸಲಹು ಸತತ 3
--------------
ರಾಮದಾಸರು
ದಾತ ನೀನೆ ಸ್ವಾಮಿ ಶ್ರೀಗುರುನಾಥ ವರ್ಮ ತೋರಿಕೊಡುವ ನಿಮ್ಮ ಧರ್ಮಗುಣ ಪ್ರಖ್ಯಾತ ಧ್ರುವ ಧರೆಯೊಳು ಸರಿಯಗಾಣೆ ಗುರುಧರ್ಮದಿಂದಧಿಕ ಕರುಣಿಸಿ ಆನಂದದಿಂದ ತೋರುತಿಹ್ಯ ಬ್ರಹ್ಮಸುಖ ವರಮುನಿಗಳ ಪ್ರಿಯ ಶರಣಜನಪಾಲಕ ಪರಮ ಸುಪಥದೋರಿ ಹೊರೆವ ಪೂರ್ಣತಾರಕ 1 ಬಡವನಾಧಾರಿ ನೀನು ಒಡಿಯನಹುದೊ ನಿಶ್ಚಯ ಕೊಡುವ ಭಕ್ತಿ ಮುಕ್ತಿದಾತ ದೃಢಭಕ್ತರಾಶ್ರಯ ಒಡಲ ಹೊಕ್ಕಿಹೆ ನಿಮ್ಮ ಕಡೆಯಗಾಣಿಸೊ ನಮ್ಮಯ್ಯ ಪಿಡಿದು ನೀ ಎನ್ನ ಕೈಯ ಕೊಡು ತೋರಿ ನಿಮ್ಮ ಸೊಹ್ಯ 2 ಪೊಡವಿಯೊಳು ಕ್ಷಮೆ ಎನಗೆ ಕೊಡು ಕರುಣಾಕಟಾಕ್ಷ ನೋಡಿ ನಿಮ್ಮ ದಯದಿಂದ ನೀಡೊ ನಿಜ ಸುಭಿಕ್ಷ ಬಿಡದೆ ಎಂದೆಂದು ನೀನು ಮಾಡೊ ಸಂರಕ್ಷ ಮೂಢ ಮಹಿಪತಿಗಿನ್ನು ಪೂರಿಸೊ ಮನದಪೇಕ್ಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ಅಂಬುಜಾಸನ ತಾತ ಕುಂಭಿಣಿಯೊಳು ಪುಟ್ಟಿ ಜನನಿಯ ಮೊಲೆ ಪಾಲು ಉಂಬೋದು ಬಿಡಿಸೊ ಜನನವ ಕೆಡಿಸೊ ಪ ರಸಿಕೆ ಮುಹಕದಲಿ ನಿಶಿದಿನದಲಿ ಹೊರಳಿ ಅಸುರುಸುರೆನುತಲಿ ಹಸಗೇಡಿಯಾದೆನೊ ಪರಿ ನೊಂದು 1 ಹಲವು ಲಂಪಟದೊಳು ಹಲುಬಿ ಹಕ್ಕಲನಾದೆ ಬಲೆಯೊಳಗಿದ್ದ ಎರಳೆಯಂತೆ ಮಿಡುಕುತ ಮಲಮೂತ್ರದೊಳು ಬಳಲಿದೆ ಕೇಳೊ 2 ಎಳ್ಳನಿತು ಸತ್ಕರ್ಮವುಳ್ಳದ್ದು ಚರಿಸಿದೆ ಬಲಿಷ್ಠ ನಾನೆಂದು ಬಲು ದುರ್ಮತಿಯಿಂದ ಎಲ್ಲರ ಜರಿದೆ ಧರ್ಮವ ಮರೆದೆ 3 ಚಾರುವಾಕರಗೂಡಿ ಮೂರೆ ವಿಕಾರದಲ್ಲಿ ನೀರೇರ ಒಡಗೂಡಿ ನೀತಿ ನಿರ್ಣಯ ತೊರೆದು ಬಟ್ಟೆ 4 ಎಲ್ಲಿರಲು ನಿನ್ನವನೋ ಅಲ್ಲವೆಂದೆನಿಸದೆ ಬಲ್ಲಿದರೊಡಿಯ ವಿಜಯವಿಠ್ಠಲ ನಿ ನ್ನಲ್ಲಿ ಸೇರಿಸಿ ಎನ್ನ ಪೊರೆಯೋ ಪ್ರಸನ್ನಾ 5
--------------
ವಿಜಯದಾಸ
ದಾತ ಕರುಣೆಯಿಂದಲಿ ಪೊರೆಯೊ ಸುಪ್ರೀತ ಪ ತರಳನನು ಸ್ಥಿರಸುಖದಿ ಪಾಲಿಸು ಅ.ಪ ಬ್ರಹ್ಮ ಗುರು ಪರಬ್ರಹ್ಮಣೇ ನಮಃ1 ನಿರಂಜನ ಕರ್ತಿಸುವೆನೀ ತನುಮನಂಗಳ 2 ನೀನೆ ಎನ್ನಯ ಪ್ರಾಣನಾಥನು 3 ಭವ ಗಾದರದಿ ನೀ ಬೋಧಿಸೈ ನಿಜ 4 ಸರ್ವದಾ ಸದಾನಂದ ಜಯ ಜಯ 5
--------------
ಸದಾನಂದರು