ಒಟ್ಟು 136 ಕಡೆಗಳಲ್ಲಿ , 45 ದಾಸರು , 116 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಬಿನ್ನೈಸಲೇನಿನ್ನು ಎನ್ನ ಗುರುವೇ ನಿ ಮ್ಮ ನಿತ್ಯಾನಂದನಿರುವ ಬಗೆಯನ್ನ ಪ. ತನ್ನ ಕಾರ್ಯಗಳನ್ನು ನಿಮ್ಮ ಮೇಲೊರಗಿಸಿ ಬೆನ್ನಿನಂದದಿ ನಿಮ್ಮ ಕಾಡುತಿಹನು ತನ್ನಿಂದಲಾಗದ ಕಾರ್ಯಗಳು ಇನ್ನುಂಟೆ ತನ್ನನೆ ತಾನು ಮರೆತಂತೆ ಇರುತಿಹನು 1 ತನ್ನ ಮಾರ್ಗಕೆ ಬರುವ ಜೀವರುಗಳೆಲ್ಲರನು ನಿಮ್ಮ ವಶಕೊಪ್ಪಿಸಿ ಓರೆಯಾಗಿಹನು ತಾನೊಬ್ಬ ನಿಮ್ಮಿಂದ ತೇರ್ಗಡೆಯಾದಮೇಲ್ ತನ್ನವರ ತಾನು ಸಲಹದಲೆ ಇರುತಿಹರೆ 2 ಬನ್ನಬಡುತಲಿ ಇರುವ ಘನ್ನ ಜೀವರುಗಳನು ಮನ್ನಿಸಿ ಕರೆದು ಅಂಕಿತವಿತ್ತಿರಿ ಇನ್ನಾದರೂ ತಾನು ನಿಮ್ಮ ಕಾರ್ಯಕೆ ನಿಂತು ನಿಮ್ಮ ಸೇವೆಯನು ಮಾಡದಲೆ ಇರುತಿಹನು 3 ಒಂದೊಂದು ಸೇವೆಗೆ ಒಬ್ಬೊಬ್ಬರಿಹರೆಂದು ಮುಂದೆ ತನಗಾವುದೂ ತಿಳಿಯದೆಂದು ಇಂದು ಈ ಪರಿಯಿಂದ ಇರುತಿಹುದು ನ್ಯಾಯವೆ ತಂದೆ ಮುದ್ದು ಮೋಹನಗುರುವೆ ನೀವ್ ಪೇಳಿ 4 ಸಾಕು ನಿಮ್ಮಯ ಶ್ರಮವ ನೋಡಲಾರೆ ನಾನು ಈ ಕಂದನಿಗೆ ಇನ್ನು ವರವ ಕೊಟ್ಟು ಲೋಕಕಾರ್ಯವ ನಡೆಸಿ ನೋಡಿ ಸಂತಸಪಡಿರಿ ಲೋಕೇಶ ಗೋಪಾಲಕೃಷ್ಣವಿಠ್ಠಲ ಪ್ರಿಯರೆ 5
--------------
ಅಂಬಾಬಾಯಿ
ಭಕ್ತರ ಭಾಗ್ಯಕೆ ಯೆಣೆಯಂ ನಾ ಕಾಣೆನೀಜಗದಿ ನಿತ್ಯ ಸ್ತುತ್ಯದ ಮಾರ್ಗವತಿವೈಚಿತ್ರ್ಯವು ಪ ನಿತ್ಯ ಕರ್ಮವನಡಸಿ ಗೀತಾಪಾರಾಯಣ ಮಾಡುತ್ತಿಹ 1 ಸುಂದರ ಶ್ಯಾಮನ ಕಂಡಾನಂದದಿ ಮಹಿಮೆಯ ಕೊಂಡಾಡಿ ಹೃದಯದಿ ನೋಡುವ2 ನಡೆವಾಗ ನುಡಿವಾಗ ಮಡದಿ ಮಕ್ಕಳ ಕೂಡಿ ತಮ್ಮೊಡೆಯನ ನೆನೆಯುವ 3 ಹರಿಕಥೆಯಂ ಕೇಳುವರು ಶರಣರ ಕಂಡು ನಮಿಸುವರು ಪರಿ ಸಿರಿಯರಸನಿರುವನೆಂದರಿತ ಮಹಾತ್ಮರ4 ನಗಧರಲೀಲೆಗೆ ನಗುತ ಹಗರಣಹರ ಎಲ್ಲೆಂದಳುತ ಒಗೆದಾಮೋದದಿ ಕುಣಿದಾಡುತ್ತಿಹ 5 ಹೆಜ್ಜಾಜೀಶನು ಕೃಪೆಯಿಂ ಸಜ್ಜನರಂ ಪಾಲಿಸಿದ ಮಜ್ಜನಗೈಯುವ ಪುಣ್ಯ ಚರಿತ್ರರ 6
--------------
ಶಾಮಶರ್ಮರು
ಭಕ್ತಾರ್ತಿ ಹರ ವಿಠಲ | ತೆತ್ತಿಗನ ಪಾಲಿಸೋ ಪ ಮುಕ್ತೀಶ ಕರುಣಾಳು | ಪ್ರಾರ್ಥಿಸುವೆ ನಿನ್ನಾ ಅ.ಪ. ಕರ ಪಿಡಿದು ಸಲಹೋ 1 ಭವ ತಾಪ | ಕಾರುಣ್ಯನಿಧಿಯೇ 2 ಯತಿಗಳ ಕಾರುಣ್ಯ | ಪಾತ್ರನಿರುವನುಯೀತಅತಿಶಯದ ಸೇವೆಗೆ | ಕಾತುರನು ಇರುವಾಮತಿಯಿತ್ತುಸತ್ಪಥಾ | ಪಥರಲ್ಲಿ ನಡಿಸಿವನರತಿಯು ಶ್ರೀ ಹರಿದಾಸ | ಶತ ಪತ್ರದೊಳಗೆ 3 ಪಾದ | ಅದ್ದೂರಿಯಲಿ ಭಜಿಪಶುದ್ಧ ಬುದ್ಧಿಯನಿತ್ತು | ಉದ್ಧರಿಸೊ ಹರಿಯೇ |ಅದ್ವೈತ ತ್ರಯದರಿಪು | ಬುದ್ಧಿಗೇ ಸಿಲುಕಲೀಶ್ರದ್ಧಾಳುವಿನ ಸಲಹೋ | ಶಬ್ಧ ಗೋಚರನೇ 4 ಕಾಮದಾನತಜನವ | ಶ್ರೀ ವರನೆ ಸರ್ವೇಶ ನೀವೊಲಿಯದಿನ್ನಿಲ್ಲ | ಪಾವನ್ನ ಮೂರ್ತೇಭಾವ ಕೋವಿಯುವ ದೇವ | ಭಾವದಲಿ ಮೈದೊಲೊಗೋವಿಂದಾಂಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಭಕ್ತಿಯೆಂಬ ಹೆಣ್ಣ ಶಕ್ತಿಯನ್ನು ನೋಡಿ ಮುಕ್ತಾಶ್ರಯ ಲಕ್ಷ್ಮೀಪತಿಯನ್ನು ಪಾಡಿ ಪ. ಸ್ವಾನಂದ ಪರಿಪೂರ್ಣ ಪರಮ ಮಂಗಲಮೂರ್ತಿ ಶ್ರೀನಿವಾಸಗೆ ಸರ್ವ ಸಂಗವ ಬಿಡಿಸಿ ತಾನಿರುವಲ್ಲಿಗೆ ಹಿಡಿದೆಳತರಿಸಿ ಸಾನುರಾಗದಿ ತನ್ನ ಸಂಗಡಲಿರಿಸಿ 1 ಅಣುರೇಣು ತೃಣಕಾಷ್ಠ ಪರಿಪೂರ್ಣ ಸರ್ವೇಶ ಗಣನೆಯಿಲ್ಲದ ದಿವ್ಯ ಗುಣಗಳುಳ್ಳವನು ಎಣಿಸಲು ಇವಳ ಜನರ ದೋಷಗಳನು ಕ್ಷಣ ಬಿಟ್ಟಗಲದೆ ಇವಳ ಕೂಡಿಹನು 2 ಭೂಧರ ಗಿರಿವರ ಶೋಭಿತ ಮೂರ್ತಿ ಮಾಧವ ಪರಿಹರಿಸುವನು ಭವಾರ್ತಿ ಪಾದ ಪಲ್ಲವಗಳ ನಂಬಿದವರಿಗರ್ಥಿ ಸಾಧಿಪ ಕರುಣಾಳು ಹರಿಯ ಶ್ರೀಕೀರ್ತಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭೂತೇಶನುತ ವಿಠಲ | ಕಾಪಾಡೊ ಇವನಾ ಪ ಓತ ಪ್ರೋತನು ಆಗಿ | ದಾತನೀನಿರುವೇ ಅ.ಪ. ಪಾದ | ದಾಸ್ಯವನೆ ಕಾಂಕ್ಷಿಸುವವಾಲಿಭಂಜನ ರಾಮ | ಪಾಲಿಸೋ ಇವನಾ 1 ತೈಜಸನೆ ನೀನು ಗುರು | ರಾಜರೂಪಿಲಿ ತೋರಿನೈಜೋಪದೇಶವನು | ಪೊಂದುವುದು ಎನುತಾ |ಮಾಜದಲೆ ಪೇಳಿರಲು | ವಾಜಿವದನನೆ ನಿನ್ನಬ್ರಾಜಿಷ್ಣು ನಾಮದಲಿ | ಅಂಕನವ ಗೈದೇ 2 ದಾಸ ದಾಸರ ಗುಣಾ | ದಾಸನೆಂದೆನಿಸುತ್ತಕೇಶವನ ಗುಣನಾಮ | ಸೂಸಿಕೊಂಡಾಡಿ |ಲೇಸಾದ ಆನಂದ | ಭಾಸಿಸುತ್ತಲಿ ಗುಹಾ ವಾಸನನು ಕಾಂಬಂಥ | ಮಾರ್ಗದನು ಆಗೋ 3 ಮಧ್ವಮತ ತತ್ವಗಳು | ಬುದ್ಧಿಯಲ್ಲಿ ಸ್ಛುರಿಸುತ್ತಶುದ್ಧಭಾವದಿ ಮನನ | ಸಿದ್ಧಿಸುತಲಿವಗೇ |ಅದ್ವೈತ ತ್ರಯಜ್ಞಾನ | ಶ್ರದ್ಧೆ ಭಕ್ತಿಯ ಉದಿಸೆಮಧ್ವರಮಣನೆ ಹರಿಯೆ | ಉದ್ಧಾರ ಮಾಡೋ4 ಸರ್ವಜ್ಞಾ ಸರ್ವೇಶ | ಸರ್ವಾಂತರಾತ್ಮಕನೆದರ್ಪಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೇ |ದುರ್ವಿ ಭಾವ್ಯನೆ ಗುರು | ಗೋವಿಂದ ವಿಠ್ಠಲನೆಅವ್ಯಾಜ ಕರುಣನಿಧಿ | ಭಿನ್ನಪವ ಸಲಿಸೋ5
--------------
ಗುರುಗೋವಿಂದವಿಠಲರು
ಭೂಮಿಸುರರ ಘನ | ಸ್ತೋಮವಂದಿತ ಮಹಾ ಮಹಿಮಾ ಮಹಾಮಹಿಮ ಸಜ್ಜನ - ತತಿ - ಪ್ರೇಮಾ ಪ ಕಾಮಧೇನು ಸುಕಲ್ಪತರು ಚಿಂ - ತಾಮಣಿಯು ತಾನೆನಿಸಿ ಸರ್ವದ ಕಾಮಿತಾರ್ಥವನಿತ್ತು ಮೆರೆವನು ಈ ಮಹಿಯೊಳು ಸಾರ್ವಭೌಮನು ಅ.ಪ ಪ್ರಾಣತನಯ ವಿಷ್ವಕ್ಸೇನ ಶ್ರೀಹರಿ ಶಾಪದಿಂದ ಶಾಪದಿಂದ ಭೂತಳದಲಿ ಬಂದಾ ಮಾಣವಕ ಪ್ರಹ್ಲಾದನೆನಿಸಿ - ಪ್ರಾಣದೇವಾವೇಶ ಶೇಷನು ಕ್ಷೋಣಿಯೊಳು ಶಿರಿವ್ಯಾಸನೆನಿಸೀ ಮಾಣದಲೆ ಗುರುರಾಘವೇಂದ್ರನು 1 ಅಲವಬೋಧರ ಮತ - ಜಲಧಿಚಂದಿರನೆನಿಪನೀತಾ ನೆನಿಪನೀತ ಲೋಕದಿ ಬಹು ಖ್ಯಾತಾ ಲಲಿತ ವೃಂದಾವನದಿ ನಿಂತು ಹಲವು ಭಕುತರಭೀಷ್ಠಕಾರ್ಯವ ಸಲಿಸಿ ಸುಜನರ ಸಲಹೊಗೋಸುಗ ಸುಲಭತರನಾಗಿರುವ ಗುರುವರ 2 ಕಿಟಜಸರಿದ್ವರ - ತಟದಿ ಸಂತತ ತಾನಿರುವ ತಾನಿರುವ ಭಕ್ತರು ಕರೆಯೆ ಬರುವಾ ಧಿಟ ಸುಭಕ್ತರ ಬಿಡದೆ ತಾನು ಪ್ರ - ಕಟನಾಗಿ ಮಹಿಮೆ ತೋರುವ ಧಿಟ ಗುರು ಜಗನ್ನಾಥ ವಿಠಲನ ಭಟಜನಾಗ್ರಣಿ ಎನಿಸಿ ಮೆರೆವ 3
--------------
ಗುರುಜಗನ್ನಾಥದಾಸರು
ಮರೆತೆಯೆನೋ ರಂಗಾ ಮಂಗಳಾಂಗತುರು-ಕರ ಕಾಯ್ವಲ್ಲಿ ತೊಂಡನಾಗಿದ್ದೆನ್ನ ಪ ಕೋಲು ಕೈಯಲ್ಲಿ ಕೊಳಲು ಜೋಲುಗಂಬಳಿ ಹೆಗಲಮ್ಯಾಲೆ ಕಲ್ಲಿ ಚೀಲ ಕೊಂಕಳಲ್ಲಿಕಾಲಕಡಗವನಿಟ್ಟು ಕಾಡೊಳಿಹ ಪಶುಹಿಂಡಲಾಲಿಸುವ ಬಾಲಕರ ಮ್ಯಾಳದೊಳಗಿದ್ದೆನ್ನ1 ಮಣಿ ಕÀವಡÉಯನು ಕಾಡೊಳಿಹ ಗುಲಗಂಜಿಸಲ್ಲದೊಡವೆಯ ನೀನು ಸರ್ವಾಂಗಕೆಅಲ್ಲೆಸೆಯೆ ಧರಿಸಿ ನವಿಲಗರಿಗಳ ಗೊಂಡೆಅಲ್ಲಿ ಗೊಲ್ಲರ ಕೂಡ ಚೆಲ್ಲಾಟ ಮಾಡುತಲಿ 2 ಸಿರಿದೇವಿ ಬಂದು ಸೇರಿದ ಬಳಿಕ ಲೋಕದಲಿಸಿರಿ ಅರಸನೆಂದು ಸೇವಕರರಿವರೋಶರಣಾಗತರ ಪೊರೆವ ಶ್ರೀರಂಗವಿಠಲಯ್ಯನರಸಿಂಗ ನೀನಿರುವ ಪರಿಯು ಮುಂದಿನ ಸಿರಿಯು3
--------------
ಶ್ರೀಪಾದರಾಜರು
ಮಾಡಬೇಕೆಲೋ ಭಜನೆ ಮಾಡಬೇಕೆಲೊ ಪ ಮಾಡಬೇಕು ಭಜನೆ ಮನದಿ ಕೂಡಬೇಕು ಪ್ರಣವ ಘನದೀ ಈಡ ಪಿಂಗಳ ಯಿದರೊಳಗಿರುವ ನಾಡಿ ಭೇದಗಳನು ತಿಳಿದೂ 1 ಆರು ಮೂರುಯೆಂಬೊ ದಾರಿ ಮೀರಿನೋಡುಯಿರುವ ಶಿಖರ ತೋರಿಯಾಡುವಂಥಾ ಘಂಟೆ ಭೇರಿನಾದಗಳನು ತಿಳಿದೂ 2 ವರದ ರಂಗನಿರುವನರಿಯೊ ಧರಣಿ ಕನಕಪುರಿಯ ಕೋಟೆ ಗುರುವು ತುಲಶೀರಾಮದಾಸ ರರಿತುಯಿತ್ತ ಚರಣ ಭಜನೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಮಾನವ ವನಜನಾಭನೆ ಕಾಯುವ ಪ ಅಣುರೇಣು ತೃಣಕಾಷ್ಠ ಕೊನೆ ಮೊದಲುಗಳೊಳ- ವನ ನೋಡಿ ಹರುಷಿಸದೆ ಅ.ಪ ಈ ಶರೀರದೊಳಗೆ ಶ್ರೀ ತರುಣಿ ಸಹಿತ ಅವ- ನಿರುವದು ಗುರುಮುಖದೊಳರಿಯದೆ ಬರಿದೆ 1 ಇಂದ್ರಿಯಂಗಳಿಗೆ ಬ್ರಹ್ಮೇಂದ್ರಾದಿ ಸುಮನಸ ವೃಂದವಿರುವುದು ಗೋವಿಂದನೆ ದಣಿ 2 ಒಳಗೆ ಗುರುರಾಮವಿಠಲ ಕೊಡುವನು3
--------------
ಗುರುರಾಮವಿಠಲ
ಯಾಚಿಸುವೆನು ನಿನ್ನನಿದಕೆ ಕರುಣಸಾಗರ ಗಮನ ಜಗತ್ಪಾಲ ಪ್ರಭುವರ ಪ ದೈನ್ಯರಾಹಿತ್ಯ ರಹಿತ ಜಾಡ್ಯರಹಿತವು ಪಾದ ಕಮಲರತಿ ಸದಾವಕಾಲವು 1 ಪ್ರಭುವೆ ನಿನ್ನ ಭೃತ್ಯನಾನಾದಿಕಾಲದಿ ಅಭಯವಿತ್ತು ಪಾಲಿಸೆನ್ನ ಹೇ ದಯಾನಿಧೆ 2 ತುಷ್ಟನಾದರೇನುರುಷ್ಟನಾರೇನೊಲೊ ಇಷ್ಟದೈವ ನಿನ್ನ ಹೊರತು ಗತಿಯ ಇಲ್ಲೆಲೊ 3 ತುಷ್ಟನಾದ ಬಳಿಕ ನೀನೆ ಹೇ ಕೃಪಾಕರ ಬಿಟ್ಟುನಿನ್ನ ಭಜೀಸಲ್ಯಾಕೆ ಯಿತರಕಾಯ್ವರ 4 ನೀನೆ ರೋಷವನ್ನು ತಾಳೆ ಸುಜನಬಂಧುವೆ ದೀನನನ್ನು ಕಾಯ್ವರಾರು ನೀನೆಯಲ್ಲವೆ 5 ದೋಷ ಕ್ಷಮಿಸುವಲ್ಲಿ ನಿನ್ನ ಪೋಲ್ವ ಅರಸರು ದೇಶಸರ್ವಗಳಲಿ ಪುಡುಕಲಲ್ಲೆ ದೊರಕರು 6 ಎನ್ನಸರಿ ಕೃತಘ್ನ ವಂಚನೀಯ ಮಾಳ್ಪನ ವನ್ನಜಾಭವಾಂಡದೋಳಾವಲ್ಲಿ ಕಾಣೆನಾ 7 ದೀನ ದಾಸ ನಿನಗೆ ನಾನು ಹೇ ಜಗತ್ಪತೆ ಮಾಣದೆಲ್ಲಿರಲ್ಲಿ ತೋರಿ ಪ್ರೇಮ ಸಾಮ್ಯತೆ 8 ಎನ್ನ ವಿಷಯ ಭಯವು ನಿನಗೆ ಲಕ್ಷವಾವುದು ಮನ್ನಿಸೆನ್ನ ಪೊರೆವ ಸರ್ವಭಾರ ನಿನ್ನದು 9 ಈಶಪೂರ್ಣಕಾಯ ನಿನಗಸಾಧ್ಯವಾವುದು ಆಶೆಯನ್ನದಾವಘನವು ನಿನಗೆ ತೋರ್ಪುದು 10 ದಾಸನಾಶೆಪೂರ್ತಿಸಲ್ಕಾಲಸ್ಯವುಚಿತವೋ? ಅಶಿಶಿಸುವನು ದಾಶಗೈವುದೇನು ನೀತವೋ? 11 ಲೋಕನಾಥ ಕರುಣ ಪೂರ್ಣನೇ ಪರಾತ್ಪರ ಯಾಕೆ ಯೊನ್ನೊಳಿನಿತು ನೀನು ನಿರ್ದಯಾಪರ 12 ಗರವತಾಯಿತನನುಜಗೀಯೆ ಅವುದೋಗತಿ ತರುಳನಲ್ಲಿ ಕರುಣಿಸುವದು ಕೃಷ್ಣ ಮೂರುತಿ 13 ದಾತ ಜ್ಞಾತನು ನಿನ್ನ ವಿನಹಾಭಿಷ್ಟಫಲದ ಕರ್ತೃ ಆವನು 14 ಲಕ್ಷ್ಮಿಪತಿಯ ಪೋಲ್ಪೋದಾರ ಸುಗುಣ ಶೀಲನ ಈಕ್ಷಿಸಲ್ಕೆ ಜಗದೊಳಾರನೆಲ್ಲಿ ಕಾಣೆನಾ 15 ನಿನ್ನ ಔದಾರ್ಯ ಸರ್ವರಲ್ಲಿ ಸಾಮ್ಯವು ಎನ್ನೊಳಿನಿತ್ತು ನಿನ್ನದ್ಯಾಕೆ ಕಾರ್ಪಣ್ಯವು 16 ಆರ್ತಬಂಧುವೆಂದು ನಿನಗೆ ಶರಣುಬಂದೆನು ಸಾರ್ಥಕವನು ಮಾಡುವಿಯೊ ಜರಿದೆ ಬಿರುದನು 17 ದೀನ ಬಂಧು ಕರುಣಸಿಂಧು ಸುಹೃದ್ಬಾಂಧವ ಹೀನ ಭವಾರ್ಣವದಿ ಮಗ್ನನಿರುವೆ ಭೂಧವ 18 ತಾರಿಸೈ ಭವಾಬ್ದಿಯಿಂದ ಇಂದಿರಾವರ ಸೂರಿಜನರ ಸಂಗವೆನ್ನಗೀಯೋಗಿರಿಧರ19 ಶ್ರೀನೃಸಿಂಹ ಸತತ ನೀನು ಸದಯ ಮೂರುತಿ ದೀನ ನನ್ನೊಳ್ಯಾಕೆ ನಿರ್ದಯವ ತೋರುತಿ 20 ಸಾಧುಗಳು ನಿರ್ಗುಣಿಗಳಲ್ಲಿ ದಯವÀ ಮಾಳ್ಪರು ಸಾದರದಲಿ ಸರ್ವರಲ್ಲಿ ಸದಯರಿಪ್ಪರು 21 ಧನ್ಯಜನಕೆ ನಿನ್ನನೀವುದೇನು ಅಚ್ಚರ ದ್ಯೆನ್ಯ ಬಡುವನನ್ನು ಪಾಲಿಸುವದು ಪರತರ 22 ಚಂದ್ರಚಾಂಡಾಲಗೃಹದ ಮೇಲೆಯಾದರು ಸುರತರು 23 ಈತೆರ ಶ್ರೀ ಪತಿಯೆ ಎನಗೆ ಪ್ರೀತನಾಗೆಲೋ ನೀತವಾಗಿ ಕರುಣದಿಂದ ಕರವಪಿಡಿಯಲೊ 24 ಪುನಃ ಪುನಃ ನಿನ್ನನಿದನೆ ಬೇಡಿಕೊಂಬೆನಾ ಮನದೊಳು ಪ್ರಸನ್ನನಾಗು ಜನಕಜಾರಮಣ25 ಪಂಚರಾತ್ರಾಗಮೋಕ್ತ ಈಸ್ತುತಿಯನು ವಿನುತ ಶ್ರೀ ರಾಮಚಂದ್ರನು 26 ಮುದದಿ ಮನಸಿನೊಳಗೆ ತಾನೆವದಗಿ ಪೇಳಿದ ಅದನೆ ಶ್ರೀವರದೇಶ ವಿಠಲ ನುಡಿಸಿ ಬರೆಸಿದ 27
--------------
ವರದೇಶವಿಠಲ
ಯಾವಲ್ಲಿ ಅಡಗಿರುವಿ ಯಾವಲ್ಲಿ ಹುಡುಕಲಿಭಾವದ ಮೂಲೆಯ ರಾವನು ಬಿಟ್ಟು ಅ.ಪ. ಕಣ್ಣುಮುಚ್ಚಾಲೆಯಾಟ ಬೇಡಯ್ಯ ಈಬಣ್ಣದ ನುಡಿಯ ಬೇಟಕಣ್ಣು ಮುಚ್ಚಲು ಕೊಟ್ಟಿ ಟಣ್ಣನೆ ಜಿಗಿದೋಟಅಣ್ಣಾ ಹುಡುಕಿ ಹುಡುಕಿ ಹಣ್ಣಾಗಿ ಹೋದೆನೋ 1 ಎಲ್ಲೆಲ್ಲೂ ತುಂಬಿರುವೆ ಹುಡುಕಲು ನೀನೆಲ್ಲೆಲ್ಲ್ಯೂ ಸಿಗದಿರುವೆಕ್ಷುಲ್ಲಕನೆನ್ನನ್ನು ಚಲ್ಲದೆ ನನ್ನೆದುರುಚೆಲ್ವರೂಪದೆ ಬಂದು ನಿಲ್ವುದನ್ನು ಬಿಟ್ಟು 2 ಕಡುಕಷ್ಟ ಹುಡುಕುವದು ಹಿಡಿದು ಹಿಡಿದು ತಂದುಒಡಲಲ್ಲಿಡಲು ಮತ್ತೇಒಡನೆ ನುಸುಳಿಕೊಂಡುಬಿಡವಲೋಡೋಡಿ 3 ಇದೀಗ ನಡೆದು ತಂದು ನೆನೆಯಲು ನಿನ್ನಸದಾವಕಾಲಕೆಂದು ಹೃದಯದ ಗವಿಯೊಳುಮುದದಿ ಕೂಡಿಸಿ ಮೇಲೆಬದಿಗೆ ಕಾವಲವಿಟ್ಟು ಮನವ ಟೊಣೆದು ನೀ 4 ಬದರಿ ಕಾಶಿ ಕಂಚಿಯೋ ನೀನಿರುವುದುಮಥುರೆ ಪಂಢರಪುರವೊಪದುಮಾವತಿ ಗಿರಿಯೋ ಉಡುಪಿ ದ್ವಾರಕೆಯೊಗದುಗೋ ನೀ ಹೇಳಯ್ಯ ವೀರನಾರಾಯಣ 5
--------------
ವೀರನಾರಾಯಣ
ರಾಯ ಬಾರೋ ತಾಯಿ ಬಾ ಎನ್ನ ಕಾಯಲು ತ್ವರ ಬಾರೋ ನೀ ಗುರು ಪ ದಿನದಿನಕೆ ಮನಸಿನ ತಾಪವು ಘನವಾಗುವುದನ್ನು ಬಿಡಿಸಲು ಬಾರದು 1 ಅರಸನಾಗಿ ನೀ ಧರೆಯನಾಳಿದಿ ಭರತ ಭೂಮಿಯಲಿ ಅವತರಿಸಿದಿ ಮತಿ-2 ವರಗುಣಮಣಿಯೇ ಕರುಣದ ಖಣಿಯೇ ಶರನಾದವನನ್ನು ಬಿಡಿಸೋ ಬಾ ಗುರು 3 ಬಾಲ್ಹೀಕನೇ ಬಾ ಪ್ರಲ್ಹಾದನೇ ಬಾ ತಲ್ಲಣಿಸುವೆ ಯತಿ ಆಗಿ ಬಂದ ಗುರು 4 ಸುಮ್ಮನಿರುವೆ ಮತ್ತೊಮ್ಮೆ ಮರಗುವೆ ಒಮ್ಮನಸಿÀಲ್ಲವೋ ಸನ್ಮುಖನಾಗೈ 5
--------------
ಹನುಮೇಶವಿಠಲ
ರುಕ್ಮಿಣೀಶ ವಿಠಲ | ಕಾಪಾಡೊ ಇವನಾ ಪ ವಿಖನ ಸಾಂಡದ ದೊರೆಯೆ | ಅಖಳಂಕ ಮಹಿಮಾ ಅ.ಪ. ಸುಪಥದಲಿ ನಡೆವಂತ | ನಿಪುಣತರ ನಿವನೀಗೆಉಪದೇಶವಿತ್ತಿಹೆನೊ | ಅಪವರ್ಗದಾತಾ |ಕೃಪಣ ವತ್ಸಲ ನಿನ್ನ | ಕೃಪೆ ದೃಷ್ಟಿಯಲಿ ನೋಡಿಅಪೇಕ್ಷಿತವನಿತ್ತು | ನೀ ಪೋಷಿಸಿವನಾ 1 ಜ್ಞಾನವಿಜ್ಞಾನದಲಿ | ನೀನಿರುವ ತತ್ವವನುನೀನಾಗಿ ತಿಳಿಸುತ್ತ | ಕಾಪಾಡೊ ಹರಿಯೇ |ಶ್ರೀನಿವಾಸನೆ ದಯಾ | ಪೂರ್ಣ ನೀನಾಗುತ್ತಜ್ಞಾನಭಕ್ತಿಯನಿತ್ತು | ಕಾಪಾಡೊ ಹರಿಯೆ 2 ಎಲ್ಲೆಲ್ಲು ನೀನಿರುವೆ | ಸೊಲ್ಲನ್ನು ಅನುಭವಕೆಉಲ್ಲಾಸದಲಿ ಇತ್ತು | ಬಿಲ್ಲಾಳು ಎನಿಸೋಬಲ್ಲಿದರ ಕೂಟದಲಿ | ಬಿಲ್ಲಿ ನಂತರಿಸುತ್ತಮಲ್ಲಮರ್ದನಕೃಷ್ಣ | ಕಾಪಾಡೊ ಇವನ 3 ಸತಿಸುತರು ಹಿತರಲ್ಲಿ | ವ್ಯಾಪ್ತ ನೀನೆಂದೆಂಬಮತಿಯನೇ ಕರುಣಿಸುತ | ಅತಿಶಯವ ತೋರೀಮತಿಮತಾಂವರರಂಘ್ರಿ | ರತಿಯನ್ನೆ ಕರುಣಿಸುತಮತಿವಂತ ನೆನಸಿವನ | ಮಾರುತನ ಮತದೀ 4 ದೇವತವ ಮಹಿಮೆಗಳು | ಭಾವದಲಿ ಪೊಳೆಯಲ್ಕೆಕೋವಿದರ ಸಂಗವನು | ನೀ ವೊಲಿದು ಈಯೋ |ನೀ ವೊಲಿಯದಿನ್ನಿಲ್ಲ | ಗೋವುಗಳ ಪರಿಪಾಲದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ