ಒಟ್ಟು 127 ಕಡೆಗಳಲ್ಲಿ , 34 ದಾಸರು , 118 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ರಕ್ಷಿಸೊ ನೀನು - ದೇವರ ದೇವ ಪಎನ್ನ ರಕ್ಷಿಸೊ ನೀನು ಯಾದವ ಕುಲಮಣಿಮುನ್ನ ದ್ರೌಪದಿಯಭಿಮಾನ ಕಾಯ್ದ ಕೃಷ್ಣ ಅ.ಪ.ಬಾಲನ ಮೊರೆಯನುಕೇಳಿಕೃಪೆಯಿಂದಪಾಲಿಸಿದೆಯೊ ನರಸಿಂಹ ರೂಪದಿಂದ 1ಪಾಷಾಣಚರಣದಿ ಯೋಷಿದ್ರೂಪವ ಗೈದೆದೋಷ ಸಂಹಾರ ನಿರ್ದೋಷಗುಣಪೂರ್ಣನೆ 2ಇನಕುಲಾಂಬುಧಿ ಚಂದ್ರ ಘನಶುಭಗುಣಸಾಂದ್ರಸನಕಾದಿ ಮುನಿವಂದ್ಯಪುರಂದರವಿಠಲ3
--------------
ಪುರಂದರದಾಸರು
ಏನಾಯಿತು ರಂಗನೆ ನೋಡಿರಮ್ಮ-ನಿ-|ಧಾನಿಸಿ ಎನಗೊಂದು ಪೇಳಿರಮ್ಮ ಪಪುಟ್ಟಿದಾರಭ್ಯ ಕಣ್ಣ ಮುಚ್ಚನಮ್ಮ-ತಾನು |ಎಷ್ಟಾದರೂ ಮೊಲೆಯುಣ್ಣನಮ್ಮ ||ಸೊಟ್ಟಾದ ಮುಖ ಮೇಲಕ್ಕೆತ್ತನಮ್ಮ-ಹೀಗೆ |ಎಷ್ಟು ಹೇಳಲಿ ಬಾಯ ಮುಚ್ಚನಮ್ಮ 1ಕಾಯಇದ್ದಂತಿದ್ದು ಹೆಚ್ಚಿತಮ್ಮ-ಹೆತ್ತ |ತಾಯಿಯ ಬಲವಿಲ್ಲದಾಯಿತಮ್ಮ ||ನೋಯೆ ನೋಟಕೆಅಬ್ಧಿಬತ್ತಿತಮ್ಮ-ಅವನ |ಬಾಯಿಯೊಳಗೆವಿಶ್ವತೋರಿತಮ್ಮ2ಅತ್ಯಂತ ಮಾತುಗಳನಾಡಿದನಮ್ಮ-ಮುಂದೆ |ಸತ್ಯವು ಕುದುರೆಯನೇರುವನಮ್ಮ ||ನಿತ್ಯನಿರ್ದೋಷಪುರಂದರವಿಠಲ ತನ್ನ-|ಭಕ್ತರ ಸಲಹುವದೇವನಮ್ಮ 3
--------------
ಪುರಂದರದಾಸರು
ಏಳು ವಾರಿಜನೇತ್ರ ಏಳು ಚಿನ್ಮಯಗಾತ್ರಏಳು ಪಾಂಡವಪಾಲ ಏಳುಸಿರಿಭೂಲೋಲಏಳು ಪಾವನಚರಿತ ಏಳೆರಡು ಜಗಭರಿತಏಳು ಯದುಕುಲಲಲಾಮಾ ಪ.ಮೂಡುತಿವೆಅರುಣಕಿರಣೋಡುತಿವೆ ತಮದ ಕುಲಬಾಡುತಿವೆ ತಾರಿನನ ಬೇಡುತಿವೆ ಚಕ್ರವಾಕಾಡುತಿವೆಕೀರಬಲು ಪಾಡುತಿವೆತುಂಬಿನಲಿದಾಡುತಿವೆಖಗಸಮೂಹರೂಢಿಯೊಳು ಮುನಿಜನರು ನೋಡಿ ರವಿಗತ ಹರಿಯಷೋಡಶುಪಚಾರಾರ್ಚನೆ ಮಾಡಿ ಮನದಣಿಯೆ ಕೊಂಡಾಡಿ ಕುಣಿದಾಡಿ ಭವಕಾಡನೀಡಾಡಿವರಬೇಡುತೈದಾರೆ ಗಡ ಹರಿಯೆ 1ವಿಷ್ಣುಪದೆ ವೃದ್ಧನದಿ ಕೃಷ್ಣವೇಣ್ಯಖಿಳ ಸಂಹೃಷ್ಟಿಪ್ರದೆ ಕಾವೇರಿ ಇಷ್ಟದಾ ಯಮುನೆಅಘನಷ್ಟಕಾರಣೆ ಭೀಮೆ ಶಿಷ್ಟಾಂಗೆ ತುಂಗೆವರತುಷ್ಟಿದಾಯಕ ನದಿಗಳುಕೃಷ್ಣ ನಿನ್ನಡಿಯುಗಳ ಸ್ಪøಷ್ಟರಾಗುತಲಿ ಉತ್ಕøಷ್ಟ ಪದ ಪಡೆವೆವೆಂದಷ್ಟ ದಿಗತಟದಿಂದಚೇಷ್ಟಿತ ತರಂಗದಿಂ ಸ್ಪಷ್ಟ ಬಂದಿರೆ ಕರುಣದೃಷ್ಟಿಯಿಂದವರ ನೋಡೈ ಹರಿಯೆ 2ಕೇಶನಾಕೇಶ ಕಕುಭೇಶಾದಿ ಅಮರರಾಕಾಶದಲಿ ದುಂದುಭಿಯ ಘೋಷ ಮೊಳಗಿಸಿದರನಿಮೇಷ ಮುನಿ ವೀಣೆಯುಲ್ಲಾಸದಿಂ ಮಿಡಿಮಿಡಿದು ಧನಶ್ರೀ ಭೂಪಾಳಿಯಿಂದಶೇಷಶಯನಖಿಳ ನಿರ್ದೋಷಗುಣಪೂರ್ಣಸರ್ವೇಶ ಮುಕುಂದ ಭಟಕೋಶನೆಂದವರು ನಿನ್ನಬೇಸರದೆ ಪಾಡುತಿಹರು ಶ್ರೀಶ ಪ್ರಸನ್ವೆಂಕಟೇಶನೆ ಒಲಿದುಪ್ಪವಡಿಸೊ ಹರಿಯೆ 3
--------------
ಪ್ರಸನ್ನವೆಂಕಟದಾಸರು
ಗಣೇಶ ಪ್ರಾರ್ಥನೆ1ಲಂಬೋದರ ಪಾಹೀ ಪಾಹೀ ಜಗದ್ಗುರು|ಶಂಭುನಂದನ ಸುರಸುತ ಪಾದಾ ಪಯೋಗೀಶಾರ್ಚಿತ ಶ್ರೀ ಪಾರ್ವತಿ ಪುತ್ರ ನತಮಿತ್ರಾ |ಆಗಸವಾಳ್ದಮೂಷಕರೂಢಾ ||ನಾಗಶಯನನಪಾದಧ್ಯಾನದಲ್ಲಿಡು ನಿತ್ಯಾ |ಶ್ರೀ ಗಣಪತಿ ನಿನ್ನ ಬಲಗೊಂಬೆ 1ಶ್ರೀವರ ಶ್ರೀರಾಮಚಂದ್ರ ಧರ್ಮರಾಯಾ |ದೇವೇಂದ್ರಾ ನಿನ್ನ ಪೂಜಿಸಿದಾರೋ ||ಕೇವಾಲಾಕಲಿದುರ್ಯೋಧನ ಪೂಜಿಸದೆ ಕೆಟ್ಟಾ |ಶ್ರೀ ವಿಘ್ನೇಶ್ವರ ನಿನ್ನ ಬಲಗೊಂಬೆ 2ದನುಜಾರ ಮೋಹೀಸೂವದಕೆ ಸಂಕಟ ಚೌತಿ |ಮನಿಸೀ ಪೂಜಿಸಿಕೊಂಬೆ ಖಳರಿಂದಾ ||ಮುನಿ ವ್ಯಾಸ ಕೃತ ಗ್ರಂಥಾರ್ಥವ ತಿಳಿದು ಬರೆದಾ |ಗಣರಾಜಾ ನಿನ್ನ ಪಾದಾ ಬಲಗೊಂಬೆ 3ಶಂಬು ಚಕ್ರಾಂಕಿತಾ ಪಾಶಧಾರನೇ ರಕ್ತ |ಅಂಬರಾದ್ವಯ ಭೂಷಾ ನಿರ್ದೋಷಾ ||ಶಂಬರಾರಿಪುಶರಾ ವಿಜತಾಮೃದ್ಭವ ಗಾತ್ರಾ |ಅಂಬಾರಾಧಿಪ ನಿನ್ನ ಬಲಗೊಂಬೆ 4(ಅಂಬೂಜಾಲಯಜಾನೆ ಬಲಗೊಂಬೆ)ಏಕವಿಂಶತಿಪುಷ್ಪಾನ ಮನ ಮೋದಕ ಪ್ರೀಯ |ನೀ ಕರುಣಿಪುದೂ ನಿನ್ನವಾನೆಂದು ||ಸಾಕು ವಿಷಯ ಸುಖಾ ಸುಜನಾರೋಳಾಡಿಸೊ |ಏಕಾದಂತನೆ ನಿನ್ನ ಬಲಗೊಂಬೆ 5ಏನು ಬೇಡುವೊದಿಲ್ಲಾ ಏನು ಮಾಡುವೊಕರ್ಮ|ಶ್ರೀನಿವಾಸನೆ ಮಾಡಿಸುವನೆಂಬೊ ||ಜ್ಞಾನಾವೆ ಯಂದೆಂದಿಗಿರಲಿ ತಾರಶಾಂತ- |ಕಾನುಜಾ ನಿನ್ನ ಬಲಗೊಂಬೆ 6ಪ್ರಾಣಸೇವಕ ಚಾಮೀಕರವರ್ಣ ಗಜಮುಖ |ಪ್ರಾಣೇಶ ವಿಠಲನಾ ಸುಕುಮಾರಾ ||ನೀನೊಲಿದೆಮಗೆ ವಿಘ್ನವ ಪರಿಹರಿಸುತ |ಪೋಣಿಸು ಸನ್ಮತೀ ಬಲಗೊಂಬೆ 7
--------------
ಪ್ರಾಣೇಶದಾಸರು
ಗುರುವರದೇಂದ್ರ ದಯಾಂಬುಧೇ ಶರಣಾಗತ ವತ್ಸಲ ಈಶ |ಚರಣಕಮಲಷಟ್ಪದ ಪಾಲಿಸು ಕಾಷಾಯವಸನಭೂಷಾ ಪದುರ್ಮತಭುಜಗಕುಘರ್ಮ ವಿನಾಯಕಕರ್ಮಬದ್ಧವ್ರತಾ |ಶರ್ಮತ್ರಿಧರ ಪ್ರಿಯ ಧರ್ಮಾಸಕ್ತನೆ ನಿರ್ಮಲ ಶುಭಚರಿತಾ ||ಭರ್ಮ ಸಮಾಂಗ ಅಧರ್ಮ ಶಿಕ್ಷಕರಿಚರ್ಮಾಂಬರ ಪ್ರೀತ |ಕಿರ್ಮೀರಾರಿ ಸುಶರ್ಮ ತೀರ್ಥಸಖಕರ್ಮಂದಿಪ ನಾಥ 1ಶ್ರೀ ಮನೋರಮ ಸು ತ್ರಿಧಾಮದೇವ ಶ್ರೀರಾಮ ಪದಾಸಕ್ತಾ |ಕಾಮಿತ ಫಲದಧರಾಮರವಂದಿತ ಸ್ವಾಮಿ ನಮಿಪ ಭಕ್ತ ||ಶ್ರೀಮಂದಾರಅನಾಮಯ ಸದ್ಗುಣಧಾಮನೆ ಸುವಿರಕ್ತಾ |ಪಾಮರದೂರ ಲಲಾಮ ವದಾನ್ಯ ಮಹಾಮಹಿಮನೆ ಶಕ್ತ 2ಮಾನಿ ಪೂಜ್ಯ ಸುಜ್ಞಾನಿ ಧೀರ ಸದ್ಭಾನುಚಂದ್ರ ಭಾಸ |ದೀನ ಪೋಷಕ ನಿಜಾನುಗ ಪಾಲಕ ಕ್ಷೋಣಿಪ ನಿರ್ದೋಷ ||ಸಾನುರಾಗದಲಿ ಪೋಣಿಸುಸನ್ಮತಿಮೌನಿ ಕುಲಾಧೀಶ |ನೀನಲ್ಲದೆ ಶ್ರೀ ಪ್ರಾಣೇಶ ವಿಠ್ಠಲ ತಾನೊಲಿಯನು ಲೇಶ 3
--------------
ಪ್ರಾಣೇಶದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ಮಂಗಳ ಮಧು ಕೈಟಭಾಸುರ ಮರ್ದನಗೆಮಂಗಳಮದನ ಕೋಟಿ ಲಾವಣ್ಯಗೆ ||ಮಂಗಳ ಜಗದಂತರಂಗ ಕೃಪಾಂಗಗೆಮಂಗಳ ಯದುಕುಲೋತ್ತಮ ಸಾರ್ವಭೌಮಗೆ 1ಶ್ರೀವತ್ಸಲಾಂಛನಗೆ ಸಿರಿದೇವಿಯರಸಗೆಗೋವರ್ಧನೋದ್ಧಾರ ಗೋವಿಂದಗೆ ||ಮಾವ ಕಂಸನ ಕೊಂದಮಕರ ಕುಂಡಲಧರಭಾವಜನಯ್ಯ ಚಿನ್ಮಯ ಮೂರ್ತಿಗೆ 2ಅಂಬುಜನಾಭಗೆ ಅಖಿಳಲೋಕೇಶಗೆಶಂಭು -ಅಜ - ಸುರ - ಮುನಿವಂದ್ಯ ಹರಿಗೆ ||ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳಬೊಂಬೆಯ ಮಾಡಿ ಕುಣಿಸುವ ದೇವಗೆ 3ಸಕಲಗುಣ ಪೂರ್ಣಗೆ ಸರ್ವಸ್ವಾತಂತ್ರ್ಯಗೆಅಕಳಂಕ ಆದಿನಿರ್ದೋಷ ಹರಿಗೆ ||ಭಕುತ ವತ್ಸಲನಿಗೆ ಭವರೋಗ ವೈದ್ಯಗೆನಿಖಿಳಜೀವದಯಾಪರಿಪೂರ್ಣಗೆ4ಪನ್ನಗಶಯನಗೆ ಪಾವನ ಮೂರ್ತಿಗೆಸನ್ನುತಾನಂತ ಸದ್ಗುಣ ಭರಿತಗೆ ||ಎನ್ನೊಡೆಯ ಪುರಂದರವಿಠಲ ರಾಯಗೆತನ್ನ ನಂಬಿದವರ ಸಲಹುವ ಮೂರ್ತಿಗೆ 5
--------------
ಪುರಂದರದಾಸರು
ಜಲಧಿತಕ್ಕದೊ ನಿನ್ನಳಿಯಗೂ ನಿನಗೂ |ಹಲವು ಬಗೆಯಿಂದಲಿ ಪರೀಕ್ಷಿಯನು ಮಾಡಿದರೆ ಪಮೊದಲೆ ತಿಳದಷ್ಟು ನಿನ್ನ ಮಹತ್ಮಿ ವರ್ಣಿಸುವೆ |ತುದಿಗಂಡು ಬಲ್ಲೆನೇ ಅಧಮ ನಾನೂ ||ಎದುರಿಗಂಬುವದಾಡಿಕೊಂಡ ಬಗೆ ಬ್ಯಾರೆಲ್ಲೀ |ಮುದದಿಂದ ದಯಮಾಡಿ ಕೇಳೊ ರತ್ನಾಕರನೇ 1ನಿನ್ನಿಂದ ಹುಟ್ಟಿಹುದು ವಿಷವು, ಗುರುವಿನ ಪತ್ನಿ |ಯನ್ನು ಸ್ವೀಕರಿಸಿದನು ನಿನ್ನ ಮಗನೂ ||ಘನ್ನತರ ಮಕರಾದಿಗಳು ನಿನ್ನ ಪರಿವಾರ |ಇನ್ನೆಷ್ಟು ಪೇಳಲಿ ಚರಿತ್ರ ಪಾರಾವಾರ 2ನಿನ ಒಡಲಿಗೆಷ್ಟಾದರನ್ನ ಸಾಕೆನಿಸದೂ |ದಣಿದು ಬಂದವರಿಗಾಶ್ರಯವು ಕಾಣೇ ||ಉಣಲಿಕ್ಕೆ ಅನ್ನೆಂಬದೆಂಟನೆ ರಸದಂತೆ |ಘನಖ್ಯಾತಿ ದೂರದಲಿ ಬಳಿಗೆ ಬರಲಿಂತಿಹದು 3ಪ್ರೀತಿಯಂ ಬಂದವರು, ಗ್ರಹಣ ವೈಧೃತಿ ವೇತೀ |ಪಾತದಲಿ ನಿನ ದರುಶನಾಗಬೇಕೂ ||ಭೂತ ಬಡದವರಂತೆ ನಿನ್ನ ಕಲ್ಲುಗಳಿಂದ |ಘಾತಿಸಲಿ ಬೇಕು ನೋಡಲ್ಕೆ ಬಹು ಸೋಜಿಗವು 4ತುಳಿದದಕೆ ಹಿಗ್ಗಿದಿಯೋ ಬಹುಮಾನಿ ನೀನೆಲವೊ |ಲಲನಿ ಹಡದೇಳು ಶಿಶುಗಳ ಕೊಂದಳೂ ||ಬಲುಭಂಟಹಿರಿಯಮಗಗರಸುತನ ಕೊಡಲಿಲ್ಲ |ಇಳಿಯೊಳಗೆ ನೀ ಮಾಡಿದನ್ನ್ಯಾಯಕೆಣಿಯುಂಟೆ 5ಸತಿಸಂಗ ಬಿಡಲೊಲ್ಲಿ ಪರ್ವಕಾಲಗಳಲ್ಲಿ |ಸುತಗೆ ಕಡಿಮೆದರಿಂದೆ ಆದಿ ಹ್ಯಾಗೊ ||ಪತಿವ್ರತಾ ಮಗಳಾದಳೊಂದೆ ಸುಗುಣದರಿಂದೆ |ಕ್ಷಿತಿಯೊಳನವರತ ಪೂಜಿಸಿಕೊಂಬಿ ಜನರಿಂದ 6ಜಾಮಾತನಿಗೆ ಇಹವು ಮುಖವು ಹತ್ತೊಂಬತ್ತು |ಆ ಮಧ್ಯ ಗಜಲಪನದಂತೆ ಒಂದೂ ||ಭೂಮಿಯೊಳಗಾಶ್ಚರ್ಯ ತಾನೆ ಮಕ್ಕಳ ಪಡೆವ |ಈ ಮಗಳು ಬಹುಸುಖವ ಬಡುವಳಿವನಿಂದಲ್ಲಿ 7ಬೆರಳು ಚೀಪುವನೋಡುಸುಳ್ಳಲ್ಲ ದಾನ |ಪುರುಷ ಬದುಕುವ ಚೋರತನದಿ ಜಾರಾ ||ತರುಣಿಯಾಗಿದ್ದ ನಿನ ಬಳಿಯಲ್ಲಿ ನೀ ಬಲ್ಲಿ |ತುರುಗಾಟವ ಕೊಡಲಿ ಕೊಂಡಡವಿಯೊಳಗಿರುವ 8ಗುರುಸ್ವಾಮಿ ಪಿತ ಬ್ರಹ್ಮ ವಂಶದ್ರೋಹಿಗಳವನ |ಪರಿವಾರ ಮಕ್ಕಳಿಗೆ ಮಾವನಾದಾ ||ಉರುಗ ಶಯನಂಡಜಾಧಿಪ ವಹನ ನೀಲಾಂಗ |ಅರಿತನೃಪಋಷಿಗಳೊಳಗೊಬ್ಬರಿಗ್ಯು ಮಗನಲ್ಲ 9ಕುಲಸೂತ್ರವಿಲ್ಲ ಒಂದೇ ರೂಪನಲ್ಲ ನಿ- |ಶ್ಚಲನಲ್ಲ ವತಿ ಕಠಿಣ ವಕ್ರವದನಾ ||ಬಲು ಕೋಪಿ ತಿರದುಂಬ ಸ್ತ್ರೀಯರಿಬ್ಬರ ಕೊಂದ |ಅಲವಜಾರನು, ಬತ್ತಲಿರುವ, ಕಲಹಕೆ ಪ್ರೀಯ 10ಕೊಟ್ಟೆಲ್ಲ ಅವನಿಗೀ ಕನ್ನಿಕಿಯ ಸವತಿಯರು |ಎಷ್ಟೋ ಮಲಸುತರಿಹರದಕೆ ದಶ ಮಡೀ ||ಸಿಟ್ಟಾಗ ಬ್ಯಾಡವನ ವಾರ್ತಿ ಕೇಳಲು ಜನರು |ಬಿಟ್ಟು ಸಂಸಾರವೆಂದಿಂದಿಗೊಲ್ಲದಿಹರೂ 11ನಿನ್ನ ಮಗಳವನಿತ್ತವನ ಮಗಳ ಮದಿವ್ಯಾದಿ |ಕನ್ಯ ವಿಕ್ರಯ ಪರಸ್ಪರವೆನಿಸಿತೂ ||ಇನ್ನೇಸೊ ನಿಮ್ಮ ನಿಮ್ಮಲ್ಲಿದ್ದ ನಡತಿಗಳು |ಅನ್ಯರಿದುಕೇಳಿಭಜಿಸರೊ ಶುದ್ಧ ಭಕುತಿಯಲೀ 12ಏನಾದರೇನು ಶ್ರೀ ಪ್ರಾಣೇಶ ವಿಠಲನಿಗೆ |ನೀನೆಗತಿನಿರ್ದೋಷ ವಸ್ತುವೆಂದೂ ||ಶ್ರೀನಳಿನಭವಮುಖರುನಿತ್ಯವಂದಿಸುತಿಹರೊ |ನೀನವನ ಮಾವನಾದಿನ್ನು ಪೂಜಿತನಲ್ಲೆ 13
--------------
ಪ್ರಾಣೇಶದಾಸರು
ತಪ್ಪು ನೋಡದೆ ಬಂದೆಯಾ ನನ್ನ ತಂದೆಯೆಅಪ್ಪ ತಿರುವೆಂಗಳೇಶನೆ ನಿರ್ದೋಷನೆ ಪ.ಆಪಾದಮೌಳಿ ಎನ್ನೊಳುಅಘಬಹಳಶ್ರೀಪತಿ ಕ್ಷಮಿಸಿ ಕಾಯಿದೆಯ ಉದಧಿಶಯ್ಯಾ 1ಜಗದಘಹರನೆಂಬುದು ನಿನ್ನ ಬಿರುದುತ್ರಿಗುಣಾತೀತನೆ ರಾಮನೆ ಗುಣಧಾಮನೆ 2ಇನ್ನೆನ್ನ ಕಲುಷವಾರಿಸೊ ಭವತಾರಿಸೊ ಪ್ರಸನ್ನ ವೆಂಕಟರಮಣ ಭಯಶಮನ 3
--------------
ಪ್ರಸನ್ನವೆಂಕಟದಾಸರು
ನಂಬಿದೆ ನಿನ್ನ ಗಣೇಶ ಜಗ-ದಂಬಿಕಾತನಯ ವಿಶ್ವಂಭರದಾಸ ಪ.ಲಂಬೋದರ ವಿಘ್ನೇಶ ಶರ-ಣೆಂಬುದು ಸುರನಿಕುರುಂಬ ಮಹೇಶ ಅ.ಪ.ತರುಣಾದಿತ್ಯಪ್ರಕಾಶ ನಿನ್ನಶರಣಾಗತನಾದೆ ಮೋಹನ ವೇಷಸುರುಚಿರಮಣಿಗಣಭೂಷ ಜಗದ್ಗುರುವೆ ಗುಹಾಗ್ರಜ ಪೊರೆಯೋನಿರ್ದೋಷ1ಸಂತಜನರ ಮನೋವಾಸ ಮೋಹಭ್ರಾಂತಿಯಜ್ಞಾನಧ್ವಾಂತವಿನಾಶಶಾಂತಹೃದಯ ಸುಗುಣೋಲ್ಲಾಸ ಏಕದಂತ ದಯಾಸಾಗರ ದೀನಪೋಷ 2ಲಕ್ಷ್ಮೀನಾರಾಯಣನೆ ವ್ಯಾಸಗುರುಶಿಕ್ಷಿತ ಸುಜ್ಞಾನ ತೇಜೋವಿಲಾಸಅಕ್ಷರಬ್ರಹ್ಮೋಪದೇಶವಿತ್ತುರಕ್ಷಿಸು ದನುಜಾರಣ್ಯಹುತಾಶ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನೀ ಕರುಣಿಸೊ ವಿಠಲ ನಮ್ಮಸಾಕೊ ಪಂಡರಿ ವಿಠಲ ಪ.ದೋಷಿಗಳೊಳಗೆ ಹಿರಿಯನು ನಾ ನಿರ್ದೋಷಿಗಳರಸನೆ ವಿಠಲಸಾಸಿವೆಯಷ್ಟು ಭಕುತಿಯನರಿಯೆನುಶೇಷಶಯನ ಶ್ರೀ ವಿಠಲ 1ಭವಸಾಗರದೊಳು ಮುಳುಗುವೆ ಸುಮ್ಮನೆಅವಲೋಕಿಸುವರೆ ವಿಠಲನವ ನವ ವಿಷಯಕೆ ಮುಗ್ಗುತಲಿಹ ಮನದವಸರ ಕಾಯೊ ವಿಠಲ 2ತನುಸಂಬಂಧಿಗಳತಿ ಕಾರ್ಯಾರ್ಥಿಗಳ್ಎನಗಾರಿಲ್ಲೊ ವಿಠಲಾಬಿನಗುಮಾನವರನುಸರಣೆಯಲಿದಣಿಸದಿರಯ್ಯ ವಿಠಲ 3ನಿಶಿದಿನಅಶನವಸನಕೆ ಹೆಣಗುವೆಹುಸಿಸಂಗ್ರಹಿಸಿದೆ ವಿಠಲನಿಶಿದ್ಧಗಳಂಜಿಕೆ ಇಲ್ಲವು ನರಕದಗಸಣೆಗೆ ಅಂಜುವೆ ವಿಠಲ 4ಜಾವಕೆ ಮಾಡುವೆ ಸಾವಿರ ತಪ್ಪನುಕಾವದಯಾಂಬುಧಿ ವಿಠಲನಾ ವಡಲ್ಹೊಕ್ಕೆನೊ ಪ್ರಸನ್ವೆಂಕಟಪತಿಜೀವಕೆ ಹೊಣೆ ನೀ ವಿಠಲ 5
--------------
ಪ್ರಸನ್ನವೆಂಕಟದಾಸರು
ನೋಡೆನ್ನೊಳು ಮೂಡಣಾದ್ರಿ ಪ್ರೌಢ ಕೃಷ್ಣ ಕೃಪೆಮಾಡುಚಿತ್ತ ಕಾಡಿತಭಯ ನೀಡು ಕೃಷ್ಣಪ.ಬಾಯೆಂಬರಿಲ್ಲೊ ಎಂಬರಿಲ್ಲ ಕಾಯೊ ಕೃಷ್ಣಫುಲ್ಲಸಾಯಕನ ಗಾಯ ತಪ್ಪಿಸಯ್ಯ ಕೃಷ್ಣ 1ಭೂರಿಜನ್ಮದ ಧಾರೆಯಳಿಯೊಶೌರಿಕೃಷ್ಣಭವವಾರಿಧಿಯ ತಾರಿಸೊ ಉದಾರಿ ಕೃಷ್ಣ 2ದುಷ್ಟಸಂಗ ನಷ್ಟವಾಗಲಿಷ್ಟು ಕೃಷ್ಣಾಮಿತತುಷ್ಟಿನನ್ನ ಕಷ್ಟ ಬಡಿದಟ್ಟು ಕೃಷ್ಣ3ಎಂದು ನಿನ್ನ ಹೊಂದುವೆನೊ ತಂದೆ ಕೃಷ್ಣ ಭದ್ರಮಂದಿರನೆ ಇಂದಿರೇಶ ನಂದ ಕೃಷ್ಣ 4ದಾಸ ದಾಸ ದಾಸನಾ ನಿರ್ದೋಷಿ ಕೃಷ್ಣ ನೀನೆಪೋಷಿಸಯ್ಯ ಪ್ರಸನ್ವೆಂಕಟೇಶ ಕೃಷ್ಣ 5
--------------
ಪ್ರಸನ್ನವೆಂಕಟದಾಸರು
ಪವಮಾನ ರಾಯಾ ಪಾವನ ಕಾಯಾ | ಕಾಯೋದಿವಿಷತ್ಪೂಜಿತ ಕವಿಜನ ಗೇಯ ಪಭಕ್ತವತ್ಸಲ ದೇವ ರವಿತೇಜ | ಸರ್ವೋ-ದ್ರಕ್ತ ಪ್ರಣತ ಜನ ಸುರಭೂಜ||ಶಕ್ತ ಲೋಕೈಕ ಅನಂತಜ |ಭುಕ್ತಿಮುಕ್ತಿದ ದಿತಿಜಾಹಿ ದ್ವಿಜರಾಜ1ದುರಿತಾಂಬುಧಿ ಘಾಗಜ ಕಾಳೀಶ | ಸರ್ವಸುರವಂದ್ಯ ಪದಕಂಜ ನಿರ್ದೋಷಾ ||ಪುರರಿಪುಪಿತ ಪಯೋಧರ ಭಾಸ | ಸಾರೆ-ಗರೆದು ಪೂರ್ತಿಸೊ ಯನ್ನ ಅಭಿಲಾಷಾ 2ಪೌಲಸ್ತ್ಯಾನುಜ ಮಾಠ ರಜ ರಕ್ಷ | ಶ್ರೀ ಗೋ-ಪಾಲನವನೆನೀಸುವದುಪೇಕ್ಷ ||ನೀಲೇಶ ತ(?)ಮಾಡದೆ ತಾ ರಕ್ಷ | ವಂದ್ಯಕಾಲಿಗೆರಗುವೆ ದುರ್ಜನ ಶಿಕ್ಷ3ಮಧುಸಖ ಪಾಲಾನುಜ ಪಾದಾರವಿಂದ |ಮಧುಕರ ದಂಡ ಮೇಖಲ ಧಾರ ||ವಿದುರಾಗ್ರಜ ನಂದನ ಸಂಸಾರಾರಣ್ಯ |ಸುಧನಂಜಯ ವೃಕೋದರ ಸಮೀರ4ಕುಟಿಲರಹಿತ ಋಜುಗಣಾಧೀಶ | ಶ್ರೀ ಧೂ-ರ್ಜಟಿವಂದ್ಯ ಭಕ್ತಿಯಿಂ ಪ್ರಾಣೇಶ ||ವಿಠಲನ್ನ ಭಜಿಸುತ್ತ ಸದ್ಭಾಷ್ಯವನ್ನು |ಪಠನೆ ಮಾಡಿಸೊ ದಯದಿಂದ ನಿಶಾ 5
--------------
ಪ್ರಾಣೇಶದಾಸರು
ಪಾಲಿಸೊಪಾಲನಶೀಲ ಶ್ರೀಲೋಲಪಾಲಿಸೊ ಪಾಲನಶೀಲ ಪ.ಈಶ ಪರೇಶ ನಿರ್ದೋಷ ಸ್ಮಿತಹಾಸ ನಿರಾಶ ಅಘನಾಶ ಘನಶಾಮೆನ್ನಾಶ 1ಮಿತ್ರಜಿತಗಾತ್ರ ಶತಪತ್ರಾಯತ ನೇತ್ರ ಧರಿತ್ರೀಕಳತ್ರ ಶ್ರೀ ಪೋತ್ರಿ ಪವಿತ್ರ 2ಕರುಣಾರಸಾರ್ಣವ ಸ್ವರ್ಣಗಿರಿ ಪೂರ್ಣಶುಭಅರುಣಾಬ್ಜಚರಣ ಪ್ರಸನ್ವೆಂಕಟಭರಣ3
--------------
ಪ್ರಸನ್ನವೆಂಕಟದಾಸರು
ಪ್ರಥಮ ಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪಅಖಿಳಗುಣಆಧಾರ ನಿರ್ದೋಷ ಶ್ರೀರಮಣಜಗದಾದಿ ಮೂಲಗುರು ಅಗುರು ಶ್ರೀ ಹಂಸವಾಗೀಶಸನಕಾದಿ ದೂರ್ವಾಸಾದಿಗಳಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1ಪುರುಷೋತ್ತಮತೀರ್ಥಅಚ್ಯುತಪ್ರೇಕ್ಷರಿಗೆಪುರುಷೋತ್ತ ಮಾರ್ಯರಕರಕಮಲಜಾತವರವಾತಅವತಾರ ಆನಂದತೀರ್ಥರಚರಣಪದ್ಮದಲಿ ನಾ ಶರಣಾದೆ ಸತತ2ಶ್ರೀ ಮಧ್ವ ಆನಂದತೀರ್ಥಕರಅಬ್ಜಜರುಪದ್ಮನಾಭನೃಹರಿ ಮಾಧವಾಕ್ಷೋಭ್ಯಈ ಮಹಾ ಗುರುಗಳು ಸರ್ವರಿಗು ಆನಮಿಪೆಶ್ರೀ ಮನೋಹರ ಪ್ರಿಯರು ಸಂತೈಪರೆಮ್ಮ 3ತ್ರೇತೆಯಲ್ಲಿ ಶ್ರೀ ರಾಮಚಂದ್ರನ್ನ ಸೇವಿಸಲುಸೀತಾ ಪ್ರತಿಕೃತಿಯಲ್ಲಿ ತಾಪೊಕ್ಕವಾತನ್ನೊಲಿಸಿಕೊಳ್ಳ ದವರ್ಗೆಹರಿಒಲಿಯಎಂದು ಜಗಕೆ ತೋರ್ದ ವಾಲಿಯೇ ಇಂದ್ರ 4ವಾತಾವತಾರ ಹನುಮಂತನೇ ದ್ವಾಪರದಿಕೌಂತೇಯ ಭೀಮನು ಅವನಿಗೆಅನುಜಇಂದ್ರ ಅರ್ಜುನನಾಗಿ ಸೇವಿಸಿ ಹನುಮಧ್ವಜಪಾದಮೂಲದಿ ಕುಳಿತ ಕೃಷ್ಣನು ಒಲಿದ5ಅಖಂಡೈಕ ಸಾರಾತ್ಮ ಅನಂತರೂಪಾಭಿನ್ನಶ್ರೀಕೃಷ್ಣ ರಾಮನೇ ಋಷಿವಂಶದಲ್ಲಿಈ ಕುವಲಯದಲ್ಲಿ ಪ್ರಾದುರ್ಭವಿಸಿದ ವ್ಯಾಸಅಕಳಂಕ ಸುಖಜಿತ್ವಪುಷಶ್ರೀಪತಿಯು6ಆಮ್ನಾಯತತಿಪುರಾಣಗಳು ಪೇಳ್ವಂತೆರಮೆಯರಸ ವ್ಯಾಸನ್ನ ಸೇವಿಸಲು ಇಳೆಯೋಳ್ಭೀಮನೇ ಯತಿ ರೂಪದಲ್ಲಿ ಬಂದಿಹನೆಂದುಸುಮನಸರಾಜ ಪುಟ್ಟಿದನು ಪುನಃ7ಹದಿನೆಂಟು ವರುಷಗಳು ಎತ್ತಾಗಿ ತಾನಿದ್ದುಹೊತ್ತು ಮಧ್ವಾಚಾರ್ಯರ ಪುಸ್ತಕಗಳಭಕ್ತಿಯಲಿ ಸೇವಿಸಿ ಮಧ್ವರಾಯರು ಪಾಠಬೋಧಿಸುವದು ಕೇಳ್ದ ವೃಷಭರಾಟ್ ಇಂದ್ರ 8ಆನಂದಪ್ರದ ತತ್ವಬೋಧಕ ಭಾಷ್ಯಾದಿಗಳಆನಂದ ಮುನಿಮಧ್ವ ಬೋಧಿಸಲು ಗ್ರಹಿಸಿವಿನಯದಿ ಕೇಳ್ದರು ಶಿಷ್ಯರು ಟೀಕೆಗಳಗ್ರಂಥಗಳಿಗೆ ಯಾರು ಮಾಡುವುದು ಎಂದು 9ಈ ಗೋರಾಜನೇ ಟೀಕೆಗಳ ಸಂರಚಿಸಿಜಗತ್ತಲ್ಲಿ ಸತ್ತತ್ವ ಶಾಸ್ತ್ರ ಪ್ರಕಟಿಸುವಹೀಗೆಂದು ಶ್ರೀ ಮಧ್ವಾಚಾರ್ಯರಾಜ್ಞಾಪಿಸಲುಮಿಗೆ ಹರುಷದಲಿ ಗೋರಾಟ್ ಶಿರವ ಬಾಗಿದನು 10ಯುಕ್ತ ಕಾಲದಿ ಈ ಗೋರಾಜ ನೇವೆರಘುನಾಥ ದೇಶಪಾಂಡೆ ರುಕ್ಮಾಬಾಯಿಗೆಮಗನಾಗಿ ಜನಿಸಿದನು ಮಂಗಳವೇಢೆಯಲಿಈ ಗ್ರಾಮ ಪಂಢರಪುರದ ಸಮೀಪ 11ಧೋಂಡುರಾಯನು ಎಂಬ ನಾಮದಲಿ ಬೆಳೆದಗಂಡಿಗೆ ಉಪನಯನ ಮದುವೆಯೂ ಆಯ್ತುಹೆಂಡತಿ ಭೀಮಾಬಾಯಿ ಸುಗುಣೆ ಸೌಂದರ್ಯವತಿಚಂಡ ಶ್ರೀಮಂತರ ಮನೆತನದವಳು 12ಒಂದುದಿನ ಧೋಂಡುರಾಯನು ನದೀ ದಡಕೆಬಂದನು ಕುದುರೆಯ ಮೇಲೇರಿಕೊಂಡುಅಂದು ಅಕ್ಷೋಭ್ಯ ಮಠ ಸಂಚಾರ ಕ್ರಮದಲ್ಲಿನಿಂತಿತ್ತು ಮೊಕ್ಕಾಮಾಗಿ ಆಚೆಕಟ್ಟೆಯಲಿ 13ನದೀತೀರ ಕುಳಿತಿದ್ದ ಅಕ್ಷೋಭ್ಯ ತೀರ್ಥರುಎದುರಾಗಿ ನದಿಯಲ್ಲಿ ಆಚೆದಡದಿಂದಕುದುರೆ ಸವಾರನು ವರ್ಚಸ್ವಿ ಯುವಕನುಬೆದರದೆ ಪ್ರವಾಹದಲಿ ಬರುವದು ನೋಡಿದರು 14ಕುದುರೆ ಮೇಲ್ ಅಸೀನನಾಗಿದ್ದ ಯುವಕನುಕ್ಷುತ್ತೃಷೆಶಮನಕ್ಕೆ ಯತ್ನ ಮಾಡುತ್ತಾಉದಕವ ಕೈಯಿಂದ ತುಂಬಿಕೊಳ್ಳದಲೇಎತ್ತಗಳು ಕುಡಿವಂತೆ ಬಾಯಿ ಹಚ್ಚಿದನು 15ಮಾಧವಮಧ್ವರು ಮೊದಲೇ ಸೂಚಿಸಿದಂತೆಇಂದುಆ ಕುರುಹ ಅರಿತು ಅಕ್ಷೋಭ್ಯರುಇದು ಏನು `ಪಶು' ವಂತೆ ಎಂದು ಧ್ವನಿಕೊಟ್ಟರುಹಿಂದಿನ ಜನ್ಮ ಧೊಂಡೋಗೆ ನೆನಪಾಯ್ತು 16ಪ್ರವಾಹದ ನಗಾರಿಯ ಸಮಬಲಿ ಧೋಂಡುವೇಗ ಲೆಕ್ಕಿಸದಲೇ ದಡಕೆ ತಾ ಬಂದುಮುಗಿದಕರಬಾಗಿ ಶಿರ ನಮಿಸಿ ಅಕ್ಷೋಭ್ಯರಆಗಲೇ ಸಂನ್ಯಾಸಕೊಡಲು ಬೇಡಿದನು 17ಗಾಧಿ ಅರ್ಜುನ ಸಮ ಬಲ ರೂಪದಲಿ ತೋರ್ಪಈತ ರಾಯರ ಸುತನಾದರೂ ವೈರಾಗ್ಯಯುತ ಭಕ್ತಿಮಾನ್ ಸುಶುಭ ಲಕ್ಷಣನೆಂದುಹರಿಮಧ್ವ ನಿಯಮಿತ ಅವಗೆ ಕೊಟ್ಟರು ಸಂನ್ಯಾಸ 18ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವಜಯ ಶೀಲ ಹೊಸಯತಿಗೆ ಇತ್ತು ಅಭಿಷೇಕಅಕ್ಷೋಭ್ಯಗುರು ಮಾಡೆ ಗಗನದಿ ಪೂವರ್ಷಜಯ ಷೋಷ ಹರಡಿತು ಪರಿಮಳ ಸುಗಂಧ 19ತಂದೆ ರಘುನಾಥರಾಯನು ಸುದ್ದಿಕೇಳಿಬಂದು ಅಕ್ಷೋಭ್ಯರ ಕಂಡು ಬಲುಕೋಪದಿಂದ ಯಾಕೆ ಸಂನ್ಯಾಸ ಯುವಕಗೆ ಕೊಟ್ಟಿರಿಎಂದು ವಾದಿಸಿದನು ಪುತ್ರ ಮೋಹದಲಿ 20ಪೂರ್ವಧೋಂಡುರಾಯ ಈಗ ಜಯತೀರ್ಥರುತಾವೇ ಸ್ವೇಚ್ಛೆಯಿಂದ ಕೊಂಡರು ಸಂನ್ಯಾಸಈ ವಿಷಯ ತಿಳಕೊಂಡರೂ ಸಹ ರಘುನಾಥಸೇವಕರ ಸಹ ಮಗನ ಕರಕೊಂಡು ಹೋದ 21ರಾಯನು ಮಗನನ್ನ ಗೃಹಸ್ಥ ಚರ್ಯದಲಿರಿಸೆಶಯನಗೃಹದೊಳು ಪತ್ನಿ ಸಹಿತ ಕಳುಹಿದನುಶಯನ ತಲ್ಪದಿ ದೊಡ್ಡ ಸರ್ಪಕಂಡಳು ಯುವತಿಭಯದಿಂದ ಹೊರಬಂದು ಹೇಳಿದಳು ವಿಷಯ 22ತನ್ನಪತಿಧೊಂಡರಾಯನ್ನ ತಲ್ಪದಲಿಕಾಣದೆ ಅವರಿದ್ದ ಸ್ಥಾನದಲಿ ಸರ್ಪಘನಧೀರ್ಘಗಾತ್ರವಿಸ್ತಾರ ಹೆಡೆಯಿಂದಮಿನುಗುತ್ತ ಕುಳಿತಿದ್ದ ವಿವರ ಪೇಳಿದಳು 23ರಘುನಾಥರಾಯನು ಹರಿಚಿತ್ತ ಇದು ಎಂದುಮಗನ ಪ್ರಭಾವವ ಅರಿತು ತ್ವರಿತದಲಿಅಕ್ಷೋಭ್ಯರಲಿ ಹೋಗಿ ಶಿಷ್ಯನ್ನ ಒಪ್ಪಿಸಿಬಾಗಿ ಶಿರ ಸನ್ನಮಿಸಿ ಕ್ಷಮೆಯ ಬೇಡಿದನು 24ವಂಶ ವೃಧ್ಧಿಗೆ ಮತ್ತೂ ಪುತ್ರಪುಟ್ಟವನೆಂದುದೇಶಪಾಂಡೆಯ ಅನುಗ್ರಹಿಸಿ ಕಳುಹಿಸಿದಶಪ್ರಮತಿ ಪೀಳಿಗೆಯೊಳು ಅಕ್ಷೋಭ್ಯಮುನಿಗ¼ Àುಶಿಷ್ಯ ಜಯತೀರ್ಥರಿಗೆ ಸ್ಥಾನ ನೇಮಿಸಿದರು 25ಶ್ರೀ ಮದ್ವಾಚಾರ್ಯರು ಬೋಧಿಸಿ ತೋರಿಸಿದಶ್ರೀ ರಮಾಪತಿ ಪೂಜಾ ಸತ್ತತ್ವವಾದದುರ್ಮತ ಖಂಡನದ ರೀತಿಯ ಜಯಾರ್ಯರಿಗೆಸಮ್ಮುದದಿ ಅರುಹಿದರು ಅಕ್ಷೋಭ್ಯ ಗುರುವು 26ಶಕ ವರುಷ ಹನ್ನೊಂದು ನೂರು ಅರವತ್ತೇಳುಮಾರ್ಗಶಿರ ಕೃಷ್ಣ ಪಂಚಮಿ ವಿಶ್ವಾವಸುವಲ್ಲಿಅಕ್ಷೋಭ್ಯ ತೀರ್ಥರ ಪೀಠ ಆರೋಹಿಸಿಶ್ರೀಕರಗೆ ಪ್ರೀತಿಕರ ಪಟ್ಟವಾಳಿದರು 27ದೇವತಾರ್ಚನೆ ಶಿಷ್ಯ ಉಪದೇಶ ಮಾಡುತ್ತದಿಗ್ವಿಜಯದಲಿ ದುರ್ವಾದಿಗಳ ಗೆದ್ದುಮಧ್ವಗ್ರಂಥಗಳಿಗೆ ಟೀಕೆಗಳ ರಚಿಸಿಪ್ರಖ್ಯಾತರಾದರು ಜಯತೀರ್ಥ ಆರ್ಯ 28ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನ ಕರುಣಿಜಯತೀರ್ಥಗುರುನಮೋಪಾಹಿ29|| ಪ್ರಥಮ ಕೀರ್ತನೆ ಸಮಾಪ್ತ ||ದ್ವಿತೀಯಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪನರಹರಿಯ ಮಹಾದುರ್ಗೆಯ ಕುರಿತು ತಪಸ್ ಆಚರಿಸಿವರವ ಪಡೆದಿಹರು ಈ ಜಯತೀರ್ಥ ಆರ್ಯಬರೆವುದಕೆ ಲೇಖನವು ಅಡಿಕೆಯುಅರದೂರದುರ್ಗೆಯು ಕೊಟ್ಟಿಹಳು ಇವರ್ಗೆ1ಎರಗೋಳದಲ್ಲಿದ್ದು ಶ್ರೀ ಮದಾಚಾರ್ಯರಪರಸುಖಪ್ರಮೂಲಗ್ರಂಥಗಳ ಟೀಕಾಬರೆದಿಹರು ಅನುಪಮ ಉತ್ತಮ ರೀತಿಯಲಿಭರದಿ ಓದುವವರೇ ಬಲ್ಲರು ಮಹಿಮೆ 2ಶ್ರೀ ಮಧ್ವಕೃತವು ಶ್ರೀ ಬ್ರಹ್ಮಸೂತ್ರಭಾಷ್ಯವುಆ ಮೂಲಗ್ರಂಥವು ಎರಡು ಸಾವಿರವುಆ ಮಹಾಭಾಷ್ಯಕ್ಕೆ ಟೀಕೆ ಅಷ್ಟ ಸಹಸ್ರವುಅಮ್ಮಮ್ಮ ಏನೆಂಬೆ ಈ ಮಹಾ ಕಾರ್ಯ 3ಅನುವ್ಯಾಖ್ಯಾನದ ನಾಲಕ್ಕು ಸಾವಿರಘನತರ ಗ್ರಂಥಕ್ಕೆ ಜಯತೀರ್ಥರಜ್ಞಾನಪ್ರದ ಅಜ್ಞಾನಗಿರಿವಜ್ರಟೀಕೆಯಗ್ರಂಥ ಇಪ್ಪತ್ತೆಂಟು ಸಾವಿರ ಸಂಖ್ಯಾ 4ಈ ನುಡಿ ಬರೆವಾಗ ಬಿಂದುಮಾಧವ ಪೇಳ್ದಘನ್ನ ಶುಭತರ ಮಧ್ವ ವಿಜಯದಲ್ಲಿಅನುವ್ಯಾಖ್ಯಾನದ ಟೀಕಾ ಸುಧಾ ಎಂದುಶ್ರೀ ನಾರಾಯಣಾಚಾರ್ಯ ಸೂಚಿಸಿಹರೆಂದು 5ತತ್ವ ಸಂಖ್ಯಾನಕ್ಕೂ ಕಥಾ ಲಕ್ಷಣಕ್ಕೂತತ್ವ ವಿವೇಕಕ್ಕೂ ಋಗ್ಬಾಷ್ಯಕ್ಕೂತತ್ವ ನಿರ್ಣಯಕ್ಕೂ ಪ್ರಮಾಣ ಲಕ್ಷಣಕ್ಕೂತತ್ವೋದ್ಯೋತಕ್ಕೂಕರ್ಮನಿರ್ಣಯಕ್ಕೂ6ಮಾಯಾವಾದಉಪಾಧಿಖಂಡನಗಳಿಗೂಮಿಥ್ಯಾತ್ವಾನುಮಾನ ಖಂಡನಕ್ಕೂನ್ಯಾಯ ವಿವರಣಕ್ಕೂ ಗೀತಾ ಭಾಷ್ಯಕ್ಕೂನ್ಯಾಯ ತೇಜೋಜ್ವಲ ಗೀತಾ ತಾತ್ವರ್ಯಕ್ಕೂ 7ಪಟ್ಟ್ರಶ್ನ ಈಶಾವಾಸ್ಯ ಭಾಷ್ಯಗಳಿಗೂಅಷ್ಟಾದಶ ಈ ಗ್ರಂಥಗಳಿಗೆಪಟು ಪಟೀಯಸವಾಗಿ ಟೀಕೆಯಾ ಬರೆದಿಹರುಇಷ್ಟೇ ಅಲ್ಲದೇ ಇನ್ನೂ ನಾಲ್ಕು ರಚಿಸಿಹರು 8ಪ್ರತ್ಯಕ್ಷ ಅನುಮಾನಆಗಮಪ್ರಮಾಣಗಳರೀತಿ ಲಕ್ಷಣ ಪೇಳ್ವ ಪ್ರಮಾಣ ಪದ್ಧತಿಯುಮಾಧವನ ಸರ್ವೋತ್ತಮ ಜಗತ್ ಸತ್ಯತ್ವಇಂಥಾದ್ದು ಸಾಧಿಸುವ ವಾದಾವಳಿಯು 9ತಂತ್ರಸಾರಪಾಂಚರಾತ್ರಾಗಮಾನುಸರಿಸಿಪದ್ಯಮಾಲಾನಾಮ ಗ್ರಂಥದಲ್ಲಿಶ್ರೀಧರ ಸರ್ವೋತ್ತಮಾರ್ಚನೆ ಬಗೆ ಪೇಳಿದರುಶತಾಪರಾಧ ಸ್ತೋತ್ರವು ಮಾಡಿಹರು 10ದಿಗ್ವಿಜಯ ಮಾಡಿ ಸಜ್ಜನರ ಉದ್ಧರಿಸುತ್ತಾದುರ್ವಿದ್ಯಾ ದುರ್ಮತಗಳನ್ನ ಛೇದಿಸುತಸುವೈದಿಕ ಮಧ್ವಸಿದ್ಧಾಂತ ಸ್ಥಾಪಿಸುತಭುವಿಯಲಿ ಪ್ರಖ್ಯಾತರಾದರು ಜಯಾರ್ಯ 11ಒಂದು ಸಮಯದಿ ವಿದ್ಯಾರಣ್ಯರು ಶ್ರೀಮಧ್ವಗ್ರಂಥ ಓದಿ ನೋಡಿ ಅರ್ಥವಾಗದಲೆಗ್ರಂಥಕ್ಕೆ ಜಯರಾಯರು ಬರೆದ ಟೀಕೆಯಓದಲು ಅರ್ಥವು ವಿಶದವಾಯ್ತು 12ಪೂರ್ವಾಪರ ಸಂಗತಿ ಮತ್ತು ವಾಕ್ಯಾರ್ಥಸರ್ವ ಪ್ರಕಾರದಲೂ ಉತ್ತಮವಾಗಿಹುದುಸರ್ವಜÕ ಮುನಿಗಳ ಗ್ರಂಥದ ಸರಿಯಾದಭಾವವ ವಿವರಿಸುವುದೆಂದು ಹೇಳಿದರು 13ಈ ರೀತಿ ವಿದ್ಯಾರಣ್ಯರು ಕೊಂಡಾಡಿಪುರಿ ರಾಜಬೀದಿಯಲಿ ಆನೆ ಅಂಬಾರಿಮೆರವಣಿಗೆ ಮಾಡಿಸಿ ಜಯಘೋಷ ಮಾಡುತ್ತಾಮರ್ಯಾದೆ ಮಾಡಿದರು ವಿಜಯನಗರದಲಿ 14ಮಧ್ವಗಂಥಗಳನ್ನು ಜಯಾರ್ಯ ಬರೆದಿರುವಉತ್ತಮ ಟೀಕೆಗಳ ಬಲು ಶ್ಲಾಘಿಸುತ್ತವಿದ್ಯಾರಣ್ಯರು ನಮಸ್ಕಾರ ಮಾಡಿದರುಎಂದು ಇತಿಹಾಸವ ಸುಜನರು ಪೇಳುವರು 15ಸ್ವಮತ ಪರಮತ ವಿದ್ವಜ್ಜನರಿಂದಈ ಮಹಾಮಹಿಮ ಟೀಕಾಚಾರ್ಯ ಆರ್ಯಈ ಮಹಿಯಲ್ಲಿ ಪ್ರಖ್ಯಾತ ಪೂಜಿತರಾಗಿತಮ್ಮ ಗುರುಕ್ಷೇತ್ರ ಮಳಖೇಡ ಸೇರಿದರು 16ಮಳಖೇಡ ಕ್ಷೇತ್ರದಲ್ಲಿ ಕಾಗಿನೀ ನದಿತೀರಮಾಲೋಲ ಪ್ರಿಯ ಅಕ್ಷೋಭ್ಯರ ವೃಂದಾವನಶೀಲತಮ ಜಯರಾಯ ಅಲ್ಲಿಯೇ ನಿಂತರುಅಳವೇ ವರ್ಣಿಸಲು ಈ ಮಹಾತ್ಮರ ಮಹಿಮೆ 17ಹನ್ನೊಂದು ತೊಂಭತ್ತು ಶಕವಿಭವಆಷಾಢಕೃಷ್ಣ ಪಂಚಮಿ ಪುಣ್ಯದಿನದಲ್ಲಿ ಇವರುತನ್ನ ಸೇವಾ ವಿಷ್ಣು ಮಧ್ವರಿಗೆ ಪೂರೈಸಿಶ್ರೀ ನಾರಾಯಣನಪಾದಸೇರಿದರು18ಮತ್ತೊಂದು ಅಂಶದಲ್ಲಿ ವೃಂದಾವನದಲ್ಲಿಇದ್ದು ಸೇವಿಸುವವರ್ಗೆ ವಾಂಛಿತವೀಯುತ್ತಮಧ್ವಸ್ಥ ಶ್ರೀ ಹರಿಯ ಧ್ಯಾನಿಸುತ ತಮ್ಮಗುರುಬದಿಯಲ್ಲಿ ಕುಳಿತಿಹರು ಸ್ಮರಿಸೆ ಪಾಲಿಪರು 19ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನಕರುಣಿ ಜಯತೀರ್ಥಗುರುನಮೋಪಾಹಿ20||ಇತಿ ಶ್ರೀ ಜಯತೀರ್ಥವಿಜಯಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಗೋಪೀವಲ್ಲಭ ಕೃಷ್ಣ ಅಂಕಿತಪದ144ಪ್ರಸನ್ನ ಗೋಪೀವಲ್ಲಭ ಕೃಷ್ಣ ಶರಣುನೀ ಸಲಹೊ ಇವಳನ್ನು ಸುಹೃದ ಕರುಣಾಳೊ |ಬೇಸರ ವಿಲ್ಲದೆಪತಿಗುರುಸೇವಾ ಸದ್ರತಿಶ್ರೀಶ ನಿನ್ನಲಿ ಭಕ್ತಿ ಸಜ್ಞಾನ ಬೆಳೆಸೊ ಪಪುಟ್ಟಿದಾರಭ್ಯ ಬಹು ಕಷ್ಟಮೋಹದಲ್ಲಿದ್ದುನೆಟ್ಟಗೆ ಬಂದಿಹಳಿಲ್ಲಿ ನಿನ್ನ ದಯದಿಂದ |ವಿಷ್ಣು ಭಕ್ತಿ, ಜ್ಞಾನ, ವೈರಾಗ್ಯ ಆರೋಗ್ಯಇಷ್ಟ ಸಂಪತ್ತುಗಳ ಇತ್ತು ಪಾಲಿಪುದು || ಪ್ರಸನ್ನ||ನೀಪಾಲು ಬೆಣ್ಣೆಯ ಕೊಂಡು ಸುಜನರ ಕಾಯ್ದಿಗೋಪಿಕಾ ಸ್ತ್ರೀಯರ ಭಕ್ತಿಗೆ ವೊಲಿದಿ |ವಿಪ್ರಸತಿ ಪ್ರೇಮದಲಿ ಕಳುಹಿಸಿದ ಅವಲಕ್ಕಿಶ್ರೀಪನೀ ಸ್ವೀಕರಿಸಿ ಸೌಭಾಗ್ಯ ವಿತ್ತಿ 1ಸೌಂದರ್ಯಸಾರನಮೊ ಜಗದೇಕ ವಂದ್ಯ ವಿಭು,ಸತ್ಯಾ ರಕ್ಮಿಣಿಯುತನೆ ಷಣ್ಮಹಿಷಿಸೇವ್ಯ|ನಿರ್ದೋಷಗುಣಗಣಾರ್ಣವ ಸರ್ವೋತ್ತಮನಮೊಪದುಮಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ 2
--------------
ಪ್ರಸನ್ನ ಶ್ರೀನಿವಾಸದಾಸರು