ಒಟ್ಟು 159 ಕಡೆಗಳಲ್ಲಿ , 47 ದಾಸರು , 147 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರುಷೋತ್ತಮ ತೀರ್ಥರೇ | ಪಾಲಿಸಿ ಎನ್ನಪುರುಷೋತ್ತಮ ತೀರ್ಥರೆ ಪ ಧೃತ - ಸಾರಿ ಬಂದೆನು ನಿಮ್ಮ ನೋಡಲುಭೂರಿ ಕರುಣವ ಮಾಡಿ ಪಾಲಿಸಿ ಅ.ಪ. ಅಲವ ಬೋಧರ ಮತವಾ | ಪೊಂದಿದರಆಲಸಾದೆ ಭಜಿಸುವರ್ಗೇ |ಧೃತ - ಶೀಲ ಮಾರ್ಗವ ತೋರಿ ಸಲಹುತಕೀಳು ಕರ್ಮವ ಕಳೆವ ಮೌನಿಯೆ 1 ದ್ವಿಜ ಮೌಳಿ ರಾಮಾಚಾರ್ಯ | ತವದಯದಿತೇಜೋ ತನಯನ ಪಡೆಯಲು |ಧೃತ - ದ್ವಿಜನ ಗೈದಾವಿಪ್ರಸುತನನುನಿಜ ಸುಪೀಠದಿ ನಿಲಿಸಿ ಮೆರೆದ 2 ಜಯ ಧ್ವಜ ಕರಜಾತಾ | ವಾತಗೆ ಪ್ರೀತಕಣ್ವ ತಟದಿ ವಿಖ್ಯಾತಾ |ಧೃತ - ತೋಯ ಜಾಕ್ಷಾನಾದ ಗುರುಗೋವಿಂದ ವಿಠಲನ ಧ್ಯಾನರತನೆ 3
--------------
ಗುರುಗೋವಿಂದವಿಠಲರು
ಪ್ರೇಮಸಾಗರ ಸ್ವಾಮಿ ಶ್ರೀಹರಿ ಬಾರೊ ಪ ವಿಷಮಸಂಸಾರದ ವ್ಯಸನವಳುಕಿಸಿ ಅಸಮ ನಿಮ್ಮಯ ನಿಜಧ್ಯಾಸವ ಕರುಣಿಸೊ 1 ಮನಸಿನ ಹರಿದಾಟವನು ನಿಲಿಸಿ ಎನಗನುದಿನ ಸುಸಂಗನೆ ದಯಪಾಲಿಸೊ 2 ಸುಷ್ಮಮಲದಾಯಕ ಮಮ ಕೃಪಾಕರ ಶ್ರೀ ರಾಮ ಅಪರೋಕ್ಷಜ್ಞಾನವ ಕೃಪೆಮಾಡು ಬೇಗನೆ 3
--------------
ರಾಮದಾಸರು
ಬಣ್ಣಿಸಲಳವಲ್ಲ ನಿಮ್ಮ ಪ್ರ ಸನ್ನ ಮೂರುತಿ ಯಲಗೂರ ವಾಸ ಹನುಮಾ ಪ ಅಂಜನಿಯುದರದಲಿ ಜನಿಸೀ ತೇಜ ಪುಂಜ ರಾಮನ ಸೇವೆಯಲಿ ಮನನಿಲಿಸಿ ಕಂಜ ಛವನ ಪಟ್ಟ ಧರಿಸಿ ಬಲು ರಂಜನೆ ಮೆರೆದ ಭಕ್ತಾಗ್ರಣಿಯೆನಿಸಿ 1 ಜ್ಞಾನ ಭಕುತ ವೈರಾಗ್ಯದಲಿ ಸರಿ ಉರಗ ಲೋಕದಲಿ ಮಾನನಿಧಿಯೇ ವಿಕ್ರಮದಲಿ ಚರ ಣಾಗತೆ ರಕ್ಷಕ ನೇಮ ಬರದಿರಲಿ2 ಮೂರವ ತಾರದಿ ಬಂದು ದೀನೋ ದ್ಧಾರಣ ಮಾಡಿದೆ ಸದ್ಬೋಧ ಗರದು ಕಾರುಣಿ ಗುರುವಾಗೆಂದೆಂದು ಸಹ ಕಾರದಿ ಮಹಿಪತಿ ಸುತಗೊಲಿದಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದಾನೋ ಧಯಾನಿದಿ ಬಂದಾನೋ ಪ. ಬಂದಾನೊ ನಿನ್ನ ದರುಶನ ಮಾಡಿಸಿ ಆನಂದ ಪಡಿಸಿ ಆನಂದ ಭಾಗ್ಯ ಸುರಿಸಿದೀ ಹರಿಯೆ ಅ.ಪ. ನೀನು ಬಿಡದೆ ಎನ್ನನು ಕರೆಸಿ ನಿನ್ನ ಭಕ್ತರ ಸಂಘದೊಳು ಬೆರೆಸಿ ನಿನ್ನ ದ್ವಾರದೆದುರಿಗೆ ಸ್ಥಳವ ಕೊಡಿಸಿ ವರಹದೇವರ ದರುಶನ ಮಾಡಿಸಿ 1 ನಿನ್ನ ಧರ್ಮ ದರ್ಶನ ಎನಗೆ ಕೊಡಿಸಿ ನಿನ್ನ ಪುಷ್ಕರಣಿ ಸ್ನಾನವ ಮಾಡಿಸಿ ನಿನ್ನ ಭಕ್ತರ ಮಠದಿ ಊಟವ ಮಾಡಿಸಿ ನಿನ್ನ ಕಲ್ಯಾಣೋತ್ಸವ ತೋರಿಸಿ ಆನಂದಪಡಿಸಿ2 ನಿನ್ನ ವಸಂತೋತ್ಸವ ಎನಗೆ ತೋರಿಸಿ ನಿನ್ನ ಉತ್ಸವದೊಳೆನ್ನ ದಣಿಸಿ ನಿನ್ನ ಏಕಾಂತ ಸೇವೆ ಎನ್ನಿಂದ ಮಾಡಿಸಿ ರಮಾವಲ್ಲಭವಿಠಲನ ಮನದಲಿ ನಿಲಿಸಿ ನಲಿಸಿ 3
--------------
ಸರಸಾಬಾಯಿ
ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು
ಭಕುತಿಯಲಿ ಭಜಿಸಿ ಹರಿಯ ಸುಖಿಸಬಾರದೇ ಪ ಪ್ರಕಟದಿ ಸಜ್ಜನ ನಿಕಟದಿ ತಾಮಸ| ಶಕಟ ಮುರಿದ ಸುರ ಮುಕುಟ ಮಣಿಯಾ ಅ.ಪ ತರಣೀಯಾ ಕೋಟಿ ಪ್ರಕಾಶದಿ ಧರಣಿಯಾ ರಮಣನ ನಾಮ| ಕರಿ ಕಿರಿಯನೆ ಶಿರಿ| ಗರುಡಗರಿಯದೇ ಭರದಿ ತಾ ಬರುತದೆ ಶರಣರಾ ಹೊರೆದ 1 ಮರುವಿನ ಕತ್ತಲೆ ನೂಕುವ ಚರಣವ ಅರವಿನ ದೀಪವ ಹಚ್ಚಿ| ಕುರುವಿನಾ ಚಿನ್ಮಯ ನೊಡಲು ಗುರುವಿನಾ| ಚರಣವ ಪೂಜಿಸಿ ಕರುಣವ ಸಾಧಿಸಿ ತರುಣೋಪಾಯದ ಚರಣವ ಬಲಿಯೋ 2 ಮನವಧಾನದಿ ನಿಲಿಸಿ ತನುವನಾ ಸೇವೆಗರ್ಪಿಸಿ| ಘನವನು ಮಾಡುತಾ ಸುಜನರಾ ಅನುವನು ಕನಸಿಲೇ| ಘನ ಗುರು ಮಹಿಪತಿ-ಜನ ಪ್ರಭುವಿನ ಅನುದಿನದಲಿ ಪಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಕ್ತಿಲೇಸು ಮುಕ್ತಿಗಿಂತಲಿ ಪ ಭಕ್ತಿಲೇಸು ಮುಕ್ತಿಗಿಂತಲಿ | ಭಕ್ತಜನರಾ ಪಾಲಿಸುವನಾ | ಭಕ್ತಿಗೊಲಿದು ಫಣಿಗಣ ಲೋಕದಿ | ಯುಕ್ತಬಲಿಯ ಬಾಗಿಲಲೊಳಿಹ ರಂಗಯ್ಯನಾ | ಸುರಪ್ರೀಯನಾ ಮುನಿಧ್ಯೇಯನಾ 1 ಸರಸಿಭವನ ಕಠಾರದಿಂದ ಲೋಗದನಾ | ಅರಸೆನಿಪನಾ ತನುಭವನಾ | ಧರಿಸಿದನಾ | ಅರಸಿಯ ಜನಕನ ಕುಲರಿಯನಿಪನಾ | ಕುವರನ ಸ್ಯಂದನ ವಾಜಿಯನು ಪೊರೆದನಾ | ಗೆಲಿಸಿದನಾ | ಮೆರಿಸಿದನಾ 2 ವನರುಹಸಖನ ಪೊಂದೇರ ನಡೆಸುತಿಹನಾ | ಅನುಜನಾ ಅರಿಗಳಾ ಹರಿಯ ನಂದನನಾ | ಘನವಾಲದಿಂದ ನೊಂದಿಹ ಪುರದರಸನಾ | ಅನುಜನಾ ಸ್ಥಿರಪದವಿತ್ತು ನುಳುಹಿದನಾ | ನಿಲಿಸಿದನಾ | ಕಾಯ್ವನಾ 3 ಸಿರಿಯ ಮದನಳಿದು ಗುರುಚರಣಕೆ ಹೊಂದಿ | ದೊರಕಿ ನಿತ್ಯದಲಿ ಸಂತುಷ್ಟವಿರುತಾ | ಗುರುವರ ಮಹಿಪತಿ ಸ್ವಾಮಿಯ ಷೋಡಶ | ಪರಿಯಲಿ ತುಳಸಿಯ ತಂದು ಪೂಜೆ ಮಾಡುವ | ಪಾದ ನೋಡುವಾ | ಪಾಡುವಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭರಬರನೆ ಬಾಜಾರಕೆ ನಾ ಬಂದೆನಯ್ಯ ಚಿದಾನಂದನ ಮರೆಯಲಿಕೆ ಪ ಐವರು ಗೌಡರು ಕಟ್ಟಿದ ಪೇಟೆ ಆ ಪೇಟೆಗೆಐದು ನಾಲ್ಕು ಬಾಗಿಲುಗಳುಐದು ಮಂದಿ ಸೆಟ್ಟರು ಸೇರಿಹರು ಆವರಲ್ಲಿಯೆಐದು ಮಂದಿ ಚಲವಾದಿಗಳು1 ಭಾರ ನೇಮಲ್ಲಿದೆ 2 ತಡುಗರೆಂಬವಾಲೆ ಶೆಟ್ಟಿಗಳೆ ಅಲ್ಲಿಗಲ್ಲಿಗೆಪಡುವಲ ಕೋರಿ ಶೆಟ್ಟಿಗಳೇಕಡುಕರ್ಮಿ ಕೋಮಟಿ ಶೆಟ್ಟಿಗಳೇ ಬಾಯಿ ಘನವಾಗೆಬಡಬಡಿಪ ಪಟ್ಟಣ ಶೆಟ್ಟಿ 3 ಪಾಪವೆಂಬ ವಸ್ತ್ರದಂಗಡಿಯೇ ನಾ ನೋಡಲಾಗಿತಾಪವೆಂಬ ಜವಳಿ ಅಂಗಡಿಯೆಕೋಪವೆಂಬ ಕುಪ್ಪಸ ದಂಗಡಿಯೇಒಪ್ಪುತಲಿರೆ ಕಾಪಥವೆಂಬ ಸಕಲಾತ್ಮಂಗಡಿಯೇ 4 ಚಿ, ಛೀ ಎಂಬ ಚಿಕ್ಕ ತಕ್ಕಡ ಗಂಡಿಯೆ ನಾ ಬರುತಿರೆನಾಚಿಕೆಯಿಲ್ಲದ ಕಂಚಿನಂಗಡಿಯೇಚು ಛೂ ಎಂಬ ಚೀನಿಯಂಗಡಿಯೇ ಯಡಬಲದಲ್ಲಿಕೋಚು ಮಾಡೋ ಉದ್ದಿನಂಗಡಿಯೇ 5 ತನು ವ್ಯಸನವೆಂಬ ತಾಡಪತ್ರಿ ತೋರಲಾಗಿಮನವ್ಯಸನವೆಂಬ ಕಿಂಕಾಪುಧನವ್ಯಸನವೆಂಬೋ ಮಖಮಲ್ಲು ನಾ ಬೆರಗಾಗೆಜನ ವ್ಯಸನವೆಂಬೋ ಜರತಾರಿಯೇ6 ನಾನಾ ವಿಷಯ ವೆಂಬೋ ಉತ್ತತ್ತಿ ಅಲ್ಲಿದ್ದಾವೆಜ್ಞಾನಶೂನ್ಯ ಜಾಜಿಕಾಯಿಮಾನ ಹಾನಿಯೆಂಬೋ ಜಾಪತ್ರಿನಾನು ನನ್ನದು ಎಂಬ ಭಂಗಿ ಸೊಪ್ಪು7 ಜೀವನೆಂಬ ಹೊಗೆಯ ತೊಪ್ಪಲೇ ಹಿರಿಯವಾದನೋವು ಕಷ್ಟಗಳೆಂಬ ಗಾಂಜಿಯೇಸಾವು ಬದುಕು ಎಂದೆಂಬ ಮಾಲೆಗಳೇ ಮಾರುತಲಿತ್ತೋನಾನು ನೀನು ಎಂಬ ಚಿಲುಮೆಗಳೋ 8 ಭೇದವೆಂಬ ನಿಲುವುಗನ್ನಡಿಯೆ ಒಳಗಿದ್ದಾವೆ ವಾದವೆಂಬವಜ್ರದಹರಳೇ ಹಾದಿ ಕಾಣೆನೆಂಬ ಹವಳದ ರಾಶಿಯೇ ಹರಡಿದ್ದಾವೆಗಾದೆ ಎಂಬ ಸೂಜಿದಬ್ಬಣವೇ 9 ಪ್ರಾರಬ್ಧವೆಂಬೋ ಉಂಬತಳಿಗೆಯೇ ಪಸರಿಸುತಿರುವಘೋರ ತಾಪತ್ರಯದ ತಟ್ಟೆಯೇನಾರಿ ನೋಟೆಂಬ ಕಠಾರಿಯೇ ನಿಲಿಸಿದ್ದಾವೆಸೂರಿಯ ಸುಕೃತವೆಂಬೋ ತುಬಾಕಿಯೇ10 ಪರಿಣಾಮಿಲ್ಲದ ಪಡವಲಕಾಯಿ ದಾರಿಯಲಿದಾರಿಯಿಲ್ಲದ ದೊಡ್ಡಿಲಕಾಯಿಅರಿವಿಲ್ಲದ ಕುಂಬಳಕಾಯಿ ಹಾಗಿದ್ದಾವೆಮರುಳು ಎಂಬ ಮಾವಿನಕಾಯಿ11 ಮಂಠ ಎಂಬೋ ಮೆಂತ್ಯ ಪಲ್ಲಯೇ ಮಾಸಲವಿತ್ತೆಕಂಟಕ ಎಂಬೋ ಹರಿವೆ ಪಲ್ಲೆಯೇಕೊಂಟೆಯೆಂಬೊ ಬಸಲೆ ಪಲ್ಲೆಯೇ ತೀವ್ರದಲಿತ್ತೆಶುಂಠವೆಂಬೋ ಬೆರಕೆ ಪಲ್ಲೆಯೇ 12 ಬಂಗಾರವೆಂಬೋ ಬಿಳಿಯ ಜೋಳವೇ ಬೆಡಗಿಲಿರೇರಂಗು ಎಂಬೋ ರಾಗಿ ರಾಶಿಯೇಸಂಗವೆಂಬೋ ಸಣ್ಣಕ್ಕಿಯೇ ಸಾರಿದ್ದಾವೆಹಿಂಗದೀಪರಿ ದಿವಾರಾತ್ರಿಯೇ 13 ಸಂಕಲ್ಪೆಂಬೋ ಧಾರಣೆ ಹಚ್ಚಿರೋ ಸಂಗಾತಲೆವಿಕಲ್ಪೆಂಬೋ ಧಾರಣೆಯಿಳಿವುದೇಸುಖದುಃಖವೆಂಬೋ ಮಾರಾಟವೇ ಸಾಗಿರಲಾಗಿಕಾಕಧಾವಂತರ ಸಂಧಾನವೇ 14 ಕಾಮಕ್ರೋಧಗಳೆಂಬ ಕಳ್ಳರೇ ಕಾವಲಿರ್ದುರಾಮನೆಂಬ ಸ್ಮರಣೆ ಕದ್ದಿಹರೋಕಾಮುಕರೆ ತಿರುಗಾಡುವರೆಲ್ಲ ಕಾಣದ ಹಾಗೆಆ ಮಹಾಜ್ಞಾನವ ಸುಲಿದಿಹರೋ15 ಬರಬಾರದ ನಾನು ಬಂದೆನೇ ಬಾಜಾರ ಬಿಟ್ಟುಹೊರಡುವ ತೆರನ ಕಾಣೆನೇಕರುಣಿಯಾಗಿ ಕೈ ವಿಡಿವರಾರೋಕರುಣಾಕರ ಹರ ವಿಶ್ವೇಶನೇ ಬಲ್ಲ 16 ಚಿಂತೆ ನಾನು ಮಾಡುತಿರಲಾಗಿ ಚಿದಾನಂದಚಿಂತೆ ಬೇಡೆಂದು ಮುಂದೆ ನಿಂದಿಹನುಚಿಂತೆ ಬಿಡು ಕಾವಲಿಹೆನೆಂದು ಚಿದ್ರೂಪ ತೋರಿಎಂತು ಪೇಳಲಿ ಎನ್ನೆದುರು ನಿಂದಿಹನೆ17
--------------
ಚಿದಾನಂದ ಅವಧೂತರು
ಮಂಗಳ ಮುದ್ದು ಕೃಷ್ಣನಿಗೆ ಜಯ ಮದನ ಜನಕ ಬಾಲ ಹರಿಗೆ ಪ. ಕಡಗೋಲ ನೇಣು ಪಿಡಿದಗೆ ಪಾಲ್ ಗಡಿಗೆ ಒಡೆದು ಇಲ್ಲಿ ಓಡಿ ಬಂದವಗೆ ಕಡಲ ತಡಿಯಲಿ ನಿಂತವಗೆ ಅಷ್ಟ ಮಡದಿಯರರಸನೆಂತೆಂಬ ಪುರುಷಗೆ 1 ಯತಿವರರಿಂದರ್ಚಿತಗೆ ಬಹು ಜತನದಿ ಭಕ್ತವರ್ಗಗಳ ಕಾಯ್ವನಿಗೆ ಯತಿ ಮಧ್ವರಾಯಗೊಲಿದಗೆ ನಿತ್ಯ ಚ್ಯುತ ದೂರವಾದ ಸರ್ವೇಶನೆಂಬುವಗೆ 2 ಗರುಡನ್ನ ಎಡದಿ ನಿಲಿಸಿದಗೆ ಬಲದಿ ಮರುತನ್ನ ನಿಲಿಸಿ ಕೊಂಡ್ಹರುಷಪಡುವನಿಗೆ ಕಿರಿದ್ವಾರದಿ ಮಧ್ವ ಉಳ್ಳವಗೆ ನಮ್ಮ ಸಿರಿಪತಿ ಗೋಪಾಲಕೃಷ್ಣವಿಠ್ಠಲಗೆ 3
--------------
ಅಂಬಾಬಾಯಿ
ಮಂಗಳಾರತಿಯಾ ತಂದೆತ್ತಿರೇ ಮಂಗಳವದನೆಯರೆಲ್ಲಾ ಅಮಂಗಜನಪಡದಾ ಮಂಗಳಾತ್ಮಗ ಪ ಪೊಂಬ್ಹರಿವಾಣದೊಳಗ | ಕೆಂಬ್ಹವಳದಾರತಿ ನಿಲಿಸಿ ಮುಂಬ್ಹರಿವರನ್ನ ಜ್ಯೋತಿಯಲಿ ಬೆಳಗಿರೆ 1 ಉತ್ತಮ ಪುರುಷ ಶ್ರೀ ಹರಿಗೆ ಮತ್ತ ಜಗನ್ಮಾತೆ ಸಿರಿಗೆ | ಮುತ್ತಿನ ಶಾಶೆಯನಿಟ್ಟು ಬೆಳಗಿರೆ 2 ಜಯ ಜಯ ಶಿಷ್ಟ ರಕ್ಷಕನೇ ಜಯ ಜಯ ದುಷ್ಟಶಿಕ್ಷಕನೇ | ಜಯವೆಂದು ಬೆಳಗಿ ಮಹಿಪತಿ ಸುತಪ್ರೀಯಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನವೇ ಸುಮ್ಮನೆ ಇರಬೇಡ ಅರೆನಿಮಿಷವಾದರುಮನವೇ ಸುಮ್ಮನೆ ಇರಬೇಡಪ ಕನಸಿನಂತಿಹ ಸಂಸಾರವ ನೆಚ್ಚಿಘನತರ ಪಾಪಕೆ ಗುರಿಯಾಗಬೇಡ ಅ ರೊಕ್ಕದಾಸೆಯ ಬಿಡಬೇಕು ಸ್ತ್ರೀ ಮೋಹಕೆಸಿಕ್ಕದೆ ನಡಕೊಳಬೇಕುಅಕ್ಕರು ದೇಹದೊಳಿರದಿರಬೇಕುಶಕ್ತಿಯ ಮೀರಿ ಧರ್ಮವ ಮಾಡಬೇಕುಮುಕ್ಕಣ್ಣ ಹರನ ಪೂಜಿಸಬೇಕುಮುಕ್ತಿ ಮಾರ್ಗವ ಪಡಕೊಳಬೇಕು 1 ಸರ್ವನಿಸ್ಪøಹನಾಗಬೇಕು ಸಂಸಾರದಿಚರಿಸುತಲೂ ಇರಬೇಕುಗುರುಹಿರಿಯರ ಕಂಡು ನಡೆಯಲು ಬೇಕುಪರರ ನಿಂದಿಸಿ ನುಡಿಯದೆ ಇರಬೇಕುಬರೆ ಸುಖ ದುಃಖವು ಸಮಗಾಣಬೇಕುಇರುಳು ಹಗಲು ಶಿವ ಶಿವ ಎನ್ನಬೇಕು2 ತನ್ನ ತಾನೆ ತಿಳಿಯಬೇಕು ತೋರುವ ಲೋಕವನ್ನು ದೃಶ್ಯವೆಂದಿರಬೇಕುತನ್ನಂತೆ ಸಕಲರ ನೋಡಲು ಬೇಕುಮಾನ್ಯರ ಕಂಡರೆ ಮನ್ನಿಸಬೇಕುಅನ್ಯನಾದರು ಹಿತವನೆ ಮಾಡಬೇಕುಪ್ರಸನ್ನ ರಾಮೇಶನನೆನಹಿರಬೇಕು 3 ವಣಗಿದ ಕಂಭದೊಳೊಗೆದುಬಣಗು ದಾನವನ ಗೆಲಿದುಕುಣಿಕುಣಿದಾಡಿದೆಯಂತೆ ಯಾಕಯ್ಯ ಶ್ರೀಕೃಷ್ಣಸೆಣಸಿದ ರಾಕ್ಷಸನ ಗೆಲಿದುವಿನಯದೆ ಪ್ರಹ್ಲಾದಗೊಲಿದುಅಣಿಯರ ಲೋಕವ ಕಾಯ್ದೆ ಎಲೆಸತ್ಯಭಾಮೆ 4 ಬಲು ಚಂದವಾಯಿತಯ್ಯ ಲೋಕಾ-ವಳಿಯೊಳು ದೊಡ್ಡವನಯ್ಯಬಲಿಯ ಕೂಡೆ ದಾನವ ಬೇಡುವರೆ ಕೃಷ್ಣಬಲಿಯ ದಾನವನ್ನೇ ಬೇಡಿಇಳೆಯ ಮೂರಡಿಯ ಮಾಡಿಸಲಹಿದೆ ಸರ್ವಸುರರ ಎಲೆ ಸತ್ಯಭಾಮೆ 5 ಧರಣೀಪಾಲಕರ ಗೆಲಿದಗರ್ವವಿರಲಿ ಹೆತ್ತತಾಯಶಿರವನರಿದ ದುರುಳರುಂಟೆ ಹೇಳಯ್ಯ ಕೃಷ್ಣಗುರುವಚನವನ್ನು ಮೀರೆನರಕಲೋಕವೆಂದು ಕಾಯಶಿರವನರಿದು ಮರಳಿ ಪಡೆದ ಎಲೆ ಸತ್ಯಭಾಮೆ6 ಮೂರು ಲೋಕವರಿಯೆ ಸೀತಾನಾರಿಯ ಕಳೆದುಕೊಂಡುಊರೂರ ತಿರುಗಿದೆಯಂತೆ ಯಾಕಯ್ಯಾ ಕೃಷ್ಣನೀರೊಳು ಸೇತುವ ನಿಲಿಸಿವೀರ ರಾವಣನ ಜಯಿಸಿವಾರಿಜಾಕ್ಷಿಯ ತಂದೆನೆ ಎಲೆ ಸತ್ಯಭಾಮೆ 7 ದುರುಳ ಪರಮಹಂಸರಂತೆಕರದಿ ನೇಗಿಲ ಹಿಡಿದೆಶರಖಡ್ಗಗಳಿಲ್ಲವೇನೋ ಶ್ರೀಕೃಷ್ಣರಾಯಸುರರಿಪು ಪ್ರಲಂಬಾದಿಗಳಶಿರವನರಿದು ಜೈಸಿದಂಥಾಗುರುತಿನ ಆಯುಧ ಕಾಣೆ ಎಲೆ ಸತ್ಯಭಾಮೆ8 ಮಂದಿಯ ಮುಂದೆ ಬತ್ತಲೆನಿಂದು ಓಡಾಡಿದೆಯಂತೆಚಂದವಾಯ್ತು ನಿನ್ನ ನಡತೆ ಹೇಳೆಲೋ ಕೃಷ್ಣಹಿಂದೆ ತ್ರಿಪುರದ ನಾರೀವೃಂದವ ಮೋಹಿಸಿ ಸರ್ವವೃಂದಾರಕರ ಪೊರದೆ ಎಲೆ ಸತ್ಯಭಾಮೆ 9 ದೊರೆತನವು ನಿನ್ನದೆಂದುಧರಣೀದೇವತೆಯು ಬಂದುಮೊರೆಯಿಟ್ಟಳದೇಕೋ ಪೇಳೋ ಶ್ರೀಕೃಷ್ಣರಾಯತುರಗವನೇರಿ ಖಡ್ಗವಧರಿಸಿ ಯವನ ಸೈನ್ಯವನ್ನುಮುರಿದು ಧರೆಯ ಪೊರೆದೆ ಕಾಣೆ ಎಲೆ ಸತ್ಯಭಾಮೆ 10 ಇಂತು ಕೇಳ್ದ ಸತ್ಯಭಾಮಾಕಾಂತೆಯ ಮಾತಿಗೆ ಮೆಚ್ಚಿಕಾಂತೆಯರೊಳು ಕಟ್ಟಾಣಿ ಬಾರೆಂದು ಕರೆದುಕಂತುಜನಕ ಕೆಳದಿಪುರದಕಾಂತ ಗೋಪಾಲಕೃಷ್ಣನುಸಂತಸವ ಮಾಡಿದನಿನ್ನೆಂತು ಪೇಳ್ವೆನೆ11
--------------
ಕೆಳದಿ ವೆಂಕಣ್ಣ ಕವಿ
ಮರೆಯದಿರೆಲೊ ಮನುಜಾ ಮಾಧವನನ್ನು ಮರೆಯದಿರೆಲೋ ಶುದ್ಧ ಮರುಳೆ ಮಾತನು ಕೇಳು ಪರಿಪರಿಯಲಿ ನಮ್ಮ ಪೊರೆವ ಕಾರುಣಿಕನ ಪ. ತನ್ನ ಸೇವೆಗೆ ಸಾಧನವಾಗಿಹ ದೇಹ- ವನ್ನು ಪಾಲಿಸಿದವನ ಯಿನ್ನು ನೀ ತಿಳಿಯದೆ ಅನ್ಯ ದೈವಗಳನ್ನು ಮನ್ನಿಸಿ ಮನದಣಿದನ್ನ ನಾಯಕನನ್ನು 1 ಹಸ್ತ ಪಾದಾದಿಗಳ ಕೊಟ್ಟದರಿಂದ ವಿಸ್ತರಿಸಿರುವಾನಂದ ತೋರುವ ಸುರ ಮಸ್ತಕ ಮಣಿಯನು ಮರೆತು ಮೂಢರ ಸೇರಿ ಬಸ್ತಕನಂತೆ ನಿರಸ್ತನಾಗದೆಯೆಂದು 2 ಮನೆಯಲಿ ನಿಲಿಸಿರುವ ವಾಕ್ಕಾಯಕರ್ಮ ಮನದಲಿ ತುಂಬಿರುವ ನಮ್ಮಯ ಸರ್ವ ವನು ತನಮನ ತಾನೆ ನೆನೆದು ಪಾಲನೆ ಗೈವ ವನಜನಯನ ಲಕ್ಷ್ಮಿಯಿನಿಯನ ಮಹಿಮೆಯ 3 ದುರಿತರಾಶಿಯನರದು ದುರ್ ಹೃದಯರ ತರಿದು ಕಾಲಿಂದಲೊದೆದು ಸಿರಿ ಸಹಿತವಾಗಿ ನಮ್ಮಲ್ಲಿರುವನ ಸರ್ವಾಮಯ ಹರ ಪದದಲ್ಲಿ ಭಾರವಿರಿಸು ವಿಚಾರಿಸು 4 ಬಿಡು ಬಿಡು ಭ್ರಾಂತಿಯನು ಮುರಾಂತಕನ- ಲ್ಲಿಡು ನಿನ್ನ ಚಿಂತೆಯನು ಕಡಿವನು ವೈರಿಗಳ ಕೊಡುವನು ಶುಭಗಳ ಒಡೆಯ ವೆಂಕಟಪತಿ ತಡಿಯ ತೋರುವನೆಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಮಹದೇವ ಮದ್ರೋಗ ಮೂಲವಳಿಯೊ ಪ ಮಹದಾದಿಗಳ ದೈವ ಹರಿಯಲ್ಲಿ ರತಿ ನಿಲಿಸಿ ಅ.ಪ. ಸರ್ವಸಿದ್ಧನೆ ವಿಷಯ ಪರ್ವತಕೆ ಮಹಕುಲಿಶ ಕಮಲ ಭೃಂಗ ಮರ್ವೆಂಬ ಮಾರಿಯನು ಅವಳ ನೇತ್ರದಿ ಸುಟ್ಟು ಸರ್ವಾತ್ಮ ಹರಿಧ್ಯಾನಮಗ್ನ ಮನ ನೀಡೆನಗೆ 1 ತಾಳಲಾರೆನೊ ಸ್ವಾಮಿ ಕಾಳ ವಿಷಯದ ದೋಷ ಫಾಲಾಕ್ಷ ಬಿಡಿಸೈಯ್ಯ ಭೋಗದಾಸೆ ಶೀಲ ಮನದಲಿ ಹರಿಯ ಲೀಲೆ ಲಾವಣ್ಯಗಳ ಮೇಲಾಗಿ ನೋಡುವ ಮಹಕರುಣ ಮಾಡೆನ್ನ 2 ಭಾರತೀಶನ ಪಾದಕಮಲ ಮಧುಪನೆ ನಿನ್ನ ಕಾರುಣ್ಯವಾದವನೆ ಶೌರಿವಶನೊ ಮಾರಾರಿ ಮದ್ಭಾರ ವಹಿಸಿ ಪಾಲಿಸು ಎನ್ನ ಧೀರ ತವ ಚರಣಾಬ್ಜ ವಾರಿಜಕೆ ಮೊರೆ ಹೊಕ್ಕೆ 3 ಎನ್ನ ಹೀನತೆ ನೋಡಿ ಘನ್ನ ಭಯಗೊಂಡಿಹೆನೊ ಧನ್ಯರ ಮಾಳ್ಪ ದಯ ನಿನ್ನದಯ್ಯಾ ಪುಣ್ಯತಮ ಮೂರುತಿಯ ಪ್ರತಿಬಿಂಬ ಹರಿಸಖನೆ ಧನ್ಯನಾ ಮಾಡೆನ್ನ ವಿಷಯ ಜಯ ದಯಮಾಡಿ 4 ಅಮಿತ ಮಂಗಳದಾಯಿ ವಿಭವ ವಾಮದೇವ ಮಮತಾದಿ ಅಭಿಮಾನ ದೋಷವರ್ಜಿತ ಮಹಾ ಸಾಮ್ರಾಜ್ಯ ಯೋಗಕ್ಕೆ ಅಧಿನಾಥ ಕರುಣಿಪÀುವುದು 5 ಶಂಭು ಶಂಕರ ತವ ಪದಾಂಬುಜದಿ ಶಿರವಿಟ್ಟು ಹಂಬಲಿಪೆನಿಷ್ಟಪದ ಪಾಲಿಸೆಂದು ತುಂಬಿತ್ವಕ್ಕರಸನ ಹೃದಂಬುಜದೊಳರಳಿಸಿ ಮೂರ್ತಿ ದರುಶನ ನೀಡೊ 6
--------------
ಜಯೇಶವಿಠಲ
ಮುದ್ದು ಮೋಹನ ದಾಸರೇ ನಿಮ್ಮ | ಶುದ್ಧ ಪಾದವ ನಂಬಿದೇತಿದ್ದಿಯೆನ್ನಯನಾದ್ಯ ವಿದ್ಯೆಯ | ಬುದ್ಧಿ ನಿಲಿಸಿರಿ ಹರಿಯಲೀ ಪ ನಡುಮನೆ ದ್ವಿಜನೆಂಬನಾ | ವಡ್ಡಲೊಳು ಉದಿಸೀದನಾ |ಆಡ್ಯಮತವನುಕರಿಸಿದಾ | ದೊಡ್ಡ ಬಳ್ಳಾಪುರದಲೀ1 ವಿಕೃತಿ ಸಂವತ್ಸರದಲೀ | ಪ್ರಕೃತ ಜನ್ಮವ ಪಡೆದನಾಸುಕೃತ ಪೊಗಳುವ ಜನರ ದು | ಷ್ಕøತವ ನೀ ಪರಿಹರಿಸುವೀ 2 ಚಿಪ್ಪಗಿರಿ ಸುಕ್ಷೇತ್ರದೀ | ಗೊಪ್ಪ ಶ್ರೀ ಅಂಕಿತವನೂ ಅಪ್ಪ ಶ್ರೀ ವರರಿಂದಲೀ | ವಪ್ಪಿ ನೀ ಕೈಗೊಂಡೆಯೋ 3 ಮೂರೊಂದು ಸಲ ಶ್ರೀಕಾಶಿಗೇ | ಭೂರಿಸಲ ಶ್ರೀ ಉಡುಪಿಗೇಸಾರಿ ವೆಂಕಟ ಪತಿಯನೂ | ಬಾರಿ ಬಾರಿಗೆ ನೋಡಿದೇ4 ದಾಸ ಪೀಳಿಗೆ ಬೆಳೆಸಲೂ | ಶೇಷನಾಮಕ ದಿವಿಜಗೇಭಾಸಿಸುವ ಅಂಕಿತವನಿತ್ತೂ | ಪೋಷಿಸಿದೆ ಸದ್ವೈಷ್ಣವತತ್ವ 5 ಸುಜನ ಜನ ಸಂಸೇವಿಸೆ | ವಿಜಯ ವಿಠಲನ ಸ್ಥಾಪಿಸೇಭಜನೆ ಗೈಯುತ ಮೆರೆದೆಯೊ | ನಿಜಪುರದಿ ನೀ ನಿಲ್ಲುತಾ 6 ಸಿರಿಯಧರಿಸಿ ಮೆರೆಯುವ ಗುರು | ಗೋವಿಂದ ವಿಠಲನ ಭಜಿಸುವಾಪರಮ ಗುರುಗಳೆ ನಿಮ್ಮ ಚರಣವ | ಪರಿಪರೀಯಲಿ ಪೂಜಿಪೆ 7
--------------
ಗುರುಗೋವಿಂದವಿಠಲರು
ಮುದ್ದು ಮೋಹನರಾಯಾ | ಅಸ್ಮದ್ಗುರೋರ್ಗುರುಶುದ್ಧ ಜನ ಸಂಪ್ರೀಯ | ನಿಮಗೊಂದಿಸುವೆ ಭವಬಂಧ ಪರಿಹರಿಸಯ್ಯಾ | ಬುಧರಿಂದಗೇಯಾ ಪ ಪಂಕಜ ಮೋದ ಪಾದ ನಂಬಿದೆ ಅ.ಪ. ದೇವಮುನಿನುತ ಪೀಠಾ | ವರ ಚಿಪ್ಪಿಗಿರಿಯಲಿ ದಿವ್ಯ ಭವಹರ ಮಂತ್ರಾ | ಅಂಕಿತ ಸುತಾರಕಪ್ರವರ ಪೊಂದಿದೆ ಪೋತ | ಜಪಿಸುತ್ತ ಮನದೀಶರ್ವವಂದ್ಯ ವಿಧಾತಾ | ಪಾದಾಬ್ಜ ಭಕುತಾ ||ಶ್ರೀ ವರರ ಕರಕಮಲಜಾತನೆ ಭುವಿಯ ಸತ್ತೀರ್ಥಗಳ ಚರಿಸುತ ಪಾವಮಾನಿ ಮತಾಬ್ಧಿಜಾತರ | ಪಾವನವ ಮಾಡ್ಯವನಿಯಲಿಮೆರೆದೆ 1 ಭೃಂಗ ಮುದ್ದು ಮೋಹನಾರ್ಯ ಗುರುರೂಪದೇಶವ ವಿಹಿತ ಮಾರ್ಗದಿಗೈದು ತಂದೆ ಮುದ್ದು ಮೋಹನಾಭಿಧನೆಂದು ಕರೆದೆಯೊ 2 ಗುರುವಿನಾಣತಿಯನ್ನಾ | ಪೊಂದುತಲಿಸ್ವಪ್ನದಿಸಿರಿವಿಜಯ ವಿಠಲನ್ನಾ | ನಿಜಪುರದಿ ನಿಲಿಸಿನಿರುತ ಅರ್ಚನೆಯನ್ನಾ | ಸ್ಥಿರಪಡಿಸಿ ಮುನ್ನಅರಿತು ಮನದಲಿ ನಿನ್ನ | ಉತ್ಕ್ರಮಣವನ್ನಾ ||ಶೌರಿ ದಾಮೋದರನ ಮಾಸದಿ | ವರದತುರ್ದಶಿ ಅಸಿತಪಕ್ಷದಿಸಿರಿ ಗುರೂ ಗೋವಿಂದ ವಿಠಲನ | ಚರಣ ಸರಸಿಜ ಸೇರಿ ಮೆರೆದೆ 3
--------------
ಗುರುಗೋವಿಂದವಿಠಲರು