ಒಟ್ಟು 225 ಕಡೆಗಳಲ್ಲಿ , 48 ದಾಸರು , 177 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಚೀಕರಣಮಾಡಿ ತಾ ಸಂಚರಿಸುವ ಪ ಪಂಚೀಕರಣತಿಳಿಯದೆ ಪ್ರಪಂಚದೊಳು ಮುಳುಗಿ ನಾ ವಂಚಿತನಾದೆ ವಿರಿಂಚಿಭಕ್ತಿಗೆ ಅ.ಪ ಸಚ್ಚಿದಾನಂದ ರೂಪ ವ್ಯಾಪ್ತರೂಪಿ ನಾರಾಯಣ ಅಪ- ಅಚ್ಯುತ ತನ್ನಿಚ್ಛೆಯಿಂದ ವೈಕೃತಾಕಾಶಕ್ಕೆ ಅಂಭ್ರಣಿದೇವಿಯರನೆ ಮುಖ್ಯ ಮಾಡಿದಾ 1 ಗುಣರಾಶಿಯೊಳು ಸತ್ವಕ್ಕೆ ಶ್ರೀದೇವಿಯರು ಮುಖ್ಯ ರಜಕೆ ಭೂದೇವಿ ತಮಕೆ ದುರ್ಗಾದೇವೇರು ಸತ್ಯಜ್ಞಾನಾನಂದದಯೆ ಮೌನಪಂಚೇಂದ್ರಿಯ ಜಯ ಅಕ್ರೌರ್ಯಗುರು ಸೇವೆಯೇ ಸತ್ವಕಾರ್ಯವು2 ತಮಕ್ರೋಧ ಅಹಂಕಾರ ಮದೋನ್ಮಾದ ಚಪಲೋದ್ಯೋಗ ಡಂಭ ಸ್ವಚ್ಛಂದರಜದ ಕಾರ್ಯವು ತಮದ ಕಾರ್ಯ ಅಜ್ಞಾನ ಮೋಹ ನಿದ್ರಾಲಸ್ಯ ಬುದ್ಧಿಶೂನ್ಯ ತಾಪವಾದಿ ಹಿಂಸಾಕಾರ್ಯವು 3 ಸತ್ವಪ್ರಾಚುರ್ಯದಿ ಮದ ಗುಣತ್ರಯವೈಷಮ್ಯಹೊಂದಿ ಶ್ರೇಷ್ಠಕಾರ್ಯಕೆ ಮಹತ್ತತ್ವವಾಯಿತು ಸಾತ್ವತಾಂಪತಿಯ ಇಚ್ಛೆಯಿಂದ ಮಹತ್ತತ್ವದಿ ಅಹಂಕಾರ ತತ್ವವೆಂಬುದೇರ್ಪಟ್ಟಿತು 4 ತೈಜಸ ತಾಮಸ ಅಹಂಕಾರ ವೆನುತಲಿ ಮೂರಹಂ- ಕಾರದಿ ಮೂರು ರುದ್ರರೂಪಗಳು ಬ್ರಹ್ಮವಾಯು ಶೇಷರಿಂದುದಯಿಸಿದರು5 ವೈಕಾರಿಕ ಅಹಂಕಾರದಿ ದೇವತಾ ದೇಹ ಮನಸು ತೈಜಸದಿಂದ ದಶೇಂದ್ರಿಯ ಹುಟ್ಟಿತು ತಾಮಸಾಹಂಕಾರದಿಂದುತ್ಪನ್ನವಾದುವು6 ಸರ್ವ ಮಿಳಿತಮಾಡಿ ಬ್ರಹ್ಮಾಂಡವನೆ ಸೇರಿ ಹರಿಯು ಪದ್ಮನಾಭರೂಪದಿಂದ ಶಯನಗೈದನು ಸರ್ವಲೋಕೋದ್ಧಾರ ಹರಿಯು ನಾಭಿಯೊಳು ಪದ್ಮ ತೋರಿ ಪದುಮದಲ್ಲಿ ಪದ್ಮಸಂಭವನಾಸೃಜಿಸಿದ 7 ಸರ್ವರಂತರ್ಯಾಮಿ ಸಕಲಜೀವರನ್ನು ಸೃಷ್ಟಿಗೈಸಿ ಜೀವಯೋಗ್ಯತಾ ಕಾರ್ಯ ನಡೆಸುತಿರುವನು ಸರ್ವಜೀವಕಾರ್ಯವು ಪಂಚವಿಂಶತಿತತ್ವ ಈ- ಶರಿಂದಲೆ ಕಾರ್ಯನಡೆಯತಿರುವುದು8 ಶಬ್ದತನ್ಮಾತ್ರದಿಂದ ಆಕಾಶ ಹುಟ್ಟಿತು ವಾಯುಹುಟ್ಟಿತು ಸ್ಪರ್ಶತನ್ಮಾತ್ರದಿ ರೂಪತನ್ಮಾತ್ರದಿ ಅಗ್ನಿಭೂತ ಹುಟ್ಟಿತು ಆಗ ರಸತನ್ಮಾತ್ರದಿ ಅಷ್ಟು ಹುಟ್ಟಿತು 9 ಈ ಪರಿವಿರಾಟದಿಂದುಯಿಸಿದವು ಆಕಾಶ ಕೊಂದೆ ಶಬ್ದಗುಣವು ಮಾತ್ರ ಇರುವುದು ಅಹುದು ವಾಯವಿಗೆ ಶಬ್ದ ಸ್ಪರ್ಶವೆರಡುಗುಣಗಳು10 ತೋರುತಿರ್ಪುದಗ್ನಿ ಶಬ್ದಸ್ಪರ್ಶರೂಪ ಗುಣಗಳು ಗುಣ ಶಬ್ದ ಸ್ಪರ್ಶ ರೂಪ ರಸ ಗಂಧವೈದು ಪರಿ ಭೂತಪಂಚಕಗಳ ಅರಿವುದು 11 ಪಂಚಭೂತಗಳು ತಮ್ಮ ಸ್ವಾಂಶಗಳ ಭಾಗಗೈಸಿ ಪ್ರ- ಪಂಚ ಕಾರ್ಯಕಿತ್ತ ಪರಿಯದೆಂತೆನೆ ಆಕಾಶ ದರ್ಧಭಾಗ ಭೂತ ಪ್ರೇತ ಪಿಶಾಚಿಗಳಿಗೂ ಉಳಿ ಪಾದ ಪಾದವೆನ್ನೆ ಜೀವಕೋಟಿಗೂ12 ವಾಯು ತನ್ನರ್ಧಭಾಗ ಪಕ್ಷಿ ಪನ್ನಗಾದಿಳಿಗೂ ಪಾದ ಭಾಗ ಜೀವಕೋಟಿಗೂ ಅಗ್ನಿತನ್ನರ್ಧಭಾಗ ದೇವ ಋಷಿಗಳಿಗೂ ಮಿಕ್ಕಧರ್Àದೊಳ್ ಪಾದಭಾಗ ಜೀವಕೋಟಿಗೂ13 ಅಪ್ಪುತನ್ನರ್ಧಂಶ ಜಲಚರಪ್ರಾಣಿಗಳಿಗು ಮಿಕ್ಕರ್ಧದೊಳು ಪಾದಭಾಗ ಜೀವಕೋಟಿಗೂ ಪೃಥ್ವಿ ತನ್ನರ್ಧಂಶ ಜಡಜೀವಕೋಟಿಗೂ ಮಿಕ್ಕ ರ್ಧದೊಳ್ ಪಾದಭಾಗ ಜೀವಕೋಟಿಗೂ14 ಪೃಥ್ವಿ ಅಪ್ಪು ತೇಜೋ ವಾಯು ಆಕಾಶಗಳು ಸೂಕ್ಷ್ಮರೂಪದಿಂದೆರಡೆರಡಾದವು ಆಕಾಶತನ್ನರ್ಧಾಂಶದಲ್ಲಿ ವಾಯ್ವಗ್ನಿ ಅಪ್ಪು ಪೃಥ್ವಿಗಳಿ ಗೆ ಕೊಟ್ಟು ಸ್ವಾಂಶ ಅಂತಃಕರಣವೆನಿಸಿತು 15 ವಾಯು ಸ್ವಾಂಶದಿಂದುದಾನವೆಂದೆನಿಸಿ ಮಿಕ್ಕ ಪೃಥ್ವೈ ಪ್ತೇಜಾಕಾಶಗಳಿಗೆ ತನ್ನ ಚಲನ ಕೊಟ್ಟಿತು ಅಗ್ನಿ ತನ್ನಸ್ವಾಂಶದಿಂದ ಚಕ್ಷುಸೇಂದ್ರಿಯ ವೆನಿಸಿ ವಾಯ್ವಾಕಾಶಅಪ್ಪು ಪೃಥ್ವಿಗುಷ್ಣ ಕೊಟ್ಟಿತು 16 ಅಪ್ಪು ತನ್ನ ಸ್ವಾಂಶದಿಂ ರಸವೆಂದೆನಿಸಿ ಮಿಕ್ಕ ವಾಯ್ವಾಕಾಶಾಗ್ನಿ ಪೃಥ್ವಿಗೆ ದ್ರವವ ಕೊಟ್ಟಿತು ಪೃಥ್ವಿತನ್ನ ಸ್ವಾಂಶದಿಂ ಗಂಧವೆಂದೆನಿಸಿ ಮಿಕ್ಕ ಅಪ್ತೇಜವಾಯ್ವಾಕಾಶಕೆ ಕಠಿಣ ಕೊಟ್ಟಿತು 17 ಭೂತಪಂಚಕಗಳಿಗೆ ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ ರೂಪವು ಅಧಿಷ್ಠಾನರಾಗಿ ಅವರಂತರ್ಯಾಮಿಯಾಗಿ ಅನಿರುದ್ಧಾದಿ ಐದು ಭಗವನ್ಮೂರ್ತಿ ಇರುವುದು 18 ನಾಮರೂಪ ವರ್ಣಗುಣ ಸ್ವಭಾವ ತೇಜ ಸುಮುಖ ದೇವರಶಕ್ತಿ ಅಕ್ಷರ ಕ್ರಿಯಾ ಎಂಬೀ ಹತ್ತು ಗುಣಗಳು ಭೂತ ಒಂದಕ್ಕೆ ತಿಳಿದು ಉಪಾಸನ ಮಾಳ್ಪಾದೂ ಬುಧರು ಎಲ್ಲರು 19 ನಾಮವೇ ಆಕಾಶ ರೂಪ ಒಟ್ಟು ಭಾವ ಬಯಲು ವರ್ಣ ಕಪ್ಪು ಗುಣಶಬ್ದ ಕ್ರಿಯ ಅನುಗ್ರಹ ಮುಖವೇ ಈಶಾನ ದೇವತೆ ಪರಶಿವಶಕ್ತಿ ಪರಾಶಕ್ತಿ ಅಕ್ಷರವೇ ನಾದವು20 ನಾಮ ವಾಯುರೂಪ ಷಟ್ಕೋಣ ವರ್ಣನೀಲ ಮುಖ ತತ್ಪುರುಷ ದೇವತೆ ಸದಾಶಿವ ಶಕ್ತಿ ಅಕ್ಷರ ಬಿಂದುವೆನಿಪುದು 21 ನಾಮ ಅಗ್ನಿರೂಪ ಮುಕ್ಕೋಣವರ್ಣ ರಕ್ತವರ್ಣ ಮುಖ ಅಘೋರ ದೇವತೆ ರುದ್ರಶಕ್ತಿ ಪಾರ್ವತಿ ಅಕ್ಷರ ಮಕಾರ 22 ನಾಮ ಅಪ್ಪುರೂಪ ಅಧರ್Éೀಂದು ಶ್ವೇತವರ್ಣ ಸ್ವಭಾವದ್ರವ ಗುಣ ಮಾಧುರ್ಯ ವಿಷ್ಣುಶಕ್ತಿ ಅಕ್ಷರಉಕಾರ ಎಂದು ಪೇಳ್ವರು 23 ನಾಮವೇ ಪೃಥ್ವಿರೂಪ ಚತುಷ್ಕೋಣ ವರ್ಣ ಹೇಮ ಸ್ವಭಾವವೇಕಠಿಣ ಕ್ರಿಯ ಸೃಷ್ಟಿ ಗುಣವೆ ಗಂಧವು ಮುಖಸದ್ಯೋಜಾತ ದೇವತೆ ಬ್ರಹ್ಮಶಕ್ತಿ ಸರಸ್ವತಿ ಅಕ್ಷರ ಅಕಾರವು 24 ಉಕ್ತರೀತಿ ಹತ್ತು ಗುಣಗಳೊಳ್ ಭೂತ ಒಂದ- ಕ್ಕೆತಿಳಿದು ಈ ಜ್ಞಾನೇಂದ್ರಿಯಗಳೆಂತಾದವು ಎಂದರಿವುದು ಆಕಾಶಸಮಾನಾಂಶ ಅಗ್ನಿಯು ಮುಖ್ಯಾಂಶದಿರೆ ಶ್ರೋತ್ರೇಂದ್ರಿಯ ಹುಟ್ಟಿ ತೋರುತಿರುವುದು25 ವಾಯುಸಮಾನಾಂಶ ಬಂದು ಅಗ್ನಿ ಮುಖ್ಯಾಂಶದಿರೆ ತ್ವಗೇಂದ್ರಿಯವು ತಾನೆ ತೋರುತಿರುವುದು ಜಿಹ್ವೇಂದ್ರಿಯವು ತೋರುತಿರುವುದು26 ಘ್ರಾಣೇಂದ್ರಿಯವು ತಾನೆ ತೋರುತಿರುವುದು ಅಗ್ನಿ ಸ್ವಾಂಶದಿಂದ ಚಕ್ಷುಷೇಂದ್ರಿಯವೆಂದು ಹಿಂದೆಯೇ ಈ ವಿವರ ಪೇಳಿರುವುದು27 ಪೃಥ್ವಿಸಮಾನಾಂಶದೊಡನೆ ಆಕಾಶ ಸಮಾಂಶಸೇರೆ ವಾಗೇಂದ್ರಿಯವೆ ತಾನೆ ತೋರುತಿರುವುದು ಪೃಥ್ವಿ ಮುಖ್ಯಾಂಶದೊಡನೆ ವಾಯು ಸಮಾಂಶಸೇರೆ ಘ್ರಾಣೇಂದ್ರಿಯವು ತಾನೆ ತೋರುವುದು 28 ಪೃಥ್ವಿಮುಖ್ಯಾಂಶದೊಡನೆ ಅಗ್ನಿ ಸಮಾಂಶಸೇರೆ ಪಾದೇಂದ್ರಿಯವು ತಾನೆತೋರುತಿರ್ಪದು ಪೃಥ್ವಿ ಮುಖ್ಯಾಂಶರೊಡನೆ ಅಪ್ಪು ಸಮಾವಾಂಶ ಸೇರೆ ಪಾಯೇಂದ್ರಿಯವೆಂದು ತೋರುತಿರ್ಪುದು29 ಪೃಥ್ವಿಸ್ವಾಂಶವೇ ಗುಹ್ಯೇಂದ್ರಿಯವೆಂದು ಪೂ ರ್ವೋಕ್ತ ರೀತಿಗಣನೆ ತರುವುದು ಈ ರೀತಿ ಕರ್ಮೇಂದ್ರಿಯಗಳೆಲ್ಲ ಪೃಥ್ವಿ ತತ್ವದಿಂದಲೇ- ರ್ಪಟ್ಟು ಬೆಳಗುತಿರುವುದು30 ಆಕಾಶ ಸಮಾನಾಂಶ ಅಪ್ಪು ಮುಖ್ಯಾಂಶದಿರೆ ಶಬ್ದ ವಾಯು ಸ್ವಯಾಂಶದಿ ಅಪ್ಪು ಮುಖ್ಯಾಂಶದಿ ಸ್ಪರ್ಶತೋರ್ಪುದು ಅಗ್ನಿ ಸಮಾನಾಂಶ ಅಪ್ಪು ಮು ಅಪ್ಪು ಮುಖ್ಯಾಂಶದಿಂದಲೆ31 ಅಪ್ಪುಸ್ವಯಾಂಶವೇ ರಸವು ಎಂದೆನಿಸಿತು ತನ್ಮಾತ್ರಪಂಚಕಕ್ಕೆ ಮೂಲ ಅಪ್ಪುತತ್ವವು ಪ್ರಾಣಾದಿಪಂಚಗಳ ಮುಂದೆ ವಿವರಿಸಿಹುದು ವಾಯುತತ್ವವೇ ಅದಕೆ ಮುಖ್ಯಕಾರಣ32 ವಾಯು ಮುಖ್ಯಾಂಶದೊಳು ಆಕಾಶ ಸಮಾನಾಂಶ ಸೇರೆ ಸಮಾನ ವಾಯುವೆಂತೆಂದೇರ್ಪಟ್ಟಿತು ವ್ಯಾನ ವಾಯು ಎಂತೆಂದೇರ್ಪಟ್ಟಿತು 33 ವಾಯು ಮುಖ್ಯಾಂಶದೊಳು ಅಪ್ಪು ಸಮಾನಾಂಶ ಸೇರೆ ಅಪಾನವಾಯುವೆಂತೆಂದೇರ್ಪಟ್ಟಿತು ವಾಯು ಮುಖ್ಯಾಂಶದೊಡನೆ ಪೃಥ್ವಿಸಮಾನಾಂಶ ಸೇರಲು ಪ್ರಾಣ ವಾಯು ಉತ್ಪನ್ನವಾಯಿತು34 ವಾಯುವಿನ ಸ್ವಯಾಂಶವೇ ಉದಾನವಾಯುವೆನಿಸಿತು ಮುಂದೆ ವಿವರಿಸುವುದು ಜ್ಞಾನ ಪಂಚಕ ಈ ಜ್ಞಾನ ಪಂಚಕಕ್ಕೆ ಆಕಾಶ ತತ್ವವೇ ಮುಖ್ಯಕಾರಣವೆಂದು ಬುಧರು ಪೇಳ್ವರು35 ಆಕಾಶ ಮುಖ್ಯಾಂಶದಿ ವಾಯು ಸಮಾನಾಂಶ ಸೇರಿ ದಾಗಲೆ ಮನಸು ಎಂಬುವುದು ಹುಟ್ಟಿತು ಆಕಾಶ ಮುಖ್ಯಾಂಶದಿ ಅಗ್ನಿ ಸಮಾನಾಂಶ ಸೇರಿ ದಾಗಲೆ ಬುದ್ಧಿ ಎಂಬುದು ಗೋಚರವಾಯಿತು 36 ಸೇರೆ ಚಿತ್ತವೆಂಬುದು ವ್ಯಕ್ತವಾಯಿತು ಆಕಾಶ ಮುಖ್ಯಾಂಶದೊಳು ಪೃಥ್ವಿಸಮಾನಾಂಶ ಸೇರಿ ಅಹಂಕಾರವೆಂಬುದೇರ್ಪಟ್ಟಿತು 37 ಆಕಾಶ ಸ್ವಾಂಶವೇ ಕತೃತ್ವವೆಂದೆನಿಸಿತು ಈಪರಿಯ ತಿಳಿವುದು ಜ್ಞಾನಪಂಚಕ ಜ್ಞಾನೇಂದ್ರಿಯ ಕರ್ಮೇಂದ್ರಿಯ ಪಂಚತನ್ಮಾ ತ್ರಗಳಿಗೆ ಆಧ್ಯಾತ್ಮಿಕಾದಿಭೌತಿಕದೇವತೆಗಳ ತಿಳಿವುದು 38
--------------
ಉರಗಾದ್ರಿವಾಸವಿಠಲದಾಸರು
ಪರಮಾನುಗ್ರಹ ಮಾಡು -ಈ ತರಳನ ದಯದಿಂ ನೋಡು ಪ ನರಹರಿ ನೀನಲ್ಲವೆ ಕರುಣಾಳು ಅ.ಪ ಅನ್ನ ಸೇರಲಿಲ್ಲವಂತೆ -ಮಲಗಿ ನಿನ್ನಿಂದಲಿ ಹೀಗಿಹನಂತೆ ಘನ್ನಮಹಿಮ ನಿನ್ನವರಿಗೆಲ್ಲ -ಈ ಬನ್ನ ನ್ಯಾಯವೆ ಪ್ರಸನ್ನ ನೃಸಿಂಹ 1 ತುಡುಗಾಟಗಳಾಡಿ ಬಳಲಿ -ಈ ಹುಡುಗ ಮನೆ ಮನೆಯ ತೊಳಲಿ ಕಡುಭೀತಿಯ ಹೊಂದಿರುವ ನಾವು ನಿ- ನ್ನೊಡವೆಯಲ್ಲವೆ ಒಡೆಯ ನರಹರಿಯೆ 2 ಔಷಧ ಪಥ್ಯಗಳೇಕೆ -ನಿ ರ್ದೋಷ ನೀನೊಳಗಿರಲಿಕ್ಕೆ ಶೇಷಶಯನ ಗುರುರಾಮವಿಠಲ ಪÉೂೀಷಿಸುವನು ನೀನೆ ನೀನೆ ನಿಜ3
--------------
ಗುರುರಾಮವಿಠಲ
ಪರಸೌಖ್ಯ ಪ್ರದ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತವೆಲ್ಲ | ದೂರ ಓಡಿಸುತಾ ಅ.ಪ. ಅಚ್ಯುತ ಕ್ಷಿತಿ ರಮಣ ಸೇವಾ 1 ಸಾಧನಕೆ ಸಹಕಾರಿ | ಸಾಧು ಜನ ಸತ್ಸಂಗನೀ ದಯದಿ ಒದಗಿಸುತ | ಕಾಪಾಡೊ ಹರಿಯೇ |ಮೋದ ತೀರ್ಥರ ಮತವ | ಭೋಧಿಸುತ ಇವಳೀಗೆಮೋದ ಪಾಲಿಸಿ ಹರಿಯೆ ಉದ್ಧಾರ ಮಾಡೋ2 ಮಾತೃದತ್ತವು ಎನ್ನೆ | ವೆಂಕಟೇಶನ ಪೂಜೆಸಾರ್ಥಕೆನಿಪುದು ಹರಿಯೆ | ಪಾರ್ಥ ಸಾರಥಿಯೇಕಾರ್ತಸ್ವರ ಮೊದಲಾದ | ಅರ್ಥಗಳ ಯೋಚಿಸಳುವಾರ್ತೆ ಎನ್ನನು ಭವವು ಆರ್ತರುದ್ಧರಣಾ 3 ತಂದೆ ಮುದ್ದು ಮೋಹನ್ನ | ಗುರುವನುಗ್ರಹವಿಹುದುಇಂದು ನಿಮ್ಮದಿ ನಮಿಸಿ | ಅಂಕಿತದ ಪದವಾಛಂದದಲ್ಯುದ್ಧರಿಸಿ | ಉಪದೇಶಿಸುತ್ತಿಹೆನುಮಂದನುದ್ಧಟ ತನವ | ತಂದೆ ಮನ್ನಿಪುದೋ 4 ಇಂದು ಮುಖಿ ಹೃದಯದಾ | ಅಂಬರದಿ ಪ್ರಕಾಶಿಸೆನೆನಂದ ತೀರ್ಥಸುವಂದ್ಯ | ಪ್ರಾರ್ಥಿಸುವೆ ನಿನಗೇತಂದೆ ಮುದ್ದು ಮೋಹನ್ನ | ವಿಠ್ಠಲನೆ ಗುರು ಗೋ-ವಿಂದ ವಿಠ್ಠಲ ಎನ್ನ | ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪವಮಾನವರದ ವಿಠಲ | ಇವನ ನೀಸಲಹೋ ಪ ಭವದೊಳಗೆ ಸಂತಪ್ತ | ತವಪಾದ ಶರಣನ ಅ.ಪ. ರಾಶಿಪುಣ್ಯವು ಫಲಿಸೆ | ದಾಸದೀಕ್ಷೆಗೆ ಒಲಿದುಆಶಿಸಲು ತೈಜಸನು | ಭಾಸುರಾಂಕಿತಕೇಸೂಸಿ ತನ್ನನುಗ್ರಹದ | ಭಾಷೆ ಅಸ್ತ್ವೆಂದೆನುತಲೇಸಾಗಿ ಪೇಳಲುಪ | ದೇಶಿಸಿಹೆ ಹರಿಯೇ 1 ಕರ್ಮ | ಸಂಚಿತಾದಿಗಳು 2 ತತ್ವರೊಲಿಮೆಯ ಕೊಡಿಸು | ತತ್ವಾರ್ಥಸ್ಪುರಿಸಿವಗೆಮೃತ್ಯುವೆನೆ ಗೆಲುವಂಥ | ಪಥವನ್ನೆ ತೋರಿಕರ್ತತಾನಲ್ಲೆಂಬ | ಉತ್ಕøಷ್ಟ ಮತಿಯಿತ್ತುಎತ್ತು ಭವದಿಂ ಹರಿಯೇ | ಉತ್ತಮೋತ್ತಮನೆ 3 ಸರ್ವತ್ರ ಸರ್ವದಾ | ಶರ್ವನೊಡೆಯನೆದೇವಸರ್ವಮಂಗಳ ನಿನ್ನ | ನಾಮಸುಧೆಯನ್ನುದರ್ವಿಜೀವಿಗೆ ಉಣಿಸಿ | ಭವಕಡಲ ಪ್ಲವನೆನಿಸೊಸರ್ವಾಂತರಾತ್ಮಕನೆ | ಉದ್ದರಿಸೊ ಇವನಾ 4 ಜೀವ ಅಸ್ವಾತಂತ್ರ | ದೇವ ನಿಜಸ್ವಾತಂತ್ರಜೀವ ಜಡರುಗಳೆಲ್ಲ | ದೇವರಾಧಿನಾಈ ವಿಧದ ಸುಜ್ಞಾನ | ಆವಾಗಲೂ ಕೊಟ್ಟುದೇವಗುರು ಗೋವಿಂದ | ವಿಠಲ ಪೊರೆ ಇವನಾ 5
--------------
ಗುರುಗೋವಿಂದವಿಠಲರು
ಪವಮಾನವಿಠಲ | ಕಾಪಾಡೊ ಇವನಾ ಪ ಭುವಿ ಭವ್ಯ ಮರುತಮತ | ದೀಕ್ಷೆಯುಳ್ಳವನಾ ಅ.ಪ. ಭಾವಿಮಾರುತರ ದಿವ್ಯ | ಪಾದಗಳನಾಶ್ರಯಿಸಿದೇವ ಗುಹ್ಯವು ಎಂಬ | ಆಖ್ಯಾನ ಪಠಿಸೀಭಾವಭಕ್ತಿಯಲಿಂದ | ಪೂರಿತನು ತಾನಾಗಿಧಾವಿಸಿ ಬಂದಿಹನೊ | ಎನ್ನ ಬಳಿಗಾಗಿ1 ಗುರುವನುಗ್ರಹ ಪಡೆದು | ಗುರುದತ್ತ ಅಂಕಿತವನೆರವಿನಾ ಸಾಧನವ | ವಿರಚಿಸಲು ಮಾರ್ಗಅರಿಯದಲೆ ಪ್ರಾರ್ಥಿಸುವ | ಕರುಣಪಯೋನಿಧಿಯೇಪೊರೆಯ ಬೇಕಿವನ ಪರಿಯ | ಮರುತಾಂತರಾತ್ಮ 2 ತರತಮಜ್ಞಾನವನು | ಹರಿಗುರು ಸದ್ಭಕ್ತಿಪರಿಪರಿಯಲಿಂ ವೃದ್ಧಿ | ಗೈಸಿವಗೆ ಹರಿಯೇಗುರು ಕರುಣ ಕವಚದಿಂ | ಹರಿಯ ಸರ್ವೊತ್ತಮತೆಅರಿವಾಗಲಿವಗೆಂದು | ಪ್ರಾರ್ಥಿಸುವೆ ಹರಿಯೆ 3 ಮೂರ್ತಿ | ಕೃತಿರಮಣ ದೇವ 4 ಮಧ್ವ ರಮಣನೆ ದೇವ | ಹೃದ್ಯ ಹರಿ ನಿನಕಾಂಬಹೃದ್ಯ ಸಾಧನ ಗೈಸಿ | ಉದ್ದರಿಸೊ ಇದನಾಶುದ್ಧ ಮೂರುತಿ ಗುರು | ಗೋವಿಂದ ವಿಠಲನೆಬುದ್ಧಿಯಲಿ ನೀನಿಂತು | ಶುದ್ಧ ಮತಿ ಈಯೋ 5
--------------
ಗುರುಗೋವಿಂದವಿಠಲರು
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಪೀಠಸಮರ್ಪಣೆಕಂ|| ಮಾನಸ ಪೂಜೆಯ ವಿರಚಿಸಿಶ್ರೀನಿಲಯನ ಚರಣಗಳಿಗೆ ಪಾವುಗೆಗಳ ನಾಂಆನತನಾಗುತಲೊಪ್ಪಿಸಿಭಾನುವಿನ ಪಥದಲಿಳುಹಿ ಬಿಂಬದಿ ಭಜಿಪೆಂಬಂದೀ ಪೀಠದಿ ನೆಲಸೊ ಹೃÀದಯಮಂದಿರದಿಂದಾ ಕರುಣದಿಂ ವೆಂಕಟರಾಯಾ ಪಪುರದೊಳು ವಿಮಲೆಯುತ್ಕುರುಷಣಿಯಗ್ನಿ ಯೊಳಿರುವಳು ಜ್ಞಾನೆ ದಕ್ಷಿಣದೇಶದಿನಿರುರುತಿಯೊಳು ಕ್ರಿಯೆ ವರುಣನೊಳ್ಯೋಗಾಖ್ಯೆಮರುತನೊಳ್ಪ್ರಹ್ವಿ ಸೋಮನೊಳ್ ಸತ್ಯೆುಹಳಾಗಿ 1ಈಶನೊಳೀಶಾನೆ ಮಧ್ಯದೊಳನುಗ್ರಹೋಪಾಸಿಕೆಯಾದಿಯಾಗಿರುತಿಹರುವಾಸುದೇವನೆ ನಮ್ಮನೊಲಿದು ರಕ್ಷಿಸುವರೆಸಾಸಿರ ನಾಮಸನ್ನುತನೆ ಸಂತಸದಿಂದ 2ಅನಲನೊಳ್ ಧರ್ಮ ನಿರುರುತಿಯೊಳ್ ಜ್ಞಾನವುತನುಗೊಂಡು ವೈರಾಗ್ಯ ಮರುತನೊಳುವಿನಯದಿಂದೈಶ್ವರ್ಯನೀಶದೇಶದಿ ಸೇವೆಗನುಕೂಲರಾಗಿ ಕಾದಿರುವರೆನ್ನೊಡೆಯನೆ 3ಮುಂದೆಯಧರ್ಮ ದಕ್ಷಿಣದೊಳಜ್ಞಾನವುಹಿಂದೆಡೆಯೊಳಗವೈರಾಗ್ಯ ತಾನುಇಂದುದೇಶದೊಳನೈಶ್ವರ್ಯನೊಂದಿರುವನುಇಂದೆಮ್ಮನೊಲಿದು ರಕ್ಷಿಸಲು ಗೋವಿಂದನೆ 4ಕಲಶದೊಳ್ ಗಂಗಾದಿ ನದಿಗಳು ಶಂಖದಜಲದೊಳು ಬ್ರಹ್ಮಾದಿಗಳ ತೀರ್ಥಸಂಘವುಒಲಿದಘ್ರ್ಯ ಪಾದ್ಯಾಚಮನ ಸ್ನಾನ ಶುದ್ಧಾಂಬುಗಳ ಪಂಚಪಾತ್ರೆಗಳೊಳು ನೆಲಸಿವೆ ಸ್ವಾಮಿ 5ಪುರುಷಸೂಕ್ತದಿಂದೆನ್ನ ಶರೀರದೊಳ್ಪೂಜಿಪವರಬಿಂಬದೊಳು ನ್ಯಾಸಗೈದಿಹೆನುಪರಮ ಮಂತ್ರಾಧಿದೇವತೆಗಳನೆಂಟು ಪನ್ನೆರಡಕ್ಕರದ ವಿದ್ಯೆುಂದಲು ಜಗದೀಶ 6ಗುರುವಾಸುದೇವಾರ್ಯರೂಪದಿ ಶ್ರೀರಂಗಪುರದ ಕಾವೇರಿ ತೀರದೋಳು ನೀನೆಕರುಣಿಸಿದತಿ ಗೋಪ್ಯ ಮಾರ್ಗದಿಂದರ್ಚಿಪೆತಿರುಪತಿ ಕ್ಷೇತ್ರದ ದೊರೆಯೆ ವೆಂಕಟರಾಯ 7ಓಂ ನಂದಗೋಪಪ್ರಿಯಾತ್ಮಜಾಯ ನಮಃ
--------------
ತಿಮ್ಮಪ್ಪದಾಸರು
ಪುಲಿಗಿರಿ ಧೊರೆಯ ಪ ಶ್ರೀರಮಣೀ ನಿಜವಲ್ಲಭನ-ಮಾರ ಚತುರ್ಮುಖರಿಗೆ ಪಿತನ ನಾರದ ಶರ್ವ ಪಿತಾಮಹನ-ಮದ- ವಾರಣಮುಖ ಪ್ರಪಿತಾಮಹನ 1 ಕಿರೀಟವ ನಿರಸಿಹನ ಕರದಲ್ಲಿ ಚಕ್ರವ ಪಿಡಿದಿಹನಾ-ನಿಜ-ಕರುಣದಿ ಭಕ್ತರಿಗೊಲಿದಿಹನ2 ಕೊರಳೊಳು ಪೊತ್ತಿಹನ ಬಾಲಕ ಸುಕೃತಾನುಗ್ರಹನ-ನಿಜ ಲೀಲೆಯೊಳಾಸುರ ನಿಗ್ರಹನ 3 ಪಡೆದ ಪಾದಾಂಬುಜನ ವಿಹಂಗ ಗುಣಗಣ ಸಂಗತನ 4 ಭವಭಯ ಮೋಚನನ ವರವ್ಯಾಘ್ರಾಚಲ ನಾಯಕನ-ನಮ್ಮ- ವರದವಿಠಲ ವರದಾಯಕನ5
--------------
ಸರಗೂರು ವೆಂಕಟವರದಾರ್ಯರು
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ವೇದವ್ಯಾಸ ಪ್ರಥಮ ಆಧ್ಯಾಯ ಪ್ರಾದುರ್ಭಾವಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ನಾರಾಯಣ ಸರ್ವ ಉರು ಗುಣಾರ್ಣವ ನಮೋ ಪಾರತಂತ್ರ್ಯಾದ್ಯಖಿಲ ದೋಷಾತಿ ದೂರ ಪರ ಬ್ರಹ್ಮ ಶ್ರೀ ರಮಣ ವಿಷ್ಣು ಸರ್ವೋತ್ತಮನೇ ಸೂರಿ ಜ್ಞಾನ ಪ್ರಾಪ್ಯ ನಿಗಮೈಕ ವೇದ್ಯ 1 ವಾಸುದೇವ ವೈಕುಂಠ ನಮೋ ತುರ್ಯ ಸಂಕರ್ಷಣ ಪ್ರದ್ಯುಮ್ನಾನಿರುದ್ಧ ತುರಗಾಸ್ಯ ಕಾರ್ದಮ ನಾಭಿಜಾತ್ರೇಯನೇ ಪರಮಾತ್ಮ ಉದ್ದಾಮ ಹರಿ ಶ್ರೀನಿವಾಸ 2 ಕೂರ್ಮ ಕ್ರೋಢ ನರಸಿಂಹ ವಾಮನ ಮುನಿಜ ರಾಘವ ಕೃಷ್ಣ ವನಜ ಕಲ್ಕೀಶ ಆನಂದ ಜ್ಞಾನಾದಿ ಗುಣಮಯ ರೂಪಗಳು ನಿತ್ಯ 3 ವಾರಿಜ ಭವಾಂಡವ ಸೃಜಿಸಿ ಅದರೊಳು ಪೊಕ್ಕು ಕೃತಿ ನಡೆಸಿ ಮೂರು ವಿಧ ಅಧಿಕಾರಿಗಳಿಗೆ ಗತಿ ಇತ್ತು ಮೂರು ವಿಧ ಜೀವರಿಗೆ ಯೋಗ್ಯ ಫಲವೀವಿ 4 ಯದಾ ಯದಾಹಿ ಸದ್ಧರ್ಮಕ್ಕೆ ಹಾನಿಯೋ ಅಧರ್ಮಕ್ಕೆ ವೃದ್ಧಿಯೋ ಆದಾಗ ಅವತರಿಪಿ ಸಾಧುಗಳ ಉದ್ಧಾರ ಪಾಪಿಗಳ ಪತನಕ್ಕೆ ಸದ್ಧರ್ಮ ಸ್ಥಾಪನೆಗೆ ಶ್ರೀಶ ಮುಕುಂದ 5 ಕಲಿಯ ಚಟುವಟಿಕೆಯಲಿ ವೈದಿಕ ಜ್ಞಾನ ಇಳೆಯಲಿ ಸುಜನರಲಿ ಕಡಿಮೆ ಆಗಿ ಶೀಲ ಗೌತಮ ಸಹ ನಿಧಾನ ತಪ್ಪಿ ಶಪಿಸೆ ಬೆಳೆಯಿತು ಅಜ್ಞಾನ ಕಲಿ ವಿಷ ಏರಿತು 6 ದೇವತೆಗಳಿದು ನಿನ್ನಲಿ ಪೇಳಿ ಪಾಥಿರ್üಸಲು ದೇವ ದೇವೋತ್ತಮ ನೀ ಅಭಯವನಿತ್ತು ಭುವಿಯಲಿ ಪರಾಶರ ಸತ್ಯವತಿ ಸುತನೆಂದು ಅವತಾರ ಮಾಡಿದಿ ಸಜ್ಜನೋದ್ಧಾರ 7 ವೃತತಿಜಾಸನ ಸುತ ವಸಿಷ್ಠ ಋಷಿಗಳ ಮಗ ಶಕ್ತಿ ಋಷಿಗಳ ಪುತ್ರ ಪರಾಶರ ಋಷಿಯು ಆ ತಪೋಧನ ನಿನ್ನ ಕುರಿತು ತಪಶ್ಚರಿಸಿದರು ಅಜ ನೀ ತನ್ನಲವತರಿಸು ಎಂದು 8 ವೇದ ವೇದಾಂಗ ಕೋವಿದ ಪರಾಶರರ ಶ್ರದ್ಧೆ ಶೀಲತ್ವವ ಮೆಚ್ಚಿ ನೀನು ಪೇಳ್ದಿ ವಸುರಾಜನ ಸುತೆ ಸತ್ಯವತಿಯ ಸುತನೆನಿಸಿ ಅವತಾರ ಮಾಡುವಿ ಎಂದು 9 ವಸುರಾಜ ಅಡವಿಯಲಿ ಬೇಟೆಯಾಡುವಾಗ ಇಚ್ಚೈಸಿ ಮಗ ತನ್ನ ರಾಣಿಯ ನೆನೆಯೇ ವಿಸರ್ಜನೆ ಆಯಿತು ರೇತಸ್ಸು ಅದನ್ನ ತನ್‍ಸತಿಗೆ ಕಳುಹಿಸಿದ ಪಕ್ಷಿ ಮೂಲಕ 10 ಶೇನಪಕ್ಷಿ ಅದನ್ನ ಕುಂಡದಲಿ ಹಿಡಕೊಂಡು ರಾಣಿಯ ಪಟ್ಟಣಕೆ ಹೋಗುವ ಮಾರ್ಗದಲಿ ಯ- ಶೇನಪಕ್ಷಿ ತಡೆದು ಯುದ್ಧ ಮಾಡಿತು 11 ಆಗ ವಸುರಾಜ ಕೊಟ್ಟ ಪೊಟ್ಟಣ ನೀರೊಳು ಬಿದ್ದು ಬಿದ್ದ ವೇಗದಲಿ ಎರಡಾಗಿ ಆಗ ಗಂಗೆಮಾತೆಯು ಪ್ರಸನ್ನಳಾಗಿ ಸಣ್ಣದರೋಳ್ ಆವಿಷ್ಟಳಾದಳು ಅದನ್ನ ಹೆಣ್ಣು ಮೀನೊಂದು ನುಂಗಿ ಗರ್ಭ ಧರಿಸಿತು 12 ಸರ್ವೋತ್ತಮನೇ ನಿನ್ನ ಅವತಾರ ಕಾಲದಲಿ ಗಂಗಾಧರಾದಿ ದೇವತೆಗಳು ತಪಸ್ ಮಾಡಿ ವರಗಳ ಹೊಂದುವುದು ಅನುಚಿತವೂ ಅಲ್ಲ ಆಶ್ಚರ್ಯವೂ ಅಲ್ಲ ಗಂಗಾಧರನೂ ತಪವಾಚರಿಸಿ ನಿನ್ನನುಗ್ರಹದಿಂ ಪುತ್ರನಾದ ಶುಕನಾಗಿ 13 ಮತ್ಸದ ಗರ್ಭವು ವರ್ಧಿಸಿತು ಆಗ ಬೆಸ್ತರು ಆ ಮೀನ ಹಿಡಿದು ಸೀಳೆ ಅದರ ಉದರದಿ ಎರಡು ಶಿಶುಗಳ ಕಂಡರು ಒಂದು ಹೆಣ್ಣು ಮತ್ತೊಂದು ಮಗು ಗಂಡು 14 ತಮ್ಮ ನಾಯಕ ದಾಸರಾಜನಲಿ ಪೋಗಿ ಆ ಮೀನುಗಾರರು ಶಿಶುಗಳ ಕೊಡಲು ಆ ಮತಿವಂತನು ವಸುರಾಜನಲಿ ಪೋಗಿ ಸಮಸ್ತವ ಪೇಳಿ ಮಕ್ಕಳ ಮುಂದೆ ಇಟ್ಟ 15 ವಸುರಾಜನು ವಿಷಯವ ಚೆನ್ನಾಗಿ ಅರಿತು ಶಿಶುಗಳು ತನ್ನದೇ ಎಂದು ತಿಳಿದು ಭಾಸ್ಕರೋಜ್ವಲ ಗಂಡು ತಾನು ಇಟ್ಟುಕೊಂಡು ಶಶಿಕಾಂತಿಯ ಮಾತ್ಸೇಯ ದಾಸನಿಗೆ ಕೊಟ್ಟ 16 ಶೀಲತ್ವ ಸುಗುಣತ್ವದಲಿ ಪ್ರಕಾಶಿಸುತ ಬೆಳೆಯುತಿಹಳು ದಾಸರಾಜನ ಗೃಹದಿ ಬಾಲೆ ಇವಳಿಗೆ ಸತ್ಯವತೀ ಎಂಬ ನಾಮವು ಬಲು ಪುಣ್ಯವಂತಳು ಸುಶುಭ ಲಕ್ಷಣಳು 17 ದಾಸನಾಯಕನ ಮನೆಯಲ್ಲಿ ಬೆಳೆವ ಕಾರಣ ದಾಸನು ನಾವಿಗನು ಆದ್ದರಿಂದ ಸುಶೀಲೆ ಈ ಸತ್ಯವತಿಯು ನಾವೆ ನಡೆಸುವಳು ವಸುರಾಜಪುತ್ರಿ ಇವಳಿಗೆ ಗರ್ವವಿಲ್ಲ 18 ಸಮುದ್ರ ಕುರಿತು ಪ್ರವಹಿಸುವ ಸೂರ್ಯಾತ್ಮಜ ಯಮುನೆಯ ದಾಟಲು ಹಡಗಿನಲ್ಲಿ ಕುಳಿತ ಆ ಮುನಿ ಪರಾಶರರಿಗೆ ಒದಗಿದಳು ಕಾಲ 19 ಶ್ರೀಶ ನಿನ್ನಯ ಮಾತು ನೆನೆದು ಪರಾಶರರು ಆ ಸತ್ಯವತಿಯನ್ನ ಮದುವೆ ಆಗಲು ಒಪ್ಪಲು ವಸಿಷ್ಠರು ಯಾಜ್ಞವಲ್ಕ್ಯಾದಿ ಮುನಿ ಸಭೆಯಲಿ ವಸುರಾಜನು ಧಾರೆ ಎರೆದಿತ್ತ ಮಗಳ 20 ನಾರದರ ವೀಣೆ ಸಂಗೀತ ಗಾಯನವು ಸುರ ಗಂಧರ್ವರ ಸುಸ್ವರ ಗಾನ ಸುರನಾರಿ ನರ್ತಕರ ಆನಂದ ನರ್ತನವು ಸರಸಿಜಾಸನ ಮುಖ ಸುರರ ಸ್ತೋತ್ರಗಳು 21 ನೀಲ ಮೇಘ ಶ್ಯಾಮ ಇಂದಿರಾಪತಿಯು ಕಲಿ ವಿದಾರಕ ವಿಜ್ಞಾನ ಭೋದಕನು ಇಳೆಯಲಿ ವ್ಯಾಸ ಅವತಾರ ಸಮಯವೆಂದು ಸುರರು ಕೂಡಿ ತುಂಬಿದರು 22 ನಿಮೇರ್ಘ ಹಿಮ ಆಗಲಿ ದೇಶ ಪ್ರಕಾಶಿಸಿತು ಮರಗದ ವರ್ಣದಲಿ ಜ್ವಲಿಸುವ ರೂಪ ಉರು ಸ್ವಕಾಂತಿ ಸಹಸ್ರ ಲಕ್ಷ ಕೋಟ್ಯಮಿತ ಸೂರ್ಯತೇಜಃ ಪುಂಜ ಅವತಾರ ಮಾಡಿದಿ 23 ಶೋಣಿತ ಸಂಬಂಧ ಇಲ್ಲವೇ ಇಲ್ಲ ಅಪ್ರಾಕೃತ ಚಿದಾನಂದ ಕಾಯ ಚಿಕ್ಕ ಬಾಲಗೆ ಅಂದು ಒಲಿದು ಕಂಬದಿ ಬಂದ ಶ್ರೀಕಾಂತ ನರಸಿಂಹ ಅವತಾರದಂತೆ 24 ತಂದೆ ತಾಯಿಲ್ಲದೆ ಪುಂ ಸ್ತ್ರೀ ಕೂಡದೆ ಅಂದು ಕಂಬದಿಂದ ಸ್ವೇಚ್ಛದಿ ಬಂದಿ ಇಂದು ಸ್ವತಂತ್ರದಿ ಸತ್ಯವತಿ ಋಷಿ ಮುಂದೆ ಬಂದು ಪ್ರಕಟಿಸಿದಿ ವ್ಯಾಸ ಅವತಾರ 25 ಶೋಣಿತ ರಹಿತ ಅಲೌಕಿಕವಾದರೂ ನೀ ಲೋಕ ರೀತಿಯಲಿ ಪುಟ್ಟಿದ ತೆರದಿ ಕಲಿ ಕಲಿ ಪರಿವಾರ ದುರ್ಜನ ಮೋಹಕ್ಕೆ ಮಾಲೋಲ ನೀ ವಿಡಂಬನ ಮಾಡಿ ತೋರ್ದಿ 26 ಅಂಕುಶ ಅಬ್ಜ ಧ್ವಜ ಚಕ್ರ ರೇಖ ಪದಯುಗ ಪದ್ಮ ಸುಖಜ್ಞಾನಮಯ ಜ್ಞಾನ ಸುಖದ ಧ್ಯಾನಿಪರ್ಗೆ ತಟಿತ್ ಪ್ರಭಾ ಜಟಾಮಕುಟ ಶಿರವು ಪ್ರಕಾಶಿಸುವ ಕಸ್ತೂರಿ ತಿಲಕ ಲಲಾಟ 27 ಸೃಷ್ಟ್ಯಾದಿಕರ್ತ ನಿನ್ನ ಭೃ ಚೆಂದ ನಿಖಿಳ ಇಷ್ಟಪ್ರದ ಅನಿಷ್ಟ ನಿವಾರಕ ನೋಟ ಕರ್ಣ ಕುಂಡಲದ್ವಯವು ಶ್ರೇಷ್ಠತಮ ತುಳಸೀ ದಳಗಳು ಕಿವಿಯೋಳ್ 28 ಸುಧಾರಸ ಸುರಿಸುವ ಶಶಿಕೋಟಿ ನಿಭ ಮುಖ ಸಂದರ್ಶನ ಸುಖ ಸಂದೋಹ ಈವುದು ಮಂದಹಾಸವು ನತಜನ ಶೋಕ ಕಳೆವುದು ಶುಭ ಲೋಹಿತೋಷ್ಟ್ರಗಳು 29 ಸುಂದರ ರೇಖಾತ್ರಯಯುತ ಕುಂಬುಗ್ರೀವದಿ ಕೌಸ್ತುಭ ಮಣಿಯು ಶ್ರೀ ದೇವಿಗಾಶ್ರಯ ವಿಶಾಲ ವಕ್ಷ ಸ್ಥಳದಿ ಚಿದ್ದಮಲ ಮೋದಮಯ ಶ್ರೀವತ್ಸ ಅಂಕ 30 ಪೊಳೆವ ರತ್ನದ ಹಾರಗಳು ಉರದೇಶದಲಿ ವಲಿತ್ರಯಾಂಕಿತ ಉಳ್ಳ ಉದರ ಸುಂದರವು ಕೀಲಾಲಜ ಭವಾಂಡವ ಪಡೆದ ನಾಭಿಯು ಬೆಳಗುತಿದೆ ಮೌಂಜಿಯು ಸುಪ್ರಕಾಶದಲಿ 31 ಸುಪವಿತ್ರ ಜ್ಞಾನ ತೇಜ ಕೃಷ್ಣಾಜಿನವು ಶ್ರೀಪ ನಿನ್ನಯ ದಿವ್ಯ ಯೋಗ ಅಸನವು ಉಪಮವಿಲ್ಲದ ಸುಂದರ ಕಟಿಜಾನು 32 ಉರು ಜಂಘಾ ಗುಲ್ಫ ಪದ್ಮಾಂಘ್ರಿ ಸೌಂದಂiÀರ್i ಉರು ಸುಶುಭ ಲಕ್ಷಣ ವರ್ಣಿಸಲಶಕ್ಯ ವಜ್ರನಖಗಳ ದ್ಯುತಿ ಶಶಿ ಕೋಟ್ಯಮಿತವು ಶುಭ್ರತಮ ಯಜÉ್ಞೂೀಪವೀತ ಧರಿಸಿರುವಿ 33 ತಿಮಿರ ಮಾರ್ತಾಂಡ ನೀ ರವಿ ಕೋಟಿ ಅಮೃತ ಇಂದು ಕೋಟಿ ಅತ್ಯಧಿಕ ತೇಜ ಈ ದಿವ್ಯ ಸುರೂಪದಿ ಶ್ರೀಯಃಪತಿಯೇ ಪ್ರಾದುರ್ಭವಿಸಿದಿ ಸ್ವಾಮಿ 34 ನೀ ಪ್ರಾರ್ದುರ್ಭವಿಸಿ ದಿನ ಏಳೊಳಗೆ ಉಪನಯನ ರೂಪ ಪೂಜೆ ಪರಾಶರರು ಮಾಡಿದರು ಉಪನಯನ ಸಂಸ್ಕಾರ ಲೀಲಾ ಮಾತ್ರವು ನಿನಗೆ ಆ ಪರಾಶರ ಸತ್ಯವತಿಗೆ ಮುದಕರವು 35 ಸತ್ಯವತೀ ಪರಾಶರರ ಸುತನೆಂದು ನೀ ಕೀರ್ತಿ ಅವರಿಗೆ ಜಗತ್ತಲ್ಲಿ ಇತ್ತಿ ಸಾತ್ಯವತೇಯ ಪರಾಶರ್ಯ ನಾಮದಿಂ ಸತ್ ಸೃಷ್ಟಿ ಸುಖಜ್ಞಾನ ಪವಿತ್ರತ್ವಜÉ್ಞೀಯ 36 ಯಾವ ಯಾವಾಗ ಸತ್ಯವತಿ ಪರಾಶರರು ದೇವತಾ ಸಾರ್ವಭೌಮನೇ ವ್ಯಾಸ ನಿನ್ನ ತಾವು ನೋಡಲು ಇಚ್ಛೈಸಿ ನೆನೆಯುವರೋ ಆವಾಗ ತೋರುವಿ ಎಂದಿ ಮಾತೆಗೆ 37 ವ್ಯಾಸ ಅವತಾರದ ಕಾರ್ಯೋನ್ಮುಖನಾಗಿ ನಗ ಮೇರುಗಿರಿಗೆ ಬಿಸಜಭವ ಮೊದಲಾದ ದೇವರು ಹಿಂಬಾಲಿಸುತ ಶ್ರೀಶ ನೀ ಹೊರಟೆ ಪ್ರಣತಾರ್ತಿಹರ ಅಜಿತ 38 ಜ್ಞಾನ ಸುಖಪೂರ್ಣ 'ಪ್ರಸನ್ನ ಶ್ರೀನಿವಾಸ' ಪೂರ್ಣ ಪ್ರಜ್ಞರ ಹೃತ್‍ಸ್ಥ ವನಜ ಭವತಾತ ಸ್ವರ್ಣಾಂಡ ಬಹಿರಂತವ್ರ್ಯಾಪ್ತ ತೇಜಃಪುಂಜ ಆ ನಮಿಪೆ ಬದರೀಶ ಜ್ಞಾನಮುದ ಧನದ 39 - ಇತಿ ಪ್ರಥಮಾದ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ರಾಜ ರಾಜೇಶ್ವರನೇ ರಾಜೀವಾಲಯ ಪತೇ ರಾಜೀವಭವ ಭವಾದ್ಯಮರ ವಿನುತ ರಾಜೀವ ಪದಯುಗಗಳ್ಗೆ ಶರಣಾದೆ ನಿನ್ನಲಿ ರಾಜೀವನಯನ ಔದಾರ್ಯ ಕರುಣಾಬ್ಧಿ 1 ಸೃಷ್ಟಿ ಕಾಲದಲಿ ನೀ ಪರಮೇಷ್ಟಿರಾಯನಿಗೆ ಶ್ರೇಷ್ಟ ನಿಗಮಾದಿಗಳ ಬೋಧಿಸಿದ ತೆರದಿ ಕೃಷ್ಣ ದ್ವೈಪಾಯನನೆ ಸುರಮುನಿಗಳಿಗೆ ಈಗ ಉತ್ಕøಷ್ಟ ಉಪದೇಶ ಮಾಡಿದಿ ಮೇರುವಿಲಿ 2 ಸಮಸ್ತ ಶಾಸ್ತ್ರಾರ್ಥ ನಿದರ್ಶನಾತ್ಮಕವಾದ ವಿಮಲ ಶಾಸ್ತ್ರೋತ್ತಮ ಮಹಾ ಭಾರತವನು ಸುಮಹಾ ವೇದಾರ್ಥ ನಿರ್ಣಯಕವಾದ ಬ್ರಹ್ಮ ಸೂತ್ರಂಗಳ ವಿರಚಿಸಿದಿ ವ್ಯಾಸ 3 ಹರಿ ವ್ಯಾಸ ಕೃಷ್ಣದೈಪಾಯನ ನಿನ್ನ ಅಮಿತ ಬಲಯುತ ಶರದಿಂ ರುದ್ರಾದಿಗಳ ಮನೋಗತವಾಗಿ ಇರುತ್ತಿದ್ದ ಕ್ರೂರ ಕಲಿಮೃತನಾದವನಂತೆ ಆದ 4 ಸಾತ್ಯವತೇ ವ್ಯಾಸ ನಿನ್ನಯ ಮುಖಾಂಬುಧಿಯಿಂದ ಉದ್ಭೂತವಾದ ಉತ್ತಮ ಜ್ಞಾನ ರೂಪ ಸುಧೆಯ ದೇವತೆಗಳು ಭುಂಜಿಸಲು ಆಗ ವಿದೂರರಾದರು ಕಲಿಯ ಕಲ್ಮಷದಿಂದ 5 ವಿಧಿ ವಾಯು ಎಂದೆಂದೂ ಕಲಿಕಲುಷ ವಿದೂರರು ಬಂದ ರುದ್ರಾದಿಗಳು ಮುಂದೆ ಕುಳಿತು ಶ್ರೀದ ನೀ ಬೋಧಿಸಿದ ಮಹಾಭಾರತ ಬ್ರಹ್ಮ- ಸೂತ್ರಾದಿ ಅಮೃತವ ಪಾನ ಮಾಡಿದರು 6 ಮನುಷ್ಯೋತ್ತಮರೊಳು ಇದ್ದ ಕಲಿ ಭಂಜನಕೆ ದೀನ ದಯಾಳು ನೀ ದಿಗ್ವಿಜಯಗೈದಿ ಮಂದಾಧಿಕಾರಿಗಳ ಉಪಕಾರಕಾಗಿ ನೀ ನಿಗಮ ವಿಭಾಗ ಮಾಡಿದಿಯೋ 7 ಯಾವ ಯಾವ ಸಜ್ಜನರು ಅಜ್ಞಾನ ಪೂರಿತರೋ ಅವರು ವಾಸಿಸುವ ಸ್ಥಳಗಳಿಗೆ ಪೋಗಿ ದಿವ್ಯ ಸಜ್ಞಾನವ ಬೋಧಿಸಿ ಕಲಿ ವಿಷ ನಿವಾರಣ ಮಾಡಿದಿ ಕರುಣಾಂಬು ನಿಧಿಯೇ 8 ಪರಮಾರ್ಥ ಭಾಷ್ಯಾರ್ಥ ಐಹಿಕಾಮುಷ್ಮಿಕ ಸರ್ವಾರ್ಥ ಒದಗಿಸುವ ಮುಖ್ಯ ನಿಯಂತೃ ಪರಮಾತ್ಮ ವ್ಯಾಸ ನೀ ದಿಗ್ವಿಜಯ ಮಾರ್ಗದಲಿ ಮರವಟ್ಟ ಕ್ರಿಮಿಗೆ ಔದಾರ್ಯದಲಿ ಒಲಿದಿ 9 ಹರಿಯ ಅಪರೋಕ್ಷ್ಯವು ಲಭಿಸಿದವರಿಗೂ ಸಹ ಕರ್ಮ ನಿಮಿತ್ತ ನರ ನರೇತರ ಜನ್ಮ ಅಸಂಭವವು ಅಲ್ಲವು ಈ ಕ್ರಿಮಿ ಜನ್ಮ ಸಹ ಪ್ರಾರಬ್ಧ ನಿಮಿತ್ತ 10 ಶೂದ್ರನು ಲೋಭಿಯು ಪೂರ್ವ ಜನ್ಮದೀ ಕ್ರಿಮಿಯು ಈ ದೇಹವ ಬಿಡು ರಾಜನಾಗಿ ಹುಟ್ಟಿಸುವೆ ಎಂದು ನೀ ಪೇಳಲು ದೇಹದಾಶೆ ಪ್ರಕಟಿಸಿತು ಆದರೂ ಆ ಕ್ರಿಮಿಗೆ ರಾಜಪದವಿತ್ತಿ 11 ಆ ಕ್ರಿಮಿಯಿಂದ ನೀ ರಾಜ್ಯವ ಆಳಿಸಿ ಜಗದೇಕ ಸ್ವಾಮಿಯು ಸ್ವತಂತ್ರ ಸಚ್ಛಕ್ತ ಭಕ್ತೇಷ್ಟ ಸಿದ್ಧಿದ ಸತಾಂಗತಿ ನೀನೆಂದು ಜಗತ್ತಿಗೆ ವ್ಯಕ್ತ ಮಾಡಿದಿ ದೇವ ದೇವ 12 ಅಗಣಿತ ಗುಣಾರ್ಣವನೇ ವ್ಯಾಸ ಕೃಷ್ಣನೇ ನಿನ್ನ ಮಗನೆಂದು ತಾ ಜನಿಸಿ ಸೇವಿಸಬೇಕೆಂದು ಗಂಗಾಧರ ನಿನ್ನ ಕುರಿತು ಮಹತ್ತಪಸ್ ಮಾಡಿ ಹಾಗೆ ನಿನ್ನಿಂದ ವರ ಪಡೆದು ಮಗನಾದ 13 ಯಥಾರ್ಥ ಹೀಗಿರಲು ನೀನು ಸಹ ತಪಸ್ ಮಾಡಿ ರುದ್ರಗೆ ವರವಿತ್ತು ಅಧಮರ ಮೋಹಿಸಿದಿ ಒಂದೊಂ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾರ್ಥಿಸುವೆ ರಘುನಾಥತೀರ್ಥರ ಪ್ರಾರ್ಥಿಸುವೆ ಪುರುಷಾರ್ಥಪ್ರದರ ಪ ಸಾರ್ಥಕವಾಗಲು ಪಾರ್ಥಿವ ದೇಹವು ಜಗದಲಿ ಕೀರ್ತಿಗಳಿಸಿದವರ ಅ.ಪ ನೇದೃಶಂ ಸ್ಥಲಿಮಲಂ ಶಮಲಘ್ನಂ ನಾಸ್ಯತೀರ್ಥಂ ಸಲಿಲಸ್ಯಸಮಂ ವಾಃ ನಾಸ್ತಿ ವಿಷ್ಣುಂ ಸದೃಶಂ ನನುದೈವಂ ಸತ್ಯ ವಚನಗಳಿವೆಂದು ಸೂಚಿಸುತ ಆಸ್ತಿಕ ಜನಮನ ರಂಜಕ ತ್ರಿಮಕುಟ ಕ್ಷೇತ್ರನಿವಾಸ ಪವಿತ್ರತಮ ಚರಿತರ 1 ವ್ಯಾಸರಾಜ ಗುರುವರ್ಯ ರಚಿತ ತಾ ತ್ಪರ್ಯ ಚಂದ್ರಿಕಾ ಗ್ರಂಥವನು ವಾಸುದೇವ ನರಹರ್ಯನುಗ್ರಹದಿ ಉರ್ವರಿತವ ವಿರಚಿಸಿ ಮೆರೆದ ಶೇಷಚಂದ್ರಿಕಾಚಾರ್ಯರೆಂಬೊ ಗುರು ವ್ಯಾಸರಾಜರ ಪರಾವತಾರರ 2 ರಾಗ ದ್ವೇಷಗಳ ತೊರೆಯುತ ತ ನ್ನನು ರಾಗದಿಂದ ಭಜಿಸುವ ಜನಕೆ ಭೂಗಕಲ್ಪ ತರುವಂತೆ ಅರಿಷ್ಠವ ನೀಗಿ ಸಾಧು ಭೋಗಗಳೀವ ಯೋಗಿಜನ ಮನೋನಯನ ಪ್ರಸನ್ನ ಶ್ರೀ ರಾಘವೇಂದ್ರರಪರಾವತಾರರ 3
--------------
ವಿದ್ಯಾಪ್ರಸನ್ನತೀರ್ಥರು
ಬಂದ ಶ್ರೀ ಹರಿ ಬಂದ ಪ ಬಂದ ಬಂದ ಮುಚುಕುಂದ ಪರದ ಅರ- ವಿಂದನಯನ ಗೋವಿಂದ ಪರಾತ್ವರ ಕಂದನೆನ್ನ ಮನ ಮಂದಿರಕೀಗಲೆ ನಂದವ ನೀಡುತ ಇಂದಿರೆಸಹಿತದಿ ಅ.ಪ. ಪೊತ್ತವ ಬಂದ ಅಜಿತನುಬಂದ ಚಾರುವರಾಹನು ಭೂಸಹಬಂದ ಪೋರನ ಸಲಹಿದ ಘೋರನು ಬಂದ ಭಾರ್ಗವ ಬಂದ ಕೌರವವಂಶಕುಠಾರನು ಬಂದ ಕಲ್ಕಿಯು ಬಂದ 1 ಉಸುರಲು ಹಯಮುಖಬಂದ ದತ್ತನುಬಂದ ನೀಡಲು ಯಜ್ಞನುಬಂದ ಸಾಧುಹರಿನಾರಾಯಣ ಬಂದ ಶಿಂಶುಮಾರನು ಬಂದ ಧನ್ವಂತ್ರಿಯು ಬಂದ 2 ಶ್ರೀ ವಿಷ್ಣುವು ಬಂದ ಉಲ್ಲಾಸದಿ ಬಂದ ಸಂತೋಷನು ಬಂದ ತೈಜಸ ಕರುಣದಿ ಬಂದ ಮುಕ್ತೇಶನು ಬಂದ ಪರಾದ್ಯನಂತನು ಬಂದ 3 ಜಗನೂಕೂವ ಬಂದ ಪುರುಹೂತ ವಿನುತ ಸಕಲಾರ್ತಿಹರ ತಾ ಬಂದ ವೈರಾಜ್ಯನು ಬಂದ ಶೃತಿ- ನೀಕ ಸುವಂದಿತನಿರುಪಮ ಬಂದ ವಾಕುಮನಕೆ ಸಾಕಲ್ಯಸಿಗದ ಪುಣ್ಯ- ವಿವರ್ಜಿತ ಭಗಲೋಕೈಕ ವಂದ್ಯ ನಿಜಭಕ್ತಗಣ ಜಯಪರಾಕುನುಡಿಯುತಿರೆ ಮೆಲ್ಲ ಮೆಲ್ಲಗೆ4 ಸರ್ವಸಾಕ್ಷಿಗಭೀರ ಪರಾಕು ಸ್ವತಂತ್ರನೆ ಪರಾಕು ಸರ್ವರಪಾಲಿಪ ಸರ್ವರ ರಕ್ಷಿಪ ಸರ್ವಚರಾಚರಭಿನ್ನ ಪರಾಕು ಪ್ರತಿಪಾದ್ಯಪರಾರು ಸರ್ವಕಾಲದಲಿ ಸರ್ವದೇಶದೊಳು ಸರ್ವದೆಶೆಯೊಳು ಸಮನೆ ಪರಾಕು ಪರಾಕು 5 ನಿತ್ಯಾನಿತ್ಯಜಗಜ್ಜನಕ ಸರ್ವೋತ್ತಮ ಸತ್ಯಸಂಕಲ್ಪ ಪರಾಕು ನಿಖಿಳಪ್ರದಾಯಕ ಪರಾಕು ಭೃತ್ಯಾನುಗ್ರಹ ಕಾರಕಶೀಲ ಸದಾಪ್ತತಮ ವಿಶ್ವಾತ್ಮನೆಪರಾಕು ನಿತೈಶ್ಪರ್ಯ ಕೀತ್ರ್ಯಾತ್ಮಕ ಸರ್ವಾತತ ಬಲವಿಖ್ಯಾತಪರಾಕು ನೀತ ಜ್ಞಾನಾನಂದ ಪರಿಪೂರ್ಣನಿತ್ಯತೃಪ್ತ ಮಹಾಂತ ಪರಾಕು ಪರಾಕು 6 ಪರಾಕು ರೂಪಾತ್ಮ ಪರಾಕು ಪುರುಷ ಸೂಕ್ತ ಸುಗೇಯ ಪ್ರಖ್ಯಾತ ಮಹಾಮಹಿಮ ಪರಾಕು ನಾಮಕ ಪರಾಕು ಸುನಾಮ ಓಂಕಾರಾಧಿಪ ಪರಾಕು ವಿಭೂತಿ ಪರಾಕು 7 ಪ್ರೇಮ ಚೊಕ್ಕ ಸೃಷ್ಟಿಗೈವನಿತ್ಯಸುನೇಮ ಕರುಣಾಮಣಿ ಶ್ರೀಕಾಮ ಅಕ್ಕರೆಯಲಿ ಜಗಕಾವ ನಿಸ್ಸೀಮ ಮುಕ್ಕಣ್ಣ ವಿಧಿಸಿರಿ ಸಾರ್ವಭೌಮ ವಿನುತ ಗುಣಲಲಾಮ ಸುನಾಮ ಮೇಘಶ್ಯಾಮ 8 ಸುಂದರ ಬಂದ ಸೃಷ್ಠಿಸ್ಥಿತಿಲಯಗೈವ ಮು- ವೃಂದಕಳೆದು ನಿಜ- ಸುಧಾರ್ಣವ ಬೃಹತೀನಾಮಗ ಮಂದಸ್ಮಿತ ವದನವ ತೊರುವ ಈತನು ಸ್ಯಂದನವೇರಿಹ ಜಯಮುನಿಹೃದಯಗ ಮಧ್ವರಮಾವರ ಶ್ರೀಕೃಷ್ಣವಿಠಲನು ಭವ ಪರಿವಾರದ ಕೂಡಿಯೆ ಬಂದಾ 9
--------------
ಕೃಷ್ಣವಿಠಲದಾಸರು
ಬಂದನು ಹನುಮಂತ ಗೃಹಕೇ | ಕಾರ್ಯಸಂಧಿಸಲು ಅನುಗ್ರಹಕೇ ಪ ಮಂದಿರವು ಒಂಟೀಲು ವಂಶ ಸಿ | ಕಂದರಾಬಾದಿನಿಂದಲಿಸುಂದರನು ಬಹುನಂದ ವೀಯುತ | ಮಂದವಾರದಿ ಬಂದ ಹನುಮ ಅ.ಪ. ಮಾಸ | ವೈಶಾಖ ನಿಜ ವಿಶಾಖಾಭಾದಾಸನ ಮನೆಗತಿ ಪ್ರಭಾ | ಯುತ | ಆ ಸಮೀರನು ಅಸ್ಮಲ್ಲಾಭಾ ||ಹರ್ಷದಲಿ ಹನುಮಂತರಾಯರ | ವಶದಿ ಇದ್ದವನಲ್ಪ ಕಾಲದಿವಶವ ಪಡಿಸಲು ವೆಂಕಟಾರ್ಯಗೆ | ನಸುಕಿಲೀ ನಸನಗುತ ಬಂದ 1 ಪರಿ ಮಣಿ |ವರ ಖಚಿತ ರತ್ನ ವಿಶಾಲಾಪರಿ ಪರಿಯ ಆಭರಣ ಭೂಷಿತ | ಸುರ ವಿರೋಧಿಗಳ್ಹನನ ಶಕುತನೆರೆ ಸುವಾನರ ಸೈನ್ಯ ಪರಿವೃತ | ಹರಿಯಲಿಂ ಪಟ್ಟಾಭಿಷಕ್ತ 2 ಭೃತ್ಯ ನಿತ್ಯ ಸೇವಾಸಕ್ತ ಮಾರುತ 3
--------------
ಗುರುಗೋವಿಂದವಿಠಲರು
ಬಾಲಕೃಷ್ಣವಿಠಲ | ಕಾಪಾಡೊ ಇವನಾ ಪ ನೀಲ ನೀರದ ವರ್ಣ | ಕಾಳಿಂದಿ ರಮಣ ಅ.ಪ. ಮೋದ ತೀರ್ಥರ ಮತದಿಹಾದಿಯಲ್ಲಿರುವವನ | ಕಾದುಕೋ ಹರಿಯೇವೇದಾಣಿ ಸನ್ನುತನೆ | ಭೇದ ಪಂಚಕ ತಿಳಿಸಿಮೋದ ಪಡಿಸುವುದಿವನ | ವೇದಾಂತ ವೇದ್ಯ 1 ವ್ಯಾಪ್ತೋಪಾಸಕ ಜೀವಿ | ಗಿತ್ರಿಹೆನೊ ಅಂಕಿತವಸುಪ್ತೀಶ ಪೇಳ್ದಪರಿ | ಗೋಪ್ತ ಮಹಿಮಾಆಪ್ತ ನಿವ ನೆಂದೆನುತ | ಗೊತ್ತು ಮಾಡಿಹೆ ದೇವದೀಪ್ತ ಮೂರುತಿ ಹರಿಯೆ | ತೃಪ್ತಿ ಪಡಿಸಿವನಾ 2 ಸ್ವಾಪದಲಿ ಸತ್ಪಂಚ | ಪುಷ್ಪ ಬಕುಳವನಿತ್ತುಶ್ರೀಪ ನಿನ್ನನುಗ್ರಹ | ಪ್ರಾಪಕದಸೂಚ್ಯಾನೀ ಪಾಲಿಸುತ್ತಿವಗೆ | ಬಾಷ್ವಾವಾನಂದುದರಿಸೋಪಾನ ಮುಕ್ತಿಗೆನೆ | ವ್ಯಾಪಾರ ನಿನದೋ 3 ಉಂಬುಡುವ ಕ್ರಿಯೆ ಸರ್ವ | ಬಿಂಬ ತಾಗೈಯೈ ಪ್ರತಿಬಿಂಬ ಕುಂಟೆಂಬುವಾ | ಸುಜ್ಞಾನವಿತ್ತುಗುಂಭ ಸಾದನದಿ ಹೃದ | ಯಾಂಬರದಿ ನೀತೋರಿಸಂಭ್ರಮದಲಿರಿಸಿವನ | ಅಂಬುಜದಳಾಕ್ಷ 4 ಎಲ್ಲೆಲ್ಲೂ ನಿನ್ನ ವ್ಯಾಪ್ತಿ | ಸೊಲ್ಲನುಣಿಸುತ ಹರಿಯೆಬಲ್ಲಿದರ ಸಂಗವನು | ಸಲ್ಲಿಸುತ ಇವಗೇಪಲ್ಲಿವಿಸೆ ಸುಜ್ಞಾನ | ಬೇಡ್ವೆ ನಿನ್ನನು ದೇವಚೆಲ್ವ ಹಯಮುಖ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು