ಒಟ್ಟು 129 ಕಡೆಗಳಲ್ಲಿ , 47 ದಾಸರು , 114 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಳೆಯ ಪಾಲಸಯ್ಯ ಮಂಗಳ- ನಿಳಯ ಪಾಲಿಸಮ್ಮ ಪ ಬಿನೆಯೊಳು ಮಳೆಯನು ತಳೆಯದೆ ತೃಣಗಳು ಬೆಳೆಯದ ಗೋವುಗಳಳವುವಯ್ಯ ಅ.ಪ ಗೋವಿಪುರ ಕುಲವ ಕಾಯುವ ದೇವನು ನೀನಲ್ಲವೇ ಮೇವುಗಳಿಲ್ಲದೆ ಗೋವುಗಳೆಲ್ಲವು ಸಾವುವು ನಿನ್ನೊಳಿದಾವನು ಕಾವನು 1 ಕರೆಯೊಳು ನೀರಿಲ್ಲ ಬಾವಿಗ- ಳೊರತೆಯ ಸೋರಿಲ್ಲ ತುರುಗಳು ಜೀವನದಿರವನು ಕಾಣದೆ ಹರಣವ ಬಿಡವುವು ಕರುಣದಿ ಬೇಗನೆ 2 ಬಲರಿಪುಖತಿಯಲಿ ಬಾಧಿಪೆ ಜಲಮಯ ರೀತಿಯಲಿ ಚಲಿಸದೆ ಕೊಡೆವಿಡಿದಳುಹಿದೆ ಕರದೊಳು ಚಲವನು ಗೋವ್ಗಳ ಬಳಗವನೀಗಳು 3 ಜಲನಿಧಿ ಕೃತ ಶಯನ ಶಾರದ ಜಲರುಹದಳನಯನ ಜಲಜರ ಮೂರುತಿ ಜಲಜಕರಗಳು ಜಲದಾಗರದಿಂ 4 ದಾರಿಯ ಜನರೆಲ್ಲ ಬಹು ಬಾ- ಯಾರಿ ಬರುವರಲ್ಲ ದೂರಗಿಂ ತಂದಿಹ ನೀರನು ಲೋಭದಿ ನಾರಿಯರೆಲ್ಲ ವಿಚಾರಿಸುತಿರ್ಪರು 5 ಬೆಳೆದಿಹ ಸತ್ಯಗಳು ಬಿಸಿಲಿನ ಜಳದಲಿ ಬಾಡಿಹುವು ನಡಿನ ನಯನ ನಿನ್ನೊಲುಮೆಯ ತೋರಿಸಿ ಘಳಲನೆ ಪೈರುಗಳಳಿಯುತ ತೆರದೊಳು 6 ಕರುಣಾನಿಧಿಯೆಂದು ನಿನ್ನನು ಶರಖಹೊಕ್ಕೆನಿಂದು ಶರಣಭರಣ ಪುಲಿಗಿರಿಯೊಳು ನೆಲೆಸಿಹ ವರದ ವಿಠಲ ದೊರೆ ವರದ ದಯಾನಿಧೆ 7
--------------
ವೆಂಕಟವರದಾರ್ಯರು
ಮಾತೆ ದಾತೆ ಹಿತೆ| ಘನ ಸುಚರಿತೆ| ಮಾತೆ ದಾತೆ ಹಿತೆ ಪ ಮಾತೆ ಸದ್ಗುಣ ಭರಿತೆ ಘನ ವಿ| ಖ್ಯಾತೆ ಭುವನ ವಿರಾಜಿತೆ|| ದಾತೆ ದೀನಾನಾಥ ಜನಸಂ|ಪ್ರೀತಿಯುತೆ ಪರಿಪೋಷಿತೆಅ.ಪ ಕರವ ಜೋಡಿಸಿ| ವಿನಯದಿಂದಲಿ ಬೇಡುವ|| ಅಖಿಳ ಸಂಪದವೀಯುತ 1 ಪಾದ ಸೇವೆಯ ಗೈಯುವೆ|| ಆದರಿಸಿ ಪೊರೆಯೆನ್ನ ಸರ್ವಪ| ರಾಧಗಳನು ಕ್ಷಮಿಸುತ 2 ಜನನಿ ನೀನತಿಕರುಣೆಯಿಂದಲಿ| ಸುರರಿಗಭಯವನೀಯುತ|| ದುರುಳ ದೈತ್ಯನ ವಧಿಸಿ ನಂದಿನಿ| ನದಿಯ ಮಧ್ಯದಿ ನೆಲೆಸಿದ3 ಪಂಕಜಾಂಬಕಿ ಪರಮಪಾವನೆ| ಶಂಕರಿ ಸರ್ವೇಶ್ವರಿ|| ವೆಂಕಟಾಚಲನಿಲಯ ಶ್ರೀವರ| ವೆಂಕಟೇಶನ ಸೋದರಿ4
--------------
ವೆಂಕಟ್‍ರಾವ್
ಮಾನವಿ ದಾಸರ | ನಿ ಸೇರೋಹೀನ ಮನುಜ ನಿನ್ನಘವನೆ ನೀಗುವ ಪ ಕೃತ ಯುಗದಲಿ ಹಿರಣ್ಯಜನೆನಿಸೀವಿತತ ಮಹಿಮ ಹರಿಯನೆ ಭಜಿಸೀ ||ಸತತದಿ ಸುಜನರ ಸಂತವಿಸಿ ಸಿರಿಪತಿಯ ಸೇವಿಸೆ ಸಹ್ಲಾದ ನೆನಿಸಿದಾ 1 ಎರಡೊಂದ್ಯು ಯುಗದಲಿ ಶಲ್ಯನಾಗಿ ಜನಿಸೀಕುರುಪಗೆ ಋಣರೂಪ ಸೇವೆ ಸಲಿಸಿ ||ಉರುತರ ಭಕುತಿಲಿ ಶೌರಿಯ ನೆನೆಯುತಹರಿಪದ ಸೇರಿದ ನೃಪಕುಲ ಮೌಳೀ 2 ವರಕಲಿಯಲಿ ದ್ವಿಜನಾಗವತರಿಸೀನರಮೃಗಾಖ್ಯಸುತ ಶ್ರೀನಿವಾಸನೆನಿಸೀ ||ವರದೇಂದ್ರ ಯತಿಯಲಿ ತರ್ಕವ ಕಲಿತುದುರುಳರ ಮುರಿದತಿ ಗರ್ವದಿ ಮೆರೆದಾ 3 ಭೃಗ್ವಂಶಜ ವಿಜಯಾಖ್ಯ ದಾಸ ಬಂಧೂಋಗ್ವಿನುತನ ಪ್ರಾಕೃತದೊಳು ಪಾಡೆ ||ದಿಗ್ಗಜ ಗರ್ವದಿ ಗೆಜ್ಜೆಯ ಕಟ್ಟಿದಅಗ್ಗದ ನಟನಿವನೆನುತಲಿ ಜರೆದಾ 4 ದಾಸರ ನಿಂದ್ಯದಿ ಬಂದುದು ಅಪಮೃತ್ಯುದೋಷನೀಗೆ ಗೋಪಾಲರ ಭಜಿಸೆನ್ನ ||ಔಷಧ ಪೇಳಲು ದಾಸರ ನಾಲ್ದಶವರ್ಷಾಯುಷ್ಯವ ಪೊಂದಿದವರನಾ5 ಇಂದು ಭಾಗದಲಾನಂದದಿ ಮೀಯೇಬಂದೊದಗಿತು ಜಗನ್ನಾಥ ನಾಮಾ ||ಪೊಂದುತ ಅಂಕಿತ ಕುಣಿಯುತ ಪಾಡುತಇಂದಿರೆಯರಸನ ಛಂದದಿ ತುತಿಸಿದ 6 ಪಾವನತರ ಹರಿಕಥೆ ಸುಧೆ ರಚಿಸೀಪವನ ಮತದವರನ್ನುತ್ತರಿಸೀ ||ಪವನನ ಹೃತ್ಕಂಜದಿ ನೆಲೆಸಿಹ ಗುರುಗೋವಿಂದ ವಿಠಲ ಪದಾಬ್ಜವ ಸೇರಿದ 7
--------------
ಗುರುಗೋವಿಂದವಿಠಲರು
ಮಾವಿನಕೆರೆ-2 ಏತಕೆ ಗಿರಿಯಲ್ಲಿ ನೆಲೆಸಿದೆಯೊ | ರಂಗ || ಪ ಭಂಗ ಅ.ಪ ದಾನಿ ನೀನೆನ್ನುತಲಿ ದಿನದಿನವು ಲಕ್ಷಾಳಿ ದೀನ ಮನುಜರು ಬಂದು ಬಾಧಿಸುವರೆಂದೂ ಕಾನನಾಂತರದಲ್ಲಿ ನೆಲೆಸಿದೆಯೊ ನಾಕಾಣೆ ನೀನೆಲ್ಲಿ ಪೋದೊಡಂ ಬಿಡೆನೈಯ ರಂಗ 1 ಜನನಿಬಿಡ ಪುರವೆಂದು ಮನಕೆ ಬೇಸರವಾಗಿ ವನದೊಳಗೆ ಚರಿಸಬೇಕೆನುತಲಿಹೆಯೋ ಮನುಜರ ಅನ್ಯಾಯ ದುಷ್ಕಾರ್ಯಗಳ ನೋಡಿ ಮನಕರಗಿ ಗಿರಿಯನ್ನು ಸೇರಿದೆಯೊ ರಂಗ 2 ದೇಹದಂಡನೆಯಿಂದ ಇಹಪರದ ಸುಖವೆಂಬ ರಹಸ್ಯ ತತ್ವಾರ್ಥವನು ತಿಳಿಸಲಿಹೆಯೋ ಶ್ರೀಹರಿಯೇ ನಿನ್ನ ವೈಚಿತ್ರ್ಯವಸದಳವಯ್ಯ ದೇಹಧಾರಿಗೆ ಅಳವೆ ವರ್ಣಿಸಲು ನಿನ್ನಾ 3 ಬೇವ ಮಾವನು ಗೈದೆ ಮಾವಬೇವನು ಗೈದೆ ಶಿವರೂಪದೆ ನಿಂದು ಕೇಶವನು ಎನಿಸಿದೆ ಭಾವುಕರು ಗೈಯದಾ ದೇವಾಲಯವ ಗೈದೆ ಮಾವಿನಕೆರೆರಂಗ ನಿನಗಾರು ಸಮರೋ 4 ವನಜನಾಭನು ಎಂಬ ಅನುಮತಿಯನೀಯಲ್ಕೆ ಹನುಮದೇವನ ಪೂಜಿಸಿ ಮನವೊಲಿಸಿದೇ ಸನುಮತದಿ ಕಾಯೆನ್ನ ರಾಮದಾಸಾರ್ಚಿತನೆ ಅನುವಿಂದ ನೀನೆನ್ನ ಮನದೊಳಿರು ಹರಿಯೇ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುದ್ದು ಕೃಷ್ಣನ್ನ ನೋಡ ಬನ್ನಿರೆಲ್ಲ ನಮ್ಮ ಸಿರಿ ಭೂಮಿ ನಲ್ಲ ಪ. ಪಂಚ ಪಂಚ ಉಷಃ ಕಾಲದಲಿ ಎದ್ದು ಯತಿವರರು ಪಂಚಬಾಣನ ಪಿತಗೆ ನಿರ್ಮಾಲ್ಯ ತೆಗೆದು ಪಂಚ ಗಂಗೋದಕದಿ ಸ್ನಾನಗೈಸುತ ಹರಿಗೆ ಪಂಚವಿಧ ಪಕ್ವಾನ್ನ ಉಣಿಸಿ ದಣಿಸಿಹರು 1 ಕಾಲ್ಕಡಗ ಗೆಜ್ಜೆ ಪೈಜಣ ಘಲ್ಲು ಘಲ್ಲೆನುತ ಮೇಲೆ ಉಡುದಾರ ಉಡುಗೆಜ್ಜೆ ನಡುವಿನಲಿ ಬಾಲಕೃಷ್ಣಗೆ ಅಸಲಿ ಹುಲಿ ಉಗುರು ಹೊನ್ನು ಸರ ತೋಳ ಬಾಪುರಿಗಡಗ ಉಂಗುರಗಳ್ಹೊಳೆಯೆ 2 ಮುದ್ದು ಮುಖಕೊಂದು ಮೂಗುತಿ ಕರ್ಣಕುಂಡಲವು ಕದ್ದು ಬೆಣ್ಣೆಯನು ಕಡಗೋಲ ಪಿಡಿದಿಹನು ತಿದ್ದಿದ ತಿಲುಕ ಮುಂಗುರುಳೂ ಮುತ್ತಿನ ಸಾಲು ಶುದ್ಧ ಚಿನ್ನದ ರತ್ನ ಮಕುಟ ಶಿರದಲ್ಲಿ 3 ರಮ್ಯವಾಗಿಪ್ಪ ವೈಕುಂಠಪುರಿಯನೆ ಬಿಟ್ಟು ಜನ್ಮಸ್ಥಳವಾದ ಗೋಕುಲವ ತ್ಯಜಿಸಿ ತಮ್ಮವರಿಗಾಗಿ ಕಟ್ಟಿದ ದ್ವಾರಕಿಯ ಕಳೆದು ಬ್ರಹ್ಮಾದಿ ವಂದ್ಯ ತಾನಿಲ್ಲಿ ನೆಲೆಸಿಹನು 4 ಅಪಾರ ಮಹಿಮನು ಆನಂದ ತೀರ್ಥರಿಗೊಲಿದು ಪಾಪಿ ಜನರುಗಳ ಉದ್ಧರಿಸಬೇಕೆಂದು ಶ್ರೀಪತಿಯು ತಾ ಪುಟ್ಟ ರೂಪಧಾರಕನಾಗಿ ಗೋಪಾಲಕೃಷ್ಣವಿಠ್ಠಲನಿಲ್ಲಿ ನಿಂತ 5
--------------
ಅಂಬಾಬಾಯಿ
ಮೂರ್ತಿ ಚಿನ್ಮಯಾತ್ಮಕ ರೂಪ ಸಂತತದಿ ನೆನೆವವರ ಸಲಹೊ ಕರುಣಿ ಪ. ತುಂಬಿ ಇರುತಿಹುದು ಎಂತು ನಿನ್ನಾಟ ಪೇಳ್ ನಿಗಮವೇದ್ಯ ಚಿಂತೆ ಎನಗೊಂದಿಲ್ಲ ಅಂತರಂಗದಿ ನೆಲೆಸಿ ಸಂತತದಿ ನಿನ ಧ್ಯಾನ ನೀಡೆಂಬೆನೊ 1 ದೇಶಾಧಿಪತಿಗಳಿಗೆ ಕೋಶ ತುಂಬದ ಚಿಂತೆ ದೇಶ ತಿರುಗುವನಿಗೆ ಹಣದ ಚಿಂತೆ ದೇಶಸ್ಥನಾದವಗೆ ರಾಜಭಟರಾ ಚಿಂತೆ ಕಾಶಿಯಲ್ಲಿರುವವಗೆ ಮನೆಯ ಚಿಂತೆ 2 ಜಾರಿಣಿಗೆ ವಿಟನೊಬ್ಬ ಬಾರದಿರುವ ಚಿಂತೆ ಚೋರನಿಗೆ ರವಿ ಮುಳುಗದಿರುವ ಚಿಂತೆ ಮಾರನಿಗೆ ಯೋಗಿಗಳ ಹೃದಯ ಭೇದಿಪ ಚಿಂತೆ ಪತಿ ಒಲುಮೆ ಪಡೆವ ಚಿಂತೆ 3 ಕರ್ಮತತ್ಪರರಿಗೆ ಹರಿಮರ್ಮವರಿಯದ ಚಿಂತೆ ಧರ್ಮಪುರುಷಗೆ ಕಲಿಬಾಧೆಯ ಚಿಂತೆ ವೇದಶಾಸ್ತ್ರಜ್ಞನಿಗೆ ವಾದಿಯ ಭಯ ಚಿಂತೆ ಹಾದಿ ನಡೆವಗೆ ದುಷ್ಟ ಜನರ ಚಿಂತೆ 4 ಸಾಧು ಸಜ್ಜನರಿಗೆ ಬಾಧೆ ಕೊಡುವರ ಚಿಂತೆ ಹಾದಿ ತಪ್ಪಿದ ಪಾಪಿಗೆ ಯಮನ ಚಿಂತೆ ವಾಣಿಜ್ಯತನದವಗೆ ಹಣವು ಗಳಿಸುವ ಚಿಂತೆ ಮಾನವಂತರಿಗೂನ ನುಡಿಯ ಚಿಂತೆ 5 ಇಂತೆಲ್ಲರಾ ಚಿಂತೆ ಇರಲಿ ಕೇಳ್ ಹರಿಯೆ ಚಿಂತೆ ಬಿಡಿಸೆನಗೆ ನೀನೊಲಿದು ದೊರೆಯೆ ಚಿಂತನೆಗೆ ಸಿಗದಿಹುದು ನಿನಗೆ ಸರಿಯೆ ಚಿಂತಿಪರಿಗೊಲಿವಂಥ ಸಿರಿಕಾಂತ ಹರಿಯೆ6 ಶಾಂತ ಮೂರುತಿ ಪರಮ ಕರುಣಾಳುವೆನ್ನುತಲಿ ಎಂತೆಂತೂ ಸಜ್ಜನರು ಸ್ತುತಿಪುದನು ಕೇಳುತಲಿ ಇಂತು ನಿನ ಪದವನಾನ್ಹಾರೈಸಿ ಬಂದರೂ ನಿಂತರೂ ಎದುರಲ್ಲಿ ನೀನೊಲಿಯಲಿಲ್ಲ 7 ಕರಮುಗಿದು ಎರಗಿದರೂ ಶಿರಬಾಗಿ ನಮಿಸಿದರೂ ಚರಣದಲಿ ತನುಮನ ಒಪ್ಪಿಸಿದರೂ ಕರಗಲಿಲವು ಮನಸು ಕರುಣಪುಟ್ಟಲು ಕಾಣೆ ಭರವಸೆಯು ನಿನ್ನಲ್ಲಿ ಮೂಡಲಿಲ್ಲ 8 ಶಿರದಿ ಕರವಿಡಲಿಲ್ಲ ತೊರೆದೆಯೊ ಜರಿದೆಯೊ ವರಭಕ್ತಿ ಸಾಲದೊ ಗುರುವಿಕೆಯೊ ದೊರೆತನವೊ ಅರಹೊಟ್ಟೆ ಜೀವಿಸುತ ಅರಿಯದೆ ಮತ್ತೊಂದು ಇರುಳು ಹಗಲಾಲ್ಪರಿವ ತೆರವು ತೋರದೊ ಮನಕೆ 9 ಸರಿಯಲ್ಲ ಸರಿಯಲ್ಲ ಕರುಣಾಳುವೆಂಬುವೋ ಬಿರುದುಳಿವ ತೆರವಿಲ್ಲ ಬಿಂಕಪಟ್ಟರೆ ಈಗ ಕರೆದು ಮನ್ನಿಸೊ ಪಾಂಡುರಂಗವಿಠ್ಠಲ ದೇವ ವರ ಪುಂಡಲೀಕಗೆ ಒಲಿದದ್ದು ನಿಜವಾಗೆ 10 ಪರಿಪರಿಯ ಭಕ್ತರನು ಪೊರೆದದ್ದು ನಿಜವಾಗೆ ಹರಿದಾಸ ಸಂತತಿಗೆ ಮನೆದೈವ ನಿಜವಾಗೆ ಸರಿಯಿಲ್ಲದಾ ದೈವ ನೀನೆಂದು ನಿಜವಾಗೆ ಹೊರವೊಳಗೆ ಒಂದಾಗಿ ಕರಪಿಡಿದು ಸಲಹಿನ್ನು 11 ಗುರುಕೊಟ್ಟ ವರಬಲದಿ ಶರಣು ಪೊಂದಿದೆ ನಿನಗೆ ಚರಣದಲಿ ಬಿದ್ದಿರುವೆ ಪರಮ ಪುರುಷನೆ ದೇವ ಸ್ಮರಪಿತನೆ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಣೆ ಮಾಡಿದ ಮೇಲೆ ಭವದ ಭಯ ಉಂಟೆ 12
--------------
ಅಂಬಾಬಾಯಿ
ಯತಿವರ ನಿಮ್ಮನು ಸ್ತುತಿಪ ಜನರು ದಿವ್ಯ ಗತಿಯನು ಪೊಂದುವರು ರಾಘವೇಂದ್ರ ಪ ಕ್ಷಿತಿಯೊಳಗೆ ದಶಪ್ರಮತಿಗಳ ಸುಖಕರ ಮತದ ಪರಮ ಸಂಗತಿಗಳ ಹರಡಿದ ಅ.ಪ ಜಯ ಮುನಿಗಳವರ ಗ್ರಂಥಗಳಿಗೆ ಸುಖಮಯ ಟಿಪ್ಪಣಿಗಳನು ರಚಿಸಿ ಚಿನ್ ಮಯ ರಾಮರ ಸೇವೆಯ ಸಂತಸದಲಿ ಗೈದು ಸುಮಂತ್ರಾಲಯದಲಿ ನೆಲೆಸಿದ 1 ಮಂಗಳಕರವಾದ ತುಂಗಾನದಿಯ ತರಂಗಗಳಲಿ ಮಿಂದು ನಿಮ್ಮನು ನಿಸ್ಸಂಗರಾದ ಸಾಧು ಸಂಘವ ಪೊರೆಯುವ 2 ಪರಿಪರಿಯಲಿ ನಿಮ್ಮ ನಮಿಪ ಸೇವಕರಿಗೆ ಸುರಧೇನುವಿನಂತೆ ಸಂತತ ಹರುಷದಿಂದಲಿ ನಿಮ್ಮ ಭಜಿಪ ಸುಜನರಿಗೆ ಸುರತರುವಂತೆ ಪ್ರಸನ್ನರಾಗುವಂಥ 3
--------------
ವಿದ್ಯಾಪ್ರಸನ್ನತೀರ್ಥರು
ಯಾಕೆ ರಂಗ ನಿನಗೆ ಮಾಕಾಂತೆಯೊಳು ಗರ್ವ | ಲೋಕದೊಳು ಅಬಲೆಯೇನೋ ಕೇಳಯ್ಯಾ ನೀನು ಪ ಮೀನಾವತಾರವ ನೀನಂದು ವಿಡಿದರೆ | ಮೀನಾಂಬಕಿ ತಾನಾದಳೋ1 ಬೆಟ್ಟವ ಬೆನ್ನಿಲಿ ಕಷ್ಟದಿ ನೆಗೆದರೆ | ಬಟ್ಟ ಕುಚಗಳ ಹೊತ್ತಳೋ 2 ಧರೆಯ ಭಾರವ ತಾಳಿದರ ನಿನ್ನಾಭಾರವನು | ಧರಿಸಿದಳಂದಗಲದಲೆ 3 ಸಿಂಹಾನನನಾಗಿ ಮಹಿಮೆ ದೋರಿಸಿದರೆ | ಸಿಂಹದಂತೆ ನಡು ನಡುವಾದಳೋ 4 ಬಲಿ ಬಾಗಿಲಕಾಯಿದರೆ ನೆಲೆಸಿಹಳವಳಲ್ಲಿ | ಬಲಿಯಾ ಭಾಗ್ಯ ರೂಪವಾಗಿ5 ಸುರರ ಹೊರಿಯಲಿಕ್ಕೆ ಪರಶವ ಪಿಡಿದರೆ | ಪರಸಗೈಯ್ಯ ತಾನಾದಳೋ 6 ಹರನಾ ಚಾಪವನೆಗೆದರೆ ಅದನೆವೆ ಮುನ್ನೆ | ಕರೆದಲೆ ತ್ಯಾಡಿದಳೊ 7 ಸೆರೆಹರಿದು ಸ್ತ್ರೀಯರಾ ತಂದರೆ ನಾರದರಿಂದ | ಸೆರೆವಿಡಿಸೆ ಕೊಂಡಳೋ 8 ಮುಪ್ಪರ ಹೊಕ್ಕರೆ ನೀವಪ್ಪುತಲಿ ಹನಿನ್ನಾ | ಮುಪ್ಪುರದಲಿ ಮೆರೆದಳೋ 9 ತುರುಗವ ಏರಿಕೊಂಡು ತಿರುಗಲು ನಿನ್ನಾಕೂಡ | ತುರಗಮನಿ ತಾನಾದಳೋ 10 ಕಡೆಯಕಾಲಕ ನೀರೊಳೊಡಗೂಡಿ ಮಲಗಲು | ಒಡನೆ ವಟದೆಲೆ ಯಾದಳೋ11 ಗುರು ಮಹಿಪತಿ ಪ್ರಭು ಚರಿತೆಯಾ ನಿಮ್ಮೀರ್ವರ | ಭರದಿ ಹೇಳಲೆನ್ನಳವೇ 12
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾರವನು ಹೊರಗೆನಿಂತ ಬಾರಾನ್ಯಾಕವನು ಪ ನೀರಮುಳುಗಿ ಬಂದು ಘೋರಪರ್ವತ ತಂದು ಧಾರುಣಿಯನು ಕದ್ದ ದನುಜನ ಕೊಂದು ನರಹರಿ ರೂಪದಿ ತರಳಗೊಲಿದುಪುಟ್ಟ ಚರಣದಿಂ ಧರಣಿಯನಳೆದ ಮಹಾತ್ಮನೋ 1 ಕೊಡಲಿಯ ಪಿಡಿದು ತಾ ಬಿಡದೆ ಕ್ಷತ್ರಿಯರನ್ನು ಮಡುಹಿ ಬಂದವನಿವನೇನೋ ಮಡದಿಗಾಗಿ ದೊಡ್ಡಅಡವಿಯೊಳು ಮನೆಕಟ್ಟಿ ಬಿಡದೆ ಗೋಕುಲದಲ್ಲಿ ನೆಲೆಸಿರುವಾತನೋ 2 ಬೆತ್ತಲೆ ನಿಂತ್ಹತ್ತಿ ಮತ್ತೆಕುದುರೆಯ ಚಿತ್ತಬಂದಂತೆ ತಾ ತಿರುಗುವನೋ ಉತ್ತಮನಾದ ಶ್ರೀ ಪ್ರಾಣನಾಥವಿಠಲನು ಎತ್ತನೋಡಿದರು ಸುತ್ತುತ್ತಲಿರುವನು 3
--------------
ಬಾಗೇಪಲ್ಲಿ ಶೇಷದಾಸರು
ರಂಗವಲಿದ ರಾಯರ ಪಾಡಿರೆ ಪ ಸಲೆನಂಬಿದವರ ಕಲುಷಗಳೋಡಿಸಿ ಸಲುಹಲು ಸ್ತಂಭದಿ ನೆಲೆಸಿದಂಥ ರಾಯರ 1 ಬಾಗಿ ನಮಿಸಿ ಮುಂ ನವ್ಯಾತಕೆ ತವ ಸೂಸು ನಾನಲ್ಲವೆ | ಮಾನವಿ ನಿಲಯ 1 ದಾಸವರ್ಯನೆ | ಭಾಸುರಸ್ತಂಭ ನಿವಾಸ ಧೀರನೆ ಈ ಸಮಯಿದಿ ಷಡ್ದ್ವೇಷಿಗಳೆನ್ನತಿ ಘಾನಿಗೊಳಿಸುವರುದಾಸೀನ ಮಾಡದೆ 2 ಸಾಧು ಶೀಲನೆ ಪ್ರಹ್ಲಾದ ನನುಜ ಸÀಹ್ಲಾದ ಶಲ್ಯನೆ ವಾದಿರಾಜ ಶತಮೇಧ ನಾಮಾರ್ಯರ ಪಾದಾರಾಧಕ ಭೇದ | ಬೋಧಕ 3 ಭಾರತಿವರ ಕೃತ ಶಾಸ್ತ್ರಮರ್ಮವಿಚಾರ ಬಂಧೂರ ಸಾರಸಭವ ಪಿತ | ಶ್ರೀರಮಾಪತಿ ಸಾರ ವಕ್ತಾರ 4 ಪ್ರೇಮಸಾಗರ ನೀ ಮರೆದರೆ ಈ ಪಾಮರನಿಗೆ ಯಮ ಧಾಮವೆ ಗತಿ ನಿಜ ಹೇ ಮಮ ಸ್ವಾಮಿ 5
--------------
ಶಾಮಸುಂದರ ವಿಠಲ
ರಾಮನ ನೆನ ಮನವೇ-ಹೃದಯಾ-ರಾಮನನೆನೆ ಮನವೇ ಪ ಸದ್ಗುಣ ಧಾಮನಾ ಸೀತಾ ಅ.ಪ. ದಶರಥ ನಂದನನಾ-ಧರಣಿಯೊಳಸುರರ ಕೊಂದವನ ಪಶುಪತಿ ಚಾಪವ ಖಂಡಿಸಿಮುದದಿಂ ವಸುಮತಿ ಸುತೆಯಂ ಒಲಿದೊಡಗೂಡಿದ-ರಾಮನ 1 ತಂದೆಯ ಮಾತಿನಲಿ-ವನಕೈತಂದು ಸರಾಗದಲಿ ಬಂದ ವಿರಾಧನ ಕೊಂದು ನಿಶಾಚರಿ ಯಂದವಳಿದು ಖಳವೃಂದವ ಸವರಿದ 2 ಸೀತೆಯನರಸುತಲಿ-ಕಬಂಧನ ಮಾತನು ಸರಿಸುತಲಿ ವಾತನಮಗನೊಳು ಪ್ರೀತಿಯಿಟ್ಟು ಪುರುಹೂತನ ಸುತನಂ ಘಾತಿಸಿ ದಾತನ-ರಾಮನ 3 ತರಣಿ ತನಯನಿಂದ-ಕಪಿಗಳ ಕರೆಸಿ ವಿಲಾಸದಿಂದ ತರುಣಿಯನರಸಲು ಮರುತನ ಮಗನಿಗೆ ಬೆರಳುಂಗುರವನು ಗುರುತಾಗಿತ್ತನ-ರಾಮನ4 ಗುರುತು ಕೊಂಡು ಅರಿಪುರವನು ಸುಟ್ಟುರುಹಿದ ವಾನರ- ವರನಿಗೆ ಸೃಷ್ಠಿಪಪದವಿತ್ತಾತನ-ರಾಮನ 5 ಶರನಿಧಿಯನು ಕಟ್ಟಿ-ಶತ್ರುನಿಕರವನು ಹುಡಿಗುಟ್ಟಿ ಶರಣನ ಲಂಕೆಗೆ ಧೊರೆಯನು ಮಾಡಿ ಸಿರಿಯನಯೋಧ್ಯಗೆ ಕರೆತಂದಾತನ-ರಾಮನ 6 ಸರಣಿಯ ಲಾಲಿಸುತ ಶರಣಾಭರಣ ಪುಲಿಗಿರಿಯೊಳು ನೆಲೆಸಿದವರದವಿಠ್ಠಲ ಧೊರೆ ಪರಮೋದಾರನ-ರಾಮನ 7
--------------
ಸರಗೂರು ವೆಂಕಟವರದಾರ್ಯರು
ರಾಮನ ನೋಡಿದೆ ರಘುಕುಲ ತಿಲಕನ ಕಾಯ ಕೌಸಲ್ಯ ತನಯನ ಪ ತಾಮಸ ದೈತ್ಯರ ಲೀಲೆಯಲಿ ಕೊಂದು ಭೂಮಿ ಭಾರವನಿಳುಹಿದ ನಿಸ್ಸೀಮನಅ.ಪ. ತಾಟಕಾದಿಗಳ ಘೋರಾಟವಿಯಲಿ ಪಾಟುಪಡಿಸಿದ ಹಾಟಕಾಂಬರನ ತೋಟಿಗೊದಗಿದ ಮಾರೀಚಾದಿಗಳ ಆಟನಾಡಿಸಿದ ನೀಟುಗಾರ 1 ಹಲವು ಕಾಲದಿ ಶಿಲೆಯಾಗಿರ್ದ ಲಲನೆ ಅಹಲ್ಯೆಯ ಶಾಪವ ಹರಿಸಿ ಕಲುಷವ ಕಳೆಯುತ ಕುಲಸತಿ ಮಾಡಿದ ನಳಿನ ನಯನನ 2 ಹರನ ಧನುವನು ಸ್ಮರನ ಧನುವಿನಂತೆ ತ್ವರದಿ ಮುರಿದು ನಿಂದ ಸುಕುಮಾರನ ಧರಣಿಪ ಜನಕನ ಭಕ್ತಿಗೆ ಒಲಿದು ಧರಣಿಜೆಯ ವರಿಸಿ ಹರುಷವಿತ್ತನ 3 ತಾತನ ಭಾಷೆಯ ಪ್ರೀತಿಯಿಂ ಸಲಿಸೆ ಸೀತೆ ಸಹಿತ ಭ್ರಾತ ಲಕ್ಷ್ಮಣವೆರಸಿ ಆತುರದಿಂದಲಿ ಅರಣ್ಯವನೈದಿ ಕೌತುಕ ತೋರುತ ಚರಿಸಿದವನ4 ಖರದೂಷಣ ತ್ರಿಶಿರಾದಿ ರಕ್ಕಸರ ಅರೆಕ್ಷಣದಲಿ ತರಿದು ಬಿಸುಟವನ ಹಿರಣ್ಯಮೃಗವ ಬೆನ್ನಟ್ಟಿ ಕೆಡಹುತ ವರ ಜಟಾಯು ಶಬರಿಗೆ ಒಲಿದವನ 5 ವಾತಸುತನ ಕಂಡಾತನ ಪದುಳಿಸಿ ತರಣಿ ಸುತಗೆ ಅಭಯವನಿತ್ತ ಜಾತವೇದನೆದುರಲಿ ಸಖ್ಯವ ಮಾಡಿ ಘಾತಕ ವಾಲಿಯ ನಿಗ್ರಹಿಸಿದನ 6 ಕೋತಿ ಕರಡಿಗಳ ಹಿಂಡನು ಕೂಡಿಸಿ ಸೇತುವೆಗಟ್ಟಿಸಿ ಜಲಧಿಯ ದಾಟಿ ಪಾತಕಿ ರಾವಣನÀ ಶಿರಗಳ ಕಡಿದು ಸೀತೆಯ ಸೆರೆಯನು ಬಿಡಿಸಿದಾತನ 7 ಮೊರೆಯನು ಪೊಕ್ಕಾ ವರ ಭೀಷಣನ ಕರುಣದಿ ಕರೆದು ಕರವನು ಪಿಡಿದು ಧರೆಯಿದು ಸ್ಥಿರವಾಗಿರುವ ಪರಿಯಂತ ದೊರೆತನ ಮಾಡೆಂದ್ಹರಸಿದಾತನ 8 ಅಕ್ಕರೆಯಿಂದಲಿ ಅರ್ಚಿಸುವರಿಗೆ ತಕ್ಕಂತೆ ವರಂಗಳ ನೀಡುತಲಿ ಮಿಕ್ಕು ರಾಜಿಸುತಿಹ ಪಂಪಾಪುರದ ಚಕ್ರತೀರ್ಥದಿ ನೆಲೆಸಿಹನ 9 ಕಂತುವೈರಿ ವಿರುಪಾಕ್ಷಗೆ ತಾರಕ ಮಂತ್ರ ನಾಮಕನಾಗಿರುತಿರ್ಪನ ಯಂತ್ರೋದ್ಧಾರನಾಗಿರುವ ಹನುಮನ ಮಂತ್ರಿಯ ಮಾಡಿಕೊಂಡು ರಾಜಿಪನ 10 ದುಷ್ಟ ರಕ್ಕಸ ದಮನವ ಮಾಡಿ ಶಿಷ್ಟ ಜನರುಗಳಿಷ್ಟವ ಸಲಿಸುತ ಶ್ರಿಷ್ಟಿಗೊಡೆಯನೆನಿಸಿ ಮೆರೆಯುತಲಿರುವ ದಿಟ್ಟ ಶ್ರೀ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ರಾಯರೆ ಗತಿಯು ನಮಗೆ | ವಾಯುಮತೋದ್ಧಾರ ಶ್ರೀ ರಾಘವೇಂದ್ರಗುರು ಪ ಯುಕುತ ಮಾಗಿಹ ಚೂತ ಸುಕುಜ ಗತಿಯು | ಅಕಳಂಕ ಶ್ರೀಮಂತ್ರಮಂದಿರದಿ ನೆಲೆಸಿಪ್ಪ 1 ಋಷಿಗಳಿಗೆ ಪ್ರಣವೆಗತಿ ಝಷಗಳಿಗೆ ಜಲವೆ ಗತಿ ಸಸಿಗಳಭಿವೃದ್ಧಿಗೆ ಶಶಿರವಿ ಗತಿಯೊ ಶಿಶುಗಳಿಗೆ ಜನನಿಗತಿ ಪಶುಗಳಿಗೆ ತೃಣವೆ ಗತಿ ಅಸಮ ಮಹಿಮೆಯಲಿ ಮೆರೆವ ಮಿಸುನಿ ಶಯ್ಯಜರಾದ 2 ಕಾಮಿನಿ ಮಣಿಯರಿಗೆ ಕೈಪಿಡಿದ ಕಾಂತಗತಿ ಭೂಮಿ ಬುಧರಿಗೆ ಮಧ್ವಶಾಸ್ತ್ರ ಗತಿಯೊ ಧಾಮ ಭಯ ಪೋಪುದಕೆ ಶಾಮಸುಂದರವಿಠಲ ಸ್ವಾಮಿ ನಾಮವೆ ಗತಿಯೊ 3
--------------
ಶಾಮಸುಂದರ ವಿಠಲ
ವಂದನೆಯ ಮಾಡುವೆ ಶ್ರೀಗುರುವಿಗೆ- ವಂದನೆಯ ಮಾಡುವೆÀ ಪ ವಂದನೆ ಮಾಡುವೆನಿಂದು ಯದುಶೈಲದೋಳ್ ಚಂದದೊಳಿರುತಿಹ ತಂದೆ ನಾರಾಯಣಗೆ ಅ.ಪ ಹರುಷದಿಂದಲಿ ಇನ್ನು ಹರಸಿ ಸಜ್ಜನರಿಗೆ ವರಗಳ ಕೊಡುತಿಹ ವರಲಕ್ಷ್ಮಿ ತಾಯಿಗೆ 1 ಹಿರಿದಾದ ದೈತ್ಯನ ಸೀಳಿ ಸಂತೋಷದಿ ಮೊರೆಹೊಕ್ಕ ಕಂದನ ಪೊರೆದ ನರಸಿಂಹಗೆ 2 ಪಾವನತರಮಾದ ದೇವಸಮೂಹವ ಕಾವ ಕೃಪಾನಿಧಿ ಕಲ್ಯಾಣಮ್ಮಗೆ 3 ವಿಸ್ಫುರಿತದಲ್ಲಿರ್ಪ ವೈರ್ಮುಡಿ ತಿರುಮಣ್ಣು ಸರ್ಪಶಯನಗರ್ಪಿಸಿದಂತ ಗರುಡಗೆ 4 ಶ್ರೀಲೋಲನಡಿಗಳ ಲೀಲಾಮೃತಗಳ ಶೀಲರಾಗಿ ಕುಡಿದ ಶ್ರೇಷ್ಠ ಆಳ್ವಾರ್ರಿಗೆ 5 ವರದವಿಠಲನ ಒಲಿದು ತಾ ಬಂದಿನ್ನು ಗಿರಿಯೊಳು ನೆಲೆಸಿದ ವರ ಗುರುಪೀಠಕೆ 6 ಪಂಕಜಾಕ್ಷನಪಾದಪಂಕಜ ನಂಬಿಹ ವೆಂಕಟಪುರದೊಳಗಿರುವ ವೈಷ್ಣವರಿಗೆ 7 ವಿಷ್ಣುವಿನಂಶದಿ ಪುಟ್ಟಿ ಸಂತೋಷದಿ ಸೃಷ್ಟಿಯನಾಳ್ವ ಶ್ರೀ ಕೃಷ್ಣಭೂಪಾಲಗೆ8 ಮರೆಯದೆ ಭಕ್ತರ ಕರುಣದಿಂದಲಿ ಕಾಯ್ವ ವರಮಹದೇವನ ಪುರದಶ್ರೀರಂಗಗೆ 9
--------------
ರಂಗದಾಸರು
ವಿಜಯ ರಾಯರ ಭಜಿಸದವ ನಿರ್ಭಾಗ್ಯ ಕಾಣೋ ಪ ಅಜಭವರಕಿಂತಧಿಕ ಗಜವರದ ಪರನೆಂದಾ ಅ.ಪ. ಋಷಿಗಳೆಲ್ಲರು ಕಲೆತು ಸತ್ರಯಾಗವ ಮಾಡೆಹೃಷಿಕೇಶ ಚತುರಾಸ್ಯ ಕೈಲಾಸ ವಾಸಾ |ಈಸು ಮೂರ್ತಿಗಳಲ್ಲಿ ಮಿಗಿಲಾರು ಎಂದೆನ್ನೆಸೂಸಿ ಮೂರ್ಲೋಕಗಳ ಶ್ರೀಶ ಪರನೆಂದಾ 1 ದೇವಮುನಿ ನರನಾಗಿ ಭುವಿಯಲ್ಲಿ ಜನಿಸುತಾದೇವದೇವನ ಸ್ತೋತ್ರ ಕವನವನೆ ಗೈದಾ |ಆವ ಲಕ್ಷವು ಪಂಚಕೆ ನ್ಯೂನ ಪಾದವ ಮಾಡ್ದದೇವ ಮುನಿ ಸುತ ಗುರು ಮಧ್ವಪತಿ ವಿಠಲಾ 2 ಜವನವರು ಕೊಂಡ್ಯೋಗೆ ಜವಪುರಿಗೆ ತನಯನಾಜವನೊಡನೆ ಶೆಣೆಶಾಡಿ ಹರಿಗೆ ಮೊರೆಯಿಡಲು |ಜೀವದಾನವ ಪೊಂದಿ ಚಿಪ್ಪಗಿರಿಗೆ ತೆರಳಲುಜೀವಂತ ನಾದನೈ ತನಯ ಮೋಹನ್ನಾ 3 ಪೂರ್ಣಬೋಧರ ಮತವ ಗಾನ ರೂಪದಿ ಪೇಳಿಪೂರ್ಣಗುಣ ಹರಿಯೆಂದು ಸ್ಥಾಪಿಸುತಲೀ |ಪೂರ್ಣ ಸಂಪ್ರೀತಿಯಲಿ ನೆಲೆಸಿ ಚಿಪಗಿರಿಯಲ್ಲಿಪೂರ್ಣನಂಘ್ರಿಯ ಭಜಿಸಿ ಭಕ್ತರನೆ ಪೊರೆದಾ 4 ಯುವ ಸಂವತ್ಸರದ ಸುಕಾರ್ತಿಕದ ಸಿತಪಕ್ಷಯಾದು ಗುರುದಿನ ದಶಮಿ ಮೊದಲ್ಯಾಮದಿ |ಪವನಾಂತರಾತ್ಮ ಗುರು ಗೋವಿಂದ ವಿಠ್ಠಲನಸ್ತವನದಿಂದಲಿ ಪೊರಟ ಹರಿಯ ಪುರಕಾಗಾ 5
--------------
ಗುರುಗೋವಿಂದವಿಠಲರು