ಒಟ್ಟು 275 ಕಡೆಗಳಲ್ಲಿ , 62 ದಾಸರು , 261 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಪಿಸಲಾರೆ ನಾನು ಪರಿಪರಿ ತಾಪದಲಿ ಕೃಪೆಮಡಿ ಸಲಹಿರಿ ಶ್ರೀ ಗುರುಗಳೆ ಪ. ಸುಪಥ ಕಾಣದೆ ನಿಮ್ಮ ಪಾದವನೆ ನಂಬಿದೆನು ಗುಪಿತ ಮಹಿಮರೆ ಇನ್ನು ಭವಪಾಶ ಬಿಡಿಸುತ್ತ ಅ.ಪ. ಬಂಧು ವರ್ಗಗಳನ್ನ ಬದುಕಿಸುವರು ಎಂದು ಬಂಧನದೊಳು ಬಿದ್ದು ಬೆಂದು ನೊಂದೆ ಮುಂದೆ ದಾರಿಯ ಕಾಣೆ ಮುಕ್ತಿ ಮಾರ್ಗವನರಿಯೆ ಬಂಧು ಬಳಗಗಳೆಲ್ಲ ನೀವೆಂದು ನಂಬಿದೆ 1 ಅಶನವಸನಗಳಲ್ಲಿ ಆಸೆಯನು ತೊರೆಯದೆ ವಸುಮತಿಯೊಳು ಜ್ಞಾನ ಹೀನವಾಗಿ ಪಶುವಿನಂದದಿ ತಿರುಗಿ ಕಾಲವ್ಯರ್ಥ ಕಳೆದೆ ಅಸಮ ಮಹಿಮರೆ ಇನ್ನು ಅಜ್ಞಾನ ಪರಿಹರಿಸಿ 2 ಮಮತೆಯನು ತೊರೆಯದೆ ಮಾಯ ಪಾಶಕೆ ಸಿಲುಕಿ ಮಮಕಾರದಿಂದ ನಾ ಮೈಮರೆತೆನು ನಮಿಸುವೆನು ದೈನ್ಯದಲಿ ನಾನೀಗ ನಿಮ್ಮ ಪದಕೆ ರಮೆಯರಸನ ತೋರಿ ಎನ್ನ ಮನ ಮಧ್ಯದಿ 3 ಪಾವನರೂಪರೆ ಪಾಪರಾಹಿತ್ಯರೆ ಪಾವಿನಶಯನಗೆ ಪರಮಪ್ರಿಯರೆ ದೇವತೆಗಳೊಡೆಯರೆ ದೇವಾಂಶ ಸಂಭವರೆ ಪಾವಮಾನಿಗೆ ಪ್ರಿಯರೆ ಪಾವನ್ನಗಾತ್ರರೆ 4 ಆಪತ್ತು ಕಳೆಯುವರೆ ಶ್ರೀಪತಿಯ ತೋರ್ವರೆ ಕೋಪಿಸದೆ ಎನ್ನೊಳು ಕೃಪೆಗೈಯ್ಯರಿ ಗೋಪಾಲಕೃಷ್ಣವಿಠ್ಠಲ ತಾನು ಹೃದಯದಲಿ ತೋರ್ಪುತೆ ಕರುಣಿಸುತ ಈ ಪರಿಯಿಂ ಸಲಹಿರಿ5
--------------
ಅಂಬಾಬಾಯಿ
ತಾರಕುಪದೇಶವೆಂಬ ಸಾರಣಿಯ ಕೊಟ್ಟು ಪೂರ್ವ ಕರ್ಮಗಳೆಂಬ ಕಿಲ್ಮಿಷಗಳ ತೊಳೆದು ಧ್ರುವ ನಿಜ ಬೋಧವೆಂಬ ಚೂರ್ಣ ಕೊಟ್ಟು ಭವಬೀಜವೆಂಬ ವ್ಯಾದಿಯ ಮೂಲನೆ ಸುಟ್ಟು ಙÁ್ಞನಾಮೃತವೆಂಬ ಕಷಾಯದಲಿ ಉತ್ಪತ್ತಿ ಸ್ಥಿತಿ ಲಯವೆಂಬ ತ್ರಿದೋಷವನು ಪರಿಹರಿಸಿದ ನಮ್ಮ ಗುರು ಭವರೋಗವೈದ್ಯ 1 ಕಾಯವೆ ಕೋವಿಯನೆ ಮಾಡಿ ಭಾವನೆಯ ಮದ್ದನೆ ತುಂಬಿ ಸೋಹ್ಯ ಸೊನ್ನೆಯ ರಂಜನಸಿಕ್ಕಿ ಲಯಲಕ್ಷವೆಂಬ ಗುಂಡಿನಲಿ ಭವಪಾಶವೆಂಬ ಗುರಿಯ ಕೆಡಹಿದ ನಮ್ಮ ಗುರುನಾಥ ಮಹಿಪತಿಯ 2
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿರುಮಲೇಶ ಹರಿ ವಿಠ್ಠಲ | ಪೊರೆಯ ಬೇಕಿವನಾ ಪ ಕರುಣಾಳು ನೀನೆಂದು | ಪ್ರಾರ್ಥಿಸುವೆ ಹರಿಯೇಅ.ಪ. ತರಳನಿವ ಸಾಧನದ | ಸತ್ಪಥವ ಸಾಧಿಸಲುಹರಿದಾಸ ದೀಕ್ಷೆಯನು | ಕಾಂಕ್ಷಿಸುವ ಹರಿಯೇ |ಸರ್ವಬಗೆಯಲಿ ಇದಕೆ | ಪರಿಪರಿಯ ವಿಘ್ನಗಳಪರಿಹರಿಸಿ ಪೊರೆ ಇವನಾ | ಸರ್ವಾಂತರಾತ್ಮಾ 1 ಮರುತಮತ ದೀಕ್ಷೆಯಲಿ | ಇರುವಂತೆ ಕರುಣಿಸುತಪರತತ್ವ ಸಾರವನೆ | ಅರುಹುತಲಿ ಪೊರೆಯೋ |ವರಪಂಚ ಭೇಧಗಳ | ತರತರಾತ್ಮಕದರಿವುನೆರವಾಗಲಿವನೀಗೆ | ಗುರುದಯದಿ ಹರಿಯೇ 2 ಕಾಕುಸಂಗವ ಕೊಡದೆ | ಸತ್ಸಂಗ ಪ್ರಾಪಿಸುತಲೌಕಿಕೋನ್ನತಿ ಕೊಟ್ಟು | ನೀಕಾಯೊ ಹರಿಯೇ |ಪ್ರಾಕ್ಕು ಕರ್ಮವ ಕಳೆದು | ಬೇಕಾದ ವರಗಳನುನೀ ಕೊಟ್ಟು ಕಾಯೊ ಹರಿ | ಸಾಕಾರ ಮೂರ್ತೇ 3 ಗುರು ಹಿರಿಯ ಸೇವೆಯಲಿ | ಪರಮರತಿಯನೆ ಕೊಟ್ಟುಹರಿಗುರು ಚರಿತೆಗಳ | ಬರೆವ ಕೌಶಲವಾ |ಕರುಣಿಸೀ ಸತ್ಪಥದ | ಚರಿಪಂತೆಯ್ಯುಪ್ಪುದುಮರುತಾಂತರಾತ್ಮಕನೆ | ಉರುಗಾದ್ರಿ ನಿಲಯಾ 4 ಸರ್ವೇಶ ಸರ್ವಜ್ಞ | ಸರ್ವವ್ಯಾಪ್ತನೆ ಸ್ವಾಮಿನಿರ್ವಿಕಾರನೆ ದೇವಾ | ಶರ್ವಾದಿ ವಂದ್ಯಾ |ದರ್ವಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಶ್ರೀಹರಿಯೇಸರ್ವ ಸುಂದರ ಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ದಯಮಾಡು ಬಡವಗೆ ಮಹರಾಯ ದಯಾಕರ ವಿಜಯವಿಠಲರಾಯ ಪ ದೃಢದಿಂದಲಿ ನಂಬಿ ಬೇಡುವೆನು ಕೊಡುಗಡ ನಿನ್ನಡಿಭಕ್ತಿಯನು ಕಡುಪೀಡಿಪ ಈ ಜಡಬಡತನದಿಂ ಕಡೆಹಾಯ್ಸೆನ್ನನು ಕಡುದಯದಿಂ ಪೊರೆ 1 ಸೆರೆಗೊಡ್ಡಿ ಬೇಡುವೆ ಮಾಧವ ಕರುಣದಿ ಕರುಣಿಸು ವರವ ಪರಿಭವ ದು:ಖವ ಪರಿಹರಿಸಿ ನಿಮ್ಮ ಸ್ಮರಣೆಯೊಳಿರಿಸೆನ್ನ 2 ಸತ್ಯಭಾಮೆರಮಾಕಾಂತನೆ ಭಕ್ತರ ಕಕ್ಕುಲಾತಿದೇವನೆ ನಿತ್ಯನಿರಂಜನ ಮುಕ್ತಿದಾಯಕ ಉತ್ತಮಮತಿಕೊಡು ನಿತ್ಯಾತ್ಮ ಶ್ರೀರಾಮ 3
--------------
ರಾಮದಾಸರು
ದಯಾಬ್ದಿ ಸಿರಿಧರಣಾ ಪಾ'ಮಾಂಭಯಕೃದ್ಭಯನಾಶನ ಹಯವದನಾ ಪಜಯಪ್ರದ ಮುರಹರ ಜಾನಕೀಶ ಅಘಕ್ಷಯ ಖಗವಾಹನ ಸಾರಸೇಕ್ಷಣ 1ಚಾತುರ್ಥದ ರಾಮಕೋಟಿಯ ಜರುಗಿಸಿಕೌತೂಹಲ ಪ್ರಜತತಿಗೆ ಲಭಿಸಿದೆ 2ಆಪದೊದ್ಧಾರಣ ಆರ್ತಶರಣ್ಯಾಭೊಪಸುಜನಗಣ ತಾಪನಿವಾರಣ 3ಪ್ಲೇಗಿನವಾಂತರ ಪರಿಹರಿಸಿಪುರಭೋಗಿಶಯನ ಪರಪಾಲಿಸು ಬೇಡುವೆ 4ಚನ್ನಪಟ್ಣಾಧೀಶ ಸ್ತೌತ್ಯವುಮೇಶಎನ್ನಪರಾಧಗಳ ಮನ್ನಿಸು ಶ್ರೀಶ 5ಯುವತೀಮಣಿಯರೆಲ್ಲ ಶಿವಕರಭಕ್ತಿುದಿಂತವನಾಮಾಮೃತ ಸ'ಗೊಲಿದರು ರಕ್ತಿ 6ಪ್ರೇಮ ತುಲಸಿಗುರುಸ್ವಾ'ು ಸೇವಕ ರಂಗಸ್ವಾ'ುದಾಸ ಹೃದಿಧಾಮ ಶ್ಯಾಮಾಂಗ 7
--------------
ಮಳಿಗೆ ರಂಗಸ್ವಾಮಿದಾಸರು
ದಾವನಿಹನೈಯ್ಯಾ ಕೃಷ್ಣಾ ಎನ್ನ ಕಾವವನು ನೀನಲ್ಲದೆ ಪ ನಾರಿ ದ್ರೌಪದಿ ನೆನೆಯಲು ಸಭೆಯಲ್ಲಿ ಶೀರಿ ದಾನವ ಮಾಡಿದೀ ಕೃಷ್ಣಾ ಘೋರ ದೂರ್ವಾಸ ಮುನಿಯು ನಡುವಿರುಳೆ ಹಾರೈಸಿ ಬರೆಯನ್ನವಾ ದೇವಾ ನಾರಿ ದ್ರೌಪದಿಯ ಮೊರೆಯ ದೊರೆಯು ಆಲಿಸೇ ಆ ರಾತ್ರಿ ಕಾಯ್ದ್ಯೋಬಲೆಯಾ 1 ಪರಿವಾರದಿಂದ ಕೂಡಿ ಕರಿರಾಜನಂಗ ನಾಟಕಂದೈದಲು ಭರದಿನೆಗಳಿಯು ಪಿಡಿಯಲು ಕಾಲನು ಇರದೆ ನಿನ್ನನು ಸ್ಮರಿಸಲು ದೇವಾ ಗರುಡವಾಹನನಾಗಿ ನೀನೈತಂದು ಕರುಣಿಸಿದ್ಯೋ ಕೊನೆಯ ಗತಿಯ 2 ದುರುಳ ಹಿರಣ್ಯಕನ ಶೀಳಿ ನರಹರಿಯೆ ತರಳ ಪ್ರಲ್ಹಾದನ ಪೊರೆದ್ಯೋ ದೇವಾ ಮರೆಯದಜಮಿಳ ನೆನೆಯಲು ಕೇಳ್ದು ನೀ ಪರಿಹರಿಸಿದೆ ಯಮಬಾಧೆಯ ದೇವಾ ನರಸಿಂಹವಿಠಲ ಸ್ವಾಮಿ ಧ್ರುವನನ್ನು ಪೊರೆದಂತೆ ರಕ್ಷಿಸೆನ್ನಾ 3
--------------
ನರಸಿಂಹವಿಠಲರು
ದಾಸನ ಮೇಲಿಷ್ಟು ಬೇಸರವ್ಯಾಕೋ ಶೇಷಶಯನನೆ ನಿನ್ನ ಧ್ಯಾಸದೊಳಿರುವ ಪ ನಶಿಸಿಹೋಗುವ ಕಾಯದ್ವ್ಯಸನವನು ಪರಿಹರಿಸಿ ಹಸನಾದ ಮತಿಯೆನಗೆ ಒಸೆದು ನೀಡೆಂದು ನಿಶಿದಿವದಿ ನಿನ್ನಡಿಕುಸುಮಗಳನಂಬಿ ಮಾ ನಸದಿ ಭಜಿಸಲು ಎನಗೊಶನಾಗದಿರುವಿ1 ಜಡತನದ ಸಂಸಾರ ತೊಡರೆಡರು ಕಡಿದು ಗಡ ಜಡಮತಿಯ ತೊಡೆದೆನಗೆ ದೃಢ ನಿಶ್ಚಯವನು ಕೊಡುಯೆಂದು ದೃಢದಿ ನಿನ್ನಡಿಗೆರಗಿ ಬೇಡಿದರೆ ಒಡಲೊಳಗೆ ನಿಂದೆನ್ನ ಜಡತನಳಿವಲ್ಲಿ 2 ಶ್ರೀಶ ಶ್ರೀರಾಮ ನಿನ್ನ ಧ್ಯಾನಮಾಡಲು ಒಮ್ಮೆ ಅಘ ನಾಶನಲ್ಲೇನು ದಾಸಜನಕರುಣಾಬ್ಧಿ ದಾಸನೊಳ್ದಯವಾಗಿ ಪೋಷಿಸೈ ತವಪಾದ ನಿಜಧ್ಯಾಸವಿತ್ತು 3
--------------
ರಾಮದಾಸರು
ದೀನನಾಥ ನೀನೆ ಪ್ರಭು ಧ್ಯಾನಮಾಳ್ಪೆ ಕಾಯೊ ಕರುಣಿ ಪ ಜಾಹ್ನವೀಜನಕ ಜನಾರ್ದನ ಜಾನಕೀಪ್ರಿಯ ಜಗದೊಡೆಯ ವೇಣುಗೋಪಾಲ ನಿನ್ನ ಧ್ಯಾನಾನಂದ ಪಾಲಿಸಭವ 1 ಕವಿದುಕೊಂಡು ದಹಿಸುತಿರುವ ತಾಪ ಭಯವ ತರಿದು ಸುವಿಚಾರ ಸುಜನಸಂಗ ಜವದಿ ನೀಡಿ ದಯದಿ ಪೊರೆ 2 ವಿಷಯದ್ವಾಸನೆ ಪರಿಹರಿಸಿ ಅಸಮಜ್ಞಾನ ಸೌಖ್ಯವಿತ್ತು ಒಸೆದು ನಿಮ್ಮ ವಿಮಲಚರಣ ಕುಸುಮದಾಸನೆನಿಸು ಶ್ರೀರಾಮ 3
--------------
ರಾಮದಾಸರು
ದೀಪವಿದ ಬೆಳಗುವೆನು ದೇವ ನೀ ನೋಡುವ್ಯಾಪಿಸಿದ ತಿಮಿರವನು ಪರಿಹರಿಸಿ ರಂಜಿಸುವ ಪಸಕಲ ದೇವಾತ್ಮಕದ ತಿಲ ತೈಲವಾಗಿರಲುಅಕಲುತ ವರ್ತಿುಂ ಮಿಳಿತವಾಗಿ ಪ್ರಕಟವಾಗಿರುವಗ್ನಿ ಪ್ರಭೆಯೊಡನೆ ಸ್ಫುಟವಾಗಿಮುಖ ಸಮೀಪದಿ ಮೂರು ಲೋಕಗಳ ಬೆಳಗುತಿಹ 1ಜ್ಞಾನವೇ ಗೋಘೃತವು ಮೂರ್ತಿಗಳೆ ವರ್ತಿಗಳುನೀನಿದಕೆ ಮೂಲ ಕಾರಣವಸ್ತುವೂಸಾನುಕೂಲದಿ ಗುಣಗಳೊಂದಾಗಿ ಚಿತ್ತಿನೊಳುಲೀನವಾಗಿರೆ ನಿರ್ಮಲಾಕೃತಿಯ ತಾಳಿರುವ 2ಎನ್ನ ಜೀವವೆ ದೀಪ ನಿನ್ನ ಪಾದವೆ ಬ್ರಹ್ಮಭಿನ್ನ ಭಾವವನುಳಿದು ಪೂರ್ಣರೂಪದಲಿನಿನ್ನೊಳಗೆ ನಿಲಿಸೆನ್ನ ಪುಣ್ಯತಮವೆಂದೆನಿಪಸ್ವರ್ಣಮಯ ತಿರುಪತಿಯ ವಾಸ ವೆಂಕಟರಮಣ 3 ಓಂ ಸಚ್ಚಿದಾನಂದವಿಗ್ರಹಾಯ ನಮಃ
--------------
ತಿಮ್ಮಪ್ಪದಾಸರು
ದುರ್ಗಣ ಪರಿಹರಿಸಿ ದುರ್ಗದೊಳಿಡು ಎನ್ನಾ ಪ ಪಾಪಕ್ಕೆ ಎರಗುತಾ ತಾಪಸರನ್ನ ಜರಿದು ಬಲು ಸಂ ತಾಪದಿ ಬಳಲಿದೆನೊ ಕುಕ್ಕಿ 1 ಹಿಂಸೆಯ ಮಾಡುವಲ್ಲಿ ಹೇಸದೆ ಧ್ವಂಸಗೈಸು ವೇಗಾ 2 ಕಠಿಣ ಉತ್ತರ ನುಡಿದು ಮತ್ಸರ ಕುಟಿಲತನವಾ ಮರಿಯೆ ಸಟೆ ಮಾತುಗಳನಾಡಿ ನಿನ್ನಾ ನಿ ಚ್ಚಟದ ಮರಿದೆನೊ ಹರಿಯೆ 3 ಕಲಹವೆಂದರೆ ಕಾಲು ಕೆದರುವೆ ಕೆಲಸಾರದಲೇವೇ ಮಲಿತು ಎದುರು ನೆಲೆಗಾಣದೇ ಪೋದೆ4 ವ್ಯಾಧೆ ವೇದನೆಯಿಂದ ಬಲು ಕಷ್ಟ ವಾದದು ಈ ದೇಹಕ್ಕೆ ಮೋದ ವಿಜಯವಿಠ್ಠಲ ನಿನ್ನಿಂ ದಾದದ್ದು ತೊಲಗಿಸಿ 5
--------------
ವಿಜಯದಾಸ
ದೂತನಾ ಮನೆಗೆ ಬಂದ ಕಾರಣ ಪೇಳೋ ದಾತಾ ಪ ಪಾತಕವ ಪರಿಹರಿಸಿ ಪರಿಪಾಲಿಸುವುದಲ್ಲದೇ ಮತ್ತಾವಕಾರಣ ಅ.ಪ. ಸಂಸಾರಿಗೆ ಇನ್ನು ಘೋರ ದುರಿತಕೊಳಗಾಗಿರುವ ಶರಣರಿಘರುಷ ವರ್ಷಗರೆಯುವುದಲ್ಲದೇ 1 ತವ ಚರಣದಲಿ ಕುಳಿತು ನೀರು ಕುಡುವೆನೆಂದರೆ ದಾರಿಗಾಣೆಯೋ ರಾಯಾ 2 ಸುಮನಸರ ಪ್ರೀಯಶ್ವಾಸ ಜಾಪಕ ಪ್ರಾಶ ವಿಷನನುಜ ತಂದೆವರದಗೋಪಾಲವಿಠಲನ ದಾಸಾ 3
--------------
ತಂದೆವರದಗೋಪಾಲವಿಠಲರು
ದೇವಕಿಯ ಗರ್ಭದಲಿ ಲೋಕವಕಾವ ಕೃಷ್ಣನು ಬಂದು ನಂದನಠಾವಿನಲಿ ತಾ ಬೆಳೆದು ಗೋವನುಕಾವ ನೆವದಲಿ ಗೋಪಗೋಪೀಭಾವವನು ನೆಲೆಗೊಳಿಸಿ ದುಷ್ಟರಜೀವವನು ನೆರೆ ತೆಗೆದ ಹಾಗೆಮಾವ ಕಂಸಗೆ ಮುಕ್ತಿುತ್ತಾಮಾತೃ ಪಿತೃ ಬಂಧನವ ಬಿಡಿಸಿದಭಾಗವತವೂ ಲಾಲಿಸಿದನೂ ದೇವದೇವಾ 1ನಡೆಯಲುಪನಯನಾಖ್ಯ ಕರ್ಮವದೊಡನೆ ವಿದ್ಯವನೋದಿ ದುಷ್ಟರಬಡಿದು ಪತ್ನಿಯರೆಂಟುಮಂದಿಯಪಡೆದು ದ್ವಾರಕಿಯಲ್ಲಿ ಯಾದವರೊಡನೆ ಭೋಗಿಸಿ ಭೋಗಭಾಗ್ಯವತಡುಕಿದರಿಗಳ ತರಿದು ಕೌರವಪಡೆಯ ಮರ್ದಿಸಿ ಪಾಂಡವರನಾಪೊಡವಿಪಾಲರ ಮಾಡಿದಂಥಾಭಾಗವತವೂ ಲಾಲಿಸಿದನೂ ದೇವದೇವಾ 2ಪರಿಹರಿಸಿ ಭಾರವನು ಭೂಮಿಗೆಪರಮ ಭಕತರ ಸಲಹಿ ಕಥೆಯನುಹರಹಿ ಮುಂದಣ ಜನರು ಸಂಸ್ಕ øತಿಶರಧಿಯನ್ನಿದರಿಂದ ದಾಂಟುವತೆರನ ಮಾಡಿಯೆ ಕಾಯ್ದ ಕರುಣಾಶರಧಿ ತಿರುಪತಿ ವೆಂಕಟೇಶನೆನಿರುಪಮಾಮಿತ ಮಹಿಮ ನೀನೇಚರಿಸಿದಂಥಾ ಚಾರುತರವಹಭಾಗವತವೂ ಲಾಲಿಸಿದನೂ ದೇವದೇವಾ 3ಓಂ ಧೇನುಕಾಸುರ ಭಂಜನಾಯ ನಮಃ
--------------
ತಿಮ್ಮಪ್ಪದಾಸರು
ದೇವೀ ಸಲಹೆನ್ನನೂ | ತವ ಬಾಲಕನನೂ | ದೇವೀ ಸಲಹೆನ್ನನೂ ಪ ಕಾವ ನಿಜ ಸುಖವೀವ ಶಕ್ತಿಯೆ | ದೇವ ವಿಶ್ವೇಶ್ವರನ ಸುಪ್ರೀಯೆ ಅ.ಪ ಚಂಡನಾಡುತ ರಕ್ತಬೀಜರ | ಹಿಂಡಿ ರಕ್ತನುಂಡ ಶಂಕರೀ 1 ದುರಿತ ಹರೆ ಆರ್ಯಾ ಕಾತ್ರ್ಯಾಯನಿಯೇ | ಗೌರಿ ಹೈಮಾವತಿ | ಸುರಮುನೀ ಸುತೆ ಸರ್ವಮಂಗಲೆ | ಶರಣು ಶರ್ವಾಣಿಯೆ ರುದ್ರಾಣಿಯೆ 2 ಭವ ಸರ್ವ ಕಾರಣ ಭೂತೆ ಮುನಿ ಸುತೆ | ಸರ್ವ ಸೌಖ್ಯ ಸುಖ ಪ್ರದಾಯಕಿ 3 ಜಗದ್ಭರಿತೆ ಸದ್ಗುಣ | ಶುಭ ತತ್ವಾತೀತೆ ನಿರುಪಮ ಶಕ್ತಿ ದೇವತೆ | ಸೋತೆ ನೀ | ದಾರಿದ್ರ ದುಃಖ ವ್ರಾತವನು ಪರಿಹರಿಸಿ ರಕ್ಷಿಸೆ4 ತಂದೆ ತಾಯೆನ್ನ ಬಂಧು ಬಳಗಗಳೂ | ನಾರಾಯಣಿಯನೀ- | ಹೊಂದಿರುವ ತಾಪತ್ರಯವನಾ | ನಂದದಿಂದಲಿ ಪಾರಗಾಣಿಸಿ | ತಿಂದೆನ್ನನು ಸದಾನಂದನೆನಿಸುತ 5
--------------
ಸದಾನಂದರು
ದ್ವಾದಶನಾಮ ಸ್ತುತಿ ನಿನ್ನ ನೋಡಿ ಧನ್ಯನಾದೆನು ಶ್ರೀರಂಗನಾಥ ಪ ನಿನ್ನ ನೋಡಿ ಧನ್ಯನಾದೆ ಪನ್ನಗಶಯನ ರಂಗ ಮನ್ನಿಸಿ ರಕ್ಷಿಸು ಎನ್ನ ಮುನ್ನಜನ್ಮ ಬಾರದಂತೆ ಅ.ಪ. ಅರ್ಚ ಶೇಷಶಯನ ಲಕ್ಷ್ಮಿಗೆರಗಿ ಕೇಶವ ನಿಮ್ಮ ಸ್ತುತಿಸುವೆ 1 ಆದಿಸೃಷ್ಟಿಯಲ್ಲಿ ಬ್ರಹ್ಮನ ನಾಭಿಕಮಲದಲ್ಲಿ ಸೃಷ್ಟಿಸಿ ವೇದಸಾರವಾದ ಪ್ರಣವ ಓದಿ ಪೇಳಿದ ನಾರಾಯಣ 2 [ಆರ್ತಿ]ಯಿಂದ ಅಜನು ನಿಮ್ಮ ಮೂರ್ತಿಗಾಗಿ ತಪವ ಮಾಡೆ ಮಧುವೈರಿ ಮಾಧವಾ 3 ಪ್ರಣವಾಕಾರ ವಿಮಾನದಲ್ಲಿ ನಾಲ್ಕು ವೇದಶೃಂಗವಿರಲು [ವಿಷ್ಣು] ಪರವಾಸುದೇವರಿಂದ ಬಂದ ಶ್ರೀಗೋವಿಂದ 4 ಸತ್ಯಲೋಕದಲ್ಲಿ ನಿಂತು ನಿತ್ಯಪೂಜೆಯನ್ನು ಗ್ರಹಿಸಿ ಮತ್ತೆ ಇಕ್ಷ್ವಾಕುಗೊಲಿದ ವಿಶ್ವಮೂರುತಿ ವಿಷ್ಣುವೇ 5 ಸರಯು ತಮಸ ತೀರಮಧ್ಯದಿ ಹರಿಯೆ ನಿಮ್ಮನಿರಿಸಿ ದೊರೆಯು ಪರಮಪುರುಷನಿಂದ ಪೂಜೆ ಗ್ರಹಿಸಿದ ಮಧುಸೂದÀನ 6 ರಾಜ್ಯಾಭಿಷೇಕ ಕಾಲದಲ್ಲಿ ರಾಮಚಂದ್ರರು ರಾಕ್ಷಸೇಂದ್ರಗೆ ಕೊಡಲು [ರಾಜ್ಯವ] ಕಾವೇರಿ ಮಧ್ಯದಿನಿಂದು ತ್ರಿಜಗವಳೆದ ತ್ರಿವಿಕ್ರಮ 7 ಫಾಲ್ಗುಣ ಮೀನ ಉತ್ತರ ಫಲ್ಗುನೀ ನಕ್ಷತ್ರದಲ್ಲಿ ಬಾಲನಾಗಿ ಚಂದ್ರಪುಷ್ಕರಿಣಿ ತೀರದಿ ನಿಂದ ವಾಮನ 8 ಜಾಮಾತನೆನಿಸಿ ಗ್ರಹಿಸಿ[ದ] ಶ್ರೀದೇವಿ ಸಹಿತ ಶ್ರೀಧರ 9 ಮಳೆಯನಿಟ್ಟು ಧ್ವಜವಕಟ್ಟಿ ಸುರರ ಕರದು ಯಾಗವ ಮಾಡಿ ಯಾತ್ರದಾನದ [ತಳೆದ] ಹೃದಯವಾಸ ಹೃಷಿಕೇಶವ 10 ವೀರ ಮರುದಿನದಿ ಜಟಾಶೋಧಕರ ಮಂಟಪದಿ ನಿಂದು (?) [ಧೀರ] ಮುದುಕಿಗೊಲಿದು ದಧ್ಯಾನ್ನವ ಉಂಡ ಶ್ರೀಪದ್ಮನಾಭ 11 ನಾಲ್ಕು ದಿವಸದಲ್ಲಿ ನಾಗವೈರಿಯನ್ನು ಏರಿಬಂದು ಕಲ್ಪವೃಕ್ಷವು ಸರ್ಪವಾಹನ ಏರಿದ ದಾಮೋದರ 12 ಆರು ದಿವಸದಲ್ಲಿ ವರಿಯೂರಿಗೆ ಹೋಗಿ ನಿಮ್ಮ ಸಂತೈಸಿ ಮಾಲೆಧರಿಸಿದ ಸಂಕರ್ಷಣ 13 [ಮಾರನೆ] ದಿವಸದಲಿ ಚೂರ್ಣಾಭಿಷೇಕವನು ಧರಿಸಿ ವಾಸುದೇವ 14 ಎಲ್ಲೇಕೆರೆಗೆ ಪೋಗಿ ಭೂಮಿಯೆಲ್ಲ ನೋಡಿ ಹರುಷದಿಂದ ಅ[ಲ್ಲೆ] ತೇಜಿಯನೇರಿ ತೇರಿನೆದುರೆ ಪೇರಿಬಿಟ್ಟ ಪ್ರದ್ಯುಮ್ನ 15 ಪಂಗುನ್ಯತ್ತರವು ಬರಲು ಉಂಗುರವನು ಬೇಡಿತಂದು ಅನಿರುದ್ಧ 16 ತಿಂದ ಪಂಜಿನಪ್ರಹಾರ ಹರುಷದಿಂದ ಪುರುಷೋತ್ತಮ 17 ಪತ್ನಿಯೊಡನೆ ಪ್ರೇಮಕಲಹ ಅರ್ತಿಯಿಂದ ಮಾಡುತಿರಲು ವಿಷ್ಣು ಚಿತ್ತರ ವಾಕ್ಯದಿಂದ ಅರಸಿಗೇರಿದಾ ಅಧೋಕ್ಷಜಾ 18 ಮಂದರೋದ್ಧರ ತನ್ನ ಇಂದಿರೆಸಹಿತವಾಗಿ ಬಂದು ಗೋರಥವನೇರಿ ನಾಲ್ಕುಬೀದಿ ಮೆರೆದ ನಾರಸಿಂಹ 19 ವಾರಿಜಾಕ್ಷ ರಥವನಿಳಿದು ಕಾವೇರಿಯಲ್ಲಿ ತೀರ್ಥವಿತ್ತು ದರ್ಪಣದ ಗೃಹದಿ ನಿಂದ ಅರ್ತಿಯಿಂದ ಅಚ್ಚುತ 20 ಸಪ್ತ ಆವರಣವೆಲ್ಲ ಶಬ್ದವಿಲ್ಲದೆ ಸುತ್ತಿ ಬಂದು ಭಕ್ತ ಭಾಷ್ಯಕಾರರಿಗೊಲಿದ ದುಷ್ಟಮರ್ದನ ಜನಾರ್ಧನ 21 ಪೃಥವಿಯೊಳಗಾಶ್ಚರ್ಯವಾದ ಪ್ರತಿಯಿಲ್ಲದ ಪಲ್ಲಕ್ಕಿಯೇರಿ ಅತಿಶಯದಿಂದ ಬಂದ ಉರಗಶಯನ ಉಪೇಂದ್ರ 22 ಅಂದು ಸುರರ ಛಂದದಿಂದ ಮಂದಿರಕ್ಕೆ ಕಳುಹಿ ರಂಗ ಬಂದು ಭಕ್ತರ ಪಾಪ[ವ] ಪರಿಹರಿಸಿದಾ ಶ್ರೀಹರಿ 23 ಅಷ್ಟು ಚರಿತ್ರೆಯನ್ನು ಕೇಳಿ ಕಟ್ಟಿದ ಕಂಕಣವ ಬಿಚ್ಚಿ ಶ್ರೇಷ್ಠವಾದ ಸ್ಥಾನದಲ್ಲಿ ಮಂತ್ರಿ ಸಹಿತನಿಂದ ಶ್ರೀಕೃಷ್ಣ 24 ದಕ್ಷಿಣಗಂಗೆಯಾಗಿ ನಿಂದು ಭಕ್ತನ ದ್ವೀಪವನ್ನು ನೋಡುತ ಮುಕ್ತಿಮಾರ್ಗವನ್ನು ತೋರಿದ ಭಕ್ತವತ್ಸಲ ವೆಂಕಟರಂಗ 25
--------------
ಯದುಗಿರಿಯಮ್ಮ
ಧನುರ್ಮಾಸದ ಸೇವೆಯ ಗೀತೆ ಧನುರ್ಮಾಸದ ಸೇವೆಯ ನೋಡುವ ಬನ್ನಿ ದಾನವಾಂತಕ ರಂಗನ ಪ. ಶ್ರೇಯೋನಿಧಿಗಳಿಗೆರಗಿ ಶ್ರೀವೇದಾಂತ ಗುರುಗಳಿಗೆ ವಂದಿಸಿ ಶ್ರೀ ಭಾಷ್ಯಕಾರ ಶಠಗೋಪರಿಗೆ ವಂದಿಸಿ ಶ್ರೀರಂಗೋತ್ಸವವ ಸಂಕ್ಷೇಪದಿಂ ಪೇಳುವೆ 1 ಮಾರ್ಗಶಿರ ಮಾಸದಲಿ ಮಹಾನುಭಾವ ಶ್ರೀರಂಗನಾಥನಿಗೆ ಮಹದುತ್ಸವವನ್ನು ನಡೆಸಬೇಕೆನುತಲೆ ಮಹಾಪುರುಷರು ಸಂಕಲ್ಪವ ಮಾಡಿದರು 2 ಕೇಶವ ಮಾಸದಲಿ ಎದ್ದು ದಾಸರು ಮೂರನೆ ಜಾವದಲಿ ಭೂಸುರರಿಗೆ ಎಚ್ಚರವಾಗಬೇಕೆಂದು ಬಾ ರೀಸಿದರು ಭೇರಿ ದುಂದುಭಿ ವಾದ್ಯಗಳ 3 ಕನಕಿ ಸುಜೋತಿ ಹೇಮಾವತಿಯ ಕಪಿಲೆ ಕಾವೇರಿ ತೀರ್ಥದಲಿ ಸ್ನಾನವ ಮಾಡಿ ತೀರ್ಥವ ತಂದು ನೇಮದಿ ನೀಲವರ್ಣನಿಗಭಿಷೇಕವ ಮಾಡಿದರು 4 ಛಳಿಗೆ ಕುಲಾವಿಯನಿಟ್ಟು ಶಾಲುಗಳ ಹೊದಿಸಿ ನಳಿನನಾಭ ರಂಗಗೆ ಪರಿಪರಿ ಪುಷ್ಪದ ಸರಗಳ ಧರಿಸಿಯೆ ಶ್ರೀಮೂರ್ತಿಯ ಸರವನು ಧರಿಸಿದರಾಗ 5 ತಾಪಹರವಾದ ಸೂಕ್ಷ್ಮದ ದಿವ್ಯ ಧೂಪವನು ಬೆಳಗಿದರು ವ್ಯಾಪಿಸುವ ತಿಮಿರವ ಪರಿಹರಿಸಿ ರಂಜಿಸುವ ದೀಪವ ಬೆಳಗಿದರು ಶ್ರೀಪತಿಗೆ 6 ಋಗ್ವೇದ ಯಜುರ್ವೇದವು ಸಾ ಮವೇದ ಅಥರ್ವಣವೇದಂಗಳು ದ್ರಾವಿಡವೇದ ಪುರಾಣಶಾಸ್ತ್ರಗಳನು ಬಾಗಿ ಲಾ ವೊಳಗೆ ನಿಂತು ಭಕ್ತರು ಪೇಳಿದರು 7 ವಾರಾಂಗನೆಯರಾಗ ವೈಯ್ಯಾರದಿಂದ ಆರತಿಗಳನೆ ತಂದು ವಾರಿಜನಾಭಗೆ ನೇಮದಿಂದಲೆ ಗುಂ ಭಾರತಿಗಳನೆತ್ತಿ ನೈವೇದ್ಯವ ತಂದರು 8 ಮುದ್ಗಾನ್ನ ಘಮಘಮಿಸುವ ಪಾಯಸ ದಧ್ಯೋದನಗಳು ಪರಿಪರಿ ಶಾಕಪಾಕವು ಆ ದಿವ್ಯ ಭಕ್ಷ್ಯನೈವೇದ್ಯವ ಪರಮಪುರುಷಗೆ [ಆದ್ಯರು] ಆರೋಗಣೆ ಮಾಡಿದರು 9 ಕಳಿಯಡಿಕೆ ಬಿಳಿಯೆಲೆಯು ಕರ್ಪೂರದ ಹಿಟ್ಟಿನ ಮಂಗಳಾರತಿಯನೆತ್ತಿದರಾಗ 10 ಆ ಮಹಾ ಶ್ರೀನಿವಾಸ ರಂಗ ನೈವೇದ್ಯವ ಶ್ರೀಮಧ್ರಾಮಾನುಜರ ಮತದಿ ನೇಮದಲಿ ವಿನಿಯೋಗವ ಮಾಡಲು ಪಾವ ನಾಮಾದೆವೆಂದೆನುತ ಪೋದರು ಎಲ್ಲ 11
--------------
ಯದುಗಿರಿಯಮ್ಮ