ಒಟ್ಟು 626 ಕಡೆಗಳಲ್ಲಿ , 89 ದಾಸರು , 535 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಲ್ಲೆ ಸಂಪದವನೆಲ್ಲವನು ತೆಗೆದುಕೊ ಚೆಲ್ವ ವೇಲಾಪುರೀಶಾ ಸ್ವಾಮಿ ಪ ಬಲ್ಲವರು ನಿನಗೆ ಸರಿಯಿಲ್ಲೆಂದು ಪೊಗಳುತಿಹ ಸೊಲ್ಲ ನಾ ಕೇಳಲಾರೆ ಸ್ವಾಮಿ ಅ.ಪ ಪೆತ್ತಯ್ಯ ತಿರುಮಲಾರ್ಯರು ವರ್ಣಕರ ಚಕ್ರ ವರ್ತಿಯೆಂಬಾ ಬಿರುದನು ಒತ್ತಿ ಪೊಗಳಿಸಿಕೊಂಡುದೇನಂದದಲಿ ತಿರು ಗುತ್ತಿರ್ದಡೇನು ಭಾಗ್ಯಾ ಮತ್ತದೆನಗಾರ್ಜಿತವೆ ಸತ್ತವರ ಸಂಪದವ- ನತ್ತಲೇ ಕಳುಹಿಕೊಡದೆ ಇತ್ತಪರೆ ನಿನ್ನ ದಾಸನುದಾಸರಿಗೆ ಸೇ ವ್ಯೋತ್ತಮನೆ ಕೆಡಿಸಬೇಡಾ ಸ್ವಾಮಿ 1 ಹರಿಯೆ ನೀ ಒಲಿದೂಳಿಗವನು ಮಾಡಲು ಬಳಿಕ ಕಿರುನುಡಿಯ ಮೀರದಿರಲು ಕರುಣದಿಂದಾಗಾಗ್ಯೆ ಕರೆದುಡುಗೊರೆಯ ಕೊಡಲು ಬಿರುದುಗಳು ಮೆರೆಯುತಿರಲೂ ಸ್ಥಿರವಿಲ್ಲದಷ್ಟ ಮಹದೈಶ್ವರ್ಯವಿರುತಿರಲು ಪಿರಿಯರೆಲ್ಲರು ಪೊಗಳಲೂ ಮೆರೆಯನೇ ಮಿಗೆ ಅಹಂಕರಿಸನೇ ಬೆರೆಯನೇ ನರಕಕಿಳಿಯನೇ ಮರಳಿ ಜನಿಸನೇ ಸ್ವಾಮಿ 2 ಸುಖವಿಲ್ಲ ಸುಖವಿಲ್ಲ ಸುಖವಿಲ್ಲ ಭಾಗ್ಯದಾ ಸಕರೆಯನು ನಾನೊಲ್ಲೆನೂ ಭಕತವತ್ಸಲನೆ ಭಾಗವತಲೋಲುಪನೆ ದುಃ ಖಕೆ ಕಾರಣವಿಲ್ಲವೆ ಅಕಳಂಕ ಚರಿತನೆ ಆದಿನಾರಾಯಣನೆ ಮಕರಧ್ವಜನ ತಾತನೆ ಸುಖವೀಯೊ ವೈಕುಂಠ ವೇಲಾಪುರಾಧೀಶ ಭಕುತಿಯನು ಕೊಟ್ಟು ಸಲಹೊ ಸ್ವಾಮಿ 3
--------------
ಬೇಲೂರು ವೈಕುಂಠದಾಸರು
ಓಂ ನಮೋ ಮಹೀಪತಿ ಸದಾನಂದ ಗುರುಮೂರ್ತಿ | ಸನ್ನುತ ನಿಮ್ಮ ಖ್ಯಾತಿ ಪೊಗಳಲಾಪೆನೆ ಕೀರ್ತಿ ಪ ತನ್ನ ತಾ ಮರೆದವರಾ | ನೀನು ಕೊಟ್ಟು ಎಚ್ಚರಾ | ಮುನ್ನಿ ನಂದದಿ ಮಾಡಿ | ಓಡಿಸಿದೇ ಭವದೂರಾ 1 ಸಹಜ ಬೀರುವ ವಚನಾ | ಅದೇ ಉಪದೇಶ ಜ್ಞಾನಾ| ಇಹ ಪರಕ ನಿಧಾನಾ | ಮಾಡುವದು ಸಾವಧಾನಾ2 ವೇದ ಸಿದ್ಧಾಂತದಲ್ಲಿ | ರಾಜಯೋಗ ಮನೆಯಲ್ಲಿ | ಬೋಧಿಸುವ ವಸ್ತು ನೀನೇ | ಸರಿಗಾಣೆ ನಾನೆಲ್ಲಿ3 ಏನು ಪುಣ್ಯವೋ ಎನ್ನಾ | ಅದೇ ಬಾಲಕ ನಿನ್ನಾ | ತಾನೇನ ಸಾಧುವೆನಗ | ಇರಲು ನಿಮ್ಮ ದಯಾಘನಾ 4 ದಾಸರಾ ದಾಸನೆಂದು | ಇನ್ನು ನೋಡದೆವೆ ಕುಂದು | ಭಾಸಿ ಪಾಲಿಸು ಕೃಷ್ಣಗ ಎಂದೂ | ಕೈಯ್ಯಾ ಬಿಡೆನೆಂದು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓಡಿಬಾ ಬಾ ರಂಗ ಆಡುಬಾ ನೀಲಾಂಗ ಪಾಡಿ ಪೊಗಳುವೆ ರಂಗ ಶ್ರೀಪಾಂಡುರಂಗ ಪ ಬೇಡುವೆನೊ ಮಾರಾಂಗ ನೋಡಿನಲಿವೆನೊರಂಗ ನೀಡು ವರಂಗಳ ರಂಗ ಶ್ರೀಕರಾಂಗ ಅ.ಪ ಬಡ ಮೌನಿಗಳು ನಿನ್ನ ಪಿಡಿಯ ಬಂದಿಹರೆನ್ನ ತೊಡೆಯ ಮೇಲಿರೋ ಚಿನ್ನ ಮುದ್ದುಮೋಹನ್ನ ಬೆಡಗ ತೋರುತೆ ಚೆನ್ನ ಚೆಲುವ ಬಾ ರನ್ನ ಒಡೆಯ ಮಾಂಗಿರಿಯ ಚೆನ್ನಿಗ ನಂಬಿಹೆನೊ ನಿನ್ನ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಂಡ ದೈವಕ್ಕೆ ಕಂಗೆಟ್ಟು ಕೈ ಮುಗಿದು | ದಣಿದಿಯಾತಕೋ ಪ ಶರಧಿ ಗರ್ವ ಪರಿಹರನಸೇರಿ ಹೋದ ದಿವಿಜರ ಬಿಡಿಸಿ ಸಿರಿಯಿತ್ತು ಸಲಹಿದಾತನ 1 ಸುರರು ಪೊಗಳಲು |ಹುರುಳಿಲ್ಲದ ಭವವನಳಿದು ಪರಮ ಪದವಿಯನಿತ್ತನ 2 ವೈರಿ ತಮ್ಮಗೆ |ರುಕ್ಮನಗರ ಧಾರೆಯೆರೆದ ಶ್ರೀ ರಾಮಚಂದ್ರನ 3
--------------
ರುಕ್ಮಾಂಗದರು
ಕಂಡೆ ಕಂಡೆನೊ ಕಂಗಳಲಿ ಭೂ | ಮಂಡಲಾಬ್ಧಿಗೆ ಸೋಮನೆನಿಪ ಅ | ಖಂಡ ಮಹಿಮಾ ವಾದೇಂದ್ರ ಗುರುಗಳ ಪ ನಸುನಗಿಯ ಮೊಗ | ಪಸರಿಸಿದಾ ದ್ವಾದಶನಾಮಗಳು ಶ್ರೀ ಮುದ್ರೆ ಮುದದಿಂದ | ನೊಸಿಲಿಲೊಪ್ಪುವ ಗಂಧ ಅಕ್ಷತಿ ಎಸೆವ ಸಣ್ಣಂಗಾರ ಕಿವಿಯಲಿ ಹಸನಾದ ಎಳೆ ತುಲಸಿ ಶೋಭಿಸಿ | ಬೆಸಸುವ ಒಂದೊಂದು ಮಾತಾ | ಲಿಸಿದರದು ವೇದಾರ್ಥತುಲ್ಯಾ | ಲಸವ ಗೈಯಿಸದೆ ಬರುವ ಗುರುಗಳ1 ಮೊಸಳಿವಾಯಪಲಕ್ಕಿ ಸುತ್ತಾ ಭಾ | ರಿಸುವ ನಾನ ವಾದ್ಯಾದಾ ಘೋಷಾ | ಪುಸಿಕರೆದೆದಲ್ಲಣರು ಎಂಬಾ | ದಶ ದಿಕ್ಕಿನೊಳು ಕೀರ್ತಿ ತುಂಬಿರೆ | ಶಿಶುವು ಮೊದಲಾದವರು ತಮ ತಮ | ಬೆಸನೆ ಪೇಳಲು ಕೇಳಿ ಅವರು | ಋಷಿಕುಲೋತ್ತಮರಾದ ಗುರುಗಳ2 ಶ್ವಶನ ಮತ ವಾರಿಧಿಗೆ ಪೂರ್ಣ | ಶಶಿ ಎನಿಸಿಕೊಂಬ ಧೀರುದಾರರೆ | ಅಸಮ ತತ್ವ ಪ್ರಮೆಯದಲಿ ನಿರ್ಮಿಸಿದನೆ | ಲೋಕೇಶ ಇವರನ್ನ ವಸುಧಿ ಅಮರರು | ಪ್ರಸರ ಎಡಬಲ ಎಸದು ತುತಿಸಲು ಹಿಗ್ಗಿ ಕರುಣಾ | ರಸಭರಿತರಾಗಿ ನೋಡುತ್ತ ಮಾ | ಸನದಿ ಹರಿಪದ ಭಜಿಪ ಗುರುಗಳ3 ಕುಸುವಶರನ ಬಾಣವನು ಖಂಡ್ರಿಸಿ ಬಿಸುಟ ಸಂಪನ್ನ ವಿದ್ಯಾ | ವಸುವಿನಲಿ ಆವಾಗ ತಲೆ ತೂ | ಗಿಸುವರು ಪಂಡಿತರ ಮೆಚ್ಚಿಸಿ | ವಶವೆ ಪೊಗಳಲು ಎನಗೆ ಇವರ ದ | ರುಶನದಿಂದಲಿ ಗತಿಗೆ ಪಥನಿ | ವಿಷದೊಳಗೆ ಇದು ಸಿದ್ಧವೆಂದು ವಂ | ದಿಸಿದಿರೊ ಮರಿಯದೆ ಈ ಗುರುಗಳಾ 4 ಮಿಸುಣಿ ಮಂಟಪದೊಳಗೆ ರಂ | ಜಿಸುವ ರಾಮನÀ ಕುಳ್ಳಿರಿಸಿ ಅ | ರ್ಚಿಸುವ ಚಿತ್ತೇಕಾಗ್ರದಲಿ ವೊ | ಲಿಸುವ ತಂತ್ರ ಸಾರೋಕ್ತ ಬಗೆಯನು | ಕುಶಲರಾದ ಉಪೇಂದ್ರ ಮುನಿಕರ | ಬಿಸಜದಿಂದಲಿ ಜನಿಪ ಭಕುತಿಲಿ | ಸಿರಿ ವಿಜಯವಿಠ್ಠಲನ್ನ | ಪೆಸರುಗಳು ಎಣಿಸುವ ಗುರುಗಳ 5
--------------
ವಿಜಯದಾಸ
ಕಂಡೆ ಕನಸಿನಲಿ ಕಾರುಣ್ಯ ಮೂರುತಿ ಹರಿಯ ಪ ಪುಂಡರೀಕಾಕ್ಷ ಪುರುಷೋತ್ತಮನ ಸಿರಿಯ ಅ.ಪ ಚಂಡು ರನ್ನದ ತಾಯ್ತಿ ಮಲುಕು ಅರಳೆಲೆ ಹೊನ್ನಗೊಂಡೆಗಳ ಬಿಗಿದ ಶಿಖಿ ದಾರದೆಡೆಯದುಂಡು ಮಲ್ಲಿಗೆಯ ಪರಿಮಳವು ಘಮಘಮಿಪ ಅಳಿ-ವಿಂಡುಗಳ ಜರಿವಂಥ ಸುಳಿಗುರುಳಿನಿರವ1 ಸಿರಿ ನಾಮ ಕಸ್ತೂರಿ ತಿಲಕದಎಸೆವ ಕುಡಿ ಹುಬ್ಬುಗಳ ಕುಂಡಲದ ಕಾಂತಿಗಳದÉಸೆದೆಸೆಗೆ ಬೆಳಗುತಿಹ ವರದೀಪ್ತಿಗಳನು 2 ಕೆತ್ತನೆಯ ಪದಕೆ ಕೆಲಬಲಕೆ ಒಲಿದಾಡುತಿಹಮುತ್ತು ಮಾಣಿಕದ ಹುಲಿಯುಗುರು ಸರದ ಮಣಿ ಒತ್ತಿನಲಿ ಶಿರಿವತ್ಸ ವೈಯಾರದಿರವ 3 ತÉೂೀಳ ಬಳೆ ತಾಯ್ತಿ ಕಡಗ್ಹವಳ ಕಂಕಣವಾಕು ನೀಲ ಮಾಣಿಕ್ಯದ ಬೆರಳುಂಗುರಗಳ ಸಾಲು ಗಂಟೆಗಳ ರಂಜಿಸುವ ಕಾಂತಿಗಳ ಈ- ರೇಳು ಭುವನಗಳ ಧರಿಸಿದ ಉದರವನು 4 ಬಟ್ಟದೊಡೆಗಳಿಗೆ ಬಿಗಿದುಟ್ಟ ಚಲ್ಲಣ ಮೈಯ ತೊಟ್ಟ ಜರತಾರದಂಗಿಯ ಚರಣದಿ ಕಾಲ ಕಡಗಗಳ ದಟ್ಟಡಿಯನಿಡುತ ಬಹ ಪುಟ್ಟ ಗೋಪಾಲಕನ 5 ಬಾಲಕನು ಕರೆಯೆ ಬಹು ಕಂಬದಲಿ ಬಂದೊಡೆದು ಬಾಲಕನ ತರಿದು ಸಾಂದೀಪಗಿತ್ತ ಬಾಲೆ ಚೀರಿದರೆ ಅಕ್ಷಯವಿತ್ತ ದೇವಕಿಯ ಬಾಲಕನ ಬಹು ಬಗೆಯ ಲೀಲೆಗಳನೆಲ್ಲ 6 ಪೊಗಳಲೆನ್ನಳವಲ್ಲ ಪೊಸಬಗೆಯ ಮಹಿಮೆಗಳ ಅಘಹರನ ಅಗಣಿತದ ಗುಣ ಗಣಗಳ ನಿಗಮ ನಿಕರಕೆ ಮೈಯಗೊಡದ ಉಡುಪಿನ ಕೃಷ್ಣ ನೊಗುಮಿಗೆಯ ಉನ್ನತದ ವೈಯಾರಗಳನು 7
--------------
ವ್ಯಾಸರಾಯರು
ಕಂಡೆ ಕಮಲನಾಭನ ಕಣ್ಣಾರೆ ಪುಂಡರೀಕನ ಪಾಲಿನ ಪಂಡರಿವಾಸನ ಸಕಲ - ಬೊ ಮ್ಮಾಂಡವ ಧರಿಸಿದನಾ ಪ ಸುಲಭ ದೇವರ ದೇವ ನಾನಾ - ಪರಿ ಮಳ ತುಲಸಿಗೆ ವಲಿವನ ಕಲಿಕಾಲ ಸಲಹುವನ ಭವದ - ಸಂ ಕಲೆ ಪರಿಹರಿಸುವನ 1 ಲಿಂಗ ಸಂಗವನೀವನ ಜಗದಂತರಂಗ ಮೋಹನರಾಯನ ಮಂಗಳ ದೇವೇಶನ ಸಿರಿಪಾಂಡು ರಂಗ ನೆನಸಿಕೊಂಬನ2 ಜಗದ ಸದ್ಭರಿತ ನಾನಾ ವನದಿ ಬಿಗಿದ ಪರಾಕ್ರಮನಾ ನಗವನೆತ್ತಿದ ಧೀರನಾ ತನ್ನನು ಪೊಗಳಲು ಹಿಗ್ಗುವನಾ 3 ಯಾದÀವ ಶಿರೋರನ್ನನ ಕೊಳಲು ಊದುವ ಚೆನ್ನಿಗನಾ ವೇದ ನಿಕರಮಯನಾ 4 ಇಟ್ಟಿಗೆಯಲಿ ನಿಂದನ ವರಂಗಳ ಕೊಟ್ಟರೆ ತಪ್ಪದವನ ಅಟ್ಟಿ ಖಳನ ಕೊಂದನಾ ವಿಜಯ ವಿಠ್ಠಲ ಜಗದೀಶನಾ 5
--------------
ವಿಜಯದಾಸ
ಕಂಡೆ ನಾ ಕಣ್ಣಾರೆನಾ | ಕಂಡೆನಾ ಪ ಕಂಡೆನು ಕರುಣಾಸಾಗರನ | ಕರ ದಂಡ ನಾಮಕೊಲಿದವನ | ಆಹಾ ದಂಡ ಧಂಡದ ಲೀಲೆ ತೋಂಡರೊಡನಾಡು ಮೂರ್ತಿ 1 vಟಿಟತಮತ್ಕೋಟಿ ಸನ್ನಿಭನ | ದೇವ | ತಟಿನಿಯ ಪದದಿ ಪೆತ್ತವನ | ಚಾರು ಕರವ ನಿಟ್ಟವನ | ನಿಜ ಭಟ ಜನರಿಗೆ ಮುಕ್ತಿ ಪ್ರದನ ||ಆಹಾ || ಜಠರದಿ ಜಗವಿಟ್ಟು ವಟದೆಲೆಯೊಳು ಮಲಗಿ ವಟುರೂಪದಲಿ ಪಾದಾಂಗುಟವನು ಮೆಲುವನ 2 ಭುವನದೊಳು ಸಂಚರಿಸುವನ | ಕೂರ್ಮ ಮಾನವ ಪಂಚಮುಖನ | ಋಷಿ ಕುಮಾರ ಕುವರರ ಕಡಿದವನ ಮಹಿ ಕರವ ಕುವಲಯ ಸಖ ಕುಲೋಧ್ಭವ ಭವಮಾರ್ಗಣ ಬವರದಿ ಹಯವೇರಿ ಯವನರ ಬಡಿದನ 3 ಲ್ಮೊಗನ ನಾಭಿಲಿ ಪಡೆದವನ | ರವಿ ಮಗನಿಗೆ ಮಗನಾದವನ ತನ್ನ ಪೊಗಳುವಂಥರಫÀ ಕಳೆಯವವನ ಆಹಾ ಜಗನ್ನಾಥದಾಸರಿಗೆ | ಸೊಗಸಾದ ಮೃಷ್ಟಾನ್ನ ಬಗೆ ಬಗೆ ಉಣಿಸಿದ ಖಗಪತಿ ಗಮನನ4 ಸಾಸಿರನಯನನುಜನ | ಮಹಿ ದಾಸ ಕಪಿಲದತ್ತಾತ್ರೇಯನ ವೇದ ವ್ಯಾಸ ವೃಷಭ ಹಯಮುಖನ ಭಾರ ಶ್ರೀಶ ಮಾನಸಮಂದಿರ ||ಆಹಾ || ಶ್ರೀಶ ತಂದೆ ವೆಂಕಟೇಶ ವಿಠಲಂಘ್ರಿ ದಾಸರ ಸತ್ಯಹವಾಸದಿಂದಲಿಯಿಂದು 4 ತಂದೆ ತಾಯ್ಗಳ ಸುಕೃತವೊ | ನಮ್ಮ ಒಂದೂರಾರ್ಯರ ಅನುಗ್ರಹವೋ | ಸ್ತಂಭ ಮಂದಿರ ರಾಯರ ದಯವೊ | ದಾಸ ವೃಂದ ಕೃತಾಶೇಷ ಫಲವೊ | ಆಹಾ ಇಂದು ಭಾಗದಿ ಭಕ್ತಾವೃಂದಕೆ ದರುಶನಾ ನಂದಗರೆವ ಶಾಮಸುಂದರ ವಿಠಲನ 5
--------------
ಶಾಮಸುಂದರ ವಿಠಲ
ಕಂಡೆನೋ ನಿನ್ನ ಚರಣ ಕಮಲವ ಸೊಂಡಿಲಿಂದಿಹ ಗಣಪತಿ ಕೊಡು ವರವ ಪ ಮಣಿ ಕುಂಡಲ ಭೂಷಾ ಉಂಡಲಿಗೆ ಚಕ್ಕುಲಿಯೊಳಗೆ ಸಂತೋಷ ಚಂಡ ಪ್ರಬಲನಲ ಅಖಂಡ ಪ್ರಕಾಶ ಭೂ ಮಂಡಲದೊಳು ನಿನ್ನ ಕೀರ್ತಿ ವಿಶೇಷ 1 ಚಂದನಾಗರು ಧೂಪ ದೀಪಾವಳಿಯಿಂದಾ ನಂದದಿಂದಲಿ ಪೂಜಿಪೆ ಭಕ್ತಯಿಂದ ನಂದಿವಾಹನನಿಗೆ ಮೋಹದ ಕಂದ ಮಂದಮತಿಯ ಬಿಡಿಸೈಯ್ಯ ನೀ ಮುದದಿಂದ 2 ಚಿಕ್ಕ ಮೂಷಿಕವೇರಿ ಗಕ್ಕಾನೆ ಬರುವೆ ಅಕ್ಕರಿಂದಲಿ ಭಕ್ತರೆಲ್ಲಾರ ಪೊರೆವೆ ಮಿಕ್ಕ ಮಾತುಗಳೇನೋ ಪೊಗಳಲೆನ್ನಳವೇ ಇಕ್ಕೇರಿಯೊಳು ಟೆಂಕಸಾಲೆಯೊಳಿರುವೆ 3
--------------
ಕವಿ ಪರಮದೇವದಾಸರು
ಕಥನಾತ್ಮಕ ಹಾಡುಗಳು ಉದ್ಭವಿಸಿದ ಕಂಬದಿ | ಶ್ರೀ ನಾರಸಿಂಹ ಉದ್ಭವಿಸಿದ ಕಂಬದಿ ಪ. ಉದ್ಭವಿಸಿದ ಬೇಗ ಪದ್ಮಸಂಭವಪಿತ ಮುದ್ದು ಬಾಲಕನ ಉದ್ಧರಿಸುವೆನೆಂದು ಅ.ಪ. ದುರುಳನು ಪ್ರಹಲ್ಲಾದನು | ಪರಿಪರಿಯಿಂದ ಕರಕರಪಡಿಸೆ ಕುವರನ ನರಹರಿ ಎನ್ನನು ಪೊರೆ ಎಂದು ಮೊರೆಯಿಡೆ ಸುರರು ನೋಡುತಿರೆ ಭೋರ್ಗರೆಯುತ ಆ ಕ್ಷಣ 1 ಎಲ್ಲಿರುವನು ಹರಿ ಎಂದು | ದೈತ್ಯನು ಮಗನ ಇಲ್ಲಿ ಸ್ಥಂಭದಿ ತೋರೆಂದು ಖುಲ್ಲನು ಹಿಂಸಿಸೆ ಸರ್ವತ್ರದಿ ಶ್ರೀ- ನಲ್ಲನಿರುವನೆಂದು ಸಾಧಿಸೆ ಭಕ್ತನು 2 ತನಯನ ನುಡಿ ಉಳಿಸಲು | ನರಹರಿ ಹೊಸಲೊಳ್ ಇನನು ತಾ ಮುಳುಗುತ್ತಿರಲು ದನುಜನ ತೊಡೆಯ ಮೇಲಿಟ್ಟು ನಖದಲಿ ಕನಲಿ ಸೀಳಿ ಕರುಳ್ಮಾಲೆ ಧರಿಸುತ 3 ಸುರರು ಜಯ ಜಯವೆನ್ನುತ | ಪೊಗಳುತ್ತಲಿರೆ ನರಹರಿ ಉಗ್ರ ತಾಳುತ ಸುರರು ಬೆದರಿ ಪ್ರಹ್ಲಾದನ ಕಳುಹಲು ಕರಿಗಿರಿ ನರಹರಿ ಶಾಂತನೆನಿಸಿದ 4 ತಾಪವಡಗಿತು ಜಗದಲಿ | ವರ ಭಕ್ತನಿಂದ ಶ್ರೀಪತಿ ಲಕುಮಿ ಸಹಿತಲಿ ಗೋಪಾಲಕೃಷ್ಣವಿಠ್ಠಲ ಗುರುವರದ ಈ ಪರಿಯಿಂದ ಭಕ್ತರ ಪೊರೆಯಲು5
--------------
ಅಂಬಾಬಾಯಿ
ಕಮಲನಾಭ ನಿಮ್ಮ ಪಾದಕಮಲ ನಂಬಿ ಭಜಿಪೆ ಶ್ರೀ ಮಾಧವ ಪ ಪಕ್ಷಿಗಮನ ನಿಮ್ಮ ನಿರ್ಮಲಕ್ಷಯನಾಮ ಎನ್ನ ಜಿಹ್ವೆಗೆ ಲಕ್ಷ್ಯದಿತ್ತು ಪಿಡಿದು ಬಿಡದೆ ರಕ್ಷಿಸ್ಯಾದವ 1 ಮಂದಭಾಗ್ಯ ನಾನು ನಿಮ್ಮ ಬಂಧುರಂಘ್ರಿಕುಸುಮ ಮರೆ ಬಂದು ಬಿದ್ದೆ ದಯದಿ ಕಾಯೋ ಮಂದರೋದ್ಧಾರ 2 ಅರಿಯದೆ ನಾ ಮಾಡಿದಂಥ ಪರಮದುರಿತ ತರಿದು ತವ ಚರಣಸೇವೆ ನೀಡಿ ಪೊರೆಯೈ ಉರಗಶಯನ 3 ನಾನಾ ಬೇನೆಯೊಳಗೆ ಬಿದ್ದು ಹಾನಿಯಾಗಿ ಬಳಲುವಂಥ ಹೀನ ಬವಣೆ ತಪ್ಪಿಸಿನ್ನು ದಾನವಾಂತಕ 4 ಕ್ಷಣಕೆಕ್ಷಣಕೆ ಮಾನವರಿಗೆ ಮಣಿದು ಬೇಡಿ ಜೀವಿಸುವ ಬಿನಗುಕೃತಿ ಗೆಲಿಸು ದಯದಿ ದೀನಮಂದಾರ 5 ಜನಿಸಿದಂದಿನಿಂದ ನಾನು ಘನ ತಾಪತ್ರಯದಿ ನೊಂದೆ ಮನಕೆ ತಂದು ರಕ್ಷಿಸಿನ್ನು ಜನಕಜಾವರ 6 ಬುದ್ಧಿಯಿಲ್ಲದೆ ಕೆಟ್ಟೆನಭವ ಬಧ್ಧಜನರ ಸಂಗದಿ ಬಿದ್ದು ಶುದ್ಧಮತಿಯ ನೀಡಿ ಸಲಹು ಪದ್ಮನಾಭನೆ 7 ವಿಶ್ವ ವಿಶ್ವಾಕಾರ ನಿಮ್ಮ ವಿಶ್ವಾಸೆನಗೆ ಕೃಪೆಯ ಮಾಡಿ ನಶ್ವರೆನಿಪ ಮತಿಯ ಬಿಡಿಸು ವಿಶ್ವರಕ್ಷನೆ 8 ನೀನೆ ಗತಿಯು ಎನಗೆ ದೇವ ನಾನಾದೈವವರಿಯೆ ಸತ್ಯ ಜ್ಞಾನಪಾಲಿಸೊಳಿದು ಬೇಗ ಜ್ಞಾನಸಾಗರ 9 ಕೆಟ್ಟ ಹೊಟ್ಟೆ ಕಷ್ಟಕಡಿದು ದುಷ್ಟ ಭ್ರಷ್ಟ ಸಂಗ ತರಿದು ಶಿಷ್ಟ ಸಂಗ ದೊರಕಿಸೆನಗೆ ಸೃಷ್ಟಿಕರ್ತನೆ 10 ಸುಜನ ಸಹ ವಾಸದಿರಿಸನುಮೇಷ ಎನ್ನ ವಾಸುದೇವನೆ 11 ಹೀನ ಹೀನ ಜಗ ಅಭಿಮಾನ ತೊಲಗಿಸಧಿಕ ನಿಮ್ಮ ಧ್ಯಾನಾನಂದ ಕರುಣಿಸಯ್ಯ ಜನಾರ್ದನ12 ಭಾರವೆನಿಪ ವಿಷಮಸಂಸಾರ ಸುಲಭದಿಂದ ಗೆಲಿಸು ಘೋರ ಭವದ ತಾಪಹರ ನಾರಾಯಣ 13 ದೇಶದೇಶಂಗಳನು ತಿರುಗಿ ಅಸಂಬದ್ಧನಾದೆ ಸ್ವಾಮಿ ದೋಷ ಮನ್ನಿಸಯ್ಯ ಎನ್ನ ಈಶಕೇಶವ 14 ಸಂಚಿತಿಂದೀಗಳಿ( ಯಿ)ಸೆನ್ನ ಮುಂಚಿತಾಗಮ ಗೆಲಿಸು ಜೀಯ ಸಂಚಿತಾಗಮ ರಹಿತ ವಿರಂಚಿತಾತನೆ 15 ಚಾರುವೇದ ಪೊಗಳುವಂಥ ತೋರಿಸಯ್ಯ ನಿನ್ನ ಮೂರ್ತಿ ಮೂರು ಲೋಕ ಸಾರ್ವಭೌಮ ನಾರಸಿಂಹ 16 ಮದನನಯ್ಯ ಮುದದಿ ಬೇಡ್ವೆ ಸದಮಲ ಸಂಪದವ ನೀಡು ಸದಮಲಾಂಗ ಸರ್ವಾಧಾರ ಮಧುಸೂದನ 17 ಸಕಲ ವಿಘ್ನದೂರ ಮಾಡಿ ಮುಕುತಿಪಥಕೆ ಹಚ್ಚು ತ್ವರಿತ ಭಕುತರಿಷ್ಟ ಪೂರ್ಣ ಆದಿಲಕುಮಿನಾಯಕ 18 ದರ್ಜುಮಾಡಿಸೆನ್ನ ನಿಮ್ಮ ಮರ್ಜಿಪಡೆದ ಭಕ್ತರೊಳಗೆ ದುರ್ಜನಾಗಿ ದಯಾರ್ಣವ ನಿರ್ಜರೇಶನೆ 19 ಪೋಷಿಸೆನ್ನನುಮೇಷ ನಿಮ್ಮ ದಾಸನೆನಿಸಿ ವಸುಧೆಯೊಳು ಆಸೆಯಿಂದ ಬೇಡಿಕೊಂಬೆ ಕ್ಲೇಶನಾಶನೆ 20 ನಿರುತ ಮನದಿ ಹರಿಯ ನಾಮ ಬರೆದು ಓದಿ ಕೇಳುವರಿಗೆ ಪರಮ ಮುಕ್ತಿ ಕೊಡುವ ಮಮ ವರದ ಶ್ರೀರಾಮ 21
--------------
ರಾಮದಾಸರು
ಕರುಣಾದಿ ಪಿಡಿ ಕರವಾ ದೇವರ ದೇವ ಪ ಕರುಣಾದಿ ಪಿಡಿಕರ ಸರಸಿಜಾಂಬಕ ಎನ್ನ ಗುರು ರಘುಪತಿ ಪಾಲಾ ಮರುತಾಂತರಿಯಾಮಿ ಅ.ಪ ಗತಶೋಕ ಜಿತಮಾಯ ಪತಿತ ಪಾವನವೇದ್ಯ ಪ್ರತಿಪಾದ್ಯ ಕ್ಷಿತಿಪ ಭಾರತಿ ಕಾಂತ ವಂದ್ಯಾ ಆ ನತರ ಪಾಲಕ ದುಷ್ಟದಿತಿಜಾರಿ ತವಪಾದ ಶತಪತ್ರ ಬಿಡದೆ ಸಂತತ ಭಕುತಿಯಲಿಂದ ಸ್ತುತಿಪಾರ ಮಿತ ಅಘವಾ ಕಳೆದು ಮತ್ತೆ ಹಿತದಿ ಸದ್ಗತಿ ಕೊಡುವಾ ನಿನ್ನಯ ದಿವ್ಯಾಚ್ಯುತವಾದ ಘನದಯವಾ ಪೊಗಳು ವಂಥ ಮತಿವಂತರನು ಕಾಣೆ ಶತಮುಖಜಜ ಮಾವಾ 1 ಅನಿಮಿತ್ಯ ಬಂಧುವೆ ವನಚಾರಿ ಕೂರ್ಮನೆ ಕನಕ ನೇತ್ರಾರಿ ಪಾವನತರ ನರ ಪಂಚ ನಾನಾ ರೂಪದಿಂದ ಬಾಲನಾ ಕಾಯ್ದೊನರ ಹರಿಬಲಿ ನಿತ್ಯ ಅನಘಾತ್ಮ ಜನನೀಯ ಕೊಂದಾನೆ ಜನಕ ಜಾಪತಿಯ ರು ಕ್ಮಿಣಿ ಮನೋಹರನೆ ವಸನದೂರ ಹಯರೂಢ ಜನನ ರಹಿತ ವಿಖ್ಯಾತಾ ನಮಿಸುವೆ ಅನಿಮಿಷಪಜನ ಸುತಾ ಬೇಡಿಕೊಂಬೆ ಅನುದಿನದಲಿ ಮಮತಾ ಕನಕೋದರನ ತಾತಾ 2 ಸರಿವೀರ ಹಿತ ಬಲಿಸರಸಿ ಜಾಂಬಕ ಮುರ ಹರ ಹರ ವಂದಿತ ಹರಿಮುಖ ಹರಿನುತ ಪಾದ್ಯ ಹರಸು ಎನ್ನಯ ಅಘ ನಿರುತ ನಿನ್ನ ಡಿಂಗರರ ನೀಕರದಿತ್ತು ಗುರುವಿನ ಚರಣಾದಿ ಸ್ಥಿರ ಭಕುತಿಯ ಕೊಟ್ಟು ವರ ಶಿರಿಗೋವಿಂದ ವಿಠಲನೆ ನೀ ಯನ್ನ ಮರಿಯದೆ ಮಮತೆಯಿಂದಾ ನಿತ್ಯ ಗರಿಯುತಲಿರು ಆನಂದಾ ನಿನ್ನಯ ಪಾದಾದಿರಲಿ ಮನಸು ಮುಕುಂದಾ ದುರುಳ ಭವದ ಬಂಧ 3
--------------
ಅಸ್ಕಿಹಾಳ ಗೋವಿಂದ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರೆ ಕರೆ ಭವದೊಳು ಮುಳುಗಿರುವೆ ದುರಿತದೂರನೆ ದು:ಖ ತರ ತರ ವ್ಯಥೆಯಲಿ ಪ ಅಗಣಿತ ಮಹಿಮನೆ ಸುಗುಣಗಳನುದಿನ ಬಗೆ ಬಗೆ ಸ್ಮರಿಸುವ ಬಗೆ ಮರೆದು ಹಗಲಿರುಳೆನ್ನದೆ ನಿಗಮವೇದ್ಯನ ನಾಮ ಬಗೆ ಬಗೆ ಪೊಗಳಿ ಕೊಂಡಾಡಿ ಸ್ತುತಿಸದಲೆ 1 ಜನುಮ ಜನುಮದಲಿ ಜನಿಸಿ ಬರುವ ದು:ಖ ಕೊನೆಗಾಣದಾಗಿದೆ ಕರುಣಾನಿಧೆ ಅನಿಮಿಷರೊಡೆಯ ಶ್ರೀ ಘನ ಮಹಿಮನ ನಾಮ ಮನದಣಿ ಪೊಗಳಿ ಕೊಂಡಾಡಿ ಸ್ತುತಿಸದಲೆ2 ನಾನು ನನ್ನದು ಎಂಬ ಹೀನವೃತ್ತಿಗಳಿಂದ ಹಾನಿಯಾಯಿತು ಆಯು ಶ್ರೀನಿಧಿಯೆ ಜ್ಞಾನಿಗಳೊಡನಾಡಿ ಮೌನದಿಂದಿರದಲೆ ಶ್ವಾನಸೂಕರನಂತೆ ತಿರುಗಿ ಬಾಯ್ಬಿಡುತಲಿ 3 ರಂಗನ ಮೂರ್ತಿಯ ಕಂಗಳಿಂದಲಿ ನೋಡಿ ಭಂಗಗಳಳಿಯುವ ಹರಿದಾಸರ ಸಂಗದೊಳಿರಿಸು ಉತ್ತುಂಗ ಮಹಿಮಪಾಂಡು- ಭವ ಭಂಗ ಬಿಡಿಸೆನ್ನದೆ4 ಪಾದ ಪೊಂದಿ ಭವದಘ ವೃಂದವ ಕಳೆಯುವನೆಂದೆನ್ನುತ ಬಂಧಕ ಮೋಚಕನೆಂದರಿಯದೆ ಭವ ಬಂಧನದೊಳು ಸಿಕ್ಕಿ ಬಳಲಿ ಬಾಯ್ಬಿಡುತಲಿ5 ಪರಿ ಮೋಹ ಮಾತುಳಾಂತಕ ಕೃಷ್ಣ ಮಾತು ಮಾತಿಗೆ ಹರಿ ಹರಿ ಎನ್ನದೆ ಸೋತು ಬಂದೆನೊ ದೇವ ಮಾತರಿಶ್ವನಪ್ರಿಯ ಕೋತಿ ಬುದ್ಧಿಯ ಬಿಡಿಸೆಂದು ತುತಿಸದಲೆ 6 ಕಮಲ ಪತ್ರಾಕ್ಷ ಶ್ರೀ ಕಮಲಜಾತೆಯ ಪ್ರಿಯ ಕಮಲನಾಭ ವಿಠ್ಠಲ ವಿಠ್ಠಲ ಹರೇ ಸುಮನಸರೊಡೆಯ ಶ್ರೀ ಭ್ರಮರಕುಂತಳೆ ಪ್ರಿಯಶ್ರಮ ಪರಿಹರಿಸೆಂದು ನಮಿಸಿ ಸ್ತುತಿಸುವೆನು 7
--------------
ನಿಡಗುರುಕಿ ಜೀವೂಬಾಯಿ
ಕಲಿಪುರುಷನಿಗತಿಹರುಷ ಬಲುಸಜ್ಜನಗಳುಬಾಯ್ಬಾಯ್ಬಿಡುವುದು ಪ ಅಲಕ್ಷ್ಮೀರಮಣ ಅಖಿಲ ದುರ್ಗುಣಂ ಗಳಕೊಟ್ಟೆಲ್ಲರ ಗಾಳಿಗೆ ತೂರುವೆ ಅ.ಪ ರಾವಣಾಸುರಗೆ ಮಗನೆನಿಸಿ ದೇವತೆಗಳ ಸೆರೆಯಲ್ಲಿಡಿಸಿ ಭಾವಜ್ಞರನು ನಿರಾಕರಿಸಿ ಸಭಾಸ್ಥಾನಗಳ ಭಂಗಪಡಿಸಿ ಬಹುದುಃಖ ಪಡಿಸಿ ಪಾಂಡುಕುಮಾರರ ಪಾವನಿಯಿಂತೊಡೆಯೊಡೆದು ಬೀಳುತ ಬಗೆಯ ನೆನದುಯೀಗೆಮ್ಮ ಬಾಧಿಸುವೆ 1 ಆಗಮಗಳು ಸುಳ್ಳೆಂಬುವದು | ನಾ ಯೋಗಿಯೆಂದು ಹಿಗ್ಗುತಲಿಹುದು ಭಾಗವರತ ನಿಂದನೆಗೈದು | ನಿರ್ ಭಾಗ್ಯತನ್ನತಾನೆ ಪೊಗಳುವದು ಸಾಗರದಂತಿಹ ದುರಾಸೆಯೊಳಗಾ ವಾಗಲು ಜನ ಮುಳುಗುತ ತಿಳಿಯದೆ ಹಾಗರ್ವದಿ ನಿಷ್ಫಲವ ಪೊಂದುವರಿದು 2 ನೀತಿ ತಪ್ಪಿತಾವ್ನಡೆಯುವುದು | ದು ರ್ಜಾತಿಗಳುತ್ತಮರೆಂಬುವದು ಆತುರದಲಿಮನವಳುಕುವುದು | ಬಲು ಘಾತಕತನದಲಿತಿರುಗುವದು ಗಾತುರಸುಖವೇ ಮೊಕ್ಷವೆಂದು ವಿಷ ಯಾತಿಶಯದಿಯರಿಷಡ್ವರ್ಗಗಳೊಳು ರಾತಿರಿಪಗಲೆನ್ನದೆ ಬೀಳ್ವುದುನಿ ನ್ನಾತಗಳಿಂಗೆ ಸ್ವಭಾವಗುಣಂಗಳು 3 ಕ್ಷಾಮಡಾಂಬರಗಳ್ಹೆಚ್ಚುವದು | ನಿ- ಷ್ಕಾಮರ ಹಾಸ್ಯವಮಾಡುವದು ಕಾಮದಿಜನಗಳ ಬಾಧಿಪದು ನಿಷ್ಕಾರಣರೋಗದಿ ಸಾಯುವದು ಪಾಮರರೆಲ್ಲರು ಪಂಡಿತರಾವೆಂ- ದೀಮಹಿಯೊಳುಮನಬಂದಂತೆಸದಾ ತಾಮಸಗಳಬೋಧಿಸುತಲಿಜಗದೊಳು ದ್ರವ್ಯಾರ್ಜನೆಮುಖ್ಯಸಾಧನವೆಂಬುದು 4 ವಿಪರೀತ ಫಲಗಳಾಗುವುದು ಚಪಲಹೊಂದಿಚಿಂತಿಸುತಿಹುದು ಜಪಹೋಮಗಳನು ತ್ಯಜಿಸುವದು ಬಲುಜಾಡ್ಯಂಗಳನನುಭವಿಸುವದು ಉಪಕಾರಗಳನುಮಾಳ್ಪರಲ್ಲಿ ಪ್ರ ತ್ಯಪಕಾರಗಳೆಣಿಸುತಲಾವಾಗಲು ಕಾಲಕಳೆಯುತ ವೃಥಾನೋಯುವದು 5 ಶೂದ್ರರುವೇದವ ಪಠಿಸುವದು | ನಿರು ಪದ್ರವನುದಂಡಿಸುತಿಹುದು | ಹರಿ ರುದ್ರವಿಧಿಗಳದೂಷಿಪದು | ಅ- ಬದ್ಧವೆಬಲುರುಚಿಯೆಂಬುವದು ಕ್ಷುದ್ರಕುನಾಸ್ತಿಕಮತವನಂಬಿ ದೇ- ವದ್ರೋಹಗಳನುಮಾಡುತ ಬಾಯಲಿ ಇದ್ದದ್ದಾದರುಯಿಲ್ಲೆಂಬುವದು6 ಪರರೊಡವೆಗಳಪಹರಿಸುವದು | ನೆರೆ- ಹೊರೆಯಂತಿರಬೇಕೆಂಬುವದು ಗುರುವಿನಲ್ಲಿ ದ್ವೇಷವೆಣಿಸುವದು | ಸತಿ- ಯರುಪತಿಯಲಿದ್ವೇಷಿಸುತಿಹುದು ನಿರತವುಜೀವನಕಿಲ್ಲೆಂದುಬಳಲಿ ದುರ್ವಿದ್ಯಗಳಭ್ಯಾಸಿಸಿಕಡೆಯಲಿ ನರಕಂಗಳಿಗೆ ಪ್ರಯಾಣಮಾಡುವದು7
--------------
ಗುರುರಾಮವಿಠಲ