ಒಟ್ಟು 855 ಕಡೆಗಳಲ್ಲಿ , 84 ದಾಸರು , 713 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಉದದಿ ಮೇಖಳೆಯ ಭಾರವನಿಳುಹುವನೆಂದು ವಿಧಿಪೂರ್ವಸುರರು ಬಂದು ಕ್ಷೀರಾಬ್ಧಿಯ ಸಿಂಧು ಪ. ಶೌರಿ ಗೃಹದ ಗೋಪಿ ಜನಕೆ ನಾನಾ ವಿಧದ ಲೀಲಿಯ ತೋರಿ ದೈತ್ಯರ ಸದೆದು ಗೋವುಗಳ ಕಾಯ್ದ ಕೃಷ್ಣಗೆ ಪದುಮದಾರತಿಯ ಬೆಳಗಿರೆ ಶೋಭಾನೆ 1 ಮೆಲ್ಲನೆ ಮಧುರೆಗೆ ಹೋಗಿ ಮಾವನ ದೊಡ್ಡ ಬಿಲ್ಲ ಮಧ್ಯದಿ ನಿಂದು ರಂಗದಿ ಹಸ್ತ ಮಲ್ಲಾದಿಗಳ ತರಿದು ಕೈದೋರಿ ಮೆರೆದು ಖುಲ್ಲನನು ಮಡುಹಿ ಬಂಧುಗ- ಳೆಲ್ಲರನು ಸಂರಕ್ಷಿಸಿದ ಸಿರಿ ನಲ್ಲ ಗೋಪೀ ವಲ್ಲಭನ ಪದ ಪಲ್ಲವಗಳನು ಪಾಡಿ ಪೊಗಳುತ ಮಲ್ಲಿಗೆಯಾರತಿಯ ಬೆಳಗಿರಿ ಶೋಭಾನೆ 2 ಮಂದಿಮಾಗದ ಮೊದಲಾದ ರಾಯರ ಮದ ಕುಂದಿಸಿ ರಥದೊಳಂದು ಭೈಷ್ಮಿಯ ಕರ ತಂದು ದ್ವಾರಕೆಗೆ ಬಂದು ಭಾಮಾದಿ ಮಹಿಷೀ ವೃಂದ ಸಂಗ್ರಹಿಸಿದ ಪರಾಪರ ವಂದ್ಯ ಶೇಷಗಿರೀಂದ್ರನಾಥನ ಚಂದನಾತ್ಮಕ ಮೂರುತಿಯ ಹೃ- ನ್ಮಂದಿರದ ಮಧ್ಯದಲಿ ಮಂಡಿಸಿಕುಂದಣದಾರತಿಯ ಬೆಳಗಿರೆ ಶೋಭಾನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಉದಿಸೀದಾ ರವಿಯು ತಾನುದಿಸಿದ ಪ ಉದಿಸಿದ ರವಿಯು ತಾನೆನಿಸೀ | ಗುರುಮುದಮುನಿ ಮತವ ವಿಸ್ತರಿಸೀ | ಆಹಬುಧಜನರಂತಸ್ಥ ಬಹು ವಿಧ ತಿಮಿರವಒದೆದು ಛೇದಿಸುವಂಥ ವಿಜಯಾರ್ಯ ತರಣಿಯು ಅ.ಪ. ಸುರಮುನಿ ಪಾದವ ಭಜಿಸೀ | ಯುಗವೆರಡರೊಳ್ ಸುರಲೀಲ ನೆನಿಸೀ | ಯುಗಮೂರರೊಳ್ ನಿಕಂಪನೆನಿಸೀ | ಯುಗಮೂರೊಂದರಲಿ ಕರುವೆನಿಸೀ | ಆಹಪುರಂದರ ದಾಸರ ಗೃಹದೊಳಗುದಿಸುತ 1 ಕರಣೀಕ ಶೀನಪ್ಪ ತನು | ತನ್ನವರಪ್ರಿಯ ಸತಿಕೂಸಮ್ಮನು | ಬಲುಪರಿಪರಿ ಸೇವಿಸಿ ವರವನು | ಪೊಂದಿಎರಡೊಂದು ತನಯರುಗಳು | ಆಹಪರಿ ಪಾಲಿಸುತ್ತಲಿ ಪರಿಪರಿ ಭವಣೇಲಿಪೊರೆಯವು ಉದರವ ಸರಿಯಿತು ಕಾಲವು 2 ಬಡತನ ಭವಣೇಲಿ ಬಂದೂ | ಒಂದುಕುಡಿತೆ ಗಂಜಿಗಾಗಿ ನೊಂದೂ | ಛಾಗಿಒಡೆಯನ ಮನೆಯೊಳಗಂದೂ | ಮೆದ್ದುಒಡಲ ತುಂಬಿಕೊಂಡು ಬಂದೂ | ಆಹಬಡಗ ದಿಕ್ಕಿನ ಗಂಗೆ ಮಡುವ ಕಾಣುವೆನೆಂದುಸಡಗರದಲಿ ಪೋದ ಬಡ ಕೂಸೀಮಗದಾಸ 3 ವತ್ಸರ ತರಳ | ತನ್ನಹಿರಯರಿಗ್ಹೇಳದೆ ಪೊಳಲ | ಬಿಟ್ಟುತಿರುಗುತ ತೀರ್ಥ ಕ್ಷೇತ್ರಗಳ | ಮಿಂದುಮರಳಿ ತಾ ಮಾತಾ ಪಿತೃಗಳ | ಆಹಬೆರೆದು ಮಾನವರಂತೆ ಸಂಸಾರ ವೃತ್ತಿಲಿಚರಿಸಿದವೆರಡುಂಟು ವರುಷವ ಕಳೆಯುತ 4 ಮತ್ತೆ ತಾ ವೈರಾಗ್ಯದಲ್ಲಿ | ಹರಿಪೆತ್ತ ಗಂಗೆಯ ಸ್ನಾನದಲ್ಲಿ | ಮನತೆತ್ತು ಗಯಾದೇಶದಲ್ಲಿ | ಪಿಂಡವಿತ್ತು ವಾರಣಾಸಿಯಲ್ಲಿ | ಆಹಉತ್ತಮರ ಸಂಗ ನಿತ್ಯಸ್ನಾನ ಸಂಧ್ಯಕೃತ್ಯವನೆಸಗಿ ಸುಚಿತ್ತದಿ ಮಲಗಿರೆ 5 ಸತ್ಯ ಸ್ವಪ್ನದಿ ನರಹರಿಯು | ತನ್ನಪುತ್ರನೆಬ್ಬಿಸಿದಂತೆ ಪರಿಯು | ದಾಸರಂತೆ ರೂಪವ ತಾಳಿ ಹರಿಯು | ತನ್ನಹತ್ತಿರ ಕರೆಯುತ ಧೊರೆಯು | ಆಹಚಿತ್ತಜ ಪಿತ ಪೆತ್ತ ಸರಿತವ ದಾಂಟಿಸಿಉತ್ತಮ ಕಾಶಿಯ ವ್ಯಾಸರ ಕಂಡವ 6 ಪರಿ ಪರಿಯ | ಆಹಅಚ್ಚ ಕವನ ಪೇಳಿ ನೆಚ್ಚಿನ ಮನದವರಸ್ವಚ್ಛತನಕೆ ತಿದ್ದಿ ಅಚ್ಚ್ಯುತಗಿಂತವ 7 ಎರಡೊಂದನೇ ಬಾರಿ ಪೋಗಿ | ಕಾಶಿಪುರದಿ ಗಂಗಾಸ್ನಾನಕಾಗಿ | ಕೂಡೆಸುರನದಿ ಪೆಚ್ಚಿ ಮೇಲಾಗಿ | ಸಿರಿವರದ್ವಿಜಗಭಿಷೇಕವಾಗಿ | ಆಹಸರಿತವು ಮುಂಚಿನ ಪರಿಯಂತೆ ಪ್ರವಹಿಸೆಸುರನರೋರುಗರೆಲ್ಲ ಪರಿಪರಿ ಕೊಂಡಾಡೆ 8 ತುತಿಸುತಲಲ್ಲಿಂದ ಸೇತು | ಸ್ನಾನರತಿಯಿಂದ ಗೈಯ್ಯುತ ಹೊತ್ತು | ಹರಿಕಥೆಗಳ ಪೇಳಿ ಯಾವತ್ತು | ಜನತತಿಗೆ ಸನ್ಮಾರ್ಗವನಿತ್ತು | ಆಹತೀರ್ಥ ಕ್ಷೇತ್ರಂಗಳ ನತಿಸುತ ದಶಮತಿಮತವ ಬೀರಿದನೀತ ಸುಜನರ ಪೊರೆಯಲು 9 ಸಾರ | ಸೊಳ್ಹಾದಿಗಳ್ ಮೊದಲಾದ ಹಾರ | ದಿಂದಭೇದ ವಾದಿಯ ಮತೋದ್ಧಾರ | ಗೈದುಶ್ರೀಶ ಗೊಪ್ಪಿಸೀದ ಧೀರ | ಆಹನಾದ ಮೂರುತಿ ಗುರು ಗೋವಿಂದ ವಿಠಲನಪಾದವ ಸ್ಮರಿಸುತ್ತ ಮೋದವ ಪಡುತ್ತಿದ್ದ 10
--------------
ಗುರುಗೋವಿಂದವಿಠಲರು
ಉದ್ದಾಳಿಕನ ಕಥೆ ಪಾಶಾಂಕುಶ ಧರನೆ ಕರಿಣಿಸೊ ಮತಿಯ 1 ಮಾನಿನಿಕುಲಕೆ ಕಟ್ಟಾಣಿ ಕರುಣಿಸೆ ಮತಿಯ2 ಮನೋಹರನೆ ನಿಜಮತಿಯ 3 ಅಂಬರ ಮೇಲಾದಷ್ಟದಿಕ್ಪಾಲಕರು ಪುಣ್ಯಕಥೆಯ 4 ಓಣ್ಯೊಳು ಚೆಲ್ಲಿದ ಅಣಿ ಮುತ್ತಾರಿಸಿ ನೂಲಿಗೆ ಪೋಣಿಸಿದಂತೆ ಯೋಗಿಗಳರಸುದ್ದಾಳಿಕನ ಕಥೆಯನು ಹೇಳುವೆ ಚರಿತೆಯ ಮಾಡಿ5 ವೇದವೇದಾಂತ ಪಾರಗನು ಧರ್ಮ ಪತ್ನಿ 6 ಸುತಜನಿಸಿದ ಉದ್ದಾಳಿಕ ಮಾಡಿದ ಕ್ರಮದಿಂದ 7 ಮೌಂಜಿಯ ಕಟ್ಟಿ ನಡೆದರು ಪರಗತಿಗೆ 8 ನಾಲ್ಕು ವೇದಗಳ ಘನತಪವನಕಾಗಿ ನಡೆದ 9 ನಿಂದು ಬೆಳಗುವ ಜ್ಯೋತಿಯಂತೆ ಸಂದವರುವತ್ತು ಸಾವಿರವು 10 ಪಟ್ಟಣದಿ ರಾಜ್ಯವಾಳುವನು 11 ಕನ್ಯಾದಾನವು ಭೂದಾನ ರಾಜ್ಯವಾಳುವನು 12 ಹೆತ್ತ ತಾಯಿ ಮಕ್ಕಳಗಲರೆಂದೆದಿಗು ಬತ್ತದೆ ಕರೆವ ಧೇನುಗಳು ದೇಶದೊಳಗೆ 13 ಪುಣ್ಯಸಾಧನರು ಸಜ್ಜನರು ಧರ್ಮಗಳಾ ದೇಶದೊಳಗೆ 14 ಬಡವರಿಲ್ಲಿ ಚಾರರುಂಟು ದೇಶದೊಳಗೆ 15 ಧರ್ಮವ ನಡೆಸಿ ರಾಜ್ಯವಾಳುವನು 16 ಮಕುಟವೆಂದೆನಿಸಿ ಪಟ್ಟದರಸಿಯಲ್ಲದನ್ಯತ್ರ ನೋಡೇಕ ಪತ್ನಿಯ ವ್ರತವ ನಡೆಸಿದನು17 ಸಂತೋಷದೋರಲು ಹುಟ್ಟಿದಳ್ ಚಂದ್ರಾವತಿಯು 18 ಹೊನ್ನಿನ ರಾಸಿ ಸುವರ್ಣದ ಬೆಟ್ಟವು ಕನ್ಯಾದಾನದ ಹೆಬ್ಬೆಳಸು ಮಾಣಿಕವೆ ಸಂತಾನ 19 ನಡೆಯೋಳು ದಟ್ಟಡಿಯಿಡುತ ಕಡುಲಾಲಿಕೆ ಬಾಲಲೀಲೆ 20 ಬಡವಾದಾಳೆಂದು ಕಡುಹರುಷದಲಿ ಹಿಗ್ಗಿದರು 21 ಅಕ್ಷರಾಭ್ಯಾಸವ ಮಾಡಿಸಿ ಕುಮಾರಿಗೆ ನರ್ತನ ಗೀತವ ಕಲಿಸಿ ಪುತ್ರಿಗಭ್ಯಾಸ ಮಾಡಿಸಿದ 22 ಯೌವನವು ತೋರಿದವು ಆಲಯವನೆ ಕಟ್ಟಿಸಿದ 23 ಪುತ್ರಿಯ ಸೇವೆಗೆ ಇಟ್ಟನೆ ಭೂಪಾಲ ಹತ್ತುಸಾವಿರ ಕೆಳದಿಯರ ಸುತ್ತಲು ಪ್ರಾಕಾರ ಎಸೆದವು ರಕ್ಷೆಗೆ ಇಟ್ಟನೆ ದ್ವಾರಪಾಲಕರ24 ಮುನಿಕೌಶಿಕನು ನೋಡುತಲಿ 25 ಸತ್ಯಲೋಕ ತಪೋಲೋಕವ ಚರಿಸುತ್ತ ಹೊಕ್ಕ[ನೆ] ಯಮ ಲೋಕವನು ಜೀವಿಗಳ ತಾಕಂಡ 26 ತೃಣದ ಮೂಲಾಗ್ರದಿ ನಡುಗುತಿಪ್ಪರ ಕಂಡು ಬ[ಳಿ] ಯಲ್ಲಿ ನಿಂತು ಮಾತಾಡಿ ತಿಳಿದು ಹೇಳುವುದು ಎನ್ನೊಡನೆ 27 ಜಗದೊಳಗೆ ಎಮಗೆ ಪತನಕ್ಕೆ ಬಿದ್ದೆವೆಂದೆನಲು 28 ಕಾಣಿಸುವ ದೌಹಿತ್ರರು ಮುನಿಯು ಕೇಳಿದನು 29 ಹೆಣ್ಣನೊಲ್ಲದೆ ಅರಣ್ಯವ ಚರಿಸುವ ಉನ್ನಂತ ತಪಸೀಲಿದ್ದ ತಿಳಿದು ಹೇಳುವುದು 30 ಪುತ್ರಸಂತಾನವ ಪಡೆದು ವಿಸ್ತಾರವಾಗಿ ಹೇಳುವುದು 31 ಭೋರನಲ್ಲಿಂದ ತೆರಳಿದನಾಗಲೆ ಮುನಿ ಅರಣ್ಯವ ಚರಿಸುತಲೆ ತಪೋವನವ 32 ಕರವಿಡಿದು ಕರೆ ತಂದನಾಗ ಬರವೇನೆಂದು ಕೇಳಿದನು 33 ಯಮ ಲೋಕವನು ಅತ್ಯಂತ ನರಕಕೈದುವರು 34 ಆಲಸÀ್ಯವಿಲ್ಲದೆ ಬೀಳ್ಪರು ಪತನಕ್ಕೆ º
--------------
ಹೆಳವನಕಟ್ಟೆ ಗಿರಿಯಮ್ಮ
ಉಂಬುವ ಬನ್ನಿರೋ ಅನಂದದೂಟವ ಹಂಬಲಿಸಿ ಸವಿದು ತುತ್ತು ಕೊಂಬ ಬನ್ನಿರೋ ಧ್ರುವ ಬಡಿಸಿಹಿದು ನೋಡಿ ಅನೇಕ ಪರಿಯಲಿ ಎಡಬಲಕೆ ನೋಡಲಾಗದಾನಂದ ಘನಲೀಲೆ 1 ಇಡಿದು ತುಂಬಿದೇ ನಿಧಾನದೂಟವು ನೋಡಲಿಕ್ಕೆ ತೃಪ್ತಿಗೈಸುತಿಹುದು ನೋಟವು 2 ಬೇಡಿಸಿಕೊಳ್ಳದೆ ಬಡಸುತಿಹ್ಯನು ಮೂಢ ಮಹಿಪತಿ ಒಡೆಯ ಭಾನುಕೋಟಿತೇಜನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಊರ್ವಶಿ : ಬಂದ ಕಾಣೆ ಗೋವಿಂದ ಕ್ಷೀರ- ಸಿಂಧುಶಯನ ವನದಿಂದ ಇಂದಿರೇಶ ಮುದದಿಂದ ಮೌನಿಮುನಿ- ವೃಂದದಿಂದ ಸ್ತುತಿವಂದನೆಗೊಳ್ಳುತ1 ಏಸು ಲೋಭಿಯೊ ತಿಮ್ಮಶೆಟ್ಟಿ ಒಂದು ಕಾಸಿಗೆ ಮಾರುವ ರೊಟ್ಟಿ ದಾಸರ ಕೂಡಿ ಜಗಜಟ್ಟಿ ಬಹು ದೇಶವ ತಿರುಗುವ ಶೆಟ್ಟಿ ದೂಷಣಾರಿ ಪಾದಾಶ್ರಿತಜನರಭಿ- ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ2 ದೊಡ್ಡವನೈ ಮಹಾರಾಯ ಹಳೆ ದುಡ್ಡಿಗೆ ನೀಡುವ ಕೈಯ ಅಡ್ಡಿಗೈದರೆ ಬಿಡನಯ್ಯ ಇವ ಬಡ್ಡಿಕೇಳುವ ತಿಮ್ಮಯ್ಯ ದಡ್ಡುಕೇಸಕ್ಕಿಯ ಮಡ್ಡಿಪ್ರಸಾದವ ಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ3 ತಿರುಪತಿಗೆ ಪ್ರತಿಯಾಗಿ ಪಡು ತಿರುಪತಿಯೆಂದಿಹ ಯೋಗಿ ಮೆರಸುವನೈ ಸ್ಥಿರವಾಗಿ ಶ್ರೀ ವರ ವೆಂಕಟ ಲೇಸಾಗಿ ಶರಣರು ಏನೆಂದು ಸಂತೋಷಿಪ ಕರುಣಾಕರ ಚಪ್ಪರ ಶ್ರೀನಿವಾಸನು4 ಈ ಪರಿಯಲಿ ಒಲಿದಿಪ್ಪಾ ಬಹು ಕಾಪಟ್ಯರಿಗೆ ತಾನೊಪ್ಪನಮ್ಮ ಗೋಪಾಲಕ ಜಗದಪ್ಪ ಶ್ರೀಪರಮಾತ್ಮ ನಾನಾಪರಿ ವಿಭವದಿ ಗೋಪುರದಲಿ ತಾ ವ್ಯಾಪಿಸಿ ನಿಂದನು5 ರಂಭೆ : ನಾರೀವರ್ಯಾರಮ್ಮ ನೋಡಲು ಸಾರಹೃದಯರಮ್ಮ ತೋರಣಛತ್ರಚಾಮರ ಬಿರುದುಗಳಿಂದ ಭೂರಿ ವಿಭವದಿಂದ ಸಾರಿಬರುವರಮ್ಮ1 ಕರದಿ ಕಲಶವಿಹುದು ಶಾಲಿನ ನಿರಿ ಮುಂದಿರುತಿಹುದು ಬೆರಳಿನೊಳುಂಗುರು ವರ ದ್ವಾದಶನಾಮ ಧರಿಸಿ ಸಮಂತ್ರೋಚ್ಚರಿಸುತ ಬರುವರು2 ಮಂದಿಗಳೊಡ್ಡಿನಲಿ ಬರುವರು ಮಂದಸ್ಮಿತದಲಿ ಚಂದದಿ ಜನಗಳ ಸಂದಣಿ ಮಧ್ಯದಿ ಇಂದಿರೆಯರಸನ ಧ್ಯಾನದಿ ಬರುವರು3 ಹಿಂಗದೆ ಬರುತಿಲ್ಲಿ ಮನಸಿನ ಇಂಗಿತವರಿತಿಲ್ಲಿ ಬಂಗಾರದ ಭೂಷಣಸಮುದಾಯದಿ ಅಂಗಜಪಿತನಿಗೆ ಶೃಂಗಾರಗೈವರು4 ವಿಪ್ರೋತ್ತಮರ ಗುಣ- ಕೆಂತು ಸೈರಣೆಯಾಂತು ನಾನಿರಲಿ ಚಿಂತಿತಾರ್ಥವನೀವ ಲಕ್ಷ್ಮೀ- ಸಂತಸದಿ ಪೂಜಾದಿ ಸತತಿ- ಯಾಂತಕೊಂಡಿಹೇಕಾಂತಭಕ್ತರು1 ಕೀರ್ತಿಯನು ಧರಿಸಿ ಮ- ತಾವೆಂದು ಧರ್ಮವನು ಪಾಲಿಸಿ ಸಿಂಧುಶಯನನ ಚಾರುಚರಣ- ದ್ವಂದ್ವಕಾನತರಾಗಿ ಲೋಕದಿ ವಂದ್ಯರೆನಿಸಿಯಾನಂದ ಪರರಿವ- ರೆಂದು ಶ್ರೀಗೋವಿಂದ ನಡೆಸುವ2 ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿ ಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿ ವಾದಗೈವ ಕುವಾದಿಗಳ ಮನ- ಭೇದಿಸುತ ನಿಜವಾದ ಮಾರ್ಗವ ಸಾಧುಗಳಿಂದ ದೃಢವಾದ ಮಾತಿದು3 ಮೇಗರೆಡಂಭಮಾತಲ್ಲ ಧನಿಯ ಕು- ಗೊಂಬರೆ ಎಲ್ಲ ಸಂತಸ ಸಂಭ್ರಮದಿ ವೇದ್ಯಾಂಬುನಿಧಿಯಲಿ ತುಂಬಿರುವರೀ ಕುಂಭಿನಿಯೊಳು ಜ- ಸಂಬಡುವುದು ವಾಸಿಷ್ಠಗೋತ್ರಜ- ರೆಂಬ ವಿಪ್ರಕದಂಬಪೂಜ್ಯರು4 ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆ ಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1 ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆ ಮಹಾಲೀಲೆ2 ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇ ಲೀಲೆಯ ನಾನರಿಯೆ3 ಫಾಲೇಂದು ಕುಂದದ ವರ್ಣಕೋಲು ಚಾಮರಗಳ ನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು4 ಚಂಡವೈಶ್ವಾನರನ ತೇಜಾಖಂಡದಿಂದೋರಂತೆ ಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ5 ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿ ಆದಿನಾರಾಯಣ ಮದುಸೂದನನೆ ಮುದದಿ6 ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರು ನಾದಿನಿ ಕೇಳಿದರ ಪರಿಯನೀ ದಯದಿಂದುಸುರು7 ಊರ್ವಶಿ :ಭಾವೇ ನೀ ಕೇಳೆ ಇದನು ತ್ರೈಲೋಕ್ಯ- ದೇವನಾಗಮನವೆಲ್ಲನೂ ದೀವಟಿಗೆ ಸೇವೆಯೆಂದು ಪೇಳುವರು ಭಾವುಕರು ಮನದೊಳಂದು1 ಸಾಯನವನು ಸುರಿದು ಸಾವಿರ ಸಾಲದು ಶ್ರೀಯರಸನ ಮಹಿಮೆಯರಿವದಾರಿಗಳವಲ್ಲ3 ದೈತ್ಯವಿನಾಶನ ಜಯಜಯ ಜಾಹ್ನವಿತಾತ ಜಯಜಯ ಜಗದಾತ ಆಶ್ರಿತ ಸುರಭೂಜ ತೋರುತ ಒಲಿದು4 * * * ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ- ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ1 ಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2 ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ- ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ3 ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ- ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ4 ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥ ಮೌರಿ ಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5 ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ- ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ6 ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ- ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ7 ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ- ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ8 ನಿತ್ಯ ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ9 ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದ ಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ10 ನೋಡೆ ತಂಗಿ ನಮ್ಮ ದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ11 ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ- ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12
--------------
ತುಪಾಕಿ ವೆಂಕಟರಮಣಾಚಾರ್ಯ
ಎಂತುಟೆಂದಾಡುವೆನು ಕಾಂತನಾ ಚರ್ಯೆಯನು ಸಂತತವು ಚಿಂತಿಪೆನು ಕಾಂತೆ ನಾನು ಪಾಲನೂಡಿದಳನ್ನೂ ಪಾಳುಮಾಡಿದನಕಟ ಬಾಲ ಗೋಕುಲಬಾಲ ಜಾಲಲೋಲ ಖಲತನದಿ ಗೋಪಿಯರ ನಿಲಯವನು ತಾಪುಗುತೆ ನಲಿದು ಪಾಲ್ವೆಣ್ಣೆಯನು ಕದ್ದು ತಿಂದು ಪಿಡಿದು ಬಂದಿಪೆವೆಂದು ನಡೆತಪ್ರ್ಪವರ ಮುಂದು ಗೊಡದಂದು ಮೈಗರೆದು ಜಡಿವಹಿಂದು ಕಾಳಿಯಾ ಮಡುವನ್ನು ಕಲಕಿ ಬಂದು ಕಾಲಮೇಘವಪೋಲ್ವ ರೂಪತಳೆದು ಲೀಲೆಯಿಂ ಶೇಷಗಿರಿಯಲ್ಲಿ ನಿಂದು ಜಾಲವನು ಬೀರುತಿಹ ದೀನಬಂಧು 4
--------------
ನಂಜನಗೂಡು ತಿರುಮಲಾಂಬಾ
ಎತ್ತಣ ಪಯಣವೋ ಕೃಷ್ಣಯ್ಯ ನಿನ ಗಿತ್ತ[ಏನವ]ಸರ ಏಕೋ ರಂಗಯ್ಯ ಪ ಹೆತ್ತತಾಯಿಯ ಮುಂದಾಡದೆ ಇ ನ್ನೆತ್ತ ಯಾರಿಗೆ ಲೀಲೆ ತೋರುವೆ ಅ.ಪ ಗೊಲ್ಲ ಗೋಪಿಯರೆಲ್ಲ ಚೆಲ್ಲಾಟದಿಂದ ನಿನ್ನ ಗಲ್ಲವ ಹಿಡಿದುಕೊಂಡು ಅಲ್ಲಾಡಿಸಿ ಸೊಲ್ಲು ಸೊಲ್ಲಿಗೆ ಮುತ್ತಿಟ್ಟು ನೋಯಿಸಿದರೆಂದು ಬಿಲ್ಲ ಹಬ್ಬವ ನೋಡಲೊಲ್ಲದೆ ಪೋಪೆನೆಂಬೆ 1 ನೂರೆಂಟು ಕನ್ನೆಯರೋರಂತೆ ನಿನ್ನ ಬಳಿ ಸೇರಿರ್ಪುದನು ಕಂಡು ಕಲಹಪ್ರಿಯ ನಾರಿಯೊಬ್ಬಳ ತನಗಾರಿಸಿ ಕುಡಲೆಂದು [ಯಾರಬಳಿ ಮಸಲತ್ತು ಮಾಡಹೊರಟೆಯೊ] 2 ಬಾಲೆ ರುಕ್ಮಿಣಿಯನು ದುರಳಶಿಶು ಪಾಲಂಗೀಯುವರೆಂದು ಪೇಳಿದ್ದೆಯಲ್ತೆ ಬಾಲೆಯ ತರ್ಪೆನೆಂದೇ ಶ್ರೀ ಮಾಂಗಿರಿಯ ರಂಗ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎಂಥ ಮಹಿಮ ಏನು ಚಲುವನೆ ಶ್ರೀ ಉಡುಪಿ ನಿಲಯ ಪ. ಶಾಂತಯತಿಗಳಿಂದ ಪೂಜಿತ ನಿಂತ ಮಧ್ವಮುನಿಕರಾರ್ಚಿತ ಅ.ಪ. ಮಂಡೆ ಬಾಗಿದ ಹಿಂಡು ಭಕ್ತರಘ ಕಳೆವ ಪುಂಡರೀಕ ನೇತ್ರ ಕನಕ- ಕಿಂಡಿಯಲ್ಲಿ ಕಾಂಬ ರೂಪ1 ಬಾಲರೆಂಟು ಯತಿಗಳಿಂದ ಲೀಲೆಯಿಂದ ಪೂಜೆಗೊಂಬ ಲೀಲಮಾನುಷರೂಪ ರುಕ್ಮಿಣಿ ಲೋಲ ಲೋಕಪಾಲ ಜಾಲ 2 ಕಾಲಕಾಲದ ಪೂಜೆಗೊಂಬ ಬಾಲತೊಡಿಗೆ ಧರಿಸಿಕೊಂಬ ವ್ಯಾಳಶಯನ ಮುದ್ದುಮುಖ ಗೋ ಪಾಲಕೃಷ್ಣವಿಠ್ಠಲನೀತ 3
--------------
ಅಂಬಾಬಾಯಿ
ಎಂಥ ಶೂರನೊ ರಾಮ ಎಂಥ ಧೀರನೊ ಪ ಕಂತುಹರನ ಧನುವನೆತ್ತ ಪಂಥದಿಂದ ಮುರಿದು ಬಿಸುಟ ಅ.ಪ. ಹಲವು ಶೂರರಾಜರದನು ಚಲಿಸಲಾಗದ ಧನುವ ಸುಲಭದಿಂದಲೆತ್ತಿ ಮುರಿದು ಲಲನೆ ಸೀತೆಯೊಲಿಸಿದವನು 1 ಸಕಲ ಕ್ಷತ್ರಿಯರನು ಗೆಲಿದು ಪ್ರಕಟನಾದ ಪರಶುರಾಮ ಶಕುತಿಯನ್ನು ತಾನು ಪರಮ ಯುಕುತಿಯಿಂದ ಗೆಲಿದು ಬಂದ 2 ಸಾಲು ಶಿರನ ಕೀಟವೆಂದು ಬಾಲದಲ್ಲಿ ತಂದ ವೀರ ವಾಲಿಯನೇಕ ಬಾಣದಲಿ ಲೀಲೆಯಿಂದಲಿರಿದ ಜಾಣ 3 ಹತ್ತನಾಲ್ಕು ಲೋಕಗಳನು ಸುತ್ತಿಗೆಲಿದು ಖ್ಯಾತನಾದ ಹತ್ತು ತಲೆಯ ದುಷ್ಟನನ್ನು ಕತ್ತು ಕಡಿದು ಕೆಡಹಿದವನು 4 ರಾಸಿ ದೈತ್ಯರನ್ನು ಕೊಂಡು ದೇಶವನ್ನು ಉದ್ಧರಿಸಿದ ವಾಸವಾದಿ ಸುರನುತ ರಂ- ಗೇಶವಿಠಲರೇಯನವನು 5
--------------
ರಂಗೇಶವಿಠಲದಾಸರು
ಎಂದಪ್ಪಿಕೊಂಬೆ ರಂಗಯ್ಯನ ಎಂದಪ್ಪಿಕೊಂಬೆ ಪ ಎಂದಪ್ಪಿಕೊಂಬೆನೋ ಎಂದು ಮುದ್ದಾಡುವೆನಂದ ಕಂದನ ಗೋವಿಂದನೆಂಬುವ ಕೂಸ ಅ.ಪ. ಕರದಲಿ ತನ್ನಯ ಬೆರಳು ಬಾಯೊಳಗಿಟ್ಟುಜುರು ಜುರು ಚೀಪುವ ವರಮುದ್ದು ಬಾಲನ1 ಗುರುಳು ಮಧ್ಯದಿ ರತ್ನ ಅರಳೆಲೆ ಹೊಳೆಯುತಜರದ ಕುಂಚಿಗೆ ಹೊದ್ದು ಚರಿಸುವ ಕೂಸಿನ್ನ 2 ಪುಟ್ಟ ಪುಟ್ಹೆಜ್ಜೆಯನಿಟ್ಟು ಗೋಕುಲದೊಳುತುಷ್ಟಿ ನೀಡಲು ಬಾಲಕೃಷ್ಣನೆಂಬುವ ಕೂಸ 3 ಬಾಲೆರ ಮನೆಪೊಕ್ಕು ಪಾಲುಮೊಸರು ತಿಂದಲೀಲೆ ಮಾಡುತ ಅಂಬೆಗಾಲನಿಕ್ಕುವ ಕೂಸ 4 ಕಾಲಕಡಗ ರುಳಿಯ ಪೂಲು ಪೈಜಣನಿಟ್ಟುಮ್ಯಾಲೆ ಉಡುದಾರ ಪೊಳೆವಂಥ ಕೃಷ್ಣನ5 ತಂದೆ ತಾಯರ ಮುಂದೆ ನಿಂದು ಮಾತಾಡಿದನಂದ ಬಾಲಕನಾದ ಇಂದಿರೇಶನೆ ಬೇಗ 6
--------------
ಇಂದಿರೇಶರು
ಎಂದಿಗೆ ನಿಮ್ಮ ಪದ ಕಾಂಬೆನೊ | ಗುರು ಎಂದಿಗೆ ನಿಮ್ಮ ಪದ ಕಾಂಬೆನೊ ಪ. ಎಂದಿಗೆ ನಿಮ್ಮ ಕಾಂಬೆ ಅಂದಿಗೆ ಮುಕ್ತಳಹೆ ಅ.ಪ. ಸಕಲ ಶಾಸ್ತ್ರಗಳನೆ ಶೋಧಿಸಿ | ಬಹು ಅಕಳಂಕ ತತ್ವವ ಸಾಧಿಸಿ | ಬೇಗ ಮುಕುತಿ ಯೋಗ್ಯರಿಗೆಲ್ಲ ಸುಖವ ತೋರುವ ಗುರು 1 ಮನದಿ ನೆಲಸಿ ಲೀಲೆ ತೋರುತ | ದೃಢ ಮನದಿ ಮನಸಿಜನ ಗೆಲ್ಲುತ | ದೇವ ಮನಸಿಜನಯ್ಯನ ಮನಸಿನೊಳ್ ತೋರುತ 2 ಕಷ್ಟಪಡುವುದು ಕಾಣುತ | ಬಹು ತುಷ್ಟರಾಗಿ ಅಭಯ ನೀಡುತ | ಮನ ಮುಟ್ಟಿ ರಕ್ಷಿಪೆನೆಂದು ಇಷ್ಟು ಸಲಿಪ ಗುರು 3 ನರಹರಿ ಧ್ಯಾನಿಪ ಶ್ರೀ ಗುರು | ಬಹು ಕರುಣಾಳುವೆ ದೇವತರು | ನಿಮ್ಮ ಅರಘಳಿಗೆ ಬಿಟ್ಟು ಇರಲಾರೆ ಧರೆಯೊಳು 4 ಮುಕ್ತಿ ಸೌಭಾಗ್ಯವ ನೀಡುವ | ಬಹು ಶಕ್ತರಹುದು ನಿಮ್ಮ ಭಾವವ | ನಾನು ಎತ್ತ ಯೋಚಿಸೆ ಕಾಣೆ ಸತ್ಯವಚನವಿದು 5 ಆನಂದಪಡಿಸುವ ಶ್ರೀ ಗುರು | ನಿಮ್ಮ ಏನೆಂದು ಸ್ತುತಿಹಲಿ ಪಾಮರರು | ನಿಮ್ಮ ಕಾಣರು ಜಗದಲಿ ಏನೆಂಬೆ ಮಹಿಮೆಯ 6 ಗೋಪಾಲಕೃಷ್ಣವಿಠ್ಠಲನ | ಶುಭ ರೂಪವ ತೋರುವ ಕಾರುಣ್ಯ | ದೇವ ಪರಿ ನಿಮ್ಮ ಸ್ತುತಿಸಿ ನಾ ಪಾರು ಕಾಂಬೆನು 7
--------------
ಅಂಬಾಬಾಯಿ
ಎಂದೂ ಹಿಡಿಯದಿರು ಗರ್ವಾ | ಗೋ ವಿಂದನಲೀಲೆಯ ಕಾಣೊ ಸರ್ವಾ ಪ ಕ್ಷಿತಿಯೊಳಧಿಕವೆನ್ನ ಕುಲವು | ಗುಣ | ವತಿ ಸುಲಕ್ಷಣೆಯಾದಾ | ಸತಿಯಳ ವಲವು | ಸುತನಲ್ಲಿ ಗುಣ ನಿಶ್ಚಲಿಪು | ಯನ | ಗತಿಶಯ ಭಾಗ್ಯದ ಧನ ಧಾನ್ಯ ಒಲವು 1 ಎಲ್ಲರೊಳಗ ಅಭಿಮಾನಿ | ಶಾಸ್ತ್ರ | ಬಲ್ಲಿದ ಯೌವ್ವನ ತ್ರಾಣಿ | ಯನ್ನು | ಸೊಲ್ಲು ಸೊಲ್ಲಿಗ್ಹೇಳುವ ಕವಿತೆಯ ವಾಣಿ 2 ಸುಂದರವಾದ ಮಂದಿರವು | ಯನ | ಗೊಂದು ಕೊರತೆಯಿಲ್ಲಾವೆಂಬುದೀ ಮರವು ಹೊಂದದೆ ಬಾಗಿರೆಚ್ಚವು | ಗುರು | ತಂದೆ ಮಹಿಪತಿ ಬೋಧಿಸಿದರಹು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನಗಳವೆ ನಿನ್ನ ಮಹಿಮೆಯನು ಪೊಗಳಲು ಹೀನಮತಿ ನಾ ಪನ್ನಂಗಶಯನ ಪ ನೀಲಶಾಮನೆ ನಿಮ್ಮ ಲೀಲೆ ಪೊಗಳಲ್ಕೆ ಬ್ರಹ್ಮ ಸಾಲವು ನಾಲ್ಕುವೇದವೆಂದು ನಾಲಿಗೆಯೋಳ್ವಾಣಿನಿಟ್ಟಿರುವನಂತೆ 1 ಸಾಸಿರ ಜಿಹ್ವೆಗಳಿಂದ್ಹೊಗಳಲ್ ಈಶಭಜನೆ ತೀರದೆಂದು ಶೇಷ ಇನ್ನು ಸಾಸಿರಜಿಹ್ವೆ ಆಶಿಸಿ ಬೇಡುವನಂತೆ2 ಪ್ರಾರ್ಥಿಸಲು ನಿಮ್ಮ ಚರಿತ ಶಕ್ತಿ ಸಾಲದಂಥವರಿಗೆ ಭಕ್ತಿಯಿಂ ಪೊಗಳುವೆನಿಷ್ಟೆ ಮುಕ್ತಿದಾಯಕ ಶ್ರೀರಾಮಯೆನುತ 3
--------------
ರಾಮದಾಸರು