ಒಟ್ಟು 464 ಕಡೆಗಳಲ್ಲಿ , 78 ದಾಸರು , 421 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣದಿ ಕಾಯೋಯನ್ನ ಕಾರುಣ್ಯನಿಧಿ ಕರುಣದಿ ಕಾಯೊಎನ್ನ ಪ ಚರಣ ಸೇವಕ ಭಯಹರಣ ಶ್ರೀಕೌಸ್ತುಭಾಭರಣ ಸೌಖ್ಯವಿತರಣ ನಿನ್ನಯ ಚರಣ ಯುಗಳವ ಶರಣುಹೊಕ್ಕೆನು ಅ.ಪ. ಕರ್ಮತಂತ್ರವನುಳಿದು ಕಾಮಿಸಿ ಮನ ನಿರ್ಮಲತ್ವವ ತೊರೆದು ಹಮ್ಮಿನಿಂದಲೆ ಭಕ್ತಿಯುಮ್ಮಳಿಸದೆ ಬಲು ನಿರ್ಮಲತ್ವವನಳಿದು ಪರ ಬೊಮ್ಮ ಮೂರುತಿ1 ಸ್ನಾನ ಮೌನವ ತೊರೆದು ಸಂಧ್ಯಾದ್ಯನುಷ್ಠಾನನೇಮವ ಮರೆದು ಮಾನಸ ಪೂಜಾ ವಿಧಾನ ವನರಿಯದೆ ದೀನಜನ ಸುರಧೇನು ಭಕ್ತರ ಮಾನನಿಧಿಯಹ ಶ್ರೀನಿವಾಸನೆ 2 ಶರಣಜನಾವನನೆ ಶಕ್ರಾದಿನಿ-ರ್ಜರಕುಲ ಪಾಲಕನೆ ಪುರಹರ ಸನ್ನುತ ಚರಿತದೂರಿತ ದುರಿತಸದ್ಗುಣ ಭರಿತ ಪುಲಿಗಿರಿ ವರದ ವಿಠಲ 3
--------------
ಸರಗೂರು ವೆಂಕಟವರದಾರ್ಯರು
ಕರುಣದಿ ರಕ್ಷಿಸುಯನ್ನನು-ಪುಲಿಗಿರಿ ಲೋಲ ನಂಬಿದೆ ನಿನ್ನನು ಕರುಣದಿ ರಕ್ಷಿಸು ಚರಣಸೇವಕ ಭಯಹರಣ ಸೌಖ್ಯವಿತರಣ ನಿನ್ನಯಚರಣ ಯುಗಳದಿ ಶರಣು ಹೊಕ್ಕೆನುಪ ಯತಿಗಣ ನೇಮವನರಿಯದ-ಸ್ವರ-ಗತಿತಾಳ- ಲಯಬಂಧ ತಿಳಿಯದ ಮಹಿಮೆಯ ಕೇಳದ ಶೃತಿಗೋಚರ ನಿಮ್ಮಸ್ತುತಿಯು ಅನುಭವವಿತ್ತು ಪತಿತ ಪಾವನ ಪುಲಿಗಿರೀಶನೆ ಪತಿತನುದ್ಧರಿಪಂತೆ ಗತಿಮತಿಗಳೇನೇನು ಅರಿಯದಪತಿತನೆನ್ನನು ಭವಜಲಧಿ ಮಧ್ಯದಿ 1 ಕೃಪರಮುಂದೆಡೆಯಲ್ಲಿ ದುರುಳದುಶ್ಯಾಸನನ ಕೈಯಲ್ಲಿ ಪಡಿಸಲೆಂದೆನುತಲುಜ್ಜುಗಿಸಲು ಪೊರೆಯೆಂದು ಮೊರೆಯಿಡಲಾಕ್ಷಣ ಸಂಸಾರ ಶ್ರೀಹರಿ ||ಕರು|| 2 ವರುಷ ಜಲದೊಳು ಪರಾತ್ಮರ ಪುಲಿಗಿರಿ ಕರಿ ಮೊರೆಯಿಡಲಾಗಬೇಗ ಕರುಣದಿಂ ಮೊರೆಕೇಳಿ ಗರುಡನ ಪೆಗಲೇರಿಸಾರಿ ಕರದ ಚಕ್ರದಿ ಸೀಳಿ ನಕ್ರನ ಕರಿಯ ಪೊರೆದಾ ವರದ ವಿಠಲ 3
--------------
ಸರಗೂರು ವೆಂಕಟವರದಾರ್ಯರು
ಕರುಣಾ ಪೊಂದಿರೆ ಕೊರತೆಗಳುಂಟೆ ಶ್ರೀ ನರಹರಿಯ ಪ ನರಿಗಳ ಕೂಗಿಗೆ ಹುಲಿಯಂಜುವುದೆ ಬಿರುಗಾಳಿಗೆ ದೊಡ್ಡ ಗಿರಿ ನಡುಗುವುದೆ ಅ.ಪ ನಾನು ತಾನೆಂದು ಕುಣಿಯುತಲಿದ್ದ ಮಾನವರನು ಜರಿದು ನೀನೆ ಸೇವೆಯನು ಮಾಡೆಂದೆನುತ ತಾನೊಲಿಯುತಲಿ ಹೀನ ಜನರು ಅಪಮಾನವ ಬಯಸಲು ನಾನಿಹೆನೆನ್ನುವ ಜಾನಕಿನಾಥನ 1 ಬಂಧುಗಳೆನ್ನ ನಿಂದಿಸುತಿಹರು ಒಂದನೂ ಕೊಡೆಯೆಂದು ಹಿಂದು ಮುಂದೆನಗೆ ಕುಂದು ಕೋರುವರು ಒಂದನರಿಯರು ಮುಂದೆ ಎನಗೆ ಬಲು ತೊಂದರೆಗಳಿರುವು ವೆಂದು ಪೇಳುವರು ಮಂದರಧರನ 2 ಧನಿಕನಲ್ಲೆಂದು ಅಲ್ಲಗೆಳೆಯುವರು ಧನವಿಲ್ಲದಿರಲು ಘನತೆ ಎಂತೆಂದು ಜರಿಯುತಲಿಹರು ಮನವನರಿಯರು ಧನ ಪಿಶಾಚಿಯನು ಮನದಿಂದ ತೊಲಗಿಸಿ ಮನದಲಿ ನೆಲಸಿಹ ವನರುಹ ನಯನನ 3 ನಂಬಿದರೆಮ್ಮ ಧನಕನಕಗಳ ತುಂಬುವೆವೆಂಬ ಜಂಭದ ಮಾತ ನಂಬದೆ ಇರಲು ಹಂಬಲಿಸುವರು ನಂಬುವ ಭಕುತರ ಹಿಂಬಾಲಿಸುತಲಿ ಬೆಂಬಲಿವೀಯುತವ ಅಂಬುಜನಾಭನ 4 ಚತುರನಲ್ಲೆಂದು ಅತಿದೂರುವರು ಹಿತರಂತೆ ನಟಿಸಿ ಮಿತಿಮೀರಿ ಎನಗೆ ಬೋಧಿಸುತಿಹರು ಮನ್ಮತಿಯನರಿಯರು ರತಿಪತಿಯೆನ್ನನು ಪ್ರಸನ್ನನಾಗಿ ದಿವ್ಯ ಗತಿ ತೋರುತಲಿರೆ ಚತುರತೆಯೇತಕೆ 5
--------------
ವಿದ್ಯಾಪ್ರಸನ್ನತೀರ್ಥರು
ಕರುಣಾಕರ ಧರಣೀಧರೇಂದ್ರ ಪ ದಶರಥಸುಪುತ್ರ ಶಶಧರ ಸುವಕ್ತ್ರ ಪಶುಪತಿಮಿತ್ರನೆ ಪೊರೆಯೊ ಎನ್ನನು 1 ವನರುಹದಳಾಕ್ಷ ದನುಭುಜವಿಪಕ್ಷ ಮುನಿಜನ ಸುರಕ್ಷ ರಕ್ಷಿಸೆನ್ನನು ದೇವನೆ 2 ಸುರಜನ ಸುಪೋಷ ಖರಹರ ಸುರೇಶ ನಿರತವು ನಾ ನಿನ್ನ ನಮಿಸುವೆನೈ ಹರೇ 3 ದಾನವಖಂಡನ ಧೇನುಪುರೀಶನೆ ಮಾನವ ಪುಂಗವ ದೇವನೆ ಪೊರೆಯೈ 4
--------------
ಬೇಟೆರಾಯ ದೀಕ್ಷಿತರು
ಕರುಣಾರಸಮಾರ್ಜಿತ ಸಂತಾಪಂ ಪ ಮುನಿಮಾನಸ ಪೂಜಿತ ನಿರ್ಲೇಪಂ ವನರುಹಾಸನ ಮುಖ್ಯ ವಂದಿತ ಗೌರವಂ ನರ ಪುಂಗವಂ ಮನುಕುಲಾರ್ಚಿತ ಪಾದಪಂಕಜ ರಾಘವಂ ಸುರಧೇನುವಂ 1 ಶೋಭಿತ ಪಾವನ ಕೀರ್ತಿಯುತಂ ಪಶುಪತಿ ಪ್ರಿಯಮವ್ಯಯಂ ಸುರಪೂಜಿತ ಗುಣಭೂಷಿತಂ ಶಶಧರಾನನೆ ಜಾನಕೀ ಪ್ರಿಯ ಭಾಸುರಂ ಕರುಣಾಕರಂ 2 ಖರದೂಷಣ ಶಾಸಕ ದೇವಂ ಶರಣಾಗತ ಸಂರಕ್ಷಣ ನಿರತಂ ಚರಣಪಲ್ಲವನುನ್ನ ದುಂದುಭಿಕಾಯಂ ಅಕ್ಷಯಂ ಅದ್ವಯಂ ಸುರವರಂ ವರಧೇನುನಾಮಕ ನಗರನಾಯಕಂ ಹಾಯಕಂ 3
--------------
ಬೇಟೆರಾಯ ದೀಕ್ಷಿತರು
ಕರುಣಿಸು ಕಮಲೇಶ ಸರ್ವೇಶ ಕರುಣಿಸು ಕಮಲೇಶ ಪ. ಶರಣಾಗತ ರಕ್ಷಕ ವೆಂಕಟೇಶ ನಿರುತದಿ ಪ್ರಾರ್ಥಿಪೆ ಲಕ್ಷ್ಮೀಶ ಅ.ಪ. ವೇದ ಶಾಸ್ತ್ರ ಪುರಾಣವನರಿಯೆ ಆದಿ ಮೂರುತಿ ಪ್ರಹ್ಲಾದವರದನೆ ಆದರದಲಿ ನಿನ್ನ ಸ್ತುತಿಸುವೆ ದೇವ ಮೋದದಿಂದಲಿ ಕಾಯೋ ಪಾದಸೇವಕರಾ 1 ಜಪವ ನಾನರಿಯೆ ತಪವ ನಾನರಿಯೆ ಉಪವಾಸ ವ್ರತಮೊದಲರಿಯೆ ದೇವಾ ಅಪರಿಮಿತ ಪಾಪ ಗಳಿಶಿಹೆನೋ ಸುಪವಿತ್ರನನು ಮಾಡೊ ಅಪಾರ ಮಹಿಮಾ 2 ನಿನ್ನ ನಂಬಿಹೆನೊ ಅನ್ಯರನರಿಯೆನೊ ಎನ್ನಪರಾಧವ ಮನ್ನಿಸೊ ದೊರೆಯೆ ಚೆನ್ನಿಗ ಶ್ರೀ ಶ್ರೀನಿವಾಸನ ಸ್ತುತಿಪೆನೊ ಇನ್ನು ಸಂಶಯವ್ಯಾಕೊ ಪನ್ನಗಾದ್ರಿವಾಸ 3
--------------
ಸರಸ್ವತಿ ಬಾಯಿ
ಕರುಣಿಸು ಪ್ರಭುತಂದೆ ತರಳಂಗೆ ದಯವ ಪ ಹರಿ ನೀನೆ ಅವತರಿಸೀಪರಿಭವಶರಧಿಯ ಪರಿಹಾರಗೊಳಿಸುವ ಪರಮಪಾವನರೂಪ 1 ಅರಿವಿಟ್ಟು ಭಜಿಸುವೆ ಮರೆಯದೆ ಮಗನ್ವಚನ ಕರುಣದಿ ಆಲಿಸಿ ವರದಹಸ್ತವ ಶಿರಕೆ 2 ಹಿಂಸೆಬಿಡಿಸು ಮಹ ಸಂಸಾರದುರಿಯನ್ನು ಧ್ವಂಸಗೈಯುವ ಶರಣರಾಂಶದ ಪ್ರಸನ್ನತೆ 3 ದುರಿತ ದೂರೀಕರಿಸಿ ಪರಮಾನಂದದಲಿರುವ ಸಿರಿ 4 ಮರೆಯ ನಿನ್ನಡಿಯಿನ್ನು ಸರುವೇಶ ಮೊರೆಕೇಳಿ ಗುರುವಾಗಿ ಶ್ರೀರಾಮ ಸ್ಥಿರಮೋಕ್ಷ ಸಂಪದವ 5
--------------
ರಾಮದಾಸರು
ಕರೆದರೆ ಓ ಓ ಎನಬಾರದೆ ಮರೆತರು ಕೂಗಿನ ದನಿಕೇಳದೆ ರಂಗ ಪ ಶರಣಜನರು ಸಾಸಿರವಿದ್ದರೇನೋ ಮೊರೆಯಿಡುವವ ಕಂಡರರಿವಾಗದೇನೋ ಅ.ಪ ಲಕ್ಷಜೀವಿಗಳನ್ನು ರಕ್ಷಿಸುವವನೆಂದು ವಕ್ಷದೊಳಿರುವ ಶ್ರೀಲಕ್ಷ್ಮಿ ಹೇಳುವಳು ಪಕ್ಷಿರಾಜನ ಫಣಿಯಕ್ಷನಂಗನೆಯರು ಅಕ್ಷರ ಲೋಕಾಧ್ಯಕ್ಷನೆನುವರು 1 ಯೋಗವನರಿಯೆನು ಯಾಗವನರಿಯೆನು ತ್ಯಾಗ ಮಾಡುವ ಬುದ್ಧಿ ಎಳ್ಳನಿತಿಲ್ಲ ರಾಗ ರಚನೆಗಳ ಅರಿವೆನಗಿಲ್ಲ ನಾಗಶಯನ ಕಾಯೋ ಮಾಂಗಿರಿರಂಗ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಷ್ಟಹರಿಸೊ ಪರಮೇಷ್ಟಿಪಿತನೆ ನೀ ಕೈ ಬಿಟ್ಟರೆ ಸೃಷ್ಟಿಯೊಳು ಪಾರುಗಾಣುವುದೆಂತೂ ಪ ಇಷ್ಟದಿಂದಲೋ ಅನಿಷ್ಟದಿಂದಲೋ ನಾನೇ ಹುಟ್ಟಿಬಂದೆನೆ ದೇವ-ನಿನ್ನಿಷ್ಟದಿಂದಲ್ಲವೇ ಅ.ಪ ಬಿಂಬನೆನಿಸಿದೆ ಎನಗೆ ಪ್ರತಿಬಿಂಬ ನಾ ನಿನಗೆ ಬಿಂಬ ಪ್ರತಿಬಿಂಬಕೆ ಉಪಾಧಿಯು ನಿತ್ಯ- ವೆಂಬನ್ವಯಕೆ ಗುಣತ್ರಯಬದ್ಧವೇ ಕಾರಣ- ವೆಂಬ ಗುಣಜೀವಸ್ವರೂಪೋಪಾಧಿಯು ಬೆಂಬಲನೀನಿದ್ದೂ ಗುಣಕಾರ್ಯಕನುವಾಗಿ ಇಂಬುಕೊಡುವೆ ಫಲಭೋಗಿಸಲೀವೇ ಎಂಬನುಡಿ ಶ್ರುತಿಶಾಸ್ತ್ರಸಿದ್ಧವು ನಂಬಿಹುದು ಜಗವೆಲ್ಲ ಸತ್ಯವು ಶಂಬರಾಂತಕ ಪಿತನೆ ಎನ್ನ ಹೃದ- ಯಾಂಬರದಿ ನಿನ್ನ ಬಿಂಬ ತೋರೈ 1 ಕಾಲಕರ್ಮಾದ್ಯಷ್ಟಗುಣಗಳೆಲ್ಲವು ನಿಜ- ವೆಲ್ಲಜಡಗಳು ಮತ್ತು ಅಚೇತನಂಗಳೈ ಶೀಲ ಮೂರುತಿ ನೀ ಪರಮ ಚೇತನನಾಗಿ ಎಲ್ಲ ಕಾಲದಿ ನಿನ್ನ ನಿಯಮನಂಗಳೈ ಕಾಲಕರ್ಮಗುಣಂಗಳೇನಿಹುದೆಲ್ಲ ಫಲಪ್ರದಾನವ ಮಾಡೆ ಶಕ್ತಿ ಜಡಕೆಂತಿಹುದಯ್ಯ ಕಾಲನಾಮಕ ನೀನೆ ಸರ್ವ ಕಾಲದಲಿ ಸ್ವಾತಂತ್ರ್ಯ ನಿನ್ನದೋ ಇಲ್ಲ ಘನ ಸಮರಿಲ್ಲ ಸರ್ವಕರ್ಮ ಫಲವೆಲ್ಲ ನೀನೆ ದಾತೃವೋ 2 ಮರ್ಮವರಿಯೆನೊ ದೇವ ಧರ್ಮಭ್ರಷ್ಟನಾದೆ ಕರ್ಮಫಲಾನುಭವಮಾಡಿ ಬೆಂಡಾದೆನು ಕರ್ಮ ತಾ ಶಿಕ್ಷಿಸಲರಿಯದು ನ್ಯಾಯ ಧರ್ಮಾಧಿಪತಿ ಭೀಕರ ಫಲಕೊಟ್ಟು ಶಿಕ್ಷಿಪಂತೆ ಧರ್ಮಮೂರುತಿ ಶುದ್ಧನಿಷಿದ್ಧಕರ್ಮಂಗಳಿಗೆ ಪೂರ್ಣಫಲವಿತ್ತು ಸಮನೆಂದೆನಿಸಿರುವೆ ಕರ್ಮಮೋಚಕ ನೀನೆ ಸಕಲ ಕರ್ಮಪ್ರದನೆಂದೆನಿಸಿ ಪೂರ್ವ- ಕರ್ಮಫಲ ಭೋಗಿಸಲು ಜನ್ಮವನಿತ್ತು ಕರ್ಮಪ್ರವಹದೊಳಿಡುವೇ 3 ವಿಮುಖನಾಗಿಹೆ ಶ್ರುತಿಸ್ಮøತಿಶಾಸ್ತ್ರಧರ್ಮಕೆ ಪ್ರಮುಖನಾಗಿಹೆ ದುಷ್ಕರ್ಮ ಮಾರ್ಗದಲ್ಲಿ ಕರ್ಮಕಲಾಪದ ಧರ್ಮ ಮರ್ಮವನರಿಯೆ ಹೆಮ್ಮೆಯಿಂದಲಿ ನಾನಾ ಕರ್ಮಕೂಪದಲಿರುವೆ ಪೆರ್ಮೆಗೋಸುಗ ಅಧರ್ಮವೆಷ್ಟೋ ಮಾಡ್ದೆ ಒಮ್ಮೆಗಾದರು ಸದ್ಧರ್ಮಾಚರಿಸಲಿಲ್ಲ ಕರ್ಮ ಅಕರ್ಮ ವಿಕರ್ಮ ಪರಿಚಯವಿಲ್ಲ ಜನ್ಮಕೆ ಧರ್ಮಪುತ್ರನೆ ದ್ವಂದ್ವಕರ್ಮಸಮರ್ಪಿಸಲು ಸನ್ಮತಿಯ ಕೊಟ್ಟಿನ್ನು 4 ಬೆಟ್ಟದೊಡೆಯನೆ ಶ್ರೀ ವೇಂಕಟೇಶ ನೀ ತುಷ್ಟಿಯಾದರೆ ನಿನ್ನಿಷ್ಟದಂತೆ ಫಲವು ಸೃಷ್ಟಿಯೊಳು ಪುಟ್ಟಿಸಿ ದುಷ್ಟಕರ್ಮದ ಪಾಶ ಕಟ್ಟಿನೊಳಿಟ್ಟೆನ್ನ ಕಷ್ಟಪಡಿಸುವರೇ ಸೃಷ್ಟೀಶ ಉರಗಾದ್ರಿವಾಸ ವಿಠಲ ಎನ್ನ ನೀನಿಟ್ಟಿರುವಷ್ಟುಕಾಲ ಧಿಟ್ಟಭಕುತಿಯ ಕೊಟ್ಟು ದಿಟ್ಟ ರಕ್ಷಿಸು ಇಷ್ಟಮೂರುತಿಯೆ ಇಷ್ಟದಾಯಕನೆಂದು ನಾನಿಷ್ಟು ನುಡಿದೆನೋ ನಿನ್ನ ಎನ್ನ ಮನೋಭೀಷ್ಟೆ ಸಲಿಸೆ ನಿನ್ನಿಷ್ಟವಯ್ಯ5
--------------
ಉರಗಾದ್ರಿವಾಸವಿಠಲದಾಸರು
ಕಾಣಲಿಲ್ಲವೆಂದೆನಬೇಡಿ ಪ ಜಾಣನವನು ನಿಮ್ಮ ಕೋಣೆಯೊಳಗಿರುವಾ ಗು ಡಾಣವ ತುಡುಕುವ ನೆರೆನೋಡಿ ಅ.ಪ ಸುಲಭನು ನಿಮಗವನೊಲಿವನು ನಿಮ್ಮೆಡೆ ನಿಲುವನು ನಲಿವನು ಕೈನೀಡೀ ಸಲಿಸಿರಿ ಬೆಣ್ಣೆಯ ಮೆಲುವನು ಕಿಲಕಿಲ ನುಲಿವನು ಚಲಿಸಲು ಬಿಡಬೇಡಿ 1 ಅಳುಕುತ ಬಳುಕತ ಬಳಲುತ ಸುಳಿಯುತೆ ಘಳಿಲನೆ ಪೋಪನೆಚ್ಚರವಿರಲಿ ಎಳನಗೆಯಿಂದ ಪಾಲೆರೆಯಿರಿ ಮನ ದೊಳಚ್ಚಳಿಯದ ಮೋದವು ನೆಲೆಸಿರಲಿ 2 ಮನವೆಂಬುವುದೇ ವನರುಹವಮ್ಮಾ ಕನಸುನೆನಸಿನೊಳಾ ವನಜವನರ್ಪಿಸೆ ನೀನೆಂಬುದನೇ ಮರೆಯುವಿರಮ್ಮಾ [ತನುಮನ ಅವನಡಿ ಸೇರುವುದಮ್ಮಾ] 3 ಪಡಸಾಲೆಯೊಳಿವ ನಿಲ್ಲುವನಲ್ಲಾ ಅಡಿಗೆಯ ಕೋಣೆಯ ಬಿಡುವನಲ್ಲ ಒಡೆಯ ಶ್ರೀಮಾಂಗಿರಿಪತಿಯನು ನೋಡದ ಮಡದಿಯಿಲ್ಲವೆಂಬುದು ಸಟೆಯಲ್ಲ 4 ನೀವಿರುವಾಯೆಡೆ ಪಾಲ್ಗಡಲಮ್ಮಾ ನೀವಡಿಯಿಡುವುದೇ ಕಡೆಗೋಲಮ್ಮಾ ದಧಿ ನವನೀತವು ನೀವಿರೆ ಮಾಂಗಿರಿರಂಗನುಂಟಮ್ಮಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಯಬೇಕೆನ್ನ ಕೇಶವನೇ ಬಂದು ಪಾಯವನರಿಯೆನು ಹರಿಯೇ ಮಾಧವನೇ ಪ ಭವಸಾಗರವÀ ದಾಟಿ ಬಂದೇ ಇನ್ನು ಭವವನ್ನು ಬಂಬಿದೆ ಹರಿಯೇ ಶರಣೆಂದೆ ಅ.ಪ. ಜವನ ಬಾಧೆಗೆ ಅಂಜಿ ಬಂದೇ ಭವರೋಗ ವ್ಯೆದ್ಯನೇ ರಕ್ಷಿಸೋ ತಂದೇ 1 ಯೋನಿಗೆ ಬರಲಾರೆ ಹರಿಯೇ ಬಂದು ಮೌನದಿ ವೇಳೆಯನನ್ಯರೊಳ್ತಳೆಯೇ 2 ಜನ್ಮವ ಕಳದೆನು ಬರಿದೇ ಗಾನಲೋಲನೆ ಎನ್ನ ರಕ್ಷಿಸೋ ತಂದೇ 3
--------------
ಕರ್ಕಿ ಕೇಶವದಾಸ
ಕಾಯಯ್ಯಾ ಕಾಯೊ ಮುರಾರಿ | ದಯದಲೆನ್ನಾ ಪ ತರಳತೆಯಿಂದಾ ಸ್ಮರಣೆಯ ನಿನ್ನಾ | ಮರೆದುನೊಂದೆ ಬಹು ಪರಿದಯದಲೆನ್ನಾ 1 ಮತಿಹೀನನೆಂದು ಒಲಮಿಲಿ ನೋಡಿ | ಪಾದ ದೋರಿ ದಯದಲೆನ್ನಾ 2 ಮಹಿಪತಿ ನಂದನ ಜೀವನರಾಮಾ | ಅಹಿತರ ವಂಶವಿದಾರಿ ದಯದಲೆನ್ನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯವ ನೆರೆನಂಬಿ ಕೆಡದಿರು ಮಾಯೆಯ ತಿಳಿದೇಳು ಪ. ನ್ಯಾಯವನರಿಯದೆ ನೀ ಮಾಯಾಮೋಹವೆ ಹೇಯಕಾರ್ಯರಿದೊಳಪಾಯದಿ ನರಳುವ ಅ.ಪ. ತನುಮನಕನಕವಿದು ನಿತ್ಯದಿ ತನದಾಗಿಹುದೆಂದು ಹೊನ್ನು ಮಣ್ಣು ಹೆಣ್ಣೆಂಬೀ ಮೂರರ ಬಣ್ಣದೆ ಬಗೆಗೆಟ್ಟು ಕಣ್ಣು ಕಾಣದೆ ಮುಂಬರುತಿಹ ಭಿನ್ನವನೆಣಿಸದೆಯೆ ಸಣ್ಣತನದಿ ಜೀವನ ವ್ಯರ್ಥವೆನಿಸುವ 1 ಸುಜನರ ಸಂಗತಿ ತ್ಯಜಿಸಿ ಮದದಲಿ ಕುಜನರ ಕೂಟವ ಬಯಸಿ ಋಜುಮಾರ್ಗವ ತೊರೆದು ಕಾಲವ ಅಜಗರನಂದದಿ ಕಳೆದು ಗಜಪತಿ ವರದನ ಪದಪಂಕಜ ಮಹಿಮೆಯ ನಿಜವರಿಯದೆ ದುರ್ಜೀವನವೆನಿಸುವ 2 ನೀರಗುಳ್ಳೆಯ ತೆರದಿ ಕರಗುವ ಸಾರವಿಲ್ಲದ ಭವದಿ ಮೂರುದಿನದ ಬಾಳೆಂದು ನೆನೆಯದೆ ಹಾರಾಡುವರೇ ನಿಂದು ಮಾರಪಿತನ ಪದಸಾರಸವನು ನೆನೆ [ನೆನೆದು] ನೀರ ಶೇಷಗಿರಿವರನೆÀ ಗತಿಯೆನೆ 3
--------------
ನಂಜನಗೂಡು ತಿರುಮಲಾಂಬಾ
ಕಾಲ ಕಳೆಯುವಿ ನಮ್ಮ ಐಕೂರಾರ್ಯರ ಸುವಾಕು ಕೇಳದೆ ಜೀವಿ ಪ ಮರುತಾಗಮ ಮರ್ಮವರಿಯದವರಿಗೆಲ್ಲಾ | ವರ ಭಾಗವತ ಗೀತಾ ಹರಿಕಥಾ ಮೃತ ತತ್ವ | ಯರಡೊಂದು ಕಾಲ ಕೃಪೆ ನೆಳಲಾಶ್ರಯಿಸದೆ 1 ಹರಿಮೂರ್ತಿ ಹರಿವ್ಯಾಪ್ತಿ ಹರಿಸತ್ಯ ಸುಚರಿತ್ರೆ | ಹರಿದಾಸರುಕ್ತಿ | ಹಿರಿದು ಕಿರಿದು ಭೇದ ನೆರೆ | ಸುರಹಸ್ಯವನರುಹಿ ಕಗ್ಗತ್ತಲೆ ಹರಿಸುವರಿವರೆ ನರ ನೀನಂಬದೆ2 ಮದಡ ಜನರಿಗೆಲ್ಲ ಪದಸುಳಾದಿಗಳನು | ಚತುರತನದಲಿಂದ | ವಿಧ ವಿಧ ವಿವರಿಸಿ | ಸದಮಲ ಸುಜ್ಞಾನ | ವದಗಿಸುವಂಥ ಈ ಬುಧರುಪದೇಶ ಮುದದಿ ಪಡೆಯದೆ 3 ಆಶೆ ಕ್ರೋಧಂಗಳ ಜಯಿಸುತ ಮನದಿಂದ ಕ್ಲೇಶಮೋದ ಸಮ ತಿಳಿದಿಹರೋ | ಯೇಸೇಸು ಕಾಲಕ್ಕೆ ಭೂಸುರೋತ್ತಮ ರಾದ | ಈ ಸುಗುಣರ ಸಹವಾಸ ದೊರೆವುದೆ 4 ಶ್ರೀ ಮುಖವಾಣಿಯು ಸಾಮಾನ್ಯವಲ್ಲವೋ ನೇಮದಿಂ ಕೇಳ್ವರ | ಶಾಮಸುಂದರ ಸುಧಾಮನಿಗೊಲಿದಂತೆ | ಪ್ರೇಮದಿಂ ಸಲಹುವ ನೀ ಮನದಲಿ ತಿಳಿ 5
--------------
ಶಾಮಸುಂದರ ವಿಠಲ
ಕೂಸಿನಲ್ಲಿ ಬಾಲಕೃಷ್ಣ ಕೇಶವಾರ್ಯ ಪುತ್ರನಲ್ಲಿವಾಸಮಾಡಿ ಸತತ ಮನವ ಪೋಷಿಸೂವನು 1 ತರುಣಿಯಲ್ಲಿ ಮಾಧವವಿರುವ ಶರಣರೊಳಗೆ ವಸುದೇವನರಿತು ತೋಷಿಸುವುದು ಸತತ ಹರುಷದಿಂದಲೀ 2 ವಾಸುದೇವ ಖಗವರೇಣ್ಯನು 3 ದಿವಿಜ ನಾರಾಯಣನು ವಸ್ತಿ ಮಾಡಿಹನು4 ಸುರಭಿಯಲ್ಲಿ ವಿಷ್ಣುರೂಪಿ ತುರಗದಲ್ಲಿ ವಾಮನಾತ್ಮಇರುವ ಸಂಕರ್ಷಣಾಖ್ಯ ಚರಮ ಜಾತಿಯಲೀ 5 ನಿತ್ಯ ವೈಶ್ಯ ಪ್ರದ್ಯುಮ್ನಭೃತ್ಯರಲ್ಲಿ ಮಹಿದ್ರಾಸ ಕೃತ್ಯ ನಡೆಸುವಾ 6 ಮಹಿಷಿಯಲ್ಲಿ ಉಪೇಂದ್ರ ಗಜದಲ್ಲಿ ಚಕ್ರಪಾಣಿಬೆಕ್ಕಿನಲ್ಲಿ ವಿಶ್ವರೂಪ ಸತತ ತಿಳಿವುದೂ 7 ಶುನಕ ಭೂತ ಭಾವನಸರ್ವರೊಳಗೆ ಅನಂತರೂಪ ಹರಿ ನಿವಾಸಿಪ 8 ನಿತ್ಯದಲ್ಲಿ ಹರಿಯು ಹೀಗೆ ಚಿತ್ತವಿಟ್ಟು ಲಕ್ಷಣೀಯುವರ್ತಿಸುತಲಿ ಯದುವರೇಣ್ಯನ ಪತ್ನಿಯಾದಳು 9 ಪರಮಪುರುಷನಮಲ ರೂಪ ಸ್ಮರಿಸುತಲೆ ಪೋಷ್ಯರಲ್ಲಿತೊರೆದು ಕರ್ಮಲೇಪ ಶಿರಿಯ ಹೋದುವಾ 10 ನಂದಸುತನ ತಿಳಿದು ಪೋಷ್ಯ ವೃಂದದಲ್ಲಿ ಭೋಗ ನೀಡಿಇಂದಿರೇಶ ನಮಗೆ ಮೋಕ್ಷಾನಂದ ಕೊಡುವನು 11
--------------
ಇಂದಿರೇಶರು