ಒಟ್ಟು 230 ಕಡೆಗಳಲ್ಲಿ , 59 ದಾಸರು , 198 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಿನ್ನನು ನಂಬಿದೆ ಶಾರದೆ ನೀನು ಪ್ರಸನ್ನಳಾಗಬಾರದೆ ಪನಿನ್ನನು ಬಿಟ್ಟg ಎನ್ನಯ ದುಃಖಗಳನ್ನು ಕಳೆಯುವರಿನ್ನಾರಿರುವರು ಅ.ಪಹೇಳಿಕೊಳ್ಳುವೆ ತಾಯೇ ದುಃಖವಕೇಳು ಮಹಾಮಾಯೆಹಾಳು 'ಷಯಗಳ ಜಾಲದಿ ಸಿಕ್ಕಿಹಗೋಳನು ನಾನೀಗ ತಾಳಲಾರೆನು ಹಾಯ್ 1ಆಟದ ವಸ್ತುಗಳ ಕೊಟ್ಟು ಚೆಲ್ಲಾಟವಾಡುವೆಯಾಸಾಟಿ ಇಲ್ಲದೀಆಟವ ಸಾಕು ಸಾಕುಕಾಟವಕಳೆನೀಂ ಭೇಟಿಯ ಕೊಟ್ಟು 2ಹರಿಹರಿಯೆನ್ನದೆ ಈ ನಾಲಿಗೆಯನರಗಳು ಸೊಕ್ಕಿಹವುನಿರುತವು ಹರಿನಾಮ ಭರವೆಡೆಬಿಡದಂತೆಹರಸಿ ಕಾಯೆ ಚಿಚ್ಛರೀರದ ತಾಯೆ3
--------------
ಹೊಸಕೆರೆ ಚಿದಂಬರಯ್ಯನವರು
ನಿಲ್ಲದೆ ವೈರಿಗಳುನಿನ್ನ ಮ್ಯಾಲೆ ಬಂದರೆ ಬಿಲ್ಲುಕೆಳಗಿಟ್ಟು ಬೇಡಿಕೊಂಡೆಲೊ ಪಾರ್ಥಸಾಕೊ ಸಾಕೊ ನಿನ್ನ ಹೋಕೆ ಬಡಿವಾರವುಸಾಕು ಜನರು ನಗರೆ ಪ. ನಿನ್ನ ಪುಣ್ಯವ ಪಾರ್ಥ ಬಣ್ಣಿಸಲೊಶವಲ್ಲಇನ್ನು ಸುಭದ್ರಾ ಒಲಿಯಲು ಇನ್ನು ಸುಭದ್ರಾ ಒಲಿಯಲು ಸುಖದಿಂದ ಮಾನ್ಯವಾಗಿದ್ಯೊ ಜನರೊಳು 1 ಕನ್ಯೆ ಸುಭದ್ರೆ ನಿನ್ನ ಮದುವ್ಯಾಗಿಅನ್ನ ವಸ್ತ್ರದ ನೆಲಿಗಂಡ್ಯೊಅನ್ನ ವಸ್ತ್ರದ ನೆಲಿಗಂಡ್ಯೊ ಎಲೊ ಪಾರ್ಥನಿನ್ನ ಭಾಗ್ಯವನ್ನೆ ಅರಿಯಲೊ ಪುರುಷ 2 ಗಿಳಿ ಮಾತಿನ ಜಾಣ ಹೊಳೆವು ಎಷ್ಟೆ ್ಹೀಳಲ್ಯೊಬಳೆಯನಿಟ್ಟದ್ದು ಮರೆತೇನೊಬಳೆಯನಿಟ್ಟದ್ದು ಮರೆತೇನೊ ಸುಭದ್ರಾತಿಳಿಯದೆ ನಿನ್ನ ಬೆರೆದಳೊ ಎಲೊ ಪಾರ್ಥ 3 ಹೆರಳು ಹಾಕಿಸಿ ಕೊಂಡು ತಿಳಿಯಲಿಲ್ಲವೊ ಬುದ್ದಿಇಳೆಯೊಳು ಇದು ಅಪವಾದ ಇಳೆಯೊಳಗಿದು ಅಪವಾದ ಬಲರಾಮ ಹಳಿಯದೆ ನಿನ್ನ ಬಿಡವೋನೆ ಎಲೊ ಪಾರ್ಥ4 ದನಗಾಹಿ ನೀನೆತ್ತ ವನಜಕುಸುಮಳೆತ್ತಕನಕ ಕಬ್ಬಿಣಕೆ ಸರಿಯೇನೊಕನಕ ಕಬ್ಬಿಣಕೆ ಸರಿಯೇನೊ ಸುಭದ್ರೆಗೆಅಣಕವಾಡಿದನೆ ರಮಿಯರಸು5
--------------
ಗಲಗಲಿಅವ್ವನವರು
ನೀ ಪಾಲಿಸದಿರಲು ನಾ ಪೋಗುವುದು ಎತ್ತ ನೀ ಪೇಳೊ ಪರಮ ಪುರುಷಾ ಅಗಣಿತ ನಾಮ ಸುರ ಪ್ರೇಮ ಸ್ವರ್ಣ ಗಿರಿವಾಸ ನರಕೇಶ ಭೂಷಾ ಪ ಉದರ ಚಿಂತಿಯಲಿ ಉದಯದಲಿ ಯೆದ್ದು ಅವರಿವರ ಸದನದಲ್ಲಿಗೆ ಹೋಗದೆ ಮೃದು ವಾಕ್ಯವಾಡದಲೆ ಮದ ಗರ್ವ ಬಲದಿಂದ ಎದುರಾದವರ ಜರಿದೆ ಮನಸಿನ ಕ್ಲೇಶದ ಪರಸುದತಿಯರನೀಕ್ಷಿಸಿ ವಿದಿತ ಕರ್ಮಗಳ ತೊರೆದೆ ಒದಗಿ ಬಂದ ಪುಣ್ಯ ಬರಿಗೈದು ಪಾಪದ ಹುದಲೊಳಗೆ ಬಿದ್ದು ಸಂಪದವಿಗೆ ದೂರದವನಾ1 ಉತ್ತಮರ ನಿಂದಿಸಿದೆ ಉಚಿತಾರ್ಥ ತಿಳಿಯದಲೆ ಹೆತ್ತವರನ್ನ ಜರಿದೆ ಹತ್ತೆಗರೆದು ಪರಿಪಾಲಿಸಿದ ದಾತರನು ಹೊತ್ತಾಕೆ ಪ್ರೀತಿ ಪೇಳುವೆ ಮತ್ತೆ ಧರ್ಮವೆಯಿಲ್ಲಾ ಮಹಾಕೃಪಣನಾಗಿ ಪರ ವಿತ್ತಾಶೆ ಪೋಗಿ ಮುಳವೆ ಚಿತ್ತಪಲ್ಲಟವಾಗಿ ವಿಷವೆಂಬ ಹಾವಿನ ಹುತ್ತಿನೊಳು ಬಿದ್ದು ಪುನಿತನಾಗದವನಾ 2 ಗುರು ನಿಂದಕರ ನೋಡಿ ಸರವಾಗಿ ಪೋಗಳುವೆನೊ ವೇದ ಸಮ್ಮತವೆ ಬಿಟ್ಟು ಮರೆವೆ ನಿನ್ನಯ ಸ್ಮರಣೆ ಗತಿಗೆ ಸಾಧನವೆಂದು ಅರಿದರಿದು ಬುದ್ಧಿಗೆಟ್ಟು ಹರಿವಾಸರದುಪವಾಸ ಮಾಡುವ ಜನರಿಗೆ ಮುರಳಾಡಿ ಮುಟ್ಟಿಯಲಿಟ್ಟು ಜಾಗರ ತೊರೆದು ಹಿರಿ ಪಾಮರನಾಗಿ ಹರಣ ಸ್ಥಿರವೆಂದು ಮದುಕರಿಯಂತೆ ತಿರುಗುವೆ ನಾ3 ಕಾಸಿಗೆ ಕಾಸು ಘರ್ತಿಸಿ ಗಳಿಸಿ ಬಿಡದೆ ಮೀಸಲಾ ಪದಾರ್ಥವೆಂಬೆ ದೋಷಕ್ಕೆ ಗುರಿಯಾಗಿ ದುರ್ಜನರ ಒಡಗೂಡಿ ರಾಸಿ ದುರನ್ನ ಉಂಬೆ ಆಶೆಯನು ತೊರಿಯದಲೆ ಉಪರಾಗ ಪರ್ವದಲಿ ಕಾಸು ದಾನವನು ಕೊಂಬೆ ಲೇಸಾದರೆ ಹಿಗ್ಗಿ ಹಾರೈಸುವೆನು ಇಷ್ಟು ಕ್ಲೇಶ ಬಂದರೆ ದೈವವೆಂದು ದೂಷಿಸುವೆನಾ4 ಒಂದೇ ಎರಡೇ ಎನ್ನ ಅಪರಾಧ ಪೇಳಿದರೆ ಎಂದೆಗೆಂದಿಗೆ ಸವಿಯದು ನೊಂದು ದುಶ್ಚಿತ್ತದಲಿ ನೀನೆ ಗತಿ ಎಂದು ಬಾಗಿಲ ಕಾಯಿದುದು ಬಂದು ಮಾತುರದಲ್ಲಿ ಬಲು ದಯಾಳು ಎನ್ನ ಸಂದೇಹವನು ತೊಡೆದು ಮುಂದಾದರೂ ಭವದ ಅಂಧ ಕೂಪದೊಳಿಡದೆ ಪೊಂದಿಸುವ ನಿನ್ನವರೊಳಗೆ ವಿಜಯವಿಠ್ಠಲ ಎನಗೆ 5
--------------
ವಿಜಯದಾಸ
ನೋಡಯ್ಯ ನಿನ್ನ ದಾಸರ ಮೇಲೆ ಕೃಪೆಗಳನುಮಾಡಯ್ಯ ಮನ್ಮನಕೆ ಸಂತಸವನುತೀಡಯ್ಯ ಭವಭಯದ ಪಾತಕಂಗಳ ದಾನವಾಡ ಗುಡ್ಡದ ತಿರುಮಲೇಶ ಸರ್ವೇಶ ಪ ಆದಿಯಲಿ ವೇದಗಳ ಕದ್ದುಕೊಂಡೊಯ್ದವನಸಾಧನಂಗೆಯ್ವೆನೆಂದಾಕ್ಷಣದೊಳುಪೋದನೆಲ್ಲೆನುತ ಶರನಿಧಿಯೊಳಗೆ ಪೊಕ್ಕ ಮ-ತ್ತಾ ದಿತ್ಯನಂ ಕೊಂದು ತಿಕ್ಕಿಮುಕ್ಕೆನೀ ದಯಾ ಪಾತ್ರನೆಂಬುದ ಕೇಳಿ ನಾನರಿತೆಭೂ ಧರೆಯ ಸುರರ ನೀ ಸಲುಹಲಾಗಪೋದ ನಿಗಮಂಗಳನು ತಂದು ಸಲೆ ರಕ್ಷಿಸಿದೆಆದಿ ಮತ್ಸ್ಯವತಾರ ಶರಣೆಂಬೆನು 1 ಮೂರ್ತಿ ನೀನಂದು ಬೇರೆಸುಮತವನು ಬೆನ್ನಲ್ಲಿ ಸಲೆ ಆತು ರಕ್ಷಿಸಿದೆಕಮಠಮೂರುತಿ ನಿನಗೆ ಶರಣೆಂಬೆನು 2 ಚಿನ್ನಗಣ್ಣವನೆಂಬನೊರ್ವ ಖಳ ಭೂದೇವಿಕನ್ನಿಕೆಯನೊಯ್ಯುತಿರೆ ಕನಲಿ ಮನದಿಇನ್ನು ಅವನನು ಸೆಣಸಿ ಜಯಿಸುವವರನು ಕಾಣೆನೆನ್ನುತಲಿ ರೋಮಗಳನುಬ್ಬೆತ್ತುತತನ್ನ ಮುಂಗೋರೆಗಳ ಮಸೆದೊಡನೆ ರಕ್ಕಸನಬೆನ್ನಟ್ಟಿ ಬರಸೆಳೆದು ಸದೆದೊರಗಿಸಿಚೆನ್ನಾಗಿ ಧರಣಿಯನು ತಂದು ಸಲೆ ರಕ್ಷಿಸಿದೆಹನ್ನೆರಡು ಪೆಸರವನೆ ಶರಣೆಂಬೆನು3 ಹೇಮಕಶ್ಯಪನೆಂಬ ನಾಮಜನ ಸುತನೊರ್ವನಾ ಮಹಾಘನವೆಂದು ನೆನೆಯುತಿರಲುತಾಮಸದ ಖಳ ತನ್ನ ತನುಜನನು ಮಥಿಸುತಿರೆರಾಮನನು ತೋರೆಂದು ಬಾಧಿಸುತಿರೆಧೂಮಜ್ವಾಲೆಗಳೊಡನೆ ಭುಗುಭುಗಿಲು ಛಿಟಿಲೆನುತಆ ಮಹಾ ರಕ್ಕಸನ ಪೊಡೆಯ ಸೀಳಿಪ್ರೇಮದಲಿ ಪ್ರಹ್ಲಾದಗೊಲಿದು ಪಟ್ಟವನಿತ್ತೆಸಾಮಜಾರಿಯ ವದನ ಶರಣೆಂಬೆನು 4 ಬಲಿಯಧ್ವರದ ಸಾಲೆಗೊಂದು ವೇಷವನಾಂತುಸಲೆ ಬಂದು ಧರೆಯ ಮೂರಡಿಯ ಬೇಡೆಒಲಿದು ಇತ್ತಪೆನೆನಲು ಧಾರೆಯನೆರೆಯಲಸುರಕುಲಗುರುವು ಜುಳಿಗೆಯೊಳು ತಡೆದು ನಿಲಲುಸಲಿಲ ವರ್ಜಿತ ನಯನನನು ಮಾಡಿ ಆಕಾಶನೆಲವೆರಡು ಪಾದವನ್ನಳೆದ ಬಳಿಕತಲೆ ಮೇಲೆ ಇರಿಸೆನಲು ತಳಕಿಳಿಸಿ ಅವನ ಬಾ-ಗಿಲ ಕಾಯ್ದ ವಾಮನನೆ ಶರಣೆಂಬೆನು 5 ರೇಣುಕೆಯ ಬಸುರಿನಲಿ ಜನಿಸಿ ಪಿತನಾಜ್ಞೆಯನುಮಾಣಬಾರದು ಎಂಬ ಮತವ ಪಿಡಿದುಕ್ಷೂಣವಿಲ್ಲದೆ ತಾಯ ಶಿರವರಿದು ತಂದೆಯನುಪ್ರಾಣಹತ್ಯವ ಮಾಡಿದರ ಕುಲವನುಕ್ಷೋಣಿಗೆರಗಿಸಿ ಕಾರ್ತವೀರ್ಯಾರ್ಜುನನ ಮಡುಹಿಜಾಣತನದಲ್ಲಿ ಭೂದಾನಗಳ ಭೂಸುರರಕಾಣುತಲೆ ಕರೆಕರೆದು ಕೊಟ್ಟೆಯೈ ನೀನು ಪೂಬಾಣಜನಕನೆ ರಾಮ ಶರಣೆಂಬೆನು 6 ಸೀತೆಯನು ಕದ್ದು ಒಯ್ದವನ ಕೊಲ್ಲುವ ಭರದಿಭೂತಳದ ಕಪಿಗಳನು ಕೂಡಿಕೊಂಡುಸೇತುವೆಯ ಕಟ್ಟಿ ಶರನಿಧಿ ದಾಟಿ ಬರಲಾಗಭೂತಗಣ ಸಂತತಿಯು ನಡುನಡುಗುತಿರಲುಚೇತನದ ರಾವಣೇಶ್ವರ ಕುಂಭಕರ್ಣ ಸ-ತ್ತ್ವಾತಿಶಯ ರಕ್ಕಸರ ಇರಿದೊರಗಿಸಿಮಾತು ಲಾಲಿಸಿ ವಿಭೀಷಣಗೆ ಪಟ್ಟವನಿತ್ತದಾತ ರಘುನಾಥನೇ ಶರಣೆಂಬೆನು 7 ಶಕಟ ಕುಕ್ಕುಟ ಧೇನುಕಾಸುರರ ಪೂತನಿಯಬಕ ವತ್ಸಹಕ ವೃಷಾಸುರ ಮುಖ್ಯರಪ್ರಕಟದಿಂದರಿದು ಕರಿಯನು ಸೀಳಿ ತನಗೆ ಸಂ-ಮುಖರಾದ ಮಲ್ಲರನು ಇರಿದೊರಗಿಸಿಮುಕುರ ದಂತ್ಯದ ಹಮ್ರ್ಯದೊಳಗಿಂದ ಕಂಸನಪುಕಪುಕನೆ ತಿವಿದವನನಿರಿದೊರಗಿಸಿಸಕಲವೆಸೆದಿರ್ದ ಮಧುರಾಪುರವ ಉಗ್ರಸೇನಕಗಿತ್ತ ಕೃಷ್ಣನೇ ಶರಣೆಂಬೆನು 8 ಮೂರು ಪುರದಬಲೆಯರ ವ್ರತಗಳನೆ ಕೆಡಿಸಲಿಕೆಬೇರೊಂದು ಅಶ್ವತ್ಥ ವೃಕ್ಷವಾಗಿನಾರಿಯರ ವ್ರತಭಂಗಗೆಯ್ಯಲಾ ದೆಸೆಯಿಂದಊರುತ್ರಯವದು ತಿರುಗುವುದು ನಿಲ್ಲಲಾಗನೀರ ಮಸ್ತಕದಲ್ಲಿ ಧರಿಸಿದನ ಕರವಿಲ್ಲನಾರಿಯೊಳು ನಾರಾಯಣಾಸ್ತ್ರವಾಗಿಘೋರತನವೆತ್ತ ತ್ರಿಪುರದ ಕೀಲ ಪರಿದ ಮದನಾರಿ ಸಖ ಬುದ್ಧನೇ ಶರಣೆಂಬೆನು 9 ಮದವೆತ್ತ ರಕ್ಕಸರು ಮಹಿಯೊಳಗೆ ಹೆಚ್ಚಲುತ್ರಿದಶಾಂತ ನಡನಡನೆ ನಡುಗುತಿರಲುಬೆದರಬೇಡೆನುತ ಅಭಯವನಿತ್ತು ಮುದದಿಂದಸುಧೆಯೊಳಗೆ ಬಂದು ಜನಿಸಿಕುದುರೆವಾಹನನಾಗಿ ಕುಂಭಿನಿಯ ಮೇಲೆ ತನಗಿದಿರಾದ ರಾವುತರನಿರಿದೊರಗಿಸಿಮೊದಲ ಭಾಷೆಯನು ದಿವಜರಿಗಿತ್ತೆ ಬೇಗದಲಿಚದುರ ಕಲ್ಕ್ಯವತಾರ ಶರಣೆಂಬೆನು10 ಇಂತು ದಶ ಅವತಾರಗಳನೆತ್ತಿ ರಕ್ಕಸರಸಂತತಿಯನೊರಸಿ ಭೂಭಾರವಿಳುಹಿಕಂತುಪಿತ ತಿರುವೆಂಗಳೇಶ ತಿರುಮಲೆಯೊಳಗೆಚಿಂತಿಸುವ ಭಕ್ತರನು ಪಾಲಿಸುತಲಿದಂತಿರಾಜನ ಪೊರೆದು ದಾನವಾಡಿಗೆ ಬಂದುನಿಂತಾದಿಕೇಶವನೆ ಶರಣೆಂಬೆನು 11
--------------
ಕನಕದಾಸ
ನೋಡಿ ನೋಡಿ ಸತ್ಯಪ್ರಿಯರ ನಾ ನಿಂದು ನಿಂದು ಪಾಡಿ ಪಾಡಿ ಯೋಗಿವರ್ಯರ ನಾ ಪಾಡಪಂಥದಲಿ ಬಂದ ಮೂಢ ಮಿಥ್ಯಾವಾದಿಗಳ ಓಡಿಸಿ ತನ್ನನು ಕೊಂ ಡಾಡಿದವರ ಪೊರೆವ ಯತಿಯ ಪ ನಾಗಸರ ನಾಗಬಂಧ ಕೊಂಬು ಕೊಳಲು ರಾಗದಿಂದ ಪಾಡುವ ಸನಾಯಿಸುತಿಗಳು ಬೇಗಿ ಕೂಗುವ ಹೆಗ್ಗಾಳೆ ದುಂದುಭಿ ಎಸಿಯೆ ಚತು ಪರಿಯಂತ ಮೆರೆದ ಯೋಗಿಗಳಾಗ್ರಣ್ಯನ1 ವಾದಿಗಳೆದೆಯು ಬಿರಿಯೆ ಧವಳ ಶಂಖದಾ ನಾದ ಒಪ್ಪ್ಪಿಸುತ್ತಿ ಮೆರೆವ ಬಿರಿದು ಸಮುದಾಯ ಮೇದಿನಿ ಸುರರು ಬಲದಾರಿಯಲಿ ಬರೆ ಆಶೀ ರ್ವಾದವನ್ನು ಕೊಡುವ ಧೀರನು 2 ಗಜ ಪಾಯಿದಳನೇಕಸಂದಣಿ ಯೋಜನದಗಲಕೆ ಘೋಷಣವಾಗಲು ರಾಜಾಧಿರಾಜರು ಪೂಜೆಯನ್ನು ಮಾಡುತಿರೆ ಈ ಜಗದೊಳಗೆ ಸಿದ್ಧ ತೇಜಪುಂಜರನ್ನ 3 ಅದ್ವೈತಮತಶಾಸ್ತ್ರ ವದ್ದು ಕಳವುತ ಮಧ್ವಮತವ ಎಂಬೊ ಸುಧಾಬ್ಧಿಗೆ ರಾಕೇಂದುನಂತೆ ಇದ್ದು ಭವರೋಗಳಿಗೆ ಮದ್ದು ಅಹುದೋ ಸುಗುಣದವರ4 ಹಿಂಡು ಬರಲಾಗಿ ಕಂಡು ಹರುಷದಿಂದ ಸಭಾಮಂಡಿತರಾಗಿ ಖಂಡ ತುಂಡು ಮಾಡಿ ಅವರ ದಿಂಡುಗೆಡಹಿ ಮಂಡಲಕೆ ಪುಂಡರಿಕಾಕ್ಷನೆ ಉದ್ದಂಡನೆಂದು ಸಾರಿದರನ5 ಬಿಜವಾಡದಲಿ ಕೃಷ್ಣ ತಜ್ಜಲದೊಳು ದುರ್ಜಂತುಗಳು ನರರಾ ಬೆಚ್ಚರಿಸಲು ಪ್ರಜ್ವಲಿಸುತ ಪೋಗಿ ಮಾರ್ಜನೆ ಯನ್ನು ಗೈದು ಭೀತ ರಾಜಝರವ ಬಿಡಿಸಿ ಕಾಯಿದ ಸಜ್ಜನರ ಮನೋಹರ 6 ದೇಶÀದೊಳೀ ಶೇಷವಾದ ದಾಸರ ಪ್ರಿಯ ಸಿರಿ ವಿಜಯವಿಠ್ಠಲೇಶನಂಘ್ರಿಯ ಸಾಸಿರ ದಳದ ಧ್ಯಾನ ಮೀಸಲಾಗಿ ಮಾಡುತಿಪ್ಪ ದೋಷರಹಿತರಾದ ಸಂ ನ್ಯಾಸ ಕುಲಭೂಷಣನಾ 7
--------------
ವಿಜಯದಾಸ
ನೋಡಿದೆ ವೆಂಕಟರಮಣನ | ದ್ವಾರ ವಾಡ ಗ್ರಾಮದಿ ನಿಂತ ದೇವನ ಪ ರೂಢಿಪ ದಾಸರಿಗೆ ನೀಡಲು ದರುಶನ ಗೂಢ ಪಾದಾದ್ರಿಯಿಂ ಬಂದ ಮಹಾತ್ಮನ ಅ.ಪ ಈತನೆ ವೈಕುಂಟನಾಥನು ನಿಜ | ಶಾತಕುಂಭೋದÀರ ತಾತನು ಮಾತಂಗ ವರದಾತ ಶ್ವೇತವಾಹನ ಸೂತ ಜಾತರಹಿತ ದನುಜಾತ ಕುಲಾಂತಕ 1 ತೋಡ ಜನಕೆ ಸುಖದಾತನ | ಅಂಡಜಾತ ಪ್ರಕಾಂಡ ವರೂಥ ಬ್ರ ಹ್ಮಾಂಡನಾಯಕನಾದ ಪಾಂಡವಪಾಲನ 2 ಇಂದು ಧರಾಮರ ವಂದ್ಯನ ಶಾಮ ಸುಂದರ ವಿಠಲನ ಮುಕುಂದನ ಸಂದರುಶನ ಮಾತ್ರದಿ ಹಿಂದೆ ಮಾಡಿದ ದೋಷ ಇಂದು ಬೆಂದು ಪೋದವು ಘನ 3
--------------
ಶಾಮಸುಂದರ ವಿಠಲ
ನೋಡಿದೆನು ಭದ್ರಾಚಲವಾಸನ | ನೋಡಿದೆನು ಜಗದೀಶನಾ ನೋಡಿದೆನು ಶ್ರೀ ಸೀತಾರಮಣನ | ನೋಡಿದೆನು ಸರ್ವೇಶನಾ ಪ ಅಂಗನೇಯರ ಕೂಡಿ ನಾನು ಮಂಗಳಗಿರಿನೋಡಿದೆ ಮಂಗಳಾಂಗಾ ನಾರಸಿಂಹಗೆ ತಂದು ಪಾನಕ ನೀಡಿದೆ 1 ಸಜ್ಜನರಿಂದ ಕೂಡಿ ನಾನು ಬೆಜ್ಜವಾಡವ ನೋಡಿದೆ ಮೂರ್ಜಗ ಪಾವನಿಯ ಕೃಷ್ಣೆಯ ಮಜ್ಜನವು ನಾ ಮಾಡಿದೆ 2 ಮಾಧವನ ದಯದಿಂದ ನಾನು ಗೋದಸ್ನಾನವು ಮಾಡಿದೆ ಮೋದದಿಂದಲಿ ಬಂದು ವಿಮಾನರಾಮನ ನೋಡಿದೆ 3 ನೇಮದಿಂದಲಿ ಬಂದು ನಾನಾ ರಾಮದಾಸನ ನೋಡಿದೆ ವಾಮಭಾಗದಿ ಕುಳಿತ ಲಕ್ಷ್ಮಣ ಸ್ವಾಮಿ ದರುನ ಮಾಡಿದೆ 4 ಸಪ್ತಋಷಿಗಳು ದಶರಥಾದಿ ಉತ್ತಮರ ನಾ ನೋಡಿದೆ ಸುತ್ತು ಮುತ್ತು ದೇವತೆಗಳನಾ ಮತ್ತೆ ಮತ್ತೆನಾ ನೋಡಿದೆ 5 ದೋಷದೂರ ಭದ್ರಾಚಲದಿವಾಸ ರಾಮಚಂದ್ರನ ಸೋಸಿನಿಂದಲಿ ಬಂದು ನಾ ವಿಶೇಷ ದರುಶನ ಮಾಡಿದೆ 6 ಕಡುಹರುಷದಿಂದಲಿ ರಾಮನ ತೊಡೆಯಮ್ಯಾಲೆ ಒಪ್ಪಿದ ಮಡದಿ ಸೀತಾದೇವಿಯನ್ನು ಸಡಗರದಿ ನಾ ನೋಡಿದೆ 7 ಇಷ್ಟದಿಂದಲಿ ಭಜನೆಗೊಳ್ಳುವ ಶ್ರೇಷ್ಠ ರಾಮನ ನೋಡಿದೆ ಉಷ್ಣಕುಂಡದ ಸ್ನಾನವನ್ನು ಥಟ್ಟನೇ ನಾ ಮಾಡಿದೆ8 ಉನ್ನತವಾಗಿರುವ ಸುವರ್ಣಗೋಪುರ ನೋಡಿದೆ ಮುನ್ನ ಮಗ್ನವಾಗಿರುವ ಅನ್ನ ಛತ್ರದ ನೋಡಿದೆ 9 ಪರ್ಣಶಾಲೆಯನ್ನು ನೋಡಿ ಪರಮ ಹರುಷವ ತಾಳಿದೆ ನಿರ್ಮಲ ಚರಿತ್ರ ರಾಮನ ವರ್ಣಿಸಲಳವಲ್ಲವೆ 10 ಲಕ್ಷ್ಮೀವಲ್ಲಭ ರಾಮನ ಪ್ರತ್ಯಕ್ಷಮದಿವೆಯ ನೋಡಿದೆ ನಾ ನೋಡಿದೆ 11 ಚಂದ ಚಂದಾ ಜನರು ಎಲ್ಲಾ ಆನಂದದಿಂದಲಿ ತಂದು ತಂದು ಹಾಕುವಂತಹ ಚಂದವನು ನೋಡಿದೆ 12 ಇಂತಹ ರಾಮನವಮಿ ಉತ್ಸವ ಲೋಕದಲಿ ನಡೆವುದು ಹತ್ತುವದನ ಶೇಷನಿಗೂ ಸಹಾ ತಪ್ಪದೇ ಎಣಿಸಲಾಗದು 13 ನಮ್ಮವಾಯು ಸುತನ ಪಾದಕೆ ಸುಮ್ಮನೇನಾನೆರಗಿದೆ ಘನ್ನ ಮಹಿಮನ ಪ್ರಸನ್ನ ಸೀತಾರಾಮನನು ನಾ ನೋಡಿದೆ 14 ತೇರನೇರಿ ಬರುವ ರಾಮನ ವೈಯಾರವನು ನಾ ನೋಡಿದೆ ಮೇರು ನಂದನ ಭದ್ರಾಚಲದಿ ವಿಚಾರ ಮಾಳ್ಪುದ ನೋಡಿದೆ 15 ಪ್ರಹ್ಲಾದವರದ ನಾರಸಿಂಹ ವಿಠಲನ ಎಲ್ಲ ಉತ್ಸವ ನೋಡಿ ಮನಕೆ ಆಹ್ಲಾದವನೆ ನಾ ಪಾಡಿದೆ 16
--------------
ಓರಬಾಯಿ ಲಕ್ಷ್ಮೀದೇವಮ್ಮ
ನೋಡಿದೆನು ಯಾದವ ಕೃಷ್ಣನ | ಪಾಡಿದೆನೊ ಮನದಣಿಯ ವರಗಳ | ಬೇಡಿದಾಕ್ಷಣ ಕೊಡುವ ಜಗತ್ರಯ | ವಾಡಿಸುವ ವಾಗೀಶ ಜನಕನ ಪ ಮೇದಿನಿ ಪ್ರ | ಹ್ಲಾದ ಸುರಪನ ಕಾದ ವಂಶವ | ಛೇದ ಸಾಗರ | ಹಾದಿ ಬಿಗಿದ ಗೋಯಿದ ಬತ್ತಲೆ | ಯಾದ ತುರಗವ | ಬೀದಿ ವದಿಸಿದನೀತ ಹಯಮೊಗ | ಬಾದರಾಯಣ ದತ್ತ ವೈಕುಂಠ | ಬೋಧ ಮೂರುತಿ ಕಪಿಲ ನಾನಾ ವಿ | ನೋದ ರೂಪದ ಆದಿ ದೈವವ 1 ಜನನಿಗಾಟವ ತೋರಿ ಕಡಗೋ | ಲನು ನೇಣರು ಕರದಲಿ ಪಿಡಿದು | ರು ಕ್ಮಿಣಿಯ ಕೈಯಿಂದ ಪೂಜೆಗೊಂಡರ್ಜು | ಗೋಪಿ ಚಂ | ದನದೊಳಡಗಿ ಅಲ್ಲಿಂದ ಆನಂದ | ಮುನಿಗೊಲಿದು ಬಲು ವೇಗ ಪಡುವಣ | ವನಧಿ ತೀರದಲಿಪ್ಪನಂತಾಸನ ಬಳಿಯ ನಿಂದಿದ್ದ ಚಲುವ 2 ಸುತ್ತ ಯೋಜನ ಕ್ಷೇತ್ರವಿದರೊಳು | ಉತ್ತಮ ವಿಮಾನ ವೇದ ಪ | ರ್ವತಗಳು ಅಲ್ಲೆಲ್ಲಿ ಸರೋವರ | ಕತ್ತಲಿಗಭಿಮಾನಿನಿ ದುರ್ಗಾ | ದುರಿತ ಪರಿಹರ | ಸೋತ್ತಮರಿಗಿದು ಸಿದ್ಧ ಸರ್ವದ | ತತ್ತಳಿಪ ಪರತತ್ವ ಹರಿಯ3 ತಂತ್ರ ಸಾರೋಕ್ತದಲಿ ಪೂಜೆ ನಿ | ರಂತರದಿ ಕೈಗೊಂಬ ಬಲು ಗುಣ | ವಂತ ನೀತನ ಹೊಳವು ಪೊಗಳಿದ | ರಂತ ಗಾಣವು ಶ್ರುತಿ ಪುರಾಣಗ | ಳೆಂತು ಪೇಳಲಿ ಮೆರೆವ ವೈಭವ | ಸಂತರಿಗೆ ಅತಿ ಪ್ರಿಯನಾಗಿಪ್ಪ | ನಿತ್ಯ ಸ್ವಾತಂತ್ರ ಪುರುಷನ 4 ಮಕರ ತಿಂಗಳು ಮೊದಲು ಪಕ್ಷದ | ಲಕುಮಿರಮಣನ ದಿವಸದಲ್ಲೀಗ | ಭಕುತಿಯಿಂದಲಿ ಬಂದು ವಂದಿಸಿ | ಅಕುಟಿಲರ ವೊಡಗೊಡಿ | ನಿಂದು ಗೋ | ಳಕವ ಚಿಂತಿಸಿ ಸ್ನಾನ ಒಂದೆ | ಸುಖ ತೀರ್ಥ ಸರೋವರದಲಿ ಮಾಡೆ | ಮುಕುತರೊಳು ಪೊಂದಿಸುವ ದಾತನ 5 ಶುಕ್ರವಾರದ ಪೂಜೆ ನೋಡಲು | ವಕ್ರಗತಿಗಳು ಮುಟ್ಟಲಂಜೊವು | ಚಕ್ರವರ್ತಿ ತಾನಾಗಿ | ಸಕಲ ಪರಾಕ್ರಮದಲಿ ಚರಿಸಿ ಜಗದೊಳು | ಶುಕ್ರ ದೇವಸ್ಥಾನದೊಳು ಕಾ | ಲಕ್ರಮಣ ಮಾಡೆ | ಗೋತ್ರದೊಡನೆ ಪೂ ರ್ಣ ಕ್ರೀಡೆÀಯಾಡಿಸುತ ಸಲಹುವ | ಚಕ್ರಧರ ಅಕ್ರೂರ ವರದನ 6 ಕಣಿಸಿ ಉಡಿಸುವ ಕುಣಿಸಿ ನೋಡುವ | ಕನಸಿನೊಳಗಾವಾಗ ತನ್ನನು | ಮನಸಿನಲಿ ಕ್ಷಣ ಬಿಡದೆ ಗುಣಗಳ | ಎಣಿಸಿ ಮೈ ಮರೆದಡಿಗಡಿಗೆ ಈ | ತನುವೆ ನಿನ್ನಾಧೀನವೆಂದಾ | ಜನರಿಗಪವಾದ ಬರಲೀಸನು | ದನುಜದಲ್ಲಣ ವಿಜಯವಿಠ್ಠಲನ್ನ 7
--------------
ವಿಜಯದಾಸ
ಪಕ್ಷಿವಾಹನ ಸತ್ಯಭಾಮೆ ಸದನದ್ವಾರದಿ ನಿಂತು ಸದನದ್ವಾರದಿ ಮಿತ್ರೆ ಎನಗೆ ಕದವ ತೆಗೆಯೆ ಬರುವೆ ತೀವ್ರದಿ 1 ಸಾಕೊ ಸಾಕೊ ನಿನ್ನ ಸಂಗ ಯಾಕೊ ಕೃಷ್ಣನೆ ನಮಗಿನ್ಯಾಕೊ ಕೃಷ್ಣನೆ ಅ- ನೇಕ ಸ್ತ್ರೀಯರಿಂದ ರಮಿಸ್ಹೋಗಾದಿ ಪುರುಷನೆ 2 ವಾಕು ವಾಕು ತಿಳಿಯದೊ ವಿ- ವೇಕದಿಂದ ನಿಂತು ಪೇಳೆ ಮಾತುಯೆನ್ನೊಳು 3 ಎನ್ನ ಬಿಟ್ಟು ಅನ್ಯಸ್ತ್ರೀಯರ ಮನೆಗೆ ಪೋಗುವಿ ಸ್ತ್ರೀಯರ ಮನೆಗೆ ಪೋಗುವಿ ಘನ್ನ ಘಾತಕತನದಿಂದಿಲ್ಲಿಗಿನ್ನು ಬರುವರೆ 4 ನಿನ್ನ ಸರಿಯಸವತೇರೆನಗೆ ಸತಿಯರಲ್ಲವೆ 5 ಅತ್ತಸಾಗೊ ರುಕ್ಮಿಣಿ ಒಲವು ಚಿತ್ತವ್ಹಿಡಿಯದೆ ಆಕೆ ಚಿತ್ತವ್ಹಿಡಿಯದೆ ಲೆತ್ತಪಗಡೆನಾಡದ್ಹೀಗೆ ಇತ್ತ ಬರುವರೆ6 ಕಾಳಕತ್ತಲು ಪ್ರಳಯಜಲದಿ ಕಾದುಕೊಂಡೆನ್ನ ಇರುವೋಳು ಕಾದುಕೊಂಡೆನ್ನ ಆದಿಲಕ್ಷ್ಮಿ ಮುನಿದರೆನಗಿನ್ನಾ ್ಹ್ಯಗೆ ಭಾಮಿನಿ 7 ಜಾಂಬುವಂತೇರ್ಹಂಬಲಬಿಟ್ಟು ಬಂದ ಕಾರಣ ನೀನು ಬಂದ ಕಾರಣ ಆ- ನಂದ ಬಡಿಸುತವರ ಗೃಹದಲ್ ಹೊಂದಿಕೊಂಡಿರು 8 ಜಾಂಬುವಂತೇರಿಂದ ಬಂದ ನಿಂದ್ಯ ಕಳೆದನೆ ನಾ ಅಪನಿಂದ್ಯ ಕಳೆದೆನೆ ತಂದು ರತ್ನತೋರಿ ನಿನ್ನ ತಂದೆ ಭಾಮಿನಿ 9 ಕಮಲನಾಭ ಕಾಳಿಂದಿ ಕಳವಳಿಸುವಳೊ ಕಾಣದೆ ಕಳವಳಿಸುವಳೊ ಕಾಣದೆ ಕಾಲಕಳೆಯೊದ್ಯಾ ್ಹಗಿನ್ನಾಕೆ ಆಲಯಕೆ ಪೋಗೊ 10 ಭಾಳ ತಪಸಿಲ್ವಲಿಸಿ ಭಾರ್ಯಳಾದ ಬಗೆ ನೀ ಅರಿಯದೆ 11 ನೀಲವರ್ಣ ನೀಲಾದೇವಿ ನಿನ್ನ ಕಾಣದೆ ಇರುವಳು ನಿನ್ನ ಕಾಣದೆ ಗಮನ ನಿಲ್ಲದೆ ನೀ ಪೋಗೊ 12 ಸಪ್ತಗೂಳಿ ಕಟ್ಟಿ ನಾ ಸಮರ್ಥನೆನಿಸಿದೆ ಬಲು ಸಮರ್ಥನೆನಿಸಿದೆ ನೀಲ ನನಗೆ ಶ್ರೇಷ್ಠಳಲ್ಲವೆ 13 ಎದ್ದು ಪೋಗಾಕಿದ್ದಸ್ಥಳಕಿಲ್ಲಿರಲು ಸಲ್ಲವೊ 14 ಅರಸರಾಕೆ ಅಗ್ರಜರೈವರು ಕರೆಸಿ ಕೇಳೋರೆ ಎನ್ನ ಕರೆಸಿ ಕೇಳೋರೆ ಹೋಗಿ ಹರುಷ ಬಡಿಸದಿರಲು ಆಕೆನ್ನರಸಿ ಅಲ್ಲವೆ 15 ಆಕೆ ಸಿಟ್ಟಿಲಿಂದ ದೃಷ್ಟಿತೆಗೆದು ಎನ್ನ ನೋಡಳೆ 16 ನಿನಗೆ ಇಷ್ಟು ಕ್ರೋಧ ನಿಷ್ಠೂರ್ವಚನ ಬ್ಯಾಡೆ ಭಾಮಿನಿ 17 ಲಕ್ಷಣ ದೇವೇರಲ್ಲಿ ಭಾಳಾಪೇಕ್ಷವಲ್ಲವೆ18 ನಾನು ಲಕ್ಷಣೆಯನೆ ತಂದೆ ಕೇಳೆ ಸತ್ಯಭಾಮೆ ನೀ 19 ಹತ್ತು ಆರು ಸಾವಿರ-ಶತ ಪತ್ನೇರಿಲ್ಲವೆ ನಿನಗೆ ಪತ್ನೇರಿಲ್ಲವೆ ತಿರುಗಿ ಸುತ್ತಿ ಸುತ್ತಿ ಹಾದಿ ಹೀಗೆ ತಪ್ಪಿಬರುವರೆ 20 ದಾರಮನೆಗೆ ಹೋಗಲೆನ್ನ ದೂರು ಮಾಡೋರೇ ಹೀಗೆ ದೂರು ಮಾಡೋರೇ ಸ್ವಾಮಿ ಪಾರಿಜಾತಕೊಟ್ಟ ಸತಿಯಲ್ಲೊ ್ಹೀಗಿರೆಂಬರೆ 21 ಸರಸವಾಡದಿರೊ ಶ್ರೀರಮಣ ಅರಸೇರ್ಯಾತಕೊ ನಿನಗೆ ಅರಸೇರ್ಯಾತಕೊ ಹರುಷದಿಂದ ಎರಗದೆನ್ನ ಶಿರಸಿದ್ಯಾತಕೊ 22 ಶ್ರೀಶ ಎನ್ನ ಮನದಲಿರೊ ಭೀಮೇಶಕೃಷ್ಣನೆ ಇರೊ ಭೀಮೇಶಕೃಷ್ಣನೆ ನಿನ್ನ ವಿಲಾಸ ಬಯಸದಿರುವರ್ಯಾರೊ ಇಂದಿರೇಶನೆ 23
--------------
ಹರಪನಹಳ್ಳಿಭೀಮವ್ವ
ಪತಿಯ ಮಂದಿರದಲಿ ಸುಖವಾಗಿ ಬಾಳಮ್ಮ ಮತಿವಂತೆ ಎನಿಸಿ ಸನ್ಮತಿ ಪಡೆದು ಪ ಚತುರಳೆ ನಿನ್ನ ಸಖಿಯರೆಲ್ಲರು ಅತಿಶಯದಿ ನಿನ್ನ ಪತಿಯ ಗುಣಗಾನ ಕಥನ ಮಾಡುತ ನಿನ್ನೆದುರಿನಲಿ ಸ್ತುತಿಸಿ ಹಿಗ್ಗಿ ಪೊಗಳುವರೆ ಪಾರ್ವತಿ ಅ.ಪ ವಸತಿ ಇಲ್ಲದೆ ಸ್ಮಶಾನದಲಿ ವಾಸಿಪನೆಂದು ಅಪಹಾಸ್ಯ ಮಾಡುವರೆ ವಸನ ಪೀತಾಂಬರವನುಡುವುದನರಿಯದೆ ಹಸಿಯ ಚರ್ಮವನುಡುತಿಹನೆಂಬರೆ ಅಸನಕಿಲ್ಲದೆಗರಳ ವಿಷವನುಂಬುವನೆಂದು ಗುಸುಗುಸು ನುಡಿಯುವರೆ ಅಸಮನೇತ್ರನು ಭಸುಮ ಲೇಪಿಸಿ ವೃಷಭರಾಜನ ಏರಿ ಬರುವನು ಶಶಿಮುಖಿಯೆ ನೀನರಿಯದಲೆ ಈ ಪಶುಪತಿಗೆ ಸತಿಯಾದೆ ಎಂಬರು 1 ಸರಿಸವತಿಯ ತನ್ನ ಸಿರಮೇಲಿರಿಸಿದಿ ಗಿರಿಜೆ ತರವಲ್ಲ ಕೇಳೆ ಪರಿಪರಿ ರತ್ನಾಭರಣಂಗಳರಿಯದೆ ಉರಗಗಳ ಭೂಷಿತನಾದ ನಮ್ಮ ಗÀರಳ ಕಂಠನಿಗೆ ನೀನರಿಯದೆ ಸತಿಯಾದೆ ಎಂದು ತರಳರೆಲ್ಲರು ಹಾಸ್ಯ ಮಾಡುವರೆ ಸರಸವಾಡುತ ನೋಡು ಕಂಠದಿ ಸಿರದ ಮಾಲೆಯ ಧರಿಸಿಕೊಂಡಿಹ ಪರಮ ಆಶ್ಚರ್ಯದಲಿ ನಾವೆಲ್ಲ ಅರುಹಲೀಗ ಬಂದಿಹೆವು ಎನುವರು 2 ಅಂದು ಮೋಹಿನಿ ರೂಪವ ಕಂಡು ಪರಶಿವನು ಇನ್ನೊಮ್ಮೆ ನೋಡಲು ಬೇಡೆ ಪರಮಾತ್ಮನಾ ಸುಂದರಾಕೃತಿಯ ನೋಡುತ ಪಿಡಿಯಲು ಪೋಗಿ ನಂದ ಕಂದನ ರೂಪ ನೋಡಿದನು ಹಿಂದೆ ಮೂಕಾಸುರನೆಂಬ ದೈತ್ಯನ ಕೊಲಿಸಿದ ಇಂದಿರೇಶನಿಗೆ ಸೇವಕನಾದ ಶಿವನು ಇಂದು ಶಿವನನು ನಿಂದಿಸಿದೆವೆಂದೆನಲು ಬೇಡ ಶ್ರೀ- ತಂದೆ ಕಮಲನಾಭ ವಿಠ್ಠಲನ ಚಂದದಲಿ ಭಜಿಸುವನು ಎನುವರು3
--------------
ನಿಡಗುರುಕಿ ಜೀವೂಬಾಯಿ
ಪತ್ರ ಜಲದಂತೆ ಇಹ ಮಹಾತ್ಮರು ಬುದ್ಧಿ ಶಿಷ್ಯಂಗೆ ಹೇಳ್ವುದು ಹ್ಯಾಗೆಪತ್ರ ಜಲದಂತೆ ಇರುವವರ ವಿವರವ ಕಂಡದ್ದಪೇಳುವೆ ತಿಳಿದ್ಹಾಗೆ ಪ ಪರಮ ಶಿಷ್ಯರಿಗೆ ತತ್ವದ ಬೋಧೆ ಬೋಧಿಸಿಪರವಾಗಿಹರದು ಹ್ಯಾಗೆಹುರಿದ ಚಣಕ ತಿನಲಿಕೆ ಬಹುದಲ್ಲದೆ ಹುಟ್ಟುವಣಿಲ್ಲದ ಹಾಗೆ 1 ವೆಗ್ಗಳವಾಗಿಹ ತತ್ವಗ್ರಂಥವ ಹೇಳಿ ವಸ್ತುವಾಗಿರದು ಹ್ಯಾಗೆಬೊಗ್ಗೂವಡೆದ ಮಾಡಬಾಹಣವಲ್ಲದೆಬೊಗ್ಗೂ ಕಟ್ಟಿಗೆಯಾದ್ಹಾಗೆ 2 ಶಬ್ದಡಗಿದ ಚಿದಾನಂದ ಮಹಾತ್ಮರುಶಬ್ದವಾಡುವರದು ಹ್ಯಾಗೆಶಬ್ದವು ಗವಿಯಲ್ಲಿ ಮಾಡಲು ಮಾಡುವುದುಶಬ್ದವೀ ಗವಿಗಿಲ್ಲದ ಹಾಗೆ3
--------------
ಚಿದಾನಂದ ಅವಧೂತರು
ಪಾಲಿಸೊ ಮನ್ಮಾನಸಾ | ಮಂದಿರಶ್ರೀಲೋಲ ಭಕ್ತ ಪೋಷ ಪ ಭಂಜನ ರಾಮ | ಗಾಳಿ ಸುತಗೆ ಪ್ರೇಮ ಅ.ಪ. ದೈತ್ಯ ಜನರು ಬಹಳಾ | ಎನ್ನ ತಮ್ಮಭೃತ್ಯನ ಮಾಡಿ ಜಗಳಾ ||ನಿತ್ಯವಾಡುತಲೆನ್ನ | ಕೃತ್ಯಾಗಳಿಗೆ ದೋಷಎತ್ತಿಸುತಿಹರಯ್ಯ ದೈತ್ಯ ನಿಷೂದನ 1 ಸಂಚೀತಾಗಾಮಿ ನಾಶಾ | ಗೈ ಭವವಂಚೀತನಿಹೆ ಶ್ರೀಶಾ ||ಹೆಂಚು ಹಾಟಕ ಸಮ | ಸಂಚಿಂತನೆಯ ಕೊಟ್ಟುಕೊಂಚ ಮತಿಯ ಕಳೆ | ವಾಂಛಿತಾರ್ಥದ ಹರಿ 2 ಜನ್ಮಾಜನ್ಮವು ಬರಲೀ | ತವಸ್ಮøತಿಕರ್ಮಾಕರ್ಮದೊಳಿರಲೀ ||ಭರ್ಮ ಗರ್ಭನಯ್ಯ | ಸುಮ್ಮನಸರ ಪ್ರೀಯನಿರ್ಮಲ ಭಕ್ತಿಯಿತ್ತು | ಹಮ್ರ್ಯದೊಳಗೆ ತೋರೊ 3 ಸುರರು ಭೋಕ್ತ ಭಂಜನ ಭವ 4 ಭವ ಭವ | ಕಾರುಣ್ಯಾತ್ಮಕ ದೇವ 5
--------------
ಗುರುಗೋವಿಂದವಿಠಲರು
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಪುರಾಣ ಅಕ್ಕರವುಳ್ಳ ನಮ್ಮಕ್ಕ ರುಕ್ಮಿಣಿ ಕೇಳೆ ರಕ್ಕಸಾಂತಕ ಕೃಷ್ಣ ಮತ್ತೆಲ್ಲೆ ಪೋದ 1 ಸತ್ಯಭಾಮೆಯೆ ನಿನ್ನ ಚಿತ್ತದ್ವಲ್ಲಭ ನೀರೊಳು ಪೊಕ್ಕು ವೇದವ ತಂದು ಪುತ್ರಗಿಡಹೋದ 2 ಪನ್ನಂಗಶಯನ ಲಾವಣ್ಯರೂಪನು ಎನ್ನ ಕಣ್ಣಿಗೆ ಮರೆಯಾಗಿ ಇನ್ನೆಲ್ಲೆ ಹೋದ 3 ಪತಿ ಶರಧಿಯೊಳು ಬೆನ್ನಲಿ ಗಿರಿಯೆತ್ತಿ ತನ್ನ ಭಕ್ತರಿಗೆ ಸುಧೆಯ ನೀಡಲು ಹೋದ 4 ವನಜನಾಭನ ಕಾಣದೆ ಘನಕ್ಲೇಶದಿಂದೀಗ ಮನದ ವಿರಹತಾಪವನು ಸೈರಿಸಲ್ಹ್ಯಾಗೆ 5 ಅವನಿ ಕದ್ದವನ ಸಂಹರಿಸಿ ಕೋರೆಗಳಿಂದ ಭುವನಾಧಿಪತಿಯು ಬರುವನೆ ಸತ್ಯಭಾಮೆ 6 ಹಂಬಲ ಬಿಡದರವಿಂದನೇತ್ರನ ಬಿಟ್ಟು ಸುಂದರಾಂಗನ ಕರೆತಂದು ತೋರೆನಗೆ 7 ಕಂಬದಿಂದೊಡೆದು ಕಂದನ ತಂದೀ(ದೆಯ?) ಕರುಳ್ಹಾರ ಕಂದರದಿ ಧರಿಸಿ ತಾ ಬಂದನು ಭಾಮೆ 8 ಸೃಷ್ಟಿಕರ್ತನುಯೆನ್ನ ದಿ(ದೃ?) ಷ್ಟಿಂದೆ ನೋಡದೆ ಎಷ್ಟು ಹೇಳಲೆ ಪ್ರಾಣ ಬಿಟ್ಟು ಹೋಗುವುದೆ 9 ಪುಟ್ಟ ಬ್ರಾಹ್ಮಣನಾಗಿ ದಿಟ್ಟತನದಲಿ ದಾನವ ಕೊಟ್ಟ ಬಲಿ ಪಾತಾಳಕೆ ಮೆಟ್ಟಿ ಬಾಹುವನೆ 10 ತ್ವರಿತದಿಂದಲಿ ಯಾದವರರಸು ಶ್ರೀಕಾಂತನ ಸರಸವಾಡಲೀಗ ಕರೆಸಿ ತೋರೆನಗೆ 11 ಅರಸರ ಕುಲವ ಸಂಹರಿಸಿ ಕ್ಷತ್ರೇರನೆಲ್ಲ ನಿರುತ ನಿಷ್ಠೆಯಲಿ ತಪ ಚರಿಸಿ ಬಾಹುವನೆ 12 ಹೇಮಪುತ್ಥಳಿಗೊಂಬೆ ಸಾಮಜವರದನ ಆ ಮಾಸುರರೊಡೆಯ ಮೇಘಶ್ಯಾಮನ ತೋರೆ13 ಮಾಡಿ ಯುದ್ಧವ ಲಂಕಾ ನೋಡಿ ದಶಶಿರವ ಚೆಂಡಾಡಿ ಜಾನಕಿಯ ಒಡಗೂಡಿ ಬಾಹುವನೆ 14 ವಾಸುದೇವನ ಕಾಣದೊಂದರಘಳಿಗೀಗ ನಾಲ್ಕು ಯುಗವಾಗಿ ತೋರುವುದೆನ್ನ ಮನಕೆ 15 ಶ್ರೀಶ ತಾ ಸೋಳಸಾಸಿರ ಮಂದಿ ಸತಿಯೇರ ವಿ- ಲಾಸದಿಂದಿದ್ದನೀಗಿಂದೀವರಾಕ್ಷ 16 ಸಿರಿವೊಬ್ಬಳಲ್ಲದೆ ಪರನಾರಿಯರ ಕಣ್ಣು ತೆರೆದು ನೋಡುವ ತಾ ಭೂರಮಣನೆಲ್ಲಿಹನೆ 17 ಖರೆಯವೀಮಾತು ತ್ರಿಪುರದ ಸತಿಯರ ಲಜ್ಜೆ ತೊರೆದು ಕೂಡಿದನೆಂಬೋದು ಪರಮ ಮೋಹಕವೆ18 ನಾಡೊಳಗಧಿಕಶ್ವಾರೂಢ ರುಕ್ಮಿಣೀಕಾಂತನ ನೋಡದÉನಜೀವ ನಿಲ್ಲದು ನೀರಜಾಕ್ಷಿ 19 ಬೇಡಿಕೊಂಬುವೆನೆಂ(ಯೆ?)ದು ಭೀಮೇಶಕೃಷ್ಣನ ಕೂಡಿಸುವೆನೆ ಕರೆತಂದು ಕಮಲಾಕ್ಷಿ 20
--------------
ಹರಪನಹಳ್ಳಿಭೀಮವ್ವ