ಒಟ್ಟು 98 ಕಡೆಗಳಲ್ಲಿ , 25 ದಾಸರು , 97 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆನ್ನ ಪೆತ್ತಿಲ್ಲವಂತೆ-ಅಮ್ಮಾ |ನಾನಿನ್ನ ಮಗನಲ್ಲವಂತೆ ||ಧೇನುಕಾಯುವರಿಲ್ಲವೆಂದು ನೀನು |ಸಾನುರಾಗದಿ ಸಲಹಿದೆಯಂತೆ 2ವಿಷವು ತುಂಬಿದ ಮೊಲೆಯ-ಕೊಟ್ಟ |ಅಸುರೆಯ ಸಂಹರಿಸಿದೆನಂತೆ ||ಅಸುರನಾದ ಶಕಟನನಾಕ್ಷಣದಲಿ |ಶಿಶುವಾಗಲೆ ಒರೆಸಿದೆನಂತೆ 3ವತ್ಸಾಸುರನನು ಕೆಡಹಿದೆನಂತೆ |ಕಿಚ್ಚನೆಲ್ಲವನು ನುಂಗಿದೆನಂತೆ ||ಕಚ್ಚಬಂದ ಕಾಳಿಂಗನಾ ಹೆಡೆ-|ಚಚ್ಚಿ ತುಳಿದು ಓಡಿದೆನಂತೆ 4ಕುಸುಮಗಂಧಿಯರಡುವ |ವಸನಕದ್ದು ಓಡಿದೆನಂತೆ ||ಹಸುಗೂಸು ಅಲ್ಲ ಇವ |ಅಸುರ ಮಗನು ಎಂತೆಂಬುವರೆ 5ಒರಳನೆಳೆತಂದು ಮತ್ತಿ-|ಮರವ ಮುರಿದೋಡಿದೆನಂತೆ ||ತರಳೆಯರ ವಸ್ತ್ರವ ಕದ್ದು |ತರುವನೇರಿದೆನಂತೆ 6ಪರಮಗಾಡಿಕಾರನಿವ |ಪುರಂದರವಿಠಲರಾಯ ||ತರುಣಿಯರ ವಂಚಿಸುತ್ತ |ಠಕ್ಕಿಸಿ ಪೋದನೆಂತೆಂಬುವರು7
--------------
ಪುರಂದರದಾಸರು
ನೆಚ್ಚದಿರೀ ಭಾಗ್ಯ ಆರಿಗೂ ಸ್ಥಿರವಲ್ಲನೆಚ್ಚದಿರೆಚ್ಚರಿಕೆಹೆಚ್ಚದೆ ಹಿಗ್ಗದೆ ಇದ್ದರೆ ಲೋಕಕೆಮೆಚ್ಚು ಕೇಳೆಚ್ಚರಿಕೆ ಪ.ಪೊಡವಿಪರೊಲೂಮೆ ಸುಸ್ಥಿರವೆಂದು ಗರ್ವದಿನೆಡೆಯದಿರೆಚ್ಚರಿಕೆಕೊಡವನಂಧಕ ಪೊತ್ತು ನಡೆವಂತೆ ಅಧಿಕಾರಕಡೆಉಒಲ್ಲ ಎಚ್ಚರಿಕೆಕಡುಚಪಲನು ತಾನೆಂದು ಪರರವಗಡಿ ಸದಿರೆಚ್ಚರಿಕೆಬಡವರೆಡರ ಲಾಲಿಸದೆಮುಂದಕ್ಕಿ ಹೆಚ್ಚುಇಡಬೇಡವೆಚ್ಚರಿಕೆ 1ದೊರೆಗಳ ಒಲವಲಂಯಂತೆಂದಲ್ಲರೊಳುಹಗೆತರವಲ್ಲ ಎಚ್ಚರಿಕೆಉರಗನ ಮುತ್ತಿ ಕಟ್ಟಿರುವೆಯು ಕೊರೆದಂಥತೆರನಪ್ಪುದೆಚ್ಚರಿಕೆಗುರುಹಿರಿಯರ ಕಂಡು ಚರಣಕೆ ಶಿರಬಾಗಿನಡೆಯುತಿರೆಚ್ಚರಿಕೆಸಿರಿಯೆಂಬ ಸೊಡರಿಗೆ ಮಾನ್ಯರ ಅವಮಾನಬಿರುಗಾಳಿ ಎಚ್ಚರಿಕೆ 2ಲೋಕಾಪವಾದಕೆ ಅಂಜಿ ನಡೆಯುವುದು ವಿವೇಕ ಕೇಳಚ್ಚರಿಕೆನಾಕೇಂದ್ರನಾದರೂ ಬಿಡದಪಕೀರ್ತಿ ಪರಾಕು ಕೇಳೆಚ್ಚರಿಕೆಕಾಕು ಮನುಜರಕೊಂಡೆಯ ಕೇಳೀ ಕೋಪದುದ್ರೇಕ ಬೇಡೆಚ್ಚರಿಕೆಭೂಕಾಂತೆ ನಡು - ನಡುಗುವಳು ನಿಷ್ಠುರವಾದವಾಕುಕೇಳೆಚ್ಚರಿಕೆ3ನಳ - ಮಾಂಧಾತರೆಂಬವರೇನಾದರುತಿಳಿದು ನೋಡೆಚ್ಚರಿಕೆಅಳಿವುದು ಈ ದೇಹ ಉಳಿವೂದೆಂದೇ ಕೀರ್ತಿಇಳೆಯೊಳಗೆಚ್ಚರಿಕೆಅಳಲಿಸಿ ಪರರನು ಗಳಿಸಿದಂಥ ಹೊನ್ನುಉಳಿಯದು ಎಚ್ಚರಿಕೆಉಳಿದಲ್ಪಕಾಲದಿ ಬಡವರಾದವರನುಹಳಿಯದಿರೆಚ್ಚರಿಕೆ 4ಪರಸತಿ - ಪರಧನಕಳುಪಲು ಸಿರಿಮೊಗದಿರುಹುವಳಚ್ಚರಿಕೆನೆರೆ ಛಿದ್ರಕುಂಭದ ನೀರಿನಂತಾಯುಷ್ಯಸರಿಯುವುದೆಚ್ಚರಿಕೆಬರುವ ಹಾನಿವೃದ್ಧಿ ತನ್ನ ಕಾಲದ ಮೀರಲರಿಯದು ಎಚ್ಚರಿಕೆವರದ ಪುರಂದರವಿಠಲರಾಯನಮರೆಯದಿರೆಚ್ಚರಿಕೆ 5
--------------
ಪುರಂದರದಾಸರು
ಬಡವಾ ನಿನಗೊಬ್ಬರಗೊಡವೆ ಏತಕೊ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಒಡವೆ ವಸ್ತು ತಾಯಿತಂದೆ ಒಡೆಯ ಕೃಷ್ಣನೆಂದು ನಂಬೋ ಪ.ಒಪ್ಪತ್ತು ಭಿಕ್ಷವ ಬೇಡು, ಒಬ್ಬರಿಗೆ ಒಂದಿಷ್ಟು ನೀಡು |ಅಪ್ಪನಾದಚ್ಯುತನ ನೋಡು, ಆನಂದದಲಿ ಪೂಜೆಮಾಡು 1ಮಡದಿ ಮಕ್ಕಳು ಹೆದರಿಸಿದರೆ ಮುಂಕೊಂಡು ನೀಅಡಕೆಯ ಹೋಳಿಗೆ ಹೋದ ನಾಚಿಕೆ ಆನೆಯಬಲ್ಲೆ ನಿನ್ನ ಎಲ್ಲ ಮಾತು ಕ್ಷುಲ್ಲಕತನದ ಭ್ರಾಂತು |ಎಲ್ಲರ ಮನೆಯ ದೋಸೆ ತೂತು ಅಲ್ಲವೇನುವೇದ - ತರ್ಕವೆಲ್ಲವು ಭ್ರಾಂತಿ -ಬೂದಿಮುಟ್ಟಿದ ಕೆಂಡದಂತೆ ಬುದ್ಧಿಯಲಿರುದೊರೆತನವು ಏನು ಹೆಚ್ಚು - ಸಿರಿಯು ಏನುವರದ ಪುರಂದರವಿಠಲರಾಯನು ಪರಿಪಾಲಿಪನೆಂದು ನಚ್ಚು 5
--------------
ಪುರಂದರದಾಸರು
ಬಲ್ಲಿದ ನೀನೆಂದು ಬಡವರ ಬಾಯನು ಬಡಿಯದಿರೆಚ್ಚರಿಕೆ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಎಳ್ಳಷ್ಟು ತಪ್ಪಿದರೆ ಯಮನವರೆಳೆದೊಯ್ವರು ಎಚ್ಚರಿಕೆಚ್ಚರಿಕೆ ಪ.ಮಾಡು ದಾನ - ಧರ್ಮಪರ ಉಪಕಾರವ ಮರೆಯದಿರೆಚ್ಚರಿಕೆಕೇಡ ನೆಣಿಸಬೇಡ ನಂಬಿದ ಠಾವಿಗೆ ಕೆಡುವೆ ಮತ್ತೆಚ್ಚರಿಕೆಮೂಢರ ಒಡನಾಡಿ ಮುಂದರಿಯದೆ ನೀನು ಮುನಿಯದಿರೆಚ್ಚರಿಕೆನೋಡಿ ನಡೆವ ಸುಗುಣರ ನೋಡಿ ನಡೆಯೊನೀ ನಟನೆ ಬೇಡಚ್ಚರಿಕೆ 1ಹೊನ್ನ - ಹೆಣ್ಣು - ಮಣ್ಣು ತನ್ನನೆಅಣಕಿಸಿ ಹೋಹುವು ಎಚ್ಚರಿಕೆಮುನ್ನ ಮಾಡಿದ ಫಲದಿಂದಲಿ ಬಂದೆಯೊ ಮುಂದೆ ಇನ್ನಚ್ಚರಿಕೆಚೆನ್ನಾಗಿ ತಾ ಬಾಳಿ ಬದುಕುವೆನೆಂತೆಂಬ ಚೇಷ್ಟೆ ಬೇಡೆಚ್ಚರಿಕೆಬೆನ್ನನು ಬಡಿಯದೆ ಬಿಡುವರೆ ಯಮನವರು ಮರೆಯದಿರೆಚ್ಚರಿಕೆ 2ಬಾಳಿ ಬದುಕಿ ಸಿರಿವಾಹಗೆ ಟವಳಿಯಬಣಗು ಬೇಡದೆಚ್ಚರಿಕೆಹಾಳು ಬದುಕಿಗಾಗಿ ಹಲವರ ಕೂಡಣ ಹಗಣ ಬೇಡಚ್ಚರಿಕೆಕಾಲನವರು ಬಂದುಆವಾಗ ಕರೆವರೊ ಕಾಣದು ಎಚ್ಚರಿಕೆಶ್ರೀಲೋಲ ಪುರಂದರವಿಠಲರಾಯನ ಮರೆಯದಿರೆಚ್ಚರಿಕೆ 3
--------------
ಪುರಂದರದಾಸರು
ಮಂಗಳಂಜಯಮಂಗಳಂ ಪ.ವಾತಸುತ ಹನುಮನ ಒಡೆಯಗೆ ಮಂಗಳದಾತ ಶ್ರೀ ರಘುಪತಿಗೆ ಮಂಗಳ ||ಸೇತುವೆಗಟ್ಟಿದ ರಾಯಗೆ ಮಂಗಳಸೀತಾರಮಣಗೆಶುಭಮಂಗಳ1ಬಿಲ್ಲ ಹಿಡಿದು ಬಲು ಬಿಂಕದ ದೈತ್ಯರಹಲ್ಲ ಮುರಿದವಗೆ ಮಂಗಳ |ಕಲ್ಲಾದಹಲ್ಯೆಯನುದ್ಧಾರ ಮಾಡಿದಬಲ್ಲಿದದಾಶರಥಿಗೆ ಮಂಗಳ2ಹರಧನು ಮುರಿದ ವಿನೋದಿಗೆ ಮಂಗಳವರದ ತಿಮ್ಮಪ್ಪಗೆ ಮಂಗಳ ||ಪುರಂದರವಿಠಲರಾಯಗೆ ಮಂಗಳಸರುವೋತ್ತಮನಿಗೆ ಶುಭಮಂಗಳ 3
--------------
ಪುರಂದರದಾಸರು
ಮನೆಯೊಳಗಾಡೊ ಗೋವಿಂದ-ನೆರೆ-|ಮನೆಗಳಿಗೇಕೆ ಪೋಗುವೆಯೊ ಮುಕುಂದ ಪನೊಸಲಿಗೆ ತಿಲಕವನಿಡುವೆ-ಅಚ್ಚ-|ಹೊಸಬೆಣೆಯಿಕ್ಕಿ ಕಜ್ಜಾಯವ ಕೊಡುವೆ ||ಹಸನಾಧಾಭರಣಗಳಿಡುವೆ-ಚಿಕ್ಕ-|ಹಸುಳೆ ನಿನ್ನನು ನೋಡಿ ಸಂತೋಷಪಡುವೆ 1ಅಣ್ಣಯ್ಯ ಬಲರಾಮಸಹಿತ-ನೀ-|ನಿನ್ನೆಲ್ಲಿಯಾದರೂ ಆಡುವುದು ವಿಹಿತ ||ಹೆಣ್ಣುಗಳೇಕೋ ಸಂಗಾತ-ರಂಗ |ಬಿನ್ನಪಪರಿಪಾಲಿಸೊ ಜಗನ್ನಾಥ2ಜಾರನೆನಿಸಿಕೊಳಲೇಕೆ-ರಂಗ-|ಚೋರನೆನಿಸಿಕೊಂಬ ದೂರು ನಿನಗೇಕೆ ||ವಾರಿಜಾಕ್ಷಿಯರ ಕೂಡಲೇಕೆ-ನಮ್ಮ-|ಪುರಂದರವಿಠಲರಾಯ ಎಚ್ಚರಿಕೆ 3
--------------
ಪುರಂದರದಾಸರು
ಮರೆಯದೆ ಮನದಲಿ ಸಿರಿವರನ ಚರಣವನುಸ್ಮರಿಸಿದಂಥವರನ್ನು ನರರೆನ್ನಬಹುದೆ ? ಪ.ಮುರಹರನಿಗೆರಗುವ ಶಿರವು ದ್ವಾರಕಾಪುರವುಹರಿಕಥೆ ಕೇಳುವಕರ್ಣ ಗೋಕರ್ಣವುಬಿರುದು ಪೊಗಳುವಜಿಹ್ವೆ ಸ್ಥಿರದಿ ಕ್ಷೀರಾರ್ಣವವರದನ ಪೂಜಿಪ ಕರವು ರಾಮೇಶ್ವರವು 1ಸೃಷ್ಟೀಶ ನಿರ್ಮಾಲ್ಯ ಗೃಹಣನಾಸಿಕ ಕಾಶಿಕೃಷ್ಣನ ನೋಡುವ ದೃಷ್ಟಿ ಶ್ರೀ ಮುಷ್ಣವುಅಷ್ಟಮದಗಳ ಜರೆದ ಮುಖ ಮಥುರಾಪುರವಿಷ್ಣುವನು ಪಾಡುವ ಕಂಠ ಭೂ ವೈಕುಂಠ 2ಪರಕೆ ನಡೆಸುವಜಂಘೆ ಹರಿವ ಗಂಗೆಯು ಈಪರಿಯಲೊಪ್ಪುವ ಅಂಗ ಶ್ರೀರಂಗವುಧರೆಯೊಳುಪುರಂದರ ವಿಠಲರಾಯನಪರಮಭಾಗವತರ ಉದರವೆ ಬದರಿ3
--------------
ಪುರಂದರದಾಸರು
ಮಲಗಯ್ಯ ಜಲಜನಾಭ ಪಆದಿಶೇಷ್ಟನು ಬಂದು ಹಾಸಿಗೆಯಾಗಿಹವೇದವಿನುತ ಜಗದಾದಿ ಪುರುಷ ಕೇಳೊ 1ಸಿರಿ ಭೂ ದುರ್ಗೆಯರು ತರುಣಿಯರು ಮೂವರುಚರಣವೊತ್ತಲಿಕೆ ಕೈಕಟ್ಟಿ ನಿಂತಿಹರು 2ಸರುವಜÕ ಮುನಿವಂದ್ಯ ಸರುವ ಸ್ವತಂತ್ರನೇಪರಮ ಸುಂದರ ಪುರಂದರವಿಠಲರಾಯಾ3
--------------
ಪುರಂದರದಾಸರು
ರಂಗ ಕೊಳಲನೂದಲಾಗ |ಮಂಗಳಮಯವಾಯ್ತುಧರೆ-ಜ -ಪನಂಗಳು ಚೈತನ್ಯ ಮರೆದು |ರಂಗಧ್ಯಾನಪರರಾದರು ಅ.ಪಬಾಡಿದ ಮಾಮರಗಳು ಗೊನೆಯೊಡೆದವು |ತೀಡುತ ಮಾರುತ ಮಂದಗತಿಗೊಯ್ಯೆ ||ಬಾಡಿದ ಬರಲು ಫಲದ ಗೊಂಚಲು |ಪಾಡಲೊಲ್ಲವಳಿಕುಲಗಳು ||ಹೇಡಿಗೊಂಡವು ಜಕ್ಕವಕ್ಕಿ ಗಿಳಿ ಮಾ-|ತಾಡದೆ ಕಳೆಗುಂದಿದವು ಕೋಗಿಲೆ ||ಓಡಾಟ ವೈರಾಟ ಬಿಟ್ಟು ಖಗಮೃಗ |ಗಾಢ ನಿದ್ರಾವಶವಾದವು 1ಕೆಳಗಿನುದಕ ಉಬ್ಬೇರಿ ಬಂದುವು |ತುಳುಕಿ ಚೆಲ್ಲಾಡಿ ನಿಂದಳು ಯಮುನೆ ||ಮಳೆಯ ಮೋಡೊಡ್ಡಿ ಮೇಘಾಳಿ ಧಾರಿಟ್ಟುವು |ಕಲುಕರಗಿ ಕರಗಿ ನೀರಾದುವು ||ನಳಿನಚಂಪಕನಾಗಪುನ್ನಾಗಪಾ-|ಟಲ ಸೇವಂತಿಗೆ ಕುಂದ-ಮೊಲ್ಲೆ ಮಲ್ಲಿಗೆ ಬ-||ಕುಲ ಮಾಲತಿ ಜಾಜಿ ಪರಿಮಳಗೂಡಿ |ನೀಲಾಂಗನಂಘ್ರಿಗೆ ನೆರೆದುವು 2ಕೆಚ್ಚಲು ಬಿಗಿದು ತೊರೆದ ಮೊಲೆಯೊಳು |ವತ್ಸದೊಡಲಾಸೆಜರಿದುಎಳೆಹಲ್ಲ||ಕಚ್ಚದಲ್ಲಿಗಲ್ಲಿ ನಿಂದುವು ತಮ್ಮಯ |ಪುಚ್ಚವ ನೆಗಹಿ ನೀಂಟಿಸಿ ||ಅಚ್ಯುತನಾಕೃತಿ ನೋಡಲು ಸುರರಿಗೆ |ಅಚ್ಚರಿಯಾಯಿತು ಆವು ಕಂಡಾನಂದ ||ಪೆಚ್ಚಿ ಮುಕುಂದನ ಲೀಲಾವಿನೋದಕೆ |ಮೆಚ್ಚಿ ಕುಸುಮವ ಸುರಿದರು 3ಮುದ್ದು ಮೋಹನನ ಮಂಜುಳ ಸಂಗೀತ |ಸದ್ದನಾಲಿಸಿ ಗೋಪಾಂಗನೆಯರೆಲ್ಲ ||ಬುದ್ಧಿ ಸೂರಾಡಿ ತಮ್ಮಾಲಯವನೆ ಬಿಟ್ಟು |ಎದ್ದು ಪರವಶರಾದರು ||ಸಿದ್ದ ಮುನಿಜನರಿದ್ದ ಸಮಾಧಿಯಿಂ-|ದೆದ್ದೆದ್ದು ಕುಣಿದೆದ್ದರು ಎದುರಾಗಿ ||ಗದ್ದುಗೆಯರಸನ ಒಲಿಸಿಕೊಂಡರು |ಗೆದ್ದರು ಭವದ ಸಮುದ್ರವನು 4ಶ್ರೀಮನೋಹರ ಗೋಪಾಲ ಮೂರುತಿ |ಆ ಮಧು ಕುಂಜ ವನದಿ ತ್ರಿಭಂಗಿಯಲಿ ||ಹೇಮಾಂಬರವುಟ್ಟು ಗೀರುಗಂಧ ಕಸ್ತೂರಿ |ನಾಮ ಮುಕುಟದ ಬೆಳಕಿನಲಿ ||ದಾಮವನಮಾಲೆ ಶ್ರೀವತ್ಸಕೌಸ್ತುಭ|ಸ್ವಾಮಿ ಪುರಂದರವಿಠಲರಾಯನ |ರಾಮಶ್ರಿ-ಗುಂಡಶ್ರಿ ಮೇಘರಂಜನೆ ಪಾಡಿ |ಸಾಮಗಾನಪ್ರಿಯ ನಮೊ ಎಂದರು 5
--------------
ಪುರಂದರದಾಸರು
ರಂಗ ರಂಗ ಎಂಬ ನಾಮವ ನೆನೆವರ |ಸಂಗದೊಳಿರಿಸು ಎನ್ನ ಪಅಂಗದೊಳ್ಲೆವರು ದೆಸೆದಸೆಗೆಳೆಯುವ |ಭಂಗವ ಬಿಡಿಸೊ ಹರಿಯೆ-ಸ್ವಾಮಿ ಅ.ಪಹರೆಕೃಷ್ಣ ಎಂದೆಂಬೆಜಿಹ್ವೆತಾನಿರುತಿರೆ |ಬರಿಯೆ ಮಾತಾಡುವೆ ನಾ ||ಗುರು-ಹಿರಿಯರ ವಂದನೆಗೆ ಕರ-ಶಿರವಿರೆ |ಗುರುವಹಂಕಾರತನ ||ಪರಿಪರಿ ಪುಷ್ಪದಲಿ ಪೂಜಿಸದೆ ಅಚ್ಯುತನ |ಮರೆತಿಹೆ ನಾನನುದಿನ |ಅರಿವ ನೋಡಿದರೆ ಎನ್ನಲಿ ಕಾಣೆನೈ ದೇವ |ಮೊರೆಹೊಕ್ಕೆ ಸಲಹೊ ಎನ್ನ-ಸ್ವಾಮಿ 1ವೇದ ಶಾಸ್ತ್ರ ಪುರಾಣ ನಾಮವ ನೆನೆವರ |ಚೋದ್ಯವ ನಾನರಿಯೆನು ||ಹಾದಿಬೀದಿ ತಿರುಗುವ ಜಾರಸ್ತ್ರೀಯಳ ಕಂಡು-ವಿ-|ನೋದಗಳ ಮಾಡುತಿಹೆನು ||ಮಾಧವಗೋವಿಂದ ಎನ್ನದೆ ಕಾಲನ |ಬಾಧೆಗಳಿಗೊಳಗಾದೆನೊ ||ಈ ಧರೆಯೊಳಗೆನ್ನ ರಕ್ಷಿಸುವವರ ಕಾಣೆ |ಶ್ರೀಧರ ನೀನೆ ಸಲಹೊ-ಸ್ವಾಮಿ 2ಮಡದಿ-ಮಕ್ಕಳಿಗೆಲ್ಲ ಒಡವೆ ಬೇಕೆಂಬುವ |ಕಡುಲೋಭತನವ ಬಿಡಿಸೊ ||ಅಡಿಗೆ ಅಡಿಗೆ ನಾರಾಯಣನೆಂಬ ನಾಮವನು |ನುಡಿವ ನಾಲಗೆಗಿರಿಸೊ ||ಪೊಡವಿಯೊಳುಪುರಂದರವಿಠಲರಾಯನೆ ನಿನ್ನ |ಅಡಿಯದಾಸನೆನಿಸೊ-ಸ್ವಾಮಿ 3
--------------
ಪುರಂದರದಾಸರು
ವಂದಿಸಿದವರೆ ಧನ್ಯರು - ನಮ್ಮ - |ಇಂದಿರಾಪತಿಗಡ್ಡ ಬೀಳುತಲೊಮ್ಮೆ ಪ.ಒಂದೊಂದು ಸ್ತೋತ್ರದಿ ಒಂದೊಂದು ಮಂತ್ರದಿ |ಒಂದೊಂದು ನಾಮವ ನೆನೆಯುತಲಿ ||ಮಂದರೋದ್ಧರನನು ಕುಂದದೆ ಪೂಜಿಸಿ |ವಂದಿಸುವಾನಂದದಿಂದ 1ಬಿಟ್ಟು ಲಜ್ಜೆಯನು ದೃಷ್ಟಿಸಿ ನೋಡುತ |ವಿಟ್ಠಲ ವಿಟ್ಠಲ ಎನುತ ಮನ - ||ಮುಟ್ಟಿ ಮಾಡುವ ಭಕ್ತಿ - ಸ್ತೋತ್ರ - ಸ್ತುತಿಗಳಿಂದ |ಅಷ್ಟಾಂಗದಲಿ ವಂದನೆಯ ಮಾಡುತಲಿ 2ಸಿರಿಲಕ್ಷ್ಮೀಪತಿ ಶರಣಾಗತರನು |ಕರುಣಿಸೆಂದೆನುತಕರವ ಮುಗಿದು ||ಹರುಷ ಪುಳಕದಿಂದ ಹೊರತ ದೇಹವನು ಶ್ರೀ - |ಪುರಂದರವಿಠಲರಾಯನ ಚರಣಕೆ 3
--------------
ಪುರಂದರದಾಸರು
ವನಿತೆ ನೀ ತೋರಿಸೆ ಹನುಮನ ಬೇಗ |ತನು-ಮನ-ಧನವನು ನಿನಗೀವೆನೀಗ ಪಆತುರದಿಂದಲಿ ಉದಧಿಹಾರಿದವನ |ಪ್ರೀತಿಯಲಿ ರಾಮನ ಮುದ್ರೆಯಿತ್ತವನ ||ಘಾತಕರನ್ನು ಮುರಿದಟ್ಟಿದವನ -ಸತಿ|ಸೀತೆಯಪತಿರಘುನಾಥಗರ್ಪಿಸಿದನ1ಪಾಂಡುನಂದನನಿಗೆ ಅನುಜನಾಗಿಹನ |ಪುಂಢರೀಕಾಕ್ಷನ ಚರಣಸೇವಿಪನ ||ಪುಂಡ ಕೌರವ ಶಿರವ ಚೆಂಡನಾಡಿದವನ 2ಎರಡು ಮೂರಾರೊಂದು ಕುಮತ ಖಂಡಿಸಿದನ |ಭರದಿ ಮಧ್ವಮತ ಉದ್ಧರಿಸಿದನ ||ಧರೆಯೊಳಧಿಕ ಶ್ರೀಹರಿಯ ಭಜಕನ |ವರದ ಶ್ರೀಪುರಂದರವಿಠಲರಾಯನ3
--------------
ಪುರಂದರದಾಸರು
ವೃಂದಾವನದೇವಿ ನಮೋನಮೋ-ಚೆಲ್ವ-|ಮಂದರಧರನ ಮನಃ ಪ್ರಿಯಳೆ ಪನಿನ್ನ ಸೇವಿಸಿ ಉದಕವನು ಎರೆಯಲು |ಮುನ್ನ ಮಾಡಿದ ಪಾಪವಳಿಯುವುದು ||ಎನ್ನ ಇಪ್ಪತ್ತೊಂದು ಕುಲದವರಿಗೆ ಎಲ್ಲ |ಉನ್ನತ ವೈಕುಂಠಪದವೀವಳೆ 1ಒಂದೊಂದು ದಳದಲಿ ಒಂದೊಂದು ಮೂರುತಿ |ಸಂದಣಿನೆವೆ ಬಹು ಗುಪಿತದಲಿ ||ಬಂದು ಕುಂಕುಮ ಶಂಖಚಕ್ರವಿರಿಸಿದರೆ |ತಂದೆ ನಾರಾಯಣ ಕರೆದೊಯ್ಯುವ 2ಹರಿಗೆ ಅರ್ಪಿಸಿದ ತುಳಸಿ ನಿರ್ಮಾಲ್ಯವ |ಕೊರಳೊಳು ಧರಿಸಿ ಕರ್ಣದೊಳಿಟ್ಟರೆ ||ದುರಿತರಾಶಿಗಳೆಲ್ಲ ಅಂಜಿ ಓಡುವುವು ಶ್ರೀ-|ಹರಿಯು ತನ್ನವರೆಂದು ಕೈಪಿಡಿವ 3ಹತ್ತು ಪ್ರದಕ್ಷಿಣಿ ಹತ್ತು ವಂದನೆ ಮಾಡೆ |ಉತ್ತಮ ವೈಕುಂಠ ಪದವೀವಳು ||ಭಕ್ತಿಯಿಂದಲಿ ಬಂದು ಕೈಮುಗಿದವರನು |ಕರ್ತೃನಾರಾಯಣ ಕರೆದೊಯ್ವನು 4ಆವಾವ ಪರಿಯಲಿ ಸೇವೆಯ ಮಾಡಲು |ಪಾವನ ವೈಕುಂಠಪದವೀವಳೆ ||ದೇವ ಶ್ರೀಪುರಂದರವಿಠಲರಾಯನ |ದೇವಿ ನಿನ್ನ ಮುಟ್ಟಿತ್ರಾಹಿಎಂಬೆ5
--------------
ಪುರಂದರದಾಸರು
ಶ್ರೀ ಬ್ರಹ್ಮಣ್ಯ ತೀರ್ಥ ಗುರುಗಳ ಸ್ತೋತ್ರ102ವರಗುರುವರ್ಯ ಶ್ರೀ ಬ್ರಹ್ಮಣ್ಯತೀರ್ಥರ |ಚರಣಕಮಲಕೆ ನಾಅನುದಿನನಮಿಪೆಪಪರಿಪರಿ ದುರಿತವ ತ್ವರಿತದಿ ತರಿದು ಶ್ರೀ |ಹರಿಮಧ್ವ ಚರಣಂಗಳಲಿ ಭಕ್ತಿ ಕೊಡುವಂತೆ ಅ ಪವರಮಧ್ವಮುನಿ ಹೃಸ್ಥ ನರಹರಿ ಶ್ರೀಕೃಷ್ಣ |ಕರಗಳ ಕಟಿಯಲಿಟ್ಟಿರುವ ವಿಠಲರಾಯ ||ವರವೇದವ್ಯಾಸ ವರಾಹನರ್ಚಕರಾದ |ವರಪುರುಷೋತ್ತಮ ಮುನಿಕರ ಕಮಲಜ1ವಿಪ್ರವೃದ್ಧರಿಗೆ ಇವರು ದಯವನ್ನು ಬೀರಿ |ಪುತ್ರ ಭಾಗ್ಯವನಿತ್ತು ಆ ವ್ಯಾಸ ಮುನಿಯನು ||ಸುಪ್ರಖ್ಯಾತರ ಮಾಡಿದಂಥ ಪ್ರಸಿದ್ಧರೀ - |ಸುಪ್ರಬುದ್ಧರ ಮಹಿಮೆಯು ಜ್ವಲಿಪುದು ಎಲ್ಲೂ 2ಪರಮದಯದಿ ಎನ್ನ ಕಷ್ಟದುರಿತ ಕೀಳ್ತು |ಪರಮಸದ್ಗುರುವರ್ಯರೆ ಪೊರೆಯಿರಿ ಎನ್ನ ||ಸರಸಿಜೋದ್ಭವತಾತ' ಪ್ರಸನ್ನ ಶ್ರೀನಿವಾಸ &ಡಿsquo;ವರಕಾಂತಿಯಿಂ ಪ್ರಜ್ವಲಿಸುತಿಹ ನಿಮ್ಮೊಳು3 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಗುರುರಘುಪತಿಏನೇನು ಭಯವಿಲ್ಲ ನಮಗೆಪವಮಾನ ಸೇವಕಗುರುರಘುಪತಿಯ ದಯವಿರೆ ಪಜೋಡು ಕರ್ಮದಿ ಬಿದ್ದು ಕೇಡು ಲಾಭಕೆ ಸಿಲ್ಕಿಮಾಡಿದ್ದೆ ಮಾಡುತ ಮೂಢನಾಗಿರೂಢಿವಳಗೆ ತಿರಿಗ್ಯಾಡುವ ಅಜ್ಞಾನಿಕೋಡಗನ್ನ ಸಿಂಹ ಮಾಡಿದ ಗುರುವಿರೆ1ಆವಾನು ದಯಮಾಡೆ ದೇವನು ವಲಿವನುಅವನ ನಂಬಲು ದೇವಗಣಾಕಾವಲಿಗಳಾಗಿ ಕಾವದು ಅಂತಕೋವಿಂದಾಗ್ರಣಿಗುರುರಘುಪತಿ ದಯವಿರೆ 2ಕರವೆಂಬೊ ಲೇಖನ ದ್ವಾರದಿಂದ ನಮ್ಮಶಿರಿ ಗೋವಿಂದ ವಿಠಲರಾಯನಾ ಕರಸಿ ಸುಹೃತ್ಸುಖ ಬೆರಸಿ ಪರಸ್ಪರ ಕರವಿಡಿದುತಿರುಗುವಗುರುಕೃಪೆ ನೆರಳಿರೆ 3
--------------
ಸಿರಿಗೋವಿಂದವಿಠಲ