ಒಟ್ಟು 174 ಕಡೆಗಳಲ್ಲಿ , 17 ದಾಸರು , 155 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುಂಡರೀಕ ವರದ ಹರಿ | ವಿಠಲ ಪೊರೆ ಇವಳಾ ಪ ತೊಂಡ ವತ್ಸಲ ದೇವ | ಕಾರುಣ್ಯ ಸಿಂಧೋಅ.ಪ. ಮೂರ್ತಿ ಸಂದರ್ಶನವಪೊತ್ತುದಕೆ ನಾನೀಗ | ಇತ್ತೆ ಉಪದೇಶಾ 1 ತಾಪ | ಎತ್ತಿವಳ ಸಲಹೋ 2 ಪರತಮಾತ್ಮಕ ಜ್ಞಾನ | ಎರಡು ಮೂರ್ಭೇದಗಳಅರಿವಾಗುತಿವಳೀಗೆ | ಸಾಧನವ ಗೈಸೋಹಿರಿಯರಾಶೀರ್ವಾದ | ನೆರವಾಗಿ ಇವಳ ಭವಶರಧಿಯನೆ ಬತ್ತಿಸೈ | ಸುರಸಾರ್ವಭೌಮಾ 3 ಬೇಕಾದ ವರಗಳನು | ನೀ ಕರುಣಿಸಿವಳೀಗೆಸಾಕುವಾಭಾರ ನಿನ್ನದು | ಶ್ರೀ ಕರಾರ್ಚಿತನೇಶೋಕ ಸುಖ ವೆರಡಕ್ಕು | ನೀಕಾರಣೆಂಬಂಥವಾಕನನುಭವ ವಿರಲಿ | ಶ್ರೀ ಕಾಂತ ಹರಿಯೇ 4 ಪೂವಿಲ್ಲ ಪಿತ ನಿನ್ನ | ಭಾವದಲಿ ಮೈ ಮರೆದುಸಾವಧಾನದಿ ಹರಿ ಪೊಗಳಿ | ಹಿಗ್ಗುವಂತೆಸಗೋಪಾವನಾತ್ಮಕ ಗುರೂ | ಗೋವಿಂದ ವಿಠ್ಠಲನೆನೀವೊಲಿದು ಪ್ರಾರ್ಥನೆಯ | ಓದಿ ಸಲಿಸುವುದೋ 5
--------------
ಗುರುಗೋವಿಂದವಿಠಲರು
ಪ್ರಕಾಶರೂಪಿ ವಿಠಲಾ ತೋಕನ್ನ ಸಲಹೋ ಪ ಅಕಳಂಕ ಚಾರಿತ್ರ | ನಿಖಿಲಾಗಮಸುವೇದ್ಯಪ್ರಕಟಿಸಿವನಲಿ ಜ್ಞಾನದಂಕುರವ ಹರಿಯೇ ಅ.ಪ. ಮಧ್ವಮತದಲಿ ದೀಕ್ಷೆ | ಶುದ್ಧ ಭಕುತಿ ಜ್ಞಾನಸಿದ್ದಿಸುವುದಿವನಲ್ಲಿ | ಮಧ್ವಾಂತರಾತ್ಮಾವಿದ್ಯೆಸಂಪದದಲ್ಲಿ | ಸ್ಪರ್ಧಿಸುವ ಮನಕಾಗಿಬುದ್ಧಿ ಪ್ರೇರಿಸು ಹರಿಯೆ ಸಿದ್ಧಮುನಿವಂದ್ಯಾ 1 ಕಾಮಾದಿ ಷಡ್ವೈರಿ | ಸ್ತೋಮವನೆ ಕಳೆಯುತ್ತನೇಮನಿಷ್ಠೆಯಲಿ ಮನ | ಕಾಮನೆಯ ಕೊಟ್ಟೂಪ್ರೇಮದಲಿ ಹರಿಗುರೂ | ಸ್ವಾಮಿ ಕಾರ್ಯವಗೈಸಿಕಾಮಿತಾರ್ಥದನಾಗೊ | ಕಾಮ ಪಿತ ಹರಿಯೇ 2 ಅಂಶದಲಿ ತನುವ್ಯಾಪ್ತಿ | ಸಾಂಶದೇವಾದಿಗಳುಸಂಸಾರ ನಿರ್ವಹಣೆ ಮಾಡಿಮಾಡಿಸುತಾಕಂಸಾರಿ ಪೂಜೆ ಎನೆ | ಶಂಸಿಸುತ ಯೋಗ್ಯರಲಿವಂಶ ಉದ್ಧರವೆಂಬ | ಅಂಶವನೆ ತಿಳಿಸೋ 3 ಕಾಕು ಜನಗಳ ಸಂಗ | ಓಕರಿಸುವಂತೆಸಗಿನೀಕೊಟ್ಟು ಸತ್ಸಂಗ | ಪ್ರಾಕ್ಕರ್ಮ ಕಳೆಯೋಲೌಕಿಕದಿ ಸತ್ಕೀರ್ತಿ | ನೀ ಕರುಣಿಸಿವನಲ್ಲಿಏಕಮೇವನೆ ಇದನೆ | ನಾ ಕೇಳ್ವೆ ಹರಿಯೇ 4 ಜೀವರಂತರ್ಯಾಮಿ | ಜೀವಕರ್ಮವವೆಸಗಿಆವಫಲ ದ್ವಂದ್ವಗಳ | ಜೀವಕರುಣಿಸುವನೇಭಾವುಕರ ಪಾಲಗುರು | ಗೋವಿಂದ ವಿಠ್ಠಲನೆಕಾವುದಿವನನು ಎಂಬ | ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ಪ್ರಾಣೇಶ ಹರಿ ವಿಠಲ | ಪೊರೆಯ ಬೇಕಿವಳಾ ಪ ನಿನಲ್ಲದಿನ್ನಿಲ್ಲ | ಪ್ರಾಣಾಂತರಾತ್ಮಾ ಅ.ಪ. ಸಾರ ಕೂಪದಿಂದ |ಕಾರುಣ್ಯ ಮೂರುತಿಯೆ | ಆರು ಅನ್ಯರ ಕಾಣೆನೀರ ಜಾಸನ ವಂದ್ಯ | ನಿರ್ಮಲಾತ್ಮಕನೇ 1 ಕನ್ಯೆಮಣಿ ಇವಳೀಗೆ | ನಿನ್ನ ನಾಮಾಮೃತದಬೆಣ್ಣೆಯನು ಉಣಿಸುತ್ತ | ಕಾಪಾಡೊ ಇವಳಾಚಿನ್ನುಮಯ ಶ್ರೀ ಹರಿಯೆ | ಸಮ್ಮೋದ ಪಾಲಿಸುತಚೆನ್ನಾಗಿ ಪೊರೆ ಇವಳ | ಅನ್ನಂತ ಮಹಿಮಾ 2 ಸಾಧು ಸತ್ಸಂಗವನು | ನೀ ದಯದಿ ಕೊಟ್ಟವಳಸಾಧನವ ಗೈಸುವುದೊ ಮಾಧವನೆ ದೇವಾ |ಆಧ್ಯಂತ ರಹಿತ ಹರಿ | ವೇದಾಂತ ವೇದ್ಯನೆಕಾದುಕೋ ಬಿಡದಿವಳ | ಮಧ್ವಮುನಿ ವಂದ್ಯಾ 3 ಕಾಮ ಜನಕನೆ ದೇವ | ಕಾಮಿತವ ಕರುಣಿಸುತನೇಮ ನಿಷ್ಠೆಯನಿತ್ತು | ನೀ ಮುದದಿ ದೇವಾ |ಪಾಮರಳ ಉದ್ಧರಿಸೋ | ಶ್ರೀ ಮನೋಹರ ಹರಿಯೆಸಾಮಜಾಸದ್ವಂದ | ಸಾಮ ಸನ್ನುತನೇ 4 ಕೇವಲಾನಂದವೆನೆ | ಶಾಶ್ವತದ ಸುಖಕಾಗಿಬಾಳ್ವ ಅಳವಡಿಸುತ್ತ | ಕಾವುದೋ ಇವಳಾ |ಗೋವಿಂದಂ ಪತಿಯೆ ಗುರು | ಗೋವಿಂದ ವಿಠ್ಠಲನೆಈ ವಿಧದ ಭಿನ್ನಪವ | ನೀವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ಬಂದೆನ್ನ ಮನಮಂದಿರದಲಿ ನಿಲ್ಲೊ | ಹೇ ಶ್ರೀನಿವಾಸ ಬಂದೆನ್ನ ಮನಮಂದಿರದಲಿ ನಿಲ್ಲೊ ಪ. ಇಂದಿರೇಶ ವೈಕುಂಠದಿಂದ ನೀ ಬಂದು ಈಗ ಎನ್ನ ಹೃದಯ ಕಮಲದಿ ಅ.ಪ. ಜಗದಂತರಾತ್ಮ ನಿರ್ಮಲಾತ್ಮ | ನಿರ್ಗತ ದುರಿತಾತ್ಮ ನಿಗಮಾದಿಗಳೊಂದ್ಯ ನೀ ನಿತ್ಯಾತ್ಮ | ಜೀವಂತರಾತ್ಮ ಸುಗುಣವಂತ ನಿನ್ನ ಬಗೆ ಬಗೆ ಮಹಿಮೆಯ ಪೊಗಳಬಲ್ಲೆನೆ ನಾ ಖಗವಾಹನನೆ 1 ಅರಿಯೇನೋ ಅನ್ಯರ ಹರಿ ಸರ್ವೇಶ | ಹೃತ್ಕಮಲದಿ ವಾಸ ಪರಿಹಾರಗೈಸೊ ಈ ಭವಕ್ಲೇಶ | ನಂಬಿದೆ ಸರ್ವೇಶ ಅರಘಳಿಗೆ ನಿನ್ನಗಲಿರಲಾರೆನೊ ಸಿರಿಸಹಿತದಿ ನಿನ್ನರಮನೆಯಿಂದಲಿ 2 ಇಂದು | ನೀ ರಕ್ಷಕನೆಂದು ಕರಕರೆಗೊಳಿಪುದು ಧರ್ಮವೆ ನಿಂದು | ನೀ ಕಾಯಲಿಬೇಕಿಂದು ಸರಿಯಲ್ಲವು ಈ ತೆರದಲಿ ತೊರೆವುದು ಶರಣ ರಕ್ಷಕನೆಂಬೊ ಬಿರುದು ಪೊತ್ತಿಲ್ಲವೆ 3 ಎಂತೆಂತು ಸಹಿಸಲಿ ಈ ಭವಕ್ಲೇಶ | ಜೀವಾಂತರವಾಸ ಕಂತುಪಿತ ಎಣಿಪರೆÀ ಎನ್ನಯ ದೋಷ | ಸರಿಯಲ್ಲ ಸುರೇಶ ಇಂತು ನಿನಗೆ ಒಪ್ಪಿಸಿದರೊ ಗುರುಗಳು ಚಿಂತಿತಾರ್ಥ ನಿನಗೆನ್ನ ತರ ತಿಳಿಯದೆ 4 ಬೆಟ್ಟದ ಒಡೆಯ ಬೇಗನೆ ಬಾರೊ | ಹೃತ್ಕಮಲದಿ ತೋರೊ ಶ್ರೇಷ್ಠ ಶ್ರೀ ಗುರುಗಳ ಕರುಣವ ಬೀರೊ | ಸಲಹುವರಿನ್ಯಾರೊ ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಪದಂಗಳ ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಬಾ ಬಾ ರಾಘವ ಬಾ ವೀರ ರಾಘವ ಪ ಮತ್ಸ್ಯರೂಪನಾಗಿ ಹೆಚ್ಚಿದ ದೈತ್ಯನ ಇಚ್ಛೆಯಿಂದಲಿ ಕೊಂದ ಅಚ್ಯುತರಾಯನೆ 1 ಕೂರ್ಮರೂಪನಾಗಿ ಅಮರರಿಗೊಲಿದು ನೀ ಕಾಮಜನಕ ಸುಪ್ರೇಮಾವನಿತ್ಯಂತೆ4 2 ವರಹರೂಪನಾಗಿ ಧರಣಿಯ ಚೋರನ ಶಿರವ ತಂದು ನೀ ಜಗವ ಪೊರೆದ್ಯಂತೆ 3 ದುರುಳ ರಕ್ಕಸನ ಕರುಳ ತೆಗೆದು ನಿನ್ನ ಕೊರಳೊಳಗಿಟ್ಯಂತೆ 4 ಚೆಲುವತನದಿ ಪೋಗಿ ಬಲಿಯದಾನವ ಬೇಡಿ ಕಲುಷ ಹರಿಸಿ ಅವನ ಪಾತಾಳಕ್ಕೊತ್ತಿದ್ಯಂತೆ 5 ಕೊಡಲಿಯ ಪಿಡಿಯುತ ದುಗುಡ ರಾಯರುಗಳ ಸೊ ಗಡು ಮುರಿದು ನೀ ಸಡಗರ ಪಟ್ಯಂತೆ 6 ಸೀತೆಗೋಸ್ಕರ ಪೋಗಿ ಸೇತುವೆಯನೆ ಕಟ್ಟಿ ಭೂತ ರಾವಣನ ಖ್ಯಾತಿಯಿಂದಲಿ ಕೊಂದ 7 ವಾರಿಜಾಕ್ಷಿಯರ ಕೂಡಿ ನೀರಾಟದೊಳು ಪೊಕ್ಕು ನೀರೆಯರ1 ಮನ ಅಪಹಾರಮಾಡಿದ ಕೃಷ್ಣ 8 ಚಿತ್ತಜಪಿತ ನೀನು ಬತ್ತಲೆಯೊಳು ಬಂದು ಉತ್ತಮ ಸ್ತ್ರೀಯರ ವ್ರತಗಳಳಿದ್ಯಂತೆ 9 ಸುಂದರ ವಾಜಿಯ ಚೆಂದಾದಿಂದೇರುತ ಮಂದಗಮನೆಯರ ನಂದವಳಿದ್ಯಂತೆ 10 ದೋಷರಹಿತ ನಮ್ಮ ಶೇಷವಿಠ್ಠಲನೆ ಬ್ಯಾಸರವಿಲ್ಲದೆ ಪೋಷಿಸಿ ಸಲಹಲು 11
--------------
ಬಾಗೇಪಲ್ಲಿ ಶೇಷದಾಸರು
ಬಾ ಹರಿ ಭಕುತರ ಭಯ ಪರಿಹರಿಸುತ ಸರಸಿಜ ಸದನೆಯರೊಡಗೂಡಿ ನಲಿಯುತ ಪ ನೀರೊಳು ಮುಳುಗಿ ಮೀನನೆಂದೆನಿಸಿ ಭಾರವ ಪೊತ್ತಿಹ ಕೂರ್ಮನೆ ಜವದಿ 1 ಕೋರೆಗಳಿಂದ ಧಾರುಣಿತಂದ ಕ್ರೂರನುದರ ಕರುಳ್ಹಾರವೆ ಚಂದ 2 ಮೂರಡಿ ಭೂಮಿಯ ಬೇಡುತ ಬಂದೆ ನಾಡೊಳು ಕೊಡಲಿಯ ಪಿಡಿಯುತ ನಿಂದೆ3 ಸೇತುವೆ ಕಟ್ಟುತ ಸೀತೆಯ ತಂದೆ ಪಾತಕಿ ಕಂಸನ ನಾಶವ ಗೈದೆ4 ಬುದ್ಧನೆಂದೆನಿಸಿದೆ ಶುದ್ಧಮೂರುತಿಯ ಮುದ್ದು ತೇಜಿಯ ನೇರುತ ಮೆರೆದವನೆ 5 ಬಾ ಮುರವೈರಿ ಬಾ ಬಾರೊ ಶೌರಿ ಭಾಸುರ ವಂದ್ಯ ಬಾ ಮುದದಿಂದ6 ಪಾದ ದೃಢದಿ ಭಜಿಪೆನೈ ಕಡಲ ಶಯನ ಕಮಲನಾಭ ವಿಠ್ಠಲನೆ 7
--------------
ನಿಡಗುರುಕಿ ಜೀವೂಬಾಯಿ
ಬಾಗಿಲನು ತೆಗಿಸಿ ದರುಶನವ ಕರುಣಿಸಿದೆಯೋ ಭೋಗ ನರಸಿಂಹಸ್ವಾಮಿ ಪ. ನಾಗಶಯನನೆ ದೇವ ಕರಿಗಿರಿ ನಿಲಯ ಹರಿ ಯೋಗಿ ಶ್ರೀಗುರು ಹೃದಯ ನಿಲಯ ಅ.ಪ. ಸಿರಿಯನ್ನೆ ತೊಡೆಯ ಮೇಲೆರಿಸಿಕೊಂಡು ನಗುತ ಪರಿಪರೀ ಸೇವೆಯನು ಭಕ್ತರಿಂ ಕೊಳುತ ಪರಮಾತ್ಮ ಪಂಚಾಮೃತದ ಅಭಿಷೇಕವನು ಎರೆಯುತಿರೆ ಕಂಡು ನಾ ಹರುಷಪಟ್ಟೆನೊ ಸ್ವಾಮಿ 1 ಸುರನದಿಯ ಜಲ ತಂದು ನಿನಗಭಿಷೇಕವನೆ ಎರೆದು ಪರಿಪರಿಯ ಪೂಜೆ ಅಲಂಕಾರವನೆ ಮಾಡಿ ತರತರದ ಷಡ್ರಸವ ಭೋಜನವಗೈಸುತಲಿ ವರ ಮಂಗಳಾರತಿಯನೆತ್ತಿದುದ ಕಂಡೆ 2 ಘನ್ನ ಮಹಿಮೆನೆ ಸ್ವಾಮಿ ಎನ್ನ ಬಿನ್ನಪ ಕೇಳಿ ಮನ್ನಿಸಿ ದರುಶನವ ಇನ್ನು ಕರುಣಿಸಿದೆ ನಿನ್ನ ಸಮರಿನ್ಯಾರೊ ಪನ್ನಗಶಯನನೆ ಧನ್ಯರೋ ನಿನ್ನ ಪದವ ನಂಬಿದವರು3 ಶಾಂತರೂಪವ ಧರಿಸಿ ಶಾಂತ ಮೂರುತಿ ಎನಿಸಿ ಅಂತರಂಗದಿ ನಿನ್ನ ಧ್ಯಾನಿಸುವರ ಸಂತೋಷಪಡಿಸುತಲಿ ಕಾಯ್ವ ಕಮಲಾಕಾಂತ ಅಂತರಂಗವ ತಿಳಿದು ಸಂತೈಸೊ ಎನ್ನ 4 ಪಾಪಿ ದೈತ್ಯನ ಕೊಂದು ಕೋಪಿಸದೆ ಭಕ್ತನೊಳು ಕಾಪಾಡಿದೆಯೊ ಪರಮಪ್ರೇಮದಿಂದ ಗೋಪಾಲಕೃಷ್ಣವಿಠ್ಠಲನೆ ಅದರಂದದಲಿ ಕಾಪಾಡೊ ಭಕ್ತರನು ಹೃದಯದಲಿ ನೆಲಸಿ 5
--------------
ಅಂಬಾಬಾಯಿ
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಾರೋ ಹೋಗುವ ಪ ಬಗೆ ಬಗೆ ಆಟವ ಕಲಿಸಿ ಒಲಿಸುವೆನು 1 ಮುಸುಕಿನೊಳಗೆ ಬಚ್ಚಿಟ್ಟುಕೊಂಬುವೆನು 2 ಶ್ರೀದವಿಠ್ಠಲನೆ ಬಂದರೆ ನಿನಗೆ | ಸಾದರದÀಲಿ ಸವಿಮಾತನ್ಹೇಳುವೆನು 3 ( ಇದೇ ಹಾಡು ಶಬ್ದ ಪಲ್ಲಟಗಳೊಡನೆ ರಂಗಯ್ಯ ರಂಗ ಬಾರೊ...ಮುಂತಾಗಿ ತಿರುಪತಿ.....ಪ್ರಕಟನೆಯಲ್ಲಿ ಬಂದಿದೆ.)
--------------
ಶ್ರೀದವಿಠಲರು
ಬಿಟ್ಹ್ಯಾಗೆ ಇರಲಿನ್ನೀ ಚರಣ | ರಂಗ ಪ. ವಿಠ್ಠಲನಾ ಪುಟ್ಟ ಚರಣ ಬಿಟ್ಟು ಗೋಕುಲ ಪುಂಡಲೀಕನಿಗೊಲಿಯುತ ಇಟ್ಟಿಗೆ ಮೇಲ್ಹೊಂದಿ ನಿಂತಂಥ ಚರಣ ಅ.ಪ. ಭಕ್ತರಿಗೊಲಿಯುವ ಚರಣಾ | ವೇದ ಉಕ್ತಿಗೆ ನಿಲುಕದ ಚರಣಾ ಹತ್ತಿ ಪಾರ್ಥನ ರಥ ಮತ್ತೆ ಭೀಷ್ಮನಿಗೊಲಿದು ಹಸ್ತದಿ ಚಕ್ರವ ಪಿಡಿದು ಬಂದಾ ಚರಣ 1 ಬಲಿಯನ್ನು ತುಳಿದಂಥ ಚರಣಾ | ಮೂರು ಇಳೆಯನಳೆದ ಪುಟ್ಟ ಚರಣ ಕುಲಕೋಟಿ ಉದ್ಧಾರಗೈವಂಥ ಗಂಗೆಯ ಚಲುವ ಉಂಗುಟದಲ್ಲಿ ಪಡೆದ ಕೋಮಲ ಚರಣ 2 ಹಸ್ತಿ ಕರೆಯೆ ಬಂದ ಚರಣಾ | ಲಕ್ಷ್ಮಿ ವತ್ತುವೋ ಮೃದುತಳ ಚರಣಾ ಚಿತ್ತದೆ ಚಿಂತಿಪ ಭಕ್ತರ ಮನದೈವ ತೆತ್ತಿಗನಾಗಿ ಐವರ ಪೊರೆದಾ ಚರಣ3 ಭೀಮ ತೀರಾ ವಾಸ ಚರಣಾ | ಭಕ್ತ ರಾಮಯ ಹರಿಸುವ ಚರಣಾ ಕಾಮಜನಕ ಪಾಂಡುರಂಗವಿಠ್ಠಲನೆಂದು ಪ್ರೇಮದಿಂ ಭಜನೆಗೊಂಬುವ ಸ್ವಾಮಿ ಚರಣಾ 4 ಬಿಟ್ಟಿರಲಾರೆ ನೀ ಚರಣ | ಮನದಿ ಕಟ್ಟಿ ಹಾಕೂವೆ ನಾ ನೀ ಚರಣ ದಿಟ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಚರಣ ಇಟ್ಟು ಹೃತ್ಕಮಲದಿ ಪೂಜಿಪೆ ನೀ ಚರಣ 5
--------------
ಅಂಬಾಬಾಯಿ
ಭೀಮಾ ತಟಗ ವಿಠಲ | ಕಾಪಾಡೊ ಇವಳಾ ಪ ಸನ್ನುತ ದೇವಾ | ಪ್ರಾರ್ಥಿಸುವೆ ಹರಿಯೇ ಅ.ಪ. ಮರುತದಲ್ಲಿಹಳು | ತರುಣಿ ಬಹು ಭಕ್ತಿಯಲಿಹರಿದಾಸ್ಯ ಕುಂಕ್ಷಿಪಳು | ಕರಿವರದ ದೇವಾ |ಗುರುಕರುಣ ಸ್ವಪ್ನದಲಿ | ಹರಿದಾಗಿ ಪಡೆದಿಹಳುತರಳೆಜ್ರಪತಿ ವರದ | ಪರಿಪಾಲಿಸಿವಳಾ 1 ಪಂಚ ಪಂಚಿಕೆಯ ಪ್ರ | ಪಂಚ ಸತ್ಯತ್ವವನುಪಂಚ ಭೇದಗಳರುಹಿ | ಕಾಪಾಡೊ ಹರಿಯೇ |ಅಂಚೆ ವಹ ಪಿತನೆ ಸ | ತ್ತರತ ಮತ ತಿಳಿಸುತ್ತಪಂಚರೂಪಾತ್ಮಕನೆ | ಕೈಪಿಡಿಯೊ ಇವಳಾ 2 ಭೋಗಗಳ ಉಂಬಾಗ | ಭೋಗಿರಥೀ ಪಿತನಜಾಗುಮಾಡದೆ ಸ್ಮರಿಪ | ಭಾಗ್ಯವನೆ ಕೊಟ್ಟೂ |ಆಗುಹೋಗುಗಳೆಂಬ | ದ್ವಂದ್ವ ಸಹನೆಯನಿತ್ತುನೀಗೊ ಭವಸಾಗರವ | ಕಾರುಣ್ಯಮೂರ್ತೇ 3 ಪತಿಯೇ ಪರದೈವವೆಂ | ಬತುಳ ಶುಭಮತಿಯಿತ್ತುಗತಿಗೋತ್ರ ನೀನೆಂದು | ಸತತ ಚಿಂತಿಸುತಾ |ಮತಿವರಾಂ ವರರಂಘ್ರಿ | ಶತಪತ್ರಸೇವೆಯನುರತಿಯಿಂದ ಗೈವಂಥ | ಮತಿನೀಡೊ ಹರಿಯೇ4 ಸಂತಾನ ಸಂಪತ್ತು | ಶಾಂತಿಪತಿ ನೀನಿತ್ತುಕಾಂತುಪಿತ ಸೇವೆನೈ | ರಂತರದಿ ಗೈವಾ |ಪಂಥದಲಿ ಇರಿಸು ಗುರು | ಗೋವಿಂದ ವಿಠ್ಠಲನೆಇಂತಪ್ಪ ಪ್ರಾರ್ಥನೆಯ | ಸಲಿಸೋ ಶ್ರೀ ಹರಿಯೇ5
--------------
ಗುರುಗೋವಿಂದವಿಠಲರು
ಭೀಮಾತಟ ಹರಿ ವಿಠಲ | ಪೊರೆಯ ಬೇಕಿವಳಾ ಪ ಸಾಮಸನ್ನುತ ಹರಿಯೆ | ನಿಸ್ಸೀಮ ಮಹಿಮಾ ಅ.ಪ. ಗುರು ಕರುಣ ಇವಳಿಗಿದೆ | ಮರಳಿ ಹರಿ ಗುರುಭಕ್ತಿನೆರೆ ವೃದ್ಧಿ ಗೈಸುತಲಿ | ಪೊರೆಯೊ ಇವಳಾ |ಕರುಣನಿಧಿ ನೀನೆಂದು | ಆರು ಮೊರೆಯ ನಿಡುವೆನಾಪರಿ ಪರಿಯಲಿಂದಿವಳ | ಕೈ ಪಿಡಿಯೆ ಹರಿಯೇ 1 ಸಜ್ಜನರ ಸಂಗ ಕೊಡು | ದುರ್ಜನರ ದೂರಿರಿಸುಅರ್ಜುನನ ಸಾರಥಿಯೆ | ಮೂರ್ಜಗಕೆ ಒಡೆಯಾ |ಬೊಜ್ಜೆಯಲಿ ಬ್ರಹ್ಮಾಂಡ | ಸಜ್ಜು ಗೊಳಿಸಿಹ ಹರಿಯೆ |ಅರ್ಜುನಾಗ್ರಜ ವಂದ್ಯ | ಸಜ್ಜನರ ಪಾಲಾ 2 ತರತಮದ ಸುಜ್ಞಾನ | ಹರಿಯ ಸರ್ವೋತ್ತಮತೆಕರುಣಿಸೋ ಇವಳೀಗೆ | ಪರಮ ಪಾವನ್ನಾ |ಗರುಡ ಗಮನನೆ ಗುರೂ | ಗೋವಿಂದ ವಿಠ್ಠಲನೆಮೊರೆಯ ಲಾಲಿಸಿ ಇವಳ | ಪೊರೆಯೊ ಶ್ರೀ ಹರಿಯೇ 3
--------------
ಗುರುಗೋವಿಂದವಿಠಲರು
ಭೂತೇಶನುತ ವಿಠಲ | ಕಾಪಾಡೊ ಇವನಾ ಪ ಓತ ಪ್ರೋತನು ಆಗಿ | ದಾತನೀನಿರುವೇ ಅ.ಪ. ಪಾದ | ದಾಸ್ಯವನೆ ಕಾಂಕ್ಷಿಸುವವಾಲಿಭಂಜನ ರಾಮ | ಪಾಲಿಸೋ ಇವನಾ 1 ತೈಜಸನೆ ನೀನು ಗುರು | ರಾಜರೂಪಿಲಿ ತೋರಿನೈಜೋಪದೇಶವನು | ಪೊಂದುವುದು ಎನುತಾ |ಮಾಜದಲೆ ಪೇಳಿರಲು | ವಾಜಿವದನನೆ ನಿನ್ನಬ್ರಾಜಿಷ್ಣು ನಾಮದಲಿ | ಅಂಕನವ ಗೈದೇ 2 ದಾಸ ದಾಸರ ಗುಣಾ | ದಾಸನೆಂದೆನಿಸುತ್ತಕೇಶವನ ಗುಣನಾಮ | ಸೂಸಿಕೊಂಡಾಡಿ |ಲೇಸಾದ ಆನಂದ | ಭಾಸಿಸುತ್ತಲಿ ಗುಹಾ ವಾಸನನು ಕಾಂಬಂಥ | ಮಾರ್ಗದನು ಆಗೋ 3 ಮಧ್ವಮತ ತತ್ವಗಳು | ಬುದ್ಧಿಯಲ್ಲಿ ಸ್ಛುರಿಸುತ್ತಶುದ್ಧಭಾವದಿ ಮನನ | ಸಿದ್ಧಿಸುತಲಿವಗೇ |ಅದ್ವೈತ ತ್ರಯಜ್ಞಾನ | ಶ್ರದ್ಧೆ ಭಕ್ತಿಯ ಉದಿಸೆಮಧ್ವರಮಣನೆ ಹರಿಯೆ | ಉದ್ಧಾರ ಮಾಡೋ4 ಸರ್ವಜ್ಞಾ ಸರ್ವೇಶ | ಸರ್ವಾಂತರಾತ್ಮಕನೆದರ್ಪಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೇ |ದುರ್ವಿ ಭಾವ್ಯನೆ ಗುರು | ಗೋವಿಂದ ವಿಠ್ಠಲನೆಅವ್ಯಾಜ ಕರುಣನಿಧಿ | ಭಿನ್ನಪವ ಸಲಿಸೋ5
--------------
ಗುರುಗೋವಿಂದವಿಠಲರು
ಭೂರಮಣ ರಘುರಾಮ ವಿಠ್ಠಲನೆ ನೀನಿವಳಭೂರಿ ಕರುಣದಲಿಂದ ಕಾಪಾಡಬೇಕೊ ಪ ಆರು ಇಲ್ಲವೊ ಗತಿಯು ನಿನ್ಹೊರತು ಶ್ರೀಹರಿಯೆಸಾರಿ ನಿನ್ನಯ ಪಾದವಾರಾಧಿಸುತ್ತಿಹಳಾ ಅ.ಪ. ತಾರತಮ್ಯ ಜ್ಞಾನ ಪಂಚಭೇದವನರುಹಿಪಾರು ಮಾಡೀಭವದ ಪರಿತಾಪವಾನೀರೇರುಹಾನಯನ ಕಾರುಣ್ಯ ಮೂರುತಿಯೆಪ್ರೇರಕನೆ ಜಗಕೆಲ್ಲ ಸರ್ವಾಂತರಾತ್ಮ 1 ಪತಿ ಸೇವೆಯಲಿ ಭಕುತಿ ಅತಿಶಯದಿ ಹರಿ ಭಕುತಿಮತಿಯು ತತ್ವಾರ್ಥಗಳ ಗ್ರಹಿಸುವಲಿ ರತಿಯೂಸತತ ವಿಷಯಾದಿಗಳು ನಶ್ವರವು ಎಂದೆನುತಮತಿಯಿತ್ತು ಇವಳೀಗೆ ಪಾಲಿಪುದು ವೀರಕುತಿ2 ಪ್ರಾಚೀನ ಕರ್ಮಗಳ ಯೋಚಿಸಲು ಎನ್ನಳವೆಕೀಚಕಾರಿ ಪ್ರೀಯ ಮೋಚಕನು ನೀನೇ |ಚಾಚಿ ಶಿರ ನಿನ್ನಡಿಗೆ ಯಾಚಿಸುವೆ ಶ್ರೀಹರಿಯೆಪಾಚ ಕಾಂತರ್ಯಾಮಿ ಕರ್ಮನಾಮಕನೆ 3 ಭವ ಬಂಧ ಕತ್ತರಿಸೊ ಹರಿಯೆ 4 ಕೃತ್ತಿವಾಸನ ತಾತ ಉತ್ತಮೋತ್ತಮ ದೇವಪುತ್ರಮಿತ್ರನು ನೀನೆ ಸರ್ವತ್ರ ಭಾಂಧವನೆ |ಪುತ್ರಿಯನು ಸಲಹೆಂದು ಪ್ರಾರ್ಥಿಸುವೆ ನಿನ್ನಡಿಗೆಆಪ್ತ ಗುರುಗೋವಿಂದ ವಿಠಲ ಮಮ ಸ್ವಾಮೀ 5
--------------
ಗುರುಗೋವಿಂದವಿಠಲರು
ಭ್ರಷ್ಟ ಸಂಕಲ್ಪನ್ನ | ಮಾಡದಿರೆಲೋ |ಇಷ್ಟ ದೈವವೆ ಎನ್ನ | ಕಷ್ಟದೊಳು ಹಾಕಿ ಪ ಖಗ ವರಧ್ವಜ ದಾಸಮಿಗಿಲಾಗಿ ಪೇಳ್ವೆನೆಂದ | ವಘಡಿಸೀ ನುಡಿಸೀಹಗರಣದಿ ಹರಿದಿನದಿ | ಸುಗುಣ ತಾ ಬರದಿರಲುಖಗಗಮನ ನಿನ್ವಚನ | ಲಘುವಾಗಲಿಲ್ಲೇ 1 ಅಪ್ಪ ವಿಜಯಾರ್ಯ ಪದ | ವಪ್ಪಿ ಪೂಜಿಸಿ ಪೋಗಿಚಿಪ್ಪಗಿರಿಯಲಿ ನೋಡೆ | ಒಪ್ಪಿದವ ಬರದೇಅಪ್ಪಾರ ಮನನೊಂದು | ಅರ್ಪಿಸಿಹೆ ನಿನ್ನಡಿಗೆಕೃಪ್ಪೆಯಿಂ ಬರಮಾಡೊ | ಗೊಪ್ಪ ಶಿಷ್ಯನ್ನಾ 2 ಮಾನಾಪಮಾನಗಳು | ಯೇನೊಂದು ನಿನ್ನೊಳಗೊಮಾನನಿಧಿಯೆ ಕೇಳೊ | ಮೌನಿ ವರದಾದೀನ ಜನಪಾಲ ಗುರು | ಗೋವಿಂದ ವಿಠ್ಠಲನೆಮಾನ್ಯ ಮಾನದನೆಂಬ | ಸೂನೃತವ ಸಲಿಸೋ 3
--------------
ಗುರುಗೋವಿಂದವಿಠಲರು