ಒಟ್ಟು 96 ಕಡೆಗಳಲ್ಲಿ , 40 ದಾಸರು , 88 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಗವಂತನ ಸಂಕೀರ್ತನೆ2ಅಷ್ಟರೊಳಗೆ ಕೃಷ್ಣ ಬಂದನೆಸೃಷ್ಟಿಗೊಡೆಯ ದೇವನು ಪಜಗದುದರಜಾÕನಿಗಳ ಧ್ಯಾನಕೆಗೋಚರಾಗೋಚರನಾಗುತ ಅಪಅಂದಿಗೆ ಕಾಲ್ಗೆಜ್ಜೆ ಸರಪಣಿಬಂದಿ ಕಂಕಣ ತೋಳಬಾಪುರಿಮಂದಹಾಸ ಮುಂಗುರುಳು ಮುಖದಸುಂದರಾಂಗನ ಹುಡುಕುತಿರಲು 1ತರಳರೊಡನೆ ಕೂಡಿ ಕೃಷ್ಣಮುರಳಿನಾದ ಗೇಯ್ಯುತಿರಲುಸರಸಿಜಾಕ್ಷನ ಕಾಣದೆ ತವಕಿಸಿಹರಿಯ ಹುಡÀುಕುತಿರಲೆಶೋದೆ 2ವತ್ಸಗಳ ಬಾಲಗಳನೆ ಪಿಡಿದುಸ್ವೇಚ್ಛೆಯಿಂದ ನಲಿಯುತಿರಲುಅಚ್ಚುತನೆಲ್ಲೊ ಕಾಣೆನೆನುತಕೃಷ್ಣ ಕೃಷ್ಣನೆಂದು ಕರೆಯೆ 3ಮನೆ ಮನೆಗಳ ಪೊಕ್ಕು ಪಾಲುಮೊಸರು ಬೆಣ್ಣೆ ಮೆಲುವೆನೆನುವವನಿತೆಯರಸಂತೈಸಿಕಳುಹಿತನಯನೆಲ್ಲೆಂದುಡುಕುತಿರಲು 4ಬಂದನು ಬಲರಾಮ ಭಯದಿಇಂದಿರೇಶ ಮಣ್ಣು ಮೆಲುವನೆಂದು ಪೇಳೆ ಬಾಯ ತೆಗಿಸಿಕಂಡು ವಿಶ್ವವ ವಿಸ್ಮಯಗೊಳುತಿರೆ 5ಸುರಗಂಧರ್ವರು ನೆರೆದರಂಬರದಿಪರಮಧನ್ಯಳೆಶೋದೆ ಎನುತಹರಿಯ ಗುಣಗಳನ್ನೆ ಸ್ತುತಿಸಿಹರುಷದಿಂದ ನಲಿಯುತಿರಲು 6ಕಮಲಸಂಭವ ಜನಕನನೆತ್ತಿವಿನಯದಿಂದ ಮುದ್ದಿಸುತ್ತಿರೆಕಮಲನಾಭ ವಿಠ್ಠಲನ ಸಿರದಿಕಮಲಕುಸುಮಮಳೆಗರೆದರು7ಮಂಗಳಂ ಜಯ ಮಂಗಳಂಶುಭಮಂಗಳಂ ಶ್ರೀ ಕೃಷ್ಣಗೇ
--------------
ನಿಡಗುರುಕಿ ಜೀವೂಬಾಯಿ
ಮಂಗಲಾ ಸ್ವಸಿದ್ದ ಸಿದ್ಧಗೆ ಮಂಗಲಾ ಸ್ವಶುದ್ಧ ಶುದ್ಧಗೆ |ಮಂಗಲಾ ಸ್ವಬುದ್ಧ ಬುದ್ಧಗೆ ಸದ್ಗುರೇಂದ್ರನಿಗೆಜಯ ಮಂಗಲಾಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಮಧ್ಯಾವಸಾನವಿಲ್ಲದೆ ನಾದ ಬಿಂದು ಕಳಾ ವಿಹೀನಗೆ |ವೇದ ವೇದಾಂತದ ವಿಚಾರವ ತಿಳಿದ ನಿಶ್ಚಲಗೆ |ಸಾಧು ಸಂತ ಮಹಾನುಭವಿಗಳು ಸಾಧಿಸುವವರಬೋಧ ಬೋಧಗೆ | ವಾದ ಮನಬುದ್ಧ್ಯಾದಿ ಉದಯಾದಿಕವ ಲಕ್ಷಿಪಗೆ1ವಿಶ್ವತೋ ಮುಖ ವಿಶ್ವನೇತ್ರನು ವಿಶ್ವಪಾಣಿಪಾದಶೀರಿಷ | ವಿಶ್ವದೊಳಹೊರಗೇಕ |ಮಯನಾ ಸೂತ್ರನು ಮಣಿಯಂತೆ | ವಿಶ್ವವನ್ನುದ್ಧರಿಸ-ಲೋಸುಗ ವಿಶ್ವದೊಳಗವತರಿಸಿ ಸಾಕ್ಷಾದೀಶ್ವರನುಕಲಿಯುಗದಿ ವಿಶ್ವಾಮಿತ್ರ ಗೋತ್ರದೊಳು2ಪರಮಪುರುಷನು ಸ್ವಪ್ರಕಾಶನು ನರಾಕೃತಿಗೆತಾ ಬಂದು ಶಿಂಧಾಪುರದಿ ಗುರುನಾಥನು-ದರದಿ ಕರಣಿಕನ್ವಯದಿ | ಸರಸ ಲೀಲಾ ನಟನೆನಟಿಸುತ ತೆರಳಿ ಭ್ರಮರಾಪುರಕೆ ಸದ್ಗುರುವರಕೃಪೆಯತಾ ಪಡೆದು ಜಗದೊಳು ಖ್ಯಾತಿ ಪಡೆದಂಗೆ3ಅಂತು ಇಂತೆನಬಾರದಾ ನಿಶ್ಚಿಂತ ರೂಪನು ಬಳಿಕ | ಸಂತಮಹಾಂತನು ಸ್ತುತಿಸಲಾತ್ಮ ಸುಬೋಧ ಬೋಧಿಯಲಿ ||ಅಂತರಂಗದ ಭ್ರಮೆಯನಳಿದೇಕಾಂತ ಭಾವಿಕ ಭಕ್ತರಿಗೆ ವಿ-ಶ್ರಾಂತವಾದ ಸ್ವ-ಪದದೊಳುದ್ಧರಿಸಿದಾತಂಗೆ4ಸ್ಪರ್ಶ ದರ್ಶನದಿಂದೆ ಝಗ ಝಗ ಧರಿಸುತಲಿ ನಾನಾ ವಿ-ಚಿತ್ರಾಚರಣವನು ಚರಿಸುತ್ತ ಸದ್ಗುರು ರಾಯ ಕಡೆಯಲ್ಲಿ,ಪರಮಹಂಸಾಶ್ರಮವ ಕೈಕೊಂಡಿನಿತುಕೆಲಕಾಲದಲಿ ಶಿಂಧಾಪುರದಿಸ್ವ-ಸ್ಥಾನ ದೊಳು ಸಹಜಸಮಾಧಿಸ್ಥಳದಲ್ಲಿ5ಶಾಲಿವಾಹನ ಶಕೆಯ ಶತಕತಿ ಮೇಲೆ ಐವತ್ತಾಗೆ ಮೂರನು |ಕಾಲು ದಕ್ಷಿಣ ಅಯನ ಸಂವತ್ಸರ ವಿರೋಧಿಕೃತು |ಕಾಳ ದ್ವಿತಿಯಾಮಾಸ ಆಶ್ವೀನ ಮೇಲೆ ಶಿವ ಬುಧವಾರಕರ್ಣವಿಶಾಲಿ ಗರ್ಜಾ ಭರಣೆ ಪ್ರಥಮಪ್ರಹರಸಮಯದೊಳು6ಆ ಸುದಿನದೊಳಗಾ ಮಹಾ ಸಂತೋಷ ಕಾಲದಿಸುರರುಪೂಮಳೆ ಸೂಸುತಿರೆ ಬ್ರಹ್ಮಾದಿಕರು ಸ್ವಸುಖದಿನಲಿದಾಡಿ |ಏಸುಕಾಲದಸುಕೃತಫಲವಿದು ವಸ್ತುಕಣ್ಣಲಿ ಕಂಡೆವೈ ಉಲ್ಲಾಸವೆನುತ ಸಮಸ್ತ ಸುರಜಯ ಘೋಷ ಮಾಡುತಲಿ7ನಿಜ ಪರಂಧಾಮಕ್ಕೆ ಸದ್ಗುರು ಬಿಜಯಮಾಡಿದನೆಂಬ ಮಹಾಶಯ | ಸುಜನರೆಲ್ಲರುಬಲ್ಲರಿದನು ಲೋಕಕಿದು ಸತ್ಯ || ತ್ರಿಜಗವೇಪುಸಿಯೆಂಬ ಮಹಾತ್ಮಗೆ ತ್ಯಜನವೆಲ್ಲಿ ಉದಾರ ಮಹಿಮಗೆ |ನಿಜವು ಜಲ ದೊರೆತಿಲ್ಲ ತೋರಲು ಕರಗಲೆರಡಹುದೇ8ನಿರಾಕಾರಾಕಾರ ವ್ಯಕ್ತಿಗೆಚರಣಒಂದೆ ಭೇದ ಮಿಥ್ಯೆಯು |ಚರಣಯುಗಕೆರಡುಂಟೆ ಈಪರಿಶರೀರ ಶರಣಂಗೆ ||ಹಿರಿದ ಕಿರಿದ ದರದರ ಹಂಗನು ಹರಿದು ಬಿಸುಟುವಶ್ರೀ ಮಹಾಶಂಕರಾನಂದ ಸರಸ್ವತೀ ಯತಿವರ್ಯ ಗುರುವರಗೆಜಯ ಜಯ ಮಂಗಲಾ ಜಯ ಜಯ ಮಂಗಲಾ9
--------------
ಜಕ್ಕಪ್ಪಯ್ಯನವರು
ಮಾಧವಮಧುಸೂದನ- ಯಾದವಕುಲರನ್ನ ಯ-|ಶೋದೆ ಕರೆದಳು ಬಾರೆಂದು- ಮುದ್ದಿಸಿ ಮಗನ ಪಸಂಗಡಿಗರನೆಲ್ಲ ಬಿಟ್ಟು ಬಾರೈ ಚೆಲುವ |ಮುಂಗೈಯವಾಕು ಬೆರಳ ಹೊನ್ನುಂಗರ ||ಝಂಗಿಪ ಹುರಿಗೆಜ್ಜೆ ಉಡೆದಾರವನು ಕಂಡು |ಅಂಗನೆಯರು ನಿನ್ನನೊಯ್ವರೊ ||ಕಂಗಳ ಸಿರಿಯೆ ನೀ ಕಲ್ಪವೃಕ್ಷವೆ ಎಂದು |ಡಿಂಗರಿಗರು ಕಂಡರೆ ಬಿಡರೊ ನಿ- ||ನ್ನಂಘ್ರಿಯ ಮೇಲೆ ನೊಸಲನಿಡುವೆ ಕೃಷ್ಣ |ಕಂಗಳ ಸಿರಿಯೆ ಬಾರೋ- ರಂಗಯ್ಯ 1ಬಾಲಕರೊಡನಾಟ ಸಾಕು ಬಾ ಬಾರೈಯ |ನೀಲಾಂಗ ನಿನ್ನ ಮುಂದಲೆ ಮುತ್ತಿನರಳೆಲೆ ||ಕೀಲುಮಾಗಾಯಿ- ಮಾಣಿಕ ಪುಲಿಯುಗರ ಕಂಡು |ಸೋಲ್ವರೊ ನಿನಗೇಸೋ ಸೋಗೆಯರು ||ಶ್ರೀಲೋಲ ನಿನ್ನಲಿ ಕಂಸನ ತುಂಬಿದೊ-|ಡ್ಡೋಲಗದೊಳು ರಕ್ಕಸರು ಪಂಥವನಾಡೆ ||ವೀಳ್ಯವ ಪಿಡಿದೆ ಕೊಲುವೆನೆಂದು ನಿನ್ನಯ |ಕಾಲಿಗೆ ಎರಗುವೆ ಬಾರೊ-ರಂಗಯ್ಯ 2ಬೊಮ್ಮದ ಮರಿಯೆ ವಿಶ್ವವನೆಲ್ಲ ಹೃದಯದೊ-|ಳೊಮ್ಮೆ ತೋರುವನೆಂದು ಕಂಡು ನಾ ಬಲ್ಲೆ ||ಎಮ್ಮ ಮನಕೆ ಅಹಲ್ಲಾದನು ನೀನೆ |ಉಮ್ಮಯದಿಂ ಭಾಗವತರ ಪಾಲಿಸುತಿಪ್ಪ-||ಗಮ್ಯಗೋಚರ ಸಿರಿಪುರಂದರವಿಠಲ ತೊರೆ-|ದಮ್ಮೆಯ ಕೊಡುವೆನು ಬಾರೋ-ರಂಗಯ್ಯ 3
--------------
ಪುರಂದರದಾಸರು
ರಾಮ ಗೋವಿಂದ ಹರೇ ಕೃಷ್ಣ ಗೋವಿಂದದಾಮೋದರಹರಿವಿಷ್ಣು ಮುಕುಂದಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಮಚ್ಛವತಾರದೊಳಾಡಿದನೆ -ಮಂದರಾಚಲ ಬೆನ್ನೊಳಾಂತವನೆಅಚ್ಛ ಸೂಕರನಾಗಿ ಬಾಳಿದನೆ - ಮದಹೆಚ್ಚಿ ಹಿರಣ್ಯಕನ ಸೀಳಿದನೆ1ಬಲಿಯೊಳು ದಾನವ ಬೇಡಿದನೆ - ಕ್ಷಾತ್ರಕುಲವ ಬಿಡದೆ ಕ್ಷಯ ಮಾಡಿದನೆಜಲನಿಧಿಗೆ ಬಿಲ್ಲ ಹೂಡಿದನೆ - ಕಾಮ-ಗೊಲಿದು ಗೊಲ್ಲತಿಯೊಳಾಡಿದನೆ2ಸಾಧಿಸಿ ತ್ರಿಪುರರ ಗೆಲಿದವನೆ - ಪ್ರತಿ-ವಾದಿಸಿ ಹಯವೇರಿ ನಲಿದವನೆಭೇದಿಸಿ ವಿಶ್ವವ ಗೆಲಿದವನೆ - ಬಾಡದಾದಿಕೇಶವರಾಯ ನಮಗೊಲಿದವನೆ3
--------------
ಕನಕದಾಸ
ಶ್ರೀ ಕೇಶವ ತೀರ್ಥ ಸ್ತೋತ್ರ107ಸೂರಿಪ್ರಾಪ್ಯ ಘೃಣಿಶೌರಿಶ್ರೀರಮಾಪತಿ ಪ್ರಿಯರುಸೂರಿವರ ಬ್ರಹ್ಮಣ್ಯ ತೀರ್ಥ ಆರ್ಯರ ಸುಸರೋಜಕರಜಾತ ಜಗತ್ಖ್ಯಾತ ವ್ಯಾಸರಾಜಾರ್ಯರಹಸ್ತಸುವ್ರತ ನಿಜೋತ್ಪನ್ನ ಕೇಶವ ತೀರ್ಥಾರ್ಯರ್ಗೆ ವಂದೇ ಪಮುಖ್ಯಪ್ರಾಣಪವಮಾನ ಸುರಮಾತರೀಶ್ವಗುರುಪ್ರದ್ಯುಮ್ನ ಅನಿರುದ್ಧ ಪುರುಷ ನರಸಿಂಹ ಶ್ರೀಶಪ್ರಜ್ಯೋತಿರ್ಮಯ ಉಗ್ರವೀರ ವಿಶ್ವವ್ಯಾಪಿ ವಿಷ್ಣುವುಮೃತ್ಯು ಮೃತ್ಯು ಸ್ತಂಭದಿಂ ಬಂದು ಪ್ರಹ್ಲಾದನ್ನ ಪೊರೆದ 1ನರಸಿಂಹನಾಜೆÕಯಿಂ ಪ್ರಹ್ಲಾದ ಸಿಂಹಾಸನವೇರೆನೆರೆದಿದ್ದ ಸುಮನಸರು ಹರಿಭಕ್ತ ಜನರುಸೂರಿಗಳುಆ ವೈಭವ ಕಂಡುಕೇಳಿಜಯಪರಾಕ್ಪರಾಕೆಂಬ ದಿವ್ಯಾನುಭವಜ್ಞಾನಿಕೇಶವ ತೀರ್ಥ2ಹಿಂದಿನ ಪ್ರಹ್ಲಾದಇಂದುವ್ಯಾಸಮುನಿರಾಜರಾಗಿದುಸ್ತರ್ಕ ಧ್ವಂಸಕರ ತರ್ಕತಾಂಡವ ಬೋಧಿಸಿಹಿತಕರ ನ್ಯಾಯ ಪೀಯೂಷವ ಉಣಿಸಿ ಆಹ್ಲಾದಚಂದ್ರಿಕಾಸುಖ ನೀಡಿ ಯತ್ಯಾಶ್ರಮ ಇತ್ತರಿವರ್ಗೆ 3ಶ್ರೀವ್ಯಾಸರಾಯರು ಅನುಗ್ರಹಿಸಿ ಕೇಶವ ತೀರ್ಥದಿವ್ಯ ನಾಮಾಂಕಿತವ ಪ್ರಣವಾದಿ ಮಂತ್ರ ಉಪದೇಶನಿವ್ರ್ಯಾಜ ನಿಶ್ಚಲ ಭಕ್ತಿಮಾನ್ ವಿನಯಸಂಪನ್ನ ಈಶಿಷ್ಯನಿಗೆ ಕೊಟ್ಟದ್ದು ಸಜ್ಜನರು ಹೊಗಳಿದರು 4ಶ್ರೀರಂಗದಲಿ ಉತ್ತರಾರಣ್ಯ ಬೀದಿಯಲ್ಲಿಹಶ್ರೀ ಕೃಷ್ಣಮಂದಿರದಿ ಶ್ರೀವ್ಯಾಸರಾಯ ಮಠದಿಚಾರುತರ ಚತುರ್ವಿಂಶತ್ ವಿಷ್ಣು ಮೂರ್ತಿಗಳುಂಟುತತ್ರಗೋಲಕ ಕ್ರಮದಿ ಶ್ರೀಹರಿಯ ಚಿಂತಿಪರು 5ಬ್ರಹ್ಮ ಗಾಯತ್ರಿ ಮನು ಇಪ್ಪತ್ತು ನಾಲ್ಕಕ್ಷರದಲಿತಂ ಆದಿ ಯಾತ್ ಅಂತ ಒಂದೊಂದರಲಿ ಒಂದುಹರಿಯಅಮಲ ಸುಪೂರ್ಣ ಕೇಶವಾದಿ ಕೃಷ್ಣಾಂತರೂಪಆ ಮೊದಲು ತಂ ಅಲ್ಲಿ ತಾರಕೇಶವನು ಧ್ಯಾತವ್ಯ 6ಬಲದಕೆಳಗಿನ ಕರದಿಪದ್ಮ ಮೇಲೆ ಶಂಖಜ್ವಲಿಪ ಚಕ್ರವು ಮೇಲಿನ ಎಡದ ಹಸ್ತದಲ್ಲಿಕೆಳಗಿನ ಎಡಕರದಿ ಗದೆಯ ಹಿಡಿದಿಹಜಲಜಸಂಭವ ಭವಾದ್ಯರ ಸ್ವಾಮಿ ಕೇಶವನು 7ದಶಪ್ರಮತಿ ಸರಸೀರುಹನಾಭ ನರಹರಿಅಸಮಮಾಧವಅಕ್ಷೋಭ್ಯ ಜಯವಿದ್ಯಾಧಿರಾಜಅಸಚ್ಛಾಸ್ತ್ರಗಿರಿಕುಲಿಶ ರಾಜೇಂದ್ರ ಜಯಧ್ವಜಶ್ರೀಶವಶಿ ಪುರುಷೋತ್ತಮ ಬ್ರಹ್ಮಣ್ಯ ವ್ಯಾಸತೀರ್ಥ 8ಹಂಸವಿಧಿ ಸನಕಾದಿಗಳಾರಭ್ಯ ಸನಾತನಸುಶೀಲ ಈಗುರುಪರಂಪರೆಯಲಿ ವ್ಯಾಸಮುನಿಸರೋಜ ಕರಜಾತ ಕೇಶವ ತೀರ್ಥರು ಹೀಗೆಕೇಶವನ್ನ ಧ್ಯಾನಿಸಿ ಒಲಿಸಿ ಕೊಂಡದ್ದು ಸಹಜ 9ಹರಿಪ್ರೀತಿ ಸಮರ್ಪಕ ಯತ್ಯಾಶ್ರಮ ಧರ್ಮಗಳಚರಿಸುತಗುರುಸೇವಾರತರಾಗಿ ಇರುತಿಹಬರುವ ಶಿಷ್ಯರಿಗೆ ಸೌಲಭ್ಯ ವಾತ್ಸಲ್ಯ ನೀಡುತಸೇರಿದರು ಪರಮತಿ ವೇಲೂರೆಂಬ ಕ್ಷೇತ್ರವನ್ನು 10ಶಲ್ಯ ರಾಜನ್ನ ಜ್ಞಾಪಿಸುವ ಶುಕವನ ಕ್ಷೇತ್ರದಿಂಒಳ್ಳೆಯ ರಸ್ತೆ ಹದಿನೈದು ಕ್ರೋಶ ದೂರದಿ ಇಹುದುಪ್ರಹ್ಲಾದ ವರದ ನಾರಸಿಂಹ ನಾಮಗಿರಿ ದೇವಿಬಲಜ್ಞಾನರೂಪ ಮಾರುತಿ ಇರುವ ನಾಮಕಲ್ಲು 11ನಾಮಶೈಲದಿಂದ ರಂಗ ತಾನೇ ತೋರಿದ ವೇಂಕಟರಮಣ ಪಶುಪತಿಕ್ಷೇತ್ರ ಕರೂರಿಗೆ ಹೋಗುವರಮಣೀಯಮಾರ್ಗಮಧ್ಯದಲ್ಲಿಯೇ ಇರುತಿಹವುಪರಮತಿ ವೇಲೂರು ಸುಪುಣ್ಯ ಕಾವೇರಿಯು 12ಸರ್ವಸುಗುಣಾರ್ಣವನುಅನಘಸರ್ವೋತ್ತಮನುಸರ್ವಕರ್ತಾಗಮೋದಿತನು ಜಿಜ್ಞಾಸ ಜನ್ಯ ಜ್ಞಾನಸಂವೃದ್ಧಿ ಸಾಧನಾನುಕೂಲ ಚತುರ್ವೇದಿ ಮಂಗಳದಿವ್ಯ ಪರಮತಿಯು ಅಲ್ಲಿ ಲೌಕೀಕರೇ ತುಂಬ 13ಸಪರಮತಿ ಸಮೀಪದಲ್ಲೆ ಚನ್ನಕೇಶವ ವೇಲಿಪುರವುಂಟು ಅದನ್ನ ವೇಲೂರೆಂದು ಹೇಳುವರುಪರಮತಿ ವೇಲೂರು ಕಾವೇರಿ ಪೋಷಿತವು ತೀರಪರಮಭಾಗವತಋಷಿ ಸಂಚಾರ ವಾಸಸ್ಥಾನ14ರಸಪೂರಿತ ಮಾವು ತೆಂಗು ಕದಲೀಫಲವೃಕ್ಷಬಿಸಜಮಲ್ಲಿಗೆ ಜಾಜಿಕುಸುಮಪರಿಮಳವುಹಂಸ ಪಾರಾವತ ತಿತ್ತರಾಶುಕ ಇಂಥಾ ಸುಪಕ್ಷಿಶ್ರೀಶನಂಘ್ರಿ ಸಂಬಂಧಿ ವರಜಾಯುಕ್ ಕಾವೇರೀ ಸರಿತ 15ಶ್ರೀಮನೋರಮ ಕೇಶವನ್ನ ಆರಾಧಿಸಿ ಧ್ಯಾನಿಸಲುಈ ಮನೋಹರ ಶಾಂತ ಸುಪವಿತ್ರ ಕ್ಷೇತ್ರವೆಂದುತಮ್ಮಯ ಬಾಹ್ಯ ಚಟುವಟಿಕೆಗಳ ನಿರೋಧಿಸಿಸಮೀರಸ್ಥ ಶ್ರೀಹರಿಯ ಧ್ಯಾನಾದಿರತರಾದರು 16ಯುಕ್ತಕಾಲದಿ ಈ ಸಂನ್ಯಾಸರತ್ನ ಕೇಶವಾರ್ಯರುಭಕ್ತಿವೈರಾಗ್ಯ ಯುಕ್ ಜ್ಞಾನ ಸಂಪನ್ನ ಶ್ರೀಹರಿಯಚಿಂತಿಸುತ ತ್ರಿಧಾಮನ ಪುರವನ್ನ ಯೈದಿದರುವೃಂದಾವನದಲ್ಲಿ ಒಂದಂಶದಲಿ ಇರುತಿಹರು 17ಕಾಲಧೀರ್ಘದಲಿ ಗ್ರಾಮಜನ ಬದಲಾವಣೆಯಿಂಎಲ್ಲಿ ವೃಂದಾವನ ಸ್ಥಾನ ಇದೆ ಎಂದು ಸರಿಯಾಗಿಹೇಳುವವರು ಸುಲಭದಿ ದೊರಕುವುದು ಶ್ರಮತಿಳಿದವರ ಸಹಾಯದಿಂ ಗುರುದಯದಿ ಸಾಧ್ಯ 18ಸದಾಪಾಣಿ ಭೀಮಸೇನ ಆರಾಧ್ಯ ಶ್ರೀಕೃಷ್ಣನು ಮತ್ತುಪದ್ಮಾಲಯಾಪತಿ ಪುಂಡರೀಕಾಕ್ಷನ್ನು ಶ್ರೀವಿಶ್ವನ್ನುಮಧ್ವಸ್ಥ ಪರಮಾತ್ಮನ್ನು ಸ್ಮರಿಸಿ ವೃಂದಾವನವಸಂದರ್ಶನ ಮಾಡಿ ಸೇವಾ ಸ್ವಗುರೂಪದೇಶವಿಧಿ19ಸ್ಮರಣ ದರ್ಶನ ಪ್ರದಕ್ಷಿಣ ನಮನ ಕೀರ್ತನಶಾಸ್ತ್ರಾಧ್ಯಯನ ಪ್ರವಚನ ಭಕ್ತಿಯಿಂದಲಿ ಪೂಜಾಪರಿಶುದ್ಧ ನೈವೇದ್ಯ ಎಷ್ಟೆಷ್ಟು ಸಾಧ್ಯವು ಅಷ್ಟುಹರಿಗುರು ಪಾದೋದಕ ಶುಭದ ಸರ್ವಾಭೀಷ್ಟದ 20ಆದರದಿ ಈ ಸ್ತೋತ್ರ ಪಠನ ಶ್ರವಣ ಮಾಳ್ಪರ್ಗೆಭಕ್ತಿಮೇಧಆಯುಷ್ಯ ಆರೋಗ್ಯ ಸೌಭಾಗ್ಯಗಳೀವಪದ್ಮಜನಪಿತನು ಶ್ರೀ ಪ್ರಸ್ನನ ಶ್ರೀನಿವಾಸನುವಂದೇ ವಿಧಿಮಧ್ವ ವ್ಯಾಸಮುನಿ ಕೇಶವಾರ್ಯಾಂತಸ್ಥ 21|| ಶ್ರೀ ಶ್ರೀ ಕೇಶವ ತೀರ್ಥ ಸ್ತೋತ್ರ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಸನ್ನ ಶ್ರೀನಿವಾಸದಾಸರ ಶ್ರೀಹರಿ ಪ್ರಾದುರ್ಭಾವಗಳುಪ್ರಸನ್ನ ಶ್ರೀ ಮತ್ಸ್ಯಾವತಾರ4ಲೀಲಾವತಾರನೇ ಪ್ರಳಯಾಬ್ದಿ ಸಂಚರನೇಮಾಲೋಲ ಸುಖಚಿತ್ ತನು ಮತ್ಸ್ಯರೂಪಬಾಲಾರ್ಕ ಕೋಟ್ಯಮಿತ ಜ್ಯೋತಿರ್ಮಯ ಸುಂದರನೇಕಾಲಗುಣದೇಶ ಅಪರಿಚ್ಛಿನ್ನ ಪೂರ್ಣ ಸುಗುಣಾರ್ಣವನೇ ಶರಣು ಪಪ್ರಳಯದಲಿ ಭೂರಾದಿ ಲೋಕಂಗಳುಮುಳಗಿರಲು ಹುಯಗ್ರೀವನಾಮ ದಾನವನುಸೆಳೆದು ವೇದಗಳ ತನ್ನೊಳ್ ಅಡಗಿಸಿದ್ದವನಸೀಳ್ದಿ ನೀ ಬಂದು ವೇದೋದ್ಧರನೇ ಮತ್ಸ್ಯ 1ಗೋವಿಪ್ರಸುರ ಸಾಧು ಜನರ ವೇದಂಗಳ-ಕಾವಸರ್ವೇಶ್ವರನೇ ಪುರುಷಾರ್ಥದಾತಸರ್ವರಿಗೂ ಸುಖವೀವುದು ನಿನ್ನ ಸುಚರಿತ್ರೆಶ್ರೀವರನೇ ಮತ್ಸ್ಯರೂಪಿಯೇ ಶರಣು ಶ್ರೀ ಕೃಷ್ಣ 2ಹಂಸ ಐರಾವತ ತಿತ್ತಿರಾ ಶುಕಗಳುಈ ಪಕ್ಷಿಗಳಲ್ಲಿ ತರತಮ ಉಂಟುಸುಸುಖ ಐಶ್ವರ್ಯೋನ್ನಾಹ ಅದರಂತೇವೇಈ ಸುನುಡಿಗಳ ಪಠನ ಮಾಳ್ಪ ಸುಜನರಿಗೆ 3ಗುರುರ್ಗುರ್ರೋಗುರುಮನುಶುಕಮಧ್ವಾಂತಸ್ಥಪರಮಾತ್ಮಹರಿವಿಷ್ಣೋ ಉದ್ದಾಮಸಾಮಅರದೂರಅನಂತೋರು ನಿಜಶಕ್ತಿ ಪರಿಪೂರ್ಣಉರು ಸುಗುಣ ನಿಧಿಯೇ ಶಫರಿರೂಪ ಮಾಂಪಾಹಿ 4ಸರ್ವೋತ್ತಮನು ನಾರಾಯಣನೇ ಎಂದರಿತುದ್ರವಿಡ ದೇಶಾಧಿಪನು ಸತ್ಯವ್ರತರಾಯಸುವಿವೇಕದಿ ನಿನ್ನ ಕುರಿತು ತಪವಚರಿಸಿದನುಭಾವಶುದ್ಧನು ಸಲೀಲಾಶನ ದೃಢವ್ರತನು5ವಿವಸ್ವಾನ್ ಮಗ ಶ್ರಾದ್ಧದೇವನು ಪ್ರಖ್ಯಾತವೈವಸ್ವತಮನುವೇ ಇಂದಿನ ಮನುವುಪೂರ್ವದಲಿ ಈತನೇ ಸತ್ಯವ್ರತ ಸಾಮ್ರಾಟ್0ಅವನಿಗೆ ನಮೋ ಎಂಬೆ ನಿನ್ನವನೆಂದು 6ರಾಜ ಋಷಿ ಈ ಮಹಾನ್ ಕೃತಮಾಲಾ ನದಿಯಲ್ಲಿನಿಜ ಭಕ್ತಿಯಿಂದ ಜಲತರ್ಪಣವ ಚರಿಸೆಅಂಜಲಿಉದಕದಲಿ ಮುದ್ದು ಮರಿ ಮೀನೊಂದುಸರಿಜ್ಜಲ ಸಹಿತದಿ ಬಂದದ್ದು ಕಂಡ 7ಅರಸ ಕರುಣದಲಿ ಅದನು ನದಿಯಲಿ ಬಿಡಲಿರೆಅರುಹಿತು ತನ್ನ ವೃತ್ತಾಂತವ ಆ ಮೀನುಪರಿಪರಿಯಾಗಿ ತನ್ನ ಸಜಾತೀಯರ ಭಯ ತನಗೆ ಎಂದುನೀರು ಪ್ರವಾಹದಲ್ಲಿ ತನ್ನ ಬಿಡಬೇಡವೆಂದು ಪ್ರಾರ್ಥಿಸಿತು ರಾಜನ್ನ 8ನಾರಾಯಣಾದಿ ಸುಮಂತ್ರಿತ ಅಭಿಯಂತ್ರಿತ ತನ್ನಸ್ಫುರತ್ ಕಲಶ ಕಮಂಡಲು ನೀರಲ್ಲಿ ಮೀನು ಮರಿ ಇಟ್ಟುಕೊಂಡುಆಶ್ರಮಕೆ ಕೃತ ಕೃತ್ಯ ಮನದಿ ರಾಜನು ಬಂದಮರುದಿನ ಉದಯದಲಿ ಕಂಡ ಆಶ್ಚರ್ಯವ 9ಕಮಂಡಲ ಕಲಶ ಪೂರಾವು ಏಕ ರಾತ್ರಿಯಲ್ಲೇವೇಆಮತ್ಸ್ಯಮರಿ ಬೆಳೆದಿದ್ದು ಆಶ್ಚರ್ಯ ಕಂಡಕಮಂಡಲು ಸಾಲದೇ ವಿಸ್ತಾರವಾದ ಸ್ಥಳನಿರ್ಮಾಣ ಮಾಡಿ ನೀರು ತುಂಬಿಸಿ ಅದರೊಳ್ ಮೀನನ್ನ ಬಿಟ್ಟ 10ಉದಕತುಂಬಿದ ಕುಂಟೆ ಸರೋವರವನ್ನುಮತ್ಸ್ಯವು ಪೂರ್ಣ ವ್ಯಾಪಿಸಿದ ಆಶ್ಚರ್ಯಅತಿಶಯ ಲೀಲಾ ವಿನೋದವ ಕಂಡ ರಾಜಉದಧಿಯಲಿ ಬಿಡಲು ನಿಶ್ಚಯಿಸಿ ಕ್ರಮಗೊಂಡ 11ಮಹೋದಧಿಯಲ್ಲಿರುವ ಮಕರಾದಿಗಳು ತನ್ನ ನುಂಗುವನೆಂದುಮಹಾರಾಜನಿಗೆ ಆ ಮೀನು ಹೇಳಿ ತಾನುಆದರೂ ರಾಜನು ಅಷ್ಟರಲ್ಲೇ ಉದಧಿಯೊಳು ಬಿಟ್ಟನುಮೀನನ್ನು ಆಗ ದೊಡ್ಡ ಆಶ್ಚರ್ಯವೊಂದನ್ನ ಕಂಡ ಆಮೀನು ಮತ್ತೂ ದೊಡ್ಡದಾಯಿತು 12ಶತಯೋಜನ ಮಹಾವೀರ್ಯ ಜಲಚರಗಳುಯಾವುದೂ ಕಂಡಿಲ್ಲ ಕೇಳಿಲ್ಲ ಜಗದಿಅತಿ ಅದ್ಭುತ ಮಹಾ ಮೀನರೂಪನು ಸಾಕ್ಷಾತ್ಉದಧಿಶಾಯಿ ಶ್ರೀಮನ್ನಾರಾಯಣ ನೀ ಎಂದ 13ಜೀವರುಗಳಿಗೆ ಅನುಗ್ರಹ ಮಾಡಲಿಕ್ಕೇವೇದೇವ ನೀ ಮತ್ಸ್ಯರೂಪ ಪ್ರಕಟಿಸಿರುವಿಕಾವಕಾರುಣಿಯೇ ಪುರುಷಶ್ರೇಷ್ಠ ಸರ್ವೋತ್ತಮನೇಸರ್ವದಾ ನಮೋ ಜಗಜ್ಜ£್ಮ್ಞಧಿಕರ್ತ14ಶ್ರವಣ ಸಂಸ್ತುತಿಸಿ ಮನನ ಧ್ಯಾನಾದಿಗಳು ಮಾಡಿಶ್ರೀವರನೇ ನಿನ್ನ ಮಹಾತ್ಮ್ಯಾ ಜ್ಞಾನಪೂರ್ವಕ ನಿನ್ನಲ್ಲಿ ಸುಸ್ನೇಹರತನಾದವಿವೇಕಿ ಪ್ರಪನ್ನರ ಸಲಹಿಗತಿಈವಿ15ಯಥಾರ್ಥ ಜ್ಞಾನವ ಭಕ್ತಿಮಾನ್ ರಾಜನು ಸ್ತುತಿಸಲುಮುದದಿಂದ ಇನ್ನೂನು ನಿನ್ನವೃತತಿಜೇಕ್ಷಣ ಜಗತ್ಪತಿಯೇ ನೀನು ಆಮತಿವಂತನಿಗೆ ಪೇಳಿದಿ ಅವತಾರಕಾರ್ಯ 16ಏಳುದಿನವಾಗಲು ಭೂರಾದಿ ಲೋಕಗಳುಪ್ರಳಯಜಲದಲ್ಲಿ ಮುಳುಗಿ ಹೋಗುವವುಒಳ್ಳೇ ಓಷಧಿ ಸರ್ವವೀರ್ಯತರ ಬೀಜ -ಗಳಸಪ್ತಋಷಿ ಸಹ ಕಾದಿರು ಎಂದಿ17ಕಾದುಕೊಂಡು ಇರುವಾಗ ವಿಶಾಲ ನೌಕವು ಒಂದುಶ್ರೀದ ನೀ ಕಳುಹಿಸೆ ಜಲದ ಮೇಲ್ ಬರುವದುಅದರಲಿ ಅರೋಹಿಸಬೇಕು ಬೀಜಗಳಸಪ್ತಋಷಿ ಸಹ ರಾಜ ಎಂದು ಬೋಧಿಸಿದಿ 18ಎಲ್ಲೆಲ್ಲೂ ಪ್ರಳಯಜಲತುಂಬಿತುಳಕಾಡುವುದುಲೋಲ್ಯಾಡುವುದು ನೌಕ ಗಾಳಿರಭಸದಲಿಅಲ್ಲಿ ಸಮೀಪಿಸುವ ಮತ್ಸ್ಯರೂಪನ ನಿನ್ನಹೊಳೆವ ಶೃಂಗದಿ ನಾವೆಯನು ಕಟ್ಟು ಎಂದಿ 19ನಾವೆಯನು ಬಂಧಿಸಲುರಜ್ಜುಸರ್ಪವು ಎಂದುಸುವ್ರತ ರಾಜನಿಗೆ ಉಪಾಯ ಪೇಳಿದಸರ್ವಗುಣ ಪರಿಪೂರ್ಣ ನಿರ್ದೋಷ ಪರಬ್ರಹ್ಮವಿಶ್ವವಿಷ್ಣೋ ಸೃಷ್ಟಾ ಪಾತಾ ರಮೇಶ20ಈ ರೀತಿ ಆ ಮಹಾನ್ ಸತ್ಯವ್ರತರಾಜನಿಗೆಹರಿನೀನು ಬೋಧಿಸಿ ಅಂತರ್ಧಾನವು ಆಗೇಆ ರಾಜಋಷಿ ತಾನು ಮತ್ಸ್ಯರೂಪ ಹೈಷಿಕೇಶಸಿರಿವರನೇ ನಿನ್ನನ್ನೇ ಧ್ಯಾನಿಸುತಲಿದ್ದ 21ಯುಕ್ತ ಕಾಲವು ಬಂತು ಉಕ್ಕಿತು ಸಮುದ್ರವುಸುತ್ತು ಮುತ್ತು ಎಲ್ಲೂ ಪೊಕ್ಕಿತು ಭೂಮಿಯಲಿಅತ್ತ ಇತ್ತ ಇಲ್ಲೂ ಸುತ್ತಿ ಸುಳಿವ ನೀರುಭೀತಿಕರ ನೆನೆಯಲಿಕೆ ನೋಡೆ ಮತ್ತೆಷ್ಟೋ 22ಚಂಡಮಾರುತ ಪ್ರಚಂಡ ಮೇಘವುಕರಿಸೊಂಡಲಂತೆ ಹನಿ ಕಂಡಿಲ್ಲ ಇಂಥಾ ಮಳೆಕಂಡು ನಾವೆಯ ರಾಜಕೊಂಡು ಬೀಜಗಳಕರಕೊಂಡು ಋಷಿಗಳ ಏರಿಕೊಂಡನು ಬೇಗ 23ಕೇಶವನೇ ನಿನ್ನ ಧ್ಯಾನಿಸಲು ಆಗಕೌಶೇಯ ಶೃಂಗಿ ಮಹಾಮತ್ಸ್ಯ ನೀ ಬರಲುಈಶ ನಿನ್ನಯ ಶೃಂಗಕ್ಕೆ ನೌಕವಕಟ್ಟಿಸಂಸ್ತುತಿಸಿದನು ಮಧುಸೂಧನನೇ ನಿನ್ನ 24ಶ್ರೀ ಭಾಗವತಾಷ್ಟಮ ತ್ರಯೋವಿಂಶತ್ ಅಧ್ಯಾಯಶುಭತಯವಿಜ್ಞಾನಬೋಧಕವು ಅದರಸೊಬಗರಿತು ಯೋಗ್ಯರು ಪಠಿಸೆ ಪ್ರೇರಿಸು ಸ್ವಾಮಿಸೌಭಾಗ್ಯಪ್ರದ ಶ್ರೀಶ ಮಾಂಪಾಹಿ 25ಏಕಶೃಂಗಧರ ಸ್ವರ್ಣ ಮತ್ಸ್ಯನಿಗೆ ಸರ್ಪದಿಂಲಕ್ಷ ಯೋಜನೆ ಮೇಲಿನ ವಿಸ್ತಾರದಿ ಬಂಧಿಸಿದಸತ್ಯವ್ರತ ರಾಜನು ಸಂತೋಷದಲಿ ಸ್ತುತಿಸಿದಅನಾದಿಅವಿದ್ಯಾಪೀಡಿತ ಜನ ಸಂರಕ್ಷನ್ನ26ಪರಮಹಂಸನ ಮೂಲ ಗುರೋ ಲಕ್ಷ್ಮೀಹಯವದನಮೇರು ಇತರಾ ದೇವಹೂತಿ - ಸುತ ಶರಣುಘೋರಸಂಸಾರ ಬಂಧಮೋಚಕಹರಿಯೇವರಸುಖಪ್ರದ ಸಂರಕ್ಷಕ ಮಾಂಪಾಹಿ27ಶಕ್ರಾದಿ ಜಗತ್ತಿಗೆಗುರುಗಂಗಾಧರನುಗಂಗಾಧರನಿಗೆಗುರುಪ್ರಾಣ ಪದ್ಮಜರುಪಂಕಜಾಸನ ಪ್ರಾಣರಿಗೆಗುರುರಮೇಶನು ಹರಿಯೇಆಗುರುಮೂಲಗುರು ಪರಮಗುರ್ರೋಗುರುವು28ನಿನ್ನ ಅನುಗ್ರಹ ಹೊಂದಿದರು ನೀ ಪರಮಗುರುಎಂದು ತಿಳಿದುಬದ್ಧಜೀವರ ಮೋಕ್ಷ ಪುರುಷಾರ್ಥಅವಿದ್ಯಾsಜ್ಞಾನ ಕಳೆದು ಪುಟವಿಟ್ಟಸ್ವರ್ಣರಜತಪೋಲ್ ಶುಚಿ ಆಗಿಸುವಿ ದಯದಿ 29ಸರ್ವಲೋಕ ಜನರಿಗೆ ಹಿತಕರ ಸುಹೃತ್ ನೀನೇಪ್ರಯೇಶ್ವರ ಆತ್ಮಾಗುರು ಜ್ಞಾನ ಅಭೀಷ್ಟಸಿದ್ಧಿಯುನೀ ಸುಹೃತ್ ಅಂದರೆ ಪ್ರತ್ಯುಪಕಾರ ಶೂನ್ಯನುಇನ್ನೂ ಬಹು ವಿಧದಿ ಪರಮಸಾಧು ಸ್ತುತಿಗೈದಿ 30ಸರ್ವಲೋಕಕೆ ನೀನೇ ಸುಹೃತ್ ಪ್ರಯೇಶ್ವರನುಶರ್ವಅಜಶಕ್ರಾದಿಗಳ ನಿಯಾಮಕನುಸರ್ವಾದಾನಂದಮಯ ಗುಣನಿಧಿ ಆತ್ಮನುಸರ್ವಾಭೀಷ್ಟಪ್ರದ ಜ್ಞಾನಸಿದ್ಧಿದನು 31ದೇವದೇವೋತ್ತಮನೇ ಆದಿಪೂರುಷ ಶ್ರೀಶವಿಶ್ವೇಶ್ವರ ಮತ್ಸ್ಯರೂಪ ಭಗವಂತನೀ ವಿಹಾರವು ಮಾಡಿ ಪ್ರಳಯಾರ್ಣವದಲಿಕವಿವರ್ಯ ರಾಜನಲಿ ಸುಪ್ರೀತನಾದಿ 32ವೇದ ಉದ್ಧರಿಸಿದಿ ಹಿಂದೆ ಅಸುರನ್ನ ಕೊಂದುಯುಕ್ತ ಕಾಲದಿ ಈಗ ಪ್ರಳಯವು ತೀರೆಸಾಧುವರ್ಯನು ಜ್ಞಾನವಿಜ್ಞಾನ ಕೋವಿದನುಸತ್ಯವ್ರತನಿಗೆ ಮನು ಪದವಿಯನು ಇತ್ತಿ 33ಮತ್ಸ್ಯಾವತಾರ ಸಂಕೀರ್ತನೆ ಮಾಳ್ಪರಿಗೆಸಿಧ್ಧಿ ಆಗುವುದು ಸರ್ವೇಷ್ಟ ಸದ್ಗತಿಯುಎಂದು ಪೇಳಿರುವಿ ಶುಕಪದ್ಮಭವಪತಿ ಶ್ರೀಶಸಾತ್ಯವತಿ ಮೀನ ವೇಧಪಿತ ಪ್ರಸನ್ನ ಶ್ರೀನಿವಾಸ 34- ಇತಿ ಶ್ರೀ ಮತ್ಸ್ಯಾವತಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯ ಸಂಧರ ಚರಿತ್ರೆ127ಸತ್ಯ ಸಂಧಾರ್ಯರೆ ಶರಣಾದೆ ನಿಮ್ಮಲ್ಲಿಭೃತ್ಯನಾ ಎಂದೆಣಿಸಿನಿತ್ಯಪಾಲಿಸುವುದುಸತ್ಯಾರುಕ್ಷ್ಮಿಣೀ ರಮಣ ಕೃಷ್ಣನೃಹರಿ ರಾಮಸತ್ಯಜ್ಞಾನಾನಂತನಿಗೆ ಪ್ರಿಯ ಯತೀಂದ್ರ ಪನಿರ್ದೋಷ ಗುಣಸಿಂಧು ಸುಖಪೂರ್ಣ ಹಂಸನಿಗೆವಿಧಿಸನಕಮೊದಲಾದಗುರುಪರಂಪರೆಗೆಯತಿವರ್ಯ ಅಚ್ಚುತಪ್ರೇಕ್ಷರಿಗೆ ಆನಂದತೀರ್ಥರಾಂಬುಜ ಪಾದಗಳಿಗೆ ಆನಮಿಪೆ 1ಪದ್ಮನಾಭನರಹರಿಮಾಧವಅಕ್ಷೋಭ್ಯರಪದ್ಮಾಂಘ್ರಿಗಳ ನಮಿಸಿ ಜಯತೀರ್ಥರವಿದ್ಯಾಧಿರಾಜರಪಾದಪಂಕಜಕ್ಕೆರಗಿವಿದ್ಯಾಧಿರಾಜರು ಈರ್ವರಿಗೂ ನಮಿಪೆ 2ನಮಿಸುವೆ ರಾಜೇಂದ್ರ ಕವೀಂದ್ರ ವಾಗೀಶರಿಗೆರಾಮಚಂದ್ರರಿಗೆ ಆ ಯತಿವರರಹಸ್ತಕಮಲಜರು ವಿಭುದೇಂದ್ರ ವಿದ್ಯಾನಿಧಿಗಳಿಗೆನಮೋ ಎಂಬೆ ವಿದ್ಯಾನಿಧಿಗಳ ವಂಶಕ್ಕೆ 3ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯ ತತ್ವಜÕ ರಘೂತ್ತಮಾರ್ಯರಿಗೆವೇದ ವ್ಯಾಸಾಭಿದ ಯತಿ ವಿದ್ಯಾಧೀಶರಿಗೆವೇದನಿಧಿಗಳಿಗೆ ನಾ ಬಾಗುವೆ ಶಿರವ 4ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಾಭಿನವ ಸತ್ಯ ಪೂರ್ಣರಿಗೆ ನಮಿಪೆಸತ್ಯ ವಿಜಯರಿಗೆ ಸತ್ಯ ಪ್ರಿಯರಿಗೆ ಸತ್ಯಬೋಧರಿಗೆ ಎನ್ನ ವಂದನೆ ಅರ್ಪಿಸುವೆ 5ಸತ್ಯಬೋಧಾರ್ಯರ ಕರಕಮಲ ಸಂಜಾತಸತ್ಯಸಂಧರ ಮಹಿಮೆ ಬಹು ಬಹು ಬಹಳವೇದ್ಯ ಕಿಂಚಿತ್ ಮಾತ್ರ ಎನಗೆ ಶ್ರೀಹರಿ ವಾಯುಪ್ರೀತಿಯಾಗಲಿ ಇಲ್ಲಿ ಪೇಳಿರುವೆ ಸ್ವಲ್ಪ 6ಪೂರ್ವಾಶ್ರಮದಲ್ಲಿ ರಾಮಚಂದ್ರಾಚಾರ್ಯಹಾವೇರಿಯವರು ಈ ಯತಿವರಮಹಂತದೇವ ಸ್ವಭಾವರು ವೇದಾಂತ ಕೋವಿದರುಸರ್ವದಾ ಹರಿನಾಮ ಸಂಸ್ಮರಿಸುವವರು 7ರಾಮಚಂದ್ರಾಚಾರ್ಯ ಸರ್ವಪ್ರಕಾರದಲುತಮ್ಮ ಸಂಸ್ಥಾನ ಪೀಠಾರ್ಹರು ಎಂದುನೇಮದಿಂ ಪ್ರಣವೋಪದೇಶ ಅಭಿಷೇಕಸಂಮುದದಿ ಮಾಡಿದರು ಸತ್ಯಬೋಧಾರ್ಯ 8ಹರಿಕ್ಷೇತ್ರ ತೀರ್ಥಯಾತ್ರೆ ಮಾಡಿ ಅಲ್ಲಲ್ಲಿಹರಿತತ್ವ ಯೋಗ್ಯರಿಗೆ ಸಮ್‍ಯುಕ್ ಬೋಧಿಸುತಧರೆಯಲ್ಲಿಜ್ಞಾನಿಶ್ರೇಷ್ಠರು ಎಂದು ಸ್ತುತಿಕೊಂಡಧೀರ ಗುರುವರ ಸತ್ಯಸಂಧರಿಗೆ ನಮಿಪೆ 9ಸತ್ಯಂ ವಿದಾತಂ ನಿಜಭೃತ್ಯಭಾಷಿತಂಅಂದು ಕಂಬದಿ ತೋರ್ದಹರಿಪ್ರಹ್ಲಾದನಿಗೆಇಂದುವಟುರೂಪದಿ ಬಂದು ವಿಠ್ಠಲ ಸತ್ಯಸಂಧರಿಗೆ ತೋರಿದನು ತನ್ನಿಚ್ಛೆಯಿಂದ 10ವಿಠ್ಠಲನ್ನ ವಂದಿಸಿ ಪಂಡರೀಪುರದಿಂದಮಠ ಪರಿವಾರ ಸಹ ಇನ್ನೂ ಬಹು ಕ್ಷೇತ್ರಅಟನ ಮಾಡಿ ಬಾಗೀರಥಿ ಪೂಜೆ ಮಾಡುತ್ತಪಠವಾಳಿ ಉಡುಗೊರೆಯ ಕೊಟ್ಟರು ಗಂಗೆಗೆ 11ಕಾಶಿ ನಗರದಿ ಜನರು ಪ್ರತ್ಯಕ್ಷ ನೋಡಿಹರುವಸ್ತ್ರ್ರಾದಿಗಳ ಗಂಗೆ ಮೂರ್ತಿಮತ್ ಬಂದುನಸುನಗುತ ತುಷ್ಟಿಯಲಿ ಕರದಿಂ ಸ್ವೀಕರಿಸಿದ್ದುಯಶವೇ ವರ್ಣಿಸಲು ಈ ಮಹಾತ್ಮರ ಮಹಿಮೆ 12ಶ್ರೀವಿಷ್ಣುಪಾದಮಂದಿರದ ಮುಖದ್ವಾರಅವಿವೇಕದಲಿ ಗಯಾವಾಳರು ಬಂಧಿಸಲುಶ್ರೀವರನ್ನ ಸ್ಮರಿಸಿ ನಿಂತರು ಸತ್ಯಸಂಧರುವಿಶ್ವವಿಷ್ಣು ವಷಟ್ಕಾರನು ವಲಿದ 13ನೆರೆದಿದ್ದ ಜನರೆಲ್ಲ ನೋಡುತಿರೆ ಬಾಗಲಭಾರಿ ಕೀಲುಗಳೆಲ್ಲ ಬಿದ್ದವು ಕೆಳಗೆಈ ರೀತಿ ಅದ್ಬುತವು ಜರುಗಿದ್ದು ಕಂಡುಎರಗಿ ಕೊಂಡಾಡಿದರು ಅಲ್ಲಿದ್ದ ಜನರು 14ತಮ್ಮ ತಪ್ಪುಗಳನ್ನು ಮನ್ನಿಸೆಕ್ಷಮೆಬೇಡಿತಮ್ಮನ್ನು ಕರಕೊಂಡು ಹೋಗಿ ಗುರುಗಳಿಗೆಹೇಮರತ್ನಾದಿಗಳಕಾಣಿಕೆಅರ್ಪಿಸಿನಮಿಸಿ ಪೂಜಿಸಿದರು ಗಯಾವಾಳರು 15ಸೂರಿಕುಲ ತಿಲಕರು ಸತ್ಯ ಸಂಧಾರ್ಯರುಹರಿಪೂಜೆ ಮಾಡುವಾಗಹರಿಶಿರಿ ವಾಯುಸುರನಿಕರ ಸಾನಿಧ್ಯ ಇರುವುದು ಅನುಭವಕ್ಕೆಬರುವುದು ನೋಡುವ ಯೋಗ್ಯ ಭಕ್ತರಿಗೆ 16ಶ್ರೀಹರಿಅರ್ಚನೆಗೆ ಸ್ವಾಮಿಗಳು ಕುಳಿತರುಬ್ರಾಹ್ಮಣ ಮಹಾಪುರುಷ ಓರ್ವನು ಬಂದಸಹಸ್ರದಳ ಸುಂದರತರ ಕಮಲಪುಷ್ಪವಶ್ರೀಹರಿಗರ್ಪಿಸೆ ಕೊಟ್ಟು ಅದೃಶ್ಯನು ಆದ 17ಪ್ರಣವಅಷ್ಟಾಕ್ಷರಿ ಮೊದಲಾದ ಮಂತ್ರಗಳಆಮ್ನಾಯಋಗ್ ಯಜುಸ್ಸಾಮಾಥರ್ವಣದಅನುಪಮ ಮಹಾ ಇತಿಹಾಸ ಎರಡರಸಾರವಿಷ್ಣು ಸಹಸ್ರನಾಮಗಳಿರುತಿವೆಯು 18ಉತ್ಕøಷ್ಟತಮ ವಿಷ್ಣು ಸಹಸ್ರ ನಾಮಂಗಳಶ್ರೀ ಕೃಷ್ಣ ಸುಪ್ರೀತಿಕರವ್ಯಾಖ್ಯಾನಸಂ ರಚಿಸಿ ಪ್ರತಿನಿತ್ಯ ಅರ್ಚಿಪರು ವಿಷ್ಣುಸೂರಿವರಧೀರರು ಸತ್ಯ ಸಂಧಾರ್ಯ 19ವೇದಾಂತ ಸಾಮ್ರಾಜ್ಯ ದಶವತ್ಸರ ಆಳಿವೃಂದಾವನದಿ ಕೂಡುವಕಾಲಬರಲುಭೂದೇವಿಪತಿವಕ್ತ್ರದಿಂದುದಿತಸಾಧು ಸುಪವಿತ್ರ ತೀರಕ್ಕೆ ಬಂದಿಹರು 20ಹದಿನೇಳು ನೂರು ಹದಿನಾರನೇ ಶಾಲಿ ಶಕಆನಂದ ಸಂವತ್ಸರ ಜೇಷ್ಠ ಶುದ್ಧದ್ವಿತೀಯಪುಣ್ಯತಮ ದಿನದಲ್ಲಿ ಶ್ರೀಹರಿಯಪಾದಯೆಯ್ದಿದರು ಈ ಗುರುವರಮಹಂತ21ಉಡುಪಿಯಿಂದುತ್ತರಕ್ಕೆ ಬರುವ ಮಾರ್ಗದಲಿದೊಡ್ಡದಲ್ಲದ ಗ್ರಾಮಮಹಿಷಿಎಂಬುವಲಿಕ್ರೋಡಜಾ ತೀರಸ್ಥ ವೃಂದಾವನಸದನಮಾಡಿ ಕುಳಿತರು ಮತ್ತೊಂದು ಅಂಶದಲಿ 22ವೃಂದಾವನದೊಳು ಇಹ ಸತ್ಯಸಂಧರೊಳುನಿಂತಿಹನು ಸತ್ಯಸಂಧನು ಮುಖ್ಯವಾಯುವಾತದೇವನೊಳು ಸತ್ಯಸಂಧ ನಾಮಾವಿಷ್ಣುಸತ್ಯಜ್ಞಾನಾನಂತಾನಂದ ವಾಯು ಇಹನು 23ವೃಂದಾವನಸ್ಥರ ಈ ರೀತಿ ತಿಳಿಯುತ್ತಬಂದು ಸೇವಿಸುವವರಿಗೂ ಸ್ಮರಿಸುವವರಿಗೂಕುಂದುಕೊರತೆನೀಗಿಇಷ್ಟಾರ್ಥ ಲಭಿಸುವವುಇಂದಿರಾಪತಿ ದಯಾಸಿಂಧು ಪಾಲಿಸುವನು 24ಹನುಮಸ್ತ ಅಜನಪಿತ `ಶ್ರೀ ಪ್ರಸನ್ನ ಶ್ರೀನಿವಾಸ'ಮೀನಕಮಠಕ್ರೋಡನೃಹರಿವಟುಪರಶುದನುರ್ಧರ ಶ್ರೀಕೃಷ್ಣ ಜಿನ ಕಲ್ಕಿ ಶ್ರೀಶಗುಣನಿಧಿ ಪ್ರಿಯ ಸತ್ಯ ಸಂಧಾರ್ಯ ಶರಣು 25 ಪ|| ಇತಿ ಶ್ರೀ ಸತ್ಯಸಂಧ ಚರಿತ್ರೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಸಕಲ ಗ್ರಹಬಲ ನೀನೆ ಸರಸಿಜಾಕ್ಷ |ನಿಖಿಳವೇತಕೆ ಎನಗೆ ವಿಶ್ವವ್ಯಾಪಕ ಮೋಹಿ ಪರವಿಚಂದ್ರಬುಧನೀನೆರಾಹುಕೇತುವು ನೀನೆಕವಿಗುರುವು ಶನಿಯು ಮಂಗಳನು ನೀನೆ ||ದಿವಸ ರಾತ್ರಿಯು ನೀನೆ ನವವಿಧಾನವು ನೀನೆಭವರೋಗಹರ ನೀನೆ ರಕ್ಷಕನು ನೀನೆ 1ಪಕ್ಷಮಾಸವು ನೀನೆ ಪರ್ವಕಾಲವು ನೀನೆನಕ್ಷತ್ರಯೋಗ ಕರಣಗಳು ನೀನೆ ||ಅಕ್ಷಯವೆಂದು ದ್ರೌಪದಿಯಮಾನವಕಾಯ್ದಪಕ್ಷಿವಾಹನ ದೀನ ರಕ್ಷಕನು ನೀನೆ 2ಋತು ಕಾಲಗಳು ನೀನೆ ವ್ರತದಿನಂಗಳು ನೀನೆಕ್ರತುವುಸಂಧ್ಯಾನಸದ್ಗತಿಯು ನೀನೆಜಿತವಾಗಿ ಎನ್ನೊಡೆಯಪುರಂದರವಿಠಲನೆಶ್ರುತಿಗೆ ನಿಲುಕದ ಮಹ್ಮಾತ್ಮನು ಹರಿಯು ನೀನೆ 3
--------------
ಪುರಂದರದಾಸರು
ಸತ್ಯಪ್ರಜÕರಾಯರಂಘ್ರಿಗಳ ಸಂತತಹೃತ್ಪದ್ಮದಲಿ ನೆನೆಯಿರಯ್ಯ ಪುನರಪಿಭವ.....ತ್ವತಿಯಂ ತೋರಿ ಸಾಪ್ರಾಯ ಪದ್ಧತಿಯ ವಿಪ್ರತಿಯಂ ತೋರುವಹೊರೆವಪ.ಸೂತ್ರಾರ್ಥಸ್ತೇಯ ದಾನವರಿಳೆಗೆ ಭಾರಾಗಿವೇತ್ತøಜನಗಳ ಮತಿಗೆಡಿಸಿ ಬಾಧಿಸುತಿರಲುಗೋತ್ರಧರನಾಜÕದಿಂ ಶ್ರೀ ಮಾರುತನು ತನ್ನಯ ತೃತೀಯಾವತಾರದಿಂದ್ವಾತ್ರಿಂಶತ್ ಲಕ್ಷಣಾನ್ವಿತನಾಗಿ ಋಜುಗಣದಗೋತ್ರದಲ್ಲೆಸೆದು ನಿಜಜನನಿಗ್ಹರುಷವನಿತ್ತುಧಾತ್ರಿಗೆ ಭೂಷಣದ ಮಣಿಯಂತೆ ಹೊಳೆ ಹೊಳೆವಸುತ್ರಾಮಾಶೇಷವರದ ಅಭಯದ 1ವಿಶ್ವವೆಲ್ಲ ಮಿಥ್ಯಪ್ರತಿಷ್ಠಿತವು ಅಲ್ಲವು ನಿರೀಶ್ವರ ಭುವನವೆಂಬ ಕುಮತಿಘಟಿಗಳ ಮಾತರಿಶ್ವಕಂಠೀರವನೀ ಯತಿ ರೂಪದಲಿ ಸದೆದುಸುಸ್ವಭಾವದಲ್ಲಿ ಒಪ್ಪುತ ಸುಶಶ್ವದೇಕ ಶ್ರೀ ಹರಿಯು ಜೀವ ಜಗದೊಡೆಯನಶ್ವರಾನಶ್ವರಾರ್ಥೇತರ ಮುಕುಂದೆನ್ನುತತಾ ಸ್ವಕೀಯರಿಗೆಲ್ಲಶ್ರುತಿಸ್ಮøತಿಸುವಾಕ್ಯದಿಂವಿಶ್ವಾಸವಂ ಬಲಿಸಿದ ಸುಬೋಧ 2ಮತ್ರ್ಯದ ಬುಧರು ಬುದ್ಧಿಭ್ರಂಶದಲಿ ಮಾಯಿಮತಗರ್ತದಲಿ ಬಿದ್ದಿರಲು ಕಂಡು ಕರುಣದಲಿ ಸುಖತೀರ್ಥ ಮಧ್ವಾನಂದ ದಶಪ್ರಮತಿಯೆಂಬ ವೇದಾರ್ಥ ನಾಮದಲಿ ಮೆರೆದುಧೂರ್ತದುರ್ಭಾಷ್ಯಾಂಧಕಾರವಂ ಬಿಡಿಸಿ ವಿದ್ಯಾರ್ಥಿಗಳಿಗೊಲಿದು ಸದ್ಭಾಷ್ಯಗಳ ರಚಿಸಿಪರಮಾರ್ಥ ವ್ಯಾಖ್ಯಾನಗಳ ಪೇಳಿ ಉದ್ಧರಿಸಿದ ಸಮರ್ಥ ಮಾರ್ತಾಂಡನಾದ ಸುಖದ 3ಮಬ್ಬು ಮುಸುಕಿದ ಪರೆಯ ತೆರೆದ ಸುಜನರ ಹೊರೆದಕೊಬ್ಬಿದ ಕುತರ್ಕಿಗಳ ತರಿದ ಇಂದುವ ಜರಿದÀಸಭ್ಯರಿಗೆ ತತ್ವಸುಧೆಯೆರೆದ ಮಂತ್ರವನೊರೆದನಬ್ಬಗುರುಪೂರ್ಣಬೋಧದುಬ್ಬಿ ತಮಸಿನೊಳು ಮಿಥ್ಯಾತ್ಮಕ ದುರಾತ್ಮರಿಳೆಗುಬ್ಬಸದ ದರ್ಶನಗಳೊರೆಸಿ ಸತ್ಯವ ಮೆರೆಸಿಅಬ್ಬರದ ತಪ್ತ ಮುದ್ರೆಯನಿತ್ತಘವ ಕಿತ್ತುನಿರ್ಭಯವ ಪದವನೀವಕಾವ4ಇಂಥ ಸಂಕರ್ಷಣನ ಪ್ರೀತಿಯ ಕುವರ ಅಮಲವಾತನಿಖಿಳಪ್ರಾಣನಾಥ ರಘುಪತಿಯಸೇವ್ಯತ್ರೇತೆಯಲಿ ಮೂಡಿ ಪ್ರಖ್ಯಾತಾಕ್ಷಯ ಪ್ರಮುಖಭೂತಳದ ಭಾರರೊದೆದಪೂತನಾರಿಯ ಪಕ್ಷಪಾತದಿಂ ಬಕ ಜರಾಜಾತ ಗಾಂಧಾರ್ಯರಂ ಘಾತಿಸಿದ ಶ್ರೀಸವಿತನಯನಾಜÕದಲಿ ಪಾತಕಿಗಳೊರಸಿದಾದ್ವೈತ ಮತ ಕಾಲನೆನಿಪ್ಪ 5ಹತ್ತುಪನಿಷದ್ಭಾಷ್ಯಸೂತ್ರಗೀತಾಭಾಷ್ಯಮತ್ತೆ ಅಣುಭಾಷ್ಯ ಋಗ್ಭಾಷ್ಯಭಾಗವತತಾತ್ಪರ್ಯ ವಿಷ್ಣುಸ್ತೋತ್ರದ್ವಯಂ ಕಲ್ಪದ್ವಯಂಹತ್ತು ಪ್ರಕರಣವು ಕೃತಿಯುತಂತ್ರಸಾರಕೃಷ್ಣಾಮೃತಾಬ್ಧಿಯ ಮಹಾಭಾರತಾನ್ವಯ ವಿವರ್ಣನವೆಂಬ ಸದ್ಗ್ರಂಥ ಮೂವತ್ತೇಳು ರಚಿಸಿ ಮೋಕ್ಷೋಪಾಯವರುಹಿದ ವಿಧಾತ್ರ ಪದಕರ್ತನೀತತಾತ6ಭಾಟ್ಟ ಪ್ರಭಾತ ಛೆರಾನಾಯತ ? ಪ್ರತ್ಯಕ್ಷ ಮತಿ............... ಚಾರ್ವಾಕ....................ಚೌದ್ಧನೆ............ಶಂಕರನೆ ಕಡೆಯಾಗಿಪ್ಪತ್ತೊಂದುನಷ್ಟ ಭಾಷ್ಯವನಂಘ್ರಿಯಲಿಮೆಟ್ಟಿ ಸದ್ಗುಣಶರಧಿಹರಿಯು ಭುವನಂಗಳನುಹುಟ್ಟಿಸೆತ್ತಿಳಿದಾಡಿ ಮುಕುತಿಯ ನಿಜರ್ಗಿತ್ತುಕಷ್ಟವ ಖಳರ್ಗೀವನೆಂದು ಡಂಗುರಿದದಿಟ್ಟಾಲವಬೋಧ ರಾಜತೇಜ 7ಶ್ರುತಿವೇದನಿಕರ ಚಕ್ರವ ಪಿಡಿದು ಬ್ರಹ್ಮತರ್ಕಾವಳಿಯ ಶಂಖದ ಭೀಕರ ಘೋಷದಿಂದ ಜಗತ್ಪ್ಪಾವನನ ಪುರಾಣಗದೆ ಇತಿಹಾಸ ಪಂಚರಾತ್ರಭಾವಶಾಙ್ರ್ಗವಿಡಿದುಜೀವೇಶ ಭೇದಶರಪಂಚಕದಿ ಬ್ರಹ್ಮಸೂತ್ರಾವಳಿಯಿಂಬಿನ ನಂದಕವ ಧರಿಸಿ ಬೆಂಬತ್ತಿದೇವರಿಪುದುರ್ಮತವ ಓಡಿಸಿದಮಧ್ವನಾರಾಯಣ ಪಾರಾಯಣ ಯತಿ ಸುಮತಿ 8ತರುಣರವಿತೇಜಸುಸ್ಮಿತ ಸುಂದರ ನಾನಾ ಸುವರ್ಣಕಾಪಿನ ಭ್ರಾತ ಪ್ರಬೋಧ ಮುದ್ರಾಭಯಕರಸರೋರುಹದಿಂದ ಮೆರೆವ ವಿಧಿಪನಶರಣಜನ ಮಂದಾರನಪರಮನವರತ್ನದ ಪದ್ಮದ ಮಾಲೆಯಿದು ಪುಣ್ಯಕರವು ವೈಷ್ಣವರ್ಗೆ ಅಘದೋಟ ಮುಕ್ತಿಯ ಕೂಟಗುರುಮೂರ್ತಿಯ ಕೀರ್ತಿ ಪ್ರಸನ್ನವೆಂಕಟಪತಿಯವರಪ್ರಧಾನಾಂಗ ಮೂರ್ತಿಯ ವಾರ್ತಿ9
--------------
ಪ್ರಸನ್ನವೆಂಕಟದಾಸರು
ಸಿರಿಗೋವಿಂದಶ್ರೀ ಪುರಂದರದಾಸರ ಸ್ತ್ರೋತ್ರಇದೇ ಪೇಳಿ ಪೋದರುವಿಧುವದನೆನಮ್ಮ ಬುಧನುತ ಪದದ ನಾರದರು ಈ ಜಗದಿ ಬಂದು ಪಸಿರಿಅರಸನೆ ಈ ಧರೆಯೊಳಗುತ್ತಮಮರುತ ದೇವರೆ ಜಗದ್ಗುರುಗಳೆಂದುತರತಮಪಂಚಭೇದಜ್ಞಾನ ಶೀಲನೆಸುರಲೋಕವಾಸಿ ಶ್ರಿಹರಿ ಪ್ರೇಮ ಪಾತ್ರನೆಂಬೊದೆ ಪೇಳಿ 1ಜರದೂರನರಹರಿ ಧರೆಯೊಳು ವ್ಯಾಪಿಸಿಇರಲು ತ್ರಿಗುಣ ಕಾರ್ಯವಾಹವೆನ್ನುತಾಪರತಂತ್ರ ಜೀವವೆಂದರಿದು ಪಾಪ ಪುಣ್ಯಸರಸಿಜನಾಭನಿಗರ್ಪಿಸಿರೆಲೋಯಂದು 2ಶಿರಿಗೋವಿಂದ ವಿಠಲ ವಿಶ್ವವ್ಯಾಪಕಗಿರುವವುಎರಡು ಪ್ರತಿಮೆಜಗದಿಚರಅಚರಗಳನ್ನು ಅರಿತು ಮಾನಸದಲ್ಲಿಹರಿಪೂಜೆ ಮಾಡಿ ಸೇರಿರಿ ವೈಕುಂಠವೆಂಬೊದೆಪೇಳಿ ಪೋದರು 3
--------------
ಸಿರಿಗೋವಿಂದವಿಠಲ
ಹರಿಮಂದಿರಹರಿಮಂದಿರ ಈ ಸ್ಥಳವುಹರುಷದಿ ಚಿಂತಿಪರಿಗೆ ಪಹರಿಹರ ಬ್ರಹ್ಮಾದಿಗಳು ಪೊಗಳುತಿರೆಸುರಮುನಿ ನಾರದ ಋಷಿಗಳು ಸ್ತುತಿಸಲುಸುರರುಪುಷ್ಪ ವೃಷ್ಟಿಯ ಕರೆಯಲು ಅ-ಪÀ್ಸರಸ್ತ್ರೀಯರುನರ್ತನ ಮಾಡುವ ಸ್ಥಳಅ.ಪಸಿರಿನಾರಾಯಣ ಶೇಷಶಯನದಲಿಶಯನಿಸಿ ನಿದ್ರಿಸುತಿರೆಸಿರಿಭೂದುರ್ಗಾಂಬ್ರಣಿಯರು ಸೇವಿಸಲುನಾಭಿ ಕಮಲದಲಿಸರಸಿಜೋದ್ಭವ ಸ್ತುತಿಸುತ ಧ್ಯಾನಿಸಲುಕರಜೋಡಿಸಿ ಸುಜನರು ನಮೋ ನಮೋ ಎನೆಭರದಿ ಜಾಗಟೆಭೇರಿತಾಳ ತುತ್ತೂರಿಯುಕರದಿ ಶಂಖು ಗಂಟೆ ನಾದ ಮೊಳಗೆಹರಿಭಜನೆ ಮಾಡುತ ತದ್ಧಿಮಿಕೆನ್ನುವ ಸ್ಥಳ 1ಹರಿವೈಕುಂಠದಿ ಸಿರಿಯೊಡಗೂಡಿರಲುಭೃಗುಮುನಿ ತಾಡನದಿಸಿರಿದೇವಿ ಕೋಪಿಸಿ ಹರಿಯನು ಬಿಡಲುಸಿರಿಇಲ್ಲದೆ ಒಬ್ಬನೆ ಇರಲಾಗದೆ ವೆಂಕಟಗಿರಿಗಿಳಿತರಲುಸರಸಿಜಾಕ್ಷ ಕರಿಬೇಟೆಯ ನಾಡುತಬರುತ ಪದ್ಮಾವತಿಯನು ಮೋಹಿಸಿಕೊರವಿರೂಪತಾಳುತ ಕಣಿ ಹೇಳಲುಭರದಿ ಕಲ್ಯಾಣವು ನಡಸಿದ ಸ್ಥಳವಿದು 2ಸುರರುಅಸುರರು ಶರಧಿಯ ಮಥಿಸಿರಲುಅಮೃತವನೆ ಕಂಡುಹಿರಿ ಹಿರಿ ಹಿಗ್ಗುತ ನುಗ್ಗೆ ದಾನವರುಶ್ರೀಹರಿತಿಳಿದು ತ್ವರದಿಂದ ಮೋಹಿನಿರೂಪ ತಾಳಿಬಿರಿಬಿರಿ ನೋಡುತಲಿರೆ ದಾನವರುಸುರರಿಗೆ ಅಮೃತವನುಣಿಸುತ ಮೋಹಿನಿಪರವಶದಲಿ ಮೈ ಮರತಿರೆ ಅಸುರರುಸುರರಿಗೆ ಅಭಯವ ನೀಡಿದ ಸ್ಥಳವಿದು 3ವಿಶ್ವಾಸದಿ ತಪಗೈದ ಸುರನ ನೋಡಿಮಹದೇವರು ಒಲಿದುಭಸ್ಮಾಸುರ ಬೇಡಿದ ವರಗಳ ಕೊಡಲುನಿಜ ನೋಡುವೆನೆಂದು ಭಸ್ಮಾಸುರ ಬೆನ್ನಟ್ಟುತ ಬರುತಿರಲುವಿಶ್ವವ್ಯಾಪಕಹರಿತಾ ತಿಳಿದುತಕ್ಷಣ ಸ್ತ್ರೀ ರೂಪವ ಧರಿಸುತ ಬರೆಭಸ್ಮಾಸುರ ತನ್ಹಸ್ತದಿ ಮೃತಿಸಲುಭಕ್ತರನುದ್ಧರಿಸಿದ ಈ ಸ್ಥಳವು 4ಲೋಕ ಲೋಕದ ಜನರೆಲ್ಲರು ಕೂಡಿಪ್ರಜಾ ಕಂಟಕನಾದಮೂಕಾಸುರನನು ಗೆಲ್ಲಲು ಸಾಗದಲೆಶ್ರೀಕಾಂತನ ಪ್ರಾರ್ಥಿಸೆಮೂಕಾಂಬಿಕೆ ನಾಮದಿಂದಲಿ ಪ್ರಜ್ವಲಿಸಿಮೂಕಾಸುರನನು ವಧಿಸಿದ ಶ್ರೀ ಕೋಲಾ-ಪುರದಲಿ ವಾಸಿಸುತಲಿ ಸಂತತಶ್ರೀಕರ ಕಮಲನಾಭ ವಿಠ್ಠಲಏಕಾಂತದಿ ಭಕ್ತರ ಸಲಹಿದ ಸ್ಥಳವಿದು 5
--------------
ನಿಡಗುರುಕಿ ಜೀವೂಬಾಯಿ
ಹರಿಯೆ ಎನಗಾರು ಗತಿಯೊ ನೀನಲ್ಲದೆ ಪ.ಹಿಂದಿನಾಪತ್ತು ಮರೆತೆಇಂದುಮಾಯದಿ ಬೆರೆತೆಒಂದುಗೂಡಿದವುಅಘಮುಂದಿನರುಹಿಲ್ಲ1ಹಗಲು ಅಶನದ ಕೃತ್ಯ ಇರುಳು ನಿದ್ರೆಯ ಮಬ್ಬುವಿಗಡಕಾವನ ತಡೆ ತಗಲು ಬಿತ್ತೊ ರಂಗಾ2ಅತ್ತಿತ್ತ ಸುತ್ತುವನಕ ಹೊತ್ತು ಹೋಯಿತು ಯಮನಮುತ್ತಿಗೆ ಬಿದ್ದಾಗ ಮತ್ತಾರಿಲ್ಲೊ ಸ್ವಾಮಿ 3ಅಜ್ಞಾನೆಂಬಹಿ ಕಚ್ಚಿ ಯಜೆÕೀಶ ನಿನ್ನಂಘ್ರಿಸಂಜÕವಿಲ್ಲದೆ ದು:ಖ ಮಗ್ನನಾದೆನಲ್ಲೊ 4ಶ್ರೀ ಪ್ರಸನ್ವೆಂಕಟೇಶ ತಾಪತ್ರಯವಿನಾಶನೀ ಪಾಲಿಸಯ್ಯ ವಿಶ್ವವ್ಯಾಪಕ ಸ್ವಾಮಿ 5
--------------
ಪ್ರಸನ್ನವೆಂಕಟದಾಸರು
ಹರಿಯೆ ಸರ್ವೋತ್ತಮ ಹರಿಯೆ ಪರದೈವತ |ಹರಿಯೆ ಸರ್ವಂ ವಿಷ್ಣುಮಯಂ ಜಗತು ಪ.ಹರಿಯಲ್ಲದನ್ಯತ್ರ ದೈವಗಳುಂಟೆಂದು |ಉರುಗನ ಮುಡಿಯನಾರಾದರೆತ್ತಲಿ ಅಪಜಗಂಗಳ ಪುಟ್ಟಿಸುವಬೊಮ್ಮ ನಿನ್ನ ಮಗ |ಜಗದ ಸಂಹಾರಕ ನಿನ್ನ ಮೊಮ್ಮಗನು ||ಜಗದ ಪಾವನೆ ಭಾಗೀರಥಿ ನಿನ್ನ ಮಗಳು |ಜಗದ ಜೀವನಮಾತೆ ನಿನ್ನರಸಿಯಲೆ ದೇವ 1ವಿಶ್ವತೋಮುಖ ನೀನೆ, ವಿಶ್ವತಶ್ಚಕ್ಷು ನೀನೆ |ವಿಶ್ವತೋಬಾಹುವಿಶ್ವ ಉದರ ನೀನೆ ||ವಿಶ್ವವ್ಯಾಪಾರ ವಿಶ್ವಸೂತ್ರಧಾರಕ ನೀನೆ |ವಿಶ್ವನಾಟಕ ವಿಶ್ವವಿಷ್ಣುವೇ ನಮೋ ನಮೋ 2ಆಗಮನಿಗಮ ಪೌರಾಣ ಶಾಸ್ತ್ರಂಗಳಿಗೆ |ಯೋಗಿಜನಕಗಮ್ಯಮೂರ್ತಿ ನೀನೆ ||ನಾಗಶಯನಸಿರಿ ಭೋಗಿಭೂಷಣವಿನುತ |ಭಾಗವತರ ಪ್ರಿಯ ಪುರಂದರವಿಠಲ 3
--------------
ಪುರಂದರದಾಸರು