ಒಟ್ಟು 175 ಕಡೆಗಳಲ್ಲಿ , 53 ದಾಸರು , 158 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಲುಕಷ್ಟ ಬರಗಾಲ ಬಂದಿತಯ್ಯ ವೈರಿ ಜನಕೆ ಬರಬಾರದಯ್ಯ ಪ ಶಿಶುಗಳಿಗೆ ಹಾಲಿಲ್ಲ ಪಶುಗಳಿಗೆ ಮೇವಿಲ್ಲ ಉಸರಲು ಬಾಯಿಲ್ಲ ವೃದ್ಧ ಜನಕೇ ಅಶನ ವಸನಕ್ಕಾಗಿ ವ್ಯಸನ ಪೂರಿತರಾಗಿ ನಿಶಿ ಹಗಲು ಜನರೆಲ್ಲ ಉಸುರು ಹಾಕುತಲಿಹರು 1 ಧÀವಸಧ್ಯಾನ್ಯದ ಬೆಲೆಯು ದಿವಸ ದಿವಸಕೆ ಮಹಾ ಪ್ರವಾಹದಂದದಿ ವೃಧ್ಧಿಯಾಗುತಲಿಹುದು ಅವಸರಕೆ ಬೇಡಿದರೆ ಲವಣದೊರೆಯದು ಮೇಲೆ ಶಿವಶಿವಾಯೆಂದು ಭವಣಿಯನನುಭವಿಸುವರು 2 ಶಾರೆ ಕಾಳು ಭಿಕ್ಷೆಕೆರೆಯುವದಕೆ ಗತಿಯಿಲ್ಲಾ ಶರಗೊಡ್ಡಿ ಕರೆದರೂ ಕೊಂಡರೊಬ್ಬರುಯಿಲ್ಲಾ ಅರೆಹೊಟ್ಟಿಯುಂಡು ಹರಕು ಬಟ್ಟಯನುಟ್ಟ ಮರಮರನೆ ಮನದೊಳಗೆ ಮರುಗುವರು ಬಡಜನರೂ 3 ಜೋಳನವಣಿ ಸಜ್ಜಿ ಕಾಳಿಗೇರಿದ ಬೆಲೆಗೆ ತಾಳಿ ಮನದಲಿ ವ್ಯಥಿಯ ಕೂಲಿ ಜನರು ಕೂಳಿಗಾಗದು ಎಂದು ಬಾಳುವೆಯ ಗೈಯುವಂಥ ಕೂಲಿವಲ್ಲೆವು ಎನುತ ಗೋಳಿಡುತಲಿಹರು 4 ಕಡಲೆ ಕಾಣದ ಹರಿಯು | ಕಡಲೊಳಡಗಿದ ಮೃಡನು ಸೊಡರೆಣ್ಣೆಸಿಗದೆಂದು ಸುಡುಗಾಡು ಸೇರಿದಾ ಅಡಕಿ ಸಕ್ಕರೆ ಗೋಧಿ ಕೊಡುವ ಬೆಲೆಯನು ಕೇಳಿ ಮಿಡುಕಿ ಮನದೊಳು ಕಣ್ಣ ಬಿಡುತಿಹರು ಸುಮನಸರು 5 ಮಳೆರಾಯ ಮುನಿದುದಕೆ ಹೊಲ ಬೆಳೆಯದಿದ್ದುದಕೆ ಬಳುತಿಹವು ಬಡಜನರ ಕಣ್ಣಿಂದ ನೀರು ಜಲಹರಿಸುವದು ನೋಡಿ ನಲಿದಾಡಿ ನಗುತಿಹಳುಕ್ಷಾಮದೇವಿ 6 ಕ್ಷಾಮದೇವಿಗೆ ತನ್ನ | ಧಾಮಸೇರುವಂತೆ ನೀಡಿ ಮಾಡಿ ಸಾಕು ನಮ್ಮ ಸಕಲ ಜನಕೇ | ಕ್ಷೆಮ ಸೌಖ್ಯವಗರೆದು | ಪ್ರೇಮದಲಿ ಪೊರೆ ಕರವ ನಾ | ಮುಗಿದು ಪ್ರಾರ್ಥಿಸುವೆ ಶಾಮಸುಂದರ ಸ್ವಾಮಿ 7
--------------
ಶಾಮಸುಂದರ ವಿಠಲ
ಬಲ್ಲನೆಂಬೊ ಮಮಕಾರ ಬಿಡು ಎಲ್ಲೆಲ್ಲಿ ಇರುವ ಶ್ರೀಹರಿಯ ನೋಡು ಒಲಿಸಿ ಒಲಿಸಲು ನಿಲುವುದು ಜಿತವಾಗಿ ಹಾಡು ಪ ನೋಡಿದ್ದನ್ನೆ ನೀ ನೋಡು | ನಿನ್ನೆ ನೋಡಿದೆನೆಂಬೊ ಖೋಡ್ಯಾಲಸ್ಯ ಬಿಡು ಹುಡುಕಿ ತತ್ವಂಗಳ ಸಮನಾಗಿ ಜೋಡು ನಡುವೆ ತತ್ಪತಿಯ ಒಡೆಯನ ಇಡು 1 ಕೇಳಿದ್ದನ್ನೇ ನೀ ಕೇಳು | ನಿನ್ನ ಆಳುವರ ಪಾದಕೆ ಬೀಳು ಹಳೆವ ವಾರ್ತಿಗೆ ಅಳುಕುವ ಮನ ಸೀಳು ಬಲು ಪರಿಯಲಿ ಕಾಮ ಕ್ರೋಧಂಗಳ ಹೂಳು 2 ಅಭಿವೃದ್ಧೀಗೆ ಬರುವುದು ಲೋಭ ನಿಭಾಯಿಸಲು ಅದು ಹೊರುವುದು ಲಾಭ ಸಭೆಯೊಳು ಪೇಳಬ್ಯಾಡ ಸ್ವಭಾವ ಇಭವರದನಾಗುವ ಅಭಾವ 3 ನರ ಜನ್ಮವೇ ಬರುವೊದು ಕಷ್ಟ ಹರಿ ಸರ್ವೋತ್ತಮೆಂಬೋದೆ ಇಷ್ಟ ಸ್ಥಿರವಲ್ಲ ತ್ವರಿತ ಮಾಡೆಲೊ ಭ್ರಷ್ಟ ಅರಿತವರ ಕೂಡೆ ನಿರತಾಡು ಶ್ರೇಷ್ಠ 4 ಅಂಕುರಾವು ಪುಟ್ಟಿಹದೀಗ ಬಿಂಕದಿಂ ಪರಿಪಾಲಿಸೊ ಬೇಗ ಶಂಕರನುತ ವಿಜಯ ರಾಮಚಂದ್ರವಿಠಲನ ಪದ- ಪಂಕಜಕೆ ಅಳಿಯಂತೆ ಸಾಗು 5
--------------
ವಿಜಯ ರಾಮಚಂದ್ರವಿಠಲ
ಬಾಳೊ ಸುಖದಿ ಬಾಲನೆ ವರಗುಣ ಶೀಲನೆ ಪ ಬಾಳೊ ಸುಖದಿ ಬಹುಕಾಲಶ್ರೀವೇಣು ಗೋ- ಪಾಲನ ದಯದಿ ಸುಶೀಲ ಸತಿಯಳ ಕೂಡಿ 1 ಪಾದ ತೋಯಜ ಸ್ಮರಿಸುತ ಕಾಯದಾರೋಗ್ಯದೀರ್ಘಾಯುತ್ವವ ಪಡೆದು 2 ಕೃದ್ಧನಾಗದೆ ಜ್ಞಾನ ವೃದ್ಧರಸೇವಿಸಿ ಮಧ್ವಮತದ ತತ್ವ ಶ್ರದ್ಧದಿ ಕೇಳುತ 3 ತಂದೆ ತಾಯಿಗಳಲ್ಲಿ ಇಂದಿರೆರಮಣನೆ ನಿಂದು ಪಾಲಿಪನೆಂದು ವಂದನೆ ಪಾಡುತ 4 ಭಕ್ತಿಯಿಂದತಿಥಿಗಳ ನಿತ್ಯದಿ ಸೇವಿಸುತ ಪುತ್ರ ಪೌತ್ರಾದಿ ಸಂಪತ್ತಿಯ ಪಡೆದು 5 ಭೂಸುರರೊಡಗೂಡಿ ತೋಷದಿಕೃತ ಹರಿ ವಾಸರ ವೃತ ಫಲ ಶ್ರೀಶನಿಗರ್ಪಿಸುತ 6 ಧಾರುಣಿಯೊಳು ಕೃಷ್ಣಾತೀರ ಕಾರ್ಪರನಿಲಯ ನಾರಸಿಂಹನ ಪದ ವಾರಿಜ ಸೇವಿಸುತ 7
--------------
ಕಾರ್ಪರ ನರಹರಿದಾಸರು
ಬಿಡು ಬಿಡು ಮಾಯವನು ಕೆಡದಿರು ಕಪಟದಲಿ | ನಡಿ ನಡಿ ಸುಪಥವ ಜಗದೊಡಿಯೆನ ನೆನೆ ಮನವೆ ಪ ನಾನು ನನ್ನದು ಎಂಬೊ ಹೀನ ವಚನ ಸಲ್ಲ ಗೇಣುದರವಲ್ಲದೆ ಪೊರೆವದು ಮತ್ತೇನಾದರು ಉಂಟೆ 1 ಮಡದಿ ಮಕ್ಕಳ ನೋಡಿ ಕಡು ಹಿಗ್ಗಿ ಕೆಡಬೇಡ | ಕಡು ಮುನಿದೆಮನಾಳುಗಳು ಪಿಡಿದೆಳೆದೊಯ್ವಾಗ 2 ಇರುಳು-ಹಗಲು ನೀನು ಹರಿಸ್ಮರಣೆ ಚಿತ್ತದಲಿ | ಜನ್ಮಾಂತರ ಪಾಪ ಪೋಗುವುದು 3 ಜ್ಞಾನ ಮಾರ್ಗವಿಡಿದು ಆನಂದ ಮೂರುತಿಯ ಧ್ಯಾನದಿಂದಲಿ ಕಾಣ್ಯ ದೈನ್ಯವೃತ್ತಿಯ ಬಿಟ್ಟು ಹಾನಿ ವೃದ್ಧಿಯ ಜರಿದು4 ಅತಿ ಕಾಮಾತುರನಾಗಿ ರತಿಯಲ್ಲಿ ಸಿಗದಿರು | ಕರ್ಮ ವ್ಯಾಳೆವ್ಯಾಳೆಗೆ ಶ್ರೀಪತಿಗರ್ಪಿತವೆನ್ನು5 ಸಂತೋಷಗಳು ಬರಲಿ ಸಂತಾಪಗಳು ಇರಲಿ | ಇಂತು ಇವರಿಗೆಲ್ಲ ಪ್ರೇರಕ ಹರಿ ಜಗದಂತರ್ಯಾಮಿ 6 ಮಾನಿನಿ ನಂದನರು ಆರು ? | ತನುವೆ ನಿನ್ನದಲ್ಲ ತಿಳಿದುಕೊ ಗತಿ ಸಾಧನಕೆ ವಿಜಯವಿಠ್ಠಲ7
--------------
ವಿಜಯದಾಸ
ಬಿದ್ದೆ ನಿಮ್ಮಯ ಪಾದದಲ್ಲಿ ನಾ ಪ ಮಧ್ವರಾಯರ ಮನದಲ್ಲಿ ಇದ್ದು ವಲಿವ ವೇದವ್ಯಾಸ ಅ.ಪ. ವೇದ ಓದದ ಶುದ್ಧ ಕಳ್ಳನಾ ಮೆದ್ದು ಮೆಲ್ಲುತ ವೃದ್ಧನಾದೆ ಭಲ್ ಗದ್ದ ದಾಸಗೆ ಕರುಣದಿ ತೋರಿ ಉದ್ಧರಿಸುವ ಬಗೆ ಬಲ್ಲೀ 1 ಅನ್ಯದೇವರ ನಾ ನೊಲ್ಲೆ ನಿನ್ನ ಪಾದವ ಬಿಡಲೊಲ್ಲೆ ಘನ್ನಕರುಣಿ ನೀನು ಬಲ್ಲೆ ನಿನ್ನ ಬಿಡಲು ಜಗಕಲ್ಲೇ 2 ಉತ್ತಮೋತ್ತಮ ದೇವ ಸತ್ಯ ಭೃತ್ಯಜೀವನು ಎಂಬೆನಿತ್ಯ ಭಕ್ತ ಪ್ರಥಮ ಪ್ರಾಣನೀನೇ ಮುಕ್ತಿನಿನ್ನಾಧೀನವೇನೇ 3 ವಿಧಿ ಪರಿವಾರ ಎಂದೆಂದಿಗೂ ಭಿನ್ನರೇನೇ ಎಂದೆಂದು ಅಧೀನರೇನೇ 4 ಶ್ರೀಕೃಷ್ಣವಿಠಲ ಏಕ ಸಕಲ ದೋಷ ವಿದೂರ ಪೊರೆಯೋ ಎಂದು ಕೂಗಿ 5
--------------
ಕೃಷ್ಣವಿಠಲದಾಸರು
ಬೆಳಗಾಗಲು ಅರಘಳಿಗೆಯು ಇರುತಿರೆ ಸ್ಮರಿಸುವೆ ವಿಶ್ವಮೂರುತಿಯನ್ನು ಬೆಳಗಾಗಲು ಹರಿಧ್ಯಾನವ ಮಾಡುತ ಬಹಿರ ಭೂಮಿಗ್ಹೋಗುತ ಮುನ್ನು 1 ಕಲಿ ಮೊದಲಾಗಿಹ ದೈತ್ಯರನೆಲ್ಲಾ ವಿ- ಸರ್ಜನೆ ಮಾಡುತ ಮತ್ತಿನ್ನೂ ದಂತ ಧಾವನೆಯ ಮಾಡುತ ಶ್ರೀ ಮಾ- ಧವನನು ಸ್ಮರಿಸುವೆ ನಾನಿನ್ನೂ 2 ಮುಖವನು ತೊಳೆಯುತ ಮುರಹರಿ ಧ್ಯಾನದಿ ಶ್ರೀತುಳಸಿಯ ನಮಿಸುತಲಿನ್ನೂ ಮೀಸಲ ನೀರನು ಎರೆಯುತ ಬೇಗದಿ ಮೃತ್ತಿಕಿ ಫಣಿಗಿಡುತಲಿ ಇನ್ನು 3 ಮೂರು ಪ್ರದಕ್ಷಿಣಿ ಮಾಡುತ ಬೇಗದಿ ಮುದದಿ ನಮಸ್ಕರಿಸುತಲಿನ್ನೂ ದೇವರ ಮನೆಕಡೆ ಪೋಗುತ ನಿಂದಿಹ ಜಯವಿಜಯರಿಗೊಂದಿಸಿ ಮುನ್ನು 4 ದೇವರ ದರ್ಶನಕಾಜ್ಞೆಯ ಕೇಳುತ ದೇವರ ಗೃಹದೊಳು ಪೋಗುತಲಿ ಮಾಯಾ ಪತಿಯನು ಮನದೊಳು ಧ್ಯಾನಿಸಿ ವಂದನೆ ಮಾಡುತ ಬೇಗದಲಿ 5 ದೇವರ ಮನೆಯನು ಸಾರಿಸಿ ಶಂಖುಚಕ್ರವುಗದೆ ಪದುಮನ್ಹಾಕುತಲಿ ಗಜವರದನ ಕೊಂಡಾಡುತ ಮುದದಿ ಗಜೇಂದ್ರ ಮೋಕ್ಷನ ಸ್ಮರಿಸುತಲಿ 6 ಗೋವೃಂದದ ಕಡೆ ಪೋಗುತ ಶ್ರೀ- ಗೋವಿಂದನ ಸ್ಮರಿಸುತ ನಿತ್ಯದಲಿ ಗೋಪೀ ಬಾಲನ ಗೋಕುಲವಾಸನ ಗೋವ್ಗಳ ಮಧ್ಯದಿ ಸ್ಮರಿಸುತಲಿ 7 ಬಾಲಕೃಷ್ಣನ ಲೀಲೆಯ ಪೊಗಳುತ ಬಾಲಲೀಲೆಗಳ ಕೇಳುತಲಿ ಪುರಾಣವ ಪೇಳುವ ದ್ವಿಜರಿಗೆ ವೃದ್ಧರಿಗೆರಗುತ ಪ್ರತಿನಿತ್ಯದಲಿ 8 ಮುರಳಿಯನೂದುತ ಮೆರೆಯುವ ಕೃಷ್ಣನ ಅನುದಿನ ಮಾಡುತಲಿ ಸರಸಿಜನಾಭನ ಸ್ಮರಿಸುತ ಮನದಲಿ ಸ್ನಾನಕೆ ತೆರಳುತ ಶೀಘ್ರದಲಿ 9 ನದಿಯ ಸ್ನಾನಕೆ ಪೋಗುವ ಸಮಯದಿ ನಾರದವಂದ್ಯನ ಸ್ಮರಿಸುತಲಿ ಭಾಗೀರಥಿಯಲಿ ಸ್ನಾನವು ಮಾಡುತ ಬಾಗುತ ಸಿರವನು ಬೇಗದಲಿ10 ಫಣಿರಾಜನ ಶಯನದಿ ಮಲಗಿಹ ಶ್ರೀ- ಪರಮಾತ್ಮನ ನೋಡುತ ಬೇಗ ಪಾದಗಳ ಸೇವಿಪ ಶ್ರೀ ಭೂದೇವಿಯ- ರೇನುಧನ್ಯರೆಂದೆನುತಾಗ11 ಪೊಕ್ಕಳ ಮಧ್ಯದಿ ಪೊರಟಿಹ ನಾಳದ ತುದಿಯಲಿ ರಂಜಿಪ ಕಮಲದಲಿ ಉದ್ಭವಿಸಿದ ನಾಲ್ಮೊಗನನು ನೋಡುತ ಬಗೆ ಬಗೆ ಪ್ರಾರ್ಥಿಸುತಲಿ ಇನ್ನು 12 ನೆರೆದಿಹ ಸುರ ಪರಿವಾರವೆಲ್ಲ ಶ್ರೀ- ಹರಿಯನು ವಾಲೈಸುತಲಿನ್ನೂ ಪರಮವೈಭವದಿ ಮೆರೆಯುವ ದೇವನ ಸ್ಮರಿಸುವೆ ಜಲಮಧ್ಯದೊಳಿನ್ನು 13 ದೇವರ ರಥವನು ತೊಳೆಯುವೆನೆಂಬ- ನುಸಂಧಾನದಿ ಸ್ನಾನವು ಮಾಡಿ ದೇವರ ರಥ ಶೃಂಗರಿಸುವೆನೆನ್ನುತ ಶ್ರೀಮುದ್ರೆಗಳ್ಹಚ್ಚುತ ಪಾಡಿ 14 ನಿತ್ಯ ಕರ್ಮಮುಗಿಸುವ ಬೇಗದಿ ಶ್ರೀ- ಹರಿಪೂಜೆಗೆ ಅಣಿಮಾಡುತಲಿ ಪುಷ್ಪಗಳನು ಗಂಧಾಕ್ಷತೆ ಶ್ರೀ ತುಳಸಿಯ ತಂದಿಡುವೆನು ಮೋದದಲಿ 15 ಪಂಚಭಕ್ಷ ಪಾಯಸಗಳ ಮಾಡುತ ಪಂಚಾತ್ಮಕ ನ ಸ್ಮರಿಸುತಲಿ ಮಿಂಚಿನಂತೆ ಹೊಳೆಯುವ ತಬಕಿಲಿ ತಾಂಬೂಲವ ನಿರಿಸುತ ಬೇಗದಲಿ 16 ಬ್ರಹ್ಮನು ಈ ವಿಧ ಪೂಜೆಯ ಪ್ರತಿದಿನ ಬ್ರಹ್ಮನ ಪಿತಗರ್ಪಿಸುತಲಿರಲು ಸುಮ್ಮಾನದಿ ಮಹಲಕುಮಿಯು ಇದ- ನೊಯ್ಯತ ಸುರಮುನಿ ವಂದ್ಯನಿಗೆ ತಾನರ್ಪಿಸಲು17 ಪರಮಾತ್ಮನು ಈ ವಿಧ ಸೇವೆಯ ಕೈ- ಗೊಳುತಲಿ ಸಂತಸ ಪಡಲಿನ್ನು ಅರಿತವರೆಲ್ಲರು ನಿರುತದಿ ಹರಿ ಧ್ಯಾ- ನವ ಮಾಡುತಲಿರೆ ತಾವಿನ್ನು 18 ದೇವಪೂಜೆ ವೈಶ್ವದೇವವು ನಿತ್ಯದಿ ಗೋಬ್ರಾಹ್ಮಣನರ್ಚಿಸಿ ಇನ್ನು ಸಾಯಂ ಸಮಯದಿ ಸಾಧುಗಳೊಡನೆ ದೇವರ ಕಥೆ ಕೇಳುತಲಿನ್ನೂ 19 ಝಾಮಝಾಮದಿ ಜಯಶಬ್ದಗಳಿಂ ಜಯಾಪತಿಯನು ಪೊಗಳುತಲಿ ಆರತಿ ಜೋಗುಳ ಹಾಡುತ ಮುದದಲಿ ಮಧ್ವೇಶಾರ್ಪಣ ಪೇಳುತಲಿ 20 ಮಲುಗುವಾಗ ಮುಕುಂದನ ಸ್ಮರಿಸುತ ಲಯ ಚಿಂತನೆಯನು ಮಾಡುತಲಿ ಕರಮುಗಿಯುತ ಕಾಯೇನ ವಾಚಾ ಎಂ- ದ್ಹೇಳುತ ಪ್ರಾಜ್ಞನ ಸ್ಮರಿಸುತಲಿ 21 ಝಾಮಝಾಮದಿ ಶ್ರೀ ಹರಿ ಮಾಧವ ಆಗಲು ಬೆಳಗಿನ ಝಾವದಿ ಸೃಷ್ಟಿಯ ಚಿಂತನೆ ಮಾಡಿ ಎಂದೆನುತ22 ಮಳಲಗೌರಿ ನೋಂತಿಹ ಸತಿಯರಿಗೆ ಮುರಳೀಧರ ಒಲಿದಿಹನೆನ್ನುತ ಉದಯವಾಗಲು ವಿಶ್ವನ ಸ್ಮರಿಸುತ ವಿಧಿ ನೇಮಗಳನುಸರಿಸುತ್ತ 23 ನಿತ್ಯದಿ ಈ ತೆರವಾಚರಿಸುವ ನರ ಮುಕ್ತನು ಧರೆಯೊಳಗೆಂದೆನುತ ಅತ್ಯುತ್ಸಾಹದಿ ಬರೆದೋದುತಲಿ- ದರರ್ಥವ ತಿಳಿದಾಚರಿಸುತ್ತ24 ಈ ವಿಧ ಚಿಂತನೆ ಮಾಡುವ ಮನುಜಗೆ ದಾರಿದ್ರ್ಯವು ದೂರಾಗುವದು ಮಾರಮಣನು ತನ್ನವರೊಡಗೂಡುತ ವಾಸವಾಗುವನೆಂಬುವ ಬಿರುದು25 ಕರೆಕರೆಗೊಳ್ಳದೆ ಕೇಳಿರಿ ನಿತ್ಯವು ಕನಕಗಿರಿವಾಸನ ಮಹಿಮೆ ಕನಲಿಕೆ ಕಳೆವುದು ಕಮಲನಾಭ- ವಿಠ್ಠಲನು ಕೊಂಡಾಡುತ ಮಹಿಮೆ 26
--------------
ನಿಡಗುರುಕಿ ಜೀವೂಬಾಯಿ
ಭದ್ರಾಣಿ | ಮನೊ ಮಾನಿ ಪ ಭದ್ರಗತಿಗೆ ಬಹು | ಭದ್ರ ಸುಸಾಧನವೃದ್ಧಿಯ ಗೈವುದ | ಭದ್ರವ ಕಳೆದು ಅ.ಪ. ವಕ್ತ್ರ ಸತಿ1 ಚಂಪಕ ನಾಸಿಕೆ | ಪಂಪಾಭಿಧೆ ಹರಿನೋಂಪಿಗೈವ ಮತಿ | ಗಿಂಪನು ಪಾಲಿಸು 2 ವಾಸವ ಸನ್ನುತೆ 3 ಮಂಗಳ ಮೃಡನಂತ | ರಂಗಳೆ ಗೌರಿಯೆಹಿಂಗಿಸುಯೆನ್ನ ಅ | ಘಂಗಳ ನಿಚಯವ 4 ಜಲಧಿಶಯನ ಗುರು | ಗೋವಿಂದ ವಿಠಲನಒಡಲೊಳು ಜಡಜದಿ | ಬಿಡದಲೆ ತೋರಿಸು5
--------------
ಗುರುಗೋವಿಂದವಿಠಲರು
ಭೀಮಾತಟ ಹರಿ ವಿಠಲ | ಪೊರೆಯ ಬೇಕಿವಳಾ ಪ ಸಾಮಸನ್ನುತ ಹರಿಯೆ | ನಿಸ್ಸೀಮ ಮಹಿಮಾ ಅ.ಪ. ಗುರು ಕರುಣ ಇವಳಿಗಿದೆ | ಮರಳಿ ಹರಿ ಗುರುಭಕ್ತಿನೆರೆ ವೃದ್ಧಿ ಗೈಸುತಲಿ | ಪೊರೆಯೊ ಇವಳಾ |ಕರುಣನಿಧಿ ನೀನೆಂದು | ಆರು ಮೊರೆಯ ನಿಡುವೆನಾಪರಿ ಪರಿಯಲಿಂದಿವಳ | ಕೈ ಪಿಡಿಯೆ ಹರಿಯೇ 1 ಸಜ್ಜನರ ಸಂಗ ಕೊಡು | ದುರ್ಜನರ ದೂರಿರಿಸುಅರ್ಜುನನ ಸಾರಥಿಯೆ | ಮೂರ್ಜಗಕೆ ಒಡೆಯಾ |ಬೊಜ್ಜೆಯಲಿ ಬ್ರಹ್ಮಾಂಡ | ಸಜ್ಜು ಗೊಳಿಸಿಹ ಹರಿಯೆ |ಅರ್ಜುನಾಗ್ರಜ ವಂದ್ಯ | ಸಜ್ಜನರ ಪಾಲಾ 2 ತರತಮದ ಸುಜ್ಞಾನ | ಹರಿಯ ಸರ್ವೋತ್ತಮತೆಕರುಣಿಸೋ ಇವಳೀಗೆ | ಪರಮ ಪಾವನ್ನಾ |ಗರುಡ ಗಮನನೆ ಗುರೂ | ಗೋವಿಂದ ವಿಠ್ಠಲನೆಮೊರೆಯ ಲಾಲಿಸಿ ಇವಳ | ಪೊರೆಯೊ ಶ್ರೀ ಹರಿಯೇ 3
--------------
ಗುರುಗೋವಿಂದವಿಠಲರು
ಭೂತ ರಾಜನುತ ವಿಠಲ | ಕಾಪಾಡೊ ಇವನಾ ಪ ದಾತ ನೀನಲ್ಲದಲೆ | ಕಾವರಾರಿಹರೋ ಅ.ಪ. ಗುರು ರೂಪಿ ತೈಜಸನು | ನೆರವಾಗಿ ಸ್ವಾಪದಲಿವರಸು ಉಪದೇಶವನು | ಇತ್ತು ಪೊರೆದಿಹನೋ |ಮರಳಿ ಇವ ಲಾತವ್ಯ | ಗುರುರಾಜ ಭಕ್ತನಿಹಪೊರೆಯ ಬೇಕಿವನೆನುತ | ಪ್ರಾರ್ಥಿಸುವೆ ಹರಿಯೇ 1 ನಿಷ್ಕಾಮ ಭಕ್ತನನ | ಮಾಡಿ ನೀ ಸಲಹಯ್ಯಸತ್ಕಾಮಗಳ ಗರೆದು | ಸಾಧನೆಯ ಗೈಸೀದುಷ್ಕಾಮಗಳಿಗೆಡೆಯ | ನೀ ಕೊಡದೆ ಪೊರೆಯಯ್ಯಸತ್ಕರ್ಮ ಸತ್ಸಂಗ | ಸರ್ವದಾ ಕೊಡುತಾ 2 ಸತಿಸುತರು ಹಿತರಲ್ಲಿ | ದುರ್ಮಮತೆ ಕಳೆಯುತ್ತಮತಿಮತಾಂ ವರರಂಘ್ರಿ | ಶತ ಪತ್ರರತನಾಹಿತದಿಂದ ನೀ ಸಲಹಿ | ಗತಿ ಪ್ರದನು ಆಗಯ್ಯಕೃತಿ ರಮಣ ಪ್ರದ್ಯುಮ್ನ | ಪ್ರತಿ ರಹಿತ ದೇವಾ 3 ಮಧ್ವಮತ ಪದ್ಧತ್ಯಭಿ | ವೃದ್ಧಿಗೈಸುತಲಿವಗೆಸಿದ್ಧಾಂತ ಜ್ಞಾನದಲಿ | ಸಿದ್ಧ ನೆನಿಸಯ್ಯಾವೃದ್ಧಿಯಾಗಲಿ ಜ್ಞಾನ | ವೈರಾಗ್ಯ ಭಕ್ತಿಗಳುಮಧ್ವರಮಣನೆ ದೇವ | ಬುದ್ಧಿ ಬೋದಕನೇ 4 ಬದಿಗ ನೀನಾಗಿದ್ದು | ಹೃದಯದವಕಾಶದಲಿಮುದದಿಂದ ತವರೂಪ | ತೋರಿ ಸಲಹಯ್ಯಾ |ಇದಕನ್ಯ ನಾ ಬೇಡೆ | ಯದು ವರೇಣ್ಯನೆ ಕೃಷ್ಣಸದಯ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಮಂಗಳಾಂಗನ ಭಜಿಸೆ ಹಿಂಗಿಸುವ ಭವವ ಎನ್ನಂಗದೊಳಡಗಿಹನೊ ಶ್ರಿಂಗಾರ ಮೂರುತೀ ಪ. ಧ್ಯಾನಕೆ ತಂದು ನಿಧಾನದಲಿ ಯೋಚಿಸು ಜ್ಞಾನಿಗಳರಸನ ಮಾನಸದೊಳಗೆ ಕಾನನದೊಳು ವೃದ್ಧ ಶಬರಿಯೆಂಜಲನುಂಡು ದಾನಶೀಲನು ರಾಮ ಕೈವಲ್ಯವನಿತ್ತಾ 1 ದುಷ್ಟ ಕಂಸನ ಹರಿಸಲು ಉತ್ಕøಷ್ಟ ಕೃಷ್ಣ ಬರೆ ಸೃಷ್ಟಿಗೊಡೆಯಗೆ ಗಂಧವಿತ್ತಳಾ ಕುಬ್ಜಿ ದಿಟ್ಟ ರೂಪವ ಉಂಗುಷ್ಠದಿಂದೊತ್ತುತ್ತ ಭಕ್ತ ರಿಷ್ಟವನು ಸಲಿಸಲು ಕಷ್ಟವೇ ಹರಿಗೆ 2 ಯಾವಾಗ ಸ್ತುತಿಸಿದರು ಮತ್ತಾವಲ್ಲಿ ಕರೆದರೂ ಧಾವತಿಗೊಂಡು ಬಹ ಶ್ರೀ ಶ್ರೀನಿವಾಸ ಹಾವಭಾವದ ತೆರದಿ ದೇವ ಬಂದೊದಗುವ ಮತ್ತಾವ ದೇವರ ಕಾಣೆ ಶ್ರೀವರನಲದೇ 3
--------------
ಸರಸ್ವತಿ ಬಾಯಿ
ಮಟ್ಟುದೊರಿತು-ನಿನ್ನ ಗುಟ್ಟು ಹಾರಿತು ಪ ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ ಅಷ್ಟಸಿದ್ಧಿಗಳಿದ್ದರೂ ವೊಂದಿಷ್ಟುಕೊರತೆ ಕೃಷ್ಣನೆಂಬ 1 ಹೇಯ ಗುಣವಿಲ್ಲ ಮುನಿ-ಗೇಯ ನಿನ್ನೊಳೆಂಬ ಜನರ ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ ||ಮಟ್ಟು|| 2 ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ ದತ್ಯಧಿಕ-ಕೊರತೆಯೆಂಬ ||ಮಟ್ಟು|| 3 ಜ್ಞಾನವಂತನೆಂದು ಬಹುಮಾನವಂತನಾದರೂ ಅ ಜ್ಞಾನ ಶೂನ್ಯನೆಂಬ ದೊಡ್ಡ ಹಾನಿಯೊಂದಿರುವದೆಂಬ4 ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ5 ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ ಪಾಪಗಳ ನಪಹರಿಪ ದೀಪನಾ ಬಿಡದು ಎಂಬ ||ಮಟ್ಟು||6 ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರುವ ನಿನಗೆ ಆ ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ ||ಮಟ್ಟು||7 ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ ||ಮಟ್ಟು||8 ನಿತ್ಯ ತೃಪ್ತನಾದರೂ ನಿಜ-ಭೃತ್ಯರನ್ನು ಪಾಲಿಸುವ ನಿತ್ಯ ಕರ್ಮದಲ್ಲಿ ಕೃತಕೃತ್ಯನು ನೀನಲ್ಲವೆಂಬ 9 ಕಷ್ಟಪಡಬೇಡವೆನ್ನೊ-ಳೆಷ್ಟು ದುರ್ಗುಣಂಗಳಿಹ ವಷ್ಟನು ವೊಪ್ಪಿಸಿ ನಿನಗಿಷ್ಟನಾಗಬೇಕೆಂಬ ||ಮಟ್ಟು|| 10 ಕ್ಷೀರದಧಿನವನೀತ-ಚೋರನಾಗಿರಲಿ ಗೋಪೀ ಜಾರನಾಗಿರಲಿ ಸಂಸಾರವೈರಿಯು ನೀನೆಂಬ ||ಮಟ್ಟು||11 ಕೊರತೆಯೆಂಬಾಜನರಿಗೆಲ್ಲ-ವರವನಿತ್ತು ಪೊರೆವೆನೆಂಬ ವರದವಿಠಲನೆಂಬ ||ಮಟ್ಟು|| 12
--------------
ಸರಗೂರು ವೆಂಕಟವರದಾರ್ಯರು
ಮನವೆ ಪೇಳುವೆ ಪ ಅಂತರಂಗದಲಿ ಚಿಂತಿಪರಘಶುಲಧ್ವಾಂತ ದಿವಾಕರನಾ ಶ್ರೀವರನಾ ಅ.ಪ ಎಂತು ಸುಕೃತವೂ ಸಿರಿಕಾಂತನುಯನ್ನೊಳು ನಿಂತಿರುವನು ಎನುತ ಪರ್ವತ ಸಂತೋಷದಲಿರುವಂತೆ ತೋರುವದು ಸು- ಕಾಂತ ಶಿಖರದಿಂದ ಛಂದ 1 ವರಶಿಲೆಯೊಳಿರುವ ಹರಿಯ ಶೇವಿಸಲು ಹರುಷದಿ ಸುರನಿಕರ ಭಾಸುರ ತರುಲತೆರೂಪದಿ ಇರುತಿಹರೆನ್ನುತ ಮೆರೆವನು ಗಿರಿರಾಜಾ ಸುತೇಜಾ2 ಗಿರಿನಾಥಾ ತೋರುತ ಅರಳಿದ ಪೂವಿನ ಪರಿಮಳ ಬೀರುವ ಸುರಚಿರ ತರುವ್ರಾತಾ ಶೋಭಿತ3 ಪವನ ಶೇವಿತನು ಭುವನೋದರ ತಾ ದಿವಿಜರಿಂದ ಸಹಿತ ಸೇವಿತ ಅವನಿಧರನು ಮಾಧವನ ತೆರದಿ ತೋ ರು ವೆನೆಂಬುಗರ್ವಾದಿಂದಿರುವ 4 ಸಿದ್ಧಚಾರಣ ತಪೋವೃದ್ಧರಿದೇ ಸ್ಥಳ ಸಿದ್ಧಿದಾಯಕವೆಂದೂ ಬಂದೂ ಪದ್ಮಾಕ್ಷನ ಪದಪದ್ಮವ ಧ್ಯಾನಿಸು- ತಿದ್ದರು ಗುಹೆಗಳಲಿ ಪೂರ್ವದಲಿ5 ಮುನಿ ಮಾರ್ಕಾಂಡೇಯನು ಬಹುದಿನದಲಿ ಘನ ತಪವಾಚರಿಸಿ ಸೇವಿಸಿ ವನಜನಾಭನ ಪದವನಜ ಮಧುಪ ನೆಂ ದೆನಿಸುತಲಿರೆ ಗುಹದಿ ತಪೋನಿಧಿ6 ಗಿರಿಯ ಬಲದಿ ಅಹೋಬಲ ನರಸಿಂಹನ ದರ್ಶನವನು ಕೊಳುತ ನಿರುತ ಇರುತಿರಲೊಂದಿನ ಬರಲಾಷಾಢದ ಹರಿವಾಸರ ವೃತವಾ ಚರಿಸುವ 7 ದ್ವಾದಶಿ ಸಾಧನೆ ಬರಲು ಪ್ರತಿದಿನದಿ ಶ್ರೀದನ ದರ್ಶನದಾ ನೇಮದ ಸಾಧನೆ ವಿಷಯದಿ ಯೋಚಿಸುತಿರೆ ಹರಿ ಮೋದದಿ ಮುನಿಗೊಲಿದಾ ಸೂಚಿಸಿದಾ 8 ಅರುಣೋದಯದಲಿ ಸುರಗಂಗೆಯು ತಾ ವರ ಪುಷ್ಕರಣಿಯೊಳು ಬರುವಳು ತರುರೂಪದಿ ನಾ ಬರುವೆನು ಬಿಡದಿರು ಮರುದಿನದಾ ಚರಣೆ ಪಾರಣೆ9 ಎಂತು ಕರುಣವೊ ನಿರಂತರ ಭಜಿಪರ ಚಿಂತಿತ ಫಲವೀವ ಕೇಶವ ಇಂತು ಹರಿಯ ಗುಣ ಚಿಂತಿಸುತಿರಲು ನಿ ಶಾಂತದಿ ಸರೋವರದಿ ವೇಗದಿ10 ಭಾಗೀರಥಿ ಜಲದಾಗಮ ವೀಕ್ಷಿಸಿ ರಾಗದಿ ವಂದಿಸಿದ ತುತಿಸಿದ ಯೋಗಿವರನುತ ಸ್ನಾನವಮಾಡಿ ಬರುವಾಗಲೆ ಧ್ಯಾನಿಸಿದ ಹರಿಪದ11 ಆ ತರುವಾಯದಿ ಪಾರಿಜಾತ ತರು ವ್ರಾತವ ನೋಡಿದನು ವಂದಿಸಿದನು ಈತನೆ ನರಮೃಗನಾಥನೆನುತ ಮುನಿ ಪ್ರಾತ:ಪಾರಣವ ಮಾಡಿದ ಜವ12 ಮೀಸಲು ಮನದಲಿ ಶೇಷಶಯನಗಾ- ವಾಸಗಿರಿಯ ಸೇವಾ ಮಾಡುವ ಭೂಸುರ ಗಣದಭಿಲಾಷೆಗಳನು ಪೂರೈಸಿ ಪೊರೆವನೀತಾ ಪ್ರಖ್ಯಾತಾ 13 ಶ್ರೀಯುತ ಮಾರ್ಕಾಂಡೇಯರ ಚರಿತೆಯ ಗಾಯನ ಫಲವಿದನು ಪೇಳುವೆನು ಶ್ರೇಯಸ್ಸಾದನ ಕಾಯದಿ ಬಲದೀ- ಮಾನವ 14 ಸುರತರು ಕಾರ್ಪರ ಶಿರಿ ನರಸಿಂಹನೆ ಈತ ಎನ್ನುತ ನಿರುತ ಅನಂತನ ಗಿರಿಯ ಮಹಿಮೆಯನು ಸ್ಮರಿಸುವ ನರಧನ್ಯಾ ಸನ್ಮಾನ್ಯ 15
--------------
ಕಾರ್ಪರ ನರಹರಿದಾಸರು
ಮನವೇ ನೀನೆಚ್ಚರಿಕೆ ಬಿಡದಿರು ಅನುದಿನವು ಹರಿಧ್ಯಾನದೊಳಗಿರು ಪ ವನಿತೆ ಧನಧಾರಿಣಿಯ ನೆಚ್ಚಿ ತನುವೆ ತಾನೆಂಬುದನುಚಿತವು ಅ.ಪ ಬರಿಯಕೈಯಲಿ ಭೂಮಿಗಳಿಸಿದೆ ದುರಿತಭಾರವ ಧರಿಸಿರ್ಪೆ ನರರೆ ಹರಿಸುವರಾರೋ ಕಾಣಿರ ಅರಿತುಕೊಂಡಿರೆ ತಿಳಿಸಿರೈ 1 ಕಾಯವಸ್ಥಿರ ಹೇಮಸಂಸ್ಕøತಿ ಮಾಯಾಪಾಶದ ಬಲೆಗೆ ಸಿಲ್ಕಿ ನಾಯಿನರಿಯಂದದಲಿ ತೊಳಲಿ ಸಾಯವರ ಕಂಡಳುವದೇಕೋ 2 ಜಾತಿಧನವಧಿಕಾರ ಖ್ಯಾತಿಗೆ ಆತುರದೊಳಭಿಮಾನ ಪಡುವೇ ಪಾತಕರೆ ಹಿಂಜರಿಯದಂತೇ ಪ್ರೀತಿಯಿಂ ಪರಪೀಡೆಗೈವೇ 3 ಪೊಡವಿಯೊಳ್ ಪೆಣ್ ಬಾಲ ವೃದ್ಧರು ಬಡವರಾರ್ತರು ಕುಂಟಕುರುಡರು ಎಡೆಯ ಜೀವಿಗಳನ್ನು ಕರುಣದಿ ಕಾಣೆಲೋ ಕಡುಜಾಣನೇ 4 ಸತ್ತಮೇಲೇನೆಂದು ಯೋಚಿಸು ಮುತ್ತಿ ಕತ್ತಿಯೊಳಿರಿವರೈ [ಮ]ತ್ತಕ್ಷಣದ ಫಲಕಾಶೆಪಡದಿರು ಸತ್ಯವಂ ಪಿಡಿ ನಿತ್ಯವೂ 5 ಯಮುನೆ ಹೊಕ್ಕರು ಯಮನು ಬಿಡನೂ ಅಮಮ ನರಕದೊಳಿಳಿಪರೈ ರಮಾರಮಣನ ಒಲುಮೆಗಾಗಿ ಶ್ರಮಿಸಿ ಪರರುಪಕಾರಿಯಾಗೋ6 ಪತಿತಪಾವನ ಜಾಜಿಕೇಶವ ನತಿಶಯದಿ ತಾ ಜಗವ ಪಾಲಿಪ ಚತುರ್ವೇದ ಶ್ರುತಿ ಪ್ರಮಾಣವ ಮತಿಯುತರು ಮೀರುವರೆ ಮರುಳೇ 7
--------------
ಶಾಮಶರ್ಮರು
ಮಾಡಿರೊ ಪಾಡಿರೊ | ಲೋಕದೊಳಗೆ ಇದೆ ಬೀರುತಾ ಸಾರುತಾ ಶ್ರೀಕಾಂತನ ವೊಲಿಸಿ ಪ ದಶಮಿ ಏಕಾದಶಿ ದ್ವಾದಶಿ ದಿನತ್ರಯ | ವಸುಧಿಯೊಳಗೆ ಮಹಾವ್ರತವೆಂದು ತಿಳಿದು ತ್ರಿ | ದಶರೆಲ್ಲ ಕೈ ಕೊಂಡು ಮಾಡಿದರಂದು ರಂ | ಜಿಸುವ ಸತ್ಕರ್ಮದಲ್ಲಿ | ಬಿಸಜನಾಭನು ಲಕುಮಿಗೆ ಪೇಳಿದ ವ್ರತ | ಹಸನಾಗಿ ಬೊಮ್ಮಗೆ ಅರಹು ಮಾಡಲು ದೇವ | ಋಷಿಗೆ ಅಜನು ಪೇಳಲಾ ಮುನಿ ಬೀರಿದಾ ದಶ ದಿಕ್ಕಿನೊಳಗೊಂದು 1 ಉದಯಕಾಲದೆಲೆದ್ದು ಸಂಸಾರಯಾತ್ರೆ ಎಂದು | ಬದಿಯಲ್ಲಿದ್ದವರೆಲ್ಲ ಹರಿದಾಸ ದಾಸಿಯರು ಹೃದಯದೊಳೀಪರಿ ಯೋಚಿಸಿ ಅಜ್ಞಾನ ಒಂದು ಕಡೆಗೆ ನೂಕಿ | ಸದಮಲನಾಗಿ ಸ್ನಾನಾದಿಯ ಮಾಡಿ ಮ ವಿಧಿ ಮುಗಿಸಿ ಶ್ರವಣ ಸಾರಾ ಹೃದಯರಿಂದಲಿ ಕೇಳಿ2 ಗೋವಿಂದನ ಚರಣಕೆ ಎತ್ತಿ ನಿರ್ಮಲ ಚಿತ್ತ | ದಿಂದಲಿ ನಲಿವುತ ಹಿಗ್ಗಿ ಹಾರೈಸಿ ಆನಂದ ವಾರಿಧಿಯಲ್ಲಿ | ಕುಂದದೆ ಸೂಸುತ ಗೆಳೆಯರ ಒಡಗೂಡಿ | ತಂದು ಪುಷ್ಪಗಳಿಂದ ಮಂಟಪವ ವಿರಚಿಸಿ | ಇಂದು ಸ್ಥಾಪಿಸಿ ತುತಿಸಿ 3 ಜ್ಞಾನಿಗಳೊಡನೆ ಕುಳ್ಳಿದ್ದು ಸುಜ್ಞಾನಿಗಳು ಶುದ್ಧ ಗಾ| ಆನನ ಕೂಗುತ ಹಾಡುತ ಪಾಡುತ | ಧ್ಯಾನವ ಗೈವುತಲಿ | ಕಾಣಬಾರದಂತೆ ಪ್ರಜೆದೊಳಗೆ ತೋರಿ | ಮಗುವಿನಂತೆ ಶ್ರೀನಿವಾಸನ ನೆನಸಿ 4 ಕೂಡಿ ಸೋಗು ವೈಯಾರದಿ | ಕಾಲಲಿ ಗೆಜ್ಜೆಯ ಕಟ್ಟಿ | ವಲಯಾಕಾರ | ಮೇಲು ಚಪ್ಪಳೆಯಿಂದ | ಬಾಲವೃದ್ಧರು ನಿಂದು ಕುಣಿಕುಣಿದಾಡಿ ಹಿ | ಯಾಲಲಿ ಹರಿಯ ಸಂಕೀರ್ತನೆ ಕೀರ್ತಿಸಿ | ಸೋಲದೆ ಘನಸ್ವರ ಸ್ವರದಿಂದಲಿ ಕೂಗಿ ವಿ | ಶಾಲ ಭಕುತಿ ಒಲಿಸಿ 5 ಕಿರಿಬೆವರೊದಕ ಮೊಗದಿಂದಿಳಿಯಲು | ಉರದಲಿ ಇದ್ದ ದೇವಗೆ ಅಭಿಷೇಚನೆ | ಪರವಶವಾಗಿ ಮೈಮರೆದು ತಮ್ಮೊಳು ತಾವು | ಕರದು ತರ್ಕೈಸುತಲಿ | ಕಿರಿನಗೆಯಿಂದ ತೋಳುಗಳು ಅಲ್ಲಾಡಿಸಿ | ಎರಡು ಭುಜವ ಚಪ್ಪರಿಸಿ ಏಕಾದಶಿ | ದುರಿತ ರಾಸಿಗೆ ಪಾವಕನೆಂದು ಕೂಗಿ ಬೊಬ್ಬಿರಿದು ಬಿರಿದು ಸಾರಿ6 ಮಧ್ಯ ಮಧ್ಯದಲಿ ಮಂಗಳಾರುತಿ ಎತ್ತಿ | ಮಧ್ವರಾಯರೆ ಮೂರು ಲೋಕಕೆ ಗುರುಗಳು | ಸಿದ್ಧಾಂತ ಮುನಿ ಸಮ್ಮತಾ | ಮಲ ಮೂತ್ರವನು ಕ್ರಿಮಿವ ಮನವು | ಮೆದ್ದಾ ಸದ್ದೋಷಿ ಚಂಡಾಲ ವೀರ್ಯಕ್ಕೆ ಬಿದ್ದವ ನಿಜವೆನ್ನಿ 7 ಸಾಗರ ಮೊದಲಾದ ತೀರ್ಥಯಾತ್ರೆಯ ಫಲ | ಭೂಗೋಳದೊಳಗುಳ್ಳ ದಾನ ಧರ್ಮದ ಫಲ | ಆಗಮ ವೇದಾರ್ಥ ಓದಿ ಒಲಿಸಿದ ಫಲ | ಯೋಗ ಮಾರ್ಗದ ಫಲವೊ | ಜಾಗರ ಮಾಡಿದ ಮನುಜನ ಚರಣಕ್ಕೆ ಬಾಗಿದವಗೆ ಇಂಥ ಫಲಪ್ರಾಪ್ತಿ ನಿರ್ದೋಷನಾಗುವ ವೈರಾಗ್ಯದಿ 8 ನಿತ್ಯಾ ನೈಮಿತ್ಯಕ ಮಾಡು ಮಾಡದಲಿರು | ಪೋಗಾಡದೆ ಸದಾಚಾರ ಸ್ಮøತಿಯಂತೆ ಅತ್ಯಂತ ಪಂಡಿತ ಪಾವನ್ನ | ಉತ್ತಮರೊಡಗೂಡಿ ಮೃಷ್ಟಾನ್ನ ಭುಂಜಿಸಿ | ಮೃತ್ಯು ಜೈಸಿ ಸದ್ಗತಿಗೆ ಸತ್ಪಥಮಾಡು | ಸತ್ಯ ಮೂರುತಿ ನಮ್ಮ ವಿಜಯವಿಠ್ಠಲರೇಯ | ನಿತ್ಯ ಬಿಡದೆ ಕಾವಾ 9
--------------
ವಿಜಯದಾಸ
ಮಾಧವ ಪಾದ | ದಾಸ್ಯ ಬೇೀಡುವನ ಪ ಸನ್ನುತ ಹರಿಯೆ | ಭೂಮಗುಣ ಪೂರ್ಣಾ 1 ಮೂರೆರಡು ಭೇದಗಳ | ಸಾರವನೆ ತಿಳಿಸಿವಗೆತಾರತಮ್ಯ ಜ್ಞಾನ | ದರಿವನಿತ್ತೂಪಾರಗೈಭವದ ಕೂಪಾರವನು ಶ್ರೀ ಹರಿಯೇಮಾರುತಾಂತರ್ಯಾಮಿ | ಮಾರಮಣ ದೇವಾ 2 ಕರ್ಮ | ಜಾಲಗಳ ತವಪಾದಓತೈಪ ಭಾಗ್ಯವನೆ | ಪಾಲಿಸೋ ಹರಿಯೇ 3 ಬುದ್ಧಿಯೊಳು ನೀನಿಂತು ಮಧ್ವ ಸಿದ್ಧಾಂತಗಳವೃದ್ಧಿಗೈಸುತ ಹರಿಯೆ | ಸಿದ್ಧನೆನಿಸೋಅದ್ವಾನ ಇದ ಹೊರತು ಶುದ್ಧ ಸಾಧನ ಕಾಣೆಕೃದ್ಧಖಳ ಹರನೆ ಅನಿ | ರುದ್ಧ ಒಲಿ ಇವಗೇ 4 ಜೀವ ಅಸ್ವಾತಂತ್ರ | ದೇವ ನಿಜ ಸ್ವಾತಂತ್ರಈ ವಿಧದ ಸುಜ್ಞಾನ | ನೀ ವೊಲಿದು ಇತ್ತೂ |ಭಾವುಕರ ಪರಿಪಾಲ | ಮಾವಿನೋದಿಯೇ ಗುರು ಗೋವಿಂದ ವಿಠಲನೆ | ಭಾವದೊಳು ತೋರೋ 5
--------------
ಗುರುಗೋವಿಂದವಿಠಲರು